T20 World Cup | ಟಿ20 ವಿಶ್ವ ಕಪ್​ ಫೈನಲ್‌ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರೆ ಫಲಿತಾಂಶ ನಿರ್ಧಾರ ಹೇಗೆ? - Vistara News

Latest

T20 World Cup | ಟಿ20 ವಿಶ್ವ ಕಪ್​ ಫೈನಲ್‌ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದರೆ ಫಲಿತಾಂಶ ನಿರ್ಧಾರ ಹೇಗೆ?

ಟಿ20 ವಿಶ್ವ ಕಪ್​ನಲ್ಲಿ ಐಸಿಸಿ ಮಹತ್ವದ ಬದಲಾವಣೆವೊಂದನ್ನು ಮಾಡಿದೆ. ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಕ್ಕೆ ಮಳೆ ಬಂದರೆ 10 ಓವರ್​ ಆಟ ನಡೆಯಬೇಕು ಎಂದು ತಿಳಿಸಿದೆ.

VISTARANEWS.COM


on

icc
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದುಬೈ: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವ ಕಪ್(T20 World Cup) ಕೂಟದ ಸೂಪರ್​-12 ಪಂದ್ಯಗಳು ಮುಕ್ತಾಯದ ಹಂತಕ್ಕೆ ತಲುಪಿದೆ. ಇದೇ ವೇಳೆ ಐಸಿಸಿ ಮಹತ್ವದ ಬದಲಾವಣೆಯೊಂದನ್ನು ಮಾಡಿದೆ. ಅದರಂತೆ ಟಿ20 ವಿಶ್ವ ಕಪ್​ನ ಸೆಮಿ ಫೈನಲ್​ಗಳು ಮತ್ತು ಫೈನಲ್ ಪಂದ್ಯದಲ್ಲಿ ಫಲಿತಾಂಶ ನಿರ್ಣಯಿಸಲು ಎರಡೂ ಇನಿಂಗ್ಸ್​ಗಳಲ್ಲಿ ಕನಿಷ್ಠ ಹತ್ತು ಓವರ್ ಆಟ ನಡೆಯಬೇಕು ಎಂದು ಸೂಚಿಸಿದೆ.

ಟಿ20 ವಿಶ್ವ ಕಪ್​ ಆರಂಭಕ್ಕೂ ಮುನ್ನವೆ ಐಸಿಸಿ ಕೆಲ ನಿಯವನ್ನು ಜಾರಿಗೊಳಿಸಿತ್ತು. ಗ್ರೂಪ್​ ಹಂತದ ಪಂದ್ಯಗಳು ಮಳೆಯಿಂದ ರದ್ದಾದರೆ ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡುವ ನಿರ್ಧಾರವನ್ನು ಪ್ರಕಟಿಸಿತ್ತು. ಆದರೆ ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ನಿಗದಿಪಡಿಸಿತ್ತು. ಆದರೆ ಇದೀಗ ಆಸ್ಟ್ರೇಲಿಯಾದಲ್ಲಿ ಮಳೆ ಕಾಟ ನಿಲ್ಲುವಂತೆ ಕಾಣುತ್ತಿಲ್ಲ. ಈ ನಿಟ್ಟಿನಲ್ಲಿ ಐಸಿಸಿ ಹಿಂದಿನ ನಿಯಮವನ್ನು ಮತ್ತೆ ತಿದ್ದುಪಡಿ ಮಾಡಿ ಹೊಸ ನಿಯಮವನ್ನು ಪ್ರಕಟಿಸಿದೆ.

ಇದೀಗ ಐಸಿಸಿ ಪ್ರಕಟಿಸಿದ ಹೊಸ ನಿಯಮದ ಪ್ರಕಾರ ಸೆಮಿ ಫೈನಲ್ ಮತ್ತು ಫೈನಲ್ ಪಂದ್ಯದಲ್ಲಿ ಫಲಿತಾಂಶ ನಿರ್ಣಯಿಸಲು ಎರಡೂ ಇನಿಂಗ್ಸ್​ಗಳಲ್ಲಿ ಕನಿಷ್ಠ ಹತ್ತು ಓವರ್ ಆಟ ನಡೆಯಬೇಕು ಎಂದು ಸೂಚಿಸಿದೆ. ಸೆಮಿ ಫೈನಲ್ ನಲ್ಲಿ ಮಳೆಯ ಕಾರಣಕ್ಕೆ ಒಂದು ವೇಳೆ ತಲಾ ಹತ್ತು ಓವರ್ ನ ಪಂದ್ಯ ನಡೆಯಲು ಅವಕಾಶ ಸಿಗಿದ್ದರೆ ಅದೇ ಪಂದ್ಯ ಮೀಸಲು ದಿನದಂದು ನಡೆಯಲಿದೆ. ಆದರೆ ಮೀಸಲು ದಿನದಲ್ಲೂ ಮಳೆ ಕಾಟ ಎದುರಾಗಿ ಕನಿಷ್ಠ ತಲಾ ಹತ್ತು ಓವರ್ ಪಂದ್ಯ ನಡೆಯದಿದ್ದರೆ, ಆಗ ಅಂಕ ಪಟ್ಟಿಯಲ್ಲಿ ಯಾವ ತಂಡ ಮುಂದಿರುತ್ತದೋ ಆ ತಂಡವು ಫೈನಲ್ ಪ್ರವೇಶ ಮಾಡಲಿದೆ. ಅದರಂತೆ ಫೈನಲ್​ ವೇಳೆಯೂ ಇದೇ ಪರಿಸ್ಥಿತಿ ಮುಂದುವರಿದರೆ ಎರಡೂ ತಂಡಗಳನ್ನು ಜಂಟಿ ವಿಜೇತರೆಂದು ಘೋಷಣೆ ಮಾಡಲಾಗುತ್ತದೆ ಎಂದು ಐಸಿಸಿ ತಿಳಿಸಿದೆ.

ನವೆಂಬರ್ 9 ಮತ್ತು 10ರಂದು ಸೆಮಿಫೈನಲ್ ಪಂದ್ಯಗಳು ನಡೆದರೆ, ನ.13ರಂದು ಮೆಲ್ಬೋರ್ನ್‌ನಲ್ಲಿ ಫೈನಲ್ ನಡೆಯಲಿದೆ.

