ಬಂದೂಕು ಲಾಬಿ ವಿರುದ್ಧ ನಾವು ಒಂದಾಗಿ ನಿಂತು ಹೋರಾಡುವುದು ಎಂದು? ಶಾಲಾ ಮಕ್ಕಳ ಹತ್ಯೆಗೆ ಮರುಗಿದ ಜೊ ಬೈಡೆನ್ - Vistara News

ಪ್ರಮುಖ ಸುದ್ದಿ

ಬಂದೂಕು ಲಾಬಿ ವಿರುದ್ಧ ನಾವು ಒಂದಾಗಿ ನಿಂತು ಹೋರಾಡುವುದು ಎಂದು? ಶಾಲಾ ಮಕ್ಕಳ ಹತ್ಯೆಗೆ ಮರುಗಿದ ಜೊ ಬೈಡೆನ್

ಅಮೆರಿಕದ ಶಾಲೆಯೊಂದರಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಮಕ್ಕಳು ಮತ್ತು ಶಿಕ್ಷಕರು ಸಾವಿಗೀಡಾಗಿದ್ದಾರೆ. ಅಮೆರಿಕ ಅಧ್ಯಕ್ಷ ಜೊ ಬೈಡೆನ್ ಘಟನೆ ಬಗ್ಗೆ ಮರುಗಿದ್ದಾರೆ.

VISTARANEWS.COM


on

jo biden
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾಷಿಂಗ್ಟನ್:‌ “ಒಂದು ದೇಶವಾಗಿ ನಾವು ನಮ್ಮನ್ನೇ ಕೇಳಿಕೊಳ್ಳಬೇಕಾಗಿದೆ. ಬಂದೂಕು ಲಾಬಿಯ ಎದುರು ದೇವರ ಹೆಸರಿನಲ್ಲಿ ನಾವು ನಿಂತು ಹೋರಾಡುವುದು ಯಾವಾಗ? ನಾವು ಮಾಡಬೇಕಾಗಿರುವುದೇನು? ಆ ಶಾಲೆಯಲ್ಲಿ ನಡೆದ ಹತ್ಯಾಕಾಂಡದಲ್ಲಿ ಹಲವಾರು ಪೋಷಕರಿಗೆ ಇನ್ನು ಮುಂದೆ ತಮ್ಮ ಮಕ್ಕಳನ್ನು ಕಾಣಲಾಗದು. ಅವರ ಭವಿಷ್ಯದ ಕನಸುಗಳು ನುಚ್ಚುನೂರಾಗಿವೆ. ನಾವು ಈಗ ಗನ್‌ ಲಾಬಿ ವಿರುದ್ಧ ಕಾರ್ಯಪ್ರವೃತ್ತರಾಗಲೇ ಬೇಕಾಗಿದೆ…ʼʼ

ಅಮೆರಿಕವನ್ನು ಬೆಚ್ಚಿಬೀಳಿಸಿರುವ ಟೆಕ್ಸಾಸ್‌ ಶಾಲೆಯಲ್ಲಿ ಮಂಗಳವಾರ ನಡೆದ ಭೀಕರ ದುರಂತದ ಬಳಿಕ ಅಧ್ಯಕ್ಷ ಜೋ ಬೈಡೆನ್‌ ಅವರು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದಾಗ ಹೀಗೆ ಭಾವುಕರಾಗಿದ್ದರು.

” ಮಕ್ಕಳನ್ನು ಕಳೆದುಕೊಳ್ಳುವುದು ಎಂದರೆ ಪೋಷಕರಿಗೆ ತಮ್ಮ ಆತ್ಮದ ತುಂಡನ್ನು ಕಿತ್ತು ಹಾಕಿದಂತೆಯೇ ಸರಿ. ಅದು ಹೃದಯದಲ್ಲಿ ಸೃಷ್ಟಿಸುವ ಟೊಳ್ಳು ನಿಮ್ಮನ್ನು ಅದರೊಳಗೆ ಕುಸಿಯುವಂತೆ ಮಾಡುತ್ತದೆ. ಮತ್ತು ಆ ಶೋಕದಿಂದ ಎಂದೂ ಹೊರಬರಲು ಸಾಧ್ಯವಾಗುವುದಿಲ್ಲ. ಅದು ಅತ್ಯಂತ ಯಾತನಾದಾಯಕʼʼ ಎಂದು ಜೋ ಬೈಡೆನ್‌ ಮರುಗಿದರು.

́ʼ ಸ್ಯಾಂಡಿ ಹುಕ್‌ ಎಲಿಮಂಟರಿ ಸ್ಕೂಲ್‌ನಲ್ಲಿ 26 ಮಂದಿಯನ್ನು ಬಲಿ ತೆಗೆದುಕೊಂಡ ನರಮೇಧ ಸಂಭವಿಸಿ 3,448 ದಿನಗಳು (10 ವರ್ಷ) ಕಳೆದಿವೆ. ಬಳಿಕ ಇಲ್ಲಿಯವರೆಗೆ ಶಾಲೆಗಳ ಅಂಗಳದಲ್ಲಿ ಬಂದೂಕಿನ ಮೊರೆತದ 900ಕ್ಕೂ ಹೆಚ್ಚು ಪ್ರಕರಣಗಳು ನಡೆದಿವೆ. ನನಗೆ ಸಾಕಾಗಿ ಹೋಗಿದೆ. ಬಳಲಿದ್ದೇನೆ. ಆದರೆ ನಾವು ಕಾರ್ಯಪ್ರವೃತ್ತರಾಗಲೇಬೇಕು. ಇಂಥದ್ದನ್ನು ತಡೆಯಲಾಗದು ಎಂದು ಹೇಳದಿರಿ. 18 ವರ್ಷದ ಮಕ್ಕಳು ಗನ್‌ ಸ್ಟೋರ್‌ಗೆ ತೆರಳಿ ಶಸ್ತ್ರಾಸ್ತ್ರಗಳನ್ನು ಖರೀದಿ ಮಾಡುವುದೇ ದೊಡ್ಡ ತಪ್ಪು.

ಐದು ದಿನಗಳ ಏಷ್ಯಾ ಪ್ರವಾಸದ ಬಳಿಕ ಅಮೆರಿಕಕ್ಕೆ ಹಿಂತಿರುಗಿದ್ದ ಜೋ ಬೈಡೆನ್‌ ಅವರಿಗೆ ದೊಡ್ಡ ಶಾಕ್‌ ಕಾದಿತ್ತು. ಟೆಕ್ಸಾಸ್‌ನ ಶಾಲೆಯಲ್ಲಿ 19 ವರ್ಷದ ಯುವಕ ನಡೆಸಿದ ಗುಂಡಿನ ದಾಳಿಗೆ 18 ಮಕ್ಕಳು ಸೇರಿ 20ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಇದಾದ ಕೆಲ ಗಂಟೆಗಳಲ್ಲಿಯೇ ಶ್ವೇತಭವನದಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷ ಜೋ ಬೈಡೆನ್‌, ಗನ್‌ ಲಾಬಿಯನ್ನು ಮಟ್ಟ ಹಾಕಲೇಬೇಕು ಎಂದು ಒತ್ತಿ ಹೇಳಿದ್ದಾರೆ.

” ಜಗತ್ತಿನ ಬೇರೆ ಎಲ್ಲೂ ಇಂಥ ಗುಂಡಿನ ದಾಳಿಗಳು ಶಾಲೆಗಳಲ್ಲಿ ನಡೆಯುತ್ತಿಲ್ಲ. ಇಲ್ಲಿ ಮಾತ್ರ ಏಕೆ ಹೀಗಾಗಿದೆ? ನಾವು ಇದನ್ನು ತಡೆಯಲೇಬೇಕುʼʼ ಎಂದು ಬೈಡೆನ್‌ ಹೇಳಿದರು.

ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಮಾತನಾಡಿ, ” ನಮ್ಮ ಹೃದಯಗಳು ಒಡೆದು ಹೋಗಿವೆ. ಆದರೆ ದಾಳಿಯಲ್ಲಿ ಮಕ್ಕಳನ್ನು ಕಳೆದುಕೊಂಡ ಪೋಷಕರ ನೋವಿನ ಮುಂದೆ ಇದು ಏನೂ ಅಲ್ಲ. ನಾವೆಲ್ಲರೂ ದಿಟ್ಟತನದಿಂದ ಇಂಥ ಹಿಂಸಾಚಾರ ಮರುಕಳಿಸದಂತೆ ನೋಡಿಕೊಳ್ಳಬೇಕು.

