Tirupati Temple | ವಿಪ್ರೊಗಿಂತಲೂ ತಿರುಪತಿ ದೇವಸ್ಥಾನದ ಆಸ್ತಿ ಮೌಲ್ಯವೇ ಹೆಚ್ಚು; ಎಷ್ಟಿದೆ ಗೊತ್ತಾ ತಿಮ್ಮಪ್ಪನ ಸಂಪತ್ತು? - Vistara News

ದೇಶ

Tirupati Temple | ವಿಪ್ರೊಗಿಂತಲೂ ತಿರುಪತಿ ದೇವಸ್ಥಾನದ ಆಸ್ತಿ ಮೌಲ್ಯವೇ ಹೆಚ್ಚು; ಎಷ್ಟಿದೆ ಗೊತ್ತಾ ತಿಮ್ಮಪ್ಪನ ಸಂಪತ್ತು?

ತಿರುಪತಿ ದೇವಸ್ಥಾನದ ಸದ್ಯದ ಮಾರುಕಟ್ಟೆ ವಹಿವಾಟು ಮೌಲ್ಯ, ದೇಶದ ಹಲವು ಬ್ಲ್ಯೂ ಚಿಪ್​ ಕಂಪನಿಗಳ ವಹಿವಾಟು ಮೌಲ್ಯಕ್ಕಿಂತಲೂ ಹೆಚ್ಚಿದೆ. ಬೆಂಗಳೂರು ಮೂಲದ ವಿಪ್ರೋ ಕಂಪನಿಯ ಮಾರುಕಟ್ಟೆ ಮೌಲ್ಯ 2.14 ಲಕ್ಷ ಕೋಟಿ ರೂಪಾಯಿ.

VISTARANEWS.COM


on

Tirupati Temple Worth is Higher Than Wipro
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ತಿರುಪತಿಯ ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನದ ನಿವ್ವಳ ಲಾಭ 2.5 ಲಕ್ಷ ಕೋಟಿ ರೂಪಾಯಿ (30 ಬಿಲಿಯನ್​ ಯುಎಸ್​ ಡಾಲರ್​) ಎಂದು ಹೇಳಲಾಗಿದೆ. ಐಟಿ ದಿಗ್ಗಜ ಕಂಪನಿ ವಿಪ್ರೋ, ಆಹಾರ ಮತ್ತು ಪಾನೀಯ ಕಂಪನಿ ನೆಸ್ಲೆ, ಸರ್ಕಾರಿ ಸ್ವಾಮ್ಯದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC) ಮತ್ತು ಇಂಡಿಯನ್ ಆಯ್ಲ್​ ಕಾರ್ಪೋರೇಶನ್​​(IOC)ನ ನಿವ್ವಳ ಮೌಲ್ಯಕ್ಕಿಂತಲೂ ಹೆಚ್ಚು ಎಂದು ತಿರುಪತಿ ತಿರುಮಲ ದೇವಸ್ಥಾನಂ (ಟಿಟಿಡಿ) ಘೋಷಿಸಿದೆ. 1933ರಲ್ಲಿ ಸ್ಥಾಪಿತವಾದ ಬಳಿಕ ಇದೇ ಮೊದಲ ಬಾರಿಗೆ ಟಿಟಿಡಿ, ದೇವಸ್ಥಾನದ ನಿವ್ವಳ ಮೌಲ್ಯವನ್ನು ಘೋಷಣೆ ಮಾಡಿದೆ.

ದೇವಸ್ಥಾನದ ಒಟ್ಟಾರೆ ಆಸ್ತಿಯಲ್ಲಿ 10.25 ಟನ್​ ಚಿನ್ನ ಇದ್ದು, ಅದನ್ನು ಬ್ಯಾಂಕ್​​ನಲ್ಲಿ ಠೇವಣಿ ಇಡಲಾಗಿದೆ. ಹಾಗೇ, 2.5 ಟನ್​​ಗಳಷ್ಟು ಚಿನ್ನದ ಆಭರಣಗಳು ಇವೆ. 16 ಸಾವಿರ ಕೋಟಿ ರೂಪಾಯಿಗಳಷ್ಟು ಬ್ಯಾಂಕ್​​ನಲ್ಲಿ ಡಿಪೋಸಿಟ್​ ಇಡಲಾಗಿದೆ. ದೇಶಾದ್ಯಂತ 960 ಸ್ವತ್ತುಗಳಿವೆ. ಎಲ್ಲವುಗಳ ಒಟ್ಟು ಮೊತ್ತ 2.5 ಲಕ್ಷ ಕೋಟಿ ರೂಪಾಯಿ ಎಂದು ತಿರುಮಲ ತಿರುಪತಿ ದೇವಸ್ಥಾನಂ ಮಾಹಿತಿ ನೀಡಿದೆ.

ತಿರುಪತಿ ದೇವಸ್ಥಾನದ ಸದ್ಯದ ಮಾರುಕಟ್ಟೆ ವಹಿವಾಟು ಮೌಲ್ಯ, ದೇಶದ ಹಲವು ಬ್ಲ್ಯೂ ಚಿಪ್​ ಕಂಪನಿಗಳ ವಹಿವಾಟು ಮೌಲ್ಯಕ್ಕಿಂತಲೂ ಹೆಚ್ಚಿದೆ. ಬೆಂಗಳೂರು ಮೂಲದ ವಿಪ್ರೋ ಕಂಪನಿಯ ಮಾರುಕಟ್ಟೆ ಮೌಲ್ಯ 2.14 ಲಕ್ಷ ಕೋಟಿ ರೂಪಾಯಿ. ಹಾಗೇ, ಅಲ್ಟ್ರಾಟೆಕ್​ ಸಿಮೆಂಟ್​ ಕಂಪನಿ 1.99 ಲಕ್ಷ ಕೋಟಿ ರೂ.ಮಾರುಕಟ್ಟೆ ಮೌಲ್ಯ ಹೊಂದಿದೆ. ಇನ್ನು ಸ್ವಿಸ್ ಮೂಲದ​ ಆಹಾರ ಮತ್ತು ಪಾನೀಯ ದಿಗ್ಗಜ ಕಂಪನಿ ನೆಸ್ಲೆ 1.96 ಲಕ್ಷ ಕೋಟಿ ರೂ. ಮಾರುಕಟ್ಟೆ ಮೌಲ್ಯ ಹೊಂದಿದೆ.

ಇದನ್ನೂ ಓದಿ: ತಿರುಪತಿ ತಿರುಮಲದಲ್ಲಿ ರಾಜ್ಯದ ಯಾತ್ರಾರ್ಥಿಗಳಿಗೆ 346 ಕೊಠಡಿ ಲಭ್ಯ; ವಿಶ್ವನಾಥ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Lok Sabha Election 2024: ಮಧ್ಯಾಹ್ನ 1 ಗಂಟೆವರೆಗೆ 39.13% ಮತದಾನ, ಪ.ಬಂಗಾಳ ದಾಖಲೆ, ರಾಂಚಿಯಲ್ಲಿ ಧೋನಿ ವೋಟ್‌

Lok Sabha Election 2024: ಮಧ್ಯಾಹ್ನ 1 ಗಂಟೆಯವರೆಗೆ 39.13% ಮತದಾನ ದಾಖಲಾಗಿದೆ. ಹಲವಾರು ಗಣ್ಯರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು. ಪಶ್ಚಿಮ ಬಂಗಾಳದಲ್ಲಿ ಅತ್ಯಧಿಕ ಪ್ರಮಾಣದ ಮತದಾನ (54.80%) ದಾಖಲಾಗಿದೆ.

