Solar Eclipse 2022 | ದೇವಸ್ಥಾನಗಳಿಗೂ ಹಿಡಿದ ಸೂರ್ಯಗ್ರಹಣ; ಭಕ್ತರಿಲ್ಲದೇ ಬಣ ಬಣ - Vistara News

ಉಡುಪಿ

Solar Eclipse 2022 | ದೇವಸ್ಥಾನಗಳಿಗೂ ಹಿಡಿದ ಸೂರ್ಯಗ್ರಹಣ; ಭಕ್ತರಿಲ್ಲದೇ ಬಣ ಬಣ

ಮಂಗಳವಾರ ಕೇತುಗ್ರಸ್ತ ಖಂಡಗ್ರಾಸ ಸೂರ್ಯಗ್ರಹಣ (Solar Eclipse 2022) ಹಿನ್ನೆಲೆಯಲ್ಲಿ ಬಹುತೇಕ ದೇವಸ್ಥಾನಗಳು ಬಾಗಿಲು ಮುಚ್ಚಿದ್ದವು. ಕೆಲವೆಡೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಿದ್ದರೆ, ಹಲವೆಡೆ ಮುಕ್ತ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಿತ್ಯ ಭಕ್ತರಿಂದ ಗಿಜಿಗುಡುತ್ತಿದ್ದ ಪ್ರಸಿದ್ಧ ದೇವಸ್ಥಾನಗಳೆಲ್ಲವೂ ಮಂಗಳವಾರ ಬಣಗುಡುತ್ತಿದ್ದವು. ಸೂರ್ಯಗ್ರಹಣದ (Solar Eclipse 2022) ಎಫೆಕ್ಟ್‌ ದೇವಸ್ಥಾನಗಳ ಮೇಲೂ ಬೀರಿತ್ತು. ಸೂರ್ಯಗ್ರಹಣ ಆರಂಭಕ್ಕೂ ಮುನ್ನವೇ ದೇವಸ್ಥಾನಗಳು ಬಾಗಿಲು ಮುಚ್ಚಿದ್ದವು. ಮತ್ತೆ ಕೆಲವು ದೇವಸ್ಥಾನಗಳಲ್ಲಿ ಮಾತ್ರ ನಿತ್ಯಪೂಜೆ ಸಹಿತ ವಿವಿಧ ಪೂಜೆ-ಪುನಸ್ಕಾರವನ್ನು ನೆರವೇರಿವೆ.

Solar Eclipse 2022

ಸ್ಪರ್ಶ ಕಾಲ, ಮೋಕ್ಷ ಕಾಲದಲ್ಲಿ ಅಧಿದೇವತೆಗೆ ವಿಶೇಷ ಪೂಜೆ
ಅರಮನೆ ನಗರಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸ್ಪರ್ಶಕಾಲ, ಮೋಕ್ಷ ಕಾಲದಲ್ಲಿ ಪೂಜೆ ಸಲ್ಲಿಸಲಾಯಿತು. ಈ ವೇಳೆ ಚಾಮುಂಡೇಶ್ವರಿ ಅಮ್ಮನವರ ದರ್ಶನಕ್ಕೆ ಸಾರ್ವಜನಿಕರ ನಿರ್ಬಂಧ ಹೇರಲಾಗಿತ್ತು. ಮಧ್ಯಾಹ್ನ 1 ಗಂಟೆ ವರೆಗೆ ಮಾತ್ರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಜತೆಗೆ ಅಗ್ರಹಾರದ ನೂರೊಂದು ಗಣಪತಿ ದೇವಾಲಯದಲ್ಲಿ ದೀಪಾವಳಿ, ಅಮಾವಾಸ್ಯೆ ಹಿನ್ನೆಲೆಯಲ್ಲಿ ಪೂಜಾ ಕೈಂಕರ್ಯ ಕೈಗೊಳ್ಳಲಾಯಿತು. ಗ್ರಹಣ ಸಂದರ್ಭದಲ್ಲಿ ಬಹುತೇಕ ದೇವಾಲಯದ ಬಾಗಿಲು ಬಂದ್ ಆಗಿದ್ದವು.

ವಿಷಕಂಠನಿಗೆ ಗ್ರಹಣದ ಅಭಿಷೇಕ
ಸೂರ್ಯಗ್ರಹಣ ಇದ್ದರೂ ನಂಜನಗೂಡು ಶ್ರೀಕಂಠೇಶ್ವರ ದೇವಾಲಯ ಎಂದಿನಂತೆ ತೆರದಿತ್ತು. ಆದರೆ, ಭಕ್ತರು ಇಲ್ಲದೆ ದೇವಸ್ಥಾನ ಬಣಗುಡುತಿತ್ತು. ಗ್ರಹಣ ಆರಂಭ ಕಾಲದಲ್ಲಿ ದೇವರಿಗೆ ವಿಶೇಷ ಅಭಿಷೇಕ ನೆರವೇರಿಸಲಾಯಿತು. ಸಂಜೆವರೆಗೂ ಭಕ್ತರಿಗೆ ದರ್ಶನದ ವ್ಯವಸ್ಥೆ ಮಾಡಲಾಗಿತ್ತು.

Solar Eclipse 2022

ಸಾರ್ವಜನಿಕರಿಗೆ ದರ್ಶನ ನೀಡದ ಹಾಸನಾಂಬೆ
ಕೇತುಗ್ರಸ್ತ ಸೂರ್ಯಗ್ರಹಣ ಹಿನ್ನೆಲೆ ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯ ಕೂಡ ಬಂದ್ ಆಗಿತ್ತು. ಹಾಸನಾಂಬೆಯ ಮುಖ್ಯದ್ವಾರವನ್ನು ಮುಚ್ಚಲಾಗಿತ್ತು. ಈ ವೇಳೆ ಸಾರ್ವಜನಿಕರಿಗೂ ಪ್ರವೇಶ ನಿಷೇಧಿಸಲಾಗಿತ್ತು.

ಮಂತ್ರಾಲಯದಲ್ಲಿ ಪೂಜೆ-ಪುನಸ್ಕಾರಕ್ಕೆ ನಿರ್ಬಂಧ; ಭಕ್ತರಿಗೆ ಪ್ರವೇಶ ಮುಕ್ತ
ಗ್ರಹಣ ಹಿನ್ನೆಲೆ ಮಂತ್ರಾಲಯದಲ್ಲಿ ಭಕ್ತರಿಗೆ ಯಾವುದೇ ನಿರ್ಬಂಧ ಇರಲಿಲ್ಲ. ಆದರೆ, ದಿನನಿತ್ಯದ ಪೂಜೆ- ಪುನಸ್ಕಾರಕ್ಕೆ ಅವಕಾಶ ಇರಲಿಲ್ಲ. ಗ್ರಹಣದ ಬಳಿಕ ರಾಯರ ಮಠದಲ್ಲಿ ಗ್ರಹಣ ಶಾಂತಿ ಹೋಮವನ್ನು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರಿಂದ ನಡೆದಿದೆ.

