National Games | ರಾಷ್ಟ್ರಮಟ್ಟದ ಬೃಹತ್‌ ಕ್ರೀಡಾಕೂಟಕ್ಕೆ ಚಾಲನೆ ಕೊಟ್ಟ ಪ್ರಧಾನಿ ಮೋದಿ - Vistara News

ಕ್ರೀಡೆ

National Games | ರಾಷ್ಟ್ರಮಟ್ಟದ ಬೃಹತ್‌ ಕ್ರೀಡಾಕೂಟಕ್ಕೆ ಚಾಲನೆ ಕೊಟ್ಟ ಪ್ರಧಾನಿ ಮೋದಿ

36ನೇ ನ್ಯಾಷನಲ್‌ ಗೇಮ್ಸ್‌ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದರು.

VISTARANEWS.COM


on

national games
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಹಮದಾಬಾದ್‌ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ೩೬ನೇ ಆವೃತ್ತಿಯ ನ್ಯಾಷನಲ್‌ ಗೇಮ್ಸ್‌ಗೆ ಗುರುವಾರ ಚಾಲನೆ ಕೊಟ್ಟರು. ಸುಮಾರು ಒಂದು ಲಕ್ಷ ಪ್ರೇಕ್ಷಕರ ಸಮ್ಮುಖದಲ್ಲಿ ಅವರು ರಾಷ್ಟ್ರ ಮಟ್ಟದ ಅತ್ಯುನ್ನತ ಕ್ರೀಡಾಕೂಟಕ್ಕೆ ಅವರು ಚಾಲನೆ ನೀಡಿದರು. ಮುಂಬರುವ ಒಲಿಂಪಿಕ್ಸ್‌ನಲ್ಲಿ ಅತಿ ಹೆಚ್ಚು ಪದಕಗಳನ್ನು ಗೆಲ್ಲುವ ಗುರಿಯೊಂದಿಗೆ ಈ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು ಹಾಗೂ ಮಹಿಳಾ ಈಜುಪಟು ಮಾನಾ ಪಟೇಲ್‌ ಅವರು ಸಾಂಕೇತಿಕ ಕ್ರೀಡಾ ಜ್ಯೋತಿಯನ್ನು ಪ್ರಧಾನ ಮಂತ್ರಿ ಅವರಿಗೆ ಹಸ್ತಾಂತರ ಮಾಡಿದರು.

ಭಾರತೀಯ ಕ್ರೀಡಾ ಕ್ಷೇತ್ರದ ದಂತಕತೆಗಳೆನಿಸಿಕೊಂಡಿರುವ ಒಲಿಂಪಿಕ್‌ ಪದಕ ವಿಜೇತರಾದ ನೀರಜ್‌ ಚೋಪ್ರಾ ಮತ್ತು ಪಿ. ವಿ. ಸಿಂಧೂ, ರವಿ ದಹಿಯಾ, ಮೀರಾಬಾಯಿ ಚಾನು, ಗಗನ್ ನಾರಂಗ್‌, ಭಾರತ ಹಾಕಿ ತಂಡದ ಮಾಜಿ ನಾಯಕ ದಿಲೀಪ್‌ ಟಿರ್ಕೆ, ವಿಶ್ವ ಚಾಂಪಿಯನ್‌ಶಿಪ್‌ ಪದಕ ವಿಜೇತರಾದ ಅಂಜು ಬಾಬಿ ಜಾರ್ಜ್‌ ಮತ್ತಿತರರ ಸಮ್ಮುಖದಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಉದ್ಘಾಟನಾ ಕಾರ್ಯಕ್ರಮದ ಬಳಿಕ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಕಳೆದ ಎಂಟು ವರ್ಷಗಳಲ್ಲಿ ಕ್ರೀಡಾ ಕ್ಷೇತ್ರಕ್ಕೆ ನೀಡಲಾಗುವ ಬಜೆಟ್‌ ಅನ್ನು ಶೇಕಡಾ ೭೦ರಷ್ಟು ಹೆಚ್ಚು ಮಾಡಲಾಗಿದೆ. ಅಂತೆಯೇ ಅದಕ್ಕಿಂತ ಮೊದಲು ಭಾರತ ೧೦೦ಕ್ಕೂ ಕಡಿಮೆ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತದ ಅಥ್ಲೀಟ್‌ಗಳು ಪಾಲ್ಗೊಂಡಿದ್ದರೆ, ಇದೀಗ ೩೦೦ಕ್ಕೂ ಅಧಿಕ ಕ್ರೀಡಾಕೂಟಗಳಲ್ಲಿ ಭಾಗವಹಿಸಿದೆ,” ಎಂದು ಹೇಳಿದರು.

ಏಳು ವರ್ಷಗಳ ಬಳಿಕ ನ್ಯಾಷನಲ್‌ ಗೇಮ್ಸ್ ನಡೆಯುತ್ತಿದ್ದು, ಅಕ್ಟೋಬರ್‌ ೧೦ಕ್ಕೆ ಸಮಾಪ್ತಿಯಾಗಲಿದೆ. ೭ ಸಾವಿರಕ್ಕಿಂತಲೂ ಹೆಚ್ಚು ಅಥ್ಲೀಟ್‌ಗಳು ಈ ಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಗುಜರಾತ್‌ನ ಆರು ನಗರಗಳಲ್ಲಿ ೩೬ ಕ್ರೀಡೆಗಳಿಗೆ ಸ್ಪರ್ಧೆ ನಡೆಯಲಿದೆ.

ಕಾರ್ಯಕ್ರಮದಲ್ಲಿ ಗುಜರಾತ್‌ನ ಸಾಂಪ್ರದಾಯಿಕ ಕಲಾ ತಂಡಗಳ ಪ್ರದರ್ಶನವೂ ನಡೆಯಿತು.

ಇದನ್ನೂ ಓದಿ | National Games | ಚಿನ್ನದ ಹುಡುಗ ನೀರಜ್‌ ಚೋಪ್ರಾಗೆ ನ್ಯಾಷನಲ್ ಗೇಮ್ಸ್‌ನಿಂದ ವಿನಾಯಿತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

IPL 2024 : ಹಾರ್ದಿಕ್​ ಪಾಂಡ್ಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ ಇರ್ಫಾನ್ ಪಠಾಣ್​​

IPL 2024: ವಾಂಖೆಡೆಯಲ್ಲಿ 12 ವರ್ಷಗಳ ನಂತರ ಕೋಲ್ಕತಾ ನೈಟ್ ರೈಡರ್ಸ್ ಆತಿಥೇಯ ತಂಡದ ವಿರುದ್ಧ 24 ರನ್​ಗಳ ಭರ್ಜರಿ ಗೆಲುವು ದಾಖಲಿಸಿದ ನಂತರ, ಇರ್ಫಾನ್ ಪಠಾಣ್ ಹಾರ್ದಿಕ್ ಪಾಂಡ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪಾಂಡ್ಯ ಅವರನ್ನು ಟೀಕಿಸುವ ವೀಡಿಯೊ ವೈರಲ್ ಆಗುವ ಮೊದಲು, ಭಾರತದ ಮಾಜಿ ಆಲ್ರೌಂಡರ್​ ಎಕ್ಸ್​ನಲ್ಲಿ ಸರಣಿ ಟ್ವೀಟ್​ಗಳನ್ನು ಮಾಡಿದ್ದರು.

