SundayRead | ಗಾಂಧಿ ಜಯಂತಿ | ಗಾಂಧಿ ರಾಜಕೀಯದ ಮರು ಮೌಲ್ಯಮಾಪನ - Vistara News

ಕಲೆ/ಸಾಹಿತ್ಯ

SundayRead | ಗಾಂಧಿ ಜಯಂತಿ | ಗಾಂಧಿ ರಾಜಕೀಯದ ಮರು ಮೌಲ್ಯಮಾಪನ

ಮಹಾತ್ಮ ಗಾಂಧಿ ಅವರ ರಾಜಕೀಯವನ್ನು ನಾವು ಇಂದು ಹೇಗೆ ಗ್ರಹಿಸಬೇಕು? ಅವರು ಇಂದು ಅಪ್ರಸ್ತುತರೇ? ಅವರ ಹೋರಾಟಕ್ಕೆ ಬೆದರಿ ಬ್ರಿಟಿಷರು ದೇಶ ಬಿಟ್ಟಿದ್ದಲ್ಲವೇ? ಗಾಂಧಿ ಜಯಂತಿ ನಿಮಿತ್ತ ಒಂದು ಚಿಂತನೆ.

VISTARANEWS.COM


on

M K Gandhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
RG hegade

| ಪ್ರೊ.ಆರ್.ಜಿ. ಹೆಗಡೆ

ದೇಶಕ್ಕೆ ಗಾಂಧಿ ಕೊಡುಗೆಯ ಮರು ಮೌಲ್ಯಮಾಪನ ನಡೆಯುತ್ತಿರುವಂತಿದೆ. ಗಾಂಧಿ ಪುಣ್ಯತಿಥಿಯ ದಿನ ಹಲವು ಲೇಖನಗಳು, ಮಾತುಗಳು ಬಂದವು. ಅಂತಹ ಅಭಿಪ್ರಾಯಗಳು ಹಿಂದೆಯೂ ನಿರಂತರವಾಗಿ ಬಂದಿವೆ. ಅವುಗಳಲ್ಲಿ ಕೆಲವು ನೇರವಾಗಿ, ಕೆಲವು ಸೂಕ್ಷ್ಮವಾಗಿ ಹೇಳಿದ್ದು ಒಂದೇ. ಏನೆಂದರೆ ಗಾಂಧಿ ಹೆಚ್ಚುಕಡಿಮೆ ಅಪ್ರಸ್ತುತ. ಕೆಲವು ಬರಹಗಳು ಇನ್ನೂ ಒಂದು ಮಾತು ಹೇಳಿದವು. ಏನೆಂದರೆ ಸ್ವಾತಂತ್ರ್ಯ ಚಳುವಳಿಯಲ್ಲಿ ಕೂಡ ಗಾಂಧಿಯ ಪಾತ್ರ ಹೇಳುವಷ್ಟು ದೊಡ್ಡದೇನೂ ಇರಲಿಲ್ಲ. ಬ್ರಿಟಿಷರು ಗಾಂಧಿ ಚಳವಳಿಗೆ ಹೆದರಿ ಬಿಟ್ಟು ಹೋದರೆನ್ನುವುದು ಹಾಸ್ಯಾಸ್ಪದ ಮಾತು. ಮತ್ತೆ ಕೆಲವು ಗಾಂಧಿ ಹಿಂದೂ ಧರ್ಮಕ್ಕೆ ದೊಡ್ಡ ಅಪಚಾರ ಮಾಡಿ ಇನ್ನೊಂದು ಧರ್ಮವನ್ನು ಎತ್ತಿಹಿಡಿದರು ಎಂಬ ಅಭಿಪ್ರಾಯವನ್ನೂ ಮಂಡಿಸಿವೆ/ಸುತ್ತಲೇ ಇವೆ (ದೀರ್ಘಕಾಲದಿಂದ ಪ್ರಚಲಿತವಿರುವ ಮಾತು). ಗೋಡ್ಸೆ ಗಾಂಧಿಯನ್ನು ಏಕೆ ಕೊಲ್ಲಬೇಕಾಯಿತು ಎನ್ನುವುದನ್ನು ಹಲವು ಕಾರಣಗಳ ಮೂಲಕ ಅವು ವಿಶದೀಕರಿಸಿವೆ/ಕರಿಸುತ್ತಿವೆ. ಅಂದರೆ ಗೋಡ್ಸೆಗೆ ಬಲವಾದ ಕಾರಣಗಳಿದ್ದವು ಎನ್ನುವುದು ವಾದ.

ಐತಿಹಾಸಿಕ ವ್ಯಕ್ತಿಗಳನ್ನು, ಘಟನೆಗಳನ್ನು ಮರುಮೌಲ್ಯಮಾಪನ ಮಾಡುವುದು ತಪ್ಪೇನೂ ಅಲ್ಲ. ಹಾಗೆಯೇ ಅಭಿಪ್ರಾಯಗಳಿಗೆಲ್ಲ ಉತ್ತರ ಬರೆದು ಗಾಂಧೀಜಿಯನ್ನು ‘ರಕ್ಷಿಸುವ’ ಅಗತ್ಯವೂ ಇಲ್ಲ. ಬದುಕಿರುವಾಗ ಕೂಡ ಆತ ತಮ್ಮನ್ನು ವಿಮರ್ಶೆಗಳಿಗೆ ತೆರೆದೇ ಇಟ್ಟಿದ್ದರು. ತಪ್ಪಿದ್ದಿದ್ದು ಗೊತ್ತಾದರೆ ಪಶ್ಚಾತ್ತಾಪ ಪಡುತ್ತಿದ್ದರು. ಕ್ಷಮೆ ಕೇಳುತ್ತಿದ್ದರು. ಸರಿಪಡಿಸಿಕೊಳ್ಳುತ್ತಿದ್ದರು. ಹಾಗಾಗಿ ಗಾಂಧಿ ಕುರಿತ ಹೊಸ, ಬೇರೆ ಬೇರೆ ದೃಷ್ಟಿಕೋನಗಳನ್ನು ನಿಂದಿಸುವ, ಖಂಡಿಸುವ ಅಗತ್ಯವೇನೂ ಇಲ್ಲ. ಆದರೂ ಈ ಹಿನ್ನೆಲೆಯಲ್ಲಿ ಬಹುಶಃ ನಾವು ಮಾಡಬೇಕಿರುವುದೆಂದರೆ ಗಾಂಧಿ ತತ್ವಗಳನ್ನು, ಗಾಂಧಿಯನ್ನು ಮತ್ತೊಮ್ಮೆ ನೋಡಿ ನಮ್ಮ ನಿಲುವುಗಳನ್ನು ಖಾತ್ರಿಪಡಿಸಿಕೊಳ್ಳುವುದು. ಈ ಲೇಖನದ ಉದ್ದೇಶ ಅದು.

1.. ಸಮಕಾಲೀನ ಗಾಂಧಿ ‘ವಿಮರ್ಶೆ’ಯ ಭಾಗವಾಗಿ ಬಂದಿರುವ ಮೊದಲ ಮಾತು ಗಾಂಧಿಯನ್ ಸತ್ಯಾಗ್ರಹಕ್ಕೆ ಬೆದರಿ ಬ್ರಿಟಿಷರು ಬಿಟ್ಟು ಹೋಗಲಿಲ್ಲ. ಅಂತಹ ಕ್ರೆಡಿಟ್‌ ಅನ್ನು ಗಾಂಧಿಗೆ ನೀಡುವುದು ಸರಿಯಲ್ಲ ಎನ್ನುವದು. ವಾದವನ್ನು ಪರಿಶೀಲಿಸಿಕೊಳ್ಳಬೇಕು. ಏಕೆಂದರೆ ಈ ವಿಷಯವೇ ಗಾಂಧಿ ತತ್ವದ ಪ್ರಸ್ತುತತೆಯನ್ನು ಅಥವಾ ಅಪ್ರಸ್ತುತತೆಯನ್ನು ನಿರ್ಣಯಿಸುವ ಪ್ರಮುಖ ಅಂಶ. ಒಂದು ರೀತಿಯಲ್ಲಿ ನೋಡಿದರೆ ಬಂದಿರುವ ಮಾತು ಸರಿ. ಗಾಂಧಿ ಸತ್ಯಾಗ್ರಹಕ್ಕೆ ʻಹೆದರಿ’ ಬ್ರಿಟಿಷರು ಭಾರತವನ್ನು ಬಿಟ್ಟು ಹೋಗಿರಲಿಕ್ಕಿಲ್ಲ. ಅಂತಹ ದಾಖಲೆಗಳೂ ಇದ್ದಂತಿಲ್ಲ. ಆದರೆ ಇಲ್ಲಿ ಒಂದು ಮಹತ್ವದ ವಿಷಯ. ಏನೆಂದರೆ ಸ್ವಾತಂತ್ರ್ಯ ಹೋರಾಟದ ಉದ್ದೇಶ ಕೂಡ ಬ್ರಿಟಿಷರನ್ನು ʻಹೆದರಿಸಿ’ ಓಡಿಸುವುದು ಇರಲಿಲ್ಲ. ಗಾಂಧಿ ಅಂತಹ ಭಾಷೆ ಮಾತನಾಡುತ್ತಿರಲಿಲ್ಲ. ಚಳವಳಿ ಬ್ರಿಟಿಷರ ʻವಿರುದ್ಧ’ ಇರಲೂ ಇಲ್ಲ. ಅಥವಾ ಅದು ಕೇವಲ ʻಸ್ವಾತಂತ್ರ್ಯ’ ಪಡೆಯುವ ಉದ್ದೇಶ ಹೊಂದಿದ ʻಹೋರಾಟ’ವೂ ಆಗಿರಲಿಲ್ಲ.

