ಶಾಲೆಗೆ ಹೋಗದ್ದಕ್ಕೆ ಬೈದ ತಾಯಿ, ಬಾಲಕ ಆತ್ಮಹತ್ಯೆ - Vistara News

ಕ್ರೈಂ

ಶಾಲೆಗೆ ಹೋಗದ್ದಕ್ಕೆ ಬೈದ ತಾಯಿ, ಬಾಲಕ ಆತ್ಮಹತ್ಯೆ

ಶಾಲೆ ತಪ್ಪಿಸುತ್ತಿದ್ದುದಕ್ಕೆ ತಾಯಿ ಬೈದುದರಿಂದ ನೊಂದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಲಮಂಗಲದಲ್ಲಿ ನಡೆದಿದೆ.

VISTARANEWS.COM


on

hang
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನೆಲಮಂಗಲ: ಬಾಲಕನೊಬ್ಬ ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕು ಕಡಬಗೆರೆ ಗ್ರಾಮದಲ್ಲಿ ನಡೆದಿದೆ.

ಪೃಥ್ವಿರಾಜ್ (12) ಮೃತ ಬಾಲಕ. ಈತ ಕಡಬಗೆರೆ ನಿವಾಸಿ ವಿಜಯ್ ಕುಮಾರ್ ಮತ್ತು ಸವಿತಾ ದಂಪತಿಗಳ ಮಗ. ಕಡಬಗೆರೆ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡುತ್ತಿದ್ದ. ಶಾಲೆಗೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿದ್ದ ಬಾಲಕನಿಗೆ ಆತನ ತಾಯಿ ಬೈದು ಹೊಡೆದು ಬುದ್ಧಿ ಹೇಳಿದ್ದರು. ಇದರಿಂದ ನೊಂದ ಬಾಲಕ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೀರೆಯಿಂದ ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | ಮೂವರು ರೈತರ ಸಾವು | ಟ್ರ್ಯಾಕ್ಟರ್ ಉರುಳಿ ಮೃತ್ಯು, ವಿದ್ಯುತ್‌ ಸ್ಪರ್ಶಕ್ಕೆ ಬಲಿ, ಸಾಲದ ಶೂಲದಿಂದ ಆತ್ಮಹತ್ಯೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Physical abuse: ಮಹಿಳೆ ಮೇಲೆ ಅತ್ಯಾಚಾರ; ಹಾಸನದ ಪ್ರಸಿದ್ಧ ದೇವಾಲಯದ ಪೂಜಾರಿ ಬಂಧನ

Physical abuse: ಮಹಿಳೆ ನೀಡಿದ ದೂರಿನನ್ವಯ ಬಾಗಲುಗುಂಟೆ ಠಾಣೆಯಲ್ಲಿ ಆತ್ಯಾಚಾರ ಪ್ರಕರಣ ದಾಖಲಾಗಿತ್ತು. ಹೀಗಾಗಿ ಹಾಸನ ಜಿಲ್ಲೆಯ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Physical abuse
Koo

ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ (Physical abuse) ಆರೋಪದಡಿ ಹಾಸನದ ಪ್ರಸಿದ್ಧ ದೇವಾಲಯದ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯ ಪುರದಮ್ಮ ದೇವಾಲಯದ ಪೂಜಾರಿ ದಯಾನಂದ್ (39) ಬಂಧಿತ ವ್ಯಕ್ತಿ.

ಬಾಗಲುಗುಂಟೆ ಠಾಣೆ ಪೊಲೀಸರಿಂದ ಆರೋಪಿ ಬಂಧನವಾಗಿದೆ. ಕೆಲ ದಿನಗಳ ಹಿಂದೆ ಮಹಿಳೆ ನೀಡಿದ ದೂರಿನನ್ವಯ ಬಾಗಲುಗುಂಟೆ ಠಾಣೆಯಲ್ಲಿ ಆತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಆರೋಪಿ ದಯಾನಂದ್‌ನ ಪೊಲೀಸರು ಬಂಧಿಸಿದ್ದಾರೆ.

ದೋಷ ನಿವಾರಣೆಗಾಗಿ ಪೂಜೆ ಮಾಡುತ್ತೇನೆಂದು ಹಣ ಪಡೆದಿದ್ದ ಪೂಜಾರಿ, ಬಳಿಕ ಮಹಿಳೆಯನ್ನು ಕರೆಸಿಕೊಂಡು ಆತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ದಯಾನಂದ್ ಅರಸೀಕೆರೆ ಬಳಿಯ ಗೊಲ್ಲರಹಳ್ಳಿ ಕುರುಗುಂದ ಗ್ರಾಮ ಪಂಚಾಯಿತಿಯ ಸದಸ್ಯನಾಗಿದ್ದಾನೆ. ಮಹಿಳೆ ಪುರದಮ್ಮ ದೇವಸ್ಥಾನಕ್ಕೆ ಹೋಗಿದ್ದಾಗ ಪರಿಚಯ ಮಾಡಿಕೊಂಡಿದ್ದ. ಶಾಸ್ತ್ರ ಹೇಳುತ್ತಿದ್ದ ಪೂಜಾರಿ ದಯಾನಂದ್‌ಗೆ ಮದುವೆಯಾಗಿ ಎರಡು ಮಕ್ಕಳಿದ್ದಾರೆ. ಮಹಿಳೆಗೆ ಕಂಟಕವಿದೆ‌ ಹೇಳಿ ಆಗಾಗ ಹಣ ಪಡೆಯುತ್ತಿದ್ದ ಎನ್ನಲಾಗಿದೆ. ಒಂದು‌ ಲಕ್ಷಕ್ಕಿಂತ ಹೆಚ್ಚು ಹಣ ಮಹಿಳೆಯಿಂದ ಪಡೆದಿದ್ದ ಎನ್ನಲಾಗಿದೆ.

