ಮೊಗಸಾಲೆ ಅಂಕಣ | ಚರ್ಚಿಲ್ ಕುಳಿತಿದ್ದ ಆಸನದಲ್ಲಿ ರಿಷಿ‌ - Vistara News

ಅಂಕಣ

ಮೊಗಸಾಲೆ ಅಂಕಣ | ಚರ್ಚಿಲ್ ಕುಳಿತಿದ್ದ ಆಸನದಲ್ಲಿ ರಿಷಿ‌

ತಮ್ಮದು ಸೂರ್ಯ ಮುಳುಗದ ಸಾಮ್ರಾಜ್ಯ ಎಂಬ ಹಳಹಳಿಕೆಯಲ್ಲಿರುವ ಬ್ರಿಟಿಷರಿಗೆ ರಿಷಿ ಪ್ರಧಾನಿಯಾಗಿರುವುದು ಹುಳಿಹುಳಿ ಆಗಿದೆ. ನುಂಗಲೂ ಆಗದ ಉಗುಳಲೂ ಆಗದ ಬಿಸಿ ತುಪ್ಪ. ದೇಶ ತತ್ತರ ಸ್ಥಿತಿಯಲ್ಲಿರುವಾಗ ಯಾರಾದರೂ ಅವತರಿಸಿ ಕಾಪಾಡಬಾರದೆ ಎನ್ನುವ ಸಾಮಾನ್ಯ ಮೊರೆ ಅಲ್ಲಿ ರಿಷಿಯವರನ್ನು ಕರೆದು ಕೈಹಿಡಿದು ಕುಳ್ಳಿರಿಸಿದೆ.

VISTARANEWS.COM


on

rishi sunak
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
mogasale logo

ಭಾರತಕ್ಕೆ ಸ್ವಾತಂತ್ರ್ಯ ನೀಡಿದರೆ ಅದರ ಆಡಳಿತ ಪುಂಡುಪೋಕರಿಗಳ, ರ್‍ಯಾಸ್ಕಲ್‍ಗಳ ಕೈವಶವಾಗುತ್ತದೆ. ಆ ದೇಶದ ನಾಯಕರು ಕೊಳ್ಳೆ ಹೊಡೆಯುವ ಮನಃಸ್ಥಿತಿಯವರು, ಪರಸ್ಪರ ಅಧಿಕಾರಕ್ಕಾಗಿ ಕಚ್ಚಾಡುವ ಲಾಲಸಿಗಳು. ಆಂತರಿಕ ಕಚ್ಚಾಟದಲ್ಲಿ ಭಾರತವೇ ಕಳೆದುಹೋಗುವ ಅಪಾಯವಿದೆ. ನೀರು ಗಾಳಿಗೂ ತೆರಿಗೆ ವಿಧಿಸುವ ಸ್ಥಿತಿ ಅಲ್ಲಿ ಒಂದಲ್ಲ ಒಂದು ದಿವಸ ಎದುರಾಗಬಹುದು…. ಇದು ಬ್ರಿಟನ್ ಎಂದು ಕರೆಯಲಾಗುವ ಯುನೈಟೆಡ್ ಕಿಂಗ್‍ಡಮ್‍ಗೆ ಒಂಬತ್ತು ವರ್ಷ ಪ್ರಧಾನಿಯಾಗಿದ್ದ ವಿನ್‍ಸ್ಟನ್ ಚರ್ಚಿಲ್ ಹೇಳಿದ ಮಾತು. ಒಂದು ದೇಶ ಮತ್ತು ದೇಶವಾಸಿಗಳ ವಿಚಾರದಲ್ಲಿ ತಾವಾಡಿದ ಅನುಚಿತ ಮಾತುಗಳಿಗೆ ಮುಂದೊಂದು ದಿನ ಚರ್ಚಿಲ್ ವಿಷಾದ ವ್ಯಕ್ತಪಡಿಸಿದರು ಎಂದ ಮಾತ್ರಕ್ಕೆ ಅವರ ಮನಃಪರಿವರ್ತನೆ ಆಗಿ ಪ್ರಾಯಶ್ಚಿತ್ತ ರೂಪದಲ್ಲಿ ಹೇಳಿಕೆ ಬಂತೆಂದು ಭಾವಿಸಲು ಆಧಾರಗಳಿಲ್ಲ. ಭಾರತೀಯರ ವಿಚಾರದಲ್ಲಿ ಅವರು ತೋರಿದ ಅಸಹನೆಯ ಹಿಂದೆ ಇದ್ದುದು ಜನಾಂಗ ದ್ವೇಷವಲ್ಲದೆ ಮತ್ತೇನೂ ಅಲ್ಲ.

ಅಂದೂ ಸೈ ಇಂದೂ ಸೈ, ಬಿಳಿವರ್ಣದ ಶ್ರೇಷ್ಠತೆಯ ವ್ಯಸನ ಬ್ರಿಟನ್ನಿನಲ್ಲಿ ವ್ಯಾಪಕವಾಗಿದೆ. ಜನಾಂಗ ದ್ವೇಷ ಅವರ ಕಣಕಣದಲ್ಲೂ ಇರುವುದಕ್ಕೆ ಒಂದಲ್ಲ ನೂರಲ್ಲ ಸಹಸ್ರ ಸಹಸ್ರ ನಿದರ್ಶನ ಲಭ್ಯ. ಬಿಳಿಯರಲ್ಲದವರನ್ನು ಎರಡನೆ ದರ್ಜೆ ಮನುಷ್ಯರನ್ನಾಗಿ ನೋಡುವ ಗುಣ ಆ ದೇಶದಲ್ಲಿ ಹಾಸುಹೊಕ್ಕಾಗಿದೆ. ಚರ್ಚಿಲ್ ಈಗ ಇಲ್ಲ, ಸತ್ತು ಹೋಗಿದ್ದಾರೆ ನಿಜ, ಆದರೆ ಚರ್ಚಿಲ್‍ರಲ್ಲಿದ್ದ ಜನಾಂಗ ದ್ವೇಷ ಮನಃಸ್ಥಿತಿ ಸತ್ತಿಲ್ಲ, ಸಾಯುವುದೂ ಇಲ್ಲ. ಭಾರತೀಯರಿಗೆ ಆಳುವುದಕ್ಕೆ ಬರುವುದಿಲ್ಲ ಎಂಬ ಚರ್ಚಿಲ್‍ರ ಮಾತನ್ನು ಸಂಪೂರ್ಣವಾಗಿ ಅಲ್ಲಗಳೆಯುವ ಸ್ಥಿತಿಯಲ್ಲಿ ಭಾರತೀಯರು ಇಲ್ಲ. ನಮ್ಮ ದೇಶ ಸಾಗಿರುವ ರೀತಿ ನೋಡಿದರೆ, ಇಲ್ಲಿಯ ರಾಜಕೀಯ ಪಕ್ಷಗಳ ಆಟಮೇಲಾಟ ಗಮನಿಸಿದರೆ ಚರ್ಚಿಲ್ ಮಾತಲ್ಲಿ ಒಂದಿಷ್ಟಾದರೂ ನಿಜವಿರುವುದು ಸ್ಪಷ್ಟವಾಗುತ್ತದೆ. ಅವರು ಅಂದೆಂದೋ ಈ ವಿಚಾರವಾಗಿ ಆಡಿದ ಮಾತನ್ನು ಸುಳ್ಳುಮಾಡುವ ಪ್ರಾಮಾಣಿಕ ಪ್ರಯತ್ನ ನಮ್ಮಲ್ಲಿ 75 ವರ್ಷದ ಬಳಿಕವೂ ನಡೆದಿಲ್ಲ, ಜಗತ್ತಿನ ಎಲ್ಲ ಪ್ರಜಾಪ್ರಭುತ್ವ ದೇಶಗಳಲ್ಲಿ ಸಾಮಾನ್ಯವಾಗಿರುವ ದೌರ್ಬಲ್ಯ ಭಾರತದಲ್ಲೂ ಮುಂದುವರಿದಿದೆ ಎಂಬ ಸತ್ಯವನ್ನು ಒಪ್ಪಿಕೊಂಡೇ ಹೊಸ ಕ್ಯಾಪ್ಟನ್ ಆಳ್ವಿಕೆ ಬ್ರಿಟನ್ನು ಎದುರಿಸುತ್ತಿರುವ ಸಮಸ್ಯೆಗಳಿಗೆ ಹೇಗೆ ಪರಿಹಾರ ದೊರಕಿಸಲಿದೆ ಎನ್ನುವುದನ್ನು ನೋಡಬೇಕಿದೆ.

“ಭಾರತೀಯರು ಸ್ವಾತಂತ್ರ್ಯಕ್ಕೆ ಅನರ್ಹರು, ಅವರಿಗೆ ಆಡಳಿತ ನಡೆಸುವುದಕ್ಕೆ ಬರುವುದಿಲ್ಲ” ಎಂದು ಚರ್ಚಿಲ್ ಹೇಳಿದ ನಂತರದ ಇಷ್ಟು ವರ್ಷದಲ್ಲಿ ಅತ್ತ ಥೇಮ್ಸ್ ನದಿಯಲ್ಲಿ ಹರಿದ ನೀರಿಗೂ ಲೆಕ್ಕವಿಲ್ಲ, ಇತ್ತ ಗಂಗೆಯಲ್ಲಿ ಹರಿದ ನೀರಿಗೂ ಲೆಕ್ಕವಿಲ್ಲ. ಮಾತು ಆಡಿದರೆ ಹೋಯಿತು; ಮುತ್ತು ಒಡೆದರೆ ಹೋಯಿತು ಎಂಬ ಆರ್ಷೇಯ ಮಾತು ಈ ಸಂದರ್ಭದಲ್ಲಿ ನೆನಪಿಗೆ ಬರುವುದಕ್ಕೆ ಕಾರಣ ರಿಷಿ ಸುನಕ್ ಎಂಬ ಭಾರತೀಯ ಸಂಜಾತ ಅದೇ ಚರ್ಚಿಲ್ ಕೂತಿದ್ದ ಆಸನದಲ್ಲಿ ವಿರಾಜಮಾನರಾಗಿರುವುದು. ಭಾರತೀಯರಿಗೆ ಆಡಳಿತ ನಡೆಸುವುದಕ್ಕೆ ಬರುವುದಿಲ್ಲ ಎಂದು ತಮ್ಮವನೇ ಆಡಿದ ಮಾತಿಗೆ ವರ್ತಮಾನದ ಬ್ರಿಟನ್ನು ಕವಡೆಕಾಸಿನ ಕಿಮ್ಮತ್ತನ್ನೂ ನೀಡುತ್ತಿಲ್ಲ ಎನ್ನುವುದು ಚರ್ಚಿಲ್ ಆತ್ಮ (ಹಾಗಂತ ಏನಾದರೂ ಇದ್ದರೆ) ವಿಲಿವಿಲಿ ಒದ್ದಾಡಲು ಸಾಕು.

