T20 World Cup | ಟಿ20 ವಿಶ್ವ ಕಪ್​ನ ಗ್ರೂಪ್​ ಬಿ ತಂಡದ ಸದ್ಯದ ಸೆಮಿಫೈನಲ್ಸ್‌ ಲೆಕ್ಕಾಚಾರ ಹೀಗಿದೆ - Vistara News

Latest

T20 World Cup | ಟಿ20 ವಿಶ್ವ ಕಪ್​ನ ಗ್ರೂಪ್​ ಬಿ ತಂಡದ ಸದ್ಯದ ಸೆಮಿಫೈನಲ್ಸ್‌ ಲೆಕ್ಕಾಚಾರ ಹೀಗಿದೆ

ಟಿ20 ವಿಶ್ವ ಕಪ್​ನ ಗ್ರೂಪ್​ ಬಿ ತಂಡದ ಸದ್ಯದ ಸೆಮಿ ಲೆಕ್ಕಾಚಾರದ ಅವಲೋಕನ ಈ ಕೆಳಗಿನಂತಿದೆ.

VISTARANEWS.COM


on

t20
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಿಡ್ನಿ: ಟಿ20 ವಿಶ್ವ ಕಪ್(T20 World Cup )​ನ ಸೂಪರ್​-12 ಹಂತದ ಪಂದ್ಯಗಳು ಅಂತಿಮ ಘಟಕ್ಕೆ ಬಂದು ನಿಂತಿದೆ. ಈ ನಡುವೆ ಎಲ್ಲ ತಂಡಗಳು ಸೆಮಿಫೈನಲ್​ಗೇರುವ ನಿಟ್ಟಿನಲ್ಲಿ ಹಲವು ಲೆಕ್ಕಾಚಾರದಲ್ಲಿ ಆಡತೊಡಗಿವೆ. ಸದ್ಯ ಬಿ ಗ್ರೂಪ್​ನ ತಂಡಗಳ ಸ್ಥಿತಿ ಹೇಗಿದೆ ಎಂಬ ಅವಲೋಕನವನ್ನು ಮಾಡಲಾಗಿದೆ. ಅದು ಈ ಕೆಳಗಿನಂತಿದೆ.

ದಕ್ಷಿಣ ಆಫ್ರಿಕಾ ತಂಡ ಮೂರು ಪಂದ್ಯಗಳನ್ನಾಡಿದ್ದು 5 ಅಂಕ ಗಳಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಜತೆಗೆ ಇನ್ನು ಎರಡು ಪಂದ್ಯಗಳು ಬಾಕಿ ಉಳಿದಿವೆ. ಈ ಎರಡು ಪಂದ್ಯದಲ್ಲಿ ಒಂದು ಪಂದ್ಯವನ್ನು ಗೆದ್ದರೂ ದಕ್ಷಿಣ ಆಫ್ರಿಕಾ 7 ಅಂಕದೊಂದಿಗೆ ಸೆಮಿಫೈನಲ್​ ಪ್ರವೇಶಿಸಲಿದೆ. ಭಾರತ ತಂಡವೂ ದಕ್ಷಿಣ ಆಫ್ರಿಕಾ ತಂಡದಂತೆ ಎರಡು ಪಂದ್ಯ ಗೆದ್ದು 4 ಅಂಕದೊಂದಿಗೆ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಭಾರತಕ್ಕೂ ಎರಡು ಪಂದ್ಯಗಳು ಬಾಕಿ ಇದ್ದು ಒಂದರಲ್ಲಿ ಗೆಲುವು ಸಾಧಿಸಿದರೆ ಸಾಕು. ಆರಾಮವಾಗಿ ಸೆಮಿ ಫೈನಲ್​ಗೇರಬಹುದು.

ಆರಂಭಿಕ ಎರಡು ಪಂದ್ಯಗಳಲ್ಲಿ ಹಿನಾಯ ಸೋಲು ಕಂಡ ಪಾಕಿಸ್ತಾನ ತಂಡಕ್ಕೂ ಸೆಮಿ ಫೈನಲ್​ ಆಸೆ ಇನ್ನೂ ಜೀವಂತವಿದೆ. ಆದರೆ ಕೆಲ ಪವಾಡಗಳು ಇಲ್ಲಿ ಸಂಭವಿಸಬೇಕಿದೆ. ಅದು ಭಾರತ ತಂಡದ ಸೋಲನ್ನು ಪ್ರಾರ್ಥಿಸಬೇಕಿದೆ. ಪಾಕ್​ ಸೆಮಿ ಫೈನಲ್​ಗೇರಬೇಕಾದರೆ ಮುಂದಿನ ಎಲ್ಲಾ ಪಂದ್ಯಗಳಲ್ಲಿಯೂ ಗೆಲುವು ಸಾಧಿಸಿಬೇಕಿದೆ. ಅದರಂತೆ ಪಾಕ್​ 40 ರನ್​ಗಿಂತ ಅಧಿಕ ಹಾಗೂ ಚೇಸಿಂಗ್‌ನಲ್ಲಿ ನಿಗದಿತ ಓವರ್‌ಗಳಿಗಿಂತ ಮೂರು ಓವರ್​ ಮೊದಲೇ ಗೆಲುವು ಸಾಧಿಸಬೇಕಿದೆ. ಜತೆಗೆ ಭಾರತ ತಂಡ ಎಲ್ಲ ಪಂದ್ಯ ಸೋಲು ಕಾಣಬೇಕು. ಆದರೆ ಮಾತ್ರ ಪಾಕ್​ಗೆ ಒಂದು ಅವಕಾಶವಿದೆ. ಒಟ್ಟಾರೆ ಭಾರತ ತಂಡದ ಸೋಲಿನ ಮೇಲೆ ಪಾಕ್​ ಸೆಮೀಸ್‌ ಭವಿಷ್ಯ ಅಡಗಿದೆ.

ಇದನ್ನೂ ಓದಿ | IND VS BANGLA | ಭಾರತ- ಬಾಂಗ್ಲಾದೇಶ ವಿರುದ್ಧದ ಪಂದ್ಯಕ್ಕೆ ಮಳೆ ಭೀತಿ ಸಾಧ್ಯತೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Mecca Heatwave Death : ಮೆಕ್ಕಾದಲ್ಲಿ ನಿಧನ ಹೊಂದಿದ ಹಜ್​ ಯಾತ್ರಿಗಳಿಗೆ ಅಲ್ಲೇ ಸಂಸ್ಕಾರ; ಹಜ್​ ಕಮಿಟಿ ಮಾಹಿತಿ

