Aishwarya Rai ಆರಂಭಿಕ ಮಾಡೆಲಿಂಗ್‌ಗೆ ಪಡೆದ ಸಂಭಾವನೆ ಎಷ್ಟು ಗೊತ್ತಾ? ಬರೀ.. - Vistara News

ಸಿನಿಮಾ

Aishwarya Rai ಆರಂಭಿಕ ಮಾಡೆಲಿಂಗ್‌ಗೆ ಪಡೆದ ಸಂಭಾವನೆ ಎಷ್ಟು ಗೊತ್ತಾ? ಬರೀ..

ಜಗತ್ತಿನ ಅತಿ ಶ್ರೀಮಂತ ಸೆಲೆಬ್ರಿಟಿಗಳಲ್ಲಿ ಒಬ್ಬರಾಗಿರುವ Aishwarya Rai ಅವರ ಮಾಡೆಲಿಂಗ್‌ ಬದುಕಿನ ಆರಂಭದ ದಿನಗಳಿಗೆ ಬೆಳಕು ಚೆಲ್ಲುವ ಸಂಭಾವನೆ ಪತ್ರವೊಂದು ವೈರಲ್‌ ಆಗಿದೆ. ಆಕೆ ಆಗ ಹೇಗಿದ್ದರು ಎಂಬ ಚಿತ್ರಣ ಕೂಡಾ.

VISTARANEWS.COM


on

Aishwarya rai
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಮಿಸ್‌ ವರ್ಲ್ಡ್ ಐಶ್ವರ್ಯಾ ರೈ ಬಚ್ಚನ್ ಅವರು ಈಗ ಸೌಂದರ್ಯ ಮತ್ತು ಫ್ಯಾಷನ್‌ನ ಗ್ಲೋಬಲ್ ಐಕಾನ್. ಕಳೆದ ಕೆಲವು ದಿನಗಳಿಂದ ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಅದ್ಧೂರಿಯಾಗಿ ಮಿಂಚುತ್ತಿದ್ದಾರೆ. ತಮ್ಮ 48ನೇ ವಯಸ್ಸಿನಲ್ಲೂ ನಾಯಕಿಯಾಗಿಯೇ ಗಮನ ಸೆಳೆಯುತ್ತಿರುವ ಇವರು ಬಾಲಿವುಡ್‌ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗ ಮತ್ತು ಹಾಲಿವುಡ್‌ನಲ್ಲೂ ಬೇಡಿಕೆ ಹೊಂದಿದ್ದಾರೆ. ಜಗತ್ತಿನ ಟಾಪ್‌ 5 ಶ್ರೀಮಂತ ನಟಿಯರಲ್ಲಿ ಒಬ್ಬರೆಂಬ ಖ್ಯಾತಿಯನ್ನೂ ಹೊಂದಿದ್ದಾರೆ. ಇಂಥ ಐಶ್ವರ್ಯ ರೈ (Aishwarya Rai) 30 ವರ್ಷಗಳ ಹಿಂದೆ ಮಾಡೆಲಿಂಗ್‌ ಕ್ಷೇತ್ರಕ್ಕೆ ಇಳಿದಾಗ ಸಿಕ್ಕಿದ ಆರಂಭಿಕ ಸಂಭಾವನೆ ಎಷ್ಟು ಗೊತ್ತೇ? ಇವತ್ತು ಒಂದು ಸಿನಿಮಾಗೆ ಕೋಟಿಗಟ್ಟಲೆ ಸಂಭಾವನೆ ಪಡೆಯುವ ಕರ್ನಾಟಕ ಕರಾವಳಿಯ ಬೆಡಗಿ ಅಂದು ಪಡೆದದ್ದು ಬರೀ 1500 ರೂ. ಮಾತ್ರ!

ಐಶ್ವರ್ಯ ರೈ (Aishwarya Rai) ಆಗಿನ್ನೂ ಲೋಕ ಮಿಸ್‌ ವರ್ಲ್ಡ್‌ ಆಗಿರಲಿಲ್ಲ. ಆಕೆ ಲೋಕಸುಂದರಿ ಕಿರೀಟವನ್ನು ಗೆದ್ದು ಜಗತ್ತನ್ನೇ ಸೆಳೆದಿದ್ದು 1994ರಲ್ಲಿ. ಅದಕ್ಕಿಂತ ಎರಡು-ಮೂರು ವರ್ಷ ಮೊದಲು ಅಂದರೆ 1992ರಲ್ಲಿ ಆಕೆ ಮಾಡೆಲಿಂಗ್‌ ಕ್ಷೇತ್ರಕ್ಕೆ ಕಾಲಿಟ್ಟಿದ್ದರು. ಸಣ್ಣ ವಯಸ್ಸಿನಲ್ಲೇ ಮಾಡೆಲಿಂಗ್‌ನಲ್ಲಿ ಆಸಕ್ತಿ ತೋರಿಸಿದ್ದರೂ ಮಾಡೆಲಿಂಗ್‌ ಆಕೆಯ ಕೈ ಹಿಡಿದದ್ದು 18ನೇ ವಯಸ್ಸಿನ ಹೊತ್ತಿಗೆ. ಮೊದಮೊದಲು ಸಣ್ಣಪುಟ್ಟ ಮ್ಯಾಗಜಿನ್‌ಗಳ ಫೋಟೊ ಶೂಟ್‌ನಲ್ಲಿ ಭಾಗವಹಿಸುತ್ತಿದ್ದ ಆಕೆ ನಿಧಾನಕ್ಕೆ ಜನಪ್ರಿಯ ಮಾಡೆಲ್‌ ಆಗುವತ್ತ ಹೆಜ್ಜೆ ಹಾಕಿದರು.

1500 ರೂ. ಸಂಭಾವನೆಗೆ ಸಿಕ್ಕಿತು ದಾಖಲೆ
ಬದುಕು ಯಾವತ್ತೂ ಹೂವಿನ ಹಾಸಿಗೆಯಾಗಿರುವುದಿಲ್ಲ. ಪ್ರತಿಯೊಬ್ಬರು ಕೂಡಾ ಆರಂಭಿಕ ಹಂತದಲ್ಲಿ ತುಂಬ ಕಷ್ಟಪಟ್ಟೇ ಅತ್ಯಂತ ಪರಿಶ್ರಮದಿಂದ ಮೇಲೆ ಬಂದಿರುತ್ತಾರೆ ಎನ್ನುವುದನ್ನು ಐಶ್ವರ್ಯ ರೈ (Aishwarya Rai) ಬದುಕು ಕೂಡಾ ಹೇಳುತ್ತದೆ. ಕೃಷಾ ಕ್ರಿಯೇಷನ್ಸ್‌ ಎಂಬ ಸಂಸ್ಥೆಯಲ್ಲಿ ಒಂದು ದಿನದ ಫೋಟೋ ಶೂಟ್‌ಗೆ ಮಾಡೆಲ್‌ ಆಗಿ ಭಾಗವಹಿಸಲು ಐಶ್ವರ್ಯ ರೈ ಒಪ್ಪಿದ್ದರು. ಅದಕ್ಕೆ ಸಂಬಂಧಿಸಿದ ಒಂದು ಅಗ್ರಿಮೆಂಟ್‌ ಈಗ ಜಾಲತಾಣಗಳಲ್ಲಿ ವೈರಲ್‌ ಆಗಿದೆ. 1992ರ ಮೇ 23ರಂದು ಮಾಡಿಕೊಳ್ಳಲಾದ ಈ ಅಗ್ರಿಮೆಂಟ್‌ನಲ್ಲಿ ಆಗ ಐಶ್ವರ್ಯ ರೈ ಅವರಿಗೆ ಸುಮಾರು 18 ವರ್ಷ ಆಗಿತ್ತು ಎಂದು ಉಲ್ಲೇಖಿಸಲಾಗಿದೆ. ಬಿಲ್‌ ಕಂ ಅಗ್ರಿಮೆಂಟ್‌ಗೆ ಐಶ್ವರ್ಯ ರೈ ಅವರೂ ಸಹಿ ಹಾಕಿದ್ದಾರೆ. ಆಗ ಅವರ ಮನೆ ವಿಳಾಸ ಮುಂಬಯಿ ಖಾರ್‌ ಪ್ರದೇಶದ ರಾಮಲಕ್ಷ್ಮೀ ನಿವಾಸ ಎಂದು ಉಲ್ಲೇಖಿಸಲಾಗಿದೆ.

