ವೈದ್ಯ ದರ್ಪಣ ಅಂಕಣ | ರೊಬೊಟ್ ಇಲಿಗಳು, ಕೃತಕ ಕಣ್ಣು, ಸಿಂಗ್ಯುಲಾರಿಟಿ ಇತ್ಯಾದಿ... - Vistara News

ಅಂಕಣ

ವೈದ್ಯ ದರ್ಪಣ ಅಂಕಣ | ರೊಬೊಟ್ ಇಲಿಗಳು, ಕೃತಕ ಕಣ್ಣು, ಸಿಂಗ್ಯುಲಾರಿಟಿ ಇತ್ಯಾದಿ…

ಮೆದುಳಿಗಿಂತ ದೊಡ್ಡ ಸೂಪರ್ ಕಂಪ್ಯೂಟರ್ ಇಲ್ಲ ಎಂದು ಈಗಲೂ ಭಾವಿಸಲಾಗಿದೆ. ಮಾನವ ಮೆದುಳೆಂದರೆ ಕೇವಲ ತಾರ್ಕಿಕ ಆಲೋಚನೆಗಳು ಮಾತ್ರವಲ್ಲ; ಅದರಲ್ಲಿ ಭಾವನಾತ್ಮಕ ಸಂಗತಿಗಳೂ ಇವೆ. ಮೆದುಳನ್ನು ಯಂತ್ರಗಳು ಮೀರುವ ಸಾಧ್ಯತೆ ನಮ್ಮ ಜೀವಿತಕಾಲದಲ್ಲೇ ನಿಜವಾಗಲಿದೆಯೇ?

VISTARANEWS.COM


on

robo mouse
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
kiran

ರಾಬರ್ಟ್ ಫ್ರಾಸ್ಟ್ ಕವಿಯ The Road Not Taken ಎನ್ನುವ ಪ್ರಸಿದ್ಧ ಕವಿತೆಯೊಂದಿದೆ. ಕಾಡಿನ ಹಾದಿಯಲ್ಲಿ ನಡೆಯುವಾಗ ಕವಿಗೆ ಎರಡು ಪಥಗಳು ಎದುರಾದವು. ಒಂದರಲ್ಲಿ ಈ ಮುನ್ನ ಸಾಕಷ್ಟು ಜನರು ನಡೆದಂತಿತ್ತು. ಮತ್ತೊಂದರಲ್ಲಿ ಹೆಚ್ಚು ಮಂದಿ ಕ್ರಮಿಸಿದಂತಿರಲಿಲ್ಲ. ಈ ಎರಡು ದಾರಿಗಳ ಪಯಣದ ನಡುವಿನ ಜಿಜ್ಞಾಸೆಯ ಈ ಕವಿತೆ, ಜೀವನದಲ್ಲಿ ಎರಡು ಆಯ್ಕೆಗಳ ನಡುವೆ ಒಂದನ್ನು ಆಯ್ದುಕೊಂಡದ್ದರ ಅನ್ಯಾರ್ಥದ ಸಂಕೇತವಾಗಿ ಬಳಕೆಯಾಗುತ್ತದೆ. ಆಯ್ಕೆಯ ನಿರ್ಧಾರದಲ್ಲಿ ಅನೇಕ ಸಂಗತಿಗಳು ಪ್ರಭಾವಿಸುತ್ತವೆ. ಭೂತಕಾಲದ ನೆನೆಗುದಿಗಳು, ಆ ಹಾದಿ ಕ್ರಮಿಸಿದ ಮತ್ತೊಬ್ಬರ ಅನುಭವಗಳು, ಭವಿಷ್ಯದ ಆಲೋಚನೆಗಳು, ಆಯಾ ಸಂದರ್ಭದ ಒತ್ತಡಗಳು ಹೀಗೆ ಹಲವಾರು ಪರಿಮಾಣಗಳನ್ನು ಅಳೆದು, ತೂಗಿ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಆಯ್ಕೆಯ ನಂತರದ ಪರಿಣಾಮಗಳು ನಮ್ಮದೇ ನಿರ್ಧಾರದ ಫಲಶ್ರುತಿಗಳು. ಈ ಇಡೀ ಆಯ್ಕೆ ಪ್ರಕ್ರಿಯೆ ನಡೆಯುವುದು ನಮ್ಮ ಮೆದುಳಿನಲ್ಲಿ. ಇದರಲ್ಲಿ ಪ್ರಮುಖ ಪಾತ್ರ ವಹಿಸುವುದು ಆಯ್ಕೆ ಮಾಡುವಲ್ಲಿ ನಮಗಿರುವ ಮುಕ್ತ ಸ್ವಾತಂತ್ರ್ಯ. ಯಾರೂ ನಮ್ಮ ಕತ್ತು ಹಿಡಿದು “ಹೀಗೆಯೇ ನಡೆಯಬೇಕು” ಎಂದು ಒತ್ತಾಯ ಮಾಡುವುದಿಲ್ಲ. ಆಲೋಚನೆ ನಮ್ಮದು; ನಿರ್ಧಾರ ನಮ್ಮದು; ನಿರ್ಧಾರದ ನಂತರದ ಪರಿಣಾಮಗಳೂ ನಮ್ಮವು.

ರೊಬೊಟ್ ಯಂತ್ರಗಳ ಬಗ್ಗೆ ತಿಳಿದಿರುತ್ತೇವೆ. 1980ರ ದಶಕದಲ್ಲಿ ಬೆಂಗಳೂರಿನಲ್ಲಿ ದೂರದರ್ಶನ ಪ್ರಸಾರ ಆರಂಭವಾದ ಹೊಸದರಲ್ಲಿ ಜಪಾನಿನ “ಜಾನಿ ಸೊಕ್ಕೊ ಅಂಡ್ ಹಿಸ್ ಫ್ಲೈಯಿಂಗ್ ರೊಬೊಟ್” ಎನ್ನುವ ಧಾರಾವಾಹಿ ಮಕ್ಕಳನ್ನು ಬಹಳ ರಂಜಿಸುತ್ತಿತ್ತು. ಮಾನವಾಕೃತಿಯ ಬೃಹತ್ ರೊಬೊಟ್ ಮತ್ತು ಅದನ್ನು ನಿಯಂತ್ರಿಸುವ ಬಾಲಕನೊಬ್ಬನ ಕತೆ. ರೊಬೊಟ್ ಬಗ್ಗೆ ಚಿತ್ರವಿಚಿತ್ರ ಕಲ್ಪನೆಗಳನ್ನು ಮೂಡಿಸಿದ ಕಾಲವದು. ಆನಂತರ ಮಾನವನಂತೆಯೇ ಕಾಣುವ ರೊಬೊಟ್ ಯಂತ್ರಗಳ ಕತೆಯನ್ನು ಹೊಂದಿದ್ದ ಟರ್ಮಿನೇಟರ್ ಚಲನಚಿತ್ರ ಸರಣಿ ಬಂದಿತು. ಭವಿಷ್ಯದಲ್ಲಿ ನಮ್ಮ ಜೀವನ ಮತ್ತು ಯಂತ್ರಗಳ ಸಾಂಗತ್ಯ ಯಾವ ರೀತಿಯಲ್ಲಿ ಹಾಸುಹೊಕ್ಕಾಗಬಹುದು ಎಂದು ಜನರಿಗೆ ಅಂದಾಜು ನೀಡುವ ರೀತಿಯಲ್ಲಿ ಆ ಸರಣಿ ಬಹಳ ಜನಪ್ರಿಯವಾಯಿತು. ಅದ್ಭುತ-ರಮ್ಯ ಪರಿಕಲ್ಪನೆಗಳನ್ನು ಲೇಖಕರು ಇಂದಿಗೂ ಯಂತ್ರ-ಮಾನವರ ಸುತ್ತಲೂ ಹೆಣೆಯತ್ತಲೇ ಬಂದಿದ್ದಾರೆ. ಇದು ಸಾಧ್ಯವಾಗಬಲ್ಲ ವಾಸ್ತವ ಹೇಗಿದೆ? ಸಾಧ್ಯವಾದರೂ, ಯಾವುದೇ ಎರಡು ಆಯ್ಕೆಗಳ ನಡುವೆ ಮಾಡಬೇಕಾದ ನಿರ್ಧಾರವನ್ನು ಮಿದುಳಿಲ್ಲದ ಯಂತ್ರಗಳು ಹೇಗೆ ಮಾಡಬಲ್ಲವು?

2002ನೆಯ ಇಸವಿಯಲ್ಲಿ ಒಂದು ವೈಜ್ಞಾನಿಕ ಸಂಚಲನ ನಡೆಯಿತು. ಅಮೆರಿಕೆಯ ನ್ಯೂಯಾರ್ಕ್ ವಿಶ್ವವಿದ್ಯಾಲಯದ ಸಂಶೋಧಕ ಡಾ. ಸಂಜೀವ್ ತಳವಾರ್ ಅವರು ಇಲಿಗಳ ಮೆದುಳಿನ ಮೇಲೆ ಒಂದು ಕುತೂಹಲಕಾರಿ ಪ್ರಯೋಗವನ್ನು ಮಾಡಿದರು. ವಿದ್ಯುತ್ ತರಂಗಗಳ ಮೂಲಕ ವಿದ್ಯುದಾವೇಶ ನೀಡಬಲ್ಲ ಮೂರು ಪುಟ್ಟ ಎಲೆಕ್ಟ್ರೋಡ್‌ಗಳನ್ನು ಇಲಿಗಳ ಮೆದುಳಿನ ನಿರ್ದಿಷ್ಟ ಭಾಗಗಳಿಗೆ ಜೋಡಿಸಿದ್ದರು. ಅವುಗಳನ್ನು ತಂತಿಗಳ ಮೂಲಕ ಒಂದು ಬ್ಯಾಟರಿಯುಕ್ತ ನಿಯಂತ್ರಣ ಘಟಕಕ್ಕೆ ಬೆಸೆದು, ಆ ಘಟಕವನ್ನು ಇಲಿಯ ಬೆನ್ನಿಗೆ ಜೋಡಿಸಿದ್ದರು. ಘಟಕದ ಬ್ಯಾಟರಿ ನೀಡುವ ವಿದ್ಯುದಾವೇಶವನ್ನು ನಿಯಂತ್ರಿಸಬಲ್ಲ ರಿಮೋಟ್ ಸಂಪರ್ಕವಿತ್ತು. ಸುಮಾರು 500 ಮೀಟರ್ ದೂರದಿಂದಲೂ ಅವುಗಳನ್ನು ನಿಯಂತ್ರಿಸಬಹುದಿತ್ತು. ರಿಮೋಟ್ ಗುಂಡಿಗಳನ್ನು ಒತ್ತಿ ಇಲಿಗಳ ಮೆದುಳಿನ ನಿರ್ದಿಷ್ಟ ಭಾಗಗಳನ್ನು ಪ್ರಚೋದಿಸಬಲ್ಲ ವ್ಯವಸ್ಥೆಯನ್ನು ಮಾಡಿದ್ದರು. ಮೂರು ಎಲೆಕ್ಟ್ರೋಡ್‌ಗಳ ಪೈಕಿ ಒಂದು ಬಲಭಾಗದ ಮೀಸೆಯ ಸ್ಥಾನವನ್ನು ಪ್ರಚೋದಿಸುತ್ತಿತ್ತು. ಮತ್ತೊಂದು ಎಡಭಾಗದ ಮೀಸೆಯ ಸ್ಥಾನವನ್ನು ನಿರ್ದೇಶಿಸುತ್ತಿತ್ತು. ಮೂರನೆಯದು ಮೆದುಳಿನಲ್ಲಿ ಸಂತಸದ ಭಾವವನ್ನು ಪ್ರಚೋದಿಸುವ ಎಡೆಯಲ್ಲಿತ್ತು. ಬಲಭಾಗದ ಎಲೆಕ್ಟ್ರೋಡ್ ಪ್ರಚೋದಿಸಿದಾಗ ಇಲಿಗಳು ಬಲಗಡೆಗೆ ತಿರುಗಿದರೆ ಕೂಡಲೇ ಸಂತಸ ನೀಡುವ ಗುಂಡಿಯನ್ನು ಒತ್ತುತ್ತಿದ್ದರು. ಇಲಿಗಳು ಹಾಗೆ ಮಾಡದೇ ಎಡಗಡೆಗೆ ತಿರುಗಿದರೆ ಸಂತಸದ ಗುಂಡಿಯನ್ನು ಒತ್ತುತ್ತಿರಲಿಲ್ಲ. ಅದೇ ರೀತಿಯಲ್ಲಿ ಎಡಭಾಗದ ಎಲೆಕ್ಟ್ರೋಡನ್ನೂ ನಿಯಂತ್ರಿಸುತ್ತಿದ್ದರು. ಅಂದರೆ, ಸಂಶೋಧಕರು ಯಾವ ಭಾಗದ ಗುಂಡಿ ಒತ್ತಿದಾಗ ಇಲಿಗಳು ಅದೇ ದಿಕ್ಕಿಗೆ ತಿರುಗಿದರೆ ಮಾತ್ರ ಅದರ ಮೆದುಳಿನಲ್ಲಿ ಸಂತಸ ಉಂಟಾಗುತ್ತಿತ್ತು. ವಿರುದ್ಧ ದಿಕ್ಕಿನಲ್ಲಿ ತಿರುಗಿದರೆ ಏನೂ ಆಗುತ್ತಿರಲಿಲ್ಲ. ಬಹಳ ಬೇಗ ಇಲಿಗಳು ಸಂತಸ ಪಡೆಯುವ ವಿಧಾನವನ್ನು ಗ್ರಹಿಸಿದವು. ಯಾವೆಡೆಗೆ ಪ್ರಚೋದನೆ ಬರುತ್ತದೋ, ಅದರ ದಿಕ್ಕಿಗೆ ತಿರುಗುವುದನ್ನು ಚಾಚೂ ತಪ್ಪದೆ ಪಾಲಿಸಿದವು. “ಆಜ್ಞಾನುವರ್ತಿಯಾದ ಇಲಿಗಳು ತಮ್ಮ ಮಿದುಳಿನಲ್ಲಿ ಉಂಟಾಗುತ್ತಿದ್ದ ಸಂತಸದ ಭಾವವನ್ನು ಅನುಭವಿಸುತ್ತಾ ನಿರ್ವಾಣ ಸ್ಥಿತಿ ತಲುಪುತ್ತಿದ್ದವು” ಎಂದು ಡಾ. ಸಂಜೀವ್ ತಳವಾರ್ ಅವರ ಅಭಿಪ್ರಾಯ.

