Pay CM ಬಳಿಕ Say CM ಅಭಿಯಾನ: ಬಿಜೆಪಿಯಿಂದ Say Rahul, Sonia, DK ಮೂಲಕ ಕೌಂಟರ್‌! - Vistara News

ಉತ್ತರ ಕನ್ನಡ

Pay CM ಬಳಿಕ Say CM ಅಭಿಯಾನ: ಬಿಜೆಪಿಯಿಂದ Say Rahul, Sonia, DK ಮೂಲಕ ಕೌಂಟರ್‌!

ಕಾಂಗ್ರೆಸ್‌ನ ಸೇ ಸಿಎಂ ಅಭಿಯಾನ ಎಚ್ಚರಿಕೆಗೆ ಪ್ರತಿಯಾಗಿ ಬಿಜೆಪಿ ಕೂಡಾ ಅಭಿಯಾನಕ್ಕೆ ಮುಂದಾಗಿದೆ. ಅದು ಸೋನಿಯಾ, ರಾಹುಲ್‌, ಡಿಕೆಶಿ ಬೇಲ್‌ನಲ್ಲಿರುವುದೇಕೆ ಎಂದು ಪ್ರಶ್ನಿಸಿದೆ.

VISTARANEWS.COM


on

say Rahul gandhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: Pay CM ಅಭಿಯಾನ ಭಾರಿ ಸದ್ದು ಮಾಡಿದ ಬೆನ್ನಿಗೇ ಕಾಂಗ್ರೆಸ್‌ ಈಗ Say CM ಅಭಿಯಾನ ನಡೆಸುವ ಎಚ್ಚರಿಕೆ ನೀಡಿದೆ. ತಾನು ಕೇಳಿದ ಐವತ್ತು ಪ್ರಶ್ನೆಗಳಿಗೆ ಒಂದಕ್ಕೂ ಉತ್ತರ ಕೊಟ್ಟಿಲ್ಲ ಎನ್ನುವುದು ಕಾಂಗ್ರೆಸ್‌ ಆರೋಪ. ಹೀಗಾಗಿ ಪ್ರಶ್ನೆಗಳಿಗೆ ಉತ್ತರ ಕೊಡಿ, ಮಾತನಾಡಿ ಎನ್ನುವ ಆಗ್ರಹದೊಂದಿಗೆ ಏನಾದರೂ ಹೇಳಿ ಸಿಎಂ ಎಂಬರ್ಥದಲ್ಲಿ ʻSay CM’ ಅಭಿಯಾನ ಶುರು ಮಾಡಬೇಕಾಗುತ್ತದೆ ಎಂದು ಕಾಂಗ್ರೆಸ್‌ ಎಚ್ಚರಿಕೆ ಕೊಟ್ಟಿದೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ಕೂಡಾ ಪ್ರತಿ ಅಭಿಯಾನ ಶುರು ಮಾಡಿದೆ. ಅದು ಪ್ರಧಾನವಾಗಿ ಸೋನಿಯಾ ಗಾಂಧಿ, ರಾಹುಲ್‌ ಮತ್ತು ಡಿಕೆಶಿ ಅವರನ್ನು ಟಾರ್ಗೆಟ್‌ ಮಾಡಿದೆ.

ಉತ್ತರ ಕೊಡಿ ಬೊಮ್ಮಾಯಿಯವರೇ?
ಮಂಗಳವಾರ ಕಾಂಗ್ರೆಸ್ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಎಂಎಲ್ಸಿ ರಮೇಶ್ ಬಾಬು ಹಾಗೂ ಶಾಸಕ ಪ್ರಸಾದ್ ಅಬ್ಬಯ್ಯ ಅವರು ನಾವು ಬಿಜೆಪಿಗೆ ೫೦ ಪ್ರಶ್ನೆಗಳನ್ನು ಕೇಳಿದ್ದೆವು. ಒಂದಕ್ಕೂ ಉತ್ತರ ಕೊಟ್ಟಿಲ್ಲ ಎಂದು ಆರೋಪಿಸಿದ್ದರು. ಸಿಎಂ ಬಸವರಾಜ ಬೊಮ್ಮಾಯಿ ಅವರು ಮೂಕ ಬಸವನ ಹಾಗೆ ಕೂತರೆ ಆಗುವುದಿಲ್ಲ… ಉತ್ತರ ಕೊಡಬೇಕು.. ಇಲ್ಲವಾದರೆ ಸೇ ಸಿಎಂ ಅಭಿಯಾನ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದರು.