ಒಪ್ಪಂದ ಪತ್ರದಲ್ಲಿ ಈ ಫೋಟೊಗಳ ಮೇಲೆ ತನಗಾಗಲೀ, ತನ್ನ ಕುಟುಂಬಕ್ಕಾಗಲೀ ಯಾವುದೇ ಹಕ್ಕಿರುವುದಿಲ್ಲ. ಆದರೆ, ಕಂಪನಿ ಇದರ ಸರ್ವ ರೀತಿಯ ಬಳಕೆಗೆ ಸ್ವತಂತ್ರವಾಗಿರುತ್ತದೆ ಎಂಬಿತ್ಯಾದಿ ಷರತ್ತುಗಳನ್ನು ಉಲ್ಲೇಖಿಸಲಾಗಿದೆ. ಇದನ್ನು ಒಪ್ಪಿಯೇ ಐಶ್ವರ್ಯ ಸಹಿ ಮಾಡಿದ್ದಾರೆ.

ರಿವೀಲ್‌ ಮಾಡಿದ್ದು ಯಾರು?
SBGSR MAHARASHTRA ಎಂಬ ಟ್ವಿಟರ್‌ ಹ್ಯಾಂಡಲ್‌ನಲ್ಲಿ ಈ ಬಿಲ್‌ ಮತ್ತು ಆವತ್ತಿನ ಕ್ಯಾಟಲಾಗ್‌ನ ವಿವರಗಳನ್ನು ರಿವೀಲ್‌ ಮಾಡಲಾಗಿದೆ. ʻʻನಾನು ಪ್ರಕಟಿಸಿದ ಫ್ಯಾಷನ್‌ ಕ್ಯಾಟಲಾಗ್‌ನ ಮೂವತ್ತನೇ ವರ್ಷವನ್ನು ಆಚರಿಸುತ್ತಿದ್ದೇನೆ. ಈ ಕ್ಯಾಟಲಾಗ್‌ಗೆ ಐಶ್ವರ್ಯ ರೈ, ಸೊನಾಲಿ ಬೇಂದ್ರೆ, ನಿಕಿ ಅನೇಜಾ, ತೇಜಸ್ವಿನಿ ಕೊಲ್ಲಾಪುರೆ ಮೊದಲಾದವರು ಆವತ್ತು ಕ್ಯಾಟಲಾಗ್‌ನ ಫೋಟೊಗಳಿಗಾಗಿ ಪೋಸ್‌ ಕೊಟ್ಟಿದ್ದರು ಎಂದು ಹೇಳಿಕೊಂಡಿದ್ದಾರೆ.

ಹೇಗಿದ್ದರು ಆಗ ಐಶ್ವರ್ಯ ರೈ?
ಐಶ್ವರ್ಯ ರೈ ಅವರನ್ನು ಇತ್ತೀಚೆಗೆ ನೋಡುತ್ತಿರುವವರಿಗೆ 30 ವರ್ಷದ ಹಿಂದಿನ ಕ್ಯಾಟಲಾಗ್‌ನಲ್ಲಿರುವ ಐಶ್ವರ್ಯ ರೈ ಅವರನ್ನು ಗುರುತಿಸುವುದಕ್ಕೆ ಸ್ವಲ್ಪ ಕಷ್ಟ ಆಗಬಹುದು. ಯಾಕೆಂದರೆ, ಆವತ್ತು ಉದ್ದನೆಯ ಗುಂಗುರು ಕೂದಲಿನ ಒಡತಿಯಾಗಿದ್ದ ಐಶ್ವರ್ಯ ಈಗ ಸಂಪೂರ್ಣ ಬದಲಾಗಿದೆ. ಗುಂಗುರು ಕೂದಲಿನ ನಡುವೆ ಮುಖ ದುಂಡಗಾಗಿ ಕಾಣುತ್ತದೆ. ಈಗ ಬಾಚಿ ಕಟ್ಟಿದ ಕೂದಲಿನಲ್ಲಿ ಒಂದಿಷ್ಟು ಉದ್ದನೆಯ ಚೆಲುವು. ಆದರೆ, ಆ ಕಾಡುವ ಬೆಕ್ಕಿನ ಕಣ್ಣುಗಳು ಮಾತ್ರ ಇವತ್ತಿಗೂ ಅದೇ, ಆವತ್ತಿಗೂ ಅದೇ!

ಹೆಜ್ಜೆ ಮೇಲೆ ಹೆಜ್ಜೆ ಇಟ್ಟು….
1994ರಲ್ಲಿ ಮಿಸ್‌ವರ್ಲ್ಡ್‌ ಆಗಿ ಗಮನ ಸೆಳೆದ ಆಕೆ ಯಾವುದಕ್ಕೂ ಅವಸರ ಪಡಲೇ ಇಲ್ಲ. ಬಾಲಿವುಡ್‌ ಕೈ ಬೀಸಿ ಕರೆಯುತ್ತಿದ್ದರೂ ಆಕೆ ಮೊದಲ ಬಾರಿ ನಟಿಸಿದ್ದು 1997ರಲ್ಲಿ. ಮಣಿರತ್ನಂ ಅವರ ಇರುವರ್‌ ಸಿನಿಮಾದಲ್ಲಿ. ಅಲ್ಲಿಂದಾಚೆಗೆ ಜೀನ್ಸ್‌ನಲ್ಲಿ ಮತ್ತೊಮ್ಮೆ ಗಮನ ಸೆಳೆದ ಆಕೆ ನಟಿಯಾಗಿಯೂ ಮಾಗುತ್ತಾ ಸಾಗಿದರು. 1999ರಲ್ಲಿ ಬಿಡುಗಡೆಯಾದ ಹಮ್‌ ದಿಲ್‌ ದೇ ಚುಕೇ ಸನಮ್‌, 2002ರಲ್ಲಿ ತೆರೆಕಂಡ ದೇವದಾಸ್‌ ಅವರನ್ನು ಅತ್ಯುತ್ತಮ ನಟಿ ಎಂಬ ಅಭಿದಾನಕ್ಕೆ ಪಾತ್ರವಾಗುವಂತೆ ಮಾಡಿತು. ಅತ್ಯಂತ ಕಾಳಜಿಯಿಂದ ಸಿನಿಮಾಗಳನ್ನು ಆಯ್ಕೆ ಮಾಡಿಕೊಂಡ ಫಲವಾಗಿಯೇ ಇವತ್ತಿಗೂ ಬೇಡಿಕೆ ಉಳಿಸಿಕೊಂಡಿರುವ ಆಕೆ 2007ರ ಬಳಿಕ ಅಮಿತಾಭ್‌ ಬಚ್ಚನ್‌ ಕುಟುಂಬದ ಮುದ್ದಿನ ಸೊಸೆ. ಪುಟಾಣಿ ಆರಾಧ್ಯಳ ಪ್ರೀತಿಯ ಅಮ್ಮ. ಕುಟುಂಬದ ಗೌರವಗಳನ್ನು ಉಳಿಸುತ್ತಲೇ ತನ್ನ ಗೌರವವನ್ನೂ ಹೆಚ್ಚಿಸಿಕೊಂಡಿರುವ ಐಶ್ವರ್ಯ ರೈ ಭಾರತೀಯ ಫ್ಯಾಷನ್‌, ಚಿತ್ರರಂಗದಲ್ಲಿ ಬೆಳೆಯಬಹುದಾದ ದಾರಿಗೆ ಒಂದು ಮಾದರಿ.

