ನೀರು ಚೆಲ್ಲಿದ್ದರಿಂದ ಬಾಲಕನ ಮೇಲೆ ಶಿಕ್ಷಕಿ ಹಲ್ಲೆ, ತಲೆಗೆ ತೀವ್ರ ಗಾಯ - Vistara News

ಬೆಂಗಳೂರು

ನೀರು ಚೆಲ್ಲಿದ್ದರಿಂದ ಬಾಲಕನ ಮೇಲೆ ಶಿಕ್ಷಕಿ ಹಲ್ಲೆ, ತಲೆಗೆ ತೀವ್ರ ಗಾಯ

ಅಂಗನವಾಡಿಯಲ್ಲಿ ನೀರು ಚೆಲ್ಲಿದ ಎಂದು ಗ್ಲೋಬ್‌ನಿಂದ ಶಿಕ್ಷಕಿ ಹೊಡೆದಿದ್ದರಿಂದ ಬಾಲಕನ ತಲೆಗೆ ತೀವ್ರ ಗಾಯವಾಗಿದೆ.

VISTARANEWS.COM


on

ಶಿಕ್ಷಕಿ ಹಲ್ಲೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಗರದ ವೈಟ್‌ಫೀಲ್ಡ್ ಬಳಿಯ ಚನ್ನಸಂದ್ರದ ಎಕೆಜಿ ಕಾಲೊನಿಯ ಅಂಗನವಾಡಿ ಕೇಂದ್ರದಲ್ಲಿ ನೀರು ಚೆಲ್ಲಿದ ಎಂದು ಶಿಕ್ಷಕಿ ಹಲ್ಲೆ ಮಾಡಿದ್ದರಿಂದ ಬಾಲಕನ ತಲೆಗೆ ತೀವ್ರ ಗಾಯವಾಗಿದೆ. ಮೋಕ್ಷಿತ್ (4) ಗಾಯಾಳು. ಸುಬ್ಬಮ್ಮ ಹಲ್ಲೆ ಮಾಡಿರುವ ಅಂಗನವಾಡಿ ಶಿಕ್ಷಕಿ.

ಅಂಗನವಾಡಿಯಲ್ಲಿ ನೀರು ಚೆಲ್ಲಿದ ಎಂದು ಗ್ಲೋಬ್‌ನಿಂದ ಹೊಡೆದಿದ್ದರಿಂದ ಬಾಲಕನ ತಲೆಗೆ ಗಾಯವಾಗಿದೆ. ಈ ಬಗ್ಗೆ ಎಫ್‌ಐಆರ್‌ ದಾಖಲಿಸಿಕೊಳ್ಳಲು ಕಾಡುಗೋಡಿ ಠಾಣಾ ಪೊಲೀಸರು ಹಿಂದೇಟು ಹಾಕಿದ್ದು, ಕೇವಲ ಎನ್‌ಸಿಆರ್(ಗಂಭೀರವಲ್ಲದ) ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಾಲಕನ ಕುಟುಂಬಸ್ಥರು ಪೊಲೀಸ್ ಠಾಣೆ ಎದುರು ಜಮಾಯಿಸಿ, ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದರು.

ಇದನ್ನೂ ಓದಿ | PFI | ಪಿಎಫ್‌ಐ ಕಾರ್ಯಕರ್ತರ ಬಂಧನಕ್ಕೆ ಕುಟುಂಬಸ್ಥರ ವಿರೋಧ; ಠಾಣೆ ಎದುರು ಜಮಾವಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

CET Ranking : ಸಿಇಟಿ ರ‍್ಯಾಂಕಿಂಗ್‌ನಲ್ಲಿ ಎಂಜಿನಿಯರಿಂಗ್‌ನ 10 ಟಾಪರ್ಸ್‌ಗಳು ಬೆಂಗಳೂರಿನ ವಿದ್ಯಾರ್ಥಿಗಳು!

CET Ranking : ರಾಜ್ಯಾದ್ಯಂತ ನಡೆದ ಸಿಇಟಿ ಪರೀಕ್ಷೆಯ ಫಲಿತಾಂಶವು ಶನಿವಾರ ಪ್ರಕಟಗೊಂಡಿದೆ. ವಿವಿಧ ಕೋರ್ಸ್‌ಗಳಲ್ಲಿ ಹೆಚ್ಚು ರ‍್ಯಾಂಕ್‌ಗಳನ್ನು ಬೆಂಗಳೂರಿನ ಅಭ್ಯರ್ಥಿಗಳೇ ಪಡೆದಿದ್ದಾರೆ. ಎಂಜಿನಿಯರಿಂಗ್‌ನ ಟಾಪ್‌ 10ನಲ್ಲಿ ಹತ್ತು ಟಾಪರ್ಸ್‌ಗಳು ಬೆಂಗಳೂರಿಗರೇ ಆಗಿದ್ದಾರೆ.

VISTARANEWS.COM


on

By

CET Ranking
ಸಿಇಟಿ ಟಾಪರ್ಸ್‌
Koo

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗಾಗಿ ನಡೆದಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶದಲ್ಲಿ ಬೆಂಗಳೂರಿನ ವಿದ್ಯಾರ್ಥಿಗಳೇ ಹೆಚ್ಚು ರ‍್ಯಾಂಕ್‌ (CET Ranking) ಪಡೆದಿದ್ದಾರೆ. ಎಂಜಿನಿಯರಿಂಗ್‌ನಲ್ಲಿ ಹತ್ತಕ್ಕೆ ಹತ್ತು ಟಾಪರ್ಸ್‌ಗಳು ಬೆಂಗಳೂರಿನವರೇ ಆಗಿದ್ದಾರೆ. ಅದರಲ್ಲೂ ಇಂಜಿನಿಯರಿಂಗ್ ರ‍್ಯಾಂಕ್‌ನ 10ರಲ್ಲಿ ಟಾಪ್ 9 ಬಾಲಕರೇ ಇದ್ದಾರೆ. ಇನ್ನೂ ವಿವಿಧ ಕೋರ್ಸ್‌ಗಳಲ್ಲಿ 45 ಮಂದಿ ಬೆಂಗಳೂರಿನವರೇ ಟಾಪರ್ಸ್‌ ಆಗಿದ್ದಾರೆ.

