SCST ಮೀಸಲು| ಒಕ್ಕಲಿಗರಿಂದಲೂ ಮೀಸಲು ಹೆಚ್ಚಳ ಬೇಡಿಕೆ: 4%ನಿಂದ 12ಕ್ಕೆ ಏರಿಸಿ ಎಂದ ನಿರ್ಮಲಾನಂದನಾಥ ಶ್ರೀ - Vistara News

ಕರ್ನಾಟಕ

SCST ಮೀಸಲು| ಒಕ್ಕಲಿಗರಿಂದಲೂ ಮೀಸಲು ಹೆಚ್ಚಳ ಬೇಡಿಕೆ: 4%ನಿಂದ 12ಕ್ಕೆ ಏರಿಸಿ ಎಂದ ನಿರ್ಮಲಾನಂದನಾಥ ಶ್ರೀ

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳ ಪ್ರಮಾಣದ ಬೆನ್ನಿಗೇ ಇದೀಗ ಒಕ್ಕಲಿಗ ಸಮುದಾಯದಿಂದಲೂ ಇಂಥಹುದೇ ಬೇಡಿಕೆ ಕೇಳಿಬಂದಿದೆ. ಇದು ತೀವ್ರತೆಯನ್ನು ಪಡೆಯುವ ಲಕ್ಷಣ ಕಾಣಿಸಿದೆ.

VISTARANEWS.COM


on

Nirmalanandanatha sree
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲಾರ: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿಯನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದ ಬೆನ್ನಿಗೇ ಉಳಿದ ಸಮುದಾಯಗಳಿಂದ ಮೀಸಲು ಹೆಚ್ಚಳದ ಬೇಡಿಕೆ ಬರಲಿದೆ ಎಂಬ ಅಭಿಪ್ರಾಯ ನಿಜವಾಗಿದೆ. ರಾಜ್ಯದ ಪ್ರಬಲ ಸಮುದಾಯಗಳಲ್ಲಿ ಒಂದಾದ ಒಕ್ಕಲಿಗರ ಸಮುದಾಯ ತಮಗಿರುವ ಮೀಸಲು ಕೋಟಾವನ್ನು ಶೇ. ೪ರಿಂದ ಶೇ. ೧೨ಕ್ಕೆ ಏರಿಸಬೇಕು ಎಂಬ ಹಕ್ಕೊತ್ತಾಯ ಮಂಡಿಸಿದೆ.

ನಮಗೆ ಶೇ. ೪ ಮೀಸಲಾತಿ ಸಾಕಾಗುವುದಿಲ್ಲ. ಅದನ್ನು ಶೇ. ೧೨ಕ್ಕೆ ಏರಿಸಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿಗಳಾಗಿರುವ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಆಗ್ರಹಿಸಿದ್ದಾರೆ. ಕೋಲಾರದಲ್ಲಿ ಸೋಮವಾರ ವಕ್ಕಲಿಗರ ಸಮುದಾಯದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾಂಸ್ಕೃತಿಕ ಭವನ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಅವರು ಈ ಆಗ್ರಹ ಮಂಡಿಸಿದ್ದಾರೆ.

ರಾಜ್ಯ ಸರಕಾರ ಇತ್ತೀಚೆಗೆ ಪರಿಶಿಷ್ಟ ಜಾತಿಯ ಮೀಸಲನ್ನು ಶೇ. ೧೫ರಿಂದ ೧೭ಕ್ಕೆ ಮತ್ತು ಪರಿಶಿಷ್ಟ ಪಂಗಡದ ಮೀಸಲು ಪ್ರಮಾಣವನ್ನು ಶೇ. ೩ರಿಂದ ೭ಕ್ಕೆ ಏರಿಸಿದೆ. ಈ ಬಗ್ಗೆ ಸರ್ವ ಪಕ್ಷ ಸಭೆ ಮತ್ತು ಸಂಪುಟದಲ್ಲಿ ಅನುಮತಿ ದೊರೆತಿದ್ದು, ಸದ್ಯವೇ ಗಜೆಟ್‌ ಅಧಿಸೂಚನೆಯೂ ಆಗಲಿದೆ. ಈ ಮೀಸಲಾತಿ ಹೆಚ್ಚಳದಿಂದ ಒಟ್ಟಾರೆ ಮೀಸಲಾತಿ ಪ್ರಮಾಣ ಶೇ. ೫೦ರ ನಿಗದಿತ ಗಡಿಯನ್ನು ಮೀರಲಿದೆ. ಇದಕ್ಕೆ ಸಾಂವಿಧಾನಿಕವಾಗಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಹೇಳಿದ್ದಾರೆ.

ಈ ಎಲ್ಲ ವಿಚಾರಗಳನ್ನು ಮುಂದಿಟ್ಟುಕೊಂಡು ಸ್ವಾಮೀಜಿ ಅವರು ಮಾತನಾಡಿದ್ದಾರೆ.

ʻʻನಮಗೆ 4% ಮೀಸಲಾತಿ ಸಾಕುಗುವುದಿಲ್ಲ ಎಂಬ ಕೂಗು ಹಿಂದಿನಿಂದಲೂ ಇದೆ. ಆದರೆ, ಒಟ್ಟಾರೆ ಮೀಸಲಾತಿ ಶೇ. ೫೦ರ ಗಡಿಯನ್ನು ಮೀರಲಾಗದು ಎಂಬ ವಾದವಿತ್ತು. ಹಾಗಾಗಿ ಸಂವಿಧಾನಕ್ಕೆ ವ್ಯತಿರಿಕ್ತವಾಗಿ ಮಾತನಾಡುವುದು ಬೇಡ ಎಂದು ಸುಮ್ಮನಿದ್ದೆವು. ಈಗ ಸಂವಿಧಾನದ ಚೌಕಟ್ಟಿನಲ್ಲೇ ಮೀಸಲಾತಿ ಹೆಚ್ಚಿಸುವುದಾದರೆ ನಮಗೂ ಕೊಡಿ ಎಂದು ನಾವು ಮನವಿ ಮಾಡುತ್ತೇವೆ. ನಮಗೂ 8% ಮೀಸಲಾತಿ ಹೆಚ್ಚಿಸಿ ಎನ್ನುವುದು ನಮ್ಮ ಬೇಡಿಕೆʼʼ ಎಂದು ಅವರು ಹೇಳಿದರು.