ಕಾಂಗ್ರೆಸ್‌ ನಾಯಕರ ಆರೋಪಗಳು
* ಭಾರತ್‌ ಜೋಡೋ ಯಾತ್ರೆಗೆ ಕೌಂಟರ್ ಎನ್ನುವ ರೀತಿಯಲ್ಲಿ ಜನ ಸಂಕಲ್ಪ ಮಾಡ್ತಾ ಇದ್ದಾರೆ. ಸಂಕಲ್ಪ, ಬದಲಾವಣೆಗಾಗಿ ಬಿಜೆಪಿ, ಈ ಬಾರಿ ಬಿಜೆಪಿ ಎಂಬ ಟೈಟಲ್ ಕೊಡ್ತಾನೆ ಬಂದಿದ್ದಾರೆ. ಅವರು ನಾವು ಕೇಳೋ ಪ್ರಶ್ನೆಗಳಿಗೆ ಉತ್ತರ ಕೊಡುವುದಿಲ್ಲ. ಯಾಕೆಂದರೆ, ಅವರ ಭಾಷಣಗಳೆಲ್ಲ ಸ್ಕ್ರಿಪ್ಟೆಡ್‌. ಯಡಿಯೂರಪ್ಪ, ಸಿಎಂ ಬೊಮ್ಮಾಯಿ, ನಳಿನ್‌ ಕುಮಾರ್‌ ಕಟೀಲ್, ಶ್ರೀ ರಾಮುಲು ಎಲ್ಲರೂ ಒಂದೇ ರೀತಿಯ ಭಾಷಣ ಮಾಡುತ್ತಾರೆ. ಜತೆಗೆ ವೈಯಕ್ತಿಕ ಟೀಕೆ ಮಾಡ್ತಾರೆ. ಒಂದೇ ರೀತಿ ಭಾಷಣ ಯಾಕೆ ಮಾಡ್ತಾರೆ ಅಂದರೆ ಅವರು ಮಾಡುವ ಭಾಷಣ ಕೇಶವ ಕೃಪಾದಿಂದ ಬಂದಿರುತ್ತದೆ!

*ಬಿಜೆಪಿ ಯುವಕರಿಗೆ ಶಿಕ್ಷಣ ಉದ್ಯೋಗ ನೀಡುವ ಬದಲಾಗಿ ಧರ್ಮ ರಕ್ಷಣೆ, ಗೋರಕ್ಷಣೆ ಬಿರುದು ನೀಡುತ್ತಿದೆ. ಯುವಕರ ಭವಿಷ್ಯದ ಜೊತೆಗೆ ಬಿಜೆಪಿ ಚೆಲ್ಲಾಟ ಆಡುತ್ತಿದೆ.
* ಪರೇಶ್ ಮೇಸ್ತಾ ಸಾವಿನ ಬಗ್ಗೆ ಸಿಬಿಐ ವರದಿ ಬಂದಿದೆ. ವರದಿಯಲ್ಲಿ ಎಲ್ಲವನ್ನೂ ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ. ಹೆಣದ ಮೇಲೆ ರಾಜಕೀಯ ಮಾಡಿದ ಶೋಭಾ ಕರಂದ್ಲಾಜೆ, ಕೆ.ಎಸ್.‌ ಈಶ್ವರಪ್ಪ ಮೊದಲಾದದವರು ಕ್ಷಮೆ ಕೇಳಬೇಕು.

* ಪರೇಶ್‌ ಮೇಸ್ತ ಕೊಲೆ ಆದಾಗ ಅದನ್ನು ಕಾಂಗ್ರೆಸ್‌ ತಲೆಗೆ ಕಟ್ಟಲಾಯಿತು. ಕೋಮು‌ವಿಷ ಬೀಜ ಬಿತ್ತಿ ಯುವಕರ ಭವಿಷ್ಯ ಹಾಳು ಮಾಡುವ ಕೆಲಸ ಮಾಡಲಾಯಿತು. ಶೋಭಾ ಕರಂದ್ಲಾಜೆ ಪರೇಶ್ ಮೇಸ್ತ ಸಾವಿಗೆ ಜಿಹಾದಿ ಶಕ್ತಿಗಳು ಕಾರಣ ಎಂದಿದ್ದರು. ಚಿತ್ರ ಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದಿದ್ದರು. ಪರೇಶ್ ಮೇಸ್ತ ಕೈಕಡಿಯಲಾಗಿದೆ ಎಂದು ಹೇಳಿದ್ದರು. ಸಿದ್ದರಾಮಯ್ಯ ಸರ್ಕಾರದಲ್ಲಿ ಇನ್ನೆಷ್ಟು ಹಿಂದೂ ಕಾರ್ಯಕರ್ತರ ಹತ್ಯೆ ನಡೆಯಬೇಕು ಎಂದು ಪ್ರಶ್ನೆ ಮಾಡಿದ್ದರು. ಸಿಬಿಐ ವರದಿಯಲ್ಲಿ ಪರೇಶ್ ಮೇಸ್ತ ಕೈಮೇಲೆ ಇರುವ ಶಿವಾಜಿ ಟ್ಯಾಟೋ‌ ಹಾಗೇ ಇದೆ ಎಂದಿದೆ. ಈ ವಿಷಯದಲ್ಲಿ ಶೋಭಾ ಕರಂದ್ಲಾಜೆ,‌ ಕೆ.ಎಸ್ ಈಶ್ವರಪ್ಪ, ಸಿ.ಟಿ ರವಿ, ನಳಿನ್ ಕುಮಾರ್, ಅನಂತ್ ಕುಮಾರ್ ದಾರಿ ತಪ್ಪಿಸಿ ರಾಜ್ಯದಲ್ಲಿ ಬೆಂಕಿ ಹಚ್ಚಲು ಕಾರಣರಾಗಿದ್ದರು. ಇವರ ಮೇಲೆ ಕೇಸ್ ಬುಕ್ ಮಾಡಲು ಸಿಎಂಗೆ ತಾಕತ್ತು ಇದ್ಯಾ? ೧೫ ದಿನದ ಒಳಗೆ ಕೇಸ್‌ ಹಾಕದಿದ್ದರೆ ಸಿಬಿಐಗೆ ದೂರು ನೀಡುತ್ತೇವೆ.

