ಸಿಲಿಂಡರ್ ಸ್ಫೋಟಗೊಂಡು ಯುವಕ ಸಾವು; ಟೀ ಮಾಡಲು ಹೋಗಿದ್ದಾಗ ದುರಂತ - Vistara News

ಕ್ರೈಂ

ಸಿಲಿಂಡರ್ ಸ್ಫೋಟಗೊಂಡು ಯುವಕ ಸಾವು; ಟೀ ಮಾಡಲು ಹೋಗಿದ್ದಾಗ ದುರಂತ

ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ಯುವಕ ಟೀ ಮಾಡಿಕೊಳ್ಳಲು ಅಡುಗೆ ಮನೆಗೆ ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ.

VISTARANEWS.COM


on

ಸಿಲಿಂಡರ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕೋಡಿ:‌ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರು ಗ್ರಾಮದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಯುವಕ ಮೃತಪಟ್ಟಿದ್ದಾನೆ.

ಶ್ರೀಧರ ಪ್ಯಾಟಿ(19) ಮೃತ ಯುವಕ. ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಯುವಕ, ಶುಕ್ರವಾರ ಸಂಜೆ ಸಂಜೆ ಟೀ ಮಾಡಿಕೊಳ್ಳಲು ಅಡುಗೆ ಮನೆಗೆ ತೆರಳಿದ್ದಾಗ ದುರ್ಘಟನೆ ಸಂಭವಿಸಿದೆ. ಮನೆಯ ಸದಸ್ಯರೆಲ್ಲರೂ ದೀಪಾವಳಿಗೆಂದು ರಾಮದುರ್ಗ ತಾಲೂಕಿನ‌ ಗ್ರಾಮ ಸ್ವಗ್ರಾಮ ಸುರೇಬಾನಕ್ಕೆ ತೆರಳಿದ್ದಾಗ ದುರಂತ ನಡೆದಿದೆ. ಸ್ಥಳಕ್ಕೆ ಮೂಡಲಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ | Fire tragedy | ಮಂಗಳೂರಿನಲ್ಲಿ ಲಂಗರು ಹಾಕಿದ್ದ ಮೂರು ಸರಕು ಸಾಗಾಟದ ಬೋಟ್‌ಗಳು ಬೆಂಕಿಗಾಹುತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Pooja Khedkar: ಪೂಜಾ ಖೇಡ್ಕರ್‌ ಪುಣೆ ಜಿಲ್ಲಾಧಿಕಾರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ

Pooja Khedkar: ಇನ್ನು ಮಹಿಳಾ ಪೊಲೀಸ್‌ ಪೇದೆ ಪೂಜಾ ಮನೆಗೆ ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ. ಇನ್ನು ಮನೆಗೆ ಪೊಲೀಸರು ಬಂದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದ ಪೂಜಾ, ಸ್ವಲ್ಪ ಕೆಲಸ ಇತ್ತು. ಹಾಗಾಗಿ ಪೊಲೀಸರನ್ನು ಮನೆಗೆ ಕರೆಸಿಕೊಂಡಿದ್ದೆ ಎಂದಿದ್ದರು.

VISTARANEWS.COM


on

Pooja Khedkar
Koo

ಮುಂಬೈ: ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿ, ಅತಿಯಾದ ದರ್ಪ, ನಕಲಿ ದಾಖಲೆ ಸೃಷ್ಟಿಯಿಂದಲೇ ದೇಶಾದ್ಯಂತ ಗಮನ ಸೆಳೆದಿರುವ ಟ್ರೈನಿ ಅಧಿಕಾರಿ (Trainee IAS Officer) ಪೂಜಾ ಖೇಡ್ಕರ್‌ (Pooja Khedkar) ಪುಣೆ ಜಿಲ್ಲಾಧಿಕಾರಿ ಸುಹಾಸ್‌ ದಿವಾಸೆ ವಿರುದ್ಧ ಲೈಂಗಿಕ ಕಿರುಕುಳ(Sexual Harassment)ದ ಆರೋಪ ಹೊರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮ್ಮನ್ನು ಪುಣೆಯಿಂದ ವಾಸಿಂಗೆ ವರ್ಗಾವಣೆ ಮಾಡಿದ್ದ ಸುಹಾಸ್‌ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೂಜಾ ದೂರಿದ್ದಾರೆ. ಇನ್ನು ಮಹಿಳಾ ಪೊಲೀಸ್‌ ಪೇದೆ ಪೂಜಾ ಮನೆಗೆ ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ. ಇನ್ನು ಮನೆಗೆ ಪೊಲೀಸರು ಬಂದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ್ದ ಪೂಜಾ, ಸ್ವಲ್ಪ ಕೆಲಸ ಇತ್ತು. ಹಾಗಾಗಿ ಪೊಲೀಸರನ್ನು ಮನೆಗೆ ಕರೆಸಿಕೊಂಡಿದ್ದೆ ಎಂದಿದ್ದರು. ಮಹಾರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿ, ಅತಿಯಾದ ದರ್ಪ, ನಕಲಿ ದಾಖಲೆ ಸೃಷ್ಟಿಯಿಂದಲೇ ದೇಶಾದ್ಯಂತ ಗಮನ ಸೆಳೆದಿರುವ ಟ್ರೈನಿ ಅಧಿಕಾರಿ (Trainee IAS Officer) ಪೂಜಾ ಖೇಡ್ಕರ್‌ ಅವರ ಒಂದೊಂದೇ ಕಳ್ಳಾಟಗಳು ಬಯಲಾಗುತ್ತಿವೆ.