ಇದನ್ನೂ ಓದಿ | Explainer: Cannes Film Festival ಮಿಂಚುತ್ತಿರುವ ಭಾರತ, ಏನಿದರ ವಿಶೇಷತೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Ranveer Singh: ಮಗುವಿನ ನಿರೀಕ್ಷೆ ಹೊಸ್ತಿಲಲ್ಲೇ ಮದುವೆ ಫೋಟೊಗಳು ಡಿಲಿಟ್‌! ದೀಪಿಕಾ ಜತೆ ರಣವೀರ್ ಕಿರಿಕ್‌?

Ranveer Singh: ತಾಯಿಯಾಗಲಿರುವ ದೀಪಿಕಾ ಪಡುಕೋಣೆ ( Deepika Padukone) ಸದ್ಯ `ಸಿಂಗಂ ಅಗೇನ್’ ಚಿತ್ರದ ಶೂಟಿಂಗ್ ನಲ್ಲಿದ್ದಾರೆ. ʻಸಿಂಗಂ ಅಗೇನ್ʼ ಚಿತ್ರದಲ್ಲಿ ದೀಪಿಕಾ ಪಡುಕೋಣೆ (Deepika Padukone) ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನದ ಈ ಸಿನಿಮಾದಲ್ಲಿ ಹಲವು ಪ್ರಮುಖ ನಟರು ಇದ್ದಾರೆ. ಲೇಡಿ ಸಿಂಗಮ್ ಚಿತ್ರದಲ್ಲಿ ಅಜಯ್ ದೇವಗನ್ ಅವರ ಸಹೋದರಿ ಪಾತ್ರವನ್ನು ನಿರ್ವಹಿಸಲಿದ್ದಾರೆʼʼಎನ್ನಲಾಗಿತ್ತು.

VISTARANEWS.COM


on

Ranveer Singh Wedding Pics With Deepika Padukone
Koo

ಬೆಂಗಳೂರು: ರಣವೀರ್ ಸಿಂಗ್ (Ranveer Singh) ಮತ್ತು ದೀಪಿಕಾ ಪಡುಕೋಣೆ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಖುಷಿಯ ಸಂದರ್ಭದಲ್ಲೇ ತಮ್ಮ ಮದುವೆ ಫೋಟೊಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಡಿಲಿಟ್‌ ಮಾಡಿದ್ದಾರೆ. ಎಲ್ಲವೂ ಸರಿಯಿರುವಾಗಲೇ ರಣ್‌ವೀರ್ ಸಿಂಗ್ ಯಾಕೆ ಈ ನಿರ್ಧಾರ ತೆಗೆದುಕೊಂಡರು? ದಿಢೀರನೇ ಫೋಟೊಗಳನ್ನು ತೆಗೆದು ಹಾಕಿದ್ದು ಯಾಕೆ? ಈ ಎಲ್ಲಾ ಪ್ರಶ್ನೆ ಈಗ ಅಭಿಮಾನಿಗಳಲ್ಲಿ ಹುಟ್ಟಿಕೊಂಡಿವೆ.

ದೀಪಿಕಾ ಹಾಗೂ ರಣವೀರ್ 2018ರಲ್ಲಿ ದೂರದ ಇಟಲಿಯಲ್ಲಿ ವಿವಾಹ ಆದರು. ಕೊಂಕಣಿ ಹಾಗೂ ಸಿಂಧಿ ಶೈಲಿಯಲ್ಲಿ ಇವರ ವಿವಾಹ ನಡೆಯಿತು. ಆ ಬಳಿಕ ಇವರು ಮದುವೆ ಫೋಟೋಗಳನ್ನು ಹಂಚಿಕೊಂಡಿದ್ದರು. ಕಳೆದ ವರ್ಷ ಕರಣ್ ಜೋಹರ್ ಶೋನಲ್ಲಿ ಮದುವೆ ವಿಡಿಯೋ ರಿಲೀಸ್ ಮಾಡಿದ್ದರು. ಇದರಿಂದ ರಣವೀರ್ ಸಿಂಗ್ ಹಾಗೂ ದೀಪಿಕಾ ಮಧ್ಯೆ ಏನಾದರೂ ಗಂಭೀರ ಜಗಳ ಆಯಿತೇ ಎನ್ನುವ ಅನುಮಾನ ಮೂಡಿದೆ.

ತಾಯಿಯಾಗಲಿರುವ ದೀಪಿಕಾ ಪಡುಕೋಣೆ ( Deepika Padukone) ಸದ್ಯ `ಸಿಂಗಂ ಅಗೇನ್’ ಚಿತ್ರದ ಶೂಟಿಂಗ್ ನಲ್ಲಿದ್ದಾರೆ. ʻಸಿಂಗಂ ಅಗೇನ್ʼ ಚಿತ್ರದಲ್ಲಿ ದೀಪಿಕಾ ಪಡುಕೋಣೆ (Deepika Padukone) ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನದ ಈ ಸಿನಿಮಾದಲ್ಲಿ ಹಲವು ಪ್ರಮುಖ ನಟರು ಇದ್ದಾರೆ. ಲೇಡಿ ಸಿಂಗಮ್ ಚಿತ್ರದಲ್ಲಿ ಅಜಯ್ ದೇವಗನ್ ಅವರ ಸಹೋದರಿ ಪಾತ್ರವನ್ನು ನಿರ್ವಹಿಸಲಿದ್ದಾರೆʼʼಎನ್ನಲಾಗಿತ್ತು.ದೀಪಿಕಾ ಪಡುಕೋಣೆ ಮತ್ತು ರಣವೀರ್​ ಸಿಂಗ್ ಅವರು ಪರಸ್ಪರ ಪ್ರೀತಿ ಮದುವೆ ಆಗಿದ್ದು 2018ರಲ್ಲಿ.