Mecca Heatwave Death : ಭಾರತ‌ ಸರ್ಕಾರ ಹಾಗೂ ಸೌದಿ ಅರೇಬಿಯಾದ ಒಡಂಬಡಿಕೆ ಪ್ರಕಾರ ಶವ ತೆಗೆದುಕೊಂಡು ಬರುವುದಕ್ಕೆ ಆಗಲ್ಲ. ಅಂತೆಯೇ ಇಸ್ಲಾಂ ಧರ್ಮದಲ್ಲಿ ಮೆಕ್ಕಾದಲ್ಲಿ ಶವಸಂಸ್ಕಾರ ಮಾಡೋದು ಪುಣ್ಯವಾದ ಕೆಲಸ. ಇಸ್ಲಾಂ ಅನುಯಾಯಿಗಳು ಬಲವಾಗಿ ನಂಬುತ್ತಾರೆ. ಹಾಗಾಗಿ ಮೆಕ್ಕಾದಿಂದ ಯಾವುದೇ ಮೃತದೇಹವನ್ನು ತೆಗೆದುಕೊಂಡು ಬರುವುದಿಲ್ಲ ಎಂದ ಹೇಳಿದ್ದಾಎರ

VISTARANEWS.COM


on

Mecca Heatwave Death
Koo

ವಿಜಯನಗರ: ಸೌದಿ ಅರೇಬಿಯಾದ ಮೆಕ್ಕಾದಲ್ಲಿ ತಾಪಮಾನ ಏರಿಕೆಯಿಂದ ಉಂಟಾದ ಆಘಾತದಿಂದ ಕರ್ನಾಟಕದ ಇಬ್ಬರು ಮೃತಪಟ್ಟಿರುವ (Mecca Heatwave Death) ಬಗ್ಗೆ ರಾಜ್ಯ ಹಜ್ ಕಮಿಟಿ ಕಾರ್ಯನಿರ್ವಹಣಾ ಅಧಿಕಾರಿ ಸರ್ಫರಾಜ್ ಖಾನ್​ ಮಾಹಿತಿ ನೀಡಿದ್ದಾರೆ. ಮೃತಪಟ್ಟಿರುವ ಇಬ್ಬರನ್ನು ಅಲ್ಲೇ ಸಂಸ್ಕಾರ ಮಾಡಲಾಗುವುದು ಎಂದು ಹೇಳಿದ್ದಾರೆ. ಇಸ್ಲಾಂ ಪ್ರಕಾರ ಪವಿತ್ರ ಸ್ಥಳವಾಗಿರುವ ಮೆಕ್ಕಾದಲ್ಲಿ ಮೃತಪಟ್ಟರೆ ಶ್ರೇಷ್ಠ ಹಾಗೂ ಪುಣ್ಯ. ಅಂತೆಯೇ ಅವರನ್ನು ಅಲ್ಲಿಯೇ ಸಂಸ್ಕಾರ ಮಾಡಲಾಗುವುದು ಹೊಸಪೇಟೆಯ ಡಿಸಿ ಕಚೇರಿಯಲ್ಲಿ ಅವರು ಮಾಹಿತಿ ನೀಡಿದ್ದಾರೆ.

ಕರ್ನಾಟಕದಿಂದ ಒಟ್ಟು 10,300 ಜನ ಯಾತ್ರಾರ್ಥಿಗಳು ಹಜ್ ಗೆ ಹೋಗಿದ್ದರು. 52 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ಏರಿದ್ದ ಕಾರಣ ಕರ್ನಾಟಕದ ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಿಂದ ತೆರಳಿದ್ದ ಇಬ್ಬರು ಯಾತ್ರಾರ್ಥಿಗಳು ಜೂನ್ 16ರಂದು ಮೆಕ್ಕಾದಲ್ಲಿ ಮೃತಪಟ್ಟಿದ್ದಾರೆ. ಬೆಂಗಳೂರಿನ ಆರ್ ಟಿ ನಗರದ ನಿವಾಸಿ ರುಕ್ಸಾನಾ (90), ಹಾಗೂ ಅಬ್ದುಲ್ ಅನ್ಸಾರಿ (54) ಮೃತಪಟ್ಟವರು. ಅವರಿಬ್ಬರೂ ಬೆಂಗಳೂರು ಎಂಬಾರ್ಕೆಸೆ ಪಾಯಿಂಟ್ ನಿಂದ ಹಜ್ ಗೆ ಹೋಗಿದ್ದರು ಎಂದು ಸರ್ಫಾರಾಜ್ ಅವರು ಮಾಹಿತಿ ನೀಡಿದ್ದಾರೆ.

ಭಾರತ‌ ಸರ್ಕಾರ ಹಾಗೂ ಸೌದಿ ಅರೇಬಿಯಾದ ಒಡಂಬಡಿಕೆ ಪ್ರಕಾರ ಶವ ತೆಗೆದುಕೊಂಡು ಬರುವುದಕ್ಕೆ ಆಗಲ್ಲ. ಅಂತೆಯೇ ಇಸ್ಲಾಂ ಧರ್ಮದಲ್ಲಿ ಮೆಕ್ಕಾದಲ್ಲಿ ಶವಸಂಸ್ಕಾರ ಮಾಡೋದು ಪುಣ್ಯವಾದ ಕೆಲಸ. ಇಸ್ಲಾಂ ಅನುಯಾಯಿಗಳು ಬಲವಾಗಿ ನಂಬುತ್ತಾರೆ. ಹಾಗಾಗಿ ಮೆಕ್ಕಾದಿಂದ ಯಾವುದೇ ಮೃತದೇಹವನ್ನು ತೆಗೆದುಕೊಂಡು ಬರುವುದಿಲ್ಲ ಎಂದ ಹೇಳಿದ್ದಾರೆ.

ಇದನ್ನೂ ಓದಿ: NEET UG : ಫಿಸಿಕ್ಸ್​ನಲ್ಲಿ 85, ಕೆಮೆಸ್ಟ್ರಿಯಲ್ಲಿ 5! ನೀಟ್ ಆಕಾಂಕ್ಷಿಯ ಸ್ಕೋರ್ ಕಾರ್ಡ್ ಸೋರಿಕೆ, ಆರೋಪಿ ಸೆರೆ

ಸೌದಿ ಅರೇಬಿಯಾದ ಸರ್ಕಾರ ಮತ್ತು ಕೌನ್ಸಿಲ್ ಜನರಲ್ ಮೃತಪಟ್ಟವರು ಶವ ಸಂಸ್ಕಾರ ಮಾಡಿದ್ದಾರೆ. ಮೃತಪಟ್ಟಿರುವ ರುಕ್ಸಾನಾ ಪತಿ ಹಾಗೂ ಅಬ್ದುಲ್ ಅನ್ಸಾರಿ ಅವರ ಪತ್ನಿ ಸಹ ಹಜ್ ಗೆ ಹೋಗಿದ್ದಾರೆ. ಅವರ ಕುಟುಂಬಸ್ಥರು ಅಲ್ಲಿಯೇ ಇದ್ದಾರೆ ಎಂದು ಅವರು ಹೇಳಿದ್ದಾರೆ.