ಇದನ್ನೂ ಓದಿ | T20 World Cup | ನಾಯಕನ ಸ್ಥಾನಕ್ಕೆ ವಿದಾಯ ಹೇಳಿದ ಅಫಘಾನಿಸ್ತಾನದ ಮೊಹಮ್ಮದ್ ನಬಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಆರೋಗ್ಯ

Sadhguru Jaggi Vasudev: ಮಕ್ಕಳಲ್ಲಿ ಅಲರ್ಜಿ ಸಮಸ್ಯೆಗೆ ಏನು ಪರಿಹಾರ? ಸದ್ಗುರು ಸಲಹೆ ಇಲ್ಲಿದೆ ಕೇಳಿ

ಅಲರ್ಜಿ ತೊಂದರೆಗಳು ಈಗ ಎಲ್ಲರಲ್ಲೂ ಸಾಮಾನ್ಯ. ಇದಕ್ಕೆ ಮುಖ್ಯ ಕಾರಣ ನಮ್ಮ ಆಹಾರ. ಆದರೆ ಅದು ಹೇಗೆ ಬಂತು, ಕಡಿಮೆ ಮಾಡುವುದು ಹೇಗೆ ಎನ್ನುವುದಕ್ಕೆ ನಮ್ಮಲ್ಲಿ ಉತ್ತರವಿರುವುದಿಲ್ಲ. ವೈದ್ಯರನ್ನು ಸಂಪರ್ಕಿಸಿ ಒಂದೆರಡು ದಿನ ಔಷಧ ಪಡೆದು ಸುಮ್ಮನಾಗುತ್ತೇವೆ. ಇದು ಮತ್ತೊಮ್ಮೆ , ಮಗದೊಮ್ಮೆ ಉಂಟಾಗುತ್ತಲೇ ಇರುತ್ತದೆ. ಮಕ್ಕಳಲ್ಲಿ ಕಾಣಿಸಿಕೊಳ್ಳುವ ಅಲರ್ಜಿಯನ್ನು ನಾವು ಸಣ್ಣ ವಯಸ್ಸಿನಲ್ಲೇ ದೂರ ಮಾಡಬಹುದು. ಅದು ಹೇಗೆ ಎಂಬುದನ್ನು ಸದ್ಗುರು (Sadhguru Jaggi Vasudev) ಹೇಳಿರುವುದು ಹೀಗೆ.

VISTARANEWS.COM


on

By

Sadhguru Jaggi Vasudev
Koo

ಇತ್ತೀಚಿನ ದಿನಗಳಲ್ಲಿ ಸಣ್ಣ ಮಕ್ಕಳು (children’s) ಅಲರ್ಜಿ (allergies ) ತೊಂದರೆಯಿಂದ ಬಳಲುತ್ತಿರುತ್ತಾರೆ. ಎಷ್ಟೇ ಆರೈಕೆ ಮಾಡಿದರೂ ಸಂಪೂರ್ಣ ಗುಣಮುಖರಾಗುವುದಿಲ್ಲ. ಎಷ್ಟೋ ಬಾರಿ ಪೋಷಕರು (parents) ತಮ್ಮ ಮಕ್ಕಳಿಗೆ ಏಕೆ ಈ ತೊಂದರೆ ಕಾಣಿಸಿಕೊಂಡಿತು ಎಂದು ತಮ್ಮನ್ನು ತಾವು ಪ್ರಶ್ನಿಸುತ್ತಲೇ ಇರುತ್ತಾರೆ. ಆದರೆ ಅವರಿಗೆ ಇದಕ್ಕೆ ಉತ್ತರವೇ ಸಿಗುವುದಿಲ್ಲ. ಪ್ರಸಿದ್ಧ ಆಧ್ಯಾತ್ಮಿಕ ಮಾರ್ಗದರ್ಶಿ ಮತ್ತು ಆರೋಗ್ಯ ತಜ್ಞ ಸದ್ಗುರು ಜಗ್ಗಿ ವಾಸುದೇವ್ (Sadhguru Jaggi Vasudev) ಅವರು ಇದೀಗ ಮಕ್ಕಳಲ್ಲಿ ಉಂಟಾಗುವ ಅಲರ್ಜಿ ಸಮಸ್ಯೆಗಳಿಗೆ ಕಾರಣ ಮತ್ತು ಪರಿಹಾರವನ್ನು ಹೇಳಿದ್ದಾರೆ.

ಅಲರ್ಜಿ ತೊಂದರೆಗಳು ಈಗ ಎಲ್ಲರಲ್ಲೂ ಸಾಮಾನ್ಯ. ಇದಕ್ಕೆ ಮುಖ್ಯ ಕಾರಣ ನಮ್ಮ ಆಹಾರ. ಆದರೆ ಅದು ಹೇಗೆ ಬಂತು, ಕಡಿಮೆ ಮಾಡುವುದು ಹೇಗೆ ಎನ್ನುವುದಕ್ಕೆ ನಮ್ಮಲ್ಲಿ ಉತ್ತರವಿರುವುದಿಲ್ಲ. ವೈದ್ಯರನ್ನು ಸಂಪರ್ಕಿಸಿ ಒಂದೆರಡು ದಿನ ಔಷಧ ಪಡೆದು ಸುಮ್ಮನಾಗುತ್ತೇವೆ. ಇದು ಮತ್ತೊಮ್ಮೆ , ಮಗದೊಮ್ಮೆ ಉಂಟಾಗುತ್ತಲೇ ಇರುತ್ತದೆ. ಮಕ್ಕಳಲ್ಲಿ ಕಾಣಿಸಿಕೊಳ್ಳುವ ಅಲರ್ಜಿಯನ್ನು ನಾವು ಸಣ್ಣ ವಯಸ್ಸಿನಲ್ಲೇ ದೂರ ಮಾಡಬಹುದು ಎಂದಿದ್ದಾರೆ ಅವರು.

ಮಗುವು ಅಲರ್ಜಿಯೊಂದಿಗೆ ಹೋರಾಡುವುದನ್ನು ನೋಡುವುದು ಪ್ರತಿಯೊಬ್ಬ ಪೋಷಕರಿಗೂ ಸಂಕಟ ಮತ್ತು ಅಸಮಾಧಾನವನ್ನು ಉಂಟುಮಾಡುತ್ತದೆ. ಎಷ್ಟೇ ಔಷಧ ಮಾಡಿದರೂ ಇದು ಗುಣವಾಗದೇ ಇರುವುದು ನಮ್ಮನ್ನು ಚಿಂತೆಗೆ ಈಡಾಗುವಂತೆ ಮಾಡುತ್ತದೆ. ಎಷ್ಟೋ ಬಾರಿ ಇದು ಪುಟ್ಟ ಮಕ್ಕಳಿಗೆ ತಮ್ಮ ಬದುಕಿನಲ್ಲಿ ಬೇಸರ, ನಿರಾಸೆಯನ್ನು ಉಂಟು ಮಾಡಬಹುದು. ಆದರೂ ಮಕ್ಕಳ ಈ ಅಲರ್ಜಿ ಸಮಸ್ಯೆಗಳನ್ನು ನೈಸರ್ಗಿಕವಾಗಿ ಪರಿಹರಿಸಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು, ಆಧ್ಯಾತ್ಮಿಕ ಚಿಂತಕರಾದ ಜಗ್ಗಿ ವಾಸುದೇವ್.

