PM Modi | ಪೆನ್, ಗನ್ -ಎರಡೂ ಬಗೆಯ ನಕ್ಸಲರನ್ನು ಬಗ್ಗು ಬಡಿಯುತ್ತೇವೆ: ಪ್ರಧಾನಿ ಮೋದಿ - Vistara News

ದೇಶ

PM Modi | ಪೆನ್, ಗನ್ -ಎರಡೂ ಬಗೆಯ ನಕ್ಸಲರನ್ನು ಬಗ್ಗು ಬಡಿಯುತ್ತೇವೆ: ಪ್ರಧಾನಿ ಮೋದಿ

ದೇಶದಲ್ಲಿ ನಕ್ಸಲ್​ ಪೀಡಿತ ಜಿಲ್ಲೆಗಳು, ಪ್ರದೇಶಗಳ ಸಂಖ್ಯೆ ಕಳೆದ ಎಂಟು ವರ್ಷಗಳಲ್ಲಿ ಇಳಿಮುಖವಾಗಿದೆ. ಜಮ್ಮು-ಕಾಶ್ಮೀರವೇ ಆಗಲಿ, ಈಶಾನ್ಯ ರಾಜ್ಯಗಳೇ ಇರಲಿ ಶಾಂತಿ ಸ್ಥಾಪನೆಯೇ ನಮ್ಮ ಆದ್ಯತೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

VISTARANEWS.COM


on

Narendra Modi Holds High-Level Meet On Covid As Daily Cases Spike
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ದೇಶದ ಆಂತರಿಕ ಭದ್ರತೆಯನ್ನು ಇನ್ನಷ್ಟು ಬಲಪಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ನಕ್ಸಲಿಸಂ ಮತ್ತು ಅದರ ಎಲ್ಲ ಸ್ವರೂಪಗಳನ್ನೂ ಬೇರು ಸಹಿತ ಕಿತ್ತೊಗೆಯಬೇಕಾದ ಅಗತ್ಯತೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹರ್ಯಾಣದ ಸೂರಜ್​ಕುಂಡ್​​ನಲ್ಲಿ ನಡೆದ ಚಿಂತನ ಶಿಬಿರದಲ್ಲಿ ವರ್ಚ್ಯುವಲ್​ ಆಗಿ ಅವರು ಮಾತನಾಡಿದರು.

‘ಉಗ್ರತ್ವದ ವಿರುದ್ಧ ನಮ್ಮ ಸರ್ಕಾರ ಶೂನ್ಯ ಸಹಿಷ್ಣುತಾ ನೀತಿ ಪಾಲನೆ ಮಾಡುತ್ತಿದೆ. ಭಯೋತ್ಪಾದನೆಯನ್ನು ತಳಮಟ್ಟದಿಂದ ಕಿತ್ತೊಗೆಯಲು ಎಲ್ಲ ಸರ್ಕಾರಗಳೂ ಬದ್ಧವಾಗಿ ಕಾರ್ಯನಿರತವಾಗಿವೆ. ಭಯೋತ್ಪಾದನೆ ವಿರುದ್ಧ ಹೋರಾಡುತ್ತಿರುವವರ ಜತೆ ನಾವೆಲ್ಲರೂ ಕೈಜೋಡಿಸಬೇಕು. ಅದೇ ರೀತಿ ಅರ್ಬನ್​ ನಕ್ಸಲರು, ಮಾವೋವಾದಿಗಳವಿರುದ್ಧವೂ ನಮ್ಮ ಹೋರಾಟ ಗಟ್ಟಿಯಾಗಬೇಕು. ಅವರು ಗನ್​ ಹಿಡಿದು ಬರುವ ನಕ್ಸಲರೇ ಆಗಿರಲಿ, ಪೆನ್​ ಹಿಡಿದು ನಕ್ಸಲಿಸಂ ಮಾಡುತ್ತಿರುವವರೇ ಆಗಿರಲಿ-ಅವರನ್ನೆಲ್ಲ ಸಂಪೂರ್ಣ ಬಗ್ಗುಬಡಿಯುತ್ತೇವೆ. ನಕ್ಸಲ್​ ನಿರ್ಮೂಲನಕ್ಕೆ ಕ್ರಮ ಆಗಲೇಬೇಕು’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

‘ನಕ್ಸಲೀಯರು, ಮಾವೋವಾದಿಗಳು ಈ ದೇಶದ ಯುವಜನರ ಮನಸಿನಲ್ಲಿ ವಿಷಬೀಜ ಬಿತ್ತುತ್ತಿದ್ದಾರೆ. ಇಲ್ಲ-ಸಲ್ಲದ ವಿಷಯವನ್ನು ಅವರ ತಲೆಗೆ ತುಂಬಿ ದ್ವೇಷ ಹುಟ್ಟುಹಾಕುತ್ತಿದ್ದಾರೆ. ಈ ಮೂಲಕ ತಮ್ಮ ಬೌದ್ಧಿಕ ಕ್ಷೇತ್ರವನ್ನೂ ವಿಸ್ತರಣೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಇನ್ನು ಮುಂದೆ ಇಂಥದ್ದೆಲ್ಲ ನಡೆಯಲು ನಾವು ಅವಕಾಶ ಮಾಡಿಕೊಡಬಾರದು. ವಿದೇಶಿ ದೇಣಿಗೆ ಪಡೆದು ನಮ್ಮ ದೇಶದ ಐಕ್ಯತೆ ಮತ್ತು ಸಮಗ್ರತೆಯನ್ನು ಹಾಳುಮಾಡುತ್ತಿರುವ ಇಂಥ ದುಷ್ಟಶಕ್ತಿಗಳು ಪ್ರವರ್ಧಮಾನಕ್ಕೆ ಬರಲು ಬಿಡಬಾರದು. ಅವರನ್ನು ಹತ್ತಿಕ್ಕಲು ಸರ್ದಾರ್​ ವಲ್ಲಭಬಾಯಿ ಪಟೇಲ್​​ರ ತತ್ವಗಳು ನಮಗೆ ಪ್ರೇರಣೆಯಾಗಬೇಕು’ ಎಂದೂ ಪ್ರಧಾನಿ ಅಭಿಪ್ರಾಯಪಟ್ಟಿದ್ದಾರೆ.