ಎಂಜಿನಿಯರಿಂಗ್‌ನಲ್ಲಿ ಬೆಂಗಳೂರಿನ ಸಹಕಾರ ನಗರದ ನಾರಾಯಣ ಒಲಿಂಪಿಯಾಡ್‌ ಶಾಲೆಯ ಹರ್ಷ ಕಾರ್ತಿಕೇಯ ವುಟುಕುರಿ ಮೊದಲ ರ‍್ಯಾಂಕ್‌ ಪಡೆದಿದ್ದಾನೆ. ಜತೆಗೆ ಬಿ.ಫಾರ್ಮಾ ಹಾಗೂ ಫಾರ್ಮ್ ಡಿಯಲ್ಲೂ 2ನೇ ರ‍್ಯಾಂಕ್‌ ಪಡೆದಿದ್ದಾನೆ.

ಇವ್ರೇ ಎಂಜಿನಿಯರಿಂಗ್‌ನಲ್ಲಿ ಟಾಪರ್ಸ್‌

1) ಹರ್ಷ ಕಾರ್ತಿಕೇಯ ವುಟುಕುರಿ – ನಾರಾಯಣ ಒಲಿಂಪಿಯಾಡ್ ಶಾಲೆ
2) ಮನೋಜ್ ಸೋಹನ್ ಗಜುಲಾ- ಶ್ರೀ ಚೈತನ್ಯ ಟೆಕ್ನೋ ಸ್ಕೂಲ್
3) ಅಭಿನವ್ ಪಿ.ಜೆ -ನೆಹರು ಸ್ಮಾರಕ ವಿದ್ಯಾಲಯ’
4)ಸನಾ ತಬಸ್ಸುಮ್- ನಾರಾಯಣ ಪಿಯು ಕಾಲೇಜು
5) ಅನಿಮೇಶ್ ಸಿಂಗ್ ರಾಥೋಡ್- ಶ್ರೀ ಚೈತನ್ಯ ಟೆಕ್ನೋ ಶಾಲೆ
6)ಪ್ರಭಾವ್ ಪಿ- ಆರ್ ವಿ ಪಿಯು ಕಾಲೇಜು
7)ವಿದೀಪ್ ರೆಡ್ಡಿ ಜಲಪಲ್ಲಿ-ದೆಹಲಿ ಪಬ್ಲಿಕ್ ಸ್ಕೂಲ್
8) ಶಾನ್ ಥಾಮಸ್ ಕೋಶಿ- ಗೇರ್ ಇನ್ನೋವೇಟಿವ್‌ ಇಂಟರ್‌ನ್ಯಾಷನಲ್
9) ವಾರಣಾಸಿ ಕಾರ್ತಿಕೇಯ ಶ್ರೀರಾಮ್- ಎಚ್ಎಂಆರ್ ನ್ಯಾಷನಲ್ ಪಿಯು
ಕಾಲೇಜು
10) ಸಾಗರ್ – ಡೆಲ್ಲಿ ಪಬ್ಲಿಕ್ ಸ್ಕೂಲ್

ಇದನ್ನೂ ಓದಿ: CET Ranking : 3 ಸಾವಿರ ಅಭ್ಯರ್ಥಿಗಳಿಗೆ ಸಿಕ್ಕಿಲ್ಲ ಸಿಇಟಿ ರ‍್ಯಾಂಕ್‌! ಮುಂದೇನು ಮಾಡ್ಬೇಕು?

ಬ್ಯಾಚುಲರ್ ಆಫ್ ನ್ಯಾಚುರೋಪತಿ & ಯೋಗ ಸೈನ್ಸಸ್

ಟಾಪ್‌ 3 ಪ್ರೀತಂ ರಾವಳಪ್ಪ ಪನಸುದಕರ್- ಶೇಷಾದ್ರಿಪುರಂ ಕಾಂಪ್ ಪಿಯು
ಟಾಪ್‌ 4 ವಜ್ರಕಾಂತ್ ಮಿರಗಿ – ನಾರಾಯಣ ಪಿಯು ಕಾಲೇಜು
ಟಾಪ್‌ 5 ಸ್ನೇಹಾ ಎದಾಯತ್ -ಕೇಂದ್ರೀಯ ವಿದ್ಯಾಲಯ
ಟಾಪ್‌ 7 ನೈತಿಕ್ ಜೈನ್-ಆರ್ ವಿ ಪಿಯು ಕಾಲೇಜು
ಟಾಪ್‌ 8 ಸುಷ್ಮಾ ಅಮರೇಶ- ಜಿ ಆರ್ ಪಿ ಯು ಕಾಲೇಜು
ಟಾಪ್‌ 9 ಶಶಾಂಕ್ ಎ. ವಿದ್ಯಾಮಂದಿರ್ ಪಿಯು ಕಾಲೇಜು

ಬಿಎಸ್ಸಿ (ಕೃಷಿ)

  • ಟಾಪ್‌ 3 ಅನಿಮೇಶ್ ಸಿಂಗ್ ರಾಥೋಡ್-ಶ್ರೀ ಚೈತನ್ಯ ಟೆಕ್ನೋ ಶಾಲೆ
  • ಟಾಪ್‌ 6 ಆದಿತ್ಯ ಎ-ಶ್ರೀ ಚೈತನ್ಯ ಟೆಕ್ನೋ ಶಾಲೆ
  • ಟಾಪ್‌ 10 ಸ್ಕಂದ ಪಿ -ದೀಕ್ಷಾ ಸಿಎಫ್‌ಎಲ್ ಪಿಯು ಕಾಲೇಜು

