ನಾ ಕಂಡ ಕಾಂತಾರ | ನಕಲಿ ನಾಸ್ತಿಕ ಜಗತ್ತು ಮತ್ತು ಅಸಲಿ ಆಸ್ತಿಕ ಜಗತ್ತಿನ ನಡುವಿನ ಹೋರಾಟ! - Vistara News

ಅಂಕಣ

ನಾ ಕಂಡ ಕಾಂತಾರ | ನಕಲಿ ನಾಸ್ತಿಕ ಜಗತ್ತು ಮತ್ತು ಅಸಲಿ ಆಸ್ತಿಕ ಜಗತ್ತಿನ ನಡುವಿನ ಹೋರಾಟ!

ಕಥೆಯ ಮೂಲಕ, ಭಾವನೆಗಳ ಮೂಲಕ, ಅಭಿನಯದ ಮೂಲಕ, ಭಾಷೆಯ ಗಡಿಯನ್ನು ದಾಟಿ, ಸಂಸ್ಕೃತಿಯ ವೈವಿಧ್ಯತೆ ವ್ಯತ್ಯಾಸಗಳನ್ನು ಮೀರಿ ಕಾಂತಾರ ಗೆದ್ದಿದೆ.

VISTARANEWS.COM


on

Kantara Review
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
nityananda

| ನಿತ್ಯಾನಂದ ವಿವೇಕವಂಶಿ

ಕಾಂತಾರ ಚಿತ್ರ ಇಡೀ ದೇಶದಾದ್ಯಂತ ಸುದ್ದಿ ಮಾಡುತ್ತಿದೆ. ಇತ್ತೀಚಿನ ದಿನಗಳಲ್ಲಿ ಬದಲಾದ ಪ್ರಪಂಚದಲ್ಲಿ ಸಿನಿಮಾದ ಯಶಸ್ಸನ್ನು ಅದು ಎಷ್ಟು ದುಡ್ಡು ಗಳಿಸುತ್ತಿದೆ ಎಂಬುದರ ಆಧಾರದ ಮೇಲೆ ನಿರ್ಧರಿಸಲು ಆರಂಭಿಸಿದ ಮೇಲೆ ಸಿನಿಮಾ ಒಂದು ಕಲೆಯಾಗಿ ಮತ್ತು ಮಾಧ್ಯಮವಾಗಿ ತನ್ನ ಪಾವಿತ್ರ್ಯವನ್ನು ಕಳೆದುಕೊಂಡಿದೆ. ಅಬ್ಬರದ ಪ್ರಚಾರ ಸಿನಿಮಾವನ್ನು ಒಂದು ಮಾರಾಟದ ಸರಕಾಗಿಸಿದೆ. ಪ್ರಚಾರವನ್ನು ಅತಿ ಎನ್ನಿಸುವಷ್ಟು ಹೆಚ್ಚು ಮಾಡಿ, ಟಿಕೆಟ್‌ಗಳಿಗೆ ಡಿಮ್ಯಾಂಡ್ ಹುಟ್ಟಿಸಿ, ಫಸ್ಟ್ ಡೇ ಫಸ್ಟ್ ಶೋ ಹಪಹಪಿ ಹುಟ್ಟಿಸಿ, ಟಿಕೆಟ್ ಬೆಲೆಯನ್ನು ಯದ್ವಾ ತದ್ವಾ ಫಿಕ್ಸ್ ಮಾಡಿ, ತಮ್ಮದೇ ಅಭಿಮಾನಿಗಳ ವರ್ಗದಿಂದ ಟೇಕಾಫ್ ಮಾಡಿಸಿ, ಚಿತ್ರದಲ್ಲೇನೂ ಕಂಟೆಂಟ್ ಇದ್ದರೂ ಇಲ್ಲದಿದ್ದರೂ, ಕೆಲವೇ ದಿನಗಳಲ್ಲಿ ಕೋಟಿ ಕ್ಲಬ್ ಸೇರಿಸಿ ಚಿತ್ರ ಯಶಸ್ವಿಯಾಯಿತು ಎಂದು ಬೆನ್ನು ತಟ್ಟಿಕೊಳ್ಳುವ ವಿಚಿತ್ರ ಮಾರ್ಕೆಟಿಂಗ್ ಪದ್ಧತಿ ಶುರುವಾಗಿದೆ. ಚಿತ್ರ ನೋಡದವರಿಗೆ ನೀವಿನ್ನೂ ನೋಡಿಲ್ವಾ? ಅನ್ನುವ ಕೀಳರಿಮೆ ಹುಟ್ಟಿಸಿ, ಚಿತ್ರಮಂದಿರಕ್ಕೆ ಸೆಳೆತಂದು ದುಡ್ಡು ಕೀಳುವ ವಿಚಿತ್ರ ತಂತ್ರವದು. ಅದು ಕೆಜಿಎಫ್ ಇರಲಿ, ವಿಕ್ರಾಂತ್ ರೋಣ ಇರಲಿ ಅಥವಾ ಕಾಂತಾರವೇ ಇರಲಿ ಪ್ರಚಾರ ಸಿನಿಮಾ ಲೋಕವನ್ನು ಆಳುತ್ತಿದೆ ಅನ್ನೋದು ಶುದ್ಧ ಸತ್ಯ. ಆದರೆ ಇದೆಲ್ಲದರ ನಡುವೆ ಸಿನಿಮಾ ಮಂದಿರಕ್ಕೆ ಹೋಗಿ ಕುಳಿತ ಪ್ರೇಕ್ಷಕ ಮಹಾಪ್ರಭುವಿಗೆ ಕೊಟ್ಟ ದುಡ್ಡಿಗೆ ಮೋಸವಿಲ್ಲ ಅಂತ ಅನ್ನಿಸುವಂತೆ ಮಾಡುವುದು ಅತ್ಯಂತ ದೊಡ್ಡ ಸವಾಲು. ಈ ಸವಾಲಿನಲ್ಲಿ ಕಾಂತಾರ ನಿಜಕ್ಕೂ ಗೆದ್ದಿದೆ. ಚಿತ್ರ ನೋಡಿದ ಪ್ರೇಕ್ಷಕನಿಗೆ ಕೊಟ್ಟ ದುಡ್ಡಿಗೆ ಚೂರೂ ಮೋಸವಿಲ್ಲದ ಹಾಗೆ ಹೊಸದೊಂದು ತುಂಬು ಅನುಭವವನ್ನು ನೀಡುವಲ್ಲಿ ಚಿತ್ರ ಯಶಸ್ವಿಯಾಗಿದೆ.

ಸಾಮಾನ್ಯವಾಗಿ ದೈವಭಕ್ತಿ ಅಂದ್ರೆ ದೇವರ ಮೇಲಿನ ಭಕ್ತಿ ಅಂತ ಅರ್ಥವೇ ಹೊರತು ಇಲ್ಲಿ “ದೈವ” ಅನ್ನೋ ಪದವೊಂದಕ್ಕೆ ಬೇರೆ ಅರ್ಥವಿರಬಹುದು ಎಂಬ ಕಲ್ಪನೆಯೂ ಕೆಲವೇ ವಾರಗಳ ಹಿಂದೆ ಅನೇಕರಿಗೆ ಇರಲಿಲ್ಲ. ಕರಾವಳಿ ಭಾಗದ ಜನಗಳಿಗೆ ಸುಪರಿಚಿತವಾಗಿರುವ ಈ “ದೈವ” ಕರಾವಳಿಯನ್ನು ದಾಟಿ ಪಶ್ಚಿಮ ಘಟ್ಟಗಳನ್ನು ಇಳಿದು ಬಯಲುಸೀಮೆಗೆ ಬಂದಿಳಿದರೆ ಸಂಪೂರ್ಣ ಅಪರಿಚಿತ. ಸಮುದ್ರದಿಂದ ನೂರು ಕಿಲೋಮೀಟರ್ ಹಿಂದೆ ನಡೆದು ಬಂದುಬಿಟ್ಟರೆ ಯಾರಿಗೂ ಗೊತ್ತಿಲ್ಲದ ಈ ದೈವದ ಕುರಿತಾದ ಕಥೆಯನ್ನು ಹಿಡಿದು ದೈವವನ್ನೇ ಚಿತ್ರದ ಕೇಂದ್ರವಾಗಿಸಿ, ಇಡೀ ದೇಶವೇ ಅದನ್ನು ತುದಿಗಾಲಲ್ಲಿ ನಿಂತು ನೋಡುವಂತೆ ಮಾಡಿರುವುದು ಕಾಂತಾರ ಚಿತ್ರದ ಅತಿದೊಡ್ಡ ಯಶಸ್ಸು!

ಹೌದು! ಜನರಿಗೆ ಗೊತ್ತಿಲ್ಲದ ವಿಷಯವನ್ನು ಸಿನಿಮಾ ಮೂಲಕ ಗೊತ್ತುಮಾಡಿಸುವುಷ್ಟೇ ಅಲ್ಲದೇ, ಇಷ್ಟವಾಗುವಂತೆ ಮಾಡುವುದು ಸಾಮಾನ್ಯದ ಕೆಲಸವಲ್ಲ. ಬಹುಪಾಲು ನಿರ್ದೇಶಕರು ಜನರಿಗೆ ಅರ್ಥಮಾಡಿಸಲು ಹೋಗಿ ಇಷ್ಟವಾಗಿಸುವುದರಲ್ಲಿ ವಿಫಲವಾಗುತ್ತಾರೆ. ಕೆಲವರು ಇಷ್ಟಪಡಿಸಲು ಹೋಗಿ ಅರ್ಥವೇ ಆಗದಂತೆ ಮಾಡಿಬಿಡುತ್ತಾರೆ. ಆದರೆ ನಿರ್ದೇಶಕ ರಿಷಬ್ ಅರ್ಥ ಮಾಡಿಸಲೂ ಹೋಗದೇ, ಇಷ್ಟ ಪಡಿಸಲೂ ಹೋಗದೇ, ಅರ್ಥವನ್ನೂ ಮಾಡಿಸಿ, ಇಷ್ಟಪಡುವಂತೆಯೂ ಮಾಡಿಬಿಟ್ಟಿದ್ದಾರೆ. ಇನ್ ಫ್ಯಾಕ್ಟ್ ಕಾಂತಾರದಂತಾ ಚಿತ್ರವನ್ನು ಕರಾವಳಿಯನ್ನು ಹೊರತುಪಡಿಸಿ, ಬಯಲು ಸೀಮೆಯ ಅಥವಾ ದೈವ ಅನ್ನುವ ಕಾನ್ಸೆಪ್ಟಿನ ಬಗ್ಗೆ ಎಬಿಸಿಡಿ ಗೊತ್ತಿಲ್ಲದ ದೇಶದ ಇನ್ನಿತರ ಭಾಗದ ಪ್ರೇಕ್ಷಕರಿಗೆ ಅರ್ಥ ಮಾಡಿಸಲು ಚಿತ್ರವನ್ನು ತೋರಿಸುವ ಮೊದಲು ದೈವ ಅಂದರೇನು? ಅದರ ಹಿನ್ನೆಲೆ, ಆರಾಧನೆ, ನಂಬಿಕೆ ಇತ್ಯಾದಿ ಇತ್ಯಾದಿಗಳ ಬಗ್ಗೆ ಒಂದು ಪ್ರಾಥಮಿಕ ಮಾಹಿತಿ ಇರುವ ಒಂದು ಪುಟ್ಟ ಡಾಕ್ಯುಮೆಂಟರಿ ತೋರಿಸಬೇಕಾಗಿತ್ತು. ಪಂಜುರ್ಲಿ, ಕಾರಣಿಕ, ಗಗ್ಗರ, ಕೋಲ, ಲಗಾಡಿ, ಬೊಜ್ಜ ಇತ್ಯಾದಿ ಇತ್ಯಾದಿ ಪದಗಳ ಅರ್ಥ ತಿಳಿಸುವ ಚಿಕ್ಕ ಎಕ್ಸರ್ಸೈಸ್ ಅನ್ನೇ ಮಾಡಬೇಕಿತ್ತೇನೋ. ಒಂಥರಾ ಬ್ರಿಡ್ಜ್ ಕೋರ್ಸ್ ಮಾಡಿದಂತೆ! ಆದರೆ ಇದ್ಯಾವುದೂ ಇಲ್ಲದೇ ಕೇವಲ ಕಥೆಯ ಮೂಲಕ, ಭಾವನೆಗಳ ಮೂಲಕ, ಅಭಿನಯದ ಮೂಲಕ, ಭಾಷೆಯ ಗಡಿಯನ್ನು ದಾಟಿ, ಸಂಸ್ಕೃತಿಯ ವೈವಿಧ್ಯತೆ ವ್ಯತ್ಯಾಸಗಳನ್ನು ಮೀರಿ ಕಾಂತಾರ ಗೆದ್ದಿದೆ. ಇದಕ್ಕಾಗಿ ಕರಾವಳಿಗೆ ಸೇರದ ಹೊರವಲಯದ ಒಬ್ಬ ಪ್ರೇಕ್ಷಕನಾಗಿ ಚಿತ್ರರಸಿಕನಾಗಿ ನಾನು ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಚಿತ್ರದ ಹೆಸರೇ ಹೇಳುವಂತೆ ಅರಣ್ಯದೊಳಗಿನ ಗ್ರಾಮವೊಂದರಲ್ಲಿ ನಡೆವ ದೈವದ ಕಥೆ ಇದು. ಹಿಂದೆ ರಂಗಿತರಂಗ ಮತ್ತು ವಿಕ್ರಾಂತ್ ರೋಣ ಇದೇ ಪ್ಯಾಟರ್ನಿನ ಚಿತ್ರಗಳಾಗಿ ತೆರೆಕಂಡಿದ್ದರೂ ಅವೆರಡರಲ್ಲೂ ದೈವ ಅಥವಾ ಇನ್ನಿತರ ಶಕ್ತಿಗಳು ಒಂದು ಸಪೋರ್ಟಿವ್ ಸಬ್ಜೆಕ್ಟ್ ಆಗಿತ್ತು. ಆದರೆ ಈ ಚಿತ್ರದಲ್ಲಿ ಇಡೀ ಚಿತ್ರವೇ ದೈವದ ಮೇಲೆ ನಿಂತಿದೆ ಎಂದರೂ ತಪ್ಪಾಗಲಾರದು. ಟ್ರೈಲರ್‌ನಲ್ಲಿ ನೀವೆಲ್ಲಾ ನೋಡಿರುವ ಹಾಗೆ ಚಿತ್ರದ ಶೀರ್ಷಿಕೆಯಲ್ಲಿ (0) ಸೊನ್ನೆಯ ರೂಪದಲ್ಲಿ ಪಂಜು ಹಿಡಿದು ಸುತ್ತುವ ದೈವವನ್ನು ಸಾಂಕೇತಿಕವಾಗಿ ಕಾಣಿಸುವಂತೆ ಹೇಗೆ ಮಾಡಿದ್ದಾರೋ, ಹಾಗೆಯೇ ಇಡೀ ಚಿತ್ರವೇ ದೈವಕೇಂದ್ರಿತವಾಗಿ ನಿರ್ಮಿತವಾಗಿದೆ. ಆದರೆ ಅದರ ನಡುವಲ್ಲಿ ಶಿವನೆಂಬ ಸಾಮಾನ್ಯ ಮುಗ್ಧ ಆದರೆ ಒರಟ ಯುವಕನೊಬ್ಬನ ಪಾತ್ರ ಮತ್ತು ಅವನೊಟ್ಟಿಗೆ ನಿಷ್ಠಾವಂತ ಅರಣ್ಯಾಧಿಕಾರಿಯೊಬ್ಬನ ಪಾತ್ರ ಮತ್ತು ಗೋಮುಖ ವ್ಯಾಘ್ರನಾಗಿರುವ ಊರಿನ ಧಣಿ ಅಂದರೆ ಜಮೀನ್ದಾರನೊಬ್ಬನ ಪಾತ್ರಗಳು ಪ್ರಧಾನ ಭೂಮಿಕೆಯಲ್ಲಿವೆ. ಚಿತ್ರದುದ್ದಕ್ಕೂ ಈ ಮೂರು ಪ್ರಮುಖ ಪಾತ್ರಗಳು ದೈವವೆಂಬ ಆಟಮ್ಮಿನ ಒಳಗೆ ಪ್ರೋಟಾನ್ ನ್ಯೂಟ್ರಾನ್ ಮತ್ತು ಎಲೆಕ್ಟ್ರಾನುಗಳಂತೆ ನಿಲ್ಲುವ, ಓಡಾಡುವ ಅಥವಾ ಸುತ್ತುವ ಕಾರ್ಯದಲ್ಲಿ ನಿರತವಾಗಿರುತ್ತವೆ. ಆದರೆ ಕಡೆಗೆ ಆ ಎಲ್ಲ ಪಾತ್ರಗಳೂ ದೈವದ ಅಬ್ಬರದ ಒಳಗೆ ಕರಗಿಹೋಗುತ್ತವೆ. ಅಂತಿಮವಾಗಿ ವರಾಹ ರೂಪದ ದೈವವು ಇಡೀ ಕಾಡಿನ ರಕ್ಷಕನಾಗಿ ತಾನೇ ತಾನಾಗಿ ವಿಜೃಂಭಿಸುತ್ತದೆ. ಇದು ಚಿತ್ರದ ಒಂದು ರಫ್ ಸ್ಕೆಚ್. ಆದರೆ ಇಷ್ಟರೊಳಗೆ ನಿರ್ದೇಶಕರು ಕಟ್ಟಿಕೊಟ್ಟಿರುವ ವರ್ಣರಂಜಿತ ಅದ್ಭುತ ಮಾಯಾಲೋಕ ಅವರ ಅಪಾರವಾದ ಸೃಜನಶೀಲತೆಗೆ ಹಿಡಿದ ಕೈಗನ್ನಡಿ. ಅದನ್ನು ಚಿತ್ರ ನೋಡಿಯೇ ಅನುಭವಿಸಬೇಕು.

ಇದನ್ನೂ ಓದಿ | ದೃಶ್ಯ ಕಾವ್ಯ | ಕಾಂತಾರ ಸಿನೆಮಾ ನನಗೇಕೆ ಇಷ್ಟವಾಯಿತು?

