T20 World Cup | ಮಿಸ್ಟರ್​ ಬೀನ್​ಗಾಗಿ ಜಿಂಬಾಬ್ವೆ-ಪಾಕ್​ ಪ್ರಧಾನಿಗಳ ಟ್ವಿಟರ್​ ಸಮರ - Vistara News

T20 ವಿಶ್ವಕಪ್

T20 World Cup | ಮಿಸ್ಟರ್​ ಬೀನ್​ಗಾಗಿ ಜಿಂಬಾಬ್ವೆ-ಪಾಕ್​ ಪ್ರಧಾನಿಗಳ ಟ್ವಿಟರ್​ ಸಮರ

ಜಿಂಬಾಬ್ವೆ ದೇಶದ ಅಧ್ಯಕ್ಷ ಎಮರ್ಸನ್‌ ಟ್ವೀಟ್​ಗೆ ಕೆಂಡಾಮಂಡಲರಾದ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್

VISTARANEWS.COM


on

t20
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪರ್ತ್​: ಟಿ20 ವಿಶ್ವ ಕಪ್ (T20 World Cup) ಸೂಪರ್ 12 ಸುತ್ತಿನ ಗುರುವಾರದದ ಪಂದ್ಯದಲ್ಲಿ ಬಲಿಷ್ಠ ಪಾಕಿಸ್ತಾನ ತಂಡವನ್ನು 1 ರನ್​ಗಳಿಂದ ಸೋಲಿಸುವುದರೊಂದಿಗೆ ಜಿಂಬಾಬ್ವೆ ತಂಡ ರೋಚಕ ಜಯ ಸಾಧಿಸಿತ್ತು. ಪಾಕ್ ತಂಡವನ್ನು ಮಣಿಸುವಲ್ಲಿ ಯಶಸ್ವಿಯಾದ ಜಿಂಬಾಬ್ವೆ ತಂಡಕ್ಕೆ ವಿಶ್ವದಾದ್ಯಂತ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಜತೆಗೆ ಜಿಂಬಾಬ್ವೆ ದೇಶದ ಅಧ್ಯಕ್ಷರಾದ ಎಮರ್ಸನ್‌ ಕೂಡ ತಂಡದ ಗೆಲುವಿಗೆ ಅಭಿನಂದನೆ ಸಲ್ಲಿಸಿ ಟ್ವೀಟ್​ ಮಾಡಿದ್ದರು. ಆದರೆ ಈ ಟ್ವೀಟ್​ ಪಾಕಿಸ್ತಾನ ಪ್ರಧಾನಿಯನ್ನು ಕೆರಳಿಸುವಂತೆ ಮಾಡಿದೆ.

ಜಿಂಬಾಬ್ವೆ ತಂಡ ಪಾಕಿಸ್ತಾನ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಬಳಿಕ ಟ್ವೀಟ್ ಮಾಡಿದ್ದ ಅಧ್ಯಕ್ಷ ಎಮರ್ಸನ್‌ ದಂಬುಡ್ಜೊ ಮ್ನಂಗಾಗ್ವಾ, ಜಿಂಬಾಬ್ವೆಗೆ ಎಂತಹ ಅದ್ಭುತ ಗೆಲುವು, ತಂಡದ ಆಟಗಾರರಿಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದರು. ಹಾಗೆಯೇ ಇದರ ಜತೆಗೆ ಪಾಕಿಸ್ತಾನದ ಕಾಲೆಳೆದಿದ್ದ ಎಮರ್ಸನ್‌, ಮುಂದಿನ ಬಾರಿ ನಿಜವಾದ ಮಿಸ್ಟರ್ ಬೀನ್ ಅನ್ನು ಕಳುಹಿಸಿ ಎಂದು ಟ್ವೀಟ್​ನಲ್ಲಿ ಸೇರಿಸಿದ್ದರು.

ಜಿಂಬಾಬ್ವೆ ಅಧ್ಯಕ್ಷರ ಈ ಟ್ವೀಟ್​ ನೋಡುತ್ತಿದ್ದಂತೆ ತಕ್ಷಣ ಪ್ರತಿಕ್ರಿಯಿಸಿರುವ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್, “ನಮ್ಮಲ್ಲಿ ನಿಜವಾದ ಮಿಸ್ಟರ್ ಬೀನ್ ಇಲ್ಲದೆ ಇರಬಹುದು, ಆದರೆ ನಮ್ಮಲ್ಲಿ ನಿಜವಾದ ಕ್ರಿಕೆಟ್ ಸ್ಪಿರಿಟ್ ಇದೆ. ಹಾಗೆಯೇ ಪಾಕಿಸ್ತಾನಿಗಳಿಗೆ ಬೌನ್ಸ್ ಬ್ಯಾಕ್ ಮಾಡುವ ಫನ್ನಿ ಹ್ಯಾಬಿಟ್ ಕೂಡ ಇದೆ” ಎಂದು ಟ್ವೀಟ್ ಮಾಡುವ ಮೂಲಕ ತೀರುಗೇಟು ನೀಡಿದ್ದಾರೆ. ಜತೆಗೆ ಜಿಂಬಾಬ್ವೆ ತಂಡದ ಆಟಕ್ಕೆ ಅಭಿನಂದನೆಗಳನ್ನು ಸಲ್ಲಿಸಿರುವ ಪಾಕ್ ಪ್ರಧಾನಿ, ಮಿಸ್ಟರ್ ಪ್ರೆಸಿಡೆಂಟ್ ನಿಮ್ಮ ತಂಡ ತುಂಬಾ ಚೆನ್ನಾಗಿ ಆಡಿದೆ ಎಂದು ಅಭಿನಂದನೆ ಸಲ್ಲಿಸಿದ್ದಾರೆ.