ಸಂಜೆ 4ರವರೆಗೆ ಹೊರಗೆ ಬರದಂತೆ ಸೂಚನೆ

ಬೆಳಗ್ಗೆ 9 ರಿಂದ ಸಂಜೆ 4ರವರೆಗೆ ಯಾರು ಹೊರಗಡೆ ಬರಬಾರದು ಅಂತಾ ಸೂಚನೆ ನೀಡಿದ್ದಾರೆ. ಹಜ್​ಗೆ ಹೋದ ಎಲ್ಲ ಯಾತ್ರಾರ್ಥಿಗಳು ಕಡ್ಡಾಯ ಪಾಲನೆ ಮಾಡಬೇಕು. ಇಲ್ಲಿಂದ ಹಜ್ ಗೆ ಹೋಗುವಾಗ ಎಲ್ಲ ಪ್ರತಿಯೊಬ್ಬರಿಗೂ ತರಬೇತಿ ಕೊಟ್ಟಿರುತ್ತೇವೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಕ್ಯಾಂಪ್ ಮಾಡಿದ್ದೇವೆ. ತಾಪಮಾನ ಜಾಸ್ತಿಯಿದ್ದಾಗ ಯಾವ ಥರ ಇರಬೇಕು ಅಂತಾ ಹೇಳಿದ್ದೇವೆ. ಜಾಗೃತಿ ಮೂಡಿಸಿದ್ರೂ ದುರಂತ ಆಗಬಾರದಿತ್ತು ಎಂಬುದೇ ನನ್ನ ಅಭಿಪ್ರಾಯ.

Continue Reading

ಪ್ರಮುಖ ಸುದ್ದಿ

Virat kohli : ಕೊಹ್ಲಿಯನ್ನು ಮತ್ತೆ ಸ್ವಾರ್ಥಿ ಎಂದು ದೂರಿದ ಪಾಕಿಸ್ತಾನದ ಮೊಹಮ್ಮದ್ ಹಫೀಜ್​

Virat Kohli : ಆ ಸಮಯದಲ್ಲಿ ನಾನು ಹೇಳಿದ್ದು ಸರಿಯಾಗಿಯೇ ಇತ್ತು. ನೀವು ಇಡೀ ಸಂದರ್ಭವನ್ನು ನೋಡಿದರೆ ನಿಮಗೆ ತಿಳಿಯುತ್ತದೆ. ನನ್ನ ಪ್ರಕಾರ, ಯಾರೇ ಆಡುತ್ತಿದ್ದರೂ ನಿಮ್ಮ ಉದ್ದೇಶ, ನಿಮ್ಮ ಆಟದ ವಿಧಾನವು ಯಾವಾಗಲೂ ಪಂದ್ಯವನ್ನು ಗೆಲ್ಲುವತ್ತ ಇರಬೇಕು,” ಎಂದು ಹಫೀಜ್ ಹೇಳಿದ್ದಾರೆ.

VISTARANEWS.COM


on

Virat kohli
Koo

ನವದೆಹಲಿ: ಭಾರತ ತಂಡದ ಸ್ಟಾರ್ ಆಟಗಾರ ಹಾಗೂ ವಿಶ್ವ ಕಂಡ ಶ್ರೇಷ್ಠ ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು (Virat kohli) ಪಾಕಿಸ್ತಾನದ ಮಾಜಿ ನಾಯಕ ಮೊಹಮ್ಮದ್ ಹಫೀಜ್ ಸ್ವಾರ್ಥಿ ಎಂದು ಕರೆದಿದ್ದಾರೆ. ಅವರು ತಂಡದ ಬದಲಿಗೆ ಸ್ವಾರ್ಥಕ್ಕಾಗಿ ಆಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಮೂಲಕ ಪಾಕ್​ನ ಮಾಜಿ ಬ್ಯಾಟರ್​ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ಅಂದಹಾಗೆ ವಿರಾಟ್ ಕೊಹ್ಲಿಯ ಬ್ಯಾಟಿಂಗ್ ಉದ್ದೇಶವನ್ನು ಹಫೀಜ್ ಪ್ರಶ್ನಿಸುತ್ತಿರುವುದು ಇದೇ ಮೊದಲಲ್ಲ. 2023ರಲ್ಲಿ ಭಾರತದಲ್ಲಿ ನಡೆದ ಏಕ ದಿನ ವಿಶ್ವ ಕಪ್ ಟೂರ್ನಿಯಲ್ಲಿ​ ದಕ್ಷಿಣ ಆಫ್ರಿಕಾ ವಿರುದ್ಧದ ವಿಶ್ವಕಪ್ ಪಂದ್ಯದ ವೇಳೆ, ಹಫೀಜ್ ಕೊಹ್ಲಿಯನ್ನು ತಮ್ಮ ತಂಡದ ಬದಲು ಶತಕಕ್ಕಾಗಿ ಆಡುತ್ತಿಲ್ಲ ಎಂದು ಟೀಕಿಸಿದ್ದರು.

ಏಕದಿನ ಕ್ರಿಕೆಟ್​​ನಲ್ಲಿ 49ನೇ ಶತಕ ಬಾರಿಸಿದ ಬಳಿಕ ಕೊಹ್ಲಿ ನಿಧಾನಗತಿಯಲ್ಲಿ ಆಡಿದ್ದರು ಎಂದು ಅವರು ಆರೋಪಿಸಿದ್ದಾರೆ. “ವಿರಾಟ್ ಕೊಹ್ಲಿ ಅವರ ಬ್ಯಾಟಿಂಗ್​ನಲ್ಲಿ ನಾನು ಸ್ವಾರ್ಥದ ಭಾವನೆ ನೋಡಿದೆ. ಇದು ಈ ವಿಶ್ವಕಪ್​​ನಲ್ಲಿ ಮೂರನೇ ಬಾರಿಗೆ ಸಂಭವಿಸಿದೆ. 49ನೇ ಓವರ್​ನಲ್ಲಿ ಅವರು ಶತಕ ತಲುಪಲು ಒಂದೇ ಒಂದು ರನ್​ಗಾಗಿ ಓಡಿದರು. ಅವರು ತಂಡಕ್ಕೆ ಮೊದಲ ಆದ್ಯತೆ ನೀಡಲಿಲ್ಲ” ಎಂದು ಹಫೀಜ್ 2023 ರ ವಿಶ್ವಕಪ್ ಅನ್ನು ವರದಿ ಮಾಡುತ್ತಿದ್ದ ಪಾಕಿಸ್ತಾನದ ಟಿವಿ ಕಾರ್ಯಕ್ರಮದಲ್ಲಿ ಹೇಳಿದ್ದರು.

