Modi In Ayodhya | ದೀಪೋತ್ಸವದಲ್ಲಿ ಪಾಲ್ಗೊಳ್ಳಲು ಅಯೋಧ್ಯೆಗೆ ಆಗಮಿಸಿದ ಮೋದಿ, ರಾಮನ ದರ್ಶನ - Vistara News

ದೀಪಾವಳಿ

Modi In Ayodhya | ದೀಪೋತ್ಸವದಲ್ಲಿ ಪಾಲ್ಗೊಳ್ಳಲು ಅಯೋಧ್ಯೆಗೆ ಆಗಮಿಸಿದ ಮೋದಿ, ರಾಮನ ದರ್ಶನ

ನರೇಂದ್ರ ಮೋದಿ (Modi In Ayodhya) ಅವರು ದೀಪೋತ್ಸವದಲ್ಲಿ ಪಾಲ್ಗೊಳ್ಳಲು ಇದೇ ಮೊದಲ ಬಾರಿಗೆ ಅಯೋಧ್ಯೆಗೆ ಆಗಮಿಸಿದ್ದಾರೆ. ರಾಮಮಂದಿರ ಕಾಮಗಾರಿ ವೀಕ್ಷಣೆ ಸೇರಿ ಹಲವು ಧಾರ್ಮಿಕ ವಿಧಿವಿಧಾನಗಳನ್ನು ಮೋದಿ ನೆರವೇರಿಸಲಿದ್ದಾರೆ.

VISTARANEWS.COM


on

Ayodhya Modi
ಮೋದಿ ಅವರನ್ನು ಅಯೋಧ್ಯೆಗೆ ಸ್ವಾಗತಿಸಿದ ಸಿಎಂ ಯೋಗಿ, ಗವರ್ನರ್‌ ಆನಂದಿಬೆನ್‌ ಪಟೇಲ್.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಗೆ (Modi In Ayodhya) ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ರಾಜ್ಯಪಾಲೆ ಆನಂದಿಬೆನ್‌ ಪಟೇಲ್‌ ಸೇರಿ ಹಲವರು ಪ್ರಧಾನಿ ಅವರನ್ನು ಸ್ವಾಗತಿಸಿದ್ದಾರೆ. ಸರಯೂ ನದಿ ತೀರದಲ್ಲಿ ಆರತಿ, ದೀಪೋತ್ಸವ ಸೇರಿ ಹಲವು ಕಾರ್ಯಕ್ರಮಗಳಲ್ಲಿ ಮೋದಿ ಭಾಗಿಯಾಗಲಿದ್ದಾರೆ. ಸಂಜೆ ಲಕ್ಷಾಂತರ ದೀಪ ಬೆಳಗಲಿದ್ದು, ಲೇಸರ್‌ ಶೋ ಕೂಡ ಆಯೋಜಿಸಲಾಗಿದೆ. ಇದರಿಂದ ಅಯೋಧ್ಯೆಯ ದೀಪಾವಳಿಗೆ ಹೊಸ ರಂಗು ಬಂದಿದೆ.

ರಾಮಲೀಲಾ ವೀಕ್ಷಣೆ

ಅಯೋಧ್ಯೆಗೆ ಆಗಮಿಸಿರುವ ಮೋದಿ, ಮೊದಲು ರಾಮಲೀಲಾ ವೀಕ್ಷಣೆ ಮಾಡಲಿದ್ದಾರೆ. ನಂತರ ರಾಮಮಂದಿರ ನಿರ್ಮಾಣದ ಕಾಮಗಾರಿಯನ್ನು ವೀಕ್ಷಿಸಲಿದ್ದಾರೆ. ಶ್ರೀರಾಮನ ದರ್ಶನ ಪಡೆದ ಬಳಿಕ ಅವರು ದೀಪೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದರ ಮಧ್ಯೆಯೇ ಹಲವು ಕಾಮಗಾರಿಗಳಿಗೂ ಚಾಲನೆ ನೀಡಲಿದ್ದಾರೆ. ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.

ಇದನ್ನೂ ಓದಿ | Ayodhya Deepotsav | 20,000 ಕೋಟಿ ರೂ. ವೆಚ್ಚದಲ್ಲಿ ಜಾಗತಿಕ ಪ್ರವಾಸಿ, ಧಾರ್ಮಿಕ ನಗರವಾಗಲಿದೆ ಅಯೋಧ್ಯೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೀಪಾವಳಿ

After Deepavali Skin Care: ದೀಪಾವಳಿ ನಂತರ ತ್ವಚೆಯ ಆರೈಕೆಗೆ 5 ಸಿಂಪಲ್‌ ಸಲಹೆ

ದೀಪಾವಳಿ ಹಬ್ಬದ ನಂತರ ನಿಮ್ಮ ತ್ವಚೆಯ ಆರೈಕೆ (After Deepavali Skin Care) ಮಾಡುವುದು ಅತ್ಯಗತ್ಯ. ಇದಕ್ಕಾಗಿ ನೀವು ಏನೆಲ್ಲಾ ಮಾಡಬಹುದು? ಎಂಬುದನ್ನು ಬ್ಯೂಟಿ ಎಕ್ಸ್‌ಪಟ್ರ್ಸ್ ಇಲ್ಲಿ ತಿಳಿಸಿದ್ದಾರೆ.