ಇದನ್ನೂ ಓದಿ: Ranveer Singh: ಕಾಂಗ್ರೆಸ್‌ ಪರ ರಣವೀರ್‌ ಸಿಂಗ್‌ ಪ್ರಚಾರ? ಕೇಸ್‌ ದಾಖಲು

ಆರು ವರ್ಷಗಳ ಬಳಿಕ ಅವರು ಮಗು ಹೊಂದುವ ನಿರ್ಧಾರಕ್ಕೆ ಬಂದಿದ್ದಾರೆ. ಫೈಟರ್‌ನಲ್ಲಿ ಹೃತಿಕ್ ರೋಷನ್ ಜತೆಗೆ ಕೊನೆಯದಾಗಿ ಕಾಣಿಸಿಕೊಂಡ ದೀಪಿಕಾ, ಸದ್ಯ ಸಿನಿಮಾದಿಂದ ಬ್ರೇಕ್‌ ಪಡೆದುಕೊಂಡಿದ್ದಾರೆ. ಈ ವರ್ಷ ಸೆಪ್ಟೆಂಬರ್​ ತಿಂಗಳಲ್ಲಿ ಅವರು ಮಗುವಿಗೆ ಜನ್ಮ ನೀಡಲಿದ್ದಾರೆ.

ಈ ಮೊದಲೇ ವದಂತಿಗಳು ಹಬ್ಬಿದ್ದವು

ದಿ ವೈಟ್ ಲೋಟಸ್ ಸೀಸನ್ 3 ರಿಂದ ದೀಪಿಕಾ ಹೊರಗುಳಿದಿದ್ದಾರೆ ಎಂದು ವರದಿಯಾದ ಕೆಲವೇ ದಿನಗಳಲ್ಲಿ ದೀಪಿಕಾ ಗರ್ಭಿಣಿಯಾಗಿರುವ ಸುದ್ದಿ ಹೊರಬಂದಿತ್ತು. ಎಚ್‌ಒಬಿಯ ಅತ್ಯಂತ ಜನಪ್ರಿಯ ಶೋ ಆಗಿರುವ ದಿ ವೈಟ್ ಲೋಟಸ್ ಸೀಸನ್‌ 3ರಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಇತ್ತು. ಆದರೆ, ವಾರಾಂತ್ಯದಲ್ಲಿ ದೀಪಿಕಾ ಕಾರ್ಯಕ್ರಮದಿಂದ ಹೊರಗುಳಿದಿದ್ದಾರೆ ಎಂದು ವರದಿಯಾಗಿತ್ತು.

ದೀಪಿಕಾ ಗರ್ಭಿಣಿಯಾಗಿದ್ದಾರೆಂಬ ವದಂತಿಗಳಿಗೆ ಒಳಗಾಗುತ್ತಿರುವುದು ಇದೇ ಮೊದಲಲ್ಲ. ‘ಫೈಟರ್‌’ ಚಿತ್ರದ ಪ್ರಚಾರದ ಫೋಟೋಗಳನ್ನು ದೀಪಿಕಾ ಹಂಚಿಕೊಂಡಾಗ, ಅಭಿಮಾನಿಗಳು ಹೊಟ್ಟೆ ಉಬ್ಬಿರುವುದನ್ನು ಅನ್ನು ಗಮನಿಸಿದ್ದರು. ಅಲ್ಲದೇ, ಕಮೆಂಟ್ ವಿಭಾಗದಲ್ಲಿ ಗರ್ಭಿಣಿಯೇ ಎಂಬ ಪ್ರಶ್ನೆಗಳು ತುಂಬಿದ್ದವು.

ಈ ವರ್ಷದ ಆರಂಭದಲ್ಲಿ ದೀಪಿಕಾ ರಣವೀರ್ ಜತೆ ಮಕ್ಕಳನ್ನು ಹೊಂದಲು ಬಯಸುವುದಾಗಿ ಹೇಳಿದ್ದರು. ಪತ್ರಿಕೆಯೊಂದಿಗೆ ಮಾತನಾಡಿದ್ದ ದೀಪಿಕಾ, “ಖಂಡಿತವಾಗಿಯೂ. ರಣವೀರ್ ಮತ್ತು ನಾನು ಮಕ್ಕಳನ್ನು ಪ್ರೀತಿಸುತ್ತೇವೆ. ನಾವು ನಮ್ಮ ಸ್ವಂತ ಕುಟುಂಬವನ್ನು ಪ್ರಾರಂಭಿಸುವ ದಿನಕ್ಕಾಗಿ ನಾವು ಎದುರು ನೋಡುತ್ತಿದ್ದೇವೆ” ಎಂದು ಹೇಳಿದ್ದರು.

Continue Reading

Lok Sabha Election 2024

Lok Sabha Election 2024: ಓದಿದ ಶಾಲೆಯಲ್ಲಿ ಮತ ಹಾಕಿದ ನಟ ರಿಷಬ್‌ ಶೆಟ್ಟಿ; ಕಾಂತಾರ 2 ಸೀಕ್ರೆಟ್‌ ರಿವೀಲ್‌!

Lok Sabha Election 2024 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಜೆ ಮತಗಟ್ಟೆಗೆ ಬಂದು ನಟ ರಿಷಬ್‌ ಶೆಟ್ಟಿ (Rishab Shetty) ಮತದಾನವನ್ನು ಮಾಡಿದ್ದಾರೆ. ಸಾಂಪ್ರದಾಯಿಕವಾಗಿ ವೈಟ್‌ ಆ್ಯಂಡ್‌ ವೈಟ್‌ ಶರ್ಟ್‌ ಪಂಚೆ ತೊಟ್ಟು ಮತಗಟ್ಟೆಗೆ ಆಗಮಿಸಿದ್ದರು. ಇದೇ ವೇಳೆ ಕಾಂತಾರ 2 (Kantara 2) ಚಿತ್ರದ ಬಗ್ಗೆಯೂ ಮಾತನಾಡಿದರು.

VISTARANEWS.COM


on

By

lok sabha Election 2024 Actor Rishb Shetty
Koo

ಉಡುಪಿ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಉಡುಪಿಯ ಬೈಂದೂರಿನಲ್ಲಿ ಡಿವೈನ್‌ ಸ್ಟಾರ್‌ ಖ್ಯಾತಿಯ ನಟ ರಿಷಬ್ ಶೆಟ್ಟಿ ಮತ ಚಲಾಯಿಸಿದರು. ಬೈಂದೂರಿನ ಕೆರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 135 ರಲ್ಲಿ ರಿಷಬ್ (Rishab Shetty) ಮತದಾನ ಮಾಡಿದರು.