ವಿರಾಟ್ ಕೊಹ್ಲಿಯ ಉದ್ದೇಶವನ್ನು ಮತ್ತೆ ಪ್ರಶ್ನಿಸಿದ ಮೊಹಮ್ಮದ್ ಹಫೀಜ್

ಆಡಮ್ ಗಿಲ್​ಕ್ರಿಸ್ಟ್​​ ಮತ್ತು ಮೈಕೆಲ್ ವಾನ್ ಕೂಡ ಭಾಗಿಯಾಗಿದ್ದ ಯೂಟ್ಯೂಬ್ ಶೋ ಕ್ಲಬ್ ಪ್ರೈರಿ ಫೈನರ್​ ಸಂವಾದದ ಸಮಯದಲ್ಲಿ, ಮೊಹಮ್ಮದ್ ಹಫೀಜ್ ತಮ್ಮ ಮಾತುಗಳಿಗೆ ಬದ್ಧರಾಗಿದ್ದರು. ಆ ಸಮಯದಲ್ಲಿ ಕೊಹ್ಲಿಯನ್ನು ಸ್ವಾರ್ಥಿ ಎಂದು ಕರೆಯುವ ಹಿಂದಿನ ಕಾರಣವನ್ನು ವಿವರಿಸಿದ್ದರು.

ಆ ಸಮಯದಲ್ಲಿ ನಾನು ಹೇಳಿದ್ದು ಸರಿಯಾಗಿಯೇ ಇತ್ತು. ನೀವು ಇಡೀ ಸಂದರ್ಭವನ್ನು ನೋಡಿದರೆ ನಿಮಗೆ ತಿಳಿಯುತ್ತದೆ. ನನ್ನ ಪ್ರಕಾರ, ಯಾರೇ ಆಡುತ್ತಿದ್ದರೂ ನಿಮ್ಮ ಉದ್ದೇಶ, ನಿಮ್ಮ ಆಟದ ವಿಧಾನವು ಯಾವಾಗಲೂ ಪಂದ್ಯವನ್ನು ಗೆಲ್ಲುವತ್ತ ಇರಬೇಕು,” ಎಂದು ಹಫೀಜ್ ಹೇಳಿದ್ದಾರೆ.

90 ರನ್​ ಮಾಡಿದ ಬಳಿಕ ದೊಡ್ಡ ಶಾಟ್ ಆಡುವುದನ್ನು ನಿಲ್ಲಿಸಿದರೆ ನಾನು ಒಪ್ಪಿಕೊಳ್ಳುವುದಿಲ್ಲ. ನಾನು ಅದನ್ನು ಎಂದಿಗೂ ಒಪ್ಪುವುದಿಲ್ಲ. 95 ರನ್ ಗಳಿಸಿ ಯಾರಾದರೂ ತಮ್ಮ 100 ರನ್ ಗಳಿಸಲು ಐದು ಎಸೆತಗಳನ್ನು ತೆಗೆದುಕೊಳ್ಳಬಾರದು. ಮೂರು ಅಥವಾ ನಾಲ್ಕು ಎಸೆತಗಳಲ್ಲಿ ನಾನು ಹೊಡೆಯಬಹುದೇ ಎಂದು ಯೋಚಿಸದಿದ್ದರೆ ತಪ್ಪು ಎಂದು ಹೇಳಿದರು.

100 ರನ್ ಗಳಿಸಿದ ನಂತರ ನನ್ನ ಉದ್ದೇಶಗಳು ಬದಲಾದರೆ, ನಾನು 95 ರನ್ ಗಳಿಸಿದ್ದಾಗ ಅದೇ ಶಾಟ್ ಅನ್ನು ಏಕೆ ಆಡಲು ಸಾಧ್ಯವಿಲ್ಲ? ಏಕೆಂದರೆ ನನ್ನ ಪ್ರಕಾರ ನಿಮ್ಮ ಉದ್ದೇಶ ಯಾವಾಗಲೂ ಒಂದೇ ಆಗಿರಬೇಕು. ನಿಮ್ಮ ತಂಡಕ್ಕೆ ಮೌಲ್ಯವನ್ನು ವೃದ್ಧಿಸಲು ಮತ್ತು ಅವರನ್ನು ಗೆಲುವಿನ ಸ್ಥಾನಕ್ಕೆ ತರಲು ಸಾಧ್ಯವಿರುವ ಎಲ್ಲವನ್ನೂ ಮಾಡಿ ಎಂದು ಹಫೀಜ್ ಹೇಳಿದರು. ಈ ಮೂಲಕ ಅವರು ಕೊಹ್ಲಿಯನ್ನು ಮತ್ತೊಮ್ಮೆ ಟೀಕಿಸಿದ್ದಾರೆ.

ವೈಯಕ್ತಿಕ ಮೈಲಿಗಲ್ಲುಗಳ ನಿರೀಕ್ಷೆ ಬೇಡ: ಮೊಹಮ್ಮದ್ ಹಫೀಜ್

ಯಾವುದೇ ದೊಡ್ಡ ಶಾಟ್​ಗಳನ್ನು ಆಡದೆ ಕೊಹ್ಲಿ ತಮ್ಮ ಶತಕ ತಲುಪಲು ಸಾಕಷ್ಟು ಎಸೆತಗಳನ್ನು ತೆಗೆದುಕೊಂಡರು. ಅದಕ್ಕಾಗಿ ಟೀಕಿಸಿದ್ದಾರೆ ಎಂದು ಹಫೀಜ್ ತಮ್ಮ ನಿಲುವು ವಿವರಿಸಿದರು.

ಇದನ್ನೂ ಓದಿ: BCCI: ಟೀಮ್​ ಇಂಡಿಯಾದ ತವರಿನ ಕ್ರಿಕೆಟ್​ ಸರಣಿಯ ವೇಳಾಪಟ್ಟಿ ಪ್ರಕಟ

ಆ ಪಂದ್ಯದಲ್ಲಿ ವಿರಾಟ್ ತಮ್ಮ 100 ರನ್ ಗಳಿಸಲು ಸಾಕಷ್ಟು ಎಸೆತಗಳನ್ನು ತೆಗೆದುಕೊಂಡರು. ಅವರು ದೊಡ್ಡ ಶಾಟ್​ಗಳನ್ನು ಆಡುತ್ತಿಲ್ಲ ಎಂದು ನಾನು ಭಾವಿಸಿದೆ. ನೀವು ಅವರ ಶತಕವನ್ನು ಮತ್ತೆ ನೋಡಿದರೆ ನಾನು ಏನು ಹೇಳುತ್ತಿದ್ದೇನೆಂದು ನಿಮಗೆ ಅರ್ಥವಾಗಬಹುದು,” ಎಂದು ಪಾಕಿಸ್ತಾನದ ಮಾಜಿ ಆಲ್ರೌಂಡರ್ ವಿವರಿಸಿದರು.

“ನನ್ನ ಪ್ರಕಾರ, ವೈಯಕ್ತಿಕ ಮೈಲಿಗಲ್ಲುಗಳು ಕ್ರಿಕೆಟ್​ನಿಂದ ದೂರವಿರಬೇಕು. ನಿಮ್ಮ ಅಭಿಮಾನಿಯಾಗಿ ನಾವು ಕಷ್ಟಪಟ್ಟು ಶತಕ ಬಾರಿಸುವುದನ್ನು ಇಷ್ಟಪಡುವುದಿಲ್ಲ ಎಂದು ಹಫೀಜ್ ಹೇಳಿದ್ದಾರೆ. ಆ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ 90 ನೇ ರನ್ ನಂತರ ಶತಕವನ್ನು ತಲುಪಲು ಒಂಬತ್ತು ಎಸೆತಗಳನ್ನು ತೆಗೆದುಕೊಂಡರು. ಅವರು 93 ರನ್ ಗಳಿಸಿದ್ದಾಗ ಬೌಂಡರಿ ಬಾರಿಸಿದರು ಮತ್ತು 119 ಎಸೆತಗಳಲ್ಲಿ ಶತಕ ಪೂರ್ಣಗೊಳಿಸಿದರು.

