Viral video | ಮನಸೆಳೆದ ಈ ಪಿಂಟಾರಾ ಕೇಕ್‌ ಮಾಡಲು ಐದು ದಿನ! - Vistara News

ವೈರಲ್ ನ್ಯೂಸ್

Viral video | ಮನಸೆಳೆದ ಈ ಪಿಂಟಾರಾ ಕೇಕ್‌ ಮಾಡಲು ಐದು ದಿನ!

ಈ ವಿಚಿತ್ರ ನಕ್ಷತ್ರದಾಕೃತಿಯ ಕೇಕ್‌ ಮಾಡಲು ಈತನಿಗೆ ಐದು ದಿನ ತೆಗೆದುಕೊಂಡಿದೆ. ಅಡುಗೆ ಎಂಬುದು ಕಲೆಯೂ ಹೌದು ಎಂದು ನಿರೂಪಿಸುವಂತಿದೆ ಈ ಕೇಕ್‌ ಮೇಕಿಂಗ್.‌

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಾಕೆ ಕೇವಲ ಚಿತ್ರಕಾರರು, ಚಿತ್ರನಟರು, ಸಂಗೀತಕಾರರು ಇಂಥವರು ಮಾತ್ರ ಕಲಾವಿದರು? ಅಡುಗೆಯೂ ಒಂದು ಕಲೆಯಾದರೆ, ಅಡುಗೆ ಮಾಡುವವರೂ ಕಲಾವಿದರೇ ಆಗಬೇಕಲ್ಲವೇ ಎಂಬ ಪ್ರಶ್ನೆ ಈ ವಿಡಿಯೋ ನೋಡಿದವರಿಗೆ ಉದ್ಭವಿಸದೇ ಇರದು. ಯಾಕೆಂದರೆ, ಇನ್ನೇನು ಕ್ಷಣಾರ್ಧದಲ್ಲಿ ತಿಂದು ಮುಗಿದು ಹೋಗಬಹುದಾದ ತಿನಿಸಿಗೆ ದಿನಗಟ್ಟಲೆ ಪರಿಶ್ರಮ ಹಾಕಿ ಮಾಡುವುದಿದೆಯಲ್ಲ, ಕ್ಷಣಾರ್ಧದಲ್ಲಿ ಮುಗಿದು ಹೋದರೂ ಅದು ಕೊಡುವ ಸಂತೃಪ್ತ ಭಾವ ಯಾವ ಕಲಾವಿದನಿಗೂ ಸಿಗಲಿಕ್ಕಿಲ್ಲವೇನೋ.

ಈಗಂತೂ ಮಾರುಕಟ್ಟೆಯಲ್ಲಿ ಲಭ್ಯವಿರುವ ನಾನಾ ಬಗೆಯ ಕೇಕ್‌ಗಳನ್ನು ನೋಡಿದರೆ ಕೇಕ್‌ ಕಲಾವಿದರು ಎಂಬ ಬೇರೆಯದೇ ಕಲಾವಿದರು ನಮ್ಮಲ್ಲಿದ್ದಾರೆ ಎಂಬುದು ಅರಿವಾಗುತ್ತದೆ. ಕೇಕ್‌ನ ಡಿಸೈನ್‌ಗಳ ಮೇಲೆ ನಡೆದಷ್ಟು ಕ್ರಿಯಾಶೀಲ ಪ್ರಯೋಗಗಳು ಬಹುಶಃ ಯಾವ ತಿನಿಸಿನ ಮೇಲೂ ನಡೆದಿರಲಿಕ್ಕಿಲ್ಲವೇನೋ. ಅಷ್ಟು ನಮೂನೆಯ, ಥರಹೇವಾರಿ ಡಿಸೈನುಗಳ, ನಾನಾ ರುಚಿಯ, ನವನವೀನ ಐಡಿಯಾಗಳ ಕೇಕುಗಳು ದಿನನಿತ್ಯ ಬಂದು ಹೋಗುತ್ತಲೇ ಇರುತ್ತವೆ. ಅಂತರ್ಜಾಲದಲ್ಲಿ ಸದ್ದು ಮಾಡುತ್ತಲೇ ಇರುತ್ತದೆ. ಸದ್ಯ ಅತ್ಯಂತ ಜನಪ್ರಿಯವಾಗಿರುವ ಪಿಂಟಾರ ಕೇಕ್‌ಗಳ ಪೈಕಿ ಈಗ ಈ ಪಿಂಟಾರಾ ಕೇಕ್‌ ಸಾಮಾಜಿಕ ಜಾಲತಾಣದಲ್ಲಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆಯುತ್ತಿದೆ.

ಇಲ್ಲೊಬ್ಬ ಕೇಕ್‌ ಕಲಾವಿದ ಮಾಡಿದ ಪಿಂಟಾರ ಕೇಕ್‌ ಸಾಮಾಜಿಕ ಜಾಲತಾಣದಲ್ಲಿ ಮಿಲಿಯಗಟ್ಟಲೆ ವೀಕ್ಷಣೆ ಪಡೆದಿದೆ. ಅಮೌರಿ ಗುಯ್ಚಾನ್‌ ಎಂಬವರು ಹಂಚಿಕೊಂಡ ವಿಡಿಯೋ ಒಂದು ಪಿಂಟಾರಾ ಕೇಕ್‌ ಕೂಡಾ ಎಂಥ ಅದ್ಭುತ ಕಲೆ ಎಂಬುದನ್ನು ತೋರಿಸಿದೆ. ʻಚಾಕೋಲೇಟ್‌ ಪಿಂಟಾರಾ, ಬಹಳ ನೋವಿನಿಂದ ಕತ್ತರಿಸುತ್ತಿದ್ದೇನೆ. ಆದರೆ ಇದರೊಳಗಿನ ಕ್ಯಾಂಡಿಗಳು ಬಹಳ ರುಚಿಯಾಗಿದ್ದವುʼ ಎಂಬ ತಲೆಬರಹದೊಂದಿಗೆ ಈ ವಿಡಿಯೋವನ್ನು ಶೇರ್‌ ಮಾಡಲಾಗಿದೆ.

