6 Ocean | ಆರನೇ ಮಹಾ ಸಾಗರ ಪತ್ತೆ ಹಚ್ಚಿದ ಸಂಶೋಧನಾ ತಂಡ! - Vistara News

ಪ್ರಮುಖ ಸುದ್ದಿ

6 Ocean | ಆರನೇ ಮಹಾ ಸಾಗರ ಪತ್ತೆ ಹಚ್ಚಿದ ಸಂಶೋಧನಾ ತಂಡ!

ನಮಗೆಲ್ಲ ಗೊತ್ತಿರುವ ಹಾಗೆ ಐದು ಮಹಾ ಸಾಗರ(Ocean)ಗಳಿವೆ. ಆದರೆ, ಸಂಶೋಧನಾ ತಂಡಗಳು 6ನೇ ಮಹಾಸಾಗರದ ಬಗೆಗಿನ ಸಾಕ್ಷ್ಯಗಳನ್ನು ಪತ್ತೆ ಹಚ್ಚಿವೆ.

VISTARANEWS.COM


on

Ocean
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಭೂಮಿಯ ಮೇಲೆ ಅಂಟ್ಲಾಟಿಕ್, ಪೆಸಿಫಿಕ್, ಹಿಂದೂ ಮಹಾ ಸಾಗರ, ಅರ್ಕಾಟಿಕ್, ಸದರ್ನ್ ಓಷನ್… ಹೀಗೆ ಐದು ಮಹಾಸಾಗರ(Ocean)ಗಳಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯಾಗಿದೆ. ಆದರೆ, ವಿಜ್ಞಾನಿಗಳು ಆರನೇಯ ಮಹಾ ಸಾಗರ ಇರುವಿಕೆಯ ಸಾಕ್ಷ್ಯಗಳನ್ನು ಕಂಡಿದ್ದಾರೆ. ಭೂಮಿಯ ಮೇಲಿನ ಮತ್ತು ಒಳಭಾಗದ ನಡುವಿನ ಭಾಗ(ಮ್ಯಾಂಟಲ್)ದಲ್ಲಿ ಗಣನೀಯ ಪ್ರಮಾಣದಲ್ಲಿ ನೀರಿನ ಸಾಕ್ಷ್ಯಗಳು ಲಭ್ಯವಾಗಿವೆ. ಹಾಗಾಗಿ, ಇದು ಆರನೇ ಮಹಾಸಾಗರಕ್ಕೆ ಸಾಕ್ಷ್ಯ ಆಗಿದೆ ಎಂದು ಎಂದು ಅಧ್ಯಯನ ವರದಿಯೊಂದು ತಿಳಿಸಿದೆ.

ಭೂಮಿಯ ಮೇಲ್ಭಾಗದಿಂದ 660 ಕಿ.ಮೀ. ಆಳದಲ್ಲಿ ರಚನೆಯಾಗಿರುವ ವಿರಳ ಡೈಮಂಡ್ ವಿಶ್ಲೇಷಣೆಯ ಅಧ್ಯಯನದ ವೇಳೆ, ಈ ಮಹಾಸಾಗರದ ಬಗೆಗಿನ ಸಾಕ್ಷ್ಯ ತಿಳಿದು ಬಂದಿದೆ. ಸಮುದ್ರದ ನೀರು ಸ್ಲ್ಯಾಬ್‌ಗಳನ್ನು ಒಳಗೊಂಡು ಮತ್ತು ಪರಿವರ್ತನೆಯ ವಲಯ(transition zone)ವನ್ನು ಪ್ರವೇಶಿಸುತ್ತದೆ ಎಂಬ ಸಿದ್ಧಾಂತವನ್ನು ದೃಢೀಕರಿಸುತ್ತದೆ. ಭೂಮಿಯ ಜಲಚಕ್ರವು ಭೂಮಿಯ ಒಳಭಾಗವನ್ನು ಒಳಗೊಂಡಿದೆ ಎಂದು ಹೊಸ ಸಂಶೋಧನೆಗಳು ಬಹಿರಂಗಪಡಿಸುತ್ತವೆ.

ಆರನೇ ಮಹಾಸಾಗರ ಕುರಿತು ಜರ್ಮನ್-ಇಟಾಲಿಯನ್- ಅಮೆರಿಕನ ಸಂಶೋಧನಾ ತಂಡದ ಅಧ್ಯಯನದ ವರದಿಯು ನೇಚರ್ ಜರ್ನಲ್‌ನಲ್ಲಿ ಪ್ರಕಟವಾಗಿದೆ. ಭೂಮಿಯ ಒಳ ರಚನೆ ಮತ್ತು ಡೈನಾಮಿಕ್ಸ್‌ವು, ಮ್ಯಾಂಟಲ್ ಟ್ರಾನ್ಸಿಷನ್ ಝೋನ್ ಮತ್ತು ಲೋಯರ್ ಮ್ಯಾಂಟಲ್ 660 ಕಿ.ಮೀ ಗಡಿಯಿಂದಾಗಿ ರೂಪುಗೊಂಡಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಭೂಮಿಯ ಮ್ಯಾಂಟಲ್ ಮತ್ತು ಮತ್ತು ಕೆಳಗಿನ ಮ್ಯಾಂಟಲ್ ಅನ್ನು ಬೇರ್ಪಡಿಸುವ ಪರಿವರ್ತನಾ ವಲಯದಲ್ಲಿ(TZ) ನೀರಿನ ಬಗ್ಗೆ ಸಾಕ್ಷ್ಯವು ಸೂಚಿಸುತ್ತದೆ. ಈ ಗಡಿಯು 410 ರಿಂದ 660 ಕಿಲೋಮೀಟರ್‌ಗಳಷ್ಟು ಆಳದಲ್ಲಿದೆ. ಅಲ್ಲಿ 23,000 ಬಾರ್‌ಗಳವರೆಗಿನ ಅಪಾರ ಒತ್ತಡವು ಆಲಿವ್-ಹಸಿರು ಖನಿಜ ಆಲಿವೈನ್ ಅನ್ನು ಅದರ ಸ್ಫಟಿಕದ ರಚನೆಯನ್ನು ಬದಲಾಯಿಸಲು ಕಾರಣವಾಗುತ್ತದೆ ಎಂಬುದು ಅಧ್ಯಯನದ ವೇಳೆ ತಿಳಿದು ಬಂದಿದೆ.