ಕೋಲಾರದಲ್ಲಿ ಬಂದ್‌ ಆದ ಕೋಲಾರಮ್ಮ, ಸೋಮೇಶ್ವರ
ಕೋಲಾರ ಜಿಲ್ಲೆಯ ಐತಿಹಾಸಿಕ ಹಾಗೂ ಮುಜರಾಯಿ ಇಲಾಖೆಯ ದೇವಾಲಯಗಳಾದ ಕೋಲಾರಮ್ಮ, ಸೋಮೇಶ್ವರ, ಕುಡುಮಲೆ ವಿನಾಯಕ ದೇವಾಲಯ, ಬಂಗಾರು ತಿರುಪತಿ, ಚಿಕ್ಕ ತಿರುಪತಿ ಸೇರಿದಂತೆ ಹಲವು ದೇವಾಲಗಳು ಇಂದು ಅಪರಾಹ್ನ ೧೨ ಗಂಟೆಯಿಂದ ಬಂದ್‌ ಆಗಿದ್ದು, ಸಂಜೆ‌ ೭ರ ನಂತರ ದೇವಾಲಯಗಳು ತೆರೆಯಲಿವೆ.

ರಾಮನಗರದ ರಾಮದೇವರ ಬೆಟ್ಟವೂ ಬಂದ್‌
ರಾಮನಗರ ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಾದ ಕನಕಪುರದ ಕಬ್ಬಾಳಮ್ಮ, ಸಾವನದುರ್ಗ, ಚನ್ನಪಟ್ಟಣದ ಅಪ್ರಮೇಯ ಹಾಗೂ ರಾಮದೇವರ ಬೆಟ್ಟ, ಮಾಗಡಿ ಶ್ರೀರಂಗನಾಥಸ್ವಾಮಿ ದೇವಸ್ಥಾನ ಬಾಗಿಲು ಮುಚ್ಚಿದ್ದವು. ಸಂಜೆ ಮೋಕ್ಷ ಕಾಲದ ಬಳಿಕ ಭಕ್ತರಿಗೆ ಪ್ರವೇಶ ಕಲ್ಪಿಸಲಾಗಿತ್ತು.

Solar Eclipse 2022

ಬಣಗುಡುತ್ತಿದ್ದ ಹುಲಿಗೆಮ್ಮ ದೇಗುಲ
ಕೊಪ್ಪಳ ಜಿಲ್ಲೆಯ ಎರಡು ದೇವಾಲಯಗಳು ಮಧ್ಯಾಹ್ನದಿಂದಲೇ ಬಂದ್‌ ಆಗಿದ್ದವು. ಹುಲಿಗೆಮ್ಮದೇವಿ ದೇವಸ್ಥಾನ, ಕನಕಗಿರಿಯ ಶ್ರೀ ಕನಕಾಚಲಪತಿ ದೇವಸ್ಥಾನದಲ್ಲಿ ಭಕ್ತರು ಇಲ್ಲದೇ ಬಣಗುಡುತ್ತಿದ್ದವು. ಮಧ್ಯಾಹ್ನ 4 ಗಂಟೆ ನಂತರ ಸಂಜೆ 7 ಗಂಟೆಯವರೆಗೂ ಬಂದ್ ಆಗಿದ್ದವು. ಗ್ರಹಣ ವಿಮೋಚನೆಯ ನಂತರ ಶುದ್ಧೀಕರಿಸಿ ಪೂಜೆಯ ನಂತರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ನುಗ್ಗಿಕೇರಿ ಆಂಜನೇಯ, ಓಂಕಾರೇಶ್ವರದಲ್ಲಿ ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧ
ಧಾರವಾಡದ ನುಗ್ಗಿಕೇರಿ ಆಂಜನೇಯ ದೇವಸ್ಥಾನ ಸೇರಿದಂತೆ ಸೋಮೇಶ್ವರ ದೇವಸ್ಥಾನ ಬಂದ್ ಆಗಿದ್ದವು. ಗ್ರಹಣ ಬಿಟ್ಟ ನಂತರ ಶುದ್ಧೀಕರಣ ಮಾಡಿ ಸಂಜೆಯ ನಂತರ ಭಕ್ತರಿಗೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಇನ್ನು ಮಡಿಕೇರಿಯ ಓಂಕಾರೇಶ್ವರ ದೇವಾಲಯದಲ್ಲಿ ಮುಂಜಾನೆ ಎಂದಿನಂತೆ ನಿತ್ಯ ಪೂಜೆ ನೆರವೇರಿದ್ದವು. 12:30ರ ನಂತರ ದೇವಾಲಯ ಬಂದ್ ಮಾಡಿ, ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧಿಸಲಾಯಿತು. ಇತ್ತ ಭಾಗಮಂಡಲದ ಭಗಂಡೇಶ್ವರ ದೇವಾಲಯ, ಪವಿತ್ರ ತೀರ್ಥ ಕ್ಷೇತ್ರ ತಲಕಾವೇರಿಯಲ್ಲಿ ಸಂಜೆ 7 ಗಂಟೆಯ ನಂತರ ಶಾಂತಿಪೂಜೆ ಮಾಡಲಾಗುವುದು. ಬಳಿಕ ಎಂದಿನಂತೆ ಪೂಜಾ ಕೈಂಕರ್ಯ ಆರಂಭವಾಗಲಿದೆ.

ಮಂಡ್ಯದ ಶ್ರೀರಂಗಪಟ್ಟಣದಲ್ಲಿರುವ ಶ್ರೀರಂಗನಾಥಸ್ವಾಮಿ ದೇವಾಲಯ, ಗಂಜಾಂನಲ್ಲಿರುವ ನಿಮಿಷಾಂಭ ದೇವಾಲಯ ಹಾಗೂ ಪಾಂಡವಪುರ ತಾಲೂಕಿನ ಮೇಲುಕೋಟೆಯ ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯ ಹಾಗೂ ಯೋಗಾನರಸಿಂಹ ಸ್ವಾಮಿ ದೇವಾಲಯಗಳು ಸೇರಿದಂತೆ ಹಲವು ದೇವಾಲಯಗಳು ಭಕ್ತರ ಪ್ರವೇಶವನ್ನು ನಿರ್ಬಂಧಿಸಿದ್ದವು.

