Puneeth Parva | ಕಾಡು ಪ್ರಾಣಿ, ಗಿಡ-ಮರಗಳಲ್ಲೂ ಅಪ್ಪುವನ್ನು ನೋಡೋಣ: ರಾಘವೇಂದ್ರ ರಾಜಕುಮಾರ್ - Vistara News

ಕರ್ನಾಟಕ

Puneeth Parva | ಕಾಡು ಪ್ರಾಣಿ, ಗಿಡ-ಮರಗಳಲ್ಲೂ ಅಪ್ಪುವನ್ನು ನೋಡೋಣ: ರಾಘವೇಂದ್ರ ರಾಜಕುಮಾರ್

Puneeth Parva | ಪುನೀತ ಪರ್ವ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದ ವಿವಿಧ ಕಡೆಗಳಿಂದ ಅಭಿಮಾನಿಗಳು ದೌಡಾಯಿಸುತ್ತಿದ್ದಾರೆ. ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೊಲೀಸರು ಹಲವು ವ್ಯವಸ್ಥೆಯನ್ನು ಮಾಡಿಕೊಂಡಿದ್ದಾರೆ.

VISTARANEWS.COM


on

puneeta parwa 47
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಪ್ಪ ಗಂಧದ ಗುಡಿ ಮಾಡಿದರು, ನಂತರ ಶಿವಣ್ಣ ಮಾಡಿದರು, ಈಗ ಅಪ್ಪು ಮಾಡಿದ್ದಾನೆ. ಇನ್ನು ಮೇಲೆ ಕಾಡು ಪ್ರಾಣಿ, ಮರ ಗಿಡಗಳಲ್ಲಿ ಅಪ್ಪುವನ್ನು ಅಭಿಮಾನಿಗಳು ನೋಡಬೇಕು. ಇದು ನನ್ನ ತಮ್ಮನ್ನ ಕೊನೇ ಸಿನಿಮಾ. ಹೀಗಾಗಿ ಇದನ್ನು ಪುನೀತ ಪರ್ವ (Puneeth Parva) ಕಾರ್ಯಕ್ರಮದ ಮೂಲಕ ದೊಡ್ಡದಾಗಿ ಮಾಡುತ್ತಿದ್ದೇವೆ. ಅಭಿಮಾನಿಗಳು ಯಾವುದೇ ಗಲಾಟೆ ಇಲ್ಲದೆ ಇದನ್ನು ನಡೆಸಿಕೊಡಿ. ಅಪ್ಪು ಹೋದಾಗಿನಿಂದ ಏನು ಸಮಸ್ಯೆ ಆಗದೆ ನಮಗೆ ಸಹಕಾರ ಕೊಟ್ಟಿದ್ದೀರಿ. ಇಂದೂ ಕೂಡಾ ನಮಗೆ ಸಹಕಾರ ಕೊಡಿ ಎಂದು ನಟ, ಪುನೀತ್‌ ರಾಜಕುಮಾರ್‌ ಸಹೋದರ ರಾಘವೇಂದ್ರ ರಾಜಕುಮಾರ್‌ ಹೇಳಿದರು.

ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ “ಪುನೀತ ಪರ್ವ” ಕಾರ್ಯಕ್ರಮಕ್ಕೂ ಮುನ್ನ ಸಿದ್ಧತೆ ಪರಿಶೀಲನೆ ನಡೆಸಿ ಮಾತನಾಡಿ, ಈ ಸಿನಿಮಾ ಬಗ್ಗೆ ನನಗೂ ಮಾಹಿತಿ ಇರಲಿಲ್ಲ. ಸಿನಿಮಾ ನಿರ್ಮಾಣ ಬಳಿಕ ನಮಗೆ ಹೇಳಿದ. ಅಪ್ಪುಗೆ ಭೇದಭಾವ ಇಲ್ಲ. ಬಿಳಿ ಅಂದ್ರೆ ಅಪ್ಪ ನೆನಪು ಆಗುತ್ತಾರೆ. ಅಪ್ಪುಗೂ ಬಿಳಿ ಬಣ್ಣ ಅಂದರೆ ಇಷ್ಟ. ಹೀಗಾಗಿ ಇವತ್ತು ಬಿಳಿ ಬಟ್ಟೆ ಹಾಕಲು ಹೇಳಿದ್ದೇವೆ ಎಂದು ಹೇಳಿದರು.

Puneeth Parva

ಇದು ಅಭಿಮಾನಿಗಳ ಕಾರ್ಯಕ್ರಮ
ಅಭಿಮಾನಿಗಳಿಗಾಗಿ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಬರುವ ಅಭಿಮಾನಿಗಳೇ ಮುಖ್ಯ ಅತಿಥಿಗಳಾಗಿದ್ದಾರೆ. ಬರುವ ಎಲ್ಲರಿಗೂ ಸ್ವಾಗತ. ಎಲ್ಲರೂ ಸೇರಿ ಮಾಡೋಣ. ಅಪ್ಪು ಗಾಯಕನಾಗಿ ಹಾಡಿದ ಹಾಡನ್ನು ನಾನು ಹಾಡುತ್ತೇನೆ. ಅವನ ಜತೆಗಿನ ಒಡನಾಟ ಹೇಳಿ ನಾನು ಹಾಡು ಹಾಡುತ್ತೇನೆ. ಶಿವರಾಜಕುಮಾರ್ ಡ್ಯಾನ್ಸ್ ಮಾಡುತ್ತಾರೆ. ಕುನಾಲ್ ಗಾಂಜಾವಾಲ್‌ ಸೇರಿದಂತೆ ಹಲವು ಇರಲಿದ್ದಾರೆ. ಎಲ್ಲರೂ ರಂಜಿಸಲಿದ್ದಾರೆ ಎಂದು ರಾಘವೇಂದ್ರ ರಾಜಕುಮಾರ್‌ ತಿಳಿಸಿದರು.

ಇದನ್ನೂ ಓದಿ | Puneeth Parva | ʻಪುನೀತ ಪರ್ವʼದ ವಿವರ ಹಂಚಿಕೊಂಡ ಅಶ್ವಿನಿ ಪುನೀತ್ ರಾಜಕುಮಾರ್‌

Puneeth Parva

ಕುನಾಲ್‌, ರಾಘವೇಂದ್ರ ರಾಜಕುಮಾರ್‌ ರಿಹರ್ಸಲ್‌
ಗಾಯಕ ಕುನಾಲ್ ಗಾಂಜಾವಾಲ, ರಾಘವೇಂದ್ರ ರಾಜಕುಮಾರ್‌ ಅವರಿಂದ ಈಗಾಗಲೇ ರಿಹರ್ಸಲ್‌ ನಡೆದಿದೆ. “ನೀನೇ ನೀನೇ, ನನಗೆಲ್ಲಾ ನೀನೇ” ಹಾಡಿನ ಖ್ಯಾತಿಯ ಕುನಾಲ್ ಅಪ್ಪು ಹಾಡುಗಳನ್ನು ಹಾಡಿ ರಂಜಿಸಲಿದ್ದಾರೆ. ಇನ್ನು ಅಪ್ಪು ಹಾಡಿದ ಕೆಲವು ಹಾಡುಗಳನ್ನು ಹಾಡಲು ರಾಘವೇಂದ್ರ ರಾಜ್‌ಕುಮಾರ್ ಸಿದ್ಧತೆ ಮಾಡಿಕೊಳ್ಳುತ್ತಿದ್ದು, “ಬಾನ ದಾರಿಯಲ್ಲಿ ಸೂರ್ಯ ಜಾರಿ ಹೋದ” ಗೀತೆಯನ್ನು ರಿಹರ್ಸಲ್‌ ಮಾಡುತ್ತಿದ್ದಾರೆ. ವೇದಿಕೆ ಮೇಲೆ ಪೂರ್ಣ ಪ್ರಮಾಣದ ಬ್ಯಾಂಡ್ ಟೀಂ ಜತೆಗೆ ಹಾಡಿನ ಅಭ್ಯಾಸ ಮುಂದುವರಿದಿದೆ.