ಮಕ್ಕಳಲ್ಲಿ ಅಲರ್ಜಿಯನ್ನು ನಿರ್ವಹಿಸುವ ಕುರಿತು ಅವರು ತಮ್ಮ ಸಲಹೆಯನ್ನು ನೀಡಿದ್ದಾರೆ. ಸುಲಭವಾದ ಜೀವನಶೈಲಿ ಹೊಂದಾಣಿಕೆಯಿಂದ ಶಕ್ತಿಯುತವಾದ ಮನೆ ಚಿಕಿತ್ಸೆಗಳವರೆಗೆ ಎಲ್ಲವೂ ಅಲರ್ಜಿಯ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ ಮತ್ತು ಮಕ್ಕಳ ಸಾಮಾನ್ಯ ಆರೋಗ್ಯವನ್ನು ಹೆಚ್ಚಿಸಲು ಪ್ರೇರಣೆಯಾಗುತ್ತದೆ ಎನ್ನುತ್ತಾರೆ ಅವರು.
ಇತ್ತೀಚಿಗೆ ಅವರು ಅಲರ್ಜಿಯ ಪ್ರಮುಖ ವಿಷಯವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಅಲರ್ಜಿಯನ್ನು ಜಯಿಸಲು ಪ್ರಮುಖ ಮಾರ್ಗಗಳನ್ನು ಸೂಚಿಸಿದ್ದಾರೆ.

ಇದನ್ನೂ ಓದಿ: Priyanka Chopra: ಬೆಳ್ಳುಳ್ಳಿ ಎಸಳು ಪಾದಗಳಿಗೆ ಉಜ್ಜುವುದರಿಂದ ಏನು ಪ್ರಯೋಜನ? ನಟಿ ಪ್ರಿಯಾಂಕಾ ಚೋಪ್ರಾ ಹೇಳಿದ್ದೇನು?

ಮಕ್ಕಳ ಬಗ್ಗೆ ಮಾತನಾಡಿದ ಅವರು, ಅಲರ್ಜಿಯಿಂದ ಪರಿಹಾರ ಪಡೆಯಲು ಹಲವು ದಾರಿಗಳಿವೆ. ಆರೋಗ್ಯಕರ ಜೀವಿಗಳಿಗೆ ಆಹಾರ ಸೇವನೆಯಲ್ಲಿ ಕೆಲವು ಬದಲಾವಣೆಗಳನ್ನು ಸಲಹೆ ನೀಡಿದ್ದಾರೆ.

ಮಕ್ಕಳಿಗೆ ಅಲರ್ಜಿಗಳು ಹೋಗಬೇಕಾದರೆ ಹಾಲು ಮತ್ತು ಮಾಂಸದ ಉತ್ಪನ್ನಗಳಿಂದ ಅವರನ್ನು ದೂರವಿರಿಸಿ. ಇವು ತುಂಬಾ ಕೆಟ್ಟದಾಗಿ ಅಲರ್ಜಿ ಉಂಟು ಮಾಡಬಲ್ಲದು. ಸ್ವಲ್ಪ ಅಲರ್ಜಿ ಕಾಣಿಸಿ ಕೊಂಡರೆ ಪರವಾಗಿಲ್ಲ. ತುಂಬಾ ಕೆಟ್ಟದಾಗಿ ಅಲರ್ಜಿಯಾಗಿದ್ದರೆ ಮಾಂಸ ಉತ್ಪನ್ನಗಳನ್ನು ತ್ಯಜಿಸಿ ಸಾಕಷ್ಟು ತರಕಾರಿ, ತಾಜಾ ಹಣ್ಣು ಮತ್ತು ವಸ್ತುಗಳನ್ನೇ ಅವರಿಗೆ ಸೇವಿಸಲು ಕೊಡಿ. ಇದರಿಂದ ಅವರು ಬಹುಬೇಗನೆ ಅಲರ್ಜಿ ತೊಂದರೆಯಿಂದ ಗುಣಮುಖರಾಗುತ್ತಾರೆ ಎಂದು ಸದ್ಗುರು ತಿಳಿಸಿದ್ದಾರೆ.

Continue Reading

ಪ್ರವಾಸ

Assam Tour: ಅಸ್ಸಾಂನ ಪೆಲ್ಲಿಂಗ್‌ನಲ್ಲಿ ಮೋಡಿ ಮಾಡುವ 8 ಆಕರ್ಷಕ ಸಂಗತಿಗಳಿವು

Assam Tour: ಪ್ರಕೃತಿ, ಸಂಸ್ಕೃತಿ ಮತ್ತು ಸಾಹಸವು ಪರಸ್ಪರ ಸಾಮರಸ್ಯದಿಂದ ಹೇಗೆ ಸಹಬಾಳ್ವೆ ನಡೆಸಬಹುದು ಎಂಬುದರ ಸಂಕೇತವೇ ಪೆಲ್ಲಿಂಗ್. ವಿಸ್ಮಯ-ಸ್ಫೂರ್ತಿದಾಯಕ ಹಲವು ತಾಣಗಳು, ಆಳವಾಗಿ ಬೇರೂರಿರುವ ಸಂಪ್ರದಾಯ ಮತ್ತು ಸ್ನೇಹಪರ ದಾರಿಗಳು ಪೆಲ್ಲಿಂಗ್‌ ಪ್ರವಾಸವನ್ನು (Pelling Tour) ಶಾಶ್ವತವಾಗಿ ನನಪಿನಲ್ಲಿ ಉಳಿಯುವಂತೆ ಮಾಡುತ್ತದೆ.

VISTARANEWS.COM


on

By

Assam Tour
Koo

ಆಕರ್ಷಕ ಪರಿಸರ, ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು (Assam Tour) ಹೊಂದಿರುವ ಪುಟ್ಟ ಗ್ರಾಮ ಪೆಲ್ಲಿಂಗ್ (Pelling Tour) ಹಿಮಾಲಯದ (himalaya) ಇಳಿಜಾರಿನಲ್ಲಿದೆ. ತನ್ನ ಸೌಂದರ್ಯದಿಂದಲೇ ಸಿಕ್ಕಿಂಗೆ (sikkim) ಬರುವ ಪ್ರವಾಸಿಗರನ್ನು (tourist) ತನ್ನತ್ತ ಸೆಳೆಯುತ್ತದೆ. ಪ್ರಕೃತಿಯ ಮಡಿಲಲ್ಲಿ ಮನ ಶಾಂತಿಯನ್ನು ಹುಡುಕುವವರಿಗೆ ಇದು ಸೂಕ್ತ ಸ್ಥಳವಾಗಿದೆ. ಪೆಲ್ಲಿಂಗ್ನಲ್ಲಿ ಅತ್ಯಂತ ಆಸಕ್ತಿದಾಯಕ ಹಲವಾರು ತಾಣಗಳಿವೆ. ಈ ತಾಣಗಳು ನಿಮ್ಮ ಪ್ರವಾಸದ ಅನುಭವ1ವನ್ನು ರೋಮಾಂಚಕಗೊಳಿಸುವುದು ಮಾತ್ರವಲ್ಲ ಸ್ಮರಣೀಯಗೊಳಿಸುತ್ತದೆ.