ಕಪಿಲೇಶ್ವರನಿಗೆ ಬಿಲ್ವಪತ್ರೆ ಅರ್ಪಣೆ
ಬೆಳಗಾವಿಯ ದಕ್ಷಿಣಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಕಪಿಲೇಶ್ವರ ದೇವಸ್ಥಾನದಲ್ಲಿ ಶಿವಲಿಂಗಕ್ಕೆ ರುದ್ರಾಭಿಷೇಕ ನೆರವೇರಿಸಲಾಯಿತು. ಎಂದಿನಂತೆ ಪೂಜಾ ಕೈಂಕರ್ಯ ಇದ್ದರೂ ಭಕ್ತರಿಗೆ ಪ್ರವೇಶ ಇರಲಿಲ್ಲ. ಸೂರ್ಯಗ್ರಹಣ ವೇಳೆ ಬಿಲ್ವಪತ್ರೆಗಳಿಂದ ಶಿವಲಿಂಗ ಸಂಪೂರ್ಣವಾಗಿ ಆವೃತವಾಗಿತ್ತು.

ಮಡಿವಂತಿಕೆಯಿಂದ ದೂರ ಉಳಿದ ಸೂಗುರೇಶ್ವರ
ರಾಯಚೂರು ಜಿಲ್ಲೆಯ 800 ವರ್ಷಗಳ ಹಳೆಯ ದೇವಸಗೂರಿನ ಸೂಗುರೇಶ್ವರ ದೇವಸ್ಥಾನದಲ್ಲಿ ಗ್ರಹಣದ ಛಾಯೆ ಇರಲಿಲ್ಲ.‌ ಸೂರ್ಯಗ್ರಹಣ ಗೋಚರವಾದರೂ ಈ ದೇವಸ್ಥಾನದಲ್ಲಿ ಪೂಜೆ- ಪುನಸ್ಕಾರಗಳಿಗೆ ಯಾವುದೇ ತಡೆ ಇರಲಿಲ್ಲ. ಈ ದೇಗುಲದಲ್ಲಿ ಗ್ರಹಣದೋಷದ ಬಾಲಗಲ್ಲು ಪ್ರತಿಷ್ಠಾಪನೆ ಮಾಡಲಾಗಿದ್ದು, ಇದರಲ್ಲಿ ಸೂರ್ಯ-ಚಂದ್ರರ ಚಿತ್ರ ಇದ್ದು, ಯಾವುದೇ ಗ್ರಹಣ ತಟ್ಟಲ್ಲ ಎಂಬುದು ಭಕ್ತರ ನಂಬಿಕೆಯಾಗಿದೆ.

ಗೋಕರ್ಣ ಮಹಾಬಲೇಶ್ವರ ಕ್ಷೇತ್ರದಲ್ಲಿ ಭಕ್ತರ ಸಂಖ್ಯೆ ಇಳಿಕೆ
ಸೂರ್ಯಗ್ರಹಣ ಹಿನ್ನೆಲೆ ಇತಿಹಾಸ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ಕ್ಷೇತ್ರದಲ್ಲಿ ಭಕ್ತರ ಸಂಖ್ಯೆ ಇಳಿಕೆ ಆಗಿತ್ತು. ಬೆಳಗ್ಗೆ 6:30ರಿಂದ 9:30ರ ವರೆಗೆ ಮಹಾಬಲೇಶ್ವರನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಸಂಜೆ 4 ಗಂಟೆಯವರೆಗೆ ಯಾವುದೇ ಭಕ್ತರಿಗೆ ದೇವರ ದರ್ಶನಕ್ಕೂ ಅವಕಾಶ ಇರಲಿಲ್ಲ. ಜತೆಗೆ ಗ್ರಹಣ ಹಿನ್ನೆಲೆ ಮಧ್ಯಾಹ್ನ ದೇವಸ್ಥಾನದಲ್ಲಿ ಅಮೃತಾನ್ನ ಪ್ರಸಾದ ಇರಲಿಲ್ಲ. ಇನ್ನು ಸಂಜೆ ೪ ಗಂಟೆ ನಂತರ ಭಕ್ತರಿಗೆ ಆತ್ಮಲಿಂಗ ದರ್ಶನ ಮತ್ತು ಸ್ಪರ್ಶಕ್ಕೆ ಅವಕಾಶವನ್ನು ಕಲ್ಪಿಸಲಾಗಿತ್ತು.

ಇತ್ತ ಹುಬ್ಬಳ್ಳಿಯ ಸಿದ್ಧಾರೂಢ ಸ್ವಾಮೀಜಿ ಮಠದಲ್ಲಿ ಎಂದಿನಂತೆ ದರ್ಶನದ ವ್ಯವಸ್ಥೆ ಕಲ್ಪಿಸಲಾಗಿತ್ತು. ಮಠಕ್ಕೆ ಬಂದ ಭಕ್ತರಿಗೆ ದರ್ಶನದ ಜತೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಉಡುಪಿಯ ಶ್ರೀಕೃಷ್ಣ ಮಠದಲ್ಲಿ ದರ್ಶನಕ್ಕೆ ಅವಕಾಶ ಇದ್ದರೂ, ಮಠದಲ್ಲಿ ಮಹಾಪೂಜೆ, ಅನ್ನಪ್ರಸಾದ ಇರಲಿಲ್ಲ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶ್ರೀ ಮಾರಿಕಾಂಬಾ ದೇವಿಯ ಸನ್ನಿಧಿಯಲ್ಲಿ ಮಹಾ ಪೂಜೆ ನಡೆಸಿ ದೇವಾಲಯನ್ನು ಮುಚ್ಚಲಾಯಿತು. ಶ್ರೀ ಮಾರಿಕಾಂಬೆ ಹಾಗೂ ದೇವಾಲಯದ ಆಡಳಿತಕ್ಕೆ ಒಳಪಟ್ಟ ಉಪದೇವಾಲಯಗಳಲ್ಲಿ ಬೆಳಗ್ಗೆ 8 ಗಂಟೆಗೆ ಮಹಾಪೂಜೆ ನಡೆಸಲಾಯಿತು. ದೇವಾಲಯದಲ್ಲಿ ಬೆಳಗ್ಗೆ 11 ಗಂಟೆಯವರೆಗೆ ಮಾತ್ರ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ನಂತರ ಎಲ್ಲಾ ಸೇವೆಗಳು ಬಂದ್ ಆಗಿವೆ. ಸಂಜೆ ಗ್ರಹಣ ನಂತರ ರಾತ್ರಿ 9 ಗಂಟೆಗೆ ಮಹಾಪೂಜೆ ನಡೆಯಲಿದ್ದು, ಅ. ೨೬ರ ಬುಧವಾರ ಬೆಳಗ್ಗೆ 8 ಗಂಟೆಯಿಂದ ಎಂದಿನಂತೆ ನಿತ್ಯ ಪೂಜಾ ವಿನಿಯೋಗಗಳು ನಡೆಯಲಿವೆ.

