Avatar Box Office | ಬಾಕ್ಸ್ ಆಫೀಸ್ ಅಖಾಡದಲ್ಲಿ ಮತ್ತೆ ಗುಡುಗಿದ ಅವತಾರ್‌-1 - Vistara News

ಬಾಲಿವುಡ್

Avatar Box Office | ಬಾಕ್ಸ್ ಆಫೀಸ್ ಅಖಾಡದಲ್ಲಿ ಮತ್ತೆ ಗುಡುಗಿದ ಅವತಾರ್‌-1

13 ವರ್ಷಗಳ ಬಳಿಕ ರೀ ರಿಲೀಸ್ ಆಗಿರುವ ಅವತಾರ್‌-1 ಒಂದೇ ವಾರದಲ್ಲಿ 50 ಮಿಲಿಯನ್ ಡಾಲರ್ ಗಳಿಸಿದೆ. ರೂಪಾಯಿ ಲೆಕ್ಕದಲ್ಲಿ ಹೇಳುವುದಾದರೆ ₹400 ಕೋಟಿಗೂ ಹೆಚ್ಚು ದುಡಿದಿದೆ ಅವತಾರ್‌-1.

VISTARANEWS.COM


on

Avatar Box Office
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ‘ಅವತಾರ್‌’ ಪದದಲ್ಲೇ ಪವರ್ ಇದೆ, ಒಂದು ಗತ್ತಿದೆ. ಜಗತ್ತು ಬಾಯಿ ಮೇಲೆ ಬೆರಳು ಇಟ್ಟುಕೊಳ್ಳುವಂತೆ ಗುಡುಗಿದ್ದ ಸಿನಿಮಾ 13 ವರ್ಷಗಳ ನಂತರವೂ ಅದೇ ಖದರ್ ತೋರಿಸಿದೆ. ಅಂದಹಾಗೆ 13 ವರ್ಷಗಳ ಬಳಿಕ ರೀ ರಿಲೀಸ್ ಆಗಿರುವ ಅವತಾರ್‌-1 (Avatar Box Office) ಒಂದೇ ವಾರದಲ್ಲಿ ಸುಮಾರು 50 ಮಿಲಿಯನ್ ಡಾಲರ್ ಗಳಿಸಿದೆ. ಇದೇ ಮೊತ್ತವನ್ನು ರೂಪಾಯಿ ಲೆಕ್ಕದಲ್ಲಿ ಹೇಳುವುದಾದರೆ ಸುಮಾರು ₹400 ಕೋಟಿಗೂ ಹೆಚ್ಚು ದುಡಿದಿದೆ ಜೇಮ್ಸ್ ಕ್ಯಾಮೆರಾನ್ ನಿರ್ದೇಶನದ ಈ ಸಿನಿಮಾ. ಈ ಮೂಲಕ ₹500 ಕೋಟಿ ಕಡೆಗೂ ಹೆಜ್ಜೆ ಹಾಕಿದೆ ‘ಅವತಾರ್‌-1’.

ಯಾವುದೇ ಹಳೆಯ ಸಿನಿಮಾ ಒಂದು ರೀ ರಿಲೀಸ್ ಆಗಿ ಇಷ್ಟು ದೊಡ್ಡ ಮೊತ್ತದ ಹಣ ಗಳಿಸಿರುವುದು ಇದೇ ಮೊದಲು. 13 ವರ್ಷದ ಹಿಂದೆ 2.9 ಬಿಲಿಯನ್ ಡಾಲರ್ ಹಣ ಗಳಿಸಿತ್ತು ‘ಅವತಾರ್‌-1’. ಈ ಮೂಲಕ 100 ಮಿಲಿಯನ್ ಡಾಲರ್ ಅಂತರದಲ್ಲಿ 3 ಬಿಲಿಯನ್ ಡಾಲರ್ ಗಡಿ ದಾಟುವ ಅವಕಾಶ ಮಿಸ್ ಮಾಡಿಕೊಂಡಿತ್ತು. ಆದರೆ ಈಗ ಆ ಕನಸೂ ನನಸಾಗುವ ಸಮಯ ಬಂದಿದೆ ಎನ್ನುತ್ತಿದ್ದಾರೆ ‘ಅವತಾರ್‌’ ಫ್ಯಾನ್ಸ್.

ಬಾಕ್ಸ್ ಆಫೀಸ್ ಶೇಕ್
ಬಾಕ್ಸ್ ಆಫೀಸ್ ಕಲೆಕ್ಷನ್ ಲೆಕ್ಕದಲ್ಲಿ ನಂ.1 ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ‘ಅವತಾರ್‌-1’ ಚಿತ್ರ ಮತ್ತೆ ಸದ್ದುಮಾಡಿದೆ. ಇನ್ನೇನು ‘ಅವತಾರ್‌-2’ ರಿಲೀಸ್​ಗೆ ಕೌಂಟ್​ಡೌನ್ ಶುರುವಾಗಿರುವ ಹೊತ್ತಿನಲ್ಲೇ ಸಂಚಲನ ಸೃಷ್ಟಿಯಾಗಿದೆ. ‘ಅವತಾರ್‌’ ಟೈಟಲ್ ಕೇಳಿದರೆ ಸಾಕು ಬಾಕ್ಸ್‌ ಆಫೀಸ್ ನಡುಗುತ್ತದೆ ಎಂಬ ಮಾತನ್ನು ರೀ ರಿಲೀಸ್ ಆಗಿರುವ ಮೊದಲ ವಾರವೇ ನಿಜಮಾಡಿದೆ ಅವತಾರ್‌-1. ಹೀಗೆ ಡಿಸೆಂಬರ್ 16ಕ್ಕೆ ‘ಅವತಾರ್‌’ ಪಾರ್ಟ್-2 ರಿಲೀಸ್ ಆಗಲಿರುವ ಹೊತ್ತಲ್ಲೇ ಹೊಸ ಹವಾ ಎಬ್ಬಿಸಿದ್ದಾರೆ ಜೇಮ್ಸ್ ಕ್ಯಾಮೆರಾನ್.