10 ದಿನಗಳಲ್ಲಿ ಎರಡನೇ ಬರ್ಬರ ಗುಂಡಿನ ದಾಳಿ

ಅಮೆರಿಕದಲ್ಲಿ ಕೇವಲ 10 ದಿನಗಳಲ್ಲಿ ಎರಡನೇ ಬಾರಿಗೆ ಭೀಕರ ಗುಂಡಿನ ದಾಳಿ ನಡೆದಿದೆ. ದೇಶದ ಶಾಲೆಗಳಲ್ಲಿ ಈ ವರ್ಷ ನಡೆದ 27ನೇ ಹಿಂಸಾಚಾರ ಇದಾಗಿದೆ. ಹತ್ತು ದಿನಗಳ ಹಿಂದೆ ಅಮೆರಿಕದ ಬಫಲೊದಲ್ಲಿನ ಸೂಪರ್‌ ಮಾರ್ಕೆಟ್‌ನಲ್ಲಿ ನಡೆದ ಗುಂಡಿನ ದಾಳಿಗೆ 10 ಮಂದಿ ಅಸುನೀಗಿದ್ದರು. ಒಟ್ಟು 200ಕ್ಕೂ ಹೆಚ್ಚು ಸಾಮೂಹಿಕ ಗುಂಡಿನ ದಾಳಿ ಪ್ರಕರಣಗಳು ನಡೆದಿವೆ. ಪ್ರತಿ ಘಟನೆಯಲ್ಲಿ ಸರಾಸರಿ 4 ಅಥವಾ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ: ಅಮೆರಿಕದ ಶಾಲೆಗಳಲ್ಲಿ ನಡೆದ ಭೀಕರ ಗುಂಡಿನ ದಾಳಿ ಇದೇ ಮೊದಲಲ್ಲ…

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Muda Scam: ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್‌; ರಿಟ್‌ ಅರ್ಜಿ ವಿಚಾರಣೆ ಆ.29ಕ್ಕೆ ಮುಂದೂಡಿದ ಹೈಕೋರ್ಟ್‌

Muda Scam: ಮುಡಾ ಹಗರಣದಲ್ಲಿ (Muda Scam) ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಆ.29ಕ್ಕೆ ಹೈಕೋರ್ಟ್‌ ಮುಂದೂಡಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರು ಸುದೀರ್ಘ ಒಂದೂವರೆ ಗಂಟೆ ಕಾಲ ವಾದ-ಪ್ರತಿವಾದ ಆಲಿಸಿದ ಬಳಿಕ ವಿಚಾರಣೆಯನ್ನು ಮುಂದೂಡಿದರು.

VISTARANEWS.COM


on

Muda Scam
Koo

ಬೆಂಗಳೂರು: ಮುಡಾ ಹಗರಣದಲ್ಲಿ (Muda Scam) ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ಸೋಮವಾರ ನಡೆದಿದೆ. ಸುದೀರ್ಘ ಒಂದೂವರೆ ಗಂಟೆ ಕಾಲ ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಮೂರ್ತಿ ನಾಗಪ್ರಸನ್ನ ಅವರು ವಿಚಾರಣೆಯನ್ನು ಆ.29ರ ಮಧ್ಯಾಹ್ನ 2.30ಕ್ಕೆ ಮುಂದೂಡಿದರು.

ಅರ್ಜಿ ವಿಚಾರಣೆ ವೇಳೆ ವಾದ-ಪ್ರತಿವಾದ ಆಲಿಸಿದ ಬಳಿಕ ಮಾತನಾಡಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರು, ದೂರುದಾರರು ಹಾಗೂ ಸಿಎಂ ಪರ ವಕೀಲರು ವಾದ ಮಂಡಿಸಿದ್ದಾರೆ. ಪಿಸಿ ಆಕ್ಟ್ 17ಎ ಅಡಿ ಅನುಮತಿ ಪ್ರಶ್ನಿಸಲಾಗಿದ್ದು, ರಿಟ್ ಅರ್ಜಿಯೊಂದಿಗೆ ದಾಖಲೆಗಳನ್ನು ಉಲ್ಲೇಖಿಸಿದ್ದಾರೆ. ರಾಜ್ಯಪಾಲರು ವಿವೇಚನಾರಹಿತವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಎಂದು ಸಿಎಂ ಪರ ವಕೀಲರು ವಾದ ಮಂಡಿಸಿದ್ದಾರೆ. ಇನ್ನು ರಾಜ್ಯಪಾಲರ ಆದೇಶಕ್ಕೆ ತಡೆ ನೀಡಬಾರದು ಎಂದು ಪ್ರಭುಲಿಂಗ ನಾವದಗಿ ವಾದಿಸಿದ್ದಾರೆ. ಎಲ್ಲಾ ವಾದವನ್ನು ಕೋರ್ಟ್‌ ಆಲಿಸಿದ್ದು,
ಹೈಕೋರ್ಟ್ ಮುಂದಿನ ಆದೇಶ ನೀಡುವವರೆಗೂ ಅಂದರೆ ಆಗಸ್ಟ್ 29ರವರೆಗೆ ವಿಚಾರಣೆ ಮುಂದೂಡಬೇಕು ಎಂದು ಜನಪ್ರತಿನಿಧಿಗಳ ಕೋರ್ಟ್‌ಗೆ ಸೂಚನೆ ನೀಡಿದರು.

ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದರು. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಾದ ಮಂಡಿಸಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಜರಾಗಿದ್ದರು. ಸಿಎಂ ಸಿದ್ದರಾಮಯ್ಯ ಪರ ವಕೀಲ ಮನು ಸಿಂಘ್ವಿ ವಾದ ಮಂಡಿಸಿ, ಪ್ರಕರಣದಲ್ಲಿ ಸಂವಿಧಾನಾತ್ಮಕ ಮತ್ತು ಆಡಳಿತಾತ್ಮಕ ವಿಚಾರಗಳಿವೆ. ನಾಳೆ ಜನಪ್ರತಿನಿಧಿಗಳ ಕೋರ್ಟ್ ಆದೇಶ ಬಾಕಿ ಇದೆ. ಗವರ್ನರ್ ಆದೇಶ ನೀಡುವ ಮುನ್ನ ಕ್ಯಾಬಿನೆಟ್ ತೀರ್ಮಾನ ಮಾಡಿದೆ. ಆದರೆ, ಗವರ್ನರ್ ಯಾವ ಆಧಾರ ಇಲ್ಲದೆಯೂ ಅನುಮತಿ ನೀಡಿದ್ದಾರೆ ಎಂದು ಹೇಳಿದರು.

ಶೋಕಾಸ್ ನೋಟಿಸ್ ನೀಡಿದ್ದಕ್ಕೆ ಕೊಟ್ಟ ಉತ್ತರವನ್ನು ಅವರು ಹೇಳಿಲ್ಲ. ಇಲ್ಲಿ ರಾಜ್ಯಪಾಲರಿಗೆ ಸಿಎಂ ರಾಜೀನಾಮೆ ಕೊಡುವುದು ಮಾತ್ರ ಬೇಕಿದೆ. ಅದಕ್ಕೆ ಒಂದೇ ಒಂದು ಸರಿಯಾದ ಕಾರಣ ನೀಡದೇ ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. ರಾಜ್ಯಪಾಲರಿ 17ಎ ಅಡಿಯಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಆದರೆ, ಇದಕ್ಕೆ ಕನಿಷ್ಠ ಎರಡು ನಿಯಮಗಳಿವೆ. ನೂರು ಪುಟಗಳ ಕ್ಯಾಬಿನೆಟ್ ನಿರ್ಧಾರಕ್ಕೆ ರಾಜ್ಯಪಾಲರು ಕೇವಲ ಎರಡು ಪುಟಗಳ ಉತ್ತರ ನೀಡಿದ್ದಾರೆ. ಸಂಪುಟದ ನಿರ್ಧ ರ ಪರಿಗಣಿಸಲ್ಲ ಎಂದಿದ್ದಾರೆ. ಯಾವ ತನಿಖಾಧಿಕಾರಿ ಕೇಳಿದ್ದಾರೆ ಅನ್ನೋದು ಮುಖ್ಯ. ಅಲ್ಲದೆ ಯಾವ ಆರೋಪವಿದೆ ಅನ್ನೋದು ಅವರು ಹೇಳಬೇಕಿತ್ತು? ಬಿಎನ್‌ಎಸ್ ಎಸ್ 218 ಅಡಿಯೂ ಅನುಮತಿ ನೀಡಿದ್ದಾರೆ ಎಂದರು.