VISTARANEWS.COM


on

lok sabha election 2024 voting dhoni
Koo

ಹೊಸದಿಲ್ಲಿ: ಲೋಕಸಭೆ ಚುನಾವಣೆ (Lok Sabha Election 2024) 6ನೇ ಹಂತದ ಮತದಾನ (voting) ಶಾಂತಿಯುತವಾಗಿ ನಡೆಯುತ್ತಿದೆ. ಮಧ್ಯಾಹ್ನ 1 ಗಂಟೆಯವರೆಗೆ 39.13% ಮತದಾನ ದಾಖಲಾಗಿದೆ. ಹಲವಾರು ಗಣ್ಯರು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು. ಪಶ್ಚಿಮ ಬಂಗಾಳದಲ್ಲಿ ಅತ್ಯಧಿಕ ಪ್ರಮಾಣದ ಮತದಾನ (54.80%) ದಾಖಲಾಗಿದೆ.

1 ಗಂಟೆವರೆಗೆ 58 ಕ್ಷೇತ್ರಗಳ ಸರಾಸರಿ ಮತದಾನ 39.13% ದಾಖಲಾಗಿದೆ. ರಾಜ್ಯವಾರು ವಿವರ ಹೀಗಿದೆ:

ಬಿಹಾರ : 36.48
ಹರಿಯಾಣ : 36.48
ಜಮ್ಮು &ಕಾಶ್ಮೀರ : 35.22
ಜಾರ್ಖಂಡ್ : 42.54
ದಿಲ್ಲಿ : 34.37
ಒಡಿಶಾ : 35.69
ಉತ್ತರ ಪ್ರದೇಶ : 37.23
ಪಶ್ಚಿಮ ಬಂಗಾಳ : 54.80

ಇಂದು ನಡೆಯುತ್ತಿರುವ ಲೋಕಸಭೆ ಚುನಾವಣೆ (Lok Sabha Election 2024) 6ನೇ ಹಂತದ ಮತದಾನದಲ್ಲಿ (voting) ಈವರೆಗೆ ಹಲವು ಗಣ್ಯರು ಮತ ಚಲಾಯಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu), ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌, ಕಾಂಗ್ರೆಸ್‌ ಮುಖಂಡರಾದ ಸೋನಿಯಾ ಗಾಂಧಿ (Sonia Gandhi), ರಾಹುಲ್‌ ಗಾಂಧಿ (Rahul Gandhi) ತಮ್ಮ ಮತ ಚಲಾಯಿಸಿದರು. ಜಾರ್ಖಂಡ್‌ನ ರಾಂಚಿಯ ಮತಗಟ್ಟೆಯೊಂದರಲ್ಲಿ ಕ್ರಿಕಟಿಗ ಮಹೇಂದ್ರ ಸಿಂಗ್‌ ಧೋನಿ (Mahendra Singh Dhoni) ಆಗಮಿಸಿ ತಮ್ಮ ಮತ ಹಾಕಿದರು. ಅಭಿಮಾನಿಗಳು ಅವರ ದರ್ಶನ ಪಡೆಯಲು ಹಾಗೂ ಸ್ಪರ್ಶಿಸಲು ಮುಗಿಬಿದ್ದರು.

ದಿಲ್ಲಿಯ ಗಣ್ಯ ಮತಗಟ್ಟೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಿ ಮತ ಚಲಾಯಿಸಿದರು. ಇನ್ನೊಂದು ಮತಗಟ್ಟೆಯಲ್ಲಿ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಮತ ಚಲಾಯಿಸಿ, ಇಂಕ್‌ ಹಾಕಿದ ತಮ್ಮ ಬೆರಳುಗಳನ್ನು ಪ್ರದರ್ಶಿಸಿದರು. ಪ್ರಿಯಾಂಕ ಗಾಂಧಿ ಹಾಗೂ ಅವರ ಮಕ್ಕಳಾದ ರೆಹಾನ್‌ ಮತ್ತು ಮಿರಾಯಾ ಕೂಡ ತಮ್ಮ ಮತಗಳನ್ನು ಚಲಾಯಿಸಿದರು.

ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಮತ ಚಲಾಯಿಸಿ, “ಮತದಾನವು ಒಂದು ಜವಾಬ್ದಾರಿ ಮತ್ತು ಅಧಿಕಾರವಾಗಿದೆ. ಭಾರತವು ವಿಶ್ವದ ಅತ್ಯಂತ ವೈವಿಧ್ಯಮಯ, ಸಕ್ರಿಯ ಮತ್ತು ಪರಿಣಾಮಕಾರಿ ಪ್ರಜಾಪ್ರಭುತ್ವವಾಗಿದೆ” ಎಂದು ಹೇಳಿದರು. ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರೂ ಮತ ಹಾಕಿದರು.

ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ದೆಹಲಿಯಲ್ಲಿ ಮತ ಚಲಾಯಿಸಿದರು. ತಮ್ಮ ಗೊತ್ತುಪಡಿಸಿದ ಮತಗಟ್ಟೆಯಲ್ಲಿ ಮೊದಲ ಪುರುಷ ಮತದಾರರಾಗಿದ್ದ ಕಾರಣ ಅವರು ಈ ಮತದಾನಕ್ಕಾಗಿ ಪ್ರಮಾಣಪತ್ರವನ್ನು ಸಹ ಪಡೆದರು. “ಈ ಬೂತ್‌ನಲ್ಲಿ ನಾನು ಮೊದಲ ಪುರುಷ ಮತದಾರನಾಗಿದ್ದೇನೆ” ಎಂದು ಜೈಶಂಕರ್ ತಮ್ಮ ಪ್ರಮಾಣಪತ್ರವನ್ನು ಹಿಡಿದುಕೊಂಡು ಫೋಟೋ ತೆಗೆಸಿಕೊಂಡರಲ್ಲದೆ, ಛಾಯಾಚಿತ್ರವನ್ನು ತಮ್ಮ x ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದಕ್ಕೂ ಮುನ್ನ ಅವರ ಮತಗಟ್ಟೆಯ ವಿಚಾರದಲ್ಲಿ ಗೊಂದಲ ಉಂಟಾಯಿತು. ಮೊದಲು ಬೇರೆ ಮತಗಟ್ಟೆಗೆ ತೆರಲಿದ ಅವರು, ನಂತರ ಸರಿಯಾದ ಮತಗಟ್ಟೆಗೆ ಹೋಗಿ ಮತ ಚಲಾಯಿಸಿದರು. “”ದೇಶಕ್ಕೆ ಇದು ನಿರ್ಣಾಯಕ ಕ್ಷಣವಾಗಿರುವುದರಿಂದ ಜನರು ಹೊರಗೆ ಬಂದು ಮತ ಚಲಾಯಿಸಬೇಕೆಂದು ನಾವು ಬಯಸುತ್ತೇವೆ. ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ನನಗೆ ವಿಶ್ವಾಸವಿದೆ” ಎಂದು ಅವರು ಮತದಾನದ ನಂತರ ಹೇಳಿದರು.