ಇನ್ನು ಮಸೂರಿಯಲ್ಲಿರುವ ಲಾಲ್‌ ಬಹದ್ದೂರ್‌ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಸೇವಾ ಅಕಾಡೆಮಿ ಖೇಡ್ಕರ್‌ ಅವರನ್ನು ತರಬೇತಿ ಶಿಬಿರಕ್ಕೆ ಕರೆದು ಅವರ ತರಬೇತಿಯನ್ನು ತಡೆ ಹಿಡಿದಿರುವ ಬಗ್ಗೆ ಆದೇಶ ಹೊರಡಿಸಲಾಗಿದೆ. ಮಹಾರಾಷ್ಟ್ರದ ರಾಜ್ಯ ಸರ್ಕಾರದ ಜಿಲ್ಲಾ ತರಬೇತಿ ಕಾರ್ಯಕ್ರಮದಿಂದ “ನಿಮ್ಮನ್ನು ತರಬೇತಿಯಿಂದ ರಿಲೀವ್‌ ಮಾಡಲಾಗಿದೆ. ಆದಷ್ಟು ಬೇಗ ಅಕಾಡೆಮಿಗೆ ಬಂದು ಸೇರಿಕೊಳ್ಳಿ” ಎಂದು ಅಕಾಡೆಮಿ ಖೇಡ್ಕರ್‌ ಅವರಿಗೆ ಹೇಳಿದೆ.

ತಮ್ಮ ಖಾಸಗಿ ಕಾರಿಗೆ ‘ಕೆಂಪು ಗೂಟ’ ಅಳವಡಿಸಿದ್ದು ಸೇರಿ ಹಲವು ರೀತಿಯಲ್ಲಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು, ವರ್ಗಾವಣೆಯ ಶಿಕ್ಷೆ ಅನುಭವಿಸುತ್ತಿರುವ ಪೂಜಾ ಖೇಡ್ಕರ್‌ ಅವರು ನಕಲಿ ಜಾತಿ ಪ್ರಮಾಣಪತ್ರ, ವಿಶೇಷ ಚೇತನ ಎಂದು ಸುಳ್ಳು ದಾಖಲೆ ಸೃಷ್ಟಿ, ವಯಸ್ಸಿನ ಕುರಿತು ಕೂಡ ಫೇಕ್‌ ಡಾಕ್ಯುಮೆಂಟ್‌ ತಯಾರಿಸಿದ ಆರೋಪಗಳನ್ನೂ ಎದುರಿಸುತ್ತಿದ್ದಾರೆ.

ನಿಯಮಿತ ಅಧಿಕಾರವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಪುಣೆಯಿಂದ (ಅಸಿಸ್ಟಂಟ್‌ ಕಲೆಕ್ಟರ್)‌ ವಾಶಿಂಗೆ ವರ್ಗಾವಣೆಗೊಂಡಿರುವ 34 ವರ್ಷದ ಅಧಿಕಾರಿಯು, ಒಬಿಸಿ ಜಾತಿ ಪ್ರಮಾಣಪತ್ರ ಲಗತ್ತಿಸಿ ಯುಪಿಎಸ್‌ಸಿ ಪರೀಕ್ಷೆ ಬರೆದು ತೇರ್ಗಡೆ ಹೊಂದಿದ್ದಾರೆ. ಆದರೆ, ಅವರು ಒಬಿಸಿ ಜಾತಿ ಪ್ರಮಾಣಪತ್ರದ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಇನ್ನು ವಿಶೇಷ ಚೇತನ ಎಂಬುದಾಗಿಯೂ ಫೇಕ್‌ ಡಾಕ್ಯುಮೆಂಟ್‌ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಮೆಡಿಕಲ್‌ ಟೆಸ್ಟ್‌ ಪ್ರಕಾರ ಪೂಜಾ ಖೇಡ್ಕರ್‌ ಅವರು ಫಿಟ್‌ ಇದ್ದಾರೆ ಎಂದು ಹೇಳಲಾಗುತ್ತಿದೆ.‌ 2007ರಲ್ಲಿ ಅವರು ಎಂಬಿಬಿಎಸ್‌ಗೆ ಅರ್ಜಿ ಸಲ್ಲಿಸಿದಾಗ ದೈಹಿಕವಾಗಿ ಫಿಟ್‌ ಇರುವುದಾಗಿ ದಾಖಲೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಯಸ್ಸಿನ ಕುರಿತೂ ಸುಳ್ಳು ದಾಖಲೆ