robo mouse

ಮೆದುಳಿನ ವರ್ತನೆಯನ್ನು, ನಿರ್ಧಾರ ತೆಗೆದುಕೊಳ್ಳುವ ಕ್ಷಮತೆಯನ್ನು ಬಾಹ್ಯ ಶಕ್ತಿಯೊಂದರ ಮೂಲಕ ನಿಯಂತ್ರಿಸಬಹುದು ಎಂದಾದರೆ, ನಮ್ಮ ಆಯ್ಕೆಯ ಸ್ವಾತಂತ್ರ್ಯವನ್ನು ಮತ್ತೊಬ್ಬರು ಕಸಿದುಕೊಂಡರು ಎಂದೇ ಅಲ್ಲವೇ? ಡಾ. ತಳವಾರರ ಈ ಪ್ರಯೋಗಕ್ಕೆ ಕೆಲವು ನಿಟ್ಟಿನಿಂದ ಖಂಡನೆ ಬಂದರೂ, ಇದರ ಒಟ್ಟಾರೆ ಮಹತ್ವವನ್ನು ವಿಜ್ಞಾನ ಪ್ರಪಂಚ ಗ್ರಹಿಸಿತು. ಭೂಕಂಪವೇ ಮೊದಲಾದ ಅವಘಡಗಳ ವೇಳೆ ಬೃಹತ್ ಕಟ್ಟಡಗಳು ಕುಸಿದು ನೆಲಸಮವಾದಾಗ ಅವುಗಳ ಅಡಿಯಲ್ಲಿ ಹಲವಾರು ಮಂದಿ ಸಿಲುಕಿರುತ್ತಾರೆ. ಅವರನ್ನು ಪತ್ತೆ ಮಾಡುವುದು ಹೇಗೆ? ದೊಡ್ಡ ಯಂತ್ರಗಳ ನೆರವಿನಿಂದ ಅವಶೇಷಗಳನ್ನು ತೆರವು ಮಾಡಿದ ಹೊರತು ಇದು ತಿಳಿಯುವುದಿಲ್ಲ. ಅವಶೇಷಗಳ ಯಾವ ಭಾಗದಲ್ಲಿ ಜನರು ಸಿಲುಕಿದ್ದಾರೆ ಎಂದು ತಿಳಿದರೆ ಆಗ ಆ ಸ್ಥಾನವನ್ನು ಮೊದಲ ಆದ್ಯತೆಯಾಗಿ ತೆರವು ಮಾಡಬಹುದು. ಇಂತಹ ಆಯಕಟ್ಟಿನ ಸ್ಥಳಗಳನ್ನು ರೊಬೊಟ್ ಇಲಿಗಳು ತಲುಪಬಲ್ಲವು. ಇಂತಹ ಇಲಿಗಳ ಹಣೆಗೆ ಸಣ್ಣ ಟಾರ್ಚ್ ಮತ್ತು ಕ್ಯಾಮೆರಾ ಅಳವಡಿಸಿದರೆ, ನಮಗೆ ಬೇಕಾದ ದಿಕ್ಕುಗಳಲ್ಲಿ ಅವುಗಳನ್ನು ಸಂಚರಿಸುವಂತೆ ಮಾಡುತ್ತಾ, ಯಾವುದೇ ಕ್ಷಣದಲ್ಲಿ ಅವುಗಳ ನಿರ್ದಿಷ್ಟ ಸ್ಥಾನವನ್ನು ಗ್ರಹಿಸಿ, ಅವಶೇಷಗಳ ಯಾವ ಭಾಗದಲ್ಲಿ ಏನಿದೆ ಎಂಬುದನ್ನು ಕೆಲವೇ ನಿಮಿಷಗಳಲ್ಲಿ ತಿಳಿಯಬಹುದು. ಇದರಿಂದ ಹಲವಾರು ಪ್ರಾಣಗಳನ್ನು ಉಳಿಸುವಂತಾಗುತ್ತದೆ. ಇದೊಂದು ಉದಾಹರಣೆ ಮಾತ್ರ. ಇಂತಹ ನೂರಾರು ಸಾಧ್ಯತೆಗಳಿವೆ.

ಡಾ. ತಳವಾರರ ಈ ಪ್ರಯೋಗ ಮಿದುಳು ಮತ್ತು ಯಂತ್ರಗಳನ್ನು ಒಂದೆಡೆಗೆ ಸಂಯೋಜಿಸುವ ಕುತೂಹಲಕಾರಿ ವಿನ್ಯಾಸಗಳಿಗೆ ನಾಂದಿಯಾಯಿತು. ಮಿದುಳಿನ ಇಂಪ್ಲ್ಯಾಂಟ್ (implant) ಪ್ರಯೋಗಗಳು ಮೊದಲಾದವು. ಒಂದೆಡೆ ಪ್ರಾಣಿ ಹಕ್ಕುಗಳ ಪ್ರವರ್ತಕರು ತಮ್ಮ ವಿರೋಧವನ್ನು ಕೂಗಾಡುತ್ತಿದ್ದರೆ, ಮತ್ತೊಂದೆಡೆ ವಿಜ್ಞಾನಿಗಳು ಈಗಾಗಲೇ ಅಸ್ತಿತ್ವದಲ್ಲಿದ್ದ ಸಂಶೋಧನಾ ನಿಯಮಗಳ ರೀತ್ಯಾ ಪ್ರಯೋಗಗಳನ್ನು ಆರಂಭಿಸಿದರು. ಮಿದುಳಿನ ನರಮಂಡಲಕ್ಕೆ ಎಲೆಕ್ಟ್ರಾನಿಕ್ ಚಿಪ್ ಕೂರಿಸುವುದು ಸುಲಭದ ಮಾತಲ್ಲ. ತೀರಾ ಸಂಕೀರ್ಣ ಅಂಗವಾದ ಮೆದುಳಿನಲ್ಲಿ ಚಿಪ್ ಕೂರಿಸುವ ಸ್ಥಾನದಲ್ಲಿ ಒಂದು ಮಿಲಿಮೀಟರ್ ವ್ಯತ್ಯಾಸವಾದರೂ ಪರಿಣಾಮಗಳು ಬೇರೆಯೇ ಆಗುತ್ತವೆ. ಹೀಗಾಗಿ, ಇಂತಹ ಪ್ರಯೋಗಗಳಿಗೆ ಮುನ್ನ ಅತ್ಯಂತ ಸೂಕ್ಷ್ಮ ಗಾತ್ರದ ಚಿಪ್ ಅಭಿವೃದ್ಧಿಯಾಗಬೇಕು. ಅಲ್ಲದೇ, ಒಮ್ಮೆ ಮಿದುಳಿನಲ್ಲಿ ಚಿಪ್ ಕೂರಿಸಿದ ಕೂಡಲೇ ಮೆದುಳಿಗೆ “ಇದ್ಯಾವುದೋ ಬಾಹ್ಯ ವಸ್ತು” ಎಂದು ತಿಳಿದುಹೋಗುತ್ತದೆ. ಕೂಡಲೇ ಅದು ಬಾಹ್ಯ ವಸ್ತುವನ್ನು ನರಗಳಿಂದ ಪ್ರತ್ಯೇಕಿಸುವ ಗ್ಲಯಲ್ ಕೋಶಗಳನ್ನು ಒಗ್ಗೂಡಿಸಿ, ಎರಡರ ನಡುವೆ ಸಂಪರ್ಕವನ್ನು ಇಲ್ಲದಂತಾಗಿಸುತ್ತದೆ. ಈ ಸವಾಲನ್ನೂ ವಿಜ್ಞಾನಿಗಳು ಮೀರಬೇಕು. ಜರ್ಮನಿಯ ಸಂಶೋಧಕರು ಒಂದು ಹೆಜ್ಜೆ ಮುಂದೆ ಹೋಗಿ ಚಿಪ್‌ಗಳನ್ನೇ ತಟ್ಟೆಗಳಂತೆ ಬಳಸಿ, ಅವುಗಳ ಮೇಲೆ ನರಕೋಶಗಳನ್ನು ಬೆಳೆಸುವ ಸಾಹಸ ಮಾಡಿ, ಬಹುಮಟ್ಟಿಗೆ ಸಫಲರಾದರು. ಇಂತಹ ನರಕೋಶಗಳನ್ನು ಮೆದುಳಿಗೆ ಜೋಡಿಸಿದಾಗ, ಅವುಗಳ ಒಂದು ತುದಿಯಲ್ಲಿ ಚಿಪ್ ಇದ್ದರೆ, ಮತ್ತೊಂದು ತುದಿ ಮೆದುಳಿನ ಸಹಜ ನರಕೋಶಗಳ ಸಂಪರ್ಕದಲ್ಲಿರುತ್ತದೆ. ಪ್ರಕೃತಿ ಒಡ್ಡಿದ ಒಂದು ಮಿತಿಯನ್ನು ಈ ಮೂಲಕ ಮೀರಿದಂತಾಯಿತು.