ಬಿಜೆಪಿಯಿಂದ ಕೌಂಟರ್‌ ಅಭಿಯಾನ
ಸೇ ಸಿಎಂ ಅಭಿಯಾನಕ್ಕೆ ಪ್ರತಿಯಾಗಿ ಕಾಂಗ್ರೆಸ್‌ ನಾಯಕರನ್ನು ಗುರಿಯಾಗಿಟ್ಟುಕೊಂಡು ಬಿಜೆಪಿಯೂ ಪ್ರತಿ ದಾಳಿ ಶುರು ಮಾಡಿದೆ. ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಮತ್ತು ಡಿ.ಕೆ. ಶಿವಕುಮಾರ್‌ ಅವರು ಜಾಮೀನಿನ ಮೇಲೆ ಇರುವುದನ್ನು ಮುಂದಿಟ್ಟು ನೀವ್ಯಾಕೆ ಬೇಲ್‌ ಮೇಲೆ ಇದ್ದೀರಿ ಹೇಳಿ ಎಂದು ಪ್ರಶ್ನಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Uttara Kannada News: ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ವಿರೋಧಿಸಿ ಯಲ್ಲಾಪುರದಲ್ಲಿ ಬಿಜೆಪಿಯಿಂದ ಪ್ರತಿಭಟನೆ

Uttara Kannada News: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಮಾಡಿರುವುದನ್ನು ವಿರೋಧಿಸಿ ಯಲ್ಲಾಪುರ ಬಿಜೆಪಿ ಮಂಡಲದ ವತಿಯಿಂದ ಯಲ್ಲಾಪುರ ಪಟ್ಟಣದಲ್ಲಿ ಗುರುವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.

VISTARANEWS.COM


on

Protest by BJP in Yallapur against petrol and diesel price hike
Koo

ಯಲ್ಲಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಮಾಡಿರುವುದನ್ನು ವಿರೋಧಿಸಿ, ಯಲ್ಲಾಪುರ ಬಿಜೆಪಿ ಮಂಡಲದ ವತಿಯಿಂದ ಪಟ್ಟಣದಲ್ಲಿ ಗುರುವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ (Uttara Kannada News) ನಡೆಸಲಾಯಿತು.

ಪ್ರತಿಭಟನೆಯಲ್ಲಿ ಬಿಜೆಪಿ ಹಿರಿಯ ಮುಖಂಡ ಉಮೇಶ ಭಾಗ್ವತ್ ಮಾತನಾಡಿ, ಸಿದ್ದರಾಮಯ್ಯನವರು ವಿರೋಧ ಪಕ್ಷದಲ್ಲಿದ್ದಾಗ ಬೆಲೆ ಏರಿಕೆಯನ್ನು ತೀವ್ರವಾಗಿ ಖಂಡಿಸಿದ್ದರು. ಆದರೆ ಈಗ ಗ್ಯಾರಂಟಿ ಯೋಜನೆಗಳು ಜಾರಿಗೆ ತಂದು, ಅಭಿವೃದ್ಧಿ ಕಾರ್ಯ ಮಾಡಲು ರಾಜ್ಯದ ಬೊಕ್ಕಸದಲ್ಲಿ ಹಣವಿಲ್ಲದೆ ದಿನ ನಿತ್ಯದ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಜನಸಾಮಾನ್ಯರ ಮೇಲೆ ಹೊರೆಯಾಗಿಸಿದೆ.

ಇದನ್ನೂ ಓದಿ: Working Hours: ಅತಿ ಹೆಚ್ಚು ಕೆಲಸದ ಸಮಯ ಹೊಂದಿರುವ ದೇಶಗಳಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ?

ಕಾಂಗ್ರೆಸ್ ಸರ್ಕಾರದ ಶಾಸಕರೇ ಇಂದು ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ತೈಲ ಬೆಲೆ ಏರಿಕೆ ನೇರವಾಗಿ ಎಲ್ಲಾ ವಸ್ತುಗಳ ಬೆಲೆ ಏರಿಕೆಗೆ ಕಾರಣವಾಗುತ್ತದೆ. ಗ್ಯಾರಂಟಿ ಯೋಜನೆಗಳಿಗಾಗಿ ಜನರ ಬದುಕನ್ನು ದುಸ್ತರವಾಗಿಸುವ ಕಾಂಗ್ರೆಸ್ ಸರ್ಕಾರಕ್ಕೆ ನಮ್ಮ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Gold Rate Today: ಮತ್ತೆ ಏರಿಕೆಯಾದ ಚಿನ್ನದ ದರ; ಇಂದಿನ ಬೆಲೆ ಹೀಗಿದೆ

ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ, ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರುತಿ ಹೆಗಡೆ, ಹಿರಿಯ ನಾಯಕ ರಾಮು ನಾಯ್ಕ್, ಗೋಪಾಲಕೃಷ್ಣ ಗಾವಂಕರ್, ಶಿವಲಿಂಗಯ್ಯ ಅಲ್ಲಯ್ಯನವರಮಠ, ಪ.ಪಂ ಸದಸ್ಯರಾದ ಕಲ್ಪನಾ ನಾಯ್ಕ, ಸೋಮೇಶ್ವರ ನಾಯ್ಕ, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Continue Reading