ಕಾಂಚನಜುಂಗಾ

ಪ್ರಪಂಚದ ಮೂರನೇ ಅತೀ ಎತ್ತರದ ಶಿಖರವಾದ ಕಾಂಚನಜುಂಗಾವನ್ನು ಪೆಲ್ಲಿಂಗ್‌ನಿಂದ ಅತ್ಯಂತ ಹತ್ತಿರದಿಂದ ನೋಡಬಹುದು. ಸೂರ್ಯೋದಯ ಮತ್ತು ಸೂರ್ಯಾಸ್ತದ ಸಮಯದಲ್ಲಿ ಪರ್ವತವು ಗುಲಾಬಿ ಬಣ್ಣಕ್ಕೆ ತಿರುಗುವುದು ಕಣ್ಣಿಗೆ ಹಬ್ಬವನ್ನು ಉಂಟು ಮಾಡುತ್ತದೆ. ಹಚ್ಚ ಹಸಿರಿನ ಕಾಡುಗಳ ನಡುವೆ ಹರಿಯುವ ಜಲಪಾತಗಳು ತನ್ನ ಸೌಂದರ್ಯದಿಂದ ಮೋಡಿಮಾಡುವುದು ಮಾತ್ರವಲ್ಲ ಎಲ್ಲರನ್ನೂ ಬೆರಗುಗೊಳಿಸುತ್ತದೆ.

ಸಾಂಸ್ಕೃತಿಕ ವೈಭವ

ಲೆಪ್ಚಾಗಳು, ಭುಟಿಯಾಗಳು ಮತ್ತು ನೇಪಾಳಿಗಳು ಸೇರಿದಂತೆ ವಿವಿಧ ಸಮುದಾಯಗಳ ಜನರು ಪೆಲ್ಲಿಂಗ್‌ನಲ್ಲಿ ವಾಸಿಸುತ್ತಿದ್ದಾರೆ. ಹೀಗಾಗಿ ಇಲ್ಲಿ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆಯ ಸಂಗಮವಾಗಿದೆ. ಇಲ್ಲಿನ ಜನರು ತಮ್ಮ ಧಾರ್ಮಿಕತೆ ಮತ್ತು ಅವರಲ್ಲಿ ಐಕ್ಯತೆಯನ್ನು ತೋರಿಸಲು ಆಚರಿಸುವ ಬುಮ್ಚು ಹಬ್ಬದ ಸಂದರ್ಭದಲ್ಲಿ ಪಾಂಗ್ಟೋಡ್ ಚಾಮ್ ನೃತ್ಯ ಕಣ್ಣಿಗೆ ಹಬ್ಬವನ್ನು ಉಂಟು ಮಾಡುತ್ತದೆ. ಈ ವೇಳೆ ಸಿಕ್ಕಿಮರ ಆತಿಥ್ಯವನ್ನು ಅನುಭವಿಸಬಹುದು.


ಸಾಹಸ ಪ್ರಿಯರಿಗಾಗಿ ಸಾಕಷ್ಟು ಅವಕಾಶ

ಜೀವನದಲ್ಲಿ ರೋಮಾಂಚನವನ್ನು ಬಯಸುವವರಿಗೆ ಪೆಲ್ಲಿಂಗ್‌ನಲ್ಲಿ ಸಾಕಷ್ಟು ಉತ್ಸಾಹ ತುಂಬುವ ತಾಣಗಳಿವೆ. ಯುಕ್ಸೋಮ್ ಅಥವಾ ಖೆಚಿಯೋಪಾಲ್ರಿ ಸರೋವರವಿರುವ ಹತ್ತಿರದ ಹಳ್ಳಿಗಳಿಗೆ ಪಾದಯಾತ್ರೆ ಮಾಡುವಾಗ ವಿವಿಧ ಜಾತಿಯ ಪ್ರಾಣಿಗಳನ್ನು ಕಣ್ತುಂಬಿಕೊಳ್ಳಬಹುದು. ಸಾಹಸ ಪ್ರಿಯ ಪ್ರವಾಸಿಗರು ಪ್ಯಾರಾಗ್ಲೈಡಿಂಗ್, ರಿವರ್ ರಾಫ್ಟಿಂಗ್ ಅಥವಾ ಮೌಂಟೇನ್ ಬೈಕಿಂಗ್‌ನಂತಹ ಚಟುವಟಿಕೆಗಳನ್ನು ನಡೆಸಬಹುದು.

ಆಧ್ಯಾತ್ಮಿಕ ಧಾಮ

ಪೆಲ್ಲಿಂಗ್ ಸುತ್ತಮುತ್ತ ಇರುವ ಅನೇಕ ಹಳೆಯ ಮಠಗಳಲ್ಲಿ ಪೆಮಯಾಂಗಟ್ಸ್ ಮಠವು ಒಂದಾಗಿದೆ. ಸಂಕೀರ್ಣವಾದ ಧಾರ್ಮಿಕ ಕಲಾಕೃತಿಗಳು ಮತ್ತು ಶಿಲ್ಪಗಳನ್ನು ಹೊಂದಿರುವ ಇದು ಸಂದರ್ಶಕರನ್ನು ಮೋಡಿ ಮಾಡುತ್ತದೆ. ಮನ ಶಾಂತಿ ಬಯಸುವವರು ಇಲ್ಲಿ ಸನ್ಯಾಸಿಗಳಂತೆ ಜೀವನ ನಡೆಸಬಹುದು.

ಸುಸ್ಥಿರ ಪ್ರವಾಸೋದ್ಯಮ

ಪೆಲ್ಲಿಂಗ್ ಸುಸ್ಥಿರ ಪ್ರವಾಸೋದ್ಯಮಕ್ಕೆ ಮೀಸಲಾಗಿದೆ. ಪರಿಸರ ಸ್ನೇಹಿ ಯೋಜನೆಗಳಿಗೆ ಇದು ಒತ್ತು ನೀಡುತ್ತದೆ. ಸ್ಥಳೀಯ ಜನರ ಜೀವನೋಪಾಯವನ್ನು ಬೆಂಬಲಿಸುವ ಜೊತೆಗೆ ಜವಾಬ್ದಾರಿಯುತ ಪ್ರಯಾಣವನ್ನು ಪ್ರೋತ್ಸಾಹಿಸುವ ಹಲವಾರು ಸಮುದಾಯ ಆಧಾರಿತ ಪ್ರವಾಸೋದ್ಯಮಗಳಿಗೆ ಇಲ್ಲಿ ಅವಕಾಶ ನೀಡಲಾಗಿದೆ.


