Deer Death | ರಸ್ತೆ ದಾಟುತ್ತಿದ್ದ ಜಿಂಕೆಗೆ ಬೈಕ್‌ ಡಿಕ್ಕಿಯಾಗಿ ಸಾವು; ಸಿಸಿ ಕ್ಯಾಮೆರಾದಲ್ಲಿ ಅಪಘಾತ ದೃಶ್ಯ ಸೆರೆ - Vistara News

ಕರ್ನಾಟಕ

Deer Death | ರಸ್ತೆ ದಾಟುತ್ತಿದ್ದ ಜಿಂಕೆಗೆ ಬೈಕ್‌ ಡಿಕ್ಕಿಯಾಗಿ ಸಾವು; ಸಿಸಿ ಕ್ಯಾಮೆರಾದಲ್ಲಿ ಅಪಘಾತ ದೃಶ್ಯ ಸೆರೆ

ಅರಣ್ಯದಿಂದ ರಸ್ತೆಗೆ ಬಂದ ಜಿಂಕೆಯೊಂದಕ್ಕೆ ಬೈಕ್‌ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ತೀವ್ರ ಗಾಯಗೊಂಡ ಜಿಂಕೆ (Deer Death) 2 ದಿನ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

VISTARANEWS.COM


on

ಜಿಂಕೆ ಸಾವು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಡಗು: ಇಲ್ಲಿನ ಕುಶಾಲನಗರ ತಾಲೂಕಿನ ರಸೂಲ್‌ಪುರದಲ್ಲಿ ಬೈಕ್‌ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಜಿಂಕೆಯೊಂದು (Deer Death) ಮೃತಪಟ್ಟಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಅರಣ್ಯದಿಂದ ರಸ್ತೆಗೆ ಬಂದ ಜಿಂಕೆಯೊಂದು ರಸ್ತೆ ದಾಟಲು ಮುಂದಾಗಿದ್ದು, ಈ ವೇಳೆ ವೇಗವಾಗಿ ಬಂದ ಬೈಕ್‌ ಡಿಕ್ಕಿ ಹೊಡೆದಿತ್ತು. ಅಪಘಾತದ ಬಳಿಕ ಗಾಯಗೊಂಡ ಜಿಂಕೆ ಎದ್ದು ಸಾವರಿಸಿಕೊಂಡು ಹೋಗಿತ್ತಾದರೂ ಸ್ವಲ್ಪ ದೂರ ಕ್ರಮಿಸಲುತ್ತಲೇ ಬಿದ್ದು ಹೋಗಿದೆ.

Deer Death

ಕಳೆದ ಸೋಮವಾರ ಸಂಜೆ ಅಪಘಾತ ನಡೆದಿದೆ. ಅಪಘಾತದಲ್ಲಿ ಜಿಂಕೆಯ ಮುಖ, ತೊಡೆ ಭಾಗಕ್ಕೆ ಗಂಭೀರ ಗಾಯವಾಗಿದೆ. ಇದರಿಂದ ತೀವ್ರ ರಕ್ತಸ್ರಾವವಾಗಿದ್ದ ಹಿನ್ನೆಲೆಯಲ್ಲಿ ಅಪಘಾತ ಸ್ಥಳದಿಂದ ಸ್ವಲ್ಪ ದೂರದಲ್ಲೇ ಜಿಂಕೆ ಮೃತಪಟ್ಟಿದೆ. ಜಿಂಕೆ ಸಾವನ್ನಪ್ಪಿರುವ ವಿಚಾರ ಬುಧವಾರ ಅರಣ್ಯ ಇಲಾಖೆಯ ಸಿಬ್ಬಂದಿ ಗಮನಕ್ಕೆ ಬಂದಿದೆ.

ಬೈಕ್‌ ಅಪಘಾತದ ದೃಶ್ಯವೆಲ್ಲವೂ ಸಮೀಪದ ಖಾಸಗಿ ಹೋಂ ಸ್ಟೇಯ ಸಿಸಿ‌ ಕ್ಯಾಮೆರದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ದ್ವಿಚಕ್ರ ವಾಹನದಲ್ಲಿ‌ ತೆರಳುತ್ತಿದ್ದ ಇಬ್ಬರು ಮಹಿಳೆಯರಿಗೆ ಗಂಭೀರವಾಗಿ ಗಾಯಗಳಾಗಿವೆ.

ಇದನ್ನೂ ಓದಿ | ಡೆಂಕಣಿಕೋಟೆಯಲ್ಲಿ ಶ್ವಾನವನ್ನು ಗುಂಡಿಕ್ಕಿ ಕೊಂದ ಪಾಪಿ; ವ್ಯಕ್ತಿ ಮೇಲೆ ಕರಡಿ ದಾಳಿ, ವಾಹನ ಡಿಕ್ಕಿಯಾಗಿ ಚಿರತೆ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Karnataka Rain : ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ರಾತ್ರಿಯಿಡಿ ಸುರಿದ ಮಳೆಯು ಅವಾಂತರವನ್ನೇ ಸೃಷ್ಟಿ ಮಾಡಿದೆ. ಚಿಕ್ಕಮಗಳೂರಿನಲ್ಲಿ ಮಳೆಗೆ (Rain News) ಕಾಂಪೌಂಡ್‌ ಕುಸಿದು ನಾಲ್ಕು ಬೈಕ್‌ಗಳು ಜಖಂಗೊಂಡಿದೆ. ಇತ್ತ ಶಿವಮೊಗ್ಗದಲ್ಲಿ ಮದುವೆ ಮಂಟಪಕ್ಕೆ ನೀರು ನುಗ್ಗಿ ಅಸ್ತವ್ಯಸ್ತವಾಗಿದೆ.

