Mann ki baat | ವೃಕ್ಷ ಸಂರಕ್ಷಕ, ಕನ್ನಡ ಹೋರಾಟಗಾರ ಸುರೇಶ್‌ ಕುಮಾರ್‌ಗೆ ಪ್ರಧಾನಿ ಮೋದಿ ಶ್ಲಾಘನೆ - Vistara News

ದೇಶ

Mann ki baat | ವೃಕ್ಷ ಸಂರಕ್ಷಕ, ಕನ್ನಡ ಹೋರಾಟಗಾರ ಸುರೇಶ್‌ ಕುಮಾರ್‌ಗೆ ಪ್ರಧಾನಿ ಮೋದಿ ಶ್ಲಾಘನೆ

ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರು ಮನ್‌ ಕಿ ಬಾತ್‌ನಲ್ಲಿ ಬೆಂಗಳೂರಿನ ಸಹಕಾರ ನಗರದಲ್ಲಿ ಸಾವಿರಾರು ವೃಕ್ಷಗಳನ್ನು ಬೆಳೆಸಿ ಸಂರಕ್ಷಿಸಿರುವ ಸುರೇಶ್‌ ಕುಮಾರ್‌ (Mann ki baat) ಅವರನ್ನು ಶ್ಲಾಘಿಸಿದ್ದಾರೆ.

VISTARANEWS.COM


on

mann ki baat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಬೆಂಗಳೂರಿನಲ್ಲಿ ಸಾವಿರಾರು ವೃಕ್ಷಗಳನ್ನು ಸಂರಕ್ಷಿಸಿ ಪೋಷಿಸಿರುವ ಹಾಗೂ ಕನ್ನಡ ನಾಡು-ನುಡಿಯ ಬಗ್ಗೆ ಜನ ಜಾಗೃತಿ ಮೂಡಿಸುತ್ತಿರುವ ಸುರೇಶ್‌ ಕುಮಾರ್‌ ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ( Mann ki baat) ಶ್ಲಾಘಿಸಿದ್ದಾರೆ.

ಪ್ರಧಾನಿ ಮೋದಿಯವರು ಭಾನುವಾರ ತಮ್ಮ ಬಾನುಲಿ ಕಾರ್ಯಕ್ರಮ ಮನ್‌ ಕಿ ಬಾತ್‌ನಲ್ಲಿ ಮಾತನಾಡುತ್ತಾ, ಸುರೇಶ್‌ ಕುಮಾರ್‌ ಅವರು ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ಮಾಡಿರುವ ಕಾರ್ಯಕ್ರಮಗಳು ಅನನ್ಯ. ಅವರಿಂದ ನಾವು ಕಲಿಯುವಂಥದ್ದು ಬಹಳಷ್ಟು ಇದೆ. 20 ವರ್ಷಗಳ ಹಿಂದೆ ಅವರು ಸಹಕಾರ ನಗರದಲ್ಲಿ ಗಿಡ ಮರಗಳನ್ನು ನೆಟ್ಟು ಸಂರಕ್ಷಣೆ ಮಾಡಲು ನಿರ್ಧರಿಸಿದರು. ಈ ಕೆಲಸ ಸುಲಭವಾಗಿರಲಿಲ್ಲ. ಆದರೆ ಈಗ ಅಲ್ಲಿ 40 ಅಡಿ ಎತ್ತರದ ದೊಡ್ಡ ಮರಗಳು ಚೆನ್ನಾಗಿ ಬೆಳೆದಿವೆ. ಪ್ರತಿಯೊಬ್ಬರೂ ಈ ಹಸಿರಿನ ಸೌಂದರ್ಯವನ್ನು ಮೆಚ್ಚುತ್ತಿದ್ದಾರೆ. ಅಲ್ಲಿನ ನಿವಾಸಿಗಳಿಗೂ ಇದು ಗರ್ವದ ಸಂಗತಿಯಾಗಿದೆ ಎಂದರು.