VISTARANEWS.COM


on

After Deepavali Skin Care
ಚಿತ್ರಕೃಪೆ: ಪಿಕ್ಸೆಲ್‌
Koo

ಶೀಲಾ ಸಿ. ಶೆಟ್ಟಿ, ಬೆಂಗಳೂರು

ದೀಪಾವಳಿ ಹಬ್ಬದ ನಂತರ ನಿಮ್ಮ ತ್ವಚೆಯ ಆರೈಕೆ (After Deepavali Skin Care) ಅತ್ಯವಶ್ಯ. ಅದ್ಯಾಕೆ? ಎಂದು ಯೋಚಿಸುತ್ತಿದ್ದೀರಾ! ಹಬ್ಬದ ಸಂಭ್ರಮಕ್ಕಾಗಿ ಪ್ರತಿದಿನ ಹಚ್ಚಿದ ಗ್ರ್ಯಾಂಡ್‌ ಓವರ್‌ ಮೇಕಪ್‌, ಒಂದರ ಮೇಲೊಂದು ಸವಿದ ಸಿಹಿ ತಿಂಡಿ ಹಾಗೂ ಜಂಕ್‌ ಪದಾರ್ಥ ಸೇವನೆ ಎಲ್ಲವೂ ತ್ವಚೆಯನ್ನು ಡಲ್‌ ಆಗಿಸಬಹುದು. ಕೆಲವರಿಗೆ ಇದರಿಂದ ಮೊಡವೆ ಹಾಗೂ ಜಿಡ್ಡಿನಿಂದ ಚರ್ಮದ ಸಮಸ್ಯೆ ಎದುರಾಗಬಹುದು. ಇವೆಲ್ಲವನ್ನು ನಿಭಾಯಿಸಲು ಫೆಸ್ಟಿವ್‌ ಸೀಸನ್‌ ಮುಗಿದ ನಂತರ ಮುಖದ ಆರೈಕೆಯತ್ತ ಗಮನ ನೀಡುವುದು ಉತ್ತಮ. ಇದರಿಂದ ನಾನಾ ಸ್ಕಿನ್‌ ಸಮಸ್ಯೆಗಳಿಂದ ದೂರಾಗಿ, ಎಂದಿನಂತೆ ನವೋಲ್ಲಾಸದಿಂದ ಕಾಣುವ ತ್ವಚೆಯನ್ನು ತಮ್ಮದಾಗಿಸಿಕೊಳ್ಳಬಹುದು ಎನ್ನುತ್ತಾರೆ ಬ್ಯೂಟಿ ಎಕ್ಸ್‌ಪರ್ಟ್ ಮಂಗಲಾ. ಇದಕ್ಕೆ ಪೂರಕ ಎಂಬಂತೆ ಅವರು 5 ಸಿಂಪಲ್‌ ಸಲಹೆ ನೀಡಿದ್ದು, ಪಾಲಿಸಿ ನೋಡಿ ಎಂದಿದ್ದಾರೆ.

Give the makeup a break first

ಮೊದಲು ಮೇಕಪ್‌ಗೆ ಬ್ರೇಕ್‌ ನೀಡಿ

ಪ್ರತಿದಿನ ಮೇಕಪ್‌ ಹಚ್ಚಿದ ಮುಖಕ್ಕೆ ಕೊಂಚ ಬ್ರೇಕ್ ಹಾಕಿ. ಮಾಯಿಶ್ಚರೈಸ್‌ ಮಾಡಿ. ಮುಖದ ತ್ವಚೆಗೆ ಉಸಿರಾಡಲು ಅವಕಾಶ ನೀಡಿ. ಬೇಕಿದ್ದಲ್ಲಿ ರಿಜುನುವೇಟ್‌ ಆಗಲು ಸಹಾಯ ಮಾಡುವ ಹೈಡ್ರೋ ಫೇಶಿಯಲ್‌ ಮಾಡಿಸಿ.

ಕ್ಲೆನ್ಸಿಂಗ್‌- ಟೋನಿಂಗ್‌-ಮಾಯಿಶ್ಚರೈಸಿಂಗ್

ಪ್ರತಿದಿನ ಕ್ಲೆನ್ಸಿಂಗ್‌-ಟೋನಿಂಗ್‌ ಹಾಗೂ ಮಾಯಿಶ್ಚರೈಸಿಂಗ್‌ ಮಾಡಿ. ಇದು ತ್ವಚೆಯನ್ನು ರಿಲ್ಯಾಕ್ಸ್‌ ಮಾಡುವುದರೊಂದಿಗೆ ಸ್ಕಿನ್‌ ಆರೋಗ್ಯ ಸುಧಾರಿಸುತ್ತದೆ.