ಗುಯ್ಚಾನ್‌ ಕೇಕ್‌ ಮಾಡುವ ವಿಡಿಯೋ ಇದರಲ್ಲಿದ್ದು ತೂಗು ಹಾಕಲಾಗಿರುವ ಪಿಂಟಾರಾ ಕೇಕ್‌ನನ್ನು ಒಡೆಯುವ ದೃಶ್ಯವಿದೆ. ಈ ಕೇಕೇ ಒಂದು ಕಲಾಕೃತಿಯ ಹಾಗಿದ್ದು, ಇದನ್ನು ಹೇಗಾದರೂ ಒಡೆದು ತಿಂದು ಮುಗಿಸಿಬಿಡುವುದು ಎಂದು ಯಾರಿಗಾದರೂ ಅನಿಸುವಷ್ಟು ಸುಂದರವಾಗಿದೆ.‌

ಇದನ್ನೂ ಓದಿ | Viral news | ನೀಲಿ, ಪಿಂಕ್‌ ಬಣ್ಣದ ಬ್ಲೂಬೆರಿ, ಸ್ಟ್ರಾಬೆರಿ ಸಮೋಸಾಗಳನ್ನು ನೋಡಿದ್ದೀರಾ?

ಇದರ ಹಿಂದಿನ ಅಷ್ಟೂ ಪರಿಶ್ರಮ ಖ್ಯಾತ ಕೇಕ್‌ ಕಲಾವಿದ ಅಮೌರಿ ಗುಯ್ಚಾನ್‌ಗೆ ಸಲ್ಲುತ್ತದೆ. ಈ ಪಿಂಟಾರಾ ಕೇಕ್‌ ಮಾಡಲು ತೆಗೆದುಕೊಂಡ ಸಮಯ ಐದು ದಿನಗಳಂತೆ. ಸುಮಾರು ೩,೭೦೦ ಲೂಪ್‌ಗಳ ಇದರಲ್ಲಿದ್ದು. ಒಂದೊಂದನ್ನೇ ಮಾಡಿ ಅಂಟಿಸಲಾಗಿದೆ. ಆಕರ್ಷಕವಾಗಿ ಅಲಂಕರಿಸಿರುವ ಈ ಕೇಕ್ ಒಳಗೆ ಸಾಕಷ್ಟು ಕ್ಯಾಂಡಿಗಳನ್ನು ತುಂಬಿಸಲಾಗಿದ್ದು, ಲೂಪ್‌ಗಳಂತೆ ಡಿಸೈನ್‌ ಮಾಡಿ ಅವುಗಳಿರುವ ಕೋನ್‌ ಆಕೃತಿಯ ಚಾಕೋಲೇಟ್‌ಗಳನ್ನು ಮಾಡಲಾಗಿದೆ. ಆಮೇಲೆ ಅದಕ್ಕೆ ಕೆಂಪು ಬಣ್ಣ ಬಳಿಯಲಾಗಿದ್ದು, ಈ ಎಲ್ಲ ಕೋನ್‌ಗಳನ್ನೂ ಒಂದಕ್ಕೊಂದು ಅಂಟಿಸಲಾಗಿದೆ. ಪಕ್ಕನೆ ನೋಡಿದರೆ, ದೀಪಾವಳಿಯ ನಕ್ಷತ್ರಾಕಾರದ ಗೂಡು ದೀಪದಂತೆ ಕಾಣುತ್ತದೆ. ಪ್ರತಿ ಬರ್ತ್‌ಡೇ ಪಾರ್ಟಿಯಲ್ಲೂ ಇದನ್ನು ಒಡೆಯುವ ದೃಶ್ಯ ಸಾರ್ಥಕತೆಯ ಕ್ಷಣ ಎಂದು ವಿವರಿಸಿರುವ ಅವರು, ಈ ಕ್ಷಣವನ್ನು ಸ್ಟಾರ್‌ ಶೋ ಎಂದು ಕರೆದುಕೊಂಡಿದ್ದಾರೆ.

ಈತನ ಥರಹೇವಾರಿ ಕೇಕ್‌ಗಳ ವಿಡಿಯೋಗಳನ್ನು ಇಷ್ಟಪಡುವ ಈತನ ಅಭಿಮಾನಿಗಳು ಈ ಪಿಂಟಾರಾ ಕೇಕ್‌ ಈತನ ಕೈಯಲ್ಲಿ ಮೂಡಿದ ಅತ್ಯದ್ಭುತ ಕಲಾಕೃತಿ ಎಂದು ಬಣ್ಣಿಸಿದ್ದಾರೆ. ಈತನ ಕೈಚಳಕ ನೋಡಿ ನಿಜಕ್ಕೂ ಶಾಕ್‌ ಆಗಿದೆ ಎಂದು ಹಲವರು ಮೂಕವಿಸ್ಮಿತರಾಗಿದ್ದರೆ, ಈನ್ನೂ ಕೆಲವರು ನೀವು ಚಾಕೋಲೇಟ್‌ ಜಗತ್ತಿನ ಬಾಬ್‌ ರೋಸ್‌ ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿ | Garba Dance | ಸ್ವಿಮ್ಮಿಂಗ್‌ ಪೂಲ್‌ನಲ್ಲೂ ಗಾರ್ಬಾ ನೃತ್ಯ, ರಾಜಸ್ಥಾನದಲ್ಲಿ ನವರಾತ್ರಿ ರಂಗಿನ ವಿಡಿಯೊ ವೈರಲ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

Rashid Khan: ಧೋನಿಯಂತೆ ಹೆಲಿಕಾಪ್ಟರ್ ಶಾಟ್ ಮೂಲಕ ಸಿಕ್ಸರ್ ಬಾರಿಸಿದ ರಶೀದ್​ ಖಾನ್; ವಿಡಿಯೊ ವೈರಲ್​

Rashid Khan: ದಿ ಹಂಡ್ರೆಡ್​ ಕ್ರಿಕೆಟ್​ ಲೀಗ್​ನ ಪಂದ್ಯವೊಂದರಲ್ಲಿ ರಶೀದ್​ ಖಾನ್​ ಅವರು ಟೈಮಲ್‌ ಮಿಲ್ಸ್‌ ಎಸೆತವನ್ನು ಹೆಲಿಕಾಪ್ಟರ್ ಶಾಟ್ ಮೂಲಕ ಆಫ್​ ಸೈಡ್​ ಕಡೆಗೆ ಸಿಕ್ಸರ್​ ಬಾರಿಸಿ ಮಿಂಚಿದ್ದಾರೆ.

