ಉಡುಪಿಯಲ್ಲಿ ಸಾವರ್ಕರ್‌ ವರ್ಸಸ್‌ ಆಸ್ಕರ್‌: ಬ್ರಹ್ಮಗಿರಿ ಸರ್ಕಲ್‌ಗೆ ಹೆಸರಿಡುವ ವಿಚಾರದಲ್ಲಿ ಬಿಜೆಪಿ ನಾಯಕರ ನಡುವೆ ಫೈಟ್‌ - Vistara News

ಉಡುಪಿ

ಉಡುಪಿಯಲ್ಲಿ ಸಾವರ್ಕರ್‌ ವರ್ಸಸ್‌ ಆಸ್ಕರ್‌: ಬ್ರಹ್ಮಗಿರಿ ಸರ್ಕಲ್‌ಗೆ ಹೆಸರಿಡುವ ವಿಚಾರದಲ್ಲಿ ಬಿಜೆಪಿ ನಾಯಕರ ನಡುವೆ ಫೈಟ್‌

ಉಡುಪಿ ನಗರದ ಬ್ರಹ್ಮಗಿರಿ ಸರ್ಕಲ್‌ಗೆ ಸ್ವಾತಂತ್ರ್ಯ ವೀರ ಸಾವರ್ಕರ್‌ ಅವರ ಹೆಸರು ಇಡಬೇಕೇ? ಆಸ್ಕರ್‌ ಫರ್ನಾಂಡಿಸ್‌ ಹೆಸರು ಇಡಬೇಕೇ ಎಂಬ ಬಗ್ಗೆ ವಿವಾದ ಎದ್ದಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ಇಲ್ಲಿನ ಪ್ರತಿಷ್ಠಿತ ಬ್ರಹ್ಮಗಿರಿ ಸರ್ಕಲ್‌ಗೆ ಸ್ವಾತಂತ್ರ್ಯ ವೀರ ಸಾವರ್ಕರ್‌ ಅವರ ಹೆಸರಿಡಬೇಕೇ? ಅಥವಾ ಅಜಾಶತ್ರು ರಾಜಕಾರಣಿ, ಕಾಂಗ್ರೆಸ್‌ ನಾಯಕರಾಗಿದ್ದ ಆಸ್ಕರ್‌ ಫರ್ನಾಂಡಿಸ್‌ ಅವರ ಹೆಸರಿಡಬೇಕೇ ಎನ್ನುವ ಬಗ್ಗೆ ವಿವಾದ ಸೃಷ್ಟಿಯಾಗಿದೆ. ಹಾಗಂತ ಇದು ಬಿಜೆಪಿ, ಕಾಂಗ್ರೆಸ್‌ ನಡುವಿನ ವಿವಾದವೇನೂ ಅಲ್ಲ. ಬಿಜೆಪಿಯೊಳಗೇ ಇಬ್ಬರು ನಾಯಕರ ನಡುವಿನ ಫೈಟ್‌ ಇದು. ಬ್ರಹ್ಮಗಿರಿ ಸರ್ಕಲ್‌ ಎನ್ನುವುದು ರಾಷ್ಟ್ರೀಯ ಹೆದ್ದಾರಿಯಿಂದ ಉಡುಪಿ ನಗರ ಪ್ರವೇಶಿಸುವ ರಸ್ತೆಯಲ್ಲಿ ಸಿಗುವ ಪ್ರಮುಖ ವೃತ್ತ. ಇಲ್ಲಿ ಫೈಟಿಗೆ ನಿಂತಿರುವ ಬಿಜೆಪಿ ನಾಯಕರು ಯಾರೆಂದರೆ ಶಾಸಕ ರಘುಪತಿ ಭಟ್‌ ಮತ್ತು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ.

ರಘುಪತಿ ಭಟ್‌

ಆಸ್ಕರ್‌ ಹೆಸರು ಇಡಲು ನಿರ್ಧರಿಸಲಾಗಿತ್ತು
ಉಡುಪಿ ಸಂಸದರೂ, ಕೇಂದ್ರದಲ್ಲಿ ಸಚಿವರೂ ಆಗಿ ಬಹುಕಾಲ ರಾಜಕೀಯ ನಾಯಕರಾಗಿ ಮರೆದಿದ್ದ ಕಾಂಗ್ರೆಸ್‌ ಮುಖಂಡ ಆಸ್ಕರ್‌ ಫರ್ನಾಂಡಿಸ್‌ ಅವರು ೨೦೨೧ರ ಸೆಪ್ಟೆಂಬರ್‌ ೧೩ರಂದು ನಿಧನರಾಗಿದ್ದರು. ಅವರು ಕಾಂಗ್ರೆಸ್‌ ಪಕ್ಷದ ಮುಖಂಡರಾಗಿದ್ದರೂ ಎಲ್ಲ ಪಕ್ಷಗಳ ಜತೆಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದರು. ಜತೆಗೆ ಅಜಾತಶತ್ರು ಎಂಬ ಹೆಸರು ಪಡೆದಿದ್ದರು. ಅವರ ನಿಧನದ ಸಂದರ್ಭದಲ್ಲಿ ಮಾತನಾಡಿದ್ದ ಶಾಸಕ ರಘುಪತಿ ಭಟ್‌ ಅವರು ಬ್ರಹ್ಮಗಿರಿ ಸರ್ಕಲ್‌ಗೆ ಆಸ್ಕರ್‌ ಹೆಸರಿಡಲಾಗುವುದು ಎಂದು ಪ್ರಕಟಿಸಿದ್ದರು. ಮುಂದೆ ಈ ಬಗ್ಗೆ ನಗರಸಭೆಯಲ್ಲಿ ನಿರ್ಣಯವೂ ಆಗಿದೆ ಎನ್ನಲಾಗಿದೆ.