ವಿಜಯನಗರ ಜಿಲ್ಲೆಯ ವಿಶ್ವ ವಿಖ್ಯಾತ ಹಂಪಿಯ ಶ್ರೀ ವಿರೂಪಾಕ್ಷ ದೇಗುಲವು ಬಂದ್‌ ಆಗಿತ್ತು. ಹೂವಿನ ಹಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರಲಿಂಗೇಶ್ವರ , ಹೊಸಪೇಟೆಯ ಶ್ರೀ ವಡಕರಾಯ ದೇಗುಲ, ಬುಕ್ಕಸಾಗರದ ಏಳು ಹೆಡೆ ನಾಗಪ್ಪ ದೇಗುಲಗಳೂ ಸಹ ಬಂದ್ ಆಗಿದ್ದವು.

ಇದನ್ನೂ ಓದಿ | Solar Eclipse 2022 | ನೆಹರು ತಾರಾಲಯದಲ್ಲಿಲ್ಲ ಗ್ರಹಣ ವೀಕ್ಷಣೆ; ಯೂಟ್ಯೂಬ್‌ ಸ್ಟ್ರೀಮಿಂಗ್‌ಗಷ್ಟೇ ಸೀಮಿತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಗರಿಷ್ಠ ತಾಪಮಾನ ಇಳಿಕೆ; ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ (Rain News) ನಿರೀಕ್ಷೆ ಇದ್ದು, ಯೆಲ್ಲೋ ಹಾಗೂ ಆರೆಂಜ್‌ ಆಲರ್ಟ್‌ ನೀಡಲಾಗಿದೆ. ಗಾಳಿ ವೇಗವು ಪ್ರತಿ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಚದುರಿದಂತೆ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (karnataka Weather Forecast) ಎಚ್ಚರಿಕೆಯನ್ನು ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ಉತ್ತರ ಒಳನಾಡಿನ ಹಾವೇರಿ, ಬಳ್ಳಾರಿ ಮತ್ತು ಬೆಳಗಾವಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ವಿಜಯಪುರ, ರಾಯಚೂರು, ಕೊಪ್ಪಳ, ವಿಜಯನಗರ ಮತ್ತು ಧಾರವಾಡ ಜಿಲ್ಲೆಯಲ್ಲಿ ಹಗುರವಾದ ಮಳೆಯಾಗಲಿದೆ.

ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಅನುಕ್ರಮವಾಗಿ ಸುಮಾರು 29 ಮತ್ತು 22 ಡಿ.ಸೆ ಇರಲಿದೆ.

ಇದನ್ನೂ ಓದಿ: Food Department : ಜೀವಂತ ಇದ್ದವಳನ್ನು ಸತ್ತಿದ್ದಾಗಿ ಘೋಷಿಸಿದ ಆಹಾರ ಇಲಾಖೆ; ರೇಷನ್‌ ಕಾರ್ಡ್‌ನಿಂದಲೇ ಹೆಸರು ಡಿಲೀಟ್‌

ಬಿರುಗಾಳಿ ಎಚ್ಚರಿಕೆ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಉತ್ತರ ಕನ್ನಡ, ಧಾರವಾಡ, ಗದಗ ಮತ್ತು ಹಾವೇರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Self Harming: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ

Self Harming: ಉಡುಪಿ ಜಿಲ್ಲೆಯ ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಟಿಸಿ ಕೊಡದೆ ಮುಖ್ಯೋಪಾಧ್ಯಾಯ ಬೈದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

VISTARANEWS.COM


on

Self Harming
Koo

ಉಡುಪಿ: ಟಿಸಿ ಕೊಟ್ಟಿಲ್ಲವೆಂದು ಬೇಸರಗೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ ಬೈಂದೂರು ಸರ್ಕಾರಿ ಪ್ರೌಢಶಾಲೆಯ ಹೈಸ್ಕೂಲ್ ವಿದ್ಯಾರ್ಥಿ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ.

ನಿತಿನ್ ಆಚಾರಿ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಬೈಂದೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದ ನಿತಿನ್‌ ಆಚಾರಿ, ಪಿಯುಸಿ ಸೇರ್ಪಡೆಯಾಗಲು ಟಿಸಿ ಪಡೆಯಲು ಶಾಲೆಗೆ ಹೋಗಿದ್ದ. ಈ ವೇಳೆ ಶಾಲೆಯ ಮುಖ್ಯೋಪಾಧ್ಯಾಯ ಸುರೇಶ್ ಭಟ್ ಬೈದಿದ್ದರಿಂದ ಬೇಸರಗೊಂಡು ಡೆತ್ ನೋಟ್ ಬರೆದು ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಹಾಜಬ್ಬರ ಶಾಲೆ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣ ಸಾವು

Compound Wall Collapse

ಮಂಗಳೂರು: ಶಾಲೆಯ ಕಾಂಪೌಂಡ್ ಗೋಡೆ ಕುಸಿದು ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟಿರುವ ಘಟನೆ (Compound Wall Collapse) ದಕ್ಷಿಣ ಕನ್ನಡ ಜಿಲ್ಲೆಯ ‌ಉಳ್ಳಾಲ ತಾಲೂಕಿನ ನ್ಯೂಪಡ್ಪುನಲ್ಲಿ ನಡೆದಿದೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ (Harekala Hajabba) ಅವರು ಕಟ್ಟಿದ ನ್ಯೂಪಡ್ಪು ಶಾಲೆಯ ಕಾಂಪೌಂಡ್ ಗೋಡೆ ಕುಸಿದು ದುರ್ಘಟನೆ ಸಂಭವಿಸಿದೆ.