ಇದನ್ನೂ ಓದಿ | Samudrayaan Mission | ಸಮುದ್ರದಲ್ಲಿ 6 ಕಿಲೋಮೀಟರ್‌ ಆಳಕ್ಕೆ ಹೋಗಲಿದೆ ಭಾರತದ ʼಮತ್ಸ್ಯʼ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Renuka Swamy Murder: ರೇಣುಕಾ ಸ್ವಾಮಿ ಮನೆಗೆ ಗೃಹ ಸಚಿವ ಪರಮೇಶ್ವರ್‌, ಪ್ರತಿಪಕ್ಷ ನಾಯಕ ವಿಜಯೇಂದ್ರ ಭೇಟಿ

Renuka Swamy Murder: ಗೃಹ ಸಚಿವ ಡಾ.ಜಿ ಪರಮೇಶ್ವರ (Home minister G Parameshwara), ಪ್ರತಿಪಕ್ಷ ನಾಯಕ ಬಿ.ವೈ ವಿಜಯೇಂದ್ರ (BY vijayendra), ಸಂಸದ ಗೋವಿಂದ ಕಾರಜೋಳ ಮುಂತಾದವರು ಭೇಟಿ ನೀಡಿದ್ದು, ಮೃತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

VISTARANEWS.COM


on

renuka swamy murder case by vijayendra g parameshwara
Koo

ಚಿತ್ರದುರ್ಗ: ಬೆಂಗಳೂರಿನಲ್ಲಿ ನಟ ದರ್ಶನ್‌ (Actor Darshan) ಗ್ಯಾಂಗ್‌ನಿಂದ ಹತ್ಯೆಯಾದ ಚಿತ್ರದುರ್ಗದ ರೇಣುಕಾ ಸ್ವಾಮಿ (Renuka swamy Murder case) ಮನೆಗೆ ಇಂದು ಗೃಹ ಸಚಿವ ಡಾ.ಜಿ ಪರಮೇಶ್ವರ (Home minister G Parameshwara), ಪ್ರತಿಪಕ್ಷ ನಾಯಕ ಬಿ.ವೈ ವಿಜಯೇಂದ್ರ (BY vijayendra), ಸಂಸದ ಗೋವಿಂದ ಕಾರಜೋಳ ಮುಂತಾದವರು ಭೇಟಿ ನೀಡಿದ್ದು, ಮೃತನ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ವಿಜಯೇಂದ್ರ ಅವರು ಮೃತನ ಕುಟುಂಬಕ್ಕೆ 2 ಲಕ್ಷ ರೂ.ಗಳ ಧನಸಹಾಯ ನೀಡಿದ್ದಾರೆ.

ರೇಣುಕಾಸ್ವಾಮಿ‌ ಮನೆಗೆ ಭೇಟಿ ನೀಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ಹತ್ಯೆ ಪ್ರಕರಣ ಕುರಿತು ಮತ್ತಷ್ಟು ಮಾಹಿತಿ ಪಡೆದು, ಸೂಕ್ತ ತನಿಖೆ ಮಾಡಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ರೇಣುಕಾಸ್ವಾಮಿ ತಂದೆ, ತಾಯಿ ಮಗನ ಭೀಕರ ಹತ್ಯೆ ಕುರಿತು ಕಣ್ಣೀರಿಟ್ಟು ನ್ಯಾಯಕ್ಕಾಗಿ ಮನವಿ ಮಾಡಿದರು. ರೇಣುಕಸ್ವಾಮಿ ಪತ್ನಿಗೆ ಉದ್ಯೋಗ ನೀಡುವಂತೆ, ಸೂಕ್ತ ತನಿಖೆ ಮಾಡಿಸುವಂತೆ ಒತ್ತಾಯಿಸಿದರು. ಗೃಹ ಸಚಿವ ಜಿ.ಪರಮೇಶ್ವರ್‌ಗೆ ಸಚಿವ ಡಿ.ಸುಧಾಕರ್, ಮಾಜಿ ಸಚಿವ ಹೆಚ್. ಆಂಜನೇಯ ಸೇರಿದಂತೆ ಸ್ಥಳೀಯ ಶಾಸಕರು ಸಾಥ್‌ ನೀಡಿದರು.

“ಕುಟುಂಬದವರಿಗೆ ಸಾಂತ್ವನ ಹೇಳಬೇಕು ಅಂತ ಬಂದಿದ್ದೇನೆ. ಇದು ಬಹಳ ನೋವು ಉಂಟು ಮಾಡಿದೆ. ಸರ್ಕಾರ ಯಾವುದೇ ಮುಲಾಜು ಇಲ್ಲದೇ ತನಿಖೆ ಮಾಡ್ತಿದೆ. ಈಗಾಗಲೇ ಸುಮಾರು 17 ಜನ ಆರೆಸ್ಟ್ ಆಗಿದ್ದಾರೆ. ರೇಣುಕಾ ಪತ್ನಿ ಗರ್ಭಿಣಿ ಆಗಿದ್ದಾರೆ. ಕುಟುಂಬಕ್ಕೆ ನ್ಯಾಯ ಒದಗಿಸಬೇಕು, ಉದ್ಯೋಗ ಕೊಡಿಸಬೇಕು ಎಂಬ ಬೇಡಿಕೆ ಇದೆ. ಸಿಎಂ ಜೊತೆ ಚರ್ಚೆ ಮಾಡ್ತೀನಿ ಅಂತ ಹೇಳಿದ್ದೇನೆ. ಯಾವುದೇ ರೀತಿ ತಪ್ಪು ಆಗದ ಹಾಗೆ ತನಿಖೆ ಮಾಡಿ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ. ಯಾರೂ ರಾಜಕೀಯ ಮಾಡಬಾರದು. ನಮ್ಮ ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯದೆ ಚೆನ್ನಾಗಿ ಕೆಲಸ ಮಾಡಿದ್ದಾರೆ” ಎಂದು ಪರಮೇಶ್ವರ ಈ ಸಂದರ್ಭದಲ್ಲಿ ನುಡಿದರು.