ವೆಟರ್ನರಿ

ಟಾಪ್‌ 1 ಕಲ್ಯಾಣ್ ವಿ- ಶ್ರೀ ಚೈತನ್ಯ ಟೆಕ್ನೋ ಸ್ಕೂಲ್
ಟಾಪ್‌ 2 ಡಿ ಎನ್ ನಿತಿನ್ – ನಾರಾಯಣ ಇ ಟೆಕ್ನೋ ಶಾಲೆ
ಟಾಪ್‌ 4 ಧ್ರುವ ಅವಸ್ಥಿ- ನಾರಾಯಣ ಇ ಟೆಕ್ನೋ ಶಾಲೆ
ಟಾಪ್‌ 5 ಸ್ನೇಹಾ ಎದಾಯತ್ -ಕೇಂದ್ರೀಯ ವಿದ್ಯಾಲಯ
ಟಾಪ್‌ 7 ವಜ್ರಕಾಂತ್ ಮಿರಗಿ – ನಾರಾಯಣ ಪಿಯು ಕಾಲೇಜು
ಟಾಪ್‌ 10 ಅಕ್ಷತ್ ಮಿಶ್ರಾ- ನಾರಾಯಣ ಇ ಟೆಕ್ನೋ ಶಾಲೆ

ಇದನ್ನೂ ಓದಿ: ನೀಟ್ ಫಲಿತಾಂಶದ ಬಳಿಕ ಎಂಜಿನಿಯರ್ ಸೀಟು ಹಂಚಿಕೆ; 1.24 ಲಕ್ಷ ಸೀಟುಗಳು ಲಭ್ಯ, ಆನ್ ಲೈನ್ ಪ್ರಕ್ರಿಯೆ

ಬಿ.ಫಾರ್ಮಾ

ಟಾಪ್‌ 1 ಕಲ್ಯಾಣ್ ವಿ- ಶ್ರೀ ಚೈತನ್ಯ ಟೆಕ್ನೋ ಸ್ಕೂಲ್
ಟಾಪ್‌ 2 ಹರ್ಷ ಕಾರ್ತಿಕೇಯ ವುಟುಕುರಿ – ನಾರಾಯಣ ಒಲಿಂಪಿಯಾಡ್ ಶಾಲೆ
ಟಾಪ್‌ 3 ಡಿ ಎನ್ ನಿತಿನ್ – ನಾರಾಯಣ ಇ ಟೆಕ್ನೋ ಶಾಲೆ
ಟಾಪ್‌ 4 ಸ್ನೇಹಾ ಎದಾಯತ್ -ಕೇಂದ್ರೀಯ ವಿದ್ಯಾಲಯ
ಟಾಪ್‌ 6 ಧ್ರುವ ಅವಸ್ಥಿ- ನಾರಾಯಣ ಇ ಟೆಕ್ನೋ ಶಾಲೆ
ಟಾಪ್‌ 7 ಮನೋಜ್ ಸೋಹನ್ ಗಜುಲಾ- ಶ್ರೀ ಚೈತನ್ಯ ಟೆಕ್ನೋ ಸ್ಕೂಲ್
ಟಾಪ್‌ 9 ವಜ್ರಕಾಂತ್ ಮಿರಗಿ – ನಾರಾಯಣ ಪಿಯು ಕಾಲೇಜು

ಫಾರ್ಮ್.ಡಿ

ಟಾಪ್‌ 1 ಕಲ್ಯಾಣ್ ವಿ- ಶ್ರೀ ಚೈತನ್ಯ ಟೆಕ್ನೋ ಸ್ಕೂಲ್
ಟಾಪ್‌ 2 ಹರ್ಷ ಕಾರ್ತಿಕೇಯ ವುಟುಕುರಿ – ನಾರಾಯಣ ಒಲಿಂಪಿಯಾಡ್ ಶಾಲೆ
ಟಾಪ್‌ 3 ಡಿ ಎನ್ ನಿತಿನ್ – ನಾರಾಯಣ ಇ ಟೆಕ್ನೋ ಶಾಲೆ
ಟಾಪ್‌ 4 ಸ್ನೇಹಾ ಎದಾಯತ್ -ಕೇಂದ್ರೀಯ ವಿದ್ಯಾಲಯ
ಟಾಪ್‌ 6 ಧ್ರುವ ಅವಸ್ಥಿ- ನಾರಾಯಣ ಇ ಟೆಕ್ನೋ ಶಾಲೆ
ಟಾಪ್‌ 7 ಮನೋಜ್ ಸೋಹನ್ ಗಜುಲಾ- ಶ್ರೀ ಚೈತನ್ಯ ಟೆಕ್ನೋ ಸ್ಕೂಲ್
ಟಾಪ್‌ 9 ವಜ್ರಕಾಂತ್ ಮಿರಗಿ – ನಾರಾಯಣ ಪಿಯು ಕಾಲೇಜು

ಬಿಎಸ್ಸಿ ನರ್ಸಿಂಗ್

ಟಾಪ್‌ 1 ಕಲ್ಯಾಣ್ ವಿ- ಶ್ರೀ ಚೈತನ್ಯ ಟೆಕ್ನೋ ಸ್ಕೂಲ್
ಟಾಪ್‌ 2 ಡಿ ಎನ್ ನಿತಿನ್ – ನಾರಾಯಣ ಇ ಟೆಕ್ನೋ ಶಾಲೆ
ಟಾಪ್‌ 4 ಧ್ರುವ ಅವಸ್ಥಿ- ನಾರಾಯಣ ಇ ಟೆಕ್ನೋ ಶಾಲೆ
ಟಾಪ್‌ 5 ಸ್ನೇಹಾ ಎದಾಯತ್ -ಕೇಂದ್ರೀಯ ವಿದ್ಯಾಲಯ
ಟಾಪ್‌ 7 ವಜ್ರಕಾಂತ್ ಮಿರಗಿ – ನಾರಾಯಣ ಪಿಯು ಕಾಲೇಜು
ಟಾಪ್‌ 10 ಅಕ್ಷತ್ ಮಿಶ್ರಾ- ನಾರಾಯಣ ಇ ಟೆಕ್ನೋ ಶಾಲೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

MLC Election: ಪರಿಷತ್ ಚುನಾವಣೆ; ಯತೀಂದ್ರ ಸೇರಿ 8 ಅಭ್ಯರ್ಥಿಗಳ ಪಟ್ಟಿ ಘೋಷಿಸಿದ ಕಾಂಗ್ರೆಸ್‌

MLC Election: ವಿಧಾನ ಪರಿಷತ್‌ ಚುನಾವಣೆ ಹಿನ್ನೆಲೆಯಲ್ಲಿ ಯತೀಂದ್ರ ಸಿದ್ದರಾಮಯ್ಯ, ಎನ್‌.ಎಸ್‌.ಭೋಸರಾಜು ಸೇರಿ ಏಳು ಮಂದಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಲಾಗಿದೆ.