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು/ ಶಿವಮೊಗ್ಗ: ಚಿಕ್ಕಮಗಳೂರಲ್ಲಿ ಮಳೆಯು (Karnataka Rain) ಅಬ್ಬರಿಸುತ್ತಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಚಿಕ್ಕಮಗಳೂರು ನಗರದ ಹೌಸಿಂಗ್ ಬೋರ್ಡ್ ‌ಬಡಾವಣೆಯಲ್ಲಿ ರಾತ್ರಿ ಇಡಿ ಸುರಿದ ಮಳೆಗೆ (Rain News) ಕಾಂಪೌಂಡ್ ಶಿಥಿಲಾವಸ್ಥೆಗೊಂಡು ಕುಸಿದು ಬಿದ್ದಿದೆ. ಕಾಂಪೌಂಡ್‌ ಪಕ್ಕದಲ್ಲಿ ನಿಲ್ಲಿಸಿದ್ದ ನಾಲ್ಕು ಬೈಕ್‌ಗಳು ನಜ್ಜುಗುಜ್ಜಾಗಿತ್ತು. ಸ್ಥಳೀಯರು ಹಳೆ ಕಾಂಪೌಂಡ್ ತೆರೆವಿಗಾಗಿ ಆಗ್ರಹಿಸಿ, ನಗರಸಭೆ ವಿರುದ್ಧ ಆಕ್ರೋಶ ಹೊರಹಾಕಿದರು.

ಚಿಕ್ಕಮಗಳೂರು ನಗರದ ಉದ್ದೇಬೋರನಹಳ್ಳಿಯಲ್ಲಿ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಗೊಬ್ಬರದ ಅಂಗಡಿಗೆ ಮೋರಿ ನೀರು ನುಗ್ಗಿತ್ತು. ಲಕ್ಷಾಂತರ ರೂಪಾಯಿ ರಾಸಾಯನಿಕ ಗೊಬ್ಬರ, ಸಿಮೆಂಟ್ ನಾಶವಾಗಿತ್ತು. ರಾಷ್ಟ್ರೀಯ ಹೆದ್ದಾರಿ ಪಕ್ಕದ ನೀರು ನುಗ್ಗಿ ಗೊಬ್ಬರ ನೀರು ಪಾಲಾಗಿತ್ತು. ಮೋರಿ ಕಾಮಗಾರಿ ಮಾಡದೆ ಅರ್ಧಕ್ಕೆ ಬಿಟ್ಟಿರುವ ಹೆದ್ದಾರಿ ಪ್ರಾಧಿಕಾರ ವಿರುದ್ಧ ಸ್ಥಳೀಯರು ಕಿಡಿಕಾರಿದರು.

ಚಿಕ್ಕಮಗಳೂರು ತಾಲೂಕಿನ ಆಲ್ದೂರು, ಕಂಡರ ಕಸ್ಕೆ ಗ್ರಾಮದಲ್ಲಿ ಭಾರಿ ಮಳೆಗೆ ಮನೆಯ ಮೇಲೆ ಮರ ಬಿದ್ದಿತ್ತು. ಕೂದಲೆಳೆ ಅಂತದಲ್ಲಿ ಮನೆಯಲ್ಲಿದ್ದವರು ಪಾರಾಗಿದ್ದರು. ಮರ ಬಿದ್ದ ಪರಿಣಾಮ ಮನೆಯಲ್ಲಿದ್ದ ಪೀಠೋಪಕರಣಗಳು, ಆಹಾರ ಪದಾರ್ಥ ನಾಶವಾಗಿತ್ತು. ಕಳೆದ ರಾತ್ರಿ ಮಲೆನಾಡು-ಬಯಲು ಸೀಮೆಯಲ್ಲಿ ಭಾರೀ ಮಳೆಯಿಂದಾಗಿ ಗುಡಿಸಲಿಗೆ ಚರಂಡಿ ನೀರು ನುಗ್ಗಿತ್ತು.

ಚಿಕ್ಕಮಗಳೂರು ತಾಲೂಕಿನ ಉದ್ದೇಬೋರನಹಳ್ಳಿಯಲ್ಲಿ ಘಟನೆ ನಡೆದಿದೆ. ಚಿಕ್ಕಮಗಳೂರಿನ ಕಳಸ, ಬಾಳೆಹೊನ್ನೂರು, ಮಾಗುಂಡಿ, ಎನ್‌ಆರ್ ಪುರ, ಕೊಪ್ಪ ಶನಿವಾರ ರಾತ್ರಿಯಿಡೀ ಮಳೆ ಸುರಿದಿದೆ. ಕಳಸ-ಬಾಳೆಹೊನ್ನೂರು ರಸ್ತೆಯಲ್ಲಿ ಮಳೆ ನೀರು ನದಿಯಂತೆ ಹರಿದಿದೆ. ಭಾರಿ ಮಳೆ ಹಿನ್ನೆಲೆ ಹಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತವಾಗಿತ್ತು.