ʻಮೀಸಲಾತಿ ಹೆಚ್ಚಳದ ಬೇಡಿಕೆ ಬಂದಾಗ ಕೆಲವರು ನಾವು ಕೊಡಲಿಕ್ಕೆ ಇರುವವರು ಕೇಳಲಿಕ್ಕೆ ಇರುವವರು ಅಲ್ಲ ಎಂಬ ಮಾತು ಹೇಳಿದ್ದರು. ಆದರೆ, ಈಗ ಕೇಳುತ್ತೇವೆ ಮತ್ತು ಹಕ್ಕಿಗಾಗಿ ಧ್ವನಿ ಎತ್ತುವುದು ಅವಶ್ಯವಾದರೆ ಅದನ್ನೂ ಮಾಡುತ್ತೇವೆ. ಕಾನೂನು ಸಮ್ಮತವಾಗಿ ನಮ್ಮ ಬೇಡಿಕೆ ಈಡೇರದಿದ್ದರೆ ಹಂತ ಹಂತವಾಗಿ ಹೋರಾಟದ ರೂಪುರೇಷೆ ಸಿದ್ಧಗೊಳಿಸುತ್ತೇವೆ. ಇದಿಷ್ಟು ವಿಚಾರಗಳನ್ನು ತುಂಬ ಸೂಕ್ಷ್ಮವಾಗಿ ಹೇಳಿದ್ದೇವೆʼʼ ಎಂದು ಸ್ವಾಮೀಜಿ ತಿಳಿಸಿದರು.

ಡಿ.ಕೆ ಶಿವಕುಮಾರ್‌ ಪ್ರತಿಕ್ರಿಯೆ
ಈ ನಡುವೆ ಸ್ವಾಮೀಜಿ ಅವರ ಮಾತುಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ʻʻಅದರ ಬಗ್ಗೆ ಮಾತನಾಡೋಣ. ಅವರರವರ ಧರ್ಮದ ವಿಚಾರದಲ್ಲಿ ಸಮಾಜಗಳು ಬೇಡಿಕೆ ಇರುವುದು ತಪ್ಪೇನು ಅಲ್ಲ. ಅದರ ಬಗ್ಗೆ ಚರ್ಚೆಯಾಗಲಿʼʼ ಎಂದರು.

ಕೆಲವು ದಿನಗಳ ಹಿಂದೆ ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷರಾದ ಎಚ್‌.ಸಿ. ಬಾಲಕೃಷ್ಣ ಅವರೂ ಒಕ್ಕಲಿಗರ ಮೀಸಲು ಹೆಚ್ಚಳದ ಬೇಡಿಕೆಯನ್ನು ಮುಂದಿಟ್ಟಿದ್ದರು. ಇದೀಗ ಶ್ರೀಗಳೇ ಮುಂಚೂಣಿಗೆ ಬಂದಿರುವುದರಿಂದ ಮುಂದೆ ಏನೇನಾಗಲಿದೆ ಎಂದು ಕಾದು ನೋಡಬೇಕಾಗಿದೆ.

ಇದನ್ನೂ ಓದಿ | SCST ಮೀಸಲು ಲಾಭ ಪಡೆಯಲು ಕಾಂಗ್ರೆಸ್‌-JDS ಪೈಪೋಟಿ: ತಮ್ಮದೇ ಕೊಡುಗೆ ಎನ್ನುತ್ತಿರುವ ನಾಯಕರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Tumkur Shoot out : ತುಮಕೂರಿನಲ್ಲಿ ಸದ್ದು ಮಾಡಿದ ಪೊಲೀಸ್ ತುಪಾಕಿ; ಸರಗಳ್ಳನ ಹೆಡೆಮುರಿ ಕಟ್ಟಿದ ಖಾಕಿ

Tumkur Shoot out : 15ಕ್ಕೂ ಹೆಚ್ಚು ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಬಂಧಿಸಲು ಹೋದಾಗ ಪೊಲೀಸರ ಮೇಲೆ ಬಿಯರ್‌ ಬಾಟೆಲ್‌ ಎಸೆದು ಹಲ್ಲೆ ಮಾಡಲು ಮುಂದಾಗಿದ್ದ. ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.

VISTARANEWS.COM


on

By

tumkur Shoot out
ಆರೋಪಿ ರಿಜ್ವಾನ್
Koo

ತುಮಕೂರು: ತುಮಕೂರಿನಲ್ಲಿ ಪೊಲೀಸ್ ತುಪಾಕಿ (Tumkur Shoot out) ಸದ್ದು ಮಾಡಿದೆ. ನಿರಂತರವಾಗಿ ಸರಗಳ್ಳತನ ಮಾಡುತ್ತಿದ್ದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆಂಧ್ರದ ಹಿಂದೂಪುರ ಮೂಲದ ರಿಜ್ವಾನ್ ಎಂಬಾತನಿಗೆ ಗುಂಡೇಟು ಬಿದ್ದಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಈಜೀಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ.