ಎದ್ದು ಬಂದ ಸಾವರ್ಕರ್‌ ವಿವಾದ

ಯಶಪಾಲ್‌ ಸುವರ್ಣ

ಈ ನಡುವೆ ಕಳೆದ ಆಗಸ್ಟ್‌ ೧೫ರ ಸ್ವಾತಂತ್ರ್ಯ ದಿನಾಚರಣೆ ಬೆನ್ನಿಗೇ ಶಿವಮೊಗ್ಗದಲ್ಲಿ ಮೊದಲ್ಗೊಂಡು ಸ್ವಾತಂತ್ರ್ಯ ವೀರ ಸಾವರ್ಕರ್‌ ಅವರು ಮತ್ತೆ ಸುದ್ದಿ ಕೇಂದ್ರ ಬಿಂದುವಾದರು. ಈ ವೇಳೆ ಬ್ರಹ್ಮಗಿರಿ ವೃತ್ತದಲ್ಲಿ ವಿ.ಡಿ. ಸಾವರ್ಕರ್‌ ಅವರ ಫ್ಲೆಕ್ಸ್‌ಗಳನ್ನು ಬಿಜೆಪಿ ನಾಯಕ ಯಶಪಾಲ್‌ ಸುವರ್ಣರ ನೇತೃತ್ವದಲ್ಲಿ ಹಾಕಲಾಗಿತ್ತು. ಆಗ ಎಸ್‌ಡಿಪಿಐ ಮತ್ತಿತರ ಸಂಘಟನೆಗಳು ಆಕ್ಷೇಪಿಸಿದ್ದವು. ಈ ಸಂದರ್ಭದಲ್ಲಿ ಹಬ್ಬಗಳೂ ಬಂದಿದ್ದರಿಂದ ವಿವಾದ ಬೇಡ ಎಂದು ಪೊಲೀಸರು ಮನವೊಲಿಸಿ ಫ್ಲೆಕ್ಸ್‌ಗಳನ್ನು ತೆಗೆಸಿದ್ದರು. ಆವತ್ತು ಫ್ಲೆಕ್ಸ್‌ ತೆಗೆಯುವ ಸಂದರ್ಭದಲ್ಲಿ ಯಶಪಾಲ್‌ ಸುವರ್ಣ ಅವರು ಒಂದು ಘೋಷಣೆ ಮಾಡಿದ್ದರು. ಬ್ರಹ್ಮಗಿರಿ ಸರ್ಕಲ್‌ಗೆ ವಿ.ಡಿ. ಸಾವರ್ಕರ್‌ ಅವರ ಹೆಸರು ಇಡಲಾಗುವುದು, ಸರ್ಕಲ್‌ನಲ್ಲಿ ಸಾವರ್ಕರ್‌ ಅವರ ದೊಡ್ಡ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದಿದ್ದರು. ಅದೆಲ್ಲ ಕಳೆದು ಸ್ವಲ್ಪ ದಿನವಾಗುತ್ತಿದ್ದಂತೆಯೇ ಯಶಪಾಲ್‌ ಸುವರ್ಣರು ಮುಂದಿನ ಹೆಜ್ಜೆ ಇಟ್ಟಿದ್ದಾರೆ. ಆಗ ಆಸ್ಕರ್‌ ಹೆಸರಿಡಲು ಮಾಡಿದ್ದ ನಿರ್ಣಯ ಮುನ್ನೆಲೆಗೆ ಬಂದಿದೆ.

ಬ್ರಹ್ಮಗಿರಿ ಸರ್ಕಲ್‌-ಚಿತ್ತರಂಜನ್‌ ಸರ್ಕಲ್‌
ಬ್ರಹ್ಮಗಿರಿ ಸರ್ಕಲ್‌ಗೆ ಸಾವರ್ಕರ್‌ ಹೆಸರು ಇಡಬೇಕು ಎನ್ನುವ ಪ್ರಸ್ತಾವನೆ ಚರ್ಚೆಗೆ ಬಂದಾಗ ಶಾಸಕ ರಘುಪತಿ ಭಟ್‌ ಇದನ್ನು ಆಕ್ಷೇಪಿಸಿದ್ದಾರೆ. ಈ ಸರ್ಕಲ್‌ಗೆ ಮೊದಲೇ ಆಸ್ಕರ್‌ ಹೆಸರು ಇಡಲು ನಿರ್ಧಾರವಾಗಿರುವುದರಿಂದ ಗೊಂದಲ ಮಾಡುವುದು ಬೇಡ. ಸಾವರ್ಕರ್‌ ಹೆಸರನ್ನು ಚಿತ್ತರಂಜನ್‌ ಸರ್ಕಲ್‌ಗೆ (ಹಳೆ ತಾಲೂಕು ಆಫೀಸು ಬಳಿ) ಇಡಬಹುದು, ಅಲ್ಲೇ ಪ್ರತಿಮೆಯನ್ನೂ ಸ್ಥಾಪಿಸಬಹುದು ಎಂದು ಎಂಬ ಸಲಹೆ ನೀಡಿದ್ದಾರೆ. ಇದು ಯಶಪಾಲ್‌ ಸುವರ್ಣ ಅವರಿಗೆ ಒಪ್ಪಿಯಾಗಿಲ್ಲ. ಅವರ ಪ್ರಕಾರ ಆಸ್ಕರ್‌ ಹೆಸರು ಬೇರೆಲ್ಲಾದರೂ ಇಡಬಹುದು.