ಕೊಹ್ಲಿ 121 ಎಸೆತಗಳಲ್ಲಿ ಅಜೇಯ 101 ರನ್ ಗಳಿಸಿದ್ದರಿಂದ ಭಾರತ 5 ವಿಕೆಟ್ ನಷ್ಟಕ್ಕೆ 326 ರನ್ ಗಳಿಸಿತ್ತು. ರವೀಂದ್ರ ಜಡೇಜಾ 5 ವಿಕೆಟ್ ಕಬಳಿಸುವ ಮೂಲಕ ದಕ್ಷಿಣ ಆಫ್ರಿಕಾ 83 ರನ್​ಗಳಿಗೆ ಆಲೌಟ್ ಆಯಿತು. ಈ ಪಂದ್ಯವನ್ನು ಭಾರತ 243 ರನ್ ಗಳಿಂದ ಗೆದ್ದುಕೊಂಡಿತು.

Continue Reading

ವಾಣಿಜ್ಯ

PAN Card Safety: ಪಾನ್ ಕಾರ್ಡ್ ದುರ್ಬಳಕೆಯಿಂದ ಪಾರಾಗುವುದು ಹೇಗೆ?

ಭಾರತದಲ್ಲಿ ಪಾನ್ ಕಾರ್ಡ್ ದುರ್ಬಳಕೆ ಹೆಚ್ಚಾಗುತ್ತಿದೆ. ಅದರಲ್ಲೂ ಹಿರಿಯ ನಾಗರಿಕರು, ದುರ್ಬಲರು ಈ ವಂಚನೆಗೆ ಬಲಿಯಾಗುತ್ತಿದ್ದಾರೆ. ವಂಚಕರು ಪಾನ್ (PAN Card Safety) ವಿವರಗಳನ್ನು ಹೇಗೆ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ, ವಂಚನೆಗಳನ್ನು ಹೇಗೆ ಗುರುತಿಸಬಹುದು ಮತ್ತು ಆರ್ಥಿಕ ಯೋಗಕ್ಷೇಮವನ್ನು ಹೇಗೆ ಕಾಪಾಡಿಕೊಳ್ಳಬೇಕು ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

PAN Card Safety
Koo

ಪಾನ್ ಕಾರ್ಡ್‌ಗಳ (PAN Card Safety) ದುರುಪಯೋಗ ಭಾರತದಲ್ಲಿ (india) ಹೆಚ್ಚಾಗುತ್ತಿದೆ. ವಿಶೇಷವಾಗಿ ಹಿರಿಯ ನಾಗರಿಕರು (senior citizens), ರೈತರು (farmers), ವಿದ್ಯಾರ್ಥಿಗಳು (students) ಇದಕ್ಕೆ ಒಳಗಾಗುತ್ತಿದ್ದಾರೆ. ಹೀಗಾಗಿ ನಾವು ಎಚ್ಚರಿಕೆಯಿಂದ ಇರಬೇಕಾದ ಅಗತ್ಯವಿದೆ. ಅದರಲ್ಲೂ ಪಾನ್ ಕಾರ್ಡ್ (pan card) ಬಳಕೆ, ಮಾಹಿತಿ ಹಂಚಿಕೆ ವಿಚಾರದಲ್ಲಿ ಸಾಕಷ್ಟು ಮುನ್ನೆಚ್ಚರಿಕೆಯನ್ನು ವಹಿಸಬೇಕಿದೆ.

ಪಾನ್ ಕಾರ್ಡ್ ಭಾರತದಲ್ಲಿನ ಹಣಕಾಸಿನ ವಹಿವಾಟುಗಳಿಗೆ ಪ್ರಮುಖ ದಾಖಲೆಯಾಗಿದೆ. ಹೀಗಾಗಿ ಇದನ್ನು ವಿವಿಧ ರೀತಿಯಲ್ಲಿ ದುರುಪಯೋಗಪಡಿಸಿಕೊಳ್ಳಬಹುದಾದ ಸಾಧ್ಯತೆಗಳಿವೆ. ಮುಂಬಯಿಯ ಹಿರಿಯ ನಾಗರಿಕರೊಬ್ಬರ ಪಾನ್ ವಿವರಗಳನ್ನು 1.3 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಮಾರಾಟವನ್ನು ನೋಂದಾಯಿಸಲು ಬಳಸಿದ್ದಾರೆ ಎನ್ನುವುದು ಆದಾಯ ತೆರಿಗೆ ಇಲಾಖೆಯಿಂದ ತನಿಖೆಗೆ ಬಂದ ಬಳಿಕ ಗೊತ್ತಾಗಿದೆ.

ವಂಚಕರು ಸಾಮಾನ್ಯವಾಗಿ ತಂತ್ರಜ್ಞಾನದ ಬಗ್ಗೆ ತಿಳಿದಿರುತ್ತಾರೆ. ಹೀಗಾಗಿ ಅವರು ಹೆಚ್ಚು ಜಾಗರೂಕರಾಗಿರದ ವ್ಯಕ್ತಿಗಳನ್ನು ಗುರಿಯಾಗಿಸುತ್ತಾರೆ. ಅವರು ವಿವಿಧ ವಿಧಾನಗಳ ಮೂಲಕ ಪಾನ್ ವಿವರಗಳನ್ನು ಪಡೆದು ಅನಂತರ ಅವುಗಳನ್ನು ಕಾನೂನುಬಾಹಿರವಾಗಿ ಬಳಸುತ್ತಾರೆ.

ವಂಚನೆ ಹೇಗೆ?

ನಕಲಿ ಆಸ್ತಿ ನೋಂದಣಿ

ಮುಂಬಯಿ ಪ್ರಕರಣದಂತೆ ವಂಚಕರು ನಕಲಿ ಆಸ್ತಿ ಮಾರಾಟವನ್ನು ನೋಂದಾಯಿಸಲು ಪಾನ್ ಕಾರ್ಡ್‌ಗಳನ್ನು ದುರುಪಯೋಗಪಡಿಸಿಕೊಳ್ಳಬಹುದು. ಇದು ಸಂತ್ರಸ್ತರಿಗೆ ತೆರಿಗೆ ನೊಟೀಸ್ ಜಾರಿಯಾಗಲು ಕಾರಣವಾಗಬಹುದು.