ಸ್ಥಳೀಯ ಖಾದ್ಯಗಳನ್ನು ಸವಿಯಬಹುದು

ಸಿಕ್ಕಿಮೀಸ್ ಪಾಕಪದ್ಧತಿ ಬಾಯಲ್ಲಿ ನೀರುಣಿಸುತ್ತದೆ. ವಿಶಿಷ್ಟವಾದ ರುಚಿ ಮತ್ತು ಪದಾರ್ಥಗಳನ್ನು ಇದು ಒಳಗೊಂಡಿದೆ. ಸ್ಥಳೀಯ ಆಹಾರಗಳಾದ ಮೊಮೊಸ್, ತುಕ್ಪಾ ಮತ್ತು ಗುಂಡ್ರುಕ್ ಹಾಗೂ ಟಿಬೆಟಿಯನ್ನರು ಮತ್ತು ನೇಪಾಳಿಗಳ ಭಕ್ಷ್ಯಗಳನ್ನು ಸವಿಯಬಹುದು. ಸಾವಯವ ಹಣ್ಣು, ತರಕಾರಿಗಳ ಅಧಿಕೃತ ಪಾಕವಿಧಾನಗಳನ್ನು ಆನಂದಿಸಬಹುದು.

ಇದನ್ನೂ ಓದಿ: Baby Moon: ಹನಿಮೂನ್‌ನಂತೆ ಬೇಬಿಮೂನ್; ಜನಪ್ರಿಯವಾಗುತ್ತಿರುವ ಹೊಸ ಟ್ರೆಂಡ್!

ಹಕ್ಕಿಗಳ ಕಲರವ

ಪೆಲ್ಲಿಂಗ್ ಸುತ್ತಮುತ್ತ ನಿತ್ಯಹರಿದ್ವರ್ಣ ಪರಿಸರದ ನಡುವೆ ಹಲವಾರು ಪಿಕ್ನಿಕ್ ತಾಣಗಳಿವೆ. ಮೋಡಿ ಮಾಡುವ ಚಿಲಿಪಿಲಿ ಹಕ್ಕಿಗಳ ಕಲರವವನ್ನು ಕೇಳಿ ಆನಂದಿಸುತ್ತಾ ಆಧುನಿಕ ಒತ್ತಡದ ಬದುಕಿನಿಂದ ದೂರವಾಗಿ ಮನಃಶಾಂತಿಯನ್ನು ಆನಂದಿಸಬಹುದು.

ವರ್ಷ ಪೂರ್ತಿ ವಿಶಿಷ್ಟ ಅನುಭವ

ಪೆಲ್ಲಿಂಗ್ ನಲ್ಲಿ ವರ್ಷ ಪೂರ್ತಿ ವಿಭಿನ್ನ ಋತುಗಳನ್ನು ಇಲ್ಲಿ ಆನಂದಿಸಬಹುದು. ವಸಂತಕಾಲದಲ್ಲಿ ಆಕಾಶವು ಸ್ಪಷ್ಟವಾಗಿರುವಾಗ ಪ್ರವಾಸಿಗರು ಪ್ರಕೃತಿಯ ನಡುವೆ ಹೆಜ್ಜೆ ಹಾಕಬಹುದು. ಆಕರ್ಷಕ ಛಾಯಾಚಿತ್ರಗಳನ್ನು ತೆಗೆದುಕೊಳ್ಳಬಹುದು. ಮಳೆಗಾಲದಲ್ಲಿ ಪ್ರಕೃತಿ ಪ್ರಿಯರು ಇಲ್ಲಿ ಅದ್ಭುತ ನೋಟಗಳನ್ನು ಕಣ್ತುಂಬಿಕೊಳ್ಳಬಹುದು. ಶರತ್ಕಾಲ ಮತ್ತು ಚಳಿಗಾಲದಲ್ಲಿ ಪ್ರವಾಸಿಗರು ಹಿಮಾಲಯದ ಸೌಂದರ್ಯವನ್ನು ಕಣ್ಮನದಲ್ಲಿ ತುಂಬಿಕೊಳ್ಳಬಹುದು.

Continue Reading

ಪ್ರಮುಖ ಸುದ್ದಿ

Muhammad Usman : ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಯುಎಇ ಕ್ರಿಕೆಟಿಗ ಉಸ್ಮಾನ್​

Muhammad Usman: ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಯುಎಇಯನ್ನು ಪ್ರತಿನಿಧಿಸುವ ಮೊದಲು, ಎಡಗೈ ಬ್ಯಾಟರ್​ ಜನವರಿ 2016 ರಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಪ್ರಥಮ ದರ್ಜೆ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದರು. ಅವರು ಯುಎಇ ಪರ ಒಟ್ಟು 5 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ.

VISTARANEWS.COM


on

Muhammad Usman
Koo

ಬೆಂಗಳೂರು: ಯುಎಇ ಬ್ಯಾಟರ್​ ಮುಹಮ್ಮದ್ ಉಸ್ಮಾನ್ (Muhammad Usman) ಶುಕ್ರವಾರ (ಜೂನ್ 28) ಅಂತರರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಹೇಳಿದ್ದಾರೆ. ಆ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ ಅಗಿದ್ದ ಅವರು ಒಟ್ಟು 85 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಪಾಲ್ಗೊಂಡಿದ್ದರು. ಪಾಕಿಸ್ತಾನದ ಲಾಹೋರ್​ನಲ್ಲಿ ಜನಿಸಿದ 38ರ ಹರೆಯದ ಉಸ್ಮಾನ್​ 2016ರಿಂದ 2022ರವರೆಗೆ ಯುಎಇ ಪರ 38 ಏಕದಿನ ಮತ್ತು 47 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅವರು ಫೆಬ್ರವರಿ 2016 ರಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧದ ಟಿ 20 ಐ ಮೂಲಕ ಯುಎಇ ಪರ ಪಾದಾರ್ಪಣೆ ಮಾಡಿದರು. ಅದೇ ವರ್ಷದ ಆಗಸ್ಟ್​​ನಲ್ಲಿ ಮುಹಮ್ಮದ್ ಉಸ್ಮಾನ್ ಎಡಿನ್​ಬರ್ಗ್​​ನಲ್ಲಿ ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದ ಮೂಲಕ ಏಕದಿನ ಕ್ರಿಕೆಟ್​ಗೆ ಪದಾ ರ್ಪಣೆ ಮಾಡಿದರು.

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಯುಎಇಯನ್ನು ಪ್ರತಿನಿಧಿಸುವ ಮೊದಲು, ಎಡಗೈ ಬ್ಯಾಟರ್​ ಜನವರಿ 2016 ರಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಪ್ರಥಮ ದರ್ಜೆ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದರು. ಅವರು ಯುಎಇ ಪರ ಒಟ್ಟು 5 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ.