Get a good night's sleep

ಕಣ್ತುಂಬ ನಿದ್ರೆ ಮಾಡಿ

ಹಬ್ಬದ ಗಡಿಬಿಡಿಯಲ್ಲಿ ಸಾಕಷ್ಟು ಜನ ನಿದ್ರೆ ಕಡಿಮೆ ಮಾಡುತ್ತಾರೆ. ಇದು ಮುಖದ ಮೇಲೆ ಎದ್ದು ಕಾಣದಂತೆ ಮಾಡಲು ಮೇಕಪ್‌ ಹಚ್ಚುತ್ತಾರೆ. ಆದರೆ. ಇದು ತಾತ್ಕಲಿಕ ಪರಿಹಾರ. ನ್ಯಾಚುರಲ್‌ ಆಗಿ ತ್ವಚೆ ಚೆನ್ನಾಗಿ ಕಾಣಲು ಕನಿಷ್ಠ 7-8 ಗಂಟೆಯಾದರೂ ಕಣ್ತುಂಬ ನಿದ್ರೆ ಮಾಡುವುದು ಅಗತ್ಯ. ಮಲಗಿದಾಗ ತ್ವಚೆಯ ರಿಜುನುವೆಟ್‌ಗೆ ಅಗತ್ಯವಿರುವ ಕೊಲಾಜೆನ್‌ ಉತ್ಪತ್ತಿಯಾಗುತ್ತದೆ.

ಶೀಟ್‌ ಮಾಸ್ಕ್‌ ಉಪಯೋಗಿಸಿ

ಇದೀಗ ಮಾರುಕಟ್ಟೆಯಲ್ಲಿ ಲಭ್ಯವಿರುವ ತ್ವಚೆಯ ಫ್ರೆಂಡ್ಲಿ ಹಾಗೂ ಅಗತ್ಯ ಪೌಷ್ಟಿಕಾಂಶಗಳನ್ನು ಪೂರೈಸುವ, ನಿಮ್ಮ ಸ್ಕಿನ್‌ ಟೋನ್‌ಗೆ ಮ್ಯಾಚ್‌ ಆಗುವ ಶೀಟ್‌ ಮಾಸ್ಕ್‌ ಆಯ್ಕೆ ಮಾಡಿ ಬಳಸಿ. ಇದು ಮುಖವನ್ನು ಕಾಂತಿಯುಕ್ತಗೊಳಿಸುತ್ತದೆ.

Use a scrub

ಸ್ಕ್ರಬ್‌ ಬಳಸಿ

ಸ್ಕ್ರಬ್‌ ಬಳಕೆಯಿಂದ ಚರ್ಮದ ಮೇಲಿನ ಡೆಡ್‌ ಸ್ಕಿನ್‌ ಹೋಗುತ್ತದೆ. ಜೊತೆಗೆ ರಕ್ತ ಸಂಚಾರ ಸುಗಮವಾಗುತ್ತದೆ. ಹೋಮ್‌ ಮೇಡ್‌ ಸ್ಕ್ರಬ್‌ ಉತ್ತಮ.

(ಲೇಖಕಿ ಫ್ಯಾಷನ್‌ ಪತ್ರಕರ್ತೆ)

ಇದನ್ನೂ ಓದಿ: Deepavali Mens Fashion: ದೀಪಾವಳಿ ಹಬ್ಬದ ಮೆನ್ಸ್ ಟ್ರೆಡಿಷನಲ್‌ ಸ್ಟೈಲಿಂಗ್‌ಗೆ ಸಾಥ್‌ ನೀಡುವ ಎಥ್ನಿಕ್‌ವೇರ್ಸ್

Continue Reading

ದೀಪಾವಳಿ

ದೀಪಾವಳಿ ಆಚರಣೆ ವೇಳೆ ಹಿಂದುಗಳ ಮೇಲೆ ಖಲಿಸ್ತಾನಿಗಳ ದಾಳಿ; ಕಲ್ಲು ತೂರಿದ ಉಗ್ರರು!

ಕೆನಡಾದಲ್ಲಿ ಖಲಿಸ್ತಾನಿ ಉಗ್ರರು, ಪ್ರತ್ಯೇಕವಾದಿಗಳು ಇದಕ್ಕೂ ಮೊದಲು ಕೂಡ ಹಿಂದುಗಳ ಮೇಲೆ ದಾಳಿ ನಡೆಸಿದ್ದಾರೆ. ಹಿಂದು ದೇವಾಲಯಗಳ ಮೇಲೆ ದಾಳಿ ನಡೆಸಲಾಗಿದೆ. ಈಗ ದೀಪಾವಳಿ ಆಚರಣೆ ವೇಳೆಯೂ ಖಲಿಸ್ತಾನಿ ಉಗ್ರರು ದಾಳಿ ನಡೆಸಿದ್ದಾರೆ.

VISTARANEWS.COM


on

Khalistani Attack
Koo

ಒಟ್ಟಾವ: ಕೆನಡಾದಲ್ಲಿ ಹಿಂದುಗಳ ಮೇಲೆ ಖಲಿಸ್ತಾನಿ ಉಗ್ರರು (Khalistani Terrorists), ಮೂಲಭೂತವಾದಿಗಳ ದಾಳಿ ಮುಂದುವರಿದಿದೆ. ಟೊರೊಂಟೊ ಹೊರವಲಯದ ಮಿಸ್ಸಿಸ್ಸೌಗ ಪಟ್ಟಣದಲ್ಲಿ ಹಿಂದುಗಳು ದೀಪಾವಳಿ (Deepavali 2023) ಆಚರಣೆ ಮಾಡುವ ವೇಳೆ ಖಲಿಸ್ತಾನಿ ಮೂಲಭೂತವಾದಿಗಳು ದಾಳಿ ನಡೆಸಿದ್ದಾರೆ. ಹಿಂದುಗಳ ಮೇಲೆ ಕಲ್ಲು ತೂರಾಟ ಮಾಡುವ, ಖಲಿಸ್ತಾನಿ ಧ್ವಜ ಹಾರಿಸಿ ಉದ್ಧಟತನ ಮಾಡಿರುವ ವಿಡಿಯೊ (Viral Video) ಈಗ ಲಭ್ಯವಾಗಿದೆ.

