EWS Reservation | ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗಕ್ಕೆ ಶೇ.10 ಮೀಸಲಾತಿ ಆಶಾಕಿರಣ ಎಂದ ಸಿಎಂ ಬೊಮ್ಮಾಯಿ - Vistara News

ಉಡುಪಿ

EWS Reservation | ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗಕ್ಕೆ ಶೇ.10 ಮೀಸಲಾತಿ ಆಶಾಕಿರಣ ಎಂದ ಸಿಎಂ ಬೊಮ್ಮಾಯಿ

ಎಲ್ಲ ಅಂಶಗಳನ್ನು ಪರಿಶೀಲಿಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ರಾಜ್ಯದಲ್ಲಿಯೂ ಮೀಸಲಾತಿಯನ್ನು(EWS Reservation) ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

VISTARANEWS.COM


on

EWS Reservation
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಉಡುಪಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ 103ನೇ ಸಂವಿಧಾನ ತಿದ್ದುಪಡಿಗೆ ಸರ್ವೋಚ್ಚ ನ್ಯಾಯಾಲಯ 3:2 ಅನುಪಾತದಲ್ಲಿ ಬಹುಮತದ ತೀರ್ಪನ್ನು ನೀಡಿದ್ದು, ಇದು ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇಕಡಾ 10 ಮೀಸಲಾತಿ ಕಲ್ಪಿಸಲಿದ್ದು, ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ(EWS Reservation) ಜನರಿಗೆ ಆಶಾಕಿರಣವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಜಿಲ್ಲೆಯ ಬೈಂದೂರಿನಲ್ಲಿ ಸುದ್ದಿಗಾರರಿಗೆ ಸೋಮವಾರ ಪ್ರತಿಕ್ರಿಯಿಸಿ, ಯಾವುದೇ ಮೀಸಲಾತಿಯಿಲ್ಲದೇ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಸಮುದಾಯಗಳಿಗೆ ದೊರೆತಿರುವ ಈ ಅವಕಾಶವನ್ನು ಬಳಸಿಕೊಂಡು ಸಮುದಾಯಗಳು ಅಭಿವೃದ್ಧಿಯನ್ನು ಹೊಂದಲು ಈ ತೀರ್ಪು ಅನುಕೂಲ ಕಲ್ಪಿಸಲಿದೆ. ಪ್ರಧಾನಿ ಮೋದಿ ಅವರ ದೂರದೃಷ್ಟಿಯ ಫಲವಾಗಿ ಜಾರಿಯಾಗುತ್ತಿರುವ ಈ ಸಂವಿಧಾನದ ತಿದ್ದುಪಡಿ ನಮಗೆಲ್ಲಾ ಸಂತೋಷವನ್ನು ತಂದಿದೆ ಎಂದರು.

ಇದನ್ನೂ ಓದಿ | EWS Reservation | 10% ಮೀಸಲಾತಿ ನೀಡಿರುವುದು ಸಾಮಾಜಿಕ ನ್ಯಾಯದ ಸಂಕೇತ, ಬಿ.ಎಲ್‌. ಸಂತೋಷ್‌ ಸಂತಸ

ಭಾರತ ಅಭಿವೃದ್ಧಿಯಾಗುತ್ತಿದ್ದು, ಅದರ ಜತೆಗೆ ಯುವಜನರ ಆಶೋತ್ತರಗಳೂ ಹೆಚ್ಚುತ್ತಿವೆ. ಎಲ್ಲ ರಂಗದಲ್ಲಿಯೂ ಮುಂದೆ ಬಂದು ಸ್ವಾವಲಂಬನೆಯ ಬದುಕು ಬದುಕುವ ಜನರ ಆಶಯಕ್ಕೆ ಸ್ಪಂದಿಸಲಾಗಿದೆ. ತಾಂತ್ರಿಕ ಮತ್ತು ಸಂವಿಧಾನಾತ್ಮಕವಾದ ಎಲ್ಲ ಅಂಶಗಳನ್ನು ಪರಿಶೀಲಿಸಿ ಸರ್ವೋಚ್ಚ ನ್ಯಾಯಾಲಯ ತೀರ್ಪನ್ನು ನೀಡಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿಯೂ ಈ ತೀರ್ಪನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು.