ಹಾಗಿದ್ದರೆ ಯಶಪಾಲ್‌ ಸುವರ್ಣ ಹೇಳುವುದೇನು?
ʻʻನಮ್ಮ ಆದರ್ಶ ವ್ಯಕ್ತಿ ವೀರ ಸಾವರ್ಕರ್ ಕುರಿತಾಗಿ ನಮಗೆ ಸಾಕಷ್ಟು ಗೌರವವಿದೆ. ಬ್ರಹ್ಮಗಿರಿ ಸರ್ಕಲ್‌ಗೆ ಅವರ ಹೆಸರಿಡುವ, ಪ್ರತಿಮೆ ಸ್ಥಾಪಿಸುವ ಬಗ್ಗೆ ಸರ್ಕಾರಕ್ಕೆ ನಾವು ಈಗಾಗಲೇ ಮನವಿ ಮಾಡಿದ್ದೇವೆ. ಇವತ್ತಲ್ಲ ನಾಳೆ ಬ್ರಹ್ಮಗಿರಿ ಸರ್ಕಲ್ ನಲ್ಲೇ ಸಾವರ್ಕರ್ ಅವರ ಪ್ರತಿಮೆಯನ್ನು ನಿರ್ಮಾಣ ಮಾಡಿಯೇ ಮಾಡುತ್ತೇವೆ. ಸಾವರ್ಕರ್ ಓರ್ವ ದೇಶಭಕ್ತ ಅವರಿಗೆ ಉಡುಪಿಯ ಜನತೆ ಗೌರವವನ್ನು ಸಲ್ಲಿಸುತ್ತಿದ್ದಾರೆ. ಇಂದು ಹಿಂದುತ್ವಕ್ಕೆ ಸಂಘಟನೆಗೆ ಶಕ್ತಿ ನೀಡಿದ್ದು ಉಡುಪಿ. ಹಾಗಾಗಿ ಸಾವರ್ಕರ್ ಅವರ ಪ್ರತಿಮೆಯನ್ನು ನಿರ್ಮಿಸುವುದು ನಮಗೆಲ್ಲರಿಗೂ ಹೆಮ್ಮೆಯ ವಿಷಯ. ಈ ಬಗ್ಗೆ ಸರಕಾರ, ಶಾಸಕರು, ಸ್ಥಳೀಯ ನಗರಸಭೆಯ ಗಮನಕ್ಕೆ ತಂದು ಪ್ರತಿಮೆಯನ್ನು ನಿರ್ಮಿಸುತ್ತೇವೆʼʼ ಎಂದಿದ್ದಾರೆ ಯಶಪಾಲ್‌ ಸುವರ್ಣ.

ನಿರ್ಣಯ ಬದಲಿಸಲು ಮನವಿ ಮಾಡುತ್ತೇವೆ
ಆಸ್ಕರ್ ಫರ್ನಾಂಡಿಸ್‌ ಅವರು ತೀರಿಕೊಂಡ ನಂತರ ಶಾಸಕರು ಬ್ರಹ್ಮಗಿರಿ ಸರ್ಕಲ್‌ಗೆ ಆಸ್ಕರ್ ಹೆಸರಿಡಲು ತೀರ್ಮಾನ ಮಾಡಿದ್ದು ನಿಜ. ಆ ಸಂದರ್ಭದಲ್ಲಿ ಇಂತಹ ಪರಿಸ್ಥಿತಿಗಳು ಇರಲಿಲ್ಲ. ಈಗ ನಿರ್ಣಯವನ್ನು ಸೂಕ್ತ ಚೌಕಟ್ಟಿನಲ್ಲಿ ತಿದ್ದುಪಡಿ ಮಾಡುವ ಅವಶ್ಯಕತೆ ಇದೆ. ಈ ಬಗ್ಗೆ ಮನವಿ ಮಾಡುತ್ತೇವೆ ಎಂದು ಯಶಪಾಲ್‌ ಸುವರ್ಣ ಹೇಳಿದ್ದಾರೆ.

ʻʻಒಂದು ಬಾರಿ ಮಾಡಿದ ನಿರ್ಣಯವನ್ನು ವಾಪಾಸ್ ತೆಗೆದುಕೊಳ್ಳುವುದು ತುಂಬಾ ಕಷ್ಟದ ಕೆಲಸ ಎನ್ನುವುದು ಗೊತ್ತಿದೆ. ಕಾನೂನು ಬದ್ಧವಾಗಿ ಮಾಡಿದ ನಿರ್ಣಯವನ್ನು ವಾಪಾಸ್ ಪಡೆದು ಪುನಃ ಅರ್ಜಿ ಸಲ್ಲಿಸಬೇಕಾಗುತ್ತದೆ. ನಗರ ಸಭೆಗೆ ತನ್ನದೇ ಆದ ಕಾನೂನು ಚೌಕಟ್ಟು ಇದೆ. ಕಾನೂನಿನ ಚೌಕಟ್ಟಿನೊಳಗೆ ನಾವು ಕೆಲಸ ಮಾಡಲು ಸಿದ್ಧʼʼ ಎಂದಿದ್ದಾರೆ.