ಮುಂದುವರಿದು ಮಾತನಾಡಿದ ಪ್ರಧಾನಿ ‘ದೇಶದಲ್ಲಿ ನಕ್ಸಲ್​ ಪೀಡಿತ ಜಿಲ್ಲೆಗಳು, ಪ್ರದೇಶಗಳ ಸಂಖ್ಯೆ ಕಳೆದ ಎಂಟು ವರ್ಷಗಳಲ್ಲಿ ಇಳಿಮುಖವಾಗಿದೆ. ನಕ್ಸಲಿಸಂ ವಿರುದ್ಧ ಹೋರಾಟವೂ ಮುಂದುವರಿದಿದೆ. ಜಮ್ಮು-ಕಾಶ್ಮೀರವೇ ಆಗಿರಲಿ, ಈಶಾನ್ಯ ಭಾಗವೇ ಆಗಿರಲಿ, ಎಲ್ಲ ಕಡೆಗಳಲ್ಲೂ ಶಾಂತಿ ಸ್ಥಾಪನೆ ಮಾಡುತ್ತಿದ್ದೇವೆ. ನಮ್ಮ ಸರ್ಕಾರ ಭ್ರಷ್ಟಾಚಾರ, ಭಯೋತ್ಪಾದನೆ, ಹಣ ಅಕ್ರಮ ವರ್ಗಾವಣೆ ವಿರುದ್ಧ ಸಮರವನ್ನೇ ಸಾರಿದೆ. ಯುಎಪಿಎ (ಕಾನೂನು ಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಗಳನ್ನೆಲ್ಲ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿದ್ದೇವೆ’ ಎಂದು ಹೇಳಿದ್ದಾರೆ.

ಅಪರಾಧಕ್ಕಿಂತಲೂ 10 ಹೆಜ್ಜೆ ಮುಂದಿರೋಣ !
ಇದೇ ಹೊತ್ತಲ್ಲಿ ಪ್ರಧಾನಿ ಮೋದಿ ಅಪರಾಧ ತಡೆ, ಕಾನೂನು ಸುವ್ಯವಸ್ಥೆ, ಸೈಬರ್​ ಕ್ರೈಂ ನಿಯಂತ್ರಣದ ಬಗ್ಗೆಯೂ ಮಾತನಾಡಿದರು. ಸೈಬರ್​ಕ್ರೈಂ ತಡೆಗೆ ಟೆಕ್ನಾಲಜಿಯನ್ನು ಸಮರ್ಥವಾಗಿ ಬಳಸಿಕೊಳ್ಳುವ, ಶಸ್ತ್ರಾಸ್ತ್ರ, ಮಾದಕ ದ್ರವ್ಯ ಸಾಗಣೆ ವಿರುದ್ಧ ಹೋರಾಟದಲ್ಲಿ ಡ್ರೋನ್​ ತಂತ್ರಜ್ಞಾನ ಬಳಕೆಯ ಪ್ರಾಮುಖ್ಯತೆ ಬಗ್ಗೆಯೂ ನರೇಂದ್ರ ಮೋದಿ ಇಂದು ಮಾತನಾಡಿದ್ದಾರೆ. ಹಾಗೇ, ಈ ದಿನಗಳಲ್ಲಿ ಅಪರಾಧದ ಸ್ವರೂಪ ಬದಲಾಗುತ್ತಿದೆ. ಹೀಗಾಗಿ ಅದನ್ನು ತಡೆಯುವ ವಿಧಾನವನ್ನೂ ನಾವು ಚೇಂಜ್​ ಮಾಡಿಕೊಳ್ಳಬೇಕು. ಈಗ ನಾವು 5ಜಿ ಯುಗಕ್ಕೆ ಪ್ರವೇಶಿಸಿದ್ದೇವೆ. ಅಪರಾಧಗಳಿಗಿಂತಲೂ ಹತ್ತು ಹೆಜ್ಜೆ ಮುಂದಿಟ್ಟು, ಅವುಗಳನ್ನು ತಡೆಯೋಣ’ ಎಂದು ಹೇಳಿದರು.

ಇದನ್ನೂ ಓದಿ: PM Modi | ಒಂದು ದೇಶ, ಒಂದು ಪೊಲೀಸ್​ ಸಮವಸ್ತ್ರ ಪ್ರಸ್ತಾಪಿಸಿದ ಪ್ರಧಾನಿ ಮೋದಿ; ಚರ್ಚಿಸಲು ರಾಜ್ಯಗಳಿಗೆ ಸೂಚನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Sudha Murty: ಕರ್ನಾಟಕ ಸೇರಿ ದೇಶದ ಪ್ರವಾಸೋದ್ಯಮಕ್ಕೆ ಒತ್ತು ನೀಡಿ; ರಾಜ್ಯಸಭೆಯಲ್ಲಿ ಸುಧಾಮೂರ್ತಿ ಮೊದಲ ಭಾಷಣ!

Sudha Murty: ಭಾರತದಲ್ಲಿ ಪ್ರವಾಸೋದ್ಯಮಕ್ಕೆ‌ ಇನ್ನಷ್ಟು ಆದ್ಯತೆ ನೀಡಬೇಕು. ದೇಶದಲ್ಲಿ ಅಜಂತಾ, ಎಲ್ಲೋರ, ಬೃಹದೀಶ್ವರ, ತಾಜ್‌ಮಹಲ್‌ ನೋಡಬೇಕು ಎಂಬ ಮಾತಿದೆ. ಆದರೆ, ಭಾರತದಲ್ಲಿ 42 ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿವೆ. ಇನ್ನೂ 57 ತಾಣಗಳು ಪೆಂಡಿಂಗ್‌ ಲಿಸ್ಟ್‌ನಲ್ಲಿವೆ. ಇವುಗಳ ಕುರಿತು ಹೆಚ್ಚಿನ ಆದ್ಯತೆ ನೀಡಬೇಕು ಎಂದು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದರು.

VISTARANEWS.COM


on

Sudha Murty
Koo

ನವದೆಹಲಿ: ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಇನ್ಫೋಸಿಸ್‌ ಪ್ರತಿಷ್ಠಾನದ ಸಂಸ್ಥಾಪಕಿ ಸುಧಾ ಮೂರ್ತಿ (Sudha Murty) ಅವರು ಇದೇ ಮೊದಲ ಬಾರಿಗೆ ರಾಜ್ಯಸಭೆಯಲ್ಲಿ ಭಾಷಣ ಮಾಡಿದರು. “ನಾನು ರಾಜಕಾರಣಿ ಅಲ್ಲ. ನನಗೆ ಹೆಚ್ಚು ಮಾತನಾಡಲು ಬರುವುದಿಲ್ಲ” ಎನ್ನುತ್ತಲೇ ಭಾಷಣ ಆರಂಭಿಸಿದ ಅವರು ಗರ್ಭಕಂಠ ಕ್ಯಾನ್ಸರ್‌ಗೆ (Cervical Cancer) ಲಸಿಕೆ ಹಾಗೂ ಕರ್ನಾಟಕ (Karnataka) ಸೇರಿ ದೇಶದ ಪ್ರವಾಸೋದ್ಯಮದ ಏಳಿಗೆಯ ಕುರಿತು ಸದನದ ಗಮನಕ್ಕೆ ತಂದರು. ಕರ್ನಾಟಕ ಪ್ರವಾಸೋದ್ಯಮದ ಕುರಿತೂ ಅವರು ಹೆಚ್ಚು ಗಮನ ಸೆಳೆದರು.