VISTARANEWS.COM


on

Hardik Pandya
Koo

ನವದೆಹಲಿ: ಐಪಿಎಲ್​ ಪಂದ್ಯದಲ್ಲಿ (IPL 2024) ಕೆಕೆಆರ್ ವಿರುದ್ಧ 24 ರನ್​ಗಳ ಸೋಲಿನ ಹಿನ್ನೆಲೆಯಲ್ಲಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರ ಕಳಪೆ ನಾಯಕತ್ವಕ್ಕಾಗಿ ಭಾರತದ ಮಾಜಿ ಆಲ್ರೌಂಡರ್ ಇರ್ಫಾನ್ ಪಠಾಣ್ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಕೋಲ್ಕತಾ ನೈಟ್ ರೈಡರ್ಸ್ 12 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ತವರಿನಲ್ಲಿ ಮೊದಲ ಗೆಲುವನ್ನು ಪಡೆಯಲು ಹೆಚ್ಚು ದೃಢನಿಶ್ಚಯದಿಂದ ಆಡಿದ ತಂಡದಂತೆ ಕಾಣುತ್ತಿತ್ತು. ಮೊದಲ ಇನ್ನಿಂಗ್ಸ್​ನಲ್ಲಿ ಉತ್ತಮ ಆರಂಭ ಪಡೆದ ನಂತರ ಲಾಭ ಪಡೆಯಲು ಸಾಧ್ಯವಾಗದ ಕಾರಣ ಮುಂಬೈ ಸೋಲಿಗೆ ಹೆಚ್ಚಿನ ದೂಷಣೆ ಹಾರ್ದಿಕ್ ಪಾಂಡ್ಯ ಅವರತ್ತ ತಿರುಗಿದೆ.

ವಾಂಖೆಡೆಯಲ್ಲಿ ಕೆಕೆಆರ್ ಮೊದಲು ಬ್ಯಾಟಿಂಗ್ ಮಾಡಿದಾಗ, ಹಾರ್ದಿಕ್ ಪಾಂಡ್ಯ ಮತ್ತು ಇತರ ಎಂಐ ಬೌಲರ್​ಗಳು ಪವರ್​​ಪ್ಲೇನಲ್ಲಿ ಕೆಕೆಆರ್ ತಂಡ ರನ್ ಹರಿವನ್ನು ನಿಯಂತ್ರಿಸಲು ಅದ್ಭುತವಾಗಿ ಕೆಲಸ ಮಾಡಿದರು. ಮೊದಲ ಓವರ್​ನ 4 ನೇ ಎಸೆತದಲ್ಲಿ ಫಿಲ್ ಸಾಲ್ಟ್ ಅವರನ್ನು ಕೇವಲ 5 ರನ್​​ಗಳಿಗೆ ಔಟ್ ಮಾಡುವ ಮೂಲಕ ತುಸಾರಾ ಉತ್ತಮ ಅರಂಭ ತಂದರು. ತಮ್ಮ ಮುಂದಿನ ಓವರ್ನಲ್ಲಿ, ತುಸಾರ 3 ನೇ ಕ್ರಮಾಂಕದ ಬ್ಯಾಟ್ಸ್ಮನ್ ಆಂಗ್ರಿಶ್ ರಘುವಂಶಿ ಅವರ ವಿಕೆಟ್ ಅನ್ನು 13 ರನ್​ಗಳಿಗೆ ಪಡೆದರು, 4 ಎಸೆತಗಳ ನಂತರ, ಅವರು ಶ್ರೇಯಸ್ ಅಯ್ಯರ್ ಅವರನ್ನು 4 ಎಸೆತಗಳಲ್ಲಿ 6 ರನ್​ಗಳಿಗೆ ಔಟ್ ಮಾಡಿದರು.

ಹಾರ್ದಿಕ್ ಪಾಂಡ್ಯ 8 ಎಸೆತಗಳಲ್ಲಿ 8 ರನ್ ಗಳಿಸಿದ್ದ ಸುನಿಲ್ ನರೈನ್ ಅವರನ್ನು ಕ್ಲೀನ್ ಬೌಲ್ ಮಾಡಿದರೆ, ಅನುಭವಿ ಪಿಯೂಷ್ ಚಾವ್ಲಾ 9 ರನ್ ಗಳಿಸಿ ಡೇಂಜರ್ ಮ್ಯಾನ್ ರಿಂಕು ಸಿಂಗ್ ಅವರನ್ನು ಔಟ್​​ ಮಾಡಿದರು. 7ನೇ ಓವರ್​​ನ ಮೊದಲ ಎಸೆತದ ವೇಳೆಗೆ ಕೋಲ್ಕತಾ 5 ವಿಕೆಟ್ ನಷ್ಟಕ್ಕೆ 57 ರನ್ ಗಳಿಸಿತ್ತು. ಆದರೆ ಆ ಬಳಿಕ ಅನನುಭವಿ ನಮನ್ ಧೀರ್ ಅವರನ್ನು ಬೌಲಿಂಗ್​ಗೆ ಕರೆತರುವ ಪಾಂಡ್ಯ ಅವರ ನಿರ್ಧಾರ ಕೈಕೊಟ್ಟಿತು. ವೆಂಕಟೇಶ್ ಅಯ್ಯರ್ ಮತ್ತು ಮನೀಶ್ ಪಾಂಡೆ ಅವರಿಗೆ 83 ರನ್​ಗಳ ಜೊತೆಯಾಟವನ್ನು ನೀಡಿತು.

57/5 ಸ್ಕೋರ್ ಮಾಡಿದ್ದ ನೈಟ್ ರೈಡರ್ಸ್ ಅಂತಿಮವಾಗಿ 169 ರನ್ ಗಳಿಸಿತು. ನಂತರ ಗುರಿ ಬೆನ್ನಟ್ಟಲು ವಿಫಲವಾದ ಮುಂಬೈ 18.5 ಓವರ್​ಗಳಲ್ಲಿ 145 ರನ್​ಗಳಿಗೆ ಆಲೌಟ್ ಆಯಿತು.

ನಿರಾಶೆ ವ್ಯಕ್ತಪಡಿಸಿದ ಇರ್ಫಾನ್ ಪಠಾಣ್

ವಾಂಖೆಡೆಯಲ್ಲಿ 12 ವರ್ಷಗಳ ನಂತರ ಕೋಲ್ಕತಾ ನೈಟ್ ರೈಡರ್ಸ್ ಆತಿಥೇಯ ತಂಡದ ವಿರುದ್ಧ 24 ರನ್​ಗಳ ಭರ್ಜರಿ ಗೆಲುವು ದಾಖಲಿಸಿದ ನಂತರ, ಇರ್ಫಾನ್ ಪಠಾಣ್ ಹಾರ್ದಿಕ್ ಪಾಂಡ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪಾಂಡ್ಯ ಅವರನ್ನು ಟೀಕಿಸುವ ವೀಡಿಯೊ ವೈರಲ್ ಆಗುವ ಮೊದಲು, ಭಾರತದ ಮಾಜಿ ಆಲ್ರೌಂಡರ್​ ಎಕ್ಸ್​ನಲ್ಲಿ ಸರಣಿ ಟ್ವೀಟ್​ಗಳನ್ನು ಮಾಡಿದ್ದರು. ಮುಂಬೈ ಇಂಡಿಯನ್ಸ್ ನಾಯಕನ ಪೆದ್ದ ನಡೆಗಳನ್ನು ಪ್ರಶ್ನಿಸಿದ್ದರು.