ಈ ಕುರಿತು ಅರಿಯಲು ಗಾಂಧಿ ಬರೆದ ಪುಸ್ತಕ ʻಹಿಂದ್ ಸ್ವರಾಜ್’ ಅನ್ನು ಓದಿಕೊಳ್ಳಬೇಕು. ತಮ್ಮ ʻಹೋರಾಟವನ್ನು’ ಆರಂಭಿಸುವುದಕ್ಕೆ ಮುನ್ನುಡಿಯಾಗಿ ಕೆಲವು ಪ್ರಶ್ನೆಗಳನ್ನು ಗಾಂಧಿ ತಮಗೆ ತಾವು ಕೇಳಿಕೊಳ್ಳುತ್ತಾರೆ. ಏನೆಂದರೆ ಬ್ರಿಟಿಷರ ವಿರುದ್ಧ ನಾವು ಯಾಕೆ ಹೋರಾಡಬೇಕು? ಅವರು ದೇಶವನ್ನು ಆಳಿದರೆ ಏನು ತೊಂದರೆ? ಸ್ವಾತಂತ್ರ್ಯ ಎಂದರೇನು? ಅವರನ್ನು ಓಡಿಸಿದ ನಂತರ ನಾವು ಯಾವ ರೀತಿಯ ಸರಕಾರವನ್ನು ರಚಿಸಬೇಕು? ಬಿಳಿ ಸಾಹಿಬ್‌ಗಳು(ಬ್ರಿಟಿಷರು) ಹೋಗಿ ಬ್ರೌನ್ ಸಾಹಿಬ್‌ಗಳು (ನಮ್ಮವರು) ಬಂದರೆ ಎಲ್ಲವೂ ಸರಿಹೋಗುತ್ತದೆಯೇ? ಈ ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ಉತ್ತರ ಹುಡುಕುತ್ತ ಗಾಂಧಿ ಗಾಢ ಚಿಂತನೆಯಲ್ಲಿ ತೊಡಗುತ್ತಾರೆ. ಓದಿನಲ್ಲಿ, ದೇಶಸಂಚಾರದಲ್ಲಿ, ಆತ್ಮವಿಮರ್ಶೆಯಲ್ಲಿ ತೊಡಗಿಕೊಳ್ಳುತ್ತಾರೆ. ನಂತರ ತಮಗೆ ತಾವು ಸ್ಪಷ್ಟಪಡಿಸಿಕೊಳ್ಳುವುದೆಂದರೆ ಚಳವಳಿಯ ಉದ್ದೇಶ ಕೇವಲ ಬ್ರಿಟಿಷರನ್ನು ತೊಲಗಿಸುವುದು ಅಲ್ಲವೇ ಅಲ್ಲ. ಹೋರಾಟವಿರುವುದು ಪಾಶ್ಚಿಮಾತ್ಯ ಸಂಸ್ಕೃತಿಯ ವಿರುದ್ಧ. ಆ ʻಸೈತಾನನ ಸಂಸ್ಕೃತಿ’ಯ ಅಥವಾ ʻವೇಶ್ಯಾ ಸಂಸ್ಕ್ರತಿʼಯ ವಿರುದ್ಧ. ಬೇರೆಲ್ಲೂ ಬಳಸದ ಕಟು ಶಬ್ದಗಳನ್ನು ಆ ಸಂಸ್ಕೃತಿಯನ್ನು ವರ್ಣಿಸಲು ಗಾಂಧಿ ಬಳಸುತ್ತಾರೆ.

gandhi

ಪಾಶ್ಚಿಮಾತ್ಯ ಸಂಸ್ಕೃತಿಯ ವಿರುದ್ಧ ಗಾಂಧಿ ಇಂತಹ ನಿಲುವು ತಳೆಯುವುದಕ್ಕೆ ಕಾರಣಗಳಿವೆ. ಏನೆಂದರೆ ಅವರು ಭಾವಿಸಿದಂತೆ ಆ ಸಂಸ್ಕೃತಿ ಆತ್ಮವಿಲ್ಲದ, ನೈತಿಕತೆ ಪ್ರಧಾನವಲ್ಲದ ಸಂಸ್ಕೃತಿ. ಅದು ಮೆಟೀರಿಯಲಿಸ್ಟಿಕ್ ಆದ, ಸುಖಭೋಗಕ್ಕೆ ಸಂಬಂಧಿಸಿದ ಉಪಕರಣಗಳನ್ನು ಉತ್ಪಾದಿಸುವುದು ಮತ್ತು ಇಂತಹ ಉಪಕರಣಗಳನ್ನು ಬಳಸಿ ಮನುಷ್ಯ ಸುಖಪಡುವುದಕ್ಕೆ ಪ್ರಾಮುಖ್ಯತೆ ನೀಡುವ ಸಂಸ್ಕೃತಿ. ಗಾಂಧಿ ಬಹುಶಃ ಭಾವಿಸಿದಂತೆ ಇಂತಹ ಸಂಸ್ಕೃತಿಗಳಿಂದಾಗಿಯೇ ಜಗತ್ತಿನಲ್ಲಿ ವಸಾಹತುಶಾಹಿ ಮನಸ್ಥಿತಿ ಹುಟ್ಟಿಕೊಂಡಿದ್ದು ಮತ್ತು ಜಾಗತಿಕ ಯುದ್ಧಗಳು ಸಂಭವಿಸಿದ್ದು. ಮತ್ತೂ ಅವರು ಭಾವಿಸಿದಂತೆ ಇಂತಹ ಮಟೀರಿಯಲಿಸಂನಿಂದಾಗಿಯೇ ಭಾರೀ ಪ್ರಮಾಣದ ಆರ್ಥಿಕ ಅಸಮಾನತೆ ಜಗತ್ತಿನಲ್ಲಿ ಆರಂಭವಾಗಿದ್ದು. ಕೆಲವು ಪಾಶ್ಚಾತ್ಯ ರಾಷ್ಟ್ರಗಳು ಶ್ರೀಮಂತವಾಗುತ್ತ ಹೋಗಿ ಜಗತ್ತಿನ ಕೋಟ್ಯಂತರ ಜನ ಬಡವರಾಗಿ ಹೋಗಿದ್ದು. ಮತ್ತು ಇಂತಹ ಸಂಸ್ಕೃತಿಯಿಂದಾಗಿಯೇ ಜಗತ್ತಿನಾದ್ಯಂತ ಜನ ತಮ್ಮ ದೇಶದಲ್ಲಿಯೇ ಅನ್ಯರಾಗಿ ಹೋಗಿ, ಘನತೆಯನ್ನು ಕಳೆದುಕೊಂಡು ಪಾಶ್ಚಿಮಾತ್ಯ ಸಂಸ್ಕೃತಿಯ ದಾಸರಾಗಿ ಹೋಗಿದ್ದು. ವಿಷಯವೆಂದರೆ ಸಂಸ್ಕೃತಿಯನ್ನು ಕಳೆದುಕೊಂಡು ಜನ ಪಶ್ಚಿಮದ ದಾಸರಾಗಿ ಹೋಗುತ್ತಿರುವುದರ ಕುರಿತು ಗಾಂಧಿಗೆ ತೀವ್ರ ಕಳವಳವಿತ್ತು.

ಇಂತಹ ಮೆಟೀರಿಯಲಿಸ್ಟಿಕ್ ಸಂಸ್ಕೃತಿಗೆ ವಿರುದ್ಧವಾಗಿ ಇನ್ನೊಂದು ರೀತಿಯ ಮೆಟೀರಿಯಲಿಸ್ಟಿಕ್ ಸಂಸ್ಕೃತಿಯನ್ನು ಹುಟ್ಟುಹಾಕುವುದರ ಮೂಲಕ ಕಾರ್ಲ್ ಮಾರ್ಕ್ಸ್ ಅದಕ್ಕೆ ಸ್ಪಂದಿಸಿದ್ದರೆ ಗಾಂಧಿ ಅದಕ್ಕೆ ಭಾರತೀಯ ಸಂಸ್ಕೃತಿಯ ಆಳದಲ್ಲಿರುವ ತಾತ್ವಿಕತೆಯ, ಧಾರ್ಮಿಕತೆಯ ಪುನರುತ್ಥಾನಕ್ಕೆ ಪ್ರಯತ್ನಿಸುವುದರ ಮೂಲಕ ಸ್ಪಂದಿಸಿದ್ದರು. ಸಂಸ್ಕೃತಿಯ ಪುನರುತ್ಥಾನ ಗಾಂಧಿ ಸ್ವಾತಂತ್ರ್ಯ ಹೋರಾಟದ ಪ್ರಾಥಮಿಕ ಗುರಿ. ಕೇವಲ ಬ್ರಿಟಿಷರನ್ನು ರಾಜಕೀಯವಾಗಿ ಓಡಿಸುವದು ಅಲ್ಲ. ಏಕೆಂದರೆ ಬ್ರಿಟಿಷರನ್ನು ಓಡಿಸಿಬಿಟ್ಟರೂ ಕೂಡ ಬ್ರಿಟಿಷ್ ಸಂಸ್ಕೃತಿ ನಮ್ಮಲ್ಲಿ ಉಳಿದುಹೋದರೆ ಏನನ್ನೂ ಸಾಧಿಸಿದಂತಾಗುವುದಿಲ್ಲ ಎನ್ನುವುದು ಗಾಂಧಿಗೆ ಗೊತ್ತಿತ್ತು. ಉದ್ದೇಶ ದೇಶಕ್ಕೆ ಕೇವಲ ಬ್ರಿಟಿಶ್ ದೇಶದಿಂದ ಸ್ವಾತಂತ್ರ‍್ಯ ಪಡೆಯುವುದಿರಲಿಲ್ಲ. ಗಾಂಧಿ ಚಳವಳಿ ಒಂದು ನಾಗರಿಕತೆಗಳ ಸಮರ. ಆ ಸಂಸ್ಕೃತಿಯಿಂದ ಮುಕ್ತಿ ಪಡೆದು ರಾಜಕೀಯ ಸ್ವಾತಂತ್ರ್ಯಕ್ಕೆ ಜನರನ್ನು ಅರ್ಹರನ್ನಾಗಿಸಿ ನಂತರ ರಾಜಕೀಯ ಸ್ವಾತಂತ್ರ್ಯ ಪಡೆಯುವ ಗುರಿ ಹೊಂದಿದ ಸಂಕೀರ್ಣ ʻಸಮರ’ ಅದು. ಮೂಲತಃ ಸಾಂಸ್ಕೃತಿಕ ಹೋರಾಟ.