ಆಸ್ಕರ್‌ ಹೆಸರು ಬೇರೆಡೆಗೆ ಇಡಬಹುದು
ರಾಜಕೀಯವಾಗಿ, ಸಂಸದರಾಗಿ ಈ ಭಾಗದಲ್ಲಿ ಕೆಲಸ ಮಾಡಿದ ಆಸ್ಕರ್ ಅವರಿಗೂ ಸ್ವಾತಂತ್ರ್ಯ ವೀರ ಸಾವರ್ಕರ್ ಅವರಿಗೂ ವ್ಯತ್ಯಾಸವಿದೆ. ಆಸ್ಕರ್‌ ಅವರ ಹೆಸರನ್ನು ಬಸ್‌ ನಿಲ್ದಾಣ, ಯಾವುದೇ ಸರಕಾರಿ ಕಚೇರಿಗಳಿಗೆ ಇಡಲು ಅವಕಾಶವಿದೆ. ಆದರೆ, ಸಾವರ್ಕರ್‌ ಹಾಗಲ್ಲ ಎಂದಿದ್ದಾರೆ ಅವರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Lorry Accident: ಕಾರ್ಕಳದಲ್ಲಿ ಲಾರಿ ಪಲ್ಟಿಯಾಗಿ ಇಬ್ಬರು ಕಾರ್ಮಿಕರ ಸಾವು

Lorry Accident: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ನಿಟ್ಟೆ ಭ್ರಾಮರಿ ಕ್ರಾಸ್‌ನಲ್ಲಿ ಅಪಘಾತ ನಡೆದಿದೆ. ಈ ಬಗ್ಗೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

VISTARANEWS.COM


on

Lorry Accident
Koo

ಉಡುಪಿ: ಲಾರಿ ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ (Lorry Accident) ಜಿಲ್ಲೆಯ ಕಾರ್ಕಳ ತಾಲೂಕು ನಿಟ್ಟೆ ಭ್ರಾಮರಿ ಕ್ರಾಸ್‌ನಲ್ಲಿ ನಡೆದಿದೆ. ಕಲ್ಲು ತುಂಬಿದ್ದ ಲಾರಿ ಮಂಗಳೂರಿನ ಕಡೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದರಿಂದ ದುರ್ಘಟನೆ ನಡೆದಿದೆ.

ಕೊಪ್ಪಳ ಜಿಲ್ಲೆಯ ಯಲಬುರ್ಗಿ ದೇವಲಾಪುರದ ಕರಿಯಪ್ಪ ಮತ್ತು ನರಿಯಪ್ಪ ಮೃತ. ಘಟನಾ ಸ್ಥಳಕ್ಕೆ ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಬಗ್ಗೆ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Murder case : ಕುಡಿದ ನಶೆಯಲ್ಲಿ ಗೆಳೆಯನ ಕೊಂದ; ಸೇಡಿಗಾಗಿ ಗ್ರಾ.ಪಂ ಸದಸ್ಯನ ಮನೆ ಮೇಲೆ ಅಟ್ಯಾಕ್‌

ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸವಾರರ ದುರ್ಮರಣ

ಕಲಬುರಗಿ: ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ ಹೊಂದಿರುವುದು (Road Accident) ಜಿಲ್ಲೆಯ ಅಫಜಲಪುರ ತಾಲೂಕಿನ ಅಳ್ಳಗಿ ಕ್ರಾಸ್ ಬಳಿ ನಡೆದಿದೆ. ಅಫಜಲಪುರ ತಾಲೂಕಿನ ಹೊಸೂರು ಗ್ರಾಮದ ದೇವಾನಂದ್ ಘತ್ತರಗಿ (25), ಬಸವರಾಜ್ ದುರ್ಗ (56) ಮೃತ ದುರ್ದೈವಿಗಳು.

ಚೌಡಾಪುರದಿಂದ ಸ್ವಗ್ರಾಮಕ್ಕೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಟಿಪ್ಪರ್ ಡಿಕ್ಕಿಯಾಗಿದ್ದರಿಂದ ದುರಂತ ನಡೆದಿದೆ. ಅಪಘಾತ ನಡೆದ ಬಳಿಕ ಸ್ಥಳದಲ್ಲೇ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಅಫಜಲಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ವೀರಭದ್ರೇಶ್ವರ ಜಾತ್ರೆಯಲ್ಲಿ ಉತ್ತತ್ತಿ ಆಯುವಾಗ ರಥದ ಚಕ್ರದಡಿ‌ ಸಿಲುಕಿ ಇಬ್ಬರ ಸಾವು

ಗದಗ: ಗದಗ ಜಿಲ್ಲೆ ರೋಣ ಪಟ್ಟಣದ ವೀರಭದ್ರೇಶ್ವರ ಜಾತ್ರೆಯಲ್ಲಿ (Veerabhadreswara Fair) ರಥದ ಚಕ್ರದಡಿ‌ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ರಥ ಎಳೆಯುವ ವೇಳೆ ಈ ಅವಘಡ ನಡೆದಿದೆ.