ಪಂದ್ಯಕ್ಕೂ ಮುನ್ನವೇ ಕಾಲೆಳೆದಿದ್ದ ಅಭಿಮಾನಿ

ಪಾಕಿಸ್ತಾನ ತಂಡ ಕೇವಲ ಬಾರತ ತಂಡಕ್ಕೆ ಮಾತ್ರ ಸಾಂಪ್ರದಾಯಿಕ ಬದ್ಧ ಎದುರಾಳಿಯಲ್ಲ. ಜಿಂಬಾಬ್ವೆ ತಂಡಕ್ಕೂ ಬದ್ಧ ಎದುರಾಳಿಯಾಗಿ ಗುರುತಿಸಿಕೊಂಡಿದೆ. ಅದರಂತೆ ಪಾಕ್​ ಮತ್ತು ಭಾರತ ವಿರುದ್ಧದ ಪಂದ್ಯಕ್ಕೂ ಮುನ್ನ ಇದ್ದ ಕುತೂಹಲ ಗುರುವಾರ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಕಂಡು ಬಂತ್ತು. ಜಿಂಬಾಬ್ವೆ ತಂಡದ ಅಭಿಮಾನಿಯೊಬ್ಬ ಈ ಪಂದ್ಯಕ್ಕೂ ಒಂದು ದಿನ ಮುಂಚಿತವಾಗಿ ತನ್ನ ಟ್ವಿಟರ್​ ಖಾತೆಯಲ್ಲಿ ಪಾಕಿಸ್ತಾನ ತಂಡದ ವಿರುದ್ಧ ಕಿಡಿಕಾರಿದ್ದ.

“ಜಿಂಬಾಬ್ವೆಯ ಪ್ರಜೆಯಾಗಿ ನಾವು ನಿಮ್ಮನ್ನು ಎಂದಿಗೂ ಕ್ಷಮಿಸುವುದಿಲ್ಲ. ಒಮ್ಮೆ ನೀವು ನಿಜವಾದ ಮಿಸ್ಟರ್ ಬೀನ್ ಬದಲಿಗೆ ನಕಲಿ ಪಾಕ್ ಬೀನ್ ಅವರನ್ನು ನಮಗೆ ತೋರಿಸಿದ್ದೀರಿ. ನಿಮ್ಮ ಈ ಹಳೆಯ ಲೆಕ್ಕವನ್ನು ನಾಳಿನ ಪಂದ್ಯದಲ್ಲಿ ಬಡ್ಡಿ ಸಮೇತವಾಗಿ ತೀರಿಸುತ್ತೇವೆ. ಸದ್ಯಕ್ಕೆ ನೀವು ಈ ಪಂದ್ಯದಲ್ಲಿ ಸೋಲಿನಿಂದ ಪಾರಾಗಲು ಮಳೆಗಾಗಿ ಪ್ರಾರ್ಥಿಸಿ” ಎಂದು ಟ್ವೀಟ್ ಮಾಡಿದ್ದ. ಇದಕ್ಕೆ ಸರಿಯಾಗಿ ಬಾಬರ್​ ಪಡೆ ಜಿಂಬಾಬ್ವೆ ವಿರುದ್ಧ ಸೋಲು ಕಂಡಿತು. ಇಲ್ಲಿಂದ ಆರಂಭವಾದ “ಫ್ರಾಡ್​ ಪಾಕ್​ ಮಿಸ್ಟರ್​ ಬೀನ್​ ” ಟ್ವೀಟ್​ ಸಮರ ಉಭಯ ದೇಶದ ಪ್ರಧಾನಿಗಳ ಮಧ್ಯೆಗೂ ಬಂದು ನಿಂತಿತ್ತು.

ಜಿಂಬಾಬ್ಬೆ ಸೇಡಿಗೆ ಕಾರಣವೇನು?

ಪಾಕಿಸ್ತಾನ ವಿರುದ್ಧ ಜಿಂಬಾಬ್ವೆ ಇಷ್ಟೊಂದು ಕಿಡಿ ಕಾರಲು ಒಂದು ಕಾರಣವಿದೆ. 2016ರಲ್ಲಿ ನಡೆದಿದ್ದ ಅದೊಂದು ಘಟನೆ ಈ ಸಮರಕ್ಕೆ ಪ್ರಮುಖ ಕಾರಣ. 2016 ರಲ್ಲಿ ಜಿಂಬಾಬ್ವೆಯ ಹರಾರೆಯಲ್ಲಿ ನಡೆದಿದ್ದ ಅಂತಾರಾಷ್ಟ್ರೀಯ ಸಮ್ಮೇಳನವೊಂದರಲ್ಲಿ ಪಾಕ್ ಮೂಲದ ಹಾಸ್ಯನಟರಾಗಿರುವ ಆಸಿಫ್ ಮೊಹಮ್ಮದ್ ಎಂಬುವವರು ಮಿಸ್ಟರ್‌ ಬೀನ್‌ ಹೆಸರಲ್ಲಿ ಹಾಸ್ಯ ಕಾರ್ಯಕ್ರಮವೊಂದನ್ನು ನಡೆಸಿಕೊಟ್ಟಿದ್ದರು. ಆದರೆ ಇದು ನಕಲಿ ಮಿಸ್ಟರ್ ಬೀನ್ ಎಂಬ ಸತ್ಯವರಿತ ಜಿಂಬಾಬ್ವೆ ಜನರು ಈ ಕಾರ್ಯಕ್ರಮವನ್ನು ಅರ್ಧಕ್ಕೆ ತೊರೆದಿದ್ದರು. ಅಲ್ಲದೆ ಈ ನಕಲಿ ಬಿನ್ ಕಾರ್ಯಕ್ರಮವನ್ನು ಆಯೋಜಿಸಲು ನಮ್ಮ ಹಣವನ್ನು ವ್ಯರ್ಥ ಮಾಡಲಾಗಿದೆ ಎಂದು ಆಕ್ರೋಶಗೊಂಡಿದ್ದ ಜಿಂಬಾಬ್ವೆ ಜನ ಪಾಕಿಸ್ತಾನ ನಮಗೆ ವಂಚಿಸಿದೆ ಎಂದು ಆರೋಪಿಸಿದ್ದರು. ಈಗ ಪಾಕ್ ತಂಡ ಜಿಂಬಾಬ್ವೆ ಎದುರು ಸೋತಿರುವ ಈ ಸಂದರ್ಭವನ್ನು ಬಳಸಿಕೊಂಡಿರುವ ಜಿಂಬಾಬ್ವೆ ಜನತೆ ಈ ಮೋಸಕ್ಕೆ ಸೇಡು ತೀರಿಸಿಕೊಂಡಿದೆ.