ಭರ್ಜರಿ ಪ್ಲ್ಯಾನ್..!
ಹತ್ತಿರ ಹತ್ತಿರ ಒಂದೂವರೆ ದಶಕದ ಬಳಿಕ ಅವತಾರ್ ಚಿತ್ರ ಸೀಕ್ವೆಲ್ ಮೂಲಕ ಬರುತ್ತಿದೆ. ಹೀಗಾಗಿ ಬಹುತೇಕರಿಗೆ ‘ಅವತಾರ್‌-1’ನ ಪಾತ್ರ ಪರಿಚಯ ಮರೆತು ಹೋಗಿರುತ್ತೆ. ಇದು ‘ಅವತಾರ್‌-2’ ನೋಡುವಾಗ ಗೊಂದಲ ಸೃಷ್ಟಿಸುತ್ತದೆ. ಇದೇ ಕಾರಣದಿಂದ ಅವತಾರ್‌ ಟೀಂ ‘ಅವತಾರ್‌-1’ನ್ನು ಈಗ ಜಗತ್ತಿನಾದ್ಯಂತ ರೀ ರಿಲೀಸ್ ಮಾಡಿದೆ. ಭಾರತದಲ್ಲಿ ಸೆಪ್ಟೆಂಬರ್ 23ರ ಶುಕ್ರವಾರ ‘ಅವತಾರ್‌-1’ ರೀ ರಿಲೀಸ್ ಆಗಿತ್ತು. ಈ ಮೂಲಕ ಹೊಸ ತಲೆಮಾರಿನ ಪ್ರೇಕ್ಷಕರೂ ‘ಅವತಾರ್‌-2’ ನೋಡಲು ಜೇಮ್ಸ್ ಕ್ಯಾಮೆರಾನ್ ಪ್ಲ್ಯಾನ್ ಮಾಡಿದ್ದರು. ಇದೀಗ ಕ್ಯಾಮೆರಾನ್ ಐಡಿಯಾ ಭರ್ಜರಿ ಸಕ್ಸಸ್ ಕಂಡಿದೆ. ರೀ ರಿಲೀಸ್ ಆದ 1 ವಾರದಲ್ಲಿ 50 ಮಿಲಿಯನ್ ಡಾಲರ್ ಗಳಿಸಿದೆ ಈ ಸಿನಿಮಾ.

ಸಾವಿರಾರು ಸ್ಕ್ರೀನ್..!
‘ಅವತಾರ್‌’ ಹೆಸರಲ್ಲೇ ಗತ್ತಿದೆ, ‘ಅವತಾರ್‌’ ಟೈಟಲ್​ನಲ್ಲೇ ಸೆಳೆತವಿದೆ. ಹೀಗಿರುವಾಗ ‘ಅವತಾರ್‌-1’ ರೀ ರಿಲೀಸ್ ಆಗುತ್ತೆ ಅಂದ್ರೆ ಸಣ್ಣ ವಿಚಾರ ಅಲ್ಲ. ಸಾವಿರಾರು ಸ್ಕ್ರೀನ್​ಗಳಲ್ಲಿ ಅವತಾರ್‌-1 ರೀ ರಿಲೀಸ್ ಮಾಡಲು ಪ್ಲ್ಯಾನ್ ಮಾಡಲಾಗಿತ್ತು. ಇದಕ್ಕಾಗಿ ಚಿತ್ರದಲ್ಲಿ ಗ್ರಾಫಿಕ್ಸ್ ಸೇರಿ ಹಲವು ವಿಭಾಗದಲ್ಲಿ ಬದಲಾವಣೆ ಮಾಡಲಾಗಿತ್ತು. ‘ಅವತಾರ್‌-1’ ರೀ ರಿಲೀಸ್​​ಗೆ ₹80 ಕೋಟಿ ಖರ್ಚು ಮಾಡಲಾಗಿತ್ತು. ಈಗಾಗಲೇ ಖರ್ಚು ಮಾಡಿದ 5 ಪಟ್ಟು ಹಣ ವಾಪಸ್ ಬಂದಿದೆ.

ಒಟ್ಟಾರೆ ಹೇಳುವುದಾದರೆ ಕೊರೊನಾ ಕಂಟಕ ದೂರವಾದ ನಂತರ ಜಗತ್ತಿನಾದ್ಯಂತ ಚಿತ್ರರಂಗ ಮತ್ತೊಮ್ಮೆ ಮೈಕೊಡವಿ ನಿಂತಿದೆ. ಅದರ ಭಾಗವಾಗಿ ಸಾಲು ಸಾಲು ಚಿತ್ರಗಳು ರಿಲೀಸ್ ಆಗುತ್ತಿವೆ. ಈ ಪಟ್ಟಿಯ ಮೊದಲ ಸ್ಥಾನದಲ್ಲಿ ‘ಅವತಾರ್‌-2’ ಕೂಡ ನಿಂತಿದೆ. ‘ಅವತಾರ್‌-2’ ಬಿಡುಗಡೆಗೂ ಮೊದಲು ಸೂಪರ್ ಸರ್ಪ್ರೈಸ್ ಕೊಟ್ಟಿರುವ ಜೇಮ್ಸ್ ಕ್ಯಾಮೆರಾನ್ ಮತ್ತೆ ಇತಿಹಾಸ ಸೃಷ್ಟಿಸುವ ಲೆಕ್ಕಾಚಾರ ಹಾಕಿದ್ದಾರೆ.

ಇದನ್ನೂ ಓದಿ: Avatar Re Release | ಬಾಕ್ಸ್​​ ಆಫೀಸ್​​ನಲ್ಲಿ ಮತ್ತೊಮ್ಮೆ ಸಂಚಲನ ಸೃಷ್ಟಿಸಿದ ‘ಅವತಾರ್​ -1’

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಶಾರುಖ್‌ ಖಾನ್‌ ಜಾಹೀರಾತು ನೋಡಿ ಗುಟ್ಕಾ ತಿಂದ ಮಕ್ಕಳು; ನಟ ಸಾಯಲ್ಲ, ನಾವು ಸಾಯ್ತೀವಾ ಅಂದರು!

