ಮೊಗಸಾಲೆ ಅಂಕಣ | ಏಳು ಸುತ್ತಿನ ಕೋಟೆಯೊಳಗೆ ಮಲ್ಲಿಕಾರ್ಜುನ ಖರ್ಗೆ - Vistara News

ಅಂಕಣ

ಮೊಗಸಾಲೆ ಅಂಕಣ | ಏಳು ಸುತ್ತಿನ ಕೋಟೆಯೊಳಗೆ ಮಲ್ಲಿಕಾರ್ಜುನ ಖರ್ಗೆ

ಏಐಸಿಸಿಗೆ ರಾಹುಲ್‌ ಗಾಂಧಿ, ಅಶೋಕ್‌ ಗೆಹ್ಲೋಟ್‌ ಬಳಿಕ ಸೋನಿಯಾ ಗಾಂಧಿಯವರ ಮೂರನೇ ಆಯ್ಕೆಯಾಗಿದ್ದವರು ಮಲ್ಲಿಕಾರ್ಜುನ ಖರ್ಗೆ. ಅಧ್ಯಕ್ಷರಾದ ಬಳಿಕ ಅವರ ಮುಂದೆ ಈಗ ನೂರೆಂಟು ಸವಾಲುಗಳಿವೆ..

VISTARANEWS.COM


on

mallikarjun kharge
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
mogasale logo

ಮೂರು ವರ್ಷದಿಂದ ಚರ್ಚೆಯಲ್ಲಿದ್ದ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಅಂತೂಇಂತೂ ಎಂಬಂತೆ ಸುಖಾಂತ್ಯ ಕಂಡಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ನಿರೀಕ್ಷೆಯಂತೆ ಎಂ. ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರಾಗಿ ಬಹುಮತದೊಂದಿಗೆ ಆಯ್ಕೆಯಾಗಿದ್ದಾರೆ. ಸಿದ್ದವ್ವನಹಳ್ಳಿ ನಿಜಲಿಂಗಪ್ಪ ತರುವಾಯದಲ್ಲಿ ಪ್ರತಿಷ್ಟಿತ ಹುದ್ದೆಗೆ ಏರಿರುವ ಎರಡನೇ ಕನ್ನಡಿಗ ಖರ್ಗೆ. ಕರ್ನಾಟಕದವರಿಗೆಲ್ಲ ಇದು ಸಹಜ ಹೆಮ್ಮೆಯ ವಿಚಾರ. ನಿಜಲಿಂಗಪ್ಪನವರು ಅಧ್ಯಕ್ಷರಾದಾಗ ಎದುರಿಸಿದ ಬಿಕ್ಕಟ್ಟು ಖರ್ಗೆ ಮುಂದೆ ಇಲ್ಲ. ಆದರೆ ಭಿನ್ನ ಬಗೆಯ ಒಳಸುಳಿಗಳು ಅಧ್ಯಕ್ಷರನ್ನು ಕಟ್ಟಿ ಹಾಕುವ ಅಪಾಯ ಇದ್ದೇ ಇದೆ. ಅನಿರೀಕ್ಷಿತ ಮೂಲೆಗಳಿಂದ, ಮೂಲಗಳಿಂದ ಧುತ್ತೆಂದು ಎದುರಾಗುವ ನೂರೆಂಟು ವಿಘ್ನಗಳು ಒಡ್ಡುವ ಸವಾಲನ್ನು ಎದುರಿಸುವುದಕ್ಕೆ ಯಾವ ರೀತಿಯ ಮಾನಸಿಕ ಸಿದ್ಧತೆ ಖರ್ಗೆಯವರಲ್ಲಿದೆ ಮತ್ತು ಸಮಸ್ಯೆಗಳನ್ನೆಲ್ಲ ಅವರು ಹೇಗೆ ನಿಭಾಯಿಸುತ್ತಾರೆ ಎನ್ನುವುದರ ಆಧಾರದ ಮೇಲೆ ನೂತನ ಅಧ್ಯಕ್ಷಗಿರಿಯ ಯಶಸ್ಸು ಅಥವಾ ಸೋಲು ನಿರ್ಧಾರವಾಗಲಿದೆ.

ಬರೋಬ್ಬರಿ ಒಂದು ದಶಕ ಕೇಂದ್ರದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್/ಯುಪಿಎ ಸರ್ಕಾರ 2014ರಲ್ಲಿ ಕೈತಪ್ಪಿಹೋಯಿತು. ಈ ಮಾತಿಗೆ ಈಗ ಎಂಟು ವರ್ಷ. ಎಲ್ಲ ರಾಜ್ಯಗಳ ಭೌಗೋಳಿಕ, ಜನಸಂಖ್ಯಾ ಅಗತ್ಯ ಆಧರಿಸಿ ಒಂದೋ ಎರಡೋ ರ್ಯಾಲಿ ನಡೆಸಿ “ನಾವು ಸೋತಿದ್ದೇವೆ ನಿಜ, ಆದರೆ ಸತ್ತಿಲ್ಲ” ಎಂಬ ಸಂದೇಶವನ್ನು ದೇಶವಾಸಿಗಳಿಗೆ ಕಾಂಗ್ರೆಸ್ಸು ಆವಾಗಲೇ ರವಾನಿಸಬೇಕಿತ್ತು. ರಾಹುಲ್‍ರ ಅನಾಸಕ್ತಿ ಮೇಲುಗೈ ಪಡೆದು ಕಾರ್ಯಕ್ರಮ ರೂಪುಗೊಳ್ಳಲಿಲ್ಲ. ಜನರ ಮುಂದೆ ಹೋಗದೆ ಅನ್ಯ ಮಾರ್ಗವಿಲ್ಲ ಎಂಬ ತೀರ್ಮಾನಕ್ಕೆ ಪಕ್ಷ ಬರಲು ಅದರ ನಾಯಕರು ಇಷ್ಟು ವರ್ಷ ತೌಡು ಕುಟ್ಟಿದ ಬಳಿಕ ರೂಪುಗೊಂಡಿದ್ದು “ಭಾರತ್ ಜೋಡೋ” ಅಭಿಯಾನ. ಅಭಿಯಾನದ ಕಾರಣವಾಗಿ ಮರೆತುಹೋಗಿದ್ದ ಕಾಂಗ್ರೆಸ್ಸನ್ನು ಜನ ನೆನಪಿಸಿಕೊಳ್ಳುವಂತಾಗಿರುವುದು ಉತ್ತಮ ಬೆಳವಣಿಗೆ. ಅದು ಮೂಡಿಸಿರುವ ಸಂಚಲನ ಒಡೆದು ಕಾಣಿಸುತ್ತಿದೆ. ಸಮರ್ಥ ವಿರೋಧ ಪಕ್ಷ ಸಮರ್ಪಕ ಪ್ರಜಾಪ್ರಭುತ್ವದ ಬುನಾದಿ ಎಂಬ ಮಾತು ನಿಧಾನವಾಗಿ ಮತ್ತೆ ಪ್ರಚಲಿತಕ್ಕೆ ಬರುವ ಲಕ್ಷಣವೂ ಗೋಚರವಾಗುತ್ತಿದೆ. ಇದು ಖರ್ಗೆ ಪಾಲಿಗೂ ಸೈ; ಹೊಸದಾಗಿ ಅವರು ಸೂತ್ರಧಾರತ್ವ ವಹಿಸಿಕೊಂಡಿರುವ ಪಕ್ಷಕ್ಕೂ ಸೈ ಸಮಾಧಾನ ತರುವ ಬೆಳವಣಿಗೆ.

ಏಐಸಿಸಿಗೆ ರಾಹುಲ್ ಗಾಂಧಿಯವರನ್ನು ಅಧ್ಯಕ್ಷರನ್ನಾಗಿ ಕುಳ್ಳಿರಿಸುವ ಸೋನಿಯಾ ಗಾಂಧಿಯವರ ಯತ್ನಕ್ಕೆ ಭಾರೀ ಹಿನ್ನಡೆಯಾದ ನಂತರದಲ್ಲಿ ಸೋನಿಯಾರ ಮೊದಲ ಆಯ್ಕೆಯಾಗಿದ್ದವರು ಅಶೋಕ್ ಗೆಹ್ಲೋಟ್. ಆ ಯೋಚನೆ ಭ್ರೂಣಾವಸ್ಥೆಯಲ್ಲೇ ಗರ್ಭಪಾತಕ್ಕೊಳಗಾಯಿತು. ನಂತರದ ಆಯ್ಕೆ ಖರ್ಗೆ. ನಾಮಪತ್ರ ಸಲ್ಲಿಸಿದ ದಿವಸವೇ ಖರ್ಗೆ ಜಯವೂ ಖಚಿತವಾಗಿತ್ತು. ಶಶಿ ತರೂರ್ ಸ್ಪರ್ಧೆ ಒಂದು ಸಾಂಕೇತಿಕ ವಿರೋಧ ಮಾತ್ರವಾಗಿತ್ತು. ಶಶಿ, ಕೇರಳದ ತಿರುವನಂತಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ. ಅದರ ಪಕ್ಕದ ವೈನಾಡು, ರಾಹುಲ್ ಗಾಂಧಿಯವರು ಆಯ್ಕೆಯಾಗಿರುವ ಕ್ಷೇತ್ರ. ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ, ಖರ್ಗೆಯವರಿಗೆ ಬೆಂಬಲ ಸೂಚಿಸಿ ನಿರ್ಣಯ ಅಂಗೀಕರಿಸಿದಾಗ “ಶಶಿ ನಮ್ಮವರು” ಎನ್ನುವುದು ಅದಕ್ಕೆ ಮರೆತು ಹೋಗಿದ್ದೊಂದು ಕಾಕತಾಳೀಯ. ದೇಶದ 12 ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಗಳು ಖರ್ಗೆ ಪರವಾಗಿ ನಿರ್ಣಯ ಅಂಗೀಕರಿಸಿದ್ದು “ಏಐಸಿಸಿ ಚುನಾವಣಾ ನಿಯಮಗಳಿಗೆ ವಿರುದ್ಧವಾದ ನಡವಳಿಕೆ” ಎನ್ನಲಾಗಿದೆ. ಆದರೆ ಖರ್ಗೆಯವರ ಆಯ್ಕೆ ಘೋಷಣೆಯಾಗುವುದರೊಂದಿಗೆ ಇದೆಲ್ಲ ಮುಚ್ಚಿ ಹೋಗಲಿದೆ.