ಹಾಗಾಗಿಯೇ ಅಲ್ಲಿ ಗಾಂಧಿ ಬಳಸಿದ ಆಯುಧಗಳು ಹಿಂದೂ ಸಂಸ್ಕೃತಿಯ ಆಳದಲ್ಲಿರುವ ಶ್ರೇಷ್ಠ ಮೌಲ್ಯಗಳು. ಮತ ಪ್ರತಿರೋಧದ ತಂತ್ರಗಳು. (ಉಪವಾಸ, ಭಜನೆ, ಹರತಾಳ ಮತ್ತು ಅಹಿಂಸೆ) ಅವುಗಳಿಗೆ ಅಪಾರ ಶಕ್ತಿಯಿದೆ ಎನ್ನುವುದು ಗಾಂಧಿಗೆ ಗೊತ್ತಿತ್ತು. ನಮ್ಮ ಋಷಿಮುನಿಗಳು, ಸಂತರು, ಧರ್ಮಸುಧಾರಕರು ಬಳಸಿದ ಮಾರ್ಗಗಳು ಅವೇ ಎನ್ನುವುದು ಗೊತ್ತಿತ್ತು. ನಮ್ಮ ಮೌಲ್ಯಗಳು ಬ್ರಿಟಿಷ್ ಮೌಲ್ಯಗಳಿಗೆ ಮುಖಾಮುಖಿಯಾದಾಗ ಆ ಸಂಸ್ಕೃತಿ ತನ್ನ ಕುರಿತು ನಾಚಿಕೊಳ್ಳುತ್ತದೆ. ಮತ್ತು ಹಾಗೆ ಆಗಬೇಕು. ಹಾಗೆ ಆದಾಗ ಇಂಗ್ಲೆಂಡ್ ಶರಣಾಗಿ ಹಿಂದೆ ಸರಿಯುತ್ತದೆ ಎನ್ನುವುದು ಗಾಂಧಿ ನಂಬುಗೆಯಾಗಿತ್ತು. ಇಂತಹ ಪ್ರಯತ್ನದಲ್ಲಿ ಗಾಂಧಿ ಕೆಲವು ಮಟ್ಟಿಗಾದರೂ ಯಶಸ್ವಿಯಾಗಿದ್ದು ನಮಗೆ ಗೊತ್ತಿದೆ. ಉದಾಹರಣೆಗಳಿವೆ. ಗಾಂಧಿಗೆ ಜೈಲುಶಿಕ್ಷೆ ವಿಧಿಸಿದ್ದ ನ್ಯಾಯಾಧೀಶ ಪಾಪಪ್ರಜ್ಞೆಯಿಂದ ಎದ್ದು ನಿಂತು ಬಿಡುತ್ತಾನೆ. ಉಪ್ಪಿನ ಸತ್ಯಾಗ್ರಹದ ಸಂದರ್ಭದಲ್ಲಿ ಇಡೀ ದೇಶವೇ ಉಪ್ಪು ತಯಾರಿಸಲು ಆರಂಭಿಸಿದಾಗ ಇಂಗ್ಲೆಂಡ್‌ಗೆ ಏನು ಮಾಡಬೇಕೆಂದೇ ತಿಳಿಯದೆ ಜಾಗತಿಕವಾಗಿ ಮುಖಭಂಗ ಅನುಭವಿಸುತ್ತದೆ. ಮತ್ತೆ ದೇಶ ಸ್ವತಂತ್ರವಾದ ನಂತರ ಕಲ್ಕತ್ತಾದಲ್ಲಿ ಆರಂಭವಾಗುವ ಭಾರೀ ಪ್ರಮಾಣದ ಕೋಮುಗಲಭೆಯನ್ನು ಗಾಂಧಿ ಏಕಾಂಗಿಯಾಗಿ ಹತೋಟಿಗೆ ತಂದಿದ್ದು ನೋಡಿದ ವಿಶ್ವ ದಂಗುಬಡಿದು ಹೋಗುತ್ತದೆ. ಅವರು ತಮ್ಮ ರಾಜಕೀಯ ಹೋರಾಟದ ಗೆಲ್ಲುವಿಕೆಗೆ ಒಂದು ನಿರ್ದಿಷ್ಟ ತಾರೀಕು ಇತ್ಯಾದಿ ಇಟ್ಟುಕೊಂಡಿರಲಿಲ್ಲ. ಮುಖ್ಯ ವಿಷಯ ಸಂಸ್ಕೃತಿಯ ಪುನರುತ್ಥಾನ. ಪುನರುತ್ಥಾನದ ನಾಯಕರಾಗಿದ್ದವರು ಗಾಂಧಿ. ಸಾಂಸ್ಕೃತಿಕ ಗೆಲುವಿನ ಮೂಲಕ ರಾಜಕೀಯ ಗೆಲುವು ತಂದವರು.

2. ಗಾಂಧೀಜಿಯನ್ನು ಇನ್ನೊಂದು ದೃಷ್ಟಿಯಿಂದ ಕೂಡ ನೋಡಬೇಕು. ಏನೆಂದರೆ ಇತಿಹಾಸಕಾರ್ತಿ ರೋಮಿಲಾ ಥಾಪರ್ ಹೇಳುವಂತೆ ಭಾರತಕ್ಕೆ ʻರಾಷ್ಟ್ರೀಯತೆಯ ಪರಿಕಲ್ಪನೆ’ಯನ್ನು ನೀಡಿಹೋದವರು ಗಾಂಧಿ. ಹಿಂದೆ ನಮ್ಮ ದೇಶದಲ್ಲಿ ರಾಜಕೀಯ ಐಕ್ಯತೆಯ ಪರಿಕಲ್ಪನೆಯೇ ಇರಲಿಲ್ಲ. (ಸಾಂಸ್ಕೃತಿಕ ಏಕತೆ ಇತ್ತು). ರಾಜರುಗಳು, ರಾಣಿಯರು ಅಲ್ಲಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ್ದು ತಮ್ಮ ಸಲುವಾಗಿ. ತಮ್ಮ ದತ್ತು ಪುತ್ರರ ಸಲುವಾಗಿ. ಭಾರತದ ಸಲುವಾಗಿ ಅಲ್ಲ. ಅವೆಲ್ಲ ಸ್ವಾತಂತ್ರ್ಯ ಹೋರಾಟಗಳಾಗಿರಲಿಲ್ಲ. ಹಾಗೆಯೇ ಮೊದಲನೆಯ ಪೀಳಿಗೆಯ ಮೋತಿಲಾಲ್ ನೆಹರು ಅಂತವರ ʻಸ್ವಾತಂತ್ರ್ಯ ಹೋರಾಟ’ಗಳಲ್ಲಿ ಸಾಮಾನ್ಯ ಜನರ, ಬಡವರ, ದೀನದಲಿತರ, ಮಹಿಳೆಯರ ಮಕ್ಕಳ ಭಾಗವಹಿಸುವಿಕೆ ಇರಲಿಲ್ಲ. ಇಂತಹ ಸಮುದಾಯಗಳಿಗೆ ಆ ಹೋರಾಟದಲ್ಲಿ ಗೌರವವೂ ಇರಲಿಲ್ಲ. ದೇಶಕ್ಕೆ ಗಾಂಧೀಜಿಯ ಕೊಡುಗೆ ಸ್ವಾತಂತ್ರ್ಯ ಹೋರಾಟವನ್ನು ಜನರ ಹೋರಾಟವನ್ನಾಗಿಸಿ ತಾವೆಲ್ಲರೂ ಒಂದು ನೇಶನ್ ಸ್ಟೇಟ್‌ನಲ್ಲಿ ಭಾಗಿದಾರರು ಎಂಬ ಭಾವನೆಯನ್ನು ಅವರ ಮನಸ್ಸುಗಳೊಳಗೆ ಮೂಡಿಸಿದ್ದು. ದೇಶದ ಜನ ಒಂದು ರಾಜಕೀಯ ಕೊಡೆಯ ಕೆಳಗೆ ಬಂದಿದ್ದು ಈಗ.