ಇದನ್ನೂ ಓದಿ | T20 World Cup | ಭಾರತ-ನೆದರ್ಲೆಂಡ್ಸ್​ ಪಂದ್ಯದ ವೇಳೆ ಯುವಕನ ಪ್ರೇಮ ನಿವೇದನೆ, ಒಪ್ಪಿದಳಾ ಯುವತಿ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಕ್ರೀಡೆ

Women’s T20 World Cup: ಮಹಿಳಾ ಟಿ20 ವಿಶ್ವಕಪ್​ನ ಪರಿಷ್ಕೃತ ವೇಳಾಪಟ್ಟಿ ಪ್ರಕಟ; ಭಾರತ-ಪಾಕ್​ ಪಂದ್ಯ ಯಾವಾಗ?

Women’s T20 World Cup: ಸಾಂಪ್ರದಾಯಿ ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತದ ಮಹಿಳಾ ತಂಡ ಅಕ್ಟೋಬರ್ 6 ರಂದು ಪಂದ್ಯವನ್ನಾಡಲಿದೆ.

VISTARANEWS.COM


on

Women's T20 World Cup
Koo

ದುಬೈ: ಒಂಬತ್ತನೇ ಆವೃತ್ತಿಯ ಐಸಿಸಿ ಮಹಿಳಾ ಟಿ20 ವಿಶ್ವಕಪ್​ ಟೂರ್ನಿಯ(Women’s T20 World Cup) ತಾಣ ಬಾಂಗ್ಲಾದೇಶದಿಂದ ಯುಎಇ(UAE)ಗೆ ಸ್ಥಳಾಂತರಗೊಂಡ ಬೆನ್ನಲ್ಲೇ ಇದೀಗ ಐಸಿಸಿ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಭಾರತ ತಂಡ ಅಕ್ಟೋಬರ್ 4 ರಂದು ನ್ಯೂಜಿಲ್ಯಾಂಡ್​ ವಿರುದ್ಧ ಆಡುವ ಮೂಲಕ ತಮ್ಮ ಅಭಿಯಾನ ಆರಂಭಿಸಲಿದೆ. ಪಂದ್ಯಾವಳಿ ಅಕ್ಟೋಬರ್ 3 ರಿಂದ 20 ರವರೆಗೆ ನಡೆಯಲಿದೆ. ದುಬಾೖ ಮತ್ತು ಶಾರ್ಜಾದಲ್ಲಿ ಒಟ್ಟಾರೆ 23 ಪಂದ್ಯಗಳು ನಡೆಯಲಿವೆ. ಒಟ್ಟು 19 ದಿನ ಪಂದ್ಯಾವಳಿ ಸಾಗಲಿದೆ.

ಸಾಂಪ್ರದಾಯಿ ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತದ ಮಹಿಳಾ ತಂಡ ಅಕ್ಟೋಬರ್ 6 ರಂದು ಪಂದ್ಯವನ್ನಾಡಲಿದೆ. ಅಕ್ಟೋಬರ್ 13 ರಂದು ಆರು ಬಾರಿ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾದ ವಿರುದ್ಧ ಆಡಲಿದೆ. ಬಾಂಗ್ಲಾದೇಶ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ‘ಬಿ’ ಗುಂಪಿನಲ್ಲಿ ಸ್ಥಾನ ಪಡೆದಿದೆ.

ಭಾರತ ತಂಡ ಹಾಲಿ ಚಾಂಪಿಯನ್​ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್​ ಮತ್ತು ಪಾಕಿಸ್ತಾನ ಜತೆ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ.

ಇದನ್ನೂ ಓದಿ ICC Women’s T20 World Cup: ಯುಎಇಗೆ ಸ್ಥಳಾಂತರಗೊಂಡ ಮಹಿಳಾ ಟಿ20 ವಿಶ್ವಕಪ್

ಪ್ರತಿಯೊಂದು ತಂಡವು ಬಣ ಹಂತದಲ್ಲಿ ನಾಲ್ಕು ಪಂದ್ಯಗಳನ್ನಾಡಲಿದ್ದು ಅಗ್ರ ಎರಡು ತಂಡಗಳು ಸೆಮಿಫೈನಲಿಗೇರಲಿವೆ. ಸೆಮಿಫೈನಲ್ಸ್‌ ಅ. 17 ಮತ್ತು 18ರಂದು ನಡೆಯಲಿದ್ದರೆ ದುಬಾೖಯಲ್ಲಿ ಅ. 20ರಂದು ಫೈನಲ್‌ ಜರಗಲಿದೆ.