mallikarjun kharge 2

ಇದೆಲ್ಲ ಏನೇ ಇದ್ದರೂ ಖರ್ಗೆಯವರು ಕಾಂಗ್ರೆಸ್ ಕಟ್ಟುವ ಕೆಲಸದಲ್ಲಿ ಕ್ರಿಯಾಶೀಲರಾಗಬೇಕಿದೆ. ಇದುವರೆಗೆ ಹಂಗಾಮಿಯಾಗಿಯಾದರೂ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಅವರ ಆರೋಗ್ಯ ದಿನೇ ದಿನೇ ಹದಗೆಡುತ್ತಿದೆ. ಖರ್ಗೆಯವರ ಸಾಮಾನ್ಯ ಆರೋಗ್ಯವೇನೋ ಚೆನ್ನಾಗಿಯೇ ಇರುವಂತಿದೆ. ಆದರೆ ಅವರ ವಯಸ್ಸು ಎಂಬತ್ತನ್ನು ದಾಟುತ್ತಿದೆ. ಕೆಲವು ವರ್ಷ ಹಿಂದೆ ಅವರ ಎರಡೂ ಮಂಡಿ ಚಿಪ್ಪಿನ ಶಸ್ತ್ರ ಚಿಕಿತ್ಸೆ ಆದ ಬಳಿಕ ಸಹಜ ಓಡಾಟ ಅವರಿಂದ ಆಗುತ್ತಿಲ್ಲ. ಕೂತಲ್ಲೇ ಕೆಲಸ ಮಾಡುವ ಆರಾಮ್ ಖುರ್ಚಿ ಕೆಲಸ ಏಐಸಿಸಿ ಅಧ್ಯಕ್ಷರದಲ್ಲ. ತಮ್ಮನ್ನು ಭೇಟಿ ಮಾಡಲೆಂದು ದೆಹಲಿಗೆ ಬರುತ್ತಿದ್ದ ಪಕ್ಷದ ಮುಖಂಡರಿಗೆ ಸೋನಿಯಾ ದರ್ಶನ ಕಷ್ಟವಾಗಿದ್ದ ದಿನಗಳನ್ನು ಕಾಂಗ್ರೆಸ್ ಮುಖಂಡರು ಖರ್ಗೆ ವಿಚಾರದಲ್ಲಿ ಸಹಿಸಿಕೊಳ್ಳಲಾರರು. ಆಪ್ತ ಕಾರ್ಯದರ್ಶಿ ಅಹ್ಮದ್ ಪಟೇಲರನ್ನು ಸೋನಿಯಾ ಗಾಂಧಿ ಅತಿಯಾಗಿ ಅವಲಂಬಿಸಿದ್ದರು. ಪಕ್ಷದ ಮುಖ್ಯಮಂತ್ರಿಗಳು ಅಧ್ಯಕ್ಷರ ಭೇಟಿಗೆ ಬಂದರೆ ಆಪ್ತ ಕಾರ್ಯದರ್ಶಿಯನ್ನು ನೋಡಿರೆಂಬ ಸೂಚನೆ ಹೋಗುತ್ತಿತ್ತು. ಅದು ಸೋನಿಯಾ ದರ್ಬಾರು, ನಡೆದು ಹೋಯಿತು. ಆ ರೀತಿಯ ದರ್ಬಾರಿನ ರಾಜಕಾರಣವನ್ನು ಖರ್ಗೆ ಮಾಡಲಾಗದು; ಮಾಡಬಾರದು. ಎಂದರೆ ಅವರು ದೆಹಲಿಯಲ್ಲಿದ್ದಾಗ ಅವರ ನಿತ್ಯ ದರ್ಶನಕ್ಕೆ ಏಐಸಿಸಿ ಕಚೇರಿಯಲ್ಲಿ ಸೂಕ್ತ ವ್ಯವಸ್ಥೆ ಆಗಬೇಕು.

ರಾಹುಲ್ ಗಾಂಧಿ ಯಾವ ಸಮಯದಲ್ಲಿ ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ; ಯಾವ ರೀತಿ ವರ್ತಿಸುತ್ತಾರೆಂದು ಹೇಳುವ ಜ್ಯೋತಿಷಿ ಇನ್ನೂ ಹುಟ್ಟಿಲ್ಲ. ಮನಮೋಹನ್ ಸಿಂಗ್ ಪ್ರಧಾನಿಯಾಗಿ ಅಮೆರಿಕಾ ಪ್ರವಾಸ ಕಾಲದಲ್ಲಿ ಅಧ್ಯಕ್ಷ ಒಬಾಮಾರನ್ನು ಭೇಟಿ ಮಾಡುವ ಕಾರ್ಯಕ್ರಮ ನಿಗದಿಯಾಗಿತ್ತು. ಇಲ್ಲಿ ದೆಹಲಿ ಪ್ರೆಸ್‍ಕ್ಲಬ್‍ನಲ್ಲಿ ಕಾಂಗ್ರೆಸ್ ಮಾಧ್ಯಮಗೋಷ್ಠಿ. ಸರ್ಕಾರ ಹೊರಡಿಸಲಿದ್ದ ಸುಗ್ರೀವಾಜ್ಞೆ ಕುರಿತ ಮಾಹಿತಿ ಹಂಚಿಕೊಳ್ಳುವ ಗೋಷ್ಠಿಗೆ ಒಂಟೆಯಂತೆ ನುಗ್ಗಿದ್ದ ರಾಹುಲ್ ಸುಗ್ರೀವಾಜ್ಞೆಯ ಕರಡನ್ನು ಪರಪರ ಹರಿದು ಸೀನ್ ಕ್ರಿಯೇಟ್ ಮಾಡಿದ್ದರು. ಅಲ್ಲಿ ಅಮೆರಿಕಾದಲ್ಲೂ ಇದು ಸುದ್ದಿಯಾಗಿ ಪ್ರಧಾನಿ ತೀವ್ರ ಮುಜುಗರ ಅನುಭವಿಸಿದ್ದರು. ಸೋನಿಯಾ ಗಾಂಧಿ ಮಗ ಎಂಬ ಏಕೈಕ ಕಾರಣಕ್ಕಾಗಿ ಯಾವುದೇ ಬಗೆಯ ಶಿಸ್ತುಕ್ರಮಕ್ಕೂ ಅವರು ಒಳಪಡಲಿಲ್ಲ. ರಾಹುಲ್ ಈಗ ಹಾಗೆಲ್ಲ ಮಾಡುವವರಲ್ಲ, ಮಾಗಿದ್ದಾರೆ ಎಂದು ನಂಬಲು ಸಣ್ಣ ಆಧಾರವೂ ಇಲ್ಲ.

ಇದನ್ನೂ ಓದಿ | ಬಿಜೆಪಿಯ SCST ಮೀಸಲಾತಿ ಮಾಸ್ಟರ್‌ ಸ್ಟ್ರೋಕ್‌ಗೆ ಕಾಂಗ್ರೆಸ್‌ ಉತ್ತರ ಮಲ್ಲಿಕಾರ್ಜುನ ಖರ್ಗೆ?

ದೇಶದ ಉದ್ದಗಲಕ್ಕೆ ಖರ್ಗೆಯವರು ಮುಂದಿನ ದಿನಗಳಲ್ಲಾದರೂ ವ್ಯಾಪಕವಾಗಿ ಸಂಚರಿಸಬೇಕು. 2014ರಿಂದ 2019ರವರೆಗೆ ಐದು ವರ್ಷ ಅವರು ಲೋಕಸಭೆಯಲ್ಲಿ ಕಾಂಗ್ರೆಸ್ ಗುಂಪಿನ ನಾಯಕರಾಗಿದ್ದರು. ಆ ಅವಧಿಯಲ್ಲಿ ಎಂದೂ ಪಕ್ಷ ಸಂಘಟನೆಗಾಗಿ ಅವರು ದೇಶ ಸುತ್ತಲಿಲ್ಲ. ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಬಳಿಕವೂ ಈ ದಿಸೆಯಲ್ಲಿ ಯೋಚನೆ ಮಾಡಲಿಲ್ಲ. ಅವರದೇನಿದ್ದರೂ ದೆಹಲಿ-ಹೈದರಾಬಾದ್-ಕಲಬುರಗಿ. ಬಿಡುವು ಇದ್ದಲ್ಲಿ ಬೆಂಗಳೂರು ಭೇಟಿ. ಅಲ್ಲಿಂದ ಸೀದಾ ದಹಲಿ. ಇನ್ನಾದರೂ ತಮ್ಮನ್ನು ತಾವು ರಾಷ್ಟ್ರನಾಯಕ ಎಂದು ಬಿಂಬಿಸಿಕೊಳ್ಳುವ ಯತ್ನಕ್ಕೆ ಅವರು ಮುಂದಾಗಬೇಕಿರುವ ಜರೂರತು ಇದೆ.