ಸಾಲ ಪಡೆಯಲು

ಕ್ರಿಮಿನಲ್‌ಗಳು ಫಿನ್‌ಟೆಕ್ ಅಪ್ಲಿಕೇಶನ್‌ಗಳ ಮೂಲಕ ಸಾಲಗಳನ್ನು ಪಡೆಯಲು ಪಾನ್ ವಿವರಗಳನ್ನು ಬಳಸಿಕೊಳ್ಳಬಹುದು. ಇದರಿಂದ ಸಂತ್ರಸ್ತರು ಅನಿರೀಕ್ಷಿತವಾಗಿ ಸಾಲಗಾರರಾಗಬಹುದು.


ಪಾನ್ ರಕ್ಷಿಸುವುದು ಹೇಗೆ?

ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (CBDT) ಪಾನ್ ಮಾಹಿತಿಯನ್ನು ಹಂಚಿಕೊಳ್ಳುವಾಗ ತೀವ್ರ ಎಚ್ಚರಿಕೆಯಿಂದ ಇರಲು ಸೂಚಿಸಿದೆ. ಪಾನ್ ವಿವರಗಳನ್ನು ಸರ್ಕಾರದಿಂದ ಅಧಿಕೃತವಾಗಿರುವ ಘಟಕಗಳೊಂದಿಗೆ ಮಾತ್ರ ಹಂಚಿಕೊಳ್ಳಿ. ಪಾನ್ ಅನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದರಿಂದ ದುರುಪಯೋಗದ ವಿರುದ್ಧ ಸ್ವಲ್ಪ ರಕ್ಷಣೆ ಪಡೆಯಬಹುದು.

ಪ್ಯಾನ್ ಕಾರ್ಡ್ ದುರುಪಯೋಗವನ್ನು ಪರಿಶೀಲಿಸುವುದು ಹೇಗೆ?

ಪಾನ್ ಕಾರ್ಡ್ ಹಗರಣವನ್ನು ಗುರುತಿಸಲು ತೆಗೆದುಕೊಳ್ಳಬೇಕಾದ ಕೆಲವು ಕ್ರಮಗಳಿವೆ.
ವಾರ್ಷಿಕ ಮಾಹಿತಿ ಪರಿಶೀಲಿಸಿ (AIS)

ಆದಾಯ ತೆರಿಗೆ ಇಲಾಖೆಯಿಂದ ನೀಡಲಾದ ಈ ಡಾಕ್ಯುಮೆಂಟ್, ಬ್ಯಾಂಕ್‌ಗಳು ಮತ್ತು ಇತರ ಸಂಸ್ಥೆಗಳು ವರದಿ ಮಾಡಿರುವ ನಿಮ್ಮ ಹಣಕಾಸಿನ ವಹಿವಾಟಿನ ವಿವರವಾದ ದಾಖಲೆಯನ್ನು ಒದಗಿಸುತ್ತದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆಗಾಗಿ ನಿಮ್ಮ ವಾರ್ಷಿಕ ಮಾಹಿತಿಯನ್ನು ನಿಯಮಿತವಾಗಿ ಪರಿಶೀಲಿಸಿ.

ಕ್ರೆಡಿಟ್ ಸ್ಕೋರ್ ಮೇಲ್ವಿಚಾರಣೆ ಮಾಡಿ

CIBIL, Equifax, Experian ಅಥವಾ CRIF ಹೈ ಮಾರ್ಕ್ ನಂತಹ ಏಜೆನ್ಸಿಗಳ ಮೂಲಕ ಕ್ರೆಡಿಟ್ ಸ್ಕೋರ್ ಅನ್ನು ಪರಿಶೀಲಿಸಿ. ನಿಮಗೆ ತಿಳಿಯದೆ ನಿಮ್ಮ ಹೆಸರಿನಲ್ಲಿ ತೆಗೆದುಕೊಂಡ ಯಾವುದೇ ಸಾಲಗಳನ್ನು ಗುರುತಿಸಿ.

ಇದನ್ನೂ ಓದಿ: Elon Musk: ಟೆಸ್ಲಾದಲ್ಲಿ ಎಲಾನ್ ಮಸ್ಕ್ ಒಬ್ಬರ ಸಂಬಳ ಟಾಟಾ ಮೋಟಾರ್ಸ್‌ ಒಟ್ಟು ಆದಾಯಕ್ಕಿಂತ ಹೆಚ್ಚು!

ಹಣಕಾಸು ವರದಿಗಳನ್ನು ಪರೀಕ್ಷಿಸಿ

ಪೇಟಿಎಂ ಅಥವಾ ಬ್ಯಾಂಕ್ ಬಜಾರ್‌ನಂತಹ ಫಿನ್‌ಟೆಕ್ ಪ್ಲಾಟ್‌ಫಾರ್ಮ್‌ಗಳು ಹಣಕಾಸು ವರದಿಗಳನ್ನು ಪಡೆಯಲು ಅನುಮತಿಸುತ್ತವೆ. ಈ ವರದಿಗಳನ್ನು ನಿಯಮಿತವಾಗಿ ಪರಿಶೀಲಿಸುವುದರಿಂದ ಯಾವುದೇ ಅನಧಿಕೃತ ವಹಿವಾಟುಗಳನ್ನು ಪತ್ತೆಹಚ್ಚಲು ಸಹಾಯವಾಗುವುದು.

ಜಾಗರೂಕರಾಗಿರಿ ಮತ್ತು ಕ್ರಮ ಕೈಗೊಳ್ಳಿ

ಪಾನ್ ಕಾರ್ಡ್ ಹಂಚಿಕೆ ವಿಚಾರದಲ್ಲಿ ಜಾಗರೂಕರಾಗಿರಿ. ಅನುಮಾನಾಸ್ಪದವಾಗಿ ಕಂಡು ಬಂದರೆ ಕೂಡಲೇ ಕ್ರಮ ಕೈಗೊಳ್ಳಿ. ಇದರಿಂದ ಅಪಾಯವನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು. ಪಾನ್ ಕಾರ್ಡ್ ವಂಚನೆಗೆ ಬಲಿಯಾದರೆ ತಕ್ಷಣ ಪೊಲೀಸ್ ಇಲಾಖೆಗೆ ದೂರು ನೀಡಿ. ಆರ್ಥಿಕ ಯೋಗಕ್ಷೇಮವನ್ನು ಕಾಪಾಡಿಕೊಳ್ಳಲು ಪಾನ್ ವಿವರಗಳನ್ನು ರಕ್ಷಿಸುವುದು ಬಹಳ ಮುಖ್ಯ.

Continue Reading

Latest

Amithab Bacchan :14ನೇ ವರ್ಷಕ್ಕೆ ಕಾಲಿಟ್ಟ ʼರಾವಣ್ʼ ಚಿತ್ರ; ಮಗನನ್ನು ಹೊಗಳಿ ಸೊಸೆಯನ್ನು ನಿರ್ಲಕ್ಷಿಸಿದ ಅಮಿತಾಭ್!