ಇದನ್ನೂ ಓದಿ | Brutal Murder: ಎದೆ, ಗುಪ್ತಾಂಗಕ್ಕೆ ಚಾಕು ಇರಿದು ಹತ್ಯೆ; ಬೀದಿಯಲ್ಲಿ ಬಿದ್ದಿದ್ದ ಯುವತಿಯ ಶವವನ್ನುಕಚ್ಚಿ ಎಳೆದಾಡಿದ ಶ್ವಾನಗಳು; ಕರ್ನಾಟಕ ಮೂಲದ ದಾವೂದ್‌ ಎಸ್ಕೇಪ್‌

ಇನ್‌ಸ್ಟಾಗ್ರಾಮ್‌ ಗೆಳೆಯನಿಗಾಗಿ ಗಂಡನನ್ನೇ ಕೊಲೆ ಮಾಡಿಸಿದ ಐನಾತಿ ಹೆಂಡತಿ

murder case
murder case

ತುಮಕೂರು: ಪರಪುರುಷನ ಮೋಹಕ್ಕೆ ಸಿಲುಕಿದಾಕೆ ತನ್ನ ಪ್ರೀತಿಗೆ ಅಡ್ಡಿಯಾಗಿದ್ದ ಪತಿಯನ್ನೇ ಕೊಂದು (Murder case) ಮುಗಿಸಿದ್ದಾಳೆ. ಇನ್‌ಸ್ಟಾಗ್ರಾಮ್‌ ಪ್ರಿಯತಮನಿಗಾಗಿ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಕೊಲೆ ಮಾಡಿಸಿದ್ದಾಳೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಲ್ಲೆಕಾವು ಗ್ರಾಮದ ಬಳಿ ಘಟನೆ ನಡೆದಿದೆ.

ಪ್ರಕಾಶ್ (30) ಮೃತ ದುರ್ದೈವಿ. ಹರ್ಷಿತಾ (28) ಪತಿಯನ್ನು ಕೊಲೆ ಮಾಡಿಸಿದವಳು. ಕಲಬುರಗಿ ಜಿಲ್ಲೆಯ ಚಿಂಚುಲಿ ಮೂಲದ ಪ್ರಕಾಶ್‌ಗೆ ಇದೇ ಇನ್‌ಸ್ಟಾಗ್ರಾಮ್‌ನಿಂದ ಮೂರು ವರ್ಷದ ಹಿಂದೆ ಈ ಹರ್ಷಿತಾಳ ಪರಿಚಯವಾಗಿತ್ತು. ಬಳಿಕ ಪರಸ್ಪರ ಪ್ರೀತಿಸಿ ಇಬ್ಬರೂ ಮದುವೆಯಾಗಿದ್ದರು.

ಮದುವೆಯಾದ್ಮೇಲೆ ಪ್ರಕಾಶ್‌ ಪತ್ನಿಯ ತವರಿನಲ್ಲೇ ವಾಸವಿದ್ದ. ಈ ದಂಪತಿಗೆ ಒಂದೂವರೆ ವರ್ಷದ ಮಗುವೂ ಇತ್ತು. ಆದರೆ ಇತ್ತೀಚೆಗೆ ಹರ್ಷಿತಾಳಿಗೆ ಇನ್‌ಸ್ಟಾಗ್ರಾಂನಲ್ಲಿ ಮಾಜಿ ಪ್ರಿಯತಮ ಗುಂಡ ಎಂಬಾತ ಸಂಪರ್ಕಕ್ಕೆ ಸಿಕ್ಕಿದ್ದ. ಗುಂಡನ ಮೋಹಕ್ಕೆ ಸಿಲುಕಿದ ಹರ್ಷಿತಾ, ಪ್ರಕಾಶ್‌ನನ್ನು ಕಡೆಗಣಿಸಿದ್ದಳು. ಹರ್ಷಿತಾ ಮತ್ತು ಗುಂಡ ಇಬ್ಬರಿಗೂ ಮರುಪ್ರೇಮಾಂಕುರವಾಗಿತ್ತು.

ಮಾತ್ರವಲ್ಲ, ಮಗು- ಗಂಡನನ್ನು ಬಿಟ್ಟು ಕಳೆದ 2 ತಿಂಗಳ ಹಿಂದೆ ಪ್ರಿಯತಮ ಗುಂಡನ ಜತೆಗೆ ಮನೆ ಬಿಟ್ಟು ಪರಾರಿಯಾಗಿದ್ದಳು. ಈ ವೇಳೆ ಪ್ರಕಾಶ್ ಪೊಲೀಸ್ ಠಾಣೆಗೆ ದೂರು ನೀಡಿದ್ದ. ಬಳಿಕ ಹರ್ಷಿತಾ ಮನೆಗೆ ವಾಪಾಸ್ಸಾಗಿದ್ದಳಿ. ಆದರೆ ಒಳಗೊಳಗೆ ಗಂಡನ ಕೊಲೆಗೆ ಸ್ಕೆಚ್ ಹಾಕಿದ್ದಳು. ಪತಿಯ ಕೊಲೆಗಾಗಿ ಸಹೋದರ ಸೋಮಶೇಖರ್ ಹಾಗೂ ಪ್ರಿಯತಮ ಗುಂಡನಿಗೆ ಸುಪಾರಿ ನೀಡಿದ್ದಳು.

ಪ್ರಕಾಶ್‌ನನ್ನು ಏನೇನೋ ಹೇಳಿ ಪುಸಲಾಯಿಸಿ ಸೋಮಶೇಖರ್‌ ಕರೆಸಿಕೊಂಡಿದ್ದ. ಗುಂಡ ಮತ್ತು ಆತನ ಸ್ನೇಹಿತ ರಂಗಸ್ವಾಮಯ್ಯ, ಪ್ರಕಾಶ್ ಬರುತ್ತಿದ್ದಂತೆ ಆತನ ಮೇಲೆ ಹಲ್ಲೆ ನಡೆಸಿದ್ದರು. ಡ್ರ್ಯಾಗರ್‌ನಿಂದ ಎದೆಭಾಗಕ್ಕೆ ಚುಚ್ಚಿ ಕೊಲೆ ಮಾಡಿದ್ದರು. ಬಳಿಕ ಅಪಘಾತದ ರೀತಿಯಲ್ಲಿ ಬಿಂಬಿಸಲು ಹೊರಟಿದ್ದರು. ಆದರೆ ಎದೆಭಾಗಕ್ಕೆ ಚುಚ್ಚಿದ ಗಾಯದ ಗುರುತು ಪತ್ತೆ ಮಾಡಿದ ಪೊಲೀಸರು ಇದು ಅಪಘಾತವಲ್ಲ ಬದಲಿಗೆ ಕೊಲೆ ಎಂದು ಖಚಿತ ಪಡಿಸಿಕೊಂಡಿದ್ದರು.