kharge

ಖರ್ಗೆ ಮುಂದಿರುವ ಸವಾಲುಗಳು ಇಂಥಿಂಥವು ಎಂಬ ಪಟ್ಟಿ ಮಾಧ್ಯಮದಲ್ಲಿ ಬರಲಾರಂಭವಾಗಿದೆ. ಹಿಮಾಚಲ ಪ್ರದೇಶ ಚುನಾವಣೆ ಘೋಷಣೆಯಾಗಿದೆ. ಅಲ್ಲಿ ಬಿಜೆಪಿಯನ್ನು ಮಣಿಸುವ ಕೆಲಸಕ್ಕೆ ಕಾಂಗ್ರೆಸ್ ಮುಂದಾಗಬೇಕಿದೆ. ಗುಜರಾತ್‍ನಲ್ಲಿ ಇಷ್ಟರಲ್ಲೇ ಚುನಾವಣೆ ಘೋಷಣೆಯಾಗಲಿದೆ. ಅಲ್ಲಿ ಕಾಂಗ್ರೆಸ್ ಹೊಂದಿರುವ ಎರಡನೇ ಸ್ಥಾನವನ್ನು ಉಳಿಸಿಕೊಳ್ಳುವುದಕ್ಕೆ ಎದುರಾಗಿರುವ ಆಮ್ ಆದ್ಮಿ ಪಾರ್ಟಿಯ ಪ್ರಬಲ ಅಡ್ಡಿಯನ್ನು ನಿವರಿಸಿಕೊಳ್ಳಬೇಕಿದೆ. ಗುಜರಾತದಲ್ಲಿ ಎರಡೂವರೆ ದಶಕದಿಂದ ಗೂಟ ಹೊಡೆದು ಕೂತಿರುವ ಬಿಜೆಪಿಯನ್ನು ಮಣಿಸಿದರೆ ನರೇಂದ್ರ ಮೋದಿಯವರನ್ನು ಮಣಿಸಿದಂತೆ. ಖರ್ಗೆ ನಾಯಕತ್ವ “ಮೋದಿ-ಶಾ ನಾಡಿನಲ್ಲಿ” ಮಾಡಲಿರುವ ಮೋಡಿ ವಿಚಾರದಲ್ಲಿ ಎಲ್ಲರಲ್ಲೂ ಕುತೂಹಲವಿದೆ. ಅಲ್ಲಿ ಕಾಂಗ್ರೆಸ್ ಗೆದ್ದರೆ ರಾಹುಲ್, ಸೋನಿಯಾರಿಗೆ ಜೈಕಾರ ಹೋಗುತ್ತದೆ. ಸೋತರೆ ಅದರ ಹೊಣೆಗಾರಿಕೆಯನ್ನು ಖರ್ಗೆ ತಲೆಗೆ ಕಟ್ಟುತ್ತಾರೆ. ಖರ್ಗೆಯವರಿಗೆ ಇದು ಗೊತ್ತಿಲ್ಲ ಎಂದಲ್ಲ; ಆ ಅಸಹಾಯಕತೆಗೆ ಅವರು ಮುಖಾಮುಖಿಯಾಗಬೇಕಿದೆ, ಅನ್ಯ ಮಾರ್ಗವಿಲ್ಲ.

ಇದನ್ನೂ ಓದಿ | ಮೊಗಸಾಲೆ ಅಂಕಣ | ಸೋನಿಯಾರನ್ನು ತತ್ತರಗೊಳಿಸಿದ ಅನಿರೀಕ್ಷಿತ ಬಂಡಾಯ

ಖರ್ಗೆಯವರ ತೌರು ರಾಜ್ಯ ಕರ್ನಾಟಕ ವಿಧಾನ ಸಭೆ ಚುನಾವಣೆ ಬಹಳ ದೂರದಲ್ಲಿಲ್ಲ. ಮುಂದಿನ ಜುಲೈ ಮೂರನೇ ವಾರದ ಹೊತ್ತಿಗೆ ಹೊಸ ವಿಧಾನ ಸಭೆ ರಚನೆಯಾಗಬೇಕು. ಈಗಿನ ರಾಜಕೀಯ ಲಕ್ಷಣ ನೋಡಿದರೆ ಕಾಂಗ್ರೆಸ್ ಮೇಲುಗೈ ಸಾಧಿಸುತ್ತಿದೆ. ಬಿಜೆಪಿ ಅಧಿಕಾರ ಬಿಟ್ಟು ಕೊಡಲು ಚುನಾವಣೆಗೆ ಕಾಯುತ್ತಿದೆಯಲ್ಲದೆ ಗೆಲ್ಲುವುದಕ್ಕಲ್ಲ. ಅದರ ನಡವಳಿಕೆಯಲ್ಲಿ ಇದು ಸ್ಪಷ್ಟ. ಆದರೆ ಆ ಅವಕಾಶ ತನಗೆ ಒಲಿಯುವಂತೆ ಮಾಡಿಕೊಳ್ಳಲು ಕಾಂಗ್ರೆಸ್ ನಡೆಸಿರುವ ಸಿದ್ಧತೆ ಏನು ಎತ್ತ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಸ್ಪಷ್ಟವಾಗಿರುವ ಏಕೈಕ ಸಂಗತಿ ಎಂದರೆ “ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯ ಇಲ್ಲ” ಎಂದು ಕ್ಯಾಮೆರಾ ಮುಂದೆ ತೋರಿಸಿಕೊಳ್ಳುತ್ತಿರುವ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಡಿ.ಕೆ. ಶಿವಕುಮಾರ್ ಮತ್ತು ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಬಹಿರಂಗ ನಡವಳಿಕೆ. ಅಂತರಂಗದಲ್ಲಿ ಅವರಿಬ್ಬರೂ ಪರಸ್ಪರ ಚೂರಿ ಹಿಡಿದು ನಿಂತಿರುವುದು ಎಲ್ಲ ಬಲ್ಲ ಗುಟ್ಟು. ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ 21 ದಿವಸದ್ದು. ಇವರಿಬ್ಬರನ್ನೂ ಜೊತೆಯಲ್ಲಿ ಹೆಜ್ಜೆ ಹಾಕುವಂತೆ ಮಾಡಿದ್ದೇ ರಾಹುಲ್ ಗಾಂಧಿಯವರ ದೊಡ್ಡ ಸಾಧನೆ ಎಂದು ಸ್ವತಃ ಕಾಂಗ್ರೆಸ್ ನಾಯಕರೇ ಹೇಳಿಕೊಳ್ಳುತ್ತಾರೆ. ಖರ್ಗೆ ಮುಂದಿರುವ ಸವಾಲುಗಳಲ್ಲಿ ಈ ಎರಡು ಬಣಗಳ ನಡುವೆ ಸಾಮರಸ್ಯ ತರುವುದು. ಅದು ಹೇಳಿದಷ್ಟು ಸುಲಭವಲ್ಲ.

ಕರ್ನಾಟಕದಲ್ಲಿ ಮತ್ತೊಂದು ಸಮಸ್ಯೆ ಖರ್ಗೆಯವರನ್ನು ಅಮರಿಕೊಳ್ಳಲಿದೆ. ದಲಿತ ಸಮುದಾಯಕ್ಕೆ ಸೇರಿದವರೊಬ್ಬರನ್ನು ಮುಖ್ಯಮಂತ್ರಿಯನ್ನಾಗಿಸುವ ಅವಕಾಶ ಖರ್ಗೆಯವರ ಮುಂದಿದೆ ಎಂಬ ಒತ್ತಾಯ ದಿನಗಳೆದಂತೆ ಏಐಸಿಸಿಯ ಮಂಡೆ ಬಿಸಿ ಹೆಚ್ಚಿಸಲಿದೆ. ಇದುವರೆಗೆ ಈ ಬೇಡಿಕೆ ಇರಲಿಲ್ಲ ಎಂದಲ್ಲ. ಆದರೆ ಖರ್ಗೆ ಸ್ವತಃ ದಲಿತ ಸಮುದಾಯದಿಂದ ಬಂದಿರುವ ನಾಯಕರಾದ ಕಾರಣ “ಕರ್ನಾಟಕಕ್ಕೆ ಮೊದಲ ದಲಿತ ಮುಖ್ಯಮಂತ್ರಿ ಕೊಡುಗೆ ನೀಡಿದ ಹಿರಿಮೆ” ಅವರದಾಗುವುದಕ್ಕೆ ಒತ್ತಡ ತನ್ನೆಲ್ಲ ಶ್ರಮಶಕ್ತಿಯನ್ನು ವಿನಿಯೋಗ ಮಾಡಲಿದೆ. ಕರ್ನಾಟಕದಲ್ಲಿ ದಲಿತ ಸಮುದಾಯ ಪ್ರತಿಶತ 20ರಷ್ಟಿದ್ದು ಅದರ ಬೇಡಿಕೆಯನ್ನು ಸುಲಭದಲ್ಲಿ ತಳ್ಳಿ ಹಾಕುವುದು ಖರ್ಗೆಯವರಿಗೂ ಸಾಧ್ಯವಾಗುವುದಿಲ್ಲ. ಈ ಹಿಂದೆ ಇಂಥ ಬೇಡಿಕೆ ಬಂದಾಗ “ಅದೆಲ್ಲ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟ ವಿಚಾರ” ಎಂದು ಖರ್ಗೆಯವರು ತಿಪ್ಪೆ ಸಾರಿಸಿ ಬಚಾವ್ ಆಗುತ್ತಿದ್ದರು. ಈಗ ಅವರೇ ಹೈಕಮಾಂಡ್ ಆಗಿರುವುದರಿಂದ ಬೇರೆಯವರತ್ತ ಬೆರಳು ಮಾಡಲು ಅವಕಾಶವೇ ಇಲ್ಲ. 1962ರಲ್ಲಿ ಕೆಲವು ತಿಂಗಳ ಮಟ್ಟಿಗಾದರೂ ಏಐಸಿಸಿಗೆ ಮೊದಲ ದಲಿತ ಅಧ್ಯಕ್ಷರಾದವರು ಆಂಧ್ರ ಪ್ರದೇಶದ ದಾಮೋದರಂ ಸಂಜೀವಯ್ಯ.(ಈ ಹೆಸರು ಮಾಧ್ಯಮದವರ ನೆನಪಲ್ಲಿದ್ದಂತಿಲ್ಲ ಎನ್ನುವುದು ಹಿರಿಯ ಪತ್ರಕರ್ತ, ಹುಬ್ಬಳ್ಳಿ ನಿವಾಸಿ ಮತ್ತೀಹಳ್ಳಿ ಮದನಮೋಹನ್ ಅಭಿಮತ). ನಂತರ 70-71ರ ಅವಧಿಯಲ್ಲಿ ಆ ಸ್ಥಾನಕ್ಕೇರಿದ ಮತ್ತೊಬ್ಬ ದಲಿತ ನಾಯಕ ಬಾಬು ಜಗಜೀವನರಾಂ. ಮೂರನೆಯವರಾಗಿ ಖರ್ಗೆ ಅಲ್ಲಿ ಈಗ ಆಸೀನರಾಗಿದ್ದಾರೆ. ಮೊದಲ ಇಬ್ಬರೂ ಅವಧಿಯನ್ನು ಪೂರೈಸಲಿಲ್ಲ. ಖರ್ಗೆಯವರಿಗೆ ಅವಧಿ ಪೂರೈಸಲು ಸೋನಿಯಾ ಪರಿವಾರ ಬಿಡುತ್ತದೆಯೇ ಎನ್ನುವುದು ಪ್ರಶ್ನೆ.