ಕೆನಡಾದ ಟೊರೊಂಟೊ ಸೇರಿ ಹಲವೆಡೆ ಹಿಂದುಗಳು ಸಡಗರ-ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸಿದ್ದಾರೆ. ಆದರೆ, ಮಿಸ್ಸಿಸ್ಸೌಗ, ಬ್ರ್ಯಾಂಪ್ಟನ್‌ ಸೇರಿ ಕೆಲವೆಡೆ ಹಿಂದುಗಳು ಪಟಾಕಿ ಸಿಡಿಸಿ ದೀಪಾವಳಿ ಆಚರಣೆ ಮಾಡುವಾಗ ಖಲಿಸ್ತಾನಿ ಮೂಲಭೂತವಾದಿಗಳು ದಾಳಿ ನಡೆಸಿದ್ದಾರೆ. ಹಿಂದುಗಳ ಆಚರಣೆಗೆ ಅಡ್ಡಿಪಡಿಸುವ ಜತೆಗೆ ಕಲ್ಲು ತೂರಾಟ ಮಾಡಿದ್ದಾರೆ. ಖಲಿಸ್ತಾನಿ ಧ್ವಜ ಹಾರಿಸಿದ ಅವರು ಭಾರತ ವಿರೋಧಿ ಘೋಷಣೆಗಳನ್ನೂ ಕೂಗಿದ್ದಾರೆ ಎಂದು ತಿಳಿದುಬಂದಿದೆ.

ಭಾರತ ಹಾಗೂ ಕೆನಡಾ ಮಧ್ಯೆ ರಾಜತಾಂತ್ರಿಕ ಬಿಕ್ಕಟ್ಟು ಉಂಟಾಗಿದೆ. ಕೆನಡಾದಲ್ಲಿರುವ ಭಾರತ ವಿರೋಧಿ ಚಟುವಟಿಕೆಗಳನ್ನು ನಿಗ್ರಹಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಆಗ್ರಹಿಸಿದ ಬಳಿಕ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಹಲವು ಉದ್ಧಟತನದ ಹೇಳಿಕೆ ನೀಡುತ್ತಿದ್ದಾರೆ. ಹಾಗೆಯೇ, ಕೆನಡಾದಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಹಿಂದೆ ಭಾರತದ ಕೈವಾಡ ಇದೆ ಎಂದೆಲ್ಲ ಆರೋಪಿಸಿದ್ದಾರೆ. ಇದಕ್ಕೆಲ್ಲ ಸೊಪ್ಪು ಹಾಕದ ಭಾರತ ಸರ್ಕಾರವು ಸಾಕ್ಷ್ಯ ಕೊಡಿ ಎಂದು ತಿರುಗೇಟು ನೀಡಿದೆ. ಇಂತಹ ಪರಿಸ್ಥಿತಿ ನಿರ್ಮಾಣವಾಗಿರುವ ಬೆನ್ನಲ್ಲೇ ಕೆನಡಾದಲ್ಲಿ ಹಿಂದುಗಳ ಮೇಲೆ ದಾಳಿ ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.

ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಸ್ಫೋಟಕ್ಕೆ ಸಂಚು; ಭಾರತ ಆಗ್ರಹಿಸಿದ ಬಳಿಕ ತನಿಖೆಗೆ ಕೆನಡಾ ಆದೇಶ

ಏರ್‌ ಇಂಡಿಯಾ ವಿಮಾನ ಸ್ಫೋಟಿಸುವುದಾಗಿ ಪನ್ನುನ್‌ ಎಚ್ಚರಿಕೆ

ನವೆಂಬರ್‌ 19ರಂದು ಏರ್‌ ಇಂಡಿಯಾ ವಿಮಾನ ಸ್ಫೋಟಿಸುವುದಾಗಿ ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನುನ್‌ ಎಚ್ಚರಿಕೆ ನೀಡಿದ್ದಾನೆ. ನವೆಂಬರ್‌ 4ರಂದು ಗುರುಪತ್ವಂತ್‌ ಸಿಂಗ್‌ ಪನ್ನುನ್‌ ವಿಡಿಯೊ ಪೋಸ್ಟ್‌ ಮಾಡಿದ್ದ. “ನವೆಂಬರ್‌ 19ರಂದು ಸಿಖ್ಖರು ಏರ್‌ ಇಂಡಿಯಾ ವಿಮಾನಗಳಲ್ಲಿ ಪ್ರಯಾಣಿಸಬಾರದು.‌ ಅಂದು ಏರ್‌ ಇಂಡಿಯಾ ವಿಮಾನಗಳನ್ನು ಸ್ಫೋಟಿಸಲಾಗುವುದು” ಎಂದು ಹೇಳಿದ್ದ. ನವೆಂಬರ್‌ 19 ಇಂದಿರಾ ಗಾಂಧಿ ಜನ್ಮದಿನವಾದ ಕಾರಣ ಅಂದೇ ಏರ್‌ ಇಂಡಿಯಾ ವಿಮಾನಗಳನ್ನು ಸ್ಫೋಟಿಸಲಾಗುವುದು ಎಂದಿದ್ದಾನೆ. ಅಮೃತಸರದ ಸ್ವರ್ಣಮಂದಿರ ಹೊಕ್ಕಿದ್ದ ಉಗ್ರರ ವಿರುದ್ಧ ಇಂದಿರಾ ಗಾಂಧಿ ಅವರು ಆಪರೇಷನ್‌ ಬ್ಲ್ಯೂ ಸ್ಟಾರ್‌ಗೆ ಆದೇಶ ಮಾಡಿದ ಬಳಿಕ ಅವರು 1984ರಲ್ಲಿ ಹತ್ಯೆಗೀಡಾದರು. ಈಗ ಅವರ ಜನ್ಮದಿನದಂದೇ ಏರ್‌ ಇಂಡಿಯಾ ವಿಮಾನ ಸ್ಫೋಟಿಸಲು ಸಂಚು ರೂಪಿಸಲಾಗಿದೆ. ಭಾರತದ ಆಗ್ರಹದ ಬಳಿಕ ಈ ಕುರಿತು ತನಿಖೆ ನಡೆಸಲಾಗುವುದು ಎಂದು ಕೆನಡಾ ತಿಳಿಸಿದೆ.