ಇರ್ಫಾನ್ ಪಠಾಣ್ ಅವರು ಮುಂಬೈನ ಪ್ರಯಾಣವು ಕೊನೆಗೊಂಡಿದೆ. ಅವರು ಹೊರಗಡೆ ಎಷ್ಟು ಪ್ರಬಲವಾಗಿ ಕಾಣುತ್ತಿದ್ದರೂ ತಂಡವನ್ನು ಉತ್ತಮವಾಗಿ ನಿರ್ವಹಿಸಿಲ್ಲ ಎಂದು ಹೇಳುವ ಮೂಲಕ ವೀಡಿಯೊವನ್ನು ಪ್ರಾರಂಭಿಸಿದರು. ಹಾರ್ದಿಕ್ ಪಾಂಡ್ಯ ವಿರುದ್ಧದ ಪ್ರಶ್ನೆಗಳು ಮತ್ತು ಟೀಕೆಗಳು ಸರಿಯಾಗಿವೆ ಎಂದು ಹೇಳಿದರು.

“ಮುಂಬೈ ಇಂಡಿಯನ್ಸ್​ ಕಥೆ ಇಲ್ಲಿಗೆ ಕೊನೆಗೊಳ್ಳುತ್ತದೆ. ಈ ತಂಡವು ಕಾಗದದ ಮೇಲೆ ತುಂಬಾ ಉತ್ತಮವಾಗಿತ್ತು, ಆದರೆ ಅದನ್ನು ನಿರ್ವಹಿಸಲಾಗಲಿಲ್ಲ. ಹಾರ್ದಿಕ್ ಪಾಂಡ್ಯ ನಾಯಕತ್ವದ ಬಗ್ಗೆ ಎದ್ದ ಪ್ರಶ್ನೆಗಳು ಸಂಪೂರ್ಣವಾಗಿ ಸರಿಯಾಗಿವೆ. ನೀವು ಕೆಕೆಆರ್ ಅನ್ನು 57/5 ಕ್ಕೆ ಸೀಮಿತಗೊಳಿಸಿದಾಗ, ನೀವು ನಮನ್ ಧಿರ್​ಗೆ ಸತತ ಮೂರು ಓವರ್​ಗಳನ್ನು ನೀಡಿದ ತಪ್ಪು ಮಾಡಿದ್ದೀರಿ. ನೀವು ನಿಮ್ಮ ಮುಖ್ಯ ಬೌಲರ್​ಗಳನ್ನು ಇಳಿಸಬೇಕಾಗಿತ್ತು. ಆರನೇ ಬೌಲರ್​ಗೆ ಮೂರು ಓವರ್​​ ನೀಡಿದ್ದೀರಿ” ಎಂದು ಇರ್ಫಾನ್ ಪಠಾಣ್ ಹೇಳಿದ್ದಾರೆ.

ತಂಡದ ಮರು ರಚನೆಗೆ ಸಲಹೆ

ಮುಂಬೈ ಇಂಡಿಯನ್ಸ್ ತಂಡದ ಮ್ಯಾನೇಜ್ಮೆಂಟ್​​ ಇರ್ಫಾನ್ ಪಠಾಣ್ ನೀಡಿದ ಅತ್ಯುತ್ತಮ ಸಲಹೆಯೆಂದರೆ, ಹಾರ್ದಿಕ್ ಪಾಂಡ್ಯ ತಮ್ಮ ನಾಯಕ ಎಂದು ಆಟಗಾರರನ್ನು ಒಪ್ಪಿಕೊಳ್ಳುವಂತೆ ಮಾಡುವುದು. 2007 ರ ಐಸಿಸಿ ಟಿ 20 ವಿಶ್ವಕಪ್ ಫೈನಲ್​​ನ ಮ್ಯಾನ್ ಆಫ್ ದಿ ಮ್ಯಾಚ್ ವಿನ್ನರ್ ಮುಂಬೈ ಇಂಡಿಯನ್ಸ್ ತಂಡವನ್ನು ಒಟ್ಟಾಗಿ ಕರೆಯೊಯ್ಯುತ್ತಿಲ್ಲ. ಇದು ಅವರು ಮುಂದೆ ಸುಧಾರಿಸಬೇಕಾದ ವಿಷಯವಾಗಿದೆ ಎಂದು ಹೇಳಿದ್ದಾರೆ.

“ನಾಯಕತ್ವವು ಆಟದಲ್ಲಿ ದೊಡ್ಡ ಪರಿಣಾಮ ಬೀರುತ್ತದೆ. ಮುಂಬೈ ಇಂಡಿಯನ್ಸ್ ಸಂಘಟಿತ ತಂಡದಂತೆ ಕಾಣುತ್ತಿಲ್ಲ, ಮ್ಯಾನೇಜ್ಮೆಂಟ್ ಇದನ್ನು ಪರಿಗಣಿಸಬೇಕಾಗಿದೆ. ಆಟಗಾರರು ನಾಯಕನನ್ನು ಗೌರವಿಸಬೇಕು ಮತ್ತು ಸ್ವೀಕರಿಸಬೇಕು. ನಾವು ಅದನ್ನು ಮೈದಾನದಲ್ಲಿ ನೋಡಲಿಲ್ಲ” ಎಂದು ಪಠಾಣ್ ಮುಕ್ತಾಯಗೊಳಿಸಿದರು.

Continue Reading

ಕ್ರೀಡೆ

Virat Kohli: ಗುಜರಾತ್​ ವಿರುದ್ಧ 6 ರನ್ ಬಾರಿಸಿದರೆ ವಿಶೇಷ ದಾಖಲೆ ಬರೆಯಲಿದ್ದಾರೆ ಕಿಂಗ್​ ಕೊಹ್ಲಿ

Virat Kohli: ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವ ದಾಖಲೆ ವಿಂಡೀಸ್​ನ ಮಾಜಿ ಆಟಗಾರ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ 14562 ರನ್​ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ. ಪಾಕಿಸ್ತಾನದ ಶೊಯೆಬ್ ಮಲಿಕ್ (13360) ದ್ವಿತೀಯ, ವೆಸ್ಟ್ ಇಂಡೀಸ್​ನ ಕೀರನ್ ಪೊಲಾರ್ಡ್(12900) ತೃತೀಯ ಸ್ಥಾನದಲ್ಲಿದ್ದಾರೆ. ಕೊಹ್ಲಿ 12494* ರನ್​ಗಳೊಂದಿಗೆ 4ನೇ ಸ್ಥಾನದಲ್ಲಿದ್ದಾರೆ.