ಇದನ್ನೂ ಓದಿ | ವಿಸ್ತಾರ ವಿಶ್ಲೇಷಣೆ | ಮೂರನೇ ಶಕ್ತಿಕೇಂದ್ರ ಆಗಲಿದ್ದಾರ ಮಲ್ಲಿಕಾರ್ಜುನ ಖರ್ಗೆ?: ಯಾವ ಬಣಕ್ಕೆ ಲಾಭ, ಯಾರಿಗೆ ನಷ್ಟ?

ಯಾವುದೇ ರಾಜ್ಯದ ವಿಧಾನ ಸಭೆಗೆ ಚುನಾವಣೆ ಎದುರಾದಾಗಲೆಲ್ಲ ಮುಂದಿನ ಮುಖ್ಯಮಂತ್ರಿ ಯಾರೆಂಬ ಚರ್ಚೆ ಸಾಮಾನ್ಯ. ಕರ್ನಾಟಕದಲ್ಲೂ ಅದು ನಡೆಯುತ್ತಿರುತ್ತದೆ. ಇಲ್ಲಿ ಈಗಾಗಲೇ ಸಿದ್ದರಾಮಯ್ಯ ಬಣ, ಡಿ.ಕೆ. ಶಿವಕುಮಾರ್ ಬಣದ ನಡುವೆ ಸಿಎಂ ಕುರ್ಚಿಗೆ ಗುದಮುರಗಿ ನಡೆದಿದೆ. 2013ರ ಚುನಾವಣೆ ಸಮಯದಲ್ಲಿ ಸಿಎಂ ಸ್ಥಾನಕ್ಕೆ ದಲಿತ ನಾಯಕ ಡಾ.ಜಿ.ಪರಮೇಶ್ವರರ ಹೆಸರು ಮುಂಚೂಣಿಗೆ ಬಂದಿತ್ತು. ದಲಿತ ಸಂಘಟನೆಗಳು ಅದಕ್ಕಾಗಿ ಒಂದು ಬಗೆಯ ಆಂದೋಳನವನ್ನೇ ನಡೆಸಿದ್ದವು. ಅದೇ ಕಾಲಕ್ಕೆ ಸಿದ್ದರಾಮಯ್ಯ ಬಣ, ಪರಮೇಶ್ವರರ ಸೋಲಿಗೆ ಪಣ ತೊಟ್ಟಿದೆಯೆಂಬ ಆರೋಪವೂ ಕೇಳಿಬಂದಿತ್ತು. ಕೊರಟಗೆರೆ ಕ್ಷೇತ್ರದಲ್ಲಿ ಪರಮೇಶ್ವರ್ ಸೋಲಿಸುವುದಕ್ಕೆ ಷಡ್ಯಂತ್ರವೇ ನಡೆದುಹೋಯಿತು. ಅವರು ಸೋತಿದ್ದೇ ಮುಖ್ಯ ಕಾರಣವಾಗಿ ಸಿಎಂ ಸ್ಥಾನ ಅವರ ಕೈಗೆಟುಕದೇ ಹೋಯಿತು. ಕರ್ನಾಟಕದ ಕೆಪಿಸಿಸಿ ಇತಿಹಾಸದಲ್ಲಿ ಎಂಟು ವರ್ಷ ಕಾಲ ಅಧ್ಯಕ್ಷರಾಗಿದ್ದವರು ಎಂಬುದಷ್ಟೆ ಪರಮೇಶ್ವರರಿಗೆ ಉಳಿಯಿತು. “ಮತ್ತೆ ಮಳೆ ಹುಯ್ಯುತಿದೆ, ಎಲ್ಲ ನೆನಪಾಗುತಿದೆ” ಎಂಬಂತೆ ಪರಮೇಶ್ವರ ಬಣ ತೋಳೇರಿಸಿದೆ. ದಲಿತ ಸಮುದಾಯದ ಕೂಗನ್ನು ಕೇಳಿಸಿಕೊಳ್ಳಲಾರೆ ಎಂದು ಖರ್ಗೆ ಹೇಳಲಾರರು; ಹೇಳಲಾಗದು. ಇದು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಇಬ್ಬರ ಪಾಲಿಗೂ ನುಂಗಲೂ ಆಗದ ಉಗುಳಲೂ ಆಗದ ಬಿಸಿ ತುಪ್ಪವಾದರೆ ಅದರಲ್ಲಿ ಅಚ್ಚರಿ ಪಡುವಂಥದ್ದು ಏನೂ ಇರುವುದಿಲ್ಲ.

(ಲೇಖಕರು ಹಿರಿಯ ಪತ್ರಕರ್ತ, ಅಂಕಣಕಾರ, ರಾಜಕೀಯ ವಿಶ್ಲೇಷಕರು)

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

ರಾಜಮಾರ್ಗ ಅಂಕಣ: ಕುರುಡರಾಗಿ ಹುಟ್ಟಿದ ಕಾರಣಕ್ಕೆ ನೋವು, ತಿರಸ್ಕಾರ ಅನುಭವಿಸುತ್ತಿದ್ದ ಶ್ರೀಕಾಂತ್‌ ಬೊಳ್ಳಾ ಹಿಡಿದ ಛಲದ ಹಾದಿ ಇಂದು ಅವರನ್ನು ದೊಡ್ಡ ಕಂಪನಿಗಳ ಮಾಲಿಕರಾಗುವತ್ತ, ನೂರಾರು ದಿವ್ಯಾಂಗರಿಗೆ ಕೆಲಸ ನೀಡುವವರೆಗೆ ಮುನ್ನಡೆಸಿದೆ. ನಾವೆಲ್ಲರೂ ಓದಿ ರೋಮಾಂಚಿತರಾಗಬಹುದಾದ ಸ್ಫೂರ್ತಿ ಕಥೆಯಿದು.

VISTARANEWS.COM


on

rajamarga column srikant bolla
Koo

ಕಣ್ಣಿಲ್ಲ ಎಂಬ ಕಾರಣಕ್ಕೆ ಐಐಟಿ ರಿಜೆಕ್ಟ್ ಆಗಿದ್ದ ಯುವಕನು ಕೋಟಿ ಕೋಟಿ ಸಂಪಾದನೆ ಮಾಡಿದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಮೂರು ವರ್ಷಗಳ ಹಿಂದೆ ಇವರನ್ನು ಬೆಂಗಳೂರಿನ ಒಂದು ಬಿಸಿನೆಸ್ ಸಮ್ಮೇಳನದ ವೇದಿಕೆಯಲ್ಲಿ ಭೇಟಿಯಾಗಿದ್ದೆ. ಅವರ ಹೋರಾಟದ ಕಥೆಯನ್ನು ಅವರ ಮಾತಲ್ಲೇ ಕೇಳಿ ರೋಮಾಂಚನವಾಗಿತ್ತು.

ಶ್ರೀಕಾಂತ್ ಬೊಳ್ಳ ಅವರ ಹೋರಾಟದ ಅದ್ಭುತವಾದ ಕಥೆಯನ್ನು ಅವರದ್ದೇ ಮಾತುಗಳಲ್ಲಿ ಕೇಳೋಣ.

ನಾನು ಹುಟ್ಟಿದ್ದು ಆಂಧ್ರಪ್ರದೇಶದ ಮಚಲಿ ಪಟ್ಟಣದ ಒಂದು ಪುಟ್ಟ ಗ್ರಾಮದಲ್ಲಿ (1992). ನನ್ನ ಹುಟ್ಟು ಕುರುಡುತನ ನನ್ನ ಕೃಷಿಕ ಕುಟುಂಬಕ್ಕೆ ದೊಡ್ಡ ಸವಾಲು ಆಗಿತ್ತು. ನಮ್ಮ ಕುಟುಂಬದ ವಾರ್ಷಿಕ ಆದಾಯ 20,000 ರೂಪಾಯಿಗಿಂತ ಕಡಮೆ ಇದ್ದ ಕಾಲ ಅದು!

ಅಪಮಾನ, ತಿರಸ್ಕಾರ ಮತ್ತು ತಾರತಮ್ಯ

ನಾನು ಕುರುಡ ಎಂಬ ಕಾರಣಕ್ಕೆ ತಿರಸ್ಕಾರ, ಅಪಮಾನ ತುಂಬಾ ನೋವು ಕೊಡುತ್ತಿತ್ತು. ತರಗತಿಯಲ್ಲಿ ಕೊನೆಯ ಬೆಂಚು ಖಾಯಂ. ಆಟಕ್ಕೆ ಅವಕಾಶವನ್ನೇ ಕೊಡುತ್ತಿರಲಿಲ್ಲ. ಇದರಿಂದ ಅಪ್ಪ ನೊಂದುಕೊಂಡು ನನ್ನನ್ನು ಹೈದರಾಬಾದ್ ನಗರದ ವಿಶೇಷ ಮಕ್ಕಳ ಶಾಲೆಗೆ ಸೇರಿಸಿದರು. ಅಲ್ಲಿ ನನ್ನ ಜೀವನದ ಹಲವು ಟರ್ನಿಂಗ್ ಪಾಯಿಂಟಗಳು ಆರಂಭ! ಕಲಿಕೆಯಲ್ಲಿ ನಾನು ನನ್ನ ತರಗತಿಗೆ ಪ್ರಥಮ ಬರಲು ಆರಂಭಿಸಿದೆ. ಕುರುಡು ಮಕ್ಕಳ ಕ್ರಿಕೆಟ್ ತಂಡದಲ್ಲಿ ನಾನು ರಾಷ್ಟ್ರೀಯ ತಂಡದಲ್ಲಿ ಆಡಿದೆ.