ಗವರ್ನರ್ ತಮ್ಮ ಆದೇಶದಲ್ಲಿ ಮಧ್ಯಪ್ರದೇಶ ಸರ್ಕಾರ & ಮಧ್ಯಪ್ರದೇಶ ಪೊಲೀಸ್ ಎಸ್ಟಾಬ್ಲಿಷ್ ಕೇಸ್ ಉಲ್ಲೇಖ ಮಾಡಿದ್ದಾರೆ ಎಂದು ಆರ್ಟಿಕಲ್ 163 ಬಗ್ಗೆ ಮನು ಸಿಂಘ್ವಿ ಉಲ್ಲೇಖಿಸಿ, ಹೌದು, ರಾಜ್ಯಪಾಲರಿಗೆ ಅಧಿಕಾರ ಇದೆ. ಆದರೆ ಒಂದು ಲೈನ್‌ನಲ್ಲಿ ಕ್ಯಾಬಿನೆಟ್ ನಿರ್ಧಾರ ತಿರಸ್ಕರಿಲು ಸಾಧ್ಯವಿಲ್ಲ. ಹಗರಣ ಸಂಬಂಧ ಮೂವರು ಅನುಮತಿ ಕೇಳಿದ್ದಾರೆ. ಟಿ.ಜೆ. ಅಬ್ರಹಾಂ ದೂರು ಕೊಟ್ಟ ದಿನವೇ ಶೋಕಾಸ್ ನೋಟಿಸ್ ನೀಡಿದ್ದಾರೆ. ಸಾಮಾನ್ಯವಾಗಿ ಒಂದು ದೂರು ನೀಡಿದರೆ ಅದನ್ನು ಪರಿಶೀಲನೆ ಮಾಡಲು ಸಮಯ ಬೇಕು. ಆದರೆ ದೂರು ನೀಡಿದ ದಿನವೇ ಶೋಕಾಸ್ ನೊಟೀಸ್ ನೀಡಿದ್ದಾರೆ. ಅಲ್ಲದೇ ಗವರ್ನರ್ ಮುಂದೆ 12 ಪ್ರಕರಣಗಳಲ್ಲಿ ಅನುಮತಿ ಕೇಳಲಾಗಿದೆ. ಆದರೆ ಅವುಗಳನ್ನು ಇನ್ನೂ ಪರಿಗಣಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ | CM Siddaramaiah: ನಾನು ಡಲ್‌ ಆಗಿಲ್ಲ, ನನ್ನ ಹೋರಾಟದ ಜೋಶ್‌ ಹೆಚ್ಚಾಗಿದೆ: ಸಿಎಂ ಸಿದ್ದರಾಮಯ್ಯ

ಲ್ಯಾಂಡ್ ಡಿನೋಟಿಫಿಕೇಷನ್ ಪ್ರಕ್ರಿಯೆ ಹಾಗೂ ಭೂ ಪರಿವರ್ತನೆ ಸೇರಿ ಇಲ್ಲಿಯವರೆಗೆ ನಡೆದ ಪ್ರಕ್ರಿಯೆಗಳನ್ನು ಉಲ್ಲೇಖಿಸಿ ವಕೀಲ ಮನು ಸಿಂಘ್ವಿ ವಾದ ಮಂಡಿಸಿ, 2004 ರಿಂದ 2010ರ ತನಕ ಸಿದ್ದರಾಮಯ್ಯ ಪಾತ್ರವೇ ಇಲ್ಲ. 1992ರಲ್ಲಿ ಮುಡಾ ಸ್ವಾಧೀನವನ್ನು 1998ರಲ್ಲಿ ಡಿನೋಟಿಫಿಕೇಷನ್ ಮಾಡಲಾಗಿದೆ. 2004ರಲ್ಳಿ ಸಿಎಂ ಬಾಮೈದನಿಗೆ ಮಾರಾಟ ಆಗಿದೆ. 2005ರಲ್ಲಿ ಕೃಷಿ ಜಮೀನಾಗಿ ಪರಿವರ್ತನೆ ಮಾಡಲಾಗಿದ್ದು, 2010ರಲ್ಲಿ ಸಿಎಂ ಪತ್ನಿಗೆ ದಾನಪತ್ರ ಮಾಡಲಾಗಿದೆ. ಬಹುತೇಕ ಸಮಯದಲ್ಲಿ ಸಿದ್ದರಾಮಯ್ಯ ಅಧಿಕಾರದಲ್ಲಿ ಇರಲಿಲ್ಲ. ಯಾವುದೂ ತರಾತುರಿಯಲ್ಲಿ ನಡೆದಿಲ್ಲ. 2020ರಲ್ಲಿ ಭೂಮಿಗೆ ಪರಿಹಾರವಾಗಿ ನಿವೇಶನಗಳನ್ನು ಹಂಚಲಾಗಿದೆ. 2022ರಲ್ಲಿ ಸೈಟ್‌ಗಳ ಕ್ರಯ ಆಗಿದೆ ಎಂದು ತಿಳಿಸಿದರು.

ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಬಸವರಾಜ್ ಬೊಮ್ಮಾಯಿ ಸೇರಿ ಹಲವರ ವಿರುದ್ದ ಅನುಮತಿ ಕೇಳಲಾಗಿದೆ.
ಈ ವಿಚಾರಗಳು ಪ್ರಾಸಿಕ್ಯೂಷನ್ ಅನುಮತಿ ನೀಡಲು ಮುಖ್ಯವೇ ಎಂದು ಜಡ್ಜ್ ಪ್ರಶ್ನಿಸಿದರು. ಇದಕ್ಕೆ ಮನು ಸಿಂಘ್ವಿ ಉತ್ತರಿಸಿ, ರಾಜ್ಯಪಾಲರ ಶೋಕಾಸ್‌ ನೋಟಿಸ್‌ ಗೆ ಉತ್ತರ ನೀಡಲಾಗಿದೆ. ಅಲ್ಲದೇ ಈ ಬಗ್ಗೆ ಒಂದು ಆಯೋಗ ಸಹ ರಚನೆಯಾಗಿದೆ. ಆ ಕಮಿಟಿ ಈಗಾಗಲೇ ತನಿಖೆ ನಡೆಸುತ್ತಿದೆ ಎಂದು ಹೇಳಿದರು.

ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಬಸವರಾಜ್ ಬೊಮ್ಮಾಯಿ ಸೇರಿ ಹಲವರ ವಿರುದ್ದ ಅನುಮತಿ ಕೇಳಲಾಗಿದೆ.
ಈ ವಿಚಾರಗಳು ಪ್ರಾಸಿಕ್ಯೂಷನ್ ಅನುಮತಿ ನೀಡಲು ಮುಖ್ಯವೇ ಎಂದು ಜಡ್ಜ್ ಪ್ರಶ್ನಿಸಿದರು. ಇದಕ್ಕೆ ಮನು ಸಿಂಘ್ವಿ ಉತ್ತರಿಸಿ, ರಾಜ್ಯಪಾಲರ ಶೋಕಾಸ್‌ ನೋಟಿಸ್‌ ಗೆ ಉತ್ತರ ನೀಡಲಾಗಿದೆ. ಅಲ್ಲದೇ ಈ ಬಗ್ಗೆ ಒಂದು ಆಯೋಗ ಸಹ ರಚನೆಯಾಗಿದೆ. ಆ ಕಮಿಟಿ ಈಗಾಗಲೇ ತನಿಖೆ ನಡೆಸುತ್ತಿದೆ. ಟಿ.ಜೆ. ಅಬ್ರಾಹಂ ಒಬ್ಬ ಬ್ಲ್ಯಾಕ್ ಮೇಲರ್, ಆತನಿಗೆ ಸುಪ್ರೀಂ ಕೋರ್ಟ್ ದಂಡ ಹಾಕಿದೆ ಎಂದರು. ಆದರೆ, ಅದೆಲ್ಲಾ ಈಗ ಅವಶ್ಯಕತೆ ಇಲ್ಲ ಎಂದು ಜಡ್ಜ್ ನಾಗಪ್ರಸನ್ನ ಹೇಳಿದರು.