VISTARANEWS.COM


on

Koo

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆ (MLC Election) ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್‌ ತನ್ನ 8 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನಾಮಪತ್ರ ಸಲ್ಲಿಕೆಗೆ ನಾಳೆ (ಮೇ 3) ಕಡೆ ದಿನವಾಗಿರುವುದರಿಂದ ಅಭ್ಯರ್ಥಿಗಳನ್ನು ಘೋಷಿಸಿದ್ದು, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಹಾಲಿ ಸಚಿವ ಎನ್‌.ಎಸ್‌.ಭೋಸರಾಜು ಸೇರಿ 8 ಮಂದಿಗೆ ಟಿಕೆಟ್‌ ನೀಡಲಾಗಿದೆ.

ಜೂನ್‌ 13ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಎನ್. ಎಸ್‌. ಬೋಸರಾಜು, ವಸಂತ ಕುಮಾರ್, ಯತೀಂದ್ರ ಸಿದ್ದರಾಮಯ್ಯ, ಕೆ.ಗೋವಿಂದರಾಜು, ಐವನ್ ಡಿಸೋಜಾ, ಬಿಲ್ಕಿಸ್ ಬಾನೋ, ಜಗದೇವ ಗುತ್ತೇದಾರ್ ಸೇರಿ ಏಳು ಅಭ್ಯರ್ಥಿಗಳು ಇದ್ದಾರೆ. ಹಾಗೆಯೇ ಜಗದೀಶ್‌ ಶೆಟ್ಟರ್‌ ಅವರಿಂದ ತೆರವಾದ ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಬಸನಗೌಡ ಬಾದರ್ಲಿ ಅವರಿಗೆ ಟಿಕೆಟ್‌ ನೀಡಲಾಗಿದೆ.

ವಿಧಾನಸಭೆಯಿಂದ ವಿಧಾನಪರಿಷತ್‌ನ 11 ಸ್ಥಾನಗಳಿಗೆ ಜೂನ್‌ 13ರಂದು ಮತದಾನ ನಡೆಯಲಿದೆ. ಸಂಖ್ಯಾಬಲದ ಆಧಾರದಲ್ಲಿ ಕಾಂಗ್ರೆಸ್‌ ಗೆಲ್ಲಬಹುದಾದ ಏಳು ಸ್ಥಾನಗಳಿಗೆ ನೂರಾರು ಮಂದಿ ಆಕಾಂಕ್ಷಿಗಳು ಇದ್ದರು. ಕಾಂಗ್ರೆಸ್‌ಗೆ ಲಭಿಸುವ ಏಳು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಕಗ್ಗಂಟಾದ ಹಿನ್ನೆಲೆಯಲ್ಲಿ ಶಾರ್ಟ್‌ ಲಿಸ್ಟ್‌ ಮಾಡಿಕೊಂಡು ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಅವರು ದೆಹಲಿಗೆ ತೆರಳಿ, ಹೈ ಕಮಾಂಡ್‌ ನಾಯಕರೊಂದಿಗೆ ಚರ್ಚಿಸಿದ್ದರು. ಇದೀಗ ಕಾಂಗ್ರೆಸ್‌ ಹೈಕಮಾಂಡ್‌ 7 ಅಭ್ಯರ್ಥಿಗಳನ್ನು ಫೈನಲ್‌ ಮಾಡಿದೆ.

ಇದನ್ನೂ ಓದಿ | Assembly Election Results 2024: ಅರುಣಾಚಲ ಪ್ರದೇಶದಲ್ಲಿ ಬಿಜೆಪಿ, ಸಿಕ್ಕಿಂನಲ್ಲಿ SKMಗೆ ಪ್ರಚಂಡ ಗೆಲುವು

ಬಿಜೆಪಿಯಿಂದ ಸಿ.ಟಿ.ರವಿ, ಎನ್.ರವಿಕುಮಾರ್‌ ಸೇರಿ ಮೂವರಿಗೆ ಟಿಕೆಟ್‌

MLC Election

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ಗೆ (MLC Election) ನಡೆಯವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್‌ 3 ಕೊನೆಯ ದಿನವಾಗಿದೆ. ಹೀಗಾಗಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಮಾಜಿ ಸಚಿವ ಸಿ.ಟಿ.ರವಿ, ಎಂಎಲ್‌ಸಿ ಎನ್‌.ರವಿಕುಮಾರ್‌ ಹಾಗೂ ಮಾಜಿ ಶಾಸಕ ಎಂ.ಜಿ.ಮುಳೆ ಅವರನ್ನು ಬಿಜೆಪಿ ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ.

ಒಟ್ಟು 11 ಕ್ಷೇತ್ರಗಳ ಪೈಕಿ ಬಿಜೆಪಿ ಸಂಖ್ಯಾಬಲದ ಆಧಾರದ ಮೇಲೆ ಮೂರು ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಿದೆ. ಹೀಗಾಗಿ ಮೂರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಎನ್​. ರವಿ ಕುಮಾರ್ ಅವರಿಗೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ. ಇನ್ನು ಲೋಕಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ.ಟಿ. ರವಿ ಅವರಿಗೆ ಪರಿಷತ್‌ ಟಿಕೆಟ್‌ ಒಲಿದಿದೆ. ಆದರೆ, ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಮಂಡ್ಯ ಲೋಕಸಭಾ ಟಿಕೆಟ್‌ ತ್ಯಾಗ ಮಾಡಿದ್ದ ಸುಮಲತಾ ಅಂಬರೀಶ್​ಗೆ ಅವಕಾಶ ಸಿಕ್ಕಿಲ್ಲ.