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ, ಪಿಡಿಪಿ ಮುಖ್ಯಸ್ಥೆ ಮತ್ತು ಅನಂತನಾಗ್-ರಜೌರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮೆಹಬೂಬಾ ಮುಫ್ತಿ (Mehabuba Mufti) ಅವರು ಪಕ್ಷದ ಮುಖಂಡರು ಮತ್ತು ಬೆಂಬಲಿಗರೊಂದಿಗೆ ತಮ್ಮ ಕಾರ್ಯಕರ್ತರ ಬಂಧನವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಅಧಿಕಾರಿಗಳು ಚುನಾವಣೆಗಳಲ್ಲಿ ಅಕ್ರಮವೆಸಗಿದ್ದಾರೆ ಎಂದು ಆರೋಪಿಸಿದರು. PDP ಪೋಲಿಂಗ್ ಏಜೆಂಟ್‌ಗಳು ಮತ್ತು ಕಾರ್ಯಕರ್ತರನ್ನು ಯಾವುದೇ ಕಾರಣವಿಲ್ಲದೆ ಬಂಧಿಸಲಾಗಿದೆ ಎಂದು ಮುಫ್ತಿ ಹೇಳಿಕೊಂಡಿದ್ದಾರೆ.

ಯಾವ ರಾಜ್ಯಗಳ ಎಷ್ಟು ಕ್ಷೇತ್ರಗಳಲ್ಲಿ ಮತದಾನ?

ಆರನೇ ಹಂತದಲ್ಲಿ 5.84 ಕೋಟಿ ಪುರುಷರು, 5.29 ಕೋಟಿ ಮಹಿಳೆಯರು, 5120 ತೃತೀಯ ಲಿಂಗಿಗಳು ಸೇರಿ ಒಟ್ಟು 11.13 ಕೋಟಿ ಮತದಾರರು ನೋಂದಣಿ ಮಾಡಿಕೊಂಡಿದ್ದಾರೆ. 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 58 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬಿಹಾರದ 8 ಸ್ಥಾನಗಳು, ಹರಿಯಾಣದ ಎಲ್ಲ 10 ಸ್ಥಾನ, ಜಾರ್ಖಂಡ್‌ 4, ಜಮ್ಮು-ಕಾಶ್ಮೀರ 1, ದೆಹಲಿಯ ಎಲ್ಲ 7 ಸ್ಥಾನ, ಒಡಿಶಾ 6, ಉತ್ತರ ಪ್ರದೇಶ 14 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಲ್ಲಿ ವೋಟಿಂಗ್‌ ನಡೆಯಲಿದೆ. ಒಟ್ಟು 889 ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿ ಇದ್ದಾರೆ.

ಇದನ್ನೂ ಓದಿ: Lok Sabha Election : ಲೊಕಸಭಾ ಚುನಾವಣೆಯ ಎರಡನೇ ಹಂತದ 88 ಕ್ಷೇತ್ರಗಳಲ್ಲಿ ಶೇ 60.96 ಮತದಾನ

Continue Reading

ವೈರಲ್ ನ್ಯೂಸ್

Google maps: ರಸ್ತೆಯೆಂದು ಕೊಂಡೊಯ್ದು ನದಿಗಿಳಿಸಿದ ಗೂಗಲ್‌ ಮ್ಯಾಪ್!‌ ನೀರು ಕುಡಿದು ಪಾರಾದ ಪ್ರಯಾಣಿಕರು

Google maps: ಹೈದರಾಬಾದ್‌ನ ಪ್ರವಾಸಿ ತಂಡವೊಂದು ದಕ್ಷಿಣ ಕೇರಳ ಜಿಲ್ಲೆಯ ಕುರುಪ್ಪಂಥಾರ ಬಳಿ ನ್ಯಾವಿಗೇಟ್ ಮಾಡಲು ಗೂಗಲ್ ಮ್ಯಾಪ್‌ಗಳನ್ನು ಬಳಸುತ್ತಿತ್ತು. ಗೂಗಲ್‌ ಮ್ಯಾಪ್‌ ಅವರನ್ನು ನೀರಿನಿಂದ ತುಂಬಿಕೊಂಡಿದ್ದ ಹೊಳೆಯೊಳಗೆ ಕರೆದುಕೊಂಡು ಹೋಯಿತು. ಕಾರಿನಲ್ಲಿ ಮಹಿಳೆ ಸೇರಿದಂತೆ ನಾಲ್ವರ ಗುಂಪು ಆಲಪ್ಪುಳ ಕಡೆಗೆ ಹೋಗುತ್ತಿತ್ತು. ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ.

VISTARANEWS.COM


on

google maps kerala river
Koo

ಕೊಟ್ಟಾಯಂ, ಕೇರಳ: ಗೂಗಲ್‌ ಮ್ಯಾಪ್ಸ್ (Google maps) ಬಳಸಿ ಪ್ರಯಾಣಿಸುತ್ತಿದ್ದ ಪ್ರವಾಸಿ (tourists) ತಂಡವೊಂದು ಕೇರಳದಲ್ಲಿ (Kerala) ಸೀದಾ ಹೋಗಿ ನದಿನೀರಿಗೆ (River) ಇಳಿದಿದೆ. ಕಾರು ಮುಳುಗಿದೆ; ಆದರೆ ಪ್ರಯಾಣಿಕರು ಹೇಗೋ ಪಾರಾಗಿದ್ದಾರೆ.

ಹೈದರಾಬಾದ್‌ನ ಪ್ರವಾಸಿ ತಂಡವೊಂದು ದಕ್ಷಿಣ ಕೇರಳ ಜಿಲ್ಲೆಯ ಕುರುಪ್ಪಂಥಾರ ಬಳಿ ನ್ಯಾವಿಗೇಟ್ ಮಾಡಲು ಗೂಗಲ್ ಮ್ಯಾಪ್‌ಗಳನ್ನು ಬಳಸುತ್ತಿತ್ತು. ಗೂಗಲ್‌ ಮ್ಯಾಪ್‌ ಅವರನ್ನು ನೀರಿನಿಂದ ತುಂಬಿಕೊಂಡಿದ್ದ ಹೊಳೆಯೊಳಗೆ ಕರೆದುಕೊಂಡು ಹೋಯಿತು. ಕಾರಿನಲ್ಲಿ ಮಹಿಳೆ ಸೇರಿದಂತೆ ನಾಲ್ವರ ಗುಂಪು ಆಲಪ್ಪುಳ ಕಡೆಗೆ ಹೋಗುತ್ತಿತ್ತು. ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ.

ಅವರು ಪ್ರಯಾಣಿಸುತ್ತಿದ್ದ ರಸ್ತೆಯ ಪಕ್ಕ ಹೊಳೆಯಿದ್ದು, ಭಾರೀ ಮಳೆಯಿಂದಾಗಿ ರಸ್ತೆ ಕೂಡ ತುಂಬಿ ಹರಿಯುತ್ತಿತ್ತು. ಪ್ರವಾಸಿಗರಿಗೆ ಈ ಪ್ರದೇಶದ ಪರಿಚಯವಿಲ್ಲದ ಕಾರಣ, ಅವರು ಗೂಗಲ್ ಮ್ಯಾಪ್ ಬಳಸಿ ನ್ಯಾವಿಗೇಟ್ ಮಾಡುತ್ತಿದ್ದರು. ಅದು ಅವರನ್ನು ನೇರವಾಗಿ ನೀರಿನೊಳಗೇ ಕೊಂಡೊಯ್ದಿತ್ತು!