ಪ್ರತಿವರ್ಷ ಜರುಗುವ ಅದ್ಧೂರಿಯಾಗಿ ವೀರಭದ್ರೇಶ್ವರ ಜಾತ್ರೆ ನಡೆಯುತ್ತಾ ಬರುತ್ತಿದೆ. ಈ ವೇಳೆ ಹತ್ತಾರು‌ ಸಾವಿರ ಭಕ್ತರ ಸಮ್ಮುಖದಲ್ಲಿ ಜಯಘೋಷಗಳೊಂದಿಗೆ ರಥೋತ್ಸವ ನಡೆಯುತ್ತದೆ. ಶನಿವಾರ ರಥೋತ್ಸವದ ವೇಳೆ ಭಕ್ತರೆಲ್ಲರೂ ಸೇರಿ ರಥ ಎಳೆಯುವಾಗ ರಥದ ಚಕ್ರದಡಿ ಇಬ್ಬರು ಬಿದ್ದಿದ್ದಾರೆ. ಇದು ಗೊತ್ತಾಗದೇ ಎಳೆದಿದ್ದರಿಂದ ಇಬ್ಬರು ಭಕ್ತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಒಬ್ಬ ಭಕ್ತನ ತಲೆ‌ ಮೇಲೆ ರಥದ ಚಕ್ರ ಹತ್ತಿಳಿದಿದ್ದರಿಂದ ತಲೆಬುರುಡೆ ಅಪ್ಪಚ್ಚಿಯಾಗಿದೆ. ಮತ್ತೊಬ್ಬನ ಬೆನ್ನಿನ ಮೇಲೆ ಹಾದು ಹೋಗಿದೆ. ಹೀಗಾಗಿ ಆತನೂ ಅಲ್ಲಿಯೇ ಉಸಿರು ಚೆಲ್ಲಿದ್ದಾನೆ. ರಥೋತ್ಸವಕ್ಕೆ‌ ಎಸೆಯುವ ಉತ್ತುತ್ತೆಯನ್ನು ಆರಿಸುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ | Anjali Murder Case: ನನ್ನ ಮಗ ಮಾಡಿದ್ದು ತಪ್ಪು, ಕೋರ್ಟ್ ಅವನಿಗೆ ಯಾವ ಶಿಕ್ಷೆಯಾದ್ರೂ ಕೊಡಲಿ: ಆರೋಪಿ ಗಿರೀಶ್ ತಾಯಿ

ಮಲ್ಲಪ್ಪ ಲಿಂಗನಗೌಡರ (55) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮತ್ತೊಬ್ಬನ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ರೋಣ ಪೊಲೀಸ್ ಠಾಣೆ‌ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ.

Continue Reading

ಮಳೆ

Karnataka Weather : ಮಲೆನಾಡಿನಲ್ಲಿ ಮಳೆ ಮೋಡಿ; ಭಾನುವಾರವೂ ಅಬ್ಬರ ಇರಲಿದೆ ನೋಡಿ

Heavy rain : ಶನಿವಾರದಂದು ಚಿಕ್ಕಮಗಳೂರು, ಹಾಸನ, ತುಮಕೂರಲ್ಲಿ ಭಾರಿ ಮಳೆಯಾಗುತ್ತಿದ್ದು, ರಸ್ತೆ ಮೇಲೆ ನದಿಯಂತೆ ನೀರು ಹರಿಯುತ್ತಿದೆ. ರಾಜ್ಯಾದ್ಯಂತ ಇನ್ನೊಂದು ವಾರ ಮಳೆ (Rain News) ಜೋರಾಗಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast Rain alert
Koo

ಚಿಕ್ಕಮಗಳೂರು/ಹಾಸನ: ರಾಜ್ಯಾದ್ಯಂತ ಗುಡುಗು ಸಹಿತ ಮಳೆಯು (Karnataka Weather Forecast) ಅಬ್ಬರಿಸುತ್ತಿದೆ. ಚಿಕ್ಕಮಗಳೂರಿನಲ್ಲಿ ಮಳೆ (Rain News) ಆರ್ಭಟ ಮುಂದುವರಿದಿದೆ. ರಾತ್ರಿಯಿಡೀ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದ್ದು ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಕಳಸಾ ಪುರ, ಗಾಳಿ ಹಳ್ಳಿ, ಮಾಗಡಿ, ಬೆಳವಾಡಿ, ಲಕ್ಯಾ, ಸಿಂದಿಗೆರೆ ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ರಸ್ತೆ, ಸೇತುವೆ ಮೇಲೆ ನದಿಯಂತೆ ನೀರು ಹರಿಯುತ್ತಿರುದೆ.

ಇನ್ನೂ ಭಾರಿ ಮಳೆಗೆ ಸುತ್ತಮುತ್ತಲಿನ ತೋಟ, ಗದ್ದೆಯು ಸಂಪೂರ್ಣ ಜಲಾವೃತಗೊಂಡಿದೆ. ಕೆರೆಗಳು ಸಂಪೂರ್ಣ ತುಂಬುವ ಹಂತ ತಲುಪಿದೆ. ಚಿಕ್ಕಮಗಳೂರು ತಾಲೂಕಿನ ಐತಿಹಾಸಿಕ ಮಾಗಡಿ ದೊಡ್ಡ ಕೆರೆಗೂ ಭಾರಿ ಪ್ರಮಾಣ ನೀರು ಹರಿದಿದೆ.