Puneeth Parva

ದೂರದೂರಿನಿಂದ ಅಭಿಮಾನ ಆಗಮನ
ದೂರದ ಜಿಲ್ಲೆಗಳಿಂದ, ಹಳ್ಳಿಗಳಿಂದ ಅಪ್ಪು ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಹಲವರು ಬಸ್‌ಗಳಲ್ಲಿ ಆಗಮಿಸಿದರೆ ಮತ್ತೆ ಕೆಲವರು ಬಾಡಿಗೆ, ಸ್ವಂತ ವಾಹನಗಳ ಮೂಲಕ ಕಾರ್ಯಕ್ರಮಕ್ಕಾಗಿ ಬರುತ್ತಿದ್ದಾರೆ. ಈ ವಾಹನಗಳನ್ನು ಪಾರ್ಕಿಂಗ್‌ಗೆ ಪೊಲೀಸರು ಸ್ಥಳ ನಿಯೋಜನೆ ಮಾಡಿಸುತ್ತಿದ್ದು, ವಾಹನ ದಟ್ಟಣೆ ಆಗದಂತೆ ಕ್ರಮವಹಿಸುತ್ತಿದ್ದಾರೆ.

ಇದನ್ನೂ ಓದಿ | Puneeth Parva | ಪುನೀತ ಪರ್ವ ಕಾರ್ಯಕ್ರಮಕ್ಕಾಗಿ ಬೆಳಗಾವಿಯಿಂದ ಬೆಂಗಳೂರಿಗೆ ಸೈಕಲ್‌ ಏರಿದ ಅಭಿಮಾನಿ

Puneeth Parva

ಅದ್ಧೂರಿ ವೇದಿಕೆ
ಸಂಜೆ 6.30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, 10 ಎಕರೆ ಜಾಗದಲ್ಲಿ ಅದ್ಧೂರಿ ವೇದಿಕೆಯೊಂದಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. 80-60 ಅಳತೆಯ 10 ಅಡಿ ಎತ್ತರದಲ್ಲಿ‌ ವೇದಿಕೆ ನಿರ್ಮಾಣಗೊಂಡಿದೆ. ವೇದಿಕೆ ಮೇಲೆ ಸುಮಾರು ೫೦೦ ಲೈಟ್‌ಗಳನ್ನು ಬಳಕೆ ಮಾಡಲಾಗಿದ್ದು, 400ರಿಂದ 500 ಸಿಬ್ಬಂದಿ 1 ವಾರದಲ್ಲಿ ವೇದಿಕೆಯನ್ನು ಸಿದ್ಧಪಡಿಸಿದ್ದಾರೆ. 14 ಕ್ಯಾಮೆರಾಗಳನ್ನು ಪುನೀತ ಪರ್ವ ಕಾರ್ಯಕ್ರಮದಲ್ಲಿ ಆಯೋಜಕರಿಂದಲೇ ಅಳವಡಿಸಲಾಗಿದೆ. ವಿಐಪಿಗಳಿಗೆ 5000 ಸಾವಿರಕ್ಕೂ ಹೆಚ್ಚು ಆಸನದ ವ್ಯವಸ್ಥೆಯನ್ನು ಮಾಡಲಾಗಿದೆ. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಏಳೂವರೆ ಅಡಿಯ ಎಲ್‌ಇಡಿ (LED) ಸ್ಕ್ರೀನ್ ಅನ್ನು ಒಟ್ಟು ೭ ಕಡೆ ಅಳವಡಿಕೆ ಮಾಡಲಾಗಿದೆ.

ನೂಕು ನುಗ್ಗಲು ಆಗದಂತೆ ಕ್ರಮವಹಿಸಲಾಗಿದ್ದು, ಅಭಿಮಾನಿಗಳಿಗೆ ಪ್ರತ್ಯೇಕ ಆಸನ ವ್ಯವಸ್ಥೆಯನ್ನು ಮಾಡಲಾಗಿದೆ. ಬರುವ ಅಭಿಮಾನಿಗಳಿಗೆ ಎರಡು ಗೇಟ್‌ಗಳಲ್ಲಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 2 ಗಂಟೆಯ ನಂತರ ಅಭಿಮಾನಿಗಳಿಗೆ ಒಳಗಡೆ ಹೋಗಲು ಅವಕಾಶ ಕಲ್ಪಿಸಲಾಗಿದ್ದು, ಈಗಾಗಲೇ ತಂಡೋಪ ತಂಡವಾಗಿ ಅಭಿಮಾನಿಗಳು ಸ್ಥಳಕ್ಕೆ ಬಂದಿದ್ದಾರೆ. ಸುಮಾರು ಒಂದು ಲಕ್ಷ ಅಭಿಮಾನಿಗಳು ಬರುವ ನಿರೀಕ್ಷೆ ಇದ್ದು, ಸೂಕ್ತ ಕ್ರಮ ವಹಿಸಲಾಗಿದೆ.

ಇದನ್ನೂ ಓದಿ | ನ.1ರಂದು ಪುನೀತ್‌ ರಾಜಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ, ಇದಕ್ಕಾಗಿ ಸಕಲ ಸಿದ್ಧತೆ ಎಂದ ಬೊಮ್ಮಾಯಿ

ಡ್ಯಾನ್ಸ್‌ ಪ್ರದರ್ಶನಗಳು
ಕಾರ್ಯಕ್ರಮದಲ್ಲಿ ಡ್ಯಾನ್ಸ್‌ ಪ್ರದರ್ಶನಗಳು ಇರಲಿದ್ದು, ಭಾರತದ ಮೈಕಲ್‌ ಜಾಕ್ಸನ್‌ ಖ್ಯಾತಿಯ ನಟ ಪ್ರಭುದೇವ, ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್‌ ಮತ್ತು ಮೋಹಕ ತಾರೆ ರಮ್ಯಾ ಅವರಿಂದ ಡ್ಯಾನ್ಸ್‌ ಕಾರ್ಯಕ್ರಮ ನಡೆಯಲಿದೆ. ಅಲ್ಲದೆ, ಕುನಾಲ್ ಗಾಂಜಾವಾಲ, ವಿಜಯ್ ಪ್ರಕಾಶ್, ಅರ್ಮಾನ್ ಮಲ್ಲಿಕ್, ಗುರು ಕಿರಣ್ ಹಾಗು ಟಿಪ್ಪು ಅವರಿಂದ ಗೀತ ನಮನ ಕಾರ್ಯಕ್ರಮಗಳೂ ನಡೆಯಲಿದೆ.