ಸಾಮ್ರಾಜ್ಯಶಾಹಿ ಬ್ರಿಟನ್ನು ಯವತ್ತೂ ತನ್ನ ಸ್ವಂತ ಬಲದ ಮೇಲೆ ಬೆಳೆದ ದೇಶವಲ್ಲ. ಈಸ್ಟ್‌ ಇಂಡಿಯಾ ಕಂಪೆನಿಯಾಗಿ ವ್ಯಾಪಾರ ವಹಿವಾಟು ಎಂದು ಭಾರತ ನೆಲಕ್ಕೆ ಬಂದಿಳಿದ ಫರಂಗೀಯರು ಕಾಲಕ್ರಮೇಣ ಇಡೀ ಭಾರತವನ್ನು ಕಬ್ಜಾ ಮಾಡಿಕೊಂಡ ರೀತಿಯಲ್ಲೇ ಇತರ 55 ದೇಶಗಳನ್ನು ಸಾಧ್ಯವಿರುವಷ್ಟೂ ಕಾಲ ದೋಚಿದವರು ಅವರು. ಭಾರತದಲ್ಲಿ ಎರಡು ಶತಮಾನಕ್ಕೂ ಹೆಚ್ಚಿನ ಅವಧಿ ಆಡಳಿತ ನಡೆಸಿದ್ದು, ಅನಕ್ಷರತೆ, ಅಜ್ಞಾನ, ಮೂಢನಂಬಿಕೆ, ಅವಿವೇಕವೇ ಮೈವೆತ್ತಿದ್ದ ಈ ನೆಲದಲ್ಲಿ ಒಡೆದು ಆಳುವ ಕುತಂತ್ರ ರಾಜಕೀಯದಿಂದಲೇ ದೇಶವನ್ನು ದೋಚಿದ್ದು…ಒಂದೇ ಎರಡೇ. ಡೇರೆಯೊಳಗೆ ಒಂಟೆ ನುಗ್ಗಿದರೆ ಏನಾಗುತ್ತದೋ ಬ್ರಿಟಿಷರು ಭಾರತದೊಳಕ್ಕೆ ನುಗ್ಗಿದಾಗ ಆಗಿದ್ದೂ ಅದೇ. ಕುತಂತ್ರ ರಾಜಕಾರಣದ ಮೂಲಕವೇ ದೇಶದೇಶಗಳನ್ನು ವಶಕ್ಕೆ ಪಡೆದು ಅವೆಲ್ಲವನ್ನೂ ದೋಚಿ ಶ್ರೀಮಂತವಾದ ಬ್ರಿಟನ್ನು ಆಕಾಶದತ್ತ ನೋಡುವಂಥ ಸ್ಥಿತಿ ಇಂದು ನಿರ್ಮಾಣವಾಗಿದೆ. ಮಾಡಿದ್ದುಣ್ಣೋ ಮಹರಾಯ ಎನ್ನುವುದು ಇಂಥ ಅಪಸವ್ಯದ ಕಾರಣವಾಗಿಯೇ.

ಇಂದು ರಿಷಿ ಸುನಕ್ ಪ್ರಧಾನಿಯಾಗಿರುವುದು ಕನ್ಸರ್ವೇಟಿವ್ ಪಕ್ಷದ ಸಂಸದರಾಗಿ. ಚರ್ಚಿಲ್ ಕೂಡಾ ಕನ್ಸರ್ವೇಟಿವ್ ಪಕ್ಷದ ನಾಯಕರೇ ಆಗಿದ್ದರು. ಎರಡನೆ ಮಹಾಯುದ್ಧದಲ್ಲಿ ಜರ್ಮನಿಯ ಅಡಾಲ್ಫ್ ಹಿಟ್ಲರ್ ವಿರುದ್ಧ ಸೆಣೆಸಿದ ಖ್ಯಾತಿ ಚರ್ಚಿಲ್ ಹೆಸರಲ್ಲಿದೆ. ಅದೇ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಕದನ ಕ್ಷೇತ್ರದಲ್ಲಿ ಮುಂದಕ್ಕೆ ತಳ್ಳಿ ಸಹಸ್ರ ಸಹಸ್ರ ಭಾರತೀಯರ ಮಾರಣಹೋಮಕ್ಕೆ ಕಾರಣರಾದ ಕುಖ್ಯಾತಿಯೂ ಅದೇ ಚರ್ಚಿಲ್ ಹೆಸರಿಗೆ ಮೆತ್ತಿಕೊಂಡಿದೆ. 19 ಮತ್ತು 20ನೇ ಶತಮಾನ ಕಂಡು ಅನುಭವಿಸಿದ ಯುದ್ಧಗಳಿಗೂ 21ನೇ ಶತಮಾನ ಕಾಣುತ್ತಿರುವ ಯುದ್ಧಗಳಿಗೂ ವ್ಯತ್ಯಾಸ ಬಹಳವಿದೆ. ಆದರೆ ಯುದ್ಧದ ಪರಿಣಾಮ ಮಾತ್ರ ಒಂದೇ.

ಇದನ್ನೂ ಓದಿ | ಮೊಗಸಾಲೆ ಅಂಕಣ | ಏಳು ಸುತ್ತಿನ ಕೋಟೆಯೊಳಗೆ ಮಲ್ಲಿಕಾರ್ಜುನ ಖರ್ಗೆ

ವರ್ತಮಾನದ ಜಗತ್ತು ಆರ್ಥಿಕ ಸಂಕಷ್ಟವೆಂಬ ಮಹಾಯುದ್ಧದಿಂದ ಪಾರಾಗಲು ಹೆಣಗಾಟ ನಡೆಸಿದೆ. ದೋಚಲು ದೇಶವೇ ಉಳಿಯದ ಸಂಕಟ ಬ್ರಿಟನ್ನಿನದು. ಒಂದು ಕಾಲದಲ್ಲಿ ಇತರ ದೇಶಗಳ ಸಂಪತ್ತನ್ನೇ ತನ್ನ ಬಂಡವಾಳವನ್ನಾಗಿಸಿಕೊಂಡಿದ್ದ ಬ್ರಿಟನ್ನು ಇದೀಗ ಆರ್ಥಿಕ ಸಂಕಷ್ಟದ ಸಂಕೋಲೆಯಲ್ಲಿ ಸ್ವತಃ ಬಂಧಿಯಾಗಿದೆ. ಕಳೆದ ಆರು ವರ್ಷದಲ್ಲಿ ರಿಷಿ ಸೇರಿದಂತೆ ಐವರು ಪ್ರಧಾನಿಗಳನ್ನು ದೇಶ ನೋಡಬೇಕಾಗಿರುವುದಕ್ಕೆ ಕಾರಣ ರಾಜಕೀಯವಲ್ಲ; ಬದಲಿಗೆ ದೂರದೃಷ್ಟಿಯಿಲ್ಲದ ಆರ್ಥಿಕ ದಿವಾಳಿತನದ ಆಳ್ವಿಕೆ.

ಮಾಜಿ ಪ್ರಧಾನಿಗಳಾದ ಬೋರಿಸ್,‌ ಟ್ರಸ್ ಸೋತು ಕೈಚೆಲ್ಲಲು ಕಾರಣಗಳು ಸಣ್ಣವೂ ಅಲ್ಲ ನಿರ್ಲಕ್ಷಿಸಬಹುದಾದವೂ ಅಲ್ಲ. ಆ ಒಂದೊಂದೂ ಕಾರಣವನ್ನು ಮುಂದಕ್ಕೆ ತಂದು ವಿಶ್ಲೇಷಿಸಿ ಪರಿಹಾರ ಒದಗಿಸುವುದು ಎಂದರೆ ಸಾಮಾನ್ಯ ಸಾಹಸವಲ್ಲ. ಬ್ರಿಟನ್ನು ಕೂಡಾ ಇತರ ಅನೇಕ ದೇಶಗಳಂತೆ ನಿರುದ್ಯೋಗ, ಬಡತನ, ಹಸಿವು,ಅಸಹನೆ ಮುಂತಾದವುಗಳ ಕಾರಣವಾಗಿ ಅಸ್ತವ್ಯಸ್ತವಾಗಿದೆ. ನಿರುದ್ಯೋಗ ನಿವಾರಣೆ ಎನ್ನುವುದು ಬಡತನ, ಹಸಿವನ್ನು ನಿವಾರಿಸಿಹಾಕಬಲ್ಲ ರಾಮಬಾಣ. ಆದರೆ ಉದ್ಯೋಗ ಸೃಷ್ಟಿಗೆ ಮಂತ್ರದಂಡ ಎನ್ನುವುದಿಲ್ಲ. ಚುನಾವಣೆ ಸಮಯದಲ್ಲಿ ಕೊಡುವ ಆಶ್ವಾಸನೆಯ ಭಾಗವಾಗಿ ಉದ್ಯೋಗದ ಮಾತು ಬರುತ್ತದೆಯೇ ಹೊರತೂ ಕಾರ್ಯರೂಪಕ್ಕೆ ಬರುವ ಅಥವಾ ತರುವ ಮಾರ್ಗಗಳ ಶೋಧ ಇನ್ನೂ ಯಶಸ್ವಿಯಾಗಿಲ್ಲ.