ಆರೋಪಿ ರಿಜ್ವಾನ್‌ ಒಟ್ಟು 15ಕ್ಕೂ ಹೆಚ್ಚು ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ. ಕಳೆದ ಒಂದು ವಾರದ ಹಿಂದೆ ಎ1 ಆರೋಪಿ ಚಿನ್ನಾ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಸೋಮವಾರ (ಜೂ.24) ಖಚಿತ ಮಾಹಿತಿ ಮೇರೆಗೆ ಎ2 ಆರೋಪಿ ರಿಜ್ವಾನ್‌ನನ್ನು ಬಂಧಿಸಲು ಪೊಲೀಸರು ತೆರಳಿದ್ದರು.

ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ, ಸಿಪಿಐ ಹನುನಂತರಾಯಪ್ಪ, ಪಿಎಸ್‌ಐ ಶ್ರೀನಿವಾಸ್, ದಾದಪೀರ್, ಹಾಗೂ ಪೊಲೀಸ್ ಸಿಬ್ಬಂದಿ ರಮೇಶ್ ತಂಡ ತೆರಳಿತ್ತು. ಹೊಸಪೇಟೆಯಿಂದ ಪೊಲೀಸ್ ಜೀಪ್‌ನಲ್ಲಿ ಮಧುಗಿರಿಗೆ ಕರೆತರುತ್ತಿದ್ದಾಗ, ಬಹಿರ್ದೆಸೆಗೆ ಹೋಗುವುದಾಗಿ ಈಜಿಹಳ್ಳಿ ಕ್ರಾಸ್ ಬಳಿ ಇಳಿದಿದ್ದ. ಈ ವೇಳೆ ಪೊಲೀಸ್ ಪೇದೆ ರಮೇಶ್ ಮೇಲೆ ರಿಹ್ವಾನ್‌ ಬಿಯರ್ ಬಾಟಲ್‌ ಎಸೆದು ಹಲ್ಲೆ ನಡೆಸಿ, ಪರಾರಿ ಆಗಲು ಯತ್ನಿಸಿದ್ದ. ಪೊಲೀಸರು ಶರಣಾಗುವಂತೆ ಮೂರು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ನಂತರ ಪೊಲೀಸರ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿ ಕರೆ ತಂದಿದ್ದಾರೆ.

tumkur Shoot out
ಗಾಯಾಳು ಪೊಲೀಸ್‌ ಪೇದೆ ರಮೇಶ್‌

ಇದನ್ನೂ ಓದಿ: Contaminated Water : ಬೆಳಗಾವಿ, ಕೋಲಾರದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವು

ಬಿಯರ್‌ ಬಾಟೆಲ್‌ನಿಂದ ಹಲ್ಲೆಗೊಳಗಾದ ಪೊಲೀಸ್ ಸಿಬ್ಬಂದಿ ರಮೇಶ್‌ಗೆ ಮಧುಗಿರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ರಿಜ್ವಾನ್‌ಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇನ್ನೂ ರಿಜ್ವಾನ್‌ ಮೇಲೆ ಮಧುಗಿರಿ 3, ಮಿಡಗೇಶಿ 4, ಬಡವನಹಳ್ಳಿ 2, ಕೊರಟಗೆರೆ 1, ಕೊಡಿಗೇನಹಳ್ಳಿ 2 ಹಾಗೂ ಮಡಕಶಿರಾ 1, ಪಟ್ಟನಾಯಕನಹಳ್ಳಿ 2, ಗೌರಿಬಿದನೂರು 1 ಸೇರಿದಂತೆ ಹಲವು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ದೂರು ದಾಖಲಾಗಿವೆ. ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.

ಕೊಡಗಿನಲ್ಲಿ ಮತ್ತೆ ಮಾರ್ಧನಿದ ಗುಂಡಿನ ಸದ್ದು

ಕೊಡಗಿನ ಕುಶಾಲನಗರಲ್ಲಿ ತಡರಾತ್ರಿ 12 ಗಂಟೆಗೆ ಗುಂಡಿನ ಶಬ್ಧ ಕೇಳಿ ಬಂದಿದೆ. ಅನುದೀಪ್ ( ಡುಮ್ಮಿ) ಮತ್ತು ಶಶಿಕುಮಾರ್ ಗೌಡ (ಎಂಎಲ್ಎ ಶಶಿ) ಇವರಿಬ್ಬರು ಸ್ನೇಹಿತರಾಗಿದ್ದಾರೆ. ತಡರಾತ್ರಿ ಇವರಿಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಮಾತಿಗೆ ಮಾತು ಬೆಳೆದು ಈ ವೇಳೆ ಅನುದೀಪ್‌ ಗಾಳಿಯಲ್ಲಿ ಗುಂಡು ಹಾರಿಸಿದ್ದ. ಅದೃಷ್ಟವಶಾತ್ ಶಶಿ ಕಾಲಿಗೆ ಗುಂಡು ತಗುಲಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕುಶಾಲನಗರದ ಚೌಡೇಶ್ವರಿ ಬಡಾವಣೆ ಗುಮ್ಮನಕೊಲ್ಲಿಯಲ್ಲಿ ಘಟನೆ ನಡೆದಿದೆ. ಕುಶಾಲನಗರ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

LKG UKG In Govt Schools: ಅಂಗನವಾಡಿ ನೌಕರರ ಧರಣಿ; ಬೇಡಿಕೆಗಳನ್ನು ಸಿಎಂ ಗಮನಕ್ಕೆ ತಂದ ಲಕ್ಷ್ಮಿ ಹೆಬ್ಬಾಳ್ಕರ್‌

LKG UKG In Govt Schools: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಪ್ರತಿಭಟನೆ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ‌ಜತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ.