ಜನರ ಮನಸ್ಸುಗಳೊಳಗೆ ಧೈರ್ಯವನ್ನು, ಮೋಟಿವೇಶನ್‌ ಅನ್ನು ತುಂಬಿದ ಗಾಂಧಿ ಅವರನ್ನೆಲ್ಲ ಘನತೆವಂತರನ್ನಾಗಿ ಮಾಡಿಬಿಟ್ಟರು. ಎಂತಹ ಘನತೆವಂತರೆಂದರೆ ಯಾವ ಹಣ ಬಲವೂ, ಸೈನ್ಯ ಬಲವೂ ಬಗ್ಗಿಸಲಾರದಂತದ್ದು. ಹೀಗಾಗಿ ನಮ್ಮ ಹೋರಾಟ ಪ್ರಜಾಪ್ರಭುತ್ವ ಪರಂಪರೆಯ ಹೋರಾಟ ಕೂಡ ಆಗಿಹೋಯಿತು. ಗಮನಿಸಬೇಕು. ಭಾರತದ ಸ್ವಾತಂತ್ರ್ಯ ಹಿಂಸಾತ್ಮಕ ಮಾರ್ಗಗಳಿಂದ ಬಂದಿದ್ದರೆ ನಾವು ಪ್ರಜಾಪ್ರಭುತ್ವ ದೇಶವಾಗಿ ಉಳಿಯುತ್ತಿರಲಿಲ್ಲವೇನೋ. ಏಕೆಂದರೆ ಹಿಂಸಾತ್ಮಕ ಚಳವಳಿಗಳ ನಾಯಕತ್ವ ವಹಿಸಿದವರಿಗೆ ಅಧಿಕಾರ ಬಿಟ್ಟು ಕೊಡುವ ಮನಸ್ಸಿರುವುದಿಲ್ಲ. ಸೈನ್ಯ ಬಲದ ಹೋರಾಟಗಳು ಒಂದು ವ್ಯಕ್ತಿ ಅಥವಾ ವ್ಯವಸ್ಥೆ ತನ್ನನ್ನು ತಾನು ಬಲಪಡಿಸಿಕೊಳ್ಳುವ ಹೋರಾಟಗಳಾಗಿರುತ್ತವೆ. ಅಂತಹ ಹೋರಾಟಗಳು ಜನರ ಕೈಗೆ ಅಧಿಕಾರ ನೀಡುವುದಿಲ್ಲ. ಆದರೆ ಗಾಂಧಿ ದೇಶಾದ್ಯಂತ ಸೃಷ್ಟಿಸಿದ ಜನ ಬಡವರಾಗಿದ್ದರೂ ಕೂಡ ನೈತಿಕವಾಗಿ ಶ್ರೀಮಂತರಾಗಿದ್ದವರು. ಬೇರೆಯವರ ದಮ್ಮಡಿ ಕಾಸು ಬಯಸಿದವರಲ್ಲ. ಸರಕಾರದಿಂದಲೂ ಕೂಡ ಏನನ್ನೂ ಬಯಸಿದವರಲ್ಲ. ತ್ಯಾಗ ಮಾಡಲು ಸಿದ್ಧವಿದ್ದವರು.

ಇನ್ನೂ ಒಂದು ಸೂಕ್ಷ್ಮ ವಿಚಾರವಿದೆ. ಬಹುಶಃ ಗಾಂಧೀಜಿಗೂ ಗೊತ್ತಿತ್ತು. ಏನೆಂದರೆ ಅಂದಿನ ಸಂದರ್ಭದಲ್ಲಿ ಸೈನ್ಯದ ಮೂಲಕ ಹೋರಾಟ ನಡೆಸಿದ್ದರೆ ಬಹುಶಃ ನಾವು ಗೆಲ್ಲುವುದು ಅನುಮಾನವಿತ್ತು. ಏಕೆಂದರೆ ಭಾರತಕ್ಕೆ ಅಂದು ಅಂತಹ ಸೈನ್ಯದ ಶಕ್ತಿ ಇರಲಿಲ್ಲ. ಮತ್ತು ಯುದ್ಧಗಳಿಗೆ ಬೇಕಾಗುವ ಹಣ ನಮ್ಮ ಬಳಿ ಇರಲಿಲ್ಲ. ಅಲ್ಲದೆ ನಾವು ಅಂದು ಗೆಲ್ಲಲು ಬೇರೆ ದೇಶದ ಸಹಾಯ ಪಡೆದಿದ್ದರೆ ನಾವು ಆ ದೇಶದ ಅಡಿಯಾಳಾಗಿ ಹೋಗುತ್ತಿದ್ದೆವು. ಯಾಕೆಂದರೆ ಯಾವ ದೇಶವೂ ಇನ್ನೊಂದಕ್ಕೆ ಪುಕ್ಕಟೆ ಸಹಾಯ ಮಾಡುವುದಿಲ್ಲ. ಗಾಂಧಿ ಪ್ರಸ್ತುತತೆ /ಅಪ್ರಸ್ತುತತೆ ಚರ್ಚಿಸುವಾಗ ಬಹುಶಃ ನಾವು ಈ ವಿಚಾರಗಳನ್ನು ಲಕ್ಷ್ಯದಲ್ಲಿಕೊಳ್ಳಬೇಕು.

3. ಇನ್ನೂ ಒಂದು ಮಹತ್ವದ ವಿಷಯ. ಏನೆಂದರೆ ಗಾಂಧಿಗೆ ದೇಶಗಳ, ಸರಕಾರಗಳ ಕುರಿತೇ ಅನುಮಾನವಿತ್ತು. ಅಂದರೆ ಸಂಘಟಿತ ದೇಶಗಳನ್ನು, ಸರಕಾರಗಳನ್ನು ನಡೆಸುವ ʻನಾಯಕರು’ ಒಳಗಿನಿಂದ ಜನವಿರೋಧಿಯಾಗಿರಲು ಸಾಧ್ಯವಿದೆ ಎಂಬುದು ಅವರಿಗೆ ತಿಳಿದಿತ್ತು. ಅಂದಿನ ರಶಿಯಾ, ಚೀನಾ ಇಂತಹ ದೇಶಗಳ ಜನರ ಪರಿಸ್ಥಿತಿ ನೋಡಿದ್ದ ಗಾಂಧಿಗೆ ದೇಶಕ್ಕಿಂತಲೂ ಜನರ ಕಲ್ಯಾಣ ಮುಖ್ಯ ಎನ್ನುವುದು ತಿಳಿದಿತ್ತು. ದುರ್ಬಲರ, ದೀನ ದಲಿತರ, ಮಹಿಳೆಯರ ಮತ್ತು ಅಶಕ್ತರ ಕಾಳಜಿಯೇ ಹೆಚ್ಚು ಮಹತ್ವದ್ದಾಗಿತ್ತು. ನಿಜದ ಪ್ರಜಾಪ್ರಭುತ್ವ ಸಾಧಿಸಲು ಹೊರಟವರು ಗಾಂಧಿ. ಗ್ರಾಮ ಸ್ವರಾಜ್ಯದ ಪರಿಕಲ್ಪನೆಯನ್ನು ಅವರು ಮುಂದಿಟ್ಟಿದ್ದು ಇಂತಹ ಸಮಸ್ಯೆಯನ್ನು ಬಗೆಹರಿಸುವ ಸಲುವಾಗಿಯೇ. ವಿಕೇಂದ್ರೀಕ್ರತ ಆಡಳಿತದಲ್ಲಿ ಸರಕಾರಗಳು ವಿಪರೀತ ಬಲಗೊಳ್ಳುವ ಅಗತ್ಯತೆ ಇರುವುದಿಲ್ಲ. ಆಗ ಅವು ನಿಜವಾಗಿ ಜನರ ಸೇವೆಯಲ್ಲಿ ತೊಡಗಬಹುದು ಎನ್ನುವುದು ಗಾಂಧಿಗೆ ಅರಿವಿತ್ತು.

ಇದನ್ನೂ ಓದಿ | ಸವಿಸ್ತಾರ ಅಂಕಣ | ‘ಭಾರತದ ಜಾತ್ಯತೀತತೆʼ ಎನ್ನುವುದು ʼತುಷ್ಟೀಕರಣʼಕ್ಕೆ ಹೊದಿಸಿದ ಕವಚ

4. ಗಾಂಧಿ ದೇವಮಾನವರಾಗಿರಲಿಲ್ಲ. ಅವರೊಳಗೂ ಎಕ್ಸೆಂಟ್ರಿಕ್ ಎಂದು ಹೇಳಬೇಕಾದ ವರ್ತನೆಗಳಿದ್ದವು. ಉದಾಹರಣೆಗೆ ಗಾಂಧಿ ಕಸ್ತೂರಬಾ ಮೇಲೆ ವಿಪರೀತದ ಕಂಡಿಷನ್‌ಗಳನ್ನು ಹೇರಿದ್ದರು. ಕಾಮವನ್ನು ತ್ಯಜಿಸಿದ್ದರು. ಮಕ್ಕಳ ಮೇಲೆ ಕೂಡ ಅಪಾರ ಒತ್ತಡಗಳನ್ನು ಹೇರಿದ್ದರು. ಅದು ಹೋಗಲಿ. ಗಾಂಧಿ ತೆಗೆದುಕೊಂಡ ಇತರ ಹಲವಾರು ನಿರ್ಣಯಗಳು ಕೂಡ ರಾಜಕೀಯದ ದೃಷ್ಟಿಯಿಂದ ತಪ್ಪಾಗಿದ್ದವು ಎಂದೇ ಹೇಳಬೇಕು. ಮುಖ್ಯವಾಗಿ (ದೇಶವಿಭಜನೆ ತಪ್ಪಿಸಲು) ʻಜಿನ್ನಾ ಪ್ರಧಾನಿಯಾಗಲಿ’ ಎಂದು ಗಾಂಧಿ ಹೇಳಿದ್ದರು. ಅಲ್ಲದೆ ಪಾಕಿಸ್ತಾನ ಹೋರಾಟದ ಸಿದ್ಧತೆಯಲ್ಲಿದ್ದರೂ ಕೂಡ ಆ ದೇಶಕ್ಕೆ ಒಪ್ಪಂದದ ಪ್ರಕಾರ ನೀಡಬೇಕಾಗಿದ್ದ ಹಣವನ್ನು ನೀಡಬೇಕು ಎಂದು ಹೇಳಿದ್ದರು. ತಮ್ಮ ವೃದ್ಧಾಪ್ಯದಲ್ಲಿ ತಮಗೆ ಕಾಮವನ್ನು ಗೆಲ್ಲಲು ಸಾಧ್ಯವಾಗಿದೆಯೇ ಎನ್ನುವದನ್ನು ಖಾತ್ರಿಪಡಿಸಿಕೊಳ್ಳುವ ಸಲವಾಗಿ ಚಿತ್ರವಿಚಿತ್ರ ಪರೀಕ್ಷೆಗಳಿಗೆ ತಮ್ಮನ್ನು ಒಡ್ಡಿಕೊಂಡಿದ್ದರು. ಆದರೆ ಇಲ್ಲೆಲ್ಲ ನಾವು ಒಂದು ವಿಷಯ ಗಮನಿಸಬೇಕು. ಏನೆಂದರೆ ಗಾಂಧಿ ಬರೇ ರಾಜಕಾರಣಿಯಾಗಿರಲಿಲ್ಲ. ಆಳವಾಗಿ ಧಾರ್ಮಿಕರಾಗಿದ್ದ ಅವರು ಸಂತನಾಗುವ, ಅಂದರೆ ತಮ್ಮನ್ನು ಪರಿಶುದ್ಧನನ್ನಾಗಿಸಿಕೊಳ್ಳುವ, ಆತ್ಮವನ್ನು ಉನ್ನತಮಟ್ಟಕ್ಕೆ ಕರೆದೊಯ್ಯುವ, ʻಸತ್ಯವನ್ನು’ ಅರಸುವ ನಿರಂತರ ಪರೀಕ್ಷೆಯಲ್ಲಿ ತೊಡಗಿದ್ದರು. ಬರೇ ರಾಜಕಾರಣಿಯಾದರೆ ಅವರು ಹಲವು ವಿಷಯಗಳನ್ನು ಮುಚ್ಚಿಡುತ್ತಿದ್ದರೇನೋ. ಆದರೆ ಗಾಂಧಿ ತಮ್ಮ ಜೀವನವನ್ನು ಪಾರದರ್ಶಕವಾಗಿಟ್ಟುಕೊಳ್ಳುವ ಹಂಬಲದಲ್ಲಿ ಎಲ್ಲವನೂ ಹೇಳಿಕೊಂಡುಬಿಟ್ಟರು. ಬಹುಶಃ ಅವರಿಗೆ ತಮ್ಮ ಸಾವೂ ದೊಡ್ಡ ವಿಷಯವಾಗಿರಲಿಲ್ಲ. ಆತ್ಮಶುದ್ಧಿ ಹೆಚ್ಚು ಮಹತ್ವದ್ದಾಗಿತ್ತು.