ಶಾಲೆಗಳಲ್ಲಿ ಧ್ಯಾನದ ಬಗ್ಗೆ ಪರಿಶೀಲಿಸಿ ತೀರ್ಮಾನ
ಶಾಲೆಗಳಲ್ಲಿ ಮಕ್ಕಳಿಗೆ ಧ್ಯಾನ ಅಭ್ಯಾಸ ಮಾಡಿಸುವ ಅಪಸ್ವರ ಏಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಯಾವುದೇ ಒಳ್ಳೆಯ ಕ್ರಮ ತೆಗೆದುಕೊಳ್ಳಬೇಕಾದರೆ ಅದರ ಪರ ಮತ್ತು ವಿರೋಧ ಅಭಿಪ್ರಾಯಗಳು ಸಹಜ. ಅವುಗಳನ್ನು ಕೂಲಂಕಷವಾಗಿ ಪರಿಶೀಲಿಸಿ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಅಡಕೆ ಬೆಳೆ ರೋಗಕ್ಕೆ ಔಷಧ ಸಿಂಪಡನೆಗೆ ಕ್ರಮ
ಅಡಕೆ ಬೆಳೆಯುವ ಕೃಷಿಕರ ಸಮಸ್ಯೆಯ ಬಗ್ಗೆ ಪ್ರತಿಕ್ರಿಯಿಸಿ, ಅಡಕೆ ಬೆಳೆಯಲ್ಲಿ ಬಿಳಿಚುಕ್ಕೆ ರೋಗ ಕಾಣಿಸಿಕೊಳ್ಳುತ್ತಿದ್ದು, ಕೃಷಿಕರು ಆತಂಕದಲ್ಲಿದ್ದಾರೆ. ಈ ರೋಗದ ಬಗ್ಗೆ ಕೃಷಿ ವಿಶ್ಯವಿದ್ಯಾಲಯ ಹಾಗೂ ಕೇಂದ್ರ ಸರ್ಕಾರದ ತಂಡ ಪರಿಶೀಲಿಸುತ್ತಿದ್ದು, ವೈಜ್ಞಾನಿಕವಾದ ಕಾರಣವನ್ನು ಪತ್ತೆ ಹಚ್ಚಿ, ಅದನ್ನು ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಈ ರೋಗ ಹರಡದಂತೆ ವಿಜ್ಞಾನಿಗಳು ತಿಳಿಸಿರುವ ಔಷಧ ಸಿಂಪಡಣೆ ಕಾರ್ಯಕ್ಕೆ ಸರ್ಕಾರ ಸಹಕಾರ ನೀಡಲಿದೆ. ಮೂಲರೋಗವನ್ನು ಪತ್ತೆಹಚ್ಚಿ , ಅದರ ನಿವಾರಣೆಗೆ ಔಷಧ ಸಿಂಪಡಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಖರೀದಿ ಕೇಂದ್ರಕ್ಕೆ ಶೀಘ್ರ ಕ್ರಮ
ಕರಾವಳಿ ಭಾಗದಲ್ಲಿ ಕುಚಲಕ್ಕಿಯನ್ನು ಪಡಿತರದಲ್ಲಿ ವಿತರಿಸಲು ರೈತರಿಂದ ಕುಚಲಕ್ಕಿಯನ್ನು ಖರೀದಿಸಲು ಖರೀದಿ ಕೇಂದ್ರವನ್ನು ಸದ್ಯದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು

ಇದನ್ನೂ ಓದಿ | power to fishermen | ಮೀನುಗಾರರ ದೋಣಿ ಮೇಲ್ದರ್ಜೆಗೇರಿಸಲು ಸಹಾಯಧನ: ಸಿಎಂ ಬಸವರಾಜ ಬೊಮ್ಮಾಯಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಭಾರಿ ಮಳೆ ಜತೆಗೆ ಬೀಸಲಿದೆ ಬಿರುಗಾಳಿ; ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Weather Forecast : ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ (Heavy rain alert) ಬಿರುಗಾಳಿ ಬೀಸಲಿದ್ದು, ಕಡಲಿಗಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ (Fisher Warning) ನೀಡಲಾಗಿದೆ. ಜತೆಗೆ ಮಲೆನಾಡು, ಒಳನಾಡಿನಲ್ಲೂ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು : ರಾಜ್ಯಾದ್ಯಂತ ಬುಧವಾರದಂದು ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಹಗುರದಿಂದ ಕೂಡಿರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಉತ್ತರ ಒಳನಾಡಿನ ಹಲವೆಡೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇತ್ತ ಮಲೆನಾಡಿನ ಜಿಲ್ಲೆಯಾದ್ಯಂತ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲೂ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Wild Animals Attack : ಮನೆಯಂಗಳವನ್ನು ಧ್ವಂಸ ಮಾಡಿದ ಆನೆಗಳು; ಗ್ರಾಮಕ್ಕೆ ಓಡೋಡಿ ಬಂದ ಕರಡಿ