ಮತದಾನದ ಬಳಿಕ ಮಾತನಾಡಿನ ನಟ ರಿಷಬ್ ಶೆಟ್ಟಿ ಲೋಕಸಭಾ ಚುನಾವಣೆ ನಡೆಯುವುದು ದೇಶಕ್ಕಾಗಿ, ನಾನು ದೇಶಕ್ಕೆ ಮತ ಹಾಕಿದ್ದೇನೆ. ಮತದಾನ ನಮ್ಮ ಹಕ್ಕು ಜವಾಬ್ದಾರಿ ಅದನ್ನು ಚಲಾಯಿಸಿದ್ದೇನೆ. ಜನ ಕಡಿಮೆ ಇರುತ್ತಾರೆ ಎಂದು ಸಂಜೆ ಬಂದಿದ್ದೇನೆ. ಸರ್ಕಾರದ ನಿರೀಕ್ಷೆ ಹಾಗೂ ಬೇಡಿಕೆ ಹಾಗೂ ರಾಜಕೀಯದ ಬಗ್ಗೆ ಮಾತನಾಡಲ್ಲ. ನನ್ನ ಜವಾಬ್ದಾರಿಯನ್ನು ಮಾಡಿದ್ದೇನೆ ಅಷ್ಟೇ ಅಂದರು.

ರಿಷಬ್ ಶೆಟ್ಟಿ ತಾವು ಓದಿದ ಶಾಲೆಯಲ್ಲಿ ಮತದಾನ ಮಾಡಿದ್ದಾರೆ. ಮಾತ್ರವಲ್ಲ ಈ ಶಾಲೆಯನ್ನು ದತ್ತು ಸ್ವೀಕಾರ ಮಾಡಿ ಅಭಿವೃದ್ಧಿ ಮಾಡುತ್ತಿದ್ದಾರೆ. ಚುನಾವಣೆ ಇರುವುದರಿಂದ ಪೂರ್ತಿ ಕೆಲಸ ಮಾಡಲು ಆಗಿಲ್ಲ. ಶಾಲೆಯ ಗ್ರೌಂಡನ್ನು ಮಕ್ಕಳಿಗೆ ಆಟವಾಡಲು ದೊಡ್ಡದಾಗಿ ಮಾಡಿದ್ದೇವೆ. ಕಟ್ಟಡದ ಕೆಲಸ ಮತ್ತು ಪೀಠೋಪಕರಣ ಕೆಲಸ ಇನ್ನು ಆಗಬೇಕಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Lok Sabha Election 2024: ಮತ ಹಾಕಲು ವಿದೇಶದಿಂದ ಬಂದರು! ಒಂದೇ ಕುಟುಂಬದ 69 ಮಂದಿಯ ವೋಟ್‌ ಸೆಲ್ಫಿ!

ಚಿತ್ರೀಕರಣ ಮುಗಿಯುವವರೆಗೆ ಎಲ್ಲವೂ ಗೌಪ್ಯ

ಕಾಂತಾರ 2 ಚಿತ್ರದ ಬಗ್ಗೆಯೂ ಮಾತನಾಡಿರುವ ನಟ ರಿಷಬ್ ಶೆಟ್ಟಿ, ಕಾಂತಾರ ಚಿತ್ರದ ಕುರಿತು ಅಧಿಕೃತವಾಗಿ ಹೊಂಬಾಳೆ ಸಂಸ್ಥೆ ಎಲ್ಲವನ್ನೂ ಘೋಷಣೆ ಮಾಡುತ್ತದೆ. ಈಗಾಗಲೇ ಚಿತ್ರೀಕರಣ ಆರಂಭವಾಗಿದ್ದು, ಬಹಳ ಚೆನ್ನಾಗಿ ಕೆಲಸಕಾರ್ಯಗಳು ನಡೀತಾ ಇದೆ. ಮೊದಲಿಗಿಂತ ದೊಡ್ಡ ಜವಾಬ್ದಾರಿಯೊಂದಿಗೆ ದೊಡ್ಡ ತಂಡ ಕೆಲಸ ಮಾಡುತ್ತಿದೆ.

ಹೊಂಬಾಳೆ ಪ್ರೊಡಕ್ಷನ್ ಹೌಸ್ ಸಿಕ್ಕಿರುವುದು ಫಿಲಂ ಮೇಕರ್‌ಗಳಿಗೆ ಒಂದು ಪುಣ್ಯ. ಕಾಂತರದಲ್ಲಿ ಅದ್ಭುತವಾದ ಟೆಕ್ನಿಷಿಯನ್ಸ್‌ಗಳು ಕೆಲಸ ಮಾಡುತ್ತಿದ್ದಾರೆ. ನಿರಂತರವಾಗಿ ಕೆಲಸಗಳು ನಡೆಯುತ್ತಿದ್ದು ಪಾರ್ಟ್ ಬೈ ಪಾರ್ಟ್ ಚಿತ್ರೀಕರಣ ನಡೆಯುತ್ತದೆ. ಜನ ಕಾಂತಾರವನ್ನು ಗೆಲ್ಲಿಸಿದ್ದಾರೆ, ಹೀಗಾಗಿ ಮಾತಿನಲ್ಲಿ ಏನನ್ನು ಹೇಳುವುದಿಲ್ಲ. ಕೆಲಸದ ಮೂಲಕ ಮಾಡಿ ತೋರಿಸಬೇಕು ಎಂದು ಅಂದುಕೊಂಡಿದ್ದೇನೆ.

ಸಿನಿಮಾಗಾಗಿ ಒಂದು ವರ್ಷದಿಂದ ಗಡ್ಡ ಹಾಗೂ ಕೂದಲು ಬಿಟ್ಟಿದ್ದೇನೆ. ಚಿತ್ರೀಕರಣ ಪೂರ್ತಿ ಮುಗಿದ ಮೇಲೆ ಸೆಟ್ ವರ್ಕ್ ಚಿತ್ರೀಕರಣ ಸ್ಥಳಕ್ಕೆ ಕರೆಯುತ್ತೇವೆ. ಚಿತ್ರೀಕರಣ ಮುಗಿಯುವವರೆಗೆ ಬಹಳ ಗೌಪ್ಯತೆಯನ್ನು ಕಾಪಾಡಬೇಕಾಗುತ್ತದೆ. ಅಂತೆ ಕಂತೆಗಳ ಸುದ್ದಿ ಬಹಳಷ್ಟು ಹರಿದಾಡುತ್ತಿದೆ,ಆದರೆ ಚಿತ್ರದ ಬಗ್ಗೆ ಜನಕ್ಕೆ ನಿರೀಕ್ಷೆ ಹೋಗಬಾರದು. ಜನರು ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡಿದರೆ ಒಳ್ಳೆಯದು. ಚಿತ್ರ ತೆರೆಗೆ ಬರುವ ತನಕ ಗೌಪ್ಯತೆ ಕಾಪಾಡಬೇಕು ಜನಕ್ಕೆ ಕುತೂಹಲ ಇರಬೇಕು. ಪೂರ್ತಿ ಕರಾವಳಿ ಭಾಗದಲ್ಲಿ ಚಿತ್ರೀಕರಣ ಮಾಡುತ್ತೇವೆ ಎಂದು ತಿಳಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; ಐದನೇ ಆರೋಪಿಯ ಬಂಧನ

