Vistara News | ವಿಸ್ತಾರ ನ್ಯೂಸ್‌ ಚಾನೆಲ್‌ ಇಂದು ಲೋಕಾರ್ಪಣೆ, ದಿನವಿಡೀ ʼವಿಸ್ತಾರ ಕನ್ನಡ ಸಂಭ್ರಮʼ - Vistara News

ಕರ್ನಾಟಕ

Vistara News | ವಿಸ್ತಾರ ನ್ಯೂಸ್‌ ಚಾನೆಲ್‌ ಇಂದು ಲೋಕಾರ್ಪಣೆ, ದಿನವಿಡೀ ʼವಿಸ್ತಾರ ಕನ್ನಡ ಸಂಭ್ರಮʼ

Vistara news | ಕನ್ನಡ ಮಾಧ್ಯಮ ಲೋಕದ ಬಹು ನಿರೀಕ್ಷೆಯ ವಿಸ್ತಾರ ನ್ಯೂಸ್‌ ಚಾನೆಲ್‌ ಅನಾವರಣ ನ.6ರಂದು ನಡೆಯಲಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ದಿನವಿಡೀ ವಿಸ್ತಾರ ಕನ್ನಡ ಸಂಭ್ರಮ ಮೇಳೈಸಲಿದೆ.

VISTARANEWS.COM


on

vistara launch
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡ ಮಾಧ್ಯಮ ಲೋಕದಲ್ಲಿ ಸದಭಿರುಚಿಯ ಟಿವಿ ಚಾನೆಲ್‌ ಲೋಕಾರ್ಪಣೆಯ ದಿನ ಸನ್ನಿಹಿತವಾಗಿದೆ. ಹಿರಿಯ ಪತ್ರಕರ್ತ ಮತ್ತು ಹರಿತ ವಿಶ್ಲೇಷಣೆಗಳಿಗೆ ಹೆಸರಾದ ಹರಿಪ್ರಕಾಶ್‌ ಕೋಣೆಮನೆ ಅವರ ನೇತೃತ್ವದಲ್ಲಿ ರೂಪುಗೊಂಡಿರುವ ವಿಸ್ತಾರ ನ್ಯೂಸ್‌ ಚಾನೆಲ್‌ ಅನಾವರಣ ಇಂದು (ನ.೬) ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅದ್ಧೂರಿಯಾಗಿ ನಡೆಯಲಿದೆ. ವಿಸ್ತಾರ ಮೀಡಿಯಾ ಪ್ರೈವೆಟ್‌ ಲಿಮಿಟೆಡ್‌ನ ಈ ಹೆಮ್ಮೆಯ ಕಾಣಿಕೆ ನಾಡಿನ ಹಲವಾರು ಗಣ್ಯ ವ್ಯಕ್ತಿಗಳ ಉಪಸ್ಥಿತಿಯಲ್ಲಿ ವೈಭವೋಪೇತವಾಗಿ ತೆರೆದುಕೊಳ್ಳಲಿದೆ.

ವಿಸ್ತಾರ ನ್ಯೂಸ್‌ ಚಾನೆಲ್‌ ಅನಾವರಣದ ಈ ಸಂಭ್ರಮದ ಕ್ಷಣವನ್ನು ʻವಿಸ್ತಾರ ಕನ್ನಡ ಸಂಭ್ರಮʼವಾಗಿ ಆಚರಿಸಲಾಗುತ್ತಿದೆ. ಅಂದು ಬೆಳಗ್ಗಿನಿಂದ ರಾತ್ರಿಯವರೆಗೆ ನಡೆಯುವ ಈ ಸಂಭ್ರಮದಲ್ಲಿ ನಾಡಿನ ೩೨ ಮಹಾ ಸಾಧಕರಿಗೆ ಕಾಯಕ ಯೋಗಿ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ. ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ದಿನವಿಡೀ ಹಾಡು, ಮಾತು, ಹಾಸ್ಯ, ಜಾದೂ, ಯಕ್ಷಗಾನಗಳಂಥ ಅತ್ಯುತ್ಕೃಷ್ಟ, ವೈವಿಧ್ಯಮಯ ಸಾಂಸ್ಕೃತಿಕ, ಮನೋರಂಜನಾತ್ಮಕ ಕಾರ್ಯಕ್ರಮಗಳು ಮೇಳೈಸಲಿವೆ. ಸಂಗೀತೋತ್ಸವ, ವಿಶಿಷ್ಟ ಆಹಾರ ಮೇಳ, ಪುಸ್ತಕೋತ್ಸವಗಳು, ಜಾನಪದ ವೈಭವ ಮತ್ತು ಚಿಣ್ಣರ ಕಲರವಗಳೊಂದಿಗೆ ರವೀಂದ್ರ ಕಲಾಕ್ಷೇತ್ರದ ಆವರಣ ರಂಗೇರಲಿದೆ.

ವಿಸ್ತಾರ ಮೀಡಿಯಾ ಪ್ರೈವೇಟ್‌ ಲಿಮಿಟೆಡ್‌ನ ಸಿಇಒ ಮತ್ತು ಪ್ರಧಾನ ಸಂಪಾದಕರಾಗಿರುವ ಹರಿಪ್ರಕಾಶ್‌ ಕೋಣೆಮನೆ, ಚೇರ್ಮನ್‌ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿರುವ ಎಚ್‌.ವಿ. ಧರ್ಮೇಶ್‌ ಹಾಗೂ ನಿರ್ದೇಶಕರಾಗಿರುವ ಶ್ರೀನಿವಾಸ್‌ ಹೆಬ್ಬಾರ್‌ ಅವರ ನೇತೃತ್ವದಲ್ಲಿ ನಾಡಿನ ಜನ ಸಕುಟುಂಬಿಕರಾಗಿ ಬಂದು ಸಂಭ್ರಮಿಸಲು ಅನುಕೂಲವಾಗುವಂತೆ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.

ಎರಡು ಪ್ರಧಾನ ವೇದಿಕೆ ಕಾರ್ಯಕ್ರಮಗಳು
ಬೆಳಗ್ಗೆ ೧೧.೩೦ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ನಾಡಿನ ೩೨ ಸಾಧಕರಿಗೆ ವಿಸ್ತಾರ ಕಾಯಕಯೋಗಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಸಂಜೆ ೬ ಗಂಟೆಗೆ ಆರಂಭವಾಗಲಿರುವ ಮತ್ತೊಂದು ಅದ್ಧೂರಿ ಕಾರ್ಯಕ್ರಮದಲ್ಲಿ ನಾಡಿನ ಜನತೆಯ ಬಹುನಿರೀಕ್ಷೆಯ ವಿಸ್ತಾರ ನ್ಯೂಸ್‌ ಚಾನೆಲ್‌ ಲೋಕಾರ್ಪಣೆಗೊಳ್ಳಲಿದೆ. ಉಳಿದಂತೆ ಹಲವು ವೇದಿಕೆಗಳಲ್ಲಿ ಏಕಕಾಲದಲ್ಲಿ ಸಾಂಸ್ಕೃತಿಕ ವೈಭವಗಳು ಮೇಳೈಸಲಿವೆ.

3೨ ಸಾಧಕರಿಗೆ ವಿಸ್ತಾರ ಕಾಯಕ ಯೋಗಿ ಪ್ರಶಸ್ತಿ ಪ್ರದಾನ
ವಿಸ್ತಾರ ಕಾಯಕ ಯೋಗಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬೆಳಗ್ಗೆ 1೧.೩೦ಕ್ಕೆ ಆರಂಭವಾಗಲಿದೆ. ಈ ಸಮಾರಂಭದಲ್ಲಿ ಹಿರಿಯ ಸಂತರಾದ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಶ್ರೀ ಶ್ರೀ ಸಿದ್ದಲಿಂಗ ಸ್ವಾಮೀಜಿ, ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ, ಶ್ರೀ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಶ್ರೀ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಮತ್ತು ಶ್ರೀ ಶ್ರೀ ವಚನಾನಂದ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ.

ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿಗಳಾದ ಎಸ್‌.ಎಂ ಕೃಷ್ಣ, ಬಿ.ಎಸ್‌ ಯಡಿಯೂರಪ್ಪ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ಡಾ. ಸಿ.ಎನ್‌ ಅಶ್ವತ್ಥನಾರಾಯಣ, ವಿ ಸೋಮಣ್ಣ, ಗೋಪಾಲಯ್ಯ‌, ಶಿವರಾಮ ಹೆಬ್ಬಾರ್‌, ಎಂ.ಟಿ.ಬಿ ನಾಗರಾಜ್‌, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಅವರು ಭಾಗವಹಿಸಲಿದ್ದಾರೆ.