VISTARANEWS.COM


on

LKG UKG In Govt Schools
Koo

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ (LKG UKG In Govt Schools) ಪ್ರಾರಂಭ ವಿರೋಧಿಸಿ, ಗೌರವ ಧನ ಹೆಚ್ಚಳ ಹಾಗೂ ಗುಣಮಟ್ಟದ ಆಹಾರ ಪೂರೈಕೆ ಸೇರಿ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್‌ನಿಂದ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಸಲಾಗುತ್ತಿದೆ. ಹೀಗಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ‌ಜತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಅಂಗನವಾಡಿ ನೌಕರರ ಬೇಡಿಕೆಗಳ ಬಗ್ಗೆ ಸಿಎಂಗೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಈ ವೇಳೆ ಬೇಡಿಕೆಗಳ ಪೈಕಿ ಕೆಲವೊಂದನ್ನು ಪರಿಶೀಲಿಸಿ ಪರಿಗಣಿಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೇಂದ್ರ ಶಿಕ್ಷಣ ಸಚಿವಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ ಅನುಮೋದನೆಗೊಂಡಂತೆ ರಾಜ್ಯದ ಆಯ್ದ 578 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (govt pre-schools) ಪ್ರಾರಂಭಿಸಲು ರಾಜ್ಯ ಸರ್ಕಾರ ಇತ್ತೀಚೆಗೆ ಅನುಮೋದನೆ ನೀಡಿತ್ತು. ಆದರೆ, ಸರ್ಕಾರದ ಈ ನಿರ್ಧಾರದ ಹಿಂದೆ, ಅಂಗನವಾಡಿಗಳನ್ನು ಮುಚ್ಚುವ ಹುನ್ನಾರವಿದೆ. ಎಲ್‌ಕೆಜಿ, ಯುಕೆಜಿ ಆರಂಭಿಸಿದರೆ ಅಂಗನವಾಡಿಗಳಲ್ಲೇ ಆರಂಭಿಸಬೇಕು. ಇಲ್ಲದಿದ್ದರೆ ಈ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂಬುವುದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಒತ್ತಾಯವಾಗಿದೆ.

ತಜ್ಞರ ಕಮಿಟಿ ರಚನೆ ಮಾಡಲು ಚರ್ಚೆ: ಲಕ್ಷ್ಮಿ ಹೆಬ್ಬಾಳ್ಕರ್‌

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಎಲ್‌ಕೆಜಿ, ಯುಕೆಜಿ ಪ್ರಾರಂಭಕ್ಕೆ ಸರ್ಕಾರದಿಂದ ಚಿಂತನೆ ಮಾಡಲಾಗಿದೆ. ಆದರೆ, ಈ ನಿರ್ಧಾರ ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ಮಾಡುತ್ತಿದ್ದಾರೆ. ಗುಣಮಟ್ಟದ ಶಿಕ್ಷಣ ನೀಡುವ ಕಳಕಳಿ ಶಿಕ್ಷಣ ಇಲಾಖೆಗೆ ಇದೆ. ಆದರೆ ಅಂಗನವಾಡಿಯವರು ವಿರುದ್ಧವಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ | Job Alert: ಕೆನರಾ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

40 ವರ್ಷಗಳಿಂದ ನಾವು ಕೆಲಸ ಮಾಡುತ್ತಿದ್ದೇವೆ. ಮಕ್ಕಳಿಗೆ ಕಲಿಸುವ ಕೆಲಸವೂ ಆಗುತ್ತಿದೆ. ಹಾಗಾಗಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಬೇಡ ಎಂಬುವುದು ಅವರ ವಾದ. ಈ ನಿಟ್ಟಿನಲ್ಲಿ ತಜ್ಞರ ಕಮಿಟಿ ರಚನೆ ಮಾಡುವ ಚರ್ಚೆಯಾಗಿದೆ, ಅಂಗನವಾಡಿಗಳನ್ನು ಮೇಲ್ದೆರ್ಜೇಗೇರಿಸುವ ಬಗ್ಗೆ ಸಿಎಂ ಹೇಳಿದ್ದಾರೆ. ಕನ್ನಡ, ಇಂಗ್ಲಿಷ್ ಎರಡನ್ನೂ ಕಲಿಸುವ ಚಿಂತನೆ ಇದೆ. ಸರ್ಕಾರಿ ಮಾಂಟೆಸ್ಸರಿ ಮಾದರಿಯಲ್ಲಿ ಮಾಡುತ್ತೇವೆ. 9000 ಪದವಿ ಪಡೆದ ಶಿಕ್ಷಕಿಯರು ಇದ್ದಾರೆ. ಸ್ನಾತಕ್ಕೋತ್ತರ ಪದವಿ ಪಡೆದವರು ಇದ್ದಾರೆ. ಹೀಗಾಗಿ ಸಿಎಂ ಫೈನಾನ್ಸ್‌ ಡಿಪಾರ್ಟ್‌ಮೆಂಟ್ ಅಪ್ರೂವಲ್ ಪಡೆದು ಮಾಡೋಣ ಎಂದಿದ್ದಾರೆ. ಪ್ರಸ್ತುತ 2600 ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಮಾಡೋಕೆ ಸುತ್ತೋಲೆ ಹೊರಡಿಸಿದ್ದಾರೆ. ಇದರ ಬಗ್ಗೆ ಅಂಗನವಾಡಿ ಕಾರ್ಯಕರ್ತರ ಜತೆ ಚರ್ಚಿಸಿದ್ದೇವೆ. ಯಾರನ್ನೂ ಕೆಲಸದಿಂದ ತೆಗೆಯೋದಿಲ್ಲ ಎಂದು ಹೇಳಿದರು.

Continue Reading

ಕರ್ನಾಟಕ

Suraj Revanna Case: ಅಣ್ಣ ಸೂರಜ್‌ 8 ದಿನ ಸಿಐಡಿ ಕಸ್ಟಡಿಗೆ; ತಮ್ಮ ಪ್ರಜ್ವಲ್‌ ನ್ಯಾಯಾಂಗ ಬಂಧನಕ್ಕೆ!