Salman Khan: ಇತ್ತೀಚೆಗೆ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ನಿವಾಸದ ಎದುರು ಗುಂಡಿನ ದಾಳಿ ನಡೆಸಿದ್ದ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ಸಂಭವಿಸಿದ್ದು, ಕ್ರೈಂ ಬ್ರ್ಯಾಂಚ್‌ ಐದನೇ ಆರೋಪಿಯನ್ನು ಬಂಧಿಸಿದ್ದಾರೆ. ʼʼರಾಜಸ್ತಾನದ ಮೊಹಮ್ಮದ್‌ ಚೌಧರಿಯನ್ನು ಬಂಧಿಸಲಾಗಿದ್ದು, ಈತ ಇಬ್ಬರು ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಅವರಿಗೆ ಹಣ ನೀಡಿದ್ದ ಮಾತ್ರವಲ್ಲ ಅವರು ಸ್ಥಳದಿಂದ ಪರಾರಿಯಾಗಲು ನರೆವಾಗಿದ್ದʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೊಹಮ್ಮದ್‌ ಚೌಧರಿಯನ್ನು ಇಂದು (ಮಂಗಳವಾರ) ಮುಂಬೈಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ವಿಚಾರಣೆಗಾಗಿ ಆತನನ್ನು ವಶಕ್ಕೆ ನೀಡುವಂತೆ ಮನವಿ ಸಲ್ಲಿಸಲಾಗುವುದು ಎಂದು ಮುಂಬೈ ಕ್ರೈಂ ಬ್ರ್ಯಾಂಚ್‌ ತಿಳಿಸಿದೆ.

VISTARANEWS.COM


on

Salman Khan
Koo

ಮುಂಬೈ: ಇತ್ತೀಚೆಗೆ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ (Salman Khan) ನಿವಾಸದ ಎದುರು ಗುಂಡಿನ ದಾಳಿ ನಡೆಸಿದ್ದ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ಸಂಭವಿಸಿದ್ದು, ಕ್ರೈಂ ಬ್ರ್ಯಾಂಚ್‌ ಐದನೇ ಆರೋಪಿಯನ್ನು ಬಂಧಿಸಿದ್ದಾರೆ. ʼʼರಾಜಸ್ತಾನದ ಮೊಹಮ್ಮದ್‌ ಚೌಧರಿಯನ್ನು ಬಂಧಿಸಲಾಗಿದ್ದು, ಈತ ಇಬ್ಬರು ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಅವರಿಗೆ ಹಣ ನೀಡಿದ್ದ ಮಾತ್ರವಲ್ಲ ಅವರು ಸ್ಥಳದಿಂದ ಪರಾರಿಯಾಗಲು ನರೆವಾಗಿದ್ದʼʼ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊಹಮ್ಮದ್‌ ಚೌಧರಿಯನ್ನು ಇಂದು (ಮಂಗಳವಾರ) ಮುಂಬೈಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ವಿಚಾರಣೆಗಾಗಿ ಆತನನ್ನು ವಶಕ್ಕೆ ನೀಡುವಂತೆ ಮನವಿ ಸಲ್ಲಿಸಲಾಗುವುದು ಎಂದು ಮುಂಬೈ ಕ್ರೈಂ ಬ್ರ್ಯಾಂಚ್‌ ತಿಳಿಸಿದೆ.

ಎಪ್ರಿಲ್‌ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿತ್ತು. ದಾಳಿ ನಡೆಸಿದ್ದ ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳನ್ನು ಬಳಿಕ ಅರೆಸ್ಟ್‌ ಮಾಡಲಾಗಿತ್ತು. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿದ್ದರು.

ಈ ಮಧ್ಯೆ ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿದ್ದ ಅನೂಜ್‌ ಥಾಪನ್‌ ಕೆಲವು ದಿನಗಳ ಹಿಂದೆ ಪೊಲೀಸ್‌ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದ. ಅನುಜ್ ಥಾಪನ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಆತನ ಕುಟುಂಬ ಇದರ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿತ್ತು. ಲಾಕಪ್‌ನಲ್ಲಿ ಥಾಪನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದರೆ ಆತನ ತಾಯಿ ಇದು ಕೊಲೆ ಎಂದು ಆರೋಪಿಸಿದ್ದರು.

ಗುಂಡಿನ ದಾಳಿಗೆ ಕಾರಣವೇನು?

ಹಲವು ವರ್ಷಗಳ ಹಿಂದಿನ ಕೃಷ್ಣಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್‌ ಅವರನ್ನು ಕೊಲ್ಲುವುದಾಗಿ 2018 ರಲ್ಲಿ ಬೆದರಿಕೆ ಹಾಕಿದ ನಂತರ ಬಿಷ್ಣೋಯ್ ಅವರ ಸಹಾಯಕರಲ್ಲಿ ಒಬ್ಬನನ್ನು ಬಂಧಿಸಲಾಯಿತು. ಜೋಧಪುರ್​ನ ಬಿಷ್ಣೋಯ್​ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ ಕೃಷ್ಣಮೃಗ ಕೊಲ್ಲುವುದನ್ನು ಬಿಷ್ಣೋಯ್​ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ. ಎಬಿಪಿ ನ್ಯೂಸ್‌ಗೆ ನೀಡಿದ ಇತ್ತೀಚಿನ ಸಂದರ್ಶನದಲ್ಲಿ, ʻʻಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ನನ್ನ ಜೀವನದ ಗುರಿ. ಸಲ್ಮಾನ್‌ ಅವರು ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ವಿಷಯ ಕೊನೆಗೊಳ್ಳುತ್ತದೆʼʼ ಎಂದು ಹೇಳಿದ್ದ.

ಇದನ್ನೂ ಓದಿ: Salman Khan: ಸಲ್ಮಾನ್‌ ಖಾನ್‌ ಮನೆ ಹೊರಗೆ ಗುಂಡಿನ ದಾಳಿ; ಶಂಕಿತರ ಫೋಟೊ ಬಿಡುಗಡೆ ಮಾಡಿದ ಪೊಲೀಸರು

ʼʼಸಲ್ಮಾನ್ ಖಾನ್ ಕ್ಷಮೆಯಾಚಿಸಿದರೆ, ಈ ವಿಷಯ ಕೊನೆಗೊಳ್ಳುತ್ತದೆ. ಸಲ್ಮಾನ್ ಅಹಂಕಾರಿ, ಗಾಯಕ ಮೂಸೆವಾಲಾ ಕೂಡ ಹಾಗೇ ಇದ್ದ. ಸಲ್ಮಾನ್ ಖಾನ್‌ನ ಅಹಂ ರಾವಣನಿಗಿಂತ ದೊಡ್ಡದಾಗಿದೆ. ಸಲ್ಮಾನ್ ಖಾನ್ ಬಗ್ಗೆ ನಮ್ಮ ಸಮಾಜದಲ್ಲಿ ಕೋಪವಿದೆ. ಅವರು ನನ್ನ ಸಮಾಜವನ್ನು ಅವಮಾನಿಸಿದರು. ಅವರ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಅವರು ಕ್ಷಮೆ ಕೇಳಲಿಲ್ಲʼʼ ಎಂದು ಲಾರೆನ್ಸ್ ಬಿಷ್ಣೋಯ್ ಹೇಳಿದ್ದ.