Puneeth Parva

ಮುಂಬೈಯಿಂದ ಆಗಮಿಸಿದ ನೃತ್ಯ ಕಲಾವಿದರು
ಪುನೀತ ಪರ್ವ ಕಾರ್ಯಕ್ರಮಕ್ಕೆ ಬೆಳಗ್ಗೆಯೇ ಮುಂಬೈಯಿಂದ ನೃತ್ಯ ಕಲಾವಿದರ ತಂಡ ಆಗಮಿಸಿದ್ದು, ಹಲವು ಸುತ್ತಿನ ರಿಹರ್ಸಲ್‌ಗಳನ್ನು ನಡೆಸಿವೆ. ಪುನೀತ್‌ ಸಿನಿಮಾಗಳ ಹಾಡಿಗೆ ಇವರೆಲ್ಲರೂ ಹೆಜ್ಜೆ ಹಾಕಲಿದ್ದಾರೆ.

ಸಂಚಾರ ದಟ್ಟನೆ ನಿಯಂತ್ರಣಕ್ಕೆ ಹಲವು ಮಾರ್ಗ
ಅಭಿಮಾನಿಗಳು ಹಾಗೂ ಸಾರ್ವಜನಿಕರ ಆಗಮನಕ್ಕೆ ಸಂಚಾರಿ ಪೊಲೀಸರು ಹಲವು ಮಾರ್ಗಗಳನ್ನು ಗುರುತಿಸಿದ್ದು, ಮೈಸೂರು ರಸ್ತೆ ಕಡೆಯಿಂದ ಬರುವ ವಾಹನಗಳು ನಾಯಂಡಹಳ್ಳಿ ಜಂಕ್ಷನ್, ಸುಮ್ಮುನಹಳ್ಳಿ ಬ್ರಿಡ್ಜ್, ರಾಜಕುಮಾರ್ ಸಮಾದಿ, ಗೊರಗುಂಟೆಪಾಳ್ಯ ಜಂಕ್ಷನ್, ಬಿಇಎಲ್ ಸೇತುವೆ, ಹೆಬ್ಬಾಳ ಮೇಲ್ಸೇತುವೆ, ಮೆಕ್ರಿ ಸರ್ಕಲ್‌ನಿಂದ ಅರಮನೆ ಮೈದಾನಕ್ಕೆ ತಲುಪಲು ವ್ಯವಸ್ಥೆ ಮಾಡಲಾಗಿದೆ.

ತುಮಕೂರು ಕಡೆಯಿಂದ ಬರುವ ವಾಹನಗಳು ತುಮಕೂರು ರಸ್ತೆ, ಗೊರಗುಂಟೆಪಾಳ್ಯ ಜಂಕ್ಷನ್, ಬಿಇಎಲ್ ಸೇತುವೆ, ಹೆಬ್ಬಾಳ ಮೇಲ್ಸೇತುವೆ ಮೆಕ್ರಿ ಸರ್ಕಲ್‌ನಿಂದ ಅರಮನೆ ಮೈದಾನಕ್ಕೆ ತಲುಪಲು ವ್ಯವಸ್ಥೆ ಮಾಡಲಾಗಿದೆ. ದೊಡ್ಡಬಳ್ಳಾಪುರ ಕಡೆಯಿಂದ ಬರುವ ವಾಹನಗಳು, ಮೇಜರ್ ಉನ್ನಿಕೃಷ್ಣ ರಸ್ತೆ, ಯಲಹಂಕ ಪೊಲೀಸ್ ಠಾಣೆ, ಬಳ್ಳಾರಿ ರಸ್ತೆ, ಹೆಬ್ಬಾಳ ಮೇಲ್ಸೇತುವೆ, ಮೇಕ್ರಿ ಸರ್ಕಲ್‌ನಿಂದ ಅರಮನೆ ಮೈದಾನಕ್ಕೆ ತಲುಪಲು ವ್ಯವಸ್ಥೆ ಮಾಡಲಾಗಿದೆ.

ಹೊಸೂರು ಕಡೆಯಿಂದ ಬರುವ ವಾಹನಗಳು, ಹೊಸೂರು ರಸ್ತೆ, ಮಡಿವಾಳ ಚಕ್‌ಪೋಸ್ಟ್‌, ಡೈರಿ ಸರ್ಕಲ್, ಲಾಲ್‌ ಬಾಗ್ ಮುಖ್ಯದ್ವಾರ, ಮಿನರ್ವ ಸರ್ಕಲ್, ಟೌನ್ ಹಾಲ್, ಮೈಸೂರು ಬ್ಯಾಂಕ್ ಸರ್ಕಲ್, ಬಸವೇಶ್ವರ ವೃತ್ತ, ಮೌಂಟ್ ಕಾರ್ಮಲ್ ಕಾಲೇಜ್, ವಸಂತ ನಗರ ಜಯಮಹಲ್ ರಸ್ತೆ ಮೂಲಕ ಅರಮನೆ ಮೈದಾನಕ್ಕೆ ತಲುಪಲು ಕ್ರಮ ವಹಿಸಲಾಗಿದೆ.

ಇದನ್ನೂ ಓದಿ | Gandhada Gudi | ಡಾ. ರಾಜ್‌ ಗಂಧದ ಗುಡಿಗಿಂತಲೂ ಪುನೀತ್‌ ಸಿನಿಮಾ ಯಶಸ್ಸು ಕಾಣಲಿ: ಸೋದರತ್ತೆ ನಾಗಮ್ಮ ಹಾರೈಕೆ

ಕೋಲಾರ, ಹೊಸಕೋಟೆ ಕಡೆಯಿಂದ ಬರುವ ವಾಹನಗಳು ಕೆ‌.ಆರ್ ಪುರ, ಟಿನ್ ಫ್ಯಾಕ್ಟರಿ, ಹೆಣ್ಣೂರು ರಿಂಗ್ ರೋಡ್, ಹೆಬ್ಬಾಳ ಮೇಲ್ಸೇತುವೆ, ಮೇಕ್ರಿ ಸರ್ಕಲ್‌ನಿಂದ ಅರಮನೆ ಮೈದಾನಕ್ಕೆ ತಲುಪಲು ಕಾರ್ಯಕ್ರಮಕ್ಕೆ ಬರುವ ಎಲ್ಲ ವಾಹನಗಳಿಗೆ ಸರ್ಕಸ್ ಮೈದಾನದಲ್ಲಿ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಕಾರ್ಯಕ್ರಮ ಆರಂಭವಾಗುವ ಕ್ಷಣದಿಂದ ಕಾರ್ಯಕ್ರಮ‌ ಮುಗಿಯುವ ತನಕ ಸಂಚಾರ ದಟ್ಟಣೆ ಆಗದಂತೆ ಹೆಚ್ಚುವರಿ ಸಂಚಾರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಬಳ್ಳಾರಿ ರಸ್ತೆಯ ತ್ರಿಪುರ ನಿವಾಸಿನಿ ಗೇಟ್ ಮೂಲಕ ಸಾರ್ವಜನಿಕರಿಗೆ ಪ್ರವೇಶ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಜಯಮಹಲ್ ಮೂಲಕ ವಿಐಪಿ ಹಾಗೂ ವಿವಿಐಪಿಗಳಿಗೆ ಪ್ರವೇಶ ವ್ಯವಸ್ಥೆ ಕಲ್ಪಿಸಲಾಗಿದೆ.