ಇದನ್ನೂ ಓದಿ: Electric shock : ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಶಾಕ್‌ನಿಂದ ವ್ಯಕ್ತಿ ಸ್ಪಾಟ್‌ ಡೆತ್

Karnataka Rain

ಮದುವೆ ಊಟ ಮಾಡುವಾಗಲೇ ನುಗ್ಗಿದ ನೀರು

ಶಿವಮೊಗ್ಗದಲ್ಲೂ ಮಳೆಯು ಅವಾಂತರ ಸೃಷ್ಟಿಸಿತ್ತು. ಕಳೆದ ರಾತ್ರಿ ಸುರಿದ ಮಳೆಯಿಂದ ಮದುವೆ ನಡೆಯುತ್ತಿದ್ದ ಹಾಲ್‌ಗೆ ನೀರು ನುಗ್ಗಿದೆ. ಶಿವಮೊಗ್ಗ ನಗರದ ಗುಡ್ಡೆಕಲ್‌ ದೇವಸ್ಥಾನಕ್ಕೆ ಸೇರಿದ ಸಮುದಾಯ ಭವನದಲ್ಲಿ ಮದುವೆ ಸಮಾರಂಭ ನಡೆಯುತ್ತಿತ್ತು. ಮದುವೆಗೆ ಬಂದ ಬಂಧು-ಮಿತ್ರರು ಊಟ ಮಾಡುವಾಗಲೇ ಊಟದ ಹಾಲ್‌ಗೆ ನೀರು ನುಗ್ಗಿತ್ತು. ಮಳೆಯ ನೀರಿನ ನಡುವೆಯೂ ಬೆಳಗಿನ ಉಪಹಾರ ಸೇವನೆ ಮಾಡಿದರು.

ಚಿತ್ರದುರ್ಗದಲ್ಲೂ ಎಡಬಿಡದೆ ಸುರಿದ ಮಳೆ

ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಹಲವೆಡೆ ವರುಣನ ಆರ್ಭಟ ಜೋರಾಗಿದೆ. ತಡರಾತ್ರಿ ಎಡಬಿಡದೆ ಸುರಿದ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿದಿತ್ತು. ಒಂದೇ ಮಳೆಗೆ ಚೆಕ್ ಡ್ಯಾಂ, ಕೆರೆ ಕಟ್ಟೆಗಳು ತುಂಬಿದ್ದವು. ಹೊಸದುರ್ಗದ ಕೆಲ್ಲೋಡು ಬಳಿ ವೇದಾವತಿ ನದಿ ತುಂಬಿ ಹರಿದಿದೆ. ಕಡದಿನಕೆರೆ ಗ್ರಾಮದಲ್ಲಿ ಮಳೆಗೆ ರಸ್ತೆಯು ಕೊಚ್ಚಿಹೋಗಿತ್ತು. ಇದರಿಂದಾಗಿ ಕೊರಟಿಕೆರೆ, ಬಾಗಶೆಟ್ಟಿ, ಚೌಳ ಹಿರಿಯೂರು ಸಂಪರ್ಕ ಬಂದ್ ಆಗಿತ್ತು. ಇನ್ನೂ ಮೊಳಕಾಲ್ಮೂರು ತಾಲೂಕಿನ ಮೇಗಳ ಕಣಿವೆಲ್ಲಿ ಜಲಪಾತ ಸೃಷ್ಟಿಯಾಗಿತ್ತು. ಧುಮ್ಮಿಕ್ಕಿ ಹರಿಯುತ್ತಿರುವ ಮಳೆ ನೀರು ಕಂಡು ಜನರು ಸಂತಸಗೊಂಡಿದ್ದರು. ಇತ್ತ ಜಿಲ್ಲೆಯಲ್ಲಿ ಟ್ಯಾಂಕರ್ ನೀರು ಹೊಡೆಯುತ್ತಿದ್ದ ರೈತರ ಪಜೀತಿಯನ್ನು ಮಳೆಯು ತಪ್ಪಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉಡುಪಿ

Electric shock : ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಶಾಕ್‌ನಿಂದ ವ್ಯಕ್ತಿ ಸ್ಪಾಟ್‌ ಡೆತ್‌

Electric shock : ಭಾರಿ ಮಳೆ ಗಾಳಿಗೆ (Karnataka rain) ವಿದ್ಯುತ್‌ ತಂತಿ ತುಂಡಾಗಿ ಬಿದ್ದಿದ್ದು, ಇದನ್ನು ಗಮನಿಸದೆ ವ್ಯಕ್ತಿಯೊಬ್ಬರು ವಿದ್ಯುತ್‌ ತಂತಿ ತುಳಿದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು, ಮೆಸ್ಕಾಂ ಸಿಬ್ಬಂದಿ ದೌಡಾಯಿಸಿದ್ದಾರೆ.

VISTARANEWS.COM


on

By

Electric shock in udupi
Koo

ಉಡುಪಿ: ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ (Electric shock) ಮೃತಪಟ್ಟಿದ್ದಾರೆ. ಇರ್ಷಾದ್ (56) ಮೃತ ದುರ್ದೈವಿ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ಘಟನೆ ನಡೆದಿದೆ.

ಮನೆಯಿಂದ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ದುರಂತ ನಡೆದಿದೆ. ಶನಿವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆ (Rain News) ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ವಿದ್ಯುತ್ ತಂತಿ ನೆಲದ ಮೇಲೆ ಬಿದ್ದಿರುವುದನ್ನು ಗಮನಿಸದ ಇರ್ಷಾದ್ ತುಳಿದಿದ್ದಾರೆ. ಕ್ಷಣಾರ್ಧದಲ್ಲೇ ಇರ್ಷಾದ್‌ ಶಾಕ್‌ನಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಮತ್ತು ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇನ್ನೂ ತುಂಡಾಗಿದ್ದ ವಿದ್ಯುತ್ ತಂತಿಯನ್ನು ಸರಿಪಡಿಸುವ ಕಾರ್ಯದಲ್ಲಿ ಮೆಸ್ಕಾಂ ಸಿಬ್ಬಂದಿ ತೊಡಗಿದ್ದಾರೆ.