ವಿಸ್ತಾರ ನ್ಯೂಸ್‌ ಚಾನೆಲ್‌ಗೆ ಅದ್ಧೂರಿ ಚಾಲನೆ
ರಾಜ್ಯಾದ್ಯಂತ ಭಾರಿ ನಿರೀಕ್ಷೆ ಮೂಡಿಸಿರುವ ವಿಸ್ತಾರ ನ್ಯೂಸ್‌ ಚಾನೆಲ್‌ನ ಲೋಕಾರ್ಪಣೆ ಸಂಜೆ 6 ಗಂಟೆಗೆ ಆರಂಭವಾಗುವ ಕಾರ್ಯಕ್ರಮದಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಸ್ತಾರ ನ್ಯೂಸ್‌ ಚಾನೆಲ್‌ಗೆ ಚಾಲನೆ ನೀಡಲಿದ್ದಾರೆ.
ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು ವಿಸ್ತಾರ ಪ್ರಕಾಶನವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವರಾದ ಎಲ್‌. ಮುರುಗನ್‌ ಅವರು ವಿಸ್ತಾರ ಆ್ಯಪ್‌ ಅನಾವರಣ ಮಾಡಲಿದ್ದಾರೆ.

ಉಪಸ್ಥಿತರಿರುವ ಗಣ್ಯರು: ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಸಚಿವರಾದ ಆರ್‌. ಅಶೋಕ್‌, ಡಾ. ಕೆ. ಸುಧಾಕರ್‌, ಎಸ್‌.ಟಿ. ಸೋಮಶೇಖರ್‌, ಬೈರತಿ ಬಸವರಾಜ್‌, ಮುನಿರತ್ನ, ಮಾಜಿ ಸಚಿವ ಆರ್‌.ವಿ ದೇಶಪಾಂಡೆ, ಲೋಕಸಭಾ ಸದಸ್ಯ ಪಿ.ಸಿ ಮೋಹನ್‌, ಕಸಾಪ ಅಧ್ಯಕ್ಷರಾದ ನಾಡೋಜ ಮಹೇಶ್‌ ಜೋಶಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಡಾ ಪಿ.ಎಸ್‌. ಹರ್ಷ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌. ರವಿ ಕುಮಾರ್‌ ಮತ್ತು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್‌. ಷಡಾಕ್ಷರಿ ಅವರು ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ, ಸದಭಿರುಚಿಯ ಮತ್ತು ನಾಡಿನ ಹೆಮ್ಮೆಯ ಕೊಡುಗೆಯಾದ ವಿಸ್ತಾರ ನ್ಯೂಸ್‌ ಟಿವಿ ಚಾನೆಲ್‌ ಅನ್ನು ಪ್ರೋತ್ಸಾಹಿಸಿ ಶುಭ ಹಾರೈಸಬೇಕು ಎಂದು ವಿಸ್ತಾರ ಮೀಡಿಯಾ ಪ್ರೈ. ಲಿ.ನ ಸಿಇಒ ಮತ್ತು ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ, ಚೇರ್ಮನ್‌ ಮತ್ತು ವ್ಯವಸ್ಥಾಪಕ ನಿರ್ದೇಶಕ ಎಚ್‌ ವಿ ಧರ್ಮೇಶ್‌ ಹಾಗೂ ನಿರ್ದೇಶಕ ಶ್ರೀನಿವಾಸ್‌ ಹೆಬ್ಬಾರ್‌ ಅವರು ಮನವಿ ಮಾಡಿದ್ದಾರೆ.

ವಿಸ್ತಾರ ಕಾಯಕ ಯೋಗಿ ಪುರಸ್ಕೃತರು ಇವರು

-ಸ್ಫೂರ್ತಿದಾಯಕ ಉದ್ಯಮಿ, ವಿಆರ್‌ಎಲ್‌ ಸಮೂಹ ಸಂಸ್ಥೆಯ ಸಿಎಂಡಿ ಡಾ. ವಿಜಯ ಸಂಕೇಶ್ವರ
– ಖ್ಯಾತ ಚಲನಚಿತ್ರ ಕಲಾವಿದರಾದ ಹ್ಯಾಟ್ರಿಕ್‌ ಹೀರೊ ಶಿವರಾಜ್‌ ಕುಮಾರ್‌
– ಹೆಸರಾಂತ ಸಾಹಿತಿ, ಗೀತ ರಚನೆಕಾರ ಮತ್ತು ನಿರ್ದೇಶಕರಾದ ಡಾ. ಎಚ್.ಎಸ್‌ ವೆಂಕಟೇಶಮೂರ್ತಿ
– ಪ್ರಖ್ಯಾತ ಹಿಂದೂಸ್ತಾನಿ ಗಾಯಕರಾದ ಪದ್ಮಶ್ರೀ ಪಂಡಿತ್‌ ವೆಂಕಟೇಶ್ ಕುಮಾರ್
– ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ, ಅನುಭವ ಮಂಟಪದ ಅಧ್ಯಕ್ಷರಾದ ಡಾ. ಬಸವಲಿಂಗ ಪಟ್ಟದ್ದೇವರು
– ಅಧ್ಯಾತ್ಮ ಸಾಧಕ, ಕೃಷಿ ಪ್ರಯೋಗ ನಿರತರಾದ ಕೊಲ್ಲಾಪುರ ಕನ್ಹೇರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ
_ 200ಕ್ಕೂ ಹೆಚ್ಚು ಬಾಲ್ಯ ವಿವಾಹ ತಡೆದ ಸಾಧಕಿ ಗುರಮ್ಮ ಪಂಪಯ್ಯ ಸಂಕಿನಮಠ
– ಬಿಸಿಯೂಟ ತಯಾರಕಿ, ಮಕ್ಕಳ ಶಿಕ್ಷಣಕ್ಕಾಗಿ ಎರಡು ಎಕರೆ ಭೂಮಿ ದಾನ ಮಾಡಿರುವ ಕೊಪ್ಪಳದ ಹುಚ್ಚಮ್ಮ ಚೌದ್ರಿ
– ಶ್ರೀ ಯೋಗಿ ನಾರೇಯಣ ಮಠ ಟ್ರಸ್ಟ್‌, ಶ್ರೀ ಕ್ಷೇತ್ರ ಕೈವಾರದ ಧರ್ಮಾಧಿಕಾರಿಗಳಾದ ಡಾ. ಎಂ.ಆರ್. ಜಯರಾಂ
– ಕಿರುತೆರೆಯಲ್ಲಿ ವಿಭಿನ್ನ ಪ್ರಯೋಗ ಮಾಡಿರುವ ಹಿರಿಯ ನಿರ್ದೇಶಕರು, ನಾಟಕಕಾರರಾದ ಶ್ರೀ ಟಿ.ಎನ್ ಸೀತಾರಾಂ
– ಖ್ಯಾತ ವರ್ಣಚಿತ್ರ ಕಲಾವಿದರಾದ ಡಾ. ಬಿ.ಕೆ.ಎಸ್. ವರ್ಮ
– ಜಯದೇವ ಹೃದ್ರೋಗ ವಿಜ್ಞಾನ ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ಸಿ.ಎನ್‌. ಮಂಜುನಾಥ್‌
– ಖ್ಯಾತ ಟೆನಿಸ್‌ ಆಟಗಾರ, ಗ್ರ್ಯಾನ್‌ಸ್ಲ್ಯಾಮ್‌ ವಿಜೇತರಾದ ರೋಹನ್ ಬೋಪಣ್ಣ
– ರಾಷ್ಟ್ರೀಯ-ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಚಿತ್ರ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ
– ಪಿಇಎಸ್‌ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರು ಹಾಗೂ ಕುಲಾಧಿಪತಿಗಳಾದ ಪ್ರೊ. ಎಂ.ಆರ್. ದೊರೆಸ್ವಾಮಿ
– ಫ್ರೀಡಂ ಆ್ಯಪ್ ಸಂಸ್ಥಾಪಕರು ಮತ್ತು ಸಿಇಒ ಸಿ.ಎಸ್. ಸುಧೀರ್
– ಅತಿ ಹೆಚ್ಚು ರಾಷ್ಟ್ರ ಪ್ರಶಸ್ತಿ ಪಡೆದ ಚಿತ್ರ ನಿರ್ದೇಶಕರಾದ ಪಿ. ಶೇಷಾದ್ರಿ
– ಹಿರಿಯ ಸಹಕಾರಿ ಧುರೀಣ, ರಾಜ್ಯ ಅಪೆಕ್ಸ್‌ ಬ್ಯಾಂಕ್‌ ನಿರ್ದೇಶಕರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್
– ಮೈಸೂರು ಮರ್ಕೆಂಟೈಲ್‌ ಕಂಪನಿಯ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಎಚ್.ಎಸ್ ಶೆಟ್ಟಿ
– ಜನಪ್ರಿಯ ಸಮಾಜ ಸೇವಕರಾದ ದಾವಣಗೆರೆಯ ಡಾ. ಆರ್‌.ಎಲ್ ಉಮಾಶಂಕರ್
– ಅಂತಾರಾಷ್ಟ್ರೀಯ ಖ್ಯಾತಿಯ ಶಿಲ್ಪಿ ಅರುಣ್ ಯೋಗಿರಾಜ್
– 4.5 ಲಕ್ಷಕ್ಕೂ ಅಧಿಕ ಯುವ ಕನ್ನಡಿಗರಿಗೆ ಬ್ಯಾಂಕಿಂಗ್‌ ಪರೀಕ್ಷೆ ಉಚಿತ ತರಬೇತಿ ನೀಡಿರುವ ಆರ್.ಕೆ ಬಾಲಚಂದ್ರ
– ಕಲಬುರಗಿಯ ಸಿದ್ದಲಿಂಗೇಶ್ವರ ಬುಕ್‌ ಡಿಪೋದ ಸಂಸ್ಥಾಪಕರಾದ ಬಸರಾಜ ಕೊನೇಕ
– ಖ್ಯಾತ ಸಾವಯವ ಗುರು ಡಾ. ಕೆ. ಆರ್. ಹುಲ್ಲುನಾಚೆಗೌಡರು
– ಸರಕಾರಿ ಶಾಲೆ ಉಳಿಸಿ ಬೆಳೆಸಿ ಆಂದೋಲನದ ರೂವಾರಿ ಕುಮಾರಿ ಅನು ಹೇಮಣ್ಣ
– ಕೆಜಿಎಫ್‌, ಕಾಂತಾರ ಮೊದಲಾದ ಹಿಟ್‌ ಚಿತ್ರಗಳ ನಿರ್ಮಾಪಕರಾದ ಹೊಂಬಾಳೆ ಫಿಲ್ಮ್ಸ್‌ನ ವಿಜಯ್ ಕಿರಗಂದೂರು
– ಕಿಮ್ಮನೆ ಗಾಲ್ಫ್‌ ಕ್ಲಬ್‌ ವ್ಯವಸ್ಥಾಪಕ ನಿರ್ದೇಶಕರಾದ ಜಯರಾಮ ಕಿಮ್ಮನೆ
– ವಿದ್ಯಾಶಿಲ್ಪ ಎಜುಕೇಶನ್‌ ಗ್ರೂಪ್‌ನ ಜಾಯಿಂಟ್‌ ಮ್ಯಾನೇಜಿಂಗ್‌ ಟ್ರಸ್ಟಿ ರವೀಂದ್ರ ಪೈ
– ಅಟ್ರಿಮೆಡ್‌ ಲೈಫ್‌ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಹೃಷಿಕೇಶ್‌ ದಾಮ್ಲೆ
– ಸೈಕಲ್‌ ಪ್ಯೂರ್‌ ಅಗರಬತ್ತಿಯ ವ್ಯವಸ್ಥಾಪಕ ನಿರ್ದೇಶಕರಾದ ಅರ್ಜುನ್‌ ರಂಗ
– ಸಿಇಒ ಪಿಕ್ಸೆಲ್‌ ಸಂಸ್ಥೆಯ ಸಂಸ್ಥಾಪಕರು, ಶಕುಂತಲಾ ಖಾಸಗಿ ಉಪಗ್ರಹದ ರೂವಾರಿ ಅವೇಜ್ ಅಹಮದ್
– ವಿದ್ಯಾನಿಕೇತನ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ನೆಕ್ಕಂಟಿ ಸೂರಿಬಾಬು.