Puneeth Parva

ಏನಿದು ಪುನೀತ ಪರ್ವ?
ಅಗಲಿದ ನಾಯಕ ನಟ, ಕನ್ನಡಿಗರ ಕಣ್ಮಣಿ ಪುನೀತ್‌ ರಾಜ್‌ಕುಮಾರ್‌ ಅವರ ನೆನಪಿನಲ್ಲಿ ʼಪುನೀತ ಪರ್ವʼ ಕಾರ್ಯಕ್ರಮವು ಅಕ್ಟೋಬರ್‌ ೨೧ರಂದು ಸಂಜೆ ೬ ಗಂಟೆಗೆ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಮುಂದಾಳತ್ವದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಪುನೀತ್ ನಟನೆಯ ಕೊನೆಯ ಸಿನಿಮಾ ʼಗಂಧದ ಗುಡಿʼ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸಲು ಪುನೀತ್‌ ಕುಟುಂಬ ಹಾಗೂ ಸಿನಿಮಾ ತಂಡ ನಿರ್ಧರಿಸಿದೆ. ಇವೆಂಟ್‌ಗೆ ರಾಜಕೀಯ ನಾಯಕರು ಸೇರಿದಂತೆ ಸಿನಿಮಾ ರಂಗದ ಖ್ಯಾತನಾಮರು ಆಗಮಿಸಲಿದ್ದಾರೆ.

ಸಂಜೆ 6.30ಕ್ಕೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಟಾಲಿವುಡ್, ಕಾಲಿವುಡ್​ನಿಂದಲೂ ನಟ – ನಟಿಯರು ಆಗಮಿಸುತ್ತಿದ್ದಾರೆ. ಟಾಲಿವುಡ್‌ನಿಂದ ಬಾಲಯ್ಯ, ಕಾಲಿವುಡ್​ ನಾಯಕ ಕಮಲ್ ಹಾಸನ್, ಸೂರ್ಯ, ಬಹುಭಾಷಾ ನಟ ಪ್ರಭುದೇವ, ರಾಣಾ ದಗ್ಗುಬಾಟಿ ಹೀಗೆ ಇನ್ನೂ ಅನೇಕರು ಈ ಪುನೀತ್ ಪರ್ವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಪುನೀತ ಪರ್ವಕ್ಕೆ ಚಂದನವನದ ಖ್ಯಾತನಾಮರು ಸಹ ಸಾಕ್ಷಿಯಾಗಲಿದ್ದಾರೆ. ಕಿಚ್ಚ ಸುದೀಪ್, ಯಶ್, ಡಾರ್ಲಿಂಗ್ ಕೃಷ್ಣ, ಡಾಲಿ ಧನಂಜಯ್, ರಮ್ಯಾ ಸೇರಿದಂತೆ ಅನೇಕ ಸ್ಯಾಂಡಲ್‌ವುಡ್‌ ತಾರೆಯರು ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹಾಡು, ನೃತ್ಯ ಎಲ್ಲವೂ ಇರಲಿದೆ. ನಟ ಶಿವರಾಜ್​ಕುಮಾರ್, ರಮ್ಯಾ ಸೇರಿದಂತೆ ಅನೇಕ ನಟ-ನಟಿಯರು ತಮ್ಮ ನೃತ್ಯದ ಮೂಲಕ ರಂಜಿಸಲಿದ್ದಾರೆ. ಗಂಧದ ಗುಡಿ ಸಾಕ್ಷ್ಯಚಿತ್ರವನ್ನು ಅಮೋಘವರ್ಷ ನಿರ್ದೇಶಿಸಿದ್ದು, ಅಕ್ಟೋಬರ್ 28ಕ್ಕೆ ಬಿಡುಗಡೆ ಆಗಲಿದೆ.

ಕಾರ್ಯಕ್ರಮಕ್ಕೆ ಬಂದೋಬಸ್ತ್‌
ಕಾರ್ಯಕ್ರಮಕ್ಕೆ ಕೇಂದ್ರ ವಿಭಾಗ ಡಿಸಿಪಿ ನೇತೃತ್ವದಲ್ಲಿ ಬಂದೋಬಸ್ತ್ ಏರ್ಪಡಿಸಲಾಗಿದೆ. 3 ಡಿಸಿಪಿ, 14 ಎಸಿಪಿ, 60 ಇನ್ಸ್‌ಪೆಕ್ಟರ್‌, 180 ಪಿಎಸ್ಐ ಹಾಗೂ 1400 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. 20 KSRP ತುಕಡಿಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ 50 ಸಾವಿರಕ್ಕಿಂತಲೂ ಅಧಿಕ ಜನ ಸೇರುವ ನಿರೀಕ್ಷೆ ಇದ್ದು, ಕಾರ್ಯಕ್ರಮಕ್ಕೆ ಬರುವ ಪ್ರತಿಯೊಬ್ಬರಿಗೂ ಪಾಸ್ ನೀಡುವಂತೆ ಆಯೋಜಕರಿಗೆ ತಿಳಿಸಲಾಗಿದೆ. ಪಾಸ್‌ ಇದ್ದವರಿಗೆ ಮಾತ್ರ ಅವಕಾಶ. ಪ್ರತ್ಯೇಕವಾದ ಪಾರ್ಕಿಂಗ್ ನೀಡಲಾಗಿದೆ ಎಂದು ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ್ ಗೌಡ ಹೇಳಿದ್ದಾರೆ.

ಇದನ್ನೂ ಓದಿ | ಇಂದು ಪುನೀತ ಪರ್ವ ಕಾರ್ಯಕ್ರಮ, ಸ್ಟಾರ್‌ ನಟ ನಟಿಯರಿಂದ ಮೆಗಾ ಶೋ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Anjali Murder Case: ಅಂಜಲಿ‌ ಕೊಲೆ‌ ಪ್ರಕರಣದಲ್ಲಿ ಕರ್ತವ್ಯ ಲೋಪ; ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

Anjali Murder Case: ಅಂಜಲಿ ಕೊಲೆ ಪ್ರಕರಣಕ್ಕೂ ಮೊದಲೇ ಯುವತಿ ಅಜ್ಜಿ, ಜೀವ ಬೆದರಿಕೆ ಇದೆ ಎಂದು ದೂರು ನೀಡಿದ್ದರು. ಆದರೆ, ಅದನ್ನು ನಿರ್ಲಕ್ಷ್ಯ ಮಾಡಿದ್ದರಿಂದ ಬೆಂಡಿಗೇರಿ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಹಾಗೂ ಮಹಿಳಾ ಪೇದೆಯನ್ನು ಅಮಾನತು ಮಾಡಲಾಗಿದೆ.

VISTARANEWS.COM


on

Anjali Murder Case
Koo

ಹುಬ್ಬಳ್ಳಿ: ಅಂಜಲಿ‌ ಕೊಲೆ‌ ಪ್ರಕರಣದಲ್ಲಿ (Anjali Murder Case) ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಹಾಗೂ ಮಹಿಳಾ ಪೇದೆಯನ್ನು ಅಮಾನತು ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಆದೇಶ ಹೊರಡಿಸಿದ್ದಾರೆ.

ಕೊಲೆ ಪ್ರಕರಣಕ್ಕೂ ಮೊದಲೇ ಅಂಜಲಿ ಅಜ್ಜಿ, ಬೆಂಡಿಗೇರಿ ಪೊಲೀಸ್ ಠಾಣೆಗೆ ಬಂದು ಬೆದರಿಕೆ ಇದೆ ಎಂದು ದೂರು ನೀಡಿದ್ದರು. ದೂರು ನೀಡಿದರೂ ಪೊಲೀಸರು ನಿರ್ಲಕ್ಷ್ಯ ಮಾಡಿರುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಚಿಕ್ಕೋಡಿ ಹಾಗೂ ಮಹಿಳಾ ಪೊಲೀಸ್ ಪೇದೆ ರೇಖಾ ಅವರನ್ನು ಹು- ಧಾ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಅಮಾನತು ಮಾಡಿದ್ದಾರೆ.