5. ಮತ್ತೊಂದು ವಿಷಯ ಬಹುಶಃ ನಾವು ಮರೆಯಬಾರದು. ಏನೆಂದರೆ ಗಾಂಧಿ ಹಿಂದೂ ಧರ್ಮದ ಕಟ್ಟಾ ಅನುಯಾಯಿ. ತಮ್ಮನ್ನು ತಾನು ಸನಾತನಿ ಹಿಂದು ಎಂದು ಕರೆದುಕೊಂಡವರು. ನಮ್ಮ ದೇಶದ ಸ್ವಾತಂತ್ರ್ಯ ಚಳವಳಿ ಹಿಂದೂ ಧರ್ಮದ ಮೌಲ್ಯಗಳನ್ನು, ತಂತ್ರಗಳನ್ನು ಆಧಾರಸ್ತಂಭಗಳನ್ನಾಗಿ ಇಟ್ಟುಕೊಂಡ ಚಳವಳಿ. ಹಿಂದೂ ಮೌಲ್ಯಗಳ ಪುನರುತ್ಥಾನ ಸಾಧಿಸಿದ ಚಳವಳಿ. ಆದರೂ ಕೂಡ ಮುಖ್ಯವಾಗಿ ಸ್ವಾತಂತ್ರ್ಯಾನಂತರದ ಕೆಲವು ಘಟನೆಗಳನ್ನು ಬಿಡಿಬಿಡಿಯಾಗಿ ನೋಡಿದರೆ ಗಾಂಧಿ ಉದ್ದೇಶಗಳ ಕುರಿತು ಸಾಧಾರಣ ವ್ಯಕ್ತಿಯೊಬ್ಬನಿಗೆ ಅನುಮಾನ ಬಂದರೆ ಆಶ್ಚರ್ಯವಿಲ್ಲ. ಗಾಂಧಿಯ ಇಂತಹ ಕೆಲವು ವೈರುಧ್ಯಗಳನ್ನು ಹೇಗೆ ಅರ್ಥಮಾಡಿಕೊಳ್ಳುವುದು ಎಂಬ ಪ್ರಶ್ನೆ ಇದೆ. ಬಹುಶಃ ಇವನ್ನು ಗಾಂಧಿಯ ಸಮಗ್ರ ವ್ಯಕ್ತಿತ್ವದ ಭಾಗವಾಗಿ ನೋಡಬೇಕು. ಬಹುಶಃ ತಮ್ಮ ಜೀವನದ ಕೊನೆಯ ಹಂತಗಳಲ್ಲಿ ಗಾಂಧಿಗೆ ತಾವು ರಾಜಕೀಯವನ್ನು ಮೀರಿದ ಒಂದು ಮಹಾ ಆತ್ಮವಾಗಬೇಕು, ಸಂತನಾಗಬೇಕು ಎಂದು ಇದ್ದ ಅಭಿಲಾಷೆಯೇ ಅವರ ಕೆಲವು ನಿರ್ಣಯಗಳನ್ನು ನಿರೂಪಿಸಿರಬಹುದು.

ಇದನ್ನೂ ಓದಿ | ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿಗೆ ಮೋದಿ ನಮನ

6. ಗಾಂಧಿಯಂತಹ ಇಡೀ ದೇಶದ ಮೈಮನಗಳನ್ನು ಆವರಿಸಿದ ವ್ಯಕ್ತಿ ಅಪ್ರಸ್ತುತವೆಂದು, ಅಥವಾ ದೇಶದ ಯುವಜನತೆ ಗಾಂಧಿಯಿಂದ ದೂರಹೋಗುತ್ತಿರಬಹುದೆಂದು, ಹಲವರು ಅಥವಾ ಕನಿಷ್ಟ ಕೆಲವರು ಭಾವಿಸುತ್ತಿರುವ ಕಾರಣಗಳನ್ನೂ ಹುಡುಕಿಕೊಳ್ಳಬೇಕು. ಬಹುಶಃ ಇದಕ್ಕೆ ಕಾರಣ ಗಾಂಧಿಯಲ್ಲ. ಗಾಂಧೀಜಿಯ ಹೆಸರನ್ನು, ಭಾವಚಿತ್ರವನ್ನು ಬಳಸಿಕೊಂಡು ಸುದೀರ್ಘಕಾಲ ನಡೆದುಬಂದ ʻಖುಷಿಪಡಿಸುವ ರಾಜಕೀಯ’ ಮತ್ತು ಸಬ್ಸಿಡಿ ರಾಜಕೀಯ. ಈ ರಾಜಕೀಯದಿಂದ ಬೇಸತ್ತಿರುವ ಸಮಕಾಲೀನ ಯುವಜನತೆ ಅದಕ್ಕೆಲ್ಲ ಗಾಂಧಿಯೇ ಕಾರಣ ಎಂದು ನಂಬಿರಲೂ ಸಾಧ್ಯವಿದೆ.

ಬಹುಶಃ ಗಾಂಧೀಜಿಯ ಮರುಮೌಲ್ಯಮಾಪನ ಮೇಲೆ ಕಾಣಿಸಿದ ವಿಷಯಗಳನ್ನೂ ಪರಿಗಣಿಸಬೇಕು.

(ಲೇಖಕರು ಪ್ರಾಧ್ಯಾಪಕ, ಕವಿ, ಕತೆಗಾರ, ವಿಮರ್ಶಕ)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ಕರ್ನಾಟಕದ ಶ್ರುತಿ ಬಿ.ಆರ್, ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗರಿ

ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮಾಧವ್‌ ಕೌಶಿಕ್‌ ಅವರ ನೇತೃತ್ವದಲ್ಲಿ ಇತ್ತೀಚೆಗೆ ಗುಜರಾತ್‌ನ ನರ್ಮದಾದಲ್ಲಿ ನಡೆದ ಸಭೆಯಲ್ಲಿ ಪ್ರಶಸ್ತಿ ಘೋಷಣೆ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ. ದೇಶದ ಭಾಷೆಗಳ ಸಾಹಿತಿಗಳನ್ನು ಗುರುತಿಸಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷ ಪ್ರಶಸ್ತಿಗಳನ್ನು ನೀಡುತ್ತದೆ. ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಹಾಗೂ ಫಲಕವನ್ನು ಹೊಂದಿದೆ. ಒಟ್ಟು 23 ಸಾಹಿತಿಗಳಿಗೆ ಪ್ರಶಸ್ತಿ ನೀಡಲಾಗಿದ್ದು, ಕರ್ನಾಟಕದ ಇಬ್ಬರಿಗೂ ಪ್ರಶಸ್ತಿ ದೊರೆತಿದೆ.

VISTARANEWS.COM


on

Kendra Sahitya Akademi Award
Koo

ನವದೆಹಲಿ/ಬೆಂಗಳೂರು: ದೇಶದ 23 ಲೇಖಕರಿಗೆ 2024ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು (Kendra Sahitya Akademi Award) ಘೋಷಣೆ ಮಾಡಲಾಗಿದ್ದು, ಕರ್ನಾಟಕದ ಇಬ್ಬರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಶ್ರುತಿ ಬಿ.ಆರ್.‌ (Shruti BR) ಅವರಿಗೆ ಯುವ ಪುರಸ್ಕಾರ ಘೋಷಿಸಿದ್ದರೆ, ಕೃಷ್ಣಮೂರ್ತಿ ಬಿಳಿಗೆರೆ (Krishnamurthy Biligere) ಅವರಿಗೆ ಬಾಲ ಪುರಸ್ಕಾರ ಘೋಷಣೆ ಮಾಡಲಾಗಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮಾಧವ್‌ ಕೌಶಿಕ್‌ ಅವರ ನೇತೃತ್ವದಲ್ಲಿ ಇತ್ತೀಚೆಗೆ ಗುಜರಾತ್‌ನ ನರ್ಮದಾದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದೆ.