Continue Reading

ದೀಪಾವಳಿ

ಬ್ರಿಟನ್ ಪಿಎಂ ಕಚೇರಿಯಲ್ಲಿ ದೀಪಾವಳಿ! ಗಮನ ಸೆಳೆದ ಅಕ್ಷತಾ ಮೂರ್ತಿ ಉಡುಗೆ

Diwali 2023: ಬ್ರಿಟನ್ ಪಿಎಂ ಸರ್ಕಾರಿ ಅಧಿಕೃತ ನಿವಾಸದಲ್ಲಿ ಈ ಬಾರಿ ದೀಪಾವಳಿ ಸಂಭ್ರಮ ಮನೆ ಮಾಡಿತ್ತು. ಕರ್ನಾಟಕದ ಅಳಿಯನಾಗಿರುವ ಬ್ರಿಟನ್ ಪಿಎಂ ರಿಷಿ ಸುನಕ್ ಹಾಗೂ ಅವರ ಪತ್ನಿ ಅಕ್ಷತಾ ಮೂರ್ತಿ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದರು.

VISTARANEWS.COM


on

Diwali in British PM's office! Akshata Murthy fashionable dress caught attention
Koo

ಲಂಡನ್: ಬ್ರಿಟನ್ ಪ್ರಧಾನಿ ಅಧಿಕೃತ ಕಚೇರಿ ನಿವಾಸದಲ್ಲಿ (10 Downing Street) ಈ ಬಾರಿ ದೀಪಾವಳಿಯ ( Diwali 2023) ಕಲರವ ಮೇಳೈಸಿತ್ತು. ಪ್ರಧಾನಿ ರಿಷಿ ಸುನಕ್ (UK PM Rishi Sunak) ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ (Akshata Murty) ಹಾಗೂ ಮಕ್ಕಳು ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಅಕ್ಷತಾ ಅವರು ಯಾವಾಗಲೂ ಫ್ಯಾಶನೇಬಲ್ ಆಗಿರುತ್ತಾರೆ. ಈಗ ದೀಪಾವಳಿಯಂದು ಅವರ ಸಾಂಪ್ರದಾಯಿಕ ಉಡುಗೆ ಗಮನ ಸೆಳೆದಿದೆ. ಅಕ್ಷತಾ ಅವರು ಎಲೆಕ್ಟ್ರಿಕ್ ನೀಲಿ ಮೈಸೂರು ರೇಷ್ಮೆ ಸೀರೆಯಲ್ಲಿ ಸೊಗಸಾಗಿ ಕಾಣುತ್ತಿದ್ದರು. ಅವರು ಸೀರೆಯನ್ನು ಸೊಗಸಾಗಿ ಧರಿಸಿದ್ದರು. ಸೀರೆಯೊಂದಿಗೆ ಸಣ್ಣ ತೋಳಿನ ಕುಪ್ಪಸವನ್ನು ಧರಿಸಿದ್ದರು. ಸರಳವಾದ ಸೀರೆಯು ತೆಳುವಾದ ಚಿನ್ನದ ಅಂಚುಗಳನ್ನು ಪ್ರದರ್ಶಿಸಿತು ಮತ್ತು ಕುಪ್ಪಸವು ಹೂವಿನ ಮೋಟಿಫ್‌ಗಳನ್ನು ಒಳಗೊಂಡಿತ್ತು. ಅಕ್ಷತಾ ಒಂದು ಜೊತೆ ನೇತಾಡುವ ಕಿವಿಯೋಲೆಗಳು, ಗಂಡಬೇರುಂಡ ನೆಕ್ಲೇಸ್ ಮತ್ತು ಬಳೆಗಳನ್ನು ಧರಿಸಿದ್ದರು.