VISTARANEWS.COM


on

Virat Kohli
Koo

ಬೆಂಗಳೂರು: ಇಂದು(ಶನಿವಾರ) ನಡೆಯುವ ಗುಜರಾತ್​ ಟೈಟಾನ್ಸ್(Gujarat Titans)​ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ(Royal Challengers Bengaluru) ಆಟಗಾರ ವಿರಾಟ್​ ಕೊಹ್ಲಿ(Virat Kohli) ಕೇವಲ 6 ರನ್​ ಗಳಿಸಿದರೆ ಟಿ20 ಕ್ರಿಕೆಟ್​ನಲ್ಲಿ ವಿಶೇಷ ಮೈಲುಗಲ್ಲೊಂದನ್ನು ನಿರ್ಮಿಸಲಿದ್ದಾರೆ. 6 ರನ್​ ಗಳಿಸುತ್ತಿದ್ದಂತೆ ಟಿ20 ಕ್ರಿಕೆಟ್​ನಲ್ಲಿ 12500 ರನ್​ ಪೂರೈಸಿದ ಮೊದಲ ಭಾರತೀಯ ಎನಿಸಿಕೊಳ್ಳಲಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 4ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಲಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ 369 ಇನಿಂಗ್ಸ್ ಆಡಿರುವ ವಿರಾಟ್ ಕೊಹ್ಲಿ 133.94 ಸ್ಟ್ರೈಕ್​ ರೇಟ್​ನಲ್ಲಿ 12494 ರನ್ ಕಲೆಹಾಕಿದ್ದಾರೆ. ಈ ವೇಳೆ 9 ಶತಕ ಹಾಗೂ 95 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಈ ಬಾರಿಯ ಐಪಿಎಲ್​ನಲ್ಲಿ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರುತ್ತಿರುವ ಕೊಹ್ಲಿ ಸದ್ಯ ಆಡಿದ 10 ಇನಿಂಗ್ಸ್​ಗಳಿಂದ ಭರ್ತಿ 500 ರನ್​ ಬಾರಿಸಿದ್ದಾರೆ. ಆರೆಂಜ್​ ಕ್ಯಾಪ್​ ರೇಸ್​ನಲ್ಲಿ ಸದ್ಯ ದ್ವಿತೀಯ ಸ್ಥಾನಿಯಾಗಿದ್ದಾರೆ. ಇಂದಿನ ಪಂದ್ಯದಲ್ಲಿ 10 ರನ್​ ಗಳಿಸಿದರೆ ಚೆನ್ನೈ ತಂಡದ ನಾಯಕ ಋತುರಾಜ್​ ಗಾಯಕ್ವಾಡ್(509)​ ದಾಖಲೆ ಮುರಿಯಲಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ವಿಶ್ವ ದಾಖಲೆ ವಿಂಡೀಸ್​ನ ಮಾಜಿ ಆಟಗಾರ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಗೇಲ್ 14562 ರನ್​ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ. ಪಾಕಿಸ್ತಾನದ ಶೊಯೆಬ್ ಮಲಿಕ್ (13360) ದ್ವಿತೀಯ, ವೆಸ್ಟ್ ಇಂಡೀಸ್​ನ ಕೀರನ್ ಪೊಲಾರ್ಡ್(12900) ತೃತೀಯ ಸ್ಥಾನದಲ್ಲಿದ್ದಾರೆ. ಕೊಹ್ಲಿ 12494* ರನ್​ಗಳೊಂದಿಗೆ 4ನೇ ಸ್ಥಾನದಲ್ಲಿದ್ದಾರೆ.

ವಿರಾಟ್​ ಕೊಹ್ಲಿ ಚಿನ್ನಸ್ವಾಮಿ ಮೈದಾನದಲ್ಲಿ ಇದುವರೆಗೆ 2924 ರನ್​ ಬಾರಿಸಿದ್ದಾರೆ. ಜತೆಗೆ ಈ ಬಾರಿಯ ಐಪಿಎಲ್​ನಲ್ಲಿಯೂ ಕೊಹ್ಲಿ ಉತ್ತಮವಾಗಿ ರನ್​ ಗಳಿಸಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿಯೂ ಇವರ ಬ್ಯಾಟಿಂಗ್​ ಮೇಲೆ ಅವರ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆ ಇರಿಸಿದ್ದಾರೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಯಾವಾಗಲೂ ಬ್ಯಾಟಿಂಗ್ ಸ್ನೇಹಿ ಸ್ಥಳವಾಗಿದೆ. ಬ್ಯಾಟರ್​ಗಳಿಗೆ ಇದು ಸ್ವರ್ಗ. ಪಂದ್ಯದಲ್ಲಿ ದೊಡ್ಡ ಮೊತ್ತ ಹರಿದು ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ IPL 2024 : ಮುಂಬೈ ಬ್ಯಾಟರ್​​ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಮಾಲೀಕರಿಗೆ ಸಲಹೆ ನೀಡಿದ ಮಾಜಿ ಕ್ರಿಕೆಟಿಗ

ಇನ್ನೂ ಇದೆ ಪ್ಲೇ ಆಫ್​ ಅವಕಾಶ


ಸದ್ಯ ಅಂಕಪಟ್ಟಿಯಲ್ಲಿ(IPL 2024 Points Table) ಕೊನೆಯ ಸ್ಥಾನಿಯಾಗಿದ್ದರೂ ಕೂಡ ಆರ್​ಸಿಬಿಯ(Royal Challengers Bengaluru) ಪ್ಲೇ ಆಫ್​ ಬಾಗಿಲು ಇನ್ನೂ ಮುಚ್ಚಿಲ್ಲ. ಇನ್ನೂ ಕೂಡ ಆರ್​ಸಿಬಿಯ ಪ್ಲೇ ಆಫ್​ ಆಸೆ ಜೀವಂತವಾಗಿಯೇ ಇದೆ.

ಸದ್ಯದ ಪರಿಸ್ಥಿತಿಯಲ್ಲಿ ಆರ್‌ಸಿಬಿ ಪ್ಲೇ ಆಫ್ ಹಾದಿ ಸಂಪೂರ್ಣ ಮುಚ್ಚಿಲ್ಲ. ಆದರೆ, ಸತತವಾಗಿ ಗೆಲ್ಲಬೇಕಾದ ಒತ್ತಡ ಮತ್ತು ಪವಾಡವೊಂದು ನಡೆದರೆ ಆರ್​ಸಿಬಿಗೆ ಪ್ಲೇ ಆಫ್​ ಟಿಕೆಟ್​ ಸಿಗಲಿದೆ. ಈಗಾಗಲೇ 10 ಪಂದ್ಯ ಆಡಿದ್ದು, 3 ಪಂದ್ಯ ಗೆದ್ದು, 7 ಪಂದ್ಯದಲ್ಲಿ ಸೋಲು ಕಂಡಿದೆ. 6 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆದರೆ, ಲೀಗ್‌ ಹಂತದಲ್ಲಿ ಇನ್ನೂ 4 ಪಂದ್ಯಗಳ ಬಾಕಿ ಇದೆ. ಹೀಗಾಗಿ ಉಳಿದ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಜತೆಗೆ ತನಗಿಂತ ಮೇಲಿರುವ ತಂಡಗಳು ಸತತ ಸೋಲು ಕಂಡರೆ ಕನಿಷ್ಠ 4ನೇ ಸ್ಥಾನಿಯಾಗಿ ಪ್ಲೇ ಆಫ್ ಗೇರುವ ಸಣ್ಣ ಅವಕಾಶವೊಂದಿದೆ.