ಸಾಂಸ್ಕೃತಿಕ, ಮನರಂಜನಾ ಕಾರ್ಯಕ್ರಮಗಳ ಮಹಾಮೇಳ

ವಿಸ್ತಾರ ಕನ್ನಡ ಸಂಭ್ರಮದಲ್ಲಿ ದಿನವಿಡೀ ಸಾಂಸ್ಕೃತಿಕ ಕಾರ್ಯಕ್ರಮಗಳ ಮಹಾಮೇಳವೇ ಇರುತ್ತದೆ.

ಎಂ.ಡಿ. ಪಲ್ಲವಿ ಗಾಯನ
ನವೆಂಬರ್‌ ೬ರಂದು ಬೆಳಗ್ಗೆ 10ರಿಂದ 11 ಗಂಟೆಯವರೆಗೆ ಖ್ಯಾತ ಗಾಯಕಿ ಎಂ.ಡಿ ಪಲ್ಲವಿ ಅವರಿಂದ ಗಾನಸುಧೆ ಹರಿಯಲಿದೆ. ಕನ್ನಡದ ಜನಪ್ರಿಯ ಗೀತೆಗಳು ಮೊಳಗಲಿವೆ.

ಕನ್ನಡತಿ ಜತೆ ಸಂವಾದ
ಮಧ್ಯಾಹ್ನ 2.30ರಿಂದ ಜನಪ್ರಿಯ ಕಿರುತೆರೆ ಧಾರಾವಾಹಿ ʻಕನ್ನಡತಿʼ ತಂಡದೊಂದಿಗೆ ವೀಕ್ಷಕರ ಆಪ್ತ ಸಂವಾದ ಇರಲಿದೆ. ʻಕನ್ನಡತಿʼ ಧಾರಾವಾಹಿ ವೀಕ್ಷಕರು ಕಲಾವಿದರ ಜತೆ ನೇರವಾಗಿ ಮಾತನಾಡಬಹುದು.

ವೆಂಕಟೇಶ್ ಕುಮಾರ್‌ ಅಮೃತಗಾನ
ಸಂಜೆ 4ರಿಂದ 5 ಗಂಟೆಯವರೆಗೆ ಪ್ರಖ್ಯಾತ ಹಿಂದೂಸ್ತಾನಿ ಗಾಯಕ ಪಂ. ವೆಂಕಟೇಶ್‌ ಕುಮಾರ್‌ ಅವರ ಗಾಯನ ನಾದಸುಧೆ ಎಲ್ಲರನ್ನೂ ಸಂಗೀತ ಲೋಕದಲ್ಲಿ ವಿಹರಿಸುವಂತೆ ಮಾಡಲಿದೆ. ಸಂಗೀತಾಸಕ್ತರು ಮುಕ್ತವಾಗಿ ಭಾಗವಹಿಸಬಹುದು.

ಹಾಸ್ಯ ಕಾರಂಜಿ, ಜಾದೂ ಕೈಚಳಕ
ಸಂಜೆ 4ರಿಂದ 5ರವರೆಗೆ ಸಂಸ ಬಯಲು ರಂಗ ಮಂದಿರದಲ್ಲಿ ಪ್ರೊ. ಕೃಷ್ಣೇಗೌಡರ ತಂಡ ಹಾಸ್ಯದ ಚಟಾಕಿ ಹಾರಿಸಲಿದೆ. ಸಂಜೆ 5ರಿಂದ 6ರವರೆಗೆ ಅಂತಾರಾಷ್ಟ್ರೀಯ ಖ್ಯಾತಿಯ ಉದಯ್‌ ಜಾದೂಗಾರ್‌ ಅವರಿಂದ ಚಿಣ್ಣರಿಗಾಗಿ ಜಾದೂ ಪ್ರದರ್ಶನ ಇದೆ.

ವಾಸುಕಿ ಮ್ಯೂಸಿಕಲ್‌ ನೈಟ್‌ ವೈಭವ
ರಾತ್ರಿ 8ರಿಂದ ಖ್ಯಾತ ಸಂಗೀತ ನಿರ್ದೇಶಕ ಮತ್ತು ಗಾಯಕ ವಾಸುಕಿ ವೈಭವ್‌ ಅವರ Live in Concert ಆಯೋಜಿಸಲಾಗಿದೆ. ಮನಸಿಂದ ಕೇಳಿ, ಕಾಗದದ ದೋಣಿಯಲಿ, ಗಿರ ಗಿರ ತಿರುಗಿ, ಇನ್ನೂ ಬೇಕಾಗಿದೆ ಅನ್ನಿ ಇತ್ಯಾದಿ ಒಂದು ಡಜನ್‌ಗೂ ಹೆಚ್ಚು ಸೂಪರ್‌ ಹಿಟ್‌ ಹಾಡುಗಳನ್ನು ಹಾಡಿ ರಂಜಿಸಲಿದ್ದಾರೆ ವಾಸುಕಿ ವೈಭವ್‌ ಮತ್ತು ಟೀಮ್‌.