ಮೊಹಮ್ಮದ್ ಉಸ್ಮಾನ್ 38 ಏಕದಿನ ಪಂದ್ಯಗಳಲ್ಲಿ 31.50 ಸರಾಸರಿಯಲ್ಲಿ 1008 ರನ್ ಗಳಿಸಿದ್ದಾರೆ. ಅವರು 50 ಓವರ್​ಗಳ ಸ್ವರೂಪದಲ್ಲಿ ಒಂದು ಶತಕ ಮತ್ತು ಐದು ಅರ್ಧಶತಕಗಳನ್ನು ಗಳಿಸಿದ್ದಾರೆ. ಟಿ20ಐನಲ್ಲಿ ದಕ್ಷಿಣ ಆಫ್ರಿಕಾ 47 ಪಂದ್ಯಗಳಲ್ಲಿ ಮೂರು ಅರ್ಧಶತಕಗಳ ಸಹಾಯದಿಂದ 891 ರನ್ ಗಳಿಸಿದೆ.

ಅವರು 2016 ರ ಏಷ್ಯಾ ಕಪ್​ಗಾಗಿ ಯುಎಇ ತಂಡದ ಭಾಗವಾಗಿದ್ದರು. ಅವರು 7 ಪಂದ್ಯಗಳಲ್ಲಿ 176 ರನ್ ಗಳಿಸಿದ ನಂತರ ಯುಎಇಯ ಅತಿ ಹೆಚ್ಚು ರನ್ ಗಳಿಸಿದ ಮತ್ತು ಒಟ್ಟಾರೆ ಮೂರನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಪಂದ್ಯಾವಳಿಯನ್ನು ಮುಗಿಸಿದ್ದರು. 5 ಪ್ರಥಮ ದರ್ಜೆ ಪಂದ್ಯಗಳಲ್ಲಿ, ಅನುಭವಿ ಬ್ಯಾಟ್ಸ್ಮನ್ ಶತಕದ ಸಹಾಯದಿಂದ 217 ರನ್ ಗಳಿಸಿದ್ದಾರೆ. 2022ರ ಫೆಬ್ರವರಿಯಲ್ಲಿ ಒಮಾನ್ ಹಾಗೂ ನೇಪಾಳ ವಿರುದ್ಧ ಏಕದಿನ ಹಾಗೂ ಟಿ20ಐನಲ್ಲಿ ಕೊನೆಯ ಬಾರಿ ಆಡಿದ್ದರು.

ಇದು ನಂಬಲಾಗದ ಪ್ರಯಾಣ: ಮುಹಮ್ಮದ್ ಉಸ್ಮಾನ್

ಮುಹಮ್ಮದ್ ಉಸ್ಮಾನ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್​​ನಲ್ಲಿ ತಮ್ಮ ಪ್ರಯಾಣವನ್ನು ನಂಬಲಾಗದ ಎಂದು ಕರೆದರು ಮತ್ತು ಅವರ ಕ್ರಿಕೆಟ್ ಪ್ರಯಾಣದಲ್ಲಿ ಪಾತ್ರವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಅವರು ತಮ್ಮ ಆಟದ ವೃತ್ತಿಜೀವನದ ಅಂತ್ಯದ ನಂತರವೂ ಆಟದೊಂದಿಗೆ ಸಂಬಂಧ ಹೊಂದುವ ಬಯಕೆಯನ್ನು ವ್ಯಕ್ತಪಡಿಸಿದರು.

ಇದನ್ನೂ ಓದಿ: Virat Kohli : ಫಾರ್ಮ್​ ಕಳೆದುಕೊಂಡಿರುವ ವಿರಾಟ್​ ಕೊಹ್ಲಿಯ ಬೆಂಬಲಕ್ಕೆ ನಿಂತ ಗಂಗೂಲಿ

ಯುಎಇ ಕ್ರಿಕೆಟ್ ತಂಡ ಮತ್ತು ಕ್ರಿಕೆಟ್ ಮಂಡಳಿಯೊಂದಿಗೆ ಇದು ನಂಬಲಾಗದ ಪ್ರಯಾಣವಾಗಿದೆ. ನನ್ನ ತಂಡದ ಸದಸ್ಯರು, ತರಬೇತುದಾರರು ಮತ್ತು ಇತರ ಸಹಾಯಕ ಸಿಬ್ಬಂದಿ ಸೇರಿದಂತೆ ನನ್ನ ಪ್ರಯಾಣದಲ್ಲಿ ಪಾತ್ರ ವಹಿಸಿದ ಎಲ್ಲರಿಗೂ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. 85 ಅಂತಾರಾಷ್ಟ್ರೀಯ ಪಂದ್ಯಗಳಿಗೆ ಯುಎಇಯನ್ನು ಪ್ರತಿನಿಧಿಸುವ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ ಮತ್ತು ಹೆಮ್ಮೆ ಎನಿಸುತ್ತದೆ ಎಂದುಹೇಳಿದರು.

ನಾನು ಕ್ರೀಡೆಯೊಂದಿಗೆ ಬೇರೆ ಸಂಬಂಧ ಹೊಂದಲು ಬಯಸುವುದರಿಂದ ನನ್ನ ಜೀವನದ ಮುಂದಿನ ಅಧ್ಯಾಯವನ್ನು ಎದುರು ನೋಡುತ್ತಿದ್ದೇನೆ. ಯುಎಇ ತಂಡ ಮತ್ತು ಆಟಗಾರರಿಗೆ ದೇಶದಲ್ಲಿ ಆಟಕ್ಕೆ ಬಹಳ ರೋಮಾಂಚನಕಾರಿ ಸಮಯದಲ್ಲಿ ನಾನು ಶುಭ ಹಾರೈಸಲು ಬಯಸುತ್ತೇನೆ ಎಂದು ಮುಹಮ್ಮದ್ ಉಸ್ಮಾನ್ ಹೇಳಿದರು.

Continue Reading

ತಂತ್ರಜ್ಞಾನ

Tulu Translate Google: ಗೂಗಲ್ ಟ್ರಾನ್ಸ್‌ಲೇಟ್‌ನಲ್ಲಿ ತುಳು ಭಾಷೆ ಸೇರ್ಪಡೆ

ಗೂಗಲ್ ಟ್ರಾನ್ಸ್‌ಲೇಟ್‌ನಲ್ಲಿ ಫೋನ್, ಲುವೊ, ಗಾ, ಕಿಕೊಂಗೊ, ಸ್ವಾತಿ, ವೆಂಡಾ ಮತ್ತು ವುಲ್ಫ್‌ನಂತಹ ಹೆಚ್ಚಿನ ಆಫ್ರಿಕನ್ ಭಾಷೆಗಳನ್ನು ಸೇರಿಸಲಾಗಿದ್ದು, ಇದರಲ್ಲಿ ಏಳು ಭಾರತೀಯ ಭಾಷೆಗಳಾದ ಅವಧಿ, ಬೋಡೋ, ಖಾಸಿ, ಕೊಕ್ಬೊರೊಕ್, ಮಾರ್ವಾಡಿ, ಸಂತಾಲಿ ಮತ್ತು ತುಳು (Tulu language) ಕೂಡ ಸೇರ್ಪಡೆಗೊಂಡಿದೆ.