ಜಾತಿ, ವಿಶೇಷ ಚೇತನ ಪ್ರಮಾಣಪತ್ರದ ಜತೆಗೆ ಪೂಜಾ ಖೇಡ್ಕರ್‌ ಅವರು ವಯಸ್ಸಿನ ಕುರಿತು ಕೂಡ ಸುಳ್ಳು ದಾಖಲೆ ಸಲ್ಲಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 2020ರಿಂದ 2023ರ ಅವಧಿಯಲ್ಲಿ ಅವರು ಸಲ್ಲಿಸಿದ ದಾಖಲೆಗಳ ಪ್ರಕಾರ, ಮೂರು ವರ್ಷದಲ್ಲಿ ಅವರ ವಯಸ್ಸು ದಾಖಲೆಯಲ್ಲಿ ಒಂದೇ ವರ್ಷ ಹೆಚ್ಚಾಗಿದೆ. ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ವಯಸ್ಸಿನ ಮಿತಿ ಇರುವ ಕಾರಣ ಅವರು ವಯಸ್ಸಿನ ಕುರಿತು ಕೂಡ ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ತಿಳಿದುಬಂದಿದೆ. ಇದು ಈಗ ಭಾರಿ ಚರ್ಚೆಗೂ ಗ್ರಾಸವಾಗಿದೆ.

27 ಸಾವಿರ ರೂ. ದಂಡ ಬಿದ್ದಿದ್ದೇಕೆ?

ಅಧಿಕಾರದ ದುರುಪಯೋಗ, ನಕಲಿ ದಾಖಲೆ ಸೃಷ್ಟಿ ಜತೆಗೆ ಸಂಚಾರ ದಟ್ಟಣೆ ನಿಯಮಗಳ ಉಲ್ಲಂಘನೆಯಲ್ಲೂ ಮುಂದಿದ್ದಾರೆ. ವಾಶಿಂ ಮಹಿಳಾ ಪೊಲೀಸರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡ ಪೂಜಾ ಖೇಡ್ಕರ್‌ ಅವರು ಎರಡು ತಾಸು ಚರ್ಚಿಸಿದ್ದಾರೆ. ಯಾವ ವಿಷಯದ ಕುರಿತು ಚರ್ಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗದಿದ್ದರೂ, ಸಂಚಾರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ 27 ಸಾವಿರ ರೂ. ದಂಡ ವಿಧಿಸಲಾಗಿದ್ದು, ಅದರ ನೋಟಿಸ್‌ ನೀಡಲು ಪೊಲೀಸರು ಅವರ ಮನೆಗೆ ತೆರಳಿದ್ದರು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Manorathangal Trailer: ಗಮನ ಸೆಳೆದ ʼಮನೋರಥಂಗಳ್‌ʼ ಟ್ರೈಲರ್‌; 8 ನಿರ್ದೇಶಕರ 9 ಎಪಿಸೋಡ್‌ನಲ್ಲಿ ಸ್ಟಾರ್‌ಗಳ ಸಮಾಗಮ

Continue Reading

ಕರ್ನಾಟಕ

Dengue Fever: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳಲ್ಲಿ ತೀವ್ರ ಏರಿಕೆ; ಮಂಗಳವಾರ 487 ಕೇಸ್‌ ಪತ್ತೆ!

Dengue Fever: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 487 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 128 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

VISTARANEWS.COM


on

Koo

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 487 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 128 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಮಂದಿಗೆ ಸೋಂಕು ದೃಢಪಟ್ಟಿದ್ದು, ಸದ್ಯ ರಾಜ್ಯದಲ್ಲಿ 358 ಸಕ್ರಿಯ ಪ್ರಕರಣಗಳ ಇವೆ.