ಅಬ್ದುಲ್ ಕಲಾಂ ಭೇಟಿ ಮಿಂಚು ಹರಿಸಿತು

ನಾನು ಪ್ರೌಢಶಾಲೆಯಲ್ಲಿ ಓದುವಾಗ ನಮ್ಮ ಶಾಲೆಗೊಮ್ಮೆ ಅಬ್ದುಲ್ ಕಲಾಂ ಭೇಟಿ ನೀಡಿದರು. ಅವರ ಮಾತುಗಳಿಂದ ನಾನು ಪ್ರಭಾವಿತನಾದೆ. ಅವರ ‘ಲೀಡ್ ಇಂಡಿಯಾ 2020’ ಎಂಬ ವಿದ್ಯಾರ್ಥಿ ಅಭಿಯಾನಕ್ಕೆ ನಾನು ಸದಸ್ಯತನ ಪಡೆದೆ. ನನಗೆ ಎಸೆಸೆಲ್ಸಿ ಪರೀಕ್ಷೆಯಲ್ಲಿ 90% ಅಂಕಗಳು ಬಂದವು. ವಿಜ್ಞಾನದಲ್ಲಿ ಪಿಯುಸಿ ಮಾಡಬೇಕೆಂದು ನನ್ನ ಆಸೆ. ಆದರೆ ನಾನು ಕುರುಡ ಎಂಬ ಕಾರಣಕ್ಕೆ ನನಗೆ ಯಾವುದೇ ಕಾಲೇಜಿನಲ್ಲಿ ವಿಜ್ಞಾನದ ಸೀಟ್ ಸಿಗಲಿಲ್ಲ.

ನನಗೆ ಅಬ್ದುಲ್ ಕಲಾಂ ಅವರ ಮಾತುಗಳು ನೆನಪಾದವು – ಹಕ್ಕಿ ಹಾರುವುದು ರೆಕ್ಕೆಗಳ ಬಲದಿಂದಲ್ಲ. ಅದು ಹಾರುವುದು ಭರವಸೆಗಳ ಬಲದಿಂದ!

ಸರಕಾರದ ವಿರುದ್ಧ ಬೀದಿಗೆ ಇಳಿದು ಹೋರಾಟ.

ನಾನು ಹೈದರಾಬಾದ್ ಸರಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆಯನ್ನು ಮಾಡಿದೆ. ಆರು ತಿಂಗಳ ನಂತರ ನನಗೆ ವಿಜ್ಞಾನದ ಸೀಟ್ ದೊರೆಯಿತು. ಸತತವಾಗಿ ಕಷ್ಟ ಪಟ್ಟೆ. ಬ್ರೈಲ್ ಲಿಪಿಯಲ್ಲಿ ಪರೀಕ್ಷೆಯನ್ನು ಬರೆದು ದ್ವಿತೀಯ ಪಿಯುಸಿಯಲ್ಲಿ ನನಗೆ 98% ಅಂಕಗಳು ಬಂದವು!

ಐಐಟಿ ಸಂಸ್ಥೆಗಳು ಬಾಗಿಲು ತೆರೆಯಲಿಲ್ಲ

ನನಗೆ ಐಐಟಿಯಲ್ಲಿ BE ಮಾಡುವ ಆಸೆ. ಆದರೆ ಭಾರತದ ಯಾವುದೇ ಐಐಟಿ ಕಾಲೇಜುಗಳು ನನಗೆ ಕುರುಡ ಎಂಬ ಕಾರಣಕ್ಕೆ ಎಂಟ್ರೆನ್ಸ್ ಪರೀಕ್ಷೆಗೂ ಅವಕಾಶ ನೀಡಲಿಲ್ಲ. ನಾನು ಕೈಚೆಲ್ಲಲಿಲ್ಲ. ಅಮೆರಿಕಾದ ನಾಲ್ಕು ಪ್ರಸಿದ್ಧವಾದ ಯೂನಿವರ್ಸಿಟಿಗಳ ಬಾಗಿಲು ಬಡಿದೆ. ಎಲ್ಲವೂ ಆಹ್ವಾನ ನೀಡಿದವು.

ನಾನು ಮಸ್ಸಾಚುಸೆಟ್ಸ್ ವಿವಿ ಆರಿಸಿಕೊಂಡೆ. ಅಮೆರಿಕಾದ ವಿವಿಯಲ್ಲಿ BE ಪ್ರವೇಶ ಪಡೆದ ಜಗತ್ತಿನ ಮೊದಲ ಕುರುಡ ವಿದ್ಯಾರ್ಥಿ ನಾನಾಗಿದ್ದೆ! ನನಗೆ ಇಷ್ಟವಾದ BE ಕೋರ್ಸನ್ನು ಮುಗಿಸಿದೆ. ಅಲ್ಲಿ ಈಜು ಮತ್ತು ಡೈವಿಂಗಲ್ಲಿ ವಿವಿ ದಾಖಲೆ ಕೂಡ ಮಾಡಿದ್ದೆ. ಅಮೆರಿಕಾದ ಕೆಲವು ಕಾರ್ಪೊರೇಟ್ ಕಂಪೆನಿಗಳು ನನಗೆ ಉದ್ಯೋಗ ನೀಡಲು ಮುಂದೆ ಬಂದವು.

ಆದರೆ ನನ್ನ ಕನಸುಗಳು ಭಾರತದಲ್ಲಿ ಇದ್ದವು!

2011ರಲ್ಲಿ ಭಾರತಕ್ಕೆ ಬಂದು ಮತ್ತೆ ಅಬ್ದುಲ್ ಕಲಾಂ ಅವರನ್ನು ಭೇಟಿ ಮಾಡಿದೆ. ಅವರ ಸಲಹೆಯಂತೆ ಬಹು ವಿಕಲತೆಯ ಮಕ್ಕಳಿಗಾಗಿ “ಸಮನ್ವೈ ಸೆಂಟರ್” ಎಂಬ ಸೇವಾ ಸಂಸ್ಥೆ ಆರಂಭಿಸಿದೆ. ಬ್ರೈಲ್ ಪ್ರಿಂಟಿಂಗ್ ಪ್ರೆಸ್ ತೆರೆದೆ. 3000 ಅಶಕ್ತ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ನೆರವಿಗೆ ನಿಂತೆ. ಅಷ್ಟಕ್ಕೇ ಸುಮ್ಮನಾಗಲಿಲ್ಲ.

ಆರಂಭ ಆಯಿತು ಅವರದ್ದೇ ಕಂಪೆನಿ

2011ರಲ್ಲಿ ‘ BOLLANT INDUSTRY’ ಎಂಬ ಸಣ್ಣ ಉದ್ಯಮವನ್ನು ಆರಂಭಿಸಿದೆ. ನಗರಪಾಲಿಕೆಯ ತ್ಯಾಜ್ಯ ವಸ್ತುಗಳಿಂದ ಮತ್ತು ಆಡಕೆಯಿಂದ ಕ್ರಾಫ್ಟ್ ಪೇಪರ್ ತಯಾರಿಸುವ ಕಂಪೆನಿ ಅದು. ಹಣ ಮಾಡುವುದು ನನ್ನ ಉದ್ದೇಶ ಆಗಿರಲಿಲ್ಲ. ನನ್ನ ಕಂಪೆನಿಯಲ್ಲಿ ಕುರುಡರಿಗೆ ಮತ್ತು ವಿಕಲಚೇತನರಿಗೆ ಉದ್ಯೋಗ ನೀಡಿದೆ. ರತನ್ ಟಾಟಾ ಅವರು ನನ್ನ ಕಂಪೆನಿಯಲ್ಲಿ ಹೂಡಿಕೆ ಮಾಡಲು ಮುಂದೆ ಬಂದರು. ನನ್ನ ಐಕಾನ್ ಎಪಿಜೆ ಅಬ್ದುಲ್ ಕಲಾಂ ಅವರು ಬಂದು ದೀಪ ಹಚ್ಚಿದರು. ಮುಂದೆ ಆ ಕಂಪೆನಿಯು ಪ್ರತೀ ತಿಂಗಳು 20% ಪ್ರಗತಿ ದಾಖಲಿಸುತ್ತಾ ಬಂದಿತು.

ದಿವ್ಯಾಂಗರಿಗೆ ಉದ್ಯೋಗ ನೀಡಿದರು

ಇಂದು ನನ್ನ ಕಂಪೆನಿಗೆ ನಾಲ್ಕು ರಾಜ್ಯಗಳಲ್ಲಿ 20 ಶಾಖೆಗಳು ಇವೆ. 100 ಕೋಟಿ ರೂಪಾಯಿ ವಾರ್ಷಿಕ ಟರ್ನ್ ಓವರ್ ಇದೆ! ನೂರಕ್ಕೆ ನೂರು ಸೌರಶಕ್ತಿ ಆಧಾರಿತವಾಗಿದೆ ಮತ್ತು ಪರಿಸರಸ್ನೇಹಿ ಆಗಿದೆ. ಅಶಕ್ತ ದಿವ್ಯಾಂಗರಿಗೆ ಸ್ವಾವಲಂಬಿ ಬದುಕಿನ ಅವಕಾಶವನ್ನು ನೀಡಿದ ಖುಷಿ ಇದೆ. ಭಾರತದ ಸಮಸ್ಯೆಗಳಾದ ಬಡತನ, ನಿರಕ್ಷರತೆ, ನಿರುದ್ಯೋಗಗಳ ನಿವಾರಣೆಗೆ ನಮ್ಮಿಂದಾದಷ್ಟು ಪ್ರಯತ್ನ ಪ್ರತಿಯೊಬ್ಬರೂ ಮಾಡಬೇಕು. ‘ಪಂಚೀ ಉಡತೀ ಹೈ ಪಂಖೋ ಕೀ ತಾಕತ್ ಸೆ ನಹೀಂ. ಹೌಸಲೆ ಸೇ!’ ಎಂಬ ಅಬ್ದುಲ್ ಕಲಾಂ ಅವರ ಮಾತಿನೊಂದಿಗೆ ಅವರು ತನ್ನ ಮಾತು ನಿಲ್ಲಿಸಿದರು. ಅವರ ಆಳವಾದ ಕಣ್ಣುಗಳಲ್ಲಿ ಗೆದ್ದ ಖುಷಿ ಇತ್ತು.