ಹಾಸನದಲ್ಲಿ ಸುರಿದ ಧಾರಾಕಾರ ಮಳೆ

ಹಾಸನ ನಗರದ ಹಲವೆಡೆ ಬಿಟ್ಟು ಬಿಡದೆ ಧಾರಾಕಾರವಾಗಿ ಮಳೆ ಸುರಿದಿದೆ. ಶನಿವಾರ ಕಳೆದೊಂದು ಗಂಟೆಯಿಂದ ಹಲವೆಡೆ ಮಳೆ ಆರ್ಭಟಿಸಿದ್ದು, ಜನ ಜೀವನ ಅಸ್ತವ್ಯಸ್ತವಾಗಿತ್ತು. ಭಾರಿ ಮಳೆಗೆ ಹಾಸನ ನಗರದಲ್ಲಿ ಪಾದಾಚಾರಿಗಳು ವಾಹನ ಸವಾರರು ಪರದಾಡಿದರು. ಚನ್ನರಾಯಪಟ್ಟಣ, ಹೊಳೆನರಸೀಪುರ, ಸಕಲೇಶಪುರ, ಆಲೂರು ಭಾಗಗಳಲ್ಲೂ ಮಳೆಯಾಗಿದೆ.

ತುಮಕೂರಿನಲ್ಲಿ ಗುಡುಗು ಸಹಿತ ಮಳೆ

ಶನಿವಾರ ಸಂಜೆಯಾಗುತ್ತಿದ್ದಂತೆ ತುಮಕೂರಿನಲ್ಲಿ ವರುಣನ ಆರ್ಭಟ ಜೋರಾಗಿತ್ತು. ಗುಡುಗು, ಸಿಡಿಲು, ಬಿರುಗಾಳಿ ಸಹಿತ ಮಳೆಯಾಗಿದೆ. ತುಮಕೂರು ನಗರ, ಗ್ರಾಮಾಂತರ, ಗುಬ್ಬಿ ಸೇರಿದಂತೆ ಜಿಲ್ಲೆಯ ಹಲವೆಡೆ ಭಾರಿ ಮಳೆಯಾಗಿದೆ. ತುಮಕೂರು ನಗರದ ರಸ್ತೆ ಮೇಲೆ ಹಳ್ಳದಂತೆ ಹರಿಯುತ್ತಿರುವ ನೀರಿನಿಂದಾಗಿ ವಾಹನ ಸವಾರರ ಪರದಾಡಬೇಕಾಯಿತು. ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.

ಇದನ್ನೂ ಓದಿ: Koppal Tragedy : ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಸಾವು; ಈಜಲು ಹೋದ ಯುವಕ ನೀರುಪಾಲು

ಭಾನುವಾರವೂ ಇರಲಿದೆ ಮಳೆ ಮೋಡಿ

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಜಿಲ್ಲೆಗಳ ಒಂದು ಅಥವಾ ಸ್ಥಳಗಳಲ್ಲಿ ಮಳೆಯು ಅಬ್ಬರಿಸಲಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗಲಿದೆ.

ಉತ್ತರ ಒಳನಾಡಿನ ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವೆಡೆ ಬಿರುಗಾಳಿ (30-40 kmph) ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಹಗುರ ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Murder case : ಕುಡಿದ ನಶೆಯಲ್ಲಿ ಗೆಳೆಯನ ಕೊಂದ; ಸೇಡಿಗಾಗಿ ಗ್ರಾ.ಪಂ ಸದಸ್ಯನ ಮನೆ ಮೇಲೆ ಅಟ್ಯಾಕ್‌

Murder case : ಬೆಂಗಳೂರಲ್ಲಿ ವ್ಯಕ್ತಿ ತಲೆ ಮೇಲೆ ಕಲ್ಲುಎತ್ತಿ ಹಾಕಿ ಹತ್ಯೆ ಮಾಡಲಾಗಿದೆ. ಗದಗನಲ್ಲಿ ಗ್ರಾ.ಪಂ ಸದಸ್ಯನ ಮನೆ ಮೇಲೆ ದಾಳಿ (assault Case) ಮಾಡಲಾಗಿದೆ. ಉಡುಪಿಯಲ್ಲಿ ತಡರಾತ್ರಿ ಪೆಟ್ರೋಲ್ ಹಾಕದೇ ಇದ್ದದ್ದಕ್ಕೆ ಬಂಕ್ ಸಿಬ್ಬಂದಿ ಮೇಲೆ ಯುವಕರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

VISTARANEWS.COM


on

By

murder case
Koo

ಬೆಂಗಳೂರು/ಗದಗ/ಉಡುಪಿ: ಬೆಂಗಳೂರಿನ ಯಲಹಂಕ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯ ಡೈರಿ ಸರ್ಕಲ್ ಬಳಿ ವ್ಯಕ್ತಿ ತಲೆ ಮೇಲೆ ಕಲ್ಲೆಸೆದು ಭೀಕರವಾಗಿ ಕೊಲೆ (Murder case) ಮಾಡಲಾಗಿದೆ. ನೇಪಾಳ ಮೂಲದ ಗಜೇಂದ್ರ ಸಿಂಗ್ ಕೊಲೆಯಾದವನು

ಕಳೆದ ಮೂರು ವರ್ಷದ ಹಿಂದೆ ನೇಪಾಳದಿಂದ ಬೆಂಗಳೂರಿಗೆ ಬಂದಿದ್ದ ಗಜೇಂದ್ರ ಸಿಂಗ್, ಯಲಹಂಕದ ತಿರುಪತಿ ಹೋಟೆಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದ. ನಿನ್ನೆ ಶುಕ್ರವಾರ ರಾತ್ರಿ ಕೆಲಸ ಮುಗಿಸಿಕೊಂಡು ಹೋಟೆಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಸಂತೋಷ್ ಜತೆ ಬಾರ್‌ಗೆ ಹೋಗಿದ್ದ.