ಇನ್ನು ಮಾಜಿ ಶಾಸಕ ಎಂ.ಜಿ ಮುಳೆ ಅವರು ಮರಾಠ ಸಮುದಾಯದ ಪ್ರಭಾವಿ ನಾಯಕರಾಗಿದ್ದು, ಈ ಮೊದಲು ಜೆಡಿಎಸ್‌ನಲ್ಲಿ ಶಾಸಕರಾಗಿದ್ದರು. ಕಳೆದ ಬಾರಿ ಬಸವಕಲ್ಯಾಣ ಉಪಚುನಾವಣೆ ವೇಳೆ ಬಿಜೆಪಿ ಸೇರ್ಪಡೆಗೊಂಡಿದ್ದರು. ಇದೀಗ ಅವರಿಗೆ ಬಿಜೆಪಿ ಪರಿಷತ್ ಟಿಕೆಟ್‌ ಸಿಕ್ಕಿದೆ.

ಇದನ್ನೂ ಓದಿ | PM Narendra Modi: ಎಕ್ಸಿಟ್‌ ಪೋಲ್‌ ರಿಸಲ್ಟ್‌ ಬೆನ್ನಲ್ಲೇ ಪ್ರಧಾನಿ ಮೋದಿ ಬ್ಯಾಕ್‌ ಟು ಬ್ಯಾಕ್‌ ಮೀಟಿಂಗ್‌

ಹೈಕಮಾಂಡ್‌ ನಾಯಕರಿಗೆ ಸಿ.ಟಿ.ರವಿ ಧನ್ಯವಾದ

ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಕ್ಕೆ ಮಾಜಿ ಸಚಿವ ಸಿ.ಟಿ.ರವಿ ಅವರು ಹೈಕಮಾಂಡ್‌ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ. ಕರ್ನಾಟಕ ವಿಧಾನಪರಿಷತ್ತಿನ ದೈವಾರ್ಷಿಕ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಕ್ಕೆ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಬಿ.ಎಲ್‌.ಸತೋಷ್, ,ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾದ ಬಿ.ಎಸ್‌.ಯಡಿಯೂರಪ್ಪ, ರಾಜ್ಯ ಕೋರ್ ಕಮಿಟಿಯ ಎಲ್ಲಾ ನನ್ನ ಸಹೋದ್ಯೋಗಿ ಬಂಧುಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ಹಾಗೆಯೇ ವಿಧಾನಪರಿಷತ್ತಿಗೆ ಅಭ್ಯರ್ಥಿಗಳಾಗಿ ಆಯ್ಕೆಯಾದ‌ ಎನ್‌. ರವಿಕುಮಾರ್ ಹಾಗೂ ಎಂ.ಜಿ. ಮೂಳೆಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Continue Reading

ಬೆಂಗಳೂರು

CET Ranking : 3 ಸಾವಿರ ಅಭ್ಯರ್ಥಿಗಳಿಗೆ ಸಿಕ್ಕಿಲ್ಲ ಸಿಇಟಿ ರ‍್ಯಾಂಕ್‌! ಮುಂದೇನು ಮಾಡ್ಬೇಕು?

CET Ranking : ವೃತ್ತಿಪರ ಕೋರ್ಸ್‌ಗಳಿಗಾಗಿ ನಡೆದಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶವು ಜೂ 1ರಂದು ಪ್ರಕಟಗೊಂಡಿತ್ತು. ಇದರಲ್ಲಿ ಸುಮಾರು ಮೂರು ಸಾವಿರ ಅಭ್ಯರ್ಥಿಗಳ ಸಿಇಟಿ ರ‍್ಯಾಂಕ್‌ ತಡೆಹಿಡಿಯಲಾಗಿದೆ. ಸಿಇಟಿಗೆ ಅರ್ಜಿ ಸಲ್ಲಿಸುವಾಗ ಕೆಲವರು ತಪ್ಪಾಗಿ ನಮೂದಿಸಿದ್ದ ಪಕ್ಷದಲ್ಲಿ ರ‍್ಯಾಂಕ್‌ ಪ್ರಕಟವಾಗಿರುವುದಿಲ್ಲ.

VISTARANEWS.COM


on

By

CET Ranking
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಿದ ಸಿಇಟಿ ಪರೀಕ್ಷೆಯ ಫಲಿತಾಂಶದಲ್ಲಿ ರ‍್ಯಾಂಕ್‌ (CET Ranking) ತಡೆಹಿಡಿದಿರುವ ಅಥವಾ ರ‍್ಯಾಂಕ್‌ ನೀಡದೇ ಇರುವ ಅಭ್ಯರ್ಥಿಗಳು ಆತಂಕಪಡುವ ಅಗತ್ಯ ಇಲ್ಲ. ಅಂತಹವರು ಜೂನ್‌ 3ರ ಸೋಮವಾರದಿಂದ ಕೆಇಎ (KEA) ಬಿಡುಗಡೆ ಮಾಡುವ ಪೋರ್ಟಲ್‌ನಲ್ಲಿ ತಮ್ಮ ಅಂಕಗಳನ್ನು ದಾಖಲಿಸಿ ರ‍್ಯಾಂಕ್‌ ಪಡೆಯಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ಪಿಯುಸಿಯಲ್ಲಿ ನೀಡಿದ್ದ ಯೂನಿಕ್‌ ಸಂಖ್ಯೆಯನ್ನು ಸಿಇಟಿಗೆ ಅರ್ಜಿ ಸಲ್ಲಿಸುವಾಗ ಕೆಲವರು ತಪ್ಪಾಗಿ ನಮೂದಿಸಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ. ತಪ್ಪಾಗಿ ನಮೂದಿಸಿದ ಪಕ್ಷದಲ್ಲಿ ರ‍್ಯಾಂಕ್‌ ಪ್ರಕಟಣೆ ಆಗಿರುವುದಿಲ್ಲ. ಅಂತಹ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಸರಿ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತಿದೆ.