ಭಾರತದಲ್ಲಿ 2014ರ ಲೋಕಸಭಾ ಚುನಾವಣೆಗೆ ಮೊದಲು ಭಾರತೀಯ ಜನತಾ ಪಕ್ಷ ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆಯನ್ನು ನೀಡಲಾಗಿತ್ತು. ಜನ ಆ ಪಕ್ಷವನ್ನು ಮೂರನೇ ಎರಡಕ್ಕಿಂತ ಅಧಿಕ ಬಹುಮತದೊಂದಿಗೆ ಆಯ್ಕೆ ಮಾಡಿದರು. ಐದು ವರ್ಷದ ಬಳಿಕ 2019ರಲ್ಲಿ ಮತ್ತೆ ಅಗಾಧ ಬಹುಮತದೊಂದಿಗೆ ಬಿಜೆಪಿಯನ್ನೇ ಅಧಿಕಾರಕ್ಕೆ ತಂದರು. 2019ರ ಚುನಾವಣಾ ಪ್ರಣಾಳಿಕೆಯಲ್ಲಿ ಉದ್ಯೋಗ ಸೃಷ್ಟಿಯ ಭರವಸೆ ಇರಲಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದು ಹತ್ತಿರ ಹತ್ತಿರ ಒಂಬತ್ತು ವರ್ಷ. ವರ್ಷಕ್ಕೆ ಎರಡು ಕೋಟಿಯಂತೆ ಎಷ್ಟು ಉದ್ಯೋಗ ಸೃಷ್ಟಿಯಾಗಬೇಕಿತ್ತು…? ಅಧಿಕಾರಕ್ಕೆ ಬಂದ ಪಕ್ಷ ತಾನು ಕೊಟ್ಟ ಇಂಥ ಭರವಸೆಗಳನ್ನು ಸುಲಭದಲ್ಲಿ ಮರೆಯುತ್ತದೆ. ಆದರೆ ಜನರೂ ಮರೆತರೆ…? ಬ್ರಿಟನ್ನಿನಲ್ಲೂ ಜನರ ಮೂಗಿಗೆ ತುಪ್ಪ ಸವರುವ ಕೆಲಸವನ್ನು ರಿಷಿ ಮಾಡುತ್ತಾರೆಯೋ ಅಥವಾ ನಿಜ ಅರ್ಥದಲ್ಲಿ ಜನರ ಸಂಕಷ್ಟಗಳಿಗೆ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಸ್ಪಂದಿಸುತ್ತಾರೋ.. ಕಾದು ನೋಬೇಕಿದೆ. ಥಿಯರಿ, ಪ್ರಾಕ್ಟಿಕಲ್ ಯಾವಾಗಲೂ ಬೇರೆ ಬೇರೆ. ಬೆಲೆ ಏರಿಕೆಯನ್ನೂ ಹಣದುಬ್ಬರವನ್ನೂ ರಿಷಿ ಹೇಗೆ ನಿಯಂತ್ರಿಸಲಿದ್ದಾರೆ ಎನ್ನುವುದರ ಮೇಲೆ ಪ್ರಧಾನಿಯಾಗಿರುವ ಅವರ ಅರ್ಹತೆ ಅನರ್ಹತೆ ನಿರ್ಧಾರವಾಗಲಿವೆ.

ಇದನ್ನೂ ಓದಿ | ಮೊಗಸಾಲೆ ಅಂಕಣ | ಸೋನಿಯಾರನ್ನು ತತ್ತರಗೊಳಿಸಿದ ಅನಿರೀಕ್ಷಿತ ಬಂಡಾಯ

ಇದೇ ಮೊದಲ ಬಾರಿಗೆ ಬಿಳಿಯರಲ್ಲದ ಮತ್ತು ಬಿಳಿಯರು ಸುತರಾಂ ಇಷ್ಟಪಡದ ಕಂದುವರ್ಣದ ಮುಖಂಡರೊಬ್ಬರು, ಶ್ವೇತವರ್ಣ ಪಕ್ಷಪಾತಿ ಮತ್ತು ಜನಾಂಗ ದ್ವೇಷದ ನಾಡಿನ ಮುಖ್ಯಸ್ಥರಾಗಿರುವುದು ಲಂಡನ್ನಿನಿಂದ ಸಾಕಷ್ಟು ದೂರದಲ್ಲಿರುವ ಭಾರತದಲ್ಲಿ ಸಂಭ್ರಮಾಚರಣೆಗೆ ಕಾರಣ ಆಗಿದೆ. ಅವರು ಭಾರತೀಯ ಸಂಜಾತ ವಂಶದ ಕುಡಿ ಎನ್ನುವುದು ಮತ್ತು ಕರ್ನಾಟಕದ ಕನ್ನಡ ಹೆಣ್ಣು ಮಗಳನ್ನು ಮದುವೆಯಾದವರು ಎನ್ನುವುದು, ಅವರ ಅತ್ತೆ ಸುಧಾಮೂರ್ತಿ, ಮಾವ ನಾರಾಯಣ ಮೂರ್ತಿ ಇನ್ಫೋಸಿಸ್ ಸಂಸ್ಥೆ ಮೂಲಕ ಬೆಂಗಳೂರಿಗೆ ಕೀರ್ತಿ ತಂದವರು ಎನ್ನುವುದು, ಬೆಂಗಳೂರಿಗೆ ರಿಷಿ ಬಂದಿದ್ದಾಗ ವಿದ್ಯಾರ್ಥಿ ಭವನದಲ್ಲಿ ಗರಿಗರಿ ಮಸಾಲೆ ದೋಸೆ ಸವಿದರು ಎಂಬಿತ್ಯಾದಿ ಅಂಶಗಳು ಅವರ ಬಗೆಗೆ ಇಲ್ಲಿ ಗೌರವ ಇಮ್ಮಡಿಯೋ ಮುಮ್ಮಡಿಯೋ ಆಗುವುದಕ್ಕೆ ದೊಡ್ಡ ಕಾರಣಗಳೇ ಹೌದು. ಆದರೆ ಇಂಗ್ಲೆಂಡಿನಲ್ಲಿ….? ಅಲ್ಲಿ ಇವ್ಯಾವುದೂ ಚಲಾವಣೆಗೆ ಬಾರದ ಮುಖಮೌಲ್ಯ ಕಳೆದುಕೊಂಡ ನಾಣ್ಯ ಮಾತ್ರ.

ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ದಕ್ಷಿಣ ಭಾರತೀಯರನ್ನು ಗುರುತಿಸುವುದು “ಮದ್ರಾಸಿ” ಎಂದೇ. ಬೆಂಗಳೂರು, ತಿರುವನಂತಪುರ, ಹೈದರಾಬಾದ್ ಅವರಿಗೆ ಗೊತ್ತೇ ಇಲ್ಲ. ಗೊತ್ತಿರುವುದೆಂದರೆ ತುಸು ಕಪ್ಪು/ ಕಂದು ಬಣ್ಣದವರನ್ನು ಮದ್ರಾಸಿ ಎಂದು ಬ್ರ್ಯಾಂಡ್ ಮಾಡುವುದು. ಇದೇ ಪದ್ಧತಿ ಬ್ರಿಟನ್ನಿನ ಶ್ವೇತ ವರ್ಣೀಯರಲ್ಲಿದೆ. ತಾವು ದೋಚಿ ಇನ್ನೇನೂ ಉಳಿದಿಲ್ಲ ಎಂದು ಭಾವಿಸಿ ಬಿಟ್ಟು ಬಂದಿರುವ ಭಾರತ ಈ ಹೊತ್ತು ಜಗತ್ತಿನ ಬಲಿಷ್ಠ ಪ್ರಜಾಪ್ರಭುತ್ವಗಳಲ್ಲಿ ಒಂದೆನಿಸಿರುವುದು ಮತ್ತು 136 ಕೋಟಿ ಜನಸಂಖ್ಯೆಯೊಂದಿಗೆ ಅದರ ಆರ್ಥಿಕ ಪರಿಸ್ಥಿತಿ ಇನ್ನೂ ಭರವಸೆಯನ್ನು ಕಳೆದುಕೊಳ್ಳದೆ ಇರುವುದು ಮೂಲಭೂತವಾದಿ ಬ್ರಿಟಿಷರ ಅಸಹನೆಯನ್ನು ಕೆರಳಿಸಲು ಸಾಕು. ಭಾರತೀಯ ಸಂಜಾತನೊಬ್ಬ ತಮ್ಮ ಮೇಲೆ ಅಧಿಕಾರ ಚಲಾಯಿಸುತ್ತಿದ್ದಾನೆ ಎನ್ನುವುದನ್ನು ಸುಲಭದಲ್ಲಿ ಜೀರ್ಣಿಸಿಕೊಳ್ಳಲಾಗದ ಮನಃಸ್ಥಿತಿ ಅವರದು.