ಶ್ರುತಿ ಬಿ.ಆರ್.‌ ಅವರು ಚಿಕ್ಕಮಗಳೂರಿನ ತರೀಕೆರೆಯವರಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇವರು ಕೆಎಎಸ್‌ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕವಯತ್ರಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಇವರ ಮೊದಲ ಕವನ ಸಂಕಲನವಾದ ‘ಜೀರೋ ಬ್ಯಾಲೆನ್ಸ್’‌ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಲಭಿಸಿದೆ. ಮೈಸೂರು ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಐದು ಚಿನ್ನದ ಪದಕಗಳೊಂದಿಗೆ ಪಡೆದಿದ್ದು, ಪಿಎಚ್‌.ಡಿಯನ್ನೂ ಪಡೆದಿದ್ದಾರೆ. ಇವರ ಲೇಖನಗಳು, ಕವಿತೆಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ.

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಬಿಳಿಗೆರೆ ಅವರು ಇದೇ ಜಿಲ್ಲೆಯ ಹುಳಿಯಾರಿನ ಬಿಎಂಎಸ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾವಯವ ಕೃಷಿ, ಬೀಜ ನಾಟಿ, ನೀರು ಸಂಗ್ರಹ ಸೇರಿ ಹಲವು ಚಳವಳಿಗಳಲ್ಲೂ ಸಕ್ರಿಯರಾಗಿರುವ ಇವರು, ಸಾಹಿತ್ಯ ಕೃಷಿಯಲ್ಲೂ ನಾಡಿನಾದ್ಯಂತ ಹೆಸರು ಗಳಿಸಿದ್ದಾರೆ. ಕಾವ್ಯ, ಕತೆ, ನಾಟಕಗಳ ರಚನೆ ಮೂಲಕ ಇವರು ನಾಡಿನ ಮನೆಮಾತಾಗಿದ್ದಾರೆ. ಇವರಿಗೆ ಎರಡು ಬಾರಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ದೊರೆತಿವೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಸದಸ್ಯರನ್ನೂ ಒಳಗೊಂಡ ತೀರ್ಪುಗಾರರ ಸಮಿತಿ ಮಾಡಿದ ಶಿಫಾರಸಿನಂತೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ದೇಶದ ಭಾಷೆಗಳ ಸಾಹಿತಿಗಳನ್ನು ಗುರುತಿಸಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷ ಪ್ರಶಸ್ತಿಗಳನ್ನು ನೀಡುತ್ತದೆ. ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಹಾಗೂ ಫಲಕವನ್ನು ಹೊಂದಿದೆ.

ಕನ್ನಡದ ಖ್ಯಾತ ಬರಹಗಾರ ಲಕ್ಷ್ಮೀಶ ತೋಳ್ಪಾಡಿ ಅವರಿಗೆ 2023ರ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಲಾಗಿತ್ತು. ಲಕ್ಷ್ಮೀಶ ತೋಳ್ಪಾಡಿ ಅವರ ಮಹಾಭಾರತದ ಅನುಸಂಧಾನದ ಭಾರತಯಾತ್ರೆ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿತ್ತು. ಕನ್ನಡ ವಿಭಾಗದ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಹಿರಿಯ ವಿಜ್ಞಾನ ಬರಹಗಾರ ನಾಗೇಶ್ ಹೆಗಡೆ, ಆನಂದ ಝುಂಜರವಾಡ ಮತ್ತು ಜೆ. ಎನ್. ತೇಜಶ್ರೀ ಅವರಿದ್ದರು.

ಇದನ್ನೂ ಓದಿ: Kendra Sahitya Akademi Award: ಇಬ್ಬರು ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ; ಯಾರಿವರು?

Continue Reading

ಪ್ರಮುಖ ಸುದ್ದಿ

Kendra Sahitya Akademi Award: ಇಬ್ಬರು ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ; ಯಾರಿವರು?

Kendra Sahitya Akademi Award: ಮಾನಸ್‌ ರಂಜನ್‌ ಸಮಾಲ್‌ ಅವರು ರಚಿಸಿದ ಸಣ್ಣ ಕತೆಗಳ ಸಂಕಲನವಾದ ‘ಗಾಪ ಕಲಿಕಾ’ ಕೃತಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಹಾಗೆಯೇ, ಸಂಜಯ್‌ ಕುಮಾರ್‌ ಪಾಂಡಾ ಅವರ ‘ಹು ಬೈಯಾ’ ಕೃತಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಇದು ಕೂಡ ಸಣ್ಣ ಕತೆಗಳ ಸಂಕಲನವಾಗಿದೆ. ಇಬ್ಬರ ಕೃತಿಗಳಿಗೂ ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರಶಸ್ತಿ ಘೋಷಿಸಿದೆ/

VISTARANEWS.COM


on

Kendra Sahitya Akademi Award
Koo

ನವದೆಹಲಿ: ಒಡಿಶಾದ ಇಬ್ಬರು ಲೇಖಕರಿಗೆ 2024ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು (Kendra Sahitya Akademi Award 2024) ಅವರಿಗೆ ಘೋಷಣೆ ಮಾಡಲಾಗಿದೆ. ಒಡಿಶಾ ಲೇಖಕರಾದ ಮಾನಸ್‌ ರಂಜನ್‌ ಸಮಾಲ್‌ (Manas Ranjan Samal) ಹಾಗೂ ಸಂಜಯ್‌ ಕುಮಾರ್‌ ಪಾಂಡಾ (Sanjay Kumar Panda) ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮಾಧವ್‌ ಕೌಶಿಕ್‌ ಅವರ ನೇತೃತ್ವದಲ್ಲಿ ಇತ್ತೀಚೆಗೆ ಗುಜರಾತ್‌ನ ನರ್ಮದಾದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದೆ. ಕರ್ನಾಟಕದ ಇಬ್ಬರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಶ್ರುತಿ ಬಿ.ಆರ್.‌ (Shruti BR) ಅವರಿಗೆ ಯುವ ಪುರಸ್ಕಾರ ಘೋಷಿಸಿದ್ದರೆ, ಕೃಷ್ಣಮೂರ್ತಿ ಬಿಳಿಗೆರೆ (Krishnamurthy Biligere) ಅವರಿಗೆ ಬಾಲ ಪುರಸ್ಕಾರ ಘೋಷಣೆ ಮಾಡಲಾಗಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಎರಡು ವಿಭಾಗಗಳಲ್ಲಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಮಾನಸ್‌ ರಂಜನ್‌ ಸಮಾಲ್‌ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಬಾಲ ಪುರಸ್ಕಾರ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಸಂಜಯ್‌ ಕುಮಾರ್‌ ಪಾಂಡಾ ಅವರಿಗೆ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರ ಘೋಷಿಸಲಾಗಿದೆ. ಮಾನಸ್‌ ರಂಜನ್‌ ಸಮಾಲ್‌ ಅವರು ರಚಿಸಿದ ಸಣ್ಣ ಕತೆಗಳ ಸಂಕಲನವಾದ ‘ಗಾಪ ಕಲಿಕಾ’ (Gapa Kalika) ಕೃತಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಹಾಗೆಯೇ, ಸಂಜಯ್‌ ಕುಮಾರ್‌ ಪಾಂಡಾ ಅವರ ‘ಹು ಬೈಯಾ’ (Hu Baia) ಕೃತಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಇದು ಕೂಡ ಸಣ್ಣ ಕತೆಗಳ ಸಂಕಲನವಾಗಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಸದಸ್ಯರನ್ನೂ ಒಳಗೊಂಡ ತೀರ್ಪುಗಾರರ ಸಮಿತಿ ಮಾಡಿದ ಶಿಫಾರಸಿನಂತೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ದೇಶದ ಭಾಷೆಗಳ ಸಾಹಿತಿಗಳನ್ನು ಗುರುತಿಸಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷ ಪ್ರಶಸ್ತಿಗಳನ್ನು ನೀಡುತ್ತದೆ. ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಹಾಗೂ ಫಲಕವನ್ನು ಹೊಂದಿದೆ.

ಕನ್ನಡದ ಖ್ಯಾತ ಬರಹಗಾರ ಲಕ್ಷ್ಮೀಶ ತೋಳ್ಪಾಡಿ ಅವರಿಗೆ 2023ರ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಲಾಗಿತ್ತು. ಲಕ್ಷ್ಮೀಶ ತೋಳ್ಪಾಡಿ ಅವರ ಮಹಾಭಾರತದ ಅನುಸಂಧಾನದ ಭಾರತಯಾತ್ರೆ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿತ್ತು. ಕನ್ನಡ ವಿಭಾಗದ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಹಿರಿಯ ವಿಜ್ಞಾನ ಬರಹಗಾರ ನಾಗೇಶ್ ಹೆಗಡೆ, ಆನಂದ ಝುಂಜರವಾಡ ಮತ್ತು ಜೆ. ಎನ್. ತೇಜಶ್ರೀ ಅವರಿದ್ದರು.

ಭಗವದ್ಗೀತೆಯ ಕುರಿತಾದ ‘ಮಹಾಯುದ್ದಕ್ಕೆ ಮುನ್ನ’ ಅವರ ಮೊದಲ ಪ್ರಕಟಿತ ಕೃತಿಯಾಗಿದೆ. ಭಾಗವತದ ಬಗ್ಗೆ ಬರೆದ ಸರಣಿ ಬರಹಗಳ ಸಂಕಲನ ‘ಸಂಪಿಗೆ ಭಾಗವತ’, ‘ಬೆಟ್ಟ ಮಹಮದನ ಬಳಿಗೆ ಬಾರದಿದ್ದರೆ’, ‘ಭವ ತಲ್ಲಣ’ ಅವರ ಇತರ ಕೃತಿಗಳಾಗಿವೆ. ಜತೆಗೆ, ಕನ್ನಡದ ಅನೇಕ ಪತ್ರಿಕೆಗಳಲ್ಲಿ ಅವರ ಲೇಖನಗಳು ಪ್ರಕವಾಗುತ್ತಲೇ ಇರುತ್ತವೆ.