ಚಿತ್ರದಲ್ಲಿ ನನಗೆ ವಯಕ್ತಿಕವಾಗಿ ಇಷ್ಟವಾದದ್ದು:

೧. ಕಥೆಯ ಆಯ್ಕೆ: ಸಹಿಪ್ರಾ ಶಾಲೆ ಕಾಸರಗೋಡು ಚಿತ್ರದಲ್ಲೇ ರಿಷಬ್ ಶೆಟ್ಟಯವರ ಅನನ್ಯತೆ ಅರ್ಥವಾಗಿತ್ತು. ಶಂಕರ್‌ನಾಗ್ ನಂತರ ಕನ್ನಡ ಚಿತ್ರರಂಗ ಕಾಣುತ್ತಿರುವ ಅಪರೂಪದ ಪ್ರತಿಭೆ ರಿಷಬ್. ಸದಭಿರುಚಿಯ ಸವಾಲಿನ ಕಥೆಗಳನ್ನು ಆರಿಸುವ ಅವರ ಇಂಥಾ ಆಸಕ್ತಿ ಬಹುವಾಗಿ ಇಷ್ಟವಾಯಿತು. ಕಾಂತಾರವೂ ಅಂತಹುದೇ ಒಂದು ಸದಭಿರುಚಿಯ ಚಿತ್ರ. ಕನ್ನಡ ಸಿನಿಮಾ ಲೋಕದಲ್ಲಿ ಕೇವಲ ಮಚ್ಚು ಕೊಚ್ಚು ಹೊಡಿ ಬಡಿಗಳು ಕಡಿಮೆಯಾಗಿ ಇಂಥಾ ಕಥಾಕೇಂದ್ರಿತ ಸಿನಿಮಾಗಳು ಇನ್ನಷ್ಟು ಬರಲಿ ಎಂಬ ಹಾರೈಕೆ ನನ್ನದು.

೨. ಅಭಿನಯ: ಕೊನೆಯ 20 ನಿಮಿಷಗಳ ರಿಷಬ್‌ರ ಅಭಿನಯ ನಮ್ಮ ಮನಸ್ಸಿನಿಂದ ರಿಷಬ್‌ರನ್ನೇ ಮರೆಸುತ್ತದೆ ಎಂದರೆ ನಟನಾಗಿ ಅವರ ಯಶಸ್ಸನ್ನು ನೀವು ಅಳತೆ ಮಾಡಬಹುದು. ದೈವ ನರ್ತಕನಾಗಿ ಕ್ಷೇತ್ರರಕ್ಷಕನಾಗಿ ಅವರ ಅಭೂತಪೂರ್ವ ಅಭಿನಯ ಅವರನ್ನು ಕನ್ನಡ ಚಿತ್ರರಂಗದ ಪ್ರಮುಖ ನಟರ ಸಾಲಿಗೆ ತಂದು ನಿಲ್ಲಿಸಿದೆಯೆಂದರೆ ಅತಿಶಯೋಕ್ತಿಯಲ್ಲ. ರಿಷಬ್ ಮಾತ್ರವಲ್ಲದೇ ಅಭಿನಯಿಸಿರುವ ತಾರಾಗಣದ ಎಲ್ಲರದ್ದೂ ಸಹಜ ಹಾಗೂ ಪರಿಪೂರ್ಣ ಅಭಿನಯ. ಅರಣ್ಯಾಧಿಕಾರಿ ಮುರಳಿಯ ಪಾತ್ರದಲ್ಲಿ ಕಿಶೋರ್, ಧಣಿಯ ಪಾತ್ರದಲ್ಲಿ ಅಚ್ಯುತ್, ಶಿವನ ತಾಯಿಯ ಪಾತ್ರದಲ್ಲಿ ಮಾನಸಿ ಸುಧೀರ್, ಪ್ರೇಯಸಿಯ ಪಾತ್ರದಲ್ಲಿ ಸಪ್ತಮಿ ಗೌಡ, ಶಿವನ ಗೆಳೆಯರ ಪಾತ್ರ, ಧಣಿಯ ಹಿಂಬಾಲಕರ ಪಾತ್ರ, ಪ್ರತಿಯೊಬ್ಬರೂ ತಮ್ಮ ಸಂಪೂರ್ಣ ಅಭಿನಯ ಸಾಮರ್ಥ್ಯವನ್ನು ಸಮರ್ಪಿಸಿದ್ದಾರೆ. ಚಿತ್ರದ ಆರಂಭದಲ್ಲಿನ ರಾಜನ ಪಾತ್ರ, ಅವನೆದುರು ನಿಲ್ಲುವ ದೈವದ ಪಾತ್ರ ಪ್ರತಿಯೊಬ್ಬ ನಟನ ಆಯ್ಕೆಯೂ ಪಾತ್ರಕ್ಕೆ 100% ಒಪ್ಪುವಂಥವೇ ಆಗಿದೆ. ಅದರಲ್ಲೂ ಗುರುವನ ಪಾತ್ರಕ್ಕೆ ಸ್ವರಾಜ್ ಶೆಟ್ಟಿ ಎಂಬ ಹುಡುಗನ ಆಯ್ಕೆ ಹೇಳಿ ಮಾಡಿಸಿದಂತಿದೆ. ಮುಗ್ಧತೆ ಮತ್ತು ದೈವಿಕತೆಯೇ ತುಂಬಿರುವ ಆ ಪಾತ್ರ ಚಿಕ್ಕದಾಗಿದ್ದರೂ ನೆನಪಿನಲ್ಲಿ ಉಳಿಯುತ್ತದೆ.

೩. ಛಾಯಾಗ್ರಹಣ: ಅರಣ್ಯದೊಳಗಿನ ಕ್ಯಾಮೆರಾದ ಚಲನೆ ಅದ್ಭುತವಾಗಿದೆ. ಹಾಗೆಯೇ ಕಂಬಳದ ಗದ್ದೆಯೊಳಗೂ ಸಹಾ! ಬೆಳಕು ಮತ್ತು ಕತ್ತಲೆಯ ನಡುವೆ ನಡೆಯುವ ಆಟ ಕಣ್ಣಿಗೆ ಮುದ ನೀಡುತ್ತದೆ. ಕೊನೆಯ ದೃಶ್ಯಗಳಲ್ಲಿ ದೈವದ ಅಬ್ಬರವನ್ನು ಹೇಗೆ ತೋರಿಸಿದೆಯೋ ಅಷ್ಟೇ ಅದ್ಭುತವಾಗಿ ಕೋಲದ ದೈವದ ಕಳೆಯನ್ನೂ ಅಷ್ಟೇ ವರ್ಣರಂಜಿತವಾಗಿ ಕಟ್ಟಿಕೊಟ್ಟಿದೆ.

೪. ಸಂಕಲನ: ಇತ್ತೀಚಿನ ಬಹು ಯಶಸ್ವಿ ಸಿನಿಮಾಗಳಂತೆ ಒಂದು ಸೆಕೆಂಡಿನ ದೃಶ್ಯವನ್ನು ಹತ್ತು ಭಾಗ ಮಾಡದಿರುವುದು ಛಾಯಾಗ್ರಾಹಕರ ಹೆಗ್ಗಳಿಕೆ. ಅವಶ್ಯಕತೆ ಇಲ್ಲದ ಕಡೆ ತಂತ್ರಜ್ಞಾನದ ಹೆಸರಿನಲ್ಲಿ ಕತ್ತರಿ ಹಾಕುವ ಅಂಟಿಸುವ ಅನವಶ್ಯಕ ಕೆಲಸ ಇಲ್ಲಿ ನಡೆದಿಲ್ಲ. ಅದೇ ಸಂಕಲನಕಾರನ ಯಶಸ್ಸು.

೫. ಸಾಹಸ: ಸಂಪೂರ್ಣ ಸಹಜವಾಗಿದೆ. ಗಾಳಿಯಲ್ಲಿ ಹಾರುವ, ಎತ್ತಿ ಕಿಲೋಮೀಟರ್ ದೂರಕ್ಕೆ ಬಿಸಾಡುವ ಅಸಹಜ ಸ್ಟಂಟ್‌ಗಳಿಲ್ಲ. ಸಹಜ ಹೊಡೆದಾಟವನ್ನೇ ರೋಚಕವಾಗಿ‌ ಕಟ್ಟಿಕೊಟ್ಟಿದ್ದಾರೆ. ಕಮ್ಮಾರನ ಅಂಗಡಿಯ ಹೊಡೆದಾಟ ಮತ್ತು ಕಂಬಳ ಗದ್ದೆಯ ಹೊಡೆದಾಟವೆರಡೂ ರೋಚಕವಾಗಿವೆ‌.

೬. ಸಂಗೀತ: ಚಿತ್ರದ ಮಹತ್ವದ ಅಂಶಗಳಲ್ಲಿ ಒಂದು. ಇಡೀ ಚಿತ್ರದಲ್ಲಿ ಆವರಿಸಿಕೊಳ್ಳುವ ಮೂರು ಹಿನ್ನೆಲೆ ಸಂಗೀತ ಅಥವಾ ಬಿಜಿಎಂ ಅತ್ಯಂತ ಆಕರ್ಷಕವಾಗಿವೆ. ಕಥೆಯ ಓಟಕ್ಕೆ ಪೂರಕವಾಗಿದೆ. ವರಾಹ ರೂಪಂ ಅಂತೂ ಸಿನಿಮಾದ ಕ್ಲೈಮ್ಯಾಕ್ಸ್ ಅನ್ನು ದೈವಿಕತೆಯ ಭಾವಕ್ಕೆ ಏರಿಸುತ್ತದೆ. ಹೀಗಾಗಿ ಈ ಗೀತೆ ಅದಾಗಲೇ ಸೂಪರ್ ಹಿಟ್ ಆಗಿದೆ. ಇನ್ನು ಶಿವ ಹಾಗೂ ಲೀಲಾರ ಪ್ರಣಯ ಸನ್ನಿವೇಶದ ಹಿನ್ನೆಲೆ ಗೀತೆಯೂ ಯುವ ಮನಸ್ಸುಗಳಿಗೆ ಮುದ ನೀಡುತ್ತದೆ.

೭. ಸಂಭಾಷಣೆ: ಸಂಭಾಷಣೆಯು ಭಾಷೆಯ ಕಾರಣದಿಂದ ಎಲ್ಲರಿಗೂ ಅರ್ಥವಾಗುವುದು ಕಷ್ಟ. ಕೆಲವೊಮ್ಮೆ ಅಡಿಯಲ್ಲಿ ಸಬ್ ಟೈಟಲ್ ಕೊಡುವುದರಿಂದ ಅನುಕೂಲವಾಗಿದೆ. ಆದರೆ ಸಹಜವಾಗಿ ಮೂಡಿಬರಬೇಕೆನ್ನುವ ಕಾರಣಕ್ಕೋ ಏನೋ ವೇಗದ ಮಾತುಗಳು ಸ್ಥಳೀಯರಿಗಲ್ಲದೇ ಬೇರೆಯವರಿಗೆ ಅರ್ಥವಾಗದ ಪದಗಳು ಮಧ್ಯೆ ಮಧ್ಯೆ ಪ್ರೇಕ್ಷಕನಿಗೆ ಕಿರಿಕಿರಿ ಮಾಡುವುದು ಸತ್ಯ. ತಮಿಳು, ತೆಲುಗು, ಹಿಂದಿ, ಮಲಯಾಳಂಗೆ ಡಬ್‌ ಮಾಡಿದಂತೆ ಮೈಸೂರು ಕನ್ನಡಕ್ಕೂ ಡಬ್ ಮಾಡಿದರೆ ಇನ್ನೂ ಚೆನ್ನಾಗಿ ಅರ್ಥವಾಗುತ್ತದೇನೋ ಎನ್ನುವಷ್ಟು ಸಮಸ್ಯೆಯಾಗುತ್ತದೆ. ಆದರೆ ಹಾಗೆ ಮಾಡಿದರೆ ಚಿತ್ರದ ಮೂಲ ಸೊಗಡೇ ಮರೆಯಾಗಿಬಿಡುವ ಅಪಾಯವಿರುತ್ತದೆ. ಹೀಗಾಗಿ ಎರಡು ಮೂರು ಸಲ ಚಿತ್ರ ನೋಡುವುದೊಂದೇ ಚಿತ್ರವನ್ನು ಸಂಪೂರ್ಣ ಅರ್ಥ ಮಾಡಿಕೊಳ್ಳಲು ಇರುವ ಪರಿಹಾರ.

ಇದನ್ನೂ ಓದಿ | ತ್ರಯಸ್ಥ ಅಂಕಣ | ಮೋದಿಯಿಸಂನ ಉಚ್ಛ್ರಾಯ ಕಾಲದಲ್ಲಿ ಬೆಕ್ಕಿನ ಕೊರಳಿಗೆ ಗಂಟೆ ಕಟ್ಟುವವರಾರು?

೮. ಹಾಸ್ಯ: ಇಡೀ ಸಿನಿಮಾ ಗಂಭೀರ ಕಥೆಯಿಂದ ಕೂಡಿದ್ದರೂ ತಿಳಿ ಹಾಸ್ಯದಿಂದ ತುಂಬಿಹೋಗಿದೆ. ಹೀಗಾಗಿಯೇ ಇಡೀ ಸಿನಿಮಾ ಎಲ್ಲೂ ಬೋರ್ ಆಗುವುದಿಲ್ಲ. ಕೆಲವು ಕಡೆಗಳಲ್ಲಿ ಅಶ್ಲೀಲವೆನಿಸುವ ಸಂಭಾಷಣೆ ಮತ್ತು ಹಾಸ್ಯ ಸನ್ನಿವೇಶಗಳಿದ್ದರೂ ಕಥೆಗೆ ಮತ್ತು ಅಲ್ಲಿನ ಸನ್ನಿವೇಶಕ್ಕೆ ಅದು ಪೂರಕವಾಗಿರುವುದರಿಂದ ನೈಜತೆಯ ಸ್ಪರ್ಶವನ್ನು ನೀಡಿದೆ. ಕಾಡಿನ ಅವಿದ್ಯಾವಂತ ಜನರ ನಡುವೆ ಸಹಜವಾಗಿ ನಡೆಯುವ ಇಂಥಾ ಹಾಸ್ಯಗಳು ಅಶ್ಲೀಲವಾಗಿದ್ದರೂ ಸಹಜವಾಗಿರುವುದರಿಂದ ಅದನ್ನು ತಪ್ಪೆನ್ನಲಾಗದು.

೯. ವೇಷಭೂಷಣ, ಮೇಕಪ್ ಮತ್ತು ಸೆಟ್: ಅದ್ಭುತ ಮತ್ತು ಪರಿಪೂರ್ಣತೆಯನ್ನು ಅವಾಹಿಸಿಕೊಂಡಿದೆ. ದೈವದ ಸುಂದರ ಅರಿಶಿನ ಮುಖಬಣ್ಣ ಮತ್ತು ವೈಭವಯುತ ವೇಷಭೂಷಣ ಹಾಗೂ ಆಭರಣದಷ್ಟೇ ಸುಂದರವಾಗಿ ಕಂಬಳದಲ್ಲಿ ಓಡುವಾಗ ಶಿವನ ಬಾಯ ಕೆಂಪು ಮತ್ತು ಹಲ್ಲಿನ ಹಳದಿ ಅತ್ಯಂತ ಸಹಜವಾಗಿ ತೋರಿಸಲ್ಪಟ್ಟಿದೆ. ಧಣಿಯ ಶುಭ್ರ ಬಟ್ಟೆ, ಗುರುವನ ಶ್ವೇತವಸ್ತ್ರ, ಶಿವನ ತಾಯಿಯ ಹರಿದ ಕೊಳಕು ಬಟ್ಟೆ ಮತ್ತು ಲೀಲಾಳ ಡೀಗ್ಲಾಮರಸ್ ಮುಖದ ಬಣ್ಣ ಅನೇಕ ಸಣ್ಣ ಸಣ್ಣ ಸಂಗತಿಗಳನ್ನು ಹೇಳುವ ಮೂಲಕ ಚಿತ್ರಕ್ಕೆ ನೈಜತೆ ಮತ್ತು ಸಹಜತೆಗಳ ಉಡುಗೊರೆ ನೀಡಿದೆ. ಹಳ್ಳಿಯ ಮನೆಗಳು, ರಸ್ತೆಗಳು, ಕೈಲಾಸವೆಂಬ ಮರದ‌ ಮೇಲಿನ ಅಟ್ಟಣಿಗೆ ಎಲ್ಲವೂ ನೈಜ ಮತ್ತು ಸುಂದರ.

೧೦. ನೀತಿ: ದುಷ್ಟರಿಗೆ ಶಿಕ್ಷೆ ಶಿಷ್ಟರಿಗೆ ರಕ್ಷೆ. ಸತ್ಯಮೇವ ಜಯತೇ ಎಂಬ ಸನಾತನ ಸತ್ಯವನ್ನು ಸಿನಿಮಾದ‌ ಮೂಲಕ ಸಾರಲಾಗಿದೆ. ನಂಬಿದ ದೈವ ನಂಬಿದವರನ್ನು ಖಂಡಿತಾ ಕಾಯುತ್ತದೆ ಎಂಬ ಕರಾವಳಿ ಮಾತ್ರವಲ್ಲದೇ ಭಾರತೀಯ ಅಥವಾ ವಿಶ್ವದ ಆಸ್ತಿಕ ಸಮುದಾಯದ ನಂಬಿಕೆ ಚಿತ್ರದಲ್ಲಿ ಪ್ರತಿಧ್ವನಿಸಿದೆ. ಹಿಂದು ಧರ್ಮದ ವಿಶಿಷ್ಠ ನಂಬಿಕೆಯಾದ ವೈಜ್ಞಾನಿಕ ಕರ್ಮ ಸಿದ್ಧಾಂತ ಈ ಕಥೆಯಲ್ಲಿ ಸತ್ಯವೆಂದು ನಿರೂಪಿಸಲ್ಪಟ್ಟು ಪ್ರೇಕ್ಷಕರ ನಂಬಿಕೆ ಹಾಗೂ ಭಾವನೆಗಳ ಬೇರುಗಳನ್ನು ಗಟ್ಟಿಗೊಳಿಸುತ್ತದೆ. ಚಿತ್ರದ ಕೊನೆಗೆ ಪ್ರೇಕ್ಷಕರು ಸ್ವಯಂಪ್ರೇರಿತರಾಗಿ ತಮಗರಿವಿಲ್ಲದೇ ಜೋರಾಗಿ ತಟ್ಟುವ ಚಪ್ಪಾಳೆಗಳೇ ಇದಕ್ಕೆ ಸಾಕ್ಷಿ. ಇನ್ನು ಚಿತ್ರದಲ್ಲಿ ಮಾರ್ಮಿಕವಾಗಿ ತೋರಿರುವ ಸಮಾಜದ ಮೇಲು‌ ಕೀಳು ಭಾವನೆಯ ಕುರಿತಾದ ದೃಶ್ಯ ಮತ್ತು ಸಂಭಾಷಣೆಗಳು ಮಾರ್ಮಿಕವಾಗಿವೆ. ಧಣಿಗಳು ಸಾಮಾನ್ಯ ಜನರನ್ನು ತಮ್ಮ ಸ್ವಾರ್ಥಕ್ಕಾಗಿ ಉಪಯೋಗಿಸಿಕೊಳ್ಳುವುದು. ಮನುಷ್ಯನನ್ನು ನಾಯಿಯಂತೆ ಕಾಣುವುದು. ಶಿವ ಧಣಿಯ ಮನೆಯೊಳಗೆ ಪ್ರವೇಶ ಮಾಡಿ ಅವನ‌ ಸಮ ಕೂತು ಊಟ ಮಾಡಿ ಅದಕ್ಕೆಲ್ಲಾ ಉತ್ತರ ನೀಡುವ ಬಂಡಾಯಗಾರನಂತೆ ಕಂಡರೂ ಅದರ ಗೂಡಾರ್ಥ ಬೇರೆ ಇದೆ. ದೈವಾಕರ್ಷಣೆಯಾದ ನಂತರದ “ಶುದ್ಧ”ವಾದ ಶಿವನ ಕೈಲಿ ಈ ಕೆಲಸವನ್ನು ಮಾಡಿ ತೋರಿಸುವ ಮೂಲಕ ದೇವರಿಗೆ ಅಥವಾ ದೈವಕ್ಕೆ ಜಾತಿಬೇಧ ಇನ್ನಿತರ ಯಾವುದೇ ಬೇಧಭಾವಗಳಿಲ್ಲ ಇದೆಲ್ಲಾ ಮನುಷ್ಯ ತಾನೇ ಸೃಷ್ಟಿಸಿಕೊಂಡಿರುವುದಷ್ಟೇ ಎನ್ನುವುದನ್ನು ಪ್ರತಿಪಾದಿಸುವುದೇ ಆಗಿದೆ. ಕೊಟ್ಟ ಮಾತಿಗೆ ತಪ್ಪುವುದು ಇಂದಿನ ಆಧುನಿಕ ಯುಗದಲ್ಲಿ ಸರ್ವೇಸಾಮಾನ್ಯವಾಗಿದ್ದರೂ, ಅದೆಲ್ಲಕ್ಕೂ ಮೀರಿದ ಸದಾ ಕಾಲ ಉಳಿಯುವ ಸರ್ವಕಾಲಿಕ ಸತ್ಯ ಮತ್ತು ಮೌಲ್ಯವೊಂದಿರುತ್ತದೆ ಎಂಬುದನ್ನು ಚಿತ್ರದ ಮೂಲಕ ತೋರಿಸಿ ಸಮಾಜಕ್ಕೆ ಉತ್ತಮವಾದ ಸಂದೇಶ ನೀಡಿದೆ.