ಲೀಗ್​ ಹಂತದ ಯಾವುದೇ ಪಂದ್ಯಗಳಿಗೆ ಮೀಸಲು ದಿನವಿಲ್ಲ. ಕೇಲವ ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮಾತ್ರ ಮೀಸಲು ದಿನ ನಿಗದಿಯಾಗಿದೆ. ಪಂದ್ಯ ಟೈ ಆದರೆ ಸೂಪರ್‌ ಓವರ್‌ ಮೂಲಕ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ. ಸೂಪರ್‌ ಓವರ್‌ ಕೂಡ ಟೈ ಆದರೆ ಇನ್ನೊಂದು ಸೂಪರ್‌ ಓವರ್‌ ಇರಲಿದೆ. ಹೀಗೆ ಸ್ಪಷ್ಟ ಫಲಿತಾಂಶ ಲಭಿಸುವ ತನಕ ಸೂಪರ್‌ ಓವರ್‌ ಜಾರಿಯಲ್ಲಿರುತ್ತದೆ.

ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯ ದಂಗೆಯಿಂದಾಗಿ ಮಹಿಳಾ ಟಿ20 ವಿಶ್ವಕಪ್‌ ಪಂದ್ಯಾವಳಿಯ(ICC Women’s T20 World Cup) ಆತಿಥ್ಯ ಯುಎಇ(UAE)ಗೆ ಲಭಿಸಿತ್ತು. ಹೀಗಾಗಿ ವೇಳಾಪಟ್ಟಿಯಲ್ಲಿ ತಾಣಗಳ ಹೆಸರನ್ನು ಪರಿಷ್ಕೃತಗೊಳಿಸಲಾಗಿದೆ. ಪಂದ್ಯಗಳಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

Continue Reading

ಕ್ರಿಕೆಟ್

Viral News: ಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಟಿ20 ವಿಶ್ವಕಪ್​ ಟ್ರೋಫಿಗೆ ಪೂಜೆ ಸಲ್ಲಿಸಿದ ರೋಹಿತ್​ ಶರ್ಮ, ಜಯ್​ ಶಾ

Viral News: ರೋಹಿತ್​ ಶರ್ಮ(Rohit Sharma) ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(Jay Shah) ಮುಂಬಯಿಯ ಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಟಿ20 ವಿಶ್ವಕಪ್​ ಟ್ರೋಫಿಗೆ ಪೂಜೆ ಸಲ್ಲಿಸಿದ್ದಾರೆ.

VISTARANEWS.COM


on

Viral News
Koo

ಮುಂಬಯಿ: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆದಿದ್ದ ಟಿ20 ವಿಶ್ವಕಪ್​ನಲ್ಲಿ(t20 world cup 2024) ಭಾರತ ತಂಡ ಕಪ್​ ಗೆದ್ದು ಸರಿ ಸುಮಾರು 2 ತಿಂಗಳು ಕಳೆದಿದೆ. ಇದೀಗ ತಂಡದ ನಾಯಕ ರೋಹಿತ್​ ಶರ್ಮ(Rohit Sharma) ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ(Jay Shah) ಮುಂಬಯಿಯ ಸಿದ್ಧಿ ವಿನಾಯಕನ ಸನ್ನಿಧಿಯಲ್ಲಿ ಬುಧವಾರ ಟ್ರೋಫಿಗೆ ಪೂಜೆ ಸಲ್ಲಿಸಿದರು. ಈ ಫೋಟೊ ವೈರಲ್(Viral News)​ ಆಗಿದೆ.

17ನೇ ವರ್ಷಗಳ ಬಳಿಕ ಟಿ20 ವಿಶ್ವಕಪ್(T20 World Cup final)​ ಗೆದ್ದ ಭಾರತ ತಂಡದ ಈ ಅಭೂತಪೂರ್ವ ಗೆಲುವನ್ನು ಅಭಿಮಾನಿಗಳು ದೇಶಾದ್ಯಂತ ಸಂಭ್ರಮದಿಂದ ಆಚರಿಸಿದ್ದರು. ಟಿ20 ವಿಶ್ವಕಪ್(T20 World Cup) ಗೆದ್ದ ಭಾರತ ಕ್ರಿಕೆಟ್ ತಂಡದ ಆಟಗಾರರನ್ನು ಮುಂಬೈಯಲ್ಲಿ ಭರ್ಜರಿಯಾಗಿ ಅಭಿನಂದಿಸಲಾಗಿತ್ತು. ಮರೀನ್ ಡ್ರೈವ್‌ ಪ್ರೇದೇಶದಲ್ಲಿ ಸಾಗರೋಪಾದಿಯಲ್ಲಿ ಜನ ಸೇರಿದ್ದರು.

ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ಜೂನ್​ 29ರಂದು ನಡೆದಿದ್ದ ಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ(South Africa vs India) 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ಗಳ ಗೆಲುವು ಸಾಧಿಸಿತ್ತು.

ಟೀಮ್​ ಇಂಡಿಯಾ ಬಳಿ ಇರುವುದು ನಕಲಿ ವಿಶ್ವಕಪ್​ ಟ್ರೋಫಿ

ಟೀಮ್​ ಇಂಡಿಯಾ ಭಾರತಕ್ಕೆ ತಂದಿರುವುದು ಡುಪ್ಲಿಕೇಟ್ ಟಿ20 ವಿಶ್ವಕಪ್​ ಟ್ರೋಫಿ. ಸಾಮಾನ್ಯವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಆಯೋಜಿಸುವ ಯಾವುದೇ ವಿಶ್ವಕಪ್​ ಟೂರ್ನಿಯಲ್ಲಿ ಫೋಟೋಶೂಟ್‌ಗೆ ಮಾತ್ರ ಮೂಲ ಟ್ರೋಫಿಯನ್ನು ನೀಡಲಾಗುತ್ತದೆ. ಆ ಬಳಿಕ ಐಸಿಸಿ ವರ್ಷದ ಲಾಂಛನದೊಂದಿಗೆ ನಕಲಿ ಬೆಳ್ಳಿಯ ಟ್ರೋಫಿಯನ್ನು ವಿನ್ಯಾಸಗೊಳಿಸುತ್ತದೆ ಮತ್ತು ಇದರನ್ನು ವಿಜೇತ ತಂಡಕ್ಕೆ ನೀಡಲಾಗುತ್ತದೆ. ಮೂಲ ಟ್ರೋಫಿ ಐಸಿಸಿ ಬಳಿಯೇ ಇರುತ್ತದೆ.