VISTARANEWS.COM


on

Rashid Khan
Koo

ಲಂಡನ್​: ಮಹೇಂದ್ರ ಸಿಂಗ್​ ಧೋನಿ(MS Dhoni) ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿಯಾಗಿ ಹಲವು ವರ್ಷ ಕಳೆದಿದ್ದರೂ ಕೂಡ ಅವರು ಪರಿಚಯಿಸಿದ ‘ಹೆಲಿಕಾಪ್ಟರ್ ಶಾಟ್’(MS Dhoni Helicopter shot) ಮಾತ್ರ ಆಗಾಗ ಕ್ರಿಕೆಟ್​ನಲ್ಲಿ ಸದ್ದು ಮಾಡುತ್ತಿರುತ್ತದೆ. ಈ ಶಾಟ್​ ಹೊಡೆಯಲು ಅನೇಕರು ಪ್ರಯತ್ನಿಸಿದರೂ ಸಫಲರಾಗಿದ್ದು ಮಾತ್ರ ಕೆಲವರಷ್ಟೇ. ಇದೀಗ ಅಫಘಾನಿಸ್ತಾನ ತಂಡದ ಸ್ಪಿನ್​​ ಆಲ್​ರೌಂಡರ್​ ರಶೀದ್​ ಖಾನ್​(Rashid Khan) ಧೋನಿಯ ನೆಚ್ಚಿನ ಹೆಲಿಕಾಪ್ಟರ್ ಶಾಟ್ ಮೂಲಕ ಸಿಕ್ಸರ್​ ಬಾರಿಸಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ದಿ ಹಂಡ್ರೆಡ್​ ಕ್ರಿಕೆಟ್​ ಲೀಗ್​ನ ಪಂದ್ಯವೊಂದರಲ್ಲಿ ರಶೀದ್​ ಖಾನ್​ ಅವರು ಟೈಮಲ್‌ ಮಿಲ್ಸ್‌ ಎಸೆತವನ್ನು ಹೆಲಿಕಾಪ್ಟರ್ ಶಾಟ್ ಮೂಲಕ ಆಫ್​ ಸೈಡ್​ ಕಡೆಗೆ ಸಿಕ್ಸರ್​ ಬಾರಿಸಿ ಮಿಂಚಿದ್ದಾರೆ. ರಶೀದ್​ ಸಿಕ್ಸರ್​ ಬಾರಿಸುತ್ತಿದ್ದಂತೆ ಕಾಮೆಂಟ್ರಿ ಮಾಡುತ್ತಿದ್ದವರು ಓ ಸೊಗಸಾದ ಹೆಲಿಕಾಪ್ಟರ್ ಶಾಟ್ ಎಂದು ವರ್ಣಿಸಿದ್ದಾರೆ. ಈ ಹೊಡೆತ ಧೋನಿಯಂತೆ ಪರಿಪೂರ್ಣವಾಗಿರದಿದ್ದತರೂ ಕೂಡ ಕೊಂಚ ಸಾಮ್ಯತೆ ಕಂಡುಬಂತು. ರಶೀದ್​ ಖಾನ್​ ಐಪಿಎಲ್​ನಲ್ಲಿಯೂ ಇದೇ ರೀತಿ ಹಲವು ಬಾರಿ ಹೆಲಿಕಾಪ್ಟರ್ ಶಾಟ್ ಬಾರಿಸಿದ್ದರು.

ಕೆಲ ದಿನಗಳ ಹಿಂದಷ್ಟೇ ರಶೀದ್ ಖಾನ್ ಅವರು ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆಯೊಂದನ್ನು ಬರೆದಿದ್ದರು. ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ‘ದಿ ಹಂಡ್ರೆಡ್’ ಕ್ರಿಕೆಟ್​ ಲೀಗ್​ನಲ್ಲಿ 2 ವಿಕೆಟ್ ಕಬಳಿಸುವುದರೊಂದಿಗೆ ರಶೀದ್ ಖಾನ್ ಎಲ್ಲ ಮಾದರಿಯ ಟಿ20 ಕ್ರಿಕೆಟ್​ನಲ್ಲಿ 600 ವಿಕೆಟ್(Rashid khan 600 wickets)​ ಪೂರ್ತಿಗೊಳಿಸಿದ ವಿಶ್ವದ ಮೊದಲ ಸ್ಪಿನ್ನರ್ ಹಾಗೂ 2ನೇ ಬೌಲರ್​​ ಎನಿಸಿಕೊಂಡಿದ್ದರು.

ಇದನ್ನೂ ಓದಿ Rashid Khan : ಟಿ20 ಕ್ರಿಕೆಟ್​ನಲ್ಲಿ ವಿಕೆಟ್​ಗಳ ಹೊಸ ಮೈಲುಗಲ್ಲು ಸೃಷ್ಟಿಸಿದ ಅಫಘಾನಿಸ್ತಾನ ಬೌಲರ್ ರಶೀದ್ ಖಾನ್​

ಟಿ20 ಕ್ರಿಕೆಟ್​ನಲ್ಲಿ 600 ವಿಕೆಟ್​ ಪೂರ್ತಿಗೊಳಿಸಿದ್ದ ವಿಶ್ವ ದಾಖಲೆಯನ್ನು ಮೊದಲ ನಿರ್ಮಿಸಿದ್ದು ವೆಸ್ಟ್ ಇಂಡೀಸ್​ನ ಮಾಜಿ ಆಟಗಾರ ಡ್ವೇನ್ ಬ್ರಾವೊ. ಇದೀಗ ರಶೀದ್​ ಖಾನ್​ ಈ ದಾಖಲೆಯನ್ನು ಸರಿಗಟ್ಟಿದ್ದಾರೆ. ಅತೀ ವೇಗವಾಗಿ ಟಿ20 ಕ್ರಿಕೆಟ್​ನಲ್ಲಿ 600 ವಿಕೆಟ್ ಕಬಳಿಸಿದ ದಾಖಲೆ ರಶೀದ್ ಹೆಸರಿಗೆ ದಾಖಲಾಗಿದೆ. ಬ್ರಾವೊ 545 ಟಿ20 ಪಂದ್ಯಗಳ ಮೂಲಕ ಈ ಸಾಧನೆ ಮಾಡಿದ್ದರೆ, ರಶೀದ್​ ಖಾನ್​ ಕೇವಲ 441 ಪಂದ್ಯಗಳನ್ನಾಡಿ ಈ ಮೈಲುಗಲ್ಲು ನಿರ್ಮಿಸಿದ್ದಾರೆ.