ಉತ್ತರ ಕನ್ನಡ

Uttara Kannada News: ಅವಧಿಯೊಳಗೆ ಕಾಮಗಾರಿ ಮುಕ್ತಾಯಗೊಳಿಸದ ಗುತ್ತಿಗೆದಾರರನ್ನು ಬ್ಲ್ಯಾಕ್ ಲಿಸ್ಟ್‌ಗೆ ಸೇರಿಸಿ: ಸಚಿವ ಮಂಕಾಳ ವೈದ್ಯ

Uttara Kannada News: ಜಿಲ್ಲೆಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಗುತ್ತಿಗೆ ವಹಿಸಿಕೊಂಡಿರುವ ಗುತ್ತಿಗೆದಾರರು ಮತ್ತು ಗುತ್ತಿಗೆ ಕಂಪನಿಗಳು ನಿಗಧಿ ಅವಧಿಯೊಳಗೆ ಕಾಮಗಾರಿಗಳನ್ನು ಮುಕ್ತಾಯಗೊಳಿಸದೇ ಇದ್ದಲ್ಲಿ ಅಂತಹವರನ್ನು ಕಪ್ಪುಪಟ್ಟಿಗೆ ಸೇರ್ಪಡೆ ಮಾಡುವಂತೆ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

VISTARANEWS.COM


on

Blacklist contractors who do not complete work within time says Minister Mankala Vaidya
Koo

ಕಾರವಾರ: ಜಿಲ್ಲೆಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳ ಗುತ್ತಿಗೆ ವಹಿಸಿಕೊಂಡಿರುವ ಗುತ್ತಿಗೆದಾರರು ಮತ್ತು ಗುತ್ತಿಗೆ ಕಂಪನಿಗಳು ನಿಗಧಿ ಅವಧಿಯೊಳಗೆ ಕಾಮಗಾರಿಗಳನ್ನು ಮುಕ್ತಾಯಗೊಳಿಸದೇ ಇದ್ದಲ್ಲಿ ಅಂತಹವರನ್ನು ಕಪ್ಪುಪಟ್ಟಿಗೆ ಸೇರ್ಪಡೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್. ವೈದ್ಯ ಎಲ್ಲಾ ಅಧಿಕಾರಿಗಳಿಗೆ (Uttara Kannada News) ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 450 ಹಾಸಿಗೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡ ಕಾಮಗಾರಿಯು ನಿಗಧಿತ ಒಪ್ಪಂದದಂತೆ ಮುಕ್ತಾಯಗೊಂಡು ಮಾರ್ಚ್ ತಿಂಗಳಲ್ಲಿ ಕಟ್ಟಡ ಹಸ್ತಾಂತರವಾಗಬೇಕಿತ್ತು. ಆದರೆ ಇಲ್ಲಿಯವರೆಗೆ ಹಸ್ತಾಂತರವಾಗದ ಹಿನ್ನಲೆಯಲ್ಲಿ ರೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ಯೋಜನೆಯ ಪ್ರಯೋಜನ ದೊರೆಯದೇ ಚಿಕಿತ್ಸೆಗೆ ಪರದಾಡುವಂತಾಗಿದೆ.

ಅಲ್ಲದೇ ಜಿಲ್ಲೆಯಲ್ಲಿ ಕೈಗೊಂಡಿರುವ ಹಲವು ಅಭಿವೃದ್ದಿ ಕಾಮಗಾರಿಗಳ ಗುತ್ತಿಗೆ ವಹಿಸಿಕೊಂಡಿರುವ ಇತರೆ ಗುತ್ತಿಗೆದಾರರು ಮತ್ತು ಗುತ್ತಿಗೆ ಕಂಪನಿಗಳು ನಿಗಧಿತ ಅವಧಿಯೊಳಗೆ ಕಾಮಗಾರಿಗಳನ್ನು ಮುಕ್ತಾಯಗೊಳಿದೇ ಇದ್ದಲ್ಲಿ ಅವರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಮತ್ತು ಯಾವುದೇ ಕಾರಣಕ್ಕೂ ಟೆಂಡರ್ ಅವಧಿಯನ್ನು ವಿಸ್ತರಣೆ, ನವೀಕರಣ ಸೇರಿದಂತೆ ಬಿಲ್ಲು ಪಾವತಿಯನ್ನೂ ಸಹ ಮಾಡದಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದನ್ನೂ ಓದಿ: DK Shivakumar: ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನದಿಂದ ನನ್ನ ಹೊಸ ರಾಜಕೀಯ ಅಧ್ಯಾಯ ಪ್ರಾರಂಭ: ಡಿ.ಕೆ.ಶಿ