ಇದನ್ನೂ ಓದಿ | Kantara Movie | ವರ್ಲ್ಡ್‌ ಆಫ್‌ ಕಾಂತಾರ -ಭಾಗ 1 ವಿಡಿಯೊ ಹಂಚಿಕೊಂಡ ಹೊಂಬಾಳೆ : ಕಂಬಳ ಪ್ರಮುಖ ಹೈಲೈಟ್‌!

ಇನ್ನುಳಿದಂತೆ, ಎಲ್ಲ ಚಿತ್ರಗಳಂತೆ ಈ ಚಿತ್ರವೂ ನ್ಯೂನತೆಗೆ ಹೊರತಾದುದೇನಲ್ಲ. ಮೊದಲನೇ ನ್ಯೂನತೆ ಏನೆಂದರೆ ಚಿತ್ರದ ವಾರಸುದಾರರೆಂದು ಭಾವಿಸುತ್ತಿರುವ ಸ್ಥಳೀಯರೇ ಆಗಿದ್ದಾರೆ. ತಮಗೆ ಇಷ್ಟವಾದ ಚಿತ್ರ ಜಗತ್ತಿಗೇ ಇಷ್ಟವಾಗಬೇಕೆನ್ನುವ ಮನಸ್ಥಿತಿಯೇ ಮತಾಂಧತೆಯಾಗಿದೆ. ಹೇಗೆ ಕೆಲವು ಸಿನಿಮಾ ನಟರ ಭಕ್ತರು, ಟೀಕೆ ಅಥವಾ ವಿಮರ್ಶೆಗೆ ಸಲುವಾಗಿ ತಮ್ಮ ನೆಚ್ಚಿನ ನಟನ ಹೆಸರೆತ್ತಿದರೂ ಉರಿದು ಬೀಳುತ್ತಾರೋ ಹಾಗೆ ಕೆಲವರು ಈ ಸಿನಿಮಾದ ವಿಮರ್ಶೆಗೂ ಅವಕಾಶ ನೀಡದಂತೆ ಮುಗಿಬೀಳುತ್ತಿರುವುದು ಚಿತ್ರಕ್ಕೆ ಹಿನ್ನಡೆಯನ್ನು ತರುತ್ತದೆಯೇ ಹೊರತು ಮುನ್ನಡೆಯನ್ನಲ್ಲ. ವೈವಿಧ್ಯತೆಯನ್ನು ಗೌರವಿಸಿದಾಗ ಮಾತ್ರ ನಮ್ಮ ಸಂಸ್ಕೃತಿ ಪರರಿಗೆ ಇಷ್ಟವಾಗುತ್ತದೆಯೇ ಹೊರತು ಹೇರಿಕೆ ಅಥವಾ ಒತ್ತಾಯದ ಮೂಲಕವಲ್ಲ ಎಂಬುದನ್ನು ಅಭಿಮಾನಿ ದೇವರುಗಳು ಅರ್ಥ ಮಾಡಿಕೊಳ್ಳಬೇಕಾಗಿದೆ! ಇದು ಚಿತ್ರಕ್ಕೆ ಅಥವಾ ಚಿತ್ರತಂಡಕ್ಕೆ ಸಂಬಂಧಿಸಿಲ್ಲವಾದರೂ ಈ ಥರದ ಅಭಿಮಾನಿಗಳ ಅತಿರೇಕದ ನಡೆಗಳು ಚಿತ್ರಕ್ಕೆ ಸಲ್ಲುವ ಪೂರ್ಣ ಗೌರವವನ್ನು ಕಳಂಕಿತಗೊಳಿಸುತ್ತದೆ. ಅದು ಕೆಜಿಎಫ್ ಇರಬಹುದು, ವಿಕ್ರಾಂತ್ ರೋಣ ಇರಬಹುದು ಅಥವಾ ಕಾಂತಾರವೇ ಇರಬಹುದು. ಕೆಲವರಿಗೆ ಇಷ್ಟವಾಗಬಹುದು ಇಷ್ಟವಾಗದೇ ಇರಬಹುದು ಅದನ್ನು ಒಪ್ಪುವ ಅಥವಾ ಅದನ್ನು ಬದಿಗಿಡುವ ಸೌಜನ್ಯ ನಮ್ಮ ಸಂಸ್ಕೃತಿಗೆ ಇನ್ನಷ್ಟು ಗೌರವ ತಂದುಕೊಡುತ್ತದೆ.

ಯಾವ ಚಿತ್ರವೇ ಆಗಲಿ ಅದು ಸಮಾಜಸೇವೆ ಮಾಡುವುದಿಲ್ಲ. ಅದರಲ್ಲೂ ಇತ್ತೀಚಿಗಂತೂ ಹಣಗಳಿಕೆಯೇ ಪ್ರಧಾನವಾಗಿರುತ್ತದೆ. ದೊಡ್ಡ ಮನಸ್ಸು ಮಾಡಿ ಕಲಾವಿದರೋ ನಿರ್ದೇಶಕರೋ ಪ್ಯಾಶನ್‌ಗೆ ಮಾಡಿದ್ದಾರೆ ಎಂದುಕೊಂಡುಬಿಟ್ಟರೂ ಚಿತ್ರಕ್ಕೆ ಹಣ ಹೂಡಿದ ನಿರ್ಮಾಪಕ ಅಥವಾ ನಿರ್ಮಾಣ ಸಂಸ್ಥೆಯು ಸಮಾಜೋದ್ಧಾರವನ್ನೇ ಪ್ರಧಾನವನ್ನಾಗಿಸಿಕೊಂಡು ಚಿತ್ರ ಮಾಡಿರುವುದಿಲ್ಲ. ಹೀಗಾಗಿ ಜನಸಾಮಾನ್ಯರೇ ಯಾವುದೋ ಭಾವನಾತ್ಮಕ ಕಾರಣಗಳನ್ನಿಟ್ಟುಕೊಂಡು ಚಿತ್ರದ ಗೆಲುವಿಗಾಗಿ ಕಾಲಾಳುಗಳಂತೆ ಬಡಿದಾಡುವುದು ಅಷ್ಟು ಸೆನ್ಸಿಬಲ್ ಅನ್ನಿಸುವುದಿಲ್ಲ. ಈ ಚಿತ್ರದ ಮೂಲಕ ರಿಷಬ್ ಶೆಟ್ಟಿಯವರು ಹಿಂದು ಧರ್ಮದ ಪುನರುತ್ಥಾನ ಮಾಡಿಬಿಟ್ಟರು ಎನ್ನುವಷ್ಟು ಮರುಳಾಗುವುದು ಪ್ರಾಕ್ಟಿಕಲ್ ಅಲ್ಲ. ಅಭಿಮಾನದ ಅತಿರೇಕ ಕೆಲವೊಮ್ಮೆ ಹಾಗೆ ಮಾಡಿಸುತ್ತದೆ. ಆದರೆ ಬುದ್ಧಿವಂತ ಜನರಾದರೂ ಇದರಿಂದ ಹೊರಗಿರಲಿ ಎಂಬುದಷ್ಟೇ ಬಯಕೆ. ಪೇಯ್ಡ್ ರಿವ್ಯೂಗಳು, ಪೇಯ್ಡ್ ಪ್ರಚಾರಗಳು ಇಂದು ಸೋಷಿಯಲ್ ಮೀಡಿಯಾವನ್ನೂ ಬಿಟ್ಟಿಲ್ಲ. ಟ್ರೋಲರ್‌ಗಳನ್ನು ಇನ್ಫ್ಲೂಯೆನ್ಸರ್‌ಗಳನ್ನು ಖರೀದಿಸುವ ಕಾಲ ಆರಂಭವಾಗಿ ಅದ್ಯಾವುದೋ ಕಾಲವಾಗಿದೆ. ಮೂವಿ ಪ್ರಮೋಷನ್‌ಗಳು ಟಿವಿಯಲ್ಲಿ ಬರುವ ಜಾಹಿರಾತುಗಳಷ್ಟೇ ಹಗುರವಾಗಿಬಿಟ್ಟಿವೆ. ಇಂತಹಾ ಸಂದರ್ಭದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಬಂದದ್ದೇ ಸತ್ಯವೆಂದುಕೊಳ್ಳುವುದು ದಡ್ಡತನ ಅಥವಾ ಒಳ್ಳೆಯ ಪದಗಳಲ್ಲಿ ಹೇಳುವುದಾದರೆ ಮುಗ್ಧತೆಯಷ್ಟೇ. ಬಹುಶಃ ರಿಷಬ್ ಕಾಲಿಗೆ ಬಿದ್ದು ನನ್ನ ಗರ್ಲ್‌ಫ್ರೆಂಡ್‌ಗಿಂತಾ ನೀವೇ ಇಷ್ಟ ಎನ್ನುವ ಯೂಟ್ಯೂಬರ್ ಸ್ವತಃ ರಿಷಬ್‌ಗೇ ಮುಜುಗರವುಂಟುಮಾಡಿರಬಹುದು! ಇನ್ನು ಈ ಘಟನೆಯಲ್ಲಿ ಹಿಂದಿ ಯೂಟ್ಯೂಬರ್‌ನನ್ನು ಸಮಸ್ತ ಬಾಲಿವುಡ್ ಗೆ ಹೋಲಿಸಿ ಸ್ಯಾಂಡಲ್‌ವುಡ್ ಕಾಲಿಗೆ ಬಿದ್ದ ಬಾಲಿವುಡ್ ಎಂಬಂತೆ ಚಿತ್ರಿಸುತ್ತಿರುವ ಅಭಿಮಾನಿ ವರ್ಗ ಕೆಜಿಎಫ್ ಅನ್ನು ಹಾಡಿ ಹೊಗಳಿದ ಸೈಕ್ ನವಾಜ್, ತಂದಾನಿತಾನೇ, ಇನ್ನೊಬ್ಬ ಬ್ರದರ್‌ಗಳು ಆಮೇಲೆ ಇನ್ನೂ ಎಂಥೆಂಥಾ ಚಿತ್ರಗಳಿಗೆ ಪೇಯ್ಡ್ ಪ್ರಚಾರ ಕೊಟ್ಟರು ಎಂಬುದನ್ನು ಗಮನಿಸಬೇಕು! ಈ ಥರದ ಪ್ರಚಾರಗಳನ್ನು ಕೇಳಿ ನೋಡಿ ಓದಿ ಹೋಗಿದ್ದರಿಂದ ಮೊದಲ ಸಲ ಚಿತ್ರ ನೋಡಿದಾಗ ನಿರಾಶೆಯಾಯಿತು. ಅಸಹಜವಾದ ನಿರೀಕ್ಷೆಗಳ ಉದ್ದೀಪನೆ ಒಳ್ಳೆಯ ಚಿತ್ರಕ್ಕೆ ನಿಜಕ್ಕೂ ಹಿನ್ನಡೆ ತರುತ್ತದೆ.

ಇನ್ನುಳಿದಂತೆ ಚಿತ್ರದಲ್ಲಿ ನನಗೆ ಕೊರತೆ ಅನ್ನಿಸಿದ್ದು ಅರಣ್ಯಾಧಿಕಾರಿಯ ಪಾತ್ರವೊಂದೇ. ಶಿವನನ್ನು ಮುಖ್ಯ ಪಾತ್ರವಾಗಿಸುವ ಹಂಬಲದಲ್ಲೋ ಅಥವಾ ಕಥೆಯನ್ನು ಸರಿದೂಗಿಸುವ ಪ್ರಯತ್ನದಲ್ಲೋ ಅರಣ್ಯಾಧಿಕಾರಿಯ ಪಾತ್ರ ಪದೇ ಪದೇ ಆರಕ್ಕೇರಿ ಮೂರಕ್ಕಿಳಿಯುವ ಪಾತ್ರವಾಗಿ ಹೋಗಿದೆ. ಶಿವನಿಗೆ ಕೊಟ್ಟ ಹೀರೋಯಿಸಂ ಅನ್ನು ಅಷ್ಟೇ ಪ್ರಧಾನ ಪಾತ್ರವಾಗಿದ್ದ ಮುರಳಿ ಪಾತ್ರಕ್ಕೆ ಕೊಟ್ಟಂತೆ ಮಾಡಿ, ಕೊಡುವ ಹಂತಕ್ಕೆ ಹೋಗಿ, ಮತ್ತೆ ವಾಪಾಸು ತೆಗೆದುಕೊಂಡಂತೆ ಅನಿಸುತ್ತದೆ. ಇಡೀ ಚಿತ್ರ ಸಂಪೂರ್ಣ ಲಾಜಿಕಲ್ಲಾಗಿ ಇರುವಾಗ ಕ್ಲೈಮ್ಯಾಕ್ಸ್‌ನಲ್ಲಿ ಊರವರ ಸಶಸ್ತ್ರ ಹೋರಾಟದಲ್ಲಿ ಅರಣ್ಯಾಧಿಕಾರಿಯ ಸೇರ್ಪಡೆ ಸ್ವಲ್ಪ ಇಂಪ್ರಾಕ್ಟಿಕಲ್ ಅಥವಾ ಇಲ್ಲಾಜಿಕಲ್ ಅನ್ನಿಸಿತು. ನಿರ್ದೇಶಕರು ಇದಕ್ಕೆ ಚಿತ್ರದಲ್ಲೇ ಒಂದು ಚಿಕ್ಕ ಸ್ಪಷ್ಟನೆಯನ್ನೋ ಲಾಜಿಕ್ಕನ್ನೋ ಸೇರಿಸಿದ್ದಿದ್ದರೆ ಇನ್ನಷ್ಟು ಪೂರ್ಣವಾಗುತ್ತಿತ್ತೇನೋ ಅನ್ನಿಸಿತು. ಹಾಗೆಯೇ ಶಿವ ಮತ್ತು ಅರಣ್ಯಾಧಿಕಾರಿಯ ಕಾಂಪ್ರಮೈಸ್ ದೃಶ್ಯ ಪರಿಣಾಮಕಾರಿಯಾಗಲು ಇನ್ನಷ್ಟು ಸಮಯ ಬೇಕಿತ್ತು. ಆದರೆ ಅದು ಚುಟುಕಾಯಿತು ಎನಿಸಿತು. ಇವೆಲ್ಲವೂ ವೈಯಕ್ತಿಕ ಅಭಿಪ್ರಾಯಗಳು. ನೂರಕ್ಕೆ ನೂರು ಸರಿ ಅಂತಲೂ ಅಲ್ಲ. ಎಲ್ಲರಿಗೂ ಒಪ್ಪಿಗೆಯಾಗಬೇಕೆಂದೂ ಇಲ್ಲ.

ಅದು ಬಿಟ್ಟರೆ ಇಡೀ ಸಿನಿಮಾ ಆವರಿಸಿಕೊಳ್ಳುವ ಎಣ್ಣೆ ಮತ್ತು ಬೀಡಿಗಳು ಕಥೆಗೆ ಪಾತ್ರಕ್ಕೆ ಪೂರಕವಾಗಿ ಬೇಕಿತ್ತು ಹಾಗಾಗಿ ತಪ್ಪೆನ್ನಲಾಗುವುದಿಲ್ಲ. ಆದರೆ ಕೊನೆಯಲ್ಲಿ ಧಣಿ ನೀಡುವ ಹೆಂಡವನ್ನು ನಿರಾಕರಿಸಿ “ಶುದ್ಧವಾಗಿದ್ದೇನೆ ಆದ್ದರಿಂದ ಮುಟ್ಟುವುದಿಲ್ಲ” ಎಂಬ ಡೈಲಾಗ್ ಇಡೀ ಸಿನಿಮಾದಿಂದ ಮದ್ಯಪಾನ ವಿರೋಧಿ ಸಂದೇಶವನ್ನು ಹೊರಡಿಸಿದೆ. ಇದು ಮೆಚ್ಚತಕ್ಕ ಅಂಶ. ಇನ್ನು ನಾಯಕ ನಾಯಕಿಯ ಪ್ರಣಯ ಸನ್ನಿವೇಶಗಳೂ ಸಹಾ ಕಥೆಗೆ ಪೂರಕವಾಗಿಯೇ ಇದ್ದು, ಮಕ್ಕಳನ್ನು ಬಿಟ್ಟು ಯುವಕರು ಮತ್ತು ವಯಸ್ಕರು ಅಸ್ವಾದಿಸಬಹುದಾಗಿದೆ.