ರಶೀದ್ ಖಾನ್ 93 ಅಂತಾರಾಷ್ಟ್ರೀಯ ಟಿ 20 ಪಂದ್ಯಗಳಲ್ಲಿ 14.14 ಸರಾಸರಿ ಮತ್ತು 6.08 ಎಕಾನಮಿ ರೇಟ್​ನಲ್ಲಿ 152 ವಿಕೆಟ್​ಗಳನ್ನು ಪಡೆದಿದ್ದಾರೆ. ಐಪಿಎಲ್​​ನಲ್ಲಿ 121 ಪಂದ್ಯಗಳಲ್ಲಿ 21.82ರ ಸರಾಸರಿಯಲ್ಲಿ 149 ವಿಕೆಟ್ ಪಡೆದಿದ್ದಾರೆ. ರಶೀದ್ 2017 ರಿಂದ 2021 ರವರೆಗೆ ಸನ್ರೈಸರ್ಸ್ ಹೈದರಾಬಾದ್ (ಎಸ್​ಆರ್​ಎಚ್​) ಪರ ಆಡಿದ್ದರು. ನಂತರ ಗುಜರಾತ್​ ಟೈಟನ್ಸ್ ಸೇರಿಕೊಂಡಿದ್ದಾರೆ.

Continue Reading

ದೇಶ

Wayanad Landslide: ‘ಪ್ರೀತಿಯ ಯೋಧರೇ…ʼ ಭಾರತೀಯ ಸೇನೆಗೆ 3ನೇ ತರಗತಿ ಬಾಲಕ ಬರೆದ ಪತ್ರದಲ್ಲೇನಿದೆ?

Wayanad Landslide: ಕೇರಳದ IMLP ಶಾಲೆಯ ಮೂರನೇ ತರಗತಿ ವಿದ್ಯಾರ್ಥಿಯಾಗಿರುವ ರಾಯನ್‌ ಮಲಯಾಳಂನಲ್ಲಿ ಈ ಪತ್ರ ಬರೆದಿದ್ದು, ಆತ್ಮೀಯ ಭಾರತೀಯ ಸೇನೆ, ನನ್ನ ಪ್ರೀತಿಯ ವಯನಾಡ್ ಭಾರಿ ಭೂಕುಸಿತದಿಂದ ಅಪ್ಪಳಿಸಿತು ಮತ್ತು ವಿನಾಶವನ್ನು ಸೃಷ್ಟಿಸಿತು. ಶಿಲಾಖಂಡರಾಶಿಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ನೀವು ರಕ್ಷಿಸುತ್ತಿರುವುದನ್ನು ನೋಡಿ ನನಗೆ ಹೆಮ್ಮೆ ಮತ್ತು ಸಂತೋಷವಾಯಿತು ಎಂದು ಬಾಲಕ ಬರೆದಿದ್ದಾನೆ.

VISTARANEWS.COM


on

wayanad Landslide
Koo

ವಯನಾಡ್‌: ಕೇರಳದ ವಯನಾಡಿನ ಭೂಕುಸಿತ(Wayanad Landslide)ಕ್ಕೆ ಬಲಿಯಾದವರ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಎ ಆಗುತ್ತಲೇ ಇದ್ದು, 360ರ ಗಡಿ ದಾಟಿದೆ. ಈ ನಡುವೆ ರಕ್ಷಣಾ ಕಾರ್ಯಾಚರಣೆ(Rescue Operation)ಯೂ ಅಷ್ಟೇ ಬಿರುಸಿನಲ್ಲಿ ಸಾಗುತ್ತಿದೆ. ಭಾರತೀಯ ಸೇನೆ(Indian Army) ಪ್ರಾಣವನ್ನು ಪಣಕ್ಕೀಡು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಈ ನಡುವೆ ಭಾರತೀಯ ಸೇನೆಯ ಅವಿರತ ಶ್ರಮವನ್ನು ಮೆಚ್ಚಿ ಮೂರನೇ ತರಗತಿ ಬಾಲಕನೋರ್ವ ಭಾರತೀಯ ಸೇನೆಗೆ ಪತ್ರ ಬರೆದಿದ್ದಾನೆ. ಈ ಹೃದಯಸ್ಪರ್ಶಿ ಪತ್ರ ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ.

ಕೇರಳದ IMLP ಶಾಲೆಯ ಮೂರನೇ ತರಗತಿ ವಿದ್ಯಾರ್ಥಿಯಾಗಿರುವ ರಾಯನ್‌ ಮಲಯಾಳಂನಲ್ಲಿ ಈ ಪತ್ರ ಬರೆದಿದ್ದು, ಆತ್ಮೀಯ ಭಾರತೀಯ ಸೇನೆ, ನನ್ನ ಪ್ರೀತಿಯ ವಯನಾಡ್ ಭಾರಿ ಭೂಕುಸಿತದಿಂದ ಅಪ್ಪಳಿಸಿತು ಮತ್ತು ವಿನಾಶವನ್ನು ಸೃಷ್ಟಿಸಿತು. ಶಿಲಾಖಂಡರಾಶಿಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ನೀವು ರಕ್ಷಿಸುತ್ತಿರುವುದನ್ನು ನೋಡಿ ನನಗೆ ಹೆಮ್ಮೆ ಮತ್ತು ಸಂತೋಷವಾಯಿತು. ನೀವು ಬಿಸ್ಕತ್ತುಗಳನ್ನು ಸೇವಿಸಿ ನಿಮ್ಮ ಹಸಿವು ನೀಗಿಸಿಕೊಂಡು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವುದನ್ನು ನಾನು ವಿಡಿಯೋದಲ್ಲಿ ನೋಡಿದ್ದೇನೆ. ಜನರ ರಕ್ಷಣೆಗಾಗಿ ಸೇತುವೆಯನ್ನು ನಿರ್ಮಿಸುತ್ತಿದ್ದೀರಿ. ಆ ದೃಶ್ಯ ನನ್ನ ಮನಸ್ಸನ್ನು ನಾಟಿದೆ. ಮುಂದೊಂದು ದಿನ ನಾನು ಭಾರತೀಯ ಸೇನೆಯನ್ನು ಸೇರಲು ಮತ್ತು ನನ್ನ ರಾಷ್ಟ್ರವನ್ನು ರಕ್ಷಿಸಲು ಬಯಸುತ್ತೇನೆ ಎಂದು ಬರೆದಿದ್ದಾನೆ.