ಸುರೇಶ್‌ ಕುಮಾರ್‌ ಅವರು ಇನ್ನೂ ಒಂದು ಅದ್ಭುತ ಕೆಲಸವನ್ನು ಮಾಡಿದ್ದಾರೆ. ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಪೋಷಿಸಲು ಸಹಕಾರ ನಗರದಲ್ಲಿ ಒಂದು ಬಸ್‌ ನಿಲ್ದಾಣವನ್ನು ಮಾಡಿದ್ದಾರೆ. ನಾಡು ನುಡಿಯ ಬಗ್ಗೆ ಅರಿವು ಮೂಡಿಸುವ ಫಲಕಗಳನ್ನು ಅಚ್ಚುಕಟ್ಟಾಗಿ ಅಳವಡಿಸಿದ್ದಾರೆ. ಪರಿಸರ ಸಂರಕ್ಷಣೆ ಮತ್ತು ನಾಡು-ನುಡಿಯ ಸಂರಕ್ಷಣೆಗೆ ಅವರು ಸಲ್ಲಿಸುತ್ತಿರುವ ಕೊಡುಗೆ ಮಾದರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸುರೇಶ್‌ ಕುಮಾರ್‌ ಅವರು ಸಹಕಾರ ನಗರದಲ್ಲಿ ರೈಲ್ವೆ ಹಳಿಯ ಬದಿಗಳಲ್ಲಿನ ಖಾಲಿ ಜಾಗಗಳಲ್ಲಿ 2,000 ಗಿಡಗಳನ್ನು ನೆಟ್ಟಿದ್ದರು. ಬೇಸಗೆಯಲ್ಲಿ ಅಷ್ಟೂ ಗಿಡಗಳಿಗೆ ನೀರುಣಿಸಿ ಬೆಳೆಸಿದ್ದರು. ಅವುಗಳು ಈಗ ಮರಗಳಾಗಿ ನೆರಳು ನೀಡುತ್ತವೆ. ಪರಿಸರವನ್ನು ಅಂದಗೊಳಿಸಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Flight Emergency Landing: ತಪ್ಪಿದ ಮತ್ತೊಂದು ಭಾರೀ ಅವಘಡ; ಸ್ಪೈಸ್‌ ಜೆಟ್‌ ವಿಮಾನ ತುರ್ತು ಭೂಸ್ಪರ್ಶ

Flight Emergency Landing: ದೆಹಲಿಯಿಂದ ಲೇಹ್‌ಗೆ ಹೊರಟಿದ್ದ SG123 ಸ್ಪೈಸ್‌ ಜೆಟ್‌ ವಿಮಾನ ಟೇಕ್‌ ಆಫ್‌ ಆಗುತ್ತಿದ್ದಂತೆ ಹಕ್ಕಿಯೊಂದು ಬಂದು ಎಂಜಿನ್‌ಗೆ ಡಿಕ್ಕಿ ಹೊಡೆದಿದೆ. ತಕ್ಷಣ ಸಮಯಪ್ರಜ್ಞೆ ಮೆರೆದ ಪೈಲಟ್‌ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿದ್ದಾರೆ. ಬೆಳಗ್ಗೆ 10.29 ಕ್ಕೆ ಟೇಕ್‌ ಆಫ್‌ ಆಗಿದ್ದ ವಿಮಾನ 11ಗಂಟೆ ಹೊತ್ತಿಗೆ ಲ್ಯಾಂಡ್‌ ಆಗಿದೆ. ಇನ್ನು ವಿಮಾನದಲ್ಲಿದ್ದ ಪ್ರಯಾಣಿಕರೆಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

VISTARANEWS.COM


on

Flight Emergency Landing
Koo

ನವದೆಹಲಿ: ಪಕ್ಷಿ ಡಿಕ್ಕಿ ಹೊಡೆದ ಕಾರಣ ಟೇಕ್‌ ಆಫ್‌ ಆಗಿದ್ದ ವಿಮಾನವೊಂದು ತುರ್ತು ಭೂಸ್ಪರ್ಶ(Flight Emergency Landing) ಮಾಡಿರುವ ಘಟನೆ ದೆಹಲಿ(New Delhi)ಯಲ್ಲಿ ನಡೆದಿದೆ. ದೆಹಲಿಯಿಂದ ಲೇಹ್‌ಗೆ ಹೊರಟಿದ್ದ SG123 ಸ್ಪೈಸ್‌ ಜೆಟ್‌(Spice jet) ವಿಮಾನ ಟೇಕ್‌ ಆಫ್‌(Take off) ಆಗುತ್ತಿದ್ದಂತೆ ಹಕ್ಕಿಯೊಂದು ಬಂದು ಎಂಜಿನ್‌ಗೆ ಡಿಕ್ಕಿ ಹೊಡೆದಿದೆ. ತಕ್ಷಣ ಸಮಯಪ್ರಜ್ಞೆ ಮೆರೆದ ಪೈಲಟ್‌ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಿದ್ದಾರೆ.

ಬೆಳಗ್ಗೆ 10.29 ಕ್ಕೆ ಟೇಕ್‌ ಆಫ್‌ ಆಗಿದ್ದ ವಿಮಾನ 11ಗಂಟೆ ಹೊತ್ತಿಗೆ ಲ್ಯಾಂಡ್‌ ಆಗಿದೆ. ಇನ್ನು ವಿಮಾನದಲ್ಲಿದ್ದ ಪ್ರಯಾಣಿಕರೆಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇಂತಹದ್ದೇ ಒಂದು ಘಟನೆ ಕೆಲವು ದಿನಗಳ ಹಿಂದೆ ನಡೆದಿತ್ತು. ದುಬೈಯಿಂದ ಮುಂಬೈ ಆಗಮಿಸಿದ ಎಮಿರೇಟ್ಸ್‌ ವಿಮಾನ (Emirates Flight)ಕ್ಕೆ ಸಿಲುಕಿ ಸುಮಾರು 36 ಫ್ಲೆಮಿಂಗೊ(Flamingos) ಪಕ್ಷಿಗಳು ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿತ್ತು.