ಈ ರೀತಿ ರ‍್ಯಾಂಕ್‌ ತಡೆಹಿಡಿದಿರುವ ಸುಮಾರು ಮೂರು ಸಾವಿರ ಅಭ್ಯರ್ಥಿಗಳು ಇದ್ದಾರೆ. ಅಂತಹವರಿಗೆ ಈ ತೀರ್ಮಾನದಿಂದ ಅನುಕೂಲ ಆಗಲಿದೆ. ಪ್ರತಿ ಬಾರಿಯೂ ಈ ರೀತಿಯ ಒಂದಷ್ಟು ಮಂದಿ ತಪ್ಪುಗಳನ್ನು ಮಾಡುವ ಕಾರಣ ಹಾಗೆ ಆಗಿದೆ ಎಂದು ಪ್ರಸನ್ನ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: KCET Result 2024: ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಲಿಂಕ್‌ ಇಲ್ಲಿದೆ

ನೀಟ್ ಪರೀಕ್ಷೆ ಬಳಿಕ ಎಂಜಿನಿಯರ್ ಸೀಟು ಹಂಚಿಕೆ; 1.24 ಲಕ್ಷ ಸೀಟುಗಳು ಲಭ್ಯ, ಆನ್ ಲೈನ್ ಪ್ರಕ್ರಿಯೆ

ಬೆಂಗಳೂರು: ನೀಟ್‌ ಪರೀಕ್ಷೆ ಬಳಿಕವೇ ಎಂಜಿನಿಯರ್‌ ಸೀಟು ಹಂಚಿಕೆ ಮಾಡಲಾಗುವುದು ಎಂದು ಕೆಇಎ ಕಾರ್ಯ ನಿವಾರ್ಹಕ ನಿರ್ದೇಶಕ ಪ್ರಸನ್ನ (Education News) ತಿಳಿಸಿದ್ದಾರೆ. ನೀಟ್ ಫಲಿತಾಂಶಕ್ಕೂ ಮುನ್ನವೇ ಎಂಜಿನಿಯರಿಂಗ್ ಸೀಟ್ ಹಂಚಿಕೆ ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಹೀಗಾಗಿ ಮೊದಲು ಮೆಡಿಕಲ್ ಸೀಟ್ ಹಂಚಿಕೆ ಮಾಡಿ ನಂತರ ಎಂಜಿನಿಯರಿಂಗ್ ಸೀಟ್ ಹಂಚಿಕೆ ಮಾಡಲಾಗುವುದು ಎಂದರು.

ಬೇರೆ ಬೇರೆ ಕಾಲೇಜಿನಲ್ಲಿ ಈಗಾಗಲೇ ದಾಖಲಾತಿ ಪ್ರಕ್ರಿಯೆ ಆರಂಭವಾಗಿದೆ ಎಂಬ ದೂರಿನ ಕುರಿತು ಪ್ರತಿಕ್ರಿಯಿಸಿದ ಅವರು, ಸಿಇಟಿ ಪರೀಕ್ಷೆಯಲ್ಲಿ ಒಳ್ಳೆಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸೀಟ್ ಸಿಗುತ್ತದೆ. ಸೀಟ್ ಸಿಗುವುದಿಲ್ಲ ಎಂಬ ಆತಂಕದಲ್ಲಿ ಡೋನೇಷನ್ ಕೊಟ್ಟು ಅಡ್ಮಿಶನ್ ಮಾಡಿಸಬೇಡಿ. ಒಳ್ಳೆಯ ರ‍್ಯಾಂಕ್‌ ಪಡೆದವರಿಗೆ ಒಳ್ಳೆಯ ಕಾಲೇಜು ಸಿಗುತ್ತದೆ ಎಂದರು.

ಮತ್ತೊಂದು ಅವಕಾಶ


ನೀಟ್‌ ಪರೀಕ್ಷೆ ತೆಗೆದುಕೊಂಡಿದ್ದರೂ ರಾಜ್ಯದ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಬೇಕಾದರೆ ಕೆಇಎಗೆ ಅರ್ಜಿ ಸಲ್ಲಿಸುವುದು ಕಡ್ಡಾಯ. ಆದರೆ, ಕೆಲವರು ಈ ರೀತಿ ಅರ್ಜಿ ಸಲ್ಲಿಸಿಲ್ಲ ಎಂದು ಹೇಳುತ್ತಿದ್ದು, ಅಂತಹವರಿಗೆ ಅನುಕೂಲ ಮಾಡಲು ನೀಟ್‌ ಫಲಿತಾಂಶದ ನಂತರ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದರು.

1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯ

ಇನ್ನೂ ರಾಜ್ಯದಲ್ಲಿ 1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯವಿದೆ. ರ‍್ಯಾಂಕ್‌ ಆಧಾರದ ಮೇಲೆ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ. ಇನ್ನೂ ಕಾಲೇಜು ಶುಲ್ಕವನ್ನು ನಿಗದಿ ಮಾಡಿಲ್ಲ. ಕಳೆದ ವರ್ಷ 40,110 ರೂಪಾಯಿ ಶುಲ್ಕ ಸರ್ಕಾರಿ ಕಾಲೇಜುಗಳಿಗೆ ಇತ್ತು. ಪ್ರಸಕ್ತ ಸಾಲಿನ ಸೀಟ್ ಮ್ಯಾಟ್ರಿಕ್ ಇನ್ನೂ ಸರ್ಕಾರದಿಂದ ಬಂದಿಲ್ಲ. ಬಂದ ನಂತರ ಕಾಲೇಜು/ಕೋರ್ಸ್ ವಾರ ಸೀಟ್ ಮ್ಯಾಟ್ರಿಕ್ಸ್ ಅನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು. ಅದೇ ರೀತಿ ಕೋರ್ಸ್ ಗಳ ಶುಲ್ಕ ನಿಗದಿ ಸಂಬಂಧ ಒಂದು ಸಭೆ ನಡೆದಿದ್ದು, ಸದ್ಯದಲ್ಲೇ ಆ ಕುರಿತು ಸರ್ಕಾರದ ಮಟ್ಟದಲ್ಲಿ ತೀರ್ಮಾನವಾಗಲಿದೆ ಎಂದರು.