ಮುರುಗೇಶ್ ನಿರಾಣಿ, ಜೊಲ್ಲೆ, ಜನಾರ್ದನ ರೆಡ್ಡಿ ಸೇರಿ ಹಲವ ವಿರುದ್ಧದ ಅರ್ಜಿಗಳು ಬಾಕಿ ಇದೆ. ಈ ಎಲ್ಲಾ ವಿಚಾರವನ್ನ ಕ್ಯಾಬಿನೆಟ್ ಸಲಹೆಯಲ್ಲಿ ಉಲ್ಲೇಖಿಸಲಾಗಿದೆ. ಹೊಸ‌ ಬಿಎನ್‌ಎಸ್ ಕಾಯ್ದೆಯಡಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ. ಹೊಸ‌ ಕಾಯಿದೆಯ ಬದಲಾವಣೆ ಎಂದರೆ 420, ಈಗ ವಂಚನೆ ಅಲ್ಲ. 17ಎ ಅಡಿ ಯಾವುದೇ ಪೊಲೀಸ್ ಅಧಿಕಾರಿ ಪ್ರಾಸಿಕ್ಯೂಷನ್‌ಗೆ ಅನುಮತಿ‌ ಕೇಳಿಲ್ಲ. ಕರ್ತವ್ಯದ ಭಾಗವಾಗಿ ಸಿಎಂ ಮುಡಾ ಸೈಟ್ ಹಂಚಿಕೆಯಲ್ಲಿ ಯಾವುದೇ ತೀರ್ಮಾನ ಮಾಡಿಲ್ಲ. ವಿವೇಚನಾರಹಿತವಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಈ ಮೂಲಕ ಸಂವಿಧಾನದ 163ನೇ ವಿಧಿಯನ್ನು ಉಲ್ಲಂಘನೆ ಮಾಡಿದ್ದಾರೆ.

ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ

ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಕ್ಯಾಬಿನೆಟ್ ನಿರ್ಣಯದ ಉದ್ದೇಶ ಸಿಎಂ ಅನ್ನು ರಕ್ಷಿಸುವುದಾಗಿರಬಹುದು. ಹೀಗಾಗಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ವಿಚಾರದಲ್ಲಿ ರಾಜ್ಯಪಾಲರಿಗೆ ಸ್ವತಂತ್ರ ಅಧಿಕಾರವಿದೆ ಎಂದು ತಿಳಿಸಿದರು.

ಇದೇ ವೇಳೆ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿ, ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶಕ್ಕೆ ತಡೆ ನೀಡಬಾರದು ಎಂದು ಮನವಿ ಮಾಡಿದರು. ಈ ವೇಳೆ ಅಭಿಷೇಕ್ ಸಿಂಘ್ವಿ ಮಧ್ಯೆ ಪ್ರವೇಶಿಸಿ, ನಾಳೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಆದೇಶ ಕಾಯ್ಡಿರಿಸಿದೆ. ಆದೇಶ ನೀಡಿದರೆ ಸಮಸ್ಯೆ ಆಗಲಿದೆ ಎಂದರು. ಈ ವೇಳೆ ಜಡ್ಜ್‌ ಪ್ರತಿಕ್ರಿಯಿಸಿ, ರಾಜ್ಯಪಾಲರ ಆದೇಶದ ಬಗ್ಗೆ ಸೆಷನ್ಸ್ ಕೋರ್ಟ್ ತೀರ್ಮಾನ ಮಾಡಲು ಸಾಧ್ಯವೇ? ಸಾಂವಿಧಾನಿಕ ವಿಚಾರವನ್ನು ಹೈಕೋರ್ಟ್ ತೀರ್ಮಾನ ಮಾಡಬೇಕು ಎಂದು ಹೇಳಿದರು. ಬಳಿಕ ಅರ್ಜಿ ವಿಚಾರಣೆಯನ್ನು ಆ.29ಕ್ಕೆ ಮುಂದೂಡಿದರು.

Continue Reading

ವಿದೇಶ

Viral Video: ತ್ರಿವರ್ಣ ಧ್ವಜ ಹರಿದು, ಗೋ ಬ್ಯಾಕ್‌ ಇಂಡಿಯಾ ಘೋಷಣೆ- ಖಲಿಸ್ತಾನಿಗಳ ಅಟ್ಟಹಾಸ; ವಿಡಿಯೋ ವೈರಲ್‌

Viral Video:ಟೊರೊಂಟೋ ಸಿಟಿ ಹಾಲ್‌(Toronto City Hall)ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾರ್ಯಕ್ರಮದ ನಡುವೆ ಘೋಷಣೆ ಕೂಗುತ್ತಾ ಎಂಟ್ರಿಯಾದ ಖಲಿಸ್ತಾನಿಗಳು ಚಾಕುವಿನಿಂದ ಭಾರತದ ಧ್ವಜವನ್ನು ಹರಿದುಹಾಕಿದ್ದಾರೆ. ಅಲ್ಲದೇ ಗೋ ಬ್ಯಾಕ್‌ ಇಂಡಿಯಾ ಎಂದು ಘೋಷಣೆ ಕೂಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

VISTARANEWS.COM


on

Viral Video
Koo

ಟೊರೊಂಟೋ: ಸ್ವಾತಂತ್ರ್ಯ ದಿನಾಚರಣೆ(Independence Day 2024) ಅಂಗವಾಗಿ ಆಯೋಜಿಸಲಾಗಿದ್ದ ಇಂಡಿಯಾ ಡೇ ಪರೇಡ್‌(India Day Parade) ಕಾರ್ಯಕ್ರಮದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಗಳು(Khalistan) ಭಾರತದ ತ್ರಿವರ್ಣ ಧ್ವಜವನ್ನು ಹರಿದಿರುವ ಘಟನೆ ಟೊರೊಂಟೋದಲ್ಲಿ ನಡೆದಿದೆ. ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್‌(Viral Video) ಆಗುತ್ತಿದೆ.

ಟೊರೊಂಟೋ ಸಿಟಿ ಹಾಲ್‌(Toronto City Hall)ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾರ್ಯಕ್ರಮದ ನಡುವೆ ಘೋಷಣೆ ಕೂಗುತ್ತಾ ಎಂಟ್ರಿಯಾದ ಖಲಿಸ್ತಾನಿಗಳು ಚಾಕುವಿನಿಂದ ಭಾರತದ ಧ್ವಜವನ್ನು ಹರಿದುಹಾಕಿದ್ದಾರೆ. ಅಲ್ಲದೇ ಗೋ ಬ್ಯಾಕ್‌ ಇಂಡಿಯಾ ಎಂದು ಘೋಷಣೆ ಕೂಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಕೆನಡಾದಲ್ಲಿ ಸ್ವಾತಂತ್ರ್ಯದ ಅತಿದೊಡ್ಡ ಆಚರಣೆಯಾದ ಇಂಡಿಯಾ ಡೇ ಪರೇಡ್ ಟೊರೊಂಟೊದಲ್ಲಿ ನಡೆಯಿತು. ಖಲಿಸ್ತಾನ್ ಪರ ಗುಂಪುಗಳ ಯೋಜಿತ ಪ್ರತಿ-ರ್ಯಾಲಿಯಿಂದಾಗಿ ಈ ಕಾರ್ಯಕ್ರಮಕ್ಕೆ ಸಕಲ ಭದ್ರತೆ ಒದಗಿಸಲಾಗಿತ್ತು. ಇಂಡಿಯಾ ಡೇ ಪರೇಡ್ ಅನ್ನು ಆಗಸ್ಟ್ 15 ರ ನಂತರದ ಮೊದಲ ಭಾನುವಾರದಂದು ನಡೆಸಲಾಯಿತು. ಈ ಕಾರ್ಯಕ್ರಮವನ್ನು ಪನೋರಮಾ ಇಂಡಿಯಾ ಆಯೋಜಿಸಿದ್ದು, ಇದು ಇಂಡೋ-ಕೆನಡಿಯನ್ ಸಾಂಸ್ಕೃತಿಕ ಸಮಾಗಮವಾಗಿದೆ.