ಮುಂಬೈಯ ಘಾಟ್‌ಕೋಪರ್‌ನ ಪಂತ್‌ನಗರದ ಲಕ್ಷ್ಮೀ ನಗರ ಪ್ರದೇಶದಲ್ಲಿ ಕಳೆದ ಸೋಮವಾರ ರಾತ್ರಿ ಈ ಅವಘಡ ನಡೆದಿದೆ. ಸುಮಾರು 310 ಪ್ರಯಾಣಿಕರನ್ನು ಹೊತ್ತ ಇಕೆ 508 (EK 508) ಎಮಿರೇಟ್ಸ್‌ ವಿಮಾನ ರಾತ್ರಿ 9.18ರ ಸುಮಾರಿಗೆ ಮುಂಬೈಗೆ ಆಗಮಿಸಿತ್ತು. ಈ ವೇಳೆ ಕೊಕ್ಕರೆಯಂತಹ ಫ್ಲೆಮಿಂಗೊಗಳು ವಿಮಾನಕ್ಕೆ ಸಿಲುಕಿ ಸಾವನ್ನಪ್ಪಿವೆ ಎಂದು ಮೂಲಗಳು ತಿಳಿಸಿವೆ. ವಿಮಾನಕ್ಕೂ ಅಲ್ಪ ಸ್ವಲ್ಪ ಹಾನಿಯಾಗಿದ್ದು, ಯಾವುದೇ ಅಪಾಯವಿಲ್ಲದೆ ಲ್ಯಾಂಡ್‌ ಆಗಿತ್ತು.

ಇದಕ್ಕೂ ಮುನ್ನ, ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ(Air India) ವಿಮಾನ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಭೂ ಸ್ಪರ್ಶ(Emergency Landing) ಮಾಡಿತ್ತು. ಬೆಂಗಳೂರಿನಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿತ್ತು. ಹೀಗಾಗಿ ತುರ್ತು ಭೂ ಸ್ಪರ್ಶ ಮಾಡಲಾಗಿದ್ದು, ಭಾರೀ ಅವಘಡವೊಂದು ತಪ್ಪಿತ್ತು.

AI 1132 ಏರ್​ ಇಂಡಿಯಾ ವಿಮಾನ ರಾತ್ರಿ 11.20ಕ್ಕೆ ಬೆಂಗಳೂರಿನಿಂದ ಕೊಚ್ಚಿಗೆ ತೆರಳಲು ಟೇಕ್​​ ಆಫ್ ಆಗಿತ್ತು. ಆದರೆ ವಿಮಾನದಲ್ಲಿ ಏಕಾಏಕಿ ಬೆಂಕಿ ಹೊಗೆ ಕಾಣಿಸಿಕೊಂಡಿದೆ. ಕೂಡಲೆ ಪೈಲಟ್​​ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಎಮರ್ಜೆನ್ಸಿ ಲ್ಯಾಂಡ್​ ಮಾಡಿದರು. ಇದರಿಂದ ಭಾರಿ ಅನಾಹುತ ತಪ್ಪಿದೆ. ವಿಮಾನ ಭೂ ಸ್ಪರ್ಶವಾಗುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಕೂಡಲೆ ಬೆಂಕಿಯನ್ನು ನಂದಿಸಿದ್ದಾರೆ. ವಿಮಾನದಲ್ಲಿದ್ದ ಸಿಬ್ಬಂದಿ ಸೇರಿ 170 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಅದೃಷ್ಟವಶಾತ್‌ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ.

ಇದನ್ನೂ ಓದಿ:Accident: ಭೀಕರ ಅಪಘಾತ; ದೇವಸ್ಥಾನಕ್ಕೆ ತೆರಳುತ್ತಿದ್ದ 11 ಜನ ಸ್ಥಳದಲ್ಲೇ ದುರ್ಮರಣ

ಮೇ 16ರಂದು ಕೂಡ ಇಂತಹದ್ದೇ ಒಂದು ಘಟನೆ ಪುಣೆಯಲ್ಲಿ ನಡೆದಿತ್ತು,. 180 ಪ್ರಯಾಣಿಕರೊಂದಿಗೆ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ (Air India) ವಿಮಾನವು ಪುಣೆ ವಿಮಾನ ನಿಲ್ದಾಣದ ರನ್‌ವೇಯಲ್ಲಿ ಗುರುವಾರ (ಮೇ 16) ಟಗ್‌ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿಯಿಂದಾಗಿ ವಿಮಾನಕ್ಕೆ ಹಾನಿಯಾಗಿದ್ದರೂ ಅದೃಷ್ಟವಶಾತ್‌ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ. ಅಪಘಾತದ ನಂತರ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಲಾಯಿತು.