ಬಾಲಕನ ಪತ್ರಕ್ಕೆ ಸೇನೆ ಪ್ರತಿಕ್ರಿಯೆ

ಬಾಲಕನ ಹೃದಯಸ್ಪರ್ಶಿ ಪತ್ರಕ್ಕೆ ಭಾರತೀಯ ಸೇನೆ ಪ್ರತಿಕ್ರಿಯಿಸಿದ್ದು, “ಯುವ ಯೋಧನಿಗೆ” ಧನ್ಯವಾದಗಳು ಎಂದು ಬರೆದಿದೆ. ನಿಮ್ಮ ಹೃತ್ಪೂರ್ವಕ ಮಾತುಗಳು ನಮ್ಮನ್ನು ಆಳವಾಗಿ ಮುಟ್ಟಿವೆ. ಪ್ರತಿಕೂಲ ಸಮಯದಲ್ಲಿ, ನಾವು ಭರವಸೆಯ ದಾರಿದೀಪವಾಗಲು ಗುರಿ ಹೊಂದಿದ್ದೇವೆ ಮತ್ತು ನಿಮ್ಮ ಪತ್ರವು ಈ ಧ್ಯೇಯವನ್ನು ಪುನರುಚ್ಚರಿಸುತ್ತದೆ. ನೀವು ಸಮವಸ್ತ್ರವನ್ನು ಧರಿಸುವ ದಿನಕ್ಕಾಗಿ ನಾವು ಕಾತುರದಿಂದ ಕಾಯುತ್ತಿದ್ದೇವೆ ಮತ್ತು ನಿಮ್ಮ ಧೈರ್ಯ ಮತ್ತು ಸ್ಫೂರ್ತಿಗಾಗಿ ನಾವು ಒಟ್ಟಾಗಿ ನಮ್ಮ ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡುತ್ತೇವೆ ಎಂದು ಪ್ರತಿಕ್ರಿಯಿಸಿದೆ. ಇದೀಗ ಈ ಪತ್ರಗಳೂ ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ವೈರಲ್‌ ಆಗುತ್ತಿದೆ.

ಇದನ್ನೂ ಓದಿ: Wayanad landslide: ವಯನಾಡ್‌ ಭೂಕುಸಿತ ಸಂತ್ರಸ್ತರಿಗೆ 100 ಮನೆ ನಿರ್ಮಾಣ: ಕೇರಳ ಸಿಎಂಗೆ ಸಿದ್ದರಾಮಯ್ಯ ಭರವಸೆ

Continue Reading

ದೇಶ

ಪತ್ನಿ ಇದ್ದರೂ ಮಹಿಳಾ ಇನ್ಸ್‌ಪೆಕ್ಟರ್‌ ಜತೆ ವ್ಯಕ್ತಿ ಸರಸ; ರೆಡ್‌ ಹ್ಯಾಂಡ್‌ ಆಗಿ ಹಿಡಿದ ಪತ್ನಿ ಮಾಡಿದ್ದೇನು? Video ಇದೆ

Uttar Pradesh: ರೆಸ್ಟ್‌ ಹೌಸ್‌ನಿಂದ ಇನ್ಸ್‌ಪೆಕ್ಟರ್‌ನನ್ನು ಹೊರಗೆ ಎಳೆದ ಅವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಇನ್ಸ್‌ಪೆಕ್ಟರ್‌ನ ಬನಿಯನ್‌ ಹರಿದು, ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾರೆ. ಇನ್ನು, ಇನ್ಸ್‌ಪೆಕ್ಟರ್‌ ಪತ್ನಿಯೂ ಅಷ್ಟೇ, ಮಹಿಳಾ ಇನ್ಸ್‌ಪೆಕ್ಟರ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Uttar Pradesh
Koo

ಲಖನೌ: ಮನೆಯಲ್ಲಿ ಮುದ್ದಾದ ಮಡದಿ ಇದ್ದರೂ ಹೊರಗೆ ಅಕ್ರಮ ಸಂಬಂಧ (Extra Marital Affair) ಇಟ್ಟುಕೊಳ್ಳುವ ಚಾಳಿ ತುಂಬ ಜನರಿಗೆ ಇರುತ್ತದೆ. ಇನ್ನು, ವ್ಯಕ್ತಿಗೆ ಮದುವೆಯಾಗಿದೆ ಎಂಬುದು ಗೊತ್ತಿದ್ದರೂ ಆತನ ಬಲೆಗೆ ಬೀಳುವ ಹೆಣ್ಣುಮಕ್ಕಳು ಇರುತ್ತಾರೆ ಇಲ್ಲವೇ ಹೆಣ್ಣುಮಕ್ಕಳೇ ಆತನನ್ನು ಬಲೆಗೆ ಬೀಳಿಸಿಕೊಳ್ಳುತ್ತಾರೆ. ಇಂತಹ ಪ್ರಕರಣಗಳಿಗೆ ನಿದರ್ಶನ ಎಂಬಂತೆ, ಉತ್ತರ ಪ್ರದೇಶದಲ್ಲಿ (Uttar Pradesh) ವ್ಯಕ್ತಿಯೊಬ್ಬರು ಮನೆಯಲ್ಲಿ ಪತ್ನಿ ಇದ್ದರೂ, ಸರ್ಕಾರಿ ಗೆಸ್ಟ್‌ಹೌಸ್‌ನಲ್ಲಿ ಮಹಿಳಾ ಇನ್ಸ್‌ಪೆಕ್ಟರ್‌ ಜತೆ ಕಾಲ ಕಳೆಯುವಾಗ ಸಿಕ್ಕಿಬಿದ್ದಿದ್ದಾರೆ. ಪತಿ ಹಾಗೂ ಮಹಿಳಾ ಇನ್ಸ್‌ಪೆಕ್ಟರ್‌ ಅವರನ್ನು ರೆಡ್‌ ಹ್ಯಾಂಡ್‌ ಆಗಿ ಹಿಡಿದ ಪತ್ನಿಯು ತಕ್ಕ ಶಾಸ್ತಿಯನ್ನೇ ಮಾಡಿದ್ದಾರೆ. ಈ ವಿಡಿಯೊ (Viral Video) ಈಗ ಭಾರಿ ವೈರಲ್‌ ಆಗಿದೆ.