ತೆರೆದುಕೊಳ್ಳಲಿದೆ ಯಕ್ಷಲೋಕ
ರಾತ್ರಿ 10ರಿಂದ ಹೇರಂಜಾಲು ಯಕ್ಷ ಬಳಗ ಹಾಗೂ ಟೀಮ್‌ ಉತ್ಸಾಹಿ ತಂಡದಿಂದ ʻಶಶಿಪ್ರಭಾ ಪರಿಣಯʼ ಯಕ್ಷಗಾನ ಪ್ರದರ್ಶನವಿದೆ. ಚಂದ್ರಕಾಂತ್‌ ರಾವ್‌ ಮೂಡುಬೆಳ್ಳೆ, ಪಲ್ಲವ ಹೇರಂಜಾಲು ಅವರ ಭಾಗವತಿಕೆ, ಶಶಿಕಾಂತ್‌ ಆಚಾರ್ಯ ಮದ್ದಳೆ, ಶ್ರೀನಿವಾಸ ಪ್ರಭು ಅವರ ಚಂಡೆಯ ಹಿಮ್ಮೇಳವಿದೆ. ಮುಮ್ಮೇಳದಲ್ಲಿ ಶಶಿಕಾಂತ್‌ ಶೆಟ್ಟಿ ಕಾರ್ಕಳ, ರವೀಂದ್ರ ದೇವಾಡಿಗ ಕಮಲಶಿಲೆ, ಪ್ರಕಾಶ್‌ ಕಿರಾಡಿ, ಚಂದ್ರಹಾಸ ಗೌಡ, ಪುನೀತ್‌ ಬೋಳಿಯಾರ್‌, ಪ್ರಶಾಂತ ವರ್ದನ, ನಾಗಶ್ರೀ ಜಿ.ಎಸ್‌ ಮತ್ತು ನಿಹಾರಿಕಾ ಭಟ್‌ ಮೊದಲಾದ ಜನಪ್ರಿಯ ಕಲಾವಿದರು ವಿವಿಧ ಪಾತ್ರಗಳಲ್ಲಿ ಮನರಂಜಿಸಲಿದ್ದಾರೆ. ಯಕ್ಷಗಾನ ಪ್ರಿಯರಿಗೆ ಇದೊಂದು ಅಪರೂಪದ ಅವಕಾಶ.

ಆಹಾರೋತ್ಸವ, ಪುಸ್ತಕೋತ್ಸವ, ಜಾನಪದ ಉತ್ಸವ

ಕನ್ನಡ ಸಂಭ್ರಮದಲ್ಲಿ ಮನರಂಜನೆಯ ಜತೆಗೆ ಆಹಾರೋತ್ಸವ, ಪುಸ್ತಕೋತ್ಸವಗಳು ನಡೆಯಲಿವೆ.

ವಿಶಿಷ್ಟ ಆಹಾರ ಮೇಳ: ಉತ್ತರ ಕರ್ನಾಟಕ, ಮಲೆನಾಡು, ಕರಾವಳಿ ಸೇರಿದಂತೆ ರಾಜ್ಯದ ಎಲ್ಲ ಭಾಗಗಳ ವಿಶೇಷ ತಿನಿಸುಗಳಿರುವ ಆಹಾರ ಮಳಿಗೆಗಳು ಇರಲಿವೆ.
ಪುಸ್ತಕ ಮೇಳ: ಸಿರಿಗನ್ನಡ ಪುಸ್ತಕ ಮಳಿಗೆ, ವಿಸ್ತಾರ ಪ್ರಕಾಶನ, ಸ್ನೇಹ ಬುಕ್‌ ಹೌಸ್, ವೀರಲೋಕ ಬುಕ್ಸ್, ರಾಷ್ಟ್ರೋತ್ಥಾನ ಸಾಹಿತ್ಯ, ಸಾವಣ್ಣ ಬುಕ್ಸ್, ಸಮನ್ವಿತ ಪ್ರಕಾಶನ, ವಿಕ್ರಂ ಪ್ರಕಾಶನ ಮುಂತಾದ ಹೆಸರಾಂತ ಪ್ರಕಾಶನ ಸಂಸ್ಥೆಗಳಿಂದ ಪುಸ್ತಕ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ.

ಜಾನಪದ ವೈಭವ: ಪ್ರಖ್ಯಾತ ಜಾನಪದ ತಂಡಗಳಿಂದ ಡೊಳ್ಳು ಕುಣಿತ, ವೀರಗಾಸೆ, ಚಂಡೆ ವಾದನ, ಹುಲಿ ವೇಷ ಪ್ರದರ್ಶನದ ವಿಶೇಷ ಆಕರ್ಷಣೆ ಈ ಸಮಾರಂಭಕ್ಕಿದೆ. ಮಕ್ಕಳು ಆಟ ಆಡಿ ನಲಿಯಲು ಸೌಲಭ್ಯ ಕಲ್ಪಿಸಲಾಗಿದೆ. ಜತೆಗೆ ಅಪೋಲೊ ಆಸ್ಪತ್ರೆಯಿಂದ ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, ದಯಾನಂದ ಹಾಸ್ಪಿಟಲ್ಸ್‌ನಿಂದ ಉಚಿತ ದಂತ ತಪಾಸಣೆಯ ಉಚಿತ ಕೊಡುಗೆಯೂ ಇರುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Dr.Nagareddy Patil: ಮಾಜಿ ಶಾಸಕ, ಕಾಂಗ್ರೆಸ್‌ ಮುಖಂಡ ಡಾ. ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಜಿಲ್ಲೆಯ ಸೇಡಂ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ಮುಖಂಡ ಡಾ. ನಾಗರೆಡ್ಡಿ ಪಾಟೀಲ್‌ (79) ನಿಧನ ಹೊಂದಿದ್ದಾರೆ. ಬೆಳಗಿನ ಜಾವ 3 ಗಂಟೆಗೆ ಅವರು ಹೃದಯಾಘಾತದಿಂದ ನಿಧನರಾದರು. ಶಿಕ್ಷಣ ಪ್ರೇಮಿ, ಹಿರಿಯ ಮುತ್ಸದ್ದಿ ಎನಿಸಿಕೊಂಡಿರುವ ಡಾ.ನಾಗರೆಡ್ಡಿ ಪಾಟೀಲ್‌ ಎರಡು ದಶಕಗಳಿಂದ ಕಾಂಗ್ರೆಸ್‌ನಲ್ಲಿದ್ದರು.

VISTARANEWS.COM


on

Dr.Nagareddy Patil
Koo

ಕಲಬುರಗಿ: ಜಿಲ್ಲೆಯ ಸೇಡಂ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ಮುಖಂಡ ಡಾ. ನಾಗರೆಡ್ಡಿ ಪಾಟೀಲ್‌ (79) ನಿಧನ ಹೊಂದಿದ್ದಾರೆ. ಬೆಳಗಿನ ಜಾವ 3 ಗಂಟೆಗೆ ಅವರು ಹೃದಯಾಘಾತದಿಂದ ನಿಧನರಾದರು. ಶಿಕ್ಷಣ ಪ್ರೇಮಿ, ಹಿರಿಯ ಮುತ್ಸದ್ದಿ ಎನಿಸಿಕೊಂಡಿರುವ ಡಾ.ನಾಗರೆಡ್ಡಿ ಪಾಟೀಲ್‌ (Dr.Nagareddy Patil) ಎರಡು ದಶಕಗಳಿಂದ ಕಾಂಗ್ರೆಸ್‌ನಲ್ಲಿದ್ದರು.

ನಾಗರೆಡ್ಡಿ ಅವರ ಪುತ್ರ ಶಿವಶರಣರೆಡ್ಡಿ ಪಾಟೀಲ್‌ ಸದ್ಯ ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ನಾಗರೆಡ್ಡಿ ಅವರು ಸಹೋದರ ಮತ್ತು ಸಹೋದರಿಯರು, ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ. ಇಂದು (ಮೇ 6) ಅಪರಾಹ್ನ 3.30ಕ್ಕೆ ಸೇಡಂ ಪಟ್ಟಣದ ಆಶ್ರಯ ಕಾಲೋನಿ ಪಕ್ಕದಲ್ಲಿರುವ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಅವರ ನಿಧನಕ್ಕೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

1983-85ರ ಅವಧಿಯಲ್ಲಿ ಬಿಜೆಪಿ ಶಾಸಕರಾಗಿದ್ದ ಡಾ.ನಾಗರೆಡ್ಡಿ ಬಳಿಕ ಜನತಾದಳ ಸೇಪರ್ಡೆಯಾಗಿದ್ದರು. ಬಳಿಕ ಕಾಂಗ್ರೆಸ್‌ ಸೇರಿದ್ದ ಅವರು ಸುಮಾರು ಎರಡು ದಶಕಗಳಿಂದ ಕಾಂಗ್ರೆಸನಲ್ಲೇ ಇದ್ದರು.

ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌ ವಿಧಿವಶ

ವಾರದ ಹಿಂದೆ ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಅವರು ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೆಲದಿನಗಳ ಹಿಂದೆ ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನ ಹೊಂದಿದ್ದರು.