ಇದನ್ನೂ ಓದಿ | Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

ಏನಿದು ಘಟನೆ?

ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ (Neha Hiremath murder) ಕೊಲೆ ಪ್ರಕರಣ ನೆನಪಿನಿಂದ ಮಾಸುವ ಮುನ್ನವೇ ಮತ್ತೊಬ್ಬ ಯುವತಿಯ ಕೊಲೆ ಬುಧವಾರ ಮುಂಜಾನೆ ನಡೆದಿತ್ತು. ನಗರದ ವೀರಾಪೂರ ಓಣಿಯ ಮನೆಯಲ್ಲಿ ಮಲಗಿದ್ದಾಗ ಮನೆಗೇ ನುಗ್ಗಿದ್ದ ದುಷ್ಕರ್ಮಿ ಚಾಕುವಿನಿಂದ ಯುವತಿ ಅಂಜಲಿ ಅಂಬಿಗೇರಗೆ (20) ಇರಿದು ಕೊಂದಿದ್ದ.

Anjali Murder Case

ಕೊಲೆ ಮಾಡಿದ ಆರೋಪಿ ಗಿರೀಶ್ ಸಾವಂತ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ತನ್ನ ಪ್ರೀತಿಯನ್ನು‌ ನಿರಾಕರಿಸಿದ್ದಕ್ಕೆ ಕ್ರುದ್ಧನಾದ ಗಿರೀಶ್‌ ಈ ಕೃತ್ಯ ಎಸಗಿದ್ದ. ಈ ಸೈಕೋ ಪ್ರೇಮಿ, ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ಧಮಕಿ ಹಾಕಿದ್ದ. “ನನ್ನ ಜೊತೆ ಬರದೆ ಹೋದರೆ ನಿರಂಜನ ಹಿರೇಮಠ ಮಗಳಿಗೆ ಹೇಗೆ ಆಗಿದೆ ಹಾಗೆ ಮಾಡ್ತೀನಿ” ಎಂದು ಧಮಕಿ ಹಾಕಿದ್ದ. ಗಿರೀಶ ಬೆದರಿಕೆ ಹಾಕಿರುವುದನ್ನು ಅಂಜಲಿಯ ಅಜ್ಜಿ ಗಂಗಮ್ಮ ಅವರು ಪೊಲೀಸರ ಗಮನಕ್ಕೂ ತಂದಿದ್ದರು. ಆದರೆ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ.

ಕೊಲೆಪಾತಕಿ ಗಿರೀಶ ಈ ಹಿಂದೆ ಹಲವು ಕಳ್ಳತನ ಪ್ರಕರಣಗಳಲ್ಲಿಯೂ ಭಾಗಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | B C Mylarappa: ಅಕ್ರಮ ಭೂ ವ್ಯವಹಾರ; ಪ್ರೊ. ಮೈಲಾರಪ್ಪ ಅಮಾನತಿಗೆ ಉನ್ನತ ಶಿಕ್ಷಣ ಇಲಾಖೆ ಸೂಚನೆ

ಹುಬ್ಬಳ್ಳಿಯ ಯುವತಿ ನೇಹಾ ಹಿರೇಮಠ ಅವರನ್ನು ಪಾಗಲ್‌ ಪ್ರೇಮಿ ಫಯಾಜ್‌ ಕಾಲೇಜ್‌ ಕ್ಯಾಂಪಸ್‌ನಲ್ಲಿಯೇ ಕಳೆದ ತಿಂಗಳು ಕೊಚ್ಚಿ ಕೊಲೆ ಮಾಡಿದ್ದ. ಇದು ಲವ್‌ ಜಿಹಾದ್‌ ಪ್ರಕರಣ ಎಂದು ರಾಜಾದ್ಯಂತ ತೀವ್ರ ಪ್ರತಿಭಟನೆ, ರಾಜಕೀಯ ಕೆಸರೆರಚಾಟಗಳಿಗೆ ಕಾರಣವಾಗಿತ್ತು.

Continue Reading

ಉತ್ತರ ಕನ್ನಡ

Uttara Kannada News: ಮೇ 19ರಂದು ನಿವೃತ್ತ ಶಿಕ್ಷಕ ಜಿ. ಟಿ. ಭಟ್ ಬೊಮ್ಮನಹಳ್ಳಿ 80ರ ಸಂಭ್ರಮ

Uttara Kannada News: ಸಾವಿರಾರು ಸಂಖ್ಯೆಯಲ್ಲಿ ಶಿಷ್ಯವೃಂದ ಹೊಂದಿರುವ ನಿವೃತ್ತ ಶಿಕ್ಷಕ ಜಿ.ಟಿ. ಭಟ್ ಬೊಮ್ಮನಹಳ್ಳಿ ಅವರು ಶಿಕ್ಷಣ ಕ್ಷೇತ್ರದೊಂದಿಗೆ ಯಕ್ಷಗಾನ, ನಾಟಕ ಹಾಗೂ ಕೃಷಿ ಕ್ಷೇತ್ರದಲ್ಲೂ ತಮ್ಮ ಛಾಪನ್ನು ಮೂಡಿಸಿದ್ದಾರೆ. ಅವರ 80ರ ಸಂಭ್ರಮವನ್ನು ಅವರ ಶಿಷ್ಯ ವೃಂದದವರಿಂದ ಅಭಿನಂದನಾ ಸಮಾರಂಭವನ್ನು ಮೇ 19 ರಂದು ಮಧ್ಯಾಹ್ನ 3 ಗಂಟೆಗೆ ಮಂಚೀಕೇರಿಯ ರಾಜರಾಜೇಶ್ವರಿ ರಂಗಮಂದಿರಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಭಿನಂದನಾ ಕಾರ್ಯಕಾರಿ ಸಮಿತಿ ಸಂಚಾಲಕ ಜಿ.ಎನ್‌.ಶಾಸ್ತ್ರಿ ತಿಳಿಸಿದ್ದಾರೆ.

VISTARANEWS.COM


on

Retired Teacher G T Bhatt Bommanahalli 80th celebration programme on May 19
Koo

ಯಲ್ಲಾಪುರ: ಸಾವಿರಾರು ಮಂದಿಯ ಶಿಷ್ಯವೃಂದ ಹೊಂದಿರುವ ನಿವೃತ್ತ ಶಿಕ್ಷಕ ಜಿ.ಟಿ. ಭಟ್ ಬೊಮ್ಮನಹಳ್ಳಿ ಅವರು ಶಿಕ್ಷಣ ಕ್ಷೇತ್ರದೊಂದಿಗೆ ಯಕ್ಷಗಾನ, ನಾಟಕ ಹಾಗೂ ಕೃಷಿ ಕ್ಷೇತ್ರದಲ್ಲೂ ತಮ್ಮ ಛಾಪನ್ನು ಮೂಡಿಸಿದ್ದಾರೆ. ಅವರ 80ರ ಸಂಭ್ರಮವನ್ನು ಅವರ ಶಿಷ್ಯ ವೃಂದದವರಿಂದ ಅಭಿನಂದನಾ ಸಮಾರಂಭವನ್ನು ಮೇ 19ರಂದು ಆಯೋಜಿಸಲಾಗಿದೆ ಎಂದು ಅಭಿನಂದನಾ ಕಾರ್ಯಕಾರಿ ಸಮಿತಿ ಸಂಚಾಲಕ ಜಿ.ಎನ್‌. ಶಾಸ್ತ್ರಿ (Uttara Kannada News) ಹೇಳಿದರು.