ಇಡೀ ದೇಹದ ಚಲನೆಯನ್ನು ನಿಯಂತ್ರಿಸುವುದು ಮಿದುಳು. ಪಾರ್ಶ್ವವಾಯುವಿನಂತಹ ಸಂದರ್ಭಗಳಲ್ಲಿ ಮೆದುಳಿನ ಒಂದು ಭಾಗ ನಿಷ್ಕ್ರಿಯವಾಗಿ, ಆ ಭಾಗ ನಿಯಂತ್ರಿಸುವ ದೇಹದ ಚಲನೆ ಇಲ್ಲವಾಗಿ, ಮಾಂಸಖಂಡಗಳು ಸೆಟೆದುಕೊಳ್ಳುತ್ತವೆ. ಇಲ್ಲಿ ಮಾಂಸಖಂಡಗಳು ಸುಸ್ಥಿತಿಲ್ಲಿದ್ದರೂ, ಅದನ್ನು ನಿಯಂತ್ರಿಸುವ ಕೇಂದ್ರದಲ್ಲಿನ ಸಮಸ್ಯೆಯಿಂದ ಮಾಂಸಖಂಡಗಳು ತೊಂದರೆ ಅನುಭವಿಸಬೇಕಾಗುತ್ತದೆ. ಇದೊಂದು ರೀತಿ ರಿಮೋಟ್ ಕೆಟ್ಟುಹೋದಾಗ ಟಿವಿ ನೋಡಲು ಸಾಧ್ಯವಾಗದಂತಹ ಪರಿಸ್ಥಿತಿ. ಆಗ ರಿಮೋಟ್ ಅನ್ನು ರಿಪೇರಿ ಮಾಡಬೇಕು. ಅದು ಸಾಧ್ಯವಾಗದಿದ್ದರೆ ಪ್ರತಿ ಬಾರಿ ಟಿವಿ ಬಳಿ ಹೋಗಿ ವಾಹಿನಿಗಳನ್ನು, ಸದ್ದನ್ನು, ಇತರ ಅಂಶಗಳನ್ನು ನಿಯಂತ್ರಿಸಬೇಕು. ಸದ್ಯಕ್ಕೆ ಪಾರ್ಶ್ವವಾಯುವಿನಲ್ಲಿ ಮೆದುಳೆಂಬ ರಿಮೋಟ್ ಅನ್ನು ಸರಿಪಡಿಸಲು ಹೆಚ್ಚಿನ ಮಾರ್ಗಗಳಿಲ್ಲದಿರುವುದರಿಂದ, ಮಾಂಸಖಂಡಗಳಿಗೇ ಫಿಸಿಯೋಥೆರಪಿಯಂತಹ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ. ಒಂದು ವೇಳೆ ನಿಷ್ಕ್ರಿಯವಾಗಿರುವ ಮೆದುಳಿನ ಭಾಗಕ್ಕೆ ಚಿಪ್ ಅಳವಡಿಸಿ ಅದನ್ನು ಮತ್ತೆ ಕಾರ್ಯರೂಪಕ್ಕೆ ತಂದರೆ? ಆಗ ಪಾರ್ಶ್ವವಾಯುವನ್ನು ಗುಣಪಡಿಸಿದಂತಾಯಿತು. ಅಂತೆಯೇ ಕೆಲವೊಮ್ಮೆ ಮೆದುಳಿನ ಕೇಂದ್ರ ಸರಿಯಾದ ಸ್ಥಿತಿಯಲ್ಲಿದ್ದರೂ ಮಾಂಸಖಂಡಗಳ ಆಂತರಿಕ ದೌರ್ಬಲ್ಯದಿಂದ ಚಲನೆ ಸಾಧ್ಯವಾಗದೇ ಇರಬಹುದು. ಆಗ ಆಯಾ ಮಾಂಸಖಂಡಗಳ ಗುಂಪಿಗೆ ಕೃತಕ ಚಲನೆಯ ಉಪಕರಣಗಳನ್ನು ಜೋಡಿಸಿ, ಅವುಗಳ ನಿಯಂತ್ರಣವನ್ನು ಮೆದುಳಿಗೆ ನೀಡಬಹುದು. ಇದರಿಂದ ಸಹಜ ಚಲನೆಯನ್ನು ಅನುಕರಿಸಿದಂತಾಗುತ್ತದೆ.

alan turing
ಅಲನ ಟ್ಯೂರಿಂಗ್

ಮೆದುಳಿಗಿಂತ ದೊಡ್ಡ ಸೂಪರ್ ಕಂಪ್ಯೂಟರ್ ಇಲ್ಲ ಎಂದು ಈಗಲೂ ಭಾವಿಸಲಾಗಿದೆ. 1950ನೆಯ ಇಸವಿಯಲ್ಲಿ ಪ್ರಸಿದ್ಧ ವಿಜ್ಞಾನಿ ಆಲನ್ ಟ್ಯುರಿಂಗ್ ಅವರು “ಕಂಪ್ಯೂಟರುಗಳ ಸಾಮರ್ಥ್ಯ ಹೆಚ್ಚುತ್ತಾ ಹೋದರೆ ಅವು ಸುಮಾರು 2000ನೇ ಇಸವಿಯ ವೇಳೆಗೆ ಮಾನವ ಮೆದುಳಿನ ಮಟ್ಟಕ್ಕೆ ಏರಬಲ್ಲವು” ಎಂದು ಗಣಿಸಿದ್ದರು. ಈ ಭವಿಷ್ಯವಾಣಿಯನ್ನು ನಿಜವಾಗಿಸಲು ಕಂಪ್ಯೂಟರ್ ತಜ್ಞರು ಅನವರತ ದುಡಿದಿದ್ದಾರೆಯಾದರೂ ಇಂದಿಗೂ ವಾಸ್ತವ ಆ ಮಟ್ಟಕ್ಕೆ ಏರಿಲ್ಲ. ಮೆದುಳಿನ ಒಂದು ನರಕೋಶಕ್ಕೆ ಸರಿಯಾಗಿ ಒಂದು ಕಂಪ್ಯೂಟರ್ ಚಿಪ್ ಅನ್ನು ಜೋಡಿಸಿದರೆ, ಅದರ ಸಾಮರ್ಥ್ಯ ಸರಿದೂಗಬಲ್ಲದು ಎಂದು ಗಣಿಸಿದ್ದ ಸಿದ್ಧಾಂತ ಫಲ ನೀಡಲಿಲ್ಲ. ಗಣನೆಯ ಸಾಮರ್ಥ್ಯ ಹೆಚ್ಚಿತಾದರೂ, ಅನೇಕ ಆಯಾಮಗಳನ್ನು ಲೆಕ್ಕ ಹಾಕಿ, ತರ್ಕ ಮಾಡಿ, ಸ್ವತಂತ್ರ ನಿರ್ಧಾರಗಳ ಚಿಂತನೆಯನ್ನು ರೂಡಿಸಿಕೊಳ್ಳುವಂತೆ ಕಂಪ್ಯೂಟರ್ ಅನ್ನು ಸಿದ್ಧಗೊಳಿಸಲು ಈವರೆಗೆ ಆಗಿಲ್ಲ. ಮಾನವ ಮೆದುಳೆಂದರೆ ಕೇವಲ ತಾರ್ಕಿಕ ಆಲೋಚನೆಗಳು ಮಾತ್ರವಲ್ಲ; ಅದರಲ್ಲಿ ಭಾವನಾತ್ಮಕ ಸಂಗತಿಗಳೂ ಇವೆ. ಈ ಆಯಾಮವನ್ನು ಸ್ಪರ್ಶಿಸಲು ಕಂಪ್ಯೂಟರಿಗೆ ಸಾಧ್ಯವಾಗುವುದು ಹೇಗೆ?

ಇದನ್ನೂ ಓದಿ | ವಾಕಿಂಗ್‌ ಚಿತ್ರಗಳು ಅಂಕಣ | ಕೋಪದಿಂದ ಮೂಗು ಕೊಯ್ದುಕೊಂಡರೆ ಅಪಾಯವಿಲ್ಲ!

ಮಾನವ ಮೆದುಳು ಕೇವಲ ನರಕೋಶಗಳ ಲೆಕ್ಕಾಚಾರವಲ್ಲ. ಬದಲಿಗೆ, ಒಂದು ನರಕೋಶ ಮತ್ತೊಂದರ ಜೊತೆಗೆ ಹೇಗೆ ಸಂಪರ್ಕ ಕೂಡಿಸಿಕೊಳ್ಳುತ್ತದೆ ಎನ್ನುವ ಪ್ರಕ್ರಿಯೆ. ಈ ಸಂಪರ್ಕಗಳು ನಿರಂತರವಾಗಿ ಆಗುತ್ತಲೇ ಇರುತ್ತವೆ. ಕೆಲವು ಸಂಪರ್ಕಗಳು ಕೆಲಕ್ಷಣಗಳ ಕಾಲ ಮಾತ್ರ ಇದ್ದರೆ, ಇನ್ನು ಕೆಲವು ವರ್ಷಾನುಗಟ್ಟಲೇ ಉಳಿಯುತ್ತವೆ. ಇಂತಹ ಕ್ರಿಯಾತ್ಮಕ ಸಂಪರ್ಕಗಳು ಮೆದುಳಿಗೆ ಅಗಾಧ ಸಾಮರ್ಥ್ಯವನ್ನು ತಂದುಕೊಡುತ್ತವೆ. ಈ ಮಟ್ಟದ ನಿರಂತರ ಸಂಪರ್ಕಗಳನ್ನು ಸಾಧಿಸುವ ಕ್ರಿಯಾತ್ಮಕ ಸಾಮರ್ಥ್ಯ ಕಂಪ್ಯೂಟರಿಗೆ ಸದ್ಯಕ್ಕೆ ಇಲ್ಲ. ಇದು ಕಾರ್ಯಗತವಾಗಲು ಇನ್ನಷ್ಟು ಕಾಲ ಹಿಡಿಯಬಹುದು. ಕ್ವಾಂಟಮ್ ಕಂಪ್ಯೂಟರ್ ಬೆಳವಣಿಗೆ ಇದನ್ನು ಸಾಧಿಸಬಹುದು ಎನ್ನಲಾಗುತ್ತಿದೆ.