ನ್ಯೂಪಡ್ಪು ನಿವಾಸಿ ಸಿದ್ದೀಖ್ ಜಮೀಲಾ ಪುತ್ರಿ ಶಾಜಿಯಾ (7) ಮೃತ ಬಾಲಕಿ. ಹಾಜಬ್ಬರ ಶಾಲೆಯಲ್ಲಿ ವಿದ್ಯಾರ್ಥಿನಿ ಶಾಜಿಯಾ 3ನೇ ತರಗತಿ ಓದುತ್ತಿದ್ದಳು. ಶಾಲೆಯಲ್ಲಿ ನಡೆಯುತ್ತಿದ್ದ ಎನ್‌ಎಸ್‌ಎಸ್ ಶಿಬಿರದಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿನಿ ಗೇಟಿನ ಬಳಿ ಆಟವಾಡುತ್ತಿದ್ದಾಗ ಕಾಂಪೌಡ್ ಗೋಡೆ ಕುಸಿದಿದ್ದರಿಂದ ದುರ್ಘಟನೆ ಸಂಭವಿಸಿದೆ. ಉಳ್ಳಾಲ ತಾಲೂಕಿನಲ್ಲಿ ಮೊದಲ ಮಳೆಗೆ ಅನಾಹುತ ಸಂಭವಿಸಿದೆ.

ಇದನ್ನೂ ಓದಿ | Physical Abuse & Murder: ಬಾಲಕಿ ಮೇಲೆ ಅತ್ಯಾಚಾರ, ಸಜೀವ ದಹನ ಕೇಸ್‌; ಹಂತಕರಿಗೆ ಮರಣದಂಡನೆ

ಕಳ್ಳತನವೂ ಈಗ ಪ್ರೊಫೆಷನಲ್‌; ಕದಿಯೋಕೆ ತಿಂಗಳ ಸ್ಯಾಲರಿ ಕೊಡುತ್ತಿದ್ದ ಪ್ರಳಯಾಂತಕ!

theft case

ತುಮಕೂರು: ಕಳ್ಳತನವೂ ಈಗ ಪ್ರೊಫೆಷನಲ್‌ ಆಗಿಬಿಟ್ಟಿದೆ. ಭೂಪನೊಬ್ಬ ಬೋರ್‌ವೇಲ್‌ ಕೇಬಲ್‌ಗಳನ್ನು ಕದಿಯೋಕೆ ಅಂತಲೇ ತಿಂಗಳ ಸಂಬಳಕ್ಕೆ ಕಳ್ಳನನ್ನು (Theft Case) ನೇಮಿಸಿಕೊಂಡಿರುವ ಅಪರೂಪದ ಪ್ರಕರಣವೊಂದು ತುಮಕೂರಿನಲ್ಲಿ ಬೆಳಕಿಗೆ ಬಂದಿದೆ.

ವೆಂಕಟೇಶ್‌ ಎಂಬಾತ ಕಳ್ಳತನಕ್ಕಾಗಿಯೇ ಬೆಂಗಳೂರು ಮೂಲದ ರಾಘವೇಂದ್ರ ಎಂಬಾತನನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ. ವೆಂಕಟೇಶ್‌ ಕಳ್ಳತನ ಮಾಡುವ ರಾಘವೇಂದ್ರನಿಗೆ ತಿಂಗಳ ಲೆಕ್ಕದಲ್ಲಿ ಸಂಬಳ ಕೊಡುತ್ತಿದ್ದ. ರಾಘವೇಂದ್ರ ತಿಂಗಳಿಗೆ 20 ಸಾವಿರ ರೂ. ಸಂಬಳ ಪಡೆಯುತ್ತಿದ್ದಾಗಿ ಪೊಲೀಸರ ತನಿಖೆ ವೇಳೆ ಬಾಯಿ ಬಿಟ್ಟಿದ್ದಾನೆ.

ಈ ಖದೀಮರು ಗ್ರಾಮೀಣ ಭಾಗದಲ್ಲಿರುವ ಬೋರ್‌ವೇಲ್‌ ಕೇಬಲ್ ಕಳ್ಳತನ ಮಾಡುತ್ತಿದ್ದರು. ಕೊರಟಗೆರೆ ತಾಲೂಕಿನಲ್ಲಿ ಬೋರ್‌ವೇಲ್‌ ಕೇಬಲ್‌ಗಳ ಕಳುವಿನಿಂದ ರೈತರು ಹೈರಾಣಾಗಿದ್ದರು. ಕೊರಟಗೆರೆಯಲ್ಲಿ ಒಂದು ತಿಂಗಳಿಂದ ನಿರಂತರವಾಗಿ ಕಳ್ಳರು ಬೋರ್‌ವೇಲ್‌ ಕೇಬಲ್ ಕಳ್ಳತನ ಮಾಡುತ್ತಿದ್ದರು. ವಡ್ಡಗೆರೆ ಬಳಿ ಖತರ್ನಾಕ್ ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

Theft Case The thief was paid a salary for theft

ಇದನ್ನೂ ಓದಿ: Road Accident : ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಕಾರಿನ ಚಲನವಲನ ಗಮನಿಸಿ ಕಳ್ಳರನ್ನು ಪತ್ತೆ ಹಚ್ಚಿದ್ದರು. ಕೊರಟಗೆರೆ ಪೊಲೀಸರು ಖತರ್ನಾಕ್ ಕಳ್ಳನ ಸಹಿತ ಮೂವರ ಹೆಡೆಮುರಿ ಕಟ್ಟಿದ್ದಾರೆ. ಐನಾತಿ ಕಳ್ಳರು ಕದ್ದ ಮಾಲನ್ನು ವಿನೇಶ್ ಪಟೇಲ್ ಎಂಬಾತನಿಗೆ ಮಾರಾಟ ಮಾಡುತ್ತಿದ್ದರು.

