IND VS BANGLA | ಕೊಹ್ಲಿ, ರಾಹುಲ್​ ಅರ್ಧಶತಕ; ಬಾಂಗ್ಲಾ ಗೆಲುವಿಗೆ 185 ರನ್​ ಸವಾಲು - Vistara News

Latest

IND VS BANGLA | ಕೊಹ್ಲಿ, ರಾಹುಲ್​ ಅರ್ಧಶತಕ; ಬಾಂಗ್ಲಾ ಗೆಲುವಿಗೆ 185 ರನ್​ ಸವಾಲು

ರಾಹುಲ್​ (50) ಮತ್ತು ವಿರಾಟ್​ ಕೊಹ್ಲಿ(64*) ಅರ್ಧಶತಕದ ಬ್ಯಾಟಿಂಗ್​ ನೆರವಿನಿಂದ ಭಾರತ ತಂಡ ಬಾಂಗ್ಲಾ ವಿರುದ್ಧ184 ರನ್​ ಗಳಿಸಿ ಸವಾಲೊಡ್ಡಿದೆ.

VISTARANEWS.COM


on

t20
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಡಿಲೇಡ್​: ಟಿ20 ವಿಶ್ವ ಕಪ್​ನ ಬುಧವಾರದ ಸೂಪರ್-12 ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಭಾರತ(IND VS BANGLA) ತಂಡ ರಾಹುಲ್​ (50) ಮತ್ತು ವಿರಾಟ್​ ಕೊಹ್ಲಿ(64* ) ಅರ್ಧಶತಕದ ಬ್ಯಾಟಿಂಗ್​ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ಗೆ 184 ರನ್​ ಗಳಿಸಿ ಸವಾಲೊಡ್ಡಿದೆ. ಬಾಂಗ್ಲಾ ತಂಡ ಗೆಲುವಿಗೆ 185 ರನ್​ ಪೇರಿಸಬೇಕಿದೆ.

ಸತತ ಬ್ಯಾಟಿಂಗ್​ ವೈಫಲ್ಯ ಅನುಭವಿಸಿ ಟೀಕೆಗೆ ಗುರಿಯಾಗಿದ್ದ ಟೀಮ್​ ಇಂಡಿಯಾ ಆರಂಭಿಕ ಬ್ಯಾಟರ್​ ಕೆ.ಎಲ್​. ರಾಹುಲ್​ ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್​ ಪ್ರದರ್ಶನ ತೋರುವ ಮೂಲಕ ತಮ್ಮ ಬ್ಯಾಟಿಂಗ್​ ಫಾರ್ಮ್ ಕಂಡುಕೊಂಡರು. ಆರಂಭದಲ್ಲಿ ಕೊಂಚ ನಿಧಾನ ಗತಿಯ ಬ್ಯಾಟಿಂಗ್​ಗೆ ಮುಂದಾದ ರಾಹುಲ್​, ಬಳಿಕ ಆಕ್ರಮಣಕಾರಿ ಆಟಕ್ಕೆ ಮುಂದಾದರು.​ 32 ಎಸೆತ ಎದುರಿಸಿದ ಅವರು ಮೂರು ಬೌಂಡರಿ ಹಾಗೂ ನಾಲ್ಕು ಸಿಕ್ಸರ್​ ನೆರವಿನಿಂದ 50 ರನ್​ ಗಳಿಸಿ ಶಕಿಬ್​ ಅಲ್​ ಹಸನ್​ಗೆ ವಿಕೆಟ್​ ಒಪ್ಪಿಸಿದರು. ನಾಯಕ ರೋಹಿತ್​ ಶರ್ಮಾ(2) ಒಂದು ಜೀವದಾನ ಪಡೆದರೂ ಇದನ್ನು ಸಮರ್ಥವಾಗಿ ಬಳಸಿಕೊಳ್ಳುವಲ್ಲಿ ವೈಫಲ್ಯ ಕಂಡರು. ಕ್ಯಾಚ್​ ಬಿಟ್ಟ ಹಸನ್​ ಮಹ್ಮುದ್ ಮುಂದಿನ ಓವರ್​ನಲ್ಲಿ ರೋಹಿತ್​ ವಿಕೆಟ್​ ಕಿತ್ತರು. ಉಳಿದಂತೆ ಸೂರ್ಯಕುಮಾರ್​ 16 ಎಸೆತದಲ್ಲಿ 30 ರನ್​ ಗಳಿಸಿದರು.

ಕೊಹ್ಲಿ ಅರ್ಧಶತಕ

ಪಾಕಿಸ್ತಾನ ಮತ್ತು ನೆದರ್ಲೆಂಡ್ಸ್​ ವಿರುದ್ಧ ಅರ್ಧಶತಕ ಸಿಡಿಸಿ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧ ಬ್ಯಾಟಿಂಗ್​ ವೈಫಲ್ಯ ಕಂಡ ವಿರಾಟ್​ ಕೊಹ್ಲಿ, ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್​ ಪ್ರದರ್ಶನ ತೋರಿದರು. ಆರಂಭದಿಂದಲೇ ಬಾಂಗ್ಲಾ ಬೌಲರ್​ಗಳ ಮೇಲೆರಗಿದ ಕೊಹ್ಲಿ 44 ಎಸೆತದಲ್ಲಿ 8 ಬೌಂಡರಿ ಹಾಗೂ ಒಂದು ಸಿಕ್ಸರ್​ ನೆರವಿನೊಂದಿಗೆ ಅಜೇಯ 64 ರನ್​ ಗಳಿಸಿದರು. ಇದರ ಜತೆಗೆ ಟಿ20 ವಿಶ್ವ ಕಪ್​ನಲ್ಲಿ ಅತ್ಯಧಿಕ ರನ್​ ಗಳಿಸಿದ ವಿಶ್ವ ದಾಖಲೆಯನ್ನು ಕೊಹ್ಲಿ ಬರೆದರು. ಈ ಮೊದಲು ಲಂಕಾದ ಮಹೇಲ ಜಯವರ್ಧನೆ (1016) ಅವರ ಹೆಸರಿನಲ್ಲಿದ ಈ ದಾಖಲೆ ಮುರಿಯಿತು. ಅಂತಿಮವಾಗಿ ಆರ್​. ಅಶ್ವಿನ್​ ಅಜೇಯ 16 ರನ್​ ಗಳಿಸಿದರು.