ಜಿಲ್ಲೆಯಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳಿಗೆ ಸರ್ಕಾರಿ ಕೋಟದಲ್ಲಿ ಎಂಬಿಬಿಎಸ್ ಪದವಿ ಪೂರ್ಣಗೊಳಿಸಿದ್ದ 61 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಅದರಲ್ಲಿ 24 ವೈದ್ಯರು ಹೇಳದೇ ಕೇಳದೇ ಕೆಲಸ ಬಿಟ್ಟು ಹೋಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನೀರಜ್ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಪದವಿ ಪಡೆಯುವ ವಿದ್ಯಾರ್ಥಿಗೆ ಸರ್ಕಾರವು ಸುಮಾರು 2 ಕೋಟಿ ರೂ ಅಧಿಕ ಮೊತ್ತವನ್ನು ವೆಚ್ಚ ಮಾಡುತ್ತಿದ್ದು, ವೈದ್ಯಕೀಯ ಪದವಿ ಪಡೆದ ಇಂತಹ ವೈದ್ಯರು ಕಡ್ಡಾಯ ಸರ್ಕಾರಿ ಸೇವೆ ಸಲ್ಲಿಸಬೇಕು ಎಂಬ ನಿಯಮವಿದ್ದು, ಅದರಂತೆ ಕೆಲಸಕ್ಕೆ ಸೇರಿ, ಉತ್ತಮ ವೇತನ ನೀಡಿದರೂ ಕೂಡಾ ಯಾವುದೇ ಸೂಕ್ತ ಕಾರಣ ನೀಡದೇ ಕೆಲಸ ಬಿಟ್ಟು ಹೋಗಿರುವ ಬಗ್ಗೆ ತೀವ್ರ ಅಸಮಧಾನ ವ್ಯಕ್ತಪಡಿಸಿದ ಸಚಿವರು, ಅಂತಹ ವೈದ್ಯರ ವಿರುದ್ದ ಕಾನೂನು ಸಲಹೆ ಪಡೆದು ಪ್ರಕರಣ ದಾಖಲಿಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಆಸ್ಪತ್ರೆಗಳಿಗೆ ಬರುವ ರೋಗಿಗಳನ್ನು ವೈದ್ಯರು ಮತ್ತು ಸಿಬ್ಬಂದಿಗಳು ಗೌರವದಿಂದ ಕಾಣುವುದರ ಜತೆಗೆ ಸೌಜನ್ಯದಿಂದ ನಡೆದುಕೊಳ್ಳಬೇಕು ಹಾಗೂ ಆಸ್ಪತ್ರೆಗೆ ಬರುವವರು ಬಡಜನತೆಯಾಗಿದ್ದು, ಅವರಿಗೆ ಚೀಟಿ ನೀಡಿ ಹೊರಗಡೆಯಿಂದ ಔಷಧ ಪಡೆಯಲು ತಿಳಿಸುವ ವೈದ್ಯರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಹಾಗೂ ಆಸ್ಪತ್ರೆಯಲ್ಲಿ ಔಷಧಿ ಲಭ್ಯವಿಲ್ಲದಿದ್ದಲ್ಲಿ ಆರೋಗ್ಯ ರಕ್ಷಾ ಸಮಿತಿಯ ಮೂಲಕ ಖರೀದಿಸಿ, ರೋಗಿಗಳಿಗೆ ಆಸ್ಪತ್ರೆಯಲ್ಲಿಯೇ ಔಷಧಗಳನ್ನು ಉಚಿತವಾಗಿ ನೀಡಬೇಕು ಎಂದು ಸೂಚಿಸಿದ ಸಚಿವರು, ಜಿಲ್ಲಾ ಆಸ್ಪತ್ರೆಗೆ ಬೇಕಾದ ಎಂ.ಆರ್.ಐ ಯಂತ್ರವನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲೆಯಲ್ಲಿ ಒಟ್ಟು 112 ಮಂಗನಕಾಯಿಲೆ ಪ್ರಕರಣಗಳು ವರದಿಯಾಗಿದ್ದು, 9 ಮಂದಿ ಮೃತಪಟ್ಟಿದ್ದಾರೆ ಎಂಬ ಆರೋಗ್ಯ ಇಲಾಖೆಯ ಮಾಹಿತಿಯ ಕುರಿತಂತೆ, ಮಂಗನ ಕಾಯಿಲೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದರ ಜತೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಕಾಡು ಪ್ರಾಣಿಯಿಂದ ಮರಣ ಹೊಂದಿದವರಿಗೆ ಅರಣ್ಯ ಕಾಯ್ದೆಯಡಿಯಲ್ಲಿ 15 ಲಕ್ಷ ಪರಿಹಾರ ನೀಡಲು ಅವಕಾಶವಿರುವುದರಿಂದ, ಮಂಗನ ಕಾಯಿಲೆಯಿಂದ ಮರಣ ಹೊಂದಿದವರನ್ನು ಮತ್ತು ಹಾವು ಕಡಿತದಿಂದ ಮರಣ ಹೊಂದಿದವರಿಗೆ ಈ ಕಾಯಿದೆಯಡಿಯಲ್ಲಿಯೇ ಪರಿಹಾರ ಒದಗಿಸುವ ಕುರಿತಂತೆ ಪ್ರಸ್ತಾವನೆ ಸಲ್ಲಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ: Lakshmi Hebbalkar: ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ‌ ಆದೇಶ ರದ್ದು? ಲಕ್ಷ್ಮೀ ಹೆಬ್ಬಾಳಕರ್ ಸುಳಿವು