ಕಳೆದ 24 ಗಂಟೆಗಳಲ್ಲಿ 4572 ಟೆಸ್ಟ್‌ ಮಾಡಿದ್ದು, ಇದರಲ್ಲಿ 487 ಮಂದಿಗೆ ಸೋಂಕು ದೃಢಪಟ್ಟಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 283, ಬೆಂಗಳೂರು ನಗರ 5, ಬೆಂ. ಗ್ರಾಮಾಂತರ 3, ರಾಮನಗರ 1, ಕೋಲಾರ 3, ತುಮಕೂರು 18, ಚಿತ್ರದುರ್ಗ 10, ದಾವಣಗೆರೆ 12, ಶಿವಮೊಗ್ಗ 9, ವಿಜಯಪುರ 2, ಧಾರವಾಡ 17, ಹಾವೇರಿ 12, ಉತ್ತರ ಕನ್ನಡ 5, ಕಲಬುರಗಿ 12 ಬೀದರ್‌ 3, ವಿಜಯನಗರ 16, ಕೊಪ್ಪಳ 6, ಮೈಸೂರು 5, ಚಾಮರಾಜನಗರ 4, ಮಂಡ್ಯ 6, ಹಾಸನ 26, ಉಡುಪಿ 12, ಚಿಕ್ಕಮಗಳೂರು 9, ಕೊಡಗು ಜಿಲ್ಲೆಯಲ್ಲಿ 8 ಪ್ರಕರಣ ಪತ್ತೆಯಾಗಿವೆ.

ಇನ್ನು ರಾಜ್ಯದಲ್ಲಿ ಜನವರಿಯಿಂದ ಈವರೆಗೆ ಒಟ್ಟು ಡೆಂಗ್ಯೂ ಪ್ರಕರಣಗಳ ಸಂಖ್ಯೆ 10449 ವರದಿಯಾಗಿದ್ದು, 8 ಮಂದಿ ಮೃತಪಟ್ಟಿದ್ದಾರೆ. ಸದ್ಯ ಡಂಗ್ಯೂ ಮರಣ ಪ್ರಮಾಣ ಶೇ. 0.07 ಇದೆ.

ಇದನ್ನೂ ಓದಿ | Manikanta Rathod: ಅನ್ನ ಭಾಗ್ಯ ಅಕ್ಕಿ ಕಳವು ಕೇಸ್‌ನಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಬಂಧನ

ಮಹಾಮಾರಿ ಡೆಂಗ್ಯೂಗೆ ಯುವಕ ಬಲಿ

ಶಿವಮೊಗ್ಗ: ಮಹಾಮಾರಿ ಡೆಂಗ್ಯೂಗೆ ಯುವಕ ಬಲಿಯಾಗಿರುವ ಘಟನೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ನಡೆದಿದೆ. ಇದರಿಂದ ಒಂದೇ ವಾರದಲ್ಲಿ ಇಬ್ಬರು ಡೆಂಗ್ಯೂದಿಂದ ಮೃತಪಟ್ಟಂತಾಗಿದೆ. ಹೊಸನಗರ ರಸ್ತೆಯ ನಿವಾಸಿ ಆಶಿಕ್ ರಸೂಲ್ (27) ಮೃತಪಟ್ಟ ದುರ್ದೈವಿ.

ಶನಿವಾರದಿಂದ ಜ್ವರದಿಂದ ಬಳಲುತಿದ್ದ ಆಶಿಕ್ ರಸೂಲ್‌ಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಸಾವನ್ನಪ್ಪಿದ್ದಾನೆ. ಬಿಳಿರಕ್ತ ಕಣಗಳು ತೀವ್ರವಾಗಿ ಕ್ಷೀಣಿಸಿದ ಹಿನ್ನೆಲೆಯಲ್ಲಿ ಯುವಕ ಸಾವಿಗೀಡಾಗಿದ್ದಾನೆ. ಇತ್ತೀಚೆಗೆ ರಶ್ಮಿ ನಾಯಕ್ ಎನ್ನುವ ರಿಪ್ಪನ್‌ಪೇಟೆಯ ಬಿವಾಸು ಮಹಿಳೆ ಡೆಂಗ್ಯೂನಿಂದ ಮೃತಪಟ್ಟಿದ್ದಾರೆ.

Continue Reading

ದೇಶ

Delhi Liquor Policy Case: ತಿಹಾರ್‌ ಜೈಲಿನಲ್ಲಿರುವ ಕೆ.ಕವಿತಾ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Delhi Liquor Policy Case: ಪ್ರಸ್ತುತ ತಿಹಾರ್‌ ಜೈಲಿನಲ್ಲಿರುವ ಕವಿತಾ, ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಸುತ್ತಿರುವ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನಲ್ಲಿರುವ ಕೆ. ಕವಿತಾ ಅವರ ನಿವಾಸದ ಮೇಲೆ ದಾಳಿ ನಡೆಸಿ, ಸುಮಾರು ನಾಲ್ಕು ತಾಸು ಪರಿಶೀಲನೆ ನಡೆಸಿದ ಇ.ಡಿ ಅಧಿಕಾರಿಗಳು ಮಾರ್ಚ್‌ 15 ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.