ಭರತ ವಾಕ್ಯ

ಅಂದ ಹಾಗೆ ಶ್ರೀಕಾಂತ್ ಅವರಿಗೆ ಫೋರ್ಬ್ಸ್ ಮಾಗಜ್ಹಿನ್ 2017ರಲ್ಲಿ ನಡೆಸಿದ ಏಷಿಯಾದ 30 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನವನ್ನು ದೊರೆತಿದೆ. ‘NDTV ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿ, ‘ಪ್ರೈಡ್ ಆಫ್ ತೆಲಂಗಾಣ’ ಪ್ರಶಸ್ತಿ, ‘ಟಿವಿ 9 ನವನಕ್ಷತ್ರ’ ಪ್ರಶಸ್ತಿ……. ಮೊದಲಾದ ನೂರಾರು ಪ್ರಶಸ್ತಿಗಳು ಅವರಿಗೆ ದೊರೆತಿವೆ. ಶ್ರೀಕಾಂತ್ ಬೊಳ್ಳ ಅವರ ಬದುಕು ಸಾವಿರಾರು ಯುವಕ ಯುವತಿಯರಿಗೆ ಸ್ಫೂರ್ತಿ ನೀಡಿದೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Continue Reading

ಅಂಕಣ

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ರಾಜಮಾರ್ಗ ಅಂಕಣ: ಆಕ್ರಮಣಕಾರಿ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ. ಆದರೆ ಈಗ, ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

VISTARANEWS.COM


on

Rishabh Pant
Koo

ಹೋರಾಟಗಾರ ಕ್ರಿಕೆಟರ್ ಕ್ರಿಟಿಕಲ್ ಇಂಜುರಿ ಗೆದ್ದು ಬಂದ ಕಥೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: 2022 ಡಿಸೆಂಬರ್ 30ರ ಮಧ್ಯರಾತ್ರಿ ರೂರ್ಕಿ ಎಂಬಲ್ಲಿ ಆ ಕ್ರಿಕೆಟರ್ ಕಾರು ಅಪಘಾತಕ್ಕೆ ಒಳಗಾಗಿತ್ತು. ಆ ಅಪಘಾತದ ತೀವ್ರತೆಯನ್ನು ನೋಡಿದವರು ಆತ ಬದುಕಿದ್ದೇ ಗ್ರೇಟ್ ಅಂದಿದ್ದರು. ಬಲಗಾಲಿನ ಮಂಡಿ ಚಿಪ್ಪು ಸಮೇತ 90 ಡಿಗ್ರೀಯಷ್ಟು ತಿರುಗಿ ನಿಂತಿತ್ತು! ಮೈಯೆಲ್ಲಾ ಗಾಯಗಳು ಮತ್ತು ಎಲುಬು ಮುರಿತಗಳು! ಡೆಹ್ರಾಡೂನ್ ಆಸ್ಪತ್ರೆಯ ವೈದ್ಯರು ಆತನ ದೇಹದಲ್ಲಾದ ಗಾಯ ಮತ್ತು ಮೂಳೆ ಮುರಿತಗಳನ್ನು ನೋಡಿದಾಗ ‘ನೀನಿನ್ನು ಕ್ರಿಕೆಟ್ ಆಡೋದು ಕಷ್ಟ’ ಅಂದಿದ್ದರು. ಒಬ್ಬರಂತೂ ‘ನೀನು ನಿನ್ನ ಕಾಲುಗಳ ಮೇಲೆ ನಿಂತರೆ ಅದೇ ದೊಡ್ಡ ಸಾಧನೆ’ ಅಂದಿದ್ದರು!

ಅಮ್ಮಾ ನನಗೆ ಸಹಾಯ ಮಾಡು, ನಾನು ವಿಶ್ವಕಪ್ ಆಡಬೇಕು!

ಆ ಕ್ರಿಕೆಟಿಗ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಚೀರಿ ಚೀರಿ ಹಾಗೆ ಹೇಳುತ್ತಿದ್ದರೆ ನರ್ಸ್ ಮತ್ತು ವೈದ್ಯರು ಕಣ್ಣೀರು ಸುರಿಸುತ್ತಿದ್ದರು! ಕ್ರಿಕೆಟ್ ವಿಶ್ವಕಪ್ ಆರಂಭವಾಗಲು ಕೇವಲ ಒಂದೂವರೆ ವರ್ಷ ಬಾಕಿ ಇತ್ತು. ವೈದ್ಯರು ‘ಅನಿವಾರ್ಯ ಆದರೆ ಆತನ ಒಂದು ಕಾಲು ತುಂಡು ಮಾಡಬೇಕಾಗಬಹುದು!’ ಎಂದು ಅವನ ಅಮ್ಮನ ಕಿವಿಯಲ್ಲಿ ಪಿಸುಗುಟ್ಟಿದ್ದು, ಆತನ ಅಮ್ಮ ಬಾತ್ ರೂಮ್ ಒಳಗೆ ಹೋಗಿ ಕಣ್ಣೀರು ಸುರಿಸಿದ್ದು ಎಲ್ಲವೂ ನಡೆದು ಹೋಗಿತ್ತು!

ಆತ ರಿಶಭ್ ಪಂತ್ – ಆಕ್ರಮಣಕ್ಕೆ ಇನ್ನೊಂದು ಹೆಸರು!

ಅಪಘಾತ ಆಗುವ ಮೊದಲು ಆತ ಭಾರತೀಯ ಕ್ರಿಕೆಟ್ ತಂಡದ ಮೂರೂ ಫಾರ್ಮಾಟಗಳಲ್ಲಿ ಶಾಶ್ವತ ಸ್ಥಾನ ಪಡೆದಿದ್ದ! ಆಕ್ರಮಣಕ್ಕೆ ಹೆಸರಾಗಿದ್ದ. ಸಲೀಸಾಗಿ ಒಂದೇ ಅವಧಿಯಲ್ಲಿ ಡಬಲ್ ಸೆಂಚುರಿ ಹೊಡೆಯುತ್ತಿದ್ದ. ವಿಕೆಟ್ ಹಿಂದೆ ಪಾದರಸದ ಚುರುಕು ಇತ್ತು. ಆತನ ಆಟವನ್ನು ನೋಡಿದವರು ʻಈತ ಧೋನಿಯ ಉತ್ತರಾಧಿಕಾರಿ ಆಗುವುದು ಖಂಡಿತ’ ಅನ್ನುತ್ತಿದ್ದರು!

ಅಂತಹ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ.

ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ

ಮರಳಿ ಕ್ರಿಕೆಟ್ ಮೈದಾನಕ್ಕೆ ಇಳಿಯಬೇಕು ಎಂದು ನಿದ್ದೆಯಲ್ಲಿಯೂ ಕನವರಿಸುತ್ತಿದ್ದ ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ. ಅವರೆಲ್ಲರೂ ಆತನ ಕ್ರಿಕೆಟ್ ದೈತ್ಯ ಪ್ರತಿಭೆಯನ್ನು ಕಂಡವರು. ಒಬ್ಬರು ಆತನಿಗೆ ಶಸ್ತ್ರಚಿಕಿತ್ಸೆ ಮಾಡಿದ ಮುಂಬಯಿಯ ಅಂಬಾನಿ ಆಸ್ಪತ್ರೆಯ ಖ್ಯಾತ ಸರ್ಜನ್ ದಿನ್ ಶಾ ಪಾದ್ರಿವಾಲ. ಇನ್ನೊಬ್ಬರು ಉತ್ತರಾಖಂಡದ ಶಾಸಕ ಉಮೇಶ್ ಕುಮಾರ್. ಇನ್ನೊಬ್ಬರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಕೋಚ್ ಆದ ಧನಂಜಯ್ ಕೌಶಿಕ್. ನಾಲ್ಕನೆಯರು ರಿಷಭನ ತಾಯಿ! ಆಕೆ ನಿಜಕ್ಕೂ ಗಾಡ್ಸ್ ಗ್ರೇಸ್ ಅನ್ನಬಹುದು. ಅವರೆಲ್ಲರಿಗೂ ಆತ ಭಾರತಕ್ಕೆ ಎಷ್ಟು ಅಮೂಲ್ಯ ಆಟಗಾರ ಎಂದು ಗೊತ್ತಿತ್ತು! ಆಸ್ಪತ್ರೆಯ ಹಾಸಿಗೆಗೆ ಒರಗಿ ಆತ ಪಟ್ಟ ಮಾನಸಿಕ ಮತ್ತು ದೈಹಿಕ ನೋವು, ಹೊರಹಾಕಿದ ನಿಟ್ಟುಸಿರು ಎಲ್ಲವೂ ಆ ನಾಲ್ಕು ಮಂದಿಗೆ ಗೊತ್ತಿತ್ತು.

ಆ ಹದಿನೈದು ತಿಂಗಳು…!

Rishabh Panth

ಆ ಅವಧಿಯಲ್ಲಿ ಏಷಿಯಾ ಕಪ್, ವಿಶ್ವ ಟೆಸ್ಟ್ ಚಾಂಪಿಯನಶಿಪ್, ವಿಶ್ವ ಕಪ್ ಎಲ್ಲವೂ ನಡೆದುಹೋಯಿತು! ಭಾರತ ಹಲವು ವಿಕೆಟ್ ಕೀಪರಗಳ ಪ್ರಯೋಗ ಮಾಡಿತು. ಭಾರತ ಒಂದೂ ಕಪ್ ಗೆಲ್ಲಲಿಲ್ಲ. ಭಾರತಕ್ಕೆ ಶಾಶ್ವತವಾದ ವಿಕೆಟ್ ಕೀಪರ್ ಸಿಗಲಿಲ್ಲ! ರಿಷಭ್ ಈ ಎಲ್ಲ ಪಂದ್ಯಗಳನ್ನು ನೋಡುತ್ತಿದ್ದ. ವಿಕೆಟ್ ಹಿಂದೆ ಅವನಿಗೆ ಅವನೇ ಕಾಣುತ್ತಿದ್ದ!

