ವಿಸ್ತಾರ Exclusive | ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಯಾವಾಗ?: ಮಂದಿರ ನಿರ್ಮಾಣ ಉಸ್ತುವಾರಿ ಗೋಪಾಲ್‌ ನಾಗರಕಟ್ಟೆ ಸಂದರ್ಶನ - Vistara News

ಕರ್ನಾಟಕ

ವಿಸ್ತಾರ Exclusive | ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಯಾವಾಗ?: ಮಂದಿರ ನಿರ್ಮಾಣ ಉಸ್ತುವಾರಿ ಗೋಪಾಲ್‌ ನಾಗರಕಟ್ಟೆ ಸಂದರ್ಶನ

ಕೋಟ್ಯಂತರ ಹಿಂದೂಗಳು ಕಾತರದಿಂದ ಕಾಯುತ್ತಿರುವ ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಉಸ್ತುವಾರಿ ಆಗಿರುವ ಗೋಪಾಲ ನಾಗರಕಟ್ಟೆ ಅವರು, ದೇವಾಲಯದ ಅಧಿಕೃತ ಮತ್ತು ಲೇಟೆಸ್ಟ್ ಮಾಹಿತಿಯನ್ನು ವಿಸ್ತಾರ ನ್ಯೂಸ್ ಜತೆ ಹಂಚಿಕೊಂಡಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Vistara Exclusive
Vistara Exclusive

ಸಂದರ್ಶನ: ಅಭಿಷೇಕ್ ಬಿ.ವಿ, ವಿಸ್ತಾರ ನ್ಯೂಸ್‌
ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣದ ಕಾರ್ಯ ಭರದಿಂದ ಸಾಗುತ್ತಿದೆ. ದೇಶದ ಪರಮ ಶ್ರದ್ಧಾ ಭಕ್ತಿಯ ಕೇಂದ್ರಗಳಲ್ಲಿ ಒಂದಾಗಿ ತಲೆ ಎತ್ತುತ್ತಿರುವ ಈ ದೇಗುಲವನ್ನು ಅತ್ಯಂತ ಅಚ್ಚುಕಟ್ಟಾಗಿ ಮತ್ತು ಅತ್ಯಂತ ಸೂಕ್ಷ್ಮ ಧಾರ್ಮಿಕ ಮತ್ತು ತಾಂತ್ರಿಕ ಅಂಶಗಳನ್ನು ಆಧರಿಸಿ ನಿರ್ಮಿಸಲಾಗುತ್ತಿದೆ. ಈ ದೇವಾಲಯ ನಿರ್ಮಾಣ ಕಾರ್ಯ ಈಗ ಯಾವ ಹಂತದಲ್ಲಿದೆ, ಯಾವಾಗ ರಾಮನ ದರ್ಶನಕ್ಕೆ ಅವಕಾಶ ಸಿಗಬಹುದು, ಭವ್ಯ ಮಂದಿರದ ನಿರ್ಮಾಣ ಯಾವಾಗ ಪೂರ್ಣವಾಗಲಿದೆ ಎಂಬೆಲ್ಲ ವಿಚಾರಗಳಿಗೆ ಸಂಬಂಧಿಸಿ ವಿಸ್ತಾರ ನ್ಯೂಸ್‌ ಜತೆ ವಿಸ್ತೃತವಾಗಿ ಮಾತನಾಡಿದ್ದಾರೆ ರಾಮ ಮಂದಿರ ನಿರ್ಮಾಣದ ಉಸ್ತುವಾರಿಯಾಗಿರುವ ಗೋಪಾಲ ನಾಗರಕಟ್ಟೆ ಅವರು. ಕರ್ನಾಟಕದವರೇ ಆಗಿರುವ ಗೋಪಾಲ ನಾಗರಕಟ್ಟೆ ಅವರು ಆರೆಸ್ಸೆಸ್‌ನ ಪ್ರಚಾರಕರಾಗಿದ್ದು ವಿಶ್ವ ಹಿಂದೂ ಪರಿಷತ್‌ಗೆ ನಿಯೋಜನೆಗೊಂಡಿದ್ದಾರೆ. ಅವರೊಂದಿಗಿನ ಸಂದರ್ಶನದ ಪೂರ್ಣಪಾಠ ಇಲ್ಲಿದೆ.

⭕ಮೂರ್ನಾಲ್ಕು ವರ್ಷ ನೀವು ಅಯೋಧ್ಯೆಯಲ್ಲೇ ಇದ್ದು ರಾಮ ಮಂದಿರ ನಿರ್ಮಾಣ ಕಾರ್ಯ ನೋಡಿಕೊಳ್ಳುತ್ತಿದ್ದೀರಿ. ಅಲ್ಲಿನ ಚಿತ್ರಣ ಯಾವ ರೀತಿ ಇತ್ತು? ಈಗ ಹೇಗಾಗಿದೆ?
✅ದೇವಸ್ಥಾನದ ಕೆಲಸ ಬಹಳ ವೇಗವಾಗಿ ನಡೆಯುತ್ತಿದೆ. 2020ರ ಆಗಸ್ಟ್ 5ರಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ದೇಶದ ಪ್ರಮುಖ ಸಂತರ ಉಪಸ್ಥಿತಿಯಲ್ಲಿ‌ ಭೂಮಿ ಪೂಜೆ ನಡೆದ ನಂತರ ಅಧಿಕೃತವಾಗಿ ಮಂದಿರದ ಕೆಲಸ ಶುರುವಾಯಿತು. ಇವತ್ತು ಹಗಲು ರಾತ್ರಿ ಅಲ್ಲಿ ಕೆಲಸ ನಡೆಯುತ್ತಿದೆ. ಕೆಳಗಡೆ ಬುನಾದಿಯನ್ನು ಹಾಕಿ ಅದಾದ ಮೇಲೆ ಕರ್ನಾಟಕದಿಂದ ತರಿಸಿದ ಗ್ರಾನೈಟ್ ಸ್ಟೋನ್‌ನಿಂದ ಪ್ಲಿಂಥ್ (ಕಟ್ಟೆ) ಕಟ್ಟುವ ಕೆಲಸ ಮಾಡಿದ್ದೇವೆ. ಈಗ ಆ ಕೆಲಸವೂ ಮುಗಿಯಿತು. ಅದರ ಮೇಲ್ಭಾಗದ ಕೆಲಸ ಈಗ ಪ್ರಾರಂಭವಾಗಿದೆ. ಪ್ರಾರಂಭದಲ್ಲಿ ಸ್ವಲ್ಪ ತೊಂದರೆಗಳು ಇದ್ದವು. 70 ಎಕರೆ ಭೂಮಿಯನ್ನು ಸರ್ಕಾರ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ಗೆ ಕೊಟ್ಟಿದೆ. ಅದರ ಈಶಾನ್ಯ ಮೂಲೆಯಲ್ಲಿ ದೇವಸ್ಥಾನ, ರಾಮನ ಜನ್ಮಭೂಮಿ ಇದೆ. ಅಲ್ಲಿ 360 ಅಡಿ ಉದ್ದ, 235 ಅಗಲ ಹಾಗೂ 161 ಅಡಿ ಎತ್ತರದ ಮಂದಿರ ನಿರ್ಮಾಣ ಮಾಡುವ ಯೋಜನೆ ಆಗಿದೆ. ಇದರ ಆರ್ಕಿಟೆಕ್ಟ್ (ವಿನ್ಯಾಸಕಾರರು) ಚಂದ್ರಕಾಂತ್ ಸೋಂಪುರ. ಗುಜರಾತ್‌ನ ಅಹ್ಮದಾಬಾದ್‌ನ ಕರ್ಣಾವತಿಯವರು. ಅವರ ಅಜ್ಜ ಗುಜರಾತ್‌ನ ಸೋಮನಾಥ ಮಂದಿರವನ್ನು ಕಟ್ಟಿದವರು. ನಾಗರೀ ಶೈಲಿಯಲ್ಲಿ ಮಂದಿರವನ್ನು ಕಟ್ಟುವ ಶಿಲ್ಪಿ ಅವರು. ಈ ಮಂದಿರದ ನಿರ್ಮಾಣ ಕಾರ್ಯವನ್ನು ನಾವು L&T ಕಂಪನಿಗೆ ಕೊಟ್ಟಿದ್ದೇವೆ. ಮೇಲ್ವಿಚಾರಣೆ ಜವಾಬ್ದಾರಿಯನ್ನು ಟಾಟಾ ಕನ್ಸಲ್ಟಿಂಗ್ ಎಂಜಿನಿಯರ್ಸ್‌ಗೆ ವಹಿಸಿದ್ದೇವೆ. ನಮ್ಮ ಕಡೆಯಿಂದಲೂ ನಾಲ್ಕೈದು ಜನ ಎಂಜಿನಿಯರ್‌ಗಳು ಕಾರ್ಯ ನಿರ್ವಹಿಸುತ್ತಿದ್ದಾರೆ.

ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ.

⭕ ಅಯೋಧ್ಯೆಯ ನೆಲದಲ್ಲಿ ಮಂದಿರ ಕಟ್ಟುವಲ್ಲಿ ಎದುರಾದ ತಾಂತ್ರಿಕ ಸವಾಲುಗಳು ಏನು? ಅದನ್ನು ಹೇಗೆ ನಿಭಾಯಿಸಿದಿರಿ?
✅ಅಯೋಧ್ಯೆಯ ಮಣ್ಣು ಗಟ್ಟಿಯಲ್ಲ. ಕರ್ನಾಟಕದಲ್ಲಿ ಎಲ್ಲಿ ನೋಡಿದ್ರೂ ಕಲ್ಲು ಸಿಗುತ್ತದೆ. ಅಯೋಧ್ಯೆಯಲ್ಲಿ ಕಲ್ಲು ಸಿಗೋದಿಲ್ಲ. ಯಾರಿಗಾದ್ರೂ ಕಲ್ಲು ಹೊಡೆಯಬೇಕು ಅಂದ್ರೂ ಸಿಗಲ್ಲ! ಮರಳು ಮಿಶ್ರಿತ ಮಣ್ಣು. ಅಲ್ಲಿನ ಮರಳು ಬಹಳ ಮಧುರವಾದದ್ದು ಅಂದ್ರೆ ತುಂಬಾ ಮೃದು. ಹೀಗಾಗಿ ಹೈದರಾಬಾದ್‌ನ ಭೂಗರ್ಭ ಸಂಸ್ಥೆ ಹೇಳಿದಂತೆ ಭೂಮಿಗಿಂತ 10 ಮೀಟರ್ ಕೆಳಗಡೆ ಹೋದರೆ ಮಾತ್ರ ಸರಿಯಾದ ನೆಲ ಸಿಗುತ್ತದೆ. ಹಾಗಾಗಿ ನಾವು ಸುಮಾರು 6.5 ಎಕರೆ ಭೂಮಿಯ ಪ್ರದೇಶದಲ್ಲಿ, ಕೆಳಗಿರುವ ಮಣ್ಣೆಲ್ಲ ತೆಗೆದು ಕೆರೆಯ ರೀತಿಯ ಜಾಗವನ್ನು ನಿರ್ಮಾಣ ಮಾಡಿದೆವು. ನೆಲಮಟ್ಟಕ್ಕಿಂತ 50 ಅಡಿವರೆಗೂ ನಾವು ಮಣ್ಣನ್ನು ತೆಗೆದು, ಅದನ್ನು ಲೆವಲ್ ಮಾಡಿ ಅಲ್ಲಿಂದ ಮೇಲಕ್ಕೆ ಬಂದಿದ್ದು. ಮಂದಿರ ನಿರ್ಮಾಣ ಮಾಡುವ ಮೊದಲೇ ಎರಡು ಸಂಗತಿ ನಿಶ್ಚಯ ಮಾಡಿದ್ವಿ. ಮೊದಲನೇಯದ್ದು ಮಂದಿರದಲ್ಲಿ ಎಲ್ಲೂ ಸಹ ಕಬ್ಬಿಣ ಉಪಯೋಗಿಸಬಾರದು. ಯಾಕಂದ್ರೆ ಅದರ ಆಯುಸ್ಸೇ 100 ವರ್ಷ. ಎರಡನೇದಾಗಿ ಸಿಮೆಂಟ್ ಬಳಸಬಾರದು ಅಂತ. ಅದರ ಆಯುಷ್ಯವೂ 100 ವರ್ಷ. ಅದನ್ನು ಭೂಮಿಯ ಕೆಳಗೆ ಉಪಯೋಗಿಸಬಹುದು. ಭೂಮಿಯ ಮೇಲ್ಗಡೆ ಸಿಮೆಂಟ್ ಬೇಡ ಅನ್ನೋ ನಿರ್ಣಯ ಮಾಡಿದ್ವಿ.