VISTARANEWS.COM


on

K Kavitha
Koo

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಹಗರಣಕ್ಕೆ (Delhi Liquor Policy Case) ಸಂಬಂಧಿಸಿದಂತೆ ಬಂಧನದಲ್ಲಿರುವ ಭಾರತ ರಾಷ್ಟ್ರ ಸಮಿತಿ (BRS) ನಾಯಕಿ, ಕೆ. ಕವಿತಾ(K Kavitha)ರನ್ನು ಡಿಡಿಯು ಆಸ್ಪತ್ರೆ(DDU Hospital) ದಾಖಲಿಸಲಾಗಿದೆ. ಪ್ರಸ್ತುತ ತಿಹಾರ್‌ ಜೈಲಿನಲ್ಲಿರುವ ಕವಿತಾ, ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಸುತ್ತಿರುವ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ದೆಹಲಿಯಲ್ಲಿ ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನಲ್ಲಿರುವ ಕೆ. ಕವಿತಾ ಅವರ ನಿವಾಸದ ಮೇಲೆ ದಾಳಿ ನಡೆಸಿ, ಸುಮಾರು ನಾಲ್ಕು ತಾಸು ಪರಿಶೀಲನೆ ನಡೆಸಿದ ಇ.ಡಿ ಅಧಿಕಾರಿಗಳು ಮಾರ್ಚ್‌ 15 ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿದೆ. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೀಪಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇ.ಡಿ ಹಾಗೂ ಸಿಬಿಐ ಅಧಿಕಾರಿಗಳು ಕೆ. ಕವಿತಾ ಅವರನ್ನು ವಿಚಾರಣೆ ನಡೆಸಿದೆ.

ಇಲ್ಲಿಯ ತನಕ ನಡೆದ ತನಿಖೆಯ ಪ್ರಕಾರ ಒಟ್ಟು 1,100 ಕೋಟಿ ರೂ. ಮೊತ್ತದ ಹಗರಣ ನಡೆದಿರುವುದು ಕಂಡು ಬಂದಿದೆ. ಕವಿತಾ, ಚಂಪ್ರೀತ್ ಸಿಂಗ್, ಪ್ರಿನ್ಸ್ ಕುಮಾರ್, ದಾಮೋದರ್ ಶರ್ಮಾ ಮತ್ತು ಅರವಿಂದ್ ಸಿಂಗ್ ಅವರು ಅಕ್ರಮ ಹಣ ವರ್ಗಾವಣೆಯಲ್ಲಿ ತೊಡಗಿಸಿಕೊಂಡಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ವಿವರಿಸಲಾಗಿದೆ. ಈ ಪೈಕಿ ಕವಿತಾ ಅವರು 292.8 ಕೋಟಿ ರೂ.ಗಳ ಪಿಒಸಿ (Money generated and laundered in crime)ಯಲ್ಲಿ ಭಾಗಿಯಾಗಿದ್ದಾರೆ. 100 ಕೋಟಿ ರೂ.ಗಳ ಕಿಕ್‌ಬ್ಯಾಕ್‌ ಅನ್ನು ಎಎಪಿ ನಾಯಕರಿಗೆ ನೀಡಲಾಗಿದೆ. ಮಾತ್ರವಲ್ಲ ಕವಿತಾ ಅವರು ಮೊಬೈಲ್‌ನಲ್ಲಿದ್ದ ಸಾಕ್ಷ್ಯವನ್ನು ನಾಶಪಡಿಸಿದ್ದಾರೆ ಎಂದೂ ದೂರಲಾಗಿದೆ.

ಆರೋಪಿ ವಿಜಯ್ ನಾಯರ್ (ಎಎಪಿಯ ಉನ್ನತ ನಾಯಕರ ಪರವಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿ) ಮೂಲಕ ಕವಿತಾ ಅವರು ಸೌತ್ ಗ್ರೂಪ್ ಸದಸ್ಯರು ಮತ್ತು ಎಎಪಿ ನಾಯಕರೊಂದಿಗೆ ಸೇರಿ 100 ಕೋಟಿ ರೂ.ಗಳನ್ನು ಪಾವತಿಸಲು ಮತ್ತು ಅನಗತ್ಯ ಪ್ರಯೋಜನಗಳನ್ನು ಪಡೆಯಲು ಸಂಚು ರೂಪಿಸಿದ್ದರು ಎಂದು ವಿವರಿಸಲಾಗಿದೆ.