ಇದನ್ನೂ ಓದಿ: Suspicious Case : ಮೈಸೂರಿನಲ್ಲಿ ದಂಪತಿ ಅನುಮಾನಾಸ್ಪದ ಸಾವು; ಕೊಲೆಯೋ.. ಆತ್ಮಹತ್ಯೆಯೋ?

ಚೆಂಡೆಂದು ಭಾವಿಸಿ ಬಾಂಬ್‌ ಎತ್ತಿಕೊಂಡ ಮದರಸಾ ವಿದ್ಯಾರ್ಥಿ; ಸ್ಫೋಟಕ್ಕೆ ಮೌಲಾನಾ ಸಾವು

ಪಾಟ್ನಾ:ಲೋಕಸಭೆ ಚುನಾವಣೆ(Lok Sabha Election 2024)ಗೆ ಇನ್ನೇನು ಕೆಲವೇ ದಿನಗಳ ಬಾಕಿ ಉಳಿದಿರುವಗಲೇ ಬಿಹಾರ(Bihar)ದಲ್ಲಿ ಬಾಂಬ್‌ ಸ್ಫೋಟ(Bomb blast)ಗೊಂಡಿದ್ದು, ಮೌಲಾನ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಅಪ್ರಾಪ್ತ ಬಾಲಕನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಸರನ್‌ ಜಿಲ್ಲೆಯ ಮದರಸಾವೊಂದರಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೌಲಾನ ಮೌಲಾನಾ ಇಮಾಮುದ್ದೀನ್ ಮತ್ತು ವಿದ್ಯಾರ್ಥಿ ನೂರ್ ಆಲಂ (15) ಗಾಯಗೊಂಡಿದ್ದರು. ಇವರಿಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೇ ಇಮಾಮುದ್ದೀನ್‌ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಘಟನೆ ವಿವರ:

ಬುಧವಾರ ತಡರಾತ್ರಿ ಸರನ್‌ನ ಓಲ್ಹಾನ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮದರಸಾದ ಎದುರು ಬಿದ್ದಿದ್ದ ಚೆಂಡಿನಂತಹ ವಸ್ತುವನ್ನು ಚೆಂಡೆಂದು ಭಾವಿಸಿ ಆಲಂ ಮದರಸಾದೊಳಗೆ ಕೊಂಡೊಯ್ದಿದ್ದಾನೆ. ಮೌಲಾನಾ ಆ ವಸ್ತುವನ್ನು ನೋಡಿದ್ದರು. ಅವರು ಆಲಂನಿಂದ ಅದನ್ನು ತೆಗೆದುಕೊಂಡು ಅದನ್ನು ಬಾಂಬ್ ಎಂದು ಶಂಕಿಸಿ ಎಸೆದರು. ವಸ್ತು ಸ್ಫೋಟಗೊಂಡು ಇಬ್ಬರಿಗೂ ಗಾಯಗಳಾಗಿವೆ.  ಘಟನೆಯಲ್ಲಿ ಇಮಾಮುದ್ದೀನ್‌ ಮತ್ತು ಆಲಂ ಗಂಭೀರವಾಗಿ ಗಾಯಗೊಂಡಿದ್ದ ಇವರಿಬ್ಬರನ್ನೂ ಪಾಟ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿತ್ತು.

ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾದರಿಗಳನ್ನು ಸಂಗ್ರಹಿಸಿದೆ. ನಾವು ಅವರ ವರದಿಯನ್ನು ಪಡೆದ ನಂತರ, ವಸ್ತುವು ಬಾಂಬ್ ಅಥವಾ ಪಟಾಕಿಯೇ ಎನ್ನುವುದನ್ನು ಖಚಿತವಾಗಿ ಹೇಳಬಹುದು ಎಂದು ಸರನ್ ಎಸ್ಪಿ ಗೌರವ್ ಮಂಗಳಾ ತಿಳಿಸಿದ್ದಾರೆ. ಇನ್ನು ಪ್ರಕರಣದ ವಿಚಾರ ರಾಜ್ಯದಲ್ಲಿ ಸುದ್ದಿಯಾಗುತ್ತಿದ್ದಂತೆ ಪೊಲೀಸರು ಪ್ರಕರಣವನ್ನು ಕೂಲಂಕಷ ತನಿಖೆ ಮಾಡಲು ನಿರ್ಧಾರ ಮಾಡಿದ್ದಾರೆ. ಶುಕ್ರವಾರದ ವೇಳೆ ಬ್ಲಾಸ್ಟ್‌ನಲ್ಲಿ ಗಾಯಗೊಂಡವರು ಇಬ್ಬರು ವ್ಯಕ್ತಿಗಳು ಎಂದು ತಿಳಿಸಲಾಗಿದೆ.  ಎಸ್ಪಿ ಗೌರವ್ ಮಂಗಳಾ ನೀಡಿರುವ ಮಾಹಿತಿಯ ಪ್ರಕಾರ, ಪ್ರಕರಣದ ನಡೆದ ಬಳಿಕ ಸ್ಥಳೀಯ ಜನರು ಸಾಕ್ಷ್ಯವನ್ನು ನಾಶ ಮಾಡಿದ್ದರಿಂದ ಇಲ್ಲಿ ಬ್ಲಾಸ್ಟ್‌ ಆದ ವಸ್ತು ಯಾವುದು ಅನ್ನೋದರ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ತಿಳಿಸಿದ್ದಾರೆ.