Continue Reading

ದೇಶ

IT Raid: ಚಿನ್ನದ ವ್ಯಾಪಾರಿಗಳಿಗೆ ಐಟಿ ಶಾಕ್‌; ಬೆಳ್ಳಂಬೆಳಗ್ಗೆ ರೇಡ್‌, ಕೋಟಿ ಕೋಟಿ ಹಣ ಜಪ್ತಿ!

IT Raid: ಐಟಿ ಅಧಿಕಾರಿಗಳು ಚಿನ್ನದ ಮಳಿಗೆಯಲ್ಲಿ ಶೋಧ ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದರು. ಶೋಧ ಕಾರ್ಯದ ವೇಳೆ ಬರೋಬ್ಬರಿ 26 ಕೋಟಿ ರೂ. ನಗದು ಮತ್ತು 90 ಕೋಟಿ ರೂ. ಮೊತ್ತದ ವಸ್ತುಗಳು ಪತ್ತೆ ಆಗಿವೆ. ಇನ್ನು ಈ ನಗದು ಮತ್ತು ಸ್ವತ್ತುಗಳನ್ನು ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದು, ಕೇಸ್‌ ದಾಖಲಿಸಿಕೊಂಡಿದ್ದಾರೆ.

VISTARANEWS.COM


on

IT Raid
Koo

ಮಹಾರಾಷ್ಟ್ರ: ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ(IT Raid) ಅಧಿಕಾರಿಗಳು ನಾಸಿಕ್ ಮೂಲದ ಚಿನ್ನದ ವ್ಯಾಪಾರಿ(Jewellers)ಗಳಿಗೆ ಬಿಸಿ ಮುಟ್ಟಿದ್ದಾರೆ. ಅಕ್ರಮ ಹಣ ವರ್ಗಾವಣೆ ಮತ್ತು ತೆರಿಗೆ ವಂಚನೆ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಹಾರಾಷ್ಟ್ರದ ನಾಸಿಕ್‌ನ ಸುರಾನಾ ಜ್ಯುವೆಲ್ಲರ್ಸ್‌ ಮೇಲೆ ರೇಡ್‌ ಮಾಡಿದ ಅಧಿಕಾರಿಗಳು ಭಾರೀ ಮೊತ್ತದ ಅಕ್ರಮ ಹಣ ಮತ್ತು ಸಂಪತ್ತನ್ನು ವಶಕ್ಕೆ ಪಡೆದಿದ್ದಾರೆ.

ಅಧಿಕೃತ ಮಾಹಿತಿ ಮೇರೆಗೆ ದಾಳಿ ನಡೆಸಿದ ಐಟಿ ಅಧಿಕಾರಿಗಳು ಚಿನ್ನದ ಮಳಿಗೆಯಲ್ಲಿ ಶೋಧ ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದರು. ಶೋಧ ಕಾರ್ಯದ ವೇಳೆ ಬರೋಬ್ಬರಿ 26 ಕೋಟಿ ರೂ. ನಗದು ಮತ್ತು 90 ಕೋಟಿ ರೂ. ಮೊತ್ತದ ವಸ್ತುಗಳು ಪತ್ತೆ ಆಗಿವೆ. ಇನ್ನು ಈ ನಗದು ಮತ್ತು ಸ್ವತ್ತುಗಳನ್ನು ಐಟಿ ಅಧಿಕಾರಿಗಳು ಜಪ್ತಿ ಮಾಡಿದ್ದು, ಕೇಸ್‌ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ:Fire Accident: ಗುಜರಾತ್‌ ಅಗ್ನಿ ದುರಂತ; ಸಾವಿನ ಸಂಖ್ಯೆ 32ಕ್ಕೆ ಏರಿಕೆ; SIT ತನಿಖೆಗೆ ಆದೇಶ

ಇನ್ನು ಕೆಲವು ವಾರಗಳ ಹಿಂದೆ ಜಾರ್ಖಂಡ್‌ನಲ್ಲೂ ಇಂತಹದ್ದೇ ಒಂದು ರೇಡ್‌ ನಡೆದಿತ್ತು. ಜಾರಿ ನಿರ್ದೇಶನಾಲಯ (Enforcement Directorate)ದ ಅಧಿಕಾರಿಗಳು ಜಾರ್ಖಂಡ್‌ನ ರಾಜಧಾನಿ ರಾಂಚಿಯ ಅನೇಕ ಸ್ಥಳಗಳಲ್ಲಿ ಸರಣಿ ದಾಳಿ ನಡೆಸಿ ಭರ್ಜರಿ ಬೇಟೆಯಾಡಿದ್ದರು. (ED Raid). ಈ ವೇಳೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ, ಕಾಂಗ್ರೆಸ್‌ ಮುಖಂಡ ಅಲಂಗೀರ್ ಆಲಂ (Alamgir Alam) ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ (Sanjiv Lal) ಮನೆಯಲ್ಲಿ ಲೆಕ್ಕವಿಲ್ಲದ 25 ಕೋಟಿ ರೂ.ಗಿಂತ ಅಧಿಕ ಹಣವನ್ನು ವಶಕ್ಕೆ ಪಡೆಯಲಾಗಿತ್ತು.