ಗೋಪಾಲ ನಾಗರಕಟ್ಟೆ

ಭೂಮಿಯ ಕೆಳಗಡೆ ಸ್ಟೀಲ್ ರಹಿತವಾದ ಸಿಮೆಂಟ್ ಕಾಂಕ್ರೀಟ್ ಹಾಕುತ್ತಾ ಗಟ್ಟಿ ಮಾಡ್ತಾ ಬಂದೆವು. ಒಂದು ಅಡಿಯಷ್ಟು ಸಿಮೆಂಟ್ ಹಾಕೋದು, ಆಮೇಲೆ ರೋಲ್ ಮಾಡೋದು. ರೋಲ್ ಮಾಡ್ತಾ ಮಾಡ್ತಾ 48 ಪದರಗಳನ್ನು ಎಲ್ಲೆಡೆ ಹಾಗೂ ಗರ್ಭಗುಡಿಯ ಕೆಳಗೆ 56 ಲೇಯರ್ ಹಾಕಿದೆವು. ಅದಾದ ನಂತರ ಸುಮಾರು 5 ಅಡಿ, ರಿಚ್ ಕಾಂಕ್ರೀಟ್ ಹಾಕಿ ಒಂದು ಕಟ್ಟೆ ಕಟ್ಟಿದ್ದೇವೆ. ಅಂದ್ರೆ ನಮ್ಮ ದೇವಸ್ಥಾನ ನಿರ್ಮಾಣ ಆಗುವ ಪ್ರದೇಶಕ್ಕಿಂತ ಸ್ವಲ್ಪ ದೊಡ್ಡದನ್ನು ನಿರ್ಮಾಣ ಮಾಡಿದ್ದೇವೆ. ಅಲ್ಲಿಗೆ ನೆಲದ ಕೆಲಸ ಮುಗಿಯುತ್ತದೆ. ಅದರಿಂದ ಮೇಲ್ಗಡೆ 4 ಅಡಿಯಷ್ಟು ಮಣ್ಣು ಬರೋದಿದೆ. ಅದರ ಮೇಲೆ ನಾವು ಗ್ರಾನೈಟ್ ಕಲ್ಲುಗಳನ್ನು ಹಾಕಲು ಶುರು ಮಾಡಿದೆವು. ಇದನ್ನು ಹೆಚ್ಚಾಗಿ ಕರ್ನಾಟಕದ್ದೇ ಬಳಸಿದ್ದೇವೆ. ಕಲ್ಲುಗಳನ್ನು ಒಂದರ ಮೇಲೊಂದಿಟ್ಟು ಒಟ್ಟು ನೆಲದಿಂದ 21 ಅಡಿವರೆಗೂ ಕಲ್ಲನ್ನು ಹಾಸುತ್ತಿದ್ದೇವೆ. 5 ಅಡಿ ಉದ್ದ, 2.5 ಅಡಿ ಅಗಲ ಹಾಗುಯ 3 ಅಡಿ ದಪ್ಪದ 17,000 ಕಲ್ಲುಗಳನ್ನು ಒಂದರ ಮೇಲೊಂದು ಇಡುತ್ತಿದ್ದೇವೆ. ಆ ಕೆಲಸ ಬಹುತೇಕ ಮುಗಿದಿದ್ದು, ಇನ್ನೊಂದು 300 ಕಲ್ಲುಗಳನ್ನು ಇರಿಸೋದು ಮಾತ್ರ ಬಾಕಿ ಉಳಿದಿದೆ. ಅಂದ್ರೆ ಪ್ಲಿಂಥ್ ಅಂತ ಏನು ಕರೀತಾರೆ, ಸಾಮಾನ್ಯವಾಗಿ ಮನೆ ಕಟ್ಟುವಾಗ ನೆಲಕ್ಕಿಂತ ಮನೆ ಸ್ವಲ್ಪ ಮೇಲಿರುತ್ತದೆ. ಅದನ್ನು ಪ್ರಿಂಥ್ ಅಂತಾರೆ. ನಾವು ಕಟ್ಟೆ ಅನ್ನಬಹುದು ಕನ್ನಡದಲ್ಲಿ. ಈಗ ಆ ರೀತಿಯ ಕಟ್ಟೆ ಕಟ್ಟುವ ಕೆಲಸ ಮುಗೀತು. ಈಗ ಅದರ ಮೇಲ್ಗಡೆ ಬರಬೇಕಾಗಿದ್ದು ಬನ್ಸೀ ಪಹಾಡ್‌ಪುರ್ ಅಂತ. ರಾಜಸ್ಥಾನದ ಭರತ್‌ಪುರ್ ಜಿಲ್ಲೆ ಬಯಾನಾ ತಾಲೂಕಿನ ಒಂದು ಗುಡ್ಡದ ಪ್ರದೇಶ. ಅಲ್ಲಿ, ಗುಲಾಬಿ ಬಣ್ಣದ ಸುಣ್ಣದ ಕಲ್ಲು ಸಿಗುತ್ತದೆ. ಸ್ಯಾಂಡ್ ಸ್ಟೋನ್ ಅಂತ ಕರೀತಾರೆ. ಆ ಸ್ಯಾಂಡ್ ಸ್ಟೋನ್ ಮೂಲಕ ಈ ಮಂದಿರದ ನಿರ್ಮಾಣ ಆಗ್ತಿದೆ. ಅದರ ಕೆತ್ತನೆ ಆಗಿ ಬರ್ತಿದೆ. ಈಗ ಹೆಚ್ಚುಕಮ್ಮಿ 1 ಲಕ್ಷ ಘನ ಅಡಿ ಕಲ್ಲುಗಳು ಬಂದಿವೆ. ನಾವು ಈಗೊಂದು 15,000 ಘನ ಅಡಿ ಕಲ್ಲುಗಳನ್ನು ಇಟ್ಟಾಗಿದೆ. ಗರ್ಭಗೃಹದ ಪ್ರದೇಶ ಹಾಗೂ ಸುತ್ತಲೂ, ಕೆಳಗಡೆಯ ಬೇಸ್‌ಮೆಂಟ್ ಪ್ರದೇಶ ಅಂದ್ರೆ ಪ್ರಾರಂಭದ ಭಾಗದಲ್ಲೆಲ್ಲಾ ಇಟ್ಟು ಕೆಲಸ ಮುಂದಕ್ಕೆ ಹೋಗ್ತಿದೆ.

ಮಂದಿರ ಲೋಕಾರ್ಪಣೆಗೂ ಲೋಕಸಭಾ ಚುನಾವಣೆಗೂ ಸಂಬಂಧ ಇದ್ಯಾ? ಲೋಕಸಭಾ ಚುನಾವಣೆ ನಡೆಯೋ ಕೆಲವು ತಿಂಗಳ ಮೊದಲೇ ದೇವಾಲಯ ಲೋಕಾರ್ಪಣೆ ಆಗುತ್ತದೆ ಅನ್ನೋ ಮಾತು ಕೇಳಿಬಂದಿದೆ. ಶ್ರೀ ರಾಮನ ದರ್ಶನ ಯಾವಾಗ?
✅ ಚುನಾವಣೆಗೂ ಮಂದಿರಕ್ಕೂ ಯಾವುದೇ ಸಂಬಂಧವಿಲ್ಲ. ಆದ್ರೆ, ನಾವು ದೇವಸ್ಥಾನವನ್ನು ಯಥಾಶೀಘ್ರ ಜನರ ದರುಶನಕ್ಕೆ ತೆರೆದಿಡಬೇಕು ಅಂತ ಪ್ರಯತ್ನ ಮಾಡುತ್ತಿದ್ದೇವೆ. ಮೊದಲನೇಯದಾಗಿ ಪ್ರಾಣ ಪ್ರತಿಷ್ಠಾಪನೆ ಮಾಡಬೇಕು. ಆಗ ದರ್ಶನ ಶುರುವಾಗುತ್ತದೆ. ಒಂದು ಮಹಡಿ ಕೆಲಸ ಮುಗಿದು, ಗರ್ಭಗೃಹದ ಭಾಗ ಸ್ವಲ್ಪ ಮೇಲಕ್ಕೆ ಬಂದ್ರೆ ಪ್ರಾಣ ಪ್ರತಿಷ್ಠಾಪನೆ ಮಾಡಬಹುದು. ಅದರ ನಂತರ ಬೇರೆ ಬೇರೆ ಕೆಲಸಗಳು ನಡೆಯುತ್ತಾ ಹೋಗುತ್ತದೆ. ನೆಲಮಹಡಿಯ ಕೆಲಸವನ್ನು ಡಿಸೆಂಬರ್ ಹೊತ್ತಿಗೆ ಪೂರ್ಣವಾಗಿ ಮುಗಿಸುತ್ತೇವೆ. 2024ರ ಜನವರಿ ತಿಂಗಳ ಮಕರ ಸಂಕ್ರಮಣ ಉತ್ತರಾಯಣ ಪರ್ವ ಕಾಲದ ಸಂದರ್ಭದಲ್ಲಿ ಒಳ್ಳೆಯ ಮುಹೂರ್ತದಲ್ಲಿ ಪ್ರಾಣ ಪ್ರತಿಷ್ಠೆ ನಡೆಯಲಿದೆ.
ದೇವಸ್ಥಾನದ ಪ್ರಾಕಾರ 6.5 ಎಕರೆ ಭೂಮಿಯಲ್ಲಿ ನಿರ್ಮಾಣ ಆಗ್ತಿದೆ. 750 ಮೀಟರ್ ಉದ್ದದ ಪ್ರಾಕಾರವಾಗಿದ್ದು, ಇದು ಮುಗಿಯೋದಕ್ಕೆ 3 ವರ್ಷ ಬೇಕಾಗುತ್ತದೆ.