“ಗರ್ಭಕಂಠದ ಕ್ಯಾನ್ಸರ್‌ ಈಗ ಮಾರಣಾಂತಿಕವಾಗಿದೆ. ಒಬ್ಬ ತಾಯಿ ಮೃತಪಟ್ಟರೆ ಮಕ್ಕಳು ಅನಾಥರಾಗುತ್ತಾರೆ. ಒಬ್ಬ ವ್ಯಕ್ತಿಗೆ ಹೆಂಡತಿ ತೀರಿಕೊಂಡರೆ ಮತ್ತೊಬ್ಬ ಪತ್ನಿ ಸಿಗುತ್ತಾಳೆ. ಆದರೆ, ಮಕ್ಕಳಿಗೆ ತಾಯಿ ತೀರಿಕೊಂಡರೆ, ಜೀವನಪೂರ್ತಿ ಅವರು ಅನಾಥರಾಗುತ್ತಾರೆ. ಹಾಗಾಗಿ, ಗರ್ಭಕಂಠದ ಕ್ಯಾನ್ಸರ್‌ಗೆ ಲಸಿಕೆ ನೀಡುವ ವ್ಯವಸ್ಥೆ ಮಾಡಬೇಕು. ಈಗ ಲಸಿಕೆಗೆ 1,300-1,400 ರೂ. ಆಗುತ್ತದೆ. ಸರ್ಕಾರ ಮಧ್ಯಪ್ರವೇಶಿಸಿದರೆ ಅದನ್ನು 800 ರೂಪಾಯಿಗೆ ಹೆಣ್ಣುಮಕ್ಕಳಿಗೆ ಲಸಿಕೆ ಕೊಡಿಸಬಹುದು” ಎಂದರು. ಆಗ ಸಭಾಧ್ಯಕ್ಷರು, “ಈ ಕುರಿತು ಕೇಂದ್ರ ಆರೋಗ್ಯ ಸಚಿವರಾದ ಜೆ.ಪಿ ನಡ್ಡಾ ಅವರ ಗಮನಕ್ಕೆ ತನ್ನಿ” ಎಂದರು.

ಪ್ರವಾಸೋದ್ಯಮದ ಕುರಿತು ಹೇಳಿದ್ದಿಷ್ಟು…

“ಭಾರತದಲ್ಲಿ ಪ್ರವಾಸೋದ್ಯಮಕ್ಕೆ‌ ಇನ್ನಷ್ಟು ಆದ್ಯತೆ ನೀಡಬೇಕು. ದೇಶದಲ್ಲಿ ಅಜಂತಾ, ಎಲ್ಲೋರ, ಬೃಹದೀಶ್ವರ, ತಾಜ್‌ಮಹಲ್‌ ನೋಡಬೇಕು ಎಂಬ ಮಾತಿದೆ. ಆದರೆ, ಭಾರತದಲ್ಲಿ 42 ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿವೆ. ಇನ್ನೂ 57 ತಾಣಗಳು ಪೆಂಡಿಂಗ್‌ ಲಿಸ್ಟ್‌ನಲ್ಲಿವೆ. ಇವುಗಳ ಕುರಿತು ಹೆಚ್ಚಿನ ಆದ್ಯತೆ ನೀಡಬೇಕು. ಕರ್ನಾಟಕದ ಶ್ರವಣಬೆಳಗೋಳದಲ್ಲಿರುವ ಬಾಹುಬಲಿಯ ಮೂರ್ತಿ, ಮಧ್ಯಪ್ರದೇಶದ ಮಾಂಡು, ದೇಶದ ಗುಹೆಗಳು, ಬಾದಾಮಿ, ಐಹೊಳೆ, ಲಿಂಗರಾಜ ದೇವಾಲಯಗಳು ದೇಶದ ಸಂಸ್ಕೃತಿಯ ತಾಣಗಳಾಗಿವೆ. ಇವುಗಳನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಬೇಕು” ಎಂದರು.

“ತ್ರಿಪುರದಲ್ಲಿರುವ ಉನಾಕೋಟಿ, ಮಿಜೋರಾಂನಲ್ಲಿ ನೈಸರ್ಗಿಕ ಸೇತುವೆಗಳಿವೆ. ಇವುಗಳನ್ನು ನೋಡಲು ವಿದೇಶಕ್ಕೆ ಹೋಗುವವರಿದ್ದಾರೆ. ತಂಜಾವೂರಿನ ಬೃಹದೇಶ್ವರ ದೇವಾಲಯ, ಶ್ರೀರಂಗಂ, ಕಾಶ್ಮೀರದಲ್ಲಿರುವ ಮೊಘಲ್‌ ಗಾರ್ಡನ್‌ಗಳು ಜಗತ್ತಿನ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಇಲ್ಲ. ಇವುಗಳನ್ನು ಪಟ್ಟಿಗೆ ಸೇರಿಸುವುದರಿಂದ ಆ ಸ್ಥಳಗಳಿಗೆ ಜನರನ್ನು ಸೆಳೆಯಲು ಪ್ಯಾಕೇಜ್‌ಗಳನ್ನು ಘೋಷಿಸಲಾಗುತ್ತದೆ. ಇದರಿಂದ ಪ್ರವಾಸೋದ್ಯಮದ ಆದಾಯ ಹೆಚ್ಚಾಗುತ್ತದೆ. ಹತ್ತಾರು ಅವಕಾಶಗಳು ಸೃಷ್ಟಿಯಾಗುತವೆ” ಎಂದು ಹೇಳಿದರು.

ಇದನ್ನೂ ಓದಿ: Narendra Modi: ನನ್ನ ದನಿಯೂ ಗಟ್ಟಿಯಿದೆ, ಸಂಕಲ್ಪವೂ; ಈ ಮೋದಿ ಯಾರಿಗೂ ಹೆದರಲ್ಲ, ಬಗ್ಗಲ್ಲ: ಸಂಸತ್‌ನಲ್ಲಿ ಪ್ರಧಾನಿ ಅಬ್ಬರ

Continue Reading

ಪ್ರಮುಖ ಸುದ್ದಿ

Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Mahua Moitra: “ಸ್ಪೀಕರ್‌ ಸರ್‌, ನೀವು ಚುನಾವಣೆ ಪ್ರಚಾರ ಮಾಡುವಾಗ ನೀವು ಎರಡು ಬಾರಿ ನನ್ನ ಕ್ಷೇತ್ರಕ್ಕೆ ಬಂದಿದ್ರಿ. ನನ್ನ ಮಾತು ಕೇಳಿಸಿಕೊಳ್ಳಿ” ಎಂದು ಮಹುವಾ ಮೊಯಿತ್ರಾ ಮಾತನಾಡುತ್ತಿದ್ದರು. ಇದೇ ವೇಳೆ ರಾಹುಲ್‌ ಗಾಂಧಿ ಅವರು ಮಾತನಾಡಲು ಎದ್ದು ನಿಂತರು. ಆಗ, ಮೊಹಿತ್ರಾ ಅವರು, “ರಾಹುಲ್‌, ಕುಳಿತುಕೊಳ್ಳಿ” ಎಂದು ಸೂಚಿಸಿದರು. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Mahua Moitra
Koo