ಇದನ್ನೂ ಓದಿ: Brutal Murder: ಎದೆ, ಗುಪ್ತಾಂಗಕ್ಕೆ ಚಾಕು ಇರಿದು ಹತ್ಯೆ; ಬೀದಿಯಲ್ಲಿ ಬಿದ್ದಿದ್ದ ಯುವತಿಯ ಶವವನ್ನುಕಚ್ಚಿ ಎಳೆದಾಡಿದ ಶ್ವಾನಗಳು; ಕರ್ನಾಟಕ ಮೂಲದ ದಾವೂದ್‌ ಎಸ್ಕೇಪ್‌

ವಿಚಾರಣೆ ವೇಳೆ ಪತ್ನಿ ಹರ್ಷಿತಾಳ ಮಾಸ್ಟ್‌ರ್‌ ಪ್ಲ್ಯಾನ್‌ಗೆ ಪೊಲೀಸರೇ ದಂಗಾಗಿದ್ದಾರೆ. ಸದ್ಯ ಕೊರಟಗೆರೆ ಪೊಲೀಸರಿಂದ ಹರ್ಷಿತಾ, ಸೋಮಶೇಖರ್, ರಂಗಸ್ವಾಮಯ್ಯನನ್ನು ಬಂಧಿಸಲಾಗಿದೆ. ಮುಖ್ಯ ಆರೋಪಿ ಗುಂಡನಿಗಾಗಿ ಬಲೆ ಬೀಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

ಕರ್ನಾಟಕ

Wayanad Landslide: ಕೇರಳ ಭೂ ಕುಸಿತ; ಕನ್ನಡಿಗರಿಗೆ ನೆರವು ನೀಡಲು ಸಹಾಯವಾಣಿ

Wayanad Landslide: ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಸಮರೋಪಾದಿಯಲ್ಲಿ ನಿರ್ವಹಿಸುವಂತೆ, ರಕ್ಷಣೆ ಹಾಗೂ ಪರಿಹಾರ ಕಾರ್ಯಚರಣೆಗಳನ್ನು ಕೈಗೊಳ್ಳುವಂತೆ ಹಾಗೂ ಪ್ರವಾಹ ಪೀಡಿತರಿಗೆ ಅಗತ್ಯಕ್ಕನುಸಾರವಾಗಿ ಕಾಳಜಿ ಕೇಂದ್ರಗಳನ್ನು ತೆರೆದು ಎಲ್ಲ ಸೌಲಭ್ಯಗಳನ್ನು ಕಲ್ಪಿಸುವಂತೆ ಸಿಎಂ ಸೂಚಿಸಿದ್ದಾರೆ.

VISTARANEWS.COM


on

Wayanad Landslide
Koo

ಬೆಂಗಳೂರು: ವಯನಾಡಿನಲ್ಲಿ ನಡೆದ ಭೂಕುಸಿತ ದುರಂತದಲ್ಲಿ (Wayanad Landslide) ಸಾವಿನ ಸಂಖ್ಯೆ 89ಕ್ಕೇರಿದೆ. ಹೀಗಾಗಿ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಇನ್ನು ಕೆಲಸ ಕಾರ್ಯಗಳಿಗಾಗಿ ಕರ್ನಾಟಕದಿಂದ ಹಲವು ಕನ್ನಡಿಗರು ಕೇರಳಕ್ಕೆ ತೆರಳಿ, ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಸಾಧ್ಯತೆ ಇರುವುದರಿಂದ ನೆರವಿಗಾಗಿ ರಾಜ್ಯ ಸರ್ಕಾರ ಸಹಾಯವಾಣಿ ತೆರೆದಿದೆ.

ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಸಮರೋಪಾದಿಯಲ್ಲಿ ನಿರ್ವಹಿಸುವಂತೆ, ರಕ್ಷಣೆ ಹಾಗೂ ಪರಿಹಾರ ಕಾರ್ಯಚರಣೆಗಳನ್ನು ಕೈಗೊಳ್ಳುವಂತೆ ಹಾಗೂ ಪ್ರವಾಹ ಪೀಡಿತರಿಗೆ ಅಗತ್ಯಕ್ಕನುಸಾರವಾಗಿ ಕಾಳಜಿ ಕೇಂದ್ರಗಳನ್ನು ತೆರೆದು ಎಲ್ಲ ಸೌಲಭ್ಯಗಳನ್ನು ಕಲ್ಪಿಸುವಂತೆ ಸಿಎಂ ಸೂಚಿಸಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿ ತೆರೆದು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ವ್ಯವಸ್ಥೆ ಮಾಡಬೇಕು. ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿಯೇ ಲಭ್ಯರಿದ್ದು ಎಚ್ಚರ ವಹಿಸುವಂತೆ ಸೂಚಿಸಿದ್ದಾರೆ.

ಭೂಕುಸಿತದ ತ್ಯಾಜ್ಯ ವಿಲೇವಾರಿಗೆ ಲೋಕೋಪಯೋಗಿ ಇಲಾಖೆ ನೆರವು

ವಯನಾಡಿನಲ್ಲಿ ಭೂಕುಸಿತದಿಂದ ಉಂಟಾಗಿರುವ ತ್ಯಾಜ್ಯಗಳ ತೆರವಿಗೆ ರಾಜ್ಯದಿಂದ ಅಗತ್ಯ ಜೆಸಿಬಿ, ಕ್ರೇನ್ ಮತ್ತಿತರ ಭಾರೀ ವಾಹನಗಳ ಸೌಕರ್ಯ ಕಲ್ಪಿಸಲು ಲೋಕೋಪಯೋಗಿ ಇಲಾಖೆ ಕೈಗೊಳ್ಳುತ್ತಿದೆ.

ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ಸಹಾಯವಾಣಿ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಹಾಗೂ ಸುತ್ತಲಿನ ಪ್ರದೇಶಗಳ ಅಸಂಘಟಿತ ಕಾರ್ಮಿಕರು ಅಲ್ಲಿಗೆ ನಿಯಮಿತವಾಗಿ ಕೆಲಸಕ್ಕಾಗಿ ತೆರಳಿರುವ ಸಾಧ್ಯತೆ ಇರುವುದರಿಂದ, ಅಂತಹವರು ಕಣ್ಮರೆಯಾಗಿದ್ದರೆ ಮಾಹಿತಿ ನೀಡಲು ಚಾಮರಾಜನಗರ ಜಿಲ್ಲಾಡಳಿತವು 24/7 ಸಹಾಯವಾಣಿ ಸ್ಥಾಪಿಸಿದೆ.

ಸಹಾಯವಾಣಿ ಸಂಖ್ಯೆಗಳು- 08226-223161, 223163, 223160 ಅಥವಾ ವಾಟ್ಸಪ್ ಸಂಖ್ಯೆ 9740942902 ಮೂಲಕ ಸಾರ್ವಜನಿಕರು ಸಂಪರ್ಕಿಸಲು ಕೋರಿದೆ.