ಸೌತ್‌ ಗ್ರೂಪ್‌ ಎಂಬ ಕಂಪನಿಯನ್ನು ಕೆ. ಕವಿತಾ ಸೇರಿ ಹಲವರನ್ನು ಮುನ್ನಡೆಸುತ್ತಿದ್ದು, ದೆಹಲಿಯಲ್ಲಿ ಅಬಕಾರಿ ನೀತಿ ಜಾರಿ ಬಳಿಕ ಇದೇ ಕಂಪನಿಗೆ ಗುತ್ತಿಗೆ ಪಡೆಯಲು ಆಮ್‌ ಆದ್ಮಿ ಪಕ್ಷದ ನೇತೃತ್ವದ ಸರ್ಕಾರಕ್ಕೆ ಲಂಚ ನೀಡಿದೆ ಎಂಬ ಆರೋಪ ಕೇಳಿಬಂದಿದೆ. ಇದೇ ಕಾರಣಕ್ಕಾಗಿ ಇ.ಡಿ ಹಾಗೂ ಸಿಬಿಐ ಕೂಲಂಕಷ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: Arvind Kejriwal: “ಜೈಲಿನಲ್ಲಿ ಕೇಜ್ರಿವಾಲ್‌ ಹತ್ಯೆಗೆ ಸಂಚು”- ಸಂಚಲನ ಮೂಡಿಸ್ತಿದೆ ಆಪ್‌ ಆರೋಪ

Continue Reading

ಕರ್ನಾಟಕ

Road Accident: ಕೊಡಗಿನ ಸುಂಟಿಕೊಪ್ಪ ಬಳಿ ಟಿಪ್ಪರ್-ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ದುರ್ಮರಣ

Road Accident: ಕೊಡಗು ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಕೊಡಗರ ಹಳ್ಳಿಯಲ್ಲಿ ಭೀಕರ ಅಪಘಾತ ನಡೆದಿದೆ.

VISTARANEWS.COM


on

Road Accident
Koo

ಕೊಡಗು: ಬೈಕ್ ಹಾಗೂ‌ ಟಿಪ್ಪರ್ ನಡುವೆ ಭೀಕರ ಅಪಘಾತ ನಡೆದು, ಇಬ್ಬರು ಸವಾರರು ದುರ್ಮರಣ ಹೊಂದಿರುವ ಘಟನೆ (Road Accident) ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಕೊಡಗರ ಹಳ್ಳಿಯಲ್ಲಿ ನಡೆದಿದೆ. ಮಂಜು (25) ಹಾಗೂ ರಕ್ಷಿತ್ (24) ಮೃತರು.

ಸುಂಟಿಕೊಪ್ಪದಿಂದ ಕುಶಾಲನಗರ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಕುಶಾಲನಗರದಿಂದ ಮಡಿಕೇರಿ ಕಡೆ ಬರುತ್ತಿದ್ದ ಟಿಪ್ಪರ್ ಡಿಕ್ಕಿಯಾಗಿವೆ, ಇದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Sexual Abuse: ಮಧ್ಯವಯಸ್ಕ ಮಹಿಳೆಯ ಮೇಲೆ ಮಗನ ಸ್ನೇಹಿತನಿಂದಲೇ ಅತ್ಯಾಚಾರ!

ಓವರ್ ಟೇಕ್ ಮಾಡಲು ಹೋಗಿ ರಸ್ತೆ ಪಕ್ಕದ ತಗ್ಗಿಗೆ ಬಿದ್ದ ಬೈಕ್; ಇಬ್ಬರಿಗೆ ಗಾಯ

ಬಾಗಲಕೋಟೆ: ಓವರ್ ಟೇಕ್ ಮಾಡಲು ಹೋಗಿ ರಸ್ತೆ ಪಕ್ಕದ ತಗ್ಗಿಗೆ ಬೈಕ್ ಬಿದ್ದ ಹಿನ್ನೆಲೆಯಲ್ಲಿ ಪಿಯುಸಿ ಓದುವ ಇಬ್ಬರು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಬೈಕ್‌ನಿಂದ ಬಿದ್ದು ಕೈ ಮುರಿದು ಏಳೋಕಾಗದೇ ಸ್ಥಳದಲ್ಲೇ ಓರ್ವ ವಿದ್ಯಾರ್ಥಿ ನರಳಾಡುತ್ತಿದ್ದ. ಮತ್ತೋರ್ವನ ಮುಖ, ಹಣೆ, ತಲೆ, ಮೂಗಿಗೆ ಗಾಯಗಳಾಗಿ ರಕ್ತಸ್ರಾವವಾಗುತ್ತಿತ್ತು.