Suraj Revanna Case: 42ನೇ ಎಸಿಎಂಎಂ ಕೋರ್ಟ್‌ನಲ್ಲಿ ಒಂದೇ ಸಮಯದಲ್ಲಿ ರೇವಣ್ಣ ಸನ್ಸ್ ಅರ್ಜಿಗಳ ವಿಚಾರಣೆ ನಡೆದಿದೆ. ಅಣ್ಣ ಸೂರಜ್ ನ್ಯಾಯಾಂಗ ಬಂಧನದಿಂದ ಸಿಐಡಿ ಕಸ್ಟಡಿಗೆ ಹೋದರೆ, ತಮ್ಮ ಪ್ರಜ್ವಲ್‌ನ ಎಸ್‌ಐಟಿ ಕಸ್ಟಡಿಯಿಂದ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

VISTARANEWS.COM


on

Suraj Revanna Case
Koo

ಬೆಂಗಳೂರು: ಸಲಿಂಗ ಕಾಮ ಪ್ರಕರಣದಲ್ಲಿ ಸಿಕ್ಕಿಬಿದ್ದು ನ್ಯಾಯಾಂಗ ಬಂಧನದಲ್ಲಿದ್ದ ಎಂಎಲ್‌ಸಿ ಸೂರಜ್‌ ರೇವಣ್ಣನನ್ನು (Suraj Revanna Case) 8 ದಿನ ಸಿಐಡಿ ಕಸ್ಟಡಿಗೆ ನೀಡಲಾಗಿದೆ. ಪ್ರಕರಣ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್‌ ನ್ಯಾಯಾಧೀಶರಾದ ಕೆ.ಎನ್‌.ಶಿವಕುಮಾರ್‌ ಅವರು ಸೂರಜ್‌ನನ್ನು ಜುಲೈ 1ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ.

ವಿಚಾರಣೆಗಾಗಿ ಹತ್ತು ದಿನ ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಮನವಿ ಮಾಡಿದ್ದರು. ಆದರೆ, 10 ದಿನಕ್ಕೆ ಬದಲಾಗಿ 8 ದಿನ ಸಿಐಡಿ ಕಸ್ಟಡಿಗೆ ನೀಡಲು ಸೂಚಿಸಿದೆ. ಇದರಿಂದ ಜುಲೈ 1 ರವರೆಗೆ ಸೂರಜ್ ರೇವಣ್ಣ ಸಿಐಡಿ ಕಸ್ಟಡಿಯಲ್ಲಿ ಇರಲಿದ್ದಾರೆ.

ಜುಲೈ 8ರವರೆಗೆ ಪ್ರಜ್ವಲ್‌ಗೆ ನ್ಯಾಯಾಂಗ ಬಂಧನ

ಅಣ್ಣ ಸೂರಜ್ ರೇವಣ್ಣ ಅರ್ಜಿ ವಿಚಾರಣೆ ಮುಗಿಯುತ್ತಿದ್ದಂತೆ ಪ್ರಜ್ವಲ್ ರೇವಣ್ಣನನ್ನು (Prajwal Revanna) ಕೋರ್ಟ್‌ಗೆ ಎಸ್ಐಟಿ ಟೀಂ ಹಾಜರುಪಡಿಸಿತು. ಅತ್ಯಾಚಾರ ಪ್ರಕರಣ ಸಂಬಂಧ ಪ್ರಜ್ವಲ್‌ನ ಕಸ್ಟಡಿಗೆ ಪಡೆಯಲಾಗಿತ್ತು. ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ 42 ಎಸಿಎಂಎಂ ಕೋರ್ಟ್‌ಗೆ ಎಸ್ಐಟಿ ಹಾಜರು ಪಡಿಸಿದೆ. ಹೀಗಾಗಿ ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ‌ ಕೋರ್ಟ್‌ ಆದೇಶ ನೀಡಿದೆ.

ಸೋದರ ಸೂರಜ್ ರೇವಣ್ಣ ಕೇಸ್‌ನ ಆದೇಶ ಬರೆಸುತ್ತಿರುವುದನ್ನು ನೋಡಿದ ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ ಸಿಐಡಿ‌ ಕಸ್ಟಡಿಗೆ ಹೋಗಲಿದ್ದಾರೆ ಎಂಬ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದರು. ಅಣ್ಣನನ್ನು ಎಷ್ಟು ದಿನ ಕಸ್ಟಡಿಗೆ ನೀಡಿದ್ದಾರೆ ಎಂದು ಎಸ್‌ಐಟಿ ಅಧಿಕಾರಿಗಳನ್ನು ಪ್ರಜ್ವಲ್ ಕೇಳಿದ್ದಾರೆ.

ಸೂರಜ್‌ ರೇವಣ್ಣಗೇ ʼಹಿಂದಿನಿಂದ ಇರಿದವರುʼ ಯಾರು?

suraj revanna shivakumar

ಹಾಸನ: ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ (Homosexuality, abnormal sexual abuse, physical abuse) ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಂಎಲ್‌ಸಿ ಸೂರಜ್‌ ರೇವಣ್ಣ (Suraj Revanna Case) ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್ ಕಾಣಿಸಿಕೊಂಡಿದೆ. ಸಂತ್ರಸ್ತ ಯುವಕನ ವಿರುದ್ಧ ದೂರು ನೀಡಿದ್ದ ಸೂರಜ್‌ ರೇವಣ್ಣ ಮಾಜಿ ಆಪ್ತ ಶಿವಕುಮಾರನೇ ಆ ಯುವಕನನ್ನು ಸೂರಜ್‌ಗೆ ಪರಿಚಯ ಮಾಡಿಸಿಕೊಟ್ಟಿದ್ದ ಎಂಬುದು ಖಚಿತವಾಗಿದ್ದು, ಸೂರಜ್‌ಗೆ ʼಹನಿ ಟ್ರ್ಯಾಪ್‌ʼ (Honey trap) ಮಾಡಿಸಿದನೇ ಎಂಬ ಅನುಮಾನ ವ್ಯಕ್ತವಾಗಿದೆ.