ಉಳಿದಿರುವ 4 ಪಂದ್ಯಗಳ ಪೈಕಿ 2 ಪಂದ್ಯಗಳನ್ನು ಆರ್​ಸಿಬಿ ತವರಿನಲ್ಲಿ ಆಡಲಿದೆ. ಒಂದು ಪಂದ್ಯ ಹಾಲಿ ಚಾಂಪಿಯನ್​ ಚೆನ್ನೈ ವಿರುದ್ಧ. ಇದು ಆರ್​ಸಿಬಿಗೆ ಕೊನೆಯ ಲೀಗ್​ ಪಂದ್ಯವಾಗಿರಲಿದೆ. ಮೇ 18ರಂದು ಈ ಪಂದ್ಯ ನಡೆಯಲಿದೆ. ಒಂದೊಮ್ಮೆ ಇಂದು ನಡೆಯುವ ಪಂದ್ಯ. ಇಂದು ಆರ್​ಸಿಬಿ ಸೋತರೆ, ಅಥವಾ ಪಂದ್ಯ ಮಳೆಯಿಂದ ರದ್ದಾದರೆ ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ.

Continue Reading

ಕ್ರೀಡೆ

Rohit Sharma : ರೋಹಿತ್​​ ಶರ್ಮಾಗೆ ಗಾಯ; ವಿಶ್ವ ಕಪ್​ ಮೊದಲೇ ಭಾರತ ತಂಡಕ್ಕೆ ಸಮಸ್ಯೆ?

Rohit Sharma : ಮುಂಬೈ ಇಂಡಿಯನ್ಸ್ ಮ್ಯಾನೇಜ್ಮೆಂಟ್ ರೋಹಿತ್ ಶರ್ಮಾ ಅವರನ್ನು ಪ್ಲೇಯಿಂಗ್ ಇಲೆವೆನ್​ನಲ್ಲಿ ಸೇರಿಸುವ ಬದಲು ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಯ್ಕೆ ಮಾಡಿದೆ. ಟಾಸ್ ವೇಳೆ ರೋಹಿತ್ ಅನುಪಸ್ಥಿತಿಯನ್ನು ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ವಿವರಿಸಲಿಲ್ಲ. ವಿಶೇಷವೆಂದರೆ 37 ವರ್ಷದ ಬ್ಯಾಟರ್ ಪ್ರಸ್ತುತ ಪಂದ್ಯಾವಳಿಯಲ್ಲಿ ಮುಂಬೈ ಪರ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ.

VISTARANEWS.COM


on

Rohit Sharma
Koo

ಬೆಂಗಳೂರು: ಕೋಲ್ಕತಾ ನೈಟ್ ರೈಡರ್ಸ್ (KKR) ವಿರುದ್ಧದ ಪಂದ್ಯದ ವೇಳೆ ರೋಹಿತ್ ಶರ್ಮಾ (Rohit Sharma) ಮೈದಾನದಿಂದ ಹೊರಗುಳಿಯಲು ಏನು ಕಾರಣ ಎಂಬುದನ್ನು ಮುಂಬೈ ಇಂಡಿಯನ್ಸ್ (Mumbai Indians ) ಲೆಗ್ ಸ್ಪಿನ್ನರ್ ಪಿಯೂಷ್ ಚಾವ್ಲಾ (Piyush Chawla) ಬಹಿರಂಗಪಡಿಸಿದ್ದಾರೆ. ರೋಹಿತ್ ಶರ್ಮಾ ಬೆನ್ನುನೋವಿನಿಂದ ಬಳಲುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಹೀಗಾಗಿ 2024 ರ ಟಿ 20 ವಿಶ್ವಕಪ್​ಗೆ ಅವರ ಲಭ್ಯತೆಯ ಬಗ್ಗೆ ಅನುಮಾನಗಳನ್ನು ಹುಟ್ಟಿವೆ.

ಮುಂಬೈ ಇಂಡಿಯನ್ಸ್ ಮ್ಯಾನೇಜ್ಮೆಂಟ್ ರೋಹಿತ್ ಶರ್ಮಾ ಅವರನ್ನು ಪ್ಲೇಯಿಂಗ್ ಇಲೆವೆನ್​ನಲ್ಲಿ ಸೇರಿಸುವ ಬದಲು ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಯ್ಕೆ ಮಾಡಿದೆ. ಟಾಸ್ ವೇಳೆ ರೋಹಿತ್ ಅನುಪಸ್ಥಿತಿಯನ್ನು ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ ವಿವರಿಸಲಿಲ್ಲ. ವಿಶೇಷವೆಂದರೆ 37 ವರ್ಷದ ಬ್ಯಾಟರ್ ಪ್ರಸ್ತುತ ಪಂದ್ಯಾವಳಿಯಲ್ಲಿ ಮುಂಬೈ ಪರ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಮುಂಬೈ ಇಂಡಿಯನ್ಸ್​ ಮಾಜಿ ನಾಯಕ ರನ್ ಚೇಸ್ ಸಮಯದಲ್ಲಿ 12 ಎಸೆತಗಳಲ್ಲಿ ಒಂದು ಸಿಕ್ಸರ್ ಸೇರಿದಂತೆ 11 ರನ್ ಮಾತ್ರ ಗಳಿಸಿದರು.

ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ 24 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಕೆಕೆಆರ್ ವಿರುದ್ಧ ಮುಂಬೈ ಇಂಡಿಯನ್ಸ್ 12 ವರ್ಷಗಳ ಬಳಿಕ ಮೊದಲ ಸೋಲು ಅನುಭವಿಸಿದೆ. ಪಂದ್ಯದ ನಂತರದ ಸಂದರ್ಶನದಲ್ಲಿ, ಪಿಯೂಷ್ ಚಾವ್ಲಾ ಅವರು ರೋಹಿತ್ ಶರ್ಮಾ ಬೆನ್ನುನೋವಿನ ವಿಷಯ ಹೇಳಿದರು. ಹೀಗಾಗಿ ಅವರು ಆರಂಭಿಕ ಪ್ಲೇಯಿಂಗ್ ಇಲೆವೆನ್​ನಿಂದ ಹೊರಗುಳಿದಿದ್ದಾರೆ ಎಂದು ಬಹಿರಂಗಪಡಿಸಿದರು. ರೋಹಿತ್ ಅವರನ್ನು ಇಂಪ್ಯಾಕ್ಟ್​ ಪ್ಲೇಯರ್ ಆಗಿ ತರಲು ಇದು ಮುನ್ನೆಚ್ಚರಿಕೆ ಕ್ರಮವಾಗಿತ್ತು ಎಂದು ಎಂದು ಚಾವ್ಲಾ ಹೇಳಿದ್ದಾರೆ.