ಮಕ್ಕಳು ಗುಟ್ಕಾ ತಿಂದು, ಅದರ ಪರಿಣಾಮ ಗೊತ್ತಿರದೆ ಮಾತನಾಡಿದ ವಿಡಿಯೊವನ್ನು ಸತ್ಯ, ನ್ಯಾಯ, ಪ್ರೀತಿ ಎಂಬ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. “ನೀವು ಗುಟ್ಕಾ ತಿಂತಿದ್ದೀರಲ್ಲ, ಸತ್ತು ಹೋದ್ರೆ ಏನ್‌ ಗತಿ” ಎಂದು ವ್ಯಕ್ತಿಯೊಬ್ಬರು ಪ್ರಶ್ನೆ ಕೇಳುತ್ತಾರೆ. ಆಗ ಮಕ್ಕಳು, “ಶಾರುಖ್‌ ಖಾನ್‌ ಸತ್ತಿಲ್ಲ, ನಾವು ಸಾಯ್ತೀವಾ” ಎಂದಿದ್ದಾರೆ.

VISTARANEWS.COM


on

Shah Rukh Khan
Koo

ನವದೆಹಲಿ: ಸ್ಯಾಂಡಲ್‌ವುಡ್‌ನಿಂದ ಬಾಲಿವುಡ್‌ ಹೀರೊಗಳು, ಕ್ರಿಕೆಟಿಗರು, ಸೆಲೆಬ್ರಿಟಿಗಳು (Celebrities) ನೂರಾರು ಉತ್ಪನ್ನಗಳ ಜಾಹೀರಾತುಗಳಲ್ಲಿ (Advertisements) ಅಭಿನಯಿಸುವ ಮೂಲಕ, ಆ ಉತ್ಪನ್ನಗಳನ್ನೂ ತಾವೇ ಬಳಸಿದ್ದೇವೆ ಎಂದು ಹೇಳುವ ಮೂಲಕ ಅಥವಾ ನಟಿಸುವ ಮೂಲಕ ಕೋಟ್ಯಂತರ ಜನರನ್ನು ಸೆಳೆಯುತ್ತಾರೆ. ಇನ್ನು, ಅಭಿಮಾನಿಗಳು, ಅನುಯಾಯಿಗಳು ಕೂಡ ನೆಚ್ಚಿನ ನಟ, ಕ್ರಿಕೆಟಿಗನ ಜಾಹೀರಾತು ನೋಡಿ, ಆ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ, ಹೀಗೆ ನಟರು ಸೇರಿ ಸೆಲೆಬ್ರಿಟಿಗಳ ಜಾಹೀರಾತು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೌದು, ಶಾರುಖ್‌ ಖಾನ್‌ ಅವರ ಪಾನ್‌ ಮಸಾಲ (Pan Masala) ಜಾಹೀರಾತಿನಿಂದ ಪ್ರಚೋದನೆಗೊಂಡು ಗುಟ್ಕಾ ಸೇವಿಸಿದ್ದಾರೆ. ಈ ವಿಡಿಯೊ (Viral Video) ಈಗ ಭಾರಿ ವೈರಲ್‌ ಆಗಿದೆ.

ಮಕ್ಕಳು ಗುಟ್ಕಾ ತಿಂದು, ಅದರ ಪರಿಣಾಮ ಗೊತ್ತಿರದೆ ಮಾತನಾಡಿದ ವಿಡಿಯೊವನ್ನು ಸತ್ಯ, ನ್ಯಾಯ, ಪ್ರೀತಿ ಎಂಬ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. “ನೀವು ಗುಟ್ಕಾ ತಿಂತಿದ್ದೀರಲ್ಲ, ಸತ್ತು ಹೋದ್ರೆ ಏನ್‌ ಗತಿ” ಎಂದು ವ್ಯಕ್ತಿಯೊಬ್ಬರು ಪ್ರಶ್ನೆ ಕೇಳುತ್ತಾರೆ. ಆಗ ಮಕ್ಕಳು, “ಶಾರುಖ್‌ ಖಾನ್‌ ಸತ್ತಿಲ್ಲ, ನಾವು ಸಾಯ್ತೀವಾ” ಎಂದಿದ್ದಾರೆ. “ಶಾರುಖ್‌ ಖಾನ್‌ ಏಕೆ ಸಾಯುತ್ತಾರೆ” ಎಂಬ ಪ್ರಶ್ನೆಗೆ, “ಶಾರುಖ್‌ ಖಾನ್‌ ಗುಟ್ಕಾ ತಿಂತಾರಲ್ಲ, ಅವ್ರೇ ಸಾಯಲ್ಲ, ನಾವ್‌ ಹೇಗೆ ಸಾಯ್ತೀವಿ” ಎಂದಿದ್ದಾರೆ. ಅಷ್ಟೇ ಅಲ್ಲ, “ಶಾರುಖ್ ಖಾನ್‌ ಗುಟ್ಕಾ ತಿನ್ನೋದು ನಿಮಗೆ ಹೇಗೆ ಗೊತ್ತು” ಎಂದು ಕೇಳಿದ್ದಕ್ಕೆ, “ಜಾಹೀರಾತಿನಲ್ಲಿ ನೋಡಿದ್ದೀವಲ್ಲ” ಎಂದಿದ್ದಾರೆ.

ಶಾರುಖ್‌ ಖಾನ್‌ ಪಾನ್‌ ಮಸಾಲ ಜಾಹೀರಾತಿನಲ್ಲಿ ನಟಿಸಿದ್ದನ್ನೇ ಈ ಮಕ್ಕಳು ನಿಜ ಎಂದು ಭಾವಿಸಿದ್ದಾರೆ. ಶಾರುಖ್‌ ಖಾನ್‌ ಗುಟ್ಕಾ ತಿಂತಾರೆ, ಅವರಿಗೇ ಏನೂ ಆಗಲ್ಲ. ಇನ್ನು ನಮಗೆ ಏನಾಗುತ್ತದೆ ಎಂಬ ಅಭಿಪ್ರಾಯಕ್ಕೆ ಬಂದು, ಚಿಕ್ಕ ವಯಸ್ಸಿನಲ್ಲೇ ಗುಟ್ಕಾ ತಿನ್ನೋದನ್ನು ಕಲಿತಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಲೇ ಸಾಮಾಜಿಕ ಜಾಲತಾಣಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೆಲೆಬ್ರಿಟಿಗಳ ಜಾಹೀರಾತುಗಳಲ್ಲಿ ನಟಿಸುವಾಗ, ಆ ಉತ್ಪನ್ನದಿಂದ ಸಮಾಜದ ಮೇಲೆ ಉಂಟಾಗುವ ಪರಿಣಾಮ ಏನು ಎಂಬುದನ್ನು ಈ ವಿಡಿಯೊ ನೋಡಿ ಕಲಿಯಬೇಕಿದೆ ಎಂದು ಆಗ್ರಹಿಸಿದ್ದಾರೆ.