ಯುಕೆ ಪ್ರಧಾನಿ ರಿಷಿ ಸುನಕ್ ಅವರ ಪತ್ನಿ ಅಕ್ಷತಾ ಮೂರ್ತಿ ಯಾವಾಗಲೂ ಪ್ರೇಕ್ಷಕರ ಮೇಲೆ ಫ್ಯಾಶನ್ ಪ್ರಭಾವ ಬೀರಿದ್ದಾರೆ. ನವದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆ ಅಥವಾ ಅಂತರಾಷ್ಟ್ರೀಯ ಶೃಂಗಸಭೆಗಳಿಗೆ ಆಕೆಯ ವಿಶಿಷ್ಟ ತೊಡುಗೆ, ಆಕೆಯ ಶೈಲಿ ಮತ್ತು ಸೊಬಗುಗೆ ಮಿತಿಯಿರಲಿಲ್ಲ.

ದಿಲ್ಲಿಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಅಕ್ಷತಾ ಮೂರ್ತಿ ಅವರ ವಾರ್ಡ್ರೋಬ್ ಆಯ್ಕೆಗಳು ಉನ್ನತ ದರ್ಜೆಯದ್ದಾಗಿದ್ದವು ಎಂಬುದು ಮನವರಿಕೆಯಾಗಿತ್ತು. ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ನಡೆದ ರಾಗಿ ಪ್ರದರ್ಶನಕ್ಕಾಗಿ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಪತ್ನಿ ಅಕ್ಷತಾ ಮೂರ್ತಿ ಅವರು ಆಯೋಜಿಸಿದ್ದ ಜಿ20 ಸಂಗಾತಿಗಳ ಕಾರ್ಯಕ್ರಮಕ್ಕೆ ಮುದ್ರಿತ ನೀಲಕ ಮಿಡಿ ಉಡುಗೆಯನ್ನು ಆರಿಸಿಕೊಂಡಿದ್ದರು. ಉಡುಪಿನಲ್ಲಿ ಹೂವಿನ ಮುದ್ರಿತ ನಾಟಕೀಯ ಪಫ್ಡ್ ಸ್ಲೀವ್‌ಗಳು ಎ-ಲೈನ್ ಸಿಲೂಯೆಟ್ ಮತ್ತು ಭುಗಿಲೆದ್ದ ಕೆಳಭಾಗವನ್ನು ಒಳಗೊಂಡಿತ್ತು. ಇದು ಆಕರ್ಷಕವಾಗಿತ್ತು.

ಈಗ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಅಕ್ಷತಾ ಮೂರ್ತಿ ಅವರು ತೊಡುಗೆ ಶೈಲಿಯ ಮತ್ತೊಮ್ಮೆ ಜಗತ್ತಿನ ಮುಂದೆ ಅನಾವರಣಗೊಂಡಿದೆ. ಅಕ್ಷತಾ ಮೂರ್ತಿ ಅವರು ತಮ್ಮ ಫ್ಯಾಶನೇಬಲ್ ಸ್ಟೇಟ್‌ಮೆಂಟ್ ಮಾಡಿದ್ದಾರೆ. ಬ್ರಿಟನ್ ಪ್ರಧಾನಿಯ ಮನೆಯಲ್ಲಿ ನಡೆದ ದೀಪಾವಳಿ ಹಬ್ಬದ ಆಚರಣೆಯು ವಾವ್ ಎನ್ನುವಂತಿತ್ತು. ಇದಕ್ಕೆ ಅಕ್ಷತಾ ಮೂರ್ತಿ ಅವರು ಉಡುಗೆ-ತೊಡುಗೆ ಕಳಶವಿಟ್ಟಂತೆ ಇತ್ತು ಎಂದು ಫ್ಯಾಶನ್ ಜಗತ್ತಿನ ತಜ್ಞರು ಮಾತನಾಡಿಕೊಳ್ಳುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ: 75 ವರ್ಷದಲ್ಲೇ ಮೊದಲ ಬಾರಿಗೆ ಕಾಶ್ಮೀರದ ಶಾರದಾ ದೇವಿ ದೇಗುಲದಲ್ಲಿ ದೀಪಾವಳಿ ಆಚರಣೆ!

Continue Reading

ಕ್ರಿಕೆಟ್

KL Rahul: ಕನ್ನಡದಲ್ಲೇ ದೀಪಾವಳಿಯ ಶುಭ ಕೋರಿದ ಕೆ.ಎಲ್​ ರಾಹುಲ್​

ಟೀಮ್ ಇಂಡಿಯಾದ ಸ್ಟಾರ್​ ಆಟಗಾರ, ಕನ್ನಡಿಗ ಕೆ.ಎಲ್​ ರಾಹುಲ್(KL Rahul)​ ಅವರು ನಾಡಿದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ(diwali wishes) ಕೋರಿದ್ದಾರೆ.