ಸೆಪ್ಟೆಂಬರ್‌ ೨೬ರ ಹೊತ್ತಿಗೆ ಆಗಿರುವ ಕಾಮಗಾರಿ

ಒಂದೊಳ್ಳೆ ಕೆಲಸ ಆಗಬೇಕಂದ್ರೆ ಸಾವಿರ ಕೈಗಳು ಜೊತೆಗೂಡಬೇಕು ಅಂತಾರೆ. ನಿಮ್ಮ ಜೊತೆ ಹೆಜ್ಜೆ ಹಾಕಿದವರು ಯಾರು? ಎಲ್ಲಿಂದ ಆರಂಭವಾಯ್ತು? ಈಗ ಎಲ್ಲಿಯವರೆಗೆ ಬಂದಿದ್ದೀರಾ? ದೇಣಿಗೆ ಎಷ್ಟು ಸಂಗ್ರಹವಾಗಿದೆ?
✅ ಕೇಂದ್ರ ಸರ್ಕಾರ 2020ರ ಫೆಬ್ರವರಿಯಲ್ಲಿ ರಾಮಜನ್ಮಭೂಮಿ ತೀರ್ಥಕ್ಷೇತ್ರ ಅಂತ ಒಂದು ಟ್ರಸ್ಟ್ ನಿರ್ಮಾಣ ಮಾಡಿತ್ತು. ಆ ಟ್ರಸ್ಟ್‌ನ ಎಲ್ಲ ಸದಸ್ಯರೂ ಸೇರಿದಂತೆ, ನಮ್ಮ ಕರ್ನಾಟಕದ ಪೇಜಾವರ ಸ್ವಾಮಿಗಳು ಅಂದ್ರೆ, ಇಂದಿನ ವಿಶ್ವಪ್ರಸನ್ನತೀರ್ಥ ಸ್ವಾಮಿಗಳೂ ಒಬ್ಬ ಟ್ರಸ್ಟಿ. ದಕ್ಷಿಣ ಭಾರತದಿಂದ ಸ್ವಾಮೀಜಿಗಳ ಪೈಕಿ ಅವರು ಏಕಮೇವ ಟ್ರಸ್ಟಿಯಾಗಿದ್ದಾರೆ. ಇನ್ನೊಬ್ಬರು ಚೆನ್ನೈನ ಒಬ್ಬ ವಕೀಲರು. ಉಳಿದವರೆಲ್ಲ ಉತ್ತರ ಪ್ರದೇಶದ ಸಂತರಾಗಿದ್ದಾರೆ. ನಮ್ಮ ಈ ಕಾರ್ಯದಲ್ಲಿ, ವಿಶೇಷವಾಗಿ ನ್ಯಾಯಾಲಯದ ಹೋರಾಟದಲ್ಲಿ ಬಹಳ ಪ್ರಮುಖ ಪಾತ್ರ ವಹಿಸಿದ ಚಂಪತ್‌ ರಾಯರು ನಮ್ಮ ಸಂಘದ ಪ್ರಚಾರಕರು. ವಿಶ್ವ ಹಿಂದೂ ಪರಿಷತ್‌ನ ಕಾರ್ಯದರ್ಶಿಯಾಗಿದ್ದರು. ಈಗ ವಿಶ್ವ ಹಿಂದೂ ಪರಿಷತ್‌ನ ಉಪ್ಯಾಧ್ಯಕ್ಷರಾಗಿದ್ದಾರೆ. ಅವರು ಈ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ. ನೃಪೇಂದ್ರ ಮಿಶ್ರಾ ಪ್ರಧಾನಿ ಮೋದಿಯವರಿಗೆ ಸಹಾಯಕರಾಗಿದ್ದರು. ಅವರು ಈ ಮಂದಿರ ನಿರ್ಮಾಣದ ಪ್ರಮುಖರಾಗಿ ಕೆಲಸ ಮಾಡ್ತಿದ್ದಾರೆ. ಅಯೋಧ್ಯೆಯವರೇ ಆದ ಡಾ. ಅನಿಲ್ ಮಿಶ್ರಾ ಹಾಗೂ ಅಲ್ಲಿನ ರಾಜ ಕುಟುಂಬಸ್ಥರೊಬ್ಬರು ಕೂಡ ಟ್ರಸ್ಟ್‌ನಲ್ಲಿದ್ದಾರೆ. ದೇಶಾದ್ಯಂತ ಕಳೆದ ವರ್ಷ ಜನವರಿಯಲ್ಲಿ ಬಹಳ ದೊಡ್ಡ ಪ್ರಮಾಣದಲ್ಲಿ ನಿಧಿ ಸಂಗ್ರಹದ ಅಭಿಯಾನ ನಡೆಯಿತು. ನಮಗೆ 3,200 ಕೋಟಿ ರೂಪಾಯಿ ನಿಧಿ ಬಂದಿದೆ, ಬರುತ್ತಲೇ ಇದೆ. ಅದಾದ ಮೇಲೆ ಇಂದಿಗೂ ಬರ್ತಾನೇ ಇದೆ. ವಿದೇಶಗಳಿಂದ ನಾವಿನ್ನೂ ಹಣ ತೆಗೆದುಕೊಂಡಿಲ್ಲ. ಏಕೆಂದರೆ ವಿದೇಶಗಳಿಂದ ಹಣ ತೆಗೆದುಕೊಳ್ಳಬೇಕಂದರೆ ಟ್ರಸ್ಟ್ ಆಗಿ ಮೂರು ವರ್ಷ ಕಳೆದಿರಬೇಕು. ಎಲ್ಲ ವರ್ಗದವರೂ ದೇಣಿಗೆ ನೀಡಿದ್ದಾರೆ. ಬಡವರು 10 ರೂಪಾಯಿಯನ್ನೂ ಕೊಟ್ಟಿದ್ದಾರೆ. ಅನುಕೂಲಸ್ಥರು ಕೋಟ್ಯಾಂತರ ರೂಪಾಯಿ ಕೊಟ್ಟಿದ್ದಾರೆ. ಎಲ್ಲ ರಾಮ ಭಕ್ತರ ಇದಕ್ಕೆ ಸಹಾಯ ಮಾಡಿದ್ದಾರೆ.

ದೇವಾಲಯದ ನಿರ್ಮಾಣಕ್ಕೆ ಮುಸ್ಲಿಂ ಸಮುದಾಯದವರೂ ದೇಣಿಗೆ ಕೊಟ್ಟಿದ್ದಾರಾ?
✅ ಒಟ್ಟು 12 ಕೋಟಿ ಕುಟುಂಬಗಳಿಂದ ನಮಗೆ ಹಣ ಬಂದಿದೆ. ಅದರಲ್ಲಿ ಮುಸಲ್ಮಾನರೂ ಇದ್ದಾರೆ. ನಾನೂ ಬೇರೆ ಬೇರೆ ಮನೆಗಳಿಗೆ ಹೋದಾಗ, ಮುಸಲ್ಮಾನರ ಮನೆಗಳು ಬಂದಾಗ ಅವರೂ ಕೂಡ ದೇಣಿಗೆ ಕೊಟ್ಟಿದ್ದಾರೆ.

ಭಾರತ ದೇವಾಲಯಗಳಿಗೆ ಪ್ರಸಿದ್ಧವಾಗಿದೆ ಹೌದು. ದೇವಾಲಯಗಳ ಪ್ರಾಕಾರಗಳೇ ವಿಭಿನ್ನವಾಗಿವೆ. ಈ ದೇವಾಲಯ ಯಾವ ರೀತಿ ವಿಭಿನ್ನವಾಗಿರಲಿದೆ?
✅ ನಾವು ನಾಗರೀ ಶೈಲಿಯಲ್ಲಿ ದೇವಸ್ಥಾನ ಕಟ್ಟುತ್ತಿದ್ದೇವೆ. 750 ಮೀಟರ್ ಉದ್ದದ ಪ್ರಾಕಾರ ಆಯತಾಕಾರದಲ್ಲಿ ನಿರ್ಮಾಣ ಆಗಲಿದೆ. ಅಲ್ಲಿಂದ ದೇವಾಲಯದ ಪ್ರವೇಶ ಶುರುವಾಗುತ್ತದೆ. ರಾಮ ಮಂದಿರ ಮೂರು ಮಹಡಿ ಹೊಂದಿರುತ್ತದೆ. ನೆಲಮಹಡಿಯಲ್ಲಿ ರಾಮ ಬಾಲ ಸ್ವರೂಪದಲ್ಲಿ ಇರ್ತಾನೆ. ಒಂದನೇ ಮಹಡಿಯಲ್ಲಿ ರಾಮ, ಲಕ್ಷ್ಮಣ, ಭರತ, ಶತೃಘ್ನ, ಹನುಮಾನ್, ಸೀತಾ ಮಾತೆ ಸಹಿತವಾಗಿ ರಾಮ ದರ್ಬಾರ್ ಇರುತ್ತದೆ. ಸಿಂಹಾಸನದಲ್ಲಿ ಕುಳಿತ ರಾಮನ ದರ್ಶನ ಪಡೆಯಬಹುದು. 161 ಅಡಿ ಎತ್ತರದ ಶಿಖರ ಇರುತ್ತದೆ. ಇದು ಉತ್ತರ ಭಾರತದಲ್ಲೇ ಅತೀ ದೊಡ್ಡ ದೇವಾಲಯವಾಗಲಿದೆ.

⭕ ಅಕ್ಷರಧಾಮ ದೇವಾಲಯದಂತೆ ಇಲ್ಲಿಯೂ ಎಲ್‌ಇಡಿ ಗೋಡೆ ಹಾಕಿ ಭಗವಂತನ ಇತಿಹಾಸ ಅಥವಾ ಕಥೆಗಳನ್ನು ಪ್ರದರ್ಶಿಸುತ್ತೀರಾ?

ಅಯೋಧ್ಯೆಯಲ್ಲಿ ಪೂಜಿಸಲ್ಪಡುತ್ತಿರುವ ರಾಮ ಲಲ್ಲಾ

✅ ಮೂಲ ಮಂದಿರದ ಪ್ರಾಕಾರದಲ್ಲಿ ಆರು ದೇವಸ್ಥಾನಗಳು ಇರಲಿವೆ. ದೇವಸ್ಥಾನದ ಲೋವರ್ ಪ್ಲಿಂಥ್‌ನಲ್ಲಿ ದೇಶದ ಮಹಾಪುರುಷರ, ರಾಮಾಯಣಕ್ಕೆ ಸಂಬಂಧಿಸಿದಂತೆ ಮಹಾಪುರುಷರ ಚಿತ್ರಣ ಬರಲಿದೆ. ಹಾಗೆಯೇ, ಪ್ರಾಕಾರದಲ್ಲಿ ರಾಮನ ಜೀವನಚಿತ್ರಣ ಬರಲಿದೆ. ಅದು ನಮ್ಮ ವಿಶೇಷತೆಯಾಗಿದೆ. ಈ ಎರಡನ್ನೂ ಜನರಿಗೆ ತೋರಿಸಲಿದ್ದೇವೆ. ಸಂಸ್ಕೃತಿಯ ಚಿತ್ರಣವನ್ನೂ ನೀಡುತ್ತೇವೆ. ರಾಮನ ಜೀವನದ ಚಿತ್ರಣವನ್ನೂ ತೋರಿಸಲಿದ್ದೇವೆ.