ಸಂಕ್ಷಿಪ್ತ ಸ್ಕೋರ್

ಭಾರತ 20 ಓವರ್‌ಗಳಲ್ಲಿ 184/6

(ವಿರಾಟ್‌ ಕೊಹ್ಲಿ 64*, ಕೆ.ಎಲ್‌.ರಾಹುಲ್‌ 50, ಹಸನ್‌ ಮೆಹ್ಮೂದ್‌ 47/3)

ಇದನ್ನೂ ಓದಿ | Team India | ತಂಡಕ್ಕೆ ಆಯ್ಕೆಯಾಗದಿರುವುದಕ್ಕೆ ಬಿಸಿಸಿಐಗೆ ಹಿಡಿ ಶಾಪ ಹಾಕಿದ ಆಟಗಾರರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Dust Storm : ಧೂಳು ಗಾಳಿಗೆ ಹೋರ್ಡಿಂಗ್ ಕುಸಿದು ಮೂವರ ಸಾವು, 59 ಮಂದಿಗೆ ಗಾಯ

Dust Storm: ಭಯಾನಕ ಘಟನೆಯಲ್ಲಿ, ವಡಾಲಾದಲ್ಲಿ ಅಟ್ಟಣಿಗೆಯೊಂದು ಕುಸಿದಿದೆ. ಸಂಜೆ 4:22 ಕ್ಕೆ, ಶ್ರೀ ಜಿ ಟವರ್ ಬಳಿಯ ಬರ್ಕತ್ ಅಲಿ ನಾಕಾದಲ್ಲಿ ಘಟನೆ ನಡೆದಿದೆ. ಹಲವಾರು ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದು, ಒಬ್ಬರು ಕಾರಿನೊಳಗೆ ಸಿಲುಕಿಕೊಂಡಿದ್ದಾರೆ. ಮುಂಬೈ ಅಗ್ನಿಶಾಮಕ ದಳ ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

VISTARANEWS.COM


on

Dust Storm
Koo

ಮುಂಬೈ: ಇಲ್ಲಿನ ಘಾಟ್​ಕೋಪರ್​ನಲ್ಲಿ ಧೂಳು ಬಿರುಗಾಳಿ ಮತ್ತು ಭಾರಿ ಮಳೆಯಿಂದಾಗಿ ಜಾಹೀರಾತು ಫಲಕ ಕುಸಿದು ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು 59 ಜನರು ಗಾಯಗೊಂಡಿದ್ದಾರೆ. ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯ (ಎನ್​​ಡಿಆರ್​) ಒಂದು ತಂಡ ಸ್ಥಳಕ್ಕೆ ತಲುಪಿ ಕಾರ್ಯಾಚರಣೆ ನಡೆಸುತ್ತಿದೆ. ಧೂಳು ಗಾಳಿಗೆ ಅನೇಕ ಕಡೆ ಅನಾಹುತಗಳು ಸಂಭವಿಸಿವೆ.

ಭಯಾನಕ ಘಟನೆಯಲ್ಲಿ, ವಡಾಲಾದಲ್ಲಿ ಅಟ್ಟಣಿಗೆಯೊಂದು ಕುಸಿದಿದೆ. ಸಂಜೆ 4:22 ಕ್ಕೆ, ಶ್ರೀ ಜಿ ಟವರ್ ಬಳಿಯ ಬರ್ಕತ್ ಅಲಿ ನಾಕಾದಲ್ಲಿ ಘಟನೆ ನಡೆದಿದೆ. ಹಲವಾರು ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದು, ಒಬ್ಬರು ಕಾರಿನೊಳಗೆ ಸಿಲುಕಿಕೊಂಡಿದ್ದಾರೆ. ಮುಂಬೈ ಅಗ್ನಿಶಾಮಕ ದಳ ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

ಭಾರತೀಯ ಹವಾಮಾನ ಇಲಾಖೆ (IMD) ಈ ಹಿಂದೆ ಮೇ 13 ರಂದು ನಗರದ ಕೆಲವು ಭಾಗಗಳಿಗೆ ಯೆಲ್ಲೊ ಅಲರ್ಟ್​ (Yellow Alret) ಎಚ್ಚರಿಕೆ ನೀಡಿತ್ತು. ವಿಶೇಷವಾಗಿ ಥಾಣೆ ಮತ್ತು ರಾಯಗಡ್ ಜಿಲ್ಲೆಗಳಲ್ಲಿ ಭಾರಿ ಮಳೆ, ಗುಡುಗು ಮತ್ತು ಶುಷ್ಕ, ವೇಗದ ಗಾಳಿಯ ಎಚ್ಚರಿಕೆ ನೀಡಿತ್ತು.

2024 ರ ಮೇ 16 ರಿಂದ ವಾಯುವ್ಯ ಭಾರತದಲ್ಲಿ ಹೊಸ ಶಾಖದ ಅಲೆ ಪ್ರಾರಂಭವಾಗುವ ಸಾಧ್ಯತೆಯಿದೆ. 2. 2024 ರ ಮೇ 17 ರವರೆಗೆ ದಕ್ಷಿಣ ಪರ್ಯಾಯ ದ್ವೀಪ ಭಾರತದಲ್ಲಿ ಗುಡುಗು, ಮಿಂಚು ಮತ್ತು ಗಾಳಿಯೊಂದಿಗೆ ಪ್ರತ್ಯೇಕ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಎಕ್ಸ್ ನಲ್ಲಿ ಪೋಸ್ಟ್​ನಲ್ಲಿ ತಿಳಿಸಿತ್ತು.

ಇದನ್ನೂ ಓದಿ: Metro Penalty: ಮೆಟ್ರೊ ಸ್ಟೇಷನ್‌ನಲ್ಲಿ ಗರ್ಲ್‌ ಫ್ರೆಂಡ್‌ಗೆ ಕಾಯುತ್ತ ಕೂತರೆ ಬೀಳುತ್ತೆ 50 ರೂ. ದಂಡ!