ನವದೆಹಲಿ: ಸಂಸತ್‌ನ ವಿಶೇಷ ಅಧಿವೇಶನದಲ್ಲಿ (Parliament Session 2024) ಪ್ರತಿಪಕ್ಷಗಳು ನೀಟ್‌ ಅಕ್ರಮ, ಮಣಿಪುರ ಹಿಂಸಾಚಾರ ಸೇರಿ ಹಲವು ವಿಷಯಗಳ ಕುರಿತು ಚರ್ಚೆ, ಗಲಾಟೆ, ವಾಗ್ವಾದ, ಆರೋಪ ಮಾಡಿವೆ. ಯಾವುದೇ ಆಡಳಿತ ಪಕ್ಷದ ವಿರುದ್ಧ ಪ್ರತಿಪಕ್ಷವು ಆರೋಪ, ಗಲಾಟೆ, ಪ್ರತಿಭಟನೆ ಮಾಡುವುದು ಸಹಜ. ಇನ್ನು ಸೋಮವಾರ (ಜುಲೈ 1) ಸಂಸತ್‌ನಲ್ಲಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರು ಮಾತನಾಡುವಾಗ, ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರಿಗೇ ಕುಳಿತುಕೊಳ್ಳಿ ಎಂಬುದಾಗಿ ಸೂಚಿಸಿದ್ದಾರೆ.

“ಸ್ಪೀಕರ್‌ ಸರ್‌, ನೀವು ಚುನಾವಣೆ ಪ್ರಚಾರ ಮಾಡುವಾಗ ನೀವು ಎರಡು ಬಾರಿ ನನ್ನ ಕ್ಷೇತ್ರಕ್ಕೆ ಬಂದಿದ್ರಿ. ನನ್ನ ಮಾತು ಕೇಳಿಸಿಕೊಳ್ಳಿ” ಎಂದು ಮಹುವಾ ಮೊಯಿತ್ರಾ ಮಾತನಾಡುತ್ತಿದ್ದರು. ಇದೇ ವೇಳೆ ರಾಹುಲ್‌ ಗಾಂಧಿ ಅವರು ಮಾತನಾಡಲು ಎದ್ದು ನಿಂತರು. ಆಗ, ಮೊಹಿತ್ರಾ ಅವರು, “ರಾಹುಲ್‌, ಕುಳಿತುಕೊಳ್ಳಿ” ಎಂದು ಸೂಚಿಸಿದರು. ಆಗ ಆಡಳಿತ ಪಕ್ಷದ ಸದಸ್ಯರು ಗೇಲಿ ಮಾಡಿದರು. ಇದಕ್ಕೆ ಪ್ರತ್ಯುತ್ತರ ನೀಡಿದ ಮಹುವಾ ಮೊಯಿತ್ರಾ, “ಅವರು ನಮ್ಮ ಪ್ರತಿಪಕ್ಷ ನಾಯಕರಾಗಿದ್ದಾರೆ. ಅವರು ಅರ್ಥ ಮಾಡಿಕೊಳ್ಳುತ್ತಾರೆ” ಎಂದು ತಿರುಗೇಟು ನೀಡಿದರು.

ಇದೇ ವೇಳೆ ಆಡಳಿತ ಪಕ್ಷದ ವಿರುದ್ಧ ಟಿಎಂಸಿ ಸಂಸದೆ ಹರಿಹಾಯ್ದರು. “ಸಂಸತ್‌ನಲ್ಲಿ ನಾನು ಪ್ರಶ್ನೆ ಕೇಳಲು, ಮಾತನಾಡಲು ಬಿಡಲಿಲ್ಲ. ನಾನು ಸಂಸತ್‌ನಲ್ಲಿ ಮಾತನಾಡಲು ಎದ್ದು ನಿಂತಾಗ, ನನ್ನ ಧ್ವನಿಯನ್ನು ಹುದುಗಿಸಲಾಯಿತು. ಆದರೆ, ಚುನಾವಣೆ ವೇಳೆ ಏನಾಯಿತು? ಆಡಳಿತ ಪಕ್ಷದ ಸದಸ್ಯ ಬಲವು 303ರಿಂದ 240ಕ್ಕೆ ಇಳಿಸಲಾಯಿತು. ಟಿಎಂಸಿ ಸಂಸದೆಯಾದ ನನ್ನನ್ನು ಕುಳಿತುಕೊಳ್ಳುವಂತೆ ಮಾಡಿದರು. ಆದರೆ, ಬಿಜೆಪಿಯ 63 ಸಂಸದರನ್ನು ಮನೆಯಲ್ಲಿಯೇ ಕುಳಿತುಕೊಳ್ಳುವಂತೆ ದೇಶದ ಜನ ಮಾಡಿದರು” ಎಂಬುದಾಗಿ ಹೇಳಿದರು.

ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ

ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಮಾತನಾಡಿದ ಮೋದಿ, ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು “ನಾನು ಕಾಂಗ್ರೆಸ್‌ನವರಿಗೆ ಜಾಣತನ ಕೊಡಲಿ ಎಂಬುದಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ. ಬಾಲಬುದ್ಧಿಯ ನಾಯಕನಿಗೂ ಬುದ್ಧಿ ಕೊಡಲಿ. ರಾಷ್ಟ್ರಪತಿಯವರ ಭಾಷಣಕ್ಕೆ ನಾನು ಧನ್ಯವಾದ ತಿಳಿಸುತ್ತೇನೆ. ಹಾಗೆಯೇ, ಇಷ್ಟು ಹೊತ್ತು ನನಗೆ ಅವಕಾಶ ಮಾಡಿಕೊಟ್ಟಿದ್ದಕ್ಕಾಗಿಯೂ ಧನ್ಯವಾದ ತಿಳಿಸುತ್ತೇನೆ. ಯಾರು ಎಷ್ಟೇ ಗಲಾಟೆ ಮಾಡಿದರೂ ನನ್ನ ಧ್ವನಿಯನ್ನು, ಸತ್ಯದ ಧ್ವನಿಯನ್ನು ಅಡಗಿಸಲು ಆಗುವುದಿಲ್ಲ. ನಾನು ಇದುವರೆಗೆ ಸತ್ಯದ ಅನುಭವವನ್ನು ಅನುಭವಿಸಿದ್ದೇನೆ” ಎಂದು ಹೇಳಿದರು.