“ಅವರಿಗೆ ಸ್ವಲ್ಪ ಬೆನ್ನುನೋವು ಇತ್ತು. ಇದು ಕೇವಲ ಮುನ್ನೆಚ್ಚರಿಕೆಯ ವಿಷಯವಾಗಿತ್ತು, “ಎಂದು ಚಾವ್ಲಾ ನುಡಿದರು.

ರೋಹಿತ್ ಶರ್ಮಾ ಈ ಹಿಂದೆಯೂ ಬೆನ್ನುನೋವಿನಿಂದ ಬಳಲುತ್ತಿದ್ದರು. ಮಾರ್ಚ್​ನಲ್ಲಿ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್​ನಲ್ಲಿ ಅನುಭವಿ ಆರಂಭಿಕ ಆಟಗಾರ ಬೆನ್ನುನೋವಿನಿಂದಾಗಿ ಫೀಲ್ಡಿಂಗ್ ಮಾಡಲಿಲ್ಲ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ದಿನದಾಟದ ಮೊದಲ ಸೆಷನ್​​ನಲ್ಲಿ ಬಿಸಿಸಿಐ ಈ ಸುದ್ದಿಯನ್ನು ದೃಢಪಡಿಸಿತ್ತು.

ಇದನ್ನೂ ಓದಿ: IPL 2024 : ಮುಂಬೈ ಬ್ಯಾಟರ್​​ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಮಾಲೀಕರಿಗೆ ಸಲಹೆ ನೀಡಿದ ಮಾಜಿ ಕ್ರಿಕೆಟಿಗ

ಐಪಿಎಲ್ 2024 ರ ಪ್ಲೇಆಫ್ ಸ್ಪರ್ಧೆಯಿಂದ ಮುಂಬೈ ಇಂಡಿಯನ್ಸ್ ಅಕ್ಷರಶಃ ಹೊರಗುಳಿದಿರುವುದರಿಂದ ರೋಹಿತ್ ಶರ್ಮಾ ಈಗ ಅಗತ್ಯ ವಿಶ್ರಾಂತಿ ಆರಿಸಿಕೊಳ್ಳುವ ಸಾಧ್ಯತೆಯಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದ ತಂಡವು 11 ಪಂದ್ಯಗಳಲ್ಲಿ ಎಂಟನೇ ಸೋಲನ್ನು ಅನುಭವಿಸಿದೆ. ಅವರು ಪ್ರಸ್ತುತ 6 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಐಪಿಎಲ್ 2024 ರಲ್ಲಿ ಅವರು ಗರಿಷ್ಠ 12 ರನ್ ಗಳಿಸಲು ಸಾಧ್ಯವಿದೆ.

ಈ ಋತುವಿನಲ್ಲಿ ಪೂರಕವಾಗಿರಲಿಲ್ಲ: ಪಿಯೂಷ್ ಚಾವ್ಲಾ

ತಂಡವು ಎಲ್ಲಾ ವಿಭಾಗಗಳಲ್ಲಿ ಹೆಣಗಾಡಿದೆ ಎಂದು ಪಿಯೂಷ್ ಚಾವ್ಲಾ ಹೇಳಿದರು. ಈ ಋತುವಿನಲ್ಲಿ ತಮ್ಮ ತಂಡ ಉತ್ತಮವಾದುದನನ್ಉ ಪಡೆಯಲಿಲ್ಲ ಎಂದು ಹೇಳಿದರು. ಚಾವ್ಲಾ ನಿರಾಶೆಯನ್ನು ಒಪ್ಪಿಕೊಂಡರು. ಆದರೆ ಅಂತಹ ಸಂದರ್ಭಗಳಲ್ಲಿ ಸ್ವೀಕಾರದ ಮಹತ್ವ ಒತ್ತಿ ಹೇಳಿದರು.

ಇದು ನಮಗೆ ಮೊದಲ ಬಾರಿಗೆ ಅಥವಾ ಬೇರೆ ಯಾವುದೇ ತಂಡಕ್ಕೆ ಎರಡನೇ ಬಾರಿಗೆ ಸಂಭವಿಸುತ್ತಿಲ್ಲ. ಇದು ಯಾರಿಗಾದರೂ ಸಂಭವಿಸಬಹುದು ಎಂದು ಚಾವ್ಲಾ ಹೇಳಿದ್ದಾರೆ.

” ವಾಂಖೆಡೆಯಲ್ಲಿ 170 ರನ್​ಗಳ ಗುರಿ ಬೆನ್ನಟ್ಟುವುದು ಸುಲಭ ಎಂದು ಜನರು ಭಾವಿಸಿದ್ದರು. ಆದರೆ ಇಂದು ವಿಕೆಟ್ ವಿಭಿನ್ನವಾಗಿತ್ತು. ಸ್ವಲ್ಪ ಜಿಗುಟುತನದಿಂದ ಕೂಡಿತ್ತು. ಚೆಂಡು ನಿಂತು ಬರುತ್ತಿತ್ತು. ಇಂಥ ವಿಷಯಗಳು ಸಂಭವಿಸಬಹುದು. ಇದು ನೋವುಂಟುಮಾಡುತ್ತದೆ, ಆದರೆ ನೀವು ಅದನ್ನು ಒಪ್ಪಿಕೊಳ್ಳಬೇಕು.”

ಮುಂಬೈ ಮೂಲದ ತಂಡವು ಮೇ 6 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ತನ್ನ ಮುಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ (ಎಸ್ ಆರ್ ಎಚ್) ವಿರುದ್ಧ ಸೆಣಸಲಿದೆ.

Continue Reading

ಕ್ರೀಡೆ

IPL 2024 : ಮುಂಬೈ ಬ್ಯಾಟರ್​​ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ ಎಂದು ಮಾಲೀಕರಿಗೆ ಸಲಹೆ ನೀಡಿದ ಮಾಜಿ ಕ್ರಿಕೆಟಿಗ

IPL 2024: ಚೇಸಿಂಗ್ ಮಾಡುತ್ತಿದ್ದ ಮುಂಬೈ ತಂಡದ ಬ್ಯಾಟಿಂಗ್ ಕ್ರಮಾಂಕವು ಮತ್ತೊಮ್ಮೆ ಪರಿಣಾಮಕಾರಿಯಾಗಲಿಲ್ಲ; ಸೂರ್ಯಕುಮಾರ್ ಯಾದವ್ (56) ಹೊರತುಪಡಿಸಿ ರನ್ ಚೇಸ್​​ನಲ್ಲಿ ಯಾವುದೇ ಬ್ಯಾಟ್ಸ್ಮನ್ 30 ಕ್ಕಿಂತ ಹೆಚ್ಚು ರನ್ ಗಳಿಸಲಿಲ್ಲ. ಇದಲ್ಲದೆ, ನಾಯಕ ಹಾರ್ದಿಕ್ ಪಾಂಡ್ಯ 7 ನೇ ಕ್ರಮಾಂಕದಲ್ಲಿ ಮತ್ತು ಟಿಮ್ ಡೇವಿಡ್ 8 ನೇ ಕ್ರಮಾಂಕದಲ್ಲಿ ಬಂದಿದ್ದರಿಂದ ಕೆಲವು ಬ್ಯಾಟಿಂಗ್ ಕ್ರಮಾಂಕದ ಆಯ್ಕೆಗಳು ಪ್ರಶ್ನೆಗಳನ್ನು ಹುಟ್ಟುಹಾಕಿದವು.