ಒಟ್ಟಿನಲ್ಲಿ ಕಾಂತಾರ ಸಿನಿಮಾ ಒಂದು ಸುಂದರ ಚಿತ್ರವಾಗಿದ್ದು ಕೆಜಿಎಫ್‌ಗಿಂತ ಹತ್ತಾರು ಪಟ್ಟು ಸುಂದರವಾಗಿದೆ. ಇದು ಬಹಳ ಕಾಲ ಸಿನಿಪ್ರಿಯರ ಮನಸ್ಸಿನಲ್ಲಿ ಉಳಿದುಕೊಳ್ಳುವುದಷ್ಟೇ ಅಲ್ಲದೇ, ಭಾರತೀಯರ ವೈವಿಧ್ಯಮಯ ನಂಬಿಕೆಗಳ ಬೇರುಗಳನ್ನು ಗಟ್ಟಿಗೊಳಿಸುವಲ್ಲಿಯೂ ತನ್ನದೇ ಆದ ಕೊಡುಗೆಯನ್ನು ನೀಡಿದೆ. ಕನ್ನಡ ಸಿನಿಮಾ ರಂಗವನ್ನು ಜಗತ್ತು ತಿರುಗಿ ನೋಡುವಂತೆ ಮಾಡಿದೆ. ಜೊತೆಗೆ ರಿಷಬ್ ಶೆಟ್ಟಿ ಎಂಬ ಕಲಾದೈತ್ಯನ ಮೇಲೆ ಹೊಸಾ ಭರವಸೆಗಳನ್ನು ಕನಸುಗಳನ್ನೂ ನಿರೀಕ್ಷೆಗಳನ್ನೂ ಕಟ್ಟುವಂತಾಗಿದೆ. ಕಂಗ್ರಾಟ್ಸ್ ರಿಷಬ್ ಶೆಟ್ಟಿಯವರೇ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

Mother Sentiment: ವ್ಯಾಸಂಗಕ್ಕಾಗಿ ಊರು ತೊರೆದು ಪಟ್ಟಣದ ಹಾಸ್ಟೆಲ್‌ ಸೇರುತ್ತಿರುವ ಮಗಳಿಗೆ ತಾಯಿ ಕರುಳಿನ ಭಾವುಕ ಪತ್ರ ಇದು…

ತಾಯಿ ಹೃದಯದ ಅಳಲು (Mother Sentiment) ನಿನಗಿನ್ನೂ ಗೊತ್ತಿಲ್ಲ. ನನ್ನ ಮನದಲ್ಲಿ ಹುದುಗಿಸಿರುವ ಪ್ರೀತಿ, ಮಮತೆ, ಅಕ್ಕರೆ, ಭಯ, ಆತಂಕಗಳ ಕುರಿತು ಇಲ್ಲಿ ಬರೆದಿರುವೆ. ಹಾಗೆಂದು ಇದು ನನ್ನೊಬ್ಬಳ ಅಳಲು ಅಲ್ಲ. ನನ್ನಂತೆ ತಮ್ಮ ಮನೆಯ ಹೆಣ್ಣು ಮಕ್ಕಳನ್ನು ಬೇರೆ ಊರುಗಳಲ್ಲಿ ಓದಲು, ನೌಕರಿ ಮಾಡಲು ಕಳುಹಿಸಿರುವ ಲಕ್ಷಾಂತರ ತಾಯಂದಿರ ಮನದ ಮಾತು…..ಇತ್ತೀಚೆಗೆ ಬಾಲಕಿಯರ ಮೇಲೆ ನಡೆಯುತ್ತಿರುವ ಅಮಾನುಷ ಕೃತ್ಯಗಳ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ತನ್ನ ಮಗಳಿಗೆ ಬರೆದ ಸುದೀರ್ಘ ಪತ್ರದ ಸಾರ ಇಲ್ಲಿದೆ.

VISTARANEWS.COM


on

Mother Sentiment
Koo

| ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ, ಗದಗ

ಪ್ರೀತಿಯ ಮಗಳೇ,
ಅರೆ! ನಿನ್ನೆ ತಾನೆ ನನ್ನನ್ನು ಕಳಿಸಲು ಬಂದ ಅಮ್ಮ (Mother Sentiment) ಇಷ್ಟು ಬೇಗ ಪತ್ರ ಬರೆಯಲು ಕಾರಣವೇನು ಎಂದು ಗಾಬರಿಯಾಗಬೇಡ. ತಾಯಿ ಹೃದಯದ ಅಳಲು ನಿನಗಿನ್ನೂ ಗೊತ್ತಿಲ್ಲ. ನನ್ನ ಮನದಲ್ಲಿ ಹುದುಗಿಸಿರುವ ಪ್ರೀತಿ, ಮಮತೆ, ಅಕ್ಕರೆ, ಭಯ, ಆತಂಕಗಳ ಕುರಿತು ಇಲ್ಲಿ ಬರೆದಿರುವೆ. ಹಾಗೆಂದು ಇದು ನನ್ನೊಬ್ಬಳ ಅಳಲು ಅಲ್ಲ. ನನ್ನಂತೆ ತಮ್ಮ ಮನೆಯ ಹೆಣ್ಣು ಮಕ್ಕಳನ್ನು ಬೇರೆ ಊರುಗಳಲ್ಲಿ ಓದಲು, ನೌಕರಿ ಮಾಡಲು ಕಳುಹಿಸಿರುವ ಲಕ್ಷಾಂತರ ತಾಯಂದಿರ ಮನದ ಮಾತು.
ನಮ್ಮ ಮನೆಯಂಗಳದಲ್ಲಿ ಚಂದದ ಪ್ರಾಕು ಧರಿಸಿ, ಎರಡು ಪುಟ್ಟ ಜುಟ್ಟು ಹಾಕಿಕೊಂಡು, ಮುಖಕ್ಕೆ ಪೌಡರ್ ಸವರಿ, ಹಣೆಗೆ ಕಾಡಿಗೆಯ ಬೊಟ್ಟುಇಟ್ಟು ಕಾಲಿನ ಗೆಜ್ಜೆಯ ಸದ್ದು ಮಾಡುತ್ತಾ ಪುಟ್ಟ ಪುಟ್ಟ ಹೆಜ್ಜೆ ಇಟ್ಟು ಮನೆಯೆಲ್ಲ ನಡೆಯುತ್ತಿದ್ದ, ಅರಳು ಹುರಿದಂತೆ ಮುದ್ದಾಗಿ ಬಾಯಿ ತುಂಬಾ ಮಾತನಾಡುತ್ತಿದ್ದ ಪುಟ್ಟ ಕಂದ ನೀನು, ಇಂದು ಕಾಲೇಜಿಗೆ ಹೋಗುವಷ್ಟು ದೊಡ್ಡವಳಾಗಿರುವೆ. ಅತ್ಯುತ್ತಮ ಅಂಕ ಗಳಿಸಿ ಒಳ್ಳೆಯ ಕಾಲೇಜಿನಲ್ಲಿ ಸೀಟು ಗಿಟ್ಟಿಸಿ ಉನ್ನತ ಶಿಕ್ಷಣ (Higher Education) ಪಡೆಯುವ ಆಸೆಯಲ್ಲಿ ನಾವು ಮನೆಯವರನ್ನೆಲ್ಲಾ ತೊರೆದು ಹಾಸ್ಟೆಲಿನಲ್ಲಿ ವಾಸವಾಗಲು ಹೋಗುತ್ತಿರುವೆ.

ತುಸುವೇ ಸಂಭ್ರಮ ನಮ್ಮೆಲ್ಲರಲ್ಲಿ ಮನೆ ಮಾಡಿದ್ದರೂ ಹೆಚ್ಚು ಆತಂಕ ಮನದಲ್ಲಿ ಇದೆ. ಕಾಣದ ಊರು, ಅರಿಯದ ಜನ, ಬದಲಾದ ವಾತಾವರಣ ಇದೆಲ್ಲಕ್ಕೂ ನೀನು ಅದು ಹೇಗೋ ಹೊಂದಿಕೊಂಡು ಬಿಡುವೆ ಎಂಬ ಭರವಸೆ ನನಗಿದೆ… ಆದರೆ ನನ್ನ ಭಯ ಅದಲ್ಲ, ಅದರ ಅರಿವಾಗಲು ನೀನು ನಾನಲ್ಲ.
‘ಅಯ್ಯೋ ಅಮ್ಮ! ಮತ್ತದೇ ರಾಗ ಆಡಬೇಡ ನೀನು’ ಎಂಬ ನಿನ್ನ ಗದರಿಕೆಯ ನಡುವೆಯೂ ಮನ ಆತಂಕದ ಗೂಡಾಗಿದೆ. ನಿನ್ನನ್ನು ಕಳಿಸಲು ಬಂದಾಗ ಹೇಳದ ಮಾತುಗಳನು ಬರೆಯಲೇಬೇಕಾದ, ಬರೆದು ತಿಳಿಸಲೇಬೇಕಾದ ಅನಿವಾರ್ಯತೆ ನನ್ನದು.

ಪ್ರೀತಿಯ ಕೂಸು ನೀನು

ನಮ್ಮ ಮನೆಯ ಪ್ರೀತಿಯ ಕೂಸು ನೀನು. ಅಜ್ಜ ಅಜ್ಜಿಯ ಚಿನ್ನುವಾಗಿ, ಅಪ್ಪನ ಮುದ್ದಿನ ಮಗಳಾಗಿ, ಅಕ್ಕ-ಅಣ್ಣಂದಿರ ನೆಚ್ಚಿನ ತಂಗಿಯಾಗಿ ನನ್ನ ಕಣ್ಮಣಿಯಾಗಿ ಸುರಕ್ಷಿತವಾದ ಗುಬ್ಬಚ್ಚಿ ಗೂಡಿನಂತಹ ಸಂಸಾರದಲ್ಲಿ ಬೆಳೆದಿರುವ ನಿನಗೆ ಹೊರಗಿನ ನಿಷ್ಕುರ ಪ್ರಪಂಚದ ಅರಿವಿಲ್ಲ. ಹಾಗೆಂದು ಇಡೀ ಜಗತ್ತೇ ಕೆಟ್ಟದು ಎಂದಲ್ಲ. ನನಗೆ ಎಲ್ಲವೂ ಗೊತ್ತಿದೆ ಎಂಬ ಹದಿಹರೆಯದ ಹುಮ್ಮಸ್ಸು, ಸುಣ್ಣದ ತಿಳಿ ನೀರನ್ನು ಕೂಡ ಹಾಲೆಂದು ನಂಬುವ ನಿನ್ನ ಬೋಳೆ ಸ್ವಭಾವ, ಸ್ನೇಹಕ್ಕಿಂತ ಮಿಗಿಲಾದದ್ದು ಬೇರೆ ಯಾವುದೂ ಇಲ್ಲ ಎಂಬ ಸ್ಲೋಗನ್‌ಗಳು, ಪ್ರೀತಿ ಮಾಡಬಾರದು, ಮಾಡಿದರೆ ಜಗಕ್ಕೆ ಹೆದರಬಾರದು ಎಂಬ ಧ್ಯೇಯ ವಾಕ್ಯಗಳು, ಜೀವನ ಇರೋದೇ ಎಂಜಾಯ್ ಮಾಡೋಕೆ, ಈ ಹದಿಹರೆಯದ ವಯಸ್ಸು ಮತ್ತೆ ಬರುತ್ತಾ ಎಂಬ ಮಾತುಗಳು ಹೆಚ್ಚು ರುಚಿಸುವ ಸಮಯ ಇದು.

ಯಾವುದೂ ತಪ್ಪಲ್ಲ ನಿಜ

ಯಾವುದೂ ತಪ್ಪಲ್ಲ ನಿಜ. ಆದರೆ ಅದೆಲ್ಲವೂ ಒಂದು ಮಿತಿಯಲ್ಲಿದ್ದಾಗ ಮಾತ್ರ. ಜೀವನದಲ್ಲಿ ಎಂಜಾಯ್ಮೆಂಟ್ ಇರಬೇಕೆ ಹೊರತು ಎಂಜಾಯ್ಮೆಂಟ್ ಒಂದೇ ಜೀವನದ ಮುಖ್ಯ ಉದ್ದೇಶ ಅಲ್ಲ. ನಮ್ಮ ಬದುಕನ್ನು ವ್ಯವಸ್ಥಿತವಾಗಿ ನಡೆಸಲು ಬೇಕಾಗುವ ವಿದ್ಯೆ, ಆರ್ಥಿಕ ಸ್ವಾವಲಂಬನೆಯನ್ನು ಕೊಡುವ ನೌಕರಿ, ಸಾಮಾಜಿಕ ವಲಯದಲ್ಲಿ ನಿನ್ನದೇ ಆದ ಒಂದು ಒಳ್ಳೆಯ ಗುರುತಿಸುವಿಕೆ ಇವು ಉನ್ನತ ಶಿಕ್ಷಣದ ಮುಖ್ಯ ಧ್ಯೇಯಗಳು.

ಈಗಾಗಲೇ ಬದುಕಿನಲ್ಲಿ ಒಂದು ಮಹತ್ತರ ಘಟ್ಟವನ್ನು ತಲುಪಿರುವ ಸೋದರ ಸಂಬಂಧಿಗಳು ನಾವಂತೂ ಎಂಜಾಯ್ ಮಾಡಲಿಲ್ಲ ನೀವಾದರೂ ಮಾಡಿ ಎಂದು ಲಘುವಾಗಿ ನಿಮಗೆ ಹೇಳಿರುವುದನ್ನು ನೀನು ಗಂಭೀರವಾಗಿ ತೆಗೆದುಕೊಳ್ಳಬೇಡ…. ಓಟದ ನಡುವೆ ಅಲ್ಲೊಂದು ಇಲ್ಲೊಂದು ಅಡೆತಡೆಗಳು ಇದ್ದರೆ ತೊಂದರೆ ಇಲ್ಲ, ಆದರೆ ಆಡೆ ತಡೆಗಳನ್ನೇ ದಾಟುತ್ತ ಮುಂದೆ ಸಾಗುವ ಹೊತ್ತಿಗೆ ನಿನ್ನ ಸಮಯ ವ್ಯರ್ಥವಾಗಬಹುದು, ನಿನ್ನ ಗುರಿ ನಿನ್ನ ಕೈತಪ್ಪಿ ಹೋಗಬಹುದು ಎಂಬುದನ್ನು ಸದಾ ನೆನಪಿನಲ್ಲಿಟ್ಟುಕೋ.

ನಿನ್ನ ಕಾಲೇಜಿನಲ್ಲಿ, ಹಾಸ್ಟೆಲ್‌ನಲ್ಲಿ ಎಲ್ಲರೊಂದಿಗೆ ಒಳ್ಳೆಯ ಸ್ನೇಹವನ್ನು ಹೊಂದು ಆದರೆ ಅತಿಯಾದ ನಿರೀಕ್ಷೆ ಇಟ್ಟುಕೊಳ್ಳುವುದು ಬೇಡ. ಸದಾ ಒಂದು ಅಂತರವನ್ನು ಕಾಯ್ದುಕೋ. ಕಹಿ ಎನಿಸಿದರೂ ಜೀವನದ ಸತ್ಯ ಇದುವೇ. ಕೆಲ ಸ್ನೇಹ ಸಂಬಂಧಗಳು ಜೊತೆಗಿರುವವರೆಗೆ ಮಾತ್ರ.. ಒಂದೇ ಊರಿನವರಾದರೆ ಆಗಾಗ ಪರಸ್ಪರ ಭೇಟಿಯಾಗಿ ಕಷ್ಟ ಸುಖವನ್ನಾದರೂ ಹಂಚಿಕೊಳ್ಳುತ್ತಾರೆ, ಆದರೆ ದೂರದಲ್ಲಿರುವ ಸ್ನೇಹಿತರು ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ಭೇಟಿಯಾಗುತ್ತಾರೆ ಎಂಬುದನ್ನು ನೀನೇ ನೋಡುತ್ತಿರುವೆಯಲ್ಲ. ಹಾಗೆಂದು ಆ ಸ್ನೇಹದ ಕುರಿತು ತಿರಸ್ಕಾರ ಬೇಡ, ಒಳ್ಳೆಯ ಸ್ನೇಹಗಳು ಒಂದು ಮಧುರ ಅನುಭೂತಿಯಂತೆ ನಿನ್ನೊಂದಿಗೆ ಉಳಿದು ಹೋಗಬೇಕು ನಿಜ. ದುಸ್ವಪ್ನಗಳಂತಲ್ಲ.

ನಮ್ಮ ಜೊತೆಗೆ ಬರುವುದು ನಮ್ಮವರು ಮಾತ್ರ

ಜೀವಿತದ ಕೊನೆಯವರೆಗೂ ನಮ್ಮ ಜೊತೆಗೆ ಬರುವುದು ನಮ್ಮ ಅಪ್ಪ, ಅಮ್ಮ, ಅಣ್ಣ-ತಮ್ಮ, ಅಕ್ಕ- ತಂಗಿ ಮುಂತಾದ ರಕ್ತ ಸಂಬಂಧಗಳು ಮಾತ್ರ. ನಮ್ಮ ಕಷ್ಟ ಸುಖಕ್ಕೆ ನೋವು ನಲಿವಿಗೆ ಜೊತೆಯಾಗುವವರು ನಮ್ಮವರೇ. ಕೆಲ ಸ್ನೇಹಗಳು ಇದಕ್ಕೆ ಅಪವಾದ ಇರಬಹುದು. ನೀನು ಮನೆಯವರನ್ನೆಲ್ಲಾ ಬಿಟ್ಟು ಓದಲು ಹೋಗಿರುವ ಮುಖ್ಯ ಉದ್ದೇಶವನ್ನು ಸದಾ ನೆನಪಿನಲ್ಲಿಡು. ಓದು ಮತ್ತು ಅದಕ್ಕೆ ಸಂಬಂಧಪಟ್ಟ ಕೆಲಸಗಳಲ್ಲಿ ನಿನ್ನನ್ನು ನೀನು ತೊಡಗಿಸಿಕೋ. ಊಟದಲ್ಲಿ ಉಪ್ಪಿನಕಾಯಿ ಇರುವಂತೆ ತಮಾಷೆ, ಜೋಕುಗಳು, ಕಾಲೆಳೆಯುವುದು ಹಿತಮಿತವಾಗಿರಲಿ…. ಆದರೆ ಅದುವೇ ಮುಖ್ಯವಾಗದಿರಲಿ.