ಸೂರಜ್ ರೇವಣ್ಣ ವಿರುದ್ಧ ದೂರು ಪ್ರಕರಣ ಅನುಮಾನಕ್ಕೆ ಎಡೆಮಾಡಿಕೊಡುತ್ತಿದೆ. ಮೊದಲ ಸಂತ್ರಸ್ತ ಯುವಕನ ವಿರುದ್ಧ ದೂರು ನೀಡಿದ್ದ ಶಿವಕುಮಾರ್, ಇದೀಗ ದೂರು ನೀಡಿದ್ದ ಸಂತ್ರಸ್ತನ ಜೊತೆಗೇ ಸೇರಿಕೊಂಡಿದ್ದಾನೆ. ಹೀಗಾಗಿ, ಸೂರಜ್ ರೇವಣ್ಣ ಬಳಿ ಹಣ ಕೀಳಲು ಇಬ್ಬರೂ ಸೇರಿ ಪ್ಲಾನ್‌ ಮಾಡಿದ್ರಾ ಎಂಬ ಅನುಮಾನ ಮೂಡಿದೆ. ಹಲವು ವರ್ಷಗಳಿಂದ ಸೂರಜ್ ಜೊತೆಗೇ ಇದ್ದ ಶಿವಕುಮಾರ್‌, ಅವರ ವೀಕ್‌ನೆಸ್ ತಿಳಿದು ಸ್ಕೆಚ್ ಹಾಕಿರಬಹುದು ಎನ್ನಲಾಗಿದೆ.

ಯುವಕ ಐದು ಕೋಟಿ ರೂಪಾಯಿ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದ ಬಗ್ಗೆ ಶಿವಕುಮಾರ್ ಮತ್ತು ಸೂರಜ್ ದೂರು ನೀಡಿದ್ದರು. ಬ್ಲ್ಯಾಕ್‌ಮೇಲ್ ಆರೋಪದಲ್ಲಿ ‌ಪಾತ್ರ ತಿಳಿಯುತ್ತಿದ್ದಂತೆ ಶಿವಕುಮಾರ್‌ ಉಲ್ಟಾ ಹೊಡೆದಿದ್ದಾನೆ. ಮೊದಲ ಸಂತ್ರಸ್ತ ಸಲ್ಲಿಸಿರುವ ದೂರಿನ ಮೇಲೆಯೂ ಅನುಮಾನ ಮೂಡಿದೆ. ಡಿಜಿಪಿಗೆ ಕೊಟ್ಟ‌ ದೂರಿಗೂ ಸಾಮಾಜಿಕ‌ ಜಾಲತಾಣದಲ್ಲಿ ವೈರಲ್ ಆದ ದೂರಿಗೂ ವ್ಯತ್ಯಾಸವಿದೆ.

ಸಂತ್ರಸ್ತ ಮೊದಲು ಎರಡು ಪುಟಗಳ ದೂರು ನೀಡಿದ್ದ. ನಂತರ ಹದಿನಾಲ್ಕು ಪುಟಗಳ ದೂರು ವೈರಲ್ ಆಗಿದೆ. ಡಿಜಿಪಿ ಕಚೇರಿ‌ ಮುಂದೆ ನಿಂತು ಫೋಟೋ‌ ತೆಗೆದು ಯುವಕ ಸೂರಜ್‌ಗೆ ಕಳಿಸಿದ್ದ. ಸೂರಜ್‌ ಅನ್ನು ಬೆದರಿಸಿ ಬ್ಲ್ಯಾಕ್‌ಮೇಲ್ ಮಾಡಲು ಈ ಫೋಟೋ‌ ಕಳಿಸಿರುವುದಾಗಿ ಆರೋಪವಿದೆ.

ಪರಿಚಯ ಮಾಡಿಸಿದ್ದೇ ಶಿವಕುಮಾರ್‌

ಅರಕಲಗೂಡು ಮೂಲದ ಯುವಕನನ್ನು ಸೂರಜ್‌ಗೆ ಪರಿಚಯ ಮಾಡಿಸಿದ್ದೇ ಶಿವಕುಮಾರ್ ಎಂಬುದು ಗೊತ್ತಾಗಿದೆ. ಶಿವಕುಮಾರ್, ಸೂರಜ್ ರೇವಣ್ಣನ ಆಪ್ತ. ಈತ ಒಳ್ಳೆಯ ಹುಡುಗ ಯುವಕನನ್ನು ಸೂರಜ್ ಬಳಿ ಕರೆತಂದು ಪರಿಚಯ ಮಾಡಿಕೊಟ್ಟಿದ್ದ ಶಿವಕುಮಾರ್. ಊರುಕಡೆ ಒಳ್ಳೆಯ ಸಂಘಟನೆ ಮಾಡಿಕೊಂಡಿದ್ದಾನೆ. ನಮ್ಮ ಪಕ್ಷಕ್ಕೆ ದುಡಿಯುತ್ತಾನೆ ಅಂತ ಯುವಕನ ಪರ ಹೇಳಿದ್ದ. ಖಾಸಗಿ ಫೈನಾನ್ಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಅರಕಲಗೂಡು ಮೂಲದ ಯುವಕನನ್ನು 4 ತಿಂಗಳ ಹಿಂದೆ ಸೂರಜ್‌ಗೆ ಪರಿಚಯ ಮಾಡಿಸಿದ್ದ. ಹೀಗಾಗಿ, ಯುವಕನನ್ನು ಬಿಟ್ಟು ಸೂರಜ್ ಟ್ರ್ಯಾಪ್ ಮಾಡಿದನೇ ಸೂರಜ್ ಆಪ್ತ ಶಿವಕುಮಾರ್ ಎಂಬ ಅನುಮಾನ ಮೂಡಿದೆ.