VISTARANEWS.COM


on

By

Tulu language
Koo

ಲಕ್ಷಾಂತರ ಜನರ ಸಂವಹನಕ್ಕೆ (communication) ಸಹಾಯ ಮಾಡುತ್ತಿರುವ ಗೂಗಲ್‌ನಲ್ಲಿ ಈಗ ತುಳು ಭಾಷೆ (Tulu language) ಸೇರಿ 110 ಹೊಸ ಭಾಷೆಗಳನ್ನು (new languages) ಅನುವಾದಕ್ಕೆ ಲಭ್ಯವಾಗಿದೆ. ಅನುವಾದದಲ್ಲಿ ಹೊಸ ನವೀಕರಣವನ್ನು ಗೂಗಲ್ (google) ಪ್ರಕಟಿಸಿದ್ದು, ಅಪ್ಲಿಕೇಶನ್ ಮೂಲಕ ವಿವಿಧ ಭಾಷೆಗಳನ್ನು ಅನುವಾದಗೊಳಿಸಲು ಆರ್ಟಿಫಿಷಿಯಲ್ ತಂತ್ರಜ್ಞಾನವನ್ನು ಬಳಸುತ್ತಿರುವುದಾಗಿ ಗೂಗಲ್ ಹೇಳಿದೆ.

PaLM 2 ಭಾಷೆಯ ಮಾದರಿಯ ಬೆಂಬಲದೊಂದಿಗೆ ಗೂಗಲ್ ಈಗ 110 ಹೊಸ ಭಾಷೆಗಳನ್ನು ಅನುವಾದಗೊಳಿಸುತ್ತಿದೆ. ಆಲ್ಫಾಬೆಟ್ ಇಂಕ್ ಕಂಪೆನಿಯು ಇದು ತನ್ನ ಅತಿದೊಡ್ಡ ವಿಸ್ತರಣೆಯಾಗಿದೆ ಎಂದು ಹೇಳಿಕೊಂಡಿದೆ. ಗೂಗಲ್‌ನಲ್ಲಿ ಅನುವಾದವನ್ನು 2006ರಲ್ಲಿ ಪರಿಚಯಿಸಲಾಯಿತು. 2024ರ ಜೂನ್ ವೇಳೆಗೆ ಈ ವೈಶಿಷ್ಟ್ಯವು 243 ಭಾಷೆಗಳನ್ನು ಬೆಂಬಲಿಸುತ್ತದೆ. ಹೆಚ್ಚು ಜನರಿಗೆ ಅನುಕೂಲವಾಗುವಂತೆ ಮಾಡಲು ಈ ವೈಶಿಷ್ಟ್ಯಕ್ಕೆ ಇತ್ತೀಚಿನ ತಂತ್ರಜ್ಞಾನಗಳನ್ನು ಸತತವಾಗಿ ಅನ್ವಯಿಸಲಾಗುತ್ತಿದೆ ಎಂದು ಕಂಪನಿ ಹೇಳಿದೆ.

2022ರಲ್ಲಿ ಕಂಪನಿಯು ಝೀರೋ- ಶಾಟ್ ಮೆಷಿನ್ ಅನುವಾದವನ್ನು ಬಳಸಿಕೊಂಡು 24 ಹೊಸ ಭಾಷೆಗಳನ್ನು ಸೇರಿಸಿತು. ಈ ತಂತ್ರದ ಮೂಲಕ ಯಂತ್ರ ಕಲಿಕೆಯ ಮಾದರಿಗಳು ಹೇಗೆ ಅನುವಾದಿಸಬೇಕೆಂದು ಕಲಿಯಬಹುದು. ಆಗ ಕಂಪೆನಿಯು ತನ್ನ 1,000 ಭಾಷೆಯ ಉಪಕ್ರಮವನ್ನು ಘೋಷಿಸಿತ್ತು. ಉಪಕ್ರಮದ ಭಾಗವಾಗಿ ಕಂಪೆನಿಯು ಪ್ರಪಂಚದಾದ್ಯಂತ ಹೆಚ್ಚು ಮಾತನಾಡುವ 1,000 ಭಾಷೆಗಳನ್ನು ಬೆಂಬಲಿಸುವ ಎಐ ಮಾದರಿಗಳನ್ನು ನಿರ್ಮಿಸುವ ಗುರಿಯನ್ನು ಹೊಂದಿದೆ.

ಸುಮಾರು ಅರ್ಧ ಬಿಲಿಯನ್ ಅನುವಾದಿಸಲು ಸಹಾಯ

ಗೂಗಲ್ ತನ್ನ ಅಧಿಕೃತ ಬಿಡುಗಡೆಯಲ್ಲಿ ಹೊಸ ಭಾಷೆಗಳು 614 ಮಿಲಿಯನ್‌ಗಿಂತಲೂ ಹೆಚ್ಚು ಮಾತನಾಡುವವರನ್ನು ಪ್ರತಿನಿಧಿಸುತ್ತವೆ. ಇದರಿಂದಾಗಿ ಪ್ರಪಂಚದ ಜನಸಂಖ್ಯೆಯ ಸುಮಾರು ಎಂಟು ಪ್ರತಿಶತದಷ್ಟು ಜನರ ಭಾಷೆಗಳನ್ನು ಅನುವಾದ ಮಾಡಬಹುದು. ಇವುಗಳಲ್ಲಿ ಕೆಲವು 100 ಮಿಲಿಯನ್‌ಗಿಂತಲೂ ಹೆಚ್ಚು ಮಾತನಾಡುವ ಪ್ರಮುಖ ಭಾಷೆಗಳಾಗಿವೆ. ಆದರೆ ಇತರವು ಸ್ಥಳೀಯ ಜನರ ಸಣ್ಣ ಸಮುದಾಯಗಳಿಂದ ಮಾತನಾಡುತ್ತವೆ.


ಏಳು ಭಾರತೀಯ ಭಾಷೆಗಳು

ಇತ್ತೀಚಿನ ವಿಸ್ತರಣೆಯು ಫೋನ್, ಲುವೊ, ಗಾ, ಕಿಕೊಂಗೊ, ಸ್ವಾತಿ, ವೆಂಡಾ ಮತ್ತು ವುಲ್ಫ್‌ನಂತಹ ಹೆಚ್ಚಿನ ಆಫ್ರಿಕನ್ ಭಾಷೆಗಳನ್ನು ಅಪ್ಲಿಕೇಶನ್‌ಗೆ ಸೇರಿಸಿದೆ. ಹೊಸ ಸೇರ್ಪಡೆಯು ಏಳು ಭಾರತೀಯ ಭಾಷೆಗಳಾದ ಅವಧಿ, ಬೋಡೋ, ಖಾಸಿ, ಕೊಕ್ಬೊರೊಕ್, ಮಾರ್ವಾಡಿ, ಸಂತಾಲಿ ಮತ್ತು ತುಳುವನ್ನು ಒಳಗೊಂಡಿದೆ.