ಇದನ್ನೂ ಓದಿ: All We Imagine As Light: ʻದಿ ಕೇರಳ ಸ್ಟೋರಿʼ ಸಿನಿಮಾ ಆಡಿಷನ್‌ ರಿಜೆಕ್ಟ್‌ ಮಾಡಿದ್ರಂತೆ ಕಾನ್‌ ಪ್ರಶಸ್ತಿ ವಿಜೇತೆ!

Continue Reading

ಕರ್ನಾಟಕ

Bengaluru News: ಬೆಂಗಳೂರಿನಲ್ಲಿ ಜೂ.15ರಂದು ʼನಾರಿ ಸಮ್ಮಾನ್‌ʼ ಪ್ರಶಸ್ತಿ ಪ್ರದಾನ

Bengaluru News: ಮೀಡಿಯಾ ವಿಷನ್‌, ಬೆಂಗಳೂರು, ಬಿ.ಎಂ. ವಿರುಪಾಕ್ಷಯ್ಯ ಕಲಾ ಟ್ರಸ್ಟ್‌ (ಬಿ.ಎಂ.ವಿ.), ಬಸವ ಪರಿಷತ್‌, ವಿಸ್ತಾರ ನ್ಯೂಸ್‌ ಸಹಯೋಗದಲ್ಲಿ ಇದೇ ಜೂ.15ರಂದು ಶನಿವಾರ ಸಂಜೆ 5 ಗಂಟೆಗೆ ಬೆಂಗಳೂರು ನಗರದ ಅರಮನೆ ರಸ್ತೆಯಲ್ಲಿರುವ ಸ್ಕೌಟ್ಸ್‌ ಅಂಡ್‌ ಗೈಡ್ಸ್‌ ಸಂಸ್ಥೆ ಪ್ರಾಂಗಣದಲ್ಲಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ʼನಾರಿ ಸಮ್ಮಾನ್‌ 2024ʼ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.

VISTARANEWS.COM


on

Nari Samman 2024 award ceremony on June 15 in Bengaluru
Koo

ಬೆಂಗಳೂರು: ಮೀಡಿಯಾ ವಿಷನ್‌, ಬೆಂಗಳೂರು, ಬಿ.ಎಂ. ವಿರುಪಾಕ್ಷಯ್ಯ ಕಲಾ ಟ್ರಸ್ಟ್‌ (ಬಿ.ಎಂ.ವಿ.), ಬಸವ ಪರಿಷತ್‌, ವಿಸ್ತಾರ ನ್ಯೂಸ್‌ ಸಹಯೋಗದಲ್ಲಿ ಇದೇ ಜೂ.15ರಂದು ಶನಿವಾರ ಸಂಜೆ 5 ಗಂಟೆಗೆ, ಬೆಂಗಳೂರು ನಗರದ ಅರಮನೆ ರಸ್ತೆಯಲ್ಲಿರುವ ಸ್ಕೌಟ್ಸ್‌ ಅಂಡ್‌ ಗೈಡ್ಸ್‌ ಸಂಸ್ಥೆ ಪ್ರಾಂಗಣದಲ್ಲಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ʼನಾರಿ ಸಮ್ಮಾನ್‌ 2024ʼ ಪ್ರಶಸ್ತಿ ಪ್ರದಾನ ಕಾರ್ಯಕ್ರಮ (Bengaluru News) ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಾಂಬೆ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾ. ಮಂಜುಳಾ ಚೆಲ್ಲೂರು, ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಶಾಲಿನಿ ರಜನೀಶ್‌, ಖ್ಯಾತ ಚಲನಚಿತ್ರ ನಟ ಶ್ರೀನಾಥ್‌, ಬೆಂಗಳೂರಿನ ಬಸವ ಪರಿಷತ್‌ ಅಧ್ಯಕ್ಷೆ ಎಂ.ಪಿ. ಉಮಾದೇವಿ, ಮಾಜಿ ಸಚಿವೆ ರಾಣಿ ಸತೀಶ್‌, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಇಸ್ರೋ ಸಂಸ್ಥೆ ವಿಜ್ಞಾನಿ ಬಿ.ಎಚ್‌.ಎಂ. ದಾರುಕೇಶ್‌, ಡಾ. ಎಚ್‌.ಆರ್‌. ಶಾಂತರಾಜಣ್ಣ, ಚಲನಚಿತ್ರ ನಟ ಸುಚೇಂದ್ರ ಪ್ರಸಾದ್‌, ಚಲನಚಿತ್ರ ನಟಿ ಭಾವನಾ, ಡಾ. ಮಂಜುಳಾ ಎ. ಪಾಟೀಲ್‌ ಪಾಲ್ಗೊಳ್ಳುವರು.

ಇದನ್ನೂ ಓದಿ: Gold Rate Today: ಆಭರಣ ಖರೀದಿಸಲು ಇದು ಸಕಾಲ; ಚಿನ್ನದ ಬೆಲೆ ಇಳಿಕೆ

ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಸಮಾರಂಭದಲ್ಲಿ ಕಿರುತೆರೆ ನಿರೂಪಕಿ ಅನುಶ್ರೀ, ಚಲನಚಿತ್ರ ನಟಿ ಸೋನಾಲ್‌ ಮಂಥೇರೋ, ಉದ್ಯಮಿ ಪಲ್ಲವಿ ರವಿ, ಡಾ. ಮಮತಾ ಎಸ್‌.ಎಚ್‌., ಉಮಾಬಾಯಿ ಖರೆ, ಜ್ಯೋತಿ ಟೋಸೂರ, ಡಾ. ರತ್ನಮ್ಮ ಆರ್‌., ಹಿರಿಯ ನಿರೂಪಕಿ ನವಿತ ಜೈನ್‌, ಸುಜಾತ ಬಯ್ಯಾಪುರ, ಮಧುರ ಅಶೋಕ್‌ ಕುಮಾರ, ಡಾ. ಸುಮಾ ಬಿರಾದಾರ, ಸುಮಿತ್ರಾ ಎಂ.ಪಿ.ರೇಣುಖಾಚಾರ್ಯ, ಡಾ. ಸಂದರ್ಶಿನಿ ನರೇಂದ್ರಕುಮಾರ್‌, ಡಾ. ಪುಲಿಗೆರೆ ಸಂಪದ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ: Euro Cup 2024: ಇಂದಿನಿಂದ ಯುರೋ ಕಪ್ ಟೂರ್ನಿ; ಜರ್ಮನಿ-ಸ್ಕಾಟ್ಲೆಂಡ್ ನಡುವೆ ಮೊದಲ ಪಂದ್ಯ

ನಾಟ್ಯ ಸಂಪದ ನೃತ್ಯ ಶಾಲೆ ಸಂಸ್ಥಾಪಕಿ ಡಾ. ಮಾನಸ ಕಂಠಿ ತಂಡದವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ.

Continue Reading

Latest

Veeraloka Books : ಹೊಸ ಲೇಖಕರಿಗೆ ವೀರಲೋಕ ಪ್ರಕಾಶನ ಹೆದ್ದಾರಿಯನ್ನೇ ಸೃಷ್ಟಿಸಿದೆ: ಜಯಂತ್‌ ಕಾಯ್ಕಿಣಿ ಶ್ಲಾಘನೆ

Veeraloka Books: ಕನ್ನಡ ಪುಸ್ತಕ ಲೋಕದ ಪ್ರತಿಕೂಲ ಪರಿಸ್ಥಿತಿಯಲ್ಲಿ ವೀರಲೋಕ ಪ್ರಕಾಶನವು ಅಜ್ಞಾತ ಓದುಗರನ್ನೂ ತಲುಪಿದೆ. ಎಲ್ಲೋ ತಮ್ಮ ಪಾಡಿಗೆ ತಾವು ಬರೆದುಕೊಂಡಿದ್ದು, ಪ್ರಕಾಶಕರು ಸಿಗದೆ ಪರದಾಡುತ್ತಿರುವವರಿಗೆ ವೀರಲೋಕ ಹೆದ್ದಾರಿಯನ್ನೇ ಸೃಷ್ಟಿ ಮಾಡಿದೆ. ಇಡೀ ತಂಡದ ವೇಗ ಹೀಗೆಯೇ ಮುಂದುವರಿಯಲಿ ಎಂದು ಹಿರಿಯ ಸಾಹಿತಿ ಜಯಂತ್‌ ಕಾಯ್ಕಿಣಿ ಅವರು ಹಾರೈಸಿದರು.