VISTARANEWS.COM


on

kl rahul century celebration
Koo

ಬೆಂಗಳೂರು: ದೇಶಾದ್ಯಂತ ದೀಪಾವಳಿ(diwali 2023) ಹಬ್ಬದ ಸಂಭ್ರಮ ಜೋರಾಗಿದೆ. ಎಲ್ಲೆಲ್ಲೂ ಪಟಾಕಿ ಸದ್ದು ಕೇಳಿಸುತ್ತಿದೆ. ಕುಟುಂಬಸ್ಥರು, ಸಂಬಂಧಿಕರು, ಗೆಳೆಯರ ಜತೆ ಹಬ್ಬದ ಆಚರಣೆ ಭರ್ಜರಿಯಾಗಿದೆ. ಇದರ ಬೆನ್ನಲೇ ಟೀಮ್ ಇಂಡಿಯಾದ ಸ್ಟಾರ್​ ಆಟಗಾರ, ಕನ್ನಡಿಗ ಕೆ.ಎಲ್​ ರಾಹುಲ್(KL Rahul)​ ಅವರು ನಾಡಿದ ಜನತೆಗೆ ದೀಪಾವಳಿ ಶುಭಾಶಯ(diwali wishes) ಕೋರಿದ್ದಾರೆ​. ಅದು ಕೂಡ ಕನ್ನಡದಲ್ಲೇ ಶುಭ ಕೋರಿ ಎಲ್ಲ ಕನ್ನಡಿಗರ ಹೃದಯ ಗೆದ್ದಿದ್ದಾರೆ.

ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ರಾಹುಲ್ ಅವರು ಶತಕ ಬಾರಿಸಿ ಸಂಭ್ರಮಿಸಿದ್ದರು. ತಮ್ಮ ಶತಕದ ಮತ್ತು ಪಂದ್ಯದ ಫೋಟೊಗಳನ್ನು ಅಧಿಕೃತ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಾಕಿ ‘ದೀಪಾವಳಿಯ ಶುಭಾಶಯಗಳು’ ಎಂದು ಬರೆದು ತಿವರ್ಣ ಧ್ವಜ ಮತ್ತು ಹಣತೆಯ ಎಮೋಜಿಯನ್ನು ಹಾಕಿದ್ದಾರೆ.

ದಾಖಲೆ ಬರೆದ ರಾಹುಲ್​

ನೆದರ್ಲೆಂಡ್ಸ್ ವಿರುದ್ಧ ನಡೆದ ಈ ಪಂದ್ಯದಲ್ಲಿ ಕೆ.ಎಲ್ ರಾಹುಲ್ 62 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ವಿಶ್ವಕಪ್​ನಲ್ಲಿ ಅತಿ ವೇಗದ ಶತಕ ಬಾರಿಸಿದ ಭಾರತೀಯ ಬ್ಯಾಟರ್​​ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ವೇಳೆ ಅವರು 2023 ರ (ಹಾಲಿ ಆವೃತ್ತಿಯ) ವಿಶ್ವಕಪ್​ನಲ್ಲಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ 63 ಎಸೆತಗಳಲ್ಲಿ ಶತಕ ಬಾರಿಸಿದ ರೋಹಿತ್ ಶರ್ಮಾ ಅವರ ದಾಖಲೆ ಅವರು ಮುರಿದರು.

ರಾಹುಲ್ 64 ಎಸೆತಗಳಲ್ಲಿ 102 ರನ್ ಗಳಿಸುವ ಹಾದಿಯಲ್ಲಿ 11 ಬೌಂಡರಿ ಮತ್ತು ನಾಲ್ಕು ಸಿಕ್ಸರ್​ಗಳನ್ನು ಬಾರಿಸಿದರು, ಇದು ವಿಶ್ವಕಪ್ ಪಂದ್ಯದಲ್ಲಿ ಭಾರತವನ್ನು ಎರಡನೇ ಅತಿ ಹೆಚ್ಚು ಮೊತ್ತಕ್ಕೆ (410/4) ಮುನ್ನಡೆಸಿತು. ಇದು ರಾಹುಲ್ ಅವರ ಆರನೇ ಏಕದಿನ ಶತಕವಾಗಿದೆ. ಭಾರತದ 5ನೇ ಕ್ರಮಾಂಕದ ಬ್ಯಾಟರ್​ ಶ್ರೇಯಸ್ ಅಯ್ಯರ್ ಜೊತೆಗೂಡಿ 208 ರನ್​ಗಳ ಜೊತೆಯಾಟವಾಡಿದ್ದು, ಇದು ಏಕದಿನ ವಿಶ್ವಕಪ್​​ನಲ್ಲಿ ನಾಲ್ಕನೇ ವಿಕೆಟ್​ಗೆ ಅತಿ ಹೆಚ್ಚು ರನ್​ಗಳ ಜೊತೆಯಾಟದ ದಾಖಲೆಯಾಗಿದೆ.

ಇದನ್ನೂ ಓದಿ MS Dhoni: ಧೋನಿ ಕುಟುಂಬದೊಂದಿಗೆ ದೀಪಾವಳಿ ಆಚರಿಸಿದ ರಿಷಭ್​ ಪಂತ್​

ತವರಿನ ಅಂಗಳದಲ್ಲಿ ರಾಹುಲ್ ಅವರು ಪ್ರಚಂಡ ಬ್ಯಾಟಿಂಗ್​ ತೋರ್ಪಡಿಸುವ ಮೂಲಕ ನೆರೆದಿದ್ದ ತವರಿನ ಅಭಿಮಾನಿಗಳಿಗೆ ಭರಪೂರ ರಂಚನೆ ನೀಡಿದರು. ಬ್ಯಾಟಿಂಗ್​ ಮಾತ್ರವಲ್ಲದೆ ಕೀಪಿಂಗ್​ನಲ್ಲಿಯೂ ಮಿಂಚಿದ ಅವರು 2 ಅದ್ಭುತ ಕ್ಯಾಚ್​ಗಳನ್ನು ಕೂಡ ಹಿಡಿದು ಮಿಂಚಿದರು.