ಸರ್ಕಾರ ಧನಸಹಾಯ ನೀಡಲಿ: ವಿಜಯೇಂದ್ರ

“ರೇಣುಕಾ ಸ್ವಾಮಿ ಹತ್ಯೆ ಅಮಾನವೀಯ ಕೃತ್ಯ. ನಾಗರಿಕ ಸಮಾಜದ ಇದನ್ನು ಬೆಂಬಲಿಸಲು ಸಾಧ್ಯ ಇಲ್ಲ. ಪ್ರತಿಯೊಬ್ಬರೂ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸಬೇಕು. ಅವರ ಕುಟುಂಬ ನೋಡಿ ದುಃಖ ಆಗುತ್ತಿದೆ. ಆ ಕುಟುಂಬಕ್ಕೆ ಧೈರ್ಯ ತುಂಬುವ ಕೆಲಸ ಆಗಬೇಕು. ರೇಣುಕಾ ಸ್ವಾಮಿ ಪತ್ನಿ 4 ತಿಂಗಳ ಗರ್ಭಿಣಿ. ಅವರಿಗೆ ಸರ್ಕಾರಿ ಉದ್ಯೋಗ ಜೊತೆಗೆ ಪರಿಹಾರ ಕೊಡಬೇಕು. ಯಾರೇ ಇದ್ದರೂ ತನಿಖೆ ಸರಿಯಾದ ರೀತಿಯಲ್ಲಿ ಆಗಬೇಕು. ಯಾವ ಒತ್ತಡಕ್ಕೂ ಮಣಿಯದೆ ತಪ್ಪಿತಸ್ತರಿಗೆ, ಕೊಲೆಗಡುಕರಿಗೆ ಶಿಕ್ಷೆ ಆಗಬೇಕು. ಪ್ರಕರಣದ ಬಗ್ಗೆ ಇಡೀ ದೇಶದಲ್ಲಿ ಚರ್ಚೆ ಆಗುತ್ತಿದ್ದು, ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು” ಎಂದು ಮೃತನ ಮನೆಗೆ ಭೇಟಿ ನೀಡಿದ ಬಳಿಕ ಬಿ.ವೈ ವಿಜಯೇಂದ್ರ ನುಡಿದರು.

“ನಾನು ಇಲ್ಲಿ ರಾಜಕೀಯ ಬೆರೆಸಲು ಹೋಗುವುದಿಲ್ಲ. ಸಿಎಂ ಕೂಡಲೇ ಪರಿಹಾರ ಕೊಡುವ ನಿರ್ಧಾರ ಮಾಡಬೇಕು. ಪಕ್ಷದ ವತಿಯಿಂದ 2 ಲಕ್ಷ ರೂ. ಚೆಕ್ ಕೊಟ್ಟಿದ್ದೇವೆ. ಪರಿಹಾರ ಜೊತೆ ಜೊತೆಗೆ ಸರ್ಕಾರದ ಉದ್ಯೋಗವೂ ಬೇಕಿದೆ” ಎಂದು ಅವರು ನುಡಿದರು. ಅವರ ಜೊತೆಗೆ ಸಂಸದ ಗೋವಿಂದ ಕಾರಜೋಳ ಕೂಡ ಇದ್ದರು.

ಇದನ್ನೂ ಓದಿ: Renuka Swamy Murder: ಸಿಸಿಟಿವಿ ದಾಖಲೆ ಸಂಪೂರ್ಣ ನಾಶ ಮಾಡಿದ ಪಾತಕಿಗಳು! ಆ ಭಯಾನಕ ಶೆಡ್‌ನಲ್ಲಿದೆ ಇನ್ನಷ್ಟು ರಹಸ್ಯ!

Continue Reading

Latest

Job News: ಕೇಂದ್ರ ಸರ್ಕಾರದಿಂದ ‘ಎಲೆಕ್ಟ್ರಾನಿಕ್’ ಯೋಜನೆ;‌ 5 ವರ್ಷಗಳಲ್ಲಿ 50 ಲಕ್ಷ ಉದ್ಯೋಗ ಸೃಷ್ಟಿ!

Job News: ಕೇಂದ್ರ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಎಲೆಕ್ಟ್ರಾನಿಕ್ ಉತ್ಪಾದನೆಯನ್ನು (Electronic Manufacturing) ದ್ವಿಗುಣಗೊಳಿಸುವ ಸಾಧ್ಯತೆ ಇದೆ. ಆ ಮೂಲಕ ಯುವ ಜನತೆಗೆ ಬೃಹತ್ ಉದ್ಯೋಗವಕಾಶವನ್ನು ಕಲ್ಪಿಸಲಿದೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ಕೇಂದ್ರ ಸರ್ಕಾರವು ಎಲೆಕ್ಟ್ರಾನಿಕ್ ಉತ್ಪಾದನಾ ವಲಯದಲ್ಲಿ ಉದ್ಯೋಗಗಳನ್ನು ಸೃಷ್ಟಿಸುವ ಯೋಜನೆ ರೂಪಿಸುತ್ತಿದೆ. ಮುಂದಿನ ಐದು ವರ್ಷಗಳಲ್ಲಿ ಭಾರತದ ಎಲೆಕ್ಟ್ರಾನಿಕ್ ಉತ್ಪಾದನಾ ವಲಯದ ಉದ್ಯೋಗಿಗಳನ್ನು 25 ಲಕ್ಷದಿಂದ ಸುಮಾರು 50 ಲಕ್ಷಕ್ಕೆ ದ್ವಿಗುಣಗೊಳಿಸುವ ಗುರಿ ಸರ್ಕಾರಕ್ಕಿದೆ.

VISTARANEWS.COM


on

Job News
Koo

ನವದೆಹಲಿ: ದೇಶದಲ್ಲಿ ಯುವ ಜನರ (Job News) ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸುತ್ತಿದೆ. ಮುಖ್ಯವಾಗಿ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಮೂಲಗಳ ಪ್ರಕಾರ, ಕೇಂದ್ರ ಸರ್ಕಾರವು ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಎಲೆಕ್ಟ್ರಾನಿಕ್ ಉತ್ಪಾದನೆಯನ್ನು ದ್ವಿಗುಣಗೊಳಿಸುವ ಗುರಿ ಹೊಂದಿದೆ. ಆ ಮೂಲಕ ಬೃಹತ್ ಉದ್ಯೋಗವಕಾಶವನ್ನು ಕಲ್ಪಿಸಲಿದೆ.

ದೇಶದ ಪ್ರಸ್ತುತ ಎಲೆಕ್ಟ್ರಾನಿಕ್ ರಫ್ತು 125-130 ಬಿಲಿಯನ್ ಡಾಲರ್‌ ಆಗಿದೆ. ಮುಂದಿನ ಐದು ವರ್ಷಗಳಲ್ಲಿ ಭಾರತದ ಎಲೆಕ್ಟ್ರಾನಿಕ್ ಉತ್ಪಾದನೆಯು 250 ಶತಕೋಟಿ ಡಾಲರ್‌ ತಲುಪುವ ಸಾಧ್ಯತೆ ಎಂದು ಸಚಿವಾಲಯದ ಮೂಲಗಳಿಂದ ತಿಳಿದುಬಂದಿದೆ. ಹಾಗೆಯೇ, ಪ್ರಸ್ತುತ ಎಲೆಕ್ಟ್ರಾನಿಕ್ ಉದ್ಯಮದಲ್ಲಿ 25 ಲಕ್ಷ ಮಂದಿ ಉದ್ಯೋಗಿಗಳಿದ್ದಾರೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಎಲೆಕ್ಟ್ರಾನಿಕ್ ಉತ್ಪಾದನಾ ವಲಯದಲ್ಲಿ ಉದ್ಯೋಗಗಳನ್ನು ಸೃಷ್ಟಿಸುವ ಯೋಜನೆ ರೂಪಿಸುತ್ತಿದೆ. ಆ ಮೂಲಕ ಮುಂದಿನ ಐದು ವರ್ಷಗಳಲ್ಲಿ ಭಾರತದ ಎಲೆಕ್ಟ್ರಾನಿಕ್ ಉತ್ಪಾದನಾ ವಲಯದ ಉದ್ಯೋಗಿಗಳನ್ನು 25 ಲಕ್ಷದಿಂದ ಸುಮಾರು 50 ಲಕ್ಷಕ್ಕೆ ದ್ವಿಗುಣಗೊಳಿಸುವ ಗುರಿ ಸರ್ಕಾರಕ್ಕಿದೆ ಎನ್ನಲಾಗಿದೆ.