ವಿದೇಶಗಳಿಂದಲೂ ಭಕ್ತರು ಹಾಗೂ ಪ್ರವಾಸಿಗರು ಆಗಮಿಸುವುದರಿಂದ ಪ್ರವಾಸೋದ್ಯಮ ಯಾವ ರೀತಿ ಅಭಿವೃದ್ಧಿಗೊಳಿಸುತ್ತೀರಾ?
✅ ಇದೆಲ್ಲವೂ ಸರ್ಕಾರದ ಕೆಲಸವಾಗಿದೆ. ಎಲ್ಲವನ್ನೂ ನಾವೇ ಮಾಡೋದಕ್ಕಾಗಲ್ಲ. ದೇವಸ್ಥಾನದಿಂದ ಏನು ಮಾಡಬಹುದು ಎಂಬ ಚಿಂತನೆ ಈಗ ನಡೆದಿದೆ. ಕೆಲ ಗೈಡ್‌ಗಳಾದ್ರೂ ನಮ್ಮ ಕಡೆಯಿಂದ ಇರಬೇಕು ಅಂತ ನಿರ್ಧರಿಸಿದ್ದೇವೆ. ಇದನ್ನು ಪ್ರವಾಸಿ ತಾಣ ಮಾಡೋದಕ್ಕೆ ನಾವು ಹೊರಟಿಲ್ಲ. ಶ್ರದ್ಧಾ ಸ್ಥಾನ ಮಾಡೋದಕ್ಕೆ ಹೊರಟಿದ್ದೇವೆ. ವಿದೇಶದಿಂದಾದ್ರೂ ಬರಲಿ, ಎಲ್ಲಿಂದಾದ್ರೂ ಬರಲಿ, ಶ್ರದ್ಧಾ ಸ್ಥಾನವಾಗಿಯೇ ಅಯೋಧ್ಯೆಯನ್ನು ನೋಡಬೇಕು. ಅಯೋಧ್ಯೆಯನ್ನು ನೋಡಬೇಕಾದರೆ ಸರಯೂಗೆ ಹೋಗಬೇಕು. ಸರಯೂ ದರ್ಶನ ಮಾಡದಿದ್ದರೆ ಅಯೋಧ್ಯೆ ಪುಣ್ಯ ಲಭಿಸುವುದಿಲ್ಲ. ಸರಯೂ ಶ್ರೇಷ್ಠವಾದಂತ ನದಿ. ರಾಮಾಯಣದಲ್ಲಿ ವಾಲ್ಮೀಕಿ ಮಹರ್ಷಿಗಳು ಸರಯೂ ವರ್ಣನೆ ಮಾಡಿದ್ದಾರೆ. ಅದರ ಪಕ್ಕದಲ್ಲಿ ರಾಮನ ಸ್ಥಾನ ಅಂದ್ರೆ, ಅಯೋಧ್ಯೆ ನಿರ್ಮಿತವಾಗಿದೆ. ಅದರಿಂದಾಗಿಯೇ ಅಯೋಧ್ಯೆಗೆ ಒಂದು ಮಹತ್ವ ಸಿಕ್ಕಿದೆ. ಎರಡನೇಯದ್ದು, ಹನುಮಾನ್ ಗಡಿ. ಹನುಮಾನ್ ಇಲ್ಲದೇ ರಾಮನಿಲ್ಲ. ಅದನ್ನೂ ದರ್ಶನ ಮಾಡಬೇಕು. ಮೂರನೆಯದ್ದು ರಾಮಮಂದಿರ. ಇದು ಪ್ರಮುಖವಾದ 3 ಸ್ಥಳಗಳು. ಇದರ ಹೊರತಾಗಿಯೂ ಅನೇಕ ನಿರ್ಮಾಣವಾಗುತ್ತಿದೆ.

ದೇವಾಲಯಕ್ಕೆ ಬರುವ ಮಾರ್ಗದಲ್ಲೂ ಅಭಿವೃದ್ಧಿಯಾಗಬೇಕು. ಅಭಿವೃದ್ಧಿ ವಿಚಾರವಾಗಿ ಸರ್ಕಾರಕ್ಕೆ ಏನು ಸಲಹೆ ಕೊಟ್ಟಿದ್ದೀರಾ?
✅ ಅಯೋಧ್ಯೆ ಬಹಳ ಚಿಕ್ಕ ಊರು. ಕಾಶಿ, ಮಥುರಾ ಇವೆಲ್ಲಾ ದೊಡ್ಡ ದೊಡ್ಡ ನಗರಗಳು. ಅಯೋಧ್ಯೆ 50 ಸಾವಿರ ಜನಸಂಖ್ಯೆ ಇರೋ ಊರದು. ಮೊದಲು ಫೈಜಾಬಾದ್ ಅಂತ ಹೆಸರಿತ್ತು, ಈಗ ಅದನ್ನು ಅಯೋಧ್ಯೆ ಅಂತ ಮಾಡಿದ್ದಾರೆ. ಜಿಲ್ಲಾ ಕೇಂದ್ರವನ್ನೂ ಸೇರಿಸಿದ್ರೆ 3 ಲಕ್ಷ ಅಷ್ಟೇ ಅಲ್ಲಿನ ಜನಸಂಖ್ಯೆ. ಅದು ಅಭಿವೃದ್ಧಿಯಾಗಬೇಕಿದೆ. ರಸ್ತೆಗಳು ಅಗಲೀಕರಣಗೊಳ್ಳುತ್ತಿವೆ. ಸರ್ಕಾರದಿಂದಲೂ ಬಹಳ ಒಳ್ಳೆಯ ಯೋಜನೆಗಳು ನಡೆಯುತ್ತಿವೆ. ಹೊಸ ಅಯೋಧ್ಯೆಯನ್ನು ಅಭಿವೃದ್ಧಿಗೊಳಿಸಬೇಕು ಅಂತ ದೇವಸ್ಥಾನದಿಂದ 5 ಕಿ.ಮೀ ದೂರದಲ್ಲಿ ಸರ್ಕಾರ 1200 ಎಕರೆ ಪ್ರದೇಶವನ್ನು ಪಡೆಯುತ್ತಿದೆ. ಅಲ್ಲಿ ಯಾತ್ರಿ ನಿವಾಸಗಳು ನಿರ್ಮಾಣ ಆಗಲಿವೆ. ಅಯೋಧ್ಯೆಯಲ್ಲಿ ಸಾವಿರಕ್ಕೂ ಹೆಚ್ಚು ಆಶ್ರಮಗಳಿವೆ. ಅವುಗಳಿಂದಲೂ ರೂಂಗಳು ನಿರ್ಮಾಣ ಆಗಲಿವೆ.

ಉತ್ತರ ಪ್ರದೇಶದ ಸರ್ಕಾರ ಹಾಗೂ ಪ್ರಧಾನಿ ಮೋದಿಯವರ ಸಹಕಾರ ಹೇಗಿದೆ?
✅ ನಮಗೆ ಕೇವಲ ಎರಡು ಸರ್ಕಾರಗಳು ಮಾತ್ರವಲ್ಲ, ಮೂರು ಸರ್ಕಾರಗಳ ಸಹಕಾರ ಸಿಕ್ಕಿದೆ. ಉತ್ತರ ಪ್ರದೇಶ ಸರ್ಕಾರ, ಕೇಂದ್ರ ಸರ್ಕಾರಗಳ ಜತೆ ರಾಜಸ್ಥಾನದ ಕಾಂಗ್ರೆಸ್ ಸರ್ಕಾರದಿಂದಲೂ ಸಹಕಾರ ಲಭಿಸಿದೆ. ಒಟ್ಟು 13,50,000 ಘನ ಅಡಿ ಕಲ್ಲುಗಳು ಬೇಕಿವೆ. ಇದಿಷ್ಟೂ ಕಲ್ಲುಗಳು ರಾಜಸ್ಥಾನದಿಂದ ಬರಬೇಕು. ಆದರೆ ಆ ಕಲ್ಲುಗಳು ಇದ್ದಂಥ ಪ್ರದೇಶ ನಿಷೇಧಕ್ಕೆ ಒಳಗಾಗಿತ್ತು. ಅದನ್ನು ಕೇಂದ್ರ ಸರ್ಕಾರ ಮತ್ತು ರಾಜಸ್ಥಾನದ ಸರ್ಕಾರಗಳ ಸಹಯೋಗದಿಂದ ನಿಷೇಧ ತೆರವಾಗಿ ನಮಗೆ ಕಲ್ಲುಗಳು ಸಿಗುವಂತಾಗಿದೆ. ನಾವು ಸರ್ಕಾರದಿಂದ ಯಾವುದೇ ಆರ್ಥಿಕ ಸಹಾಯ ತೆಗೆದುಕೊಳ್ಳುವುದಿಲ್ಲ.‌ ಯಾವುದೇ ವಿನಾಯಿತಿ ಕೇಳಬಾರದು ಅಂತ ನಿಶ್ಚಯ ಮಾಡಿದ್ದೇವೆ. ನ್ಯಾಯಯುತವಾಗಿ ನಮಗೆ ಸಿಗಬೇಕಾದ ಅನುಕೂಲತೆಗಳನ್ನು ಸರ್ಕಾರ ಮಾಡಿಕೊಟ್ಟರೆ ಸಾಕು.

ಅಯೋಧ್ಯೆ ಹಲವಾರು ವರ್ಷಗಳ ಕಾಲ ಸೂಕ್ಷ್ಮ ಪ್ರದೇಶವಾಗಿ ಗುರುತಿಸಿಕೊಂಡಿದೆ. ಭದ್ರತೆಯ ವಿಚಾರವಾಗಿ ಟ್ರಸ್ಟ್ ಹಾಗೂ ಸರ್ಕಾರ ಏನು ವ್ಯವಸ್ಥೆ ಮಾಡಿಕೊಂಡಿದೆ?
✅ ಅನೇಕ ವರ್ಷಗಳಿಂದ ಅಯೋಧ್ಯೆಯಲ್ಲಿ ಸುಮಾರು 2500ಕ್ಕೂ ಅಧಿಕ ಪೊಲೀಸರು ನಿಯೋಜನೆಗೊಂಡಿದ್ದಾರೆ. ಅಯೋಧ್ಯೆಯಲ್ಲಿ ಯೆಲ್ಲೋ ಝೋನ್, ರೆಡ್ ಝೋನ್ ಎಂದು ಗುರುತಿಸಲಾಗಿದೆ. ಹೀಗಾಗಿ, ನಮ್ಮ ಪರಿಸರದ ಸುತ್ತಲೂ ಪೊಲೀಸ್ ವ್ಯವಸ್ಥೆ ಇದೆ. ಯಾವುದೇ ವಾಹನ ಪೊಲೀಸ್ ಅನುಮತಿ ಇಲ್ಲದೇ ದೇವಸ್ಥಾನಕ್ಕೆ ಬರುವ ಹಾಗಿಲ್ಲ. ಹೊರಗಡೆಯಿಂದ ಬರುವ ಎಲ್ಲ ವಾಹನಗಳೂ ತಪಾಸಣೆಗೆ ಒಳಗಾದ ನಂತರವಷ್ಟೇ ಒಳಕ್ಕೆ ಬರಲಿದೆ. ದೇವಸ್ಥಾನ ಇರುವ 70 ಎಕರೆ ಪ್ರದೇಶದ ಒಳಗೆ ಪ್ರವೇಶ ಪಡೆಯಬೇಕು ಅಂದರೆ ಮೊಬೈಲ್, ಪೆನ್‌ ತರೋದಕ್ಕೂ ಅವಕಾಶ ಇಲ್ಲ. ಯಾವುದೇ ಎಲೆಕ್ಟ್ರಾನಿಕ್ ವಸ್ತು ತರುವ ಹಾಗಿಲ್ಲ. ಹೂವನ್ನೂ ತರುವ ಹಾಗಿಲ್ಲ. ಅಭೂತಪೂರ್ವ ಭದ್ರತೆ ಇರಲಿದೆ.