ಈ ಅನುಮಾನಕ್ಕೆ ಪುಷ್ಟಿ ನೀಡುವಂತೆ ಇನ್ನೊಂದು ಘಟನೆಯೂ ನಡೆದಿದೆ. ಲೋಕಸಭೆ ಚುನಾವಣೆ ಫಲಿತಾಂಶದ ದಿನ ಶಿವಕುಮಾರ್‌ ಬಿಜೆಪಿ ಬಣವೊಂದರ ನಾಯಕರ, ಕಾರ್ಯಕರ್ತರ ಜೊತೆ ಕಾಣಿಸಿಕೊಂಡಿದ್ದ. ಈ ಬಣ ಕಾಂಗ್ರೆಸ್‌ನ ಶ್ರೇಯಸ್‌ ಪಟೇಲ್‌ ಗೆಲುವನ್ನು ಹಾಗೂ ಪ್ರಜ್ವಲ್‌ ರೇವಣ್ಣ ಸೋಲನ್ನು ಸಂಭ್ರಮಿಸಿತ್ತು. ಶ್ರೇಯಸ್ ಪರ ಸೆಲೆಬ್ರೇಷನ್ ಮಾಡಿದ ಬಿಜೆಪಿ ಕಾರ್ಯಕರ್ತರ ತಂಡದಲ್ಲಿ ಶಿವಕುಮಾರ್ ಕಂಡುಬಂದಿದ್ದ.

Suraj Revanna Case: ನಾಪತ್ತೆಯಾದ ಸೂರಜ್‌ ಆಪ್ತನ ವಿರುದ್ಧವೂ ದೂರು ನೀಡಿರುವ ಸಂತ್ರಸ್ತ!

ಹೀಗಾಗಿ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣರನ್ನು ಶಿವಕುಮಾರ್ ಸಿಲುಕಿಸಿದನೇ ಎಂಬ ಅನುಮಾನ ದಟ್ಟವಾಗಿದೆ. ಸೂರಜ್ ಪರ, ಸಂತ್ರಸ್ತ ಯುವಕನ ವಿರುದ್ಧ ಬ್ಲ್ಯಾಕ್‌ಮೇಲ್ ದೂರು ನೀಡಿ ನಂತರ ಶಿವಕುಮಾರ್ ಎಸ್ಕೇಪ್ ಆಗಿದ್ದಾನೆ. ಹೀಗಾಗಿ ಶಿವಕುಮಾರ್ ವಿರುದ್ಧ ಅನುಮಾನ ಹೆಚ್ಚಿದೆ. ಜೊತೆಗಿದ್ದೇ ಖತರ್‌ನಾಕ್‌ ಪ್ಲಾನ್ ಮಾಡಿ, ಯುವಕನ ಮೂಲಕ ʼಹನಿಟ್ರ್ಯಾಪ್‌ʼ ಮಾಡಿದ ಶಿವಕುಮಾರ್, ಸೂರಜ್‌ ಬೆನ್ನಿಗೆ ಹಿಂದಿನಿಂದ ಇರಿದನೇ ಎಂಬ ಅನುಮಾನ ಪೊಲೀಸರಲ್ಲೂ ಮೂಡಿದೆ.

Continue Reading

ಬೆಳಗಾವಿ

Contaminated Water : ಬೆಳಗಾವಿ, ಕೋಲಾರದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವು

Polluted Water: ಕನಸಗೇರಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿದ್ದವರಲ್ಲಿ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇತ್ತ ಕೋಲಾರದಲ್ಲಿ ಕಲುಷಿತ ನೀರು ಕುಡಿದ ವೃದ್ಧರೊಬ್ಬರು (Contaminated Water) ಅಸುನೀಗಿದ್ದಾರೆ.

VISTARANEWS.COM


on

By

contaminated water
Koo

ಬೆಳಗಾವಿ: ಕಲುಷಿತ ನೀರು ಸೇವಿಸಿ ಮಹಿಳೆಯೊಬ್ಬರು (Contaminated Water) ಮೃತಪಟ್ಟಿದ್ದಾರೆ. ಹೊಳೆವ್ವಾ ಬಾಳಪ್ಪ ಧನದವರ (38) ಮೃತ ದುರ್ದೈವಿ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕನಸಗೇರಿ ಗ್ರಾಮದಲ್ಲಿ ಘಟನೆ ನಡೆದಿದೆ.

ಕನಸಗೇರಿ ಗ್ರಾಮದಲ್ಲಿ ಬಾವಿಯ ನೀರು ಸೇವಿಸಿ ಸುಮಾರು ಹತ್ತು ಮಂದಿ ಅಸ್ವಸ್ಥಗೊಂಡಿದ್ದರು. ನಿನ್ನೆ ಸಂಜೆ ಭಾನುವಾರ ಹೊಳೆವ್ವಾ ಬಾಳಪ್ಪ ಅವರಿಗೆ ವಾಂತಿಭೇದಿ ಕಾಣಿಸಿಕೊಂಡು ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದರು.

ಸ್ಥಳಕ್ಕೆ ಡಿಎಚ್ಒ ಮಹೇಶ್ ಕೋಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬಸ್ಥರಿಂದ ಮಾಹಿತಿ ಪಡೆದು ಸಾಂತ್ವನ ಹೇಳಿದರು. ಗ್ರಾಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕೂಡ ಪರಿಶೀಲನೆ ನಡೆಸಿ, ಇದೇ ವೇಳೆ ಅಸ್ವಸ್ಥಗೊಂಡವರ ಆರೋಗ್ಯವನ್ನು ವಿಚಾರಿಸಿದರು.