ಚಾಮರಾಜನಗರ ಕ್ಷೇತ್ರದಿಂದ 7 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಶ್ರೀನಿವಾಸ್‌ ಪ್ರಸಾದ್‌ 1999ರಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಇನ್ನು 2013ರಿಂದ 2016ರವರೆಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಸಚಿವರಾಗಿದ್ದರು . 24 ಡಿಸೆಂಬರ್ 2016 ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದ ಅವರು 2019ರಲ್ಲಿ ಚಾಮರಾಜನಗರ ಸಂಸದರಾಗಿ ಆಯ್ಕೆ.ಯಾಗಿದ್ದರು. ಅನಾರೋಗ್ಯ ಸಮಸ್ಯೆಯಿಂದಾಗಿ ರಾಜಕೀಯದಿಂದ ದೂರ ಉಳಿಯಲು ನಿರ್ಧರಿಸಿದ ಅವರು 2024 ಮಾರ್ಚ್ 17ರಂದು ರಾಜಕೀಯ ನಿವೃತ್ತಿ ಪಡೆದುಕೊಂಡಿದ್ದರು. 

ಇದನ್ನೂ ಓದಿ: A Devendra Gowda: ಎಂ. ಗೋನಾಳ್ ಗ್ರಾಮದ ಮುಖಂಡ ಎ. ದೇವೇಂದ್ರ ಗೌಡ ನಿಧನ

Continue Reading

ಕರ್ನಾಟಕ

Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ ಹೆಲ್ಪ್‌ಲೈನ್‌ ತೆರೆದಿದೆ. ಸಂತ್ರಸ್ತೆಯರಿಗೆ ಕಾನೂನು ನೆರವು ಮತ್ತು ರಕ್ಷಣೆ ನೀಡಲು ಈ ಕ್ರಮ ಕೈಗೊಳ್ಳಲಾಗಿದ್ದು, ಹಲವು ಕರೆಗಳು ಬರುತ್ತಿವೆ ಎಂದು ಅದಿಕಾರಿಗಳು ತಿಳಿಸಿದ್ದಾರೆ. ಇದೀಗ ಹೆಲ್ಪ್‌ಲೈನ್‌ ನಂಬರ್‌ಗೆ ಕೆಲವು ಸಂತ್ರಸ್ತೆಯರು ನೇರ ಕರೆ ಮಾಡಿದರೆ, ಇನ್ನು ಕೆಲವರು ಸಂತ್ರಸ್ತೆಯರ ಪರವಾಗಿ ಮಾತನಾಡುತ್ತಿದ್ದಾರೆ. ಬರುತ್ತಿರುವ ಎಲ್ಲ ಕರೆಗಳನ್ನು ಸ್ವೀಕರಿಸಿ ಎಸ್‌ಐಟಿ ಅಧಿಕಾರಿಗಳ ತಂಡ ವಿವರಗಳನ್ನು ಕಲೆ ಹಾಕುತ್ತಿದೆ. ಸಂತ್ರಸ್ತೆಯರ ವಿಳಾಸ ಸಂಗ್ರಹಿಸಲಾಗುತ್ತದೆ. ಬಳಿಕ ಎಸ್‌ಐಟಿ ತಂಡ ಅವರನ್ನು ನೇರವಾಗಿ ಭೇಟಿಯಾಗಲಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣಕ್ಕೆ (Prajwal Revanna Case) ಸಂಬಂಧಿಸಿ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಆರೋಪದಲ್ಲಿ ಈಗಾಗಲೇ ಶಾಸಕ, ಮಾಜಿ ಸಚಿವ ಎಚ್‌.ಡಿ.ರೇವಣ್ಣ (HD Revanna) ಬಂಧನವಾಗಿದೆ. ಪ್ರಕರಣದಲ್ಲಿ ಇನ್ನೂ ಹಲವು ಸಂತ್ರಸ್ತೆಯರು ಇರುವುದರಿಂದ ಅವರಿಗೆ ಕಾನೂನು ನೆರವು ಮತ್ತು ರಕ್ಷಣೆ ನೀಡಲು ಎಸ್‌ಐಟಿ (ವಿಶೇಷ ತನಿಖಾ ತಂಡ) ಹೆಲ್ಪ್‌ಲೈನ್‌ (Help Line) ತೆರೆದಿದೆ. ಇದೀಗ ಈ ಹೆಲ್ಪ್‌ಲೈನ್‌ ನಂಬರ್‌ಗೆ ಹಲವು ಕರೆಗಳು ಬರುತ್ತಿವೆ ಎಂದು ಮೂಲಗಳು ತಿಳಿಸಿವೆ.

ಕೇಸ್‌ ಸಂಬಂಧ ಈಗಾಗಲೇ ಎಸ್‌ಐಟಿ ಸಂತ್ರಸ್ತೆಯನ್ನು ಸಂಪರ್ಕಿಸಲು ಮುಂದಾಗಿದೆ. ಒಂಭತ್ತು ಮಂದಿ ಸಂತ್ರಸ್ತೆಯರನ್ನ ಸಂಪರ್ಕಿಸಿ ಮಾಹಿತಿ ಕಲೆ ಹಾಕಿದೆ. ಇದೇ ವಿಚಾರಕ್ಕೆ ಸಂಬಂಧಿಸಿ ಹೆಲ್ಪ್‌ಲೈನ್‌ ಅನ್ನೂ ತೆರೆಯಲಾಗಿದೆ. ಇದೀಗ ಹೆಲ್ಪ್‌ಲೈನ್‌ ನಂಬರ್‌ಗೆ ಕೆಲವು ಸಂತ್ರಸ್ತೆಯರು ನೇರ ಕರೆ ಮಾಡಿದರೆ, ಇನ್ನು ಕೆಲವರು ಸಂತ್ರಸ್ತೆಯರ ಪರವಾಗಿ ಮಾತನಾಡುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬರುತ್ತಿರುವ ಎಲ್ಲ ಕರೆಗಳನ್ನು ಸ್ವೀಕರಿಸಿ ಎಸ್‌ಐಟಿ ಅಧಿಕಾರಿಗಳ ತಂಡ ವಿವರಗಳನ್ನು ಕಲೆ ಹಾಕುತ್ತಿದೆ. ಸಂತ್ರಸ್ತೆಯರ ವಿಳಾಸ ಸಂಗ್ರಹಿಸಲಾಗುತ್ತದೆ. ಬಳಿಕ ಎಸ್‌ಐಟಿ ತಂಡ ಅವರನ್ನು ನೇರವಾಗಿ ಭೇಟಿಯಾಗಲಿದೆ. ಬರುತ್ತಿರುವ ಕಾಲ್‌ಗಳ ಪೈಕಿ ಯಾವುದು ಹುಸಿ ಕರೆ, ಯಾವುದು ನಿಜವಾದ ಕರೆ ಎನ್ನುವುದನ್ನು ಪರಿಶೀಲಿಸಿದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅದಿಕಾರಿಗಳು ವಿವರಿಸಿದ್ದಾರೆ.

ಹೆಲ್ಪ್‌ಲೈನ್‌ ನಂಬರ್‌ ಇದು

ತನಿಖೆ ವೇಳೆ ಘಟನೆಗೆ ಸಂಬಂಧಪಟ್ಟಂತೆ ಇನ್ನೂ ಸಂತ್ರಸ್ತರಿರುವುದು ಗೊತ್ತಾಗಿದ್ದು, ಯಾರೇ ಸಂತ್ರಸ್ತರು ಅಥವಾ ಬಾತ್ಮೀದಾರರಿಗೆ (ಮಾಹಿತಿದಾರರಿಗೆ) ಕಾನೂನಿನ ನೆರವು ಮತ್ತು ರಕ್ಷಣೆ ಹಾಗೂ ಇನ್ನಿತರ ಯಾವುದೇ ಸಹಾಯ ಬೇಕಾದಲ್ಲಿ ಹೆಲ್ಪ್‌ಲೈನ್‌ ನಂ. 6360938947ಕ್ಕೆ ಕರೆ ಮಾಡಬಹುದು. ಸಂತ್ರಸ್ತರು ಅಥವಾ ಬಾತ್ಮೀದಾರ ವಿವರಗಳನ್ನು ಗುಪ್ತವಾಗಿಡಲಾಗುವುದು ಎಂದು ಎಸ್‌ಐಟಿ ಭಾನುವಾರ ಪ್ರಕಟಣೆಯಲ್ಲಿ ತಿಳಿಸಿತ್ತು.

ಅಶ್ಲೀಲ ವಿಡಿಯೊ ಶೇರ್‌ ಮಾಡಿದ್ರೆ ಕೇಸ್‌ ಗ್ಯಾರಂಟಿ

ಈ ಮಧ್ಯೆ ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಡಿಯೊಗಳನ್ನು ಯಾರೇ ಆಗಲಿ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಸೇರಿ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಎಚ್ಚರಿಕೆ ನೀಡಿದೆ.