ದೇವಸ್ಥಾನ ನಿರ್ಮಾಣ ಆದ ನಂತರ ನಿರ್ವಹಣೆಯ ಉಸ್ತುವಾರಿ ಯಾರದ್ದು? ವಿಶ್ವ ಹಿಂದೂ ಪರಿಷತ್ ಹಾಗು ಆರ್‌ಎಸ್‌ಎಸ್‌ನ ಪಾತ್ರ ಕೂಡ ನಿರ್ವಹಣೆಯಲ್ಲಿ ಇರಲಿದೆಯಾ? ಸರ್ಕಾರದ ಪಾತ್ರ ಏನಿರುತ್ತದೆ?
✅ ಸರ್ಕಾರ ಸುರಕ್ಷಾ ವ್ಯವಸ್ಥೆ ಮತ್ತು ಸಂಚಾರದ ವ್ಯವಸ್ಥೆ ಮಾಡುತ್ತದೆ. ದೇವಾಲಯದ ಹೊರಗಿನ ಕೆಲಸಗಳನ್ನು ಸರ್ಕಾರ ಮಾಡಲಿದೆ. ಒಳಗಿನ ಎಲ್ಲ ವ್ಯವಸ್ಥೆಗಳನ್ನು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನೋಡಿಕೊಳ್ಳುತ್ತದೆ. ಅದರಲ್ಲಿ ಸಂಘದವರೂ ಇದ್ದಾರೆ, ಹೊರಗಿನವರೂ ಇದ್ದಾರೆ. ಈಗ ಟ್ರಸ್ಟ್‌ನಲ್ಲಿ 15 ಜನರಿದ್ದಾರೆ. ಅದರಲ್ಲಿ 3 ಜನ ಸರ್ಕಾರಿ ಅಧಿಕಾರಿಗಳಿದ್ದಾರೆ. ಅವರಿಗೆ ಮತದಾನದ ಅಧಿಕಾರ ಇಲ್ಲ. ದೇವಸ್ಥಾನದ ನಿರ್ವಹಣೆಗೆ ಮ್ಯಾನೇಜ್‌ಮೆಂಟ್ ಕಮಿಟಿ ಇರುತ್ತದೆ. ವಿಶ್ವ ಹಿಂದೂ ಪರಿಷತ್ ಹಾಗೂ ಆರ್‌ಎಸ್ಎಸ್ ನೇರ ಪಾತ್ರ ನಿರ್ವಹಣೆಯಲ್ಲಿ ಇರೋದಿಲ್ಲ. ಆದ್ರೆ ಈ ಸಂಘಟನೆಗಳ ಸಹಕಾರ ಇದ್ದೇ ಇರುತ್ತದೆ.

ಮಂದಿರ ನಿರ್ಮಾಣ ಕಾರ್ಯದಲ್ಲಿ ಹಿನ್ನಡೆಯಾದ ಸಂದರ್ಭವೇನಾದ್ರೂ ಇತ್ತಾ?
✅ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ನಮ್ಮ ಒಳಗಿನ ಸಮಸ್ಯೆಯಿಂದ ಕೆಲಸಕ್ಕೆ ಯಾವುದೇ ಸಮಸ್ಯೆ ಆಗಿಲ್ಲ. ಆದರೆ ಬೇರೆ ಬೇರೆಯವರು ಸಣ್ಣಪುಟ್ಟ ವಿವಾದಗಳನ್ನು ಬೇರೆ ಬೇರೆ ಕಾರಣಕ್ಕಾಗಿ ಸೃಷ್ಟಿ ಮಾಡ್ತಾ ಇರ್ತಾರೆ. ಅದೆಲ್ಲವೂ ಕ್ಷಣಿಕವಷ್ಟೇ. ಚುನಾವಣೆ ಬಂದಾಗ ಸೃಷ್ಟಿ ಮಾಡ್ತಾರೆ. ಒಂದು ಸಂದರ್ಭದಲ್ಲಿ ನಮ್ಮ ಮೇಲೂ ಜಾಗದ ವಿಚಾರವಾಗಿ ಆರೋಪ ಕೇಳಿಬಂತು. ಆದ್ರೆ, ನಾವೆಲ್ಲ ರೀತಿಯಿಂದಲೂ ಶುದ್ಧವಿರೋದ್ರಿಂದ ಸಮಸ್ಯೆ ಆಗಿಲ್ಲ. ನಮ್ಮದು ಬಹಳ ಪಾರದರ್ಶಕ ವ್ಯವಹಾರವಾಗಿದೆ. ನಮ್ಮ ಬಳಿ ಚೆಕ್‌ಬುಕ್ ಅಕೌಂಟ್ ಕೂಡ ಇಲ್ಲ. ಚೆಕ್‌ಬುಕ್ ರಹಿತ ಅಕೌಂಟ್‌ ಬಳಸುತ್ತಿದ್ದೇವೆ. ಅಂದರೆ ನಮ್ಮ ಕಾರ್ಯದರ್ಶಿ ಬ್ಯಾಂಕ್‌ಗೆ ಹೋಗಿ ಸಹಿ ಹಾಕಿದರೆ ಮಾತ್ರ ಬ್ಯಾಂಕ್‌ನಿಂದ ಹಣ ಹೊರಹೋಗುತ್ತದೆ. ಹಣಕಾಸಿನ ವ್ಯವಹಾರದಲ್ಲಿ ನಾವು ಫಿಸಿಕಲ್ ಟ್ರಾನ್ಸಾಕ್ಷನ್ ಕೂಡ ಮಾಡ್ತಿಲ್ಲ. ಜಿಎಸ್‌ಟಿ ಕಟ್ಟದೇ ಯಾವುದೇ ವ್ಯವಹಾರವನ್ನೂ ಮಾಡಿಲ್ಲ. ಇಡೀ ದೇಶ ನಮ್ಮನ್ನು ನೋಡುತ್ತಿದೆ. ನಾವು ಎಚ್ಚರಿಕೆಯಿಂದ, ನ್ಯಾಯಸಮ್ಮತವಾಗಿ, ಪಾರದರ್ಶಕವಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ.

೨೦೨೨ರ ಜೂನ್‌ ೧ರಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಅವರು ಗರ್ಭಗುಡಿಗೆ ಶಂಕುಸ್ಥಾಪನೆ ನೆರವೇರಿಸಿದ ಕ್ಷಣ

ಸ್ವರ್ಣ ಕಳಶ ಸ್ಥಾಪನೆ ಹೊಣೆಯನ್ನು ಕರ್ನಾಟಕಕ್ಕೆ ನೀಡಬೇಕೆಂಬ ಕೋರಿಕೆ ಇದೆ. ಇದರ ಬಗ್ಗೆ ನಿರ್ಣಯವಾಗಿದೆಯಾ?
✅ ಸ್ವರ್ಣ ಕಳಶ ನಿರ್ಮಿಸುವ ವಿಚಾರವನ್ನು ಟ್ರಸ್ಟ್‌ನಲ್ಲಿ ಪೇಜಾವರ ಸ್ವಾಮಿಗಳು ಇಟ್ಟಿದ್ದಾರೆ. ಟ್ರಸ್ಟ್ ಇದಕ್ಕೆ ಒಪ್ಪಿದೆ. ಸ್ವರ್ಣ ಕಳಶ ನಿಶ್ಚಿತ. ಟ್ರಸ್ಟ್‌ನಲ್ಲಿ ಈಗ ಕಳಶದ ವಿಚಾರವಾಗಿ ಪರಾಮರ್ಶೆ ನಡೆಯುತ್ತಿದೆ. ಶಿಖರ ನಿರ್ಮಾಣವಾಗೋದೇ 2024ರ ಆಗಸ್ಟ್ ವೇಳೆಗೆ. ಇನ್ನೂ 2 ವರ್ಷಗಳು ಇರುವುದರಿಂದ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿಲ್ಲ.

ಅಯೋಧ್ಯೆ ರಾಮ ಮಂದಿರಕ್ಕೂ ಕರ್ನಾಟಕಕ್ಕೂ ಇರುವ ವಿಶಿಷ್ಟ ನಂಟೇನು?
✅ ರಾಜ್ಯದ ಪ್ರತಿನಿಧಿಯಾಗಿ ನಾನು ಅಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಕರ್ನಾಟಕದಿಂದ ಬಂದ ಗ್ರಾನೈಟ್ ಕಲ್ಲುಗಳನ್ನು ದೇವಾಲಯಕ್ಕೆ ಬಳಸಲಾಗಿದೆ. ಅದರಲ್ಲೂ ರಾಮಮಂದಿರದ ಬುನಾದಿಯನ್ನು ಕರ್ನಾಟಕದ ಕಲ್ಲುಗಳಿಂದಲೇ ಹಾಕಲಾಗಿದೆ. ರಾಜ್ಯದವರೇ ಆದ ಪೇಜಾವರ ಸ್ವಾಮಿಗಳು ಟ್ರಸ್ಟಿಯಾಗಿದ್ದಾರೆ. ಹಾಗಾಗಿ ರಾಮ ಮಂದಿರ ನಿರ್ಮಾಣ ಇತಿಹಾಸದಲ್ಲಿ ಕರ್ನಾಟಕದ ಹೆಸರೂ ಅಚ್ಚಳಿಯದೇ ಉಳಿಯಲಿದೆ.

ಇದನ್ನೂ ಓದಿ | Ayodhya Ram Temple | ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ 1,800 ಕೋಟಿ ರೂ. ವೆಚ್ಚ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿಕ್ಕಬಳ್ಳಾಪುರ

Dead Body Found : ಮರದಲ್ಲಿ ನೇತಾಡುತ್ತಿತ್ತು ಅಪರಿಚಿತನ ಶವ; ಸತ್ತವನ ಕೈ ಮೇಲಿತ್ತು ಲಕ್ಷ್ಮಿ ಹೆಸರಿನ ಹಚ್ಚೆ

Dead Body Found : ಗ್ರಾಮದ ಹೊರವಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತನ ಮೃತದೇಹ ಪತ್ತೆಯಾಗಿದೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದರ ಕುರಿತು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Koo

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದ ಹೊರವಲಯದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ (Dead Body Found) ಪತ್ತೆಯಾಗಿದೆ. ಮೃತನ ಕೈ ಮೇಲೆ ಲಕ್ಷ್ಮಿ ಎಂಬ ಹಚ್ಚೆ ಗುರುತು ಪತ್ತೆಯಾಗಿದೆ.

ಪ್ರೀತಿ-ಪ್ರೇಮ ಹಿನ್ನೆಲೆಯಲ್ಲಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಮರಕ್ಕೆ ನೇತು ಹಾಕಿ ಹೋಗಿರುವ ಅನುಮಾನವಿದೆ. ಮರದಲ್ಲಿ ನೇತಾಡುತ್ತಿದ್ದ ಮೃತದೇಹವನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗೌರಿಬಿದನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರದಲ್ಲಿದ್ದ ಮೃತದೇಹವನ್ನು ಕೆಳಗಿಸಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತನ ಗುರುತು ಪತ್ತೆಯಾಗಿಲ್ಲ. ಸದ್ಯ ಪೊಲೀಸರು ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Murder Case : ರೌಡಿಯಾಗಲು ಹೊರಟವನನ್ನು ಕೊಂದು ಹಾಕಿದ್ರು ಪುಂಡರು

ನೀರಿನಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಪತ್ತೆ

ಈಜಲು ತೆರಳಿದ್ದ ಯುವಕ ನೀರು ಪಾಲಾಗಿದ್ದ. ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಹೇರೂರು ಗ್ರಾಮದ ಹಾರಂಗಿ ಹಿನ್ನೀರಿನಲ್ಲಿ ನಿನ್ನೆ ಭಾನುವಾರ ಅವಘಡ ನಡೆದಿತ್ತು. ನೀರಿನಲ್ಲಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಸೋಮವಾರ ಪತ್ತೆಯಾಗಿದೆ. ಮೈಸೂರು ಮೂಲದ ಶಶಿ (30) ಮೃತ ದುರ್ದೈವಿ. ಶಶಿ ತನ್ನ 15 ಮಂದಿ ಸ್ನೇಹಿತರೊಟ್ಟಿಗೆ ಮೈಸೂರಿನಿಂದ ಕೊಡಗಿಗೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಶಶಿ ಈಜಲು ಹೋಗಿ ನೀರುಪಾಲಾಗಿದ್ದ, ಇದೀಗ ಆತನ ಮೃತದೇಹವ ಸಿಕ್ಕಿದ್ದು, ಕುಶಾಲನಗರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನೀರಲ್ಲಿ ಕೊಚ್ಚಿ ಹೋದವರಿಗಾಗಿ ಹುಡುಕಾಟ