ಪನೋರಮಾ ಇಂಡಿಯಾದ ಪರೇಡ್‌ನ ರಜತ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಕಾರಣ ಈ ವರ್ಷ ಈ ಕಾರ್ಯಕ್ರಮ ಬಹಳ ಮಹತ್ವ ಪಡೆದುಕೊಂಡಿತ್ತು. ಟೊರೊಂಟೊ ಡೌನ್‌ಟೌನ್‌ನಲ್ಲಿರುವ ನಾಥನ್ ಫಿಲಿಪ್ಸ್ ಸ್ಕ್ವೇರ್‌ನಲ್ಲಿ ಈ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ವೈವಿಧ್ಯಮಯ ಭಾರತೀಯ ತಿನಿಸುಗಳು ಕಾರ್ಯಕ್ರಮವನ್ನು ಹೆಚ್ಚಿಸಿದವು. ‘ಖಾಲಿಸ್ತಾನ್ ಸಿಖ್ಖರು’ ಮತ್ತು ‘ಕೆನಡಾದ ಹಿಂದೂಗಳ ನಡುವೆ ಮುಖಾಮುಖಿ’ಗಾಗಿ ಕರೆ ನೀಡುವ ಉದ್ದೇಶದಿಂದಲೇ ಸಮೀಪದಲ್ಲಿ ಖಲಿಸ್ತಾನಿಗಳು ಕಾರ್ಯಕ್ರಮ ಆಯೋಜಿಸಿತ್ತು.

ಕೆಲವು ದಿನಗಳ ಹಿಂದೆಯಷ್ಟೇ ಭಯೋತ್ಪಾದಕ ಚಟುವಟಿಕೆಗಳಿಗೆ ಮಾರಾಕಾಸ್ತ್ರಗಳ ಪೂರೈಕೆಗೆ ಸಂಬಂಧಿಸಿ ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ಸಂಧು ಅಲಿಯಾಸ್ ಲಾಂಡಾನ ಪ್ರಮುಖ ಸಹಾಯಕನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಶುಕ್ರವಾರ ಬಂಧಿಸಿದೆ. ಮಾರಕಾಸ್ತ್ರಗಳ ಪೂರೈಕೆಗೆ ಸಂಬಂಧಿಸಿದ ಪ್ರಮುಖ ಭಯೋತ್ಪಾದನಾ ಜಾಲವನ್ನು ಭೇದಿಸಿದ ಎನ್‌ಐಎ, ಮಧ್ಯಪ್ರದೇಶದ ಬದ್ವಾನಿ ಜಿಲ್ಲೆಯ ಬಲ್ಜೀತ್ ಸಿಂಗ್ ಅಲಿಯಾಸ್ ರಾಣಾ ಭಾಯ್ ಅಲಿಯಾಸ್ ಬಲ್ಲಿ ಎಂಬಾತನನ್ನು ಗುರುವಾರ ಪಂಜಾಬ್‌ನಲ್ಲಿ ಬಂಧಿಸಿದೆ.

ಇದನ್ನೂ ಓದಿ: Tarsem Singh: ಎನ್‌ಐಎ ಪ್ರಮುಖ ಕಾರ್ಯಾಚರಣೆ; ಅಬುಧಾಬಿಯಲ್ಲಿ ಖಲಿಸ್ತಾನಿ ಉಗ್ರ ತರ್ಸೇಮ್‌ ಸಿಂಗ್ ಬಂಧನ!

Continue Reading

ಪ್ರಮುಖ ಸುದ್ದಿ

Rinku Singh : ಆರ್​ಸಿಬಿ ಪರ ಆಡುವ ಅಭಿಲಾಷೆ ವ್ಯಕ್ತಪಡಿಸಿದ ರಿಂಕು ಸಿಂಗ್​

Rinku Singh : ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ಕೆಕೆಆರ್ ಉಳಿಸಿಕೊಳ್ಳುವ ಯೋಜನೆ ಬಗ್ಗೆ
ಸ್ಪೋರ್ಟ್ಸ್ ತಕ್ ಜೊತೆ ಮಾತನಾಡಿದ ರಿಂಕು ಸಿಂಗ್ ಅವರನ್ನು ಐಪಿಎಲ್ ಮೆಗಾ ಹರಾಜು ಮತ್ತು ಕೆಕೆಆರ್ ನಿರ್ವಹಣೆಯ ಉಳಿಸಿಕೊಳ್ಳುವ ಯೋಜನೆಗಳ ಬಗ್ಗೆ ಕೇಳಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ರಿಂಕು, ತಮ್ಮ ಮತ್ತು ಕೆಕೆಆರ್ ತಂಡದ ಮ್ಯಾನೇಜ್ಮೆಂಟ್ ನಡುವೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Rinku Singh
Koo

ನವದೆಹಲಿ: ಐಪಿಎಲ್ 2025 ರ ಮೆಗಾ ಹರಾಜಿಗೆ ಕೋಲ್ಕತಾ ನೈಟ್ ರೈಡರ್ಸ್ (KKR) ಫ್ರಾಂಚೈಸಿ ತಮ್ಮನ್ನು ಉಳಿಸಿಕೊಳ್ಳುವ ಯೋಜನೆಗಳ ಬಗ್ಗೆ ಎಡಗೈ ಬ್ಯಾಟರ್​ ರಿಂಕು ಸಿಂಗ್ (Rinku Singh) ಮಾತನಾಡಿದ್ದಾರೆ. ಮುಂದಿನ ಋತುವಿನಲ್ಲಿ ಕೆಕೆಆರ್ ತನ್ನನ್ನು ಉಳಿಸಿಕೊಳ್ಳದಿದ್ದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಸೇರಲು ಬಯಸುತ್ತೇನೆ ಎಂದು 26 ವರ್ಷದ ಸಿಂಗ್ ಹೇಳಿದ್ದಾರೆ.

ರಿಂಕು ಸಿಂಗ್ ಅವರು ಪ್ಲೇಯಿಂಗ್ ಇಲೆವೆನ್​​ನಲ್ಲಿ ಅವಕಾಶ ಪಡೆದಾಗಿನಿಂದ ಕೆಕೆಆರ್ ಪರ ಉನ್ನತ ದರ್ಜೆಯ ಪ್ರದರ್ಶನ ನೀಡುತ್ತಿದ್ದಾರೆ. ಕೆಕೆಆರ್ ಪರ ಅವರ ಸಾಧನೆಗಳಿಂದಾಗಿಯೇ ಅವರು ಭಾರತಕ್ಕಾಗಿ ಅಂತರರಾಷ್ಟ್ರೀಯ ಚೊಚ್ಚಲ ಪಂದ್ಯ ಆಡುವ ಅವಕಾಶವನ್ನು ಪಡೆದುಕೊಂಡಿದ್ದರು.

ಎಡಗೈ ಹಿಟ್ಟರ್ ಅದ್ಭುತ ಬ್ಯಾಟಿಂಗ್ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಅವರ ಬ್ಯಾಟಿಂಗ್ ಶೈಲಿ ಪ್ರಸ್ತುತ ಭಾರತೀಯ ಕ್ರಿಕೆಟ್ ವಲಯಗಳಲ್ಲಿ ಅತ್ಯುತ್ತಮವಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ ಅವರ ಅತ್ಯುತ್ತಮ ರನ್​​ಗಳು ಅವರಲ್ಲಿರುವ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಹೇಳುತ್ತವೆ.

ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ಕೆಕೆಆರ್ ಉಳಿಸಿಕೊಳ್ಳುವ ಯೋಜನೆ ಬಗ್ಗೆ
ಸ್ಪೋರ್ಟ್ಸ್ ತಕ್ ಜೊತೆ ಮಾತನಾಡಿದ ರಿಂಕು ಸಿಂಗ್ ಅವರನ್ನು ಐಪಿಎಲ್ ಮೆಗಾ ಹರಾಜು ಮತ್ತು ಕೆಕೆಆರ್ ನಿರ್ವಹಣೆಯ ಉಳಿಸಿಕೊಳ್ಳುವ ಯೋಜನೆಗಳ ಬಗ್ಗೆ ಕೇಳಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ರಿಂಕು, ತಮ್ಮ ಮತ್ತು ಕೆಕೆಆರ್ ತಂಡದ ಮ್ಯಾನೇಜ್ಮೆಂಟ್ ನಡುವೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Rishabh Pant : ರಿಷಭ್​ ಪಂತ್​ಗೆ ವಿಶೇಷ ಸನ್ಮಾನ ಮಾಡಿದ ಡೆಲ್ಲಿ ಕ್ರಿಕೆಟ್ ಸಂಸ್ಥೆ

ನನ್ನನ್ನು ಉಳಿಸಿಕೊಳ್ಳುವರೇ ಅಥವಾ ನಾನು ಹರಾಜಿನಲ್ಲಿ ತಂಡವನ್ನು ಸೇರಬೇಕೇ ಎಂಬ ಬಗ್ಗೆ ಕೆಕೆಆರ್ ಮ್ಯಾನೇಜ್ಮೆಂಟ್​ ಜತೆಗೆ ಯಾವುದೇ ಮಾತುಕತೆ ನಡೆದಿಲ್ಲ. ಏನಾಗುತ್ತದೆ ಎಂದು ನೋಡೋಣ ಎಂದು ರಿಂಕು ಉತ್ತರಿಸಿದರು. ರಿಂಕು ಸಿಂಗ್ 2018 ರಿಂದ ಕೋಲ್ಕತಾ ನೈಟ್ ರೈಡರ್ಸ್ ಪರ ಆಡುತ್ತಿದ್ದಾರೆ. ಮೊದಲ ಮೂರು ಋತುಗಳಲ್ಲಿ, ಅವರು ಸೀಮಿತ ಅವಕಾಶ ಪಡೆದಿ್ದರು. ಅವುಗಳಿಂದ ಹೆಚ್ಚಿನದನ್ನು ಪಡೆಯಲು ಸಾಧ್ಯವಾಗಲಿಲ್ಲ. ಆದರೆ ಐಪಿಎಲ್ 2022 ರಿಂದ ವಿಷಯಗಳು ಬದಲಾಗಿದ್ದವು.