ಹೋರ್ಡಿಂಗ್ ಬಿದ್ದ ಕಾರಣ ಪೂಜಾ ಜಂಕ್ಷನ್ (ವಡಾಲಾ) ನಾರ್ತ್ ಬೌಂಡ್ ಮತ್ತು ಫ್ರೀವೇ ಟನಲ್ ಟ್ರಾಂಬೆ ಸೌತ್ ನಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ ಎಂದು ಮುಂಬೈ ಸಂಚಾರ ಪೊಲೀಸರು ತಿಳಿಸಿದ್ದಾರೆ. ಏತನ್ಮಧ್ಯೆ, ಮುಂಬೈ ಮೆಟ್ರೋದ ಸಂಚಾರಕ್ಕೂ ಸಮಸ್ಯೆಯಾಗಿದೆ. ಭಾರೀ ಗಾಳಿಯಿಂದಾಗಿ, ಏರ್ಪೋರ್ಟ್ ರಸ್ತೆ ಮೆಟ್ರೋ ನಿಲ್ದಾಣದ ಬಳಿಯ ಒಹೆಚ್ಇಯಲ್ಲಿ ಬಟ್ಟೆ ಸಿಲುಕಿಕೊಂಡಿತು/ ಇದರ ಪರಿಣಾಮವಾಗಿ ಮೆಟ್ರೋ ಸೇವೆಗೆ ಅಡ್ಡಿಯಾಯಿತು. ರೈಲುಗಳು ಈಗ ನಿಗದಿತ ಸಮಯಕ್ಕೆ ತಲುಪಲಿಲ್ಲ ಎಂದು ಹೇಳಿದ್ದರು.

Continue Reading

ಬೆಂಗಳೂರು

Metro Penalty: ಮೆಟ್ರೊ ಸ್ಟೇಷನ್‌ನಲ್ಲಿ ಗರ್ಲ್‌ ಫ್ರೆಂಡ್‌ಗೆ ಕಾಯುತ್ತ ಕೂತರೆ ಬೀಳುತ್ತೆ 50 ರೂ. ದಂಡ!

Metro Penalty: ಭಾರೀ ಮಳೆಯ ಸಮಯದಲ್ಲಿ ವಿಜಯನಗರದ ಮೆಟ್ರೋ ನಿಲ್ದಾಣದಲ್ಲಿ ಐದು ನಿಮಿಷ ಹೆಚ್ಚು ನಿಂತ ಅರುಣ್ ಜುಗಲ್ ಅವರಿಗೆ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಅಧಿಕಾರಿಗಳು 50 ರೂ. ದಂಡ (Penalty For Passenger) ವಿಧಿಸಿದ್ದಾರೆ. ಏನಿದು ನಿಯಮ? ಈ ವರದಿ ಓದಿ.

VISTARANEWS.COM


on

By

Metro Penalty
Koo

ಬೆಂಗಳೂರು: ಭಾರಿ ಮಳೆಯ ಕಾರಣದಿಂದ (Metro Penalty) ಮೆಟ್ರೋ ನಿಲ್ದಾಣದಲ್ಲಿ (Metro station) 20 ನಿಮಿಷಕ್ಕಿಂತ ಹೆಚ್ಚು ಕಾಲ ನಿಂತು ಮೊಬೈಲ್ ಚಾರ್ಜ್ ಮಾಡಿದ ವ್ಯಕ್ತಿಯೊಬ್ಬರಿಗೆ 50 ರೂ. ದಂಡ (Penalty For Passenger) ವಿಧಿಸಿದ್ದು ಗೊತ್ತಲ್ಲವೆ? ಬೆಂಗಳೂರಿನ (bengaluru) ವಿಜಯನಗರ (vijayanagar) ಮೆಟ್ರೊ ನಿಲ್ದಾಣದಲ್ಲಿ ಈ ವಿದ್ಯಮಾನ ಸಂಭವಿಸಿತ್ತು. ಇದರ ಸಂದೇಶ ಏನೆಂದರೆ, ನಾವು ಯಾವುದೇ ಮೆಟ್ರೊ ನಿಲ್ದಾಣದಲ್ಲಿ 20 ನಿಮಿಷಕ್ಕಿಂತ ಹೆಚ್ಚು ಹೊತ್ತು ಕಾಲ ಕಳೆದರೆ 50 ರೂ. ದಂಡ ತೆರಬೇಕಾಗುತ್ತದೆ. ಮೆಟ್ರೊ ನಿಲ್ದಾಣದಲ್ಲಿ ಯಾರಾದರು ತಮ್ಮ ಗರ್ಲ್‌ ಫ್ರೆಂಡ್‌ ಅಥವಾ ಬಾಯ್‌ ಫ್ರೆಂಡ್‌ಗಾಗಿ ಕಾಯುತ್ತ 20 ನಿಮಿಷಕ್ಕಿಂತ ಹೆಚ್ಚು ಸಮಯ ಕಳೆದರೆ ದಂಡ ಬಿದ್ದೇ ಬೀಳುತ್ತದೆ.

ಅರುಣ್ ಜುಗಲ್ ಬಂದಿ ಎಂಬವರು ಭಾರೀ ಮಳೆಯ ಸಮಯದಲ್ಲಿ ವಿಜಯನಗರದ ಮೆಟ್ರೋ ನಿಲ್ದಾಣದಲ್ಲಿ ಕುಳಿತು ತಮ್ಮ ಫೋನ್ ಅನ್ನು ಚಾರ್ಜ್ ಮಾಡಲು ನಿಂತಿದ್ದರು. ನಿಲ್ದಾಣದಲ್ಲಿ ಜನ ದಟ್ಟಣೆಯನ್ನು ತಡೆಗಟ್ಟುವ ಅಗತ್ಯವನ್ನು ಉಲ್ಲೇಖಿಸಿ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಅಧಿಕಾರಿಗಳು ದಂಡ ವಿಧಿಸಿರುವುದನ್ನು ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರಿನ ವಿಜಯನಗರ ಮೆಟ್ರೋ ನಿಲ್ದಾಣದಲ್ಲಿ ಇತ್ತೀಚೆಗೆ ಈ ಘಟನೆ ನಡೆದಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಅನುಮತಿಸಿದ 20 ನಿಮಿಷಗಳ ಅವಧಿಯನ್ನು ಮೀರಿದ್ದಕ್ಕಾಗಿ ಜುಗಲ್ ಅವರಿಗೆ 50 ರೂ. ದಂಡವನ್ನು ವಿಧಿಸಲಾಯಿತು. ನಿಲ್ದಾಣದಿಂದ ನಿರ್ಗಮಿಸಿದ ಮೇಲೆ ಅವರ ಮೆಟ್ರೋ ಕಾರ್ಡ್‌ನಿಂದ ದಂಡವನ್ನು ಸ್ವಯಂಚಾಲಿತವಾಗಿ ಕಡಿತಗೊಳಿಸಲಾಯಿತು.