ಹಾಸಿಗೆಯಿಂದ ಎದ್ದು ಕ್ರಚಸ್ ಹಿಡಿದು ನಡೆದದ್ದು, ನಂತರ ಕ್ರಚಸ್ ಬದಿಗೆ ಇಟ್ಟು ಗೋಡೆ ಹಿಡಿದು ನಡೆದದ್ದು, ನಂತರ ಎಲ್ಲವನ್ನೂ ಬಿಟ್ಟು ನಿಧಾನವಾಗಿ ತನ್ನ ಕಾಲ ಮೇಲೆ ಗಟ್ಟಿಯಾಗಿ ನಿಂತದ್ದು, ಜಾಗಿಂಗ್ ಮಾಡಿದ್ದು, ಓಡಿದ್ದು, ಕಾಲುಗಳಿಗೆ ಫಿಸಿಯೋ ಥೆರಪಿ ಆದದ್ದು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಕೌನ್ಸೆಲಿಂಗ್ ನೆರವು ಪಡೆದದ್ದು….ಇವೆಲ್ಲವೂ ಕನಸಿನಂತೆ ಗೋಚರ ಆಗುತ್ತಿದೆ. ಮುಂದೆ ನಿರಂತರ ಕ್ರಿಕೆಟ್ ಕೋಚಿಂಗ್, ಮೈದಾನದಲ್ಲಿ ಬೆವರು ಹರಿಸಿದ್ದು, ಅಪಘಾತವಾದ ಕಾಲು ಬಗ್ಗಿಸಲು ತುಂಬ ಕಷ್ಟಪಟ್ಟದ್ದು ಒಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಂತೆ ಅನ್ನಿಸುತ್ತಿದೆ.

2024 ಮಾರ್ಚ್ 12….

ಒಬ್ಬ ಕ್ರಿಕೆಟರ್ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್ ಮೈದಾನಕ್ಕೆ ಇಳಿಯಲು ಬಿಸಿಸಿಐ ಫಿಟ್ನೆಸ್ ಸರ್ಟಿಫಿಕೇಟ್ ಕೊಡಬೇಕು. ಅದು ಸುಲಭದ ಕೆಲಸ ಅಲ್ಲ. ಅಲ್ಲಿ ಕೂಡ ರಿಶಭ್ ಇಚ್ಛಾಶಕ್ತಿ ಗೆದ್ದಿತ್ತು. ಮಾರ್ಚ್ 12ರಂದು ಆತನು ಕ್ರಿಕೆಟ್ ಆಡಲು ಸಂಪೂರ್ಣ ಫಿಟ್ ಎಂದು ಬಿಸಿಸಿಐ ಘೋಷಣೆ ಮಾಡಿದಾಗ ಆತ ಮೈದಾನದ ಮಧ್ಯೆ ಕೂತು ಜೋರಾಗಿ ಕಣ್ಣೀರು ಹಾಕಿದ್ದನು! ಎರಡೇ ದಿನದಲ್ಲಿ ಡೆಲ್ಲಿ ಐಪಿಎಲ್ ತಂಡವು ಆತನನ್ನು ತೆರೆದ ತೋಳುಗಳಿಂದ ಸ್ವಾಗತ ಮಾಡಿ ನಾಯಕತ್ವವನ್ನು ಕೂಡ ಆತನಿಗೆ ನೀಡಿತ್ತು! ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

ಮುಂದಿನ T20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಒಬ್ಬ ಅದ್ಭುತ ಬ್ಯಾಟರ್ ಮತ್ತು ವಿಕೆಟ್ ಕೀಪರ್ ದೊರಕಿದ್ದನ್ನು ನಾವು ಸಂಭ್ರಮಿಸಲು ಯಾವ ಅಡ್ಡಿ ಕೂಡ ಇಲ್ಲ ಎನ್ನಬಹುದು. ಆತನಿಗೆ ಶುಭವಾಗಲಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

Continue Reading

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading

ಅಂಕಣ

JEE Main 2024 Result: ದೇಶಕ್ಕೇ ಮೊದಲ ರ‍್ಯಾಂಕ್ ಪಡೆದ ರೈತನ ಮಗ! ಈತನ ಯಶಸ್ಸು ಸ್ಫೂರ್ತಿದಾಯಕ

JEE Main 2024 Result: ರೈತನ ಮಗನಾದ ಗಜರೆ ತಮ್ಮ ಗ್ರಾಮವನ್ನು ಬಿಟ್ಟು ನಾಗಪುರದಲ್ಲಿ ಜೆಇಇಗಾಗಿ ಕೋಚಿಂಗ್‌ ಪಡೆದಿದ್ದರು. ಅವರು ತಮ್ಮ 10ನೇ ತರಗತಿ ಪರೀಕ್ಷೆಗಳಲ್ಲಿ 97% ಅಂಕಗಳನ್ನು ಗಳಿಸಿದರು.

VISTARANEWS.COM


on

Nilkrishna Gajare JEE main 2024 result AIR 1
Koo

ಹೊಸದಿಲ್ಲಿ: ಮಹಾರಾಷ್ಟ್ರದ ವಾಶಿಮ್‌ನ ರೈತರ ಮಗ (farmer’s son) ನೀಲಕೃಷ್ಣ ಗಜರೆ (Nilkrishna Gajare) ಅವರು ಜೆಇಇ ಮೇನ್ 2024 ಪರೀಕ್ಷೆಯಲ್ಲಿ (JEE Main 2024 Result) ದೇಶಕ್ಕೇ ಅಗ್ರಸ್ಥಾನ (AIR 1, First Rank) ಪಡೆದಿದ್ದಾರೆ. ಪರೀಕ್ಷೆಯಲ್ಲಿ ಪರಿಪೂರ್ಣ ಅಂಕಗಳನ್ನು (100) ಗಳಿಸಿದ್ದಾರೆ. ದಕ್ಷೇಶ್ ಸಂಜಯ್ ಮಿಶ್ರಾ ಮತ್ತು ಆರವ್ ಭಟ್ ಕ್ರಮವಾಗಿ AIR 2 ಮತ್ತು 3 ಪಡೆದಿದ್ದಾರೆ. ದೇಶದ ವಿವಿಧ ರಾಜ್ಯಗಳ ಒಟ್ಟು 56 ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸಿದ್ದಾರೆ.

ರೈತನ ಮಗನಾದ ಗಜರೆ ತಮ್ಮ ಗ್ರಾಮವನ್ನು ಬಿಟ್ಟು ನಾಗಪುರದಲ್ಲಿ ಜೆಇಇಗಾಗಿ ಕೋಚಿಂಗ್‌ ಪಡೆದಿದ್ದರು. ಅವರು ತಮ್ಮ 10ನೇ ತರಗತಿ ಪರೀಕ್ಷೆಗಳಲ್ಲಿ 97% ಅಂಕಗಳನ್ನು ಗಳಿಸಿದರು. “ಪರೀಕ್ಷೆಯನ್ನು ತೆಗೆದುಕೊಂಡ ನಂತರ, ನಾನು ಪ್ರಶ್ನೆ ಪತ್ರಿಕೆಯನ್ನು ವಿಶ್ಲೇಷಿಸಿದೆ. ನಾನು ದುರ್ಬಲ ವಿಷಯಗಳ ಮೇಲೆ ವಿಶೇಷ ಗಮನವನ್ನು ನೀಡುತ್ತಿದ್ದೇನೆ. JEEಯಂತಹ ಪರೀಕ್ಷೆಯನ್ನು ಉತ್ತರಿಸಲು ಸ್ಪಷ್ಟ ಪರಿಕಲ್ಪನೆಗಳನ್ನು ಹೊಂದಿರುವುದು ಬಹಳ ಮುಖ್ಯ. ಇದಲ್ಲದೆ ನಾನು ಒಂದಕ್ಕಿಂತ ಹೆಚ್ಚು ಬಾರಿ ಪ್ರಶ್ನೆಗಳನ್ನು ಅಭ್ಯಾಸ ಮಾಡುತ್ತೇನೆ” ಎಂದು ಗಜರೆ ಹೇಳಿದ್ದಾರೆ.

IIT- JEEಗೆ ತಯಾರಾಗಲು ಗಜರೆ 11ನೇ ತರಗತಿಯಲ್ಲಿ ALLEN ವೃತ್ತಿ ಸಂಸ್ಥೆಗೆ ಸೇರಿದರು. ಅವರು ತಮ್ಮ ಪ್ರಯಾಣದ ಅಡೆತಡೆಗಳನ್ನು ಹೇಗೆ ನಿವಾರಿಸಿಕೊಂಡರು ಎಂಬುದನ್ನು ಹಂಚಿಕೊಂಡಿದ್ದಾರೆ.