ವೃತ್ತಿಪರ ಕೋರ್ಸ್‌ಗಳಲ್ಲಿ ಸರ್ಕಾರಿ ಕೋಟಾದ ಸೀಟುಗಳನ್ನು ಕೆಇಎ ಮೂಲಕವೇ ಹಂಚಿಕೆ ಮಾಡಲಾಗುತ್ತದೆ. ಈ ವಿಷಯದಲ್ಲಿ ಗೊಂದಲ ಬೇಡ. ಫಲಿತಾಂಶ ತಡ ಆಯಿತು, ಹೀಗಾಗಿ ಎಲ್ಲ ಸೀಟುಗಳನ್ನು ಖಾಸಗಿ ಕಾಲೇಜು ಆಡಳಿತ ಮಂಡಳಿಗಳು ಹೆಚ್ಚಿನ ಡೊನೇಷ್‌ ಪಡೆದು ಭರ್ತಿ ಮಾಡಿಕೊಳ್ಳುತ್ತಿವೆ ಎಂದು ಕೆಲವರು ಗೊಂದಲ ಸೃಷ್ಟಿಸುತ್ತಿದ್ದು, ಅಂತಹ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಪ್ರಸನ್ನ ಮನವಿ ಮಾಡಿದರು. ಕೆಇಎ ಮೂಲಕವೇ ಮೆರಿಟ್‌ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗುತ್ತದೆ. ಹೀಗಾಗಿ ಇಂತಹ ಸುಳ್ಳುಸುದ್ದಿಗಳಿಗೆ ಪೋಷಕರಾಗಲಿ/ ವಿದ್ಯಾರ್ಥಿಗಳಾಗಲಿ ಗಮನ ನೀಡಬಾರದು ಎಂದು ಅವರು ಹೇಳಿದರು.

ಆನ್‌ಲೈನ್‌ನಲ್ಲೇ ವೆರಿಫಿಕೇಶನ್‌

ಈ ಬಾರಿ ವಿಶೇಷ ಮಕ್ಕಳ ವೈದ್ಯಕೀಯ ತಪಾಸಣೆ ಬಿಟ್ಟರೆ ಬಹುತೇಕ ಎಲ್ಲ ದಾಖಲೆಗಳ ಪರಿಶೀಲನೆ ಆನ್ ಲೈನ್ ನಲ್ಲಿ ನಡೆಯುತ್ತದೆ. ಯಾರೂ ಕೆಇಎ ಕಚೇರಿಗೆ ಬರುವ ಅಗತ್ಯ ಇರುವುದಿಲ್ಲ. ಎಲ್ಲ ಪ್ರಕ್ರಿಯೆಗಳು ಆನ್ ಲೈನ್‌ನಲ್ಲೆ ನಡೆಯಲಿದೆ. ಶೇ.100 ರಷ್ಟು ಡಾಕ್ಯುಮೆಂಟ್ ಪರಿಶೀಲನೆ ಆನ್‌ಲೈನ್‌ನಲ್ಲಿ ಮಾಡಲಾಗುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳು ಕೆಇಎ ಮುಂದೆ ಬಂದು ಕ್ಯೂ ನಿಲ್ಲುವ ಅವಶ್ಯಕತೆ ಇಲ್ಲ. ಎಲ್ಲಾ ದಾಖಲಾತಿಗಳನ್ನು ಆನ್‌ಲೈನ್‌ನಲ್ಲೇ ಪರಿಶೀಲನೆ ನಡೆಯಲಿದೆ ಎಂದರು. ನಿನ್ನೆ ಶನಿವಾರ (ಜೂ.1) ಸಂಜೆ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಹಠಾತ್ ಪ್ರಕಟಿಸಿದ ಬೆನ್ನಲ್ಲೇ ಭಾನುವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನ ಸುದ್ದಿಗೋಷ್ಠಿ ನಡೆಸಿ ಎಲ್ಲ ಮಾಹಿತಿಯನ್ನು ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ವರ್ಗಾವಣೆಯಾದ ಹಣ ಹಿಂಪಡೆಯಲು ಸರ್ಕಾರ ಕಸರತ್ತು

Valmiki Corporation Scam: 87 ಕೋಟಿ ಅಕ್ರಮದಲ್ಲಿ ಸರ್ಕಾರಕ್ಕೆ ವಾಪಸ್ ಆಗಿದ್ದು ಕೇವಲ 5 ಕೋಟಿ ರೂ. ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಸಚಿವ ನಾಗೇಂದ್ರ ಮತ್ತು ಅಧಿಕಾರಿಗಳು ಈವರೆಗೆ ಸುಮಾರು 68 ಕೋಟಿ ವಾಪಸ್‌ ಆಗಿದೆ ಎಂದು ಹೇಳಿದ್ದರು.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ (Valmiki Corporation Scam) ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ನಿಗಮದಿಂದ ಅಕ್ರಮವಾಗಿ ವರ್ಗಾವಣೆ ಆಗಿದೆ ಎನ್ನಲಾದ 87 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ವಾಪಸ್‌ ಪಡೆಯಲು ಕಸರತ್ತು ನಡೆಸುತ್ತಿದೆ. ಮೊದಲ ಕಂತಿನಲ್ಲಿ 26 ಕೋಟಿ ವಾಪಸ್ ಆಗಿದೆ ಎಂದು ಸಚಿವ ಬಿ ನಾಗೇಂದ್ರ ಹೇಳಿದ್ದರು. ಎರಡನೇ ಕಂತಿನಲ್ಲಿ 42 ಕೋಟಿ ವಾಪಸ್ ಆಗಿದೆ ಎಂದು ಸಚಿವರ ಆಪ್ತ ವಲಯದ ಅಧಿಕಾರಿಗಳು ತಿಳಿಸಿದ್ದರು. ಆದರೆ, ಇದೀಗ ಇಷ್ಟು ಮೊತ್ತ ನಿಗಮಕ್ಕೆ ವಾಪಸ್‌ ಆಗಿಯೇ ಇಲ್ಲ ಎನ್ನಲಾಗುತ್ತಿದೆ.

87 ಕೋಟಿ ಅಕ್ರಮದಲ್ಲಿ ಸರ್ಕಾರಕ್ಕೆ ವಾಪಸ್ ಆಗಿದ್ದು ಕೇವಲ 5 ಕೋಟಿ. ಈವರೆಗೂ ಕೇವಲ 5 ಕೋಟಿ ಮಾತ್ರ ವಾಪಸ್ ಆಗಿದೆ ಎಂಬ ಮಾಹಿತಿ ಸರ್ಕಾರ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ನಿರೀಕ್ಷಿತ ಹಣ ವಾಪಸ್ ಆಗದೆ, ಸಚಿವರು 26 ಕೋಟಿ ಬಂದಿದೆ ಎಂದಿದ್ದು ಯಾಕೆ ಎಂಬ ಅನುಮಾನಗಳು ಮೂಡಿವೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಬಿಜೆಪಿಯಿಂದ ಸರ್ಕಾರಕ್ಕೆ ಗಡುವು ನೀಡಿದ್ದು, ಹೀಗಾಗಿ ಸಚಿವ ತಲೆದಂಡ ಬಹುತೇಕ ಫಿಕ್ಸ್ ಎನ್ನಲಾಗಿದೆ.