Amithab Bacchan: ನಟ ಅಮಿತಾಬ್ ಬಚ್ಚನ್ ಅವರು ತಮ್ಮ ಸೋಶಿಯಲ್ ಮೀಡಿಯಾ ಪೇಜ್ ನಲ್ಲಿ ತಮ್ಮ ಮಗ ಅಭಿಷೇಕ್ ಬಚ್ಚನ್ ಅಭಿನಯದ ‘ರಾವಣ್’ ಚಿತ್ರ 14ನೇ ವರ್ಷಕ್ಕೆ ಕಾಲಿಟ್ಟ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಅಭಿಷೇಕ್ ಅವರ ನಟನೆಯನ್ನು ಹೊಗಳಿದ್ದಾರೆ. ಆದರೆ ಅದರಲ್ಲಿ ನಟಿಸಿದ ತಮ್ಮ ಸೊಸೆ ಐಶ್ವರ್ಯಾ ರೈ ಬಚ್ಚನ್ ಅವರ ಬಗ್ಗೆ ಉಲ್ಲೇಖ ಮಾಡಲಿಲ್ಲ. ಇದರಿಂದ ಅಮಿತಾಬ್ ಬಚ್ಚನ್ ಅವರ ಕುಟುಂಬದಲ್ಲಿ ಸಮಸ್ಯೆ ಇರಬೇಕು. ಹಾಗಾಗಿ ಅವರು ತಮ್ಮ ಸೊಸೆಯ ಬಗ್ಗೆ ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ ಎಂಬುದಾಗಿ ಜನರು ಮಾತನಾಡಿಕೊಳ್ಳುತ್ತಿದ್ದಾರೆ.

VISTARANEWS.COM


on

Amithab Bacchan
Koo

ಮುಂಬೈ: ಬಾಲಿವುಡ್‌ ಖ್ಯಾತ ನಟ ಅಮಿತಾಭ್‌ ಬಚ್ಚನ್ (Amithab Bacchan) ತಮ್ಮ ನಟನೆಯ ಮೂಲಕ ಎಲ್ಲರ ಮನ ಸೆಳೆದವರು. ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು ನೀಡುವ ಮೂಲಕ ಜನಪ್ರಸಿದ್ಧರಾಗಿದ್ದಾರೆ. ಇನ್ನು ಬಿಗ್‌ ಬಿ ಕುಟುಂಬವು ಕೂಡ ಸಿನಿಮಾ ರಂಗದಲ್ಲಿ ಹೆಸರು ಮಾಡಿದೆ. ಮಗ ಅಭಿಷೇಕ್ ಬಚ್ಚನ್, ಪತ್ನಿ ಜಯಾ ಬಚ್ಚನ್, ಸೊಸೆ ಐಶ್ವರ್ಯಾ ರೈ ಬಚ್ಚನ್ ಅವರು ಕೂಡ ಸಿನಿಮಾ ರಂಗದಲ್ಲಿ ಮಿಂಚಿದವರೇ. ಆದರೆ ಇದೀಗ ನಟ ಅಮಿತಾಭ್ ಬಚ್ಚನ್ ಅವರನ್ನು ಜನರು ಸೋಶಿಯಲ್ ಮೀಡಿಯಾದಲ್ಲಿ ಹಿಗ್ಗಾಮುಗ್ಗಾ ಟ್ರೋಲ್ ಮಾಡಿದ್ದಾರೆ.

ಇತ್ತೀಚೆಗೆ ನಟ ಅಮಿತಾಭ್ ಬಚ್ಚನ್ ಅವರು ತಮ್ಮ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ತಮ್ಮ ಮಗ ಅಭಿಷೇಕ್ ಬಚ್ಚನ್ ಅಭಿನಯದ ‘ರಾವಣ್’ ಚಿತ್ರ 14ನೇ ವರ್ಷಕ್ಕೆ ಕಾಲಿಟ್ಟ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಅಭಿಷೇಕ್ ಅವರ ನಟನೆಯನ್ನು ಹೊಗಳಿದ್ದಾರೆ. ಆದರೆ ಅದರಲ್ಲಿ ನಟಿಸಿದ ತಮ್ಮ ಸೊಸೆ ಐಶ್ವರ್ಯಾ ರೈ ಬಚ್ಚನ್ ಅವರ ಬಗ್ಗೆ ಎಲ್ಲೂ ಉಲ್ಲೇಖ ಮಾಡಲಿಲ್ಲ.

ತಮ್ಮ ಸೊಸೆ ಐಶ್ವರ್ಯಾ ರೈ ಬಚ್ಚನ್ ಅವರನ್ನು ಉಲ್ಲೇಖಿಸದೆ ನಿರ್ಲಕ್ಷ್ಯ ಮಾಡಿದ್ದಕ್ಕೆ ನೆಟ್ಟಿಗರು ಅಮಿತಾಭ್ ಬಚ್ಚನ್ ಅವರನ್ನು ಟ್ರೋಲ್ ಮಾಡಿದ್ದಾರೆ. ಮಣಿರತ್ನಂ ಅವರ ನಿರ್ದೇಶನದ ‌ʼರಾವಣ್ʼ ಚಿತ್ರ ಬಿಡುಗಡೆಯಾಗಿ ಜೂನ್ 18, 2024ಕ್ಕೆ 14 ವರ್ಷ ಪೂರೈಸಿದೆ. ಅಭಿಷೇಕ್ ಬಚ್ಚನ್ ಅಭಿಮಾನಿ ಸಂಘವೊಂದು ಈ ದಿನವನ್ನು ಆಚರಿಸಲು ಪೋಸ್ಟ್ ಅನ್ನು ಹಂಚಿಕೊಂಡಿದೆ. ಆಗ ಅಮಿತಾಭ್ ಬಚ್ಚನ್ ಅವರು ಚಿತ್ರವನ್ನು ಪೋಸ್ಟ್ ಮಾಡಿ, “ಅಭಿಷೇಕ್ ಅಭಿನಯ ಮರೆಯಲಾಗದಂತಹದು. ನಿಮ್ಮ ಇತರ ಚಿತ್ರಗಳಿಗಿಂತ ಈ ಚಿತ್ರ ತುಂಬಾ ಭಿನ್ನವಾಗಿದೆ. ಮತ್ತು ಇದು ಕಲಾವಿದನಿಗೆ ನಿಜವಾದ ಮೌಲ್ಯವನ್ನು ನೀಡುತ್ತದೆ” ಎಂದು‌ ಶ್ಲಾಘಿಸಿ ಬರೆದಿದ್ದಾರೆ.