ಹೌದು, ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿರುವ ವ್ಯಕ್ತಿಯು ಮದುವೆಯಾಗಿದ್ದರೂ, ಮನೆಯಲ್ಲಿ ಪತ್ನಿ ಇದ್ದರೂ, ಆಗ್ರಾದಲ್ಲಿರುವ ಪೊಲೀಸ್‌ ರೆಸ್ಟ್‌ ಹೌಸ್‌ನಲ್ಲಿ ಮತ್ತೊಬ್ಬ ಮಹಿಳಾ ಇನ್ಸ್‌ಪೆಕ್ಟರ್‌ ಜತೆ ಕಾಲ ಕಳೆಯುತ್ತಿದ್ದರು. ಈ ವಿಷಯ ತಿಳಿದ ವ್ಯಕ್ತಿಯ ಪತ್ನಿಯು ನೇರವಾಗಿ ಸರ್ಕಾರಿ ವಿಶ್ರಾಂತಿ ಗೃಹಕ್ಕೆ ಆಗಮಿಸಿದ್ದಾರೆ. ಅಲ್ಲಿ, ಪೊಲೀಸ್‌ ಇನ್ಸ್‌ಪೆಕ್ಟರ್‌ ಹಾಗೂ ಮಹಿಳಾ ಇನ್ಸ್‌ಪೆಕ್ಟರ್‌ ಒಟ್ಟಿಗೆ ಇರುವುದನ್ನು ಕಂಡು ಗಲಾಟೆ ಮಾಡಿದ್ದಾರೆ. ಏನಿದು ಹುಡುಗಾಟ ಎಂದು ಜೋರಾಗಿ ಪ್ರಶ್ನಿಸಿದ್ದಾರೆ.

ಇದೇ ವೇಳೆ ಇನ್ಸ್‌ಪೆಕ್ಟರ್‌ ಪತ್ನಿಯ ಸಂಬಂಧಿಕರು ಸ್ಥಳಕ್ಕೆ ಆಗಮಿಸಿದ್ದಾರೆ. ರೆಸ್ಟ್‌ ಹೌಸ್‌ನಿಂದ ಇನ್ಸ್‌ಪೆಕ್ಟರ್‌ನನ್ನು ಹೊರಗೆ ಎಳೆದ ಅವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಇನ್ಸ್‌ಪೆಕ್ಟರ್‌ನ ಬನಿಯನ್‌ ಹರಿದು, ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿದ್ದಾರೆ. ಇನ್ನು, ಇನ್ಸ್‌ಪೆಕ್ಟರ್‌ ಪತ್ನಿಯೂ ಅಷ್ಟೇ, ಮಹಿಳಾ ಇನ್ಸ್‌ಪೆಕ್ಟರ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಅವರಿಗೂ ಬೈದಿದ್ದಾರೆ, ರೆಸ್ಟ್‌ ಆವರಣದಲ್ಲಿಯೇ ಅವರ ಕೈ ಹಿಡಿದು ಎಳೆದಾಡಿದ್ದಾರೆ.

ಮೂಲಗಳ ಪ್ರಕಾರ, ಇನ್ಸ್‌ಪೆಕ್ಟರ್‌ ಆಗಿರುವ ಪತಿಯು ಮಹಿಳಾ ಇನ್ಸ್‌ಪೆಕ್ಟರ್‌ ಜತೆ ಅಕ್ರಮ ಸಂಬಂಧ ಹೊಂದಿರುವ ಕುರಿತು ಮಹಿಳೆಗೆ ಅನುಮಾನ ಬಂದಿತ್ತು. ಇದೆಲ್ಲ ಸರಿ ಬರುವುದಿಲ್ಲ ಎಂಬುದಾಗಿ ಅವರು ಪತಿಯ ಮನವೊಲಿಸಲು ಯತ್ನಿಸಿದ್ದರು. ಎಷ್ಟು ಹೇಳಿದರೂ, ಮನೆ, ಕುಟುಂಬವನ್ನು ನಿರ್ಲಕ್ಷಿಸಿ, ಮಹಿಳಾ ಇನ್ಸ್‌ಪೆಕ್ಟರ್‌ ಜತೆ ಸುತ್ತಾಡುವುದು, ರೆಸ್ಟ್‌ ಹೌಸ್‌ಗಳಲ್ಲಿ ಕಾಲ ಕಳೆಯುವುದನ್ನು ಕಂಡು ಮಹಿಳೆಗೆ ರೋಸಿಹೋಗಿತ್ತು. ಕೊನೆಗೆ, ಒಂದು ದಿನ ರೆಡ್‌ ಹ್ಯಾಂಡ್‌ ಆಗಿ ಹಿಡಿದು, ಸರಿಯಾದ ಪಾಠ ಕಲಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Murder case : ಮನೆಯೊಳಗೆ ನುಗ್ಗಿ ಚಾಕುವಿನಿಂದ ಇರಿದು ಪತ್ನಿಯನ್ನು ಕೊಂದ ಕಿರಾತಕ

Continue Reading

ದೇಶ

Ayodhya: ಅಯೋಧ್ಯೆಗೆ ವಿಮಾನ ತಲುಪುತ್ತಲೇ ಭೂಮಿಗೆ ನಮಸ್ಕರಿಸಿದ ಗಗನಸಖಿ; ಭುಗಿಲೆದ್ದಿತು ವಿವಾದ!