ಸದ್ಯ ಮೂವರು ಆರೋಪಿಗಳಾದ ವೆಂಕಟೇಶ್, ರಾಘವೇಂದ್ರ ಹಾಗೂ ವಿನೇಶ್‌ನನ್ನು ಕೊರಟಗೆರೆ ಪೊಲೀಸರು ಬೆಂಗಳೂರಿನ ಕಾಮಾಕ್ಷಿಪಾಳ್ಳದಲ್ಲಿ ಬಂಧಿಸಿದ್ದಾರೆ. ಇನ್‌ಸ್ಪೆಕ್ಟರ್‌ ಅನಿಲ್‌ ಹಾಗೂ ತಂಡ ಕಳ್ಳರನ್ನು ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ಕಳ್ಳರ ಬಂಧನದಿಂದ ಕೊರಟಗೆರೆ ರೈತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Coastal Weather: ದಕ್ಷಿಣ ಕನ್ನಡ, ಉಡುಪಿಯಲ್ಲಿ ಎರಡು ದಿನ ಭಾರೀ ಮಳೆ ಸಾಧ್ಯತೆ

Coastal Weather: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮೇ 21 ಮತ್ತು 22 ರಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದ್ದು ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ದಿನಗಳಲ್ಲಿ ಕರಾವಳಿಯಲ್ಲಿ 115.6 ಮಿ.ಮೀ. ನಿಂದ 204.4 ಮಿ.ಮೀ. ವರೆಗೆ ಮಳೆಯಾಗುವ ನಿರೀಕ್ಷೆಯಿದೆ.

VISTARANEWS.COM


on

Karnataka weather Forecast
Koo

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಮೇ 21 ಮತ್ತು 22ರಂದು ಗುಡುಗು ಸಹಿತ ಭಾರೀ ಮಳೆಯಾಗುವ (Heavy rain) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಆರೆಂಜ್ ಅಲರ್ಟ್ ದಿನಗಳಲ್ಲಿ ಕರಾವಳಿಯಲ್ಲಿ 115.6 ಮಿ.ಮೀ. ನಿಂದ 204.4 ಮಿ.ಮೀ. ವರೆಗೆ ಮಳೆಯಾಗುವ (Coastal Weather) ನಿರೀಕ್ಷೆಯಿದೆ.

ಹಲವೆಡೆ ಉತ್ತಮ ಮಳೆ

ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಕೊಡಗು ಜಿಲ್ಲೆಯ ಹಲವು ಕಡೆಗಳಲ್ಲಿ ಭಾನುವಾರ ಬೆಳಗ್ಗೆ ಮತ್ತು ಸಂಜೆ ಉತ್ತಮ ಮಳೆ ಸುರಿದಿದೆ. ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕು ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗಿದೆ.

ಇದನ್ನೂ ಓದಿ: Heavy Rain: ಶಿರಾದಲ್ಲಿ ಭಾರೀ ಮಳೆಗೆ ಮನೆ, ಅಂಗಡಿಗಳಿಗೆ ನುಗ್ಗಿದ ನೀರು

ಮಂಗಳೂರಿನಲ್ಲಿ ಮೋಡ ಕವಿದ ವಾತಾವರಣದಿಂದ ಕೂಡಿತ್ತು. ಮಂಗಳೂರಿನಲ್ಲಿ ಭಾನುವಾರ 32.2 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.2 ಡಿ.ಸೆ. ಕಡಿಮೆ ಇತ್ತು. 24.8 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.1 ಡಿ.ಸೆ. ಉಷ್ಣಾಂಶ ಕಡಿಮೆ ಇತ್ತು.

ಉಡುಪಿಯಲ್ಲಿ ಧಾರಾಕಾರ ಮಳೆ

ಉಡುಪಿ ಜಿಲ್ಲೆಯಲ್ಲಿ ಭಾನುವಾರ ಬೆಳಗಿನ ಜಾವ ಹಲವೆಡೆ ಧಾರಾಕಾರ ಮಳೆಯಾಗಿದೆ. ಗುಡುಗು, ಮಿಂಚು ಸಹಿತ ಭಾನುವಾರ ಬೆಳಗಿನಜಾವದವರೆಗೂ ನಿರಂತರ ಮಳೆ ಸುರಿದಿದೆ. ಇನ್ನು ಉಡುಪಿ, ಮಣಿಪಾಲ, ಮಲ್ಪೆ, ಬ್ರಹ್ಮಾವರ, ಕೋಟ, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ, ಕಾಪು, ಶಿರ್ವ, ಪಡುಬಿದ್ರಿ ಸುತ್ತಮುತ್ತ ಉತ್ತಮ ಮಳೆಯಾಗಿದೆ. ಹಲವೆಡೆ ಗಾಳಿ-ಮಳೆಗೆ ಮನೆಗಳಿಗೆ ಹಾನಿ ಸಂಭವಿಸಿದೆ. ವಿದ್ಯುತ್‌ ಕಂಬ, ತಂತಿಗಳಿಗೆ ಹಾನಿ ಸಂಭವಿಸಿದೆ.

ಕೊಡಗಿನಲ್ಲಿ ಉತ್ತಮ ಮಳೆ

ಕೊಡಗಿನ ವಿವಿಧೆಡೆ ಉತ್ತಮ ಮಳೆಯಾಗುತ್ತಿದ್ದು, ಮಳೆಯ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮೇ 23ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

Karnataka Weather : ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸಾವು ; ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು

ಯಾದಗಿರಿ/ಚಿಕ್ಕಮಗಳೂರು: ಮಳೆಯ ಆರ್ಭಟ (Karnataka Weather Forecast) ಮುಂದುವರಿದಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಯಾದಗಿರಿಯ ಗುರುಮಠಕಲ್ ತಾಲೂಕಿನ ಭಾಗದಲ್ಲಿ ಸೋಮವಾರ ಗುಡುಗು, ಸಿಡಿಲಿನ ಜತೆಗೆ ಬಿರುಗಾಳಿ ಸಹಿತ ಮಳೆಯಾಗಿದೆ. ಪರಿಣಾಮ ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುಮಠಕಲ್ ತಾಲೂಕಿನ ರಾಂಪುರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ.

ಇದನ್ನೂ ಓದಿ: Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

ರಾಂಪುರು ಗ್ರಾಮದ ಕುರಿಗಾಹಿ ಚಂದಪ್ಪ (55) ಮೃತ ದುರ್ದೈವಿ. ಕುರಿಗಾಹಿ ಚಂದಪ್ಪ ಜೇಬಿನಲ್ಲಿ ಮೊಬೈಲ್ ಇಟ್ಟುಕೊಂಡು ಕುರಿ ಮೇಯಿಸಲು ತೆರಳಿದ್ದರು. ಈ ವೇಳೆ ಮೊಬೈಲ್ ಇಟ್ಟುಕೊಂಡ ಭಾಗಕ್ಕೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗೋಪಾಲಸ್ವಾಮಿ ಬೆಟ್ಟದಲ್ಲಿ ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ

ಗೋಪಾಲಸ್ವಾಮಿ ಬೆಟ್ಟದಲ್ಲಿ ಜೋರು ಮಳೆಯಾಗುತ್ತಿದ್ದು ಪ್ರವಾಸಿಗರು ಪರದಾಡಿದರು. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ಚೆಕ್ ಪೋಸ್ಟ್ ಸಮೀಪ ನೀರು ನದಿಯಂತೆ ಹರಿಯುತ್ತಿದೆ. ಚೆಕ್ ಪೋಸ್ಟ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ನೂರಾರು ಮಂದಿ ಮಳೆಗೆ ಸಿಲುಕಿದರು. 1 ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದರಿಂದ ಬೆಟ್ಟದ ಮೇಲಿಂದ ನದಿಯಂತೆ ನೀರು ಹರಿದು ಬಂದಿತ್ತು. ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ ಒಂದು ಕಡೆಯಾದರೆ, ಮಳಿಗೆಗಳಿಗೂ ನೀರು ನುಗ್ಗಿತ್ತು.