ಇತ್ತ ನಿನ್ನೆ ಭಾನುವಾರ ಮಹಾರಾಷ್ಟ್ರದ ಲೋನಾವಲಾ ಬಳಿ ದಿಢೀರ್ ಪ್ರವಾಹಕ್ಕೆ ನೋಡನೋಡುತ್ತಿದ್ದಂತೆ ಐವರು ಕೊಚ್ಚಿ ಹೋಗಿದ್ದರು. ಪುಣೆಯ ಅನ್ಸಾರಿ ಕುಟುಂಬದ ನಾಲ್ವರು ಮಕ್ಕಳು ಸೇರಿ ಓರ್ವ ‌ಮಹಿಳೆ‌ ನೀರುಪಾಲಾಗಿದ್ದರು. ನಿರಂತರ ಕಾರ್ಯಾಚರಣೆ ನಡೆಸಿದ ಎನ್‌ಆರ್‌ಎಫ್‌ ತಂಡ ಮೂವರ ಶವ ಹೊರ ತೆಗೆದಿತ್ತು. ನೀರಲ್ಲಿ ಕಣ್ಮರೆಯಾಗಿರುವ ಇನ್ನಿಬ್ಬರಿಗಾಗಿ ನಿರಂತರ ಶೋಧ ಕಾರ್ಯ ನಡೆಯುತ್ತಿದೆ. ಸ್ಥಳದಲ್ಲಿಯೇ ಪೊಲೀಸರು ಹಾಗೂ ಅಗ್ನಿಶಾಮಕ ದಳ ಬೀಡು ಬಿಟ್ಟಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Murder Case: ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

Murder Case: ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲು ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣಕ್ಕೆ ಪತ್ನಿ ಬಂದಿದ್ದರು. ಇದರಿಂದ ಕ್ರುದ್ಧನಾದ ಕಾನ್‌ಸ್ಟೇಬಲ್ ಲೋಕನಾಥ್, ಪತ್ನಿಗೆ ಎಲ್ಲರ ಮುಂದೆಯೇ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾನೆ.

VISTARANEWS.COM


on

hassan murder case
Koo

ಹಾಸನ: ಪೊಲೀಸ್‌ ಕಾನ್‌ಸ್ಟೇಬಲ್‌ (Police Constable) ಒಬ್ಬ ತನ್ನ ಪತ್ನಿಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ (SP) ಕಚೇರಿ ಆವರಣದಲ್ಲೇ ಇರಿದು (Stabbed) ಕೊಂದುಹಾಕಿದ (Murder Case) ಘಟನೆ ಹಾಸನದಲ್ಲಿ ನಡೆದಿದೆ.

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕಾನ್‌ಸ್ಟೇಬಲ್‌, ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ. ಹಾಸನ ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಲೋಕನಾಥ್ ಪತ್ನಿಗೆ ಚಾಕುವಿನಿಂದ ಇರಿದ ಆರೋಪಿ. ಪತ್ನಿ ಮಮತಾ ಹತ್ಯೆಯಾದವರು. ಲೋಕನಾಥ್ ಹಾಗು ಮಮತಾಗೆ 17 ವರ್ಷಗಳ ಹಿಂದೆ ವಿವಾಹ ಆಗಿತ್ತು. ಇಬ್ಬರು ಮಕ್ಕಳೂ ಇದ್ದರು. ಕೌಟುಂಬಿಕ ಕಲಹ ಇವರ ಬಾಳ್ವೆಯ ಹದಗೆಡಿಸಿತ್ತು. ಲೋಕನಾಥ್ ಶಾಂತಿಗ್ರಾಮ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ.

ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಇಂದು ಪತಿ ವಿರುದ್ಧ ದೂರು ನೀಡಲು ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣಕ್ಕೆ ಪತ್ನಿ ಬಂದಿದ್ದರು. ಇದರಿಂದ ಕ್ರುದ್ಧನಾದ ಕಾನ್‌ಸ್ಟೇಬಲ್ ಲೋಕನಾಥ್, ಪತ್ನಿಗೆ ಎಲ್ಲರ ಮುಂದೆಯೇ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದಾನೆ.

ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮಮತಾ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಆರೋಪಿಗಾಗಿ ಹುಡುಕಾಟ ನಡೆದಿದೆ.

ರೌಡಿಯಾಗಲು ಹವಾ ಸೃಷ್ಟಿಸಿದ್ದವನನ್ನು ಇರಿದು ಕೊಂದರು!

ಬೆಂಗಳೂರು: ಬೆಂಗಳೂರಿನ ಪುಲಿಕೇಶಿನಗರದ ಅಪ್ಪು ಕೊಲೆ ಪ್ರಕರಣದಲ್ಲಿ (Murder caseನಾಲ್ವರು ಆರೋಪಿಗಳ ಬಂಧನವಾಗಿದೆ. ರೌಡಿಯಾಗಬೇಕೆಂದು ಹೊರಟಿದ್ದ ಅಪ್ಪು ಎಂಬಾತನನ್ನು ಅದೇ ಏರಿಯಾದ ಹುಡುಗರ ಗ್ಯಾಂಗ್‌ ಕೊಂದು ಹಾಕಿತ್ತು.

ಮಹಾಲಕ್ಷ್ಮಿಲೇಔಟ್ ನಿವಾಸಿಯಾಗಿರುವ ಅಪ್ಪು ಹುಡುಗರ ಮೇಲೆ ದರ್ಪ ಮೆರೆದು ಹಲ್ಲೆ ನಡೆಸಿ ಕೊಲೆಗೆ ಸ್ಕೆಚ್ ಹಾಕಿದ್ದ. ಏರಿಯಾದಲ್ಲಿ ಹವಾ ತೋರಿಸಲು ಸಿಕ್ಕ ಸಿಕ್ಕವರಿಗೆ ಹೊಡಿತ್ತಿದ್ದ. ಅಪ್ಪುವಿನ ವರ್ತನೆಗೆ ಬೇಸತ್ತಿದ್ದ ಏರಿಯಾ ಹುಡುಗರು, ಮಾತನಾಡುವ ನೆಪದಲ್ಲಿ ಕರೆಸಿಕೊಂಡಿದ್ದರು.

ಜೀವನಹಳ್ಳಿ ರೈಲ್ವೆ ಟ್ರಾಕ್ ಬಳಿ ಬಂದಿದ್ದ ಅಪ್ಪು ಮೇಲೆ ಏಕಾಏಕಿ ನಾಲ್ಕೈದು ಮಂದಿ ದಾಳಿ ಮಾಡಿದ್ದರು. ಇವರಿಂದ ತಪ್ಪಿಸಿಕೊಳ್ಳಲು ಹೋದಾಗ ಅಪ್ಪುನನ್ನು ಅಟ್ಟಾಡಿಸಿಕೊಂಡು ಹೋಗಿ ಚಾಕುವಿನಿಂದ ಇರಿದು ಬಳಿಕ ತಲೆ ಮೇಲೆ ಕಲ್ಲುಎತ್ತಿ ಹಾಕಿ ಕೊಂದು ಹಾಕಿದ್ದರು.

ಕೃತ್ಯದ ಬಳಿಕ ಎಲ್ಲರೂ ತಲೆಮರೆಸಿಕೊಂಡಿದ್ದರು. ಇದೀಗ ಕೊಲೆಯಾದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪುಲಿಕೇಶಿನಗರ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Renuka swamy Murder : ರೇಣುಕಾಸ್ವಾಮಿ ಕೊಲೆ ಕೇಸ್‌ನ 17ನೇ ಆರೋಪಿಯಿಂದ ಜಾಮೀನು ಅರ್ಜಿ ಸಲ್ಲಿಕೆ

Continue Reading

ಬೆಂಗಳೂರು

Murder Case : ರೌಡಿಯಾಗಲು ಹೊರಟವನನ್ನು ಕೊಂದು ಹಾಕಿದ್ರು ಪುಂಡರು

Murder case : ರೌಡಿ ಆಗಬೇಕೆಂದು ಸಿಕ್ಕ ಸಿಕ್ಕವರಿಗೆ ಹೊಡೆದು ಬಡೆದು ಮಾಡುತ್ತಿದ್ದವನನ್ನು ಅದೇ ಏರಿಯಾದ ಹುಡುಗರು ಅಟ್ಟಾಡಿಸಿಕೊಂದು ಹೋಗಿ ಕೊಂದು ಹಾಕಿದ್ದರು. ಇದೀಗ ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

murder case
ಬರ್ಬರವಾಗಿ ಕೊಲೆಯಾದ ಅಪ್ಪು
Koo

ಬೆಂಗಳೂರು: ಬೆಂಗಳೂರಿನ ಪುಲಿಕೇಶಿನಗರದ ಅಪ್ಪು ಕೊಲೆ ಪ್ರಕರಣದಲ್ಲಿ (Murder case) ನಾಲ್ವರು ಆರೋಪಿಗಳ ಬಂಧನವಾಗಿದೆ. ರೌಡಿಯಾಗಬೇಕೆಂದು ಹೊರಟಿದ್ದ ಅಪ್ಪು ಎಂಬಾತನನ್ನು ಅದೇ ಏರಿಯಾದ ಹುಡುಗರ ಗ್ಯಾಂಗ್‌ ಕೊಂದು ಹಾಕಿತ್ತು.

ಮಹಾಲಕ್ಷ್ಮಿಲೇಔಟ್ ನಿವಾಸಿಯಾಗಿರುವ ಅಪ್ಪು ಹುಡುಗರ ಮೇಲೆ ದರ್ಪ ಮೆರೆದು ಹಲ್ಲೆ ನಡೆಸಿ ಕೊಲೆಗೆ ಸ್ಕೆಚ್ ಹಾಕಿದ್ದ. ಏರಿಯಾದಲ್ಲಿ ಹವಾ ತೋರಿಸಲು ಸಿಕ್ಕ ಸಿಕ್ಕವರಿಗೆ ಹೊಡಿತ್ತಿದ್ದ. ಅಪ್ಪುವಿನ ವರ್ತನೆಗೆ ಬೇಸತ್ತಿದ್ದ ಏರಿಯಾ ಹುಡುಗರು, ಮಾತನಾಡುವ ನೆಪದಲ್ಲಿ ಕರೆಸಿಕೊಂಡಿದ್ದರು.

ಜೀವನಹಳ್ಳಿ ರೈಲ್ವೆ ಟ್ರಾಕ್ ಬಳಿ ಬಂದಿದ್ದ ಅಪ್ಪು ಮೇಲೆ ಏಕಾಏಕಿ ನಾಲ್ಕೈದು ಮಂದಿ ದಾಳಿ ಮಾಡಿದ್ದರು. ಇವರಿಂದ ತಪ್ಪಿಸಿಕೊಳ್ಳಲು ಹೋದಾಗ ಅಪ್ಪುನನ್ನು ಅಟ್ಟಾಡಿಸಿಕೊಂಡು ಹೋಗಿ ಚಾಕುವಿನಿಂದ ಇರಿದು ಬಳಿಕ ತಲೆ ಮೇಲೆ ಕಲ್ಲುಎತ್ತಿ ಹಾಕಿ ಕೊಂದು ಹಾಕಿದ್ದರು.

ಕೃತ್ಯದ ಬಳಿಕ ಎಲ್ಲರೂ ತಲೆಮರೆಸಿಕೊಂಡಿದ್ದರು. ಇದೀಗ ಕೊಲೆಯಾದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪುಲಿಕೇಶಿನಗರ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Actor Darshan: ಇಂದಾದ್ರೂ ಭೇಟಿಗೆ ಬರ್ತಾರಾ ದರ್ಶನ್‌ ಅಮ್ಮ, ತಮ್ಮ?