ಕೆಕೆಆರ್ ಪರ ರಿಂಕು ಸಿಂಗ್ ದಾಖಲೆ

ಐಪಿಎಲ್​​ 2022 ರ ಋತುವಿನಲ್ಲಿ ಎಡಗೈ ಬ್ಯಾಟರ್​​ ಏಳು ಪಂದ್ಯಗಳನ್ನು ಆಡಿದ್ದಾರೆ. 34.80 ಸರಾಸರಿ ಮತ್ತು 148.72 ಸ್ಟ್ರೈಕ್ ರೇಟ್​​ನಲ್ಲಿ 174 ರನ್ ಗಳಿಸಿದ್ದಾರೆ. ಮುಂದಿನ ಋತುವಿನ ಆರಂಭದಿಂದಲೂ ರಿಂಕು ಕೆಕೆಆರ್​​ನ ಪ್ಲೇಯಿಂಗ್ ಇಲೆವೆನ್ನಲ್ಲಿದ್ದರು ಐಪಿಎಲ್ 2023 ಅವರಿಗೆ ಗೇಮ್ ಚೇಂಜರ್ ಆಗಿ ಪರಿಣಮಿಸಿತು, ಏಕೆಂದರೆ ಅವರು ಕೆಕೆಆರ್​​ನ ಅವಕಾಶಗಳನ್ನು ಏಕಾಂಗಿಯಾಗಿ ನಿರ್ವಹಿಸಿದ್ದರು. ರಿಂಕು 59.25ರ ಸರಾಸರಿಯಲ್ಲಿ 149.53ರ ಸ್ಟ್ರೈಕ್ ರೇಟ್ ನಲ್ಲಿ 474 ರನ್ ಗಳಿಸಿದ್ದರು.

ಅದೇ ಋತುವಿನಲ್ಲಿ, ಅವರು ಯಶ್ ದಯಾಳ್ ಗುಜರಾತ್ ತಂಡ ಬೌಲಿಂಗ್​ಗೆ 5 ಸಿಕ್ಸರ್​ಗಳನ್ನು ಬಾರಿಸಿ ಗುಜರಾತ್ ಟೈಟಾನ್ಸ್ ವಿರುದ್ಧ ಕೆಕೆಆರ್ ಪರ ಪಂದ್ಯವನ್ನು ಗೆದ್ದರು ಮತ್ತು ಮನೆಮಾತಾಗಿದ್ದರು.

ಆರ್ಸಿಬಿ ಪರ ಆಡಲು ಬಯಸುವೆ

ಮುಂದಿನ ಋತುವಿಗೆ ಮುಂಚಿತವಾಗಿ ಕೋಲ್ಕತಾ ನೈಟ್ ರೈಡರ್ಸ್ ತಂಡವು ಅವರನ್ನು ಉಳಿಸಿಕೊಳ್ಳದಿರುವ ಬಗ್ಗೆ ರಿಂಕು ಸಿಂಗ್ ಅವರನ್ನು ಕೇಳಿದಾಗ, ಯುವ ಆಟಗಾರ ತನ್ನ ಆಯ್ಕೆಯಲ್ಲಿ ಸ್ಪಷ್ಟವಾಗಿದ್ದರು. ಈ ವೇಳೆ ಅವರು ಆಡಲು ಬಯಸುವ ತಂಡವಾಗಿ ಆರ್ಸಿಬಿ ಎಂದರು.

ಐಪಿಎಲ್ ಪ್ರದರ್ಶನದ ಆಧಾರದ ಮೇಲೆ, ರಿಂಕು ಸಿಂಗ್ ಭಾರತಕ್ಕೆ ಪಾದಾರ್ಪಣೆ ಮಾಡಿದರು. ಅಲ್ಲಿ ಅವರು ಭರ್ಜರಿಯಾಗಿ ಪ್ರಾರಂಭಿಸಿದರು. ಟಿ20ಐನಲ್ಲಿ 23 ಪಂದ್ಯಗಳಲ್ಲಿ 59.71ರ ಸರಾಸರಿಯಲ್ಲಿ 174.16ರ ಸ್ಟ್ರೈಕ್ ರೇಟ್​​ನಲ್ಲಿ 418 ರನ್ ಗಳಿಸಿದ್ದಾರೆ. ಐಪಿಎಲ್ 2024 ರ ನಿರಾಶಾದಾಯಕ ಋತುವಿನಲ್ಲಿ ಅವರನ್ನು 2024 ರ ಟಿ 20 ವಿಶ್ವಕಪ್​ಗಾಗಿ ಭಾರತದ 15 ಸದಸ್ಯರ ತಂಡದಲ್ಲಿ ಆಯ್ಕೆ ಮಾಡಲಾಗಿಲ್ಲ. ಆದಾಗ್ಯೂ, ಅವರನ್ನು ಮೀಸಲು ಆಟಗಾರರಲ್ಲಿ ಆಯ್ಕೆ ಮಾಡಲಾಯಿತು. ಈ ವರ್ಷದ ಕಳಪೆ ಐಪಿಎಲ್ ಋತುವಿನ ಹೊರತಾಗಿಯೂ, ಅವರು ಭಾರತದ ಟಿ20 ಐ ಯೋಜನೆಗಳಲ್ಲಿ ಉತ್ತಮ ಆಯ್ಕೆಯಾಗಿದ್ದಾರೆ.

Continue Reading

ಕರ್ನಾಟಕ

Muda Scam: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ತಡೆ ಕೋರಿ ಅರ್ಜಿ; ಹೈಕೋರ್ಟ್‌ನಲ್ಲಿ ಸುದೀರ್ಘ ವಾದ-ಪ್ರತಿವಾದ

Muda Scam: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್‌ ವಿಚಾರಣೆ ನಡೆಸಿದೆ.

VISTARANEWS.COM


on

Muda Scam
Koo

ಬೆಂಗಳೂರು: ಮುಡಾ ಹಗರಣದಲ್ಲಿ (Muda Scam) ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ಸೋಮವಾರ ನಡೆದಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರು ವಿಚಾರಣೆ ನಡೆಸುತ್ತಿದ್ದು, ವಕೀಲರ ನಡುವೆ ಸುದೀರ್ಘ ವಾದ-ಪ್ರತಿವಾದ ನಡೆಯುತ್ತಿದೆ.

ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದರು. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಾದ ಮಂಡಿಸಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಜರಾಗಿದ್ದರು. ಸಿಎಂ ಸಿದ್ದರಾಮಯ್ಯ ಪರ ವಕೀಲ ಮನು ಸಿಂಘ್ವಿ ವಾದ ಮಂಡಿಸಿ, ಪ್ರಕರಣದಲ್ಲಿ ಸಂವಿಧಾನಾತ್ಮಕ ಮತ್ತು ಆಡಳಿತಾತ್ಮಕ ವಿಚಾರಗಳಿವೆ. ನಾಳೆ ಜನಪ್ರತಿನಿಧಿಗಳ ಕೋರ್ಟ್ ಆದೇಶ ಬಾಕಿ ಇದೆ. ಗವರ್ನರ್ ಆದೇಶ ನೀಡುವ ಮುನ್ನ ಕ್ಯಾಬಿನೆಟ್ ತೀರ್ಮಾನ ಮಾಡಿದೆ. ಆದರೆ, ಗವರ್ನರ್ ಯಾವ ಆಧಾರ ಇಲ್ಲದೆಯೂ ಅನುಮತಿ ನೀಡಿದ್ದಾರೆ ಎಂದು ಹೇಳಿದರು.