ಬ್ರಿಟನ್ನು ಖಂಡಿತವಾಗಿಯೂ ಅಮೆರಿಕಾ ಅಲ್ಲ. ಅಲ್ಲಿ ಕರಿಯರು ಅಧ್ಯಕ್ಷರಾಗಿರುವ ಹಲವು ಉದಾಹರಣೆಗಳಿವೆ. ಹಾಲಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಭಾರತೀಯ ಸಂಜಾತ ಹೆಣ್ಣು ಮಗಳು. ಮತ್ತದೇ ಕಪ್ಪು ವರ್ಣದ ಮದ್ರಾಸಿ. ಅಮೆರಿಕಾದಲ್ಲಿ ಕರಿಯರನ್ನು ದೂರವಿಟ್ಟು ಮಾಡುವ ಯಾವ ಕೆಲಸವನ್ನೂ ಜನ ಮೆಚ್ಚುವುದಿಲ್ಲ ಎಂಬಂಥ ಜ್ಞಾನೋದಯವಾಗಿದೆ. ಆದರೆ ಬ್ರಿಟನ್ನಿನಲ್ಲಿ ಇನ್ನೂ ಆ ಜ್ಞಾನೋದಯವಾಗಿಲ್ಲ. ತಮ್ಮದು ಸೂರ್ಯ ಮುಳುಗದ ಸಾಮ್ರಾಜ್ಯ ಎಂಬ ಹಳಹಳಿಕೆಯಲ್ಲಿರುವ ಬ್ರಿಟಿಷರಿಗೆ ರಿಷಿ ಪ್ರಧಾನಿಯಾಗಿರುವುದು ಹುಳಿಹುಳಿ ಆಗಿದೆ. ನುಂಗಲೂ ಆಗದ ಉಗುಳಲೂ ಆಗದ ಬಿಸಿ ತುಪ್ಪ. ದೇಶ ತತ್ತರ ಸ್ಥಿತಿಯಲ್ಲಿರುವಾಗ ಯಾರಾದರೂ ಅವತರಿಸಿ ಕಾಪಾಡಬಾರದೆ ಎನ್ನುವ ಸಾಮಾನ್ಯ ಮೊರೆ ಅಲ್ಲಿ ರಿಷಿಯವರನ್ನು ಕರೆದು ಕೈಹಿಡಿದು ಕುಳ್ಳಿರಿಸಿದೆ.

ಇದನ್ನೂ ಓದಿ | ಮೊಗಸಾಲೆ ಅಂಕಣ | ಸದನಗಳಲ್ಲಿ ಹಂಗಾಮಾ, ಜನಹಿತಕ್ಕೆ ಮೂರ್ನಾಮ

ಬ್ರಿಟನ್ನಿನ ಅವ್ಯವಸ್ಥೆಗೆ ತಾವೇನು ಮದ್ದನ್ನು ಅರೆಯಲು ಸಾಧ್ಯ ಎನ್ನುವುದು ರಿಷಿಯವರಿಗೆ ಗೊತ್ತಿರಲು ಸಾಕು. ಸಕ್ರಿಯ ರಾಜಕಾರಣಕ್ಕೆ ಬಂದು ಎಂಟು ವರ್ಷ ಇನ್ನೂ ಆಗದ ರಿಷಿಯವರ ರಾಜಕೀಯ ಪ್ರಧಾನಿ ಪಟ್ಟಕ್ಕೆ ಬರುವುದರೊಂದಿಗೆ ಕೊನೆಯಾಗಬೇಕಿಲ್ಲ. ಇದನ್ನು ರಾಜಕೀಯ ಪ್ರವೇಶಾರಂಭ ಎಂದು ಅವರು ಭಾವಿಸಿದರೆ ಅವರ ರಾಜಕೀಯಕ್ಕೂ ಭವಿಷ್ಯವಿದೆ; ಅವರು ನೆಲೆಸಿರುವ ಬ್ರಿಟನ್ನಿಗೂ ಭವಿಷ್ಯವಿದೆ. ಅದಕ್ಕಿಂತ ಹೆಚ್ಚಾಗಿ ಜನಾಂಗ ದ್ವೇಷೀ ಬ್ರಿಟಿಷರು ತಮ್ಮ ಕೈಯಲ್ಲಿ ಆಗದ ಉದ್ಧಾರದ ಕೆಲಸಕ್ಕೆ ಬಂದವರೊಂದಿಗೆ ಮನಸ್ಸು ಪೂರಕವಾಗಿ ಕೈ ಜೋಡಿಸಿದರೆ ಬಯಸಿದ್ದು ಬರಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

ರಾಜಮಾರ್ಗ ಅಂಕಣ: ಕುರುಡರಾಗಿ ಹುಟ್ಟಿದ ಕಾರಣಕ್ಕೆ ನೋವು, ತಿರಸ್ಕಾರ ಅನುಭವಿಸುತ್ತಿದ್ದ ಶ್ರೀಕಾಂತ್‌ ಬೊಳ್ಳಾ ಹಿಡಿದ ಛಲದ ಹಾದಿ ಇಂದು ಅವರನ್ನು ದೊಡ್ಡ ಕಂಪನಿಗಳ ಮಾಲಿಕರಾಗುವತ್ತ, ನೂರಾರು ದಿವ್ಯಾಂಗರಿಗೆ ಕೆಲಸ ನೀಡುವವರೆಗೆ ಮುನ್ನಡೆಸಿದೆ. ನಾವೆಲ್ಲರೂ ಓದಿ ರೋಮಾಂಚಿತರಾಗಬಹುದಾದ ಸ್ಫೂರ್ತಿ ಕಥೆಯಿದು.

VISTARANEWS.COM


on

rajamarga column srikant bolla
Koo

ಕಣ್ಣಿಲ್ಲ ಎಂಬ ಕಾರಣಕ್ಕೆ ಐಐಟಿ ರಿಜೆಕ್ಟ್ ಆಗಿದ್ದ ಯುವಕನು ಕೋಟಿ ಕೋಟಿ ಸಂಪಾದನೆ ಮಾಡಿದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಮೂರು ವರ್ಷಗಳ ಹಿಂದೆ ಇವರನ್ನು ಬೆಂಗಳೂರಿನ ಒಂದು ಬಿಸಿನೆಸ್ ಸಮ್ಮೇಳನದ ವೇದಿಕೆಯಲ್ಲಿ ಭೇಟಿಯಾಗಿದ್ದೆ. ಅವರ ಹೋರಾಟದ ಕಥೆಯನ್ನು ಅವರ ಮಾತಲ್ಲೇ ಕೇಳಿ ರೋಮಾಂಚನವಾಗಿತ್ತು.

ಶ್ರೀಕಾಂತ್ ಬೊಳ್ಳ ಅವರ ಹೋರಾಟದ ಅದ್ಭುತವಾದ ಕಥೆಯನ್ನು ಅವರದ್ದೇ ಮಾತುಗಳಲ್ಲಿ ಕೇಳೋಣ.

ನಾನು ಹುಟ್ಟಿದ್ದು ಆಂಧ್ರಪ್ರದೇಶದ ಮಚಲಿ ಪಟ್ಟಣದ ಒಂದು ಪುಟ್ಟ ಗ್ರಾಮದಲ್ಲಿ (1992). ನನ್ನ ಹುಟ್ಟು ಕುರುಡುತನ ನನ್ನ ಕೃಷಿಕ ಕುಟುಂಬಕ್ಕೆ ದೊಡ್ಡ ಸವಾಲು ಆಗಿತ್ತು. ನಮ್ಮ ಕುಟುಂಬದ ವಾರ್ಷಿಕ ಆದಾಯ 20,000 ರೂಪಾಯಿಗಿಂತ ಕಡಮೆ ಇದ್ದ ಕಾಲ ಅದು!

ಅಪಮಾನ, ತಿರಸ್ಕಾರ ಮತ್ತು ತಾರತಮ್ಯ

ನಾನು ಕುರುಡ ಎಂಬ ಕಾರಣಕ್ಕೆ ತಿರಸ್ಕಾರ, ಅಪಮಾನ ತುಂಬಾ ನೋವು ಕೊಡುತ್ತಿತ್ತು. ತರಗತಿಯಲ್ಲಿ ಕೊನೆಯ ಬೆಂಚು ಖಾಯಂ. ಆಟಕ್ಕೆ ಅವಕಾಶವನ್ನೇ ಕೊಡುತ್ತಿರಲಿಲ್ಲ. ಇದರಿಂದ ಅಪ್ಪ ನೊಂದುಕೊಂಡು ನನ್ನನ್ನು ಹೈದರಾಬಾದ್ ನಗರದ ವಿಶೇಷ ಮಕ್ಕಳ ಶಾಲೆಗೆ ಸೇರಿಸಿದರು. ಅಲ್ಲಿ ನನ್ನ ಜೀವನದ ಹಲವು ಟರ್ನಿಂಗ್ ಪಾಯಿಂಟಗಳು ಆರಂಭ! ಕಲಿಕೆಯಲ್ಲಿ ನಾನು ನನ್ನ ತರಗತಿಗೆ ಪ್ರಥಮ ಬರಲು ಆರಂಭಿಸಿದೆ. ಕುರುಡು ಮಕ್ಕಳ ಕ್ರಿಕೆಟ್ ತಂಡದಲ್ಲಿ ನಾನು ರಾಷ್ಟ್ರೀಯ ತಂಡದಲ್ಲಿ ಆಡಿದೆ.