ಮದರಸಾದಲ್ಲಿ ಸ್ಫೋಟದ ನಂತರ, ಎಫ್‌ಎಸ್‌ಎಲ್ ತಂಡ ತನಿಖೆ ಆರಂಭಿಸಿದೆ. ಸ್ಫೋಟದ ಹಿಂದಿನ ನಿಜವಾದ ಕಾರಣ ಇನ್ನೂ ಬಹಿರಂಗವಾಗಿಲ್ಲ. ಸ್ಫೋಟದ ಹಿಂದೆ ಬಾಂಬ್ ಇದೆಯೇ ಅಥವಾ ಪಟಾಕಿಯಿಂದ ಸ್ಫೋಟ ಸಂಭವಿಸಿದೆಯೇ ಎಂಬುದು ಇಲ್ಲಿಯವರೆಗೆ ಸ್ಪಷ್ಟವಾಗಿಲ್ಲ. ಆದರೆ ಈ ಘಟನೆಯ ನಂತರ ಮದರಸಾದಲ್ಲಿ ಯಾರೂ ಪತ್ತೆಯಾಗಿಲ್ಲ. ಘಟನೆಗೂ ಮುನ್ನ ಮದರಸಾದಲ್ಲಿ 12 ಮಕ್ಕಳು ಓದುತ್ತಿದ್ದರು. ಘಟನೆಯ ನಂತರ ಸ್ಥಳವನ್ನು ತೊಳೆಯಲಾಗಿದೆ. ಪ್ರಕರಣದಲ್ಲಿ ಸಾಕ್ಷ್ಯ ನಾಶಪಡಿಸುವ ಯತ್ನ ನಡೆದಿದೆ ಎಂಬ ಆರೋಪಗಳಿವೆ ಎನ್ನಲಾಗಿದೆ. ಸ್ಫೋಟದ ನಂತರ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಬಿಹಾರದ ಮದರಸಾಗಳು ಭಯೋತ್ಪಾದನೆಯ ಗೂಡು ಎಂಬುದನ್ನು ಚಾಪ್ರಾ ಘಟನೆ ಸಾಬೀತುಪಡಿಸಿದೆ ಎಂದು ಹೇಳಿದ್ದಾರೆ. ಬಿಹಾರದ ಮದರಸಾಗಳು ಭಯೋತ್ಪಾದಕರ ತಾಣಗಳಾಗಿವೆ ಎಂದು ನಾವು ಮೊದಲೇ ಹೇಳಿದ್ದೆವು ಎಂದಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Anjali Murder Case: ಅಂಜಲಿ ಹತ್ಯೆ ಪ್ರಕರಣ; ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

Anjali Murder Case: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ ಮನನೊಂದು ಫಿನಾಯಿಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಅವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಯಶೋದಾ ಅವರ ಅಜ್ಜಿ ಗಂಗಮ್ಮ, ʼʼಅಕ್ಕನ ಕೊಲೆಯಿಂದ ಮಾನಸಿಕವಾಗಿ ನೊಂದಿದ್ದ ಯಶೋದಾ ಶನಿವಾರ ರಾತ್ರಿ ಫಿನಾಯಿಲ್‌ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಳು. ಅಸ್ವಸ್ಥಳಾಗಿದ್ದ ಅವಳನ್ನು ಕೂಡಲೇ ಕಿಮ್ಸ್​ (KIMS) ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಯಶೋದಾ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಜತೆಗೆ ಚಿಕಿತ್ಸೆ ಮುಂದುವರಿದಿದೆʼʼ ಎಂದು ವಿವರಿಸಿದ್ದಾರೆ.

VISTARANEWS.COM


on

Anjali Murder Case
Koo

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ (Anjali Murder Case) ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ ಮನನೊಂದು ಫಿನಾಯಿಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಅವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಈ ಬಗ್ಗೆ ಮಾತನಾಡಿದ ಯಶೋದಾ ಅವರ ಅಜ್ಜಿ ಗಂಗಮ್ಮ, ʼʼಅಕ್ಕನ ಕೊಲೆಯಿಂದ ಮಾನಸಿಕವಾಗಿ ನೊಂದಿದ್ದ ಯಶೋದಾ ಶನಿವಾರ ರಾತ್ರಿ ಫಿನಾಯಿಲ್‌ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಳು. ಅಸ್ವಸ್ಥಳಾಗಿದ್ದ ಅವಳನ್ನು ಕೂಡಲೇ ಕಿಮ್ಸ್​ (KIMS) ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಯಶೋದಾ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಜತೆಗೆ ಚಿಕಿತ್ಸೆ ಮುಂದುವರಿದಿದೆʼʼ ಎಂದು ವಿವರಿಸಿದ್ದಾರೆ.

ಕಾರಣವೇನು?

ಅಂಜಲಿ ಅವರನ್ನು ಕೊಲೆ ಮಾಡಿದ್ದ ಗಿರೀಶ್‌ನನ್ನು ಸದ್ಯ ಗಾಯಗೊಂಡಿದ್ದು, ಪೊಲೀಸರು ಆತನಿಗೆ ಚಿಕಿತ್ಸೆ ಕೊಡಿಸುತ್ತಿದ್ದಾರೆ. ʼʼಪೊಲೀಸರು ತನ್ನ ಅಕ್ಕನನ್ನು ಕೊಂದ ಗಿರೀಶ್‌ಗೆ ಚಿಕಿತ್ಸೆ ನೀಡಿ ಗುಣಮುಖನನ್ನಾಗಿ ಮಾಡಲು ಯತ್ನಿಸುತ್ತಿದ್ದಾರೆ. ಆತನನ್ನು ಎನ್‌ಕೌಂಟರ್‌ ಮಾಡುವ ಬದಲು ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ವಿಚಾರವನ್ನೇ ಮನಸ್ಸಿಗೆ ಹಚ್ಚಿಕೊಂಡಿದ್ದಾಳೆ. ಈ ಬಗ್ಗೆ ನಿನ್ನೆ ಬೆಳಿಗ್ಗೆಯಿಂದಲೂ ಆಕೆ ಮಾನಸಿಕವಾಗಿ ಕುಗ್ಗಿದ್ದಳು. ಇದರಿಂದ ಆತ್ಮಹತ್ಯೆ ಮಾಡಲು ಮುಂದಾಗಿದ್ದಳುʼʼ ಎಂದು ಗಂಗಮ್ಮ ತಿಳಿಸಿದ್ದಾರೆ.