ಇಬ್ಬರು ಕಂಠಪೂರ್ತಿ ಕುಡಿದು ಮನೆಗೆ ಹೋಗುವಾಗ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡಿದ್ದಾರೆ. ಗಲಾಟೆ ವಿಕೋಪಕ್ಕೆ ಹೋಗಿ ಗಜೇಂದ್ರ ಸಿಂಗ್ ತಲೆ ಮೇಲೆ ಕಲ್ಲುಎತ್ತಿ ಹಾಕಿ ಕೊಲೆ ಮಾಡಿ ಸಂತೋಷ್‌ ಎಸ್ಕೇಪ್‌ ಆಗಿದ್ದಾನೆ. ಘಟನೆ ಸಂಬಂದ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದ್ದು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಮೃತದೇಹವನ್ನು ಯಲಹಂಕ ‌ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ: Road Accident : ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ಹೆದ್ದಾರಿಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್; ಬೈಕ್‌ನಿಂದ ಎಗರಿ ಬಿದ್ದ ಬಾಲಕ ಸಾವು

ಸೇಡಿಗಾಗಾಗಿ ಗ್ರಾಪಂ ಸದಸ್ಯನ ಮನೆ ಮೇಲೆ ದಾಳಿ

ಗದಗ ತಾಲೂಕಿನ ಹುಯಿಲಗೋಳ ಗ್ರಾಮದಲ್ಲಿ ಕೆಲ ಕಿಡಿಗೇಡಿಗಳು ಸೇಡು ತೀರಿಸಿಕೊಳ್ಳಲು ರಾತ್ರೋರಾತ್ರಿ ಗ್ರಾಮ ಪಂಚಾಯಿತಿ ಸದಸ್ಯನ ಮನೆ ಮೇಲೆ ದಾಳಿ ಮಾಡಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂಗೊಳಿಸಿದ್ದಾರೆ. ದುಷ್ಕರ್ಮಿಗಳ ಅಟ್ಟಹಾಸದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೇ 8ರ ಮಧ್ಯರಾತ್ರಿ ಘಟನೆ ನಡೆದಿದೆ.

ಗ್ರಾಮ ಪಂಚಾಯಿತಿ ಸದಸ್ಯ ಮಿಲಿಂದ್ ಕಾಳೆ ಮನೆ ಮೇಲೆ ದಾಳಿ ಮಾಡಲಾಗಿದೆ. ಘಟನೆಯ ದೃಶ್ಯಾವಳಿ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ವಿಂಡ್ ಫ್ಯಾನ್ ವ್ಯವಹಾರವಾಗಿ ಮಿಲಿಂದ್ ಕಾಳೆ, ಪ್ರಕಾಶ್ ನಿಡಗುಂದಿ ಮಧ್ಯದ ಮುನಿಸಿನಿಂದ ಗಲಾಟೆ ನಡೆದಿದೆ ಎನ್ನಲಾಗಿದೆ. ಮಿಲಿಂದ್ ಕಾಳೆ ಮೇಲಿನ ಸೇಡಿಗಾಗಿ ಲಾಂಗ್, ಮಚ್ಚು, ರಾಡ್‌, ಕಲ್ಲುಗಳಿಂದ ದಾಳಿ ನಡೆಸಿದ್ದಾರೆ.

ಈ ಘಟನೆಯಿಂದ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಗದಗ ಗ್ರಾಮೀಣ ಠಾಣೆಯಲ್ಲಿ ಸುಮಾರು 11 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಹಲವರನ್ನು ಬಂಧಿಸಿದ್ದು, ಪರಾರಿ ಆಗಿರುವ ಇನ್ನುಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.

ಈ ಪ್ರಕರಣದ ಬೆನ್ನಲ್ಲೇ ಮೇ 9ರ ಮಧ್ಯಾಹ್ನ ಆರೋಪಿ ಪ್ರಕಾಶ್ ನಿಡಗುಂದಿ ಕಾರಿಗೆ ಬೆಂಕಿ ಹಾಗೂ ಮನೆ ಮೇಲೆ ದಾಳಿ ನಡೆಸಲಾಗಿದೆ. ಮಿಲಿಂದ್ ಕಾಳೆ ಮನೆ ಮೇಲೆ ದಾಳಿಯ ರಿವೇಂಜ್‌ಗೆ ಪ್ರಕಾಶ್‌ ನಿಡಗುಂದಿ ಕಾರಿಗೆ ಮಿಲಿಂದ ಕಾಳೆ ಬೆಂಬಲಿಗರು ಬೆಂಕಿ ಹಚ್ಚಿದ್ದಾರೆ. ಎರಡೂ ಬಣದಿಂದ ಹಲವರನ್ನು ಬಂಧಿಸಲಾಗಿದೆ. ಎರಡು ಕಡೆಯಿಂದಲ್ಲೂ ಪ್ರತ್ಯೇಕ ದೂರು ದಾಖಲಾಗಿದೆ.