ಜೋಡಿಗೆ ಥಳಿತ; ʼಇದು ಮುಸ್ಲಿಂ ರಾಷ್ಟ್ರ…ʼ ಎಂದ ತೃಣಮೂಲ ಶಾಸಕ

ಕೋಲ್ಕತ್ತಾ: ಅನೈತಿಕ ಸಂಬಂಧದಲ್ಲಿ (Illicit relationship) ತೊಡಗಿದ್ದರು ಎನ್ನಲಾದ ಜೋಡಿಯೊಂದರ ಮೇಲೆ ತೃಣಮೂಲ ಕಾಂಗ್ರೆಸ್ (‌Trinamoola Congress) ಕಾರ್ಯಕರ್ತರು ಅಮಾನುಷವಾಗಿ ಹಲ್ಲೆ (Assault Case) ನಡೆಸಿದ್ದರು. ಇದರ ವಿಡಿಯೋ ವೈರಲ್ (viral viedo) ಆದ ನಂತರ ಪಶ್ಚಿಮ ಬಂಗಾಳದ ಪ್ರತಿಪಕ್ಷಗಳು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿವೆ. “ಮುಸ್ಲಿಂ ರಾಷ್ಟ್ರ ನೀತಿ ಸಂಹಿತೆ ಪ್ರಕಾರ ನಡೆದುಕೊಳ್ಳಲಾಗಿದೆ…” ಎಂದು ತೃಣಮೂಲ ಕಾಂಗ್ರೆಸ್‌ ಶಾಸಕನೊಬ್ಬ ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದಾನೆ.

ಬಿದಿರಿನ ದೊಣ್ಣೆಗಳಿಂದ ಇಬ್ಬರನ್ನು ಥಳಿಸುತ್ತಿರುವ ವಿಡಿಯೋ ವೈರಲ್‌ ಆಗಿದೆ. ಈ ವ್ಯಕ್ತಿಯನ್ನು ತಜ್ಮುಲ್ ಅಲಿಯಾಸ್ “ಜೆಸಿಬಿ” ಎಂದು ಗುರುತಿಸಲಾಗಿದೆ. ಈತ ಉತ್ತರ ದಿನಾಜ್‌ಪುರ ಜಿಲ್ಲೆಯ ಚೋಪ್ರಾದ ಸ್ಥಳೀಯ ಟಿಎಂಸಿ ನಾಯಕ ಎಂದು ಹೇಳಲಾಗಿದೆ. ಸ್ಥಳೀಯ ಪಂಚಾಯ್ತಿಯ ತೀರ್ಪಿನ ನಂತರ ಈ ಘಟನೆ ನಡೆದಿದೆ. ಘಟನೆಯ ಕುರಿತು ಪಶ್ಚಿಮ ಬಂಗಾಳ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿಕೊಂಡು ತಜ್ಮುಲ್‌ನನ್ನು ಬಂಧಿಸಿದ್ದಾರೆ.

ಚೋಪ್ರಾ ಶಾಸಕ ಹಮೀದುಲ್ ರಹಮಾನ್, ಟಿಎಂಸಿಗೆ ತಜ್ಮುಲ್ ಜೊತೆ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ʼಮಹಿಳೆಯ ಚಟುವಟಿಕೆಗಳು ಅನೈತಿಕವಾಗಿದ್ದವು. ಇದು ಹಳ್ಳಿಯ ವಿಷಯವಾಗಿದ್ದು, ಪಕ್ಷಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ನಾವು ಘಟನೆಯನ್ನು ಖಂಡಿಸುತ್ತೇವೆ. ಆದರೆ ಮಹಿಳೆಯೂ ತಪ್ಪು ಮಾಡಿದ್ದಾಳೆ. ಅವಳು ತನ್ನ ಗಂಡ, ಮಗ ಮತ್ತು ಮಗಳನ್ನು ತೊರೆದಿದ್ದಾಳೆ. ಮುಸ್ಲಿಂ ರಾಷ್ಟ್ರದ ಪ್ರಕಾರ ಕೆಲವು ನೀತಿ ಸಂಹಿತೆ ಮತ್ತು ನ್ಯಾಯವಿದೆ. ಈಗ ಈ ಪ್ರಕರಣದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ತೃಣಮೂಲ ಶಾಸಕ ಸುದ್ದಿಗಾರರಿಗೆ ತಿಳಿಸಿದರು.

ಪ್ರತಿಪಕ್ಷ ಭಾರತೀಯ ಜನತಾ ಪಕ್ಷ, ಕಾಂಗ್ರೆಸ್ ಮತ್ತು ಸಿಪಿಐ(ಎಂ) ಈ ಘಟನೆಗೆ ಮಮತಾ ಬ್ಯಾನರ್ಜಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರೆ, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಟಿಎಂಸಿ ಹೇಳಿದೆ.

ಕೇಂದ್ರ ಸಚಿವ ಮತ್ತು ಬಂಗಾಳದ ಬಿಜೆಪಿ ಮುಖ್ಯಸ್ಥ ಸುಕಾಂತ ಮಜುಂದಾರ್ ಅವರು ಟಿಎಂಸಿಯ ಶಾಸಕನ “ಮುಸ್ಲಿಂ ರಾಷ್ಟ್ರ” ಉಲ್ಲೇಖದ ಬಗ್ಗೆ ಆತಂಕಪಟ್ಟಿದ್ದಾರೆ. “ಮುಸ್ಲಿಂ ರಾಷ್ಟ್ರ ಕೆಲವು ನಿಯಮಗಳ ಅಡಿಯಲ್ಲಿ ಶಿಕ್ಷೆಗಳನ್ನು ಚರ್ಚಿಸುವ ಹೇಳಿಕೆಗಳು ಕಳವಳ ಮೂಡಿಸುತ್ತವೆ. ಟಿಎಂಸಿ ಪಶ್ಚಿಮ ಬಂಗಾಳವನ್ನು ಷರಿಯಾ ಕಾನೂನನ್ನು ಅನ್ವಯಿಸುವ ರಾಜ್ಯವೆಂದು ಘೋಷಿಸುತ್ತಿದೆಯೇ?” ಎಂದು ಸುಕಾಂತ ಮಜುಂದಾರ್ ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಂಗಾಳ ಪೊಲೀಸರು ಹೇಳಿದ್ದೇನು?

ಇಸ್ಲಾಂಪುರ ಪೊಲೀಸ್ ಹೇಳಿಕೆಯಲ್ಲಿ, “ಇಸ್ಲಾಂಪುರ ಪಿಡಿ ಅಡಿಯಲ್ಲಿ ಚೋಪ್ರಾ ಪಿಎಸ್‌ನಲ್ಲಿ ಮಹಿಳೆಯೊಬ್ಬರ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿದ ಒಬ್ಬ ವ್ಯಕ್ತಿಯನ್ನು ಪೊಲೀಸರು ತಕ್ಷಣ ಗುರುತಿಸಿ ಬಂಧಿಸಿದ್ದಾರೆ. ಸಂತ್ರಸ್ತ ಜೋಡಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ” ಎಂದು ತಿಳಿಸಿದೆ. ಇಸ್ಲಾಂಪುರ ಪೊಲೀಸ್ ಅಧೀಕ್ಷಕ ಜೋಬಿ ಥಾಮಸ್ ಕೆ. ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಕ್ಲಿಪ್ ಅನ್ನು ವೀಕ್ಷಿಸಿದ್ದಾರೆ ಮತ್ತು ಅದನ್ನು ಪರಿಶೀಲಿಸಿದ ನಂತರ ಪ್ರಕರಣ ದಾಖಲಿಸಿದ್ದಾರೆ ಎಂದಿದ್ದಾರೆ.

ಭಾರೀ ಸಂಖ್ಯೆಯ ಜನರು ನೋಡುತ್ತಿದ್ದಂತೆಯೇ ನೋವಿನಿಂದ ಅಳುತ್ತಿದ್ದ ಮಹಿಳೆಗೆ ಆರೋಪಿಗಳು ಥಳಿಸಿದ ದೃಶ್ಯ ವೈರಲ್ ಆಗಿದೆ. ಹಲ್ಲೆ ಮಾಡಿದಾತ ಆಕೆಯ ತಲೆಕೂದಲು ಎಳೆದು ಒದೆಯುವುದು ಕಂಡುಬಂದಿತು. ಆರೋಪಿಗಳು ವ್ಯಕ್ತಿಯೊಬ್ಬನಿಗೆ ದೊಣ್ಣೆಗಳಿಂದ ಥಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Dengue Fever: ರಾಜಧಾನಿಯಲ್ಲಿ ಡೆಂಗ್ಯು ಜ್ವರಕ್ಕೆ ಒಂದು ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ

Dengue Fever: ಹೊಸದಾಗಿ 213 ಡೆಂಗ್ಯು ಪ್ರಕರಣಗಳ ಪತ್ತೆಯಾಗಿದ್ದು, ಜೂನ್ ತಿಂಗಳಲ್ಲಿ 1742 ಜನರಿಗೆ ಡೆಂಗ್ಯು ಸೋಂಕು ತಗುಲಿದೆ. ಮಹಿಳೆಯರು ಮತ್ತು ಮಕ್ಕಳು ಡೆಂಗ್ಯು ಸೋಂಕಿಗೆ ಬೇಗ ಒಳಗಾಗುತ್ತಿದ್ದಾರೆ ಎನ್ನಲಾಗಿದ್ದು, ಗರ್ಭಿಣಿಯರಲ್ಲಿ ಡೆಂಗ್ಯು ಹೆಚ್ಚಿನ ಹಾನಿ ಎಸಗುತ್ತಿರುವುದರಿಂದಾಗಿ ಹೆಚ್ಚಿನ ಎಚ್ಚರ ವಹಿಸಲು ಸಲಹೆ ನೀಡಲಾಗಿದೆ.

VISTARANEWS.COM


on

Dengue fever rises across the state including Bengaluru BBMP Commissioner also get fever
Koo

ಬೆಂಗಳೂರು: ಕಗ್ಗದಾಸಪುರದ 27 ವರ್ಷದ ಯುವಕ ಡೆಂಗ್ಯು ಸೋಂಕಿನಿಂದಲೇ (Dengue Fever) ಸಾವಿಗೀಡಾಗಿದ್ದಾರೆ ಎಂದು ಬಿಬಿಎಂಪಿ (BBMP) ಖಚಿತಪಡಿಸಿದೆ. ಕಳೆದ ಶುಕ್ರವಾರ ಎರಡು ಡೆಂಗ್ಯು ಶಂಕಿತ ಸಾವಿನ ಪ್ರಕರಣಗಳು ಸಂಭವಿಸಿದ್ದವು. ಇದರಲ್ಲಿ ಒಂದು ಸಾವು ಡೆಂಗ್ಯುವಿನಿಂದಾಗಿದೆ ಎಂದು ಬಿಬಿಎಂಪಿ ಹೆಲ್ತ್ ಆಡಿಟ್ (BBMP Health Audit) ಖಚಿತಪಡಿಸಿದೆ.

ಕಗ್ಗದಾಸಪುರದ ಯುವಕನ ಸಾವಿಗೆ ಡೆಂಗ್ಯು ಕಾರಣವವಾಗಿದೆ. ಆದರೆ 80ರ ವೃದ್ಧೆಯ ಸಾವಿಗೆ ಕ್ಯಾನ್ಸರ್ ಕಾರಣ ಎಂದು ಬಿಬಿಎಂಪಿ ಹೆಲ್ತ್ ಆಡಿಟ್ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ನಗರದಲ್ಲಿ ಸದ್ಯ 1743 ಆಕ್ಟಿವ್ ಡೆಂಗ್ಯು ಕೇಸ್‌ಗಳು ಇವೆ.