5 ನಿಮಿಷ ಹೆಚ್ಚು ಕಳೆದಿದ್ದರು

ಅರುಣ್ ಜುಗಲ್ ಅವರು ಸಂದಿಗ್ಧತೆಗೆ ಸಿಲುಕಿದ್ದರು. ಏಕೆಂದರೆ ಹೊರಗೆ ಭಾರೀ ಮಳೆಯಿಂದಾಗಿ ನಿಲ್ದಾಣದಲ್ಲಿ ತಮ್ಮ ಫೋನ್ ಅನ್ನು ಚಾರ್ಜ್ ಮಾಡಲು ನಿರ್ಧರಿಸಿದರು. ಅವರ ಫೋನ್ ಬ್ಯಾಟರಿಯೂ ಖಾಲಿಯಾಗಿತ್ತು. ನಿರಂತರ ಮಳೆ ಒಂದು ಕಡೆಯಾದರೆ ಮೊಬೈಲ್ ನಲ್ಲಿ ಬ್ಯಾಟರಿ ಮುಗಿದಿದ್ದುದರಿಂದ ಚಾರ್ಜ್ ಮಾಡಲು ನಿರ್ಧರಿಸಿದ್ದರು. ಅಲ್ಲೇ ಉಳಿಯುವ ಹೊರತು ಅವರ ಬಳಿ ಬೇರೆ ದಾರಿಯಿರಲಿಲ್ಲ. ಆದರೆ, ಇದರಿಂದಾಗಿ ಅವರು ಒಟ್ಟು 25 ನಿಮಿಷ ಅಲ್ಲಿ ಕಾಲ ಕಳೆದಿದ್ದರು. ಹಾಗಾಗಿ ದಂಡ ತೆರಬೇಕಾಯಿತು.

ಮೆಟ್ರೊ ಕಾರ್ಡ್‌ನಿಂದ ಕಡಿತ

ಅಲ್ಲಿಂದ ನಿರ್ಗಮಿಸಿದ ಮೇಲೆ ಮೆಟ್ರೊ ಕಾರ್ಡ್‌ನಿಂದ 50 ರೂ. ಹೆಚ್ಚುವರಿ ಕಡಿತವಾಗಿರುವುದನ್ನು ಕಂಡು ಜುಗಲ್ ಅವರಿಗೆ ಅಚ್ಚರಿಯಾಗಿದೆ. ಶುಲ್ಕದ ಬಗ್ಗೆ ಅವರು ವಿಚಾರಿಸಿದಾಗ, ಮೆಟ್ರೋ ಸಿಬ್ಬಂದಿ ಬಿಎಂಆರ್‌ಸಿಎಲ್‌ನ ನಿಲ್ದಾಣದ ಸಮಯ ಮಿತಿ ನಿಯಮವನ್ನು ಉಲ್ಲಂಘಿಸಿದ ಅವರ ವಿಸ್ತೃತ ವಾಸ್ತವ್ಯದ ಕಾರಣ ಎಂದು ಅವರಿಗೆ ತಿಳಿಸಿದರು.

ಇದನ್ನೂ ಓದಿ: Karnataka Politics: ಆಪರೇಶನ್ ಕಮಲ ಆಗೋಕೆ ಸಾಧ್ಯಾನೇ ಇಲ್ಲ; ಇದು ಬಿಜೆಪಿಯ ಹಗಲುಗನಸು: ಸಿಎಂ ಸಿದ್ದರಾಮಯ್ಯ

ದಟ್ಟಣೆಯನ್ನು ತಡೆಗಟ್ಟಲು ಮತ್ತು ಪ್ರಯಾಣಿಕರ ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ಉದ್ದೇಶಿಸಿರುವ ಈ ನಿಯಮವು ವ್ಯಕ್ತಿಗಳು 20 ನಿಮಿಷಗಳ ಅನಂತರ ನಿಲ್ದಾಣದ ಒಳಗೆ ಇರಬಾರದು ಎಂದು ಷರತ್ತು ವಿಧಿಸುತ್ತದೆ.
ದಂಡ ವಿಧಿಸಿರುವುದನ್ನು ಬಿಎಂಆರ್ ಸಿಎಲ್ ಅಧಿಕಾರಿಗಳು ಸಮರ್ಥಿಸಿಕೊಂಡಿದ್ದು, ಈ ನಿಯಮ ಮೊದಲಿನಿಂದಲೂ ಜಾರಿಯಲ್ಲಿದ್ದು, ಮೆಟ್ರೊ ವ್ಯವಸ್ಥೆಯಲ್ಲಿ ಸುವ್ಯವಸ್ಥೆ ಹಾಗೂ ದಕ್ಷತೆ ಕಾಪಾಡುವುದು ಅಗತ್ಯವಾಗಿದೆ ಎಂದು ಹೇಳಿದ್ದಾರೆ. ಎಲ್ಲಾ ಪ್ರಯಾಣಿಕರು ಹೆಚ್ಚು ತಂಗಿದರೆ ಅದು ಜನದಟ್ಟಣೆ ಮತ್ತು ಇತರರಿಗೆ ಅನಾನುಕೂಲತೆಗೆ ಕಾರಣವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

IPL 2024: ಮಾಲೀಕನ ಜತೆ ಜಗಳ, ತಂಡದ ಬಸ್​ ಬಿಟ್ಟು ಸ್ವಂತ ಖರ್ಚಲ್ಲಿ ಪ್ರಯಾಣಿಸಿದ ಕೆ. ಎಲ್​ ರಾಹುಲ್​

IPL 2024 : ಇತ್ತೀಚೆಗೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ನಂತರ ಎಲ್ಎಸ್​​ಜಿ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಅವರು ಡಗೌಟ್ ಬಳಿ ರಾಹುಲ್ ಅವರೊಂದಿಗೆ ಜಗಳವಾಡುತ್ತಿರುವುದು ಕಂಡು ಬಂದಿತು. ಇದು ಅನೇರಿಕೆ ಬೇಸರವನ್ನುಂಟು ಮಾಡಿತ್ತು. ಹಲವಾರು ಮಂದಿ ಇದನ್ನು ಸರಿಯಾದ ಕ್ರಮವಲ್ಲ ಎಂದು ಹೇಳಿದ್ದರು.