ಆದರೆ ಈ ಚಿತ್ರದಲ್ಲಿ ನಟಿ ಐಶ್ವರ್ಯಾ ರೈ ಬಚ್ಚನ್ ಅಭಿಷೇಕ್ ಜೊತೆ ಮುಖ್ಯ ಪಾತ್ರದಲ್ಲಿ ನಟಿಸಿದ್ದರು ಮತ್ತು ಅವರ ಅಭಿನಯವನ್ನು ಅಭಿಮಾನಿಗಳು ಹೊಗಳಿದ್ದರು. ಆದರೆ ಈ ಪೋಸ್ಟ್ ನಲ್ಲಿ ಅಮಿತಾಭ್‌ ಬಚ್ಚನ್ ಅವರು ಎಲ್ಲೂ ತಮ್ಮ ಸೊಸೆ ಐಶ್ವರ್ಯಾ ರೈ ಬಚ್ಚನ್ ಬಗ್ಗೆ ಉಲ್ಲೇಖಿಸಿಲ್ಲ. ಹೀಗಾಗಿ ಈ ಬಗ್ಗೆ ನೆಟ್ಟಿಗರು ಅಮಿತಾಭ್ ಅವರನ್ನು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Working Hours: ಅತಿ ಹೆಚ್ಚು ಕೆಲಸದ ಸಮಯ ಹೊಂದಿರುವ ದೇಶಗಳಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ?

Amithab Bacchan

ಈ ಹಿಂದೆ ಕೂಡ ಕಜಾ ರಾರೇ ಹಾಡು 19ನೇ ವರ್ಷಕ್ಕೆ ಕಾಲಿಟ್ಟ ಸಂದರ್ಭದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ ಅಮಿತಾಭ್ ಅವರು ಅಭಿಷೇಕ್ ಅವರನ್ನು ಹೊಗಳಿ ತಮ್ಮ ಸೊಸೆ ನಟಿ ಐಶ್ವರ್ಯಾ ರೈ ಬಚ್ಚನ್ ಬಗ್ಗೆ ಉಲ್ಲೇಖಿಸಿರಲಿಲ್ಲ. ಕಜಾ ರಾರೇ ಹಾಡಿನಲ್ಲಿ ಅಮಿತಾಭ್ ಬಚ್ಚನ್, ಅಭಿಷೇಕ್ ಬಚ್ಚನ್ ಹಾಗೂ ನಟಿ ಐಶ್ವರ್ಯಾ ರೈ ಬಚ್ಚನ್ ಕಾಣಿಸಿಕೊಂಡಿದ್ದರು.
ಇದರಿಂದ ಅಮಿತಾಭ್ ಬಚ್ಚನ್ ಅವರ ಕುಟುಂಬದಲ್ಲಿ ಸಮಸ್ಯೆ ಇರಬೇಕು. ಹಾಗಾಗಿ ಅವರು ತಮ್ಮ ಸೊಸೆಯ ಬಗ್ಗೆ ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ ಎಂಬುದಾಗಿ ಜನರು ಮಾತನಾಡಿಕೊಳ್ಳುತ್ತಿದ್ದಾರೆ.

Continue Reading
Advertisement
CM Siddaramaiah
ಪ್ರಮುಖ ಸುದ್ದಿ49 seconds ago

CM Siddaramaiah: ಕರ್ನಾಟಕದಲ್ಲಿ ವಾಸಿಸುತ್ತಿರುವ ಪರ ಭಾಷಿಕರು ಕನ್ನಡ ಕಲಿಯಲೇಬೇಕು: ಸಿದ್ದರಾಮಯ್ಯ

Tumkur DC Shubha Kalyan inaugurated the Janaspandana programme in Koratagere
ತುಮಕೂರು12 mins ago

Koratagere News: ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರಕ್ಕೆ ಜನಸ್ಪಂದನ ಕಾರ್ಯಕ್ರಮ; ಡಿಸಿ ಶುಭ‌ ಕಲ್ಯಾಣ್

Power cut There will be power outage in various parts of Bengaluru on June 22
ಕರ್ನಾಟಕ13 mins ago

Power Cut: ಬೆಂಗಳೂರಿನ ವಿವಿಧ ಕಡೆ ಜೂ. 22ರಂದು ವಿದ್ಯುತ್‌ ವ್ಯತ್ಯಯ

Arvind Kejriwal
ದೇಶ14 mins ago

Arvind Kejriwal: ಅರವಿಂದ್‌ ಕೇಜ್ರಿವಾಲ್‌ಗೆ ಬಿಗ್‌ ರಿಲೀಫ್;‌ ಕೊನೆಗೂ ಸಿಕ್ಕಿತು ಜಾಮೀನು

Vijayanagara DC MS Diwakar meeting with officials of various departments
ವಿಜಯನಗರ16 mins ago

Vijayanagara News: ಜೂ. 21ರಂದು ಮುಖ್ಯಮಂತ್ರಿಗಳಿಂದ ಕೆಡಿಪಿ ಸಭೆ; ಡಿಸಿ ಎಂ.ಎಸ್.ದಿವಾಕರ್‌

Action will be taken to ensure that the Anganwadi workers do not suffer in any way says Minister Lakshmi Hebbalkar
ಬೆಂಗಳೂರು21 mins ago

Lakshmi Hebbalkar: ಲಕ್ಷ್ಮೀ ಹೆಬ್ಬಾಳಕರ್ ಭರವಸೆ; ಅಂಗನವಾಡಿ ನೌಕರರ ಮುಷ್ಕರ ವಾಪಸ್‌

Mecca Heatwave Death
ಪ್ರಮುಖ ಸುದ್ದಿ46 mins ago

Mecca Heatwave Death : ಮೆಕ್ಕಾದಲ್ಲಿ ನಿಧನ ಹೊಂದಿದ ಹಜ್​ ಯಾತ್ರಿಗಳಿಗೆ ಅಲ್ಲೇ ಸಂಸ್ಕಾರ; ಹಜ್​ ಕಮಿಟಿ ಮಾಹಿತಿ

CM Siddaramaiah
ಕರ್ನಾಟಕ1 hour ago

CM Siddaramaiah: ಪೆಟ್ರೋಲ್‌ ಬೆಲೆ ಏರಿಸಿದ್ದು ಗ್ಯಾರಂಟಿಗೋ? ಅಭಿವೃದ್ಧಿಗೋ? ಸಿದ್ದರಾಮಯ್ಯ ಹೀಗಂತಾರೆ!

Virat kohli
ಪ್ರಮುಖ ಸುದ್ದಿ1 hour ago

Virat kohli : ಕೊಹ್ಲಿಯನ್ನು ಮತ್ತೆ ಸ್ವಾರ್ಥಿ ಎಂದು ದೂರಿದ ಪಾಕಿಸ್ತಾನದ ಮೊಹಮ್ಮದ್ ಹಫೀಜ್​

Darshan Arrested
ಕರ್ನಾಟಕ2 hours ago

Darshan Arrested: ದರ್ಶನ್‌ ಸೇರಿ ನಾಲ್ವರನ್ನೇ ಪೊಲೀಸರು ಕಸ್ಟಡಿಗೆ ಪಡೆದಿದ್ದೇಕೆ? ಯಾವೆಲ್ಲ ತನಿಖೆ ಬಾಕಿ ಇದೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ2 hours ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು3 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ4 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ4 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ5 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ6 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

ಟ್ರೆಂಡಿಂಗ್‌