ಹೊಸದಾಗಿ 213 ಡೆಂಗ್ಯು ಪ್ರಕರಣಗಳ ಪತ್ತೆಯಾಗಿದ್ದು, ಜೂನ್ ತಿಂಗಳಲ್ಲಿ 1742 ಜನರಿಗೆ ಡೆಂಗ್ಯು ಸೋಂಕು ತಗುಲಿದೆ. ಮಹಿಳೆಯರು ಮತ್ತು ಮಕ್ಕಳು ಡೆಂಗ್ಯು ಸೋಂಕಿಗೆ ಬೇಗ ಒಳಗಾಗುತ್ತಿದ್ದಾರೆ ಎನ್ನಲಾಗಿದ್ದು, ಗರ್ಭಿಣಿಯರಲ್ಲಿ ಡೆಂಗ್ಯು ಹೆಚ್ಚಿನ ಹಾನಿ ಎಸಗುತ್ತಿರುವುದರಿಂದಾಗಿ ಹೆಚ್ಚಿನ ಎಚ್ಚರ ವಹಿಸಲು ಸಲಹೆ ನೀಡಲಾಗಿದೆ.

ಇದೂವರೆಗೂ ನಗರದಲ್ಲಿ ಇಬ್ಬರು ಡೆಂಗ್ಯು ಜ್ವರಕ್ಕೆ ಬಲಿಯಾಗಿದ್ದಾರೆ. ಸಿವಿ ರಾಮನ್ ನಗರದ 27 ವರ್ಷದ ಯುವಕ ಡೆಂಗ್ಯು ಜ್ವರಕ್ಕೆ ಬಲಿಯಾಗಿದ್ದು, ಈತ ತೀವ್ರ ಜ್ವರದಿಂದ ಬಳಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾನೆ ಎಂದು ಬಿಬಿಎಂಪಿ ಮೂಲಗಳು ಮಾಹಿತಿ ನೀಡಿವೆ.

4 ಸಾವಿರ ಗಡಿ ದಾಟಿದ ಡೆಂಗ್ಯೂ; ಐವರು ಸಾವು

ಹವಾಮಾನ ವೈಪರೀತ್ಯ ಮತ್ತು ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದು ಆತಂಕ ಮೂಡಿಸಿದೆ. 2024ರಲ್ಲಿ ಈ ವರೆಗೆ (ಜೂನ್‌) 93,012 ಶಂಕಿತವಾಗಿದ್ದು, ಇದರಲ್ಲಿ 40,918 ಮಂದಿಯ ರಕ್ತ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಆ ಪ್ರಕಾರ 4364 ಮಂದಿಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ. ಡೆಂಗ್ಯೂ ಜ್ವರಕ್ಕೆ ಚಿಕಿತ್ಸೆ ಫಲಿಸದೇ ಐವರು ಮೃತಪಟ್ಟಿದ್ದಾರೆ. ಶಿವಮೊಗ್ಗ, ಬಾಗಲಕೋಟೆ, ಗದಗದಲ್ಲಿ ತಲಾ ಒಬ್ಬರು ಹಾಗೂ ಹಾಸನದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಡೆತ್‌ ಆಡಿಟಿಂಗ್‌ಗೆ ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು ವಿಪರೀತ ಏರಿಕೆ ಆಗಿವೆ. ಬೆಂಗಳೂರಲ್ಲಿ ಜನವರಿಯಿಂದ ಈವರೆಗೆ 1,385 ಮಂದಿಗೆ ಡೆಂಗ್ಯೂ ಜ್ವರ ಕಂಡು ಬಂದಿದೆ. ಈವರೆಗೆ ಡೆಂಗ್ಯೂನಿಂದ ಮೃತಪಟ್ಟ ವರದಿ ಆಗಿಲ್ಲ. ಆದರೆ ಇಬ್ಬರು ಡೆಂಗ್ಯೂ ಜ್ವರದಿಂದ ಮೃತಪಟ್ಟಿರುವ ಶಂಕೆ ಇದ್ದು, ಸಾವಿಗೆ ಕಾರಣ ತಿಳಿಯುವ ಸಲುವಾಗಿ ಡೆತ್ ಆಡಿಟ್‌ಗೆ ಬಿಬಿಎಂಪಿ ಮುಂದಾಗಿದೆ.

ಇನ್ನೂ 3,470 ಲಾರ್ವಾ ಉತ್ಪತ್ತಿ ತಾಣ ಪತ್ತೆಯಾಗಿದ್ದು, ಇದರಲ್ಲಿ 2,004 ತಾಣಗಳ ನಾಶ ಮಾಡಲಾಗಿದೆ ಎಂದು ಬಿಬಿಎಂಪಿ ಆರೋಗ್ಯ ವಿಭಾಗ ಮಾಹಿತಿ ನೀಡಿದೆ. ಪಾಲಿಕೆಯ ಆರೋಗ್ಯ ಸಿಬ್ಬಂದಿ ನಿನ್ನೆವರೆಗೂ 17,877 ಮನೆಗಳ ಸಮೀಕ್ಷೆ ನಡೆಸಿದ್ದಾರೆ. ಆಡಿಟ್ ಬಳಿಕ ವರದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರವಾನೆ ಮಾಡಲಾಗುತ್ತದೆ.

ಡೆಂಗ್ಯೂ ಹೇಗೆ ಹರಡುತ್ತದೆ?

ಡೆಂಗ್ಯೂ ಜ್ವರ ಸೊಳ್ಳೆಯಿಂದ ಹರಡುವ ವೈರಲ್ ಸೋಂಕು ಆಗಿದೆ. ಇದು ಈಡಿಪಸ್‌ ಎಂಬ ಹೆಣ್ಣು ಸೊಳ್ಳೆಗಳ ಕಡಿತದಿಂದ ಹರಡುತ್ತದೆ. ಸೊಳ್ಳೆ ಕಚ್ಚಿದ 4-7 ದಿನಗಳ ನಂತರ ರೋಗ ಲಕ್ಷಣಗಳು ಸಾಮಾನ್ಯವಾಗಿ ಕಂಡು ಬರುತ್ತವೆ. ಇದರ ಪ್ರಭಾವ 10 ದಿನಗಳವರೆಗೆ ಇರುತ್ತದೆ. ಹೀಗಾಗಿ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಸ್ವಚ್ಛತೆಗೆ ಆದ್ಯತೆ ನೀಡುವುದು ಉತ್ತಮವಾಗಿದೆ.

ಡೆಂಗ್ಯೂ ಜ್ವರ ತಲೆನೋವಿನಂತಹ ರೋಗಲಕ್ಷಣಗಳನ್ನು ಉಂಟು ಮಾಡಬಹುದು. ಡೆಂಗ್ಯೂವನ್ನು ಹೆಮರಾಜಿಕ್ ಜ್ವರ ಎಂದೂ ಕರೆಯಲಾಗುತ್ತದೆ. ಡೆಂಗ್ಯೂ ಜ್ವರದ ತೀವ್ರ ಸ್ವರೂಪವು ತೀವ್ರ ರಕ್ತಸ್ರಾವ, ರಕ್ತದೊತ್ತಡ ಹಾಗೂ ರಕ್ತಕಣಗಳ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿ ವ್ಯಕ್ತಿಯ ಸಾವಿಗೂ ಕಾರಣವಾಗಬಹುದು. ಅಧಿಕ ಜ್ವರ, ತೀವ್ರ ತಲೆನೋವು, ವಾಂತಿ, ದೇಹದ ವಿವಿಧ ಭಾಗಗಳಲ್ಲಿ ದದ್ದುಗಳು, ಗ್ರಂಥಿಗಳಲ್ಲಿ ಊತ, ಮೂಳೆ ಮತ್ತು ಕೀಲು ನೋವು, ರಕ್ತಸ್ರಾವವಾಗವುದು ರೋಗ ಲಕ್ಷಣಗಳಾಗಿವೆ.

ಇದನ್ನೂ ಓದಿ: World Malaria Day: ಮಲೇರಿಯಾ ಮತ್ತು ಡೆಂಗ್ಯು ನಡುವಿನ ವ್ಯತ್ಯಾಸ ಏನು? ಗುರುತಿಸುವುದು ಹೇಗೆ?

Continue Reading
Advertisement
Actor Darshan grandmother came running distant town to see and not punish him
ಸ್ಯಾಂಡಲ್ ವುಡ್14 mins ago

Actor Darshan: ದರ್ಶನ್‌ ತಪ್ಪು ಮಾಡಿದ್ದಾನೆ ಆದರೆ ಶಿಕ್ಷೆ ಕೊಡಬೇಡಿ ಎಂದು ದೂರದ ಊರಿಂದ ಓಡೋಡಿ ಬಂದ ಅಜ್ಜಿ!

ಚಿಕ್ಕಬಳ್ಳಾಪುರ15 mins ago

Dead Body Found : ಮರದಲ್ಲಿ ನೇತಾಡುತ್ತಿತ್ತು ಅಪರಿಚಿತನ ಶವ; ಸತ್ತವನ ಕೈ ಮೇಲಿತ್ತು ಲಕ್ಷ್ಮಿ ಹೆಸರಿನ ಹಚ್ಚೆ

Hurricane Beryl
ಪ್ರಮುಖ ಸುದ್ದಿ20 mins ago

Hurricane Beryl : ವೆಸ್ಟ್​ ಇಂಡೀಸ್​ನಲ್ಲಿ ಚಂಡಮಾರುತ, ಸಂಕಷ್ಟದಲ್ಲಿ ಸಿಲುಕಿದ ಚಾಂಪಿಯನ್ ಭಾರತ ತಂಡ

NEET UG 2024 Re-Test Result
ದೇಶ30 mins ago

NEET UG 2024 Re-Test Result: ನೀಟ್‌ ಮರುಪರೀಕ್ಷೆಯ ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

National Doctor’s Day
ಆರೋಗ್ಯ33 mins ago

National Doctor’s Day: ಇಂದು ರಾಷ್ಟ್ರೀಯ ವೈದ್ಯರ ದಿನ; ಕಾಳಜಿಯ ಕೈಗಳಿಗೆ ಕೃತಜ್ಞತೆ ಹೇಳುವ ದಿನ

hassan murder case
ಕ್ರೈಂ42 mins ago

Murder Case: ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

Golden Star Ganesh Birthday Not Celebrating His Birthday This Year
ಸ್ಯಾಂಡಲ್ ವುಡ್43 mins ago

Golden Star Ganesh Birthday:  ಈ ವರ್ಷವೂ ಬರ್ತ್​ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ ಗೋಲ್ಡನ್ ಸ್ಟಾರ್ ಗಣೇಶ್

ICC Team of the Tournament
ಪ್ರಮುಖ ಸುದ್ದಿ45 mins ago

ICC Team of the Tournament : ಐಸಿಸಿ ಟೀಮ್​ ಆಫ್​​ ದಿ ಟೂರ್ನಮೆಂಟ್​ನಲ್ಲಿ ಆರು ಭಾರತೀಯರು​; ಕೊಹ್ಲಿಗಿಲ್ಲ ಚಾನ್ಸ್​

Job Alert
ಉದ್ಯೋಗ1 hour ago

Job Alert: HCLನಲ್ಲಿ ಖಾಲಿ ಇರುವ 56 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ 1 ಲಕ್ಷ ರೂ.ವರೆಗೆ: ಇಂದೇ ಅಪ್ಲೈ ಮಾಡಿ

murder case
ಬೆಂಗಳೂರು1 hour ago

Murder Case : ರೌಡಿಯಾಗಲು ಹೊರಟವನನ್ನು ಕೊಂದು ಹಾಕಿದ್ರು ಪುಂಡರು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ19 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು24 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