ಈ ಸಮಸ್ಯೆಯನ್ನು ಮತ್ತೊಂದು ದಿಕ್ಕಿನಿಂದ ತಲುಪಲು ಸಾಧ್ಯವೇ? ಅಂದರೆ, ಕೋಟ್ಯಂತರ ಚಿಪ್‌ಗಳನ್ನು ಮೊದಲು ಒಗ್ಗೂಡಿಸಿ, ನಂತರ ಅವುಗಳಿಗೆ ಪರಸ್ಪರ ಕ್ರಿಯಾತ್ಮಕ ಸಂಪರ್ಕ ಕಲ್ಪಿಸುವ ಸದ್ಯದ ಮಾದರಿಯ ಬದಲಿಗೆ, ಮೊದಲ ಹೆಜ್ಜೆಯಲ್ಲಿ ಕೆಲವೇ ಚಿಪ್ ಗಳನ್ನು ಒಗ್ಗೂಡಿಸಿ, ಅವುಗಳು ಒಂದಕ್ಕಿಂತ ಹೆಚ್ಚು ರೀತಿಯಲ್ಲಿ ಸಂಪರ್ಕ ಸಾಧಿಸುವಂತೆ ನಿರ್ಮಿಸಿ, ನಂತರ ನಿಧಾನವಾಗಿ ಚಿಪ್‌ಗಳ ಸಂಖ್ಯೆಯನ್ನು ಏರಿಸುತ್ತಾ ಹೋದರೆ? ಜೀವವಿಕಾಸದ ಪ್ರಕ್ರಿಯೆಯಲ್ಲಿ ಮಿದುಳಿನ ಬೆಳವಣಿಗೆಯಾದದ್ದೂ ಹೀಗೆಯೇ ಇರಬಹುದಲ್ಲವೇ? ಅಮೆರಿಕೆಯ ಪೆನ್ಸಿಲ್ವೆನಿಯಾ ವಿಶ್ವವಿದ್ಯಾಲಯದ ಸಂಶೋಧಕರು ಈ ಹಾದಿಯಲ್ಲಿ ಪಯಣಿಸುತ್ತಿದ್ದಾರೆ. ಅವರ ಮೊದಲ ಪ್ರಯತ್ನ ಕೃತಕ ಕಣ್ಣನ್ನು ತಯಾರಿಸಿ, ದೃಷ್ಟಿಯನ್ನು ಸಾಧಿಸುವುದು. ನಮ್ಮ ಕಣ್ಣು ಬೆಳಕನ್ನು, ಬಣ್ಣಗಳನ್ನು ಗ್ರಹಿಸಲು ವಿಶಿಷ್ಟ ಕೋಶಗಳನ್ನು ಕಣ್ಣಿನ ಹಿಂಬದಿಯ ರೆಟಿನಾ ಎಂಬ ಪರದೆಯ ಜೊತೆಗೆ ನಿರ್ಮಿಸಿಕೊಂಡಿದೆ. ರೆಟಿನಾದ ಹಿಂಬದಿಯಲ್ಲಿ ಸಮನ್ವಯಗೊಂಡಿರುವ ಸೂಕ್ಷ್ಮ ನರತಂತುಗಳ ಪ್ರಚೋದನೆಯಿಂದ ಮಿದುಳಿಗೆ ಸಂಕೇತಗಳು ರವಾನೆ ಆಗುತ್ತವೆ. ಮೆದುಳಿನಲ್ಲಿ ಈ ಸಂಕೇತಗಳ ವಿಶ್ಲೇಷಣೆಯಾಗಿ, ನಮ್ಮೆದುರಿನ ದೃಶ್ಯದ ಪುನರ್ನಿರ್ಮಾಣವಾಗುತ್ತದೆ. ವಿಜ್ಞಾನಿಗಳು ಕಣ್ಣಿನ ವಿಶಿಷ್ಟ ಕೋಶಗಳಿಗೆ ಬದಲಾಗಿ ಸುಮಾರು 8000 ಚಿಪ್‌ಗಳನ್ನು ಬಳಸಿ, ಅವಕ್ಕೆ ಸುಮಾರು 4000 ಆಂತರಿಕ ಸಂಪರ್ಕಗಳನ್ನು ನಿರ್ಮಿಸಿ, ಕೃತಕ ರೆಟಿನಾ ತಯಾರಿಸಿದ್ದಾರೆ. ಇದರಿಂದ ಬರುವ ಮಾಹಿತಿಯನ್ನು ವಿಶ್ಲೇಷಿಸಲು ಸಾಮಾನ್ಯ ಸಾಮರ್ಥ್ಯದ ಕಂಪ್ಯೂಟರ್ ಬಳಸಿದ್ದಾರೆ. ಈ ಪ್ರಯೋಗ ಬಹಳ ಮಹತ್ವದ ಫಲಿತಾಂಶಗಳನ್ನು ನೀಡಿದೆ. ಕಾಲಕ್ರಮೇಣ ಕೃತಕ ರೆಟಿನಾದ ಚಿಪ್ ಸಾಮರ್ಥ್ಯವನ್ನು ವೃದ್ಧಿಸುತ್ತಾ, ಅದರ ಮಾಹಿತಿಯನ್ನು ವಿಶ್ಲೇಷಿಸುವ ಕಂಪ್ಯೂಟರಿನ ಗಾತ್ರವನ್ನು ತಗ್ಗಿಸುತ್ತಾ ಹೋದಂತೆ, ಒಂದು ದಿನ ನೈಜ ಕಣ್ಣಿನ ಗಾತ್ರ ಮತ್ತು ಸಾಮರ್ಥ್ಯಗಳನ್ನು ಸರಿದೂಗಬಲ್ಲ ಕೃತಕ ಕಣ್ಣಿನ ಆವಿಷ್ಕಾರ ಮಾಡಿದಂತಾಗುತ್ತದೆ. ಇದೇ ಮಾದರಿಯನ್ನು ಮೆದುಳಿನ ಮತ್ತಷ್ಟು ಪ್ರದೇಶಗಳಿಗೆ ಅನ್ವಯಿಸಬಹುದು ಎಂಬ ಮಹತ್ವಾಕಾಂಕ್ಷೆ ವಿಜ್ಞಾನಿಗಳದ್ದು. ಇದು ಸುಲಭದ ಕೆಲಸವೇನೂ ಅಲ್ಲ. ಆದರೆ ಈ ನಿಟ್ಟಿನಲ್ಲಿ ದಿಟ್ಟ ಹೆಜ್ಜೆಗಳನ್ನು ಇಡಲಾಗಿದೆ ಎಂಬುದು ಮಹತ್ವದ ಸಂಗತಿ.

ಆಲನ್ ಟ್ಯುರಿಂಗ್ ಅವರ ಜೊತೆಗಾರರಾದ ಇರ್ವಿಂಗ್ ಗುಡ್ ಎಂಬ ಗಣಿತಜ್ಞ 1965ರಲ್ಲಿ ಭವಿಷ್ಯದಲ್ಲಿ ಯಂತ್ರಗಳು ಮಾನವ ಮಿದುಳಿನ ಸಾಮರ್ಥ್ಯವನ್ನು ಮೀರುವ ಸಾಧ್ಯತೆಯನ್ನು ಗಣಿಸಿದ್ದರು. ಅದಕ್ಕೂ ಮೊದಲೇ ವಾನ್ ನ್ಯೂಮನ್ ಎಂಬ ಪ್ರಸಿದ್ಧ ಗಣಿತಜ್ಞರು ಆ ಹಂತಕ್ಕೆ ʻಸಿಂಗ್ಯುಲಾರಿಟಿʼ ಎನ್ನುವ ಹೆಸರನ್ನೂ ನೀಡಿದ್ದರು. ಇದು 2045ನೆಯ ಇಸವಿಯ ಸುಮಾರಿಗೆ ಸಾಧ್ಯವಾಗಬಹುದೆಂಬ ಅಂದಾಜಿದೆ. ಪ್ರಾಯಶಃ ನಮ್ಮ ಜೀವನಕಾಲದಲ್ಲಿ ಒಂದು ವೈಜ್ಞಾನಿಕ ಮಹಾಕ್ರಾಂತಿಗೆ ನಾವು ಸಾಕ್ಷಿಯಾಗಲಿದ್ದೇವೆ.

(ಲೇಖಕರು ವೈದ್ಯರು, ವೈಜ್ಞಾನಿಕ ಬರಹಗಾರರು)

ಇದನ್ನೂ ಓದಿ | ವಾಕಿಂಗ್‌ ಚಿತ್ರಗಳು ಅಂಕಣ | ಮನಸ್ಸನ್ನು ಓದಿ ಕತೆ ಬರೆಯಬಲ್ಲ ಮೆಶೀನು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಅಂಕಣ

ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

ರಾಜಮಾರ್ಗ ಅಂಕಣ: ಕುರುಡರಾಗಿ ಹುಟ್ಟಿದ ಕಾರಣಕ್ಕೆ ನೋವು, ತಿರಸ್ಕಾರ ಅನುಭವಿಸುತ್ತಿದ್ದ ಶ್ರೀಕಾಂತ್‌ ಬೊಳ್ಳಾ ಹಿಡಿದ ಛಲದ ಹಾದಿ ಇಂದು ಅವರನ್ನು ದೊಡ್ಡ ಕಂಪನಿಗಳ ಮಾಲಿಕರಾಗುವತ್ತ, ನೂರಾರು ದಿವ್ಯಾಂಗರಿಗೆ ಕೆಲಸ ನೀಡುವವರೆಗೆ ಮುನ್ನಡೆಸಿದೆ. ನಾವೆಲ್ಲರೂ ಓದಿ ರೋಮಾಂಚಿತರಾಗಬಹುದಾದ ಸ್ಫೂರ್ತಿ ಕಥೆಯಿದು.

VISTARANEWS.COM


on

rajamarga column srikant bolla
Koo

ಕಣ್ಣಿಲ್ಲ ಎಂಬ ಕಾರಣಕ್ಕೆ ಐಐಟಿ ರಿಜೆಕ್ಟ್ ಆಗಿದ್ದ ಯುವಕನು ಕೋಟಿ ಕೋಟಿ ಸಂಪಾದನೆ ಮಾಡಿದ್ದು ಹೇಗೆ?

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಮೂರು ವರ್ಷಗಳ ಹಿಂದೆ ಇವರನ್ನು ಬೆಂಗಳೂರಿನ ಒಂದು ಬಿಸಿನೆಸ್ ಸಮ್ಮೇಳನದ ವೇದಿಕೆಯಲ್ಲಿ ಭೇಟಿಯಾಗಿದ್ದೆ. ಅವರ ಹೋರಾಟದ ಕಥೆಯನ್ನು ಅವರ ಮಾತಲ್ಲೇ ಕೇಳಿ ರೋಮಾಂಚನವಾಗಿತ್ತು.

ಶ್ರೀಕಾಂತ್ ಬೊಳ್ಳ ಅವರ ಹೋರಾಟದ ಅದ್ಭುತವಾದ ಕಥೆಯನ್ನು ಅವರದ್ದೇ ಮಾತುಗಳಲ್ಲಿ ಕೇಳೋಣ.

ನಾನು ಹುಟ್ಟಿದ್ದು ಆಂಧ್ರಪ್ರದೇಶದ ಮಚಲಿ ಪಟ್ಟಣದ ಒಂದು ಪುಟ್ಟ ಗ್ರಾಮದಲ್ಲಿ (1992). ನನ್ನ ಹುಟ್ಟು ಕುರುಡುತನ ನನ್ನ ಕೃಷಿಕ ಕುಟುಂಬಕ್ಕೆ ದೊಡ್ಡ ಸವಾಲು ಆಗಿತ್ತು. ನಮ್ಮ ಕುಟುಂಬದ ವಾರ್ಷಿಕ ಆದಾಯ 20,000 ರೂಪಾಯಿಗಿಂತ ಕಡಮೆ ಇದ್ದ ಕಾಲ ಅದು!

ಅಪಮಾನ, ತಿರಸ್ಕಾರ ಮತ್ತು ತಾರತಮ್ಯ

ನಾನು ಕುರುಡ ಎಂಬ ಕಾರಣಕ್ಕೆ ತಿರಸ್ಕಾರ, ಅಪಮಾನ ತುಂಬಾ ನೋವು ಕೊಡುತ್ತಿತ್ತು. ತರಗತಿಯಲ್ಲಿ ಕೊನೆಯ ಬೆಂಚು ಖಾಯಂ. ಆಟಕ್ಕೆ ಅವಕಾಶವನ್ನೇ ಕೊಡುತ್ತಿರಲಿಲ್ಲ. ಇದರಿಂದ ಅಪ್ಪ ನೊಂದುಕೊಂಡು ನನ್ನನ್ನು ಹೈದರಾಬಾದ್ ನಗರದ ವಿಶೇಷ ಮಕ್ಕಳ ಶಾಲೆಗೆ ಸೇರಿಸಿದರು. ಅಲ್ಲಿ ನನ್ನ ಜೀವನದ ಹಲವು ಟರ್ನಿಂಗ್ ಪಾಯಿಂಟಗಳು ಆರಂಭ! ಕಲಿಕೆಯಲ್ಲಿ ನಾನು ನನ್ನ ತರಗತಿಗೆ ಪ್ರಥಮ ಬರಲು ಆರಂಭಿಸಿದೆ. ಕುರುಡು ಮಕ್ಕಳ ಕ್ರಿಕೆಟ್ ತಂಡದಲ್ಲಿ ನಾನು ರಾಷ್ಟ್ರೀಯ ತಂಡದಲ್ಲಿ ಆಡಿದೆ.