ಪಟ್ಟಣದ ಅಡಿಕೆ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 80ರ ಸಂಭ್ರಮದ ಅಭಿನಂದನಾ ಕಾರ್ಯಕ್ರಮವನ್ನು ಮೇ 19ರಂದು ಮಧ್ಯಾಹ್ನ 3 ಗಂಟೆಗೆ ಮಂಚೀಕೇರಿಯ ರಾಜರಾಜೇಶ್ವರಿ ರಂಗಮಂದಿರಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಉದ್ಘಾಟಿಸಲಿದ್ದಾರೆ. ಹೊಸಪೇಟೆಯ ಯಾಜಿ ಪ್ರಕಾಶನ ಪ್ರಕಟಿಸಿರುವ ಬೊಮ್ಮನಹಳ್ಳಿ ಜಂಗಮ ಗೌರವ ಗ್ರಂಥವನ್ನು ಕವಿ, ಕಥೆಗಾರ ಜಯಂತ ಕಾಯ್ಕಿಣಿ ಬಿಡುಗಡೆ ಮಾಡಲಿದ್ದಾರೆ.

ಇದನ್ನೂ ಓದಿ: Fortis Hospital: ರೋಬೋಟಿಕ್‌ ನೆರವಿನಿಂದ ಇಬ್ಬರಿಗೆ ‘ಸಂಕೀರ್ಣ ಕಿಡ್ನಿ ಕಸಿ’ ಆಪರೇಷನ್ ಸಕ್ಸೆಸ್!

ರಂಗ ನಿರ್ದೇಶಕ ಚಿದಂಬರ ರಾವ್ ಜಂಬೆ ಹೆಗ್ಗೋಡು, ಯಕ್ಷಗಾನ ಕಲಾವಿದ ಶಿವಾನಂದ ಹೆಗಡೆ ಕೆರೆಮನೆ, ಬೆಂಗಳೂರು ಸಂಸ್ಕೃತ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಅಹಲ್ಯಾ ಶರ್ಮ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಮಂಚಿಕೇರಿಯ ಹಾಸಣಗಿ ಸೊಸೈಟಿ ಅಧ್ಯಕ್ಷ ಆರ್.ಎನ್. ಹೆಗಡೆ ಗೋರ್ಸಗದ್ದೆ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.

ನಂತರ ನಡೆಯುವ ವಾಮನ ಚರಿತ್ರೆ ತಾಳಮದ್ದಳೆಯ ಹಿಮ್ಮೇಳದಲ್ಲಿ ಭಾಗವತರಾಗಿ ಅನಂತ ದಂತಳಿಕೆ, ನರಸಿಂಹ ಭಟ್ಟ ಹಂಡ್ರಮನೆ ಮೃದಂಗ, ಪ್ರಮೋದ್ ಯಲ್ಲಾಪುರ ಚಂಡೆ, ಅರ್ಥದಾರಿಗಳಾಗಿ ವಿದ್ವಾನ್ ಉಮಾಕಾಂತ ಭಟ್, ಜಬ್ಬಾರ್‌ಸಮೋ ಸಂಪಾಜೆ, ರಾಧಾಕೃಷ್ಣ ಕಲ್ಚಾರ್ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಪಂ. ಗಣಪತಿ ಭಟ್ ಹಾಸಣಗಿ, ಕೆ ವಿ ಅಕ್ಷರ ಹೆಗ್ಗೋಡು, ವಿದ್ಯಾ ಹೆಗ್ಗೋಡು, ಪ್ರಮೋದ್ ಹೆಗಡೆ ಯಲ್ಲಾಪುರ, ಬಿ ಆರ್ ವೆಂಕಟರಮಣ ಐತಾಳ ಹೆಗ್ಗೋಡು, ಆರ್ ಜಿ ಭಟ್ಟ ಹಾಸಣಗಿ, ಡಾ.ರಾಜಪ್ಪ ದಳವಾಯಿ, ಹಬ್ಬು ಸಹೋದರು, ವಿ.ಎನ್. ಹೆಗಡೆ ಬೆದೆಹಕ್ಲು, ನಾರಾಯಣ ಯಾಜಿ ಉಪಸ್ಥಿತರಿರುವರು ಎಂದು ಅವರು ತಿಳಿಸಿದರು.

ಇದನ್ನೂ ಓದಿ: Karnataka Weather: ಇಂದು, ನಾಳೆ ಗುಡುಗು, ಮಿಂಚು ಸಹಿತ ಭಾರಿ ಮಳೆ; ಉತ್ತರ ಒಳನಾಡಿನಲ್ಲಿ ಆರೆಂಜ್ ಅಲರ್ಟ್

ಈ ಸಂದರ್ಭದಲ್ಲಿ ಅಭಿನಂದನಾ ಸಮಿತಿ ಸದಸ್ಯರು ಹಾಗೂ ಜಿ.ಟಿ. ಭಟ್ಟರ ಶಿಷ್ಯರಾದ ಎಂ.ಆರ್. ಹೆಗಡೆ ಕುಂಬ್ರಿಗುಡ್ಡೆ, ವಾಸೂಕಿ ಹೆಗಡೆ ಮಳಗಿಮನೆ, ಗಣೇಶ ರೋಕಡೆ ಮಂಚಿಕೇರಿ, ವಿಶ್ವನಾಥ ಬಾಮಣಕೊಪ್ಪ, ಜ್ಯೋತಿ ಭಟ್ಟ,ವಿದ್ಯಾ ಶರ್ಮಾ, ಡಾ.ಶೀಲಾ, ಶ್ರೀಪಾದ ಭಟ್ಟ ಇದ್ದರು.

Continue Reading

ರಾಯಚೂರು

Raichur News: 371 ಜೆ ಮೀಸಲಾತಿ ಮುಂದುವರಿಸದಂತೆ ಸಿಎಂಗೆ ಪತ್ರ ಬರೆದ ಎಚ್.ಕೆ. ಪಾಟೀಲ್ ವಜಾಗೆ ದಸಂಸ ಆಗ್ರಹ

Raichur News: ಕಲ್ಯಾಣ ಕರ್ನಾಟಕ ಭಾಗದ ಕಲಂ 371 (ಜೆ) ಮೀಸಲಾತಿ ಮುಂದುವರೆಸದಂತೆ ಸಿಎಂಗೆ ಪತ್ರ ಬರೆದು ಕಲ್ಯಾಣ ಕರ್ನಾಟಕ ಭಾಗಕ್ಕೆ ಮೋಸ ಮಾಡುತ್ತಿರುವ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಲಿಂಗಸುಗೂರಿನಲ್ಲಿ ದಲಿತ ಸಂಘರ್ಷ ಸಮಿತಿ ಮುಖಂಡರು, ಎಸಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

VISTARANEWS.COM


on

Dalita Sangharsha samiti demands that Minister HK Patil should be dismissed from the Cabinet
Koo

ಲಿಂಗಸುಗೂರು: ಕಲ್ಯಾಣ ಕರ್ನಾಟಕ ಭಾಗದ ಕಲಂ 371 (ಜೆ) ಮೀಸಲಾತಿ ಮುಂದುವರೆಸದಂತೆ ಸಿಎಂಗೆ ಪತ್ರ ಬರೆದು ಕಲ್ಯಾಣ ಕರ್ನಾಟಕ ಭಾಗಕ್ಕೆ ಮೋಸ ಮಾಡುತ್ತಿರುವ ಕಾನೂನು ಸಚಿವ ಎಚ್.ಕೆ. ಪಾಟೀಲ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ ಮುಖಂಡರು, ಎಸಿ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ (Raichur News) ಸಲ್ಲಿಸಿದರು.