ಹಾಸ್ಟೆಲ್ ನಲ್ಲಿ ಕೊಡುವ ಆಹಾರಕ್ಕೆ ನಿನ್ನನ್ನು ನೀನು ಒಗ್ಗಿಸಿಕೊಳ್ಳುವುದನ್ನು ರೂಢಿ ಮಾಡಿಕೋ. ಬೇಕು ಬೇಕೆಂದಾಗ ಊಟ ಮಾಡಲು ಆಗುವುದಿಲ್ಲ. ಆದ್ದರಿಂದ ನಿಗದಿತ ಸಮಯದಲ್ಲಿ ಆಹಾರ ಸೇವಿಸು. ಅಲ್ಲಿ ಕೊಡುವ ಹಸಿ ತರಕಾರಿ ಸೊಪ್ಪುಗಳನ್ನು, ಹಣ್ಣುಗಳನ್ನು ಸೇವಿಸು. ಸಾಧ್ಯವಾದಷ್ಟು ಹೊರಗಿನ ಆಹಾರವನ್ನು ಅವಾಯ್ಡ್ ಮಾಡು. ಹಾಸ್ಟೆಲ್ನ ನಿಯಮಾವಳಿಗಳನ್ನು ಎಂದೂ ಮೀರದಿರು. ಅತಿಯಾಗಿ ರುಚಿಯ ಕಡೆ ಗಮನ ಕೊಡದೆ ಹಿತಮಿತವಾದ ಆಹಾರವನ್ನು ಸೇವಿಸು.

ಆರ್ಥಿಕ ಶಿಸ್ತು ಇರಲಿ

ಖರ್ಚಿನ ವಿಷಯದಲ್ಲಿ ಸ್ವಲ್ಪ ಹುಷಾರಾಗಿರು. ಯಾವುದೇ ಕಾರಣಕ್ಕೂ ಹಣದ ದುರ್ಬಳಕೆ ಬೇಡ. ಅದೆಷ್ಟೇ ಒಳ್ಳೆಯ ಸ್ನೇಹಿತರಾಗಿದ್ದರೂ ಕೂಡ ಯಾರೊಂದಿಗೂ ನಿನ್ನ ಖಾತೆಗೆ ಸಂಬಂಧಪಟ್ಟ ಮಾಹಿತಿಗಳನ್ನು ಮತ್ತು ಎಟಿಎಂನ ಪಾಸ್ವರ್ಡ್ ಅನ್ನು ಹಂಚಿಕೊಳ್ಳಬೇಡ. ನೀನು ಓದುತ್ತಿರುವೆಡೆಯಲ್ಲಾಗಲಿ, ವಾಸಿಸುತ್ತಿರುವ ಸ್ಥಳದಲ್ಲಾಗಲಿ ಪ್ರತಿ ಬಾರಿಯೂ ನಿನ್ನ ಮಾತೇ ನಡೆಯಬೇಕು ಎಂಬ ಹಟ ಬೇಡ. ಬೇರೆಯವರ ಮಾತಿಗೂ ಬೆಲೆ ಕೊಡು. ಬಹಳಷ್ಟು ಸಲ ನಿಮ್ಮ ಹಾಸ್ಟೆಲ್ ವಾರ್ಡನ್ ಗಳು ನಿಮಗೆ ಹೇಳುವ ಮಾತುಗಳು ಒರಟೆನಿಸಬಹುದು, ಬೇಧ ತೋರುತ್ತಾರೆ ಎಂದು ಕೂಡ ಅನಿಸಬಹುದು. ಆದರೆ ಅವರು ಕೂಡ ನಿಮ್ಮ ಒಳಿತಿಗಾಗಿ ಮತ್ತು ಸಂಸ್ಥೆಯ ಏಳಿಗೆಗಾಗಿ ದುಡಿಯುತ್ತಿರುವವರು. ನಿಮ್ಮ ಎಲ್ಲ ಆಗುಹೋಗುಗಳಿಗೆ ಜವಾಬ್ದಾರರು ಎಂಬುದು ಸದಾ ನೆನಪಿರಲಿ.

ಇನ್ನು ಮುಖ್ಯವಾಗಿ ನಮ್ಮ ಬದುಕಿನಲ್ಲಿ ಬಾಲ್ಯ, ಯೌವನ, ವೃದ್ಧಾಪ್ಯ ಹೇಗೆ ಒಂದರ ನಂತರ ಒಂದು ಕ್ರಮವಾಗಿ ಬರುತ್ತವೆಯೋ ಹಾಗೆಯೇ ವಿದ್ಯಾರ್ಥಿ ಜೀವನ, ಉದ್ಯೋಗ, ಸಂಗಾತಿ ಮತ್ತು ವಿವಾಹಗಳು ಕೂಡ ಅದೇ ಕ್ರಮದಲ್ಲಿ ಬರಬೇಕು. ಇದರಲ್ಲಿ ಮಧ್ಯದ ಎರಡು ವಿಷಯಗಳು ಹಿಂದು ಮುಂದಾದರೆ ಉಳಿದ ಎರಡು ವಿಷಯಗಳನ್ನು ನಿರೀಕ್ಷಿತ ಮಟ್ಟದಲ್ಲಿ ಸಾಧಿಸಲು ಆಗುವುದಿಲ್ಲ. ಆದ್ದರಿಂದ ಈಗ ಓದುವ ವಯಸ್ಸಿನಲ್ಲಿ ಕೇವಲ ನಿನ್ನ ಓದಿನೆಡೆ ಮಾತ್ರ ನಿನ್ನ ಗಮನವಿರಲಿ. ಹರೆಯದ ಆಕರ್ಷಣೆಗೆ ಒಳಗಾಗಿ ವಿರುದ್ಧ ಲಿಂಗಿಯ ಜೊತೆಗಿನ ಸ್ನೇಹಕ್ಕೆ ಪ್ರೀತಿ ಪ್ರೇಮದ ಬಣ್ಣ ಹಚ್ಚುವುದು ಬೇಡ. ನಿನ್ನ ತಂದೆ ತಾಯಿಯರಿಗೂ ನಿನ್ನ ಸ್ನೇಹಿತರನ್ನು ಪರಿಚಯಿಸಿ ಧೈರ್ಯವಾಗಿ ಮಾತನಾಡಬಲ್ಲಷ್ಟು ನಿಷ್ಕಲ್ಮಶ ಸ್ನೇಹವನ್ನು ಹೊಂದಿದ್ದರೆ ಸಾಕು. ನಮ್ಮ ಹಿರಿಯರು ಇದ್ದಂತೆ ನಾವಿಲ್ಲ ನಿಜ, ಆದರೆ ನಮ್ಮ ಹಿರಿಯರು ಹಾಕಿಕೊಟ್ಟ ದಾರಿ ನಮಗಿದ್ದೆ ಇದೆ.

ಕ್ಷಣಿಕ ಆಸೆಗೆ ಬಲಿಯಾಗಬೇಡ

ಮತ್ತೊಂದು ವಿಷಯ ಹೇಳಿದರೆ ನಿನಗೆ ಬೇಸರವಾಗಬಹುದು. ಇತ್ತೀಚೆಗೆ ಕೇಳಿ ಬರುತ್ತಿರುವ ಹೆಣ್ಣು ಮಕ್ಕಳ ಮೇಲಿನ ಬರ್ಬರ ಕೃತ್ಯಗಳು ಹೆತ್ತವರನ್ನು ಆತಂಕಕ್ಕೆ ಈಡು ಮಾಡಿವೆ. ಕ್ಷಣಿಕ ಆಕರ್ಷಣೆ ಬದುಕನ್ನು ನಾಶ ಮಾಡಬಹುದು. ಒಂದು ತಪ್ಪು ಹೆಜ್ಜೆ ಜೀವನವಿಡೀ ಪಶ್ಚಾತಾಪಕ್ಕೆ ದಾರಿ ಮಾಡಿಕೊಡುವುದು ಬೇಡ ಎಂಬ ಎಚ್ಚರ ನಿನಗಿದ್ದರೆ ಸಾಕು.
ಬದುಕಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಕಳೆದ ಒಂದುವರೆ ತಿಂಗಳಿನಲ್ಲಿ ನಡೆದ ಹೆಣ್ಣು ಮಕ್ಕಳ ಸಾಲು ಸಾಲು ಹತ್ಯೆಗಳನ್ನು ನೋಡಿ ಮನಸ್ಸಿಗೆ ಅನ್ನಿಸಿದ್ದು ಹೀಗೆ. ಅರಿಯದ ವಯಸ್ಸಿನಲ್ಲಿ ಪ್ರೀತಿ ಪ್ರೇಮದ ಗುಂಗಿಗೆ ಬಿದ್ದು, ತಂದೆ ತಾಯಿ ಬುದ್ಧಿ ಹೇಳಿದಾಗ ವಿದ್ಯಾರ್ಥಿ ದೆಸೆಯಲ್ಲಿ ತಾನು ತಪ್ಪು ಮಾಡುತ್ತಿರುವೆ ಎಂಬ ಅರಿವು ಉಂಟಾಗಿ ಪ್ರೀತಿಯಿಂದ ಹಿಂದೆ ಸರಿದ ತಪ್ಪಿಗೆ ಒಂದೊಮ್ಮೆ ತನ್ನನ್ನು ಪ್ರೀತಿಸಿದ ಹುಡುಗನೇ ತನ್ನನ್ನು ಕೊಚ್ಚಿ ಕೊಂದರೆ ಆಕೆಯನ್ನು ಇಷ್ಟು ವರ್ಷಗಳ ಕಾಲ ಲಾಲಿಸಿ ಪಾಲಿಸಿದ ತಂದೆ ತಾಯಿಗಳ ಪಾಡೇನು ಎಂದು ನೆನೆದಾಗ ಮೈಯಲ್ಲಿ ನಡುಕ ಉಂಟಾಗುತ್ತದೆ. ನಿಮ್ಮ ಬದುಕು ಕೇವಲ ನಿಮ್ಮದಲ್ಲ. ನಿಮ್ಮ ಬದುಕಿನ ಆಗುಹೋಗುಗಳ ಸುತ್ತ ನಿಮ್ಮ ಕುಟುಂಬ ಮತ್ತು ಸಮಾಜ ನಿಮ್ಮೊಂದಿಗೆ ಜೋಡಿಸಲ್ಪಟ್ಟಿ ರುತ್ತದೆ. ಆದ್ದರಿಂದ ನಿನ್ನ ಹುಷಾರಿನಲ್ಲಿ ನೀನಿರು ಎಂದು ಮಾತ್ರ ಹೇಳುತ್ತೇನೆ. ಸಮಾಜಕ್ಕೆ ಒಳ್ಳೆಯ ಉದಾಹರಣೆಯಾಗದಿದ್ದರೂ ಪರವಾಗಿಲ್ಲ ಆದರೆ ಕೆಟ್ಟ ಉದಾಹರಣೆಯಾಗಬಾರದು ಎಂಬ ಅರಿವಿನ ಪ್ರಜ್ಞೆ ನಿನ್ನಲ್ಲಿ ಸದಾ ಜಾಗೃತವಾಗಿರಲಿ.

ಅಷ್ಟಾಗಿಯೂ ನಿನಗೆ ಏನೇ ತೊಂದರೆಯಾದರೂ ಮುಕ್ತವಾಗಿ ಹೇಳಿಕೋ…. ಒಂದು ಸುಳ್ಳನ್ನು ಮುಚ್ಚಲು ನೂರಾರು ಸುಳ್ಳುಗಳನ್ನು ಹೇಳುವುದರ ಬದಲು ಒಂದು ಸತ್ಯವನ್ನು ಹೇಳಿ ಬೈಸಿಕೊಂಡರೂ ಪರವಾಗಿಲ್ಲ ಮನಸ್ಸು ನಿರಾಳವಾಗಿರುತ್ತದೆ ಎಂಬುದನ್ನು ಅರಿತುಕೋ.

ಬದುಕಿನ ಯಾವುದೇ ಹಂತದಲ್ಲಿಯಾದರೂ ನಮ್ಮ ತೋಳುಗಳ ಆಸರೆ ನಿನಗೆ ಇದ್ದೇ ಇರುತ್ತದೆ… ಆದರೆ ಆ ತೋಳುಗಳಲ್ಲಿ ಕಸುವು ತುಂಬುವ ಕೆಲಸ ಮಾತ್ರ ನಿನ್ನದು. ಅದು ನಿನ್ನ ನಡತೆಯಲ್ಲಿ, ವಿದ್ಯಾಭ್ಯಾಸದಲ್ಲಿ ಮತ್ತು ಶೈಕ್ಷಣಿಕ ಅಭಿವೃದ್ಧಿಯಲ್ಲಿ ಸದಾ ಇರಲೇಬೇಕು. ನಿನ್ನ ಕುರಿತಾಗಿ ನನ್ನ ಆಸೆ ಆಕಾಂಕ್ಷೆಗಳಿಗೆ ಮಿತಿ ಇಲ್ಲ,ಭಯ ಆತಂಕಗಳು ನಿರಾಧಾರವಾದುದು ಎಂದು ನಿನಗೆ ಅನಿಸಿದರೆ ಅದು ನಿನ್ನ ತಪ್ಪಲ್ಲ. ನನ್ನಂತೆ ನೀನೂ ಕೂಡ ತಾಯಾಗಿ ನಿನ್ನ ಮಕ್ಕಳನ್ನು ಬೆಳೆಸುವಾಗ ನಿನಗೆ ಇದರ ಅನುಭವ ಖಂಡಿತವಾಗಿಯೂ ಆಗುತ್ತದೆ. ಪತ್ರ ತುಸು ದೊಡ್ಡದಾಯಿತು ಆದರೆ ಓದದೆ ಇರಬೇಡ. ನಿನ್ನ ಹಿತದಲ್ಲಿಯೇ ನಮ್ಮ ಕುಟುಂಬದ ಒಳಿತಿದೆ.

ಇದನ್ನೂ ಓದಿ: AR Rahman: ಪ್ರಶಸ್ತಿಗಳೆಲ್ಲ ಚಿನ್ನವೆಂದು ಭಾವಿಸಿ ಎಆರ್ ರೆಹಮಾನ್ ತಾಯಿ ಮಾಡಿದ್ದೇನು?

Continue Reading

ಅಂಕಣ

ರಾಜಮಾರ್ಗ ಅಂಕಣ: ಸಾವನ್ನೇ ಆಹ್ವಾನಿಸಿದ ಸುಂದರಿ ಝೋರಯಾ ಟರ್ ಬ್ರೀಕ್

ರಾಜಮಾರ್ಗ ಅಂಕಣ: ಝೋರಯಾ ಮಾನಸಿಕವಾಗಿ ಧೃಡವಾಗಿ ನಿಂತು ತಾನು ತನ್ನ ಮನೆಯ ಲಿವಿಂಗ್ ರೂಮಿನಲ್ಲಿ ಸೋಫಾದ ಮೇಲೆ ಕುಳಿತು ತನ್ನ ಮುದ್ದಿನ ಬೆಕ್ಕುಗಳನ್ನು ನೇವರಿಸುತ್ತಾ ಸಾವನ್ನು ಸ್ವಾಗತ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ತನ್ನ ದೇಹವನ್ನು ಪಂಚಭೂತಗಳಲ್ಲಿ ಲೀನ ಮಾಡಿ. ಅಂತ್ಯಸಂಸ್ಕಾರಕ್ಕೆ ಜನ ಸೇರಿಸುವ ಅಗತ್ಯ ಇಲ್ಲ. ನನ್ನ ಚಿತಾ ಭಸ್ಮವನ್ನು ಕಾಡಿನೊಳಗೆ ಹರಡಿ ಸಾಕು ಅಂದಿದ್ದಾರೆ.

VISTARANEWS.COM


on

ರಾಜಮಾರ್ಗ ಅಂಕಣ euthanasia zoraya ter beek
Koo

ನೆದರ್‌ಲ್ಯಾಂಡ್ ದೇಶದಲ್ಲೊಂದು ಹೃದಯ ವಿದ್ರಾವಕ ಘಟನೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಆಕೆ ಲೋಕೋತ್ತರ ಸುಂದರಿ. ವಯಸ್ಸು ಇನ್ನೂ 28. ಆಕೆ ಉತ್ಸಾಹದ ಖಣಿ. ಮೇಲ್ನೋಟಕ್ಕೆ 100% ಫಿಟ್ ಮತ್ತು ಆರೋಗ್ಯಪೂರ್ಣ ಆಗಿದ್ದಾರೆ. ಆದರೆ ಆಕೆ ತನ್ನ ದೇಶದ ಕಾನೂನಿನ ನೆರವು ಪಡೆದುಕೊಡು ತನ್ನ ಜೀವನಕ್ಕೊಂದು ಪೂರ್ಣವಿರಾಮ ಇಡಲು ನಿರ್ಧಾರ ಮಾಡಿದ್ದಾರೆ. ಅದಕ್ಕೆ ಅವರು ಆರಿಸಿಕೊಂಡ ವಿಧಾನ ಅಂದರೆ ದಯಾಮರಣ (euthanasia)! ಅಂದರೆ ತನ್ನ ಇಷ್ಟದ ಪ್ರಕಾರ, ಇಷ್ಟದ ಜಾಗದಲ್ಲಿ, ಇಷ್ಟದ ಜನರ ಮುಂದೆ, ಇಷ್ಟದ ರೀತಿಯಲ್ಲಿ ಸಾಯುವುದು..!

ದಯಾಮರಣ – ನೆದರ್‌ಲ್ಯಾಂಡ್‌ನಲ್ಲಿ ಕಾನೂನು ಸಮ್ಮತ

ನೆದರ್‌ಲ್ಯಾಂಡ್ (Netherlands) ದೇಶವು ದಯಾಮರಣಕ್ಕೆ ಕಾನಾನು ಸಮ್ಮತಿ ನೀಡಿ 22 ವರ್ಷಗಳೇ ಸಂದಿವೆ! ಅಸಹನೀಯ ನೋವು, ಗುಣಪಡಿಸಲು ಆಗದ ಕಾಯಿಲೆ, ಮಾನಸಿಕ ಅಸ್ವಾಸ್ಥ್ಯ ಸೇರಿದಂತೆ ಆರು ಕಾರಣಕ್ಕೆ ಸರಕಾರ ದಯಾಮರಣಕ್ಕೆ ಅನುಮತಿಯನ್ನು ನೀಡುತ್ತದೆ. 2022ರಲ್ಲಿ ಆ ದೇಶದಲ್ಲಿ ಕಾನೂನಿನ ನೆರವು ಪಡೆದು 8730 ಮಂದಿ ದಯಾಮರಣದ ಮೂಲಕ ತಮ್ಮ ಬದುಕನ್ನು ಕೊನೆಗೊಳಿಸಿದ್ದಾರೆ! ಇದು ಕಳೆದ ವರ್ಷಕ್ಕಿಂತ 14% ಅಧಿಕ ಎಂದು ಅಲ್ಲಿನ ಸರಕಾರ ಹೇಳಿದೆ.