Continue Reading

ಕ್ರೈಂ

Teenage Boy Arrested: ತನ್ನನ್ನು ಅತ್ಯಾಚಾರ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದವನನ್ನು ಕೊಂದ ಬಾಲಕ!

ಮುಜಾಫರ್‌ನಗರದ ಹಳ್ಳಿಯೊಂದರಲ್ಲಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ 50 ವರ್ಷದ ವ್ಯಕ್ತಿಯನ್ನು ಕೊಂದ ಆರೋಪದ ಮೇಲೆ 15 ವರ್ಷದ ಬಾಲಕನನ್ನು (Teenage Boy Arrested) ಬಂಧಿಸಲಾಗಿದೆ.

VISTARANEWS.COM


on

By

Teenage boy arrested
Koo

ಉತ್ತರಪ್ರದೇಶ: ಅತ್ಯಾಚಾರಿಯನ್ನು (rapist) ಕೊಂದ ಹದಿಹರೆಯದ ಬಾಲಕನನ್ನು (Teenage Boy Arrested) ಉತ್ತರಪ್ರದೇಶದ (Uttar Pradesh) ಮುಜಾಫರ್‌ನಗರದಲ್ಲಿ (Muzaffarnagar) ಪೊಲೀಸರು ಬಂಧಿಸಿದ್ದು, ಐಪಿಸಿ ಸೆಕ್ಷನ್ 302 (Murder) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಬಾಲಕನನ್ನು ಬಾಲಾಪರಾಧಿ ಕೇಂದ್ರಕ್ಕೆ ಕಳುಹಿಸಲಾಗಿದೆ.

ಮುಜಾಫರ್‌ನಗರದ ಹಳ್ಳಿಯೊಂದರಲ್ಲಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ 50 ವರ್ಷದ ವ್ಯಕ್ತಿಯನ್ನು ಕೊಂದ ಆರೋಪದ ಮೇಲೆ 15 ವರ್ಷದ ಬಾಲಕನನ್ನು ಬಂಧಿಸಲಾಗಿದೆ. ಮೇ 20ರಂದು ಬಾಲಕನ ಮನೆಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಪೊಲೀಸ್ ತನಿಖೆಯ ಅನಂತರ ಹದಿಹರೆಯದವರನ್ನು ಶನಿವಾರ ಬಂಧಿಸಲಾಯಿತು.

ವ್ಯಕ್ತಿಯ ಕುಟುಂಬದವರು ಪೊಲೀಸರಿಗೆ ದೂರು ನೀಡಿದ ಅನಂತರ ಬಾಲಕನ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಾಲಕನನ್ನು ಬಾಲಾಪರಾಧಿ ಕೇಂದ್ರಕ್ಕೆ ಕಳುಹಿಸಲಾಗಿದೆ.

ಎಸ್ಪಿ (ಗ್ರಾಮೀಣ) ಆದಿತ್ಯ ಬನ್ಸಾಲ್ ಅವರು, ವಾರಗಳ ಹಿಂದೆ ಮೃತರು ಅಪ್ರಾಪ್ತ ವಯಸ್ಕನನ್ನು ಅಶ್ಲೀಲ ವಿಡಿಯೋ ಕ್ಲಿಪ್ ಅನ್ನು ರೆಕಾರ್ಡ್ ಮಾಡಿದ್ದರು. ಬಾಲಕನಿಗೆ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಮತ್ತು ಪದೇ ಪದೇ ಲೈಂಗಿಕ ಕಿರುಕುಳ ನೀಡಲಾಗುತ್ತಿತ್ತು.

ಸೋಮವಾರ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ ಅನಂತರ, ವ್ಯಕ್ತಿ ತನ್ನ ಮನೆಗೆ ಬರುವಂತೆ ಬಾಲಕನಿಗೆ ಒತ್ತಾಯಿಸಿದ್ದನು. ಆತ ಕಿರುಕುಳ ನೀಡುತ್ತಿದ್ದುದರಿಂದ ಹುಡುಗ ತನ್ನ ಪಕ್ಕದಲ್ಲಿದ್ದ ಹರಿತವಾದ ವಸ್ತುವನ್ನು ಎತ್ತಿಕೊಂಡು ಹೋಗಿ ವ್ಯಕ್ತಿಯ ತಲೆ ಮತ್ತು ಗಂಟಲಿನ ಮೇಲೆ ಹಲ್ಲೆ ನಡೆಸಿದ್ದ. ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಆತನ ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ.