ಹತ್ತಿರದ ಪೊಲೀಸ್ ಗಸ್ತು ಘಟಕ ಮತ್ತು ಸ್ಥಳೀಯ ನಿವಾಸಿಗಳ ರಕ್ಷಣಾ ಪ್ರಯತ್ನಗಳಿಂದ ನಾಲ್ವರು ಅಪಾಯವಿಲ್ಲದೆ ಪಾರಾಗುವಲ್ಲಿ ಯಶಸ್ವಿಯಾದರು. ಆದರೆ ಅವರ ವಾಹನ ನೀರಿನಲ್ಲಿ ಮುಳುಗಿದೆ. “ವಾಹನವನ್ನು ಹೊರತೆಗೆಯಲು ಪ್ರಯತ್ನಗಳು ನಡೆಯುತ್ತಿವೆ” ಎಂದು ಕಡುತುರುತಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇರಳದಲ್ಲಿ ಇಂತಹ ಘಟನೆ ವರದಿಯಾಗುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ ಅಕ್ಟೋಬರ್‌ನಲ್ಲಿ, ಇಬ್ಬರು ಯುವ ವೈದ್ಯರು ಹೀಗೇ ಒಂದು ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಅವರು Google map ನಿರ್ದೇಶನಗಳನ್ನು ಅನುಸರಿಸಿ ಕಾರು ಓಡಿಸಿ ನದಿಗೆ ಬಿದ್ದಿದ್ದರು. ಈ ಘಟನೆಯ ನಂತರ, ಕೇರಳ ಪೊಲೀಸರು ಮಳೆಗಾಲದಲ್ಲಿ ಈ ತಂತ್ರಜ್ಞಾನವನ್ನು ಬಳಸುವ ಬಗ್ಗೆ ಎಚ್ಚರಿಕೆಯ ಮಾರ್ಗಸೂಚಿಗಳನ್ನು ನೀಡಿದ್ದರು.

ಬೆಂಗಳೂರಿಗರಿಗೆ ಗುಡ್‌ ನ್ಯೂಸ್;‌ ಶೀಘ್ರವೇ ಬರಲಿದೆ ಹೊಸ ನ್ಯಾವಿಗೇಟಿಂಗ್‌ ಆ್ಯಪ್‌

ಬೆಂಗಳೂರು: ಹೊಸತನ, ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದರಲ್ಲಿ ಸಿಲಿಕಾನ್‌ ಸಿಟಿ ಬೆಂಗಳೂರು (Bengaluru) ಎಂದಿಗೂ ಹಿಂದೆಬಿದ್ದಿಲ್ಲ. ಇದೇ ಕಾರಣಕ್ಕಾಗಿ ಬೆಂಗಳೂರು ದೇಶದ ನಾನಾ ಭಾಗಗಳ ಜನರನ್ನು ಕೈಬೀಸಿ ಕರೆಯುತ್ತದೆ. ಇದಕ್ಕೆ ನಿದರ್ಶನ ಎಂಬಂತೆ ಬೆಂಗಳೂರು ಈಗ ಮತ್ತೊಂದು ಹೊಸತನಕ್ಕೆ ತೆರೆದುಕೊಳ್ಳುತ್ತಿದೆ. ಹೌದು, ರಾಜ್ಯ ರಾಜಧಾನಿಯಲ್ಲಿ ಶೀಘ್ರವೇ ಪ್ರಯಾಣಿಕರ (Commuters) ಅನುಕೂಲಕ್ಕಾಗಿ ಹೊಸ ನ್ಯಾವಿಗೇಟಿಂಗ್‌ ಆ್ಯಪ್‌ (Navigating App) ಬರಲಿದೆ. ಬೆಂಗಳೂರಿನಲ್ಲಿ ಸಂಚರಿಸುವರಿಗೆ ಇದು ಉತ್ತಮ ‘ಮಾರ್ಗ’ದರ್ಶನ ನೀಡಲಿದೆ.

ಬೆಂಗಳೂರಿನಲ್ಲಿ ಸಂಚರಿಸುವವರಿಗೆ ಅನುಕೂಲವಾಗಲಿ, ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಬರಲಿ ಎಂಬ ದೃಷ್ಟಿಯಿಂದ ಬೆಂಗಳೂರು ಟ್ರಾಫಿಕ್‌ ಪೊಲೀಸ್‌ ಇಲಾಖೆಯು ಮ್ಯಾಪ್‌ಪ್ಲಸ್‌ ಮ್ಯಾಪ್‌ಮೈಇಂಡಿಯಾ (Mappls MapmyIndia) ಎಂಬ ಕಂಪನಿಯ ಜತೆ ಒಡಂಡಿಕೆ (MoU) ಮಾಡಿಕೊಂಡಿದೆ. ಈಗಾಗಲೇ ಮ್ಯಾಪ್‌ಪ್ಲಸ್‌ ಮ್ಯಾಪ್‌ಮೈಇಂಡಿಯಾ ಕಂಪನಿಯು ಆ್ಯಪ್‌ ಅಭಿವೃದ್ಧಿಪಡಿಸಿದ್ದು, ಶೀಘ್ರದಲ್ಲೇ ಸಾರ್ವಜನಿಕರಿಗೆ ಲಭ್ಯವಿರಲಿದೆ ಎಂದು ಹೇಳಲಾಗುತ್ತಿದೆ.

ಹೊಸ ಆ್ಯಪ್‌ನಿಂದ ಏನೆಲ್ಲ ಅನುಕೂಲ?

ಹೊಸ ಆ್ಯಪ್‌ನಿಂದ ಸಾರ್ವಜನಿಕರಿಗೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ. ಕಡಿಮೆ ಟ್ರಾಫಿಕ್‌ ಇರುವ ರಸ್ತೆಗಳನ್ನು ಸೂಚಿಸುವುದು, ರಿಯಲ್‌ ಟೈಮ್‌ ಆಗಿ ನ್ಯಾವಿಗೇಟ್‌ ಮಾಡುವುದು, ಯಾವ ರಸ್ತೆಗಳು ಕ್ಲೋಸ್‌ ಆಗಿವೆ, ಯಾವ ಕಡೆ ಹೋದರೆ ಉತ್ತಮ ರಸ್ತೆ ಇದೆ, ಯಾವ ಮಾರ್ಗಗಳು ಇಕ್ಕಟ್ಟವಾಗಿವೆ ಎಂಬುದು ಸೇರಿ ಪ್ರಯಾಣಿಕರಿಗೆ ಹಲವು ಮಾಹಿತಿ ನೀಡಲಿದೆ. ಇದು ಗೂಗಲ್‌ ಮ್ಯಾಪ್‌ಗೆ ಪರ್ಯಾಯವಾಗಿ ಹಾಗೂ ಪ್ರಯಾಣಿಕರಿಗೆ ಇನ್ನಷ್ಟು ಅನುಕೂಲವಾಗಲಿ ಎಂಬುದಾಗಿ ತಿಳಿದುಬಂದಿದೆ.

“ಹೊಸ ಆ್ಯಪ್‌ನಿಂದ ಪ್ರಯಾಣಿಕರಿಗೆ ಮಾತ್ರವಲ್ಲ ಟ್ರಾಫಿಕ್‌ ಪೊಲೀಸರಿಗೆ ಇದು ಅನುಕೂಲವಾಗಲಿದೆ. ಎಲ್ಲೆಲ್ಲಿ ಟ್ರಾಫಿಕ್‌ ಇದೆ ಎಂಬುದನ್ನು ಆ್ಯಪ್‌ ಮೂಲಕವೇ ಪತ್ತೆಹಚ್ಚಿ, ಆ ಸಂಚಾರ ದಟ್ಟಣೆಯನ್ನು ನಿಯಂತ್ರಿಸಬಹುದಾಗಿದೆ. ರೋಡ್‌ಬ್ಲಾಕ್‌ಗಳು, ಗುಂಡಿಗಳು, ದುರಸ್ತಿ ಕೆಲಸ ನಡೆಯುತ್ತಿರುವ ರಸ್ತೆಗಳ ಕುರಿತು ಕೂಡ ಮಾಹಿತಿ ನೀಡಲಿದೆ” ಎಂಬುದಾಗಿ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Google: 10 ಲಕ್ಷ ಕೋಟಿ ರೂ. ಮೌಲ್ಯದ ಪಿಂಚಣಿ ಡೇಟಾ ಡಿಲೀಟ್‌ ಮಾಡಿ Sorry ಎಂದ ಗೂಗಲ್; ಮುಂದೇನು?