“ಸೆಲೆಬ್ರಿಟಿಗಳು ನಮ್ಮ ಕನ್ನಡದ ಕಣ್ಮಣಿ ಡಾಕ್ಟರ್ ರಾಜ್ ಕುಮಾರ್ ಮತ್ತು ಪುನೀತ್ ರಾಜಕುಮಾರ್ ಅವರಂತಹವರನ್ನು ನೋಡಿ ಕಲಿಯಬೇಕು. ಥೂ ನಿಮ್ಮ, ನಿಮಗೆಲ್ಲ ಇದನ್ನು ನೋಡಿ ನಾಚಿಕೆ ಆಗಬೇಕು. ಇಂತಹ ಜಾಹೀರಾತು ಕೊಟ್ಟು ಯುವ ಜನತೆಯ ದಾರಿ ತಪ್ಪಿಸುತಿರುವ ನಿಮಗೆ ಧಿಕ್ಕಾರವಿರಲಿ” ಎಂಬುದಾಗಿ ಒಬ್ಬರು ಪ್ರತಿಕ್ರಿಯಿಸಿದ್ದಾರೆ. ಮತ್ತೊಬ್ಬರು ಕಮೆಂಟ್‌ ಮಾಡಿದ್ದು, “ಈ ಗುಟ್ಕಾ ತಿಂದು ಮಕ್ಕಳು ಏನಾದರೂ ಮೃತಪಟ್ಟರೆ ಆಯಾ ಜಾಹೀರಾತು ಕಂಪನಿ ಹಾಗೂ ಜಾಹೀರಾತಿನಲ್ಲಿ ನಟಿಸುವ ಸೆಲೆಬ್ರಿಟಿಗಳು ಪರಿಹಾರ ನೀಡಬೇಕು ಎಂಬ ಕಾನೂನು ಬಂದರೆ ಮಾತ್ರ ಇದೆಲ್ಲ ಸರಿಯಾಗುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: IPL 2024 : “ಶಾರುಖ್​ ಎಂದೂ ನಮ್ಮನ್ನು ಪ್ರಶ್ನಿಸಿಲ್ಲ”, ಎಲ್​ಎಸ್​​ಜಿ ಮಾಲೀಕನಿಗೆ ತಿರುಗೇಟು ಕೊಟ್ಟ ಗಂಭೀರ್​

Continue Reading

ಸಿನಿಮಾ

Chandu Champion: ಗುರುತೇ ಸಿಗದಂತೆ ಬದಲಾದ ಈ ಸ್ಟಾರ್‌ ನಟ ಯಾರು? ಪೋಸ್ಟರ್​ ವೈರಲ್​!

Chandu Champion: ಚಂದು ಚಾಂಪಿಯನ್ ಮೊದಲ ಪೋಸ್ಟರ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ನಟ, “ಚಾಂಪಿಯನ್ ಬರುತ್ತಿದ್ದಾನೆ. ನನ್ನ ವೃತ್ತಿಜೀವನದಲ್ಲೇ ಅತ್ಯಂತ ಸವಾಲಿನ ಮತ್ತು ವಿಶೇಷ ಚಿತ್ರದ ಮೊದಲ ಪೋಸ್ಟರ್ ಅನ್ನು ಹಂಚಿಕೊಳ್ಳಲು ಬಹಳ ಉತ್ಸುಕನಾಗಿದ್ದೇನೆ, ಹೆಮ್ಮೆಯಾಗುತ್ತಿದೆ. ಜೂನ್​​ 14ಕ್ಕೆ ಚಂದು ಚಾಂಪಿಯನ್​ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ” ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Chandu Champion Injured Kartik Aaryan looks intense
Koo

ಬೆಂಗಳೂರು: ಕಾರ್ತಿಕ್ ಆರ್ಯನ್ ( Kartik Aaryan) ಅವರು ತಮ್ಮ ಮುಂಬರುವ ಚಿತ್ರ ‘ಚಂದು ಚಾಂಪಿಯನ್’ ನ (Chandu Champion) ಎರಡನೇ ಪೋಸ್ಟರ್‌ ಬಿಡುಗಡೆಗೊಳಿಸಿದ್ದಾರೆ. ಬಾಕ್ಸಿಂಗ್ ರಿಂಗ್‌ನಲ್ಲಿ ಗಾಯಗೊಂಡ ಮುಖದೊಂದಿಗೆ ಕಂಡಿದ್ದಾರೆ. ಮೊದಲ ಪೋಸ್ಟರ್ ಅನ್ನು ಮೇ 15ರಂದು ಅನಾವರಣಗೊಳಿಸಲಾಯಿತು. ಕಬೀರ್ ಖಾನ್ ನಿರ್ದೇಶನದ ಚಿತ್ರದಲ್ಲಿನ ತನ್ನ ಪಾತ್ರಕ್ಕಾಗಿ ಕಾರ್ತಿಕ್​​ ಗಮನಾರ್ಹ ರೂಪಾಂತರಕ್ಕೆ ಒಳಗಾಗಿರುವುದು ಕಂಡಿದೆ. ಕಠಿಣ ತಯಾರಿ ನಡೆಸಿರುವುದಾಗಿ ಕಂಡು ಬರುತ್ತಿದೆ.

ʼಚಂದು ಚಾಂಪಿಯನ್ʼ ಮೊದಲ ಪೋಸ್ಟರ್ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿರುವ ನಟ, “ಚಾಂಪಿಯನ್ ಬರುತ್ತಿದ್ದಾನೆ. ನನ್ನ ವೃತ್ತಿಜೀವನದಲ್ಲೇ ಅತ್ಯಂತ ಸವಾಲಿನ ಮತ್ತು ವಿಶೇಷ ಚಿತ್ರದ ಮೊದಲ ಪೋಸ್ಟರ್ ಅನ್ನು ಹಂಚಿಕೊಳ್ಳಲು ಬಹಳ ಉತ್ಸುಕನಾಗಿದ್ದೇನೆ, ಹೆಮ್ಮೆಯಾಗುತ್ತಿದೆ. ಜೂನ್​​ 14ಕ್ಕೆ ʼಚಂದು ಚಾಂಪಿಯನ್ʼ​ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Sara Ali Khan: ಬ್ರೇಕಪ್‌ ಕ್ಲ್ಯಾರಿಟಿ ಬೆನ್ನಲ್ಲೇ ಸಾರಾ ಆಯೋಜಿಸಿದ್ದ ಪಾರ್ಟಿಯಲ್ಲಿ ಕಾರ್ತಿಕ್ ಆರ್ಯನ್!