ಝೋರಯಾಗೆ ಮಾನಸಿಕ ಕಾಯಿಲೆ

ಈ ಚಂದದ ಹುಡುಗಿ ಝೊರೆಯಾ (Zoraya Ter Beek) ಬಳಲುತ್ತಿರುವುದು ಖಿನ್ನತೆ, ಉದ್ವೇಗ ಆಕೆಯ ಬಾಲ್ಯದ ಒಡನಾಡಿಗಳು. ಇತ್ತೀಚೆಗೆ ಆಟಿಸಂ ಕೂಡ ಸೇರಿಕೊಂಡು ಆಕೆಗೆ ಬದುಕೇ ಅಸಹನೀಯವಾಗುತ್ತು. ಯಾವುದೆಲ್ಲ ಔಷಧಿ, ಚಿಕಿತ್ಸಾ ವಿಜ್ಞಾನ ಮತ್ತು ಕೌನ್ಸೆಲಿಂಗ್ ನಡೆದರೂ ಅವಳಿಗೆ ಅದ್ಯಾವುದೂ ರಿಲೀಫ್ ಕೊಡಲಿಲ್ಲ. ವೈದ್ಯರೂ ʼಇನ್ನು ಸಾಧ್ಯವಿಲ್ಲ’ ಎಂದು ಹೇಳಿದ ನಂತರ ಆಕೆ ಆರಿಸಿಕೊಂಡದ್ದು ಸಾವನ್ನು! ಆತ್ಮಹತ್ಯೆ ಮಾಡಿ ಸಾಯಲು ಮನಸಿಲ್ಲ ಎಂದಾಕೆ ಗಟ್ಟಿಯಾದ ನಿರ್ಧಾರ ತೆಗೆದುಕೊಂಡ ನಂತರ ಆಕೆಗೆ ಉಳಿದದ್ದು ಒಂದೇ ಪರಿಹಾರ – ಅದು ದಯಾಮರಣ! ಆಕೆ ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ದು 2020ರಲ್ಲಿ. ಅದೀಗ ಪರ ವಿರೋಧ ಚರ್ಚೆಯಾಗಿ ಈಗ ತೀರ್ಪು ಆಕೆಯ ಪರವಾಗಿ ಬಂದಿದೆ. ಅಂದರೆ ದಯಾಮರಣಕ್ಕೆ ಅನುಮತಿ ದೊರೆತಿದೆ.

ರಾಜಮಾರ್ಗ ಅಂಕಣ euthanasia zoraya ter beek

ದಯಾಮರಣ ಹೇಗೆ?

ಅರ್ಜಿದಾರರು ಇಷ್ಟಪಡುವ ಸ್ಥಳದಲ್ಲಿ, ಇಷ್ಟಪಡುವ ಸನ್ನಿವೇಶವನ್ನು ಕ್ರಿಯೇಟ್ ಮಾಡಿ ನಿಗದಿ ಪಡಿಸಿದ ದಿನದಂದು ವೈದ್ಯರು ಆಕೆಗೆ ಒಂದು ಅರಿವಳಿಕೆಯ ಇಂಜೆಕ್ಷನ್ ನೀಡುತ್ತಾರೆ. ಆಕೆ ಕೋಮಾ ತಲುಪುವುದನ್ನು ಕಾಯುವ ವೈದ್ಯರು ನಂತರ ಹೃದಯವು ನಿಧಾನವಾಗಿ ನಿಲ್ಲುವ ಔಷಧಿ ಕೊಡುತ್ತಾರೆ. ಒಂದಿಷ್ಟೂ ನೋವು ಪಡದೆ ಅರ್ಜಿದಾರರು ನಿಧಾನವಾಗಿ ಶಾಶ್ವತ ನಿದ್ದೆಗೆ ಜಾರುತ್ತಾರೆ. ಆಗ ದಯಾಮರಣ ಸಮಿತಿಯು ಅವರನ್ನು ಪರಿಶೀಲನೆ ಮಾಡಿ ಸಾವು ಸಂಭವಿಸಿದೆ ಎಂದು ಘೋಷಣೆ ಮಾಡಿದಲ್ಲಿಗೆ ಪ್ರಕ್ರಿಯೆ ಪೂರ್ತಿ ಆಗುತ್ತದೆ.

ಸಾವನ್ನು ಸ್ವಾಗತಿಸಲು ಮಾನಸಿಕ ಸಿದ್ಧತೆ

ಝೋರಯಾ ಮಾನಸಿಕವಾಗಿ ಧೃಡವಾಗಿ ನಿಂತು ತಾನು ತನ್ನ ಮನೆಯ ಲಿವಿಂಗ್ ರೂಮಿನಲ್ಲಿ ಸೋಫಾದ ಮೇಲೆ ಕುಳಿತು ತನ್ನ ಮುದ್ದಿನ ಬೆಕ್ಕುಗಳನ್ನು ನೇವರಿಸುತ್ತಾ ಸಾವನ್ನು ಸ್ವಾಗತ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ತನ್ನ ದೇಹವನ್ನು ಪಂಚಭೂತಗಳಲ್ಲಿ ಲೀನ ಮಾಡಿ. ಅಂತ್ಯಸಂಸ್ಕಾರಕ್ಕೆ ಜನ ಸೇರಿಸುವ ಅಗತ್ಯ ಇಲ್ಲ. ನನ್ನ ಚಿತಾ ಭಸ್ಮವನ್ನು ಕಾಡಿನೊಳಗೆ ಹರಡಿ ಸಾಕು ಅಂದಿದ್ದಾರೆ.

`ನನಗೆ ಪಾಪಪ್ರಜ್ಞೆ ಕಾಡುತ್ತಿಲ್ಲ. ನನಗಾಗಿ ಯಾರೂ ಕಣ್ಣೀರು ಸುರಿಸುವ ಅಗತ್ಯ ಇಲ್ಲ. ಇದು ನಾನೇ ಆರಿಸಿಕೊಂಡ ಸಾವು. ಹಾಗಾಗಿ ನನಗೆ ಯಾವ ವಿಷಾದವೂ ಇಲ್ಲ’ ಎಂದಾಕೆ ನಗುನಗುತ್ತಾ ಹೇಳುವಾಗ ಯಾರ ಮನಸ್ಸಾದರೂ ಕರಗದೆ ಇರದು!

ಹೋಗಿ ಬಾ ಝೊರೆಯಾ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಅಳಿಸಲಾಗದ ನೋವು ಬಿಟ್ಟು ಹೋದ ಮಂಗಳೂರು ವಿಮಾನ ದುರಂತ!

Continue Reading

ಅಂಕಣ

ಧವಳ ಧಾರಿಣಿ ಅಂಕಣ: ಗೌತಮ ಬುದ್ಧ; ಭಾರತೀಯ ತತ್ತ್ವಶಾಸ್ತ್ರದ ಮುನ್ನುಡಿ

ಧವಳ ಧಾರಿಣಿ ಅಂಕಣ (Dhavall Dharini): ಗೌತಮ ಬುದ್ಧನೇ ನೇರವಾಗಿ ಬೋಧಿಸಿದ ತತ್ತ್ವಗಳನ್ನು ಗಮನಿಸಿದಾಗ ಆತನ ತತ್ತ್ವಗಳು ಭಾರತೀಯ ದರ್ಶನ ಶಾಸ್ತ್ರದ ಮುನ್ನುಡಿಯಾಗಿವೆ ಎನ್ನಬಹುದು. ಇಂದು ಬುದ್ಧ ಪೂರ್ಣಿಮಾ (Buddha Purnima) ಹಿನ್ನೆಲೆಯಲ್ಲಿ ಆತನ ಚಿಂತನೆಗಳ ಬಗ್ಗೆ ಒಂದು ಅವಲೋಕನ.

VISTARANEWS.COM


on

dhavala dharini column buddha ಧವಳ ಧಾರಿಣಿ
Koo
dhavala dharini by Narayana yaji

­ಧವಳ ಧಾರಿಣಿ ಅಂಕಣ: ಭಾರತದ ಇತಿಹಾಸದಲ್ಲಿ ಗೌತಮ ಬುದ್ಧ (Gautama Buddha) ಮಹತ್ವದ ಸ್ಥಾನ ಪಡೆಯುವುದು ಆತ ಹೊಸ ಧರ್ಮವನ್ನು ಸ್ಥಾಪಿಸಿದ್ದಾನೆ ಎನ್ನುವುದಕ್ಕೆ ಅಲ್ಲ. ಬೌದ್ಧ ಧರ್ಮವನ್ನು (buddhism) ನೇರವಾಗಿ ಬುದ್ಧನೇ ಸ್ಥಾಪಿಸಲಿಲ್ಲ. ಆತನ ನಿರ್ವಾಣದ ನಂತರದ ಇನ್ನೂರು ವರ್ಷಗಳ ನಂತರ ಆತನ ಶಿಷ್ಯರು ಒಂದೆಡೆ ಸೇರಿ ಬುಧ್ದನ ತತ್ತ್ವಕ್ಕೆ ಒಂದು ಧಾರ್ಮಿಕ ಸ್ವರೂಪವನ್ನು ಕೊಟ್ಟರು. ಶಾಕ್ಯಮುನಿ ಗೌತಮನಿಗೆ ಲೋಕದ ಜನತೆ ಬದುಕುತ್ತಿರುವ ವಿಧಾನದಲ್ಲಿ ಬದಲಾವಣೆ ತರಬೇಕಾಗಿತ್ತು. ವರ್ಣವ್ಯವಸ್ಥೆಯ ಮೂಲಕ ಅಸ್ತಿತ್ವಕ್ಕೆ ಬಂದ ಬ್ರಾಹ್ಮಣಿಕೆಯೆನ್ನುವುದು ಅದಾಗ ಜಾತಿಯಾಗಿ ಬದಲಾವಣೆಯಾಗಿತ್ತು. ಆದರೂ ಅದು ಅಷ್ಟು ಗಟ್ಟಿಯಾಗಿ ಅನುಷ್ಟಾನಕ್ಕೆ ಬಂದಿರಲಿಲ್ಲ. ಬ್ರಾಹ್ಮಣರ ಪಾರಮ್ಯವೆನ್ನುವುದು ಧಾರ್ಮಿಕ ರಂಗದಲ್ಲಿ ಇತ್ತು. ಆತನ ಜನನದ ಕಾಲಘಟ್ಟವಾದ ಸುಮಾರು ಕ್ರಿ. ಪೂ. 623 ಶತಮಾನದಲ್ಲಿ ಭಾರತ ಧಾರ್ಮಿಕವಾಗಿ ಹಲವು ಪಲ್ಲಟಗಳನ್ನು ಅನುಭವಿಸಿತ್ತು. ಸನಾತನ ಧರ್ಮದ ಆಚರಣೆಯಲ್ಲಿ ಸಮಗ್ರವಾದ ದಿಕ್ಕುಗಳನ್ನು ತೋರಿಸುವವರು ಇರಲಿಲ್ಲ. ಧಾರ್ಮಿಕ ನಾಯಕತ್ವವೆನ್ನುವದು ತತ್ವಜ್ಞಾನಿಗಳು ತಮಗೆ ತೋಚಿದ ದಿಕ್ಕಿನಲ್ಲಿ ಅರ್ಥೈಸಿಕೊಂಡು ಅದನ್ನೇ ಬೋಧಿಸುತ್ತಿದ್ದರು. ಈ ಕಾಲಘಟ್ಟದಲ್ಲಿಯೇ ತಂತ್ರಶಾಸ್ತ್ರ, ಅಘೋರಿಗಳು, ಕಾಪಾಲಿಕರು ಹೀಗೆ ಸಾಧನೆಗಳಿಗೆ ಸಾತ್ವಿಕಮಾರ್ಗಗಳ ಜೊತೆಗೆ ಹಟಯೋಗವೂ ಸೇರಿಹೋಗಿತ್ತು. ರಾಜರುಗಳು ಯಾವ ಹಾದಿಯನ್ನು ಹಿಡಿಯುತ್ತಿದ್ದಾರೋ ಅದೇ ಹಾದಿಯನ್ನು ಜನಸಾಮಾನ್ಯರು ನಡೆದುಕೊಳ್ಳುತ್ತಿದ್ದರು.

ಇಂತಹ ಹೊತ್ತಿನಲ್ಲಿ ಪ್ರವೇಶ ಮಾಡಿದ ಬುದ್ಧನ ಉಪದೇಶಗಳು ಸನಾತನ ಧರ್ಮಕ್ಕೇ ಹೊಸ ವ್ಯಾಖ್ಯಾನವನ್ನು ಕೊಟ್ಟವು. ಹಾಗಂತ ಆತ ಭಾರತೀಯ ದರ್ಶನ ಶಾಸ್ತ್ರಕ್ಕೆ ವಿಲೋಮವಾದದ್ದನ್ನು ತನ್ನು ಬೋಧನೆಯಲ್ಲಿ ಹೇಳಲಿಲ್ಲ. ಬುದ್ಧ ಅರ್ಥವಾಗಬೇಕಾದರೆ ಭಾರತೀಯ ತತ್ತ್ವಶಾಸ್ತ್ರ ಅರ್ಥವಾಗಬೇಕು. ಸ್ವರ್ಗಕಾಮಕ್ಕಾಗಿ ಯಜ್ಞ ಯಾಗಾದಿಗಳು ಎಂದು ಸಾರುತ್ತಿದ ಪುರಾಣಗಳ ನಡುವೆ ವೇದಾಂತದ ಪರಮ ಸತ್ಯವನ್ನು ಆತನ ಉಪದೇಶಗಳಲ್ಲಿ ಗಮನಿಸಬಹುದಾಗಿದೆ. “ವೇದಗಳಲ್ಲಿ ಅಡಗಿದ್ದ ಸತ್ಯಗಳನ್ನು ಹೊರತಂದು ಜಗತ್ತಿಗೆಲ್ಲ ಘಂಟಾಘೋಷವಾಗಿ ಸಾರಿದ ವಿಶಾಲಹೃದಯಿಯಾಗಿ ಬುದ್ದ ಕಾಣಿಸಿಸಿಕೊಳ್ಳುತ್ತಾನೆ ಎಂದು ವಿವೇಕಾನಂದರು ಹೇಳುತ್ತಾರೆ. “ಕಿಸಾಗೌತಮಿಗೆ ಆಕೆಯ ಮಗನ ಸಾವಿನ ನೋವನ್ನೂ ಮರೆಯಿಸಿ ಭವಚಕ್ರಗಳ ಬಂಧನದ ಜಗತ್ತಿನ ಮಾಯೆಯನ್ನು ಹೋಗಲಾಡಿಸಿದ ಬುದ್ಧ ಬಿಡಿಸಿದಷ್ಟೂ ಬಿಡಿಸಲಾಗದ ಒಗಟು”. ಸನಾತನ ಧರ್ಮದ ಸಾರವೇ ಬುದ್ಧನ ಉಪದೇಶವೆನ್ನಬಹುದಾಗಿದೆ. ಅದಕ್ಕೇ ಸ್ವಾಮಿ ವಿವೇಕಾನಂದರು ತಮ್ಮ ಕೃತಿಶ್ರೇಣಿಯಲ್ಲಿ “ಭಾರತದಲ್ಲಿ ಬೌದ್ಧಧರ್ಮವು ನಾಶವಾಗಲಿಲ್ಲ, ಉಪನಿಷತ್ತುಗಳಲ್ಲಿ ಹುಟ್ಟಿದೆ. ಅದು ನವಯುಗದ ಹಿಂದೂ ಧರ್ಮವಾಯಿತು” ಎನ್ನುತ್ತಾರೆ.

ಜೀವನದ ನಶ್ವರತೆಯೆನ್ನುವುದು ಬುದ್ಧನ ಬದುಕಿನಲ್ಲಿ ಬಂದ ಮೊದಲ ತಿರುವು. ಪ್ರಸಿದ್ಧವಾದ ಆತನ ವಾಕ್ಯ “ಆಸೆಯೇ ದುಃಖಕ್ಕೆ ಕಾರಣ” ಎನ್ನುವುದು ನೋಡಲು ಸರಳವಾಗಿ ಕಂಡರೂ ಈ ಸತ್ಯವನ್ನು ಮನಗಾಣುವಲ್ಲಿ ಬುದ್ಧ ಸುಮಾರು ಆರುವರ್ಷಗಳ ಕಾಲ ಹುಡುಕಾಡಿದ್ದಾನೆ. ತನ್ನ ಕುಲಗುರು ಅಸಿತದೇವಲನಿಂದ ಹಿಡಿದು ಆಲಾರಾ ಕಲಮ್, ಉದ್ಧತ ರಾಮಪುತ್ತ ಮುಂತಾದ ಅನೇಕರ ಹತ್ತಿರ ಈ ವಿಷಯವನ್ನು ಚರ್ಚಿಸಿದ್ದಾನೆ. ಹಿಮಾಲಯದ ತಪ್ಪಲಿನ ಕೆಲ ಸನ್ಯಾಸಿಗಳು ಪ್ರಾಪಂಚಿಕ ಸುಖ ಮತ್ತು ದುಃಖಗಳ ಕಾರಣವನ್ನು ಅರಿತು ವೇದೋಪನಿಷತ್ತುಗಳ ನಿಜವಾದ ಅರ್ಥಗಳನ್ನು ತಿಳಿದು ಅದನ್ನೇ ಬೊಧಿಸುತ್ತಿದ್ದರು. ಅವರೆಲ್ಲರೂ ಈತನಿಗೆ ತಮ್ಮಲ್ಲಿದ ವಿದ್ಯೆಯನ್ನು ಧಾರೆ ಎರೆದರೂ ಅವೆಲ್ಲವೂ ಬದುಕಿನ ಪರಮ ಸತ್ಯವನ್ನು ಸಾಧಿಸುವತ್ತ ಪ್ರಯೋಜನಕ್ಕೆ ಬಾರದವುಗಳು ಎನ್ನುವುದು ಅರಿವಾಯಿತು. ಉದ್ಧಕ ರಾಪಪುತ್ತನ ಹತ್ತಿರ ಸಮಾಧಿಗೆ ಹೋಗುವ ತಂತ್ರವನ್ನು ಕೇವಲ ಹದಿನೈದನೇ ದಿನಗಳಲ್ಲಿ ಕಲಿತ. ಆಗ ಅವನಿಗೆ ಅರಿವಾಗಿದ್ದು ಎಚ್ಚರಕ್ಕೂ ಮತ್ತು ಸಮಾಧಿಗೂ ಇರುವ ಸ್ಥಿತಿಯೆಂದರೆ ಗ್ರಹಿಕೆ ಮತ್ತು ಗ್ರಹಿಕೆಯಲ್ಲದ ಸ್ಥಿತಿ ಎನ್ನುವುದು. ಆದರೆ ಎಚ್ಚರಾದ ಮೇಲೆ ಮತ್ತೆ ಈ ಲೋಕದ ಅವಸ್ಥೆಗಳಲ್ಲೇ ಇರುತ್ತೇವೆ ಎನ್ನುವುದು ಅರಿತಾಗ ಸಮಾಧಿಯೆನ್ನುವುದು ಸ್ವಪ್ನ ಅಥವಾ ಸುಷುಪ್ತಿಯ ಅವಸ್ಥೆಗಳಲ್ಲಿರುವ ಸ್ಥಿತಿಯೇ ಹೊರತೂ ಬೇರೆನೂ ಅಲ್ಲವೆಂದು ಅರಿವಿಗೆ ಬಂತು. ಪರಿಪೂರ್ಣ ಜ್ಞಾನವೆನ್ನುವುದನ್ನು ಸಾಧಿಸಿದ ವ್ಯಕ್ತಿಗೆ ಮತ್ತೆ ಲೌಕಿಕ ಬಾಧಿಸಬಾರದು. ಹಾಗಾಗಿ ಯಾವುದು ಸ್ಥಾಯಿ ಸ್ವರೂಪವಲ್ಲವೋ ಅವೆಲ್ಲವೂ ಅವಿದ್ಯೆ ಎನ್ನುವ ತೀರ್ಮಾನಕ್ಕೆ ಬಂದವ ಗಯಾಕ್ಕೆ ಬಂದು ಅಲ್ಲಿನ ಸ್ಮಶಾನದಲ್ಲಿರುವ ಬೋಧಿವೃಕ್ಷದ ಕೆಳಗೆ ಧ್ಯಾನಮಾಡಲು ತೊಡಗಿದ. ಜ್ಞಾನವೆನ್ನುವದು ಪ್ರಾಪಂಚಿಕ ವಸ್ತುಗಳಿಂದ ವಿಮುಖನಾಗುವದಲ್ಲ, ನಮ್ಮ ಉಸಿರು, ಹಕ್ಕಿಯ ಹಾಡು, ಎಲೆ, ಸೂರ್ಯನ ಕಿರಣ ಇವೆಲ್ಲವೂ ಧ್ಯಾನಕ್ಕೆ ಸಾಧನವಾಗಬಹುದೆಂದು ಆತನಿಗೆ ಅನಿಸಿತು. ಒಂದು ಧೂಳಿನ ಕಣದಿಂದಲೇ ಸಮಗ್ರವಾಗಿ ಬ್ರಹ್ಮಾಂಡದ ಲಕ್ಷಣವನ್ನು ಅರಿಯಬಹುದೆನ್ನುವ ವಿಷಯ ಹೊಳೆಯಿತು. ಜ್ಞಾನೋದಯವೆನ್ನುವದು ವಾಸ್ತವ ಪ್ರಪಂಚದಲ್ಲಿದೆಯೇ ಹೊರತು ಕಾಣದ ಆತ್ಮ ಅಥವಾ ಬ್ರಹ್ಮದ ವಿಷಯದಲ್ಲಿ ಇಲ್ಲ. ಆತ್ಮ ಪ್ರತ್ಯೇಕವೆನ್ನುವ ಭಾವನೆಯನ್ನು ಮೀರಿ ಪ್ರಕೃತಿಯ ಪ್ರತೀ ವಸ್ತುವಿನಲ್ಲಿ ಸೌಂದರ್ಯವಿದೆಯೆನ್ನುವದನ್ನು ಗೌತಮನ ಅರಿತುಕೊಂಡ. ಪ್ರಪಂಚವೇ ಪರಸ್ಪರ ಅವಲಂಬಿತ ಮತ್ತು ಸ್ವಯಂ ಸ್ವಭಾವವುಳ್ಳ ಸತ್ಯವೆನ್ನುವ ಸೂತ್ರ ಆತನಿಗೆ ಅರಿವಾಯಿತು. ಜ್ಞಾನವೆನ್ನುವದು ಒಳಗಣ್ಣು ಎನ್ನುವ ಭ್ರಮೆಗಿಂತ ಹೊರಗಣ್ಣಿಗೆ ಕಾಣುವ ಪ್ರಪಂಚದ ಸಮಸ್ಥವಸ್ತುವಿನಲ್ಲಿ ಇದೆ ಎನ್ನುವದು ಸ್ಪಷ್ಟವಾಯಿತು.