ಮಾರ್ಗ ಸ್ಥಗಿತ

ಗುಂಡ್ಲುಪೇಟೆ ಮಾರ್ಗವಾಗಿ ಸಾಗುವ ಬೆಂಗಳೂರು-ವಯನಾಡ್ ರಾಷ್ಟ್ರೀಯ ಹೆದ್ದಾರಿ 766 ರ ಮಾರ್ಗದಲ್ಲಿ ಸಂಚಾರ ಮುಂಜಾಗ್ರತಾ ಕ್ರಮವಾಗಿ ನಿರ್ಬಂಧಿಸಲಾಗಿದ್ದು, ಪರ್ಯಾಯವಾಗಿ ಗುಂಡ್ಲುಪೇಟೆ-ಬಂಡೀಪುರ-ಗುಡಲೂರ ಮಾರ್ಗದಲ್ಲಿ ತೆರಳಲು ಸೂಚಿಸಲಾಗಿದೆ.

ಮೈಸೂರು ಜಿಲ್ಲಾಡಳಿತರಿಂದ ಅಗತ್ಯ ಕ್ರಮ

ಮೈಸೂರು ಜಿಲ್ಲಾಡಳಿತವು ಕೂಡ ಹೆಗ್ಗಡದೇವನಕೋಟೆ ತಾಲ್ಲೂಕು ಆಸ್ಪತ್ರೆ ಹಾಗೂ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ವೈದ್ಯರನ್ನು ನಿಯೋಜಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆತರಲು ಸಾಕಷ್ಟು ಬಸ್, ವಾಹನಗಳನ್ನು ಅಣಿಗೊಳಿಸಲಾಗಿದೆ. ಪಾರ್ಥಿವ ಶರೀರಗಳ ಸಂರಕ್ಷಣೆಗೆ ಶೈತ್ಯಾಗಾರದ ಘಟಕಗಳನ್ನು ಒದಗಿಸುವ ಸರಬರಾಜುದಾರನ್ನು ಗುರುತಿಸಲಾಗಿದೆ.

ಮೈಸೂರು ಜಿಲ್ಲಾಡಳಿತ ಸಹಾಯವಾಣಿ ಸಂಖ್ಯೆ: 0821-24223800

ಕೇರಳದಲ್ಲಿ ರಕ್ಷಣೆ, ಪರಿಹಾರ ಕಾರ್ಯಾಚರಣೆಗೆ ಇಬ್ಬರು IAS ಅಧಿಕಾರಿಗಳ ನೇಮಕ

ನವ ದೆಹಲಿ: ಭೂ ಕುಸಿತದಿಂದ ತತ್ತರಿಸಿರುವ ವಯನಾಡಿನಲ್ಲಿ (Wayanad Landslide) ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯ ಸಹಕಾರ ನೀಡಲಾಗುತ್ತಿದ್ದು, ಇದಕ್ಕಾಗಿ ಇಬ್ಬರು ಐಎಎಸ್‌ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನವ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಅವರು ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ್ದು, ವಯನಾಡಿನಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆಗೆ ನೆರವಾಗಲು ಬೆಂಗಳೂರಿನಲ್ಲಿರುವ ಎನ್‌ಡಿಆರ್‌ಎಫ್ ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳು ತ್ವರಿತವಾಗಿ ತೆರಳಲು ಹಾಗೂ ಅಗತ್ಯ ಉಪಕರಣಗಳು ಮತ್ತು ಇತರ ಅಗತ್ಯ ಪರಿಹಾರ ಸಾಮಗ್ರಿಗಳನ್ನು ರವಾನೆ ಮಾಡಲು ನೆರವು ನೀಡಲಾಗಿದೆ.

ಎಂಇಜಿಯ ಒಬ್ಬರು ಅಧಿಕಾರಿ, ಇಬ್ಬರು ಜೆ.ಸಿ.ಓ.ಗಳು ಹಾಗೂ 70 ಮಂದಿ ವಿವಿಧ ರ‍್ಯಾಂಕ್‌ನ ಸಿಬ್ಬಂದಿ ಈಗಾಗಲೇ ರಕ್ಷಣೆ ಹಾಗೂ ಪರಿಹಾರ ಸಾಮಗ್ರಿಗಳೊಂದಿಗೆ 15 ವಾಹನಗಳಲ್ಲಿ ವಯನಾಡಿಗೆ ತೆರಳಿದ್ದಾರೆ. ಇನ್ನೂ ಇಬ್ಬರು ಅಧಿಕಾರಿಗಳು, ನಾಲ್ಕು ಮಂದಿ ಜೆ.ಸಿ.ಓ.ಗಳು, ಹಾಗೂ 100 ಮಂದಿ ಸೇನಾ ಸಿಬ್ಬಂದಿ ರಕ್ಷಣಾ ಉಪಕರಣಗಳೊಂದಿಗೆ 40 ವಾಹನಗಳಲ್ಲಿ ತೆರಳಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ತಂಡಗಳು ವಯನಾಡಿಗೆ ಶೀಘ್ರವೇ ತಲುಪಲು ಅನುವಾಗುವಂತೆ, ಬಂಡೀಪುರ ಚೆಕ್ ಪೋಸ್ಟ್‌ನಲ್ಲಿ ಈ ಎನ್‌ಡಿಆರ್‌ಎಫ್ ಹಾಗೂ ಸೇನೆಯ ತಂಡಗಳಿಗೆ ಹಾಗೂ ಪರಿಹಾರ ಸಾಮಗ್ರಿಗಳ ಸಾಗಾಣಿಕೆ ವಾಹನಗಳಿಗೆ ಗ್ರೀನ್‌ ಕಾರಿಡಾರ್‌ ಮೂಲಕ ಅನಿರ್ಬಂಧಿತ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕ ಸರ್ಕಾರವು ಕೇರಳ ಸರ್ಕಾರದ ವಿಪತ್ತು ನಿರ್ವಹಣಾ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯ ನೆರವು ಒದಗಿಸಲಾಗುತ್ತಿದೆ. ಅಲ್ಲದೆ ಗಡಿ ಭಾಗದ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಹ ಸೂಕ್ತ ಬೆಂಬಲ ನೀಡುತ್ತಿದ್ದಾರೆ ಎಂದು ತಿಳಿಸಿದರು.