ಕಾರ್ತಿಕ್ ಆರ್ಯನ್ ಅವರ ಈ ಕಠಿಣ ಶ್ರಮಕ್ಕೆ ನಿರ್ದೇಶಕ ಕಬೀರ್ ಖಾನ್ ಟಿಪ್ಪಣಿಯನ್ನು ಬರೆದಿದ್ದಾರೆ. ʻʻಚಂದು ಚಾಂಪಿಯನ್‌ನ ಕಥೆಯು ನಂಬಲಾಗದಷ್ಟು ಸ್ಪೂರ್ತಿದಾಯಕ ನೈಜ ಕಥೆಯಾಗಿದೆ. ಆದರೆ ಈ ಚಾಂಪಿಯನ್ ಆಗಲು ಕಾರ್ತಿಕ್ ಮಾಡಿದ ಪ್ರಯಾಣವು ಸ್ಫೂರ್ತಿದಾಯಕವಾಗಿದೆ. ಶೇ. 39ರಷ್ಟು ಬಾಡಿ ಫ್ಯಾಟ್‌ ಕರಗಿಸಿದರುʼʼ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: A Movie Re-Release: ರೀ-ರಿಲೀಸ್ ಆಗ್ತಿದೆ ಉಪ್ಪಿಯ `A’ ಸಿನಿಮಾ : ನೆನಪುಗಳನ್ನು ಮೆಲುಕು ಹಾಕಿದ ನಟಿ ಚಾಂದಿನಿ!

ಕಬೀರ್ ಖಾನ್ ಆ್ಯಕ್ಷನ್​ ಕಟ್​ ಹೇಳಿರುವ ʻಈ ಚಂದು ಚಾಂಪಿಯನ್ʼ, ಓರ್ವ ಕ್ರೀಡಾಪಟುವಿನ ನೈಜ ಕಥೆಯನ್ನು ಬಿಚ್ಚಿಡಲಿದೆ. ಈ ಪಾತ್ರಕ್ಕಾಗಿ ಕಾರ್ತಿಕ್ ಅವರ ಪ್ರಯಾಣ ಗಮನಾರ್ಹವಾದದ್ದು. ಜೂನ್ 14 ರಂದು ಸಿನಿಮಾ ಬಿಡುಗಡೆ ಮಾಡಲು ನಿರ್ಧರಿಸಿದೆ ಚಿತ್ರತಂಡ.

Continue Reading

ಬಾಲಿವುಡ್

Cannes 2024: ಕಾನ್ ರೆಡ್‌ ಕಾರ್ಪೆಟ್‌ ಮೇಲೆ ಮಿಂಚಿದ ಊರ್ವಶಿ ರೌಟೇಲಾ: ದೀಪಿಕಾ ಸ್ಟೈಲ್ ಕಾಪಿ ಮಾಡಿದ್ರಾ?

Cannes 2024: ಊರ್ವಶಿ ಅವರ ವಿಡಿಯೊಗಳು ವೈರಲ್‌ ಆಗುತ್ತಿವೆ. ಬಾಡಿಕಾನ್ ಡ್ರೆಸ್ ಧರಿಸಿರುವುದನ್ನು ಕಾಣಬಹುದು. ದೀಪಿಕಾ ಪಡುಕೋಣೆ ಕಾನ್ ಫಿಲ್ಮ್ ಫೆಸ್ಟಿವಲ್ 2018 ರಲ್ಲಿ ಇದೇ ರೀತಿಯ ಗುಲಾಬಿ ಬಣ್ಣದ ಗೌನ್ ಧರಿಸಿದ್ದರು. ಊರ್ವಶಿ ರೌಟೇಲಾ ಅವರ ಈ ಲುಕ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಊರ್ವಶಿ ರೌಟೇಲಾ ದೀಪಿಕಾ ಪಡುಕೋಣೆ ಸ್ಟೈಲ್ ಅನ್ನು ಕಾಪಿ ಮಾಡಿದ್ದಾರೆ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

VISTARANEWS.COM


on

Cannes 2024 Urvashi Rautela pink gown remind Deepika Padukone
Koo

ಬೆಂಗಳೂರು: ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಕಾನ್ ಫಿಲ್ಮ್ ಫೆಸ್ಟಿವಲ್ (Cannes 2024) ಕೂಡ ಒಂದು. 2024ರ 77ನೇ ಕಾನ್ ಫಿಲ್ಮ್ ಫೆಸ್ಟಿವಲ್ ಮೇ 14ರಿಂದ ಆರಂಭ ಆಗಿದೆ. ಊರ್ವಶಿ ರೌಟೇಲಾ (Urvashi Rautela) ಈಗಾಗಲೇ ರೆಡ್‌ ಕಾರ್ಪೆಟ್‌ ಮೇಲೆ ಪಿಂಕ್‌ ಗೌನದದದ ಧರಿಸಿ ಹೆಜ್ಜೆ ಹಾಕಿದ್ದಾರೆ. ಈ ಫೋಟೊ ವೈರಲ್‌ ಆದ ಬೆನ್ನಲ್ಲೇ 2018 ರಲ್ಲಿ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ದೀಪಿಕಾ ಪಡುಕೋಣೆ ಧರಿಸಿದ್ದ ಗೌನ್ ತರಹವೇ ಇದೆ ಎಂದು ನೆಟ್ಟಿಗರು ಕಮೆಂಟ್‌ ಮಾಡುತ್ತಿದ್ದಾರೆ. ಇದೀಗ ಊರ್ವಶಿ ರೌಟೇಲಾ ಟ್ರೋಲ್‌ಗೆ ಗುರಿಯಾಗುತ್ತಿದ್ದಾರೆ.