“ನನ್ನ ಜೆಇಇ ಪ್ರಯಾಣ 11ನೇ ತರಗತಿಯಲ್ಲಿ ಪ್ರಾರಂಭವಾದ ಮೊದಲ ಒಂದು ಅಥವಾ ಎರಡು ತಿಂಗಳುಗಳಲ್ಲಿ ನಾನು ಸ್ವಲ್ಪ ತೊಂದರೆಗಳನ್ನು ಎದುರಿಸಿದೆ. ಅಂದರೆ, 10ನೇ ತರಗತಿಗೆ ಹೋಲಿಸಿದರೆ 11 ಮತ್ತು 12ನೇ ತರಗತಿಗಳ ಪಠ್ಯಕ್ರಮವು ಸಾಕಷ್ಟು ವಿಸ್ತಾರವಾಗಿದೆ. ಆದ್ದರಿಂದ ನಾನು ಆರಂಭದಲ್ಲಿ ಕೆಲವು ತೊಂದರೆಗಳನ್ನು ಎದುರಿಸಿದೆ. ಆದರೆ ನಾನು ಕೈಬಿಡಲಿಲ್ಲ. ನನ್ನ ಅಧ್ಯಯನವನ್ನು ನಿರಂತರವಾಗಿ ಮುಂದುವರಿಸಿದೆ. ನಾನು ವಿದ್ಯಾರ್ಥಿಗಳಿಗೆ ನೀಡಲು ಬಯಸುವ ಸಂದೇಶ ಏನೆಂದರೆ, ನೀವು ಅಂತಹ ತೊಂದರೆಗಳನ್ನು ಎದುರಿಸಿದರೆ ಅಥವಾ ನನ್ನಿಂದ ಸಾಧ್ಯವೇ ಇಲ್ಲ ಎಂದು ಭಾವಿಸಿದರೆ, ಕೈಬಿಡಬೇಡಿ. ನಿಮ್ಮ ಸಿದ್ಧತೆಯನ್ನು ನಿರಂತರವಾಗಿ ಮುಂದುವರಿಸಿ. ಒಳ್ಳೆಯ ಫಲಿತಾಂಶ ದಕ್ಕುತ್ತದೆ” ಎಂದು ಅವರು ಇನ್‌ಸ್ಟಿಟ್ಯೂಟ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ ಲೈವ್ ವೇಳೆ ಹೇಳಿದರು.

“ಜೆಇಇ ಅಡ್ವಾನ್ಸ್ಡ್‌ನಲ್ಲಿ ಐಐಟಿ ಬಾಂಬೆಯಲ್ಲಿ ಕಂಪ್ಯೂಟರ್ ಸೈನ್ಸ್‌ ಸೀಟು ಪಡೆಯುವುದು ನನ್ನ ಗುರಿ. ಪ್ರಸ್ತುತ ಅದಕ್ಕಾಗಿ ತಯಾರಿ ನಡೆಸುತ್ತಿದ್ದೇನೆ” ಎಂದು ಗಜರೆ ಹೇಳಿದ್ದಾರೆ. ಐಐಟಿ-ಜೆಇಇ ಆಕಾಂಕ್ಷಿಗಳಿಗೆ ಗಜರೆ ಸಲಹೆಯನ್ನೂ ಹಂಚಿಕೊಂಡಿದ್ದಾರೆ. “ನಿಮ್ಮ ಗುರಿಯನ್ನು ಖಚಿತಪಡಿಸಿ. ಅದರ ಪ್ರಕಾರ ನಿಮ್ಮ ಸಿದ್ಧತೆಯನ್ನು ನಿರಂತರವಾಗಿ ಮಾಡಿ. ವಿಷಯಗಳನ್ನು ನಿಜವಾದ ಆಸಕ್ತಿಯಿಂದ ಅಧ್ಯಯನ ಮಾಡಿ. ಇದರಿಂದ ಅವು ಹೊರೆಯಾಗುವುದಿಲ್ಲ. ನಿಮ್ಮ ಸಿದ್ಧತೆಯನ್ನು ಸ್ಥಿರವಾಗಿ ಮತ್ತು ನಿರಂತರವಾಗಿ ಮಾಡಿ.”

56 ಅಭ್ಯರ್ಥಿಗಳಿಗೆ ಶೇ.100 ಅಂಕ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಜೆಇಇ ಮುಖ್ಯ 2024 ಸೆಷನ್ 2 ಪರೀಕ್ಷಾ ಫಲಿತಾಂಶ (JEE Main 2024 Result session 2) ಪ್ರಕಟವಾಗಿದೆ. ಒಟ್ಟು 56 ಅಭ್ಯರ್ಥಿಗಳು (Students) ಶೇ.100 ಅಂಕಗಳನ್ನು ಗಳಿಸಿದ್ದು, ಕಳೆದ ಬಾರಿಗಿಂತ 13 ಹೆಚ್ಚು ವಿದ್ಯಾರ್ಥಿಗಳು ಇದನ್ನು ಪಡೆದಿದ್ದಾರೆ. ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳು ಶೇ.100 ಅಂಕ ಪಡೆದಿದ್ದಾರೆ. ಕಟ್‌ಆಫ್‌ (Cut off marks) ಅಂಕಗಳನ್ನು ಕೂಡ 2.45%ರಷ್ಟು ಹೆಚ್ಚಿಸಲಾಗಿದೆ.

ಸಂಸ್ಥೆಯು ಇಂದು ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ 2024 ಫಲಿತಾಂಶವನ್ನು ಬಿಡುಗಡೆ ಮಾಡಿದೆ. 2024ರ ಪರೀಕ್ಷೆಗಳಲ್ಲಿ ಒಟ್ಟು 9.24 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 8.2 ಲಕ್ಷ ಜನರು ಜನವರಿ ಮತ್ತು ಏಪ್ರಿಲ್‌ನಲ್ಲಿ ನಡೆದ JEE ಮುಖ್ಯ 2023 ಪರೀಕ್ಷೆಗಳಿಗೆ ಹಾಜರಾಗಿದ್ದರು. ಜೆಇಇ ಮುಖ್ಯ ಏಪ್ರಿಲ್ ಸೆಷನ್‌ಗೆ ಹಾಜರಾದವರು ತಮ್ಮ ಅಂಕಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು: jeemain.nta.ac.in.

ಇದನ್ನೂ ಓದಿ: JEE Main 2024 Result: ಜೆಇಇ ಮೇನ್‌ ಫಲಿತಾಂಶ ಪ್ರಕಟ, 56 ಅಭ್ಯರ್ಥಿಗಳಿಗೆ ಶೇ.100 ಅಂಕ, ಕಟ್‌ಆಫ್‌ 2.45% ಹೆಚ್ಚಳ

Continue Reading
Advertisement
Ballari Lok Sabha constituency Congress candidate eTukaram election campaign in Hosapete
ಬಳ್ಳಾರಿ2 mins ago

Lok Sabha Election 2024: ಜನರ ಬದುಕಿನ ಭಾರ ಕಡಿಮೆ ಮಾಡಿದ್ದು ಕಾಂಗ್ರೆಸ್‌ ಎಂದ ಈ. ತುಕಾರಾಂ

Hassan Pen Drive case
ಪ್ರಮುಖ ಸುದ್ದಿ25 mins ago

Hassan Pen Drive Case: 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಿ; ಪ್ರಜ್ವಲ್‌, ರೇವಣ್ಣಗೆ ಎಸ್‌ಐಟಿ ನೋಟಿಸ್‌

Fact check
ಪ್ರಮುಖ ಸುದ್ದಿ29 mins ago

Fact Check : ಕರ್ನಾಟಕದವರು ಪಾಪಿಗಳು ಅಂಥ ಹೇಳಿದ್ರಾ ಮೋದಿ; ಕಾಂಗ್ರೆಸ್ ಮಾಡಿದ ಪೋಸ್ಟ್​ ಸುಳ್ಳಾ? ಇಲ್ಲಿದೆ ನಿಜಾಂಶ

Suhana Khan
ಬಾಲಿವುಡ್53 mins ago

Suhana Khan: ಬ್ರೇಕಪ್‌ ಬಗ್ಗೆ ಓಪನ್‌ ಆಗಿ ಮಾತನಾಡಿದ ಶಾರುಖ್‌ ಪುತ್ರಿ ಸುಹಾನಾ ಖಾನ್‌; ವಿಡಿಯೊ ಇಲ್ಲಿದೆ

Sharavathi Project
ಕರ್ನಾಟಕ56 mins ago

Sharavathi Project: ಶರಾವತಿ ಜಲವಿದ್ಯುತ್ ಯೋಜನೆ; ಟೆಂಡರ್‌ ಪ್ರಶ್ನಿಸಿ ಎಲ್ & ಟಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

Reliance launched a new campaign for Campa-Cola
ದೇಶ1 hour ago

Campa cola: ಕ್ಯಾಂಪಾ ಕೋಲಾ ಪ್ರಚಾರದ ಹೊಸ ವಿಡಿಯೊ ಬಿಡುಗಡೆ ಮಾಡಿದ ರಿಲಯನ್ಸ್

Hassan Pen Drive Case Did Karthik offer to display Prajwal videos on LED wall in Public
ಕ್ರೈಂ1 hour ago

Hassan Pen Drive Case: ಪ್ರಜ್ವಲ್‌ ಅಶ್ಲೀಲ ವಿಡಿಯೊಗಳನ್ನು ಎಲ್‌ಇಡಿ ವಾಲ್‌ನಲ್ಲಿ ಪ್ರದರ್ಶನಕ್ಕೆ ಮುಂದಾಗಿದ್ದರೇ ಕಾರ್ತಿಕ್?

Hassan Pen Drive Case How did Karthik get Prajwal video Devaraje Gowda questions
ರಾಜಕೀಯ2 hours ago

Hassan Pen Drive Case: ಪ್ರಜ್ವಲ್‌ ಅಶ್ಲೀಲ ವಿಡಿಯೊ ಕಾರ್ತಿಕ್‌ಗೆ ಹೇಗೆ ಸಿಕ್ತು? ಡೌನ್ಲೋಡ್‌ ಮಾಡಿದ್ದು ಯಾರು? ಈ ಬಗ್ಗೆ ದೇವರಾಜೇಗೌಡ ಹೇಳಿದ್ದೇನು?

IPL 2024
ಪ್ರಮುಖ ಸುದ್ದಿ2 hours ago

IPL 2024 : ಐಪಿಎಲ್ ಪ್ಲೇಆಫ್​ ಹಂತಕ್ಕೆ ಇಂಗ್ಲೆಂಡ್ ಆಟಗಾರರು ಅಲಭ್ಯ; ಇದಕ್ಕೂ ಒಂದು ಕಾರಣವಿದೆ

Multivitamin Pill
ಆರೋಗ್ಯ2 hours ago

Multivitamin Pill: ಮಲ್ಟಿವಿಟಮಿನ್‌ ಮಾತ್ರೆಗಳ ಮೊರೆ ಹೋಗದೆ, ನೈಸರ್ಗಿಕವಾಗಿ ಪೋಷಣೆ ಪಡೆಯುವುದು ಹೇಗೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ15 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