ಅಬ್ದುಲ್ ಕಲಾಂ ಭೇಟಿ ಮಿಂಚು ಹರಿಸಿತು

ನಾನು ಪ್ರೌಢಶಾಲೆಯಲ್ಲಿ ಓದುವಾಗ ನಮ್ಮ ಶಾಲೆಗೊಮ್ಮೆ ಅಬ್ದುಲ್ ಕಲಾಂ ಭೇಟಿ ನೀಡಿದರು. ಅವರ ಮಾತುಗಳಿಂದ ನಾನು ಪ್ರಭಾವಿತನಾದೆ. ಅವರ ‘ಲೀಡ್ ಇಂಡಿಯಾ 2020’ ಎಂಬ ವಿದ್ಯಾರ್ಥಿ ಅಭಿಯಾನಕ್ಕೆ ನಾನು ಸದಸ್ಯತನ ಪಡೆದೆ. ನನಗೆ ಎಸೆಸೆಲ್ಸಿ ಪರೀಕ್ಷೆಯಲ್ಲಿ 90% ಅಂಕಗಳು ಬಂದವು. ವಿಜ್ಞಾನದಲ್ಲಿ ಪಿಯುಸಿ ಮಾಡಬೇಕೆಂದು ನನ್ನ ಆಸೆ. ಆದರೆ ನಾನು ಕುರುಡ ಎಂಬ ಕಾರಣಕ್ಕೆ ನನಗೆ ಯಾವುದೇ ಕಾಲೇಜಿನಲ್ಲಿ ವಿಜ್ಞಾನದ ಸೀಟ್ ಸಿಗಲಿಲ್ಲ.

ನನಗೆ ಅಬ್ದುಲ್ ಕಲಾಂ ಅವರ ಮಾತುಗಳು ನೆನಪಾದವು – ಹಕ್ಕಿ ಹಾರುವುದು ರೆಕ್ಕೆಗಳ ಬಲದಿಂದಲ್ಲ. ಅದು ಹಾರುವುದು ಭರವಸೆಗಳ ಬಲದಿಂದ!

ಸರಕಾರದ ವಿರುದ್ಧ ಬೀದಿಗೆ ಇಳಿದು ಹೋರಾಟ.

ನಾನು ಹೈದರಾಬಾದ್ ಸರಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆಯನ್ನು ಮಾಡಿದೆ. ಆರು ತಿಂಗಳ ನಂತರ ನನಗೆ ವಿಜ್ಞಾನದ ಸೀಟ್ ದೊರೆಯಿತು. ಸತತವಾಗಿ ಕಷ್ಟ ಪಟ್ಟೆ. ಬ್ರೈಲ್ ಲಿಪಿಯಲ್ಲಿ ಪರೀಕ್ಷೆಯನ್ನು ಬರೆದು ದ್ವಿತೀಯ ಪಿಯುಸಿಯಲ್ಲಿ ನನಗೆ 98% ಅಂಕಗಳು ಬಂದವು!

ಐಐಟಿ ಸಂಸ್ಥೆಗಳು ಬಾಗಿಲು ತೆರೆಯಲಿಲ್ಲ

ನನಗೆ ಐಐಟಿಯಲ್ಲಿ BE ಮಾಡುವ ಆಸೆ. ಆದರೆ ಭಾರತದ ಯಾವುದೇ ಐಐಟಿ ಕಾಲೇಜುಗಳು ನನಗೆ ಕುರುಡ ಎಂಬ ಕಾರಣಕ್ಕೆ ಎಂಟ್ರೆನ್ಸ್ ಪರೀಕ್ಷೆಗೂ ಅವಕಾಶ ನೀಡಲಿಲ್ಲ. ನಾನು ಕೈಚೆಲ್ಲಲಿಲ್ಲ. ಅಮೆರಿಕಾದ ನಾಲ್ಕು ಪ್ರಸಿದ್ಧವಾದ ಯೂನಿವರ್ಸಿಟಿಗಳ ಬಾಗಿಲು ಬಡಿದೆ. ಎಲ್ಲವೂ ಆಹ್ವಾನ ನೀಡಿದವು.

ನಾನು ಮಸ್ಸಾಚುಸೆಟ್ಸ್ ವಿವಿ ಆರಿಸಿಕೊಂಡೆ. ಅಮೆರಿಕಾದ ವಿವಿಯಲ್ಲಿ BE ಪ್ರವೇಶ ಪಡೆದ ಜಗತ್ತಿನ ಮೊದಲ ಕುರುಡ ವಿದ್ಯಾರ್ಥಿ ನಾನಾಗಿದ್ದೆ! ನನಗೆ ಇಷ್ಟವಾದ BE ಕೋರ್ಸನ್ನು ಮುಗಿಸಿದೆ. ಅಲ್ಲಿ ಈಜು ಮತ್ತು ಡೈವಿಂಗಲ್ಲಿ ವಿವಿ ದಾಖಲೆ ಕೂಡ ಮಾಡಿದ್ದೆ. ಅಮೆರಿಕಾದ ಕೆಲವು ಕಾರ್ಪೊರೇಟ್ ಕಂಪೆನಿಗಳು ನನಗೆ ಉದ್ಯೋಗ ನೀಡಲು ಮುಂದೆ ಬಂದವು.

ಆದರೆ ನನ್ನ ಕನಸುಗಳು ಭಾರತದಲ್ಲಿ ಇದ್ದವು!

2011ರಲ್ಲಿ ಭಾರತಕ್ಕೆ ಬಂದು ಮತ್ತೆ ಅಬ್ದುಲ್ ಕಲಾಂ ಅವರನ್ನು ಭೇಟಿ ಮಾಡಿದೆ. ಅವರ ಸಲಹೆಯಂತೆ ಬಹು ವಿಕಲತೆಯ ಮಕ್ಕಳಿಗಾಗಿ “ಸಮನ್ವೈ ಸೆಂಟರ್” ಎಂಬ ಸೇವಾ ಸಂಸ್ಥೆ ಆರಂಭಿಸಿದೆ. ಬ್ರೈಲ್ ಪ್ರಿಂಟಿಂಗ್ ಪ್ರೆಸ್ ತೆರೆದೆ. 3000 ಅಶಕ್ತ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ನೆರವಿಗೆ ನಿಂತೆ. ಅಷ್ಟಕ್ಕೇ ಸುಮ್ಮನಾಗಲಿಲ್ಲ.

ಆರಂಭ ಆಯಿತು ಅವರದ್ದೇ ಕಂಪೆನಿ

2011ರಲ್ಲಿ ‘ BOLLANT INDUSTRY’ ಎಂಬ ಸಣ್ಣ ಉದ್ಯಮವನ್ನು ಆರಂಭಿಸಿದೆ. ನಗರಪಾಲಿಕೆಯ ತ್ಯಾಜ್ಯ ವಸ್ತುಗಳಿಂದ ಮತ್ತು ಆಡಕೆಯಿಂದ ಕ್ರಾಫ್ಟ್ ಪೇಪರ್ ತಯಾರಿಸುವ ಕಂಪೆನಿ ಅದು. ಹಣ ಮಾಡುವುದು ನನ್ನ ಉದ್ದೇಶ ಆಗಿರಲಿಲ್ಲ. ನನ್ನ ಕಂಪೆನಿಯಲ್ಲಿ ಕುರುಡರಿಗೆ ಮತ್ತು ವಿಕಲಚೇತನರಿಗೆ ಉದ್ಯೋಗ ನೀಡಿದೆ. ರತನ್ ಟಾಟಾ ಅವರು ನನ್ನ ಕಂಪೆನಿಯಲ್ಲಿ ಹೂಡಿಕೆ ಮಾಡಲು ಮುಂದೆ ಬಂದರು. ನನ್ನ ಐಕಾನ್ ಎಪಿಜೆ ಅಬ್ದುಲ್ ಕಲಾಂ ಅವರು ಬಂದು ದೀಪ ಹಚ್ಚಿದರು. ಮುಂದೆ ಆ ಕಂಪೆನಿಯು ಪ್ರತೀ ತಿಂಗಳು 20% ಪ್ರಗತಿ ದಾಖಲಿಸುತ್ತಾ ಬಂದಿತು.

ದಿವ್ಯಾಂಗರಿಗೆ ಉದ್ಯೋಗ ನೀಡಿದರು

ಇಂದು ನನ್ನ ಕಂಪೆನಿಗೆ ನಾಲ್ಕು ರಾಜ್ಯಗಳಲ್ಲಿ 20 ಶಾಖೆಗಳು ಇವೆ. 100 ಕೋಟಿ ರೂಪಾಯಿ ವಾರ್ಷಿಕ ಟರ್ನ್ ಓವರ್ ಇದೆ! ನೂರಕ್ಕೆ ನೂರು ಸೌರಶಕ್ತಿ ಆಧಾರಿತವಾಗಿದೆ ಮತ್ತು ಪರಿಸರಸ್ನೇಹಿ ಆಗಿದೆ. ಅಶಕ್ತ ದಿವ್ಯಾಂಗರಿಗೆ ಸ್ವಾವಲಂಬಿ ಬದುಕಿನ ಅವಕಾಶವನ್ನು ನೀಡಿದ ಖುಷಿ ಇದೆ. ಭಾರತದ ಸಮಸ್ಯೆಗಳಾದ ಬಡತನ, ನಿರಕ್ಷರತೆ, ನಿರುದ್ಯೋಗಗಳ ನಿವಾರಣೆಗೆ ನಮ್ಮಿಂದಾದಷ್ಟು ಪ್ರಯತ್ನ ಪ್ರತಿಯೊಬ್ಬರೂ ಮಾಡಬೇಕು. ‘ಪಂಚೀ ಉಡತೀ ಹೈ ಪಂಖೋ ಕೀ ತಾಕತ್ ಸೆ ನಹೀಂ. ಹೌಸಲೆ ಸೇ!’ ಎಂಬ ಅಬ್ದುಲ್ ಕಲಾಂ ಅವರ ಮಾತಿನೊಂದಿಗೆ ಅವರು ತನ್ನ ಮಾತು ನಿಲ್ಲಿಸಿದರು. ಅವರ ಆಳವಾದ ಕಣ್ಣುಗಳಲ್ಲಿ ಗೆದ್ದ ಖುಷಿ ಇತ್ತು.