ಜಿಲ್ಲೆಯಲ್ಲಿನ ಸರ್ಕಾರಿ ಜಾಗಗಳು ಯಾವುದೇ ಕಾರಣಕ್ಕೂ ಅತಿಕ್ರಮಣವಾಗದಂತೆ ಜಾಗದ ಸರ್ವೇ ಮಾಡಿಸಿ, ಅದಕ್ಕೆ ಕಂಪೌಂಡ್ ಹಾಕಬೇಕು. ಸರ್ಕಾರಿ ಜಾಗ ಅತಿಕ್ರಮಣವಾದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಗತಿಗೆ ಬೇಕಾದ ಎಲ್ಲಾ ಅಗತ್ಯ ಸಹಕಾರ ನೀಡಲಿದ್ದು, ಯಾವುದೇ ಮಗು ಶಿಕ್ಷಣದಿಂದ ವಂಚಿತರಾಗದಂತೆ ಕ್ರಮವಹಿಸಬೇಕು. ಈ ಬಾರಿಯ ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತಿರ್ಣವಾದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುಂಠಿತಗೊಳ್ಳಲು ಆದ ಸಮಸ್ಯೆ ಏನು ಎಂಬುದರ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು. ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಉತ್ತಮ ಮಾರ್ಗದರ್ಶನ ನೀಡಿ 100% ಉತ್ತೀರ್ಣರಾಗಲು ಶ್ರಮವಹಿಸಬೇಕು ಎಂದರು.

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಬಗ್ಗೆ ತೀವ್ರ ಅಸಮಧಾನ ವ್ಯಕ್ತಪಡಿಸಿದ ಸಚಿವರು, ಕಾಮಗಾರಿ ಆರಂಭಗೊಂಡು 9 ವರ್ಷಗಳು ಕಳೆದರೂ ಇನ್ನೂ ಮುಕ್ತಾಯಗೊಂಡಿಲ್ಲ, ಟೋಲ್ ಮಾತ್ರ ವಸೂಲಿ ಮಾಡುತ್ತಿದ್ದೀರಿ, ಪ್ರತೀ ಸಭೆಯಲ್ಲೂ ಕಾಮಗಾರಿಯ ಪ್ರಗತಿಯ ಬಗ್ಗೆ ಸೂಕ್ತ ಉತ್ತರ ದೊರೆಯುವುದಿಲ್ಲ. ಕಾಮಗಾರಿ ಮುಕ್ತಾಯಗೊಳಿಸದೇ ಶೇಖರಣೆ ಮಾಡಿಟ್ಟುಕೊಂಡಿರುವ ಜಲ್ಲಿ, ಮರಳು ಮತ್ತು ಕಲ್ಲುಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇನ್ನು 6 ತಿಂಗಳಲ್ಲಿ ಯೋಜನೆ ಪೂರ್ಣಗೊಳ್ಳಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಎಂಜಿನಿಯರ್ ಸಭೆಗೆ ತಿಳಿಸಿದರು.

ಮೀನುಗಾರರಿಗೆ ಸಂಕಷ್ಟ ಪರಿಹಾರ ಭತ್ಯೆಯನ್ನು 24 ಗಂಟೆಯೊಳಗೆ ನೀಡುವಂತೆ ಸೂಚನೆ ನೀಡಿದ ಸಚಿವರು, ಮೀನುಗಾರರಿಗೆ ಲಭ್ಯವಿರುವ ಯೋಜನೆಗಳ ಬಗ್ಗೆ ಮೀನುಗಾರರ ಸಂಘಗಳಿಗೆ ವಿವರವಾದ ಮಾಹಿತಿಯನ್ನು ನೀಡುವಂತೆ ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ಹಾಗೂ ಮೀನುಗಾರರ ಮಹಿಳೆಯರಿಗೆ ಹಾಗೂ ಮೀನುಗಾರಿಕೆ ಉದ್ದೇಶಕ್ಕೆ ನೀಡುವ ಸಾಲವನ್ನು ಅನಗತ್ಯ ಕಾರಣಗಳಿಂದ ತಿರಸ್ಕರಿಸದೇ ಸಕಾಲದಲ್ಲಿ ಸಾಲವನ್ನು ವಿತರಿಸಲು ಎಲ್ಲಾ ಬ್ಯಾಂಕ್‌ಗಳಿಗೆ ಸೂಚನೆ ನೀಡುವಂತೆ ಲೀಡ್ ಬ್ಯಾಂಕ್ ಮ್ಯಾನೇಜರ್‌ಗೆ ಸೂಚಿಸಿದರು.

ಜಿಲ್ಲೆಯಲ್ಲಿ ಮಂಜೂರಾದ ಅಂಗನವಾಡಿಗಳು ಮುಂದಿನ 6 ತಿಂಗಳ ಒಳಗೆ ಸ್ವಂತ ನಿವೇಶನ ಹಾಗೂ 1 ವರ್ಷದೊಳಗೆ ಸ್ವಂತ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುವಂತೆ ಮತ್ತು ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು.