ಪ್ರೀತಿಗೆ ವಿರೋಧ; ಯುವಕ ಆತ್ಮಹತ್ಯೆ

ಪ್ರೀತಿಸಿದ ಯುವತಿಯ ಕುಟುಂಬಸ್ಥರು ಮದುವೆಗೆ ವಿರೋಧ ವ್ಯಕ್ತಪಡಿಸಿದ ಕಾರಣ ಮನನೊಂದ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಲಸೂರ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ಅಜಯ್ ಮನೋಹರ ಸೂರ್ಯವಂಶಿ (22) ಮೃತ ವ್ಯಕ್ತಿ. ಕೆಲವು ವರ್ಷಗಳಿಂದ ಈತ ಯುವತಿಯೊಬ್ಬಳನ್ನು ಪ್ರೀತಿಸುತಿದ್ದ, ಆದರೆ ತನ್ನ ತಂಗಿಯನ್ನು ಮರೆತು ಬಿಡುವಂತೆ ಆಕೆಯ ಅಣ್ಣ ಯುವಕನಿಗೆ ಧಮ್ಕಿ ಹಾಕಿದ್ದ. ಹೀಗಾಗಿ ಆತನ ಭಯಕ್ಕೆ ಹೆದರಿ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಹೊಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ: Physical Abuse: ವಾಯಿಸ್‌ ಚೇಂಜಿಂಗ್‌ ಆಪ್‌ ಸಹಾಯದಿಂದ ಯುವತಿಯರಿಗೆ ಬಲೆ; ಮಹಿಳೆಯಂತೆ ಮಾತನಾಡಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

ಹಿಟ್‌ ಆ್ಯಂಡ್‌ ರನ್‌: ಪಾದಚಾರಿ ಸಾವು

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅರೇಪುರ ಗೇಟ್ ಬಳಿ ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಯ ಮಧ್ಯೆ ಹಾರಿ ಬಿದ್ದ ವ್ಯಕ್ತಿ ಮೇಲೆ ಮತ್ತೊಂದು ವಾಹನ ಹರಿದಿದೆ ಎನ್ನಲಾಗಿದೆ.

ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಸ್ಥಳೀಯರು ಕೂಡಲೇ ಆಂಬ್ಯುಲೆನ್ಸ್‌ನಲ್ಲಿ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳೀಯ ಠಾಣೆಗಳಿಗೆ ಮಾಹಿತಿ ರವಾನಿಸಿದ್ದಾರೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ದೇಶ

Cyclone Remal: ರೆಮಲ್‌ ಚಂಡ ಮಾರುತದ ಅಬ್ಬರ ಶುರು; ಬಾಂಗ್ಲಾದೇಶ, ಪ.ಬಂಗಾಳ ಸೇರಿದಂತೆ ಹಲವಡೆ ಭಾರೀ ಮಳೆ, ಭೂಕುಸಿತ ಸಾಧ್ಯತೆ

Cyclone Remal:ಹವಾಮಾನ ಇಲಾಖೆಯು ಕೆಪುಪಾರಾ (ಬಾಂಗ್ಲಾದೇಶ) ದಿಂದ ಸುಮಾರು 800 ಕಿಮೀ ದಕ್ಷಿಣ-ನೈಋತ್ಯ ಮತ್ತು ಕ್ಯಾನಿಂಗ್ (ಪಶ್ಚಿಮ ಬಂಗಾಳ) ನಿಂದ 810 ಕಿಮೀ ದೂರದಲ್ಲಿ ಅಂದರೆ ಮಧ್ಯ ಬಂಗಾಳ ಕೊಲ್ಲಿಯಲ್ಲಿ ಮೇ 24 ರಂದು ಪಶ್ಚಿಮ ಮಧ್ಯ ಮತ್ತು ಪಕ್ಕದ ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ರೆಮಲ್ ಚಂಡಮಾರುತವನ್ನು ಗುರುತಿಸಿದೆ.
ರೆಮಲ್ ಚಂಡಮಾರುತವು ಪ್ರಸ್ತುತ ಉತ್ತರಕ್ಕೆ ಚಲಿಸುತ್ತಿದೆ. ಈ ಚಂಡಮಾರುತವು ಮೇ 26 ರ ಮಧ್ಯರಾತ್ರಿಯ ಹೊತ್ತಿಗೆ ಸಾಗರ್ ದ್ವೀಪ ಮತ್ತು ಖೇಪುಪಾರ ನಡುವೆ ಬಾಂಗ್ಲಾದೇಶ ಮತ್ತು ಪಕ್ಕದ ಪಶ್ಚಿಮ ಬಂಗಾಳದ