ಇದನ್ನೂ ಓದಿ: Narendra Modi: ನೀಟ್‌ ಅಕ್ರಮ ಕುರಿತು ಸಂಸತ್‌ನಲ್ಲಿ ಮೋದಿ ಪ್ರಸ್ತಾಪ; ವಿದ್ಯಾರ್ಥಿಗಳಿಗೆ ಅವರು ಹೇಳಿದ್ದಿಷ್ಟು

Continue Reading

ದೇಶ

Hathras Stampede: ಹತ್ರಾಸ್‌ನಲ್ಲಿ ಕಾಲ್ತುಳಿತ ಹೇಗಾಯ್ತು? ಸತ್ಸಂಗ ನಡೆಸಿದ ಭೋಲೆ ಬಾಬಾ ಯಾರು? ಇಲ್ಲಿದೆ ಮಾಹಿತಿ

Hathras Stampede: ಭೋಲೆ ಬಾಬಾ ಅವರಿಗೆ ಭಾರತದಾದ್ಯಂತ ಅನುಯಾಯಿಗಳು ಇದ್ದಾರೆ. ಅದರಲ್ಲೂ, ಉತ್ತರ ಪ್ರದೇಶದ ಪಶ್ಚಿಮ ಭಾಗ, ಉತ್ತರಾಖಂಡ, ಹರಿಯಾಣ, ರಾಜಸ್ಥಾನ ಹಾಗೂ ದೆಹಲಿಯಲ್ಲಿ ಹೆಚ್ಚು ಅನುಯಾಯಿಗಳು ಇದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿರದಿದ್ದರೂ ಇವರ ಧಾರ್ಮಿಕ ಕಾರ್ಯಕ್ರಮವನ್ನು ಭಕ್ತರು ತಪ್ಪಿಸಿಕೊಳ್ಳುವುದಿಲ್ಲ.

VISTARANEWS.COM


on

Hathras Stampede
Koo

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆ ಮೊಘಲ್‌ಘರಾಹಿ ಎಂಬ ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ (Hathras Stampede) ಸಂಭವಿಸಿದ್ದು, 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ನಾರಾಯಣ ಸಕಾರ್‌ ಹರಿ (Narayan Sakaar Hari) ಅಥವಾ ಸಕಾರ್‌ ವಿಶ್ವ ಹರಿ ಅಥವಾ ಭೋಲೆ ಬಾಬಾ (Bhole Baba) ಅವರು ಸತ್ಸಂಗ ನೆರವೇರಿಸಿದ ಬಳಿಕ ಉಂಟಾದ ಕಾಲ್ತುಳಿತವು ನೂರಾರು ಜನರ ಸಾವಿಗೆ ಕಾರಣವಾಗಿದೆ. ಇನ್ನು, ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಘೋಷಣೆ ಮಾಡಿದ್ದಾರೆ. ಇನ್ನು ಕಾಲ್ತುಳಿತ ಹೇಗಾಯಿತು? ನೂರಾರು ಜನರ ಸಾವಿಗೆ ಕಾರಣವೇನು? ಪ್ರತ್ಯಕ್ಷದರ್ಶಿಗಳು ಹೇಳುವುದು ಏನು ಎಂಬುದರ ಮಾಹಿತಿ ಇಲ್ಲಿದೆ.

ಪ್ರತ್ಯಕ್ಷದರ್ಶಿಗಳು ಹೇಳುವುದಿಷ್ಟು…

ಸತ್ಸಂಗ ಮುಗಿದ ಬಳಿಕ ನೂರಾರು ಜನ ಹೊರಗೆ ಬಂದಿದ್ದಾರೆ. ಎತ್ತರದ ಚರಂಡಿ ಮೇಲೆ ನಿರ್ಮಿಸಿದ ರಸ್ತೆ ಮೇಲೆ ಸಾವಿರಾರು ಜನ ನಿಂತಿದ್ದಾರೆ. ಆಗ ರಸ್ತೆಯ ಒಂದು ಭಾಗ ಚರಂಡಿಯೊಳಗೆ ಕುಸಿದಿದೆ. ಕೂಡಲೇ ಹತ್ತಾರು ಜನ ಚರಂಡಿಯೊಳಗೆ ಬಿದ್ದಿದ್ದು, ಒಬ್ಬರ ಮೇಲೆ ಒಬ್ಬರು ಬಿದ್ದ ಕಾರಣ ಹೆಚ್ಚಿನ ಜನ ಸಾವಿಗೀಡಾಗಿದ್ದಾರೆ. ಇನ್ನು ಚರಂಡಿ ಮೇಲಿನ ರಸ್ತೆ ಕುಸಿದ ಸುದ್ದಿ ಹರಿದಾಡುತ್ತಲೇ ಎಲ್ಲರೂ ಓಡಲು ಶುರು ಮಾಡಿದರು. ಆಗಲೂ ಒಬ್ಬರ ಮೇಲೆ ಒಬ್ಬರು ಬಿದ್ದು, ತುಳಿದಾಡಿದ ಕಾರಣ ಸಾವಿನ ಸಂಖ್ಯೆ ಜಾಸ್ತಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಧ್ಯಮಗಳಿಗೆ ಘಟನೆ ಕುರಿತು ವಿವರ ನೀಡಿದ್ದಾರೆ.

ಇನ್ನೊಂದಿಷ್ಟು ಮೂಲಗಳ ಪ್ರಕಾರ, ಸಣ್ಣದೊಂದು ಹಾಲ್‌ನಲ್ಲಿ ಸತ್ಸಂಗ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಹೊರಗಡೆ ಚರಂಡಿ ಮೇಲಿನ ಸ್ಲ್ಯಾಬ್‌ ಕುಸಿದಿದೆ ಎಂಬ ಸುದ್ದಿ ಕೇಳಿ ಎಲ್ಲರೂ ಓಡಲು ಶುರು ಮಾಡಿದರು. ಹೊರಗೆ ಹೋಗುವ ಗೇಟ್‌ ಚಿಕ್ಕದಿದ್ದ ಕಾರಣ ಎಲ್ಲರೂ ನುಗ್ಗಿದಾಗ ಕಾಲ್ತುಳಿತ ಸಂಭವಿಸಿದೆ. ಹೆಣ್ಣುಮಕ್ಕಳು ಓಡಲೂ ಆಗದೆ, ನೂಕುತ್ತಿದ್ದ ಪುರುಷರನ್ನು ಹಿಮ್ಮೆಟ್ಟಿಸಲೂ ಆಗದೆ ನೆಲಕ್ಕೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಯಾರಿವರು ಭೋಲೆ ಬಾಬಾ?