ಅಬ್ದುಲ್ ಕಲಾಂ ಭೇಟಿ ಮಿಂಚು ಹರಿಸಿತು

ನಾನು ಪ್ರೌಢಶಾಲೆಯಲ್ಲಿ ಓದುವಾಗ ನಮ್ಮ ಶಾಲೆಗೊಮ್ಮೆ ಅಬ್ದುಲ್ ಕಲಾಂ ಭೇಟಿ ನೀಡಿದರು. ಅವರ ಮಾತುಗಳಿಂದ ನಾನು ಪ್ರಭಾವಿತನಾದೆ. ಅವರ ‘ಲೀಡ್ ಇಂಡಿಯಾ 2020’ ಎಂಬ ವಿದ್ಯಾರ್ಥಿ ಅಭಿಯಾನಕ್ಕೆ ನಾನು ಸದಸ್ಯತನ ಪಡೆದೆ. ನನಗೆ ಎಸೆಸೆಲ್ಸಿ ಪರೀಕ್ಷೆಯಲ್ಲಿ 90% ಅಂಕಗಳು ಬಂದವು. ವಿಜ್ಞಾನದಲ್ಲಿ ಪಿಯುಸಿ ಮಾಡಬೇಕೆಂದು ನನ್ನ ಆಸೆ. ಆದರೆ ನಾನು ಕುರುಡ ಎಂಬ ಕಾರಣಕ್ಕೆ ನನಗೆ ಯಾವುದೇ ಕಾಲೇಜಿನಲ್ಲಿ ವಿಜ್ಞಾನದ ಸೀಟ್ ಸಿಗಲಿಲ್ಲ.

ನನಗೆ ಅಬ್ದುಲ್ ಕಲಾಂ ಅವರ ಮಾತುಗಳು ನೆನಪಾದವು – ಹಕ್ಕಿ ಹಾರುವುದು ರೆಕ್ಕೆಗಳ ಬಲದಿಂದಲ್ಲ. ಅದು ಹಾರುವುದು ಭರವಸೆಗಳ ಬಲದಿಂದ!

ಸರಕಾರದ ವಿರುದ್ಧ ಬೀದಿಗೆ ಇಳಿದು ಹೋರಾಟ.

ನಾನು ಹೈದರಾಬಾದ್ ಸರಕಾರದ ವಿರುದ್ಧ ರಸ್ತೆಗಿಳಿದು ಪ್ರತಿಭಟನೆಯನ್ನು ಮಾಡಿದೆ. ಆರು ತಿಂಗಳ ನಂತರ ನನಗೆ ವಿಜ್ಞಾನದ ಸೀಟ್ ದೊರೆಯಿತು. ಸತತವಾಗಿ ಕಷ್ಟ ಪಟ್ಟೆ. ಬ್ರೈಲ್ ಲಿಪಿಯಲ್ಲಿ ಪರೀಕ್ಷೆಯನ್ನು ಬರೆದು ದ್ವಿತೀಯ ಪಿಯುಸಿಯಲ್ಲಿ ನನಗೆ 98% ಅಂಕಗಳು ಬಂದವು!

ಐಐಟಿ ಸಂಸ್ಥೆಗಳು ಬಾಗಿಲು ತೆರೆಯಲಿಲ್ಲ

ನನಗೆ ಐಐಟಿಯಲ್ಲಿ BE ಮಾಡುವ ಆಸೆ. ಆದರೆ ಭಾರತದ ಯಾವುದೇ ಐಐಟಿ ಕಾಲೇಜುಗಳು ನನಗೆ ಕುರುಡ ಎಂಬ ಕಾರಣಕ್ಕೆ ಎಂಟ್ರೆನ್ಸ್ ಪರೀಕ್ಷೆಗೂ ಅವಕಾಶ ನೀಡಲಿಲ್ಲ. ನಾನು ಕೈಚೆಲ್ಲಲಿಲ್ಲ. ಅಮೆರಿಕಾದ ನಾಲ್ಕು ಪ್ರಸಿದ್ಧವಾದ ಯೂನಿವರ್ಸಿಟಿಗಳ ಬಾಗಿಲು ಬಡಿದೆ. ಎಲ್ಲವೂ ಆಹ್ವಾನ ನೀಡಿದವು.

ನಾನು ಮಸ್ಸಾಚುಸೆಟ್ಸ್ ವಿವಿ ಆರಿಸಿಕೊಂಡೆ. ಅಮೆರಿಕಾದ ವಿವಿಯಲ್ಲಿ BE ಪ್ರವೇಶ ಪಡೆದ ಜಗತ್ತಿನ ಮೊದಲ ಕುರುಡ ವಿದ್ಯಾರ್ಥಿ ನಾನಾಗಿದ್ದೆ! ನನಗೆ ಇಷ್ಟವಾದ BE ಕೋರ್ಸನ್ನು ಮುಗಿಸಿದೆ. ಅಲ್ಲಿ ಈಜು ಮತ್ತು ಡೈವಿಂಗಲ್ಲಿ ವಿವಿ ದಾಖಲೆ ಕೂಡ ಮಾಡಿದ್ದೆ. ಅಮೆರಿಕಾದ ಕೆಲವು ಕಾರ್ಪೊರೇಟ್ ಕಂಪೆನಿಗಳು ನನಗೆ ಉದ್ಯೋಗ ನೀಡಲು ಮುಂದೆ ಬಂದವು.

ಆದರೆ ನನ್ನ ಕನಸುಗಳು ಭಾರತದಲ್ಲಿ ಇದ್ದವು!

2011ರಲ್ಲಿ ಭಾರತಕ್ಕೆ ಬಂದು ಮತ್ತೆ ಅಬ್ದುಲ್ ಕಲಾಂ ಅವರನ್ನು ಭೇಟಿ ಮಾಡಿದೆ. ಅವರ ಸಲಹೆಯಂತೆ ಬಹು ವಿಕಲತೆಯ ಮಕ್ಕಳಿಗಾಗಿ “ಸಮನ್ವೈ ಸೆಂಟರ್” ಎಂಬ ಸೇವಾ ಸಂಸ್ಥೆ ಆರಂಭಿಸಿದೆ. ಬ್ರೈಲ್ ಪ್ರಿಂಟಿಂಗ್ ಪ್ರೆಸ್ ತೆರೆದೆ. 3000 ಅಶಕ್ತ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ನೆರವಿಗೆ ನಿಂತೆ. ಅಷ್ಟಕ್ಕೇ ಸುಮ್ಮನಾಗಲಿಲ್ಲ.

ಆರಂಭ ಆಯಿತು ಅವರದ್ದೇ ಕಂಪೆನಿ

2011ರಲ್ಲಿ ‘ BOLLANT INDUSTRY’ ಎಂಬ ಸಣ್ಣ ಉದ್ಯಮವನ್ನು ಆರಂಭಿಸಿದೆ. ನಗರಪಾಲಿಕೆಯ ತ್ಯಾಜ್ಯ ವಸ್ತುಗಳಿಂದ ಮತ್ತು ಆಡಕೆಯಿಂದ ಕ್ರಾಫ್ಟ್ ಪೇಪರ್ ತಯಾರಿಸುವ ಕಂಪೆನಿ ಅದು. ಹಣ ಮಾಡುವುದು ನನ್ನ ಉದ್ದೇಶ ಆಗಿರಲಿಲ್ಲ. ನನ್ನ ಕಂಪೆನಿಯಲ್ಲಿ ಕುರುಡರಿಗೆ ಮತ್ತು ವಿಕಲಚೇತನರಿಗೆ ಉದ್ಯೋಗ ನೀಡಿದೆ. ರತನ್ ಟಾಟಾ ಅವರು ನನ್ನ ಕಂಪೆನಿಯಲ್ಲಿ ಹೂಡಿಕೆ ಮಾಡಲು ಮುಂದೆ ಬಂದರು. ನನ್ನ ಐಕಾನ್ ಎಪಿಜೆ ಅಬ್ದುಲ್ ಕಲಾಂ ಅವರು ಬಂದು ದೀಪ ಹಚ್ಚಿದರು. ಮುಂದೆ ಆ ಕಂಪೆನಿಯು ಪ್ರತೀ ತಿಂಗಳು 20% ಪ್ರಗತಿ ದಾಖಲಿಸುತ್ತಾ ಬಂದಿತು.

ದಿವ್ಯಾಂಗರಿಗೆ ಉದ್ಯೋಗ ನೀಡಿದರು

ಇಂದು ನನ್ನ ಕಂಪೆನಿಗೆ ನಾಲ್ಕು ರಾಜ್ಯಗಳಲ್ಲಿ 20 ಶಾಖೆಗಳು ಇವೆ. 100 ಕೋಟಿ ರೂಪಾಯಿ ವಾರ್ಷಿಕ ಟರ್ನ್ ಓವರ್ ಇದೆ! ನೂರಕ್ಕೆ ನೂರು ಸೌರಶಕ್ತಿ ಆಧಾರಿತವಾಗಿದೆ ಮತ್ತು ಪರಿಸರಸ್ನೇಹಿ ಆಗಿದೆ. ಅಶಕ್ತ ದಿವ್ಯಾಂಗರಿಗೆ ಸ್ವಾವಲಂಬಿ ಬದುಕಿನ ಅವಕಾಶವನ್ನು ನೀಡಿದ ಖುಷಿ ಇದೆ. ಭಾರತದ ಸಮಸ್ಯೆಗಳಾದ ಬಡತನ, ನಿರಕ್ಷರತೆ, ನಿರುದ್ಯೋಗಗಳ ನಿವಾರಣೆಗೆ ನಮ್ಮಿಂದಾದಷ್ಟು ಪ್ರಯತ್ನ ಪ್ರತಿಯೊಬ್ಬರೂ ಮಾಡಬೇಕು. ‘ಪಂಚೀ ಉಡತೀ ಹೈ ಪಂಖೋ ಕೀ ತಾಕತ್ ಸೆ ನಹೀಂ. ಹೌಸಲೆ ಸೇ!’ ಎಂಬ ಅಬ್ದುಲ್ ಕಲಾಂ ಅವರ ಮಾತಿನೊಂದಿಗೆ ಅವರು ತನ್ನ ಮಾತು ನಿಲ್ಲಿಸಿದರು. ಅವರ ಆಳವಾದ ಕಣ್ಣುಗಳಲ್ಲಿ ಗೆದ್ದ ಖುಷಿ ಇತ್ತು.

ಭರತ ವಾಕ್ಯ

ಅಂದ ಹಾಗೆ ಶ್ರೀಕಾಂತ್ ಅವರಿಗೆ ಫೋರ್ಬ್ಸ್ ಮಾಗಜ್ಹಿನ್ 2017ರಲ್ಲಿ ನಡೆಸಿದ ಏಷಿಯಾದ 30 ಅತ್ಯಂತ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಸ್ಥಾನವನ್ನು ದೊರೆತಿದೆ. ‘NDTV ಇಂಡಿಯನ್ ಆಫ್ ದಿ ಇಯರ್’ ಪ್ರಶಸ್ತಿ, ‘ಪ್ರೈಡ್ ಆಫ್ ತೆಲಂಗಾಣ’ ಪ್ರಶಸ್ತಿ, ‘ಟಿವಿ 9 ನವನಕ್ಷತ್ರ’ ಪ್ರಶಸ್ತಿ……. ಮೊದಲಾದ ನೂರಾರು ಪ್ರಶಸ್ತಿಗಳು ಅವರಿಗೆ ದೊರೆತಿವೆ. ಶ್ರೀಕಾಂತ್ ಬೊಳ್ಳ ಅವರ ಬದುಕು ಸಾವಿರಾರು ಯುವಕ ಯುವತಿಯರಿಗೆ ಸ್ಫೂರ್ತಿ ನೀಡಿದೆ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

Continue Reading

ಅಂಕಣ

ರಾಜಮಾರ್ಗ ಅಂಕಣ: ರಿಶಭ್ ಪಂತ್ – ಕಮ್ ಬ್ಯಾಕ್ ಅಂದರೆ ಹೀಗಿರಬೇಕು!