buddha Purnima 2023

ಬುದ್ಧನ ಬೋಧನೆಗಳು ಮೊದಲನೆಯದಾಗಿ ಜೀವನವು ದುಃಖದಿಂದ ಕೂಡಿದೆ. ಜನನ, ಮರಣ, ರೋಗ, ವೃದ್ಧಾಪ್ಯ, ವಿರಹ, ಮನಸ್ಸು ಮತ್ತು ದೇಹಗಳ ವ್ಯವಸ್ಥೆಯೇ ದುಃಖಮಯ, ಎರಡನೆಯದಾಗಿ ಈ ದುಃಖಕ್ಕೆ ಕಾರಣವಿದೆ. ಮನುಷ್ಯ ತನ್ನ ಮೂಲರೂಪವನ್ನು ಅರಿಯದಿರುವದು, ಈ ಅಜ್ಞಾನಗಳಿಂದಾಗಿಯೇ ಆತ ದೇಹ-ಮನಸ್ಸುಗಳಿಗೆ ಅಂಟಿಕೊಳ್ಳುತ್ತಾನೆ. ಈ ಕಾರ್ಯಕಾರಣ ಸಂಬಂಧದಿಂದಾಗಿ ಕರ್ಮಚಕ್ರಗಳ ಮೂಲಕ ಪುನರ್ಜನದ ಭವಚಕ್ರಗಳಿಗೆ ಸಿಕ್ಕುಬೀಳುತ್ತಾನೆ, ಈ ಯಾತನೆಗಳಿಗೆ ಕಾರಣ ಆಯಾ ವ್ಯಕ್ತಿಯೇ ಹೊರತೂ ವಿಧಿ, ಆಕಸ್ಮಿಕ ಇತ್ಯಾದಿಗಳೆಲ್ಲ ಸುಳ್ಳು. ಮೂರನೆಯದು ಈ ಭವಚಕ್ರಗಳಿಂದ ಬಿಡುಗಡೆ. ಬುದ್ಧ ಇದು ಅವಿದ್ಯೆ, ಅಜ್ಞಾನಾವಸ್ಥೆಯೆನುತ್ತಾನೆ. ಲೋಕದಲ್ಲಿನ ಎಲ್ಲಾ ಅವಸ್ಥೆಗಳಿಗೂ ಇದೇ ಕಾರಣ, ಇದೇ “ಪ್ರತ್ಯೀತ್ಯಸಮುತ್ಪಾದ” ಸಿದ್ಧಾಂತ. ನಾಲ್ಕನೆಯದೇ ಈ ಭವಚಕ್ರಗಳಿಂದ ಬಿಡುಗಡೆಯ ಮಾರ್ಗವೆಂದರೆ ಈ ದುಃಖದಿಂದ ಬಿಡುಗಡೆ. ಅದೇ ಅವಿಧ್ಯಾ ಜಿವನದಿಂದ ಬಿಡುಗಡೆ. ಇದನ್ನು ಸಾಧಿಸಲು ಅಷ್ಟಾಂಗಿಕ ಮಾರ್ಗಗಳಾದ ಸಮ್ಯಕ್ ದೃಷ್ಟಿ, ಸಮ್ಯಕ್ ಸಂಕಲ್ಪ, ಸಮ್ಯಕ್ ವಾಕ್ಕು, ಸಮ್ಯಕ್ ಕ್ರಿಯಾ ಸಮ್ಯಕ್ ಆಜೀವ, ಸಮ್ಯಕ್ ವ್ಯಾಯಾಮ, ಸಮ್ಯಕ್ ಸ್ಮೃತಿ ಮತ್ತು ಸಮ್ಯಕ ಸಮಾಧಿಯ ಮೂಲಕ ಸಾಧಿಸಬಹುದು. ಈ ಅಷ್ಟಾಂಗ ಮಾರ್ಗವೆಂದರೆ ನೈತಿಕತೆ, ಸಾಧನೆ, ಸಾಕ್ಷಾತ್ಕಾರ, ಸ್ವಾರ್ಥವನ್ನು ತ್ಯಜಿಸುವದು, ಬೂತದಯೆಗಳು. ಬುದ್ದ ಇದನ್ನು ಸ್ವಯಂ ತನ್ನ ಕೊನೆಯಕ್ಷಣದವರೆಗೂತಾನೇ ಆಚರಿಸಿದ್ದನು. ಕುಂಡ ಕಮ್ಮಾರಪುತ್ತ ನೀಡಿದ ವಿಷಯುಕ್ತ ಆಹಾರದಿಂದ ಸಾಯುವ ಸಂದರ್ಭದಲ್ಲಿಯೂ ಅವನನ್ನು ಕ್ಷಮಿಸಿದನು. ಪ್ರಪಂಚದಲ್ಲಿ ಕಾಣುವ ವಸ್ತುಗಳನ್ನು ಅವು ಇರುವಂತೆಯೇ ತಿಳಿದವ ಬುದ್ಧ. ಹಾಗಂತ ಇದು ಚಾರ್ವಾಕ ಮತಕ್ಕೆ ಹತ್ತಿರವಾದಂತೆ ಕಂಡರೂ ಆತ ನಾಸ್ತಿಕವಾದಿಯಲ್ಲ. ಬುದ್ಧ ಅಸ್ತಿತ್ವವನ್ನು ಒಪ್ಪಿಕೊಳ್ಳುತ್ತಾನೆ, ಅದು ಅದ್ವೈತವನ್ನು ಹೋಲುತ್ತದೆ. ಬೌದ್ಧರು ಆತ್ಮದ ಅಸ್ತಿತ್ವವನ್ನು ಒಪ್ಪುವದಿಲ್ಲ ಎನ್ನುವ ಸಾಮಾನ್ಯ ನಂಬಿಕೆ. ಆದರೆ ಇದಕ್ಕೆ ಆಧಾರವಿಲ್ಲ.

ಬೌದ್ಧ ದರ್ಶನಗಳಲ್ಲಿ ಬುದ್ಧತ್ತ್ವಕ್ಕೆ ಏರುವುದು ಅಂದರೆ ಅದು ತುರೀಯಾವಸ್ಥೆ. ಸಾಮಾನ್ಯ ವ್ಯಕ್ತಿ ಬುದ್ಧನಾಗಲಿಕ್ಕೆ ಅನೇಕ ಜನ್ಮಗಳನ್ನು ಪಡೆಯಬೇಕಾಗುತ್ತದೆ. ಅದರಲ್ಲಿಯೂ ಕೊನೆಯ ಮೂರು ಹಂತಗಳಾದ ಅರಿಹಂತ, ಪಚ್ಛೇಕ ಬುದ್ಧತ್ವವನ್ನು ಸಾಧಿಸಿದ ಮೇಲೆ ಗೌತಮ ಬುದ್ಧ ತಲುಪಿದ ಸ್ಥಿತಿ ಸಮ ಸಂಬುದ್ಧತ್ವದ ಸ್ಥಿತಿ. ಜಾತಕದ ಕತೆಗಳಲ್ಲಿ ಬುದ್ಧನ ಹಿಂದಿನ ಜನ್ಮದ ವಿವರಗಳು ಕಥೆಯ ರೂಪದಲ್ಲಿ ಬರುವುದನ್ನು ಗಮನಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ಆತ್ಮದ ಅಸ್ತಿತ್ವವನ್ನು ಬುದ್ಧ ಒಪ್ಪುವದೂ ಇಲ್ಲ ಅಥವಾ ನಿರಾಕರಿಸುವುದೂ ಇಲ್ಲ. ವಚ್ಚಗೋತ್ತ ಎನ್ನುವ ಬ್ರಾಹ್ಮಣ ಇದೇ ವಿಷಯದಲ್ಲಿ ಬುದ್ಧನ ಹತ್ತಿರ ಕೇಳುವ ಪ್ರಶ್ನೆ ತೆವಿಜ್ಜ ಸುತ್ತದಲ್ಲಿ ಬರುತ್ತದೆ. ಆತ ಬುದ್ಧನಲ್ಲಿ ಕೇಳುವ ಆತ್ಮವಿದೆಯೇ ಅಥವಾ ಇಲ್ಲವೇ ಎನ್ನುವ ಪ್ರಶ್ನೆಗೆ ಆತ ಮೌನವಾಗಿಬಿಡುತ್ತಾನೆ. ಆತನ ಪ್ರಕಾರ ಆತ್ಮವಿದೆ ಎಂದು ಸಾರಿದ್ದರೆ ಅನಿತ್ಯಕ್ಕೇ ನಿತ್ಯವೆಂದು ಆತನ ಶಿಷ್ಯರು ಪರಿಗಣಿಸಬಹುದು, ಇಲ್ಲವೆಂದರೆ ಉಚ್ಛೇದವಾದ (ವಿನಾಶವಾದ)ವನ್ನು ಉಪದೇಶಿಸುವ ದಾರ್ಶನಿಕರು ಹೇಳಿದ್ದು ಸತ್ಯವೆಂದು ಅವರು ನಂಬುತ್ತಾರೆ.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ರಾಮಪಟ್ಟಾಭಿಷೇಕ ಭಂಗ

ಇದರ ಅರ್ಥವಿಷ್ಟೇ ಬುದ್ಧ ಅಸ್ತಿತ್ವವಾದಿಯಾಗಿದ್ದ. ತನ್ನ ಶಿಷ್ಯರಿಗೆ “ನಿಮಗೆ ನೀವೇ ಬೆಳಕಾಗಿರಿ” ಎಂದು ಉಪದೇಶವನ್ನು ಮಾಡಿದ್ದ. ಬದುಕಿನಲ್ಲಿ ಕಾಣುವ ವಸ್ತುಗಳಲ್ಲಿಯೇ ಆನಂದವಿದೆ ಎನ್ನುವದರ ಮೂಲಕವೇ ಆತನಿಗೆ ಜ್ಞಾನೋದಯವಾದದ್ದರಿಂದ ಆತ “ತಿವಿಜ್ಜಸುತ್ತ”ದಲ್ಲಿ ಹೇಳುವಂತೆ. “ಹಳೆಯ ಓಲೆಗರಿಯಲ್ಲಿ ಹೇಳಿದೆ ಎನ್ನುವ ಮಾತ್ರಕ್ಕೆ ನಂಬಬಾರದು. ಎಲ್ಲವನ್ನೂ ವಿಚಾರಣೆ ಮಾಡಿ ವಿಶ್ಲೇಷಿಸಿ ಅದರಿಂದ ಎಲ್ಲರಿಗೂ ಒಳ್ಳೆಯದಾಗುತ್ತದೆ ಎಂದಾದರೆ ಅದರಂತೆ ನೀವೂ ಬಾಳಿ” ಎಂದಿದ್ದಾನೆ. ಬುದ್ಧನ ಪ್ರಕಾರ ನಿರ್ವಾಣವೆಂದರೆ ಅದು ‘ಸಂವೇದನೆ ಮತ್ತು ಭಾವನೆಗಳು ನಿಂತುಹೋಗುವ ಕ್ರಿಯೆ’. ಇದು ಜ್ಞಾತ್ರಾಜ್ಞೇಯದ ಸಂಬಂಧದ ಆಭಾವ. ಈ ನಿರ್ವಾಣಕ್ರಿಯೆಯನ್ನು ಮಾಂಡುಕ್ಯೋಪನಿಷತ್ತಿನ ತುರೀಯಾವಸ್ಥೆಗೆ ಹೋಲಿಸಬಹುದು. (ನಾಂತಃಪ್ರಜ್ಞಂ ನ ಬಹಿಃಪ್ರಜ್ಞಂ..ಮಾಂಡೂಕ್ಯ-7) ಇವೆರಡರಲ್ಲೂ ಭಾವನಾತ್ಮಕವಾದ ವಿಷಯಗಳಿಲ್ಲ. ಅವು ವಿಷಯ, ವಿಷಯಿ ಸಂಬಂಧ, ದೇಶ ಕಾಲ ನಿಮಿತ್ತ ಇವುಗಳಿಗೆ ಅತೀತವಾಗಿದೆ. ಇವೆರಡರಲ್ಲೂ ಚೇತನಾವಿಷಯಗಳಿಲ್ಲ; ಚೈತನ್ಯಸ್ವರೂಪವಿದೆ. ಪಾಲಿ ಭಾಷೆಯಲ್ಲಿರುವ ತೇರವಾದ ಬೌದ್ಧಗ್ರಂಥ ‘ಉದಾನ”ದಲ್ಲಿ “ಅಜವೂ ಅನಾದಿಯೂ ಅಕೃತವೂ ಅಸಂಯುಕ್ತವೂ ಆದುದೊಂದಿದೆ. ಎಲೈ ಭಿಕ್ಕು, ಅದಿಲ್ಲವಾದರೆ ಹುಟ್ಟುಳ್ಳದ್ದೂ, ಸಾದಿಯೂ ಕೃತವೂ ಸಂಯುಕ್ತವೂ ಆದ ಜಗತ್ತಿನಿಂದ ಮುಕ್ತಿಯೇ ಇರುವದಿಲ್ಲ” (ಉದಾನ 8-3) ಎಂದಿದ್ದಾನೆ. ಆತ ನಿರ್ವಿಕಾರವೂ ಶಾಶ್ವತವೂ ಆದ ಶಾಶ್ವತ ಸತ್ಯವನ್ನು ಒಪ್ಪುತ್ತಾನೆಂಬುದು ಇದರಿಂದ ಸ್ಪಷ್ಟ. ಇದಲ್ಲದಿದ್ದರೆ ಅವನ ನಿರ್ವಾಣವಾದವೇ ಬಿದ್ದುಹೋಗುತ್ತದೆ. ಆತ ಹೇಳಿದ್ದು “ಆತ್ಮ ಮತ್ತು ಬ್ರಹ್ಮ ವಿಷಯಕವಾದ ವಿಚಾರಗಳಿಂದ ಯಾವ ಪ್ರಯೋಜನವೂ ಇಲ್ಲ, ಒಳ್ಳೆಯದನ್ನು ಮಾಡಿರಿ; ಒಳ್ಳೆಯವರಾಗಿರಿ, ಇದೇ ನಿಮ್ಮನ್ನು ನಿರ್ವಾಣಕ್ಕೆ ಕೊಂಡೊಯ್ಯುತ್ತದೆ”. ಬುದ್ಧನೇ ನೇರವಾಗಿ ಬೋಧಿಸಿದ ತತ್ತ್ವಗಳನ್ನು ಗಮನಿಸಿದಾಗ ಆತನ ತತ್ತ್ವಗಳು ಭಾರತೀಯ ದರ್ಶನ ಶಾಸ್ತ್ರದ ಮುನ್ನುಡಿಯಾಗಿವೆ ಎನ್ನಬಹುದು.

ಇದನ್ನೂ ಓದಿ: ಧವಳ ಧಾರಿಣಿ ಅಂಕಣ: ಆತುರಗೆಟ್ಟು ಸ್ತಿಮಿತ ಕಳೆದುಕೊಂಡವನ ವಿಲಾಪ

Continue Reading

ಅಂಕಣ

ರಾಜಮಾರ್ಗ ಅಂಕಣ: ಅಳಿಸಲಾಗದ ನೋವು ಬಿಟ್ಟು ಹೋದ ಮಂಗಳೂರು ವಿಮಾನ ದುರಂತ!