Continue Reading

ಕ್ರೈಂ

Pune Porsche accident: ಕಾರು ಗುದ್ದಿ ಇಬ್ಬರನ್ನು ಸಾಯಿಸಿದ ಬಾಲಕನ ಅಜ್ಜನೂ ಪೊಲೀಸ್‌ ವಶಕ್ಕೆ

Pune Porsche accident: ಭಾನುವಾರ ಮುಂಜಾನೆ ಕಲ್ಯಾಣಿನಗರದ ಬಳಿ ಬಿಲ್ಡರ್‌ ಮಗನಾದ 17 ವರ್ಷದ ಬಾಲಕ ಕಾರು ಯದ್ವಾತದ್ವಾ ಚಲಾಯಿಸಿ ಮೋಟಾರ್‌ಸೈಕಲ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದ. ಬೈಕ್‌ನಲ್ಲಿದ್ದ ಇಬ್ಬರು ಯುವ ಸಾಫ್ಟ್‌ವೇರ್ ಎಂಜಿನಿಯರ್‌ಗಳಾದ ಅನೀಶ್ ಅವಧಿಯಾ ಮತ್ತು ಅಶ್ವಿನಿ ಕೋಷ್ಟ ಸಾವನ್ನಪ್ಪಿದ್ದರು.

VISTARANEWS.COM


on

Pune Porsche accident
Koo

ಪುಣೆ: ಪುಣೆ ನಗರದಲ್ಲಿ ಐಷಾರಾಮಿ ಪೋರ್ಷೆ ಕಾರನ್ನು (Pune Porsche accident) ಚಲಾಯಿಸಿ ಇಬ್ಬರು ಐಟಿ ವೃತ್ತಿಪರರನ್ನು (IT Engineers) ಸಾಯಿಸಿದ 17 ವರ್ಷದ ಬಾಲಕನ (juvenile) ಅಜ್ಜ (grandfather) ಸುರೇಂದ್ರ ಕುಮಾರ್ ಅಗರ್ವಾಲ್ ಅವರನ್ನೂ ಪೊಲೀಸರು ಬಂಧಿಸಿದ್ದಾರೆ. ತಪ್ಪು ಮಾಹಿತಿ ನೀಡಿ ಕುಟುಂಬದ ಚಾಲಕನನ್ನು (Driver) ತಪ್ಪಾಗಿ ಬಂಧನಕ್ಕೆ ಒಳಪಡಿಸಿದ್ದಕ್ಕಾಗಿ ಅಜ್ಜನನ್ನು ಬಂಧಿಸಲಾಗಿದೆ. ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣದ ಆರೋಪಿಗಳಲ್ಲಿ ಬಾಲಕನ ತಂದೆಯ ಹೆಸರೂ ಇದೆ.

ಭಾನುವಾರ ಮುಂಜಾನೆ ಕಲ್ಯಾಣಿನಗರದ ಬಳಿ ಬಿಲ್ಡರ್‌ ಮಗನಾದ 17 ವರ್ಷದ ಬಾಲಕ ಕಾರು ಯದ್ವಾತದ್ವಾ ಚಲಾಯಿಸಿ ಮೋಟಾರ್‌ಸೈಕಲ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದ. ಬೈಕ್‌ನಲ್ಲಿದ್ದ ಇಬ್ಬರು ಯುವ ಸಾಫ್ಟ್‌ವೇರ್ ಎಂಜಿನಿಯರ್‌ಗಳಾದ ಅನೀಶ್ ಅವಧಿಯಾ ಮತ್ತು ಅಶ್ವಿನಿ ಕೋಷ್ಟ ಸಾವನ್ನಪ್ಪಿದ್ದರು. ಬಾಲಕ ಕಾರನ್ನು ಓಡಿಸಿಲ್ಲ, ಚಾಲಕ ಓಡಿಸಿದ್ದಾನೆ ಎಂದು ತನಿಖೆಯ ದಿಕ್ಕನ್ನು ತಪ್ಪಿಸಲು ಬಾಲಕ ಕುಟುಂಬದವರು ಯತ್ನಿಸಿದ್ದಾರೆ ಎಂದು ಶುಕ್ರವಾರ ಪುಣೆ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ತಿಳಿಸಿದ್ದಾರೆ.

ಬಾಲಾಪರಾಧಿಯ ಕುಟುಂಬದ ಚಾಲಕನ ದೂರಿನ ಆಧಾರದ ಮೇಲೆ, ಯರವಾಡ ಪೊಲೀಸರು ಅಪ್ರಾಪ್ತನ ಅಜ್ಜ ಮತ್ತು ತಂದೆಯ ವಿರುದ್ಧ ಐಪಿಸಿ ಸೆಕ್ಷನ್ 365 (ಒಬ್ಬ ವ್ಯಕ್ತಿಯನ್ನು ರಹಸ್ಯವಾಗಿ ಮತ್ತು ತಪ್ಪಾಗಿ ಬಂಧಿಸುವ ಉದ್ದೇಶದಿಂದ ಅಪಹರಣ) ಮತ್ತು 368 (ಬಚ್ಚಿಡುವುದು ಅಥವಾ ವ್ಯಕ್ತಿಯನ್ನು ಸೆರೆಯಲ್ಲಿಡುವುದು) ಅಡಿಯಲ್ಲಿ ಪ್ರತ್ಯೇಕ ಅಪರಾಧಗಳನ್ನು ದಾಖಲಿಸಿದ್ದಾರೆ.

“ಅಪಘಾತದ ನಂತರ, ಅಪ್ರಾಪ್ತನ ಅಜ್ಜ ಮತ್ತು ತಂದೆ ಚಾಲಕನ ಫೋನ್ ತೆಗೆದುಕೊಂಡು, ಮೇ 19ರಿಂದ ಮೇ 20ರವರೆಗೆ ತಮ್ಮ ಬಂಗಲೆಯ ಆವರಣದಲ್ಲಿರುವ ಅವರ ಮನೆಯಲ್ಲಿ ಆತನನ್ನು ಬಂಧಿಸಿದ್ದಾರೆ. ಚಾಲಕನನ್ನು ಅವನ ಹೆಂಡತಿ ಬಿಡುಗಡೆ ಮಾಡಿದ್ದಾಳೆ” ಎಂದು ಪೊಲೀಸರು ಹೇಳಿದ್ದಾರೆ. ಚಾಲನೆ ಸಮಯದಲ್ಲಿ ಬಾಲಕ ಪಾನಮತ್ತನಾಗಿದ್ದ ಎಂದು ಪೋಲೀಸರು ಹೇಳಿದ್ದಾರೆ.

ಶುಕ್ರವಾರ, ಪುಣೆಯ ಸ್ಥಳೀಯ ನ್ಯಾಯಾಲಯವು ಅಪ್ರಾಪ್ತನ ತಂದೆ ಸೇರಿದಂತೆ ಪ್ರಕರಣದಲ್ಲಿ ಬಂಧಿತ ಆರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಬಾಲಕ ಜೂನ್ 5ರವರೆಗೆ ಅಬ್ಸರ್ವೇಶನ್ ಹೋಮ್‌ನಲ್ಲಿರಲಿದ್ದಾನೆ.