“ಡಿಜಿಟಲ್ ತಂತ್ರಜ್ಞಾನಕ್ಕೆ ಸೇವೆಗಳನ್ನು ಒದಗಿಸುವಲ್ಲಿ ನಮ್ಮ ಗಮನವು ಒಂದೇ ಆಗಿರುತ್ತದೆ. ನಮ್ಮ ಗಮನ ದೊಡ್ಡ ಪ್ರಮಾಣದ ಎಲೆಕ್ಟ್ರಾನಿಕ್ ಉತ್ಪಾದನೆಯನ್ನು ಹೆಚ್ಚಿಸುವುದರ ಮೇಲೆ ಇದೆ. ಆ ಗಮನ ನಿಖರವಾಗಿರುತ್ತದೆ. ಮತ್ತು ಆ ಗುರಿಯನ್ನು ವೇಗವಾಗಿ ತಲುಪುತ್ತೇವೆ” ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಭಾರತವು ಈಗಾಗಲೇ ಆಮದು ಪರ್ಯಾಯವನ್ನು ಬಿಟ್ಟು ಸ್ವಾವಲಂಬಿಯಾಗಿ ಇರಲು ಪ್ರಯತ್ನಿಸುತ್ತಿದೆ, ಮೊಬೈಲ್ ಪೋನ್ ಗಳಂತಹ ಕೆಲವು ವಿಭಾಗಗಳನ್ನು ರಫ್ತು ಮಾಡುವ ಹಂತಕ್ಕೆ ಬಂದಿದೆ. ಆದರೆ ಲ್ಯಾಪ್ ಟಾಪ್‌ಗಳಿಗೆ ಸಂಬಂಧಿಸಿದಂತೆ ಭಾರತವು ಅದನ್ನು ನಮ್ಮಲ್ಲೇ ಉತ್ಪಾದಿಸುವ ಹಂತದಲ್ಲಿದೆ. ಕೇಂದ್ರ ಸರ್ಕಾರವು ವಿವಿಧ ಪ್ರೋತ್ಸಾಹ ಯೋಜನೆಗಳ ಮೂಲಕ ದೇಶಿಯ ಎಲೆಕ್ಟ್ರಾನಿಕ್ ಉತ್ಪಾದನೆಯನ್ನು ಸಕ್ರಿಯವಾಗಿ ಉತ್ತೇಜಿಸುತ್ತಿದೆ. ಪ್ರಧಾನಿ ಮೋದಿಯವರ ನೇತೃತ್ವದ ಸರ್ಕಾರ 760 ಶತಕೋಟಿ ರೂಪಾಯಿಗಳ ಹಣಕಾಸಿನ ವೆಚ್ಚವನ್ನು ಎಲೆಕ್ಟ್ರಾನಿಕ್ ಉದ್ಯೋಗಿಗಳ ಬದ್ಧತೆಗೆ ವಿನಿಯೋಗಿಸುತ್ತಿದೆ. ನಿರುದ್ಯೋಗ ನಿವಾರಣೆಯ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.

ಚೀನಾ ಮತ್ತು ಹಾಂಗ್‌ಕಾಂಗ್ ದೇಶಗಳು ಭಾರತದಿಂದ ಕ್ರಮವಾಗಿ 44 ಪ್ರತಿಶತ ಮತ್ತು 16 ಪ್ರತಿಶತದಷ್ಟು ಒಟ್ಟು ಎಲೆಕ್ಟ್ರಾನಿಕ್ ಸಾಧನಗಳನ್ನು ಆಮದು ಮಾಡಿಕೊಳ್ಳುತ್ತಿವೆ. ಮತ್ತೊಂದೆಡೆ ಭಾರತದಿಂದ ತಯಾರಿಸಿದ ಮೊಬೈಲ್ ಪೋನ್‌ಗಳು ಮತ್ತು ಎಲೆಕ್ಟ್ರಾನಿಕ್ ನಿಯಂತ್ರಣ ಘಟಕಗಳು ಯುನೈಟೆಡ್ ಸ್ಟೇಟ್ಸ್ ಮತ್ತು ಯುಎಇ ಹೆಚ್ಚು ರಪ್ತಾಗುತ್ತಿದೆ.

ಇದನ್ನೂ ಓದಿ: NEET UG 2024: ಮಗಳ ಜೊತೆ ಸೇರಿ ನೀಟ್ ಯುಜಿ ಪರೀಕ್ಷೆ ಬರೆದು ಪಾಸಾದ ಅಪ್ಪ!

ಭಾರತದಲ್ಲಿ ಎಲೆಕ್ಟ್ರಾನಿಕ್ ಉತ್ಪಾದನಾ ವಲಯದ ಪರಿವರ್ತನೆಯಿಂದ ಭಾರತವು ಜಾಗತಿಕ ಎಲೆಕ್ಟ್ರಾನಿಕ್ ಉತ್ಪಾದನಾ ಕೇಂದ್ರವಾಗಿ ಸ್ಥಾನ ಪಡೆಯಲಿದೆ. ಇದರಿಂದ ದೇಶದ ಆರ್ಥಿಕ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಮತ್ತು ತಾಂತ್ರಿಕ ಆವಿಷ್ಕಾರ ಬಲಗೊಳ್ಳಲಿದೆ, ಅದಕ್ಕಾಗಿ ಭಾರತ ವಿವಿಧ ಯೋಜನೆಗಳನ್ನು ಪ್ರಕಟಿಸುತ್ತಿದೆ. ಇದಲ್ಲದೇ ದೇಶದಲ್ಲಿ ಸುಸ್ಥಿರ ಅರೆವಾಹಕ ಮತ್ತು ಪ್ರದರ್ಶನ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ದೃಷ್ಟಿಯೊಂದಿಗೆ 10 ಶತಕೋಟಿ ಡಾಲರ್‌ ಪ್ರೋತ್ಸಾಹಕ ವೆಚ್ಚದೊಂದಿಗೆ ಸರ್ಕಾರವು ಸೆಮಿಕಾನ್ ಇಂಡಿಯಾ ಕಾರ್ಯಕ್ರಮನ್ನು ಪರಿಚಯಿಸಿದೆ.