VISTARANEWS.COM


on

IPL 2024
Koo

ಬೆಂಗಳೂರು: ಐಪಿಎಲ್​ 17ನೇ ಆವೃತ್ತಿಯಲ್ಲಿ (IPL 2024) ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 24 ರನ್​ಗಳ ಭರ್ಜರಿ ಜಯ ಸಾಧಿಸಿ ಪ್ಲೇ ಆಫ್ಗೆ ಪ್ರವೇಶಿಸುವ ಅವಕಾಶ ಹೆಚ್ಚಿಸಿಕೊಂಡಿದೆ. ಆಡಿರುವ 11 ಪಂದ್ಯಗಳಲ್ಲಿ 8ನೇ ಸೋಲು ಕಂಡಿರುವ ಮುಂಬೈ ಇಂಡಿಯನ್ಸ್ ಅಗ್ರ 4ರಲ್ಲಿ ಸ್ಥಾನ ಪಡೆಯುವ ಅವಕಾಶ ಕಳೆದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ನೈಟ್ ರೈಡರ್ಸ್ 169 ರನ್​ಗಳಿಗೆ ಆಲ್​ಔಟ್ ಆಯಿತು. ಆದರೆ, ಅದಕ್ಕಿಂತ ಮೊದಲು 57 ರನ್​ಗೆ 5 ವಿಕೆಟ್​ ಕಳೆದುಕೊಂಡಿತ್ತು. ಆದರೆ ಆ ಬಳಿಕ ಚೇತರಿಸಿಕೊಂಡಿತ್ತು. ಆದರೆ, ಮುಂಬೈ ತಂಡ ಗೆಲುವಿನ ಅವಕಾಶವನ್ನು ಎಲ್ಲಿಯೂ ಸೃಷ್ಟಿ ಮಾಡಿಕೊಂಡಿರಲಿಲ್ಲ.

ಚೇಸಿಂಗ್ ಮಾಡುತ್ತಿದ್ದ ಮುಂಬೈ ತಂಡದ ಬ್ಯಾಟಿಂಗ್ ಕ್ರಮಾಂಕವು ಮತ್ತೊಮ್ಮೆ ಪರಿಣಾಮಕಾರಿಯಾಗಲಿಲ್ಲ; ಸೂರ್ಯಕುಮಾರ್ ಯಾದವ್ (56) ಹೊರತುಪಡಿಸಿ ರನ್ ಚೇಸ್​​ನಲ್ಲಿ ಯಾವುದೇ ಬ್ಯಾಟ್ಸ್ಮನ್ 30 ಕ್ಕಿಂತ ಹೆಚ್ಚು ರನ್ ಗಳಿಸಲಿಲ್ಲ. ಇದಲ್ಲದೆ, ನಾಯಕ ಹಾರ್ದಿಕ್ ಪಾಂಡ್ಯ 7 ನೇ ಕ್ರಮಾಂಕದಲ್ಲಿ ಮತ್ತು ಟಿಮ್ ಡೇವಿಡ್ 8 ನೇ ಕ್ರಮಾಂಕದಲ್ಲಿ ಬಂದಿದ್ದರಿಂದ ಕೆಲವು ಬ್ಯಾಟಿಂಗ್ ಕ್ರಮಾಂಕದ ಆಯ್ಕೆಗಳು ಪ್ರಶ್ನೆಗಳನ್ನು ಹುಟ್ಟುಹಾಕಿದವು.

“ಟಿಮ್ ಡೇವಿಡ್ ಮತ್ತು ಹಾರ್ದಿಕ್ ಪಾಂಡ್ಯ ಕೂಡ ತಡವಾಗಿ ಬ್ಯಾಟಿಂಗ್​ಗೆ ಬಂದರು. ಆ ರೀತಿ ಮಾಡುವುದರಿಂದ ನೀವು ಯಾವ ಫಲಿತಾಂಶಗಳನ್ನು ನಿರೀಕ್ಷೆ ಮಾಡುತ್ತೀರಿ. ಕೆಲವೇ ಎಸೆತಗಳು ಉಳಿದಾಗ ಅವರು ಬಂದರೆ ಏನು ಉಪಯೋಗ. ಅವರು ಮೊದಲೇ ಆಡಲು ಬರಬೇಕಿತ್ತು. ಆಟವನ್ನು ಬೇಗನೆ ಮುಗಿಸಬಹುದಿತ್ತು. ಚೇಸಿಂಗ್ ನಲ್ಲಿ ಅವರಿಗೆ ಏನಾಗಿದೆ ಎಂದು ನಾನು ನಿಜವಾಗಿಯೂ ಆಶ್ಚರ್ಯ ಪಡುತ್ತೇನೆ. ಪಾಂಡ್ಯ 7ನೇ ಕ್ರಮಾಂಕದಲ್ಲಿ ಮತ್ತು ಡೇವಿಡ್ 8ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದರೆ ಏನು ಪ್ರಯೋಜ ಎಂದು ಸೆಹ್ವಾಗ್ ಹೇಳಿದ್ದಾರೆ.

“ಹಾರ್ದಿಕ್ ಪಾಂಡ್ಯ ಜಿಟಿ ನಾಯಕರಾಗಿದ್ದಾಗ ಅವರು ಸಾಮಾನ್ಯವಾಗಿ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದರು. ಅನುಭವಿ ಆಟಗಾರರ ಈಗ ಕೊನೆಯಲ್ಲಿ ಏಕೆ ಬರುತ್ತಿದ್ದಾರೆ? ಇದು ನಿಜವಾಗಿಯೂ ಗೊಂದಲಮಯ” ಎಂದು ಅವರು ಸೆಹ್ವಾಗ್​ ಟೀಕಿಸಿದ್ದಾರೆ.

2025 ರ ಋತುವಿಗೆ ಯೋಜನೆ ಹಾಕುತ್ತಿರುವ ಎಂಐ ನೇಹಾಲ್ ವಧೇರಾ ಮತ್ತು ನಮನ್ ಧೀರ್ ಅವರನ್ನು ಅಗ್ರ ಕ್ರಮಾಂಕದಲ್ಲಿ ಕಳುಹಿಸಿದೆ ಎಂದು ಟಿವಿ ನಿರೂಪಕ ಪ್ರತಿಕ್ರಿಯಿಸಿದ್ದಾರೆ. ಈಗ ಪಂದ್ಯಗಳನ್ನು ಗೆಲ್ಲದಿದ್ದರೆ ತಂಡವು ಭವಿಷ್ಯಕ್ಕಾಗಿ ಯೋಜನೆ ಹಾಕಿ ಏನು ಪ್ರಯೋಜನ ಎಂದು ಸೆಹ್ವಾಗ್ ವಾದಿಸಿದ್ದಾರೆ.