ಕಲ್ಯಾಣಿನಗರ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳನ್ನು ಡಿಕ್ಕಿ ಹೊಡೆದು ಕೊಂದ ಪೋರ್ಷೆ ಕಾರನ್ನು 17 ವರ್ಷದ ಯುವಕ ಓಡಿಸಿಲ್ಲ ಎಂದು ಸಾಬೀತುಪಡಿಸಲು ಪ್ರಯತ್ನಿಸಲಾಗಿದೆ. ಅವರ ಕುಟುಂಬದಲ್ಲಿ ಕೆಲಸ ಮಾಡುತ್ತಿದ್ದ ಚಾಲಕ ಜವಾಬ್ದಾರಿಯನ್ನು ಹೊರಲು ಪ್ರಯತ್ನಿಸಿದ್ದಾನೆ. ತನಿಖೆಯ ವೇಳೆ ಎಸಗಿದ ಲೋಪಕ್ಕಾಗಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಶುಕ್ರವಾರ ಸಂಜೆ ತನಿಖೆಯನ್ನು ಯರವಾಡ ಪೊಲೀಸ್ ಠಾಣೆಯಿಂದ ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಯಿತು. ಅಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಮೇ 19ರಂದು ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ ಇಬ್ಬರು ಐಟಿ ವೃತ್ತಿಪರರು ಮಧ್ಯಪ್ರದೇಶ ಮೂಲದವರು. ಇವರ ಪೋಷಕರು ಸುಪ್ರೀಂ ಕೋರ್ಟ್ ತನಿಖೆಯ ಮೇಲ್ವಿಚಾರಣೆ ವಹಿಸಬೇಕು ಮತ್ತು ವಿಚಾರಣೆಯನ್ನು ತಮ್ಮ ರಾಜ್ಯದಲ್ಲಿ ನಡೆಸಬೇಕು ಎಂದು ಒತ್ತಾಯಿಸಿದರು.

ಅಪ್ರಾಪ್ತ ವಯಸ್ಕ ಕಾರು ಚಲಾಯಿಸುತ್ತಿದ್ದ ಎಂಬುದಕ್ಕೆ ಸಾಕಷ್ಟು ಪುರಾವೆಗಳಿವೆ. ಅವನು (ಬಾಲಾಪರಾಧಿ) ಪಬ್‌ನಲ್ಲಿ ಮದ್ಯ ಸೇವಿಸಿರುವ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿಗಳು ನಮ್ಮ ಬಳಿ ಇವೆ. ಅವನು ಸಂಪೂರ್ಣವಾಗಿ ಪ್ರಜ್ಞೆ ಹೊಂದಿದ್ದ. ಈ ಅಪಘಾತಕ್ಕೆ ಐಪಿಸಿ ಸೆಕ್ಷನ್ 304 ಅನ್ವಯವಾಗುತ್ತದೆ ಎಂಬ ಸಂಪೂರ್ಣ ಜ್ಞಾನವನ್ನು ಹೊಂದಿದ್ದನು ಎಂದು ಪುಣೆ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ಹೇಳಿದ್ದಾರೆ.

ಠಾಣೆಯಲ್ಲಿ ಪಿಜ್ಜಾ ನೀಡಲಾಗಿದೆಯೇ?

ಘಟನೆಯ ನಂತರ ಬಂಧಿತ ಬಾಲಾಪರಾಧಿಗೆ ಠಾನೆಯಲ್ಲಿ ಪಿಜ್ಜಾ ನೀಡಲಾಗಿದೆ ಎಂಬ ವರದಿಯನ್ನು ಕಮಿಷನರ್‌ ನಿರಾಕರಿಸಿದ್ದು, “ಪೊಲೀಸ್ ಠಾಣೆಯಲ್ಲಿ ಪಿಜ್ಜಾ ಪಾರ್ಟಿ ನಡೆಯಲಿಲ್ಲ. ಆದರೆ ನಾವು ಆ ಬಗ್ಗೆ ಆಂತರಿಕ ತನಿಖೆಯನ್ನು ಪ್ರಾರಂಭಿಸಿದ್ದೇವೆ” ಎಂದು ಹೇಳಿದ್ದಾರೆ. “ನಮ್ಮ ತನಿಖೆಯ ಸಮಯದಲ್ಲಿ, ಬಾಲಾಪರಾಧಿ ಕಾರನ್ನು ಚಾಲನೆ ಮಾಡುತ್ತಿದ್ದ ಎಂಬುದು ಸ್ಪಷ್ಟವಾಗಿ ಗೊತ್ತಾಗಿದೆ. ನಾವು ಈಗಾಗಲೇ ಅಗತ್ಯವಿರುವ ಎಲ್ಲಾ ಕಾಲಾನುಕ್ರಮದ ಪುರಾವೆಗಳನ್ನು ಸಂಗ್ರಹಿಸಿದ್ದೇವೆ” ಎಂದು ಪೊಲೀಸ್ ಕಮಿಷನರ್ ಹೇಳಿದರು.

ಅಪ್ರಾಪ್ತನ ಕುಟುಂಬದ ಚಾಲಕ ಆಗ ಕಾರಿನಲ್ಲಿದ್ದ. ಅಪಘಾತದ ನಂತರ, ಚಾಲಕನು ತಾನು ಕಾರನ್ನು ಓಡಿಸುತ್ತಿದ್ದೆ ಎಂದು ಆರಂಭದಲ್ಲಿ ಹೇಳಿಕೊಂಡಿದ್ದಾನೆ. ಆರಂಭಿಕ ಎಫ್‌ಐಆರ್‌ನಲ್ಲಿ, ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವು) ಅನ್ವಯಿಸಲಾಗಿದೆ. ಅದೇ ದಿನ ಅದನ್ನು ಸೆಕ್ಷನ್ 304 ಮಾಡಲಾಯಿತು. ಅಪಘಾತದ ನಂತರ ಅಪ್ರಾಪ್ತ ವಯಸ್ಕನನ್ನು ಜುವೆನೈಲ್ ಜಸ್ಟೀಸ್ ಬೋರ್ಡ್ ಮುಂದೆ ಹಾಜರುಪಡಿಸಲಾಗಿದೆ. ಅದು ಅವನಿಗೆ 300 ಪದಗಳ ಪ್ರಬಂಧವನ್ನು ಬರೆಯಲು ಕೇಳಿ, ಜಾಮೀನು ನೀಡಿತು. ನಂತರ ಜಾಮೀನು ರದ್ದುಪಡಿಸಿ, ಜೂನ್ 5 ರವರೆಗೆ ವೀಕ್ಷಣಾ ಕೇಂದ್ರಕ್ಕೆ ರಿಮಾಂಡ್ ಮಾಡಿದೆ.

ಇದನ್ನೂ ಓದಿ: ಕುಡಿದು ಕಾರು ಓಡಿಸಿ ಇಬ್ಬರ ಕೊಂದ ಬಾಲಕನಿಗೆ ರಿಮಾಂಡ್ ಹೋಮ್‌ನಲ್ಲಿ ಏನೆಲ್ಲ ಸವಲತ್ತಿದೆ ನೋಡಿ!