VISTARANEWS.COM


on

IPL 2024
Koo

ಬೆಂಗಳೂರು: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ 2024 (IPL 2024) ಪಂದ್ಯಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡ ದೆಹಲಿಗೆ ಪ್ರವಾಸ ಮಾಡಿದೆ. ಆದರೆ ಈ ತಂಡದ ಜತೆ ಕೆಎಲ್ ರಾಹುಲ್ (KL Rahul) ಇರಲಿಲ್ಲ. ಈ ಅನುಪಸ್ಥಿತಿ ಅನೇಕರನ್ನು ಆಶ್ಚರ್ಯಗೊಳಿಸಿದೆ. ಅವರು ನೇರವಾಗಿ ಪಂದ್ಯಕ್ಕೆ ತಂಡದ ಜತೆ ಸೇರಬಹುದು ಎಂಬ ಊಹಾಪೋಹಗಳಿವೆಯಾದರೂ, ನಾಯಕ ಸಾಮಾನ್ಯ ರೀತಿಯಲ್ಲಿ ಪ್ರಯಾಣಿಸಲಿಲ್ಲ ಎಂಬ ಅಂಶವು ಹುಬ್ಬೇರುವಂತೆ ಮಾಡಿದೆ. ಮಾಲೀಕ ಸಂಜೀವ್​ ಗೋಯೆಂಕಾ ಅವರ ಗಲಾಟೆಯಿಂದ ಬೇಸತ್ತಿರುವ ರಾಹುಲ್ ಸ್ವಂತ ಖರ್ಚಿನಲ್ಲಿಯೇ ಪ್ರಯಾಣ ಮಾಡುತ್ತಿದ್ದಾರೆ ಎಂಬುದು ಗೊತ್ತಾಗಿದೆ. ಇದು ಅವರ ನಡುವಿನ ಮತ್ತಷ್ಟು ಸಂಘರ್ಷಕ್ಕೆ ಕಾರಣವಾಗಿದೆ.

ಇತ್ತೀಚೆಗೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದ ನಂತರ ಎಲ್ಎಸ್​​ಜಿ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಅವರು ಡಗೌಟ್ ಬಳಿ ರಾಹುಲ್ ಅವರೊಂದಿಗೆ ಜಗಳವಾಡುತ್ತಿರುವುದು ಕಂಡು ಬಂದಿತು. ಇದು ಅನೇರಿಕೆ ಬೇಸರವನ್ನುಂಟು ಮಾಡಿತ್ತು. ಹಲವಾರು ಮಂದಿ ಇದನ್ನು ಸರಿಯಾದ ಕ್ರಮವಲ್ಲ ಎಂದು ಹೇಳಿದ್ದರು. ಇನ್ನೂ ಅನೇಕರು ತಂಡದಲ್ಲಿ ಅವರ ನಾಯಕತ್ವದ ಪಾತ್ರದ ಬಗ್ಗೆ ಚರ್ಚೆಗಳನ್ನು ನಡೆಸಿದ್ದರು. ಇದಕ್ಕೆಲ್ಲ ಕಾರಣ ಲಕ್ನೊ ನೀಡಿದ್ದ 166 ರನ್​ಗಳನ್ನು ಎಸ್​ಆರ್​ಎಚ್​ ತಂಡ 9.4 ಓವರ್​ಗಳಲ್ಲಿ ಬೆನ್ನಟ್ಟಿರುವುದು.

ಸ್ಪರ್ಧೆಯಲ್ಲಿ ಜೀವಂತವಾಗಿರಲು ಲಕ್ನೊ ತಂಡಕ್ಕೆ ಗೆಲುವು ಬೇಕಾಗಿದೆ. ಅವರು ಪ್ರಸ್ತುತ 12 ಅಂಕಗಳೊಂದಿಗೆ ಏಳನೇ ಸ್ಥಾನದಲ್ಲಿದ್ದಾರೆ ಮತ್ತು ಪ್ಲೇಆಫ್ಗೆ ಅವರ ಹಾದಿ ಸುಲಭವಲ್ಲ. ಈ ನಿರ್ಣಾಯಕ ಮುಖಾಮುಖಿಗೆ ಸಜ್ಜಾಗುತ್ತಿರುವಾಗ, ಎಲ್ಲರ ಕಣ್ಣುಗಳು ರಾಹುಲ್ ಮತ್ತು ಎಲ್ಎಸ್​ಜಿ ತಂಡದ ಮೇಲೆ ನೆಟ್ಟಿವೆ.

ರಾಹುಲ್ ಅವರ ಫಾರ್ಮ್ ಕೂಡ ಪರಿಶೀಲನೆಗೆ ಒಳಗಾಗಿದೆ. ವಿಶೇಷವಾಗಿ ಟಿ 20 ವಿಶ್ವಕಪ್ ತಂಡದಿಂದ ಹೊರಗುಳಿದ ನಂತರ ಅವರ ಆಟದ ವೈಖರಿ ಬಗ್ಗೆ ಪ್ರಶ್ನೆಗಳೆದ್ದಿವೆ. ಐಪಿಎಲ್ 2024 ಋತುವಿನಾದ್ಯಂತ ಅವರ ಬ್ಯಾಟಿಂಗ್ ಪರಾಕ್ರಮವು ಶ್ಲಾಘನೀಯ. ವಿಕೆಟ್ ಕೀಪರ್-ಬ್ಯಾಟರ್​ 38.33 ಸರಾಸರಿಯಲ್ಲಿ 460 ರನ್ ಗಳಿಸಿದ್ದಾರೆ. 136.09 ಉತ್ತಮ ಉತ್ತಮ ರನ್​​ ರೇಟ್ ಹೊಂದಿದ್ದಾರೆ. ಅವರು ಶತಕ ಕಳೆದುಕೊಂಡಿದ್ದರೂ ರಾಹುಲ್ ಈ ಋತುವಿನಲ್ಲಿ ಮೂರು ಅರ್ಧಶತಕಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ: Rohit Sharma : ಭಾರತ ತಂಡದ ಹೊಸ ಜೆರ್ಸಿ ಬಿಡುಗಡೆ ಮಾಡಿದ ರೋಹಿತ್​ ಶರ್ಮಾ, ಇಲ್ಲಿದೆ ವಿಡಿಯೊ