Continue Reading

ಕರ್ನಾಟಕ

Actor Darshan: 2021ರಲ್ಲಿ ದರ್ಶನ್ ನನ್ನ ಮಾತು ಕೇಳಿದ್ದಿದ್ರೆ ಹೀಗಾಗುತ್ತಿರಲಿಲ್ಲ: ಇಂದ್ರಜಿತ್ ಲಂಕೇಶ್

Actor Darshan: ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯದ ಜತೆಗೆ ಆರ್ಥಿಕವಾಗಿ ಸಹಾಯ ಮಾಡಬೇಕು. 2021ರಲ್ಲಿ ದರ್ಶನ್ ನನ್ನ ಮಾತು ಕೇಳಿದ್ದಿದ್ದರೆ ಹೀಗಾಗುತ್ತಿರಲಿಲ್ಲ. ಅವರ ಒಳ್ಳೆಯದಕ್ಕೆ ನಾನು ಹೇಳಿದ್ದೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ (Indrajit Lankesh) ಹೇಳಿದ್ದಾರೆ.

VISTARANEWS.COM


on

Actor Darshan
Koo

ಮಂಡ್ಯ: ನಾನು ಈಗಾಗಲೇ ದರ್ಶನ್‌ (Actor Darshan) ಬಂಧನದ ಬಗ್ಗೆ ಮಾತನಾಡಿದ್ದೇನೆ. 2021ರಲ್ಲೂ ದರ್ಶನ್ ಬಗ್ಗೆ ಮಾತನಾಡಿದ್ದೆ. ಈ ಹಿಂದೆ ನಾನು ಏಕಾಂಗಿಯಾಗಿ ಧ್ವನಿ ಎತ್ತಿದ್ದೆ. ಅವತ್ತು ಸುಧಾರಣೆಯಾಗಿದ್ದರೆ ಈತರಹ ಅನಾಹುತ ಆಗುತ್ತಿರಲಿಲ್ಲ, ನನ್ನ ಮಾತು ಕೇಳಿದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ (Indrajit Lankesh) ಹೇಳಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ವಿಚಾರ ಪ್ರತಿಕ್ರಿಯಿಸಿ, ರೇಣುಕಾಸ್ವಾಮಿ ಪತ್ನಿಗೆ ನ್ಯಾಯ ಕೊಡಿಸಬೇಕು. ಆಯಮ್ಮ ಗರ್ಭಿಣಿ, ವಿಧವೆ ಆಗುವ ಕನಸನ್ನು ಕಂಡಿರಲಿಲ್ಲ. ಇನ್ನು ಹುಟ್ಟದ ಮಗುವಿಗೆ ಭವಿಷ್ಯ ಇಲ್ಲದಾಗಿದೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯದ ಜತೆಗೆ ಆರ್ಥಿಕವಾಗಿ ಸಹಾಯ ಮಾಡಬೇಕು. ಆ ಕುಟುಂಬಕ್ಕೆ ನಾನು ವೈಯಕ್ತಿಕವಾಗಿ 20 ಸಾವಿರ ಕೊಡುತ್ತಿದ್ದೇನೆ. ಎಲ್ಲರೂ ಮುಂದೆ ಬಂದು ಸಹಾಯ ಮಾಡಿ ಮಗುವಿಗೆ ಭವಿಷ್ಯ ಕಟ್ಟಿಕೊಡಬೇಕು ಎಂದು ಮನವಿ ಮಾಡಿದರು.

ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಈ ಬಗ್ಗೆ ನಾನು ಮಾತನಾಡುವುದಕ್ಕೆ ಇಷ್ಟ ಇಲ್ಲ. 2021ರಲ್ಲಿ ದರ್ಶನ್ ನನ್ನ ಮಾತು ಕೇಳಿದ್ದಿದ್ದರೆ ಹೀಗಾಗುತ್ತಿರಲಿಲ್ಲ. ಅವರ ಒಳ್ಳೆಯದಕ್ಕೆ ನಾನು ಹೇಳಿದ್ದೆ, ವೈಯಕ್ತಿಕವಾಗಿ ನನಗೂ ಅವರಿಗೂ ದ್ವೇಷ ಇಲ್ಲ. ಅವರ ಜತೆ ಎರಡು ಸಿನಿಮಾ ಮಾಡಿದ್ದೆ. ಲಂಕೇಶ್ ಪತ್ರಿಕೆ ಸಿನಿಮಾ ಮೂಲಕ ಅಡ್ವಾನ್ಸ್ ಕೊಟ್ಟಾಗ ಕಾರು ತೆಗೆದುಕೊಂಡಿದ್ದರು, ಇವತ್ತಿಗೂ ಅವರತ್ರ ಸ್ಕೋಡಾ 171 ಕಾರು ಇದೆ. ದರ್ಶನ್ ಬೆಳೆದು ಬಂದ ದಾರಿ ಬಹಳ ಕಷ್ಟವಾಗಿತ್ತು. ಈ ತರಹದ ಪರಿಸ್ಥಿತಿ ಆಗಬಾರದಿತ್ತು. 2021ರಲ್ಲಿ ಏಕಾಂಗಿಯಾಗಿ ಧ್ವನಿ ಎತ್ತಿದ್ದೆ. ಅವತ್ತು ಸುಧಾರಣೆಯಾಗಿದ್ರೆ ಈತರಹ ಅನಾಹುತ ಆಗುತ್ತಿರಲಿಲ್ಲ. ನನ್ನ ಮಾತು ಕೇಳಿದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಹೇಳಿದರು.