Continue Reading

ಸಿನಿಮಾ

Ramana Avatara Movie: ಬಂಪರ್ ಆಫರ್; ಕೇವಲ 99 ರೂ.ಗೆ ಸಿಗಲಿದೆ ‘ರಾಮನ ಅವತಾರ’ ಸಿನಿಮಾ ಟಿಕೆಟ್

Ramana Avatara Movie: ಸ್ಯಾಂಡಲ್‌ವುಡ್‌ನ ಭರವಸೆಯ ನಾಯಕ ರಿಷಿ ಮತ್ತು ಬಹುಭಾಷಾ ನಡಿ ಪ್ರಣೀತಾ ಸುಭಾಷ್‌ ಮೊದಲ ಬಾರಿ ತೆರೆ ಹಂಚಿಕೊಳ್ಳುತ್ತಿರುವ ಚಿತ್ರ ʼರಾಮನ ಅವತಾರʼ. ಈಗಾಗಲೇ ಈ ಚಿತ್ರ ಪ್ರೇಕ್ಷಕರ ಗಮನ ಸೆಳೆದಿದೆ. ಮೇ 10ರಂದು ಸಿನಿಮಾ ತೆರೆ ಕಾಣಲಿದೆ. ಇದೀ ಚಿತ್ರತಂಡ ಸಿನಿಮಾದ ಟಿಕೆಟ್ ಬೆಲೆಯನ್ನು ಕಡಿಮೆ ಮಾಡಲಾಗಿದೆ. ಸಿಂಗಲ್ ಸ್ಕ್ರೀನ್ ಜತೆಗೆ ಮಲ್ಟಿಫ್ಲೆಕ್ಸ್‌ಗಳಲ್ಲಿ ಟಿಕೆಟ್ ದರ ತಗ್ಗಿಸಲಾಗಿದ್ದು, ಕೇವಲ 99 ರೂ.ಗೆ ʼರಾಮನ ಅವತಾರʼ ಸಿನಿಮಾವನ್ನು ನೀವು ಕಣ್ತುಂಬಿಕೊಳ್ಳಬಹುದು.

VISTARANEWS.COM


on

Ramana Avatara Movie
Koo

ಬೆಂಗಳೂರು: ‘ಕವಲುದಾರಿ’ಯಂತಹ ಗಂಭೀರ ಸಿನಿಮಾ, ‘ನೋಡಿ ಸ್ವಾಮಿ ಇವನು ಇರೋದು ಹೀಗೆ’, ‘ಆಪರೇಷನ್ ಅಲಮೇಲಮ್ಮ’ ದಂತಹ ಕಾಮಿಡಿ ಚಿತ್ರಗಳಲ್ಲಿಯೂ ನಟಿಸಿ ಗಮನ ಸೆಳೆದಿರುವ ನಟ ರಿಷಿ (Rishi) ಇದೀಗ ‘ರಾಮನ ಅವತಾರ’ (Ramana Avatara Movie) ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಈಗಾಗಲೇ ಈ ಚಿತ್ರದ ಪ್ರಚಾರ ಕಾರ್ಯ ಕೂಡ ಭರದಿಂದ ಸಾಗುತ್ತಿದೆ. ವಿಭಿನ್ನ ಪ್ರಮೋಷನ್ ವಿಡಿಯೊ ಮೂಲಕ ʼರಾಮನ ಅವತಾರʼ ಬಳಗವೀಗ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಈಗ ಚಿತ್ರತಂಡದ ಕಡೆಯಿಂದ ಮೆಗಾ ಆಫರ್‌ ಸಿಕ್ಕಿದೆ. ʼರಾಮನ ಅವತಾರʼ ಸಿನಿಮಾದ ಟಿಕೆಟ್ ಬೆಲೆಯನ್ನು ಕಡಿಮೆ ಮಾಡಲಾಗಿದೆ. ಸಿಂಗಲ್ ಸ್ಕ್ರೀನ್ ಜತೆಗೆ ಮಲ್ಟಿಫ್ಲೆಕ್ಸ್‌ಗಳಲ್ಲಿ ಟಿಕೆಟ್ ದರ ತಗ್ಗಿಸಲಾಗಿದ್ದು, ಕೇವಲ 99 ರೂ.ಗೆ ʼರಾಮನ ಅವತಾರʼ ಸಿನಿಮಾವನ್ನು ನೀವು ಕಣ್ತುಂಬಿಕೊಳ್ಳಬಹುದು.

ಮೇ 9ಕ್ಕೆ ಪ್ರೀಮಿಯರ; ಮೇ 10ಕ್ಕೆ ಚಿತ್ರ ರಿಲೀಸ್

ʼರಾಮನ ಅವತಾರʼ ಚಿತ್ರ ಮೇ 10ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಮೇ 10ಕ್ಕೂ ಮುನ್ನ ಒಂದು ದಿನ ಮೊದಲು ಅಂದರೆ ಮೇ 9ರಂದು ಪೇಯ್ಡ್ ಪ್ರೀಮಿಯರ್ ಶೋ ಏರ್ಪಡಿಸಲಾಗಿದೆ. ಪೇಯ್ಡ್ ಪ್ರೀಮಿಯರ್ ಶೋ ಟಿಕೆಟ್ ದರ ಕೂಡ 99 ರೂ. ನಿಗದಿ ಮಾಡಲಾಗಿದೆ. ಜತೆಗೆ ಚಿತ್ರ ಬಿಡುಗಡೆ ದಿನ ಅಂದರೆ ಮೇ 10ಕ್ಕೂ ಕೂಡ ಟಿಕೆಟ್ ಬೆಲೆ 99 ರೂ. ಇರಲಿದೆ. ಒಟ್ಟಿನಲ್ಲಿ ಮೇ 9 ಹಾಗೂ ಮೇ 10ರಂದು ನೀವು ʼರಾಮನ ಅವತಾರʼ ಸಿನಿಮಾವನ್ನು 99 ರೂ.ಗೆ ವೀಕ್ಷಿಬಹುದು.

ʼರಾಮನ ಅವತಾರʼ ಸಿನಿಮಾದಲ್ಲಿ ರಿಷಿಗೆ ಜೋಡಿಯಾಗಿ ಪ್ರಣೀತಾ ಸುಭಾಷ್  ಹಾಗೂ ಶುಭ್ರ ಅಯ್ಯಪ್ಪ ಸಾಥ್ ಕೊಟ್ಟಿದ್ದಾರೆ. ಅರುಣ್ ಸಾಗರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಕಾಸ್ ಪಂಪಾಪತಿ ಸಾರಥ್ಯದಲ್ಲಿ ಚಿತ್ರ ಮೂಡಿ ಬಂದಿದ್ದು, ನಿರ್ದೇಶಕರಾಗಿ ಇವರಿಗೆ ಇದು ಮೊದಲ ಸಾಹಸ. ʼರಾಮನ ಅವತಾರʼ ಸಿನಿಮಾದ ಮೂಲಕ ವಿಕಾಸ್ ಮಾರ್ಡನ್ ರಾಮನ ಕಥೆಯನ್ನು ಹೇಳೋದಿಕ್ಕೆ ಹೊರಟಿದ್ದಾರೆ. ಟ್ರೈಲರ್‌ ನೋಡುತ್ತಿದ್ದರೆ ರಾಮಾಯಣ ನೆನಪಿಸುವ ಒಂದಷ್ಟು ದೃಶ್ಯಗಳು ಕಾಣುತ್ತವೆ. ರಾಮ ಹೆಗೆ ಜೆಂಟಲ್ ಮ್ಯಾನ್ ಆಗ್ತಾನೆ? ರಾವಣನ ರೀತಿ ಸಮಸ್ಯೆಗಳನ್ನು ಹೇಗೆ ಎದುರಿಸ್ತಾನೆ ಎನ್ನುವುದನ್ನು ಕಟ್ಟಿ ಕೊಡಲಾಗದೆ.