ಅಸಲಿ ಟ್ರೋಫಿ ದುಬೈನಲ್ಲಿರುವ ಐಸಿಸಿ ಕೇಂದ್ರ ಕಚೇರಿಯಲ್ಲಿದೆ. ಫೋಟೋಶೂಟ್​ ನಡೆಸಿದ ಬಳಿಕ ಮೂಲ ಟ್ರೋಫಿಯನ್ನು ಕೇಂದ್ರ ಕಚೇರಿಗೆ ನೀಡಲಾಗುತ್ತದೆ. ಯಾವುದೇ ತಂಡ ಕಪ್ ಗೆದ್ದರೂ ಅದನ್ನು ಸಂಭ್ರಮಾಚರಣೆ ಮತ್ತು ಫೋಟೋ ಸೆಷನ್​ವರೆಗೂ ಮಾತ್ರ ಪ್ರಸ್ತುತಪಡಿಸಲಾಗುತ್ತದೆ. ಅದರ ನಂತರ, ಗೆದ್ದವರು ನಕಲಿ ಟ್ರೋಫಿಯೊಂದಿಗೆ ತವರಿಗೆ ಹಿಂದಿರುಗುತ್ತಾರೆ.

Continue Reading

ಕ್ರಿಕೆಟ್

T20 World Cup: ಟಿ20 ವಿಶ್ವಕಪ್​ನ 3 ಪಿಚ್​ಗಳಿಗೆ ಕಳಪೆ ರೇಟಿಂಗ್​ ಕೊಟ್ಟ ಐಸಿಸಿ

T20 World Cup: ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿನ ಪಿಚ್​ ಬಗ್ಗೆ ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ, ಕೋಚ್​ ಆಗಿದ್ದ ರಾಹುಲ್​ ದ್ರಾವಿಡ್​ ಅವರು ಅಂದೇ ಅಸಾಮಾಧಾನ ವ್ಯಕ್ತಪಡಿಸಿದ್ದರು.

VISTARANEWS.COM


on

T20 World Cup
Koo

ದುಬೈ: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆದಿದ್ದ ಪುರುಷರ ಟಿ20 ವಿಶ್ವಕಪ್​ ಟೂರ್ನಿ(T20 World Cup) ಮುಕ್ತಾಯ ಕಂಡು 2 ತಿಂಗಳ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಪಿಚ್ ರೇಟಿಂಗ್‌ಗಳನ್ನು ಬಿಡುಗಡೆ ಮಾಡಿದೆ. ಎಲ್ಲಾ 52 ಪೂರ್ಣಗೊಂಡ ಪಂದ್ಯಗಳನ್ನು ಒಳಗೊಂಡಿರುವ ವರದಿಯಲ್ಲಿ ಮೂರು ಪಂದ್ಯಗಳ ಪಿಚ್​ಗಳನ್ನು ಅತೃಪ್ತಿಕರ ಎಂದು ಪರಿಗಣಿಸಿದೆ.

ಎಂಟು ಗುಂಪು-ಹಂತದ ಪಂದ್ಯಗಳನ್ನು ಆಯೋಜಿಸಿದ್ದ ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂ ಪಿಚ್​ ಅನ್ನು ಅತ್ಯಂತ ಕೆಟ್ಟ ಪಿಚ್​ ಎಂದು ಪರಿಗಣಿಸಲಾಗಿದೆ. ಇಲ್ಲಿ ನಡೆದಿದ್ದ ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ, ಭಾರತ ಮತ್ತು ಐರ್ಲೆಂಡ್ ಪಂದ್ಯಗಳ ಪಿಚ್‌ಗಳನ್ನು ‘ಅತೃಪ್ತಿಕರವಾಗಿಲ್ಲ’ ಎಂದು ಐಸಿಸಿ ರೇಟಿಂಗ್​ ನೀಡಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಶ್ರೀಲಂಕಾ 77 ರನ್‌ಗಳಿಗೆ ಆಲೌಟ್ ಆಗಿದ್ದರೆ, ಭಾರತದ ವಿರುದ್ಧ ಐರ್ಲೆಂಡ್ ಕೇವಲ 96 ರನ್ ಗಳಿಸಿತು. ಈ ಸ್ಟೇಡಿಯಂನ ಪಿಚ್​ನಲ್ಲಿ ಗರಿಷ್ಠ ರನ್​ ದಾಖಲಾದದ್ದು 137 ರನ್​. ಕೆನಡಾ ಮತ್ತು ಐರ್ಲೆಂಡ್ ವಿರುದ್ಧ ಈ ಮೊತ್ತ ದಾಖಲಾಗಿತ್ತು. ವೆಸ್ಟ್​ ಇಂಡೀಸ್​ನ ಟ್ರಿನಿಡಾಡ್ ಪಿಚ್​ನಲ್ಲಿ ನಡೆದಿದ್ದ ದಕ್ಷಿಣ ಆಫ್ರಿಕಾ ಮತ್ತು ಅಫಘಾನಿಸ್ತಾನ ನಡುವಣ ಸೆಮಿಫೈನಲ್​ ಪಂದ್ಯವನ್ನು ಕೂಡ ಅತೃಪ್ತಿಕರ ಎಂದು ಪರಿಗಣಿಸಿದೆ.

ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿನ ಪಿಚ್​ ಬಗ್ಗೆ ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ, ಕೋಚ್​ ಆಗಿದ್ದ ರಾಹುಲ್​ ದ್ರಾವಿಡ್​ ಅವರು ಅಂದೇ ಅಸಾಮಾಧಾನ ವ್ಯಕ್ತಪಡಿಸಿದ್ದರು. ಇದು ಕ್ರಿಕೆಟ್​ ಆಡಲು ಸೂಕ್ತವಾಗಿಲ್ಲ ಎಂದು ಹೇಳಿದ್ದರು. ಈ ಮೈದಾನಕ್ಕೆ ಆಸ್ಟ್ರೇಲಿಯಾದಿಂದ ತರಿಸಲಾಗಿದ್ದ ಡ್ರಾಪ್-ಇನ್ ಪಿಚ್‌ಗಳನ್ನು ಅಳವಡಿಸಲಾಗಿತ್ತು. ಒಟ್ಟಾರೆಯಾಗಿ, ಐಸಿಸಿ 31 ಪಿಚ್‌ಗಳನ್ನು ‘ತೃಪ್ತಿದಾಯಕ’ ಮತ್ತು 18 ಪಿಚ್​ಗಳನ್ನು ‘ತುಂಬಾ ಒಳ್ಳೆಯದು’ ಎಂಬ ರೇಟಿಂಗ್​ ನೀಡಿದೆ.

ಇದನ್ನೂ ಓದಿ ICC Women’s T20 World Cup: ಯುಎಇಗೆ ಸ್ಥಳಾಂತರಗೊಂಡ ಮಹಿಳಾ ಟಿ20 ವಿಶ್ವಕಪ್

ಕೆನ್ಸಿಂಗ್ಟನ್ ಓವಲ್ ಕ್ರಿಕೆಟ್ ಮೈದಾನದಲ್ಲಿ ಜೂನ್​ 29ರಂದು ನಡೆದಿದ್ದ ಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ(South Africa vs India) 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತ್ತು.

ಫೈನಲ್ ಪಂದ್ಯದಲ್ಲಿ ಸೂರ್ಯಕುಮಾರ್​ ಯಾದವ್​ ಅವರು ಬೌಂಡರಿ ಲೈನ್​ನಲ್ಲಿ ಹಿಡಿದ ಡೇವಿಡ್ ಮಿಲ್ಲರ್​ ಅವರ ಕ್ಯಾಚ್​ ಭಾರೀ ಚರ್ಚೆಗೆ ಕಾರಣವಾಗಿತ್ತು.​ ಕೊನೆಯ ಓವರ್​ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಯಾರೂ ಊಹಿಸದಂತೆ ಸಾಹಸಮಯ ಅಮೋಘ ಕ್ಯಾಚ್ ಪಡೆದರು. 21 ರನ್ ಗಳಿಸಿದ್ದ ಡೇವಿಡ್​ ಮಿಲ್ಲರ್ ವಿಕೆಟ್​ ಕೈಚೆಲ್ಲಿದರು. ಮಿಲ್ಲರ್​ ಔಟ್​ ಆಗುತ್ತಿದ್ದಂತೆ ಭಾರತದ ಗೆಲುವು ಕೂಡ ಖಚಿತಗೊಂಡಿತ್ತು. ಆದರೆ, ಈ ಕ್ಯಾಚ್​ ಹಿಡಿಯುವ ವೇಳೆ ಸೂರ್ಯಕುಮಾರ್​ ಅವರ ಕಾಲುಗಳು ಬೌಂಡರಿ ಲೈನ್​ನ ಕೆಳ ಭಾಗದ ಪಟ್ಟಿಗೆ ತಾಗಿದೆ ಎಂದು ಆರೋಪ ಮಾಡಿದ್ದರು. ಬಳಿಕ ಐಸಿಸಿ ಹಲವು ಆಯಾಮಗಳ ವಿಡಿಯೊ ಹಂಚಿಕೊಳ್ಳುವ ಮೂಲಕ ಸೂರ್ಯ ಹಿಡಿದ ಕ್ಯಾಚ್​ನಲ್ಲಿ ಸಮಸ್ಯೆ ಇಲ್ಲ ಎಂದು ಸ್ಪಷ್ಟನೆ ನೀಡಿತ್ತು.

Continue Reading

ಕ್ರಿಕೆಟ್

ICC Women’s T20 World Cup: ಯುಎಇಗೆ ಸ್ಥಳಾಂತರಗೊಂಡ ಮಹಿಳಾ ಟಿ20 ವಿಶ್ವಕಪ್

ICC Women’s T20 World Cup:ಪಂದ್ಯಾವಳಿಯು ಯುಎಇಯ ಎರಡು ಸ್ಥಳಗಳಾದ ದುಬೈ ಮತ್ತು ಶಾರ್ಜಾದಲ್ಲಿ – ಅಕ್ಟೋಬರ್ 3 ರಿಂದ 20 ರವರೆಗೆ ನಡೆಯಲಿದೆ.

VISTARANEWS.COM


on

ICC Women’s T20 World Cup
Koo

ದುಬಾೖ: ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯ ದಂಗೆಯಿಂದಾಗಿ ಮಹಿಳಾ ಟಿ20 ವಿಶ್ವಕಪ್‌ ಪಂದ್ಯಾವಳಿಯ(ICC Women’s T20 World Cup) ಆತಿಥ್ಯ ತೂಗುಯ್ನಾಲೆಯಲ್ಲಿ ಸಿಲುಕಿತ್ತು. ಇದೇ ಕಾರಣದಿಂದ ಐಸಿಸಿ, ಟೂರ್ನಿ ನಡೆಸಲು ಪರ್ಯಾಯ ತಾಣವೊಂದರ ಹುಡುಕಾಟದಲ್ಲಿತ್ತು. ಇದೀಗ ಅಂತಿಮವಾಗಿ ಯುಎಇ(UAE )ಯನ್ನು ಆಯ್ಕೆ ಮಾಡಲಾಗಿದೆ. ಈ ವಿಚಾರವನ್ನು ಐಸಿಸಿ ಮಂಗಳವಾರ ಅಧಿಕೃತ ಪ್ರಕಟನೆ ಮೂಲಕ ತಿಳಿಸಿದೆ.