ಊರ್ವಶಿ ಅವರ ವಿಡಿಯೊಗಳು ವೈರಲ್‌ ಆಗುತ್ತಿವೆ. ಬಾಡಿಕಾನ್ ಡ್ರೆಸ್ ಧರಿಸಿರುವುದನ್ನು ಕಾಣಬಹುದು. ದೀಪಿಕಾ ಪಡುಕೋಣೆ ಕಾನ್ ಫಿಲ್ಮ್ ಫೆಸ್ಟಿವಲ್ 2018 ರಲ್ಲಿ ಇದೇ ರೀತಿಯ ಗುಲಾಬಿ ಬಣ್ಣದ ಗೌನ್ ಧರಿಸಿದ್ದರು. ಊರ್ವಶಿ ರೌಟೇಲಾ ಅವರ ಈ ಲುಕ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಊರ್ವಶಿ ರೌಟೇಲಾ ದೀಪಿಕಾ ಪಡುಕೋಣೆ ಸ್ಟೈಲ್ ಅನ್ನು ಕಾಪಿ ಮಾಡಿದ್ದಾರೆ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Cannes 2024: ಐಶ್ವರ್ಯಾ ರೈ ಕೈಗೆ ಪೆಟ್ಟು: ಮಗಳ ಜತೆ ಕಾನ್ ಫಿಲ್ಮ್ ಫೆಸ್ಟಿವಲ್‌ನತ್ತ ಹೊರಟ ನಟಿ!

ಯಾರೆಲ್ಲ ಭಾಗಿ?

 ಪ್ರತಿ ವರ್ಷದಂತೆ ಈ ವರ್ಷವೂ ನಟಿ ಐಶ್ವರ್ಯಾ ರೈ ರೆಡ್ ಕಾರ್ಪೆಟ್ ಮೇಲೆ ನಡೆಯಲು ಸಿದ್ಧರಾಗಿದ್ದಾರೆ. ಬುಧವಾರ ಸಂಜೆ,(ಮೇ. 15) ಐಶ್ವರ್ಯಾ ಅವರು ಮಗಳು ಆರಾಧ್ಯ ಬಚ್ಚನ್ ಅವರೊಂದಿಗೆ ವಿಮಾನ ನಿಲ್ದಾಣದಲ್ಲಿ ಕಂಡು ಬಂದರು. ಆದರೆ ಐಶ್ವರ್ಯಾ (Aishwarya Rai Injured) ಅವರ ಕೈಗೆ ಪೆಟ್ಟಾಗಿ ಬ್ಯಾಂಡೇಜ್‌ ಕೂಡ ಸುತ್ತಿಕೊಂಡಿದ್ದರು. ಹೀಗಾಗಿ ಐಶ್ವರ್ಯಾ ಫ್ಯಾನ್ಸ್‌ (Cannes Film Festival with daughter) ಆತಂಕಕ್ಕೆ ಒಳಗಾಗಿ ಕಮೆಂಟ್‌ ಮೂಲಕ ನಟಿಯ ಕ್ಷೇಮ ವಿಚಾರಿಸಿದ್ದಾರೆ.

2002ರ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಐಶ್ವರ್ಯಾ ರೈ ಅವರು ಕೆಂಪು ಕಾರ್ಪೆಟ್‌ನಲ್ಲಿ ಭಾರೀ ಚಿನ್ನದ ಆಭರಣಗಳೊಂದಿಗೆ ನೀತಾ ಲುಲ್ಲಾ ಸೀರೆಯಲ್ಲಿ ಕಾಣಿಸಿಕೊಂಡಿದ್ದರು. ಆ ವರ್ಷ ನಟ ಶಾರುಖ್ ಖಾನ್ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರೊಂದಿಗೆ ಉಪಸ್ಥಿತರಿದ್ದರು. ಅಂದಿನಿಂದ, ನಟಿ ಬಹುತೇಕ ಪ್ರತಿ ವರ್ಷ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ . ಲೋರಿಯಲ್ ಪ್ಯಾರಿಸ್‌ನ ಬ್ರ್ಯಾಂಡ್‌ ಅಂಬಾಸಿಡರ್‌ಗಳಲ್ಲಿ ಒಬ್ಬರಾಗಿ ಅವರು ಮತ್ತೊಮ್ಮೆ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ.

ಐಶ್ವರ್ಯಾ ಜತೆಗೆ, ನಟರಾದ ಅದಿತಿ ರಾವ್ ಹೈದರಿ, ಶೋಬಿತಾ ಧೂಳಿಪಾಲ ಮತ್ತು ಕಿಯಾರಾ ಆಡ್ವಾಣಿ ಕೂಡ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಊರ್ವಶಿ ರೌಟೇಲಾ ಅವರು ಈಗಾಗಲೇ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತಮ್ಮ ಗುಲಾಬಿ ಬಣ್ಣದ ಉಡುಪಿನಿಂದ ಕಂಗೊಳಿಸಿದ್ದಾರೆ. ಪೋಸ್‌ ಕೂಡ ಕೊಟ್ಟಿದ್ದಾರೆ. 2024, ಮೇ 14 ರಿಂದ ಮೇ 25ರವರೆಗೂ ಕಾನ್ ಫಿಲ್ಮ್ ಫೆಸ್ಟಿವಲ್ ಫ್ರಾನ್ಸ್‌ನ ಫ್ರೆಂಚ್ ರಿವೇರಿಯಾದಲ್ಲಿ ಅದ್ಧೂರಿಯಾಗಿ ನಡೆಯಲಿದೆ.

Continue Reading

ಬಾಲಿವುಡ್

Cannes 2024: ಐಶ್ವರ್ಯಾ ರೈ ಕೈಗೆ ಪೆಟ್ಟು: ಮಗಳ ಜತೆ ಕಾನ್ ಫಿಲ್ಮ್ ಫೆಸ್ಟಿವಲ್‌ನತ್ತ ಹೊರಟ ನಟಿ!