ಅಶ್ಲೀಲ ವಿಡಿಯೊಗಳನ್ನು ಹಂಚಿಕೆ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯ್ದೆ ಕಲಂ 67(ಎ) ಐಟಿ ಆಕ್ಟ್ ಹಾಗೂ ಕಲಂ 228ಎ(1), 292 ಐಪಿಸಿ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಖಾಸಗಿ ಮೆಸೇಜಿಂಗ್ ಆ್ಯಪ್‌ಗಳ ಮುಖಾಂತರ ಹಂಚುವುದನ್ನೂ ಪತ್ತೆ ಹಚ್ಚುವುದು ಸಾಧ್ಯವಿದ್ದು, ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ವಿಡಿಯೋ ಹಂಚಿಕೆ ಸಂತ್ರಸ್ತ ಮಹಿಳೆಯರ ಘನತೆ ಹಾಗೂ ಗೌಪ್ಯತೆಗೆ ಕುಂದುಂಟು ಮಾಡುವುದಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದೆ.

ಯಾವುದೇ ಲೈಂಗಿಕ ಹಿಂಸೆ ಅಥವಾ ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧವೆಸಗಿದ ವ್ಯಕ್ತಿ ನಾಚಿಕೆ, ಹಿಂಜರಿಕೆ, ಅವಮಾನ ಪಡಬೇಕೇ ಹೊರತು, ಶೋಷಣೆಗೆ ಒಳಗಾದ ವ್ಯಕ್ತಿ ಅಲ್ಲ ಎಂಬುದನ್ನು ಅರಿಯಬೇಕು. ಸೂಕ್ತ ಸಂವೇದನೆಯಿಂದ ಪ್ರವರ್ತಿಸುವುದು ಸಮಾಜದ ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯ. ಈ ವಿಚಾರದಲ್ಲಿ ಎಸ್‌ಐಟಿಯು ಅತ್ಯಂತ ಹೆಚ್ಚಿನ ಸಂವೇದನೆಯಿಂದ ನಡೆದುಕೊಳ್ಳಲಿದೆ. ಈಗಾಗಲೇ ಇದಕ್ಕೆ ಅಗತ್ಯವಿರುವ ವೃತ್ತಿಪರ ಕೌನ್ಸೆಲರ್‌, ವೈದ್ಯರು ಇಂತಹ ಕಾರ್ಯದಲ್ಲಿ ಅನುಭವವಿರುವ ಸಂಸ್ಥೆಗಳ ನೆರವನ್ನು ಎಸ್‌ಐಟಿ ಪಡೆದುಕೊಂಡಿದೆ. ಸಾರ್ವಜನಿಕರೂ ಈ ವಿಚಾರದಲ್ಲಿ ಸ್ಪಂದಿಸುವುದು ಅಗತ್ಯ ಎಂದು ಸಿಐಡಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥರು ತಿಳಿಸಿದ್ದಾರೆ.

ಇದನ್ನೂ ಓದಿ | Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

Continue Reading

ಮಳೆ

Karnataka Weather : ಇಂದು ಮಳೆ ಬರುತ್ತಾ? ಯಾವ ಜಿಲ್ಲೆಗಳಲ್ಲಿದೆ ಹೀಟ್‌ ವೇವ್‌?

ರಾಜ್ಯಾದ್ಯಂತ ಹಲವೆಡೆ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆ ಇದೆ ಎನ್ನಲಾಗಿದೆ. ಇದರೊಟ್ಟಿಗೆ ಮೇ. 8ರವರೆಗೆ ಹೀಟ್‌ ವೇವ್‌ (Heat Wave) ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಶುಷ್ಕ ವಾತಾವರಣ ಇದ್ದರೂ ಕೆಲವೆಡೆ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಸೋಮವಾರದಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗುಡುಗು ಸಾಥ್‌ (Karnataka Weather Forecast) ನೀಡಲಿದೆ.

ಈ ಜಿಲ್ಲೆಗಳಲ್ಲಿ ಬಿಸಿ ಬಿಸಿ ವಾತಾವರಣ

ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 3 ದಿನಗಳವರೆಗೆ ಕರಾವಳಿಯಲ್ಲಿ ಬಿಸಿ ಮತ್ತು ಆರ್ದ್ರತೆಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 39 ಮತ್ತು 24 ಡಿ.ಸೆ ಇರಲಿದೆ.

ಇದನ್ನೂ ಓದಿ: Torn Jeans Styling Tips: ಟೊರ್ನ್‌ ಜೀನ್ಸ್‌ ಪ್ಯಾಂಟ್‌ ಪ್ರಿಯರು ನೆನಪಿನಲ್ಲಿಟ್ಟುಕೊಳ್ಳಬೇಕಾದ 5 ಪ್ರಮುಖ ಸಂಗತಿಗಳು

ಬಿಸಿಲ ಬೇಗೆ ತಣಿಸಿಕೊಳ್ಳಲು ಬೇಕು ನೆಲ್ಲಿಕಾಯಿ!

ದೇಹದ ಪ್ರತಿರೋಧಕ ಶಕ್ತಿಯನ್ನು ಕುಂದಿಸುವಂಥ ಹವಾಮಾನ ಯಾವುದೇ ದಿನಗಳಲ್ಲೂ ಎದುರಾಗಬಹುದು. ಅದಕ್ಕೇನು ಮಳೆಯೇ ಬೇಕು. ಚಳಿಯೇ ಇರಬೇಕು ಎಂದಿಲ್ಲ. ಈ ಬಿರು ಬೇಸಿಗೆಯಲ್ಲೂ ಕಾಟ ಕೊಡುವ ವೈರಸ್‌ಗಳು ತಪ್ಪುವುದಿಲ್ಲ. ಇದಕ್ಕಾಗಿ ಭದ್ರವಾದ ಪ್ರತಿರೋಧಕ ವ್ಯವಸ್ಥೆಯನ್ನ ನಮ್ಮ ದೇಹ ಹೊಂದಬೇಕಾಗುತ್ತದೆ. ಅದಿಲ್ಲದಿದ್ದರೆ ಬಿಸಿಲಾಘಾತ, ನಿರ್ಜಲೀಕರಣದಿಂದಲೂ ತಪ್ಪಿಸಿಕೊಳ್ಳುವುದಕ್ಕೆ ದೇಹ ಸೋಲುತ್ತದೆ. ಇಂಥ ದಿನಗಳಲ್ಲಿ ನಮ್ಮ ನೆರವಿಗೆ ಬರುವುದು ಹುಳಿ-ಸಿಹಿಯ ಬೆಟ್ಟದ ನೆಲ್ಲಿಕಾಯಿ. ವಿಟಮಿನ್‌ ಸಿ ಅಂಶವನ್ನು ಹೇರಳವಾಗಿ ತುಂಬಿಕೊಂಡಿರುವ ಈ ಪುಟ್ಟ ಕಾಯಿಗಳನ್ನು ಹಲವು ರೀತಿಯಲ್ಲಿ ಸೇವಿಸುವುದರಿಂದ ಬಿಸಿಲ ದಿನಗಳಲ್ಲಿ ದೇಹ ನಿತ್ರಾಣಗೊಳ್ಳದಂತೆ ಮತ್ತು ರೋಗನಿರೋಧಕ ಶಕ್ತಿ ಕುಂಠಿತವಾಗದಂತೆ (summer Health Tips) ಕಾಪಾಡಿಕೊಳ್ಳಬಹುದು. ಬಿಸಿಲಿನ ದಿನಗಳಿಗೆ ಪೂರಕವಾಗುವಂತೆ ನೆಲ್ಲಿಕಾಯಿಯನ್ನು ಬಳಸುವುದು ಹೇಗೆ?

pudina gooseberry juice

ಪುದೀನಾ-ನೆಲ್ಲಿ ಪಾನಕ

ವಿಟಮಿನ್‌ ಸಿ, ಇ ಮತ್ತು ಎ, ನಾರು ಹಾಗೂ ವಿಟಮಿನ್‌ ಬಿ1 ಸತ್ವಗಳನ್ನು ಈ ಪಾನಕ ಭರಪೂರ ತುಂಬಿಕೊಂಡಿರುತ್ತದೆ. ಬೇಸಿಗೆಯಲ್ಲಿ ಕಾಡುವ ಜೀರ್ಣಾಂಗಗಳ ಸಮಸ್ಯೆಯಿಂದ ಮುಕ್ತಿ ನೀಡುವಂಥ ಪೇಯವಿದು. ಬೆಟ್ಟದ ನೆಲ್ಲಿಕಾಯಿಗೆ ಚಿಟಿಕೆ ಉಪ್ಪು ಮತ್ತು ಪುದೀನಾ ಎಲೆಗಳನ್ನು ಸೇರಿಸಿ ರುಬ್ಬಿ, ರಸ ತೆಗೆಯಿರಿ. ಇದಕ್ಕೆ ರುಚಿಗೆ ತಕ್ಕಷ್ಟು ಬೆಲ್ಲ ಸೇರಿಸಿ ಅಥವಾ ಹಾಗೆಯೇ ಕುಡಿಯುವವರು ಅಂತೆಯೇ ಕುಡಿಯಬಹುದು.