ಇದನ್ನೂ ಓದಿ: Fortis Hospital: ರೋಬೋಟಿಕ್‌ ನೆರವಿನಿಂದ ಇಬ್ಬರಿಗೆ ‘ಸಂಕೀರ್ಣ ಕಿಡ್ನಿ ಕಸಿ’ ಆಪರೇಷನ್ ಸಕ್ಸೆಸ್!

ಕಲ್ಯಾಣ ಕರ್ನಾಟಕ ಪ್ರದೇಶದ ಸಾಮಾಜಿಕ, ಆರ್ಥಿಕ, ಔದ್ಯೋಗಿಕ ಅಸಮತೋಲನ ನಿವಾರಣೆಗೆ ಸಂವಿಧಾನದ ಕಲಂ 371 (ಜೆ) ಅನುಷ್ಠಾನಕ್ಕೆ ತರಲಾಗಿದೆ. ಆದರೆ ಕಲ್ಯಾಣ ಕರ್ನಾಟಕೇತರ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಕರ್ನಾಟಕ ಲೋಕಸೇವಾ ಆಯೋಗ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕೇಂದ್ರಿಕೃತ ದಾಖಲಾತಿ ಘಟಕ ಸಂಸ್ಥೆಗಳ ನೇಮಕಾತಿಯಲ್ಲಿ ಸಂವಿಧಾನದ ಕಲಂ 371 (ಜೆ) ದಡಿ ಮೀಸಲಾತಿ ಮುಂದುವರೆಸದಂತೆ ಸಚಿವ ಎಚ್.ಕೆ ಪಾಟೀಲ್‌, ಮುಖ್ಯಮಂತ್ರಿಗೆ ಪತ್ರ ಬರೆದಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 2024ರ ಜನವರಿ 22ರಂದು ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ಕೆಇಎ, ಸಿಎಸಿ ಸಂಸ್ಥೆ ಮೂಲಕ ನೇಮಕ ಮಾಡುವ ಇಲಾಖೆಗಳ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕೇತರ ಭಾಗದ 24 ಜಿಲ್ಲೆಗಳ ಅಭ್ಯರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸುವಂತೆ ಬರೆದುಕೊಂಡಿರುವುದು ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾಡುತ್ತಿರುವ ಮಲತಾಯಿ ಧೋರಣೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ವಿವರಿಸಲಾಗಿದೆ.

ಸಂವಿಧಾನ ಕಲಂ 371 (ಜೆ) ರ ಅಡಿ ಸಿಗುವ ಸೌಲಭ್ಯಗಳನ್ನು ಯಥಾವತ್ತಾಗಿ ಮುಂದುವರೆಸಬೇಕು. ಅನ್ಯ ಜಿಲ್ಲೆ ಅಭ್ಯರ್ಥಿಗಳಿಗೆ ಅನ್ಯಾಯ ಆಗುವ ವಿಚಾರ ಮುಂದಿಟ್ಟು ಸರ್ಕಾರವನ್ನು ಬ್ಲಾಕ್‌ಮೇಲ್ ಮಾಡುತ್ತಿರುವ ಸಚಿವ ಎಚ್.ಕೆ ಪಾಟೀಲರನ್ನು ಸಚಿವ ಸಂಪುಟದಿಂದ ಕೈಬಿಡಬೇಕು. ಇಲ್ಲವಾದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಪ್ರತ್ಯೇಕ ರಾಜ್ಯದ ಹೋರಾಟ ರೂಪಿಸಲಾಗುವುದು. ಮಧ್ಯ ಪ್ರವೇಶಿಸಿ ಕಲ್ಯಾಣ ಕರ್ನಾಟಕ ಭಾಗಕ್ಕೆ ನ್ಯಾಯ ಒದಗಿಸಬೇಕು ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಪ್ರಭುಲಿಂಗ ಮೇಗಳಮನಿ, ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: SBI Rates: ಎಸ್‌ಬಿಐನಲ್ಲಿ ಎಫ್‌ಡಿ ಇಟ್ಟವರಿಗೆ ಬಂಪರ್‌ ನ್ಯೂಸ್;‌ ಭಾರಿ ಬಡ್ಡಿದರ ಹೆಚ್ಚಿಸಿದ ಬ್ಯಾಂಕ್!

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ಯಲ್ಲಪ್ಪ ಹಾಲಭಾವಿ, ಅಕ್ರಂ ಪಾಶಾ, ಹುಸೇನಪ್ಪ ನಾಯಕ, ಸುನೀಲ್‌ಕುಮಾರ, ಹನುಮೇಶ ಕುಪ್ಪಿಗುಡ್ಡ, ಹಾಗೂ ಇನ್ನಿತರಿದ್ದರು.

Continue Reading

ಕರ್ನಾಟಕ

Terrorist Arrested: ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಉಗ್ರನ ಬಂಧನ

Terrorist Arrested: ಚೆನ್ನೈನ ಯುಎಸ್ ಕಾನ್ಸುಲೇಟ್ ಹಾಗೂ ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ ಆರೋಪದಲ್ಲಿ ಶಂಕಿತ ಉಗ್ರನ ಸೆರೆಯಾಗಿದೆ. ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

VISTARANEWS.COM


on

Terrorist Arrested
Koo

ಬೆಂಗಳೂರು: ನಗರದ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಶಂಕಿತ ಉಗ್ರನನ್ನು ಎನ್‌ಐಎ ಬಂಧಿಸಿದೆ. 2014ರಲ್ಲಿ ಚೆನ್ನೈನ ಯುಎಸ್ ಕಾನ್ಸುಲೇಟ್ ಹಾಗೂ ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ ಆರೋಪದಲ್ಲಿ ಶಂಕಿತ ಉಗ್ರನ (Terrorist Arrested) ಸೆರೆಯಾಗಿದೆ.

ನೂರುದ್ದೀನ್ ಅಲಿಯಾಸ್ ರಫಿ ಬಂಧಿತ ಶಂಕಿತ ಉಗ್ರ. ಮೈಸೂರಿನ ರಾಜೀವ ನಗರದಲ್ಲಿ ಶಂಕಿತ ಉಗ್ರನನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿ 2014ರಲ್ಲಿ ಚೆನ್ನೈನ ಯುಎಸ್ ಕಾನ್ಸುಲೇಟ್ ಹಾಗೂ ಬೆಂಗಳೂರಿನ ಟ್ರಿನಿಟಿ ಸರ್ಕಲ್ ಬಳಿ ಇರುವ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ.

ಇನ್ನು ಕೊಲಂಬೋದಲ್ಲಿರುವ ಪಾಕಿಸ್ತಾನಿ ಹೈ ಕಮೀಷನ್‌ ಕಚೇರಿನಲ್ಲಿ ಉದ್ಯೋಗಿಯಾಗಿರುವವನ ಜತೆ ಸಂಪರ್ಕ ಹೊಂದಿದ್ದ ಶಂಕಿತ ಉಗ್ರ, ಪಾಕಿಸ್ತಾನಿ ಪ್ರಜೆ ಅಮೀರ್ ಜುಬೇರ್ ಸಿದ್ಧಿಕಿಯ ಆಣತಿ ಮೇರೆಗೆ ಕಾರ್ಯ ನಿರ್ವಹಿಸುತ್ತಿದ್ದ. ಜತೆಗೆ ಪಾಕಿಸ್ತಾನಿ ಬೇಹುಗಾರರಿಗೆ ನೂರುದ್ದೀನ್ ಹಣ ಸಹಾಯ ಮಾಡುತ್ತಿದ್ದ. ಸದ್ಯ ಮೈಸೂರಿನಲ್ಲಿ ವಶಕ್ಕೆ ಪಡೆದ ಶಂಕಿತನಿಂದ ಒಂದು ಡ್ರೋನ್, ಮೊಬೈಲ್, ಲ್ಯಾಪ್ ಟಾಪ್, ಪೆನ್ ಡ್ರೈವ್ ವಶಕ್ಕೆ ಪಡೆಯಲಾಗಿದೆ.