ಭರತ ವಾಕ್ಯ

ಅಂದ ಹಾಗೆ ಶ್ರೀಕಾಂತ್ ಅವರಿಗೆ ಫೋರ್ಬ್ಸ್ ಮಾಗಜ್ಹಿನ್ 2017ರಲ್ಲಿ ನಡೆಸಿದ ಏಷಿಯಾದ 30 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನವನ್ನು ದೊರೆತಿದೆ. ‘NDTV ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿ, ‘ಪ್ರೈಡ್ ಆಫ್ ತೆಲಂಗಾಣ’ ಪ್ರಶಸ್ತಿ, ‘ಟಿವಿ 9 ನವನಕ್ಷತ್ರ’ ಪ್ರಶಸ್ತಿ……. ಮೊದಲಾದ ನೂರಾರು ಪ್ರಶಸ್ತಿಗಳು ಅವರಿಗೆ ದೊರೆತಿವೆ. ಶ್ರೀಕಾಂತ್ ಬೊಳ್ಳ ಅವರ ಬದುಕು ಸಾವಿರಾರು ಯುವಕ ಯುವತಿಯರಿಗೆ ಸ್ಫೂರ್ತಿ ನೀಡಿದೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Continue Reading

ಅಂಕಣ

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ರಾಜಮಾರ್ಗ ಅಂಕಣ: ಆಕ್ರಮಣಕಾರಿ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ. ಆದರೆ ಈಗ, ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

VISTARANEWS.COM


on

Rishabh Pant
Koo

ಹೋರಾಟಗಾರ ಕ್ರಿಕೆಟರ್ ಕ್ರಿಟಿಕಲ್ ಇಂಜುರಿ ಗೆದ್ದು ಬಂದ ಕಥೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: 2022 ಡಿಸೆಂಬರ್ 30ರ ಮಧ್ಯರಾತ್ರಿ ರೂರ್ಕಿ ಎಂಬಲ್ಲಿ ಆ ಕ್ರಿಕೆಟರ್ ಕಾರು ಅಪಘಾತಕ್ಕೆ ಒಳಗಾಗಿತ್ತು. ಆ ಅಪಘಾತದ ತೀವ್ರತೆಯನ್ನು ನೋಡಿದವರು ಆತ ಬದುಕಿದ್ದೇ ಗ್ರೇಟ್ ಅಂದಿದ್ದರು. ಬಲಗಾಲಿನ ಮಂಡಿ ಚಿಪ್ಪು ಸಮೇತ 90 ಡಿಗ್ರೀಯಷ್ಟು ತಿರುಗಿ ನಿಂತಿತ್ತು! ಮೈಯೆಲ್ಲಾ ಗಾಯಗಳು ಮತ್ತು ಎಲುಬು ಮುರಿತಗಳು! ಡೆಹ್ರಾಡೂನ್ ಆಸ್ಪತ್ರೆಯ ವೈದ್ಯರು ಆತನ ದೇಹದಲ್ಲಾದ ಗಾಯ ಮತ್ತು ಮೂಳೆ ಮುರಿತಗಳನ್ನು ನೋಡಿದಾಗ ‘ನೀನಿನ್ನು ಕ್ರಿಕೆಟ್ ಆಡೋದು ಕಷ್ಟ’ ಅಂದಿದ್ದರು. ಒಬ್ಬರಂತೂ ‘ನೀನು ನಿನ್ನ ಕಾಲುಗಳ ಮೇಲೆ ನಿಂತರೆ ಅದೇ ದೊಡ್ಡ ಸಾಧನೆ’ ಅಂದಿದ್ದರು!

ಅಮ್ಮಾ ನನಗೆ ಸಹಾಯ ಮಾಡು, ನಾನು ವಿಶ್ವಕಪ್ ಆಡಬೇಕು!

ಆ ಕ್ರಿಕೆಟಿಗ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಚೀರಿ ಚೀರಿ ಹಾಗೆ ಹೇಳುತ್ತಿದ್ದರೆ ನರ್ಸ್ ಮತ್ತು ವೈದ್ಯರು ಕಣ್ಣೀರು ಸುರಿಸುತ್ತಿದ್ದರು! ಕ್ರಿಕೆಟ್ ವಿಶ್ವಕಪ್ ಆರಂಭವಾಗಲು ಕೇವಲ ಒಂದೂವರೆ ವರ್ಷ ಬಾಕಿ ಇತ್ತು. ವೈದ್ಯರು ‘ಅನಿವಾರ್ಯ ಆದರೆ ಆತನ ಒಂದು ಕಾಲು ತುಂಡು ಮಾಡಬೇಕಾಗಬಹುದು!’ ಎಂದು ಅವನ ಅಮ್ಮನ ಕಿವಿಯಲ್ಲಿ ಪಿಸುಗುಟ್ಟಿದ್ದು, ಆತನ ಅಮ್ಮ ಬಾತ್ ರೂಮ್ ಒಳಗೆ ಹೋಗಿ ಕಣ್ಣೀರು ಸುರಿಸಿದ್ದು ಎಲ್ಲವೂ ನಡೆದು ಹೋಗಿತ್ತು!

ಆತ ರಿಶಭ್ ಪಂತ್ – ಆಕ್ರಮಣಕ್ಕೆ ಇನ್ನೊಂದು ಹೆಸರು!

ಅಪಘಾತ ಆಗುವ ಮೊದಲು ಆತ ಭಾರತೀಯ ಕ್ರಿಕೆಟ್ ತಂಡದ ಮೂರೂ ಫಾರ್ಮಾಟಗಳಲ್ಲಿ ಶಾಶ್ವತ ಸ್ಥಾನ ಪಡೆದಿದ್ದ! ಆಕ್ರಮಣಕ್ಕೆ ಹೆಸರಾಗಿದ್ದ. ಸಲೀಸಾಗಿ ಒಂದೇ ಅವಧಿಯಲ್ಲಿ ಡಬಲ್ ಸೆಂಚುರಿ ಹೊಡೆಯುತ್ತಿದ್ದ. ವಿಕೆಟ್ ಹಿಂದೆ ಪಾದರಸದ ಚುರುಕು ಇತ್ತು. ಆತನ ಆಟವನ್ನು ನೋಡಿದವರು ʻಈತ ಧೋನಿಯ ಉತ್ತರಾಧಿಕಾರಿ ಆಗುವುದು ಖಂಡಿತ’ ಅನ್ನುತ್ತಿದ್ದರು!

ಅಂತಹ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ.

ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ

ಮರಳಿ ಕ್ರಿಕೆಟ್ ಮೈದಾನಕ್ಕೆ ಇಳಿಯಬೇಕು ಎಂದು ನಿದ್ದೆಯಲ್ಲಿಯೂ ಕನವರಿಸುತ್ತಿದ್ದ ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ. ಅವರೆಲ್ಲರೂ ಆತನ ಕ್ರಿಕೆಟ್ ದೈತ್ಯ ಪ್ರತಿಭೆಯನ್ನು ಕಂಡವರು. ಒಬ್ಬರು ಆತನಿಗೆ ಶಸ್ತ್ರಚಿಕಿತ್ಸೆ ಮಾಡಿದ ಮುಂಬಯಿಯ ಅಂಬಾನಿ ಆಸ್ಪತ್ರೆಯ ಖ್ಯಾತ ಸರ್ಜನ್ ದಿನ್ ಶಾ ಪಾದ್ರಿವಾಲ. ಇನ್ನೊಬ್ಬರು ಉತ್ತರಾಖಂಡದ ಶಾಸಕ ಉಮೇಶ್ ಕುಮಾರ್. ಇನ್ನೊಬ್ಬರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಕೋಚ್ ಆದ ಧನಂಜಯ್ ಕೌಶಿಕ್. ನಾಲ್ಕನೆಯರು ರಿಷಭನ ತಾಯಿ! ಆಕೆ ನಿಜಕ್ಕೂ ಗಾಡ್ಸ್ ಗ್ರೇಸ್ ಅನ್ನಬಹುದು. ಅವರೆಲ್ಲರಿಗೂ ಆತ ಭಾರತಕ್ಕೆ ಎಷ್ಟು ಅಮೂಲ್ಯ ಆಟಗಾರ ಎಂದು ಗೊತ್ತಿತ್ತು! ಆಸ್ಪತ್ರೆಯ ಹಾಸಿಗೆಗೆ ಒರಗಿ ಆತ ಪಟ್ಟ ಮಾನಸಿಕ ಮತ್ತು ದೈಹಿಕ ನೋವು, ಹೊರಹಾಕಿದ ನಿಟ್ಟುಸಿರು ಎಲ್ಲವೂ ಆ ನಾಲ್ಕು ಮಂದಿಗೆ ಗೊತ್ತಿತ್ತು.

ಆ ಹದಿನೈದು ತಿಂಗಳು…!

Rishabh Panth

ಆ ಅವಧಿಯಲ್ಲಿ ಏಷಿಯಾ ಕಪ್, ವಿಶ್ವ ಟೆಸ್ಟ್ ಚಾಂಪಿಯನಶಿಪ್, ವಿಶ್ವ ಕಪ್ ಎಲ್ಲವೂ ನಡೆದುಹೋಯಿತು! ಭಾರತ ಹಲವು ವಿಕೆಟ್ ಕೀಪರಗಳ ಪ್ರಯೋಗ ಮಾಡಿತು. ಭಾರತ ಒಂದೂ ಕಪ್ ಗೆಲ್ಲಲಿಲ್ಲ. ಭಾರತಕ್ಕೆ ಶಾಶ್ವತವಾದ ವಿಕೆಟ್ ಕೀಪರ್ ಸಿಗಲಿಲ್ಲ! ರಿಷಭ್ ಈ ಎಲ್ಲ ಪಂದ್ಯಗಳನ್ನು ನೋಡುತ್ತಿದ್ದ. ವಿಕೆಟ್ ಹಿಂದೆ ಅವನಿಗೆ ಅವನೇ ಕಾಣುತ್ತಿದ್ದ!