ಶೋಕಾಸ್ ನೋಟಿಸ್ ನೀಡಿದ್ದಕ್ಕೆ ಕೊಟ್ಟ ಉತ್ತರವನ್ನು ಅವರು ಹೇಳಿಲ್ಲ. ಇಲ್ಲಿ ರಾಜ್ಯಪಾಲರಿಗೆ ಸಿಎಂ ರಾಜೀನಾಮೆ ಕೊಡುವುದು ಮಾತ್ರ ಬೇಕಿದೆ. ಅದಕ್ಕೆ ಒಂದೇ ಒಂದು ಸರಿಯಾದ ಕಾರಣ ನೀಡದೇ ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. ರಾಜ್ಯಪಾಲರಿ 17ಎ ಅಡಿಯಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಆದರೆ, ಇದಕ್ಕೆ ಕನಿಷ್ಠ ಎರಡು ನಿಯಮಗಳಿವೆ. ನೂರು ಪುಟಗಳ ಕ್ಯಾಬಿನೆಟ್ ನಿರ್ಧಾರಕ್ಕೆ ರಾಜ್ಯಪಾಲರು ಕೇವಲ ಎರಡು ಪುಟಗಳ ಉತ್ತರ ನೀಡಿದ್ದಾರೆ. ಸಂಪುಟದ ನಿರ್ಧ ರ ಪರಿಗಣಿಸಲ್ಲ ಎಂದಿದ್ದಾರೆ. ಯಾವ ತನಿಖಾಧಿಕಾರಿ ಕೇಳಿದ್ದಾರೆ ಅನ್ನೋದು ಮುಖ್ಯ. ಅಲ್ಲದೆ ಯಾವ ಆರೋಪವಿದೆ ಅನ್ನೋದು ಅವರು ಹೇಳಬೇಕಿತ್ತು? ಬಿಎನ್‌ಎಸ್ ಎಸ್ 218 ಅಡಿಯೂ ಅನುಮತಿ ನೀಡಿದ್ದಾರೆ ಎಂದರು.

ಗವರ್ನರ್ ತಮ್ಮ ಆದೇಶದಲ್ಲಿ ಮಧ್ಯಪ್ರದೇಶ ಸರ್ಕಾರ & ಮಧ್ಯಪ್ರದೇಶ ಪೊಲೀಸ್ ಎಸ್ಟಾಬ್ಲಿಷ್ ಕೇಸ್ ಉಲ್ಲೇಖ ಮಾಡಿದ್ದಾರೆ ಎಂದು ಆರ್ಟಿಕಲ್ 163 ಬಗ್ಗೆ ಮನು ಸಿಂಘ್ವಿ ಉಲ್ಲೇಖಿಸಿ, ಹೌದು, ರಾಜ್ಯಪಾಲರಿಗೆ ಅಧಿಕಾರ ಇದೆ. ಆದರೆ ಒಂದು ಲೈನ್‌ನಲ್ಲಿ ಕ್ಯಾಬಿನೆಟ್ ನಿರ್ಧಾರ ತಿರಸ್ಕರಿಲು ಸಾಧ್ಯವಿಲ್ಲ. ಹಗರಣ ಸಂಬಂಧ ಮೂವರು ಅನುಮತಿ ಕೇಳಿದ್ದಾರೆ. ಟಿ.ಜೆ. ಅಬ್ರಹಾಂ ದೂರು ಕೊಟ್ಟ ದಿನವೇ ಶೋಕಾಸ್ ನೋಟಿಸ್ ನೀಡಿದ್ದಾರೆ. ಸಾಮಾನ್ಯವಾಗಿ ಒಂದು ದೂರು ನೀಡಿದರೆ ಅದನ್ನು ಪರಿಶೀಲನೆ ಮಾಡಲು ಸಮಯ ಬೇಕು. ಆದರೆ ದೂರು ನೀಡಿದ ದಿನವೇ ಶೋಕಾಸ್ ನೊಟೀಸ್ ನೀಡಿದ್ದಾರೆ. ಅಲ್ಲದೇ ಗವರ್ನರ್ ಮುಂದೆ 12 ಪ್ರಕರಣಗಳಲ್ಲಿ ಅನುಮತಿ ಕೇಳಲಾಗಿದೆ. ಆದರೆ ಅವುಗಳನ್ನು ಇನ್ನೂ ಪರಿಗಣಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ | CM Siddaramaiah: ನಾನು ಡಲ್‌ ಆಗಿಲ್ಲ, ನನ್ನ ಹೋರಾಟದ ಜೋಶ್‌ ಹೆಚ್ಚಾಗಿದೆ: ಸಿಎಂ ಸಿದ್ದರಾಮಯ್ಯ

ಲ್ಯಾಂಡ್ ಡಿನೋಟಿಫಿಕೇಷನ್ ಪ್ರಕ್ರಿಯೆ ಹಾಗೂ ಭೂ ಪರಿವರ್ತನೆ ಸೇರಿ ಇಲ್ಲಿಯವರೆಗೆ ನಡೆದ ಪ್ರಕ್ರಿಯೆಗಳನ್ನು ಉಲ್ಲೇಖಿಸಿ ವಕೀಲ ಮನು ಸಿಂಘ್ವಿ ವಾದ ಮಂಡಿಸಿ, 2004 ರಿಂದ 2010ರ ತನಕ ಸಿದ್ದರಾಮಯ್ಯ ಪಾತ್ರವೇ ಇಲ್ಲ. 1992ರಲ್ಲಿ ಮುಡಾ ಸ್ವಾಧೀನವನ್ನು 1998ರಲ್ಲಿ ಡಿನೋಟಿಫಿಕೇಷನ್ ಮಾಡಲಾಗಿದೆ. 2004ರಲ್ಳಿ ಸಿಎಂ ಬಾಮೈದನಿಗೆ ಮಾರಾಟ ಆಗಿದೆ. 2005ರಲ್ಲಿ ಕೃಷಿ ಜಮೀನಾಗಿ ಪರಿವರ್ತನೆ ಮಾಡಲಾಗಿದ್ದು, 2010ರಲ್ಲಿ ಸಿಎಂ ಪತ್ನಿಗೆ ದಾನಪತ್ರ ಮಾಡಲಾಗಿದೆ. ಬಹುತೇಕ ಸಮಯದಲ್ಲಿ ಸಿದ್ದರಾಮಯ್ಯ ಅಧಿಕಾರದಲ್ಲಿ ಇರಲಿಲ್ಲ. ಯಾವುದೂ ತರಾತುರಿಯಲ್ಲಿ ನಡೆದಿಲ್ಲ. 2020ರಲ್ಲಿ ಭೂಮಿಗೆ ಪರಿಹಾರವಾಗಿ ನಿವೇಶನಗಳನ್ನು ಹಂಚಲಾಗಿದೆ. 2022ರಲ್ಲಿ ಸೈಟ್‌ಗಳ ಕ್ರಯ ಆಗಿದೆ ಎಂದು ತಿಳಿಸಿದರು.

ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಬಸವರಾಜ್ ಬೊಮ್ಮಾಯಿ ಸೇರಿ ಹಲವರ ವಿರುದ್ದ ಅನುಮತಿ ಕೇಳಲಾಗಿದೆ.
ಈ ವಿಚಾರಗಳು ಪ್ರಾಸಿಕ್ಯೂಷನ್ ಅನುಮತಿ ನೀಡಲು ಮುಖ್ಯವೇ ಎಂದು ಜಡ್ಜ್ ಪ್ರಶ್ನಿಸಿದರು. ಇದಕ್ಕೆ ಮನು ಸಿಂಘ್ವಿ ಉತ್ತರಿಸಿ, ರಾಜ್ಯಪಾಲರ ಶೋಕಾಸ್‌ ನೋಟಿಸ್‌ ಗೆ ಉತ್ತರ ನೀಡಲಾಗಿದೆ. ಅಲ್ಲದೇ ಈ ಬಗ್ಗೆ ಒಂದು ಆಯೋಗ ಸಹ ರಚನೆಯಾಗಿದೆ. ಆ ಕಮಿಟಿ ಈಗಾಗಲೇ ತನಿಖೆ ನಡೆಸುತ್ತಿದೆ ಎಂದು ಹೇಳಿದರು.

ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಬಸವರಾಜ್ ಬೊಮ್ಮಾಯಿ ಸೇರಿ ಹಲವರ ವಿರುದ್ದ ಅನುಮತಿ ಕೇಳಲಾಗಿದೆ.
ಈ ವಿಚಾರಗಳು ಪ್ರಾಸಿಕ್ಯೂಷನ್ ಅನುಮತಿ ನೀಡಲು ಮುಖ್ಯವೇ ಎಂದು ಜಡ್ಜ್ ಪ್ರಶ್ನಿಸಿದರು. ಇದಕ್ಕೆ ಮನು ಸಿಂಘ್ವಿ ಉತ್ತರಿಸಿ, ರಾಜ್ಯಪಾಲರ ಶೋಕಾಸ್‌ ನೋಟಿಸ್‌ ಗೆ ಉತ್ತರ ನೀಡಲಾಗಿದೆ. ಅಲ್ಲದೇ ಈ ಬಗ್ಗೆ ಒಂದು ಆಯೋಗ ಸಹ ರಚನೆಯಾಗಿದೆ. ಆ ಕಮಿಟಿ ಈಗಾಗಲೇ ತನಿಖೆ ನಡೆಸುತ್ತಿದೆ. ಟಿ.ಜೆ. ಅಬ್ರಾಹಂ ಒಬ್ಬ ಬ್ಲ್ಯಾಕ್ ಮೇಲರ್, ಆತನಿಗೆ ಸುಪ್ರೀಂ ಕೋರ್ಟ್ ದಂಡ ಹಾಕಿದೆ ಎಂದರು. ಆದರೆ, ಅದೆಲ್ಲಾ ಈಗ ಅವಶ್ಯಕತೆ ಇಲ್ಲ ಎಂದು ಜಡ್ಜ್ ನಾಗಪ್ರಸನ್ನ ಹೇಳಿದರು.

ಮುರುಗೇಶ್ ನಿರಾಣಿ, ಜೊಲ್ಲೆ, ಜನಾರ್ದನ ರೆಡ್ಡಿ ಸೇರಿ ಹಲವ ವಿರುದ್ಧದ ಅರ್ಜಿಗಳು ಬಾಕಿ ಇದೆ. ಈ ಎಲ್ಲಾ ವಿಚಾರವನ್ನ ಕ್ಯಾಬಿನೆಟ್ ಸಲಹೆಯಲ್ಲಿ ಉಲ್ಲೇಖಿಸಲಾಗಿದೆ. ಹೊಸ‌ ಬಿಎನ್‌ಎಸ್ ಕಾಯ್ದೆಯಡಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ. ಹೊಸ‌ ಕಾಯಿದೆಯ ಬದಲಾವಣೆ ಎಂದರೆ 420, ಈಗ ವಂಚನೆ ಅಲ್ಲ. 17ಎ ಅಡಿ ಯಾವುದೇ ಪೊಲೀಸ್ ಅಧಿಕಾರಿ ಪ್ರಾಸಿಕ್ಯೂಷನ್‌ಗೆ ಅನುಮತಿ‌ ಕೇಳಿಲ್ಲ. ಕರ್ತವ್ಯದ ಭಾಗವಾಗಿ ಸಿಎಂ ಮುಡಾ ಸೈಟ್ ಹಂಚಿಕೆಯಲ್ಲಿ ಯಾವುದೇ ತೀರ್ಮಾನ ಮಾಡಿಲ್ಲ. ವಿವೇಚನಾರಹಿತವಾಗಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಈ ಮೂಲಕ ಸಂವಿಧಾನದ 163ನೇ ವಿಧಿಯನ್ನು ಉಲ್ಲಂಘನೆ ಮಾಡಿದ್ದಾರೆ.

ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ

ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಕ್ಯಾಬಿನೆಟ್ ನಿರ್ಣಯದ ಉದ್ದೇಶ ಸಿಎಂ ಅನ್ನು ರಕ್ಷಿಸುವುದಾಗಿರಬಹುದು. ಹೀಗಾಗಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ವಿಚಾರದಲ್ಲಿ ರಾಜ್ಯಪಾಲರಿಗೆ ಸ್ವತಂತ್ರ ಅಧಿಕಾರವಿದೆ ಎಂದು ತಿಳಿಸಿದರು.

Continue Reading
Advertisement
BSNL 4G Plan
ಗ್ಯಾಜೆಟ್ಸ್13 mins ago

BSNL 4G Plan: ಜಿಯೋಗೆ ಪೈಪೋಟಿ ನೀಡಲು ಸಜ್ಜಾಗಿದೆ ಬಿಎಸ್‌ಎನ್‌ಎಲ್ 4ಜಿ; ಹೊಸ ರಿಚಾರ್ಜ್ ಪ್ಲ್ಯಾನ್‌ ಪ್ರಕಟ

Viral Video
Latest28 mins ago

Viral Video: ಎಲ್ಲ ಬಿಟ್ಟು ಟ್ರಾನ್ಸ್‌ಫಾರ್ಮರ್‌ ಏರಿ ಸತ್ತ ಕರಡಿ; ಮೃತ ದೇಹದ ಮೇಲೆ ಕೂತ ಲೈನ್‌ಮನ್!

Karnataka Weather Forecast
ಮಳೆ46 mins ago

Karnataka Weather : ಸಣ್‌ ಮಳೆಗೆ ಕೆರೆಯಂತಾದ ಬೆಂಗಳೂರಿನ ರಸ್ತೆಗಳು; ನಾಳೆಗೂ ಅಲರ್ಟ್‌

Kannada New Movie
ಬೆಂಗಳೂರು56 mins ago

Kannada New Movie: ಅಡ್ವೆಂಚರಸ್ ಕಾಮಿಡಿ ಕಾನ್ಸೆಪ್ಟ್‌ನ ʼಫಾರೆಸ್ಟ್ʼ ಚಿತ್ರದ ಟ್ರೈಲರ್ ಸದ್ಯದಲ್ಲೇ ರಿಲೀಸ್‌

ಕ್ರೀಡೆ1 hour ago

Ishan Kishan : ಮ್ಯಾನ್​ ಆಫ್​ ದಿ ಮ್ಯಾಚ್​ ಪ್ರಶಸ್ತಿ ಪಡೆದು ಮೂಲಕ ಬಿಸಿಸಿಐಗೆ ಪ್ರತ್ಯುತ್ತರ ಕೊಟ್ಟ ಇಶಾನ್ ಕಿಶನ್​

Shiva Rajkumar new look with Yash on the movie set Why did the rocking star visit?
ಸ್ಯಾಂಡಲ್ ವುಡ್1 hour ago

Shiva Rajkumar: ಸಿನಿಮಾ ಸೆಟ್​ನಲ್ಲಿ ಯಶ್ ಜತೆ ಹೊಸ ಲುಕ್​ನಲ್ಲಿ ಶಿವಣ್ಣ; ರಾಕಿಂಗ್‌ ಸ್ಟಾರ್‌ ಭೇಟಿ ಮಾಡಿದ್ದೇಕೆ?

Muda Scam
ಕರ್ನಾಟಕ1 hour ago

Muda Scam: ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್‌; ರಿಟ್‌ ಅರ್ಜಿ ವಿಚಾರಣೆ ಆ.29ಕ್ಕೆ ಮುಂದೂಡಿದ ಹೈಕೋರ್ಟ್‌

Namma Metro
ಬೆಂಗಳೂರು1 hour ago

Namma Metro : ನಾಳೆಯಿಂದ ಸೆಪ್ಟೆಂಬರ್‌ 11ರವರೆಗೂ ಪೀಣ್ಯ ಇಂಡಸ್ಟ್ರಿ ಟು ನಾಗಸಂದ್ರ ಮೆಟ್ರೋ ಓಡಾಟ ಬಂದ್‌!

Viral Video
ವಿದೇಶ2 hours ago

Viral Video: ತ್ರಿವರ್ಣ ಧ್ವಜ ಹರಿದು, ಗೋ ಬ್ಯಾಕ್‌ ಇಂಡಿಯಾ ಘೋಷಣೆ- ಖಲಿಸ್ತಾನಿಗಳ ಅಟ್ಟಹಾಸ; ವಿಡಿಯೋ ವೈರಲ್‌

Viral Video
Latest2 hours ago

Viral Video: ಗಂಡ-ಹೆಂಡತಿ ಜಗಳ ಬಿಡಿಸಲು ಬಂದ ಕಾನ್‌ಸ್ಟೇಬಲ್‌ ತಾನೇ ಚಕ್ಕಂದ ಶುರು ಮಾಡಿದ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