ಉಡುಪಿಯಲ್ಲಿ ಪೆಟ್ರೋಲ್‌ ವಿಚಾರಕ್ಕೆ ಕಿರಿಕ್‌

ತಡರಾತ್ರಿ ಪೆಟ್ರೋಲ್ ಹಾಕದೇ ಇದ್ದದ್ದಕ್ಕೆ ಬಂಕ್ ಸಿಬ್ಬಂದಿ ಮೇಲೆ ಯುವಕರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉಡುಪಿ ನಗರದ ಪೆಟ್ರೋಲ್ ಬಂಕ್ ಒಂದರಲ್ಲಿ ನಡೆದಿದೆ. ಎರಡು ಬೈಕ್‌ಗಳಲ್ಲಿ ಮಧ್ಯರಾತ್ರಿ ಬಂದ ಯುವಕರು ಪೆಟ್ರೋಲ್ ಹಾಕಿಸಿಕೊಳ್ಳಲು ಬಂದಿದ್ದಾರೆ. ಪೆಟ್ರೋಲ್ ಹಾಕಲು ಹೇಳಿದಾಗ ಸಿಬ್ಬಂದಿ ಬಂದ್ ಆಗಿದೆ ಎಂದಿದ್ದಾರೆ. ಇಷ್ಟಕ್ಕೆ ಕೋಪಗೊಂಡ ಯುವಕ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾನೆ. ಪ್ರದೀಪ್ ಕುಮಾರ್ (26) ಹಲ್ಲೆಗೊಳಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಈ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಮಳೆಯಾಗುವ ನಿರೀಕ್ಷೆ ಇದ್ದು, 8 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದ್ದು (Rain alert) ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು, ಮಿಂಚು ಸಹಿತ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ರಾಮನಗರ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಈ ಪ್ರದೇಶದ ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದ್ದರೆ, ಉಳಿದ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಕೂಡಿರಲಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ 31 ಮತ್ತು 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಭಾರೀ ಮಳೆಗೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಗಾಳಿಯು ಗಂಟೆಗೆ 40-50 ಕಿ.ಮೀ ಇರಲಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Karnataka Police
ಸಂಪಾದಕೀಯ1 hour ago

ವಿಸ್ತಾರ ಸಂಪಾದಕೀಯ: ರಾಜ್ಯದಲ್ಲಿ ಕೊಲೆಗಳ‌ ಸರಮಾಲೆ; ಪೊಲೀಸ್ ಇಲಾಖೆ ಯಾಕಿಷ್ಟು‌ ದುರ್ಬಲವಾಗಿದೆ?

Jammu Kashmir
ದೇಶ1 hour ago

Jammu Kashmir: ಕಾಶ್ಮೀರದ 2 ಕಡೆ ಉಗ್ರರ ದಾಳಿ; ಮಾಜಿ ಸರ್ಪಂಚ್‌ ಬಲಿ, ರಾಜಸ್ಥಾನದ ದಂಪತಿಗೆ ಗಾಯ

RCB vs CSK
ಕ್ರೀಡೆ2 hours ago

RCB vs CSK: ಇದು ಆರ್​ಸಿಬಿಯ ಹೊಸ ಅಧ್ಯಾಯ; ಹಾಲಿ ಚಾಂಪಿಯನ್​ ಚೆನ್ನೈ ಮಣಿಸಿ ಪ್ಲೇ ಆಫ್​ಗೆ ಲಗ್ಗೆ

Anjali Murder Case
ಕರ್ನಾಟಕ2 hours ago

Anjali Murder Case: ಅಂಜಲಿ ಹತ್ಯೆ ಪ್ರಕರಣ; ಹು-ಧಾ ಐಪಿಎಸ್ ಅಧಿಕಾರಿಯ ತಲೆದಂಡ

Narendra Modi
ದೇಶ2 hours ago

Narendra Modi: ಗುರಿ ದೊಡ್ಡದಿದೆ, 3ನೇ ಅವಧಿಯ ಆಡಳಿತಕ್ಕೆ ಪ್ಲಾನ್‌ ರೆಡಿ ಇದೆ; ಮೋದಿ ವಿಶ್ವಾಸ

RCB vs CSK
ಕರ್ನಾಟಕ3 hours ago

RCB vs CSK: ಆರ್‌ಸಿಬಿ-ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಮೈದಾನಕ್ಕೆ ನುಗ್ಗುತ್ತೇನೆ ಎಂದಿದ್ದ ಯುವಕ ವಶಕ್ಕೆ

Bank of Bhagyalakshmi movie poster released
ಸಿನಿಮಾ3 hours ago

Kannada New Movie: ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಸಿನಿಮಾದ ಪೋಸ್ಟರ್ ಔಟ್‌; ಶೀಘ್ರದಲ್ಲೇ ತೆರೆಗೆ

Priyanka Vadra
ಪ್ರಮುಖ ಸುದ್ದಿ3 hours ago

ಹಿಂದು ಧರ್ಮದ ಆಶಯದಂತೆ ಕಾಂಗ್ರೆಸ್‌ ಸ್ವಾತಂತ್ರ್ಯಕ್ಕಾಗಿ ಹೋರಾಡಿತ್ತು ಎಂದ ಪ್ರಿಯಾಂಕಾ ವಾದ್ರಾ!

Kangana Ranaut
ದೇಶ4 hours ago

Kangana Ranaut: ಚುನಾವಣೆಯಲ್ಲಿ ಗೆದ್ದರೆ ನಟನೆಗೆ ವಿದಾಯ; ನಟಿ ಕಂಗನಾ ರಣಾವತ್‌ ಘೋಷಣೆ

RCB vs CSK
ಕ್ರೀಡೆ4 hours ago

RCB vs CSK: ಸಿಕ್ಸರ್​ ಮೂಲಕವೂ ದಾಖಲೆ ಬರೆದ ವಿರಾಟ್​ ಕೊಹ್ಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ1 day ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