ಎನ್‌ಕೌಂಟರ್‌ ಮಾಡಿ

ಶುಕ್ರವಾರ ವಿಸ್ತಾರ ನ್ಯೂಸ್‌ ಜತೆ ಮಾತನಾಡಿದ್ದ ಅಂಜಲಿಯ ಇನ್ನೋರ್ವ ಸಹೋದರಿ ಪೂಜಾ, ʼʼಗಿರೀಶ್‌ನನ್ನು ಎನ್‌ಕೌಂಟರ್ ಮಾಡಬೇಕು. ಯಾವುದೇ ಕಾರಣಕ್ಕೂ ಆರೋಪಿಗೆ ಚಿಕಿತ್ಸೆ ಕೊಡಬಾರದು. ಅವನನ್ನು ಆದಷ್ಟು ಬೇಗ ಎನ್‌ಕೌಂಟರ್ ಮಾಡಬೇಕು. ನಮ್ಮ ಅಕ್ಕ ಹೇಗೆ ರಕ್ತ ಸುರಿದು ಪ್ರಾಣ ಬಿಟ್ಟಳೋ ಅದೇ ರೀತಿ ಅವನು ಸಾಯಬೇಕುʼʼ ಎಂದು ಆಗ್ರಹಿಸಿದ್ದರು.

ʼʼನಮ್ಮ ಅಕ್ಕನಿಗೂ ಅವನಿಗೂ ಯಾವುದೇ ಸಂಬಂಧ ಇಲ್ಲ. ಏನೇನೋ ಹೇಳಿ ದಿಕ್ಕು ತಪ್ಪಿಸುತ್ತಿದ್ದಾರೆ. ಪೊಲೀಸರು ಹೇಗೆ ಬೇಕೋ ಹಾಗೆ ಮಾಡುವ ವಿಚಾರದಲ್ಲಿದ್ದಾರೆ. ಇದನ್ನು ಆದಷ್ಟು ಬೇಗ ತನಿಖೆ ಮಾಡಬೇಕು. ಬೆಳಿಗ್ಗೆ ಮಾತನಾಡಲು ಬಂದವನು ಚಾಕು ಹಾಕಿದ. ನಾವು ನಮ್ಮ ಅಕ್ಕನ ಜತೆ ಮಾತನಾಡಲು ಸಹ ಆಗಲಿಲ್ಲ. ಕೊನೆ ಗಳಿಗೆಯಲ್ಲಿ ಪೊಲೀಸರು ಬಂದು ಡಾಕ್ಟರ್ ಸಹ ಕರೆಯಲಿಲ್ಲ. ಕೇವಲ ಪೋಟೋ ತೆಗೆದುಕೊಂಡು ಹೋದರು. ಅವನಿಗೆ ಅದೇ ರೀತಿ ಶಿಕ್ಷೆ ಆಗಬೇಕುʼʼ ಎಂದು ಹೇಳಿದ್ದರು.

ʼʼನಮ್ಮ ಅಕ್ಕನಿಗೂ ಗಿರೀಶ್‌ಗೂ ಏನೇನೋ ಸಂಬಂಧ ಕಲ್ಪಿಸುತ್ತಿದ್ದಾರೆ. ಹಾಗಾದರೆ ರೈಲಿನಲ್ಲಿ ಅವನು ಯಾರದೋ ಜತೆ ಜಗಳ ಮಾಡಿದ್ದ. ಅವರಿಗೂ, ಅವನಿಗೂ ಸಂಬಂಧ ಇದೆಯಾ?ʼʼ ಎಂದು ಸಹೋದರಿ ಪ್ರಶ್ನೆ ಮಾಡಿದ್ದರು.

ಇದನ್ನೂ ಓದಿ: Anjali Murder Case: ಅಂಜಲಿ ಕೊಂದವನ ಎನ್‌ಕೌಂಟರ್ ಮಾಡಿ: ಸಹೋದರಿ ಪೂಜಾ ಆಗ್ರಹ

ಶಾಸಕ ಅರವಿಂದ ಬೆಲ್ಲದ್ ಭೇಟಿ

ಅಂಜಲಿ ಮನೆಗೆ ಭಾನುವಾರ ಭೇಟಿ ನೀಡಿದ ಶಾಸಕ ಅರವಿಂದ ಬೆಲ್ಲದ್ ಸಾಂತ್ವಾನ ಹೇಳಿದ್ದಾರೆ. ವೀರಾಪುರ ಓಣಿಯಲ್ಲಿರುವ ಅಂಜಲಿ ಮನೆಗೆ ಆಗಮಿಸಿ ಅಂಜಲಿ ಅವರ ಅಜ್ಜಿ ಗಂಗಮ್ಮ, ಸಹೋದರಿಯರಿಗೆ ಸಾಂತ್ವನ ಹೇಳಿದ್ದಾರೆ. ಕುಟುಂಬದ ಜತೆಗೆ ಇರುತ್ತೇವೆ ಎಂದು ಧೈರ್ಯ ಹೇಳಿದ್ದಾರೆ. ಕೊಲೆಗಡುಕ ಗಿರೀಶ್‌ಗೆ ಗಲ್ಲು ಶಿಕ್ಷೆ ಆಗಬೇಕೆಂದು ಬೆಲ್ಲದ್ ಆಗ್ರಹಿಸಿದ್ದಾರೆ.