ಈ ಹಿಂದೆ ಹೈದರಾಬಾದ್ ಬೇಹುಗಾರಿಕಾ ಪ್ರಕರಣದಲ್ಲಿ ಜಾಮೀನು ಪಡೆದು ಪರಾರಿಯಾಗಿದ್ದ ಶಂಕಿತ ಉಗ್ರ ನೂರುದ್ದೀನ್ ಸುಳಿವು ನೀಡಿದವರಿಗೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) 5 ಲಕ್ಷ ಬಹುಮಾನ ಘೋಷಿಸಿತ್ತು. 2023ರ ಆಗಸ್ಟ್‌ನಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಚೆನ್ನೈನ NIA ವಿಶೇಷ ನ್ಯಾಯಾಲಯಕ್ಕೆ ಹಾಜರಾಗಲು ವಿಫಲವಾದಾಗ ನೂರುದ್ದೀನ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು.

ಇದನ್ನೂ ಓದಿ | Prajwal Revanna Case: ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

ಶ್ರೀಲಂಕಾದ ಪ್ರಜೆ ಮುಹಮ್ಮದ್‌ ಸಕೀರ್‌ ಹುಸೇನ್ ಮತ್ತು ಕೊಲಂಬೋದಲ್ಲಿನ ಪಾಕಿಸ್ತಾನ ಹೈಕಮೀಷನ್‌ ಕಚೇರಿ ಉದ್ಯೋಗಿ, ಪಾಕಿಸ್ತಾನದ ಪ್ರಜೆ ಅಮೀರ್ ಜುಬೇರ್ ಸಿದ್ಧಿಕಿ ಸೇರಿ ಚೆನ್ನೈನ ಯುಎಸ್ ಕಾನ್ಸುಲೇಟ್‌ ಹಾಗೂ ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದರು. ಆ ಸಂದರ್ಭದಲ್ಲಿ ಆರೋಪಿ ನೂರುದ್ದೀನ್‌, ಪಾಕಿಸ್ತಾನಿ ಪ್ರಜೆಯ ಆದೇಶದ ಮೇರೆಗೆ ನಕಲಿ ನೋಟುಗಳನ್ನು ಪೂರೈಸುವ ಮೂಲಕ ದೇಶ ವಿರೋಧಿ ಬೇಹುಗಾರಿಕೆ ಚಟುವಟಿಕೆಗಳಿಗೆ ಹಣಕಾಸು ನೆರವು ಒದಗಿಸುತ್ತಿದ್ದ ಎಂದು ಎನ್ಐಎ ತನಿಖೆಯಲ್ಲಿ ಬಹಿರಂಗವಾಗಿದೆ.

ನೂರುದ್ದೀನ್ ತಲೆಮರೆಸಿಕೊಂಡ ನಂತರ ಸ್ಥಗಿತಗೊಂಡಿದ್ದ ಆತನ ವಿರುದ್ಧದ ವಿಚಾರಣೆ ಈಗ ಪುನರಾರಂಭವಾಗಲಿದೆ ಎಂದು ಎನ್‌ಐಎ ಮಾಹಿತಿ ನೀಡಿದೆ.

Continue Reading
Advertisement
Anjali Murder Case
ಕ್ರೈಂ5 mins ago

Anjali Murder Case: ಅಂಜಲಿ‌ ಕೊಲೆ‌ ಪ್ರಕರಣದಲ್ಲಿ ಕರ್ತವ್ಯ ಲೋಪ; ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

Participation of young women in science technology information and communication fields should be increased says Isha Ambani
ದೇಶ15 mins ago

Isha Ambani: ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಶ್ಲಾಘಿಸಿದ ಇಶಾ ಅಂಬಾನಿ

Retired Teacher G T Bhatt Bommanahalli 80th celebration programme on May 19
ಉತ್ತರ ಕನ್ನಡ22 mins ago

Uttara Kannada News: ಮೇ 19ರಂದು ನಿವೃತ್ತ ಶಿಕ್ಷಕ ಜಿ. ಟಿ. ಭಟ್ ಬೊಮ್ಮನಹಳ್ಳಿ 80ರ ಸಂಭ್ರಮ

Dalita Sangharsha samiti demands that Minister HK Patil should be dismissed from the Cabinet
ರಾಯಚೂರು26 mins ago

Raichur News: 371 ಜೆ ಮೀಸಲಾತಿ ಮುಂದುವರಿಸದಂತೆ ಸಿಎಂಗೆ ಪತ್ರ ಬರೆದ ಎಚ್.ಕೆ. ಪಾಟೀಲ್ ವಜಾಗೆ ದಸಂಸ ಆಗ್ರಹ

Sandeep Lamichhane
ಕ್ರೀಡೆ38 mins ago

Sandeep Lamichhane: ಅತ್ಯಾಚಾರ ಆರೋಪದಲ್ಲಿ 8 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕ್ರಿಕೆಟಿಗ ಲಮಿಚಾನೆಗೆ ರಿಲೀಫ್; ನಿರಪರಾಧಿ ಎಂದ ಕೋರ್ಟ್​

Shyam Rangeela
ದೇಶ46 mins ago

Shyam Rangeela: ವಾರಾಣಸಿಯಲ್ಲಿ ಮೋದಿ ವಿರುದ್ಧ ಕಣಕ್ಕಿಳಿದ ಕಲಾವಿದನ ನಾಮಪತ್ರ ತಿರಸ್ಕಾರ!

Terrorist Arrested
ಕರ್ನಾಟಕ1 hour ago

Terrorist Arrested: ಬೆಂಗಳೂರಿನ ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಶಂಕಿತ ಉಗ್ರನ ಬಂಧನ

Monsoon 2024
ದೇಶ2 hours ago

Monsoon 2024: ರೈತರಿಗೆ ಗುಡ್‌ ನ್ಯೂಸ್;‌ ಮುಂಗಾರು ಮಳೆ ಆಗಮನಕ್ಕೆ ಫಿಕ್ಸ್‌ ಆಯ್ತು ದಿನಾಂಕ!

DP Manu
ಕ್ರೀಡೆ2 hours ago

DP Manu: ಫೆಡರೇಷನ್ ಕಪ್‌ನಲ್ಲಿ ನೀರಜ್​ ಚೋಪ್ರಾಗೆ ಬೆವರಿಳಿಯುವಂತೆ ಮಾಡಿದ ಕನ್ನಡಿಗ ಮನು; ಇವರ ಹಿನ್ನೆಲೆ, ಸಾಧನೆ ಏನೇನು?

Davanagere News
ಕರ್ನಾಟಕ2 hours ago

Davanagere News: ದಾವಣಗೆರೆ ಸಮೀಪದ ಕೆರೆಯಲ್ಲಿ ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ; ವಿಷಪ್ರಾಶನ ಶಂಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ16 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ18 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