VISTARANEWS.COM


on

Veeraloka
Koo

ಬೆಂಗಳೂರು: ಇವತ್ತು ದಾಲ್ ತಡ್ಕ ರೇಟ್ ಜಾಸ್ತಿಯಾದರೆ (Veeraloka Books) ನಾವು ಯಾರನ್ನೂ ಕೇಳುವುದಿಲ್ಲ. ಸುಮ್ಮನೆ ಹೋಗಿ ಹಣ ಕೊಟ್ಟು ತಿಂದು ಬರುತ್ತೇವೆ. ಆದರೆ ಕನ್ನಡ ಪುಸ್ತಕಗಳಿಗೆ ದಾಲ್‌ ತಡ್ಕಾಗಿರುವಷ್ಟು ಬೇಡಿಕೆಯೂ ಇಲ್ಲ. ಮುಖಬೆಲೆ ಐದು ರೂಪಾಯಿ ಜಾಸ್ತಿಯಾದರೂ ಓದುಗ ಪುಸ್ತಕ ಖರೀದಿಸಲು ಹಿಂದೆ ಮುಂದೆ ನೋಡುವಂಥ ಪರಿಸ್ಥಿತಿ ಇದೆ ಎಂದು ಹಿರಿಯ ಸಾಹಿತಿ ಜಯಂತ್‌ ಕಾಯ್ಕಿಣಿ (jayant kaikini) ವಿಷಾದಿಸಿದರು. ನಗರದಲ್ಲಿ ಶನಿವಾರ ಆಯೋಜಿಸಲಾಗಿದ್ದ ವೀರಲೋಕ ಬುಕ್ಸ್ 2ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಕನ್ನಡ ಪುಸ್ತಕ ಲೋಕದ ಪ್ರತಿಕೂಲ ಪರಿಸ್ಥಿತಿಯಲ್ಲಿ ವೀರಲೋಕ ಪ್ರಕಾಶನವು ಅಜ್ಞಾತ ಓದುಗರನ್ನೂ ತಲುಪಿದೆ. ಎಲ್ಲೋ ತಮ್ಮ ಪಾಡಿಗೆ ತಾವು ಬರೆದುಕೊಂಡಿದ್ದು, ಪ್ರಕಾಶಕರು ಸಿಗದೆ ಪರದಾಡುತ್ತಿರುವವರಿಗೆ ವೀರಲೋಕ ಹೆದ್ದಾರಿಯನ್ನೇ ಸೃಷ್ಟಿ ಮಾಡಿದೆ. ಇಡೀ ತಂಡದ ವೇಗ ಹೀಗೆಯೇ ಮುಂದುವರಿಯಲಿ ಎಂದು ಕಾಯ್ಕಿಣಿ ಅವರು ಹಾರೈಸಿದರು.

ವೀರಲೋಕ ಬುಕ್ಸ್ ಆಯೋಜಿಸಿದ್ದ 2ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಐದು ಕೃತಿಗಳ ಬಿಡುಗಡೆಯನ್ನೂ ಹಮ್ಮಿಕೊಳ್ಳಲಾಗಿತ್ತು. ಅವುಗಳಲ್ಲಿ ರಾಧಾಕೃಷ್ಣ ಕಲ್ಚಾರ್‌ ಅವರ ‘ಕವಚ’ ಕಾದಂಬರಿ ವೀರಲೋಕದ ನೂರನೇ ಕೃತಿಯಾಗಿತ್ತು. ಡಾ. ಎಂ ವೆಂಕಟಸ್ವಾಮಿಯವರ ‘ಜಗತ್ತಿನ ಭೀಕರ ಯುದ್ಧಗಳು’, ನೌಶಾದ್ ಜನ್ನತ್ತ್ ಅವರ ‘ಬೇವಾಚ್’, ಸಂದ್ಯಾರಾಣಿಯವರ ‘ನಾತಿಚರಾಮಿ’, ಡಾ. ಶೈಲೇಶ್ ಕುಮಾರ್ ಅವರ ‘ಸುಪ್ತ ಸಾಗರದಾಚೆ’ ಇನ್ನಿತರ ಕೃತಿಗಳಾಗಿದ್ದವು.
ವೀರಲೋಕ ಬುಕ್ಸ್ ಸಂಸ್ಥಾಪಕರಾದ ವೀರಕಪುತ್ರ ಶ್ರೀನಿವಾಸ್ ಅವರು ಆಶಯ ನುಡಿಗಳನ್ನಾಡಿದರು. ಎರಡು ವರ್ಷಗಳಲ್ಲಿನ ಏಳುಬೀಳುಗಳು, ಮೈಲುಗಲ್ಲುಗಳು, ಮುಂದಿನ ತಯಾರಿಗಳ ಬಗ್ಗೆ ವಿವರಿಸಿದರು.

ಇದೇ ವೇದಿಕೆಯಲ್ಲಿ ಅನಂತ ಕುಣಿಗಲ್ ಅವರು ಸಂಪಾದಿಸಿರುವ ವೀರಕಪುತ್ರ ಶ್ರೀನಿವಾಸ್ ಅವರ ಲಲಿತ ಪ್ರಬಂಧಗಳ ಸಂಕಲನ ‘ಬದುಕೇ ಥ್ಯಾಂಕ್ಯೂ’ ಕೃತಿಯೂ ಬಿಡುಗಡೆಯಾಯಿತು. ಕನ್ನಡ ಮಾಣಿಕ್ಯ ಮಾಸ ಪತ್ರಿಕೆಯ ದಶಮಾನೋತ್ಸವವನ್ನೂ ಆಚರಿಸಲಾಯಿತು. ವೀರಲೋಕದ ಐದು ಕೃತಿಗಳ ಮರುಮುದ್ರಣದ ಆವೃತ್ತಿಯನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.

ಇದನ್ನೂ ಓದಿ: V Somanna profile : ಅಂದು ಜನತಾ ಬಜಾರ್‌ನಲ್ಲಿ ಸೇಲ್ಸ್‌ಮ್ಯಾನ್‌; ಇಂದು ಕೇಂದ್ರ ಸಚಿವ! ವಿ ಸೋಮಣ್ಣ ರಾಜಕೀಯ ಹಾದಿ ಕುತೂಹಲಕರ

ಚಿತ್ರ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ಹಿರಿಯ ಸಾಹಿತಿ ಮಲ್ಲೇಪುರಂ ಜಿ. ವೆಂಕಟೇಶ್, ನಿರ್ದೇಶಕ ಮಂಸೋರೆ, ಸಂಭಾಷಣೆಕಾರ ಮಾಸ್ತಿ, ಮಹೇಶ ಅರಬಳ್ಳಿ, ಭಾರತಿ ಬಿ.ವಿ, ಪೂರ್ಣಿಮಾ ಮಾಳಗಿಮನಿ, ಶೋಭಾ ರಾವ್, ನವೀನ್ ಸಾಗರ್, ಮಂಡ್ಯ ರಮೇಶ್, ಜೋಗಿ, ಸಂತೋಷ್ ಹಾನಗಲ್, ದಿವ್ಯಾ ಆಲೂರು, ಹರಿವು ರತೀಶ್, ಕಾನ್ಕೇವ್ ನಂದೀಶ್, ಪ್ರಕಾಶ್ ಕಂಬತ್ತಳ್ಳಿ, ಷಡಕ್ಷರಿ, ವಿ ನಾಗೇಂದ್ರ ಪ್ರಸಾದ್ ಮತ್ತಿತರು ಉಪಸ್ಥಿತರಿದ್ದರು.

Continue Reading
Advertisement
Narendra Modi
ಪ್ರಮುಖ ಸುದ್ದಿ42 mins ago

Narendra Modi: ಅಮೆರಿಕ ಭದ್ರತಾ ಸಲಹೆಗಾರ-ನರೇಂದ್ರ ಮೋದಿ ಭೇಟಿ; ಯಾವೆಲ್ಲ ವಿಷಯ ಚರ್ಚೆ?

Actor Chikkanna
ಕರ್ನಾಟಕ2 hours ago

Actor Chikkanna: ದರ್ಶನ್‌ ಊಟಕ್ಕೆ ಕರೆದಿದ್ರು, ಹೋಗಿದ್ದೆ; ಪೊಲೀಸ್‌ ವಿಚಾರಣೆ ಬಳಿಕ ಚಿಕ್ಕಣ್ಣ ಫಸ್ಟ್‌ ರಿಯಾಕ್ಷನ್!

Kalki 2898 AD Movie Bhairava Anthem Released
ಕರ್ನಾಟಕ2 hours ago

Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

Union Minister HD Kumaraswamy visit Shira
ತುಮಕೂರು2 hours ago

Shira News: ಶಿರಾಕ್ಕೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಭೇಟಿ

Maharashtra government appoints Marathi teachers to Kannada schools; Ashoka Chandragi wrote a letter to CM Siddaramaiah
ಬೆಳಗಾವಿ2 hours ago

Belagavi News: ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರು! ಮುಖ್ಯಮಂತ್ರಿಗಳೇ ಗಮನ ಹರಿಸಿ

District administration failed to prevent illegal activities in the district MLA Janardhana Reddy alleges
ಕರ್ನಾಟಕ2 hours ago

Koppala News: ಜಿಲ್ಲೆಯಲ್ಲಿ ಕಾನೂನುಬಾಹಿರ ಚಟುವಟಿಕೆ ತಡೆಯುವಲ್ಲಿ ಜಿಲ್ಲಾಡಳಿತ ವಿಫಲ; ಶಾಸಕ ಜನಾರ್ದನ ರೆಡ್ಡಿ ಆರೋಪ

Pushpa 2
ಸಿನಿಮಾ3 hours ago

Pushpa 2: ಪುಷ್ಪ 2 ಸಿನಿಮಾ ಬಿಡುಗಡೆ 5 ತಿಂಗಳು ಮುಂದೂಡಿಕೆ; ಇಲ್ಲಿದೆ ಹೊಸ ಡೇಟ್

HD Kumaraswamy
ಕರ್ನಾಟಕ3 hours ago

HD Kumaraswamy: ಕೊಬ್ಬರಿಗೆ 16-18 ಸಾವಿರ ಬೆಂಬಲ ಬೆಲೆ ಕೊಡಿಸುವೆ: ರೈತರಿಗೆ ಎಚ್‌ಡಿಕೆ ಭರವಸೆ

Narendra Modi
ದೇಶ3 hours ago

ಪೋಪ್‌-ಮೋದಿ ಭೇಟಿಯನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ಗೆ ಮುಖಭಂಗ; ಕ್ರೈಸ್ತರ ಕ್ಷಮೆ ಕೇಳಿದ್ದೇಕೆ?

Health Tips Kannada
Latest3 hours ago

Health Tips Kannada: ನೆನಪಿಡಿ, ನಾಲಿಗೆ ಬಯಸುವ ಆಹಾರಗಳನ್ನೆಲ್ಲ ನಿಮ್ಮ ಮಿದುಳು ಬಯಸದು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು11 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು11 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 day ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 day ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