ರಾಜಮಾರ್ಗ ಅಂಕಣ: ಆಕ್ರಮಣಕಾರಿ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ. ಆದರೆ ಈಗ, ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

VISTARANEWS.COM


on

Rishabh Pant
Koo

ಹೋರಾಟಗಾರ ಕ್ರಿಕೆಟರ್ ಕ್ರಿಟಿಕಲ್ ಇಂಜುರಿ ಗೆದ್ದು ಬಂದ ಕಥೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: 2022 ಡಿಸೆಂಬರ್ 30ರ ಮಧ್ಯರಾತ್ರಿ ರೂರ್ಕಿ ಎಂಬಲ್ಲಿ ಆ ಕ್ರಿಕೆಟರ್ ಕಾರು ಅಪಘಾತಕ್ಕೆ ಒಳಗಾಗಿತ್ತು. ಆ ಅಪಘಾತದ ತೀವ್ರತೆಯನ್ನು ನೋಡಿದವರು ಆತ ಬದುಕಿದ್ದೇ ಗ್ರೇಟ್ ಅಂದಿದ್ದರು. ಬಲಗಾಲಿನ ಮಂಡಿ ಚಿಪ್ಪು ಸಮೇತ 90 ಡಿಗ್ರೀಯಷ್ಟು ತಿರುಗಿ ನಿಂತಿತ್ತು! ಮೈಯೆಲ್ಲಾ ಗಾಯಗಳು ಮತ್ತು ಎಲುಬು ಮುರಿತಗಳು! ಡೆಹ್ರಾಡೂನ್ ಆಸ್ಪತ್ರೆಯ ವೈದ್ಯರು ಆತನ ದೇಹದಲ್ಲಾದ ಗಾಯ ಮತ್ತು ಮೂಳೆ ಮುರಿತಗಳನ್ನು ನೋಡಿದಾಗ ‘ನೀನಿನ್ನು ಕ್ರಿಕೆಟ್ ಆಡೋದು ಕಷ್ಟ’ ಅಂದಿದ್ದರು. ಒಬ್ಬರಂತೂ ‘ನೀನು ನಿನ್ನ ಕಾಲುಗಳ ಮೇಲೆ ನಿಂತರೆ ಅದೇ ದೊಡ್ಡ ಸಾಧನೆ’ ಅಂದಿದ್ದರು!

ಅಮ್ಮಾ ನನಗೆ ಸಹಾಯ ಮಾಡು, ನಾನು ವಿಶ್ವಕಪ್ ಆಡಬೇಕು!

ಆ ಕ್ರಿಕೆಟಿಗ ಆಸ್ಪತ್ರೆಯ ಬೆಡ್ ಮೇಲೆ ಮಲಗಿ ಚೀರಿ ಚೀರಿ ಹಾಗೆ ಹೇಳುತ್ತಿದ್ದರೆ ನರ್ಸ್ ಮತ್ತು ವೈದ್ಯರು ಕಣ್ಣೀರು ಸುರಿಸುತ್ತಿದ್ದರು! ಕ್ರಿಕೆಟ್ ವಿಶ್ವಕಪ್ ಆರಂಭವಾಗಲು ಕೇವಲ ಒಂದೂವರೆ ವರ್ಷ ಬಾಕಿ ಇತ್ತು. ವೈದ್ಯರು ‘ಅನಿವಾರ್ಯ ಆದರೆ ಆತನ ಒಂದು ಕಾಲು ತುಂಡು ಮಾಡಬೇಕಾಗಬಹುದು!’ ಎಂದು ಅವನ ಅಮ್ಮನ ಕಿವಿಯಲ್ಲಿ ಪಿಸುಗುಟ್ಟಿದ್ದು, ಆತನ ಅಮ್ಮ ಬಾತ್ ರೂಮ್ ಒಳಗೆ ಹೋಗಿ ಕಣ್ಣೀರು ಸುರಿಸಿದ್ದು ಎಲ್ಲವೂ ನಡೆದು ಹೋಗಿತ್ತು!

ಆತ ರಿಶಭ್ ಪಂತ್ – ಆಕ್ರಮಣಕ್ಕೆ ಇನ್ನೊಂದು ಹೆಸರು!

ಅಪಘಾತ ಆಗುವ ಮೊದಲು ಆತ ಭಾರತೀಯ ಕ್ರಿಕೆಟ್ ತಂಡದ ಮೂರೂ ಫಾರ್ಮಾಟಗಳಲ್ಲಿ ಶಾಶ್ವತ ಸ್ಥಾನ ಪಡೆದಿದ್ದ! ಆಕ್ರಮಣಕ್ಕೆ ಹೆಸರಾಗಿದ್ದ. ಸಲೀಸಾಗಿ ಒಂದೇ ಅವಧಿಯಲ್ಲಿ ಡಬಲ್ ಸೆಂಚುರಿ ಹೊಡೆಯುತ್ತಿದ್ದ. ವಿಕೆಟ್ ಹಿಂದೆ ಪಾದರಸದ ಚುರುಕು ಇತ್ತು. ಆತನ ಆಟವನ್ನು ನೋಡಿದವರು ʻಈತ ಧೋನಿಯ ಉತ್ತರಾಧಿಕಾರಿ ಆಗುವುದು ಖಂಡಿತ’ ಅನ್ನುತ್ತಿದ್ದರು!

ಅಂತಹ ರಿಶಭ್ ಪಂತ್ ಡೆಹ್ರಾಡೂನ್ ಆಸ್ಪತ್ರೆಯಲ್ಲಿ ಅರ್ಧ ಹೆಣವಾಗಿ ಮಲಗಿದ್ದ! ಯಾರಿಗೂ ಆತ ಮರಳಿ ಕ್ರಿಕೆಟ್ ಆಡುವ ಭರವಸೆ ಇರಲಿಲ್ಲ.

ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ

ಮರಳಿ ಕ್ರಿಕೆಟ್ ಮೈದಾನಕ್ಕೆ ಇಳಿಯಬೇಕು ಎಂದು ನಿದ್ದೆಯಲ್ಲಿಯೂ ಕನವರಿಸುತ್ತಿದ್ದ ಆತನ ನೆರವಿಗೆ ನಿಂತವರು ಕೇವಲ ನಾಲ್ಕೇ ಜನ. ಅವರೆಲ್ಲರೂ ಆತನ ಕ್ರಿಕೆಟ್ ದೈತ್ಯ ಪ್ರತಿಭೆಯನ್ನು ಕಂಡವರು. ಒಬ್ಬರು ಆತನಿಗೆ ಶಸ್ತ್ರಚಿಕಿತ್ಸೆ ಮಾಡಿದ ಮುಂಬಯಿಯ ಅಂಬಾನಿ ಆಸ್ಪತ್ರೆಯ ಖ್ಯಾತ ಸರ್ಜನ್ ದಿನ್ ಶಾ ಪಾದ್ರಿವಾಲ. ಇನ್ನೊಬ್ಬರು ಉತ್ತರಾಖಂಡದ ಶಾಸಕ ಉಮೇಶ್ ಕುಮಾರ್. ಇನ್ನೊಬ್ಬರು ನ್ಯಾಶನಲ್ ಕ್ರಿಕೆಟ್ ಅಕಾಡೆಮಿಯ ಕೋಚ್ ಆದ ಧನಂಜಯ್ ಕೌಶಿಕ್. ನಾಲ್ಕನೆಯರು ರಿಷಭನ ತಾಯಿ! ಆಕೆ ನಿಜಕ್ಕೂ ಗಾಡ್ಸ್ ಗ್ರೇಸ್ ಅನ್ನಬಹುದು. ಅವರೆಲ್ಲರಿಗೂ ಆತ ಭಾರತಕ್ಕೆ ಎಷ್ಟು ಅಮೂಲ್ಯ ಆಟಗಾರ ಎಂದು ಗೊತ್ತಿತ್ತು! ಆಸ್ಪತ್ರೆಯ ಹಾಸಿಗೆಗೆ ಒರಗಿ ಆತ ಪಟ್ಟ ಮಾನಸಿಕ ಮತ್ತು ದೈಹಿಕ ನೋವು, ಹೊರಹಾಕಿದ ನಿಟ್ಟುಸಿರು ಎಲ್ಲವೂ ಆ ನಾಲ್ಕು ಮಂದಿಗೆ ಗೊತ್ತಿತ್ತು.

ಆ ಹದಿನೈದು ತಿಂಗಳು…!

Rishabh Panth

ಆ ಅವಧಿಯಲ್ಲಿ ಏಷಿಯಾ ಕಪ್, ವಿಶ್ವ ಟೆಸ್ಟ್ ಚಾಂಪಿಯನಶಿಪ್, ವಿಶ್ವ ಕಪ್ ಎಲ್ಲವೂ ನಡೆದುಹೋಯಿತು! ಭಾರತ ಹಲವು ವಿಕೆಟ್ ಕೀಪರಗಳ ಪ್ರಯೋಗ ಮಾಡಿತು. ಭಾರತ ಒಂದೂ ಕಪ್ ಗೆಲ್ಲಲಿಲ್ಲ. ಭಾರತಕ್ಕೆ ಶಾಶ್ವತವಾದ ವಿಕೆಟ್ ಕೀಪರ್ ಸಿಗಲಿಲ್ಲ! ರಿಷಭ್ ಈ ಎಲ್ಲ ಪಂದ್ಯಗಳನ್ನು ನೋಡುತ್ತಿದ್ದ. ವಿಕೆಟ್ ಹಿಂದೆ ಅವನಿಗೆ ಅವನೇ ಕಾಣುತ್ತಿದ್ದ!

ಹಾಸಿಗೆಯಿಂದ ಎದ್ದು ಕ್ರಚಸ್ ಹಿಡಿದು ನಡೆದದ್ದು, ನಂತರ ಕ್ರಚಸ್ ಬದಿಗೆ ಇಟ್ಟು ಗೋಡೆ ಹಿಡಿದು ನಡೆದದ್ದು, ನಂತರ ಎಲ್ಲವನ್ನೂ ಬಿಟ್ಟು ನಿಧಾನವಾಗಿ ತನ್ನ ಕಾಲ ಮೇಲೆ ಗಟ್ಟಿಯಾಗಿ ನಿಂತದ್ದು, ಜಾಗಿಂಗ್ ಮಾಡಿದ್ದು, ಓಡಿದ್ದು, ಕಾಲುಗಳಿಗೆ ಫಿಸಿಯೋ ಥೆರಪಿ ಆದದ್ದು, ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಕೌನ್ಸೆಲಿಂಗ್ ನೆರವು ಪಡೆದದ್ದು….ಇವೆಲ್ಲವೂ ಕನಸಿನಂತೆ ಗೋಚರ ಆಗುತ್ತಿದೆ. ಮುಂದೆ ನಿರಂತರ ಕ್ರಿಕೆಟ್ ಕೋಚಿಂಗ್, ಮೈದಾನದಲ್ಲಿ ಬೆವರು ಹರಿಸಿದ್ದು, ಅಪಘಾತವಾದ ಕಾಲು ಬಗ್ಗಿಸಲು ತುಂಬ ಕಷ್ಟಪಟ್ಟದ್ದು ಒಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದಂತೆ ಅನ್ನಿಸುತ್ತಿದೆ.

2024 ಮಾರ್ಚ್ 12….

ಒಬ್ಬ ಕ್ರಿಕೆಟರ್ ಮತ್ತೆ ಸ್ಪರ್ಧಾತ್ಮಕ ಕ್ರಿಕೆಟ್ ಮೈದಾನಕ್ಕೆ ಇಳಿಯಲು ಬಿಸಿಸಿಐ ಫಿಟ್ನೆಸ್ ಸರ್ಟಿಫಿಕೇಟ್ ಕೊಡಬೇಕು. ಅದು ಸುಲಭದ ಕೆಲಸ ಅಲ್ಲ. ಅಲ್ಲಿ ಕೂಡ ರಿಶಭ್ ಇಚ್ಛಾಶಕ್ತಿ ಗೆದ್ದಿತ್ತು. ಮಾರ್ಚ್ 12ರಂದು ಆತನು ಕ್ರಿಕೆಟ್ ಆಡಲು ಸಂಪೂರ್ಣ ಫಿಟ್ ಎಂದು ಬಿಸಿಸಿಐ ಘೋಷಣೆ ಮಾಡಿದಾಗ ಆತ ಮೈದಾನದ ಮಧ್ಯೆ ಕೂತು ಜೋರಾಗಿ ಕಣ್ಣೀರು ಹಾಕಿದ್ದನು! ಎರಡೇ ದಿನದಲ್ಲಿ ಡೆಲ್ಲಿ ಐಪಿಎಲ್ ತಂಡವು ಆತನನ್ನು ತೆರೆದ ತೋಳುಗಳಿಂದ ಸ್ವಾಗತ ಮಾಡಿ ನಾಯಕತ್ವವನ್ನು ಕೂಡ ಆತನಿಗೆ ನೀಡಿತ್ತು! ಈ ಐಪಿಎಲ್ ಸೀಸನ್‌ನಲ್ಲಿ ವಿಕೆಟ್ ಮುಂದೆ ಮತ್ತು ಹಿಂದೆ ಆತ ಆಕ್ರಮಣಕಾರಿ ಆಗಿ ಆಡುತ್ತಿರುವುದನ್ನು ನೀವು ನೋಡಿಯೇ ನೋಡಿರುತ್ತೀರಿ!