Continue Reading

ಮೈಸೂರು

Suspicious Case : ಮೈಸೂರಿನಲ್ಲಿ ದಂಪತಿ ಅನುಮಾನಾಸ್ಪದ ಸಾವು; ಕೊಲೆಯೋ.. ಆತ್ಮಹತ್ಯೆಯೋ?

Suspicious Case : ಮೈಸೂರಿನಲ್ಲಿ ಮನೆಯೊಂದರಲ್ಲಿ ದಂಪತಿ ಶವ ಪತ್ತೆಯಾಗಿದೆ. ಶವದ ಮೇಲೆ ಯಾವುದೇ ಗಾಯದ ಗುರುತು ಪತ್ತೆಯಾಗಿಲ್ಲ. ಹೀಗಾಗಿ ದಂಪತಿಯ ಅನುಮಾನಾಸ್ಪದ ಸಾವಿನ ಸಂಬಂಧ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Suspicious Case in Mysuru
Koo

ಮೈಸೂರು: ಮನೆಯಲ್ಲೇ ದಂಪತಿ ಅನುಮಾನಾಸ್ಪದವಾಗಿ (Suspicious Case) ಮೃತಪಟ್ಟಿದ್ದಾರೆ. ಮೈಸೂರಿನ ಪಿರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿ ಘಟನೆ ನಡೆದಿದೆ. ಪ್ರಕಾಶ್ (51), ಯಶೋಧ (48) ಮೃತಪಟ್ಟವರು.

ಪ್ರಕಾಶ್‌ ಅವರು ರಸ್ತೆ ಬದಿ ಕ್ಯಾಂಟಿನ್ ನಡೆಸುತ್ತಿದ್ದರೆ, ಯಶೋಧಾ ಪ್ಲೋರ್ ಮಿಲ್ ನಡೆಸುತ್ತಿದ್ದರು. ಭಾನುವಾರ ಇಬ್ಬರು ಮನೆಯಲ್ಲೇ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನೂ ದೇಹದ ಮೇಲೂ ಯಾವುದೇ ಗಾಯದ ಗುರುತು ಇಲ್ಲ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದನ್ನು ತಿಳಿಯಲು ಎಲ್ಲ ಆಯಾಮದಲ್ಲೂ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಮೃತರ ಮೊಬೈಲ್‌ಗಳನ್ನು ವಶಕ್ಕೆ ಪಡೆದು, ಅಕ್ಕ-ಪಕ್ಕದ ಸಿಸಿಟಿವಿಯನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಮೋರಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

35 ವರ್ಷದಿಂದ 40 ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಮೈಸೂರಿನ ಹೂಟಗಳ್ಳಿ ಬಳಿಯ ಮೋರಿಯಲ್ಲಿ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ವಿಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಹೀಗಾಗಿ ವ್ಯಕ್ತಿ ಕುರಿತು ಮಾಹಿತಿ ತಿಳಿದರೇ ವಿಜಯನಗರ ಠಾಣೆ ಪೊಲೀಸರಿಗೆ ತಿಳಿಸುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Yelahanka flyover : ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಯುವಕನ ಡೆಡ್ಲಿ ಬೈಕ್‌ ರೈಡಿಂಗ್‌!

ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ; ಕೆಆರ್‌ ಮಾರ್ಕೆಟ್‌ನಲ್ಲಿ ಶವ ಪತ್ತೆ

ವಿಜಯಪುರ: ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ (Murder Case) ಆಗಿದೆ. ವಿಜಯಪುರ ನಗರದ ಎಪಿಎಂಸಿ ಮೇಕೆ ಹಾಗೂ ಕುರಿ ಮಾರುಕಟ್ಟೆಯ ಬಳಿ (Vijayapura Murder Case) ಘಟನೆ ನಡೆದಿದೆ. ರೋಹಿತ್ ಸುಭಾಶ ಪವಾರ (22) ಕೊಲೆಯಾದವನು.

ವಿಜಯಪುರ ನಗರದ ಕಂಬಾರ ಓಣಿ ನಿವಾಸಿ ರೋಹಿತ್‌ನನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದು ಬಳಿಕ ಮುಳ್ಳುಕಂಟಿಯಲ್ಲಿ ಶವ ಬಿಸಾಡಿದ್ದಾರೆ. ಸ್ಥಳದಲ್ಲಿ ಬಿಯರ್ ಬಾಟಲ್, ಚಿಪ್ಸ್ ಪ್ಯಾಕೇಟ್ ಪತ್ತೆಯಾಗಿದೆ. ಹೀಗಾಗಿ ಕುಡಿದ ಮತ್ತಿನಲ್ಲಿ ಪರಿಚಯಸ್ಥರಿಂದ ಕೊಲೆ ಆಗಿರಬಹುದೆಂದು ಶಂಕಿಸಲಾಗಿದೆ.