ಪಂದ್ಯಾವಳಿಯು ಯುಎಇಯ ಎರಡು ಸ್ಥಳಗಳಾದ ದುಬೈ ಮತ್ತು ಶಾರ್ಜಾದಲ್ಲಿ ಅಕ್ಟೋಬರ್ 3 ರಿಂದ 20 ರವರೆಗೆ ನಡೆಯಲಿದೆ. “ಬಾಂಗ್ಲಾದೇಶ ಮಹಿಳಾ ಟಿ20 ವಿಶ್ವಕಪ್ ಆಯೋಜಿಸದಿರುವುದು ನಾಚಿಕೆಗೇಡಿನ ಸಂಗತಿ” ಎಂದು ಐಸಿಸಿ ಮುಖ್ಯ ಕಾರ್ಯನಿರ್ವಾಹಕ ಜೆಫ್ ಅಲ್ಲಾರ್ಡಿಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜತೆಗೆ ಆತಿಥ್ಯ ವಹಿಸಿದ್ದಕ್ಕಾಗಿ ಎಮಿರೇಟ್ಸ್ ಕ್ರಿಕೆಟ್ ಮಂಡಳಿಗೆ ಧನ್ಯವಾದ ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ಬಾಂಗ್ಲಾದೇಶ ಕ್ರಿಕೆಟ್​ ಮಂಡಳಿ ಸೇನಾ ಮುಖ್ಯಸ್ಥ ಜನರಲ್‌ ವಕಾರ್‌ ಜಮಾನ್‌ ಅವರಿಗೆ ಪತ್ರ ಬರೆದು, ಬಾಂಗ್ಲಾದೇಶದಲ್ಲಿ ಟಿ20 ವಿಶ್ವಕಪ್‌ ಪಂದ್ಯಾವಳಿಯನ್ನು ನಡೆಸಿಕೊಡಲು ಸಹಾಯ ಮಾಡಬೇಕು ಎಂದು ಕೋರಿತ್ತು. ಆದರೆ ಸದ್ಯಕ್ಕೆ ಬಾಂಗ್ಲಾದೇಶದಲ್ಲಿ ಶಾಂತಿ ನೆಲೆಸುವಂತೆ ಕಾಣುತ್ತಿಲ್ಲ ಹೀಗಾಗಿ ಬಾಂಗ್ಲಾದೇಶ ಕ್ರಿಕೆಟ್​ ಮಂಡಳಿ ಟೂರ್ನಿಯನ್ನು ನಡೆಸಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿತ್ತು. ಹೀಗಾಗಿ ಐಸಿಸಿ ಯುಎಇಗೆ ಆತಿಥ್ಯ ನೀಡಿದೆ.

ಇದನ್ನೂ ಓದಿ Scott Boland: ಬಾರ್ಡರ್-ಗವಾಸ್ಕರ್ ಟ್ರೋಫಿ ಆರಂಭಕ್ಕೂ ಮುನ್ನವೇ ಕೊಹ್ಲಿಗೆ ಎಚ್ಚರಿಕೆ ನೀಡಿದ ಆಸೀಸ್​ ವೇಗಿ

ಮಹಿಳಾ ಟಿ20 ವಿಶ್ವಕಪ್‌ ಆಯೋಜನೆಗೆ ಐಸಿಸಿ ನಮ್ಮನ್ನು ಸಂಪರ್ಕಿಸಿದರೆ ನಾನು ಇದನ್ನು ನಿರಾಕರಿಸುತ್ತೇನೆ ಎಂದು ಕೆಲ ದಿನಗಳ ಹಿಂದೆ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಹೇಳಿಕೆ ನೀಡಿದ್ದರು. ಮುಂದಿನ ವರ್ಷ ನಾವು ಮಹಿಳಾ ಏಕದಿನ ವಿಶ್ವಕಪ್‌ ಆಯೋಜನೆ ಮಾಡುತ್ತಿದ್ದೇವೆ. ಎರಡು ವಿಶ್ವಕಪ್‌ ಕೂಟಗಳನ್ನೂ ಭಾರತ ನಡೆಸುತ್ತಿದೆ ಎಂಬ ಅಭಿಪ್ರಾಯ ಮೂಡಲು ಬಿಡುವುದಿಲ್ಲ ಎಂದು ಹೇಳಿದ್ದರು.

ಶೇಕ್‌ ಹಸೀನಾ ಅವರು ರಾಜೀನಾಮೆ ನೀಡಿ ಪಲಾಯನ ಮಾಡಿದ ಬಳಿಕ ನಡೆದ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆದಿದೆ. ಹಿಂದೂಗಳ ಮನೆಗಳು, ವ್ಯವಹಾರಗಳು ಮತ್ತು ದೇವಾಲಯಗಳನ್ನು ಗುರಿಯಾಗಿಸಿಕೊಂಡು ನಡೆದ ಹಿಂಸಾಚಾರದಲ್ಲಿ ಶಾಲಾ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 45 ಜನರು ಗಾಯಗೊಂಡಿದ್ದಾರೆ. ಬಾಂಗ್ಲಾದೇಶದ 17 ಕೋಟಿ ಜನಸಂಖ್ಯೆಯ ಸುಮಾರು 8 ಪ್ರತಿಶತ ಹಿಂದೂಗಳಿದ್ದಾರೆ. ಇವರು ಸಾಂಪ್ರದಾಯಿಕವಾಗಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ಬೆಂಬಲಿಗರು. ಹೀಗಾಗಿ ಇವರನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತದೆ ಎನ್ನಲಾಗಿದೆ.