ಭೋಲೆ ಬಾಬಾ ಅವರು ಉತ್ತರ ಪ್ರದೇಶದ ಎತಾಹ್‌ ಜಿಲ್ಲೆಯ ಬಹದ್ದೂರ್‌ ಗ್ರಾಮದವರಾಗಿದ್ದಾರೆ. ಇವರು ಈಗ ಪ್ರಮುಖ ಧಾರ್ಮಿಕ ಮುಖಂಡರೆನಿಸಿದ್ದು, ಇವರ ಭಾಷಣ, ಬೋಧನೆಗಳನ್ನು ಕೇಳಲು ಸಾವಿರಾರು ಜನ ಆಗಮಿಸುತ್ತಾರೆ. ಇವರು ದೇಶದ ಗುಪ್ತಚರ ಇಲಾಖೆಯಲ್ಲಿ (IB) ಕಾರ್ಯನಿರ್ವಹಿಸಿದ್ದು, 26 ವರ್ಷಗಳ ಹಿಂದೆಯೇ ಸರ್ಕಾರಿ ನೌಕರಿ ತೊರೆದು, ಸ್ವಯಂಘೋಷಿತ ದೇವಮಾನವರಾಗಿದ್ದಾರೆ.

ಭೋಲೆ ಬಾಬಾ ಅವರಿಗೆ ಭಾರತದಾದ್ಯಂತ ಅನುಯಾಯಿಗಳು ಇದ್ದಾರೆ. ಅದರಲ್ಲೂ, ಉತ್ತರ ಪ್ರದೇಶದ ಪಶ್ಚಿಮ ಭಾಗ, ಉತ್ತರಾಖಂಡ, ಹರಿಯಾಣ, ರಾಜಸ್ಥಾನ ಹಾಗೂ ದೆಹಲಿಯಲ್ಲಿ ಹೆಚ್ಚು ಅನುಯಾಯಿಗಳು ಇದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿರದಿದ್ದರೂ ಇವರ ಧಾರ್ಮಿಕ ಕಾರ್ಯಕ್ರಮವನ್ನು ಭಕ್ತರು ತಪ್ಪಿಸಿಕೊಳ್ಳುವುದಿಲ್ಲ. ಪ್ರತಿ ಮಂಗಳವಾರ ಅಲಿಗಢದಲ್ಲಿ ಅವರ ಕಾರ್ಯಕ್ರಮ ನಡೆಯುತ್ತದೆ. ಅಲ್ಲಿಯೂ ಸಾವಿರಾರು ಜನ ಸೇರುತ್ತಾರೆ. ಕೊರೊನಾ ನಿರ್ಬಂಧದ ಮಧ್ಯೆಯೂ ಸಾವಿರಾರು ಜನರನ್ನು ಸೇರಿಸಿ, ಸತ್ಸಂಗ ಆಯೋಜಿಸಿದ್ದು ವಿವಾದಕ್ಕೂ ಕಾರಣವಾಗಿತ್ತು.

ಇದನ್ನೂ ಓದಿ: Uttar Pradesh stampede: ಹತ್ರಾಸ್‌ ಕಾಲ್ತುಳಿತ ದುರ್ಘಟನೆ; ಸಾವಿನ ಸಂಖ್ಯೆ 60ಕ್ಕೆ ಏರಿಕೆ

Continue Reading

ದೇಶ

Stampedes in India: ದೇಶದಲ್ಲಿ ಈ ಹಿಂದೆಯೂ ನಡೆದಿವೆ ಭಾರೀ ಕಾಲ್ತುಳಿತ ದುರಂತ; ಇಲ್ಲಿದೆ ಲಿಸ್ಟ್‌

Stampedes in India: ಈ ಹಿಂದೆಯೂ ಅನೇಕ ಬಾರಿ ಇಂತಹ ದುರ್ಘಟನೆಗಳು ದೇಶದಲ್ಲಿ ನಡೆದಿವೆ. ಧಾರ್ಮಿಕ ಸಭೆಗಳಲ್ಲಿ ಕಾಲ್ತುಳಿತದಿಂದ ಉಂಟಾದ ಕೆಲವು ದೊಡ್ಡ ಸಾವುನೋವುಗಳಲ್ಲಿ 2005 ರಲ್ಲಿ ಮಹಾರಾಷ್ಟ್ರದ ಮಂದಾರದೇವಿ ದೇವಸ್ಥಾನದಲ್ಲಿ 340 ಕ್ಕೂ ಹೆಚ್ಚು ಭಕ್ತರ ಸಾವು ಮತ್ತು 2008 ರಲ್ಲಿ ರಾಜಸ್ಥಾನದ ಚಾಮುಂಡಾ ದೇವಿ ದೇವಸ್ಥಾನದಲ್ಲಿ ಕನಿಷ್ಠ 250 ಜನರು ಸಾವನ್ನಪ್ಪಿದರು.

VISTARANEWS.COM


on

Stampedes in India
Koo

ಹೊಸದಿಲ್ಲಿ: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಮಂಗಳವಾರ ‘ಸತ್ಸಂಗ’ ಧಾರ್ಮಿಕ ಕಾರ್ಯಕ್ರಮದ ವೇಳೆ ಸಂಭವಿಸಿದ ಕಾಲ್ತುಳಿತದ ದುರ್ಘಟನೆಯಲ್ಲಿ (Stampedes in India) ಮೃತಪಟ್ಟವರ ಸಂಖ್ಯೆ 107ಕ್ಕೆ ಏರಿಕೆ ಆಗಿದೆ ಎಂದು ಹೇಳಲಾಗಿದೆ ಹತ್ರಾಸ್​​(Hatras) ಸಿಕಂದರಾ ರಾವ್ ಪಟ್ಟಣದಲ್ಲಿ ವಿಶೇಷವಾಗಿ ಹಾಕಲಾಗಿದ್ದ ಪೆಂಡಾಲ್​ನಲ್ಲಿ ಧಾರ್ಮಿಕ ಬೋಧಕರೊಬ್ಬರು ತಮ್ಮ ಅನುಯಾಯಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಈ ದುರ್ಘಟನೆ ನಡೆದಿದೆ.‍ಇಂಥಹ ಧಾರುಣ ಘಟನೆ ನಡೆದಿರುವುದು ಇದೇ ಮೊದಲಲ್ಲ.