ವೈದ್ಯಕೀಯ ನೆರವು, ಆಸ್ಪತ್ರೆ ಸೌಲಭ್ಯ ಹಾಗೂ ಗಾಯಾಳುಗಳನ್ನು ಕರೆತರಲು ಬಸ್‌ಗಳನ್ನು ಎಚ್‌.ಡಿ. ಕೋಟೆಯಲ್ಲಿ ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಚಾಮರಾಜನಗರ ಜಿಲ್ಲಾಡಳಿತವೂ ಜಿಲ್ಲೆಯ ಗಡಿಭಾಗದಿಂದ ವಯನಾಡಿಗೆ ಆಗಾಗ ತೆರಳುವ ನಾಗರಿಕರ ನೆರವಿಗಾಗಿ ಸಹಾಯವಾಣಿ ಪ್ರಾರಂಭಿಸಿದೆ. ಮುಖ್ಯಮಂತ್ರಿಗಳು ಸ್ವತಃ ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದ್ದು, ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಚರಣೆಗೆ ಎಲ್ಲ ರೀತಿಯ ಬೆಂಬಲ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ | Wayanad Landslide: ಕೇರಳ ಭೂ ಕುಸಿತ; ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲು ಸರ್ಕಾರಕ್ಕೆ ಎಚ್‌ಡಿಕೆ ಸಲಹೆ

ಇದಲ್ಲದೆ ವಯನಾಡಿನಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳ ಕುರಿತಂತೆ ಸಮನ್ವಯಕ್ಕಾಗಿ ಹಿರಿಯ ಐಎಎಸ್‌ ಅಧಿಕಾರಿ ಪಿ.ಸಿ. ಜಾಫರ್‌ (ಮೊಬೈಲ್‌ ಸಂಖ್ಯೆ 9448355577) ಹಾಗೂ ದಿಲೀಶ್‌ ಶಶಿ (9446000514) ಅವರನ್ನು ನಿಯೋಜಿಸಲಾಗಿದೆ.

Continue Reading

ದೇಶ

ಜಾಬ್‌ ಸಿಕ್ಕಿದೆ ಎಂದು ಗೆಳೆಯರಿಗೆ ಪಾರ್ಟಿ ಕೊಟ್ಟ ಯುವತಿ; ಕುಡಿದ ಸ್ನೇಹಿತರು ಆಕೆಯನ್ನೇ ರೇಪ್ ಮಾಡಿದರು!

ತೆಲಂಗಾಣದಲ್ಲಿ ಕಳೆದ 24 ಗಂಟೆಯಲ್ಲಿಯೇ ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಜಾಬ್‌ ಸಿಕ್ಕ ಖುಷಿಯಲ್ಲಿ ಪಾರ್ಟಿ ಕೊಟ್ಟ ಗೆಳತಿ ಮೇಲೆಯೇ ಇಬ್ಬರು ಗೆಳೆಯರು ಅತ್ಯಾಚಾರ ಎಸಗಿದ್ದಾರೆ. ಮತ್ತೊಂದು ಪ್ರಕರಣದಲ್ಲಿ, ಖಾಸಗಿ ಬಸ್‌ನಲ್ಲಿ ಬಸ್‌ ಚಾಲಕನು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಸ್‌ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Girl
Koo

ಹೈದರಾಬಾದ್:‌ ಹೆಣ್ಣುಮಕ್ಕಳಿಗೆ ಮನೆಯ ಹೊರಗೆ ಬಿಡಿ ಮನೆಯ ಒಳಗೆ ಕೂಡ ರಕ್ಷಣೆ ಇಲ್ಲದಂತಾಗಿದೆ. ಅಪರಿಚಿತರು ಬಿಡಿ ಸಂಬಂಧಿಕರನ್ನೇ ನಂಬದಂತಹ ಸ್ಥಿತಿ ಎದುರಾಗಿದೆ. ಮಧ್ಯಪ್ರದೇಶದ ರೇವಾದಲ್ಲಿ 13 ವರ್ಷದ ಬಾಲಕನು 9 ವರ್ಷದ ತಂಗಿಯ ಮೇಲೆಯೇ ಅತ್ಯಾಚಾರ (Rape Case) ಎಸಗಿ, ಕೊಲೆ ಮಾಡಿದ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದೆ. ಇಂತಹ ಪ್ರಕರಣಗಳು ಹೆಣ್ಣುಮಕ್ಕಳ ಸುರಕ್ಷತೆ ಕುರಿತು ಭಯ ಹುಟ್ಟಿಸುತ್ತಿವೆ. ಇದರ ಬೆನ್ನಲ್ಲೇ, ಹೈದರಾಬಾದ್‌ನಲ್ಲಿ (Hyderabad) ಒಬ್ಬ ಬಾಲ್ಯ ಸ್ನೇಹಿತ ಸೇರಿ ಇಬ್ಬರು ಯುವಕರು ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಹೈದರಾಬಾದ್‌ ಯುವತಿಗೆ ಸಾಫ್ಟ್‌ವೇರ್‌ ಎಂಜಿನಿಯರ್‌ ಜಾಬ್‌ ಸಿಕ್ಕಿದ್ದು, ಬಾಲ್ಯದ ಸ್ನೇಹಿತನಾದ ಗೌತಮ್‌ ರೆಡ್ಡಿಗೆ ವಿಷಯ ತಿಳಿಸಿದ್ದಾಳೆ. ಆಗ ಗೆಳೆಯನು ಪಾರ್ಟಿ ಕೊಡಿಸು ಎಂದಿದ್ದಾನೆ. ಜಾಬ್‌ ಸಿಕ್ಕ ಖುಷಿಯಲ್ಲಿದ್ದ ಯುವತಿಯು ಬಾರ್‌ & ರೆಸ್ಟೋರೆಂಟ್‌ನಲ್ಲಿ ಪಾರ್ಟಿ ಕೊಡಿಸುವುದಾಗಿ ಒಪ್ಪಿಕೊಂಡಿದ್ದಾಳೆ. ಸೋಮವಾರ (ಜುಲೈ 29) ಸಂಜೆ ಗೌತಮ್‌ ರೆಡ್ಡಿಯು ತನ್ನ ಮತ್ತೊಬ್ಬ ಸ್ನೇಹಿತನೊಂದಿಗೆ ವನಸ್ಥಲಿಪುರಂನಲ್ಲಿರುವ ರೆಸ್ಟೋರೆಂಟ್‌ಗೆ ತೆರಳಿದ್ದಾನೆ. ಅಲ್ಲಿ, ಯುವತಿ, ಗೌತಮ್‌ ರೆಡ್ಡಿ ಹಾಗೂ ಆತನ ಗೆಳೆಯ ಸೇರಿ ಪಾರ್ಟಿ ಮಾಡಿದ್ದಾರೆ. ಅದಾದ ಬಳಿಕ ಇಬ್ಬರೂ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ.