ನೊಬೆಲ್ ಪ್ರಶಸ್ತಿ ವಿಜೇತ ಅರ್ಥ ಶಾಸ್ತ್ರಜ್ಞ ಮುಹಮ್ಮದ್ ಯೂನಸ್ ನೇತೃತ್ವದಲ್ಲಿ ಗುರುವಾರ ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರವನ್ನು ನೇಮಿಸಲಾಯಿತು. ಸಂವಿಧಾನದ ಅಡಿಯಲ್ಲಿ, 90 ದಿನಗಳಲ್ಲಿ ಚುನಾವಣೆಯನ್ನು ನಡೆಸಬೇಕಾಗಿದೆ. ಆದರೆ ಯೂನಸ್ ಹಾಗೂ ಮಿಲಿಟರಿ ಮತ್ತು ಅಧ್ಯಕ್ಷರು, ಚುನಾವಣೆಗಳು ಯಾವಾಗ ನಡೆಯುತ್ತವೆ ಎಂಬುದರ ಕುರಿತು ಪ್ರತಿಕ್ರಿಯಿಸಿಲ್ಲ.

Continue Reading
Advertisement
Actor darshan
ಪ್ರಮುಖ ಸುದ್ದಿ9 ಗಂಟೆಗಳು ago

Actor Darshan : ನಟ ದರ್ಶನ್ ಬಿಡುಗಡೆಗೆ ಮುಹೂರ್ತ ಫಿಕ್ಸ್; ಜನ್ಮ ಜಾತಕದ ಪ್ರಕಾರ ಶುಭ ಸಮಯ ಶುರು

KEA UGCET 2024
ಬೆಂಗಳೂರು10 ಗಂಟೆಗಳು ago

UGCET 2024 : ದ್ವಿತೀಯ ಪಿಯುಸಿ 3ನೇ ಪರೀಕ್ಷೆಯಲ್ಲಿ ಅರ್ಹರಾದವರಿಗೆ ಆಪ್ಷನ್‌ ದಾಖಲಿಸಲು ಲಿಂಕ್‌ ಓಪನ್‌

ಚಿಕ್ಕೋಡಿ10 ಗಂಟೆಗಳು ago

Physical Abuse: ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಅತ್ಯಾಚಾರವೆಸಗಿ ಕೊಂದಿದ್ದ ನೀಚನಿಗೆ ಗಲ್ಲುಶಿಕ್ಷೆ ವಿಧಿಸಿದ ಕೋರ್ಟ್‌

BBMP plans to make arrangements for food in areas where stray dogs do not get food
ಬೆಂಗಳೂರು11 ಗಂಟೆಗಳು ago

Street Dogs : ಬೀದಿನಾಯಿಗಳ ಹಸಿವು ನೀಗಿಸಲು ಮುಂದಾದ ಬಿಬಿಎಂಪಿ; ಸಾರ್ವಜನಿಕರು ಕೈ ಜೋಡಿಸುವಂತೆ ಮನವಿ

Cm Siddaramaiah
ಬೆಂಗಳೂರು11 ಗಂಟೆಗಳು ago

CM Siddaramaiah : ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ದ್ವಿಸದಸ್ಯ ಪೀಠಕ್ಕೆ ಅಪೀಲು ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ತೀರ್ಮಾನ

Mahalaya Amavasya on Gandhi Jayanti Poultry Association demands withdrawal of ban on sale of meat
ಬೆಂಗಳೂರು12 ಗಂಟೆಗಳು ago

Mahalaya Amavasya 2024: ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ; ಮಾಂಸ ಮಾರಾಟ ನಿಷೇಧ ಹಿಂಪಡೆಯುವಂತೆ ಒತ್ತಾಯ

Road Accident
ಬೆಂಗಳೂರು14 ಗಂಟೆಗಳು ago

Road Accident : ಆಟೋಗೆ ಲೋಡ್‌ ತುಂಬಿದ್ದ ಲಾರಿ ಡಿಕ್ಕಿ; ಚಾಲಕನ ನಿದ್ರೆ ಮಂಪರಿಗೆ ಜೀವ ಬಿಟ್ಟಳು ಯುವತಿ

Techie robbery plans to delete her photo video from lovers mobile phone
ಬೆಂಗಳೂರು15 ಗಂಟೆಗಳು ago

Robbery case : ಲವ್ವರ್ ಮೊಬೈಲ್‌ನಲ್ಲಿದ್ದ ತನ್ನ ಫೋಟೊ, ವಿಡಿಯೊ ಡಿಲೀಟ್‌ ಮಾಡಿಸಲು ಟೆಕ್ಕಿಯ ಖರ್ತನಾಕ್‌ ರಾಬರಿ ಪ್ಲ್ಯಾನ್‌

Hopcoms store loses charm in Bengaluru
ಬೆಂಗಳೂರು15 ಗಂಟೆಗಳು ago

HOPCOMS Outlets : ಬೆಂಗಳೂರಿನಲ್ಲಿ ಚಾರ್ಮ್‌ ಕಳೆದುಕೊಂಡ ಹಾಪ್‌ಕಾಮ್ಸ್‌ ಮಳಿಗೆ

fire accident
ಬೆಂಗಳೂರು ಗ್ರಾಮಾಂತರ16 ಗಂಟೆಗಳು ago

Fire Accident : ಹೊಸೂರು ಸಮೀಪದ ಟಾಟಾ ಕಂಪೆನಿಯಲ್ಲಿ ಭಾರಿ ಅಗ್ನಿ ಅವಘಡ; ಪ್ರಾಣ ಉಳಿಸಿಕೊಳ್ಳಲು ಓಡಿ ಬಂದ ಕಾರ್ಮಿಕರು ‌

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