ಬಾದಾಮಿ ತಾಲೂಕಿನ ಹಾಲಿಗೇರಿ ಗ್ರಾಮದ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಬಸಯ್ಯ ಸೂಳಿಕೇರಿ (17), ಪ್ರಶಾಂತ್ (17) ಎಂಬ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಕಾಲೇಜು ಮುಗಿಸಿ ಕೆರೂರು ಪಟ್ಟಣದಿಂದ ಮನೆಗೆ ಹೋಗುವ ವೇಳೆ ಅಪಘಾತ ನಡೆದಿದೆ.

ರಾಯಚೂರಿನಲ್ಲಿ ಮೊಹರಂನಲ್ಲಿ ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ವ್ಯಕ್ತಿ ಸುಟ್ಟು ಭಸ್ಮ

ರಾಯಚೂರು: ರಾಯಚೂರಿನಲ್ಲಿ ಮೊಹರಂ ಆಚರಣೆ ವೇಳೆ ಕೊಂಡ ಹಾಯುವಾಗ (Muharram 2024) ವ್ಯಕ್ತಿಯೊಬ್ಬ ಆಯತಪ್ಪಿ ಬಿದ್ದು ಸುಟ್ಟು ಭಸ್ಮವಾಗಿದ್ದಾರೆ. ರಾಯಚೂರಿನ ಮಸ್ಕಿ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ ತಡರಾತ್ರಿ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಯಮನಪ್ಪ ನಾಯಕ್ (45)ಮೃತ ದುರ್ದೈವಿ.

ನಿಗಿ ನಿಗಿ ಕೆಂಡದಲ್ಲಿ ಬೇಯುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಮೊಹರಂ ಹಬ್ಬ ಆಚರಣೆ ವೇಳೆ ಕೊಂಡ ಹಾಯುವುದು ಪದ್ಧತಿ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿದೆ. ಅದರಂತೆ ಬೆಂಕಿ ಹಾಯಲು ಯಮನಪ್ಪ ಮುಂದಾಗಿದ್ದರು. ಕೊಂಡ ಹಾಯುವಾಗ ಆಯತಪ್ಪಿ ಬೆಂಕಿಯೊಳಗೆ ಬಿದ್ದ ಪರಿಣಾಮ ಸುಟ್ಟುಕರಕಲಾಗಿದ್ದಾರೆ.

ಕೂಡಲೇ ಅಲ್ಲಿದ್ದವರು ಬೆಂಕಿ ಹಾರಿಸಲು ನೀರು ಎರಚಿ ರಕ್ಷಣೆ ಮುಂದಾದರೂ, ಆದರೆ ತೀವ್ರ ಬೆಂಕಿ ಆವರಿಸಿ ಯಮನಪ್ಪ ಸುಟ್ಟುಭಸ್ಮವಾದರು. ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸ್‌ರಿಂದ ಲಾಠಿ ಚಾರ್ಜ್

Sexual Abuse: ಮಧ್ಯವಯಸ್ಕ ಮಹಿಳೆಯ ಮೇಲೆ ಮಗನ ಸ್ನೇಹಿತನಿಂದಲೇ ಅತ್ಯಾಚಾರ!

ಮೊಹರಂ ಹಬ್ಬದ ಆಚರಣೆ ವೇಳೆ ಪೊಲೀಸ್‌ರಿಂದ ಲಾಠಿ ಚಾರ್ಜ್ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಪಾಶ್ಚಾಪೂರ ಗ್ರಾಮದಲ್ಲಿ ಘಟನೆ ನಡೆದಿದೆ. ಪಾಶ್ಚಾಪುರ ಗ್ರಾಮದ ನಡುವಿನ ಪೇಟೆ ಬಳಿ ಬಂದಾಗ ಏಕಾಏಕಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ ಎನ್ನಲಾಗಿದೆ. ಹೀಗಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಎರಡು ದೇವರ ಭೇಟಿ ಸಂದರ್ಭದಲ್ಲಿ ಟೊನ್ನೆಬಾವು, ಕರಬಾಲ ಎಂಬ ಸಂಪ್ರದಾಯದ ಆಚರಣೆ ವೇಳೆ ಘಟನೆ ನಡೆದಿದೆ. ಸ್ಥಳದಲ್ಲಿದ್ದ ಯಮಕನಮರಡಿ ಪೊಲೀಸ್ ಠಾಣೆಯ ಎಎಸ್‌ಐ ಮುರಗೋಡ ಹಾಗೂ ಓರ್ವ ಪೋಲಿಸ್ ಪೇದೆ ಮೇಲೆ ಹಲ್ಲೆ ನಡೆಸಲಾಗಿದೆ. ಉದ್ದೇಶಪೂರ್ವಕವಾಗಿ ಪೊಲೀಸರ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪಿದೆ.