ಇದನ್ನೂ ಓದಿ: Rinku Singh : ಕೊಹ್ಲಿಯ ಬ್ಯಾಟ್​ನಲ್ಲಿ ರಿಂಕು ಚೆನ್ನಾಗಿ ಆಡುತ್ತಿಲ್ಲ; ನೆಟ್ಟಿಗರಿಂದ ಟ್ರೋಲ್​!

“2025 ಕ್ಕೆ ತಯಾರಿ ನಡೆಸಲಿ. ಆದರೆ ಈಗ ಯಾರು ಎಲ್ಲಿ ಬ್ಯಾಟಿಂಗ್ ಮಾಡಬೇಕು ಎಂಬುದರ ಬಗ್ಗೆ ಯೋಚಿಸಬೇಕು. ಈ ಕ್ಷಣದಲ್ಲಿ ಭವಿಷ್ಯವನ್ನು ಹೇಗೆ ಊಹಿಸಬಹುದು? ಪ್ಲೇಆಫ್ ಗೆ ಅರ್ಹತೆ ಪಡೆದಿದ್ದರೆ ಅವಕಾಶಗಳನ್ನು ತೆಗೆದುಕೊಳ್ಳಬಹುದಿತ್ತು. ಮುಂಬಯಿ ತಂಡ ಬ್ಯಾಟಿಂಗ್ ಕ್ರಮಾಂಕದಲ್ಲಿ ಗೊಂದಲದಲ್ಲಿದೆ ಮತ್ತು ಪಂದ್ಯಗಳನ್ನು ಗೆಲ್ಲುತ್ತಿಲ್ಲ,” ಎಂದು ಸೆಹ್ವಾಗ್ ನುಡಿದಿದ್ದಾರೆ.

ಇದು ತುಂಬಾ ವಿಚಿತ್ರವಾಗಿದೆ. ಮ್ಯಾನೇಜ್ಮೆಂಟ್​ ಆಟಗಾರರನ್ನು ಪ್ರಶ್ನಿಸಬೇಕು ಮತ್ತು ಅವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪರ್ಯಾಯವಾಗಿ, ಆಟಗಾರರು ತಾವು ವಿಭಿನ್ನ ಸ್ಥಾನದಲ್ಲಿ ಏಕೆ ಬ್ಯಾಟಿಂಗ್ ಮಾಡುತ್ತಿದ್ದೇವೆ ಎಂಬುದನ್ನು ಸ್ಪಷ್ಟಪಡಿಸಬೇಕಾಗಿದೆ. ಇದು ಸಹಾಯಕ ಸಿಬ್ಬಂದಿ, ಬ್ಯಾಟಿಂಗ್ ಕೋಚ್, ಬೌಲಿಂಗ್ ಕೋಚ್ ಮತ್ತು ನಾಯಕನ ತಪ್ಪು. ಮಾಲೀಕರು ಕಠಿಣ ಪ್ರಶ್ನೆಗಳನ್ನು ಕೇಳಬೇಕಾಗುತ್ತದೆ” ಎಂದು ಅವರು ಹೇಳಿದರು.

Continue Reading
Advertisement
Prajwal Revanna Case
ಕರ್ನಾಟಕ11 mins ago

Prajwal Revanna Case: ಪ್ರಜ್ವಲ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್;‌ ರೇವಣ್ಣ ಪಿಎ ಮನೆಯಲ್ಲಿ ಸಂತ್ರಸ್ತೆಯ ರಕ್ಷಣೆ!

Hardik Pandya
ಕ್ರಿಕೆಟ್13 mins ago

IPL 2024 : ಹಾರ್ದಿಕ್​ ಪಾಂಡ್ಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ ಇರ್ಫಾನ್ ಪಠಾಣ್​​

karnataka weather Forecast
ಮಳೆ16 mins ago

Karnataka Weather: ಮೈಸೂರಲ್ಲಿ ಬಿರುಗಾಳಿಗೆ ಸಿಲುಕಿ ವೃದ್ಧೆ ಸಾವು; ಮತ್ತೆ ಗುಡುಗು ಸಹಿತ ಗಾಳಿ ಮಳೆಯ ಎಚ್ಚರಿಕೆ

Zameer Ahmed Khan
ಕರ್ನಾಟಕ26 mins ago

Zameer Ahmed Khan: 3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪ ಸಂಖ್ಯಾತರನ್ನು ಮುಗಿಸ್ತಾರೆ ಎಂದ ಜಮೀರ್‌ ಅಹ್ಮದ್

Mobile Side Effect
ಆರೋಗ್ಯ29 mins ago

Mobile Side Effect: ಅತಿಯಾದ ಮೊಬೈಲ್ ಬಳಕೆ; ಮಕ್ಕಳು ಕಿವುಡರಾಗುತ್ತಿದ್ದಾರೆ!

Suchitra Krishnamoorthi Reveals Her Face Swelled Like A Balloon
ಬಾಲಿವುಡ್36 mins ago

Suchitra Krishnamoorthi: ಶಾರುಖ್ ಖಾನ್ ಜತೆ ನಟಿಸಿರುವ ನಟಿಯ ಮುಖ ಬಲೂನ್‌ನಂತೆ ಊದಿಕೊಂಡಿದ್ದು ಏಕೆ?

Wedding Season Hair Fashion
ಫ್ಯಾಷನ್37 mins ago

Wedding Season Hair Fashion: ವೆಡ್ಡಿಂಗ್‌ ಸೀಸನ್‌ನಲ್ಲಿ ಎಂಟ್ರಿ ನೀಡಿದ ಆರ್ಟಿಫಿಶಿಯಲ್‌ ಹೇರ್‌ ಎಕ್ಸ್‌ಟೆನ್ಷನ್ಸ್‌!

Virat Kohli
ಕ್ರೀಡೆ49 mins ago

Virat Kohli: ಗುಜರಾತ್​ ವಿರುದ್ಧ 6 ರನ್ ಬಾರಿಸಿದರೆ ವಿಶೇಷ ದಾಖಲೆ ಬರೆಯಲಿದ್ದಾರೆ ಕಿಂಗ್​ ಕೊಹ್ಲಿ

Rohit Sharma
ಕ್ರೀಡೆ50 mins ago

Rohit Sharma : ರೋಹಿತ್​​ ಶರ್ಮಾಗೆ ಗಾಯ; ವಿಶ್ವ ಕಪ್​ ಮೊದಲೇ ಭಾರತ ತಂಡಕ್ಕೆ ಸಮಸ್ಯೆ?

Prajwal Revanna Case
ಕರ್ನಾಟಕ55 mins ago

Prajwal Revanna Case: ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ; ತೀರ್ಪು ಕಾಯ್ದಿರಿಸಿದ ಕೋರ್ಟ್, ಕೆಲವೇ ಕ್ಷಣಗಳಲ್ಲಿ ಆದೇಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