VISTARANEWS.COM


on

Cyclone Remal
Koo

ಕೋಲ್ಕತ್ತಾ: ಇಂದು ಸಂಜೆ 5:30ರ ವೇಳೆಗೆ ರೆಮಲ್‌ ಚಂಡಮಾರುತ ಪಶ್ಚಿಮ ಬಂಗಾಳ(West Bengal) ಮತ್ತು ಬಾಂಗ್ಲಾದೇಶ(Bangladesh)ದ ಕರಾವಳಿಗೆ ಅಪ್ಪಳಿಸಲಿದೆ. ಈ ಬಗ್ಗೆ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದ್ದು, ಬಾಂಗ್ಲಾದೇಶದ ಖೇಪುಪಾರಾದಲ್ಲಿ 290 ಕಿ.ಮೀ ಮತ್ತು ಸಾಗರ್‌ ದ್ವೀಪದ 270 ಕಿ.ಮೀ ವ್ಯಾಪ್ತಿಯಲ್ಲಿ ರೆಮಲ್‌ ಚಂಡಮಾರುತ(Cyclone Remal) ಬೀಸಲಿದೆ. ಈ ಚಂಡಮಾರುತದಿಂದಾಗಿ ಗಂಟೆಗೆ 102 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಬಹುದು. ಪರಿಣಾಮವಾಗಿ ಭಾನುವಾರ(ಮೇ 26) ಮತ್ತು ಸೋಮವಾರ (ಮೇ 27)ರಂದು ಪಶ್ಚಿಮ ಬಂಗಾಳ ಮತ್ತು ಉತ್ತರ ಒಡಿಶಾ, ಮಿಜೋರಾಂ, ತ್ರಿಪುರಾ ಮತ್ತು ದಕ್ಷಿಣ ಮಣಿಪುರದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗು ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಹವಾಮಾನ ಇಲಾಖೆಯು ಕೆಪುಪಾರಾ (ಬಾಂಗ್ಲಾದೇಶ) ದಿಂದ ಸುಮಾರು 800 ಕಿಮೀ ದಕ್ಷಿಣ-ನೈಋತ್ಯ ಮತ್ತು ಕ್ಯಾನಿಂಗ್ (ಪಶ್ಚಿಮ ಬಂಗಾಳ) ನಿಂದ 810 ಕಿಮೀ ದೂರದಲ್ಲಿ ಅಂದರೆ ಮಧ್ಯ ಬಂಗಾಳ ಕೊಲ್ಲಿಯಲ್ಲಿ ಮೇ 24 ರಂದು ಪಶ್ಚಿಮ ಮಧ್ಯ ಮತ್ತು ಪಕ್ಕದ ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ರೆಮಲ್ ಚಂಡಮಾರುತವನ್ನು ಗುರುತಿಸಿದೆ.
ರೆಮಲ್ ಚಂಡಮಾರುತವು ಪ್ರಸ್ತುತ ಉತ್ತರಕ್ಕೆ ಚಲಿಸುತ್ತಿದೆ. ಈ ಚಂಡಮಾರುತವು ಮೇ 26 ರ ಮಧ್ಯರಾತ್ರಿಯ ಹೊತ್ತಿಗೆ ಸಾಗರ್ ದ್ವೀಪ ಮತ್ತು ಖೇಪುಪಾರ ನಡುವೆ ಬಾಂಗ್ಲಾದೇಶ ಮತ್ತು ಪಕ್ಕದ ಪಶ್ಚಿಮ ಬಂಗಾಳದ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ.

ರೆಮಲ್ ಚಂಡಮಾರುತದ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚನೆ ಎಚ್ಚರಿಕೆ ನೀಡಿದೆ. ಇದಲ್ಲದೇ ಈಗಾಗಲೇ ಸಮುದ್ರದಲ್ಲಿ ಬೀಡುಬಿಟ್ಟಿರುವ ಮೀನುಗಾರರು ಮೇ 26ರೊಳಗೆ ಕರಾವಳಿಗೆ ಮರಳುವಂತೆ ಸೂಚಿಸಲಾಗಿದೆ. ಭಾರತೀಯ ಕೋಸ್ಟ್ ಗಾರ್ಡ್ (ICG) ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದ್ದು, ಒಂಬತ್ತು ವಿಪತ್ತು ಪರಿಹಾರ ತಂಡಗಳನ್ನು ನಿಯೋಜಿಸಲಾಗಿದೆ. ಪೂರ್ವ ಕರಾವಳಿಯಲ್ಲಿ 10 ಹಡಗುಗಳು ಮತ್ತು 2 ವಿಮಾನಗಳನ್ನು ನಿಯೋಜಿಸಲಾಗಿದೆ, ಇದರಿಂದಾಗಿ ಅವರು ಸಮುದ್ರದಲ್ಲಿ ಇರುವ ಅಥವಾ ಹೋಗುವ ಮೀನುಗಾರರ ಮೇಲೆ ನಿಗಾ ಇಡಬಹುದು.