ಇದನ್ನೂ ಓದಿ: Road Accident : ಚಲಿಸುತ್ತಿದ್ದಾಗಲೇ ಆಂಬ್ಯುಲೆನ್ಸ್‌ ಟಯರ್‌ ಬ್ಲಾಸ್ಟ್‌; ಬೈಕ್‌ನಿಂದ ಸ್ಕಿಡ್ ಆಗಿ ಬಿದ್ದು ವ್ಯಕ್ತಿ ಸಾವು

ಕೋಲಾರದಲ್ಲಿ ವೃದ್ಧ ಸಾವು

ವೃದ್ಧರೊಬ್ಬರು ಮನೆಯಲ್ಲೇ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ವೆಂಕಟರಮಣಪ್ಪ (60) ಮೃತದುರ್ದೈವಿ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮಿಣಜೇನಹಳ್ಳಿಯಲ್ಲಿ ಘಟನೆ ನಡೆದಿದೆ. ಕಲುಷಿತ ನೀರು ಸೇವಿಸಿದ್ದರಿಂದಲೇ ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇದಕ್ಕೆ ಪುಷ್ಠಿ ನೀಡುವಂತೆ ಗ್ರಾಮದಲ್ಲಿ 5 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಪಂಚಾಯಿತಿಯಿಂದಲೇ ಮನೆ ಮನೆಗೂ ನೀರು ಬಿಡುಗಡೆ ಆಗಿದ್ದು, ಆ ನೀರು ಸೇವಿಸಿಯೇ ವೃದ್ಧ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಊರುಕುಂಟೆ ಮಿಟ್ಟೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Monsoon Trench Coat Fashion
ಫ್ಯಾಷನ್10 mins ago

Monsoon Trench Coat Fashion: ಮಾನ್ಸೂನ್‌ಗೂ ಕಾಲಿಟ್ಟ ಟ್ರೆಂಚ್‌ ಕೋಟ್‌ ಫ್ಯಾಷನ್‌!

Kamal Haasan predicts Deepika Padukone baby choose cinema career
ಟಾಲಿವುಡ್25 mins ago

Kamal Haasan: ಮುಂದೊಂದು ದಿನ ದೀಪಿಕಾ ಮಗು ಸಿನಿಮಾ ಮಾಡಬಹುದು ಎಂದು ಭವಿಷ್ಯ ನುಡಿದ ಕಮಲ್‌ ಹಾಸನ್‌!

tumkur Shoot out
ಕ್ರೈಂ32 mins ago

Tumkur Shoot out : ತುಮಕೂರಿನಲ್ಲಿ ಸದ್ದು ಮಾಡಿದ ಪೊಲೀಸ್ ತುಪಾಕಿ; ಸರಗಳ್ಳನ ಹೆಡೆಮುರಿ ಕಟ್ಟಿದ ಖಾಕಿ

LKG UKG In Govt Schools
ಕರ್ನಾಟಕ38 mins ago

LKG UKG In Govt Schools: ಅಂಗನವಾಡಿ ನೌಕರರ ಧರಣಿ; ಬೇಡಿಕೆಗಳನ್ನು ಸಿಎಂ ಗಮನಕ್ಕೆ ತಂದ ಲಕ್ಷ್ಮಿ ಹೆಬ್ಬಾಳ್ಕರ್‌

Sex Doll
ದೇಶ45 mins ago

AI Sex Dolls: ಶೀಘ್ರವೇ ಬರಲಿವೆ ಎಐ ಆಧಾರಿತ ‘ಸೆಕ್ಸ್‌’ ಬೊಂಬೆಗಳು; ನೈಜ ‘ಸುಖ’ಕ್ಕೆ ಇನ್ನು ಮನುಷ್ಯರೇ ಬೇಕಿಲ್ಲ!

Job Alert
ಉದ್ಯೋಗ46 mins ago

Job Alert: ಗಮನಿಸಿ; GTTCಯಲ್ಲಿನ ಹುದ್ದೆಗೆ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ; ಇಲ್ಲಿದೆ ಪರಿಷ್ಕೃತ ವೇಳಾಪಟ್ಟಿ

Unusual Story
Latest47 mins ago

Unusual Story: 15 ವರ್ಷದ ವಿದ್ಯಾರ್ಥಿಯಿಂದ ಶಿಕ್ಷಕಿ ಗರ್ಭಿಣಿ! ಜೈಲು ಶಿಕ್ಷೆ

Suraj Revanna Case
ಕರ್ನಾಟಕ1 hour ago

Suraj Revanna Case: ಅಣ್ಣ ಸೂರಜ್‌ 8 ದಿನ ಸಿಐಡಿ ಕಸ್ಟಡಿಗೆ; ತಮ್ಮ ಪ್ರಜ್ವಲ್‌ ನ್ಯಾಯಾಂಗ ಬಂಧನಕ್ಕೆ!

contaminated water
ಬೆಳಗಾವಿ1 hour ago

Contaminated Water : ಬೆಳಗಾವಿ, ಕೋಲಾರದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವು

Actor Darshan crying In Jail while seeing wife and son
ಸ್ಯಾಂಡಲ್ ವುಡ್2 hours ago

Actor Darshan: ಪತ್ನಿ, ಮಗ ನೋಡುತ್ತಿದ್ದಂತೆ ಕಣ್ಣೀರಿಟ್ಟ ನಟ ದರ್ಶನ್; ಮಗನನ್ನು ತಬ್ಬಿ ಬಿಕ್ಕಿ ಬಿಕ್ಕಿ ಅತ್ತ ʻದಾಸʼ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ3 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ4 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