ಸಚಿವ ಬಿ‌ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿ ಪಟ್ಟು

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ ಹಿನ್ನೆಲೆಯಲ್ಲಿ ಸಚಿವ ಬಿ‌.ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟುಹಿಡಿದಿದೆ. ಸಚಿವರ ರಾಜೀನಾಮೆ ಪಡೆಯಲು ಜೂನ್ 6ರವರೆಗೂ ಗಡುವು ನೀಡಿರುವ ಬಿಜೆಪಿ, ಒಂದು ವೇಳೆ ಕ್ರಮ ಕೈಗೊಳ್ಳದಿದ್ದರೆ ರಾಜ್ಯವ್ಯಾಪಿ ಬೃಹತ್‌ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ | MLC Election: ವಿಧಾನ ಪರಿಷತ್‌ ಚುನಾವಣೆ; ಸಿ.ಟಿ.ರವಿ, ಎನ್.ರವಿಕುಮಾರ್‌ ಸೇರಿ ಮೂವರಿಗೆ ಬಿಜೆಪಿ ಟಿಕೆಟ್‌

ಮತ್ತೊಂದೆಡೆ ಬಿಜೆಪಿ ಕಾಲದ ಹಗರಣಗಳನ್ನು ಪ್ರಸ್ತಾಪ ಮಾಡಲು ನಾಗೇಂದ್ರ ಮುಂದಾಗಿದ್ದಾರೆ. ಪ್ರಕರಣದಲ್ಲಿ ತನಿಖೆಗೆ ಸಿಬಿಐ ಎಂಟ್ರಿ ತಪ್ಪಿಸಲು ಹೊಸ ದಾಳ ಪ್ರಯೋಗಕ್ಕೆ ನಾಗೇಂದ್ರ ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಬಿಜೆಪಿ ಕಾಲದಲ್ಲಿ ಮಂಡ್ಯ, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಹಗರಣ ಕುರಿತು ಪ್ರಸ್ತಾಪ ಮಾಡಲು ಸಚಿವ ಪ್ಲ್ಯಾನ್‌ ಮಾಡಿದ್ದಾರೆ.

Continue Reading
Advertisement
Lok Sabha Election 2024
ಕರ್ನಾಟಕ4 mins ago

Lok Sabha Election 2024: ಮೈಸೂರು ಕ್ಷೇತ್ರದಲ್ಲಿ ಗೆಲುವು ಯಾರಿಗೆ? ಶ್ವಾನದಿಂದ ಅಚ್ಚರಿಯ ಭವಿಷ್ಯ!

Aam Panna Recipe
ಆಹಾರ/ಅಡುಗೆ9 mins ago

Aam Panna Recipe: ಆಮ್‌ ಪನ್ನಾ! ಮಾವಿನಕಾಯಿಯ ಅದ್ಭುತ ಪೇಯ ಇದು; ನೀವೂ ಮಾಡಿ ನೋಡಿ

Arvind Kejriwal
ದೇಶ28 mins ago

Arvind Kejriwal: ತಿಹಾರ್‌ ಜೈಲಿಗೆ ಮರಳಿದ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌; ಜೂ. 5ರಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ

GST Collection
ವಾಣಿಜ್ಯ29 mins ago

GST Collection: ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ನಂ. 2; ಇಲ್ಲಿ ಸಂಗ್ರಹವಾಗಿದ್ದು ಎಷ್ಟು?

Kamal Haasan gives a fiery speech at Indian 2 event
ಕಾಲಿವುಡ್29 mins ago

Kamal Haasan: ತಮಿಳಿಗನೊಬ್ಬ ದೇಶ ಆಳುವ ದಿನ ಏಕೆ ಬರಬಾರದು? ಕಮಲ್‌ ಹಾಸನ್‌ ಪ್ರಶ್ನೆ!

CET Ranking
ಬೆಂಗಳೂರು37 mins ago

CET Ranking : ಸಿಇಟಿ ರ‍್ಯಾಂಕಿಂಗ್‌ನಲ್ಲಿ ಎಂಜಿನಿಯರಿಂಗ್‌ನ 10 ಟಾಪರ್ಸ್‌ಗಳು ಬೆಂಗಳೂರಿನ ವಿದ್ಯಾರ್ಥಿಗಳು!

Bangalore Central ElectionWill PC Mohan's unbeaten run continue in Bengaluru Central Lok Sabha constituency?
ಪ್ರಮುಖ ಸುದ್ದಿ38 mins ago

Bangalore Central Election : ಮನ್ಸೂರ್ ಅಲಿ ಖಾನ್ ವಿರುದ್ಧ ಗೆದ್ದು ಅಜೇಯ ಓಟ ಮುಂದುವರಿಸುವರೇ ಪಿ. ಸಿ ಮೋಹನ್​

Denim Tube Tops Fashion
ಫ್ಯಾಷನ್39 mins ago

Denim Tube Tops Fashion: ಡೆನಿಮ್‌ನಲ್ಲೂ ಬಂತು ಟ್ಯೂಬ್‌ ಟಾಪ್ ಫ್ಯಾಷನ್‌!

Viral Video
ವೈರಲ್ ನ್ಯೂಸ್42 mins ago

Viral Video: ರೈಲು ಚಲಿಸುತ್ತಿರುವಾಗಲೇ ಹೇಗೆ ಮೊಬೈಲ್‌ ಎಗರಿಸುತ್ತಾರೆ ನೋಡಿ!

Kotee Movie in Davanagere Release event
ಸಿನಿಮಾ47 mins ago

Dolly Dhananjay: ದಾವಣಗೆರೆಯಲ್ಲಿ ‘ಕೋಟಿ’ ಅಬ್ಬರ; ಜೂನ್ 14ರಂದು ಸಿನಿಮಾ ತೆರೆಗೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ7 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 day ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