Cannes 2024: ವೈರಲ್‌ ಆಗುತ್ತಿರುವ ವಿಡಿಯೊದಲ್ಲಿ ಐಶ್ವರ್ಯಾ ಅವರು ಮಗಳ ಜತೆ ಕಾರಿನಿಂದ ಇಳಿದಿದ್ದಾರೆ. ಅವರ ಬಲಗೈಗೆ ಬ್ಯಾಂಡೇಜ್‌ ಹಾಕಲಾಗಿತ್ತು. ಕಪ್ಪು ಉಡುಪಿನೊಂದಿಗೆ ನೀಲಿ ಕೋಟ್ ಧರಿಸಿದ್ದರು ನಟಿ. ಆರಾಧ್ಯ ಅವರು ತಿಳಿ ನೀಲಿ ಹೂಡಿ ಮತ್ತು ಕಪ್ಪು ಪ್ಯಾಂಟ್‌ನಲ್ಲಿ ಕಾಣಿಸಿಕೊಂಡರು. ಕೆಲ ಸೆಕೆಂಡುಗಳ ಕಾಲ ಮಾಧ್ಯಮದವರತ್ತ ಕೈ ಬೀಸಿದ ಐಶ್ವರ್ಯಾ ನಂತರ ಮುಂಬೈ ವಿಮಾನ ನಿಲ್ದಾಣ ಪ್ರವೇಶಿಸಿದರು.

VISTARANEWS.COM


on

Aishwarya Rai Injured heads to Cannes Film Festival with daughter
Koo

ಬೆಂಗಳೂರು: ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಕಾನ್ ಫಿಲ್ಮ್ ಫೆಸ್ಟಿವಲ್ (Cannes 2024) ಕೂಡ ಒಂದು. 2024ರ 77ನೇ ಕಾನ್ ಫಿಲ್ಮ್ ಫೆಸ್ಟಿವಲ್ ಮೇ 14ರಿಂದ ಆರಂಭ ಆಗಿದೆ. ಭಾರತದ 7 ಸಿನಿಮಾಗಳು 77ನೇ ಸಾಲಿನ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಪ್ರದರ್ಶನ ಕಾಣುತ್ತಿವೆ. ಪ್ರತಿ ವರ್ಷದಂತೆ ಈ ವರ್ಷವೂ ನಟಿ ಐಶ್ವರ್ಯಾ ರೈ ರೆಡ್ ಕಾರ್ಪೆಟ್ ಮೇಲೆ ನಡೆಯಲು ಸಿದ್ಧರಾಗಿದ್ದಾರೆ. ಬುಧವಾರ ಸಂಜೆ,(ಮೇ. 15) ಐಶ್ವರ್ಯಾ ಅವರು ಮಗಳು ಆರಾಧ್ಯ ಬಚ್ಚನ್ ಅವರೊಂದಿಗೆ ವಿಮಾನ ನಿಲ್ದಾಣದಲ್ಲಿ ಕಂಡು ಬಂದರು. ಆದರೆ ಐಶ್ವರ್ಯಾ (Aishwarya Rai Injured) ಅವರ ಕೈಗೆ ಪೆಟ್ಟಾಗಿ ಬ್ಯಾಂಡೇಜ್‌ ಕೂಡ ಸುತ್ತಿಕೊಂಡಿದ್ದರು. ಹೀಗಾಗಿ ಐಶ್ವರ್ಯಾ ಫ್ಯಾನ್ಸ್‌ (Cannes Film Festival with daughter) ಆತಂಕಕ್ಕೆ ಒಳಗಾಗಿ ಕಮೆಂಟ್‌ ಮೂಲಕ ನಟಿಯ ಕ್ಷೇಮ ವಿಚಾರಿಸಿದ್ದಾರೆ.

ವೈರಲ್‌ ಆಗುತ್ತಿರುವ ವಿಡಿಯೊದಲ್ಲಿ ಐಶ್ವರ್ಯಾ ಅವರು ಮಗಳ ಜತೆ ಕಾರಿನಿಂದ ಇಳಿದಿದ್ದಾರೆ. ಅವರ ಬಲಗೈಗೆ ಬ್ಯಾಂಡೇಜ್‌ ಹಾಕಲಾಗಿತ್ತು. ಕಪ್ಪು ಉಡುಪಿನೊಂದಿಗೆ ನೀಲಿ ಕೋಟ್ ಧರಿಸಿದ್ದರು ನಟಿ. ಆರಾಧ್ಯ ಅವರು ತಿಳಿ ನೀಲಿ ಹೂಡಿ ಮತ್ತು ಕಪ್ಪು ಪ್ಯಾಂಟ್‌ನಲ್ಲಿ ಕಾಣಿಸಿಕೊಂಡರು. ಕೆಲ ಸೆಕೆಂಡುಗಳ ಕಾಲ ಮಾಧ್ಯಮದವರತ್ತ ಕೈ ಬೀಸಿದ ಐಶ್ವರ್ಯಾ ನಂತರ ಮುಂಬೈ ವಿಮಾನ ನಿಲ್ದಾಣ ಪ್ರವೇಶಿಸಿದರು.

ಇದನ್ನೂ ಓದಿ: Cannes 2024: ʻಕಾನ್ ಫಿಲ್ಮ್ ಫೆಸ್ಟಿವಲ್‌ʼನಲ್ಲಿ ಪ್ರದರ್ಶನ ಕಾಣಲಿರುವ ಭಾರತೀಯ ಸಿನಿಮಾಗಳಿವು

ಹಲವಾರು ಅಭಿಮಾನಿಗಳು ನಟಿಯನ್ನು ಕಂಡು ಕಮೆಂಟ್‌ ಮೂಲಕ ಕಳವಳ ವ್ಯಕ್ತಪಡಿಸಿದ್ದಾರೆ. ಒಬ್ಬ ಅಭಿಮಾನಿ, ” ಈ ನೋವಿನಲ್ಲೂ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಹೇಗೆ ಹೆಜ್ಜೆ ಹಾಕುತ್ತಾರೆʼʼಎಂದು ಕಮೆಂಟ್‌ ಮಾಡಿದ್ದಾರೆ. ʻʻನಟಿ ತನ್ನ ಮಗಳನ್ನು ನೋಡಿಕೊಳ್ಳುತ್ತಿರುವ ರೀತಿ. ಅದ್ಭುತʼʼಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

2002ರ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಐಶ್ವರ್ಯಾ ರೈ ಅವರು ಕೆಂಪು ಕಾರ್ಪೆಟ್‌ನಲ್ಲಿ ಭಾರೀ ಚಿನ್ನದ ಆಭರಣಗಳೊಂದಿಗೆ ನೀತಾ ಲುಲ್ಲಾ ಸೀರೆಯಲ್ಲಿ ಕಾಣಿಸಿಕೊಂಡಿದ್ದರು. ಆ ವರ್ಷ ನಟ ಶಾರುಖ್ ಖಾನ್ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರೊಂದಿಗೆ ಉಪಸ್ಥಿತರಿದ್ದರು. ಅಂದಿನಿಂದ, ನಟಿ ಬಹುತೇಕ ಪ್ರತಿ ವರ್ಷ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ . ಲೋರಿಯಲ್ ಪ್ಯಾರಿಸ್‌ನ ಬ್ರ್ಯಾಂಡ್‌ ಅಂಬಾಸಿಡರ್‌ಗಳಲ್ಲಿ ಒಬ್ಬರಾಗಿ ಅವರು ಮತ್ತೊಮ್ಮೆ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಭಾಗಿಯಾಗುತ್ತಿದ್ದಾರೆ.