ರೆಮಲ್‌ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳದಲ್ಲಿ ಇಂದು ಮಧ್ಯಾಹ್ನದ ನಂತರ ಭಾರೀ ಮಳೆಯಾಗಲಿದ್ದು, ಭೂಕುಸಿತ ಸಂಭವಿಸುವ ಸಾಧ್ಯತೆ ದಟ್ಟವಾಗಿದೆ. ರಾಜ್ಯಾದ್ಯಂತ 20 ಸೆಂ.ಮೀ ಮಳೆಯಾಗು ಸಂಭವ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: DP Manu: ಫೆಡರೇಷನ್ ಕಪ್‌ನಲ್ಲಿ ನೀರಜ್​ ಚೋಪ್ರಾಗೆ ಬೆವರಿಳಿಯುವಂತೆ ಮಾಡಿದ ಕನ್ನಡಿಗ ಮನು; ಇವರ ಹಿನ್ನೆಲೆ, ಸಾಧನೆ ಏನೇನು?

Continue Reading
Advertisement
MLC Election
ಕರ್ನಾಟಕ2 mins ago

MLC Election: ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಿದ್ರೆ ಐತಿಹಾಸಿಕ ಫಲಿತಾಂಶ: ಎಚ್‌ಡಿಕೆ

Iran-Israel Conflict
ವಿದೇಶ10 mins ago

Iran-Israel Conflict: “ಅಚ್ಚರಿಯ ದಾಳಿ ನಿರೀಕ್ಷಿಸಿ”- ಇಸ್ರೇಲ್‌ಗೆ ಇರಾನ್‌ನಿಂದ ವಾರ್ನಿಂಗ್‌

Congress Karnataka
ಕರ್ನಾಟಕ1 hour ago

Congress Karnataka: ಬದಲಾಗ್ತಾರಾ ಕೆಪಿಸಿಸಿ ಅಧ್ಯಕ್ಷರು?; ಡಿಕೆಶಿ ಹೇಳಿಕೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಚರ್ಚೆ ಶುರು!

Malaysia Masters Final
ಕ್ರೀಡೆ1 hour ago

Malaysia Masters Final: ಮಲೇಷ್ಯಾ ಮಾಸ್ಟರ್ಸ್ ಫೈನಲ್​ನಲ್ಲಿ ಸೋಲು ಕಂಡ ಪಿ.ವಿ.ಸಿಂಧು

Priyanka Upendra Red Rock Studio in collaboration with Comer Film Factory
ಸ್ಯಾಂಡಲ್ ವುಡ್1 hour ago

Priyanka Upendra: ’ಕಮರ್ ಫಿಲಂ ಫ್ಯಾಕ್ಟರಿ’ ಸಹಯೋಗದಲ್ಲಿ ‘ರೆಡ್ ರಾಕ್ ಸ್ಟುಡಿಯೊ’ ಶುಭಾರಂಭ: ಪ್ರಿಯಾಂಕ ಉಪೇಂದ್ರ ಸಾಥ್‌!

Mob Attacks
ವಿದೇಶ1 hour ago

Mob Attacks: ಕುರಾನ್ ಅಪವಿತ್ರ ನೆಪ; ಪಾಕಿಸ್ತಾನದಲ್ಲಿ ಕ್ರಿಶ್ಚಿಯನ್ನರ ಮೇಲೆ ಮುಸ್ಲಿಮರ ದಾಳಿ

theft Case
ಚಿಕ್ಕಬಳ್ಳಾಪುರ2 hours ago

Theft Case : ಚಿನ್ನ ಕದಿಯಲು ಬಂದು ಮದುವೆ ಮನೆಯವರಿಂದ ಧರ್ಮದೇಟು ತಿಂದ ಕಳ್ಳ

Flight Emergency Landing
ದೇಶ2 hours ago

Flight Emergency Landing: ತಪ್ಪಿದ ಮತ್ತೊಂದು ಭಾರೀ ಅವಘಡ; ಸ್ಪೈಸ್‌ ಜೆಟ್‌ ವಿಮಾನ ತುರ್ತು ಭೂಸ್ಪರ್ಶ

Lockup Death
ಪ್ರಮುಖ ಸುದ್ದಿ2 hours ago

Lockup Death: ಚನ್ನಗಿರಿ ಠಾಣೆ ಮೇಲೆ ಕಲ್ಲು ತೂರಾಟ ಕೇಸ್; 23 ಕಿಡಿಗೇಡಿಗಳ ಸೆರೆ

theft Case
ಬೆಂಗಳೂರು2 hours ago

Theft case : ಬೆಳಗ್ಗೆ ಕೋಳಿ ಕುಯ್ಯುತ್ತಾರೆ, ರಾತ್ರಿಯಾದರೆ ಸುಲಿಗೆಗೆ ಇಳಿಯುತ್ತಾರೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ23 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ7 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 week ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 week ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