ಹೇಗೆ ಅನ್ವಯ?

ಅನುವಾದಕ್ಕೆ ಹೊಸ ಭಾಷೆಗಳನ್ನು ಹೇಗೆ ಸೇರಿಸುತ್ತದೆ ಎಂಬುದನ್ನು ಗೂಗಲ್ ಉಲ್ಲೇಖಿಸಿದೆ. ಟೆಕ್ ದೈತ್ಯ ಪ್ರಾದೇಶಿಕ ಪ್ರಭೇದಗಳು, ಉಪಭಾಷೆಗಳು ಮತ್ತು ಕಾಗುಣಿತ ಮಾನದಂಡಗಳಂತಹ ಹಲವಾರು ಅಂಶಗಳನ್ನು ಇದಕ್ಕಾಗಿ ಪರಿಗಣಿಸುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Tata Motors: ನೆಕ್ಸಾನ್, ಪಂಚ್‌ ಮೂಲಕ ಎಸ್‌ಯುವಿ ಮಾರುಕಟ್ಟೆಯಲ್ಲಿ ಮುನ್ನಡೆ ಸಾಧಿಸಿದ ಟಾಟಾ ಮೋಟಾರ್ಸ್

ಅನೇಕ ಭಾಷೆಗಳು ಒಂದೇ ಪ್ರಮಾಣಿತ ರೂಪವನ್ನು ಹೊಂದಿರದ ಕಾರಣ ಸಾಮಾನ್ಯವಾಗಿ ಬಳಸುವ ಪ್ರಭೇದಗಳಿಗೆ ಆದ್ಯತೆ ನೀಡುವುದಾಗಿ ಗೂಗಲ್ ಹೇಳಿದೆ. ಪಾಲ್ಎಮ್ 2 ತಂತ್ರಜ್ಞಾನವು ಹಿಂದಿ ಮತ್ತು ಫ್ರೆಂಚ್ ಕ್ರಿಯೋಲ್‌ಗಳಂತಹ ಪರಸ್ಪರ ನಿಕಟ ಸಂಬಂಧ ಹೊಂದಿರುವ ಭಾಷೆಗಳನ್ನು ಕಲಿಯಲು ಸಹಾಯ ಮಾಡುತ್ತದೆ ಎಂದು ಕಂಪೆನಿ ಹೇಳಿದೆ.

ಭಾಷಾಶಾಸ್ತ್ರಜ್ಞರು ಮತ್ತು ಸ್ಥಳೀಯ ಭಾಷಿಕರೊಂದಿಗೆ ಸಹಯೋಗ ಮಾಡುವ ಮೂಲಕ ಕಾಲಾನಂತರದಲ್ಲಿ ಹೆಚ್ಚಿನ ಭಾಷಾ ಪ್ರಭೇದಗಳು ಮತ್ತು ಕಾಗುಣಿತ ಸಂಪ್ರದಾಯಗಳನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ ಎಂದು ಗೂಗಲ್ ಹೇಳಿದೆ.

Continue Reading
Advertisement
Job Alert
ಉದ್ಯೋಗ8 mins ago

Job Alert: ಗಮನಿಸಿ: ಗ್ರಾಮೀಣ ಬ್ಯಾಂಕ್‌ನ 9,995 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ನಾಳೆ ಕೊನೆಯ ದಿನ

Kannada New Movie Kenda in premier In world wide
ಸ್ಯಾಂಡಲ್ ವುಡ್12 mins ago

Kannada New Movie: ವಿಶ್ವಮಟ್ಟದಲ್ಲಿ ದಾಖಲೆ ಬರೆದ ಕನ್ನಡದ `ಕೆಂಡ’!

Orange Peel Benefits
ಆರೋಗ್ಯ13 mins ago

Orange Peel Benefits: ಕಿತ್ತಳೆ ಸಿಪ್ಪೆ ಎಸೆಯಬೇಡಿ; ಹೃದಯದ ಆರೋಗ್ಯಕ್ಕೆ ಇದು ಒಳ್ಳೆಯದು!

Shivamogga News
ಕರ್ನಾಟಕ13 mins ago

Shivamogga News: ಶಿವಮೊಗ್ಗದಲ್ಲಿ ಆಂಬುಲೆನ್ಸ್-ಬೈಕ್‌ ಡಿಕ್ಕಿ; ಸ್ಥಳದಲ್ಲೇ ಮೂವರ ಸಾವು

IND vs SA Final
ಕ್ರೀಡೆ16 mins ago

IND vs SA Final: ಫೈನಲ್​ ಪಂದ್ಯಕ್ಕೂ ಮುನ್ನ ಭಾರತ ತಂಡಕ್ಕೆ ನಡುಕ ಹುಟ್ಟಿಸಿದ ಅಂಪೈರ್​!

Kalki 2898 AD box office day 2 prediction Prabhas
ಟಾಲಿವುಡ್25 mins ago

Kalki 2898 AD: ಎರಡನೇ ದಿನವೂ ಒಳ್ಳೆಯ ಗಳಿಕೆ ಕಂಡ  ‘ಕಲ್ಕಿ 2898 ಎಡಿ’ ಸಿನಿಮಾ!

US Presidential Election
ವಿದೇಶ41 mins ago

US Presidential Election: ಬಹಿರಂಗ ಚರ್ಚೆ ಬಳಿಕ ಅಭ್ಯರ್ಥಿಯ ಬದಲಾವಣೆ? ಬೈಡೆನ್‌ ಬದಲಿಗೆ ಮಿಶೆಲ್‌ ಒಬಾಮಾ ಕಣಕ್ಕೆ?

IND vs SA Final
ಕ್ರೀಡೆ43 mins ago

IND vs SA Final: ಇಂದು ಫೈನಲ್​ ಪಂದ್ಯ ನಡೆಯುವುದೇ ಅನುಮಾನ; ಕಾರಣವೇನು?

Sadhguru Jaggi Vasudev
ಆರೋಗ್ಯ43 mins ago

Sadhguru Jaggi Vasudev: ಮಕ್ಕಳಲ್ಲಿ ಅಲರ್ಜಿ ಸಮಸ್ಯೆಗೆ ಏನು ಪರಿಹಾರ? ಸದ್ಗುರು ಸಲಹೆ ಇಲ್ಲಿದೆ ಕೇಳಿ

Kannada New Movie niveditha Shivarajkumar frefly cinema sudharani join
ಸಿನಿಮಾ54 mins ago

Kannada New Movie: ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ‘ಫೈರ್‌ಫ್ಲೈ’ ತಂಡ ಸೇರಿದ ಸುಧಾರಾಣಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ15 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ22 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