9 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

ಗುಡುಗು, ಸಿಡಿಲು ಜತೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿ ವೇಗವು 30-40 ಕಿ.ಮೀ ಇರಲಿದೆ. ಹೀಗಾಗಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಮುಖ್ಯವಾಗಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಸೇರಿ ಒಳನಾಡಿನ ಚಿತ್ರದುರ್ಗ, ಮಂಡ್ಯ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕಡಲಿಗೆ ಮೀನುಗಾರರ ದಿಗ್ಬಂಧನ

ಕಡಲ ತೀರದಲ್ಲಿ ಅಲೆಗಳ ಅಬ್ಬರ ಜೋರಾಗಿ ಇರಲಿದ್ದು, ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್‌ 21ರವರೆಗೆ ಮೀನುಗಾರರು ಮೀನುಗಾರಿಕೆ ತೆರಳದಂತೆ ಸೂಚಿಸಲಾಗಿದೆ. ಜತೆಗೆ ಪ್ರವಾಸಿಗರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಗುಡುಗು, ಸಿಡಿಲಿನ ಮಳೆಗೆ ಮನೆಯ ಗೋಡೆ ಕುಸಿತ; ನಾಳೆಗೂ ಇದೆ ಅಲರ್ಟ್‌

Karnataka Weather Forecast : ಗುಡುಗು, ಸಿಡಿಲು ಸಹಿತ ಸುರಿದ ಮಳೆಗೆ (Rain News) ಮನೆಯ ಗೋಡೆ ಕುಸಿದಿದ್ದು, ಕುಟುಂಬಸ್ಥರು ಪವಾಡ ಸದೃಶ್ಯದಂತೆ ಪಾರಾಗಿದ್ದಾರೆ. ರಾಜ್ಯದ ಹಲವೆಡೆ ಮಳೆಯಾಗಿರುವ ವರದಿ ಆಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು/ದೊಡ್ಡಬಳ್ಳಾಪುರ: ಸಿಡಿಲು ಬಡಿದು ಮನೆಯ ಗೋಡೆ ಕುಸಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮುಕ್ಕಡಿಘಟ್ಟ ಗ್ರಾಮದಲ್ಲಿ (Karnataka Weather Forecast) ನಡೆದಿದೆ. ಸೋಮವಾರ ರಾತ್ರಿ ಗುಡುಗು, ಸಿಡಿಲು ಸಹಿತ ಜಡಿ (Rain News) ಮಳೆಯಾಗಿದೆ.

ಈ ವೇಳೆ ಸಿಡಿಲು ಬಡಿದ ಪರಿಣಾಮ ಗೋಡೆ ಕುಸಿತವಾಗಿದೆ. ಗಂಗರಾಜ್ ಎಂಬುವವರಿಗೆ ಸೇರಿದ ಮನೆ ಹಾನಿಯಾಗಿದೆ. ಮನೆಯ ಕುಟುಂಬಸ್ಥರು ಬೇರೆ ಕೋಣೆಯಲ್ಲಿದ್ದ ಕಾರಣ ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂ ಗೋಡೆ ಕುಸಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಜಖಂಗೊಂಡಿವೆ. ದೊಡ್ಡಬಳ್ಳಾಪುರ ಗ್ರಾಮಾಂತರ ‌ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Electric shock : ಮೀನು ಹಿಡಿಯಲು ಹೋದಾಗ ವಿದ್ಯುತ್‌ ಪ್ರವಹಿಸಿ ಬಾಲಕರಿಬ್ಬರು ಮೃತ್ಯು; ಕುಟುಂಬಸ್ಥರ ಆಕ್ರಂದನ

ಚಿಕ್ಕಮಗಳೂರಲ್ಲಿ ಅಬ್ಬರ ಮಳೆ

ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ ಭಾರಿ ಮಳೆಯಾಗಿದ್ದು, 8 ಸೆಂ.ಮೀ ದಾಖಲಾಗಿದೆ. ಧರ್ಮಸ್ಥಳದಲ್ಲಿ 6 ಸೆಂ.ಮೀ, ಕಾರ್ಕಳ , ಕಕ್ಕೇರಿ, ಯಗಟಿಯಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಹೊಸದುರ್ಗ, ಹಾರಂಗಿ, ರಾಯಲ್ಪಾಡು, ಚನ್ನಗಿರಿ, ಕೋಲಾರ, ಎಂಎಂ ಹಿಲ್ಸ್‌ನಲ್ಲಿ 4 ಸೆಂ.ಮೀ ಮಳೆಯಾಗಿದೆ.

ಇನ್ನೂ ಮಣಿ, ಶಿರಾಲಿ, ಬೆಳ್ತಂಗಡಿ, ಕೊಣನೂರಿನಲ್ಲಿ ತಲಾ 3 ಸೆಂ.ಮೀ ಹಾಗೂ ