Kantara Movie | ಕರ್ನಾಟಕದಲ್ಲಿ ಕಾಂತಾರದ ಹೊಸ ದಾಖಲೆ; ಕೆಜಿಎಫ್‌ ಕಲೆಕ್ಷನ್ ಹಿಂದಿಕ್ಕಿದ ರಿಷಬ್‌ ಸಿನಿಮಾ - Vistara News

ಸಿನಿಮಾ

Kantara Movie | ಕರ್ನಾಟಕದಲ್ಲಿ ಕಾಂತಾರದ ಹೊಸ ದಾಖಲೆ; ಕೆಜಿಎಫ್‌ ಕಲೆಕ್ಷನ್ ಹಿಂದಿಕ್ಕಿದ ರಿಷಬ್‌ ಸಿನಿಮಾ

ರಿಷಬ್‌ ಶೆಟ್ಟಿ ನಿರ್ದೇಶನದ ಕಾಂತಾರ ಸಿನಿಮಾ ಕರ್ನಾಟಕದಲ್ಲಿ ಅತಿ ಹೆಚ್ಚು ಗಳಿಕೆ ಮಾಡುವ ಮೂಲಕ ಕೆಜಿಎಫ್‌ ದಾಖಲೆಯನ್ನು ಮುರಿದಿದೆ.

VISTARANEWS.COM


on

Kantara Collection
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಕರಾವಳಿ ಕರ್ನಾಟಕದ ಸಾಂಸ್ಕೃತಿಕ ವೈಶಿಷ್ಟ್ಯವನ್ನು ಅನಾವರಣಗೊಳಿಸಿದ ಕಾಂತಾರ ಸಿನಿಮಾ ದಿನಕ್ಕೊಂದು ದಾಖಲೆಗಳನ್ನು ಸೃಷ್ಟಿಸುತ್ತಿದೆ. ಭಾರತದಾದ್ಯಂತ ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿರುವ ಈ ಚಲನಚಿತ್ರ ಕರ್ನಾಟಕದಲ್ಲಿ ಅತಿ ಹೆಚ್ಚು ಗಳಿಕೆ ಮಾಡಿರುವ ಸಿನಿಮಾ ಎಂಬ ಖ್ಯಾತಿ ಪಡೆದುಕೊಂಡಿದ್ದು, ಈ ದಾಖಲೆ ಹೊಂದಿದ್ದ ಕೆ.ಜಿ.ಎಫ್‌ ಅನ್ನು ಹಿಂದಿಕ್ಕಿದೆ. ಕೆಜಿಎಫ್‌ ಸಿನಿಮಾವನ್ನು ಕೂಡ ಕಾಂತಾರ ಸಿನಿಮಾವನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲ್ಸ್ಮ್‌ ನಿರ್ಮಾಣ ಮಾಡಿತ್ತು.

ಮೂರನೇ ವಾರದ ೧೪ ಕೋಟಿ ರೂಪಾಯಿ ಸಂಗ್ರಹ ಸೇರಿದಂತೆ ಕರ್ನಾಟದಲ್ಲಿ ಕಾಂತಾರ ಒಟ್ಟಾರೆ ೧೧೧ ಕೋಟಿ ರೂಪಾಯಿ ಗಳಿಸಿದೆ. ಕೆಜಿಎಫ್‌ ಸಿನಿಮಾ ನಾಲ್ಕನೇ ವಾರದಲ್ಲಿ ಈ ಮೊತ್ತಕ್ಕಿಂತ ಅರ್ಧ ಮೊತ್ತವನ್ನು ಮಾತ್ರ ಪಡೆದುಕೊಂಡಿತ್ತು. ಈ ಮೂಲಕ ಇದುವರೆಗಿನ ಎಲ್ಲ ದಾಖಲೆಗಳನ್ನು ಕಾಂತಾರ ಮುರಿದಿದೆ.

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸಿನಿಮಾ ಮಂದಿರಗಳು ಮತ್ತೆ ತುಂಬಿ ತುಳುಕುತ್ತಿದ್ದು, ಕಾಂತಾರದ ನಾಗಾಲೋಟ ಮುಂದುವರಿದಿದೆ. ಈ ಮೂಲಕ ದೇಶಾದ್ಯಂತ ೧೭೦ ಕೋಟಿ ರೂಪಾಯಿ ತನಕ ಕಲೆಕ್ಷನ್ ಮಾಡಿದೆ. ಹಬ್ಬ ಮುಕ್ತಾಯದ ವೇಳೆಗೆ ಸಂಗ್ರಹ ೨೦೦ ಕೋಟಿ ರೂಪಾಯಿ ಗಳಿಸಬಹುದು ಎಂದು ಅಂದಾಜಿಸಲಾಗಿದೆ. ಕಾಂತಾರ ಸಿನಿಮಾ ವಿದೇಶದಲ್ಲೂ ೧೮ ಕೋಟಿ ರುಪಾಯಿ ಸಂಗ್ರಹ ಮಾಡಿದೆ.

ಇದನ್ನೂ ಓದಿ | Kantara Movie | ಕಾಂತಾರದ ವರಾಹ ರೂಪಂ ಹಾಡು ನವರಸಂ ಹಾಡಿನ ಕಾಪಿ? ಕಾನೂನು ಕ್ರಮದ ಎಚ್ಚರಿಕೆ ಕೊಟ್ಟ ಮಲಯಾಳಂ ಸಂಗೀತ ತಂಡ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಟಾಲಿವುಡ್

Naga Chaitanya: ವಕೇಶನ್‌ ಮೂಡ್‌ನಲ್ಲಿ ಸಮಂತಾ ಮಾಜಿ ಪತಿ! ಶೋಭಿತಾ ಜತೆ ಕಾಡಿನಲ್ಲಿ ಸುತ್ತಾಟ?

Naga Chaitanya: ಇತ್ತೀಚೆಗೆ, ಶೋಭಿತಾ ಧೂಳಿಪಾಲ ಅವರು ಜಂಗಲ್ ಸಫಾರಿಯ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ನಾಗ ಚೈತನ್ಯ ಕೂಡ ಒಂದು ಫೋಟೋ ಪೋಸ್ಟ್ ಮಾಡಿದ್ದು, ಕಾಡಿನ ರೀತಿಯ ಬ್ಯಾಕ್​ಗ್ರೌಂಡ್ ಇದೆ.ಈ ಕಾರಣದಿಂದ ಇಬ್ಬರೂ ಒಂದೇ ಕಡೆಯಲ್ಲಿ ಸುತ್ತಾಡುತ್ತಿದ್ದಾರೆ ಎನ್ನಲಾಗಿದೆ. ನಟಿ ಸಮಂತಾ (samantha) ಮಾಜಿ ಪತಿ ನಟ ನಾಗ ಚೈತನ್ಯ (Naga Chaitanya) ಎರಡನೇ ಮದುವೆಯಾಗಲು ಮುಂದಾಗಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿತ್ತು.

VISTARANEWS.COM


on

Naga Chaitanya and Sobhita Dhulipala holidaying together
Koo

ಬೆಂಗಳೂರು: ನಟಿ ಸಮಂತಾ (samantha) ಮಾಜಿ ಪತಿ ನಟ ನಾಗ ಚೈತನ್ಯ (Naga Chaitanya) ಎರಡನೇ ಮದುವೆಯಾಗಲು ಮುಂದಾಗಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿತ್ತು. ಪೂರಕ ಎಂಬಂತೆ ನಾಗ ಚೈತನ್ಯ ಮತ್ತು ಶೋಭಿತಾ ಹಲವು ಬಾರಿ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಜೋಡಿ ವಕೇಶನ್‌ ಮೂಡ್‌ನಲ್ಲಿದೆ ಎಂದು ವರದಿಯಾಗಿದೆ. ಈಗ ಜೋಡಿ ಪೋಸ್ಟ್ ಮಾಡಿರುವ ಫೋಟೋ ಒಂದು ವೈರಲ್ ಆಗಿದೆ. ಇಬ್ಬರೂ ಒಂದೇ ಲೊಕೇಷನ್​ನಿಂದ ಫೋಟೊ ಪೋಸ್ಟ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಫೋಟೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ.

ಇತ್ತೀಚೆಗೆ, ಶೋಭಿತಾ ಧೂಳಿಪಾಲ ಅವರು ಜಂಗಲ್ ಸಫಾರಿಯ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ನಾಗ ಚೈತನ್ಯ ಕೂಡ ಒಂದು ಫೋಟೋ ಪೋಸ್ಟ್ ಮಾಡಿದ್ದು, ಕಾಡಿನ ರೀತಿಯ ಬ್ಯಾಕ್​ಗ್ರೌಂಡ್ ಇದೆ.ಈ ಕಾರಣದಿಂದ ಇಬ್ಬರೂ ಒಂದೇ ಕಡೆಯಲ್ಲಿ ಸುತ್ತಾಡುತ್ತಿದ್ದಾರೆ ಎನ್ನಲಾಗಿದೆ. ಈ ಹಿಂದೆ ಜೋಡಿ ಲಂಡನ್‌ನಲ್ಲಿ ಕಾಣಿಸಿಕೊಂಡಿತ್ತು. ಕೆಲವು ಬಾರಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರೂ, ಇಬ್ಬರು ತಮ್ಮ ಸಂಬಂಧದ ವದಂತಿಗಳ ಬಗ್ಗೆ ಪ್ರತಿಕ್ರಿಯಿಸಿಲ್ಲ.

ಇದನ್ನೂ ಓದಿ: Naga Chaitanya: ನಟಿ ಶೋಭಿತಾ ಜತೆ ನಾಗ ಚೈತನ್ಯ ಡೇಟಿಂಗ್; 2ನೇ ಮದುವೆ ಫಿಕ್ಸ್?

ನಟಿ ಶೋಭಿತಾ ಜತೆ ನಾಗ ಚೈತನ್ಯ ಡೇಟಿಂಗ್

ನಟಿ ಸಮಂತಾ (samantha) ಮಾಜಿ ಪತಿ ನಟ ನಾಗ ಚೈತನ್ಯ (Naga Chaitanya) ಎರಡನೇ ಮದುವೆಯಾಗಲು ಮುಂದಾಗಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿದೆ. ನಟ ಈ ಬಗ್ಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. ಆದರೂ ನಾಗ ಚೈತನ್ಯ ತಂದೆ ನಾಗುರ್ಜನ ಮಗನ ಎರಡನೇ ಮದುವೆಗೆ ತಯಾರಿ ಮಾಡುತ್ತಿದ್ದಾರೆ ಎಂದು ವರದಿಯಾಗಿತ್ತು. ಅಷ್ಟೇ ಅಲ್ಲದೇ ನಾಗ ಚೈತನ್ಯ ಮದುವೆ ಮಾಡಲು ಅಕ್ಕಿನೇನಿ ನಾಗಾರ್ಜುನ ಅವರು ಆಸಕ್ತಿ ತೋರಿ ನಾಗ ಚೈತನ್ಯಗೆ ಉದ್ಯಮಿ ಕುಟುಂಬದಿಂದ ಹೆಣ್ಣನ್ನು ತರಲು ಸಿದ್ಧತೆ ನಡೆದಿದ್ದು, ಈ ವರ್ಷವೇ ವಿವಾಹ ನಡೆಯಲಿದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ. ಆದರೆ, ಈ ವಿಚಾರದಲ್ಲಿ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಇದೀಗ ಮೂಲಗಳ ಪ್ರಕಾರ ಇದ್ಯಾವುದೂ ಸತ್ಯವಲ್ಲ. ನಾಗ ಚೈತನ್ಯ ಗೆಳತಿಯೂ ಆದ ನಟಿ ಶೋಭಿತಾ ಧೂಳಿಪಾಲ (shobhita dhulipala) ಜತೆ ನಟ ಡೇಟಿಂಗ್‌ ಮಾಡುತ್ತಿದ್ದಾರೆ ಎನ್ನಲಾಗಿದೆ.

ಸಿನಿಮಾ ವಿಚಾರಕ್ಕೆ ಬಂದರೆ ನಾಗ ಚೈತನ್ಯ ಸದ್ಯ ಸಾಯಿ ಪಲ್ಲವಿಯೊಂದಿಗೆ ‘ತಾಂಡೇಲ್’ ಚಿತ್ರೀಕರಣದಲ್ಲಿದ್ದಾರೆ. ಈ ಚಿತ್ರವನ್ನು ಚಂದೂ ಮೊಂಡೇಟಿ ನಿರ್ದೇಶಿಸುತ್ತಿದ್ದಾರೆ. ಶೋಭಿತಾ ಧೂಳಿಪಾಲ ಇತ್ತೀಚೆಗೆ ದೇವ್ ಪಟೇಲ್ ನಿರ್ದೇಶನದ ‘ಮಂಕಿ ಮ್ಯಾನ್’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಚಿತ್ರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಿಡುಗಡೆಯಾಗಿದ್ದರೂ, ಸೆನ್ಸಾರ್ ಸಮಸ್ಯೆಗಳಿಂದಾಗಿ ಇದು ಭಾರತದಲ್ಲಿ ಬಿಡುಗಡೆಯಾಗಲು ಇನ್ನೂ ಸಾಧ್ಯವಾಗಿಲ್ಲ.

Continue Reading

ಸಿನಿಮಾ

Rajkumar Birth Anniversary: ವರನಟ ಡಾ. ರಾಜ್​ಕುಮಾರ್ ಅವರ ಟಾಪ್‌ 10 ಸಿನಿಮಾಗಳಿವು!

Rajkumar Birth Anniversary:  ತಾವು ಮಾಡುವ ಪಾತ್ರಗಳು ಸಮಾಜಕ್ಕೆ ಕೆಟ್ಟ ಸಂದೇಶ ನೀಡಬಾರದು ಅನ್ನೋ ಕಾಳಜಿ ರಾಜ್ ಕುಮಾರ್ ಅವರಿಗೆ ಇತ್ತು. ಹೀಗಾಗಿಯೇ ಸಿನಿಮಾಗಳಲ್ಲಿ ರಾಜ್ ಕುಡಿದಿಲ್ಲ, ಸಿಗರೇಟ್ ಸೇದಿಲ್ಲ, ರೇಪ್ ಸೀನ್, ಕಿಸ್ಸಿಂಗ್ ಸೀನ್ ಗಳಲ್ಲಿ ನಟಿಸಿಲ್ಲ. ಅದಷ್ಟೇ ಸಂಭಾವನೆ ಕೊಟ್ಟರೂ ನಾನು ಇಂತಹ ಪಾತ್ರಗಳಲ್ಲಿ ನಟಿಸಲ್ಲ ಎಂದು ಅವರು ಕಡ್ಡಿ ಮುರಿದಂತೆ ಹೇಳಿದ್ದರು. ಪಾತ್ರಗಳಿಗೆ ಜೀವ ತುಂಬುವ ರಾಜ್ ಅದಕ್ಕಾಗಿ ಕಠಿಣ ನಿಯಮಗಳನ್ನು ಪಾಲಿಸುತ್ತಿದ್ದರು. ‘ಮಂತ್ರಾಲಯ ಮಹಾತ್ಮೆ’ ಸಿನಿಮಾಕ್ಕಾಗಿ ಅವರು ಬಾಡೂಟವನ್ನೇ ಬಿಟ್ಟಿದ್ದರು.

VISTARANEWS.COM


on

Rajkumar Birth Anniversary TOP 10 Movies
Koo

ಇಂದು ದಿವಂಗತ ಡಾ. ರಾಜ್ ಕುಮಾರ್ (Rajkumar Birth Anniversary) ಅವರ ಜಯಂತ್ಯೋತ್ಸವ. ಕನ್ನಡ (Kannada) ಕಲಾರಸಿಕರ ಹೃದಯ ಸಾಮ್ರಾಟ. ಕನ್ನಡಿಗರಿಗೆಲ್ಲರಿಗೂ ಅವರೊಂದು ಶಕ್ತಿ. ಅವರು ಕನ್ನಡ ಭಾಷೆಯ ಅಸ್ಮಿತೆ. 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಪ್ರೇಕ್ಷಕರನ್ನು ರಂಜಿಸಿದರು. ನಗಿಸಿ, ಅಳಿಸಿ, ಆಲೋಚನೆಗೆ ಹಚ್ಚಿ, ಛಲ ತುಂಬಿ, ಮಾರ್ಗದರ್ಶನ ನೀಡಿದರು. 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಡಾ ರಾಜ್‌ಕುಮಾರ್ ಕನ್ನಡ ಚಿತ್ರರಂಗದ ಅಪ್ರತಿಮ ಸೂಪರ್‌ಸ್ಟಾರ್. 1954ರಲ್ಲಿ ತೆರೆಕಂಡ ‘ಬೇಡರ ಕಣ್ಣಪ್ಪ’ ಚಿತ್ರದಿಂದ ಮುತ್ತುರಾಜ್ ಕನ್ನಡ ಸಿನಿರಸಿಕರಿಗೆ ಪರಿಚಿತರಾದರು. ಇದೀಗ ರಾಜ್‌ ಅವರ ಟಾಪ್‌ 10 ಸಿನಿಮಾಗಳ ಮಾಹಿತಿ ತಿಳಿಯೋಣ.

ಕಸ್ತೂರಿ ನಿವಾಸ (KASTHURI NIVAAS)

ಕಸ್ತೂರಿ ನಿವಾಸ ಕನ್ನಡದ ಕ್ಲಾಸಿಕ್ ಸಿನಿಮಾಗಳಲ್ಲೊಂದು. ರಾಜ್ಯದ ಹಲವಾರು ಚಿತ್ರಮಂದಿರಗಳಲ್ಲಿ ಚಿತ್ರ 175 ದಿನ ಪೂರೈಸಿದರೆ, 16 ಚಿತ್ರಮಂದಿರಗಳಲ್ಲಿ 100 ವಾರ ಪೂರೈಸಿ ದಾಖಲೆಯನ್ನ ಬರೆಯಿತು. ಕಸ್ತೂರಿ ನಿವಾಸ’ ಚಿತ್ರಕ್ಕೆ ಜಿಕೆ ವೆಂಕಟೇಶ್ ಸಂಗೀತ ನೀಡಿದ್ದರು. ವಿಶೇಷ ಅಂದರೆ ಚಿತ್ರದ ಆರಕ್ಕೆ ಆರು ಹಾಡು ಕೂಡ ಸೂಪರ್ ಹಿಟ್. ಚಿತ್ರದಲ್ಲಿನ ‘ಆಡಿಸಿ ನೋಡು ಬೀಳಿಸಿ ನೋಡು’.. ಹಾಡು ಸಂಗೀತ ಪ್ರಿಯರ ಮೇಲೆ ತನ್ನ ಹಿಡಿತ ಸಾಧಿಸಿದೆ ಅಂದರೆ ಎಂತಹವರಿಗೆ ಆದರೂ ಅದು ಅಚ್ಚರಿಯ ಸಂಗತಿಯೇ ಸರಿ. ದೊರೈ-ಭಗವಾನ್ ನಿರ್ದೇಶನ ಈ ಸಿನಿಮಾಗಿದೆ. ಶಿವಾಜಿ ಗಣೇಶನ್ ತಮಿಳಿನಲ್ಲಿ ಚಿತ್ರವನ್ನ ರಿಮೇಕ್ ಮಾಡಿದರು. ಹಿಂದಿಯಲ್ಲಿ ಸಂಜೀವ್ ಕುಮಾರ್ ಡಾ.ರಾಜ್ ಕುಮಾರ್ ಅವರ ಪಾತ್ರಕ್ಕೆ ಜೀವ ತುಂಬುವ ಪ್ರಯತ್ನವನ್ನ ಶಾಂದಾರ್ ಚಿತ್ರದಲ್ಲಿ ಮಾಡಿದರು.

ಬಂಗಾರದ ಮನುಷ್ಯ (1972) (Bangarada Manushya)

ಬಂಗಾರದ ಮನುಷ್ಯ T. K. ರಾಮರಾವ್ ಅವರ ಕಾದಂಬರಿಯನ್ನು ಆಧರಿಸಿದ 1972ರ ಕನ್ನಡ ಭಾಷೆಯ ಚಲನಚಿತ್ರವಾಗಿದೆ. ಶ್ರೀನಿಧಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಸಿದ್ದಲಿಂಗಯ್ಯ ನಿರ್ದೇಶಿಸಿದ್ದರು. ಈ ಮೊದಲು ಸಿದ್ದಲಿಂಗಯ್ಯ ಅವರು ʻಮೇಯರ್ ಮುತ್ತಣ್ಣʼ ಸಿನಿಮಾಗೂ ನಿರ್ದೇಶಿಸಿದ್ದರು. ರಾಜೀವನಾಗಿ ಡಾ ರಾಜ್‌ಕುಮಾರ್, ಲಕ್ಷ್ಮಿಯಾಗಿ ಭಾರತಿ, ರಾಚುತಪ್ಪನಾಗಿ ಬಾಲಕೃಷ್ಣ, ಶರಾವತಿಯಾಗಿ ಆರತಿ, ಗ್ರಾಮದ ಮುಖಂಡನ ಮಗನಾಗಿ ದ್ವಾರಕೀಶ್ ನಟಿಸಿದ್ದರು. ಆರ್.ಲಕ್ಷ್ಮಣ್ ನಿರ್ಮಾಣ ಇದ್ದರೆ, ಜಿ ಕೆ ವೆಂಕಟೇಶ್ ಸಂಗೀತ ನಿರ್ದೇಶಕರಾಗಿದ್ದರು.

ಬರೋಬ್ಬರಿ 2 ವರ್ಷ ಪ್ರದರ್ಶನ ಕಂಡ ಸಿನಿಮಾ ಇದು. ಡಾ. ರಾಜ್‌ಕುಮಾರ್ ಹಾಗೂ ಭಾರತೀ ವಿಷ್ಣುವರ್ಧನ್ ನಟನೆಯ ಈ ಚಿತ್ರ ಬೆಂಗಳೂರಿನ ಸ್ಟೇಟ್ಸ್ ಥಿಯೇಟರ್‌ನಲ್ಲಿ (ಈಗಿನ ಭೂಮಿಕಾ ಥಿಯೇಟರ್) ಎರಡು ವರ್ಷ, ಮೈಸೂರಿನ ಚಾಮುಂಡೇಶ್ವರಿ ಥಿಯೇಟರ್‌ನಲ್ಲಿ 60 ವಾರಗಳ ಕಾಲ ಪ್ರದರ್ಶನಗೊಂಡಿತ್ತು. ಇನ್ನು ಕೆಲವೆಡೆ 1 ವರ್ಷ, ಮತ್ತೆ ಕೆಲವೆಡೆ 25 ವಾರ ಓಡಿತ್ತು.ಪಟ್ಟಣದಿಂದ ಹಳ್ಳಿ ಸೇರಿ ರಾಜೀವ(ಡಾ. ರಾಜ್‌ಕುಮಾರ್) ಬರಡು ಭೂಮಿಯಲ್ಲಿ ಕೃಷಿ ಮಾಡಿ ಗೆಲ್ಲುವ ಕಥೆ ಅನೇಕರಿಗೆ ಸ್ಫೂರ್ತಿಯಾಗಿತ್ತು.ಅಂದಾಜು 13 ಲಕ್ಷ ರೂಪಾಯಿ ಖರ್ಚು ಮಾಡಿ ಸಿನಿಮಾ ನಿರ್ಮಿಸಲಾಗಿತ್ತು. ಆದರೆ ಹಲವು ಪಟ್ಟು ಸಿನಿಮಾ ಲಾಭ ಮಾಡಿತ್ತು. ಬರೋಬ್ಬರಿ 2.5 ಕೋಟಿ ರೂ. ಗಳಿಕೆ ಕಂಡಿತ್ತು ಎನ್ನುವ ಅಂದಾಜಿದೆ. ಇವತ್ತಿನ ಲೆಕ್ಕದಲ್ಲಿ ಕಲೆಕ್ಷನ್ 100 ಕೋಟಿ ರೂ.ಗೂ ಹೆಚ್ಚು ಎನ್ನಬಹುದು.

ಇದನ್ನೂ ಓದಿ: Jai Sriram Slogan: ಜೈ ಶ್ರೀರಾಮ್‌ ಹೇಳಿದ್ದಕ್ಕೆ ಮುಸ್ಲಿಂ ಯುವಕರಿಂದ ಹಲ್ಲೆ; ಇನ್ನೊಂದು ಘಟನೆ

ಗಂಧದಗುಡಿ ( GANDHADA GUDI)

ಕನ್ನಡ ನಾಡಿನ ಹಚ್ಚ ಹಸಿರು, ವನ್ಯಜೀವಿಗಳ ಲೋಕ, ಅರಣ್ಯ ಸಂರಕ್ಷಣೆಯ ಮಹತ್ವವನ್ನು ಸಾರಿದ ಗಂಧದಗುಡಿ 1973ರ ಸೆಪ್ಟಂಬರ್‌ನಲ್ಲಿ ಬಿಡುಗಡೆಯಾಗಿತ್ತು. ಕನ್ನಡ ಚಿತ್ರರಂಗದಲ್ಲಿ ನಟರಾಗಿ ನಂತರ ನಿರ್ಮಾಪಕರಾಗಿ ಬೆಳೆದವರು ಮೈಸೂರಿನವೇ ಆದ ಎಂ.ಪಿ.ಶಂಕರ್‌. ಅವರಿಗೂ ಕಾಡಿನ ಕುರಿತು ಏನಾದರೂ ಸಿನೆಮಾ ಮಾಡಬೇಕು ಎನ್ನುವ ಬಯಕೆ. ಅದಕ್ಕಾಗಿ 1969ರಲ್ಲಿ ಕಾಡಿನ ರಹಸ್ಯ ಎನ್ನುವ ಚಿತ್ರ ಮಾಡಿದ್ದರು. 1972ರಲ್ಲಿಯೇ ಮೈಸೂರು ಜಿಲ್ಲೆಯ ನಾಗರಹೊಳೆ, ಬಂಡೀಪುರ ಪ್ರದೇಶದಲ್ಲಿ ಶೂಟಿಂಗ್‌. ರಾಜಕುಮಾರ್‌ ಜತೆಗೆ ವಿಷ್ಣುವರ್ಧನ್‌ ಕೂಡ ಇದ್ದರು. ದೊಡ್ಡ ತಾರಾಗಣದ ಚಿತ್ರ. ವಿಜಯ್‌ ನಿರ್ದೇಶನ. ಡಿ.ವಿ.ರಾಜಾರಾಂ ಅವರ ಕ್ಯಾಮರಾ. ರಾಜನ್‌ ನಾಗೇಂದ್ರ ಅವರ ಸಂಗೀತವಿದ್ದ ಚಿತ್ರ.

ಭಕ್ತ ಕುಂಬಾರ

ಹುಣಸೂರು ಕೃಷ್ಣಮೂರ್ತಿ ನಿರ್ದೇಶಿಸಿದ 1974 ರ ಕನ್ನಡ ಚಲನಚಿತ್ರವಾಗಿದೆ. ಚಿತ್ರದಲ್ಲಿ ರಾಜಕುಮಾರ್ ಮತ್ತು ಲೀಲಾವತಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಜಿ ಕೆ ವೆಂಕಟೇಶ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಕರ್ನಾಟಕದಲ್ಲಿ ಅದ್ಭುತ ಯಶಸ್ಸಿನ ನಂತರ ಈ ಚಿತ್ರವನ್ನು ನಂತರ ತೆಲುಗಿನಲ್ಲಿ ವಿ. ಮಧುಸೂಧನ್ ರಾವ್ ಅವರು ʻಚಕ್ರಧಾರಿʼ ಎಂದು ಸಿನಿಮಾ ಮಾಡಿದರು. 1977ರಲ್ಲಿ ಅಕ್ಕಿನೇನಿ ನಾಗೇಶ್ವರ ರಾವ್ ನಟಿಸಿದರು.
ಗೋರಾ ಪಾತ್ರದಲ್ಲಿ ಡಾ ರಾಜ್‌ಕುಮಾರ್, ಗೋರ ಪತ್ನಿಯಾಗಿ ಲೀಲಾವತಿ, ಸಂತ ಜ್ಞಾನದೇವನಾಗಿ ರಾಜಶಂಕರ್,
ಗೋರನ ನೆರೆಯವನಾಗಿ ಬಾಲಕೃಷ್ಣ, ಕೃಷ್ಣನಾಗಿ ವಜ್ರಮುನಿ ಪಾತ್ರ ನಿಭಾಯಿಸಿದ್ದರು.
ನಿರ್ದೇಶಕ: ಹುಣಸೂರು ಕೃಷ್ಣಮೂರ್ತಿ
ನಿರ್ಮಾಪಕ: ಲಕ್ಷ್ಮಿ ಫಿಲ್ಮ್ಸ್ ಕಂಬೈನ್ಸ್
ಸಂಗೀತ ನಿರ್ದೇಶಕ: ಜಿ ಕೆ ವೆಂಕಟೇಶ್

ಮಯೂರ (Mayura)

ಮಯೂರ 975 ರ ಕನ್ನಡ ಐತಿಹಾಸಿಕ ನಾಟಕ ಚಲನಚಿತ್ರವಾಗಿದೆ. ಇಂದಿನ ಆಧುನಿಕ ಕರ್ನಾಟಕ ರಾಜ್ಯವನ್ನು ಆಳುವ ಸಾಮ್ರಾಜ್ಯವಾದ ಕದಂಬ ರಾಜವಂಶದ ರಾಜಕುಮಾರ ಮಯೂರಶರ್ಮಾ ಪಾತ್ರವನ್ನು ನಿರ್ವಹಿಸಿದ್ದರು ರಾಜ್‌. ರಾಜ್‌ಕುಮಾರ್ ಅವರ ಅತ್ಯಂತ ಜನಪ್ರಿಯ ಚಲನಚಿತ್ರಗಳಲ್ಲಿ ಇದು ಒಂದಾಗಿದೆ. ಈ ಚಿತ್ರವು ಬ್ರಾಹ್ಮಣ ಯುವಕನಾದ ಮಯೂರನ ಜೀವನವನ್ನು ಚಿತ್ರಿಸುತ್ತದೆ. ಮಯೂರನಾಗಿ ರಾಜಕುಮಾರ್, ಪಲ್ಲವರ ಯುವರಾಜನಾಗಿ ಶ್ರೀನಾಥ್, ರಾಜಕುಮಾರ ವಿಷ್ಣುಗೋಪನಾಗಿ ವಜ್ರಮುನಿ ಪಾತ್ರ ನಿಭಾಯಿಸಿದ್ದರು.
ನಿರ್ದೇಶಕ: ವಿಜಯ್
ನಿರ್ಮಾಪಕ: ಟಿ.ಪಿ. ವೇಣುಗೋಪಾಲ್
ಸಂಗೀತ ನಿರ್ದೇಶಕ: ಜಿ ಕೆ ವೆಂಕಟೇಶ್

ಸನಾದಿ ಅಪ್ಪಣ್ಣ (1977) (sanaadi appanna)

ಸನಾದಿ ಅಪ್ಪಣ್ಣ (ಸನಾದಿ ಅಪ್ಪಣ್ಣ) ವಿಜಯ್ ನಿರ್ದೇಶಿಸಿದ 1977ರ ಭಾರತೀಯ ಕನ್ನಡ ಚಲನಚಿತ್ರವಾಗಿದ್ದು, ಕೃಷ್ಣಮೂರ್ತಿ ಪುರಾಣಿಕ್ ಅವರ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿದೆ. ‘ಸನಾದಿ ಅಪ್ಪಣ್ಣ’ ಚಿತ್ರವು ಕೃಷ್ಣಮೂರ್ತಿ ಪುರಾಣಿಕ್ ಅವರ ‘ಕುಣಿಯಿತು ಹೆಜ್ಜೆ ನಲಿಯಿತು ಗೆಜ್ಜೆ’ ಕಾದಂಬರಿಯನ್ನು ಆಧರಿಸಿದ್ದು. ಈ ಕಥೆಯ ಹಂದರ ಬಾಗಲಕೋಟೆಯ ಶಹನಾಯಿ ವಾದಕ ಅಪ್ಪಣ್ಣನವರ ಜೀವನ ವೃತ್ತಾಂತವನ್ನು ಒಳಗೊಂಡಿರುವಂತಹುದು. ವಿಜಯ್ ಅವರು ಈ ಚಿತ್ರವನ್ನು ನಿರ್ದೇಶಿಸಿದ್ದು, ಜಿ.ಕೆ.ವೆಂಕಟೇಶ್ ಅವರ ಸಂಗೀತ ನಿರ್ದೇಶನವಿದೆ. ಶಹನಾಯಿ ವಾದಕ ಅಪ್ಪಣ್ಣನ ಪಾತ್ರದಲ್ಲಿ ರಾಜಕುಮಾರ್ ಅವರು ತೆರೆಯನ್ನು ಆವರಿಸಿಕೊಂಡರೆ, ಚಿತ್ರದುದ್ದಕ್ಕೂ ಶಹನಾಯಿಯ ವಾದನವನ್ನು ಹಿನ್ನೆಲೆಯಲ್ಲಿ ಮಾಡಿರುವವರು ಬಿಸ್ಮಿಲ್ಲಾ ಖಾನ್.

ಇದನ್ನೂ ಓದಿ: Actor Rajinikanth: ಲೋಕೇಶ್ ಕನಕರಾಜ್-ರಜನಿ ಸಿನಿಮಾಗೆ ಟಾಲಿವುಡ್‌ ಖ್ಯಾತ ನಟ ಭರ್ಜರಿ ಎಂಟ್ರಿ?

ಪಾತ್ರವರ್ಗ ಮತ್ತು ಸಿಬ್ಬಂದಿ:
ಅಪ್ಪಣ್ಣನಾಗಿ ರಾಜ್‌ಕುಮಾರ್, ಬಸಂತಿಯಾಗಿ ಜಯಪ್ರದಾ, ರಾವ್ ಅಪ್ಪಣ್ಣನ ಮಗನಾಗಿ ಅಶೋಕ್, ಅಪಶ್ರುತಿ ಅಯ್ಯಣ್ಣನಾಗಿ ಬಾಲಕೃಷ್ಣ, ಯುವಕ ಅಶೋಕ್ ಪಾತ್ರದಲ್ಲಿ ಪುನೀತ್ ರಾಜ್‌ಕುಮಾರ್
ನಿರ್ದೇಶಕ: ಎಚ್.ಆರ್.ಭಾರ್ಗವ
ನಿರ್ಮಾಪಕ: ದ್ವಾರಕೀಶ್
ಸಂಗೀತ ನಿರ್ದೇಶಕ: ರಾಜನ್-ನಾಗೇಂದ್ರ

ಬಬ್ರುವಾಹನ (Babruvahana )

ಬಬ್ರುವಾಹನ 1977 ರಲ್ಲಿ ಬಿಡುಗಡೆಯಾದ ಪೌರಾಣಿಕ ಕನ್ನಡ ಚಲನಚಿತ್ರ. ಮೇಕಿಂಗ್ ಮತ್ತು ಸಂಗೀತಕ್ಕೆ ಹೆಸರುವಾಸಿಯಾದ ಸಿನಿಮಾ. ರಾಜ್‌ಕುಮಾರ್ ಅವರೇ ಹಾಡಿರುವ ‘ಈ ಸಮಯ ಆನಂದಮಯ’, ‘ಆರಾಧಿಸುವೆ ಮದನಾರಿ’ ಮತ್ತು ‘ಬರಸಿಡಿಲು ಬಡಿದನಾಥೆ’ ನಂತಹ ಕೆಲವು ಹಾಡುಗಳು ಸಖತ್‌ ಹಿಟ್‌ ಕಂಡವು. ಅರ್ಜುನ ಮತ್ತು ಮಗ ಬಬ್ರುವಾಹನ ಪಾತ್ರದಲ್ಲಿ ರಾಜ್‌ಕುಮಾರ್ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಬಿ ಸರೋಜಾದೇವಿ ಚಿತ್ರಾಂಗದೆಯಾಗಿ ಕಾಣಿಸಿಕೊಂಡಿದ್ದರು. ಹುಣಸೂರು ಕೃಷ್ಣಮೂರ್ತಿ ಅವರ ನಿರ್ದೇಶನ ಮತ್ತು ಚಿತ್ರಕಥೆಯನ್ನು ಒಳಗೊಂಡಿರುವ ಈ ಚಿತ್ರವನ್ನು ಕೆಸಿಎನ್ ಚಂದ್ರಶೇಖರ್ ನಿರ್ಮಿಸಿದ್ದಾರೆ.

ಪಾತ್ರವರ್ಗ ಮತ್ತು ಸಿಬ್ಬಂದಿ:
ರಾಜಕುಮಾರ್, ಬಿ.ಸರೋಜಾದೇವಿ, ಕಾಂಚನಾ, ಜಯಮಾಲಾ, ವಜ್ರಮುನಿ, ರಾಮಕೃಷ್ಣ, ತೂಗುದೀಪ ಶ್ರೀನಿವಾಸ್.
ನಿರ್ದೇಶಕ: ಹುಣಸೂರು ಕೃಷ್ಣ ಮೂರ್ತಿ
ನಿರ್ಮಾಪಕ: ರಾಜಕಮಲ್ ಆರ್ಟ್ಸ್
ಸಂಗೀತ ನಿರ್ದೇಶಕ: ಟಿ.ಜಿ. ಲಿಂಗಪ್ಪ

ಕವಿರತ್ನ ಕಾಳಿದಾಸ (1983)

ಕವಿರತ್ನ ಕಾಳಿದಾಸ 1983ರ ಕನ್ನಡ ಐತಿಹಾಸಿಕ ಚಲನಚಿತ್ರ. 4 ನೇ ಶತಮಾನದ ಶಾಸ್ತ್ರೀಯ ಸಂಸ್ಕೃತ ಬರಹಗಾರ ಕಾಳಿದಾಸನ ಜೀವನವನ್ನು ಆಧರಿಸಿದೆ. ತ್ತು. ಈ ಚಿತ್ರವನ್ನು ರೇಣುಕಾ ಶರ್ಮಾ ಬರೆದು ನಿರ್ದೇಶಿಸಿದ್ದಾರೆ. ವಿ ಎಸ್ ಗೋವಿಂದ ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ರಾಜ್‌ಕುಮಾರ್ ಅವರು ಕಾಳಿದಾಸನ ಪಾತ್ರದಲ್ಲಿ ನಟಿಸಿದ್ದಾರೆ. ಜೊತೆಗೆ ಜಯಪ್ರದಾ ಅವರು ವಿದ್ಯಾಧರೆಯಾಗಿ ಮತ್ತು ಶ್ರೀನಿವಾಸ ಮೂರ್ತಿ ರಾಜ ಭೋಜ ಪಾತ್ರದಲ್ಲಿ ನಟಿಸಿದ್ದರು. ‘ವಜ್ರೇಶ್ವರಿ ಕಂಬೈನ್ಸ್’ ಬ್ಯಾನರ್ ಅಡಿಯಲ್ಲಿ ಪಾರ್ವತಮ್ಮ ರಾಜ್‌ಕುಮಾರ್ ವಿತರಿಸಿದ್ದರು.

ಪಾತ್ರವರ್ಗ ಮತ್ತು ಸಿಬ್ಬಂದಿ: ಕಾಳಿದಾಸನಾಗಿ ರಾಜ್‌ಕುಮಾರ್, ವಿಧ್ಯಾಧಾರೆಯಾಗಿ ಜಯಪ್ರದ, ರಾಜ ಭೋಜನಾಗಿ ಶ್ರೀನಿವಾಸ ಮೂರ್ತಿ. ನಿರ್ದೇಶಕರು: ರೇಣುಕಾ ಶರ್ಮಾ ನಿರ್ಮಾಪಕ: ವಿ ಎಸ್ ಗೋವಿಂದ ಸಂಗೀತ ನಿರ್ದೇಶಕ: ಎಂ.ರಂಗರಾವ್

ಜೀವನ ಚೈತ್ರ (1992) (Jeevana Chaitra)

ಜೀವನ ಚೈತ್ರ 1992ರಲ್ಲಿ ಬಿಡುಗಡೆಯಾದ ಸಿನಿಮಾ. ದೊರೈ- ಭಗವಾನ್ ಈ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಮದ್ಯಪಾನದ ದುಷ್ಪರಿಣಾಮಗಳ ಬಗ್ಗೆ ಚಿತ್ರದಲ್ಲಿ ಸಾಮಾಜಿಕ ಕಳಕಳಿಯ ಸಂದೇಶವಿದೆ. ಮದ್ಯಸೇವನೆಯ ವಿರುದ್ಧ ಹೋರಾಡುವ ಪಾತ್ರದಲ್ಲಿ ಡಾ ರಾಜ್‌ಕುಮಾರ್ ಅಭಿನಯಿಸಿದ್ದಾರೆ. ಮಾಧವಿ ಈ ಚಿತ್ರದ ನಾಯಕಿ. ಇದು ಒಂದು ರೀತಿಯಲ್ಲಿ ಅಣ್ಣಾವ್ರ ಕಂಬ್ಯಾಕ್‌ ಸಿನಿಮಾವೂ ಆಗಿತ್ತು.ಇದು ಕಾದಂಬರಿ ಆಧರಿತ ಸಿನಿಮಾ. ವಿಶಾಲಾಕ್ಷಿ ದಕ್ಷಿಣಾಮೂರ್ತಿಯವರ ಜೀವನಚೈತ್ರ ಕಾದಂಬರಿಯೇ ಸಿನಿಮಾವಾಗಿತ್ತು.

ಪಾತ್ರವರ್ಗ ಮತ್ತು ಸಿಬ್ಬಂದಿ:
ಡಾ ರಾಜಕುಮಾರ್, ಮಾಧವಿ, ಕೆ.ಎಸ್.ಅಶ್ವಥ್, ಪಂಡರಿ ಬಾಯಿ
ನಿರ್ದೇಶಕ: ದೊರೈ – ಭಗವಾನ್
ನಿರ್ಮಾಪಕಿ: ಪಾರ್ವತಮ್ಮ ರಾಜ್‌ಕುಮಾರ್
ಸಂಗೀತ ನಿರ್ದೇಶಕ: ಉಪೇಂದ್ರ ಕುಮಾರ್

ಆಕಸ್ಮಿಕ (1993) Aakasmika

1993 ರ ಕನ್ನಡ ಆಕ್ಷನ್-ಡ್ರಾಮಾ ಚಲನಚಿತ್ರವಾಗಿದ್ದು, ಇದನ್ನು ನಾಗಾಭರಣ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ರಾಜಕುಮಾರ್, ಗೀತಾ ಮತ್ತು ಮಾಧವಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಹಂಸಲೇಖ ಸಂಗೀತ ಜತೆಗೆ ಸಾಹಿತ್ಯವನ್ನು ಬರೆದಿದ್ದಾರೆ. ʻಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು..’ ಹಾಡು ಕೇಳಿದರೆ ಎಂಥವರಿಗಾದರೂ ಒಮ್ಮೆ ರೋಮಾಂಚನ ಆಗುತ್ತದೆ. ಈ ಹಾಡಿಗೆ ಇರುವ ತಾಕತ್ತು ಅಂಥದ್ದು. ಹಾಡಿನ ಪ್ರತಿ ಸಾಲುಗಳು ಕನ್ನಡ ನಾಡಿನ ಬಗ್ಗೆ ಇರುವುದು ಒಂದು ವಿಶೇಷವಾದರೆ, ರಾಜ್​ಕುಮಾರ್ ಅವರ ಕಂಠದಲ್ಲಿ ಈ ಸಾಂಗ್ ಮೂಡಿ ಬಂದಿದೆ ಅನ್ನೋದು ಮತ್ತೊಂದು ವಿಶೇಷ. ಈ ಸಿನಿಮಾದ ಹಿಟ್‌ ಸಾಂಗ್‌ ಇದು.

ರಾಜ್​ಕುಮಾರ್ ರಿಯಲ್ ಹೀರೊ

ತಾವು ಮಾಡುವ ಪಾತ್ರಗಳು ಸಮಾಜಕ್ಕೆ ಕೆಟ್ಟ ಸಂದೇಶ ನೀಡಬಾರದು ಅನ್ನೋ ಕಾಳಜಿ ರಾಜ್ ಕುಮಾರ್ ಅವರಿಗೆ ಇತ್ತು. ಹೀಗಾಗಿಯೇ ಸಿನಿಮಾಗಳಲ್ಲಿ ರಾಜ್ ಕುಡಿದಿಲ್ಲ, ಸಿಗರೇಟ್ ಸೇದಿಲ್ಲ, ರೇಪ್ ಸೀನ್, ಕಿಸ್ಸಿಂಗ್ ಸೀನ್ ಗಳಲ್ಲಿ ನಟಿಸಿಲ್ಲ. ಅದಷ್ಟೇ ಸಂಭಾವನೆ ಕೊಟ್ಟರೂ ನಾನು ಇಂತ ಪಾತ್ರಗಳಲ್ಲಿ ನಟಿಸಲ್ಲ ಎಂದು ಅವರು ಕಡ್ಡಿ ಮುರಿದಂತೆ ಹೇಳಿದ್ದರು. ಪಾತ್ರಗಳಿಗೆ ಜೀವ ತುಂಬುವ ರಾಜ್ ಅದಕ್ಕಾಗಿ ಕಠಿಣ ನಿಯಮಗಳನ್ನು ಪಾಲಿಸುತ್ತಿದ್ದರು. ‘ಮಂತ್ರಾಲಯ ಮಹಾತ್ಮೆ’ ಸಿನಿಮಾಕ್ಕಾಗಿ ಅವರು ಬಾಡೂಟವನ್ನೇ ಬಿಟ್ಟಿದ್ದರು.

Continue Reading

ಪ್ರಮುಖ ಸುದ್ದಿ

Rajkumar Birthday: ಸೋತಾಗ ಧೈರ್ಯ ತುಂಬುವ ಅಣ್ಣಾವ್ರ 7 ಹಾಡುಗಳು!

ವರನಟ, ಗಾನಗಂಧರ್ವ ಡಾ.ರಾಜ್‌ಕುಮಾರ್‌ ಅವರು ಕನ್ನಡಿಗರಿಗೆ ಸದಾ ಕಾಲ ಸ್ಫೂರ್ತಿ ನೀಡುವಂಥ ನೂರಾರು ಹಾಡುಗಳನ್ನು ಕೊಟ್ಟು ಹೋಗಿದ್ದಾರೆ. ಅವುಗಳಲ್ಲಿ ಬೆಸ್ಟ್‌ ಅನಿಸುವ 7 ಹಾಡುಗಳು ಇಲ್ಲಿವೆ. ಇದು ಡಾ.ರಾಜ್‌ ಬರ್ತ್‌ಡೇ ವಿಶೇಷ.

VISTARANEWS.COM


on

Koo

1. ಯಾರೇ ಕೂಗಾಡಲಿ ಊರೇ ಹೋರಾಡಲಿ

ʼಸಂಪತ್ತಿಗೆ ಸವಾಲ್‌ʼ ಚಿತ್ರದಲ್ಲಿ ಅಣ್ಣಾವ್ರು ಎಮ್ಮೆಯ ಮೇಲೆ ಕುಳಿತು ಹಾಡುತ್ತಾ ಸಾಗುವ ಈ ದೃಶ್ಯ ಕನ್ನಡ ಚಲನಚಿತ್ರ ರಂಗದ ಐಕಾನಿಕ್‌ ಅನಿಸುವ ಹಾಡು. ʼಬಿಸಿಲು ಮಳೆಗೆ ಬಿರುಗಾಳಿ ಚಳಿಗೆ ನೀ ಅಳುಕದೆ ಮುಂದೆ ಸಾಗುವೆʼ ಎಂದು ಎಮ್ಮೆಯ ನೆಮ್ಮದಿಯ ಸೂತ್ರವನ್ನು ಮನುಷ್ಯನಿಗೆ ಅನ್ವಯಿಸಿ, ಪ್ರಾಣಿಗಳ ಗುಣಗಳಿಂದ ಮನುಷ್ಯರು ಕಲಿಯಬೇಕಾದ್ದನ್ನು ಉದಾಹರಿಸಿ ಹಾಡಿದ್ದಾರೆ.

2. ನಗುತನಗುತ ಬಾಳು ನೀನು ನೂರು ವರುಷ
ʼಪರಶುರಾಮ್‌ʼ ಫಿಲಂನ ʼನಗುತಾ ನಗುತಾ ಬಾಳು ನೀನು ನೂರು ವರುಷʼ ಹಾಡು ಕನ್ನಡದ ಎರಡು ಬೆಲೆಬಾಳುವ ಮುತ್ತುಗಳನ್ನು ಒಳಗೊಂಡ ಮಾಣಿಕ್ಯ. ಇದರಲ್ಲಿ ವರನಟ ರಾಜ್‌ ಅವರು ಮುದ್ದು ಬಾಲನಟ ಪುನೀತ್‌ ರಾಜ್‌ಕುಮಾರ್‌ಗೆ ಬರ್ತ್‌ಡೇ ಕೇಕ್‌ ತಿನ್ನಿಸುತ್ತಾ ಹಾಡುತ್ತಾರೆ. ʼದೇವರು ತಂದ ಸೃಷ್ಟಿಯ ಅಂದ ಎಲ್ಲರು ನಗಲೆಂದೇʼ ಎಂಬಂಥ ಅರ್ಥಪೂರ್ಣವಾದ ಸಾಲುಗಳನ್ನು ಇದು ಒಳಗೊಂಡಿದೆ.

3. ಬಾನಿಗೊಂದು ಎಲ್ಲೆ ಎಲ್ಲಿದೆ
ʼಬೆಳದಿಂಗಳಾಗಿ ಬಾʼ ಚಲನಚಿತ್ರದಲ್ಲಿ ನಾಯಕಿ ಆರತಿ ಅವರಿಗೆ ಡಾ.ರಾಜ್‌ ಬುದ್ಧಿವಾದ ಹೇಳುವ ಹಾಡು ಇದು. ಚಿಕ್ಕಮಗಳೂರಿನ ಹಸಿರು ಸಿರಿಯ ನಡುವೆ ಕಾರು ಚಲಾಯಿಸುತ್ತಾ ʼಆಸೆಯೆಂಬ ಬಿಸಿಲು ಕುದುರೆ ಏಕೆ ಏರುವೆʼ ʼಹೂವೂ ಮುಳ್ಳೂ ಎರಡೂ ಉಂಟು ನಮ್ಮ ಬಾಳಲಿʼ ಎಂದು ಹಾಡುತ್ತಾ ಸಾಗುವ ಈ ದೃಶ್ಯ ಮನಮೋಹಕವಾಗಿದೆ.

4. ಬಾಳುವಂಥ ಹೂವೆ ಬಾಡುವಾಸೆ ಏಕೆ?
ʼಆಕಸ್ಮಿಕʼ ಚಲನಚಿತ್ರದಲ್ಲಿ ಅಣ್ಣಾವ್ರು ನಾಯಕಿ ಮಾಧವಿಗೆ ಬುದ್ಧಿ ಹೇಳುವ ಹಾಡು ʼಬಾಳುವಂಥ ಹೂವೆ ಬಾಡುವಾಸೆ ಏಕೆ?ʼ ʼಯಾರಿಗಿಲ್ಲ ನೋವು, ಯಾರಿಗಿಲ್ಲ ಸಾವು, ವ್ಯರ್ಥವ್ಯಸನದಿಂದ ಸಿಹಿಯು ಕೂಡ ಬೇವುʼ ʼಮೂಕ ಮುಗ್ಧ ದೇಹವ ಹಿಂಸಿಸುವುದು ಹೇಯʼ ʼಸಣ್ಣ ಬಿರುಕು ಸಾಲದೇ ತುಂಬು ದೋಣಿ ತಳ ಸೇರಲು?ʼ ಎಂಬಂಥ ಸಾರ್ವಕಾಲಿಕವಾದ ನೀತಿಮುತ್ತುಗಳನ್ನು ಹೇಳುತ್ತಾರೆ.

5. ಜಗವೇ ಒಂದು ರಣರಂಗ ಧೈರ್ಯ ಇರಲಿ ನಿನ್ನ ಸಂಗ
ಶಿವರಾಜ್‌ ಕುಮಾರ್‌ ಅವರು ನಟಿಸಿರುವ ʼರಣರಂಗʼ ಚಿತ್ರಕ್ಕೆ ಡಾ.ರಾಜ್‌ ಅವರು ಹಾಡಿರುವ ಹಾಡು ಇದು. ಇದರ ಬೀಟ್‌ ಹಾಗೂ ಒಕ್ಕಣೆಗಳು ಎಂಥವನನ್ನೂ ಹೋರಾಡಲು ಪ್ರಚೋದಿಸುವಂತಿವೆ. ಹಿಡಿಯೋ ಆತ್ಮಬಲದಸ್ತ್ರ, ಅದುವೇ ಜಯದ ಮಹಾ ಮಂತ್ರ, ನಿನ್ನ ದಾರಿಯಲ್ಲಿ ಎಲ್ಲೂ ಸೋಲೇ ಇಲ್ಲ, ಬಾಳ ಯುದ್ಧದಲ್ಲಿ ನಿನ್ನ ಗೆಲ್ಲೋರಿಲ್ಲ, ಛಲವೇ ಬಲವು ಮುಂದೆ ನುಗ್ಗಿ ನುಗ್ಗಿ ಬಾʼ ಎಂದು ಧೈರ್ಯ ತುಂಬುತ್ತಾರೆ ಇದರಲ್ಲಿ.

6. ನಾನಿರುವುದೆ ನಿಮಗಾಗಿ ನಾಡಿರುವುದೆ ನಮಗಾಗಿ
ಕನ್ನಡ ನಾಡಿನ ಮೊದಲ ಸಾಮ್ರಾಟ ಕದಂಬರ ಮಯೂರವರ್ಮನಾಗಿ ʼಮಯೂರʼ ಫಿಲಂನಲ್ಲಿ ನಟಿಸಿದ ರಾಜ್‌, ʼನಾನಿರುವುದೆ ನಿಮಗಾಗಿ, ನಾಡಿರುವುದೆ ನಮಗಾಗಿ, ಕಣ್ಣೀರೇಕೆ, ಬಿಸಿಯುಸಿರೇಕೆ, ಬಾಳುವಿರೆಲ್ಲ ಹಾಯಾಗಿʼ, “ಒಂದೇ ನಾಡಿನ ಮಕ್ಕಳು ನಾವು ಸೋದರರಂತೆ ನಾವೆಲ್ಲಾʼʼ ಎಂದು ಧೈರ್ಯ ಹೇಳಿದ್ದು ಒಂದು ಕಾಲದ ನಾಡಿನ ಜನತೆಯಲ್ಲಿ ಧೈರ್ಯವನ್ನು ತುಂಬುವ ನಾಯಕ ಗುಣವನ್ನು ಸ್ಪಷ್ಟವಾಗಿ ಚಿತ್ರಿಸಿತು.

7. ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು
ʼಜೀವನಚೈತ್ರʼ ಚಿತ್ರದಲ್ಲಿ ಹಳದಿ ಪೇಟ ಕಟ್ಟಿಕೊಂಡು ಜಟಕಾ ಬಂಡಿಯನ್ನು ಹೊಡೆಯುತ್ತಾ ಅಣ್ಣಾವ್ರು ಸಾಗುವ ಈ ಹಾಡು ಐತಿಹಾಸಿಕ, ಕನ್ನಡ ಹೋರಾಟಕ್ಕೆ ಸದಾ ಸ್ಫೂರ್ತಿ ತುಂಬುವ ಒಂದು ಹಾಡು. ʼʼಕಲಿಯೋಕೆ ಕೋಟಿ ಭಾಷೆ, ಆಡೋಕೆ ಒಂದೇ ಭಾಷೆ, ಕನ್ನಡ, ಕಸ್ತೂರಿ ಕನ್ನಡʼ ಎಂದು ಅವರು ಸಾರಿದ್ದು ಇಂದೂ ಮುಂದೂ ಕನ್ನಡ ನಾಡಿನ ಆತ್ಮಗೀತೆಯಂತೆ ಇದ್ದೇ ಇರುತ್ತದೆ, ನಮಗೆ ಸ್ಫೂರ್ತಿ ತುಂಬುವಂತಿದೆ.

ಇದನ್ನೂ ಓದಿ: Dr.Rajkumar Memory: ಪ್ಯಾನ್‌ ಇಂಡಿಯಾ ಫಿಲಂಗಳ ಕಾಲದಲ್ಲಿ ಅಣ್ಣಾವ್ರ ಚಿತ್ರ ನೋಡೋಕೆ 8 ಕಾರಣಗಳು

Continue Reading

ಪ್ರಮುಖ ಸುದ್ದಿ

Rajkumar Birthday : ಇಂದು ಡಾ. ರಾಜ್​ಕುಮಾರ್ ಜನುಮದಿನ; ವರನಟನಿಗೆ ಕನ್ನಡಿಗರ ನಮನ

Rajkumar Birthday: ಮಹಾನ್​ ಚೇತನ್​ ರಾಜಣ್ಣ ಹುಟ್ಟಿದ್ದು 1929, ಏಪ್ರಿಲ್ 24ರಂದು. ಅವರು ಪುಟ್ಟಸ್ವಾಮಯ್ಯ ಹಾಗೂ ಲಕ್ಷ್ಮಮ್ಮ ದಂಪತಿ ಹಿರಿಮಗ. ಅನಕ್ಷರಸ್ಥ ಕುಟುಂಬದಲ್ಲಿ ಜನಿಸಿದ ಡಾ.ರಾಜ್ ಅವರ ಶಿಕ್ಷಣ ನಾಲ್ಕನೇ ಕ್ಲಾಸ್​ಗೆ ಮುಗಿದು ಹೋಗಿತ್ತು. ಆದರೆ, ಅವರು ಆಳಿದ್ದು ಕನ್ನಡ ಮಾತ್ರವಲ್ಲ, ಇಡೀ ಭಾರತೀಯ ಚಿತ್ರ ರಂಗವನ್ನು. ಸಿನಿಮಾ ಕ್ಷೇತ್ರದಲ್ಲಿ ಅವರಿಗೆ ಸರಿಸಾಟಿಯಾದ ಇನ್ನೊಬ್ಬರಿಲ್ಲ.

VISTARANEWS.COM


on

, Dr. Rajkumar's birthday
Koo

ಕನ್ನಡದ ಕುಲಪುತ್ರ ದಿವಂಗತ ಡಾ. ರಾಜ್ ಕುಮಾರ್ (Dr. Rajkumar) ಎಂದರೆ ಅದು ಕೇವಲ ವ್ಯಕ್ತಿಯಲ್ಲ. ಅವರು ಕನ್ನಡ (Kannada) ಕಲಾರಸಿಕರ ಹೃದಯ ಸಾಮ್ರಾಟ. ಕನ್ನಡಿಗರಿಗೆಲ್ಲರಿಗೂ ಅವರೊಂದು ಶಕ್ತಿ. ಅವರು ಕನ್ನಡ ಭಾಷೆಯ ಅಸ್ಮಿತೆ. ಮೇರುನಟನಾಗಿ, ಹೆಮ್ಮೆಯ ಕನ್ನಡಿಗನಾಗಿ ಬಾಳಿ ಬದುಕಿದ ವರನಟ ದಿವಂಗತ ಡಾ.ರಾಜಕುಮಾರ್ ಅವರಿಗೆ ಇಂದು 95ನೇ ಜನುಮ ದಿನದ ಸಂಭ್ರಮ (Dr Rajkumar Birthday). ಚಲನಚಿತ್ರ ರಂಗ ಹಾಗೂ ನಿಜಜೀವನದಲ್ಲಿ ಆದರ್ಶವಾಗಿದ್ದ ಅವರಿಗೆ ಹ್ಯಾಪಿ ಬರ್ತ್​​ಡೇ ಹೇಳೋಣ. ಜತೆಗೆ ಅವರ ಸಾಧಕ ಹೆಜ್ಜೆಗಳನ್ನು ಸ್ಮರಿಸೋಣ.

ಚಾಮರಾಜನಗರದ ಸಿಂಗಾನಲ್ಲೂರು ಎಂಬ ಗ್ರಾಮದಲ್ಲಿ ಹುಟ್ಟಿದ್ದ ಮುತ್ತುರಾಜನನ್ನು ಕಾಲಕ್ರಮೇಣ ರಾಜ್​ಕುಮಾರ್​ ಎಂಬ ಅಜರಾಮರ ಹೆಸರಿನಿಂದ ಕರೆದಿದ್ದು ಅವರ ಅಭಿಮಾನಿ ದೇವರುಗಳು. ಇಂಥ ಮಹಾನ್​ ಚೇತನ​ ಹುಟ್ಟಿದ್ದು 1929, ಏಪ್ರಿಲ್ 24ರಂದು. ಅವರು ಪುಟ್ಟಸ್ವಾಮಯ್ಯ ಹಾಗೂ ಲಕ್ಷ್ಮಮ್ಮ ದಂಪತಿ ಹಿರಿಮಗ. ಅನಕ್ಷರಸ್ಥ ಕುಟುಂಬದಲ್ಲಿ ಜನಿಸಿದ ಡಾ.ರಾಜ್ ಅವರ ಶಿಕ್ಷಣ ನಾಲ್ಕನೇ ಕ್ಲಾಸ್​ಗೆ ಮುಗಿದು ಹೋಗಿತ್ತು. ಆದರೆ, ಅವರು ಆಳಿರುವುದು ಕನ್ನಡ ಮಾತ್ರವಲ್ಲ, ಇಡೀ ಭಾರತೀಯ ಚಿತ್ರ ರಂಗವನ್ನು. ಭಾರತೀಯ ಸಿನಿಮಾ ಕ್ಷೇತ್ರದಲ್ಲಿ ಅವರಿಗೆ ಸರಿಸಾಟಿಯಾದ ಇನ್ನೊಬ್ಬರಿಲ್ಲ ಎಂಬುದಕ್ಕೆ ಅವರ ಸಿನಿಮಾ ಮತ್ತು ಜೀವನವೇ ಸಾಕ್ಷಿ.

ಮೊದಲ ಚಿತ್ರ ‘ಬೇಡರ ಕಣ್ಣಪ್ಪ’

ಡಾ. ರಾಜ್​ಕುಮಾರ್ ಅವರು ಚಲನಚಿತ್ರ ಕ್ಷೇತ್ರಕ್ಕೆ ಪ್ರವೇಶ ಮಾಡುವುದಕ್ಕೆ ಮೊದಲೇ ಕಲಾರಾಧಕ. ರಾಜ್ ಅವರ ತಂದೆ ರಂಗಭೂಮಿ ಕಲಾವಿದರಾಗಿದ್ದರಿಂದ ಬಣ್ಣದ ನಂಟು ಅವರಿ ಜನ್ಮದತ್ತವಾಗಿ ದೊರಕಿತ್ತು. ಮೊದಲಿಗೆ ಕೆಲವು ನಾಟಕಗಳಲ್ಲಿ ಕಾಣಿಸಿಕೊಂಡಿದ್ದ ನಂತರ ಸಣ್ಣ ಪುಟ್ಟ ಪಾತ್ರಗಳ ಮೂಲಕ ಸಿನಿಮಾ ರಂಗಕ್ಕೆ ಪ್ರವೇಶ ಪಡೆದರು. ಆದರೆ 1954ರಲ್ಲಿ ಬಿಡುಗಡೆಗೊಂಡ ಬೇಡರ ಕಣ್ಣಪ್ಪ ಚಿತ್ರದಲ್ಲಿ ಕಣ್ಣಪ್ಪನ ಪಾತ್ರದ ಮೂಲಕ ಅವರು ಹೆಸರುವಾಸಿಯಾದರು. ಅದು ಅವರ ಮೊದಲ ಸಿನಿಮಾವೆಂದೇ ಹೇಳಲಾಗುತ್ತಿದೆ.

ಶಬ್ದವೇದಿ ಕೊನೇ ಚಿತ್ರ

ಮೊದಲ ಚಿತ್ರ ‘ಬೇಡರ ಕಣ್ಣಪ್ಪ’ನಿಂದ ಹಿಡಿದು ತಮ್ಮ ಕೊನೇ ಚಿತ್ರ ‘ಶಬ್ದವೇದಿ’ವರೆಗೂ ರಾಜ್ ಅಭಿನಯಿಸಿದ್ದೆಲ್ಲವೂ ಸ್ಮರಣೀಯ ಚಿತ್ರಗಳೇ. ಓಹಿಲೇಶ್ವರ, ಭೂಕೈಲಾಸ, ರಣಧೀರ ಕಂಠೀರವ, ದಶಾವತಾರ, ಭಕ್ತ ಕನಕದಾಸ, ವಿಜಯನಗರದ ವೀರಪುತ್ರ, ಇಮ್ಮಡಿ ಪುಲಕೇಶಿ, ಹುಲಿಯ ಹಾಲಿನ ಮೇವು, ವೀರ ಕೇಸರಿ, ಶ್ರೀಕೃಷ್ಣ ದೇವರಾಯ, ಮಂತ್ರಾಲಯ ಮಹಾತ್ಮೆ, ಸತ್ಯಹರೀಶ್ಚಂದ್ರ, ಸನಾದಿ ಅಪ್ಪಣ್ಣ, ಬೀದಿ ಬಸವಣ್ಣ, ಬಂಗಾರದ ಮನುಷ್ಯ, ಜೇಡರಬಲೆ, ಮೇಯರ್ ಮುತ್ತಣ್ಣ, ಭಲೇಜೋಡಿ, ಗೋವಾದಲ್ಲಿ ಸಿಐಡಿ 999, ಕಸ್ತೂರಿ ನಿವಾಸ, ಹೊಸಬೆಳಕು, ಕವಿರತ್ನ ಕಾಳಿದಾಸ, ಸಿಪಾಯಿ ರಾಮು, ಶಂಕರ್ ಗುರು, ಬಂಗಾರದ ಪಂಜರ, ಭಕ್ತ ಪ್ರಹ್ಲಾದ, ದಾರಿತಪ್ಪಿದ ಮಗ, ಭಾಗ್ಯವಂತರು, ಆಪರೇಷನ್ ಡೈಮಂಡ್ ರಾಕೆಟ್, ಗಂಧದಗುಡಿ ಅವರ ಜನಪ್ರಿಯ ಚಿತ್ರಗಳು. ಡಾಕ್ಟರ್ ರಾಜ್​ಕುಮಾರ್ ಅವರು ಬರೋಬ್ಬರಿ 200ಕ್ಕೂ ಹೆಚ್ಚು ಸಿನಿಮಾಗಳಿಗೆ ಅವರು ಬಣ್ಣ ಹಚ್ಚಿದ್ದಾರೆ.

ಅವರು ದುಡ್ಡಿಗಾಗಿ ಸಿನಿಮಾ ಮಾಡಿಲ್ಲ. ಪಾತ್ರಾಭಿನಯಕ್ಕಾಗಿ ಮಾಡಿದ್ದಾರೆ. ಪ್ರತಿಯೊಂದು ಪಾತ್ರಗಳಿಗೂ ಜೀವ ತುಂಬಿದ್ದಾರೆ. ದೈವ ಭಕ್ತ, ರಾಜ, ರಾಕ್ಷಸ, ಬಡವ, ವೈದ್ಯ, ಸಾಹುಕಾರ, ಆಳು, ಶಿಕ್ಷಕ, ಅಮರ ಪ್ರೇಮಿ, ಆ್ಯಂಗ್ರಿ ಯಂಗ್ ಮ್ಯಾನ್ ಸೇರಿದಂತೆ ಎಲ್ಲ ಪಾತ್ರಗಳನ್ನು ಮಾಡಿದ್ದಾರೆ. ರಾಜ್ ಅಭಿನಯಿಸದ ಪಾತ್ರಗಳೇ ಇಲ್ಲ ಎಂಬ ಮಾತು ಭಾರತೀಯ ಚಿತ್ರರಂಗದಲ್ಲಿ ಇನ್ನೂ ಚಾಲ್ತಿಯಲ್ಲಿದೆ.

ರಾಜ್​ಕುಮಾರ್ ರಿಯಲ್ ಹೀರೊ

ತಾವು ಮಾಡುವ ಪಾತ್ರಗಳು ಸಮಾಜಕ್ಕೆ ಕೆಟ್ಟ ಸಂದೇಶ ನೀಡಬಾರದು ಅನ್ನೋ ಕಾಳಜಿ ರಾಜ್ ಕುಮಾರ್ ಅವರಿಗೆ ಇತ್ತು. ಹೀಗಾಗಿಯೇ ಸಿನಿಮಾಗಳಲ್ಲಿ ರಾಜ್ ಕುಡಿದಿಲ್ಲ, ಸಿಗರೇಟ್ ಸೇದಿಲ್ಲ, ರೇಪ್ ಸೀನ್, ಕಿಸ್ಸಿಂಗ್ ಸೀನ್ ಗಳಲ್ಲಿ ನಟಿಸಿಲ್ಲ. ಅದಷ್ಟೇ ಸಂಭಾವನೆ ಕೊಟ್ಟರೂ ನಾನು ಇಂತ ಪಾತ್ರಗಳಲ್ಲಿ ನಟಿಸಲ್ಲ ಎಂದು ಅವರು ಕಡ್ಡಿ ಮುರಿದಂತೆ ಹೇಳಿದ್ದರು. ಪಾತ್ರಗಳಿಗೆ ಜೀವ ತುಂಬುವ ರಾಜ್ ಅದಕ್ಕಾಗಿ ಕಠಿಣ ನಿಯಮಗಳನ್ನು ಪಾಲಿಸುತ್ತಿದ್ದರು. ‘ಮಂತ್ರಾಲಯ ಮಹಾತ್ಮೆ’ ಸಿನಿಮಾಕ್ಕಾಗಿ ಅವರು ಬಾಡೂಟವನ್ನೇ ಬಿಟ್ಟಿದ್ದರು.

ಮೇರು ಗಾಯಕ!

ಡಾ.ರಾಜ್ ಮೇರು ಗಾಯಕರಾಗಿದ್ದರು ಎಂಬುದನ್ನು ಹೇಳಲೇಬೇಕಾಗಿಲ್ಲ. ಅವರು ಕೆಲವು ಹಾಡುಗಳು ಈಗಲೂ ಕರುನಾಡಿನ ಮನೆಗಳಲ್ಲಿ ಈಗಲೂ ಕೇಳಿಸುತ್ತಿವೆ. ಹಾಡಿಗಾಗಿಯೇ ರಾಷ್ಟ್ರಪ್ರಶಸ್ತಿ ಪಡೆದ ಏಕೈಕ ನಟ ಡಾ.ರಾಜ್. ‘ಸಂಪತ್ತಿಗೆ ಸವಾಲ್’ ಸಿನಿಮಾದ ಶುರುವಾರ ಅವರ ಹಾಡಿನ ಅಭಿಯಾನ ಕೊನೆವರೆಗೂ ಮುಂದುವರಿದಿತ್ತು. ‘ಜೀವನಚೈತ್ರ’ ಸಿನಿಮಾದ ‘ನಾದಮಯ’ ಹಾಡಿಗೆ ರಾಷ್ಟ್ರಪ್ರಶಸ್ತಿ ಪಡೆದಿದ್ದರು.

ಕನ್ನಡದ ಹೋರಾಟಗಳು

ರಾಜಕುಮಾರ್ ಅವರು ನಾಡು, ನುಡಿ, ನೆಲದ ಅಸ್ಮಿತೆಗೆ ಧಕ್ಕೆ ಬಂದಾಗ ಹೋರಾಟದ ಮುಂಚೂಣಿಯಲ್ಲಿ ಇರುತ್ತಿದ್ದರು. ಗೋಕಾಕ್ ಚಳುವಳಿ ನಡೆಸಿ ಆ ಮೂಲಕ ಕನ್ನಡಿಗರ ದನಿಯಾಗಿದ್ದರು ಅವರು. ಕಾವೇರಿ ನೀರಿನ ಹೋರಾಟ, ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮುಂತಾದ ಹೋರಾಟಗಳಲ್ಲಿ ರಾಜ್​ ಮುಂಚೂಣಿಯಲ್ಲಿದ್ದರು.

ಕಲಾ ಹೃದಯಿ

ಹಣ, ಪ್ರಶಸ್ತಿ, ಹೆಸರು ಬಂದಮೇಲೂ ರಾಜ್​ಕುಮಾರ್ ಅವರು ತಾವು ನಡೆದು ಬಂದ ದಾರಿ ಮರೆತಿರಲಿಲ್ಲ. ದುಡ್ಡು ಪಡೆಯದೇ ಅಥವಾ ಕಡಿಮೆ ಸಂಭಾವನೆ ಪಡೆದು ಹಲವರಿಗೆ ಸಿನಿಮಾ ಮಾಡಿಕೊಟ್ಟಿದ್ದಾರೆ. ಸಹ ಕಲಾವಿದರನ್ನು ಮನೆ ಮಕ್ಕಳಂತೆ ಅವರು ಕಾಣುತ್ತಿದ್ದರು.

ರಾಜ್ ಅವರ ಹಿಂದೆ ಅಭಿಮಾನಿಗಳ ಪಡೆ ಇದ್ದದ್ದನ್ನು ಬಳಸಿಕೊಳ್ಳುವುದಕ್ಕೆ ರಾಜಕೀಯ ಪಕ್ಷಗಳು ಹೊಂಚು ಹಾಕಿದ್ದವು. ರಾಜ್ ರಾಜಕೀಯವನ್ನು ಹತ್ತಿರಕ್ಕೂ ಬಿಟ್ಟುಕೊಂಡಿರಲಿಲ್ಲ. ಗೆದ್ದು ಸಿಎಂ ಆಗುವಷ್ಟು ಬಲ ಹೊಂದಿದ್ದರೂ ತಾನು ಕೇವಲ ನಟ ಎಂಬುದಕ್ಕಷ್ಟೇ ಸೀಮಿತರಾಗಿದ್ದರು. ಅಮಿತಾಬ್ ಬಚ್ಚನ್, ಎನ್.ಟಿ.ರಾಮರಾವ್, ಎಂಜಿಆರ್, ರಜನಿಕಾಂತ್, ಕಮಲ್ ಹಾಸನ್ ಸೇರಿದರೆ ಒಬ್ಬ ರಾಜ್ ಆಗ್ತಾರೆ ಅಂತ ಖುದ್ದು ರಜನಿಕಾಂತ್ ಹೇಳಿದ್ದು ಇಲ್ಲಿ ಸ್ಮರಣೀಯ.

ಹಲವು ಪ್ರಸ್ತಿಗಳು, ಬಿರುದುಗಳ ರಾಜ

ರಾಜ್ ಕುಮಾರ್ ಅವರ ಪ್ರತಿಭೆ ನೋಡಿ ಪ್ರಶಸ್ತಿಗಳೇ ಹುಡುಕಿಕೊಂಡು ಬಂದಿವೆ. ಅವರಿಗೆ ಪ್ರಶಸ್ತಿ ನೀಡಿದ ಮೇಲೆಯೇ ಆ ಪ್ರಶಸ್ತಿಗಳಿಗೆ ಖ್ಯಾತಿ ಬಂದಿದ್ದಿದೆ. ಪದ್ಮಭೂಷಣ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ, ಕರ್ನಾಟಕ ರತ್ನ, ಅತ್ಯುತ್ತಮ ಗಾಯಕ ರಾಷ್ಟ್ರ ಪ್ರಶಸ್ತಿ, ಅಮೆರಿಕಾದ ಕೆಂಟಕಿ ಕರ್ನಲ್ ಪ್ರಶಸ್ತಿ, ನಾಡೋಜ, ಗೌರವ ಡಾಕ್ಟರೇಟ್ ಸೇರಿದಂತೆ ರಾಜ್ಯ, ದೇಶ, ವಿದೇಶದ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಪ್ರಶಸ್ತಿ ಅವರಿಗೆ ಲಭಿಸಿವೆ.

ರಾಜ್ ಕುಮಾರ್ ಅವರಿಗೆ ಹಲವಾರು ಬಿರುದಗಳನ್ನು ನೀಡಲಾಗಿತ್ತು ಕನ್ನಡಿಗರ ಕಣ್ಮಣಿ, ನಟ ಸಾರ್ವಭೌಮ, ರಸಿಕರ ರಾಜ, ಯೋಗರಾಜ, ಗಾನಗಂಧರ್ವ, ವರನಟ, ಅಭಿಮಾನಿಗಳ ದೇವರು ಹೀಗೆ ನೂರಕ್ಕೂ ಹೆಚ್ಚು ಬಿರುದುಗಳು ಅವರಿಗಿದ್ದವು. ಜನ ಪ್ರೀತಿಯಿಂದ ಅಣ್ಣಾವ್ರು ಅಂಥ ಕರೆಯುತ್ತಿದ್ದರು. ಅವರು ಅಭಿಮಾನಿಗಳನ್ನು ‘ಅಭಿಮಾನಿ ದೇವರುಗಳು, ಎಂದೇ ಕರೆಯುತ್ತಿದ್ದರು.

ವಿವಾದ ಇತ್ತೇ?

ನರಹಂತಕ ವೀರಪ್ಪನ್ 2000ರಲ್ಲಿ ರಾಜ್ ಕುಮಾರ್ ಅವರನ್ನು ಅಪಹರಿಸಿದ್ದ. ಬರೋಬ್ಬರಿ 108 ದಿನಗಳ ಕಾಲ ಬಂಧನದಲ್ಲಿ ಇಟ್ಟಿದ್ದ. ಇದೊಂದು ಕೆಟ್ಟ ಗಳಿಗೆಯಾಗಿತ್ತು ಹಾಗೂ ರಾಜಕೀಯ ಸೇರಿದಂತೆ ನಾನಾ ಚರ್ಚೆಗಳಿಗೆ ಕಾರಣವಾಗಿತ್ತು. ಇನ್ನು ನಟಿ ಲೀಲಾವತಿ ಜೊತೆಗಿನ ಸಂಬಂಧ, ನಟ ವಿಷ್ಣುವರ್ಧನ್ ಜೊತೆಗಿನ ವೈಮನಸ್ಸು ಸಣ್ಣ ವಿವಾದಕ್ಕೆ ಕಾರಣವಾಗಿತ್ತು.

ರಾಜ್ ಕುಮಾರ್​ ಅವರು 2006ರ ಏಪ್ರಿಲ್ 12ರಂದು ನಿಧನ ಹೊಂದಿದ್ದರು. ಆಗ ಅಭಿಮಾನಿಗಳು
ಗಲಾಟೆ, ದೊಂಬಿ ನಡೆಸಿದ್ದು, ಗೋಲಿಬಾರ್ ಆಗಿದ್ದು, ಅಭಿಮಾನಿಗಳು ಪ್ರಾಣ ತ್ಯಜಿಸಿದ್ದು ಕರುನಾಡ ಇತಿಹಾಸದಲ್ಲಿ ದಾಖಲಾಗಿವೆ.

Continue Reading
Advertisement
Naga Chaitanya and Sobhita Dhulipala holidaying together
ಟಾಲಿವುಡ್15 mins ago

Naga Chaitanya: ವಕೇಶನ್‌ ಮೂಡ್‌ನಲ್ಲಿ ಸಮಂತಾ ಮಾಜಿ ಪತಿ! ಶೋಭಿತಾ ಜತೆ ಕಾಡಿನಲ್ಲಿ ಸುತ್ತಾಟ?

Rajkumar Birth Anniversary TOP 10 Movies
ಸಿನಿಮಾ33 mins ago

Rajkumar Birth Anniversary: ವರನಟ ಡಾ. ರಾಜ್​ಕುಮಾರ್ ಅವರ ಟಾಪ್‌ 10 ಸಿನಿಮಾಗಳಿವು!

jai sriram slogan koppal crime news
ಕ್ರೈಂ1 hour ago

Jai Sriram Slogan: ಜೈ ಶ್ರೀರಾಮ್‌ ಹೇಳಿದ್ದಕ್ಕೆ ಮುಸ್ಲಿಂ ಯುವಕರಿಂದ ಹಲ್ಲೆ; ಇನ್ನೊಂದು ಘಟನೆ

ಪ್ರಮುಖ ಸುದ್ದಿ2 hours ago

Rajkumar Birthday: ಸೋತಾಗ ಧೈರ್ಯ ತುಂಬುವ ಅಣ್ಣಾವ್ರ 7 ಹಾಡುಗಳು!

bhagavanth khuba poster lok sabha election 2024
ಬೀದರ್‌2 hours ago

Lok Sabha Election 2024: ಪೋಸ್ಟರ್‌ ಮೂಲಕ ಸಚಿವ ಭಗವಂತ ಖೂಬಾ ಅವಹೇಳನ, ದೂರು

dashamukha column madness
ಅಂಕಣ2 hours ago

ದಶಮುಖ ಅಂಕಣ: ಮರುಳಿಗೆ ಅರಳುವ ಅರ್ಥಗಳನ್ನು ಹುಡುಕುತ್ತಾ…

bengaluru karaga in darga
ಬೆಂಗಳೂರು2 hours ago

Bengaluru Karaga: ವೈಭವದ ಕರಗ ಮಹೋತ್ಸವ ಸಂಪನ್ನ; ಲಕ್ಷಾಂತರ ಭಕ್ತರ ನಡುವೆ ಮಸ್ತಾನ್ ಸಾಬ್ ದರ್ಗಾಗೆ ಭೇಟಿ

gukesh dommaraju rajamarga column
ಅಂಕಣ2 hours ago

ರಾಜಮಾರ್ಗ ಅಂಕಣ: ವಿಶ್ವವಿಜೇತನಾಗುವ ತವಕದಲ್ಲಿರುವ ಚೆಸ್ ಆಟಗಾರ ದೊಮ್ಮರಾಜು ಗುಕೇಶ್

, Dr. Rajkumar's birthday
ಪ್ರಮುಖ ಸುದ್ದಿ2 hours ago

Rajkumar Birthday : ಇಂದು ಡಾ. ರಾಜ್​ಕುಮಾರ್ ಜನುಮದಿನ; ವರನಟನಿಗೆ ಕನ್ನಡಿಗರ ನಮನ

Karnataka Weather Forecast
ಮಳೆ3 hours ago

Karnataka Weather : ಸುಳಿಗಾಳಿ ಪ್ರಭಾವ; ರಭಸ ಗಾಳಿಯೊಂದಿಗೆ ಗುಡುಗು ಸಹಿತ ಮಳೆ ಎಚ್ಚರಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