ಎಲ್ಎಸ್​ಜಿ ಫ್ರಾಂಚೈಸಿಯ ಬಗ್ಗೆ ಮಾತನಾಡುವುದಾದರೆ ಅವರು 2022 ರಿಂದ ಐಪಿಎಲ್ ಸರ್ಕ್ಯೂಟ್​​ಗೆ ಗಮನಾರ್ಹ ಸೇರ್ಪಡೆಯಾಗಿದ್ದಾರೆ ಮತ್ತು ಅವರು ಇಲ್ಲಿಯವರೆಗೆ ಆಡಿದ ಎರಡೂ ಋತುಗಳಲ್ಲಿ ಪ್ಲೇಆಫ್ಗೆ ಅರ್ಹತೆ ಪಡೆದಿದ್ದಾರೆ. ರಾಹುಲ್, ಕ್ವಿಂಟನ್ ಡಿ ಕಾಕ್, ಮಾರ್ಕ್ ವುಡ್ ಮತ್ತು ಮಾರ್ಕಸ್ ಸ್ಟೊಯಿನಿಸ್ ಅವರ ಗಮನಾರ್ಹ ಸಹಿಗಳಲ್ಲಿ ಸೇರಿದ್ದಾರೆ. ನಂತರ ರಾಹುಲ್ ಅವರನ್ನು ತಂಡದ ನಾಯಕರನ್ನಾಗಿ ನೇಮಿಸಲಾಯಿತು, ಆಂಡಿ ಫ್ಲವರ್ ಅವರನ್ನು ಮುಖ್ಯ ಕೋಚ್ ಆಗಿ ಮತ್ತು ಗೌತಮ್ ಗಂಭೀರ್ ಅವರನ್ನು ತಂಡದ ಮಾರ್ಗದರ್ಶಕರಾಗಿ ನೇಮಿಸಲಾಯಿತು. 2022 ಮತ್ತು 2023 ರ ಋತುಗಳಲ್ಲಿ ಗುಂಪು ಹಂತದಲ್ಲಿ ಮೂರನೇ ಸ್ಥಾನದಲ್ಲಿದ್ದರೂ, ಅವರು ಪ್ಲೇಆಫ್ನಲ್ಲಿ ಹೊರಗುಳಿದರು.

Continue Reading

ಕರ್ನಾಟಕ

Climate Plan: ರಾಜ್ಯ ಸರ್ಕಾರದ ಹವಾಮಾನ ಯೋಜನೆ ಜಾರಿಗೆ ಕೇಂದ್ರ ಸರ್ಕಾರದ ಒಪ್ಪಿಗೆ; ಏನಿದು ಯೋಜನೆ?

ಹವಾಮಾನ ಬದಲಾವಣೆ ಕುರಿತ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ – ಆವೃತ್ತಿ 2 (Climate Plan) ಅನ್ನು ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ (MOEF & CC) ಏಪ್ರಿಲ್ 2021 ರಲ್ಲಿ ಕಳುಹಿಸಲಾಗಿತ್ತು. ಮೂರು ವರ್ಷಗಳ ಅನಂತರ ಅದನ್ನು ಕಾರ್ಯಗತಗೊಳಿಸಲು ರಾಜ್ಯಕ್ಕೆ ಅನುಮೋದನೆ ನೀಡಲಾಗಿದೆ.

VISTARANEWS.COM


on

By

Climate Plan
Koo

ಬೆಂಗಳೂರು: ಕರ್ನಾಟಕ (karnataka) ಸರ್ಕಾರ (government) 2021ರಲ್ಲಿ ಸಿದ್ಧಪಡಿಸಲಾದ ಹವಾಮಾನ ಕ್ರಿಯಾ ಯೋಜನೆ (Climate Plan) ಇತ್ತೀಚೆಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆದಿದೆ. ಈ ಬಾರಿ ಕರ್ನಾಟಕದಲ್ಲಿ ಅತ್ಯಂತ ಭೀಕರ ಬರಗಾಲ (worst droughts) ಎದುರಾಗಿದೆ. ಆದರೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯ ನಿರೀಕ್ಷೆ ಇದೆ. ಈ ನಡುವೆ ಇದೀಗ ಹವಾಮಾನ ಕ್ರಿಯಾ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಹವಾಮಾನ ಬದಲಾವಣೆ ಕುರಿತ ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ – ಆವೃತ್ತಿ 2 ಅನ್ನು ಪರಿಸರ ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಕ್ಕೆ (MOEF & CC) ಏಪ್ರಿಲ್ 2021ರಲ್ಲಿ ಕಳುಹಿಸಲಾಗಿತ್ತು. ಮೂರು ವರ್ಷಗಳ ಅನಂತರ ಅದನ್ನು ಕಾರ್ಯಗತಗೊಳಿಸಲು ರಾಜ್ಯಕ್ಕೆ ಅನುಮೋದನೆ ನೀಡಲಾಗಿದೆ.

42 ವಿವಿಧ ಇಲಾಖೆಗಳೊಂದಿಗೆ ಹಲವು ಬಾರಿ ಸಭೆ ನಡೆಸಿದ ಅಭಿವೃದ್ಧಿ ಆಯುಕ್ತರು, ಜೂನ್‌ನಲ್ಲಿ ಮಾದರಿ ನೀತಿ ಸಂಹಿತೆ ಹಿಂಪಡೆದ ಅನಂತರ ಯೋಜನೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದರೊಂದಿಗೆ ಹವಾಮಾನ ಯೋಜನೆಯನ್ನು ಜಾರಿಗೆ ತಂದ ಮೊದಲ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಲಿದೆ ಎಂದು ತಿಳಿಸಿದ್ದರು. ಹವಾಮಾನ ಕ್ರಿಯಾ ಯೋಜನೆ ಕಾರ್ಯಕ್ರಮಕ್ಕೆ ನಿರ್ದಿಷ್ಟ ಯೋಜನೆಗಳು, ಕಾರ್ಯಕ್ಷಮತೆ ಸೂಚಕಗಳು ಮತ್ತು ಗುರಿಗಳನ್ನು ಸಿದ್ಧಪಡಿಸಲು ನಾವು ಎಲ್ಲಾ ಇಲಾಖೆಗಳಿಗೆ ತಿಳಿಸಿದ್ದೇವೆ. ಮಾದರಿ ನೀತಿ ಸಂಹಿತೆ ಹಿಂತೆಗೆದುಕೊಂಡ ತಕ್ಷಣ ನಾವು ಸಚಿವ ಸಂಪುಟದ ಮುಂದೆ ಸಲ್ಲಿಕೆ ಮಾಡಲು ಯೋಜಿಸಿದ್ದೇವೆ ಎಂದು ಅಭಿವೃದ್ಧಿ ಆಯುಕ್ತ ಡಾ. ಶಾಲಿನಿ ರಜನೀಶ್ ಹೇಳಿದ್ದಾರೆ.