ಹಾಸಿಗೆಯಿಂದ ಎದ್ದು ಕ್ರಚಸ್ ಹಿಡಿದು ನಡೆದದ್ದು, ನಂತರ ಕ್ರಚಸ್ ಬದಿಗೆ ಇಟ್ಟು ಗೋಡೆ ಹಿಡಿದು ನಡೆದದ್ದು, ನಂತರ ಎಲ್ಲವನ್ನೂ ಬಿಟ್ಟು ನಿಧಾನವಾಗಿ ತನ್ನ ಕಾಲ ಮೇಲೆ ಗಟ್ಟಿಯಾಗಿ ನಿಂತದ್ದು, ಜಾಗಿಂಗ್ ಮಾಡಿದ್ದು, ಓಡಿದ್ದು, ಕಾಲುಗಳಿಗೆ ಫಿಸಿಯೋ ಥೆರಪಿ ಆದದ್ದು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಕೌನ್ಸೆಲಿಂಗ್ ನೆರವು ಪಡೆದದ್ದು….ಇವೆಲ್ಲವೂ ಕನಸಿನಂತೆ ಗೋಚರ ಆಗುತ್ತಿದೆ. ಮುಂದೆ ನಿರಂತರ ಕ್ರಿಕೆಟ್ ಕೋಚಿಂಗ್, ಮೈದಾನದಲ್ಲಿ ಬೆವರು ಹರಿಸಿದ್ದು, ಅಪಘಾತವಾದ ಕಾಲು ಬಗ್ಗಿಸಲು ತುಂಬ ಕಷ್ಟಪಟ್ಟದ್ದು ಒಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಂತೆ ಅನ್ನಿಸುತ್ತಿದೆ.

2024 ಮಾರ್ಚ್ 12….

ಒಬ್ಬ ಕ್ರಿಕೆಟರ್ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್ ಮೈದಾನಕ್ಕೆ ಇಳಿಯಲು ಬಿಸಿಸಿಐ ಫಿಟ್ನೆಸ್ ಸರ್ಟಿಫಿಕೇಟ್ ಕೊಡಬೇಕು. ಅದು ಸುಲಭದ ಕೆಲಸ ಅಲ್ಲ. ಅಲ್ಲಿ ಕೂಡ ರಿಶಭ್ ಇಚ್ಛಾಶಕ್ತಿ ಗೆದ್ದಿತ್ತು. ಮಾರ್ಚ್ 12ರಂದು ಆತನು ಕ್ರಿಕೆಟ್ ಆಡಲು ಸಂಪೂರ್ಣ ಫಿಟ್ ಎಂದು ಬಿಸಿಸಿಐ ಘೋಷಣೆ ಮಾಡಿದಾಗ ಆತ ಮೈದಾನದ ಮಧ್ಯೆ ಕೂತು ಜೋರಾಗಿ ಕಣ್ಣೀರು ಹಾಕಿದ್ದನು! ಎರಡೇ ದಿನದಲ್ಲಿ ಡೆಲ್ಲಿ ಐಪಿಎಲ್ ತಂಡವು ಆತನನ್ನು ತೆರೆದ ತೋಳುಗಳಿಂದ ಸ್ವಾಗತ ಮಾಡಿ ನಾಯಕತ್ವವನ್ನು ಕೂಡ ಆತನಿಗೆ ನೀಡಿತ್ತು! ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

ಮುಂದಿನ T20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಒಬ್ಬ ಅದ್ಭುತ ಬ್ಯಾಟರ್ ಮತ್ತು ವಿಕೆಟ್ ಕೀಪರ್ ದೊರಕಿದ್ದನ್ನು ನಾವು ಸಂಭ್ರಮಿಸಲು ಯಾವ ಅಡ್ಡಿ ಕೂಡ ಇಲ್ಲ ಎನ್ನಬಹುದು. ಆತನಿಗೆ ಶುಭವಾಗಲಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

Continue Reading

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading

ಅಂಕಣ

JEE Main 2024 Result: ದೇಶಕ್ಕೇ ಮೊದಲ ರ‍್ಯಾಂಕ್ ಪಡೆದ ರೈತನ ಮಗ! ಈತನ ಯಶಸ್ಸು ಸ್ಫೂರ್ತಿದಾಯಕ

JEE Main 2024 Result: ರೈತನ ಮಗನಾದ ಗಜರೆ ತಮ್ಮ ಗ್ರಾಮವನ್ನು ಬಿಟ್ಟು ನಾಗಪುರದಲ್ಲಿ ಜೆಇಇಗಾಗಿ ಕೋಚಿಂಗ್‌ ಪಡೆದಿದ್ದರು. ಅವರು ತಮ್ಮ 10ನೇ ತರಗತಿ ಪರೀಕ್ಷೆಗಳಲ್ಲಿ 97% ಅಂಕಗಳನ್ನು ಗಳಿಸಿದರು.

VISTARANEWS.COM


on

Nilkrishna Gajare JEE main 2024 result AIR 1
Koo

ಹೊಸದಿಲ್ಲಿ: ಮಹಾರಾಷ್ಟ್ರದ ವಾಶಿಮ್‌ನ ರೈತರ ಮಗ (farmer’s son) ನೀಲಕೃಷ್ಣ ಗಜರೆ (Nilkrishna Gajare) ಅವರು ಜೆಇಇ ಮೇನ್ 2024 ಪರೀಕ್ಷೆಯಲ್ಲಿ (JEE Main 2024 Result) ದೇಶಕ್ಕೇ ಅಗ್ರಸ್ಥಾನ (AIR 1, First Rank) ಪಡೆದಿದ್ದಾರೆ. ಪರೀಕ್ಷೆಯಲ್ಲಿ ಪರಿಪೂರ್ಣ ಅಂಕಗಳನ್ನು (100) ಗಳಿಸಿದ್ದಾರೆ. ದಕ್ಷೇಶ್ ಸಂಜಯ್ ಮಿಶ್ರಾ ಮತ್ತು ಆರವ್ ಭಟ್ ಕ್ರಮವಾಗಿ AIR 2 ಮತ್ತು 3 ಪಡೆದಿದ್ದಾರೆ. ದೇಶದ ವಿವಿಧ ರಾಜ್ಯಗಳ ಒಟ್ಟು 56 ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸಿದ್ದಾರೆ.

ರೈತನ ಮಗನಾದ ಗಜರೆ ತಮ್ಮ ಗ್ರಾಮವನ್ನು ಬಿಟ್ಟು ನಾಗಪುರದಲ್ಲಿ ಜೆಇಇಗಾಗಿ ಕೋಚಿಂಗ್‌ ಪಡೆದಿದ್ದರು. ಅವರು ತಮ್ಮ 10ನೇ ತರಗತಿ ಪರೀಕ್ಷೆಗಳಲ್ಲಿ 97% ಅಂಕಗಳನ್ನು ಗಳಿಸಿದರು. “ಪರೀಕ್ಷೆಯನ್ನು ತೆಗೆದುಕೊಂಡ ನಂತರ, ನಾನು ಪ್ರಶ್ನೆ ಪತ್ರಿಕೆಯನ್ನು ವಿಶ್ಲೇಷಿಸಿದೆ. ನಾನು ದುರ್ಬಲ ವಿಷಯಗಳ ಮೇಲೆ ವಿಶೇಷ ಗಮನವನ್ನು ನೀಡುತ್ತಿದ್ದೇನೆ. JEEಯಂತಹ ಪರೀಕ್ಷೆಯನ್ನು ಉತ್ತರಿಸಲು ಸ್ಪಷ್ಟ ಪರಿಕಲ್ಪನೆಗಳನ್ನು ಹೊಂದಿರುವುದು ಬಹಳ ಮುಖ್ಯ. ಇದಲ್ಲದೆ ನಾನು ಒಂದಕ್ಕಿಂತ ಹೆಚ್ಚು ಬಾರಿ ಪ್ರಶ್ನೆಗಳನ್ನು ಅಭ್ಯಾಸ ಮಾಡುತ್ತೇನೆ” ಎಂದು ಗಜರೆ ಹೇಳಿದ್ದಾರೆ.

IIT- JEEಗೆ ತಯಾರಾಗಲು ಗಜರೆ 11ನೇ ತರಗತಿಯಲ್ಲಿ ALLEN ವೃತ್ತಿ ಸಂಸ್ಥೆಗೆ ಸೇರಿದರು. ಅವರು ತಮ್ಮ ಪ್ರಯಾಣದ ಅಡೆತಡೆಗಳನ್ನು ಹೇಗೆ ನಿವಾರಿಸಿಕೊಂಡರು ಎಂಬುದನ್ನು ಹಂಚಿಕೊಂಡಿದ್ದಾರೆ.