ಮುಂದಿನ T20 ವಿಶ್ವಕಪ್ ಟೂರ್ನಿಯಲ್ಲಿ ಭಾರತಕ್ಕೆ ಒಬ್ಬ ಅದ್ಭುತ ಬ್ಯಾಟರ್ ಮತ್ತು ವಿಕೆಟ್ ಕೀಪರ್ ದೊರಕಿದ್ದನ್ನು ನಾವು ಸಂಭ್ರಮಿಸಲು ಯಾವ ಅಡ್ಡಿ ಕೂಡ ಇಲ್ಲ ಎನ್ನಬಹುದು. ಆತನಿಗೆ ಶುಭವಾಗಲಿ.

ಇದನ್ನೂ ಓದಿ: ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

Continue Reading

ಅಂಕಣ

ರಾಜಮಾರ್ಗ ಅಂಕಣ: ವಾಲ್ಮೀಕಿ ರಾಮಾಯಣ vs ಹನುಮಾನ್ ರಾಮಾಯಣ

ರಾಜಮಾರ್ಗ ಅಂಕಣ: ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು.

VISTARANEWS.COM


on

Koo

ಈ ಕಥೆಯಲ್ಲಿ ಅದ್ಭುತ ಸಂದೇಶ ಇದೆ

Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ಈ ಕಥೆಗೆ ಮೂಲ ಯಾವುದು ಎಂದು ಕೇಳಬೇಡಿ. ಆದರೆ ಅದರಲ್ಲಿ ಅದ್ಭುತ ಸಂದೇಶ ಇರುವ ಕಾರಣ ಅದನ್ನು ಇಲ್ಲಿ ಬರೆಯುತ್ತಿದ್ದೇನೆ. ಇದು ಯಾವುದೋ ಒಂದು ವ್ಯಾಟ್ಸಪ್ ಗುಂಪಿನಲ್ಲಿ ಬಂದ ಲೇಖನ ಆಗಿದೆ.

ಹನುಮಂತನೂ ಒಂದು ರಾಮಾಯಣ ಬರೆದಿದ್ದ!

ವಾಲ್ಮೀಕಿ ರಾಮಾಯಣ ಬರೆದು ಮುಗಿಸಿದಾಗ ಅದನ್ನು ಓದಿದ ನಾರದನಿಗೆ ಅದು ಖುಷಿ ಕೊಡಲಿಲ್ಲ. ಆತ ಹೇಳಿದ್ದೇನೆಂದರೆ – ಇದು ಚೆನ್ನಾಗಿದೆ. ಆದರೆ ಹನುಮಂತ ಒಂದು ರಾಮಾಯಣ ಬರೆದಿದ್ದಾನೆ. ಅದಿನ್ನೂ ಚೆನ್ನಾಗಿದೆ!

ಈ ಮಾತು ಕೇಳದೆ ವಾಲ್ಮೀಕಿಗೆ ಸಮಾಧಾನ ಆಗಲಿಲ್ಲ. ಆತನು ತಕ್ಷಣ ನಾರದನನ್ನು ಕರೆದುಕೊಂಡು ಹನುಮಂತನನ್ನು ಹುಡುಕಿಕೊಂಡು ಹೊರಟನು. ಅಲ್ಲಿ ಹನುಮಂತನು ಧ್ಯಾನಮಗ್ನನಾಗಿ ಕುಳಿತು ಏಳು ಅಗಲವಾದ ಬಾಳೆಲೆಯ ಮೇಲೆ ಇಡೀ ರಾಮಾಯಣದ ಕಥೆಯನ್ನು ಚಂದವಾಗಿ ಬರೆದಿದ್ದನು. ಅದನ್ನು ಓದಿ ವಾಲ್ಮೀಕಿ ಜೋರಾಗಿ ಅಳಲು ಆರಂಭ ಮಾಡಿದನು. ಹನುಮಂತ “ಮಹರ್ಷಿ, ಯಾಕೆ ಅಳುತ್ತಿದ್ದೀರಿ? ನನ್ನ ರಾಮಾಯಣ ಚೆನ್ನಾಗಿಲ್ಲವೇ?” ಎಂದನು.

ಅದಕ್ಕೆ ವಾಲ್ಮೀಕಿ “ಹನುಮಾನ್, ನಿನ್ನ ರಾಮಾಯಣ ರಮ್ಯಾದ್ಭುತ ಆಗಿದೆ. ನಿನ್ನ ರಾಮಾಯಣ ಓದಿದ ನಂತರ ನನ್ನ ರಾಮಾಯಣ ಯಾರೂ ಓದುವುದಿಲ್ಲ!’ ಎಂದು ಮತ್ತೆ ಅಳಲು ಆರಂಭ ಮಾಡಿದನು. ಈ ಮಾತನ್ನು ಕೇಳಿದ ಹನುಮಾನ್ ತಾನು ರಾಮಾಯಣ ಬರೆದಿದ್ದ ಬಾಳೆಲೆಗಳನ್ನು ಅರ್ಧ ಕ್ಷಣದಲ್ಲಿ ಹರಿದು ಹಾಕಿದನು! ಅವನು ವಾಲ್ಮೀಕಿಗೆ ಹೇಳಿದ ಮಾತು ‘ಮಹರ್ಷಿ, ನೀವಿನ್ನು ಆತಂಕ ಮಾಡಬೇಡಿ. ಇನ್ನು ನನ್ನ ರಾಮಾಯಣ ಯಾರೂ ಓದುವುದಿಲ್ಲ!’

hanuman

ಹನುಮಾನ್ ಹೇಳಿದ ಜೀವನ ಸಂದೇಶ

‘ವಾಲ್ಮೀಕಿ ಮಹರ್ಷಿ. ನೀವು ರಾಮಾಯಣ ಬರೆದ ಉದ್ದೇಶ ನಿಮ್ಮನ್ನು ಜಗತ್ತು ನೆನಪಿಟ್ಟುಕೊಳ್ಳಬೇಕು ಎಂದು. ನನಗೆ ಆ ರೀತಿಯ ಆಸೆಗಳು ಇಲ್ಲ. ನಾನು ರಾಮಾಯಣ ಬರೆದ ಉದ್ದೇಶ ನನಗೆ ರಾಮ ನೆನಪಿದ್ದರೆ ಸಾಕು ಎಂದು! ರಾಮನ ಹೆಸರು ರಾಮನಿಗಿಂತ ದೊಡ್ಡದು. ರಾಮ ದೇವರು ನನ್ನ ಹೃದಯದಲ್ಲಿ ಸ್ಥಿರವಾಗಿದ್ದಾನೆ. ನನಗೆ ಇನ್ನು ಈ ರಾಮಾಯಣದ ಅಗತ್ಯ ಇಲ್ಲ!’

ಈಗ ವಾಲ್ಮೀಕಿ ಇನ್ನೂ ಜೋರಾಗಿ ಅಳಲು ತೊಡಗಿದನು. ಅವನ ಅಹಂಕಾರದ ಪೊರೆಯು ಕಳಚಿ ಹೋಗಿತ್ತು. ಆತನು ಒಂದಕ್ಷರವೂ ಮಾತಾಡದೆ ಹನುಮಂತನ ಪಾದಸ್ಪರ್ಶ ಮಾಡಿ ಹಿಂದೆ ಹೋದನು.

ಭರತ ವಾಕ್ಯ

ನಾವು ಮಾಡುವ ಎಲ್ಲಾ ಕೆಲಸಗಳ ಹಿಂದೆ ಒಂದಲ್ಲಾ ಒಂದು ಸ್ವಾರ್ಥ ಇರುತ್ತದೆ. ಕೆಲವರಿಗೆ ದುಡ್ಡಿನ ದಾಹ. ಕೆಲವರಿಗೆ ಕೀರ್ತಿಯ ಮೋಹ. ಇನ್ನೂ ಕೆಲವರಿಗೆ ಅಧಿಕಾರದ ಆಸೆ. ಇನ್ನೂ ಕೆಲವರಿಗೆ ಜನಪ್ರಿಯತೆಯ ಲೋಲುಪತೆ. ಅವುಗಳನ್ನು ಬಿಟ್ಟರೆ ನಾವೂ ಹನುಮಂತನ ಎತ್ತರಕ್ಕೆ ಏರಬಹುದು. ಏನಂತೀರಿ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading

ಅಂಕಣ

JEE Main 2024 Result: ದೇಶಕ್ಕೇ ಮೊದಲ ರ‍್ಯಾಂಕ್ ಪಡೆದ ರೈತನ ಮಗ! ಈತನ ಯಶಸ್ಸು ಸ್ಫೂರ್ತಿದಾಯಕ

JEE Main 2024 Result: ರೈತನ ಮಗನಾದ ಗಜರೆ ತಮ್ಮ ಗ್ರಾಮವನ್ನು ಬಿಟ್ಟು ನಾಗಪುರದಲ್ಲಿ ಜೆಇಇಗಾಗಿ ಕೋಚಿಂಗ್‌ ಪಡೆದಿದ್ದರು. ಅವರು ತಮ್ಮ 10ನೇ ತರಗತಿ ಪರೀಕ್ಷೆಗಳಲ್ಲಿ 97% ಅಂಕಗಳನ್ನು ಗಳಿಸಿದರು.

VISTARANEWS.COM


on

Nilkrishna Gajare JEE main 2024 result AIR 1
Koo

ಹೊಸದಿಲ್ಲಿ: ಮಹಾರಾಷ್ಟ್ರದ ವಾಶಿಮ್‌ನ ರೈತರ ಮಗ (farmer’s son) ನೀಲಕೃಷ್ಣ ಗಜರೆ (Nilkrishna Gajare) ಅವರು ಜೆಇಇ ಮೇನ್ 2024 ಪರೀಕ್ಷೆಯಲ್ಲಿ (JEE Main 2024 Result) ದೇಶಕ್ಕೇ ಅಗ್ರಸ್ಥಾನ (AIR 1, First Rank) ಪಡೆದಿದ್ದಾರೆ. ಪರೀಕ್ಷೆಯಲ್ಲಿ ಪರಿಪೂರ್ಣ ಅಂಕಗಳನ್ನು (100) ಗಳಿಸಿದ್ದಾರೆ. ದಕ್ಷೇಶ್ ಸಂಜಯ್ ಮಿಶ್ರಾ ಮತ್ತು ಆರವ್ ಭಟ್ ಕ್ರಮವಾಗಿ AIR 2 ಮತ್ತು 3 ಪಡೆದಿದ್ದಾರೆ. ದೇಶದ ವಿವಿಧ ರಾಜ್ಯಗಳ ಒಟ್ಟು 56 ವಿದ್ಯಾರ್ಥಿಗಳು ಪೂರ್ಣ ಅಂಕ ಗಳಿಸಿದ್ದಾರೆ.