ಶೀಘ್ರ ಜಾರಿಯಾಗಬೇಕು

ಹವಾಮಾನ ವೈಪರೀತ್ಯದ ಪರಿಣಾಮ ರಾಜ್ಯದ ಮೇಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ ಕ್ರಿಯಾ ಯೋಜನೆಯನ್ನು ಶೀಘ್ರವಾಗಿ ಜಾರಿಗೊಳಿಸಬೇಕು ಎನ್ನುತ್ತಾರೆ ತಜ್ಞರು. ಪರಿಸರ ಇಲಾಖೆಯ ಅಧಿಕಾರಿಯ ಪ್ರಕಾರ, ಕ್ರಿಯಾ ಯೋಜನೆಯಲ್ಲಿ ಸೂಚಿಸಲಾದ ಕ್ರಮಗಳನ್ನು ಸಂಯೋಜಿಸಲು ಮತ್ತು ತಮ್ಮ ಗುರಿಗಳನ್ನು ಸಲ್ಲಿಸಲು ಸಂಬಂಧಿಸಿದ ಎಲ್ಲಾ ಇಲಾಖೆಗಳು ಕೆಲಸ ಮಾಡಬೇಕಾಗುತ್ತದೆ. ಪ್ರಸ್ತುತ ಕಾರ್ಯನಿರ್ವಹಣೆಯೊಂದಿಗೆ ಬೇಸ್‌ಲೈನ್‌ನಂತೆ ಕಾರ್ಯನಿರ್ವಹಿಸುವ ಪಟ್ಟಿಯನ್ನು ಸಿದ್ಧಪಡಿಸಬೇಕು. ಉದಾಹರಣೆಗೆ, ಅರಣ್ಯ ಇಲಾಖೆಯು ತಾನು ಯೋಜಿಸಿರುವ ಅರಣ್ಯೀಕರಣದ ಪ್ರಮಾಣ ಮತ್ತು ಐದು ವರ್ಷಗಳಲ್ಲಿ ಗುರಿಯನ್ನು ಸಲ್ಲಿಸಬೇಕು ಎಂದವರು ಅಭಿಪ್ರಾಯಪಟ್ಟಿದ್ದಾರೆ.

ಏನೆಲ್ಲಾ ಒಳಗೊಂಡಿರುತ್ತದೆ?

ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (EMPRI) ಸಿದ್ಧಪಡಿಸಿದ ಕ್ರಿಯಾ ಯೋಜನೆಯು ಹವಾಮಾನ ಬದಲಾವಣೆಯ ಪರಿಣಾಮಗಳನ್ನು ತಗ್ಗಿಸಲು ಹಲವಾರು ಮಧ್ಯಸ್ಥಿಕೆಗಳು ಮತ್ತು ಮೌಲ್ಯಮಾಪನ ತಂತ್ರಗಳನ್ನು ಸೂಚಿಸುತ್ತದೆ. ಕೃಷಿ, ತೋಟಗಾರಿಕೆ, ಅರಣ್ಯ, ಗ್ರಾಮೀಣಾಭಿವೃದ್ಧಿ ಮತ್ತು 10 ಇತರ ಕ್ಷೇತ್ರಗಳಲ್ಲಿ ಕ್ರಮಗಳನ್ನು ಜಾರಿಗೆ ತರಲು 2025 ಮತ್ತು 2030 ರ ನಡುವೆ ರಾಜ್ಯಕ್ಕೆ 52,827 ಕೋಟಿ ರೂಪಾಯಿ ಅಗತ್ಯವಿದೆ ಎಂದು ಯೋಜನೆ ಸೂಚಿಸುತ್ತದೆ.

ಹಣಕಾಸು ಅಂದಾಜು ಹೆಚ್ಚಳ ಸಾಧ್ಯತೆ

ಅರಣ್ಯೀಕರಣದಿಂದ ನವೀಕರಿಸಬಹುದಾದ ಶಕ್ತಿಯ ಬಳಕೆಯವರೆಗೆ, ಯೋಜನೆಯು ಪ್ರತಿಯೊಂದು ಇಲಾಖೆಗೆ ಕ್ರಮಗಳನ್ನು ಸೂಚಿಸುತ್ತದೆ.

ಹಣಕಾಸಿನ ಅಂದಾಜುಗಳನ್ನು 2021ರಲ್ಲಿ ಸಿದ್ಧಪಡಿಸಲಾಗಿದೆ ಮತ್ತು ಈಗ ಹೆಚ್ಚಾಗಿರಬಹುದು. ಕ್ರಿಯಾ ಯೋಜನೆಯು ಹಣವನ್ನು ಸಂಗ್ರಹಿಸಲು ಹಲವಾರು ಹಣಕಾಸು ವಿಧಾನಗಳನ್ನು ರೂಪಿಸುತ್ತದೆ. ನಾವು ಇಲಾಖೆ-ನಿರ್ದಿಷ್ಟ ಯೋಜನೆಗಳನ್ನು ಹೊಂದಬಹುದು ಎಂದು ಕ್ರಿಯಾ ಯೋಜನೆ ತಯಾರಿಕೆಯ ಭಾಗವಾಗಿದ್ದ ಪ್ರೊ. ಕೃಷ್ಣ ರಾಜ್ ಹೇಳಿದ್ದಾರೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.


ಖಾಸಗಿ ಹೂಡಿಕೆಗಳನ್ನು ಆಕರ್ಷಿಸುವುದರಿಂದ ಹಿಡಿದು ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಉತ್ತಮ ಬಳಕೆಗೆ, ಯೋಜನೆಯು ವಿವಿಧ ಹಣಕಾಸು ವಿಧಾನಗಳನ್ನು ವಿವರಿಸುತ್ತದೆ.ಬರ ಮತ್ತು ಪ್ರವಾಹಗಳ ಆವರ್ತನ ಹೆಚ್ಚಾಗಿದೆ. ತಾಪಮಾನ ಮತ್ತು ಮಳೆಯ ಮಾದರಿಗಳು ಅನಿರೀಕ್ಷಿತವಾಗಿವೆ. ಇವುಗಳು ಅನೇಕ ಕ್ಷೇತ್ರಗಳ ಮೇಲೆ, ವಿಶೇಷವಾಗಿ ಕೃಷಿಯ ಮೇಲೆ ನೇರ ಪರಿಣಾಮ ಬೀರುತ್ತವೆ. ಕೃಷಿಯ ಮೇಲೆ ಪರಿಣಾಮ ಬೀರಿದರೆ, ಅದು ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ, ಕ್ರಮವನ್ನು ಕಾರ್ಯಗತಗೊಳಿಸುವುದು ನಿರ್ಣಾಯಕವಾಗಿದೆ ಎಂದು ಅವರು ಹೇಳಿದ್ದಾರೆ. ಇತ್ತೀಚಿನ ಬರ ಪರಿಸ್ಥಿತಿ ಮತ್ತು ನೀರಿನ ಕೊರತೆಯಿಂದಾಗಿ ಅಧಿಕಾರಿಗಳು ಮತ್ತು ನಾಗರಿಕರಲ್ಲಿ ಜಾಗೃತಿ ಹೆಚ್ಚಾಗಿದೆ ಮತ್ತು ಆದ್ದರಿಂದ ಈ ಕ್ರಮಕ್ಕೆ ಇದು ಸರಿಯಾದ ಸಮಯ ಎಂದು ಪರಿಸರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Karnataka Politics: ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಪತನ? ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಮಹತ್ವದ ಸುಳಿವು!