ಸ್ಟಾರ್ ಫ್ಯಾಬ್ ಪ್ರೊಡಕ್ಷನ್ನಡಿ ‘ಆಪರೇಷನ್ ಅಲಮೇಲಮ್ಮ’ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್ ಈ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಕೈಚಳಕವಿದ್ದು, ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದು, ಅಮರನಾಥ್ ಸಂಲಕನವಿದೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಶೂಟಿಂಗ್ ನಡೆಸಲಾಗಿದೆ.

ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಿರ್ದೇಶಕ ವಿಕಾಸ್ ಪಂಪಾಪತಿ, ʻʻಈ ಸಿನಿಮಾ ಕ್ಯಾರೆಕ್ಟರ್ ಜರ್ನಿ ಹೇಳುತ್ತಿದ್ದೇವೆ. ರಾಮ ಪಾತ್ರಧಾರಿ ಅವನಿಗೆ ಅವನೇ ಜೆಂಟಲ್ ಮ್ಯಾನ್ ಎಂದು ಹೇಳಿಕೊಂಡು ಓಡಾಡುತ್ತಾ ಇರುತ್ತಾನೆ. ಅವನು ಹೇಗೆ ಜೆಂಟಲ್ ಮ್ಯಾನ್ ಆಗುತ್ತಾನೆ? ಅವನ ಜೀವನದಲ್ಲಿ ನಡೆದ ಘಟನೆಗಳು ಅವನನ್ನು ಹೇಗೆ ಬದಲಾಯಿಸುತ್ತದೆ? ರಾಮನ ಹೇಗೆ ಜೆಂಟಲ್ ಮ್ಯಾನ್ ಆಗುತ್ತಾನೆ? ಎನ್ನುವುದನ್ನು ಎಂಟರ್ಟೈನಮೆಂಟ್ ಆಗಿ ಹೇಳಿದ್ದೇವೆ. ರಾಮನ ಅವತಾರ ಎಂದು ಹೇಗೆ ಹೆಸರಟ್ಟಿದ್ದೇವೆ ಎಂದರೆ ಎಲ್ಲರ ಲೈಫ್ ನಲ್ಲಿಯೂ ಒಂದಲ್ಲ ಒಂದು ರಾಮಾಯಣ ನಡೆಯುತ್ತದೆ. ಸೀತೆ ತರ ಹೆಂಡತಿ, ಲಕ್ಷ್ಮಣ ರೀತಿ ತಮ್ಮ, ರಾವಣನಿಂದ ಆಗುವ ಸಮಸ್ಯೆ. ಈ ರೀತಿ ಸಮಸ್ಯೆಗಳು ಎಲ್ಲರ ಜೀವನದಲ್ಲಿ ನಡೆಯುತ್ತವೆ. ಆ ಘಟನೆಗಳನ್ನು ಚಿತ್ರದಲ್ಲಿ ತೋರಿಸಲಾಗಿದೆʼʼ ಎಂದು ತಿಳಿಸಿದ್ದರು.

ಇದನ್ನೂ ಓದಿ: Cauvery Theatre: ಬೆಂಗಳೂರಿನಲ್ಲಿ ಪ್ರದರ್ಶನ ನಿಲ್ಲಿಸಿದ ʻಕಾವೇರಿʼ ಥಿಯೇಟರ್! ಮುಂದೇನು?

Continue Reading
Advertisement
Ranveer Singh Wedding Pics With Deepika Padukone
ಸ್ಯಾಂಡಲ್ ವುಡ್29 seconds ago

Ranveer Singh: ಮಗುವಿನ ನಿರೀಕ್ಷೆ ಹೊಸ್ತಿಲಲ್ಲೇ ಮದುವೆ ಫೋಟೊಗಳು ಡಿಲಿಟ್‌! ದೀಪಿಕಾ ಜತೆ ರಣವೀರ್ ಕಿರಿಕ್‌?

EVMs damage
ದೇಶ9 mins ago

EVMs Damage: ಚುನಾವಣಾ ಸಿಬ್ಬಂದಿ ಇದ್ದ ಬಸ್‌ನಲ್ಲಿ ಬೆಂಕಿ ಅವಘಡ; ಮತಯಂತ್ರಗಳು ಡ್ಯಾಮೇಜ್‌

Manali Tour
ಪ್ರವಾಸ33 mins ago

Manali Tour: ಭೂಲೋಕದ ಸ್ವರ್ಗ ಮನಾಲಿಗೆ ಪ್ರವಾಸ ಮಾಡಲು ಯಾವ ಸಮಯ ಸೂಕ್ತ?

Akshaya Tritiya 2024
ಧಾರ್ಮಿಕ33 mins ago

Akshaya Tritiya 2024: ಅಕ್ಷಯ ತೃತೀಯ ಅಂದರೆ ಚಿನ್ನ ಖರೀದಿಯೊಂದೇ ಅಲ್ಲ! ಹೀಗೆ ಮಾಡಿಯೂ ಸಮೃದ್ಧಿ ಹೊಂದಬಹುದು!

Prajwal Revanna Case HD Revanna bail plea to be heard tomorrow Jail or Bela
ಕ್ರೈಂ43 mins ago

Prajwal Revanna Case: ಇಂದು ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಜೈಲಾ? ಬೇಲಾ?

woman murder case divya
ಕ್ರೈಂ55 mins ago

Murder Case: ಮಾಜಿ ಪ್ರಿಯಕರನಿಂದ ಮಹಿಳೆಯ ಕೊಲೆ, ಕಾರಣ ನಿಗೂಢ

Uttarakhand Wildfire
ದೇಶ59 mins ago

Uttarakhand Wild fire:5 ತಿಂಗಳು.. 910 ಕಾಡ್ಗಿಚ್ಚು ಪ್ರಕರಣ;ಸುಪ್ರೀಂಕೋರ್ಟ್‌ನಲ್ಲಿ ಇಂದು ತುರ್ತು ವಿಚಾರಣೆ

nanna desha nanna dani column
ಅಂಕಣ1 hour ago

ನನ್ನ ದೇಶ ನನ್ನ ದನಿ ಅಂಕಣ: ಚೀನಾ ದೇಶದ ಪ್ರಾಚೀನ ದೊರೆಗಳು ನಮಗೆ ಪ್ರೇರಣೆ ನೀಡಲಿ

Ghee Testing Method
ಆಹಾರ/ಅಡುಗೆ2 hours ago

Ghee Testing Method: ನಾವು ತಿನ್ನುವ ತುಪ್ಪ ಶುದ್ಧವಾಗಿದೆಯೇ ಎಂದು ಪರೀಕ್ಷಿಸುವುದು ಹೇಗೆ? ಇಲ್ಲಿದೆ ವಿಧಾನ

karnataka weather Forecast
ಮಳೆ2 hours ago

Karnataka Weather : ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ12 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ15 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ16 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