ಜತೆಯಾಟದಲ್ಲಿಯೂ ದಾಖಲೆ ಬರೆದ ರಾಹುಲ್​

ಈ ಪಂದ್ಯದಲ್ಲಿ ರಾಹುಲ್ ಮತ್ತು ಶ್ರೇಯಸ್ ಅಯ್ಯರ್ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಭಾರತ ತಂಡದ ಪರವಾಗಿ ನಾಲ್ಕನೇ ಅತ್ಯಧಿಕ ರನ್​ಗಳ ಜತೆಯಾಟ ನಡೆಸಿ ದಾಖಲೆಯ ಬರೆದರು. ಉಭಯ ಆಟಗಾರರು ನಾಲ್ಕನೇ ವಿಕೆಟ್​ಗೆ 208 ರನ್​ಗಳ ಜತೆಯಾಟ ನೀಡಿದರು. ಈ ಮೂಕಲ ವಿಶ್ವಕಪ್​ನಲ್ಲಿ ನಾಲ್ಕನೇ ವಿಕೆಟ್ ಅಥವಾ ಅದಕ್ಕಿಂತ ಕಡಿಮೆ ವಿಕೆಟ್​ಗೆ ಭಾರತದ ಅತ್ಯಧಿಕ ಜತೆಯಾಟ ನಡೆಸಿದ ದಾಖಲೆ ನಿರ್ಮಿಸಿದರು.

Continue Reading
Advertisement
T20 World Cup 2024
ಕ್ರೀಡೆ18 seconds ago

T20 World Cup 2024: ಎರಡನೇ ವಿಶ್ವಕಪ್‌ಗೆ ತಾಳ್ಮೆಯಿಂದ ಕಾದಂತೆ ಟ್ರಾಫಿಕ್‌ ಸಿಗ್ನಲ್‌ನಲ್ಲೂ ಕಾಯಿರಿ; ದೆಹಲಿ ಪೊಲೀಸರ ಕಿಯೇಟಿವ್‌ ವಿಷ್‌

Road Accident
ಮೈಸೂರು38 mins ago

Road Accident : ತಿರುವಿನಲ್ಲಿ ಕಂದಕಕ್ಕೆ ಉರುಳಿದ ಬಸ್‌; ಚಾಲಕ ಸೇರಿ ಮೂವರು ಗಂಭೀರ

KPCC President
ಪ್ರಮುಖ ಸುದ್ದಿ46 mins ago

KPCC President: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸುಳಿವು; ಲಿಂಗಾಯತರಿಗೆ ಅವಕಾಶ ನೀಡಲು ಒತ್ತಾಯ

Jayam Ravi married to superstar rajinikanth daughter
ಕಾಲಿವುಡ್50 mins ago

Jayam Ravi: ರಜನಿಕಾಂತ್‌ ಮಗಳ ಜತೆ ಜಯಂ ರವಿ ಮದುವೆ?

T20 World Cup 2024
ಕ್ರೀಡೆ59 mins ago

T20 World Cup 2024: ಸಂಭ್ರಮಾಚರಣೆ ವೇಳೆ ದುರಂತ: ಧ್ವಜ ಹಾರಿಸಲು ಹೋಗಿ ಬಿದ್ದ ಅಭಿಮಾನಿ; ವೈರಲ್‌ ವಿಡಿಯೊ ಇಲ್ಲಿದೆ

ಕ್ರೀಡೆ1 hour ago

Rohit Sharma: ವಿಶ್ವಕಪ್​ ಗೆದ್ದ ನಾಯಕ ರೋಹಿತ್​ಗೆ ಆಶೀರ್ವಾದ ಮಾಡಿದ ಕಾಂತಾರದ ‘ಪಂಜುರ್ಲಿ’ ದೈವ!

Actor Darshan
ಬೆಂಗಳೂರು1 hour ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

CM Siddaramaiah To Inaugurate Film Producers Association Building says build film city
ಸ್ಯಾಂಡಲ್ ವುಡ್1 hour ago

CM Siddaramaiah: ಡಾ.ರಾಜ್‍ಕುಮಾರ್ ಕನಸಿನಂತೆ ಫಿಲ್ಮ್ ಸಿಟಿ ನಿರ್ಮಾಣ ಮಾಡ್ತೇವೆ ಎಂದ ಸಿದ್ದರಾಮಯ್ಯ

Gold Rate Today
ಚಿನ್ನದ ದರ2 hours ago

Gold Rate Today: ಆಭರಣ ಖರೀದಿಗೆ ಇದು ಸೂಕ್ತ ಸಮಯ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

Mann Ki Baat
ದೇಶ2 hours ago

Mann Ki Baat: ʼಸಂವಿಧಾನದ ಬಗ್ಗೆ ಅಚಲ ನಂಬಿಕೆ ಇರಿಸಿದ್ದಕ್ಕೆ ಧನ್ಯವಾದʼ-ಮೋದಿ ಮನ್‌ ಕೀ ಬಾತ್‌ ಹೈಲೈಟ್ಸ್‌ ಹೀಗಿದೆ ನೋಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಬೆಂಗಳೂರು1 hour ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ21 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

ಟ್ರೆಂಡಿಂಗ್‌