Continue Reading

ಬೆಂಗಳೂರು

Summer Special Trains : ನೈರುತ್ಯ ರೈಲ್ವೆಯಿಂದ ಬೇಸಿಗೆ ವಿಶೇಷ ರೈಲುಗಳ ಸಂಚಾರ; ಪಟ್ಟಿ ಇಲ್ಲಿದೆ

Summer Special Trains : ನೈರುತ್ಯ ರೈಲ್ವೆಯಿಂದ ಈ ಸಲದ ಬೇಸಿಗೆ ಅವಧಿಯಲ್ಲಿ ವಿಶೇಷ ರೈಲು ಸಂಚಾರಗಳು ಇರಲಿದೆ. ಬೇಸಿಗೆಯ ಕಾಲದಲ್ಲಿ ಶಾಲಾ -ಕಾಲೇಜುಗಳಿಗೆ ರಜೆ ಇರುವುದರಿಂದ ಪ್ರವಾಸದ ಸಲುವಾಗಿ ಪ್ರಯಾಣದ ದಟ್ಟಣೆ ಹೆಚ್ಚು ಇರುವುದು ಸಾಮಾನ್ಯ. ಆದ್ದರಿಂದ ಇಲಾಖೆ ಹೆಚ್ಚುವರಿ ರೈಲುಗಳನ್ನು ದೇಶದಾದ್ಯಂತ ಬಿಡುತ್ತಿದೆ.

VISTARANEWS.COM


on

By

Summer Special Trains
ಸಾಂದರ್ಭಿಕ ಚಿತ್ರ
Koo

ಬೆಂಗಳುರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಹಿನ್ನೆಲೆಯಲ್ಲಿ ತಮ್ಮ ಊರುಗಳಿಗೆ ತೆರಳುವವರಿಗೆ, ಪ್ರವಾಸಕ್ಕೆ ಹೋಗುವವರಿಗಾಗಿ ನೈರುತ್ಯ ಇಲಾಖೆಯು ವಿಶೇಷ ರೈಲುಗಳನ್ನು (Summer Special Trains) ನಿಯೋಜನೆ ಮಾಡಿದೆ. ಬೇಸಿಗೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮುಜಾಫರ್ಪುರ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಎರಡು ಹೆಚ್ಚುವರಿ ಟ್ರಿಪ್‌ಗಳನ್ನು ಓಡಿಸಲು ನೈರುತ್ಯ ಇಲಾಖೆ ನಿರ್ಧರಿಸಿದೆ.

ರೈಲು ಸಂಖ್ಯೆ 05271/05272 ಮುಜಾಫರ್ಪುರ-ಯಶವಂತಪುರ-ಮುಜಾಫರ್ಪುರ ಬೇಸಿಗೆ ವಿಶೇಷ ರೈಲು. ಈ ರೈಲು ಮೇ 24 ಮತ್ತು 31 ರಂದು ಮಧ್ಯಾಹ್ನ 03:30 ಗಂಟೆಗೆ ಮುಜಾಫರ್ಪುರದಿಂದ ಹೊರಟು ಭಾನುವಾರ ರಾತ್ರಿ 7 ಗಂಟೆಗೆ ಯಶವಂತಪುರಕ್ಕೆ ಆಗಮಿಸಲಿದೆ. ನಂತರ ರೈಲು ಸಂಖ್ಯೆ 05272 ಯಶವಂತಪುರದಿಂದ ಮೇ 27 ಮತ್ತು ಜೂನ್ 3 ರಂದು 07:30ಕ್ಕೆ ಹೊರಟು ಬುಧವಾರ ಮಧ್ಯಾಹ್ನ 12:00 ಗಂಟೆಗೆ ಮುಜಾಫರ್ಪುರ ನಿಲ್ದಾಣವನ್ನು ತಲುಪಲಿದೆ.

ಈ ರೈಲು ಎರಡು ಮಾರ್ಗಗಳಲ್ಲಿ ಹಾಜಿಪುರ, ಪಾಟಲಿಪುತ್ರ, ಅರಾ, ಬಕ್ಸಾರ್, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ, ಪ್ರಯಾಗ್ರಾಜ್ ಚಿಯೋಕಿ, ಮಾಣಿಕ್ಪುರ, ಸತ್ನಾ, ಕಟ್ನಿ, ಜಬಲ್ಪುರ್, ನರಸಿಂಗಪುರ, ಪಿಪರಿಯಾ, ಇಟಾರ್ಸಿ, ನಾಗ್ಪುರ, ಬಲ್ಹಾರ್ಷಾ, ಸಿರ್ಪುರ್ ಕಾಖಜನಗರ್, ರಾಮಗುಂಡಂ, ಕಾಜಿಪೇಟ್, ಜಂಗಾಂವ್, ಕಾಚಿಗುಡ, ಶಾದ್ನಗರ್, ಜಡ್ ಚರ್ಲಾ, ಮಹಬೂಬ್ ನಗರ್ ಸೇರಿದಂತೆ ಗದ್ವಾಲ್, ಕರ್ನೂಲ್ ಸಿಟಿ, ಡೋನ್, ಗುತ್ತಿ, ಅನಂತಪುರ & ಧರ್ಮಾವರಂ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಇದನ್ನು ಓದಿ: Murder case : ದನ ಕಟ್ಟುವ ವಿಚಾರಕ್ಕೆ ಕಿರಿಕ್‌; ಕಾಲಿಂದ ಒದ್ದು ಕುಡುಗೋಲಿನಿಂದ ಹೊಡೆದು ದೊಡ್ಡಮ್ಮನನ್ನೇ ಕೊಂದ ದುಷ್ಟ

ಇನ್ನೂ ಬೇಸಿಗೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಬೆಂಗಳೂರಿನ ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಭುವನೇಶ್ವರ ಮತ್ತು ಎಸ್ಎಂವಿಟಿ ಬೆಂಗಳೂರು-ಸಂಬಲ್ಪುರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ಬೇಸಿಗೆ ವಿಶೇಷ ರೈಲುಗಳನ್ನು ನೈರುತ್ಯ ರೈಲ್ವೆ ಇಲಾಖೆಯು ನಿಯೋಜಿಸಿದೆ.

ರೈಲು ಸಂಖ್ಯೆ 06271/06272 ಎಸ್ಎಂವಿಟಿ ಬೆಂಗಳೂರು-ಭುವನೇಶ್ವರ ಸಮ್ಮರ್ ಸ್ಪೆಷಲ್ ಎಕ್ಸ್ ಪ್ರೆಸ್.. ಈ ರೈಲು (06271) ಮೇ 31 ರಂದು ಮಧ್ಯರಾತ್ರಿ 12:10 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು ಮರುದಿನ 04:00 ಗಂಟೆಗೆ ಭುವನೇಶ್ವರವನ್ನು ತಲುಪಲಿದೆ. ರೈಲು ಸಂಖ್ಯೆ 06272 ಜೂನ್ 2 ರಂದು 06:30 ಗಂಟೆಗೆ ಭುವನೇಶ್ವರದಿಂದ ಹೊರಟು ಮರುದಿನ 09:00 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ಡಾಣಕ್ಕೆ ಆಗಮಿಸಲಿದೆ.

ಈ ವಿಶೇಷ ರೈಲುಗಳು ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ಪೆಟ್ಟೈ, ಕಟಪಾಡಿ , ರೇಣಿಗುಂಟ, ಗುಡೂರು, ನೆಲ್ಲೂರು, ಒಂಗೋಲ್, ವಿಜಯವಾಡ, ರಾಜಮಂಡ್ರಿ, ದುವ್ವಾಡ, ಕೊತ್ತವಲಸ, ವಿಜಯನಗರಂ, ಶ್ರೀಕಾಕುಳಂ ರೋಡ್, ಪಲಾಸ, ಬ್ರಹ್ಮಪುರ ಮತ್ತು ಖುರ್ದಾ ರೋಡ್ ನಿಲ್ದಾಣಗಳಲ್ಲಿ ನಿಲ್ಲಲಿವೆ.