ಐಶ್ವರ್ಯಾ ಜತೆಗೆ, ನಟರಾದ ಅದಿತಿ ರಾವ್ ಹೈದರಿ, ಶೋಬಿತಾ ಧೂಳಿಪಾಲ ಮತ್ತು ಕಿಯಾರಾ ಆಡ್ವಾಣಿ ಕೂಡ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಊರ್ವಶಿ ರೌಟೇಲಾ ಅವರು ಈಗಾಗಲೇ ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತಮ್ಮ ಗುಲಾಬಿ ಬಣ್ಣದ ಉಡುಪಿನಿಂದ ಕಂಗೊಳಿಸಿದ್ದಾರೆ. ಪೋಸ್‌ ಕೂಡ ಕೊಟ್ಟಿದ್ದಾರೆ. 2024, ಮೇ 14 ರಿಂದ ಮೇ 25ರವರೆಗೂ ಕಾನ್ ಫಿಲ್ಮ್ ಫೆಸ್ಟಿವಲ್ ಫ್ರಾನ್ಸ್‌ನ ಫ್ರೆಂಚ್ ರಿವೇರಿಯಾದಲ್ಲಿ ಅದ್ಧೂರಿಯಾಗಿ ನಡೆಯಲಿದೆ.

Continue Reading
Advertisement
IPL 2024
ಪ್ರಮುಖ ಸುದ್ದಿ3 mins ago

IPL 2024 : ವಾಂಖೆಡೆ ಸ್ಟೇಡಿಯಮ್​ನಲ್ಲಿ ಗುದ್ದಾಡಿಕೊಂಡ ಮುಂಬೈ ಇಂಡಿಯನ್ಸ್ ಆಟಗಾರರು; ಇಲ್ಲಿದೆ ವಿಡಿಯೊ

Virat kohli
ಪ್ರಮುಖ ಸುದ್ದಿ23 mins ago

Virat kohli : ಕೊಹ್ಲಿಯನ್ನು ಹೊಗಳಿದ ಜಗತ್​​ಪ್ರಸಿದ್ಧ ವೇಗದ ಓಟಗಾರ ಉಸೇನ್​ ಬೋಲ್ಟ್​​

Shah Rukh Khan
ದೇಶ43 mins ago

ಶಾರುಖ್‌ ಖಾನ್‌ ಜಾಹೀರಾತು ನೋಡಿ ಗುಟ್ಕಾ ತಿಂದ ಮಕ್ಕಳು; ನಟ ಸಾಯಲ್ಲ, ನಾವು ಸಾಯ್ತೀವಾ ಅಂದರು!

Rajat Patidar
ಪ್ರಮುಖ ಸುದ್ದಿ51 mins ago

Rajat Patidar : ರಜತ್ ಪಾಟೀದಾರ್​ ಮುಂದಿನ ಆವೃತ್ತಿಗೆ ಆರ್​ಸಿಬಿಯಲ್ಲೇ ಇರಬೇಕು; ಮಾಜಿ ಆಟಗಾರನ ಸಲಹೆ

ASI who was injured in a road accident died in kunigal
ಕರ್ನಾಟಕ1 hour ago

Road Accident: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಎಎಸ್‌ಐ ಚಿಕಿತ್ಸೆ ಫಲಿಸದೆ ಸಾವು

IPL 2024
ಕ್ರಿಕೆಟ್1 hour ago

IPL 2024: ಸಿಎಸ್​​ಕೆ ಮಾಜಿ ಆಟಗಾರನಾಗಿದ್ದರೂ ಈ ಸಲ ಕೊಹ್ಲಿ ಗೆಲ್ಲಲಿ ಎಂದ ಸುರೇಶ್​ ರೈನಾ!

Prajwal Revanna Case KR Nagar victim kidnapping case Satish sent to judicial custody
ಕ್ರೈಂ1 hour ago

Prajwal Revanna Case: ಕೆ.ಆರ್.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್;‌ 2, 6ನೇ ಆರೋಪಿಗಿಲ್ಲ ಬಿಡುಗಡೆ ಭಾಗ್ಯ! ಸತೀಶ್‌ಗೆ ನ್ಯಾಯಾಂಗ ಬಂಧನ

Pay attention to childrens safety during holidays Minister Lakshmi Hebbalkar appeals to parents
ಬೆಳಗಾವಿ1 hour ago

Lakshmi Hebbalkar: ರಜೆಯಲ್ಲಿ ಮಕ್ಕಳ ಸುರಕ್ಷತೆಗೆ ಗಮನ ನೀಡಿ; ಪಾಲಕರಿಗೆ ಹೆಬ್ಬಾಳ್ಕರ್ ಮನವಿ

Four Digit PIN
ತಂತ್ರಜ್ಞಾನ2 hours ago

Four Digit PIN: ಇಂಥ ಪಿನ್ ನಂಬರ್ ಕೊಡ್ತಾ ಇದ್ದೀರಾ? ನಿಮ್ಮ ದುಡ್ಡಿಗೆ ಕಾದಿದೆ ಅಪಾಯ!

Nitish Kumar Reddy
Latest2 hours ago

Nitish Reddy : ಐಪಿಎಲ್​ನಲ್ಲಿ ಮಿಂಚಿದ ಈ ಆಟಗಾರನಿಗೆ ಎಪಿಎಲ್​ನಲ್ಲಿ ಸಿಕ್ಕಿತು ಭರ್ಜರಿ ದುಡ್ಡು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ5 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ7 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು11 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