ಖಾಲಿದ್ ಇನಾಂದಾರ್ ಎಂಬಾತ ರೋಹಿತ್ ಪೋಷಕರಿಗೆ ನಿನ್ನೆ ಭಾನುವಾರ ತಡರಾತ್ರಿ 2.21ಕ್ಕೆ ಕರೆ ಮಾಡಿ ರೋಹಿತ್ ಕೊಲೆಯಾಗಿದೆ ಎಂದು ಮಾಹಿತಿ ನೀಡಿದ್ದ. ಕರೆ ಅನ್ವಯ ರೋಹಿತ್ ಮನೆಯವರು ಆತನಿಗಾಗಿ ಹುಡುಕಾಡಿದ್ದರು. ಖಾಲೀದ್ ಮನೆಗೆ ಹೋದರೂ ಆತ ಅಲ್ಲಿರಲಿಲ್ಲ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ನಂತರ ರೋಹಿತ್‌ಗಾಗಿ ಹುಡುಕಾಡಿದಾಗ ಆತನ ಶವ ಎಪಿಎಂಸಿ ಆವರಣದಲ್ಲಿ ಕಂಡು ಬಂದಿದೆ.

ಇದನ್ನೂ ಓದಿ: IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

ಕೂಡಲೇ ರೋಹಿತ್‌ ಕುಟುಂಬಸ್ಥರು ಎಪಿಎಂಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಿಜಯಪುರ ಡಿವೈಎಸ್‌ಪಿ ಬಸವರಾಜ ಯಲಿಗಾರ ಹಾಗೂ ಇತರೆ ಅಧಿಕಾರಿಗಳು ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿ‌ ಘಟನೆ ನಡೆದಿದೆ. ಕೊಲೆಗಾರರಿಗಾಗಿ ಹುಡುಕಾಟ ನಡೆಸಿದ್ದಾರೆ.

ಬೆಂಗಳೂರು ಸಿಟಿ ಮಾರ್ಕೆಟ್‌ನಲ್ಲಿ ಅಪರಿಚಿತ ಶವ ಪತ್ತೆ

ಬೆಂಗಳೂರಿನಲ್ಲಿ ಅಪರಿಚಿತ ವ್ಯಕ್ತಿಯ ಕೊಲೆಯಾಗಿದೆ. ಸಿಟಿ ಮಾರ್ಕೆಟ್ ಕಾಂಪ್ಲೆಕ್ಸ್ ಹಿಂಭಾಗದಲ್ಲಿ ಮೃತದೇಹ ಪತ್ತೆಯಾಗಿದೆ. ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತುಹಾಕಿ ಕೊಲೆ ಮಾಡಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಸಿಟಿ ಮಾರ್ಕೆಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ಸಂಬಂಧ ತನಿಖೆಯನ್ನು ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
RCB
ಕ್ರಿಕೆಟ್6 mins ago

RCB: ಆರ್​ಸಿಬಿಯ ನಂಟು ಬಿಡದ ವಿಜಯ್​ ಮಲ್ಯ; ಟ್ವೀಟ್​ ಮೂಲಕ ಅಭಿನಂದನೆ

Pavithra Jayaram Trinayani Serial Son Prajwal Reaction
ಸಿನಿಮಾ33 mins ago

Pavithra Jayaram: ಅಮ್ಮ ಮತ್ತು ಚಂದ್ರಕಾಂತ್‌ ಒಡನಾಟ ಹೇಗಿತ್ತು ಅಂತ ನಮಗೆ ಗೊತ್ತು ಎಂದ ಪವಿತ್ರ ಜಯರಾಮ್ ಮಗ!

Karnataka Rain
ಮಳೆ60 mins ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Viral News
ವೈರಲ್ ನ್ಯೂಸ್1 hour ago

Viral News: ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕಟ್‌ ಮಾಡಿ ಕಸದ ಬುಟ್ಟಿಗೆ ಎಸೆದ ಮಹಿಳೆ

Job Alert
ಉದ್ಯೋಗ1 hour ago

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ

Electric shock in udupi
ಉಡುಪಿ2 hours ago

Electric shock : ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಶಾಕ್‌ನಿಂದ ವ್ಯಕ್ತಿ ಸ್ಪಾಟ್‌ ಡೆತ್‌

Anjali Murder Case
ಕರ್ನಾಟಕ2 hours ago

Anjali Murder Case: ಅಂಜಲಿ ಹತ್ಯೆ ಪ್ರಕರಣ; ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

IT Raid
ದೇಶ2 hours ago

IT Raid: ಶೂ ವ್ಯಾಪಾರಿಗಳಿಗೆ ಐಟಿ ಶಾಕ್‌; 40 ಕೋಟಿ ರೂ. ಸೀಜ್‌-ಕಂತೆ ಕಂತೆ ನೋಟು ನೋಡಿ ದಂಗಾದ ಅಧಿಕಾರಿಗಳು

Suspicious Case in Mysuru
ಮೈಸೂರು2 hours ago

Suspicious Case : ಮೈಸೂರಿನಲ್ಲಿ ದಂಪತಿ ಅನುಮಾನಾಸ್ಪದ ಸಾವು; ಕೊಲೆಯೋ.. ಆತ್ಮಹತ್ಯೆಯೋ?

IPL 2024 The people paid revenge for the controversial post ashwini Puneeth Rajkumar
ಸ್ಯಾಂಡಲ್ ವುಡ್2 hours ago

IPL 2024 : ʻಅಶ್ವಿನಿ ದೊಡ್ಮನೆಯ ಅದೃಷ್ಟ ದೇವತೆ’: ತುಚ್ಛ ಪದ ಬಳಸಿದವರಿಗೆ ಭಾರೀ ತಿರುಗೇಟು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ5 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