Crime Scene
Crime Scene

“ಗೌತಮ್‌ ರೆಡ್ಡಿ ಹಾಗೂ ಯುವತಿಯು 2ನೇ ಕ್ಲಾಸ್‌ನಿಂದ 10ನೇ ತರಗತಿವರೆಗೆ ಒಂದೇ ಶಾಲೆಯಲ್ಲಿ ಓದಿದ್ದಾರೆ. ಜಾಬ್‌ ಸಿಕ್ಕ ಖುಷಿಯಲ್ಲಿ ಯುವತಿಯು ಪಾರ್ಟಿಗೆ ಕರೆದಿದ್ದಾಳೆ. ಬಾರ್‌ & ರೆಸ್ಟೋರೆಂಟ್‌ನಲ್ಲಿ ಪಾರ್ಟಿ ಮಾಡಿದ ಬಳಿಕ ಕುಡಿದ ಮತ್ತಿನಲ್ಲಿ ಯುವತಿಯನ್ನು ಇಬ್ಬರೂ ಕೋಣೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಇಬ್ಬರೂ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂಬುದಾಗಿ ವನಸ್ಥಲಿಪುರಂ ಪೊಲೀಸ್‌ ಇನ್ಸ್‌ಪೆಕ್ಟರ್‌ ಡಿ ಜಲೇಂದರ್‌ ರೆಡ್ಡಿ ಮಾಹಿತಿ ನೀಡಿದ್ದಾರೆ.

ಬಸ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ

ತೆಲಂಗಾಣದಲ್ಲಿಯೇ ಮಂಗಳವಾರ (ಜುಲೈ 30) ಬಸ್‌ನಲ್ಲಿ ಮಹಿಳೆ ಮೇಲೆ ಬಸ್‌ ಚಾಲಕನು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಿರ್ಮಲ್‌ದಿಂದ ಖಾಸಗಿ ಬಸ್‌ನಲ್ಲಿ ಪ್ರಕಾಶಂ ಜಿಲ್ಲೆಗೆ ಮಹಿಳೆ ತೆರಳುತ್ತಿದ್ದರು. ಬೆಳಗಿನ ಜಾವ ಬಸ್‌ ಚಾಲಕನು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಕುರಿತು ಮಹಿಳೆಯು ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ ಪೊಲೀಸರು ಬಸ್‌ ಚಾಲಕನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Physical Abuse: 85 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ; ಭೀಕರ ಘಟನೆ ಬಳಿಕ ಮಹಿಳೆ ಸಾವು

Continue Reading

ಕರ್ನಾಟಕ

Puneeth Kerehalli: ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರು

Puneeth Kerehalli: ಬೆಂಗಳೂರಿಗೆ ಕುರಿ ಮಾಂಸದ ನೆಪದಲ್ಲಿ ನಾಯಿ ಮಾಂಸವನ್ನು ಬೇರೆ ರಾಜ್ಯದಿಂದ ತರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಪುನೀತ್‌ ಕೆರೆಹಳ್ಳಿ ಆರೋಪಿಸಿ, ಮೆಜೆಸ್ಟಿಕ್‌ಗೆ ಬರುತ್ತಿದ್ದ ಮಾಂಸದ ವಾಹನಗಳನ್ನು ತಡೆದಿದ್ದರು. ಈ ವೇಳೆ ಪೊಲೀಸರು ಹಿಂದು ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದರು.

VISTARANEWS.COM


on

Puneeth Kerehalli
Koo

ಬೆಂಗಳೂರು: ಮಾಂಸ ಸಾಗಾಟಕ್ಕೆ ಅಡಚಣೆ ಪ್ರಕರಣದಲ್ಲಿ ಬಂಧನವಾಗಿದ್ದ ರಾಷ್ಟ್ರ ಜಾಗೃತಿ ಸಂಘಟನೆ ಅಧ್ಯಕ್ಷ ಪುನೀತ್ ಕೆರೆಹಳ್ಳಿಗೆ (Puneeth Kerehalli) ನಗರದ 5ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪರಿಶೀಲನೆ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಅರೆಸ್ಟ್‌ ಅಗಿದ್ದ ಪುನೀತ್‌ ಕೆರೆಹಳ್ಳಿಗೆ ಜುಲೈ 27ರಂದು ಕೋರ್ಟ್‌ 14 ದಿನ ನ್ಯಾಯಾಂಗ ಬಂಧನ ವಿಧಿಸಿತ್ತು. ಇದರ ಬೆನ್ನಲ್ಲೇ ಷರತ್ತುಬದ್ಧ ಜಾಮೀನು ಮಂಜೂರು ಆಗಿದೆ.

ಪ್ರತಿ ತಿಂಗಳ ಮೊದಲ ಭಾನುವಾರ ಠಾಣೆಗೆ ಹಾಜರಾಗಿ ಸಹಿ ಮಾಡಬೇಕು. ದೇಶಬಿಟ್ಟು ಹೋಗಬಾರದು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. ಮತ್ತೆ ಇಂತಹದ್ದೆ ಅಪರಾಧ ಕೃತ್ಯದಲ್ಲಿ ಭಾಗಿ ಆಗಬಾರದು ಎಂದು ಕೋರ್ಟ್‌ ಷರತ್ತುಗಳನ್ನು ವಿಧಿಸಿ, ಜಾಮೀನು ಮಂಜೂರು ಮಾಡಿದೆ.

ಬೆಂಗಳೂರಿಗೆ ಕುರಿ ಮಾಂಸದ ನೆಪದಲ್ಲಿ ನಾಯಿ ಮಾಂಸವನ್ನು ಬೇರೆ ರಾಜ್ಯದಿಂದ ತರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಪುನೀತ್‌ ಕೆರೆಹಳ್ಳಿ ಆರೋಪಿಸಿ, ಮೆಜೆಸ್ಟಿಕ್‌ಗೆ ಬರುತ್ತಿದ್ದ ಮಾಂಸದ ವಾಹನಗಳನ್ನು ತಡೆದಿದ್ದರು. ಪೊಲೀಸರು ಮಧ್ಯಪ್ರವೇಶಿಸಿ, ಮಾಂಸವನ್ನು ವಶಪಡಿಸಿಕೊಂಡಿದ್ದರು. ಪೊಲೀಸರ ಭದ್ರತೆಯಲ್ಲಿ ಕೋಲ್ಡ್ ಸ್ಟೋರೇಜ್‌ಗೆ ಮಾಂಸ ತುಂಬಿದ ನಾಲ್ಕು ವಾಹನಗಳು ರವಾನೆಯಾಗಿದ್ದವು. ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರಿಂದ ಪುನೀತ್‌ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ | Actor Darshan: ದರ್ಶನ್‌ ಸೆಲ್‌ ಭದ್ರತೆಗೆ 7 ಜನ ಸಿಬ್ಬಂದಿ ನಿಯೋಜನೆ! ಕಾರಣ ಇದು