ಕುಡಿಯುವ ನೀರಿನ ಯೋಜನೆಗಳಿಗಾಗಿ ರಸ್ತೆಗಳನ್ನು ಹಾಳು ಅಗೆದು ಹಾಳು ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ಜನಸಾಮಾನ್ಯರಿಗೆ ತೊಂದರೆಯಾಗದಂತೆ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಹಾಗೂ ಭಟ್ಕಳದಲ್ಲಿ ಒಳ ಚರಂಡಿ ಯೋಜನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮಕೈಗೊಂಡು, ಯೋಜನೆಯ ಬಗ್ಗೆ ಸ್ಥಳೀಯ ಮಟ್ಟದಲ್ಲಿ ಸಭೆಗಳನ್ನು ಕರೆದು ಅಗತ್ಯ ಮಾಹಿತಿ ನೀಡುವಂತೆ ಮತ್ತು ನಗರ ಸ್ಥಳೀಯ ಸಂಸ್ಥೆಯ ಸಮನ್ವಯದೊಂದಿಗೆ ಕಾಮಗಾರಿ ಮುಕ್ತಾಯಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.‌

ಇದನ್ನೂ ಓದಿ: Job Recruitment: ನಮ್ಮ ಮೆಟ್ರೋದಲ್ಲಿದೆ ಉದ್ಯೋಗ ಅವಕಾಶ; ಕೂಡಲೇ ಅರ್ಜಿ ಸಲ್ಲಿಸಿ

ಸಭೆಯಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್‌, ಜಿ.ಪಂ. ಸಿಇಒ ಈಶ್ವರ ಕುಮಾರ ಕಾಂದೂ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಕೆಡಿಪಿ ಅನುಷ್ಠಾನ ಸಮಿತಿಯ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಮಳೆ

Karnataka Weather : ಭಾರಿ ಮಳೆ ಜತೆಗೆ ಬೀಸಲಿದೆ ಬಿರುಗಾಳಿ; ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Weather Forecast : ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ (Heavy rain alert) ಬಿರುಗಾಳಿ ಬೀಸಲಿದ್ದು, ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ (Fisher Warning) ನೀಡಲಾಗಿದೆ. ಜತೆಗೆ ಮಲೆನಾಡು, ಒಳನಾಡಿನಲ್ಲೂ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು : ರಾಜ್ಯಾದ್ಯಂತ ಬುಧವಾರದಂದು ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಕೂಡಿರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಉತ್ತರ ಒಳನಾಡಿನ ಹಲವೆಡೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇತ್ತ ಮಲೆನಾಡಿನ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲೂ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Wild Animals Attack : ಮನೆಯಂಗಳವನ್ನು ಧ್ವಂಸ ಮಾಡಿದ ಆನೆಗಳು; ಗ್ರಾಮಕ್ಕೆ ಓಡೋಡಿ ಬಂದ ಕರಡಿ

9 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

ಗುಡುಗು, ಸಿಡಿಲು ಜತೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಮುಖ್ಯವಾಗಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಸೇರಿ ಒಳನಾಡಿನ ಚಿತ್ರದುರ್ಗ, ಮಂಡ್ಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕಡಲಿಗೆ ಮೀನುಗಾರರ ದಿಗ್ಬಂಧನ

ಕಡಲ ತೀರದಲ್ಲಿ ಅಲೆಗಳ ಅಬ್ಬರ ಜೋರಾಗಿ ಇರಲಿದ್ದು, ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್‌ 21ರವರೆಗೆ ಮೀನುಗಾರರು ಮೀನುಗಾರಿಕೆ ತೆರಳದಂತೆ ಸೂಚಿಸಲಾಗಿದೆ. ಜತೆಗೆ ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Banavasi News: ಹೆಬ್ಬತ್ತಿ ಗ್ರಾಮದಲ್ಲಿ ಕಾಡುಹಂದಿ ಬೇಟೆ; ಇಬ್ಬರ ಬಂಧನ

Banavasi News: ಬನವಾಸಿ ಅರಣ್ಯ ವಲಯದ ದಾಸನಕೊಪ್ಪ ಶಾಖೆಯ ಹೆಬ್ಬತ್ತಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಡುಹಂದಿ ಬೇಟೆ ಯಾಡಿ, ಮಾಂಸ ತಯಾರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬನವಾಸಿ ವಲಯ ಅರಣ್ಯಾಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.

VISTARANEWS.COM


on

Wild boar hunting in Hebbatti village Arrest of two accused
Koo

ಬನವಾಸಿ: ಬನವಾಸಿ ಅರಣ್ಯ ವಲಯದ ದಾಸನಕೊಪ್ಪ ಶಾಖೆಯ ಹೆಬ್ಬತ್ತಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಾಡುಹಂದಿ (Wild boar) ಬೇಟೆ ಯಾಡಿ, ಮಾಂಸ ತಯಾರಿಸಿ (Banavasi News) ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬನವಾಸಿ ವಲಯ ಅರಣ್ಯಾಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.

ಕಳೆದ ಜೂ.16ರಂದು ಕಾಡುಹಂದಿ ಬೇಟೆ ಯಾಡಿ ಮಾಂಸ ತಯಾರಿಸಿ ಪರಾರಿಯಾಗಿದ್ದರು. ಅರಣ್ಯ ಇಲಾಖೆ ಆರೋಪಿಗಳ ಪತ್ತೆಗೆ ಒಂದು ತಂಡವನ್ನು ರಚಿಸಿ, ಕಾರ್ಯಾಚರಣೆ ಕೈಗೊಂಡಾಗ ಸಂತೊಳ್ಳಿ ಗ್ರಾಮದ ಬಸವರಾಜ ಯಲ್ಲಪ್ಪ ಚನ್ನಯ್ಯ ಹಾಗೂ ಉಮೇಶ ಚನ್ನಪ್ಪ ಚನ್ನಯ್ಯ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Ballari News: ಕಂಪ್ಲಿಯ ದೇವಸಮುದ್ರ ಗ್ರಾಮದಲ್ಲಿ ಎರಡು ಕರಡಿ ಪ್ರತ್ಯಕ್ಷ!