ರೇಣುಕಾಸ್ವಾಮಿ ಕುಟುಂಬಕ್ಕೆ ಅನ್ಯಾಯ ಆಗಿದೆ, ನ್ಯಾಯ ಕೊಡಿಸಿ. ಈ ಘಟನೆ ನಡೆಯೋದಕ್ಕೆ ಸಾಮಾಜಿಕ ಜಾಲತಾಣವೇ ಕಾರಣ. ಸಾಮಾಜಿಕ ಜಾಲತಾಣ ಇಂದು ಅದ್ಭುತವಾದ ಮಾಧ್ಯಮ. ಆದರೆ ಬಹಳ ದುರ್ಬಳಕೆ ಆಗುತ್ತಿದೆ. ಈ ಘಟನೆ ನಡೆಯೋದಕ್ಕೆ ಸೋಷಿಯಲ್ ಮೀಡಿಯಾವೇ ಕಾರಣ. ಅಶ್ಲೀಲವಾದ ಮೆಸೇಜ್ ಹಾಕದಿದ್ದರೆ ಈ ಘಟನೆಯೇ ನಡೆಯುತ್ತಿರಲಿಲ್ಲ. ಸರ್ಕಾರ ಸಾಮಾಜಿಕ ಜಾಲತಾಣದ ಬಗ್ಗೆ ಹೆಚ್ಚು ಗಮನಹರಿಸಬೇಕು. ಪತ್ರಕರ್ತರ ಮೇ ಹೇಗೆ ಮಾನನಷ್ಟ ಕೇಸ್ ಹಾಕುತ್ತಾರೆ, ಹಾಗೆಯೇ ಸೋಷಿಯಲ್ ಮೀಡಿಯಾದಲ್ಲೂ ತಪ್ಪು ಮಾಹಿತಿ ಅಥವಾ ಅಶ್ಲೀಲ ಮೆಸೇಜ್ ಹಾಕುವವರಿಗೂ ಕೇಸ್ ಹಾಕಬೇಕು. ಮಂತ್ರಿ, ಸಿಎಂ ಮನೆಯಲ್ಲಿ ಕ್ರೈಂ ನಡೆದರೆ ಕ್ರಮ ಕೈಗೊಳ್ಳುತ್ತಾರೆ. ಬೇರೆ ಮನೆಯವರ ಮನೆಯಲ್ಲಿ ನಗುತ್ತಾ ಕೂರುತ್ತಾರೆ. ಸಿಎಂ ಸಿದ್ದರಾಮಯ್ಯನವರು ಸೈಬರ್ ಕ್ರೈಮ್ ಪೊಲೀಸರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ಚಿತ್ರರಂಗದಿಂದ ದರ್ಶನ್ ಬ್ಯಾನ್ ಮಾಡಬೇಕೆಂಬ ಒತ್ತಾಯದ ಬಗ್ಗೆ ಪ್ರತಿಕ್ರಿಯಿಸಿ, ಬ್ಯಾನ್ ಅನ್ನೋ ಶಬ್ದವನ್ನು ಯಾರೂ ಉಪಯೋಗಿಸಿಕೊಳ್ಳಬಾರದು. ಯಾವುದೇ ಸಂದರ್ಭದಲ್ಲೂ ಯಾರನ್ನೂ ಬ್ಯಾನ್ ಮಾಡಬಾರದು. ಈ ಹಿಂದೆ ಮಹಿಳೆಯರನ್ನು ಬ್ಯಾನ್ ಮಾಡಿದ್ದರು, ಆ ರೀತಿ ಮಾಡಬಾರದಿತ್ತು. ಕೋರ್ಟ್ ಕೂಡ ಕೆಲಸ ಇಲ್ಲದೇ ಯಾರೂ ಇರಬಾರದು ಅಂತ ಹೇಳುತ್ತೆ. ಪ್ರತಿಯೊಬ್ಬರೂ ಜೀವಿಸೋದಕ್ಕೆ ಕೆಲಸ ಮಾಡಲೇಬೇಕು. ಘಟನೆಯನ್ನು ಈಗಾಗಲೇ ನಾವು ಖಂಡಿಸಿದ್ದೇವೆ. ತನಿಖೆ ನಡೆಯುತ್ತಿದೆ, ಚಾರ್ಜ್ ಶೀಟ್ ಹಾಕುತ್ತಾರೆ. ನಂತರ ಈ ಬಗ್ಗೆ ಮಾತನಾಡುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ | Murder Case : ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದು ನೇಣಿಗೆ ಶರಣಾದ ಪತಿ

ಇಂದ್ರಜಿತ್‌ ಲಂಕೇಶ್‌ಗೆ ಬಂದಿದ್ದವು ಬೆದರಿಕೆ ಕರೆಗಳು

2021ರಲ್ಲಿ ನಟ ದರ್ಶನ್ ಪ್ರಚೋದನೆಯಿಂದ ಅವರ ಹಿಂಬಾಲಕರು, ಬೆಂಬಲಿಗರು ನನಗೆ ಮೊಬೈಲ್ ಕರೆ ಹಾಗೂ ಮೆಸೇಜ್‌ಗಳ ಮೂಲಕ ಬೆದರಿಕೆ ಹಾಕುತ್ತಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪಿಸಿದ್ದರು. ಬೆದರಿಕೆ ಕರೆಗಳು ಬಂದಿದ್ದ ಬಗ್ಗೆ ಕ್ರಮ ಕೈಗೊಳ್ಳಲು ಪೊಲೀಸ್‌ ಕಮಿಷನರ್‌ಗೆ ಇಂದ್ರಜಿತ್‌ ಲಂಕೇಶ್‌ ದೂರು ನೀಡಿದ್ದರು.

Continue Reading

ಪ್ರಮುಖ ಸುದ್ದಿ

Actor Darshan: ರಕ್ತ ಕಾರಿಕೊಂಡು ಸತ್ತ ದರ್ಶನ್‌ ಫಾರಂ ಹೌಸ್ ಮ್ಯಾನೇಜರ್;‌ ಏನಿದು ಮತ್ತೊಂದು ನಿಗೂಢ?

actor darshan: ದರ್ಶನ್‌ ಮ್ಯಾನೇಜರ್‌ (Darshan manager) ಆಗಿದ್ದ ಶ್ರೀಧರ್‌ ಎಂಬಾತ ಶಂಕಾಸ್ಪದವಾಗಿ ರಕ್ತ ಕಾರಿಕೊಂಡು ಸತ್ತಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

VISTARANEWS.COM


on

actor darshan manager death 3
Koo

ಆನೇಕಲ್‌: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renuka Swamy Murder) ನಟ ದರ್ಶನ್‌ (Actor Darshan) ಪೊಲೀಸ್‌ ವಿಚಾರಣೆ ಎದುರಿಸುತ್ತಿರುವ ಹೊತ್ತಿನಲ್ಲಿಯೇ, ದರ್ಶನ್‌ಗೇ ಸಂಬಂಧಿಸಿದ ಇನ್ನೊಂದು ಅನುಮಾನಾಸ್ಪದ ಸಾವು (UDR case) ಬಯಲಿಗೆ ಬಂದಿದೆ. ದರ್ಶನ್‌ ಫಾರಂ ಹೌಸ್ ಮ್ಯಾನೇಜರ್‌ (Darshan manager) ಆಗಿದ್ದ ಶ್ರೀಧರ್‌ ಎಂಬಾತ ಶಂಕಾಸ್ಪದವಾಗಿ ರಕ್ತ ಕಾರಿಕೊಂಡು ಸತ್ತಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶ್ರೀಧರ್ (35) ಆತ್ಮಹತ್ಯೆ (self harming) ಮಾಡಿಕೊಂಡ ಮ್ಯಾನೇಜರ್. ಏಪ್ರಿಲ್ 17ನೇ ತಾರೀಕು ಈತ ವಿಷ (poison) ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದ. ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಬಗ್ಗನದೊಡ್ಡಿಯಲ್ಲಿ ಘಟನೆ ನಡೆದಿದೆ. ಬಗ್ಗನದೊಡ್ಡಿಯಲ್ಲಿ ನಟ ದರ್ಶನ್‌ಗೆ ಸೇರಿದ ʼದುರ್ಗ ಫಾರ್ಮ್ ಹೌಸ್ʼ ಇದ್ದು, ಅಲ್ಲಿ ಈತ ಮ್ಯಾನೇಜರ್‌ ಆಗಿದ್ದ. ಸಾವಿಗೆ ಮುನ್ನ ವಿಡಿಯೋ ಮಾಡಿದ್ದು, ಡೆತ್‌ನೋಟ್‌ ಕೂಡ ಬರೆದಿಟ್ಟಿದ್ದಾನೆ.