ರೈತನ ಮಗನಾದ ಗಜರೆ ತಮ್ಮ ಗ್ರಾಮವನ್ನು ಬಿಟ್ಟು ನಾಗಪುರದಲ್ಲಿ ಜೆಇಇಗಾಗಿ ಕೋಚಿಂಗ್‌ ಪಡೆದಿದ್ದರು. ಅವರು ತಮ್ಮ 10ನೇ ತರಗತಿ ಪರೀಕ್ಷೆಗಳಲ್ಲಿ 97% ಅಂಕಗಳನ್ನು ಗಳಿಸಿದರು. “ಪರೀಕ್ಷೆಯನ್ನು ತೆಗೆದುಕೊಂಡ ನಂತರ, ನಾನು ಪ್ರಶ್ನೆ ಪತ್ರಿಕೆಯನ್ನು ವಿಶ್ಲೇಷಿಸಿದೆ. ನಾನು ದುರ್ಬಲ ವಿಷಯಗಳ ಮೇಲೆ ವಿಶೇಷ ಗಮನವನ್ನು ನೀಡುತ್ತಿದ್ದೇನೆ. JEEಯಂತಹ ಪರೀಕ್ಷೆಯನ್ನು ಉತ್ತರಿಸಲು ಸ್ಪಷ್ಟ ಪರಿಕಲ್ಪನೆಗಳನ್ನು ಹೊಂದಿರುವುದು ಬಹಳ ಮುಖ್ಯ. ಇದಲ್ಲದೆ ನಾನು ಒಂದಕ್ಕಿಂತ ಹೆಚ್ಚು ಬಾರಿ ಪ್ರಶ್ನೆಗಳನ್ನು ಅಭ್ಯಾಸ ಮಾಡುತ್ತೇನೆ” ಎಂದು ಗಜರೆ ಹೇಳಿದ್ದಾರೆ.

IIT- JEEಗೆ ತಯಾರಾಗಲು ಗಜರೆ 11ನೇ ತರಗತಿಯಲ್ಲಿ ALLEN ವೃತ್ತಿ ಸಂಸ್ಥೆಗೆ ಸೇರಿದರು. ಅವರು ತಮ್ಮ ಪ್ರಯಾಣದ ಅಡೆತಡೆಗಳನ್ನು ಹೇಗೆ ನಿವಾರಿಸಿಕೊಂಡರು ಎಂಬುದನ್ನು ಹಂಚಿಕೊಂಡಿದ್ದಾರೆ.

“ನನ್ನ ಜೆಇಇ ಪ್ರಯಾಣ 11ನೇ ತರಗತಿಯಲ್ಲಿ ಪ್ರಾರಂಭವಾದ ಮೊದಲ ಒಂದು ಅಥವಾ ಎರಡು ತಿಂಗಳುಗಳಲ್ಲಿ ನಾನು ಸ್ವಲ್ಪ ತೊಂದರೆಗಳನ್ನು ಎದುರಿಸಿದೆ. ಅಂದರೆ, 10ನೇ ತರಗತಿಗೆ ಹೋಲಿಸಿದರೆ 11 ಮತ್ತು 12ನೇ ತರಗತಿಗಳ ಪಠ್ಯಕ್ರಮವು ಸಾಕಷ್ಟು ವಿಸ್ತಾರವಾಗಿದೆ. ಆದ್ದರಿಂದ ನಾನು ಆರಂಭದಲ್ಲಿ ಕೆಲವು ತೊಂದರೆಗಳನ್ನು ಎದುರಿಸಿದೆ. ಆದರೆ ನಾನು ಕೈಬಿಡಲಿಲ್ಲ. ನನ್ನ ಅಧ್ಯಯನವನ್ನು ನಿರಂತರವಾಗಿ ಮುಂದುವರಿಸಿದೆ. ನಾನು ವಿದ್ಯಾರ್ಥಿಗಳಿಗೆ ನೀಡಲು ಬಯಸುವ ಸಂದೇಶ ಏನೆಂದರೆ, ನೀವು ಅಂತಹ ತೊಂದರೆಗಳನ್ನು ಎದುರಿಸಿದರೆ ಅಥವಾ ನನ್ನಿಂದ ಸಾಧ್ಯವೇ ಇಲ್ಲ ಎಂದು ಭಾವಿಸಿದರೆ, ಕೈಬಿಡಬೇಡಿ. ನಿಮ್ಮ ಸಿದ್ಧತೆಯನ್ನು ನಿರಂತರವಾಗಿ ಮುಂದುವರಿಸಿ. ಒಳ್ಳೆಯ ಫಲಿತಾಂಶ ದಕ್ಕುತ್ತದೆ” ಎಂದು ಅವರು ಇನ್‌ಸ್ಟಿಟ್ಯೂಟ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ ಲೈವ್ ವೇಳೆ ಹೇಳಿದರು.

“ಜೆಇಇ ಅಡ್ವಾನ್ಸ್ಡ್‌ನಲ್ಲಿ ಐಐಟಿ ಬಾಂಬೆಯಲ್ಲಿ ಕಂಪ್ಯೂಟರ್ ಸೈನ್ಸ್‌ ಸೀಟು ಪಡೆಯುವುದು ನನ್ನ ಗುರಿ. ಪ್ರಸ್ತುತ ಅದಕ್ಕಾಗಿ ತಯಾರಿ ನಡೆಸುತ್ತಿದ್ದೇನೆ” ಎಂದು ಗಜರೆ ಹೇಳಿದ್ದಾರೆ. ಐಐಟಿ-ಜೆಇಇ ಆಕಾಂಕ್ಷಿಗಳಿಗೆ ಗಜರೆ ಸಲಹೆಯನ್ನೂ ಹಂಚಿಕೊಂಡಿದ್ದಾರೆ. “ನಿಮ್ಮ ಗುರಿಯನ್ನು ಖಚಿತಪಡಿಸಿ. ಅದರ ಪ್ರಕಾರ ನಿಮ್ಮ ಸಿದ್ಧತೆಯನ್ನು ನಿರಂತರವಾಗಿ ಮಾಡಿ. ವಿಷಯಗಳನ್ನು ನಿಜವಾದ ಆಸಕ್ತಿಯಿಂದ ಅಧ್ಯಯನ ಮಾಡಿ. ಇದರಿಂದ ಅವು ಹೊರೆಯಾಗುವುದಿಲ್ಲ. ನಿಮ್ಮ ಸಿದ್ಧತೆಯನ್ನು ಸ್ಥಿರವಾಗಿ ಮತ್ತು ನಿರಂತರವಾಗಿ ಮಾಡಿ.”

56 ಅಭ್ಯರ್ಥಿಗಳಿಗೆ ಶೇ.100 ಅಂಕ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಜೆಇಇ ಮುಖ್ಯ 2024 ಸೆಷನ್ 2 ಪರೀಕ್ಷಾ ಫಲಿತಾಂಶ (JEE Main 2024 Result session 2) ಪ್ರಕಟವಾಗಿದೆ. ಒಟ್ಟು 56 ಅಭ್ಯರ್ಥಿಗಳು (Students) ಶೇ.100 ಅಂಕಗಳನ್ನು ಗಳಿಸಿದ್ದು, ಕಳೆದ ಬಾರಿಗಿಂತ 13 ಹೆಚ್ಚು ವಿದ್ಯಾರ್ಥಿಗಳು ಇದನ್ನು ಪಡೆದಿದ್ದಾರೆ. ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳು ಶೇ.100 ಅಂಕ ಪಡೆದಿದ್ದಾರೆ. ಕಟ್‌ಆಫ್‌ (Cut off marks) ಅಂಕಗಳನ್ನು ಕೂಡ 2.45%ರಷ್ಟು ಹೆಚ್ಚಿಸಲಾಗಿದೆ.

ಸಂಸ್ಥೆಯು ಇಂದು ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮುಖ್ಯ 2024 ಫಲಿತಾಂಶವನ್ನು ಬಿಡುಗಡೆ ಮಾಡಿದೆ. 2024ರ ಪರೀಕ್ಷೆಗಳಲ್ಲಿ ಒಟ್ಟು 9.24 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 8.2 ಲಕ್ಷ ಜನರು ಜನವರಿ ಮತ್ತು ಏಪ್ರಿಲ್‌ನಲ್ಲಿ ನಡೆದ JEE ಮುಖ್ಯ 2023 ಪರೀಕ್ಷೆಗಳಿಗೆ ಹಾಜರಾಗಿದ್ದರು. ಜೆಇಇ ಮುಖ್ಯ ಏಪ್ರಿಲ್ ಸೆಷನ್‌ಗೆ ಹಾಜರಾದವರು ತಮ್ಮ ಅಂಕಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು: jeemain.nta.ac.in.

ಇದನ್ನೂ ಓದಿ: JEE Main 2024 Result: ಜೆಇಇ ಮೇನ್‌ ಫಲಿತಾಂಶ ಪ್ರಕಟ, 56 ಅಭ್ಯರ್ಥಿಗಳಿಗೆ ಶೇ.100 ಅಂಕ, ಕಟ್‌ಆಫ್‌ 2.45% ಹೆಚ್ಚಳ

Continue Reading
Advertisement
Ayushman Bharat Diwas
ಆರೋಗ್ಯ5 mins ago

Ayushman Bharat Diwas: ಇಂದು ಆಯುಷ್ಮಾನ್ ಭಾರತ್ ದಿನ; ಏನಿದರ ಮಹತ್ವ?

Onion Benefits
ಆರೋಗ್ಯ12 mins ago

Onion Benefits: ಬೇಸಿಗೆಯಲ್ಲಿ ಆಗಾಗ ಹಸಿ ಈರುಳ್ಳಿ ತಿನ್ನಲೇಬೇಕು ಯಾಕೆ ಗೊತ್ತೆ?

rajamarga column srikant bolla
ಅಂಕಣ17 mins ago

ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

Karnataka weather
ಕರ್ನಾಟಕ42 mins ago

Karnataka Weather: ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರ; ಮೇ 3ರವರೆಗೆ ಹೆಚ್ಚಿರಲಿದೆ ಶಾಖದ ಅಲೆಗಳ ತೀವ್ರತೆ!

Vistara Editorial
ಸಂಪಾದಕೀಯ1 hour ago

ವಿಸ್ತಾರ ಸಂಪಾದಕೀಯ: ಸ್ತ್ರೀಯರ ಘನತೆಗೆ ಹಾನಿ ಎಸಗಿದವರಿಗೆ ಕಠಿಣ ಶಿಕ್ಷೆಯಾಗಲಿ

Labour Day 2024
ದೇಶ1 hour ago

Labour Day 2024: ಕಾರ್ಮಿಕರು ಕೇಂದ್ರ ಸರ್ಕಾರದ ಇ-ಶ್ರಮ ಯೋಜನೆಯ ಪ್ರಯೋಜನ ಪಡೆಯುವುದು ಹೇಗೆ?

Paneer test
ಆರೋಗ್ಯ1 hour ago

Paneer Test: ನಾವು ತಿನ್ನುವ ಪನೀರ್‌ ಶುದ್ಧವಾದದ್ದೋ, ಕಲಬೆರಕೆಯದ್ದೋ ಪರೀಕ್ಷೆ ಮಾಡೋದು ಹೇಗೆ?

dina bhavishya read your daily horoscope predictions for April 30 2024
ಭವಿಷ್ಯ2 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

Pakistan Inflation
ವಿದೇಶ7 hours ago

Pakistan Inflation: ಪಾಕಿಸ್ತಾನ ಮತ್ತಷ್ಟು ದಿವಾಳಿ; ಲೀಟರ್‌ ಪೆಟ್ರೋಲ್‌ಗೆ 290 ರೂ., ಕೆ.ಜಿ ಹಿಟ್ಟಿಗೆ 800 ರೂ.

Honnavar News
ಉತ್ತರ ಕನ್ನಡ7 hours ago

Honnavar News: ಮಕ್ಕಳಿಗೆ ಉತ್ತಮ ಶಿಕ್ಷಣದ ಜತೆಗೆ ಸಂಸ್ಕಾರವೂ ಬೇಕು: ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 202418 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202419 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