ವಲಯ ಅರಣ್ಯಾಧಿಕಾರಿ ವರದಾ ರಂಗನಾಥ ಜಿ.ಎಚ್ ಅವರ ನೇತೃತ್ವದಲ್ಲಿ ಉಪ ವಲಯ ಅರಣ್ಯಾಧಿಕಾರಿ ಕಾರ್ತಿಕ ನಾರ್ವೆಕರ್, ಗಸ್ತು ಅರಣ್ಯ ಪಾಲಕರಾದ ದಯಾನಂದ ಬೊರ್ಕರ್, ಸಿದ್ದಪ್ಪ ನಾವಿ, ಅರಣ್ಯ ವೀಕ್ಷಕರಾದ ಚಂದ್ರು ಗೌಡ, ಗಿರೀಶ ಕುರುಬರ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading
Advertisement
Protest by BJP in Yallapur against petrol and diesel price hike
ಉತ್ತರ ಕನ್ನಡ12 mins ago

Uttara Kannada News: ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ವಿರೋಧಿಸಿ ಯಲ್ಲಾಪುರದಲ್ಲಿ ಬಿಜೆಪಿಯಿಂದ ಪ್ರತಿಭಟನೆ

Renuka swamy Murder case
ಬೆಂಗಳೂರು21 mins ago

Renuka Swamy Murder : ನಟ ದರ್ಶನ್ ಹಲ್ಲೆ ಮಾಡುವುದನ್ನು ವಿಡಿಯೊ ಮಾಡಿದ್ದ ಮೂವರು ಅರೆಸ್ಟ್‌; ಸಿಕ್ಕೇ ಬಿಡ್ತಾ ದೊಡ್ಡ ಸಾಕ್ಷಿ!

International Yoga Day 2024
ಫ್ಯಾಷನ್32 mins ago

International Yoga Day 2024: ಯೋಗಾಭ್ಯಾಸಕ್ಕೆ ಪುರುಷರ ಉಡುಗೆಗಳು ಹೀಗಿರಬೇಕು

Amithab Bacchan
Latest45 mins ago

Amithab Bacchan :14ನೇ ವರ್ಷಕ್ಕೆ ಕಾಲಿಟ್ಟ ʼರಾವಣ್ʼ ಚಿತ್ರ; ಮಗನನ್ನು ಹೊಗಳಿ ಸೊಸೆಯನ್ನು ನಿರ್ಲಕ್ಷಿಸಿದ ಅಮಿತಾಭ್!

BCCI
ಕ್ರೀಡೆ46 mins ago

BCCI: ಟೀಮ್​ ಇಂಡಿಯಾದ ತವರಿನ ಕ್ರಿಕೆಟ್​ ಸರಣಿಯ ವೇಳಾಪಟ್ಟಿ ಪ್ರಕಟ

Amitabh Bachchan touched Aswini Dutt feet
ಬಾಲಿವುಡ್50 mins ago

Amitabh Bachchan: ಅಶ್ವಿನಿ ದತ್ ಕಾಲಿಗೆ ನಮಸ್ಕರಿಸಿದ ಅಮಿತಾಭ್‌; ʻಬಿಗ್‌ ಬಿʼ ಕೊಂಡಾಡಿದ ರಾಮ್ ಗೋಪಾಲ್ ವರ್ಮಾ!

Citroen C3 Aircross
ಪ್ರಮುಖ ಸುದ್ದಿ54 mins ago

Citroen C3 Aircross : ಧೋನಿ ಹೆಸರಿನಲ್ಲಿ ಬಿಡುಗಡೆಯಾಗಿದೆ ಈ ಕಾರು, ಕೇವಲ 100 ಕಾರಷ್ಟೇ ಉತ್ಪಾದನೆ

Mysuru News
ಮೈಸೂರು56 mins ago

Mysuru News : ಪತ್ನಿ ಶೀಲ ಶಂಕಿಸಿ ಬೆಂಕಿ ಹಚ್ಚಿ ಸುಟ್ಟು ಹಾಕಿದವನಿಗೆ ಜೀವಾವಧಿ ಶಿಕ್ಷೆ

Yuva spoorthi samvaada programme on June 22 in Shivamogga
ಕರ್ನಾಟಕ1 hour ago

Shivamogga News: ಶಿವಮೊಗ್ಗದಲ್ಲಿ ಜೂ.22ರಂದು ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ

IIT Bombay
Latest1 hour ago

IIT Bombay: ಹಿಂದೂ ದೇವರ ಅವಹೇಳನಕಾರಿ ನಾಟಕ; ಐಐಟಿ ವಿದ್ಯಾರ್ಥಿಗಳಿಗೆ ದಂಡ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು3 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ4 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ4 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ5 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ6 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ6 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