ನೆಲ್ಲಿ ಸ್ಮೂದಿ

ಇದಕ್ಕಾಗಿ ಮೊಸರು, ಬಾಳೆಹಣ್ಣು, ಕೊಂಚ ಪಾಲಕ್‌ ಎಲೆಗಳು ಮತ್ತು ನೆಲ್ಲಿಕಾಯಿಯನ್ನು ಬ್ಲೆಂಡರ್‌ಗೆ ಹಾಕಿ ತಿರುಗಿಸಿ. ಇದರನ್ನು ಸೋಸಬಾರದು. ಎಲ್ಲ ನಾರಿನಂಶ ಇರುವಂತೆಯೇ ಸೇವಿಸಬೇಕು. ಇದರಿಂದ ಬಾಳೆಹಣ್ಣಿನಲ್ಲಿರುವ ಶರ್ಕರಪಿಷ್ಟಗಳು, ಮೊಸರಿನಲ್ಲಿರುವ ಕೊಬ್ಬು ಮತ್ತು ಪ್ರೊಬಯಾಟಿಕ್‌ ಅಂಶಗಳು, ಪಾಲಕ್‌ನಲ್ಲಿರುವ ಖನಿಜಗಳು ಎಲ್ಲವೂ ನೆಲ್ಲಿ ಕಾಯಿಯ ಜೊತೆಗೆ ಹೊಟ್ಟೆ ಸೇರುತ್ತವೆ. ತೂಕ ಇಳಿಸುವವರು ಇದನ್ನು ಬೆಳಗಿನ ಉಪಹಾರವಾಗಿಯೂ ಸೇವಿಸಬಹುದು.

ನೆಲ್ಲಿ ಸಲಾಡ್‌

ಬೇಸಿಗೆಯಲ್ಲಿ ತಂಪಾದ ಸಲಾಡ್‌ಗಳು ಎಲ್ಲರಿಗೂ ಇಷ್ಟವಾಗುವಂಥವು. ಅದರಲ್ಲೂ ಹುಳಿ-ಸಿಹಿ ರುಚಿಯ ಸಲಾಡ್‌ಗಳು ಮತ್ತೂ ಇಷ್ಟವಾಗುತ್ತವೆ. ಇದಕ್ಕಾಗಿ ನೆಲ್ಲಿಕಾಯಿಯ ಜೊತೆ ಸೌತೇಕಾಯಿ, ದಾಳಿಂಬೆ, ಸೇಬು ಮತ್ತು ಮೊಳಕೆ ಬರಿಸಿದ ಹೆಸರು ಕಾಳುಗಳನ್ನು ತೆಗೆದುಕೊಳ್ಳಿ ಇದಕ್ಕೆ ರುಚಿಗೆ ತಕ್ಕಷ್ಟು ಉಪ್ಪು, ಬೇಕಿದ್ದರೆ ಕೊಂಚ ಕಾಳುಮೆಣಸಿನ ಪುಡಿ ಸೇರಿಸಿ. ನಿಮ್ಮ ರುಚಿಕರ ಸಲಾಡ್‌ ಸಿದ್ಧ.

Image Of Gooseberry Benefits

ನೆಲ್ಲಿ ಪಾಪ್ಸಿಕಲ್‌

ತಂಪಾದ ಏನನ್ನು ಕೊಟ್ಟರೂ ಕೈಯೊಡ್ಡುವಂಥ ಸ್ಥಿತಿ ಈ ಬೇಸಿಗೆಯಲ್ಲಿ. ಅದರಲ್ಲೂ ಫ್ರೋಜನ್‌ ತಿಂಡಿಗಳು ಮತ್ತೂ ಇಷ್ಟವಾಗುತ್ತವೆ. ಪಾಪ್ಸಿಕಲ್‌ ರೂಪದಲ್ಲಿ ನಮಗೆ ಪ್ರಿಯವಾದ್ದನ್ನು ಸವಿಯುವುದು ಬೇರೆಯದೇ ಸೊಗಸನ್ನು ನೀಡುತ್ತದೆ. ನೆಲ್ಲಿಕಾಯನ್ನು ರುಬ್ಬಿ ರಸ ತೆಗೆಯಿರಿ. ಇದಕ್ಕೆ ಕೊಂಚ ಜೇನುತುಪ್ಪ ಮತ್ತು ಸಿಹಿ ಮೊಸರು ಬೆರೆಸಿ. ಈ ಮಿಶ್ರಣವನ್ನು ಪಾಪ್ಸಿಕಲ್‌ ಅಚ್ಚಿಗೆ ಸುರಿಯಿರಿ. ಫ್ರೀಜ್‌ ಮಾಡಿ ತೆಗೆದು ಬಾಯಿ ಚಪ್ಪರಿಸಿದರಾಯಿತು.

ಡಿಟಾಕ್ಸ್‌ ನೀರು

ಬರೀ ನೀರು ಕುಡಿಯುವುದಕ್ಕೆ ಸಾಧ್ಯವಿಲ್ಲ ಎನಿಸಿದರೆ, ಐದು ಲೀ ಪಾತ್ರೆಯಲ್ಲಿ ಹತ್ತಿಪ್ಪತ್ತು ಪುದೀನಾ ಎಲೆಗಳು, ಸೌತೆಕಾಯಿ ಗಾಲಿಗಳು ಮತ್ತು ನೆಲ್ಲಿಯ ತುಂಡುಗಳನ್ನು ಧಾರಾಳವಾಗಿ ಸೇರಿಸಿ. ಒಂದೆರಡು ತಾಸು ಹಾಗೆಯೇ ಬಿಡಿ. ನಂತರ ದಿನವಿಡೀ ಈ ನೀರು ಕುಡಿದು ಸಂತೃಪ್ತಿಯಿಂದಿರಿ. ಇದರಿಂದ ಜೀರ್ಣಾಂಗಗಳ ಕ್ಷಮತೆ ಹೆಚ್ಚುತ್ತದೆ.

indian gooseberry

ನೆಲ್ಲಿ ಐಸ್‌ ಟೀ

ಆರೆಂಟು ಪುದೀನಾ ಚಿಗುರುಗಳ ಜೊತೆಗೆ ನೆಲ್ಲಿ ಕಾಯಿಯ ತುಣುಕುಗಳನ್ನು ನೀರಿಗೆ ಹಾಕಿ ಚೆನ್ನಾಗಿ ಕುದಿಸಿ. ಇದು ಆರಿದ ಮೇಲೆ ಕೊಂಚ ಜೇನುತುಪ್ಪ ಸೇರಿಸಿ, ಫ್ರಿಜ್‌ನಲ್ಲಿಡಿ. ಬೇಕಾದಾಗ ಈ ಈ ಪೇಯವನ್ನು ತೆಗೆದು, ಕುಡಿದು ಸಂಭ್ರಮಿಸಿ. ನೆಲ್ಲಿಕಾಯಿಯನ್ನು ಅತಿಯಾಗಿ ಸೇವಿಸುವುದೂ ಸಮಸ್ಯೆಗಳನ್ನು ತರಬಹುದು. ಈಗಾಗಲೇ ತೂಕ ಕಡಿಮೆ ಇರುವವರು ಇನ್ನೂ ತೂಕ ಇಳಿದ ನಿದಾರ್ಶನಗಳಿವೆ. ಹಾಗಾಗಿ ತೂಕ ಇಳಿಸುವವರು ಇದನ್ನು ಸೇವಿಸಿದಷ್ಟು, ಕಡಿಮೆ ತೂಕದವರಿಗೆ ಬೇಕಾಗುವುದಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Ramanagara News: ಚನ್ನಪಟ್ಟಣ ತಾಲೂಕಿನ ಸಾತನೂರು ಸರ್ಕಲ್ ಬಳಿ ನಡೆದ ಮದುವೆ ಸಮಾರಂಭದಲ್ಲಿ ಐಸ್‌ ಕ್ರೀಂ ಸೇವಿಸಿದ್ದ 50ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ.