Continue Reading
Advertisement
T20 World Cup 2024
ಪ್ರಮುಖ ಸುದ್ದಿ6 mins ago

T20 World Cup 2024 : 30 ಎಸೆತಕ್ಕೆ 30 ರನ್​ ಇದ್ದಾಗ ದಿಕ್ಕೇ ತೋಚದಂತಾಗಿದ್ದೆ! ಆ ತಲ್ಲಣ ವಿವರಿಸಿದ ಶರ್ಮಾ

Assembly Session
ಕರ್ನಾಟಕ20 mins ago

Assembly Session: ಅಧಿಕಾರಿಗಳು ಮಾಡಿದ ಅಕ್ರಮಕ್ಕೆ ಸಚಿವರ ವಿರುದ್ಧ ಆರೋಪಿಸುವುದು ಸರಿಯಲ್ಲ ಎಂದ ಡಿಕೆಶಿ!

A 15 year old boy weighing 111 kg underwent successful spinal disc surgery that avoided potential paralysis
ಕರ್ನಾಟಕ28 mins ago

Fortis Hospital: 111 ಕೆಜಿ ತೂಕವಿದ್ದ ಬಾಲಕನಿಗೆ ಪಾರ್ಶ್ವವಾಯು ತಪ್ಪಿಸಿದ ʼಬೆನ್ನೆಲುಬಿನ ಡಿಸ್ಕ್ʼ ಶಸ್ತ್ರಚಿಕಿತ್ಸೆ

Pooja Khedkar
ದೇಶ32 mins ago

Pooja Khedkar: ಪೂಜಾ ಖೇಡ್ಕರ್‌ ಪುಣೆ ಜಿಲ್ಲಾಧಿಕಾರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ

Larva survey Show the old photo without GPS and get crores of rupees to the government Cheating Alleged by MLC TA Sharavana
ಕರ್ನಾಟಕ33 mins ago

Assembly Session: ಲಾರ್ವಾ ಸರ್ವೇ; ಜಿಪಿಎಸ್ ಇಲ್ಲದ ಹಳೆ ಫೋಟೋ ತೋರಿಸಿ ಕೋಟ್ಯಂತರ ರೂ. ಮೋಸ; ಶರವಣ ಆರೋಪ

A permanent solution to artificial flood on national highways says MP Vishweshwar Hegde Kageri
ಉತ್ತರ ಕನ್ನಡ36 mins ago

Uttara Kannada News: ರಾಷ್ಟ್ರೀಯ ಹೆದ್ದಾರಿಯಲ್ಲಿ ಕೃತಕ ನೆರೆ ತಡೆಗೆ ಶಾಶ್ವತ ಪರಿಹಾರ; ಕಾಗೇರಿ

ಕರ್ನಾಟಕ37 mins ago

Dengue Fever: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳಲ್ಲಿ ತೀವ್ರ ಏರಿಕೆ; ಮಂಗಳವಾರ 487 ಕೇಸ್‌ ಪತ್ತೆ!

Chennai Super King
ಕ್ರೀಡೆ46 mins ago

Chennai Super King : ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಕ್ರಿಕೆಟ್ ಅಕಾಡೆಮಿ ಆರಂಭಿಸಿದ ಚೆನ್ನೈ ಸೂಪರ್ ಕಿಂಗ್ಸ್​

Anushka Sharma
ಪ್ರಮುಖ ಸುದ್ದಿ1 hour ago

Anushka Sharma : ಪತ್ನಿ ಅನುಷ್ಕಾ ಬರ್ತ್​​ಡೇಗೆ ಕೊಹ್ಲಿ ಕೇಕ್​ ಆರ್ಡರ್​ ಮಾಡಿದ್ದು ಬೆಂಗಳೂರಿನಿಂದ; ತಿಂಗಳುಗಳ ಬಳಿಕ ಮಾಹಿತಿ ಬಹಿರಂಗ

Muscat Terrorist Attack
ವಿದೇಶ1 hour ago

Muscat Terrorist Attack: ಮಸ್ಕತ್‌ನಲ್ಲಿ ಉಗ್ರರ ಅಟ್ಟಹಾಸ; ಭಾರತೀಯ ಸೇರಿ 9ಮಂದಿ ಸಾವು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ9 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ11 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 day ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 day ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