ಈ ಹಿಂದೆಯೂ ಅನೇಕ ಬಾರಿ ಇಂತಹ ದುರ್ಘಟನೆಗಳು ದೇಶದಲ್ಲಿ ನಡೆದಿವೆ. ಧಾರ್ಮಿಕ ಸಭೆಗಳಲ್ಲಿ ಕಾಲ್ತುಳಿತದಿಂದ ಉಂಟಾದ ಕೆಲವು ದೊಡ್ಡ ಸಾವುನೋವುಗಳಲ್ಲಿ 2005 ರಲ್ಲಿ ಮಹಾರಾಷ್ಟ್ರದ ಮಂದಾರದೇವಿ ದೇವಸ್ಥಾನದಲ್ಲಿ 340 ಕ್ಕೂ ಹೆಚ್ಚು ಭಕ್ತರ ಸಾವು ಮತ್ತು 2008 ರಲ್ಲಿ ರಾಜಸ್ಥಾನದ ಚಾಮುಂಡಾ ದೇವಿ ದೇವಸ್ಥಾನದಲ್ಲಿ ಕನಿಷ್ಠ 250 ಜನರು ಸಾವನ್ನಪ್ಪಿದರು. ಹಿಮಾಚಲ ಪ್ರದೇಶದ ನೈನಾ ದೇವಿ ದೇವಸ್ಥಾನದಲ್ಲಿ ಧಾರ್ಮಿಕ ಸಭೆಯಲ್ಲಿ ಕಾಲ್ತುಳಿತ ಸಂಭವಿಸಿದ್ದು, 162 ಜನ ಬಲಿಯಾಗಿದ್ದರು.

ಮಾರ್ಚ್ 31, 2023: ಇಂದೋರ್ ನಗರದ ದೇವಸ್ಥಾನವೊಂದರಲ್ಲಿ ರಾಮ ನವಮಿಯ ಸಂದರ್ಭದಲ್ಲಿ ನಡೆದ ‘ಹವನ’ ಕಾರ್ಯಕ್ರಮದಲ್ಲಿ ಪುರಾತನವಾದ ಬಾವಿಯ ಮೇಲೆ ನಿರ್ಮಿಸಲಾದ ಚಪ್ಪಡಿ ಕುಸಿದು ಕನಿಷ್ಠ 36 ಜನರು ಸಾವನ್ನಪ್ಪಿದರು.

ಜನವರಿ 1, 2022: ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಮಾತಾ ವೈಷ್ಣೋದೇವಿ ದೇಗುಲದಲ್ಲಿ ಭಕ್ತರ ಭಾರೀ ನೂಕುನುಗ್ಗಲಿನಿಂದ ಉಂಟಾದ ಕಾಲ್ತುಳಿತದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದರು ಮತ್ತು ಹನ್ನೆರಡು ಜನರು ಗಾಯಗೊಂಡರು.

ಜುಲೈ 14, 2015: ಆಂಧ್ರಪ್ರದೇಶದ ರಾಜಾಜಿನಗರದಲ್ಲಿ ನಡೆದ ‘ಪುಷ್ಕರಂ’ ಉತ್ಸವದ ಆರಂಭದ ದಿನದಂದು ಅಪಾರ ಸಂಖ್ಯೆಯ ಭಕ್ತರು ಸೇರಿದ್ದ ಗೋದಾವರಿ ನದಿಯ ದಡದ ಪ್ರಮುಖ ಸ್ನಾನಗೃಹದಲ್ಲಿ ನೂಕುನುಗ್ಗಲು ಉಂಟಾಗಿ 27 ಯಾತ್ರಾರ್ಥಿಗಳು ಸಾವನ್ನಪ್ಪಿದರು ಮತ್ತು 20 ಮಂದಿ ಗಾಯಗೊಂಡರು.

ಅಕ್ಟೋಬರ್ 3, 2014: ದಸರಾ ಆಚರಣೆಗಳು ಮುಗಿದ ಸ್ವಲ್ಪ ಸಮಯದ ನಂತರ ಪಾಟ್ನಾದ ಗಾಂಧಿ ಮೈದಾನದಲ್ಲಿ ಕಾಲ್ತುಳಿತದಲ್ಲಿ ಮೂವತ್ತೆರಡು ಜನರು ಸಾವನ್ನಪ್ಪಿದರು ಮತ್ತು 26 ಮಂದಿ ಗಾಯಗೊಂಡರು.

ಅಕ್ಟೋಬರ್ 13, 2013: ಮಧ್ಯಪ್ರದೇಶದ ದಾತಿಯಾ ಜಿಲ್ಲೆಯ ರತನ್‌ಗಢ ದೇವಸ್ಥಾನದ ಬಳಿ ನವರಾತ್ರಿ ಉತ್ಸವದ ಸಂದರ್ಭದಲ್ಲಿ ಕಾಲ್ತುಳಿತದಲ್ಲಿ 115 ಜನರು ಸಾವನ್ನಪ್ಪಿದರು ಮತ್ತು 100 ಕ್ಕೂ ಹೆಚ್ಚು ಜನರು ಗಾಯಗೊಂಡರು. ಭಕ್ತರು ದಾಟುತ್ತಿದ್ದ ನದಿ ಸೇತುವೆ ಕುಸಿಯುವ ಹಂತದಲ್ಲಿದೆ ಎಂಬ ವದಂತಿಯಿಂದ ಈ ಕಾಲ್ತುಳಿತ ಉಂಟಾಗಿತ್ತು.

ನವೆಂಬರ್ 19, 2012: ಪಾಟ್ನಾದ ಗಂಗಾ ನದಿಯ ದಡದಲ್ಲಿರುವ ಅದಾಲತ್ ಘಾಟ್‌ನಲ್ಲಿ ಛತ್ ಪೂಜೆಯ ವೇಳೆ ನೂಕುನುಗ್ಗಲು ಉಂಟಾದ ತಾತ್ಕಾಲಿಕ ಸೇತುವೆಯೊಂದು ಕುಸಿದು ಸುಮಾರು 20 ಜನರು ಸಾವನ್ನಪ್ಪಿದರು ಮತ್ತು ಅನೇಕರು ಗಾಯಗೊಂಡರು.

ನವೆಂಬರ್ 8, 2011: ಹರಿದ್ವಾರದಲ್ಲಿ ಗಂಗಾ ನದಿಯ ದಡದಲ್ಲಿರುವ ಹರ್-ಕಿ-ಪೌರಿ ಘಾಟ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದರು.

ಜನವರಿ 14, 2011: ಕೇರಳದ ಇಡುಕ್ಕಿ ಜಿಲ್ಲೆಯ ಪುಲ್ಮೇಡುವಿನಲ್ಲಿ ಸ್ವದೇಶಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳ ಮೇಲೆ ಜೀಪ್ ಡಿಕ್ಕಿ ಹೊಡೆದು ಕಾಲ್ತುಳಿತದಲ್ಲಿ ಕನಿಷ್ಠ 104 ಶಬರಿಮಲೆ ಭಕ್ತರು ಸಾವನ್ನಪ್ಪಿದರು ಮತ್ತು 40 ಕ್ಕೂ ಹೆಚ್ಚು ಜನರು ಗಾಯಗೊಂಡರು.