VISTARANEWS.COM


on

Ramanagara News
Koo

ರಾಮನಗರ: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ (Channapatna News) ಸಾತನೂರು ಸರ್ಕಲ್ ಬಳಿ ನಡೆದಿದೆ. ಮುಸ್ಲಿಂ ಸಮುದಾಯದ ಮದುವೆ ಸಮಾರಂಭದಲ್ಲಿ ಊಟದ ನಂತರ ಐಸ್ ಕ್ರೀಂ ತಿಂದಿದ್ದ 50ಕ್ಕೂ ಹೆಚ್ಚು ಜನರ ಆರೋಗ್ಯ ವ್ಯತ್ಯಾಸವಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚನ್ನಪಟ್ಟಣದ ಯಾರಬ್ ನಗರ ಹಾಗೂ ಕೋಟೆ ನಿವಾಸಿಗಳು ಅಸ್ವಸ್ಥರಾಗಿದ್ದು, ಐಸ್ ಕ್ರೀಂ ತಿಂದ ಅರ್ಧಗಂಟೆಯಲ್ಲಿ ವಾಂತಿ, ಭೇದಿ ಶುರುವಾಗಿದೆ. ಹೀಗಾಗಿ ಅವರಲ್ಲಿ 40 ಜನರನ್ನು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರನ್ನು ಮಂಡ್ಯ ಹಾಗೂ ರಾಮನಗರ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಇದನ್ನೂ ಓದಿ | Fire Accident: ಬೆಂಗಳೂರಿನ ಎಂ.ಜಿ. ರಸ್ತೆಯ ಆಪ್ಟಿಕಲ್ಸ್‌ ಮಳಿಗೆಯಲ್ಲಿ ಬೆಂಕಿ ಅವಘಡ

ಅವಧಿ ಮುಗಿದಿದ್ದ ಐಸ್ ಕ್ರೀಂ ತಿಂದಿದ್ದೇ ಅವಾಂತರಕ್ಕೆ ಕಾರಣ ಎನ್ನಲಾಗಿದೆ. ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆ ಬಳಿ ಅಸ್ವಸ್ಥರ ಕುಟುಂಬಸ್ಥರು ಜಮಾಯಿಸಿದ್ದಾರೆ. ಅಸ್ವಸ್ಥರಿಗೆ ಡ್ರಿಪ್ಸ್ ಹಾಕಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಗೋಮಾಂಸ ಸಾಗಾಟ ಶಂಕೆ; ಹಿಂದುಪರ ಕಾರ್ಯಕರ್ತರಿಂದ ವಾಹನಕ್ಕೆ ಕಲ್ಲು ತೂರಾಟ

Beef smuggling suspected Hindu activists pelt stones at vehicle

ಯಾದಗಿರಿ: ಅಕ್ರಮವಾಗಿ ಗೋಮಾಂಸ ಸಾಗಾಟ (Beef Smuggling) ಮಾಡುತ್ತಿದ್ದ ಶಂಕೆ ಹಿನ್ನೆಲೆಯಲ್ಲಿ ವಾಹನವನ್ನು ತಡೆದು ಹಿಂದುಪರ ಕಾರ್ಯಕರ್ತರು ಕಲ್ಲು ತೂರಾಟ ಮಾಡಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಬಳಿ ಘಟನೆ ನಡೆದಿದೆ.

ಮಾಂಸ ಸಾಗಾಣಿಕೆ ಮಾಡುವ ವಾಹನ ಮಹಾರಾಷ್ಟ್ರ ಮೂಲದ್ದು ಎನ್ನಲಾಗಿದೆ. ಮಹಾರಾಷ್ಟ್ರದಿಂದ ತಾಳಿಕೋಟಿ ಮಾರ್ಗವಾಗಿ ಹೈದ್ರಾಬಾದ್‌ಗೆ ಹೋಗುತ್ತಿದ್ದಾಗ, ಹುಣಸಗಿ ಬಳಿ ನಿಲ್ಲಿಸಲಾಗಿತ್ತು. ಈ ವೇಳೆ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡಲಾಗುತ್ತಿದೆ ಎಂಬ ಅನುಮಾನ ಬಂದಿತ್ತು. ಕೂಡಲೇ ಸ್ಥಳೀ ಪೊಲೀಸರಿಗೆ ಮಾಹಿತಿ ನೀಡಿದ್ದರು.

ತಕ್ಷಣವೇ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಮಾಂಸ ಸಾಗಾಣಿಕೆ ಮಾಡುತ್ತಿದ್ದ ವಾಹನವನ್ನು ಪೊಲೀಸರನ್ನು ವಶಕ್ಕೆ ಪಡೆದಿದ್ದಾರೆ. ವಾಹನದಲ್ಲಿ ಇರುವುದು ಯಾವ ಪ್ರಾಣಿಯ ಮಾಂಸ ಎಂಬುದು ಪರಿಶೀಲನೆಗಾಗಿ ಪಶು ಇಲಾಖೆ ವೈದ್ಯರು ಕಲಬುರಗಿಗೆ ಕಳುಹಿಸಿದ್ದಾರೆ.

ಇದನ್ನೂ ಓದಿ: Lok Sabha Election 2024 : ಮತದಾನದ ಹಬ್ಬದಲ್ಲೂ ಲೂಟಿಗೆ ಇಳಿದ ಖಾಸಗಿ ಬಸ್‌! ವೋಟ್‌ ಹಾಕಲು ಬಸ್‌ ಏರುವವರಿಗೆ ಟಿಕೆಟ್ ದುಬಾರಿ!‌

ಶಿವಾನಂದ ದೊಂಡಿರಾಮ, ಅಕ್ಷಯ್ ಜಾವೀರ್, ಲಖನ್ ಎಂಬುವವರ ಮೇಲೆ ಕೇಸ್ ದಾಖಲಾಗಿದ್ದು, ವಾಹನದ ಚಾಲಕ ಶಿವಾನಂದ ದೊಂಡಿರಾಮ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಲಖನ್ ಜಾವೀರ್, ಅಕ್ಷಯ್ ಜಾವೀರ್ ಇಬ್ಬರು ಪರಾರಿಯಾಗಿದ್ದಾರೆ. ರಾಮಸೇನಾ ಜಿಲ್ಲಾಧ್ಯಕ್ಷ ಶರಣಕುಮಾರ ನಾಯಕ ಅವರಿಂದ ದೂರಿನ ಮೇರೆಗೆ ಹುಣಸಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement
Samantha Ruth Prabhu Fake Viral Nude Pic
ಟಾಲಿವುಡ್7 mins ago

Samantha Ruth Prabhu: ಬೆತ್ತಲೆ ಫೋಟೊ ಅಪ್​ಲೋಡ್ ಮಾಡಿದ್ರಾ ಸಮಂತಾ?

Dr.Nagareddy Patil
ಕರ್ನಾಟಕ8 mins ago

Dr.Nagareddy Patil: ಮಾಜಿ ಶಾಸಕ, ಕಾಂಗ್ರೆಸ್‌ ಮುಖಂಡ ಡಾ. ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

IPL 2024 Points Table
ಕ್ರೀಡೆ9 mins ago

IPL 2024 Points Table: ರಾಜಸ್ಥಾನ್​ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಕೆಕೆಆರ್​; ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Terrorist attack
ದೇಶ54 mins ago

Terrorist Attack: “ಉಗ್ರರ ದಾಳಿ ಬಿಜೆಪಿ ಚುನಾವಣಾ ಪೂರ್ವ ಸ್ಟಂಟ್‌”; ನಾಲಿಗೆ ಹರಿಬಿಟ್ಟ ಪ್ರತಿಪಕ್ಷದ ಇಬ್ಬರು ನಾಯಕರು

Prajwal Revanna Case
ಕರ್ನಾಟಕ60 mins ago

Prajwal Revanna Case: ಪ್ರಜ್ವಲ್‌ ಕೇಸ್‌ನ ಸಂತ್ರಸ್ತೆಯರಿಗಾಗಿ ಆರಂಭಿಸಿದ ಹೆಲ್ಪ್‌ಲೈನ್‌ಗೆ ಬರ್ತಿವೆ ಹಲವು ಕರೆಗಳು

Cooking Oils
ಆರೋಗ್ಯ2 hours ago

Cooking Oils: ಈ 5 ಅಡುಗೆ ಎಣ್ಣೆಗಳು ನಮ್ಮ ಆರೋಗ್ಯಕ್ಕೆ ಅಪಾಯಕಾರಿ!

karnataka Weather Forecast
ಮಳೆ2 hours ago

Karnataka Weather : ಇಂದು ಮಳೆ ಬರುತ್ತಾ? ಯಾವ ಜಿಲ್ಲೆಗಳಲ್ಲಿದೆ ಹೀಟ್‌ ವೇವ್‌?

Pain relievers
ಆರೋಗ್ಯ3 hours ago

Pain Relievers: ಸೈಡ್‌ ಎಫೆಕ್ಟ್‌ ಇಲ್ಲದ ಪ್ರಕೃತಿದತ್ತ ನೋವು ನಿವಾರಕಗಳಿವು

Dina bhavishya
ಭವಿಷ್ಯ4 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Ramanagara News
ಕರ್ನಾಟಕ9 hours ago

Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ4 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ13 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ14 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ15 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