Ayodhya: ಇಂಡಿಗೋ ವಿಮಾನದಲ್ಲಿ ಗಗನಸಖಿಯಾಗಿರುವ ಆಕಾಂಕ್ಷಾ ಪಾರ್ಮರ್‌ ಅವರು ವಿಮಾನ ಇಳಿಯುತ್ತಲೇ ಡಾಂಬರ್‌ ಇದ್ದರೂ ಭೂಮಿಗೆ ನಮಸ್ಕಾರ ಮಾಡಿದ್ದಾರೆ. ಇದಾದ ಬಳಿಕ ರಾಮಮಂದಿರದ ಕಡೆ ಮುಖ ಮಾಡಿ ನಮಸ್ಕಾರ ಮಾಡಿದ್ದಾರೆ. ಈ ವಿಡಿಯೊವನ್ನು ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

Ayodhya
Koo

ಅಯೋಧ್ಯೆ: ರಾಮಮಂದಿರ ನಿರ್ಮಾಣವಾದ ಬಳಿಕ ಅಯೋಧ್ಯೆಗೆ ವಿಶೇಷ ವಿಮಾನದ ವ್ಯವಸ್ಥೆ ಮಾಡಲಾಗಿದ್ದು, ಸಾವಿರಾರು ಜನ ವಿಮಾನಗಳಲ್ಲಿ ಪ್ರಯಾಣಿಸಿ ಅಯೋಧ್ಯೆ ತಲುಪುತ್ತಿದ್ದಾರೆ. ಶ್ರೀರಾಮನ ದರ್ಶನ ಪಡೆಯಲು ಜನ ಭಕ್ತಿ-ಭಾವದಿಂದ ಅಯೋಧ್ಯೆಗೆ ಆಗಮಿಸುತ್ತಾರೆ. ಜನಸಾಮಾನ್ಯರು ಮಾತ್ರವಲ್ಲ, ವಿಮಾನದ ಸಿಬ್ಬಂದಿಗೂ ರಾಮಮಂದಿರ, ಅಯೋಧ್ಯೆಯ ಮೇಲೆ ವಿಶೇಷ ಗೌರವ ಇದೆ. ಇದಕ್ಕೆ ನಿದರ್ಶನ ಎಂಬಂತೆ, ಆಕಾಂಕ್ಷಾ ಪಾರ್ಮರ್‌ ಎಂಬ ಇಂಡಿಗೋ ವಿಮಾನದ ಗಗನಸಖಿಯು ವಿಮಾನ ಅಯೋಧ್ಯೆ ತಲುಪುತ್ತಲೇ, ಕೆಳಗೆ ಇಳಿದು ನೆಲಕ್ಕೆ ನಮಸ್ಕಾರ ಮಾಡಿದ್ದಾರೆ. ರಾಮನ ಕಾರಣಕ್ಕಾಗಿ ಅಯೋಧ್ಯೆ ಪುಣ್ಯಭೂಮಿ ಎಂದು ಅವರು ಭಕ್ತಿ ಪ್ರದರ್ಶಿಸಿದ್ದಾರೆ. ಈ ವಿಡಿಯೊ ಜಾಲತಾಣಗಳಲ್ಲಿ ವೈರಲ್‌ ಆಗುತ್ತಲೇ ಪರ-ವಿರೋಧ ಚರ್ಚೆಯಾಗುತ್ತಿದೆ.

ಇಂಡಿಗೋ ವಿಮಾನದಲ್ಲಿ ಗಗನಸಖಿಯಾಗಿರುವ ಆಕಾಂಕ್ಷಾ ಪಾರ್ಮರ್‌ ಅವರು ವಿಮಾನ ಇಳಿಯುತ್ತಲೇ ಡಾಂಬರ್‌ ಇದ್ದರೂ ಭೂಮಿಗೆ ನಮಸ್ಕಾರ ಮಾಡಿದ್ದಾರೆ. ಇದಾದ ಬಳಿಕ ರಾಮಮಂದಿರದ ಕಡೆ ಮುಖ ಮಾಡಿ ನಮಸ್ಕಾರ ಮಾಡಿದ್ದಾರೆ. ಈ ವಿಡಿಯೊವನ್ನು ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. “ಅಯೋಧ್ಯೆಯ ಭೂಮಿಗೆ ನಮಸ್ಕಾರ ಮಾಡುವುದು ಹೆಮ್ಮೆ ಅನಿಸುತ್ತಿದೆ. ಹಿಂದು ಆಗಿರುವುದಕ್ಕೆ ನನಗೆ ಹೆಮ್ಮೆ ಇದೆ. ಜೈ ಶ್ರೀರಾಮ್”‌ ಎಂಬುದಾಗಿ ಅವರು ಬರೆದುಕೊಂಡಿದ್ದಾರೆ.

ವಿಡಿಯೊ ವೈರಲ್‌ ಆಗುತ್ತಲೇ ಆಕಾಂಕ್ಷಾ ಅವರ ವಿಡಿಯೊವನ್ನು ಉದ್ಯಮಿ ಮೋಹನ್‌ದಾಸ್‌ ಪೈ ಹಂಚಿಕೊಂಡಿದ್ದಾರೆ. ಅಲ್ಲದೆ, ಆಕಾಂಕ್ಷಾ ಹಾಗೂ ಇಂಡಿಗೋ ಬಗ್ಗೆ ಹೆಮ್ಮೆ ಎನಿಸುತ್ತದೆ. ಭಗವಾನ್‌ ಶ್ರೀರಾಮನು 500 ವರ್ಷಗಳ ಬಳಿಕ ಅಯೋಧ್ಯೆಗೆ ಬಂದಿದ್ದು, ಅಂತಹ ರಾಮನನ್ನು ಆರಾಧಿಸುವ ಉದ್ಯೋಗಿಯನ್ನು ಹೊಂದಿರುವುದಕ್ಕೆ ಸಂಸ್ಥೆಯು ಹೆಮ್ಮೆಪಡಬೇಕು” ಎಂಬುದಾಗಿ ಮೋಹನ್‌ದಾಸ್‌ ಪೈ ಅವರು ಒಕ್ಕಣೆ ಬರೆದುಕೊಂಡಿದ್ದಾರೆ.