ಮಾರ್ಚ್ 4, 2010: ಉತ್ತರ ಪ್ರದೇಶದ ಪ್ರತಾಪ್‌ಗಢ್ ಜಿಲ್ಲೆಯ ಕೃಪಾಲು ಮಹಾರಾಜನ ರಾಮ್ ಜಾಂಕಿ ದೇವಸ್ಥಾನದಲ್ಲಿ ಸ್ವಯಂಘೋಷಿತ ದೇವಮಾನವನಿಂದ ಉಚಿತ ಬಟ್ಟೆ ಮತ್ತು ಆಹಾರವನ್ನು ಸಂಗ್ರಹಿಸಲು ಜನರು ಸೇರುತ್ತಿದ್ದಾಗ ಸಂಭವಿಸಿದ ಕಾಲ್ತುಳಿತದಲ್ಲಿ ಸುಮಾರು 63 ಜನರು ಸಾವನ್ನಪ್ಪಿದರು.

ಸೆಪ್ಟೆಂಬರ್ 30, 2008: ರಾಜಸ್ಥಾನದ ಜೋಧ್‌ಪುರ ನಗರದ ಚಾಮುಂಡಾ ದೇವಿ ದೇವಸ್ಥಾನದಲ್ಲಿ ಬಾಂಬ್ ಸ್ಫೋಟವಾಗುತ್ತಿದೆ ಎಂಬ ವದಂತಿಯಿಂದ ಉಂಟಾದ ಕಾಲ್ತುಳಿತದಲ್ಲಿ ಸುಮಾರು 250 ಭಕ್ತರು ಸಾವನ್ನಪ್ಪಿದರು ಮತ್ತು 60 ಕ್ಕೂ ಹೆಚ್ಚು ಜನರು ಗಾಯಗೊಂಡರು.

ಆಗಸ್ಟ್ 3, 2008: ಹಿಮಾಚಲ ಪ್ರದೇಶದ ಬಿಲಾಸ್‌ಪುರ ಜಿಲ್ಲೆಯ ನೈನಾ ದೇವಿ ದೇವಸ್ಥಾನದಲ್ಲಿ ಬಂಡೆಗಳ ಕುಸಿತದ ವದಂತಿಗಳಿಂದ ಉಂಟಾದ ಕಾಲ್ತುಳಿತದಲ್ಲಿ 162 ಸಾವು, 47 ಮಂದಿ ಗಾಯಗೊಂಡರು.

ಜನವರಿ 25, 2005: ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಮಂಧರದೇವಿ ದೇವಸ್ಥಾನದಲ್ಲಿ ವಾರ್ಷಿಕ ತೀರ್ಥಯಾತ್ರೆಯ ಸಂದರ್ಭದಲ್ಲಿ 340 ಕ್ಕೂ ಹೆಚ್ಚು ಭಕ್ತರು ತುಳಿದು ಸಾವನ್ನಪ್ಪಿದರು ಮತ್ತು ನೂರಾರು ಮಂದಿ ಗಾಯಗೊಂಡರು. ಭಕ್ತಾದಿಗಳು ತೆಂಗಿನಕಾಯಿ ಒಡೆಯುತ್ತಿದ್ದರಿಂದ ಜಾರುತ್ತಿದ್ದ ಮೆಟ್ಟಿಲುಗಳ ಮೇಲೆ ಕೆಲವರು ಬಿದ್ದು ಅವಘಡ ಸಂಭವಿಸಿದೆ.

ಇದನ್ನೂ ಓದಿ:Uttar Pradesh stampede : ಉತ್ತರ ಪ್ರದೇಶದ ಹತ್ರಾಸ್​​ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ; 27 ಕ್ಕೂ ಹೆಚ್ಚು ಸಾವು

Continue Reading
Advertisement
Sudha Murty
ದೇಶ10 mins ago

Sudha Murty: ಕರ್ನಾಟಕ ಸೇರಿ ದೇಶದ ಪ್ರವಾಸೋದ್ಯಮಕ್ಕೆ ಒತ್ತು ನೀಡಿ; ರಾಜ್ಯಸಭೆಯಲ್ಲಿ ಸುಧಾಮೂರ್ತಿ ಮೊದಲ ಭಾಷಣ!

Physical Abuse
ಕರ್ನಾಟಕ42 mins ago

Physical Abuse : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Mahua Moitra
ಪ್ರಮುಖ ಸುದ್ದಿ2 hours ago

Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Viral Video
Latest2 hours ago

Viral Video: ಲೈವ್‌ ವರದಿ ಮಾಡುತ್ತಿದ್ದಾಗ ಪಾಕ್ ಟಿವಿ ವರದಿಗಾರ್ತಿ ಮೇಲೆ ಗೂಳಿ ದಾಳಿ!

Hemant Nimbalkar
ಪ್ರಮುಖ ಸುದ್ದಿ2 hours ago

Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮರು ನೇಮಕ

Kolar News
ಕರ್ನಾಟಕ2 hours ago

Kolar News: ಕಾಲೇಜಿನ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಯುವಕನ ಬಂಧನ

Tamanna Bhatia
Latest2 hours ago

Tamanna Bhatia: ‘ಜೀ ಕರ್ದಾ’ದಲ್ಲಿ ತಮನ್ನಾ ಭಾಟಿಯಾ ಪೂರ್ತಿ ಟಾಪ್‌ಲೆಸ್‌! ವಿಡಿಯೊ ಇದೆ

bengaluru student Vaishnavi M who won the prestigious award from IIT Bombay
ಬೆಂಗಳೂರು2 hours ago

Bengaluru News: ಬೆಂಗಳೂರಿನ ವಿದ್ಯಾರ್ಥಿನಿಗೆ ಐಐಟಿ ಬಾಂಬೆಯ ಪ್ರತಿಷ್ಠಿತ ಪ್ರಶಸ್ತಿ

IPL 2025
ಪ್ರಮುಖ ಸುದ್ದಿ2 hours ago

IPL 2025 : ಐಪಿಎಲ್​ ತಂಡಗಳಲ್ಲಿ ಉಳಿಸಿಕೊಳ್ಳುವ ಆಟಗಾರರ ವಿಚಾರದಲ್ಲಿ ಫ್ರಾಂಚೈಸಿಗಳ ನಡುವೆ ಭಿನ್ನಾಭಿಪ್ರಾಯ

Dharma Keerthiraj starrer production No 1 movie Muhurta
ಕರ್ನಾಟಕ2 hours ago

Kannada New Movie: ಗೋಪಿನಾಥ ಬೆಟ್ಟದಲ್ಲಿ ನಡೆದ ಧರ್ಮ ಕೀರ್ತಿರಾಜ್ ಅಭಿನಯದ ʼಪ್ರೊಡಕ್ಷನ್ ನಂ 1ʼ ಚಿತ್ರದ ಮುಹೂರ್ತ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ4 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ1 day ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