ಎರಡು ತಿಂಗಳ ಹಿಂದೆ ಈ ಆತ್ಮಹತ್ಯೆ ಘಟಿಸಿದ್ದು, ಪೊಲೀಸರು ಅನುಮಾನಾಸ್ಪದ ಸಾವು (UDR) ದಾಖಲಿಸಿಕೊಂಡಿದ್ದರು. ಫಾರ್ಮ್ ಹೌಸ್ ಪಕ್ಕದಲ್ಲಿಯೇ ಈತ ವಿಷ ಸೇವಿಸಿ ರಕ್ತ ಕಾರಿಕೊಂಡು ಮೃತಪಟ್ಟಿದ್ದಾನೆ. ಬಗ್ಗನದೊಡ್ಡಿಯಲ್ಲಿ ಸುಮಾರು 2 ಎಕರೆ 36 ಗುಂಟೆ ಪ್ರದೇಶದಲ್ಲಿರುವ ಫಾರ್ಮ್ ಹೌಸ್‌ನಲ್ಲಿ ಒಂದು ವರ್ಷ ಕಾಲ ಈತ ಮ್ಯಾನೇಜರ್ ಆಗಿ ಕೆಲಸ ಮಾಡಿದ್ದ. ಫಾರ್ಮ್‌ ಹೌಸ್‌ ಪಕ್ಕದ ಕಲ್ಲು ಬಂಡೆ ಮೇಲೆ ಶ್ರೀಧರ್ ಮೃತದೇಹ ಪತ್ತೆಯಾಗಿತ್ತು. ಶ್ರೀಧರ್ ಮೃತ ದೇಹ ಕಂಡು ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದ.

ಒಂದು ಡೆತ್‌ ನೋಟನ್ನೂ (Death note) ಶ್ರೀಧರ್‌ ಬರೆದಿಟ್ಟಿದ್ದಾನೆ. ತಾನು ಮಾನಸಿಕ ಖಿನ್ನತೆಗೊಳಗಾಗಿ ಸೂಸೈಡ್ ಮಾಡಿಕೊಳ್ಳುತ್ತಿರುವುದಾಗಿ ಅದರಲ್ಲಿ ಬರೆದಿದ್ದಾನೆ. “ನನ್ನ ಸಾವಿಗೆ ನಾನೇ ಕಾರಣ. ಒಂಟಿತನ ಕಾಡುತ್ತಿದೆ. ಬದುಕಿದ್ದು ಮನೆ ಕಟ್ಟಬೇಕು ಎಂದು ಆಸೆ ಇತ್ತು. ಆಗಲಿಲ್ಲ. ನಾನು ಸತ್ತಮೇಲೆ ನನ್ನ ಗೋರಿ ಆದರೂ ಕಟ್ಟಿ” ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ. ಡೆತ್‌ನೋಟನ್ನು ಯಾವುದೇ ಚಿತ್ತು ಕಾಟಿಲ್ಲದೆ ಬರೆದು, ಹೆಸರು ಬರೆದು ಸಹಿ ಹಾಕಿ ಜೊತೆಗೆ ಹೆಬ್ಬೆಟ್ಟು ಗುರುತನ್ನೂ ಒತ್ತಿದ್ದಾನೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ UDR ಪ್ರಕರಣ ದಾಖಲಾಗಿದೆ.

“ನನ್ನ ಸಾವಿಗೆ ಬೇರೆ ಯಾರೂ ಕಾರಣರಲ್ಲ” ಎಂದು ಮತ್ತೆ ಮತ್ತೆ ಡೆತ್‌ನೋಟ್‌ನಲ್ಲಿ ಶ್ರೀಧರ್‌ ಉಲ್ಲೇಖಿಸಿದ್ದಾನೆ. “ನನ್ನ ಅಮ್ಮ ಅಪ್ಪ ಅಕ್ಕಂದಿರು ಯಾರಾದರೂ ನನ್ನ ಸಾವಿನ ಬಗ್ಗೆ ಅನುಮಾನವಿದೆ ಎಂದು ಕಂಪ್ಲೇಂಟ್‌ ಕೊಟ್ಟರೆ ಅದನ್ನು ತಗೋಬೇಡಿ. ನಾನು ತುಂಬಾ ಯೋಚನೆ ಮಾಡಿ ನನ್ನ ಪ್ರಾಣ ಕಳೆದುಕೊಳ್ತಾ ಇದೇನೆ” ಎಂದು ಬರೆದಿದ್ದಾನೆ. ಇದೇ ಈಗ ಅನುಮಾನಕ್ಕೆ ಕಾರಣವಾಗಿದೆ. ದರ್ಶನ್‌ ಹೆಸರನ್ನು ಎಲ್ಲೂ ಈತ ಉಲ್ಲೇಖಿಸಿಲ್ಲ.

ಸಾಕ್ಷಿದಾರರಾಗಿ ಬಳಕೆ

ದರ್ಶನ್ ಆಂಡ್ ಗ್ಯಾಂಗ್‌ನಿಂದ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಲ್ಲದೇ ಹಲವು ಮಂದಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಅವರ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಹೇಳಿಕೆ ನೀಡಿದವರನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಆರೋಪಿಗಳು ಸೇರಿ 27ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಲಾಗಿದೆ. 27 ಮಂದಿಯಲ್ಲಿ 17 ಮಂದಿ ಬಂಧಿತ ಆರೋಪಿಗಳು. ನಟ ದರ್ಶನ್, ಪವಿತ್ರ ಗೌಡ ಸೇರಿ 17 ಮಂದಿ ಬಂಧಿತ ಆರೋಪಿಗಳು. ಇನ್ನುಳಿದ 10 ಮಂದಿಯನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ. ಸಾಕ್ಷಿಗಳು ಎಂದು ಈವರೆಗೆ 10 ಮಂದಿಯ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದಾರೆ.