ಮುಸ್ಲಿಂ ಮುಖಂಡ ಅಬ್ದುಲ್‌ ರಜಾಕ್‌ ಎಂಬುವವರಿಂದ ನಾಯಿ ಮಾಂಸ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ ಪುನೀತ್‌ ಕೆರೆಹಳ್ಳಿ ಮತ್ತು ತಂಡ ದಾಳಿ ಮಾಡಿತ್ತು. ಆದರೆ, ಆಹಾರ ಸುರಕ್ಷತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮಾಂಸದ ಸ್ಯಾಂಪಲ್‌ ಅನ್ನು ಲ್ಯಾಬ್‌ಗೆ ಕಳುಹಿಸಿದ್ದರು. ಆದರೆ, ಅದು ಮೇಕೆ ಮಾಂಸ ಎಂದು ವರದಿಯಲ್ಲಿ ಬಂದಿರುವುದಾಗಿ ಗೃಹ ಸಚಿವ ಪರಮೇಶ್ವರ್‌ ತಿಳಿಸಿದ್ದರು.

ಇನ್‌ಸ್ಟಾಗ್ರಾಮ್‌ ಗೆಳೆಯನಿಗಾಗಿ ಗಂಡನನ್ನೇ ಕೊಲೆ ಮಾಡಿಸಿದ ಐನಾತಿ ಹೆಂಡತಿ

murder case
murder case

ತುಮಕೂರು: ಪರಪುರುಷನ ಮೋಹಕ್ಕೆ ಸಿಲುಕಿದಾಕೆ ತನ್ನ ಪ್ರೀತಿಗೆ ಅಡ್ಡಿಯಾಗಿದ್ದ ಪತಿಯನ್ನೇ ಕೊಂದು (Murder case) ಮುಗಿಸಿದ್ದಾಳೆ. ಇನ್‌ಸ್ಟಾಗ್ರಾಮ್‌ ಪ್ರಿಯತಮನಿಗಾಗಿ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಕೊಲೆ ಮಾಡಿಸಿದ್ದಾಳೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಲ್ಲೆಕಾವು ಗ್ರಾಮದ ಬಳಿ ಘಟನೆ ನಡೆದಿದೆ.

ಪ್ರಕಾಶ್ (30) ಮೃತ ದುರ್ದೈವಿ. ಹರ್ಷಿತಾ (28) ಪತಿಯನ್ನು ಕೊಲೆ ಮಾಡಿಸಿದವಳು. ಕಲಬುರಗಿ ಜಿಲ್ಲೆಯ ಚಿಂಚುಲಿ ಮೂಲದ ಪ್ರಕಾಶ್‌ಗೆ ಇದೇ ಇನ್‌ಸ್ಟಾಗ್ರಾಮ್‌ನಿಂದ ಮೂರು ವರ್ಷದ ಹಿಂದೆ ಈ ಹರ್ಷಿತಾಳ ಪರಿಚಯವಾಗಿತ್ತು. ಬಳಿಕ ಪರಸ್ಪರ ಪ್ರೀತಿಸಿ ಇಬ್ಬರೂ ಮದುವೆಯಾಗಿದ್ದರು.

ಮದುವೆಯಾದ್ಮೇಲೆ ಪ್ರಕಾಶ್‌ ಪತ್ನಿಯ ತವರಿನಲ್ಲೇ ವಾಸವಿದ್ದ. ಈ ದಂಪತಿಗೆ ಒಂದೂವರೆ ವರ್ಷದ ಮಗುವೂ ಇತ್ತು. ಆದರೆ ಇತ್ತೀಚೆಗೆ ಹರ್ಷಿತಾಳಿಗೆ ಇನ್‌ಸ್ಟಾಗ್ರಾಂನಲ್ಲಿ ಮಾಜಿ ಪ್ರಿಯತಮ ಗುಂಡ ಎಂಬಾತ ಸಂಪರ್ಕಕ್ಕೆ ಸಿಕ್ಕಿದ್ದ. ಗುಂಡನ ಮೋಹಕ್ಕೆ ಸಿಲುಕಿದ ಹರ್ಷಿತಾ, ಪ್ರಕಾಶ್‌ನನ್ನು ಕಡೆಗಣಿಸಿದ್ದಳು. ಹರ್ಷಿತಾ ಮತ್ತು ಗುಂಡ ಇಬ್ಬರಿಗೂ ಮರುಪ್ರೇಮಾಂಕುರವಾಗಿತ್ತು.

ಮಾತ್ರವಲ್ಲ, ಮಗು- ಗಂಡನನ್ನು ಬಿಟ್ಟು ಕಳೆದ 2 ತಿಂಗಳ ಹಿಂದೆ ಪ್ರಿಯತಮ ಗುಂಡನ ಜತೆಗೆ ಮನೆ ಬಿಟ್ಟು ಪರಾರಿಯಾಗಿದ್ದಳು. ಈ ವೇಳೆ ಪ್ರಕಾಶ್ ಪೊಲೀಸ್ ಠಾಣೆಗೆ ದೂರು ನೀಡಿದ್ದ. ಬಳಿಕ ಹರ್ಷಿತಾ ಮನೆಗೆ ವಾಪಾಸ್ಸಾಗಿದ್ದಳಿ. ಆದರೆ ಒಳಗೊಳಗೆ ಗಂಡನ ಕೊಲೆಗೆ ಸ್ಕೆಚ್ ಹಾಕಿದ್ದಳು. ಪತಿಯ ಕೊಲೆಗಾಗಿ ಸಹೋದರ ಸೋಮಶೇಖರ್ ಹಾಗೂ ಪ್ರಿಯತಮ ಗುಂಡನಿಗೆ ಸುಪಾರಿ ನೀಡಿದ್ದಳು.