ರೈಲು ಸಂಖ್ಯೆ 06279/06280 ಎಸ್ಎಂವಿಟಿ ಬೆಂಗಳೂರು-ಸಂಬಲ್ಪುರ-ಎಸ್ಎಂವಿಟಿ ಬೆಂಗಳೂರು ಸಮ್ಮರ್ ಸ್ಪೆಷಲ್ ಎಕ್ಸ್ ಪ್ರೆಸ್: ಈ ರೈಲು ಜೂನ್ 7 ರಂದು ಮಧ್ಯರಾತ್ರಿ 12:10 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು ಮರುದಿನ 05:00 ಗಂಟೆಗೆ ಸಂಬಲ್ಪುರವನ್ನು ತಲುಪಲಿದೆ. ರೈಲು ಸಂಖ್ಯೆ 06280 ಜೂನ್ 8 ರಂದು 11:35 ಗಂಟೆಗೆ ಸಂಬಲ್ಪುರದಿಂದ ಹೊರಟು ಮರುದಿನ 19:30 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ಡಾಣಕ್ಕೆ ಆಗಮಿಸಲಿದೆ.

ಈ ವಿಶೇಷ ರೈಲು ಎರಡು ಮಾರ್ಗಗಳಲ್ಲಿ ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ಪೆಟ್ಟೈ, ಕಟಪಾಡಿ , ರೇಣಿಗುಂಟ, ಗುಡೂರು, ನೆಲ್ಲೂರು, ಒಂಗೋಲ್, ವಿಜಯವಾಡ , ರಾಜಮಂಡ್ರಿ, ದುವ್ವಾಡಾ, ಕೊತ್ತವಲಸ, ವಿಜಯನಗರಂ, ಬೊಬ್ಬಿಲಿ, ಪಾರ್ವತಿಪುರಂ, ರಾಯಗಡ, ಮುನಿಗುಡ, ಕೇಸಿಂಗಾ, ಟಿಟ್ಲಾಘರ್, ಬಾಲಂಗಿರ್ ಮತ್ತು ಬಾರ್ಘರ್ ರೋಡ್ ನಿಲ್ದಾಣಗಳಲ್ಲಿ ನಿಲ್ಲಲಿವೆ.

ಇನ್ನೂ ಬುಕಿಂಗ್ ಮತ್ತು ವೇಳಾಪಟ್ಟಿ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ, ಪ್ರಯಾಣಿಕರು www.enquiry.indianrail.gov.in ವೆಬ್ ಸೈಟ್‌ಗೆ ಭೇಟಿ ನೀಡಿ ಅಥವಾ ಸಹಾಯವಾಣಿ 139 ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
lok sabha election 2024 voting dhoni
ಪ್ರಮುಖ ಸುದ್ದಿ15 mins ago

Lok Sabha Election 2024: ಮಧ್ಯಾಹ್ನ 1 ಗಂಟೆವರೆಗೆ 39.13% ಮತದಾನ, ಪ.ಬಂಗಾಳ ದಾಖಲೆ, ರಾಂಚಿಯಲ್ಲಿ ಧೋನಿ ವೋಟ್‌

SRH vs RR
ಕ್ರೀಡೆ27 mins ago

SRH vs RR: ಕ್ವಾಲಿಫೈಯರ್​ ಪಂದ್ಯದ ಸೋಲಿಗೆ ಕಾರಣ ತಿಳಿಸಿದ ಸಂಜು ಸ್ಯಾಮ್ಸನ್​

Exam date announced for recruitment of 4000 posts including PSI exam
ಉದ್ಯೋಗ42 mins ago

PSI Exam: ಪಿಎಸ್‌ಐ ಸೇರಿ 4 ಸಾವಿರ ಹುದ್ದೆಗಳ ನೇಮಕಾತಿಗೆ ಪರೀಕ್ಷಾ ದಿನಾಂಕ ಅನೌನ್ಸ್‌; ಯಾವ ದಿನಕ್ಕೆ ಯಾವ ಪರೀಕ್ಷೆ?

Udupi Gang War
ಪ್ರಮುಖ ಸುದ್ದಿ42 mins ago

Udupi Gang War: ಉಡುಪಿಯನ್ನು ಬೆಚ್ಚಿ ಬೀಳಿಸಿದ ಗ್ಯಾಂಗ್ ವಾರ್; ಮಾರಾಮಾರಿಯ ವಿಡಿಯೊ ವೈರಲ್‌, ಇಬ್ಬರ ಬಂಧನ

google maps kerala river
ವೈರಲ್ ನ್ಯೂಸ್49 mins ago

Google maps: ರಸ್ತೆಯೆಂದು ಕೊಂಡೊಯ್ದು ನದಿಗಿಳಿಸಿದ ಗೂಗಲ್‌ ಮ್ಯಾಪ್!‌ ನೀರು ಕುಡಿದು ಪಾರಾದ ಪ್ರಯಾಣಿಕರು

Samarjit Lankesh Love you Samantha Song Teaser
ಸ್ಯಾಂಡಲ್ ವುಡ್50 mins ago

Samarjit Lankesh: `ಗೌರಿ’ ಚಿತ್ರದ ಮ್ಯೂಸಿಕಲ್ ಟೀಸರ್ ಬಿಡುಗಡೆ ಮಾಡಿದ ಮಹಿಳಾ ಕ್ರಿಕೆಟ್‌ ತಾರೆ!

Fake Intelligence Bureau officer arrested
ಬಾಗಲಕೋಟೆ55 mins ago

Fake Intelligence Officer : ಜಾಸ್ತಿ `ಇಂಟೆಲಿಜೆಂಟ್‌’ ಆಗ್ಬೇಡಿ! ಊರವರ ಮುಂದೆ ಪೊಲೀಸ್‌ ಎಂದು ಬಿಲ್ಡಪ್‌ ಕೊಟ್ಟವ ಈಗ ಲಾಕಪ್‌ ಒಳಗೆ!

Janhvi Kapoor views on Gandhi Ambedkar casteism
ಬಾಲಿವುಡ್59 mins ago

Janhvi Kapoor: ಗಾಂಧಿ-ಅಂಬೇಡ್ಕರ್ ʻಜಾತಿವಾದʼದ ಬಗ್ಗೆ ಶ್ರೀದೇವಿ ಮಗಳಿಗೆ ಆಸಕ್ತಿಯಂತೆ!

Karan Johar announces new film on birthday
ಬಾಲಿವುಡ್1 hour ago

Karan Johar: ಬರ್ತ್‌ಡೇ ದಿನ ಹೊಸ ಸಿನಿಮಾ ಅನೌನ್ಸ್‌ ಮಾಡಿದ ಕರಣ್ ಜೋಹರ್!

foolish to link Rakesh death to Prajwal case says CM Siddaramaiah
ರಾಜಕೀಯ1 hour ago

CM Siddaramaiah: ಪ್ರಜ್ವಲ್‌ ಕೇಸ್‌ಗೆ ರಾಕೇಶ್‌ ಸಾವನ್ನು ಲಿಂಕ್‌ ಮಾಡೋದು ಮೂರ್ಖತನ: ಎಚ್‌ಡಿಕೆಗೆ ಸಿದ್ದರಾಮಯ್ಯ ತರಾಟೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