ಘಟನಾ ಸ್ಥಳದಲ್ಲಿ ಹಾಜರಿದ್ದ ಕೆಲವರು, ಬೇರೆಬೇರೆ ಕಡೆಗಳಲ್ಲಿ ಪ್ರತ್ಯಕ್ಷ ಪರೋಕ್ಷವಾಗಿ ಕಂಡು ಬಂದ ವ್ಯಕ್ತಿಗಳ ವಿಚಾರಣೆ ನಡೆಸಲಾಗಿದೆ. ಅವರನ್ನು ರೇಣುಕಾಸ್ವಾಮಿ ಕೊಲೆ ಸಂಬಂಧ ಸಾಕ್ಷಿಗಳು ಎಂದು ಪರಿಗಣಿಸಿ ಹೇಳಿಕೆ ದಾಖಲು ಮಾಡಲಾಗಿದೆ. ಶೆಡ್ ಬಳಿ ಇದ್ದ ಇನ್ನೂ ಕೆಲವರ ಹೇಳಿಕೆ ಪಡೆದುಕೊಂಡಿದ್ದಾರೆ. ಘಟನೆ ಹೇಗಾಯ್ತು, ಯಾರು ಯಾರು ಇದ್ದರು, ಎಷ್ಟು ಜನ ಸೇರಿದ್ದರು, ದರ್ಶನ್ ಎಷ್ಟು ಹೊತ್ತಿಗೆ ಬಂದಿದ್ದು, ಯಾವಯಾವ ಆಯುಧಗಳಿಂದ ಹಲ್ಲೆ ಮಾಡಿದರು, ಹೀಗೆ ಹಲವು ವಿಚಾರಗಳ ಬಗ್ಗೆ ಹೇಳಿಕೆ ದಾಖಲಿಸಿದ್ದಾರೆ. ಶೆಡ್‌ನ ಸಿಸಿ ಕ್ಯಾಮೆರಾ ಫೂಟೇಜ್‌ಗಳನ್ನು ದರ್ಶನ್‌ ಗ್ಯಾಂಗ್‌ ನಾಶ ಮಾಡಿರುವ ಹಿನ್ನೆಲೆಯಲ್ಲಿ, ಈ ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ಮಹತ್ವ ಪಡೆದುಕೊಳ್ಳಲಿದೆ.

ಇದನ್ನೂ ಓದಿ: Actor Darshan: ಹಾಸ್ಯನಟ ಚಿಕ್ಕಣ್ಣಗೆ ಮೂರು ಗಂಟೆ ಪೊಲೀಸರ ಡ್ರಿಲ್‌, ರೇಣುಕಾಸ್ವಾಮಿ ಕೊಲೆ ವಿಷಯ ಬಂತಾ ಪಾರ್ಟಿಯಲ್ಲಿ?

Continue Reading
Advertisement
Self Harming
ಕೋಲಾರ6 mins ago

Self Harming: ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಇನ್ಫೋಸಿಸ್‌ ಉದ್ಯೋಗಿ ಆತ್ಮಹತ್ಯೆ; ರೈಲಿಗೆ ತಲೆಕೊಟ್ಟ ಫ್ಲಿಪ್‌ಕಾರ್ಟ್‌ ಉದ್ಯೋಗಿ

Actor Darshan
ಸಿನಿಮಾ18 mins ago

Actor Darshan: ನನ್ನ ಗುರು ದರ್ಶನ್ ಈ ಕೃತ್ಯ ಎಸಗಿದ್ದಾರೆಂದರೆ ನಂಬಲಾಗುತ್ತಿಲ್ಲ; ರಚಿತಾ ರಾಮ್

renuka swamy murder case by vijayendra g parameshwara
ಕ್ರೈಂ29 mins ago

Renuka Swamy Murder: ರೇಣುಕಾ ಸ್ವಾಮಿ ಮನೆಗೆ ಗೃಹ ಸಚಿವ ಪರಮೇಶ್ವರ್‌, ಪ್ರತಿಪಕ್ಷ ನಾಯಕ ವಿಜಯೇಂದ್ರ ಭೇಟಿ

Igor Stimac sacked
ಕ್ರೀಡೆ37 mins ago

Igor Stimac sacked: ಭಾರತದ ಫುಟ್ಬಾಲ್​ ಕೋಚ್​ ಹುದ್ದೆಯಿಂದ ಸ್ಟಿಮಾಕ್‌ ಕಿಕ್​ ಔಟ್​; ಕಾರಣವೇನು?​

Deepika Padukone
ಸಿನಿಮಾ46 mins ago

Deepika Padukone: ಅಧಿಕ ಸಂಭಾವನೆ ಪಡೆಯುವ ನಾಯಕಿಯರಲ್ಲಿ ಕನ್ನಡತಿ ದೀಪಿಕಾ ನಂ. 1; ಪ್ರತಿ ಚಿತ್ರಕ್ಕೆ ಇವರು ಎಷ್ಟು ಹಣ ಪಡೆಯುತ್ತಾರೆ?

NIA Raid
ಕರ್ನಾಟಕ49 mins ago

NIA Raid: ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ; ಶಿರಸಿಯಲ್ಲಿ ನಿಷೇಧಿತ ಪಿಎಫ್‌ಐ ಸದಸ್ಯನ ಬಂಧನ

Job News
Latest1 hour ago

Job News: ಕೇಂದ್ರ ಸರ್ಕಾರದಿಂದ ‘ಎಲೆಕ್ಟ್ರಾನಿಕ್’ ಯೋಜನೆ;‌ 5 ವರ್ಷಗಳಲ್ಲಿ 50 ಲಕ್ಷ ಉದ್ಯೋಗ ಸೃಷ್ಟಿ!

Amala Paul
ಸಿನಿಮಾ1 hour ago

Amala Paul: ಮದುವೆಯಾದ 8 ತಿಂಗಳಿಗೇ ಗಂಡು ಮಗುವಿಗೆ ಜನ್ಮ ನೀಡಿದ ಸುದೀಪ್‌ ಚಿತ್ರದ ನಾಯಕಿ

Prajwal Revanna case
ಕ್ರೈಂ1 hour ago

Prajwal Revanna Case: ಪ್ರಜ್ವಲ್ ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ;‌ ʼಎಸ್‌ಐಟಿ ಅಧಿಕಾರಿಗಳು ಸರಿಯಾಗಿ ನೋಡ್ಕೋತಿಲ್ಲʼ ಎಂದು ದೂರು

Udupi Gang War
ಉಡುಪಿ2 hours ago

Udupi Gang War : ಉಡುಪಿಯಲ್ಲಿ ನಿಲ್ಲದ ಗ್ಯಾಂಗ್ ವಾರ್; ಇಬ್ಬರು ಪುಂಡರು ಅಂದರ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