ಏನು ಕ್ರಮ ?

ಕೃಷಿಗೆ ಶುಷ್ಕ- ಋತುವಿಗೆ ಸಂಬಂಧಿಸಿದ ವಿವಿಧ ಬೆಳೆ ಯೋಜನೆ, ನಿಖರವಾದ ನೀರಾವರಿ ತಂತ್ರಜ್ಞಾನ ಅಳವಡಿಕೆ. ಅರಣ್ಯಕ್ಕೆ ಹವಾಮಾನಕ್ಕೆ ಪೂರಕವಾದ ಅರಣ್ಯೀಕರಣ ಕಾರ್ಯಕ್ರಮಗಳು, ಜಾನುವಾರುಗಳ ಸಮಗ್ರ ರೋಗಗಾಲ ಮೇಲೆ ಕಣ್ಗಾವಲು ಮತ್ತು ತಕ್ಷಣ ಪ್ರತಿಕ್ರಿಯೆ ನೀಡಲು ಕ್ರಮ. ಅಂತರ್ಜಲ ಹೆಚ್ಚಳಕ್ಕೆ ಸೂಕ್ತ ಕ್ರಮ ಕೈಗೊಳ್ಳುವುದು. ಶಕ್ತಿ ಮೂಲಗಳಲ್ಲಿ ನವೀಕರಿಸಬಹುದಾದ ವಸ್ತುಗಳ ಮೇಲೆ ಹೆಚ್ಚಿನ ಗಮನ ಹರಿಸುವುದು ಮೊದಲಾದವುಗಳನ್ನು ಹವಾಮಾನ ಕ್ರಿಯಾ ಯೋಜನೆಯಲ್ಲಿ ಆದ್ಯತೆ ನೀಡಲಾಗಿದೆ.

Continue Reading
Advertisement
Narendra Modi
ದೇಶ19 mins ago

Narendra Modi: ವಾರಾಣಸಿಯಲ್ಲಿ ಹೊಸ ಅಲೆ ಸೃಷ್ಟಿಸಿದ ಮೋದಿ, ಶಕ್ತಿ ಪ್ರದರ್ಶನ; ರೋಡ್‌ ಶೋ Photos ಇಲ್ಲಿವೆ

Pratibha Puraskar
ಕರ್ನಾಟಕ36 mins ago

Pratibha Puraskar: ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ; ಮೇ 31 ಕೊನೆಯ ದಿನ

HD Revanna Bail Revanna will not leave the country condition imposed by the court
ಕ್ರೈಂ1 hour ago

HD Revanna Bail: ರೇವಣ್ಣಗೆ ಜಾಮೀನು; ನಾಳೆ 11 ದಿನದ ವನವಾಸದಿಂದ ಮುಕ್ತಿ; ಬೇಲ್‌ ಸಿಗಲು ಕಾರಣವೇನು?

Dust Storm
ಪ್ರಮುಖ ಸುದ್ದಿ1 hour ago

Dust Storm : ಧೂಳು ಗಾಳಿಗೆ ಹೋರ್ಡಿಂಗ್ ಕುಸಿದು ಮೂವರ ಸಾವು, 59 ಮಂದಿಗೆ ಗಾಯ

CopConnect cyber security caffe inauguration by Dr Nagalakshmi Chaudhary at bengaluru
ಬೆಂಗಳೂರು1 hour ago

Bengaluru News: ಮಹಿಳೆಯರು ಸೋಷಿಯಲ್‌ ಮೀಡಿಯಾ ಬಳಸುವಾಗ ಎಚ್ಚರ ವಹಿಸಬೇಕು ಎಂದ ಮಹಿಳಾ ಆಯೋಗದ ಅಧ್ಯಕ್ಷೆ

35 crore crop damage insurance deposit for farmers of Yallapur constituency says MLA Shivaram Hebbar
ಉತ್ತರ ಕನ್ನಡ1 hour ago

Uttara Kannada News: ಯಲ್ಲಾಪುರ ಕ್ಷೇತ್ರದ ರೈತರಿಗೆ 35 ಕೋಟಿ ರೂ. ಬೆಳೆ ಹಾನಿ ವಿಮೆ ಜಮಾ: ಶಿವರಾಮ ಹೆಬ್ಬಾರ್‌

Bilhara village farmer grew bumper mango on barren land
ಕರ್ನಾಟಕ1 hour ago

Yadgiri News: ಬರಡು ಭೂಮಿಯಲ್ಲಿ ಈ ರೈತ ಬಂಪರ್ ಮಾವು ಬೆಳೆದಿದ್ದು ಹೇಗೆ?

Metro Penalty
ಬೆಂಗಳೂರು1 hour ago

Metro Penalty: ಮೆಟ್ರೊ ಸ್ಟೇಷನ್‌ನಲ್ಲಿ ಗರ್ಲ್‌ ಫ್ರೆಂಡ್‌ಗೆ ಕಾಯುತ್ತ ಕೂತರೆ ಬೀಳುತ್ತೆ 50 ರೂ. ದಂಡ!

IPL 2024
ಪ್ರಮುಖ ಸುದ್ದಿ1 hour ago

IPL 2024: ಮಾಲೀಕನ ಜತೆ ಜಗಳ, ತಂಡದ ಬಸ್​ ಬಿಟ್ಟು ಸ್ವಂತ ಖರ್ಚಲ್ಲಿ ಪ್ರಯಾಣಿಸಿದ ಕೆ. ಎಲ್​ ರಾಹುಲ್​

Chandrayaan 4
ದೇಶ2 hours ago

Chandrayaan 4: ಚಂದ್ರಯಾನ 4ಕ್ಕೆ ಇಸ್ರೋ ಸಜ್ಜು; ಚಂದ್ರನ ವಿಶೇಷ ಸ್ಥಳದಲ್ಲಿ ಬಾಹ್ಯಾಕಾಶ ನೌಕೆ ಲ್ಯಾಂಡಿಂಗ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Bail Revanna will not leave the country condition imposed by the court
ಕ್ರೈಂ3 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

Prajwal Revanna case HD Revanna finally gets bail What was the argument like
ಕ್ರೈಂ3 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ3 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ4 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ4 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ10 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ15 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ16 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 day ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಟ್ರೆಂಡಿಂಗ್‌