ಚಾಮರಾಜನಗರದಲ್ಲಿ ಮಳೆಯ ಅಬ್ಬರ

ಚಾಮರಾಜನಗರದಲ್ಲಿ ಎರಡು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿದೆ. ಜಿಲ್ಲೆಯ ಕೆಲ ಕಡೆ ತುಂತುರು ಮಳೆಯಾದರೆ ಕೆಲವು ಕಡೆ ಭರ್ಜರಿ ಮಳೆಯಾಗಿದೆ. ರಸ್ತೆ ಬದಿಗಳಲ್ಲಿ ನದಿಯಂತೆ ಮಳೆ ನೀರು ಹರಿಯುತ್ತಿದೆ. ಇತ್ತ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ, ಹಂಗಳ ಗ್ರಾಮದ ಸುತ್ತ ಮುತ್ತ ಭರ್ಜರಿ ಮಳೆಯಾಗಿದೆ.

ಇದನ್ನೂ ಓದಿ: Karnataka Weather : ವರ್ಷಾಘಾತಕ್ಕೆ ಜನ ಸುಸ್ತು; ಮಳೆಯಾಟಕ್ಕೆ ಬಿರುಗಾಳಿ ಸಾಥ್‌

ಶಿವಮೊಗ್ಗದಲ್ಲಿ ಧಾರಾಕಾರ ಮಳೆ

ಮಲೆನಾಡು ಶಿವಮೊಗ್ಗದಲ್ಲೂ ಧಾರಾಕಾರವಾಗಿ ಮಳೆ ಸುರಿದಿದೆ. ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ, ಶಿಕಾರಿಪುರ, ಸೊರಬ, ಭದ್ರಾವತಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಒಂದು ಗಂಟೆಯಿಂದ ಬಿಡುವು ನೀಡದೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.

Continue Reading

ಮಳೆ

Karnataka Weather : ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸಾವು ; ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು

Karnataka Weather Forecast : ಮಲೆನಾಡು ಹಾಗೂ ಒಳನಾಡಿನಲ್ಲಿ ಮಳೆಯು (rain News) ಅಬ್ಬರಿಸುತ್ತಿದೆ. ಯಾದಗಿರಿಯಲ್ಲಿ ಸಿಡಿಲಿಗೆ ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟರೆ, ಗೋಪಾಲಸ್ವಾಮಿ ಬೆಟ್ಟದಲ್ಲಿ ಬಿರುಗಾಳಿ ಸಹಿತ ಮಳೆಗೆ ಸಿಲುಕಿದ ಪ್ರವಾಸಿಗರು ಪರದಾಡಿದರು.

VISTARANEWS.COM


on

By

Karnataka weather Forecast
Koo

ಯಾದಗಿರಿ/ಚಿಕ್ಕಮಗಳೂರು: ಮಳೆಯ ಆರ್ಭಟ (Karnataka Weather Forecast) ಮುಂದುವರಿದಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಯಾದಗಿರಿಯ ಗುರುಮಠಕಲ್ ತಾಲೂಕಿನ ಭಾಗದಲ್ಲಿ ಸೋಮವಾರ ಗುಡುಗು, ಸಿಡಿಲಿನ ಜತೆಗೆ ಬಿರುಗಾಳಿ ಸಹಿತ ಮಳೆಯಾಗಿದೆ. ಪರಿಣಾಮ ಸಿಡಿಲು ಬಡಿದು ಕುರಿಗಾಹಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುರುಮಠಕಲ್ ತಾಲೂಕಿನ ರಾಂಪುರು ಗ್ರಾಮದಲ್ಲಿ ದುರ್ಘಟನೆ ನಡೆದಿದೆ.

ರಾಂಪುರು ಗ್ರಾಮದ ಕುರಿಗಾಹಿ ಚಂದಪ್ಪ (55) ಮೃತ ದುರ್ದೈವಿ. ಕುರಿಗಾಹಿ ಚಂದಪ್ಪ ಜೇಬಿನಲ್ಲಿ ಮೊಬೈಲ್ ಇಟ್ಟುಕೊಂಡು ಕುರಿ ಮೇಯಿಸಲು ತೆರಳಿದ್ದರು. ಈ ವೇಳೆ ಮೊಬೈಲ್ ಇಟ್ಟುಕೊಂಡ ಭಾಗಕ್ಕೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗೋಪಾಲಸ್ವಾಮಿ ಬೆಟ್ಟದಲ್ಲಿ ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ

ಗೋಪಾಲಸ್ವಾಮಿ ಬೆಟ್ಟದಲ್ಲಿ ಜೋರು ಮಳೆಯಾಗುತ್ತಿದ್ದು ಪ್ರವಾಸಿಗರು ಪರದಾಡಿದರು. ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ಚೆಕ್ ಪೋಸ್ಟ್ ಸಮೀಪ ನೀರು ನದಿಯಂತೆ ಹರಿಯುತ್ತಿದೆ. ಚೆಕ್ ಪೋಸ್ಟ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ನೂರಾರು ಮಂದಿ ಮಳೆಗೆ ಸಿಲುಕಿದರು. 1 ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದರಿಂದ ಬೆಟ್ಟದ ಮೇಲಿಂದ ನದಿಯಂತೆ ನೀರು ಹರಿದು ಬಂದಿತ್ತು. ಮಳೆಗೆ ಸಿಲುಕಿ ಪ್ರವಾಸಿಗರ ಪರದಾಟ ಒಂದು ಕಡೆಯಾದರೆ, ಮಳಿಗೆಗಳಿಗೂ ನೀರು ನುಗ್ಗಿತ್ತು.

ಚಾಮರಾಜನಗರದಲ್ಲಿ ಮಳೆಯ ಅಬ್ಬರ

ಚಾಮರಾಜನಗರದಲ್ಲಿ ಎರಡು ಗಂಟೆಗೂ ಹೆಚ್ಚು ಸಮಯ ಮಳೆ ಸುರಿದಿದೆ. ಜಿಲ್ಲೆಯ ಕೆಲ ಕಡೆ ತುಂತುರು ಮಳೆಯಾದರೆ ಕೆಲವು ಕಡೆ ಭರ್ಜರಿ ಮಳೆಯಾಗಿದೆ. ರಸ್ತೆ ಬದಿಗಳಲ್ಲಿ ನದಿಯಂತೆ ಮಳೆ ನೀರು ಹರಿಯುತ್ತಿದೆ. ಇತ್ತ ಗುಂಡ್ಲುಪೇಟೆ ತಾಲೂಕಿನ ಗೋಪಾಲಸ್ವಾಮಿ ಬೆಟ್ಟ, ಹಂಗಳ ಗ್ರಾಮದ ಸುತ್ತ ಮುತ್ತ ಭರ್ಜರಿ ಮಳೆಯಾಗಿದೆ.

ಶಿವಮೊಗ್ಗದಲ್ಲಿ ಧಾರಾಕಾರ ಮಳೆ

ಮಲೆನಾಡು ಶಿವಮೊಗ್ಗದಲ್ಲೂ ಧಾರಾಕಾರವಾಗಿ ಮಳೆ ಸುರಿದಿದೆ. ಶಿವಮೊಗ್ಗ, ತೀರ್ಥಹಳ್ಳಿ, ಹೊಸನಗರ, ಶಿಕಾರಿಪುರ, ಸೊರಬ, ಭದ್ರಾವತಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಒಂದು ಗಂಟೆಯಿಂದ ಬಿಡುವು ನೀಡದೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ.

ಇದನ್ನೂ ಓದಿ: Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಗುಡುಗು ಸಹಿತ ಮಳೆ

ದಕ್ಷಿಣ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಾಳಿ (40-50 kmph) ಸಹಿತ ಭಾರಿ ಮಳೆಯಾಗಲಿದೆ.

ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿ.ಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಭಾಗದಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ (40-50 ಕಿ.ಮೀ.) ಮಳೆ ಸಂಭವವಿದೆ.

ಮುಂದಿನ 5 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಬಲವಾಗಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 21 ಡಿ.ಸೆ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
KKR vs SRH
ಕ್ರೀಡೆ2 mins ago

KKR vs SRH: ಇಂದು ಮೊದಲ ಕ್ವಾಲಿಫೈಯರ್‌ ಪಂದ್ಯ: ಅಯ್ಯರ್​-ಕಮಿನ್ಸ್​ ಪಡೆಗಳ ಫೈನಲ್‌ ರೇಸ್‌

ISIS Terrorists
ದೇಶ3 mins ago

ISIS Terrorists: ಬಿಜೆಪಿ, ಆರ್ ಎಸ್ ಎಸ್ ನಾಯಕರ ಮೇಲೆ ಆತ್ಮಾಹುತಿ ದಾಳಿಗೆ ಸಂಚು ಮಾಡಿದ್ದ ಐಸಿಸ್ ಉಗ್ರರು; ಸೆರೆ ಸಿಕ್ಕಿದ್ದು ಹೇಗೆ?

Shocking News
ವಿದೇಶ11 mins ago

Shocking News: ಎಚ್‌ಐವಿ ಪಾಸಿಟಿವ್‌ ವಿಚಾರ ಮುಚ್ಚಿಟ್ಟ ಲೈಂಗಿಕ ಕಾರ್ಯಕರ್ತೆ; 211 ಮಂದಿಗೆ ಎದುರಾಯ್ತು ಸಂಕಷ್ಟ

Darshan And Vijayalakshmi Celebrate Wedding Anniversary In Dubai pavitra gowda posted karma status
ಸ್ಯಾಂಡಲ್ ವುಡ್11 mins ago

Actor Darshan: ದುಬೈನಲ್ಲಿ ʻಡಿ ಬಾಸ್‌ʼ ವೆಡ್ದಿಂಗ್‌ ಆ್ಯನಿವರ್ಸರಿ ಸೆಲೆಬ್ರೇಷನ್‌: ಇತ್ತ ಪವಿತ್ರಾ ಗೌಡ ಕರ್ಮದ ಬಗ್ಗೆ ಪಾಠ!

KKR vs SRH:
ಕ್ರೀಡೆ26 mins ago

KKR vs SRH: ಕೆಕೆಆರ್​-ಹೈದರಾಬಾದ್​ ಕ್ವಾಲಿಫೈಯರ್​ ಪಂದ್ಯದ ಹವಾಮಾನ ವರದಿ ಹೇಗಿದೆ?

board exam public exam
ಪ್ರಮುಖ ಸುದ್ದಿ44 mins ago

Board Exam: ಮಕ್ಕಳೇ ನೀವು ಪಾಸ್!‌ 5, 8 ಮತ್ತು 9ನೇ ತರಗತಿಯ ಎಲ್ಲ ಮಕ್ಕಳು ಉತ್ತೀರ್ಣ

Kangana Ranaut
ದೇಶ1 hour ago

Kangana Ranaut: ಕಂಗನಾ ರಣಾವತ್‌ ಮೇಲೆ ಕಲ್ಲು ತೂರಾಟ; ಚು.ಆಯೋಗಕ್ಕೆ ದೂರು

Job Alert
ಉದ್ಯೋಗ1 hour ago

Job Alert: ಗಮನಿಸಿ: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಮೇ 24 ಕೊನೆಯ ದಿನ

belagavi farmer self harming
ಕ್ರೈಂ1 hour ago

Farmer Self Harming: ಸಾಲ ವಸೂಲಿಗೆ ಹೆಂಡತಿ- ಮಗನಿಗೆ ಗೃಹಬಂಧನ, ಅವಮಾನದಿಂದ ರೈತ ಆತ್ಮಹತ್ಯೆ, ಎಂಥ ರಾಕ್ಷಸಿ ಇವಳು!

Health Benefits Of Tofu
ಆರೋಗ್ಯ1 hour ago

Health Benefits Of Tofu: ಪನೀರ್‌ನಂತೆ ಕಾಣುವ ಈ ಆಹಾರದ ಬಗ್ಗೆ ನಿಮಗೆ ಗೊತ್ತೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ19 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