ರಾಜಮಾರ್ಗ ಅಂಕಣ: ರನ್ ವೇಯಲ್ಲಿ ಓಡಲು ತೊಡಗಿದ ವಿಮಾನ ನಿಯಂತ್ರಣಕ್ಕೆ ಬರಲಿಲ್ಲ. ರನ್ ವೇ ಪೂರ್ತಿ ಓಡಿದ ನಂತರವೂ ವೇಗ ಕಡಿಮೆ ಆಗಲಿಲ್ಲ. ಅಪಾಯದ ಗೆರೆ ದಾಟಿ ಓಡಿದ ವಿಮಾನ ಮುಂದೆ ಇರುವ ಕೆಂಜಾರು ಎಂಬ ಜಾಗದ ಕಂದಕದಲ್ಲಿ ಉರುಳಿ ಬಿದ್ದು ಎರಡು ಭಾಗವಾಯಿತು. ಕ್ಷಣ ಮಾತ್ರದಲ್ಲಿ ಇಂಜಿನ್ ಟ್ಯಾಂಕ್ ಬೆಂಕಿ ಹಿಡಿದು ವಿಮಾನ ಹೊತ್ತಿ ಉರಿಯಲು ಆರಂಭವಾಯಿತು.

VISTARANEWS.COM


on

rajamarga column mangalore flight crash 1
Koo
Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಮಂಗಳೂರಿನ ಬಜಪೆ ವಿಮಾನ ನಿಲ್ದಾಣದಲ್ಲಿ (Mangalore Airport) 14 ವರ್ಷಗಳ ಹಿಂದೆ ಇದೇ ದಿನ (2010 ಮೇ 22) ನಡೆದ ಆ ಒಂದು ದುರ್ಘಟನೆಯು (Mangalore flight crash) ದೇಶದಾದ್ಯಂತ ಉಂಟುಮಾಡಿದ ನೋವಿನ ಅಲೆಗಳನ್ನು ಈಗ ಕಲ್ಪನೆ ಮಾಡಲೂ ಭಯವಾಗುತ್ತದೆ! ದಕ್ಷಿಣ ಭಾರತದ ಅತೀ ದೊಡ್ಡ ವಿಮಾನ ದುರಂತವದು.

ಅಂದು ಮೇ 22, 2010 ಮಧ್ಯರಾತ್ರಿ…

ದುಬೈಯಿಂದ ಹೊರಟ ಭಾರತದ ವೈಭವದ ಬೋಯಿಂಗ್ 737-800 ವಿಮಾನದಲ್ಲಿ 166 ಪ್ರಯಾಣಿಕರಿದ್ದರು. ಅದರಲ್ಲಿ ಎಲ್ಲ ಪ್ರಾಯದವರೂ ಇದ್ದರು. ಹೆಚ್ಚಿನವರು ಕರ್ನಾಟಕ ಮತ್ತು ಕೇರಳದವರು. ನೂರಾರು ಕನಸುಗಳನ್ನು ಹೊತ್ತು ತಮ್ಮ ತಾಯ್ನೆಲಕ್ಕೆ ಹೊರಟವರು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಮುಂಜಾನೆ ಸೂರ್ಯೋದಯಕ್ಕೆ ಮೊದಲು ಅವರು ಮಂಗಳೂರು ತಲುಪಿ ತಮ್ಮ ತಮ್ಮ ಊರಿಗೆ ಟ್ಯಾಕ್ಸಿ ಏರಬೇಕಾಗಿತ್ತು. ಆದರೆ ವಿಧಿಯ ಆಟ ಬೇರೆಯೇ ಇತ್ತು.

ಟೇಬಲ್ ಟಾಪ್ ರನ್ ವೇ…

ಮುಂಜಾನೆ ಆರು ಘಂಟೆಯ ಹೊತ್ತಿಗೆ ಜನರು ಕಣ್ಣುಜ್ಜಿ ಹೊರಗೆ ನೋಡಲು ತೊಡಗಿದಾಗ ವಿಮಾನ ಬಜಪೆ ವಿಮಾನ ನಿಲ್ದಾಣದ ರನ್ ವೇ ಸ್ಪರ್ಶ ಮಾಡಿ ಓಡತೊಡಗಿತ್ತು. ಅದು ಟೇಬಲ್ ಟಾಪ್ ರನ್ ವೇ. ಅಂದರೆ ಎತ್ತರದ ಪರ್ವತದ ಮೇಲೆ ಸಮತಟ್ಟು ಮಾಡಿ ನಿರ್ಮಿಸಿದ್ದ ರನ್ ವೇ. ವಿಮಾನದ ಕ್ಯಾಪ್ಟನ್ ಗ್ಲುಸಿಕಾ (Glusica) ಮತ್ತು ಫಸ್ಟ್ ಆಫೀಸರ್ ಹರಿಂದರ್ ಸಿಂಘ್ ಅಹ್ಲುವಾಲಿಯಾ ಇಬ್ಬರೂ ಅನುಭವಿಗಳು. ಅದರಲ್ಲಿ ಕ್ಯಾಪ್ಟನ್ ಗ್ಲುಸಿಕಾ ಅದೇ ರನ್ ವೇ ಮೇಲೆ ಹಿಂದೆ 16 ಬಾರಿ ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ದಾಖಲೆ ಹೊಂದಿದ್ದರು. 2448 ಮೀಟರ್ ಉದ್ದವಾದ ರನ್ ವೇಯಲ್ಲಿ ವಿಮಾನವನ್ನು ನಿಯಂತ್ರಣಕ್ಕೆ ತಂದು ನಿಲ್ಲಿಸುವುದು ಕಷ್ಟ ಆಗಿರಲಿಲ್ಲ. ವಾತಾವರಣವೂ ಪೂರಕವಾಗಿತ್ತು. ಬಜಪೇ ವಿಮಾನ ನಿಲ್ದಾಣದಿಂದ ಪೂರಕ ಸಂಕೇತಗಳು ದೊರೆಯುತ್ತಿದ್ದವು.

ಕಣ್ಣು ಮುಚ್ಚಿ ತೆರೆಯುವ ಒಳಗೆ..

ಈ ಬಾರಿ ರನ್ ವೇಯಲ್ಲಿ ಓಡಲು ತೊಡಗಿದ ವಿಮಾನ ನಿಯಂತ್ರಣಕ್ಕೆ ಬರಲಿಲ್ಲ. ರನ್ ವೇ ಪೂರ್ತಿ ಓಡಿದ ನಂತರವೂ ವೇಗ ಕಡಿಮೆ ಆಗಲಿಲ್ಲ. ಅಪಾಯದ ಗೆರೆ ದಾಟಿ ಓಡಿದ ವಿಮಾನ ಮುಂದೆ ಇರುವ ಕೆಂಜಾರು ಎಂಬ ಜಾಗದ ಕಂದಕದಲ್ಲಿ ಉರುಳಿ ಬಿದ್ದು ಎರಡು ಭಾಗವಾಯಿತು. ಕ್ಷಣ ಮಾತ್ರದಲ್ಲಿ ಇಂಜಿನ್ ಟ್ಯಾಂಕ್ ಬೆಂಕಿ ಹಿಡಿದು ವಿಮಾನ ಹೊತ್ತಿ ಉರಿಯಲು ಆರಂಭವಾಯಿತು. ಆಕಾಶದ ಎತ್ತರಕ್ಕೆ ಬೆಂಕಿ ಮತ್ತು ಹೊಗೆ ಏರುತ್ತಾ ಹೋದಂತೆ ಒಳಗಿದ್ದ ಪ್ರಯಾಣಿಕರಿಗೆ ಏನಾಗ್ತಾ ಇದೆ ಎಂದು ಅರಿವಾಗುವ ಮೊದಲೇ ಇಡೀ ವಿಮಾನ ಸುಟ್ಟು ಹೋಯಿತು. ಸಣ್ಣಗೆ ಮಳೆ ಸುರಿಯುತ್ತಿದ್ದರೂ ವಿಮಾನದ ಬೆಂಕಿ ಆರಲಿಲ್ಲ.

ರೆಸ್ಕ್ಯೂ ಆಪರೇಶನ್ ಆರಂಭ.

ಸುದ್ದಿ ಕಾಳ್ಗಿಚ್ಚಿನಂತೆ ಹರಡಿ ಮಂಗಳೂರಿನಿಂದ ಅಗ್ನಿ ಶಾಮಕ ವಾಹನಗಳು, ಆಂಬ್ಯುಲೆನ್ಸಗಳು ಸ್ಥಳಕ್ಕೆ ಧಾವಿಸಿ ಬಂದವು. ದೊಡ್ಡ ಸಂಖ್ಯೆಯಲ್ಲಿ ಸಾರ್ವಜನಿಕರು ಜೀವದ ಹಂಗು ತೊರೆದು ಸ್ಥಳಕ್ಕೆ ಧಾವಿಸಿದರು. ಬೆಂಕಿ ಆರಿಸುವ ಪ್ರಯತ್ನವು ಹಲವು ಘಂಟೆ ನಡೆಯಿತು. ವಿಮಾನದಿಂದ ಸುಟ್ಟು ಕರಕಲಾದ ಶವಗಳನ್ನು ಹೊರಗೆ ತೆಗೆಯುವುದೇ ಕಷ್ಟ ಆಯಿತು. ತಮ್ಮವರನ್ನು ಕಳೆದುಕೊಂಡವರ ಆಕ್ರಂದನ ಮುಗಿಲು ಮುಟ್ಟಿತ್ತು.

ಅಂದು ಸುಟ್ಟು ಹೋದವರ ಸಂಖ್ಯೆಯೇ 158!

ವಿಮಾನದಲ್ಲಿ ಇದ್ದ ಪ್ರಯಾಣಿಕರ ಸಂಖ್ಯೆ 166. ಆರು ಜನ ಕ್ರೂ (Crew) ಸದಸ್ಯರು ಬೇರೆ ಇದ್ದರು. ಅಂದು ಬದುಕಿ ಉಳಿದವರ ಸಂಖ್ಯೆ 8 ಮಾತ್ರ. ತೀವ್ರವಾಗಿ ಗಾಯಗೊಂಡವರ ಸಂಖ್ಯೆ 8. ಅಂದರೆ 158 ಜನರು ಸುಟ್ಟು ಕರಕಲಾಗಿ ಹೋಗಿದ್ದರು! ಕ್ರೂ (Crew) ಸದಸ್ಯರೂ ಬೂದಿ ಆಗಿದ್ದರು. ಶವಗಳನ್ನು ಗುರುತು ಹಿಡಿಯುವುದು ತುಂಬಾನೇ ಕಷ್ಟ ಆಯಿತು. ಒಂದೊಂದು ಶವವನ್ನು ಎತ್ತಿ ಆಂಬುಲೆನ್ಸಗೆ ಸಾಗಿಸುವಾಗ ಜನರ ಆಕ್ರಂದನ ಹೃದಯ ವಿದ್ರಾವಕ ಆಗಿತ್ತು.

ಆಸ್ಪತ್ರೆಗೆ ಧಾವಿಸಿ ತಮ್ಮವರನ್ನು ಶವಗಳ ರಾಶಿಯಲ್ಲಿ ಹುಡುಕುತ್ತಾ ಅಳುವವರ ದೃಶ್ಯವು ನಿಜಕ್ಕೂ ಕರುಣಾಜನಕ ಆಗಿತ್ತು. ಅದರಲ್ಲಿಯೂ 12 ಶವಗಳ ಗುರುತು ಹಿಡಿಯುವುದೇ ಕಷ್ಟವಾಗಿ ಅವುಗಳನ್ನು ಮುಂದೆ ಕೂಳೂರಿನ ಫಲ್ಗುಣಿ ನದಿ ತೀರದಲ್ಲಿ ಸಾಮೂಹಿಕವಾಗಿ ಸಂಸ್ಕಾರ ಮಾಡಲಾಯಿತು.

ಇದನ್ನೂ ಓದಿ: ರಾಜಮಾರ್ಗ ಅಂಕಣ: ಭಾರತದಲ್ಲಿ ಕಡ್ಡಾಯ ಮತದಾನ ಕಾನೂನು ಯಾಕೆ ಸಾಧ್ಯವಿಲ್ಲ?

ಪೈಲಟ್ ನಿದ್ದೆ ರೆಕಾರ್ಡ್ ಆಗಿತ್ತು!

ಇಂತಹ ಅಪಘಾತಗಳು ನಡೆದಾಗ ಗಂಭೀರವಾದ ವಿಚಾರಣೆಗಳು ನಡೆಯುತ್ತವೆ. ಕಾಕ್‌ಪಿಟ್ ರೆಕಾರ್ಡರ್‌ನಲ್ಲಿ ಪೈಲಟ್ ಕ್ಯಾಪ್ಟನ್ ಗ್ಲುಸಿಕಾ ಅವರ ನಿದ್ದೆ ರೆಕಾರ್ಡ್ ಆಗಿತ್ತು. ಅಂದರೆ 55 ವರ್ಷ ಪ್ರಾಯದ ಆತನು ಸುಮಾರು ಹೊತ್ತು ವಿಮಾನದ ಹಾರಾಟದ ಅವಧಿಯಲ್ಲಿ ಮಲಗಿದ್ದು ನಿಚ್ಚಳವಾಯಿತು! ಇದೇ ಅಪಘಾತಕ್ಕೆ ಕಾರಣ ಎಂದು ಧೃಡವಾಗಿತ್ತು.

ಮುಂದೆ ಏನಾಯಿತು?

ರಾಜ್ಯ ಮತ್ತು ಕೇಂದ್ರ ಸರಕಾರಗಳು ಮೃತರಾದವರಿಗೆ ಪರಿಹಾರ ಕೊಟ್ಟವು. ವಿಮಾನ ಯಾನ ಸಂಸ್ಥೆ ಮತ್ತು ಖಾಸಗಿ ವಿಮಾ ಕಂಪೆನಿಗಳು ಪರಿಹಾರಗಳನ್ನು ನೀಡಿದವು. ದಕ್ಷಿಣ ಕನ್ನಡ ಜಿಲ್ಲಾಡಳಿತ ಈ ದುರಂತದ ಸ್ಮಾರಕವನ್ನು ನಿರ್ಮಾಣ ಮಾಡಿ ಮೃತರಾದವರಿಗೆ ಶ್ರದ್ಧಾಂಜಲಿ ಕೊಟ್ಟಿತ್ತು. ಆದರೆ ತಮ್ಮವರನ್ನು ಕಳೆದುಕೊಂಡು ಇಂದಿಗೂ ರೋಧಿಸುತ್ತಿರುವ, ನೋವು ಪಡುತ್ತಿರುವ ಮಂದಿಗೆ ಈ ದುರಂತವು ಮರೆತು ಹೋಗುವುದು ಹೇಗೆ? ಅಂದು ಮಡಿದ ನೂರಾರು ಮಂದಿಗೆ ಒಂದು ಹನಿ ಕಣ್ಣೀರು ಸುರಿಸಿ ಶ್ರದ್ಧಾಂಜಲಿ ಕೊಡೋಣ ಅಲ್ಲವೇ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ಅವರ ನೆನಪೇ ನ್ಯಾಚುರಲ್‌ ಐಸ್‌ಕ್ರೀಂನ ತಾಜಾ ಹಣ್ಣಿನ ರುಚಿ, ಪರಿಮಳದಂತೆ!

Continue Reading
Advertisement
IND vs BAN
ಕ್ರೀಡೆ18 seconds ago

IND vs BAN: ಇಂದು ಬಾಂಗ್ಲಾ ವಿರುದ್ಧ ಅಭ್ಯಾಸ ಪಂದ್ಯ; ಕೊಹ್ಲಿ ಆಡುವುದು ಅನುಮಾನ

Exit Poll
Lok Sabha Election 202412 mins ago

Exit Poll: ಇಂದು ಸಂಜೆ 6.30ಕ್ಕೆ ಎಕ್ಸಿಟ್ ಪೋಲ್ ರಿಸಲ್ಟ್; ಮತಗಟ್ಟೆ ಸಮೀಕ್ಷೆ ಹೇಗೆ ನಡೆಸುತ್ತಾರೆ?

Kannada Cinema In OTT bad manners 02 Kannada Movie
ಸ್ಯಾಂಡಲ್ ವುಡ್17 mins ago

Kannada Cinema In OTT: ಒಟಿಟಿಗೆ ಲಗ್ಗೆ ಇಟ್ಟ ʼಬ್ಯಾಡ್‌ ಮ್ಯಾನರ್ಸ್‌ʼ, ‘O2’; ಸ್ಟ್ರೀಮಿಂಗ್ ಎಲ್ಲಿ?

hum do humare barah
ಕರ್ನಾಟಕ19 mins ago

Hum Do Humare Barah: ʼಹಮ್ ದೋ, ಹಮಾರೇ ಬಾರಹ್ʼ ಚಿತ್ರ ಬಿಡುಗಡೆಗೆ ಮುಸ್ಲಿಮರ ವಿರೋಧ: “ಪೆನ್‌ಡ್ರೈವ್‌ ಕೇಸ್‌ ಮೇಲೆ ಮಾಡಿ” ಎಂದು ಗರಂ!

Neeraj Chopra
ಕ್ರೀಡೆ35 mins ago

Neeraj Chopra: 2 ತಿಂಗಳು ವಿದೇಶದಲ್ಲಿ ಕಠಿಣ ತರಬೇತಿ ಪಡೆಯಲಿದ್ದಾರೆ ನೀರಜ್ ಚೋಪ್ರಾ

Neha Gowda is pregnant the actress shared the good news
ಕಿರುತೆರೆ44 mins ago

Neha Gowda: ಮೊದಲ ಮಗುವಿನ ನಿರೀಕ್ಷೆಯಲ್ಲಿ ಗೊಂಬೆ-ಚಂದನ್‌ ದಂಪತಿ

Vastu Tips
ಧಾರ್ಮಿಕ44 mins ago

Vastu Tips: ಮನೆಯ ಯಾವ ಕೋಣೆಗೆ ಯಾವ ಬಣ್ಣ ಇದ್ದರೆ ನೆಮ್ಮದಿ ಸಿಗುತ್ತದೆ? ವಾಸ್ತು ಸಲಹೆ ಹೀಗಿದೆ

prajwal revanna case mobile
ಪ್ರಮುಖ ಸುದ್ದಿ45 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಮೊಬೈಲ್‌ ಮಂಗಮಾಯ! ಏನಂತಾರೆ ಪ್ರಜ್ವಲ್ಲು?

LPG Price Cut
ವಾಣಿಜ್ಯ53 mins ago

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ ಇಳಿಕೆ

Paris Olympics 2024
ಕ್ರೀಡೆ59 mins ago

Paris Olympics 2024: ಒಲಿಂಪಿಕ್ಸ್‌ಗೆ‌ ಅರ್ಹತೆ ಪಡೆದ ಬಾಕ್ಸರ್ ನಿಶಾಂತ್ ದೇವ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