ಪ್ರಕಾಶ್‌ನನ್ನು ಏನೇನೋ ಹೇಳಿ ಪುಸಲಾಯಿಸಿ ಸೋಮಶೇಖರ್‌ ಕರೆಸಿಕೊಂಡಿದ್ದ. ಗುಂಡ ಮತ್ತು ಆತನ ಸ್ನೇಹಿತ ರಂಗಸ್ವಾಮಯ್ಯ, ಪ್ರಕಾಶ್ ಬರುತ್ತಿದ್ದಂತೆ ಆತನ ಮೇಲೆ ಹಲ್ಲೆ ನಡೆಸಿದ್ದರು. ಡ್ರ್ಯಾಗರ್‌ನಿಂದ ಎದೆಭಾಗಕ್ಕೆ ಚುಚ್ಚಿ ಕೊಲೆ ಮಾಡಿದ್ದರು. ಬಳಿಕ ಅಪಘಾತದ ರೀತಿಯಲ್ಲಿ ಬಿಂಬಿಸಲು ಹೊರಟಿದ್ದರು. ಆದರೆ ಎದೆಭಾಗಕ್ಕೆ ಚುಚ್ಚಿದ ಗಾಯದ ಗುರುತು ಪತ್ತೆ ಮಾಡಿದ ಪೊಲೀಸರು ಇದು ಅಪಘಾತವಲ್ಲ ಬದಲಿಗೆ ಕೊಲೆ ಎಂದು ಖಚಿತ ಪಡಿಸಿಕೊಂಡಿದ್ದರು.

ಇದನ್ನೂ ಓದಿ: Brutal Murder: ಎದೆ, ಗುಪ್ತಾಂಗಕ್ಕೆ ಚಾಕು ಇರಿದು ಹತ್ಯೆ; ಬೀದಿಯಲ್ಲಿ ಬಿದ್ದಿದ್ದ ಯುವತಿಯ ಶವವನ್ನುಕಚ್ಚಿ ಎಳೆದಾಡಿದ ಶ್ವಾನಗಳು; ಕರ್ನಾಟಕ ಮೂಲದ ದಾವೂದ್‌ ಎಸ್ಕೇಪ್‌

ವಿಚಾರಣೆ ವೇಳೆ ಪತ್ನಿ ಹರ್ಷಿತಾಳ ಮಾಸ್ಟ್‌ರ್‌ ಪ್ಲ್ಯಾನ್‌ಗೆ ಪೊಲೀಸರೇ ದಂಗಾಗಿದ್ದಾರೆ. ಸದ್ಯ ಕೊರಟಗೆರೆ ಪೊಲೀಸರಿಂದ ಹರ್ಷಿತಾ, ಸೋಮಶೇಖರ್, ರಂಗಸ್ವಾಮಯ್ಯನನ್ನು ಬಂಧಿಸಲಾಗಿದೆ. ಮುಖ್ಯ ಆರೋಪಿ ಗುಂಡನಿಗಾಗಿ ಬಲೆ ಬೀಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading
Advertisement
IND vs SL
ಪ್ರಮುಖ ಸುದ್ದಿ2 hours ago

IND vs SL : ಲಂಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲೂ ಭಾರತಕ್ಕೆ ಜಯ, ಸರಣಿ ಕ್ಲೀನ್ ಸ್ವೀಪ್ ಮಾಡಿದ ಸೂರ್ಯಕುಮಾರ್ ಪಡೆ

CM Siddaramaiah
ಕರ್ನಾಟಕ2 hours ago

CM Siddaramaiah: ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಫೇಲ್; ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಹೇಳಿಕೆ

Rashid Khan
ಪ್ರಮುಖ ಸುದ್ದಿ2 hours ago

Rashid Khan : ಟಿ20 ಕ್ರಿಕೆಟ್​ನಲ್ಲಿ ವಿಕೆಟ್​ಗಳ ಹೊಸ ಮೈಲುಗಲ್ಲು ಸೃಷ್ಟಿಸಿದ ಅಫಘಾನಿಸ್ತಾನ ಬೌಲರ್ ರಶೀದ್ ಖಾನ್​

Anurag Thakur
ದೇಶ2 hours ago

Anurag Thakur: ತಮ್ಮ ಜಾತಿಯೇ ಗೊತ್ತಿರದ ರಾಹುಲ್‌ ಗಾಂಧಿಯಿಂದ ಜಾತಿಗಣತಿ ಪ್ರಸ್ತಾಪ ಎಂದ ಅನುರಾಗ್‌ ಠಾಕೂರ್‌!

ICC T20 ranking
ಪ್ರಮುಖ ಸುದ್ದಿ3 hours ago

ICC T20 ranking : ಐಸಿಸಿ ರ್ಯಾಂಕಿಂಗ್​ನಲ್ಲಿ ಸ್ಮೃತಿ ಮಂಧಾನಾ, ರೇಣುಕಾಗೆ ಭರ್ಜರಿ ಲಾಭ

Asian Cricket Council
ಪ್ರಮುಖ ಸುದ್ದಿ3 hours ago

Asian Cricket Council : ಜಯ್​ ಶಾ ಹೊಂದಿರುವ ಉನ್ನತ ಸ್ಥಾನದ ಮೇಲೆ ಕಣ್ಣಿಟ್ಟಿರುವ ಪಾಕಿಸ್ತಾನ ಮೊಹ್ಸಿನ್ ನಖ್ವಿ

Viral video
ವೈರಲ್ ನ್ಯೂಸ್3 hours ago

Viral video: ಪೋಷಕರ ಫೋಟೊ ಶೋಕಿ; ಮೊಸಳೆ ಎದುರು ಮಕ್ಕಳಿಗೆ ಪ್ರಾಣ ಸಂಕಟ! ಆಘಾತಕಾರಿ ವಿಡಿಯೊ

Ranbir Kapoor
ಸಿನಿಮಾ3 hours ago

Ranbir Kapoor: ಮುದ್ದಿನ ಮಡದಿ ಅಲಿಯಾ ಕುರಿತ ಸೀಕ್ರೆಟ್ ಮಾಹಿತಿ ಹಂಚಿಕೊಂಡ ರಣಬೀರ್!

Minister Ramalinga Reddy drives for state level inter school Olympics sports in Bengaluru
ಬೆಂಗಳೂರು3 hours ago

Bengaluru News: ರಾಜ್ಯಮಟ್ಟದ ಅಂತರಶಾಲಾ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ

Decision to release water from Malaprabha Reservoir says minister Lakshmi Hebbalkar
ಕರ್ನಾಟಕ3 hours ago

Lakshmi Hebbalkar: ಸುರಕ್ಷತೆ ದೃಷ್ಟಿಯಿಂದ ಮಲಪ್ರಭಾ ಜಲಾಶಯದಿಂದ ನೀರು ಬಿಡಲು ನಿರ್ಧಾರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ8 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ12 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ13 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 day ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 day ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