ವಿವಾದ ಉಂಟಾಗಿದ್ದೇಕೆ?

ಇಂಡಿಗೋ ವಿಮಾನದ ಸಿಬ್ಬಂದಿಯು ಅಯೋಧ್ಯೆ ಭೂಮಿಗೆ ನಮಸ್ಕಾರ ಮಾಡಿರುವ ವಿಡಿಯೊ ಹಂಚಿಕೊಂಡು, ಮೆಚ್ಚುಗೆಯ ಮಾತುಗಳನ್ನು ಆಡಿದ ಮೋಹನ್‌ದಾಸ್‌ ಪೈ ಹಾಗೂ ಗಗನಸಖಿ ವಿರುದ್ಧ ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಇದೆಲ್ಲ ಗಿಮಿಕ್‌, ರೀಲ್ಸ್‌ಗಾಗಿ ಇಂತಹ ವಿಡಿಯೊ ಮಾಡುತ್ತಾರೆ, ಮೊದಲೇ ಪ್ಲಾನ್‌ ಮಾಡಿ, ರೆಕಾರ್ಡ್‌ ಮಾಡಿದ ವಿಡಿಯೊ ಇದು, ಇಂತಹ ನಾಟಕದ ವಿಡಿಯೊವನ್ನು ಮೋಹನ್‌ ದಾಸ್‌ ಪೈ ಬೆಂಬಲಿಸಬಾರದು, ಅಷ್ಟೊಂದು ಭಕ್ತಿ ಇದ್ದರೆ ದೇವಾಲಯಕ್ಕೆ ಹೋಗಲಿ, ಗಗನಸಖಿಯಾದವರು ಹೇಗೆ ವರ್ತಿಸಬೇಕು ಎಂಬುದು ಮೊದಲು ಗೊತ್ತಿರಬೇಕು” ಎಂಬುದು ಸೇರಿ ಹತ್ತಾರು ರೀತಿಯಲ್ಲಿ ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Ayodhya Ram Mandir : ರಾಮಮಂದಿರದ ಚಾವಣಿ ಸೋರುತ್ತಿಲ್ಲ; ನಿರ್ಮಾಣ ಸಮಿತಿ ಸ್ಪಷ್ಟನೆ

Continue Reading
Advertisement
IND vs SL
ಕ್ರೀಡೆ10 mins ago

IND vs SL: ದ್ವಿತೀಯ ಏಕದಿನ ಪಂದ್ಯಕ್ಕೂ ಮುನ್ನ ಲಂಕಾ ತಂಡಕ್ಕೆ ಆಘಾತ; ಸರಣಿಯಿಂದ ಹೊರಬಿದ್ದ ಸ್ಟಾರ್​ ಆಟಗಾರ

BJP-JDS Padayatra
ರಾಜಕೀಯ16 mins ago

BJP-JDS Padayatra: ರಾಜ್ಯದ ಹಣ ಲೂಟಿ ಮಾಡಿ ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ: ಕಾಂಗ್ರೆಸ್‌ ವಿರುದ್ಧ ವಿಜಯೇಂದ್ರ ವಾಗ್ದಾಳಿ

Road Accident
ಬೆಂಗಳೂರು29 mins ago

Road Accident : ಇನ್ನೊಂದು ವಾರದಲ್ಲಿ ಮಗಳ ಮದುವೆ ಅಂತ ಓಡಾಡುತ್ತಿದ್ದ ಅಪ್ಪ.. ಅಪಘಾತದಲ್ಲಿ ಸಾವು

KEA
ಬೆಂಗಳೂರು52 mins ago

KEA : ವೈದ್ಯಕೀಯ ಅರ್ಹತಾ ಪಟ್ಟಿ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ; ಪದ್ಮನಾಭ ಮೆನನ್‌ಗೆ ಮೊದಲ ಸ್ಥಾನ

Rashami Desai Homeless Rashami Desai lived in an Audi
ಕಿರುತೆರೆ53 mins ago

Rashami Desai: ಡಿವೋರ್ಸ್‌ ಬಳಿಕ ಮನೆ ಇಲ್ಲದೆ, ರೋಡ್‌ ಸೈಡ್‌ ಊಟ ತಿಂದು ಕಾರಿನಲ್ಲಿ ಮಲಗಿದ್ದರಂತೆ ʻಮುದ್ದು ಬಂಗಾರʼ ಖ್ಯಾತ ನಟಿ!

Paris Olympics
ಕ್ರೀಡೆ1 hour ago

Paris Olympics: ವಿಕ್ಟರ್‌ ವಿರುದ್ಧ ಲಕ್ಷ್ಯ ಸೇನ್​ಗೆ ಒಲಿಯಲಿ ಗ್ರೇಟ್​ ವಿಕ್ಟರಿ; ಇಂದು ಸೆಮಿ ಫೈನಲ್​

Gold Rate Today
ವಾಣಿಜ್ಯ1 hour ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಚೆಕ್‌ ಮಾಡಿ

Murder Case
ಕ್ರೈಂ2 hours ago

Murder Case: ಜಮೀನು ವಿವಾದಕ್ಕೆ ಹರಿಯಿತು ನೆತ್ತರು: ತಂಗಿಯ ಗಂಡನಿಗೇ ಚಾಕು ಇರಿದು ಕೊಂದವನ ಅರೆಸ್ಟ್‌ 

Ram Gopal Varma calls The Kerala Story one of the best films
ಟಾಲಿವುಡ್2 hours ago

Ram Gopal Varma: ʻದಿ ಕೇರಳ ಸ್ಟೋರಿʼ ನಾನು ನೋಡಿದ ಅತ್ಯುತ್ತಮ ಚಲನಚಿತ್ರಗಳಲ್ಲಿ ಒಂದು ಎಂದ ರಾಮ್ ಗೋಪಾಲ್ ವರ್ಮಾ!

Rashid Khan
ಕ್ರಿಕೆಟ್2 hours ago

Rashid Khan: ಧೋನಿಯಂತೆ ಹೆಲಿಕಾಪ್ಟರ್ ಶಾಟ್ ಮೂಲಕ ಸಿಕ್ಸರ್ ಬಾರಿಸಿದ ರಶೀದ್​ ಖಾನ್; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ23 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ5 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ6 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ6 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ6 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