“ನನ್ನ ಜೆಇಇ ಪ್ರಯಾಣ 11ನೇ ತರಗತಿಯಲ್ಲಿ ಪ್ರಾರಂಭವಾದ ಮೊದಲ ಒಂದು ಅಥವಾ ಎರಡು ತಿಂಗಳುಗಳಲ್ಲಿ ನಾನು ಸ್ವಲ್ಪ ತೊಂದರೆಗಳನ್ನು ಎದುರಿಸಿದೆ. ಅಂದರೆ, 10ನೇ ತರಗತಿಗೆ ಹೋಲಿಸಿದರೆ 11 ಮತ್ತು 12ನೇ ತರಗತಿಗಳ ಪಠ್ಯಕ್ರಮವು ಸಾಕಷ್ಟು ವಿಸ್ತಾರವಾಗಿದೆ. ಆದ್ದರಿಂದ ನಾನು ಆರಂಭದಲ್ಲಿ ಕೆಲವು ತೊಂದರೆಗಳನ್ನು ಎದುರಿಸಿದೆ. ಆದರೆ ನಾನು ಕೈಬಿಡಲಿಲ್ಲ. ನನ್ನ ಅಧ್ಯಯನವನ್ನು ನಿರಂತರವಾಗಿ ಮುಂದುವರಿಸಿದೆ. ನಾನು ವಿದ್ಯಾರ್ಥಿಗಳಿಗೆ ನೀಡಲು ಬಯಸುವ ಸಂದೇಶ ಏನೆಂದರೆ, ನೀವು ಅಂತಹ ತೊಂದರೆಗಳನ್ನು ಎದುರಿಸಿದರೆ ಅಥವಾ ನನ್ನಿಂದ ಸಾಧ್ಯವೇ ಇಲ್ಲ ಎಂದು ಭಾವಿಸಿದರೆ, ಕೈಬಿಡಬೇಡಿ. ನಿಮ್ಮ ಸಿದ್ಧತೆಯನ್ನು ನಿರಂತರವಾಗಿ ಮುಂದುವರಿಸಿ. ಒಳ್ಳೆಯ ಫಲಿತಾಂಶ ದಕ್ಕುತ್ತದೆ” ಎಂದು ಅವರು ಇನ್‌ಸ್ಟಿಟ್ಯೂಟ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ ಲೈವ್ ವೇಳೆ ಹೇಳಿದರು.

“ಜೆಇಇ ಅಡ್ವಾನ್ಸ್ಡ್‌ನಲ್ಲಿ ಐಐಟಿ ಬಾಂಬೆಯಲ್ಲಿ ಕಂಪ್ಯೂಟರ್ ಸೈನ್ಸ್‌ ಸೀಟು ಪಡೆಯುವುದು ನನ್ನ ಗುರಿ. ಪ್ರಸ್ತುತ ಅದಕ್ಕಾಗಿ ತಯಾರಿ ನಡೆಸುತ್ತಿದ್ದೇನೆ” ಎಂದು ಗಜರೆ ಹೇಳಿದ್ದಾರೆ. ಐಐಟಿ-ಜೆಇಇ ಆಕಾಂಕ್ಷಿಗಳಿಗೆ ಗಜರೆ ಸಲಹೆಯನ್ನೂ ಹಂಚಿಕೊಂಡಿದ್ದಾರೆ. “ನಿಮ್ಮ ಗುರಿಯನ್ನು ಖಚಿತಪಡಿಸಿ. ಅದರ ಪ್ರಕಾರ ನಿಮ್ಮ ಸಿದ್ಧತೆಯನ್ನು ನಿರಂತರವಾಗಿ ಮಾಡಿ. ವಿಷಯಗಳನ್ನು ನಿಜವಾದ ಆಸಕ್ತಿಯಿಂದ ಅಧ್ಯಯನ ಮಾಡಿ. ಇದರಿಂದ ಅವು ಹೊರೆಯಾಗುವುದಿಲ್ಲ. ನಿಮ್ಮ ಸಿದ್ಧತೆಯನ್ನು ಸ್ಥಿರವಾಗಿ ಮತ್ತು ನಿರಂತರವಾಗಿ ಮಾಡಿ.”

56 ಅಭ್ಯರ್ಥಿಗಳಿಗೆ ಶೇ.100 ಅಂಕ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಜೆಇಇ ಮುಖ್ಯ 2024 ಸೆಷನ್ 2 ಪರೀಕ್ಷಾ ಫಲಿತಾಂಶ (JEE Main 2024 Result session 2) ಪ್ರಕಟವಾಗಿದೆ. ಒಟ್ಟು 56 ಅಭ್ಯರ್ಥಿಗಳು (Students) ಶೇ.100 ಅಂಕಗಳನ್ನು ಗಳಿಸಿದ್ದು, ಕಳೆದ ಬಾರಿಗಿಂತ 13 ಹೆಚ್ಚು ವಿದ್ಯಾರ್ಥಿಗಳು ಇದನ್ನು ಪಡೆದಿದ್ದಾರೆ. ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳು ಶೇ.100 ಅಂಕ ಪಡೆದಿದ್ದಾರೆ. ಕಟ್‌ಆಫ್‌ (Cut off marks) ಅಂಕಗಳನ್ನು ಕೂಡ 2.45%ರಷ್ಟು ಹೆಚ್ಚಿಸಲಾಗಿದೆ.

ಸಂಸ್ಥೆಯು ಇಂದು ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ 2024 ಫಲಿತಾಂಶವನ್ನು ಬಿಡುಗಡೆ ಮಾಡಿದೆ. 2024ರ ಪರೀಕ್ಷೆಗಳಲ್ಲಿ ಒಟ್ಟು 9.24 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 8.2 ಲಕ್ಷ ಜನರು ಜನವರಿ ಮತ್ತು ಏಪ್ರಿಲ್‌ನಲ್ಲಿ ನಡೆದ JEE ಮುಖ್ಯ 2023 ಪರೀಕ್ಷೆಗಳಿಗೆ ಹಾಜರಾಗಿದ್ದರು. ಜೆಇಇ ಮುಖ್ಯ ಏಪ್ರಿಲ್ ಸೆಷನ್‌ಗೆ ಹಾಜರಾದವರು ತಮ್ಮ ಅಂಕಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು: jeemain.nta.ac.in.

ಇದನ್ನೂ ಓದಿ: JEE Main 2024 Result: ಜೆಇಇ ಮೇನ್‌ ಫಲಿತಾಂಶ ಪ್ರಕಟ, 56 ಅಭ್ಯರ್ಥಿಗಳಿಗೆ ಶೇ.100 ಅಂಕ, ಕಟ್‌ಆಫ್‌ 2.45% ಹೆಚ್ಚಳ

Continue Reading
Advertisement
Viral Video
ವೈರಲ್ ನ್ಯೂಸ್12 mins ago

Viral News: ಸೆಕೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳನ್ನು ಕಾಪಾಡಲು ಶಿಕ್ಷಕರ ಸೂಪರ್‌ ಐಡಿಯಾ; ಇಲ್ಲಿದೆ ವಿಡಿಯೊ

Prime Minister Narendra Modi wrote a letter to former CM Basavaraj Bommai
ಕರ್ನಾಟಕ17 mins ago

Lok Sabha Election 2024: ಬಸವರಾಜ ಬೊಮ್ಮಾಯಿಗೆ ಪತ್ರ ಬರೆದ ಪ್ರಧಾನಿ ಮೋದಿ; ಕೊಟ್ಟ ಟಾಸ್ಕ್‌ ಏನು?

Labour Day 2024
ದೇಶ19 mins ago

Labour Day 2024: ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ ರೂಪಿಸಿರುವ ಪ್ರಮುಖ ಯೋಜನೆಗಳಿವು

State government conspiracy behind Prajwal Hassan Pen Drive Case says HD Kumaraswamy
ಕ್ರೈಂ22 mins ago

Hassan Pen Drive Case: ಪ್ರಜ್ವಲ್‌ಗೆ ಕಾಂಗ್ರೆಸ್‌ ಸರ್ಕಾರದಿಂದಲೇ ಖೆಡ್ಡಾ? ಏನಿದು ಹಕೀಕತ್ತು? ಮಾಜಿ ಸಿಎಂ ಗರಂ ಆಗಿದ್ದೇಕೆ?

Karnataka Weather
ಕರ್ನಾಟಕ41 mins ago

Karnataka Weather: ರಾಜ್ಯದಲ್ಲಿ ಕಳೆದ 7 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು!

IPL 2024
ಪ್ರಮುಖ ಸುದ್ದಿ59 mins ago

IPL 2024 : ಗುಜರಾತ್​ ಟೀಮ್​ನಲ್ಲಿ ಬುಮ್ರಾ 2.0; ಕನ್ನಡಿಗನ ಬೌಲಿಂಗ್​ ಶೈಲಿ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​

Rescue of a boy who drowned at Malpe beach Two boys die after taking bath in Sindagi
ಕ್ರೈಂ1 hour ago

Malpe Beach: ಮಲ್ಪೆ ಬೀಚ್‌ನಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ; ಸಿಂದಗಿಯಲ್ಲಿ ಸ್ನಾನಕ್ಕೆಂದು ಬಾವಿಗಿಳಿದಿದ್ದ ಬಾಲಕರಿಬ್ಬರ ಸಾವು

Fortis Hospital Launches Deep Brain Stimulation DBS Clinic to Treat Parkinson Disease
ಕರ್ನಾಟಕ1 hour ago

Fortis Hospital: ಪಾರ್ಕಿನ್ಸನ್‌ ಕಾಯಿಲೆ ಚಿಕಿತ್ಸೆಗೆ ಪ್ರತ್ಯೇಕ ಕ್ಲಿನಿಕ್‌ ಆರಂಭಿಸಿದ ಫೋರ್ಟಿಸ್‌ ಆಸ್ಪತ್ರೆ

Divorce Celebration
ವೈರಲ್ ನ್ಯೂಸ್1 hour ago

Divorce Celebration: ಗಂಡನ ಬಿಟ್ಟು ಬಂದ ಮಗಳನ್ನು ಅದ್ಧೂರಿ ಮೆರವಣಿಗೆಯಲ್ಲಿ ಕರೆ ತಂದ ಅಪ್ಪ!

RBI Guideline
ವಾಣಿಜ್ಯ1 hour ago

RBI Guideline: ಬ್ಯಾಂಕುಗಳಿಗೆ ಬಿಸಿ ಮುಟ್ಟಿಸಿದ ಆರ್‌ಬಿಐ; ಸಂಗ್ರಹಿಸಿದ ಹೆಚ್ಚುವರಿ ಶುಲ್ಕ ಮರುಪಾವತಿಗೆ ಸೂಚನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ16 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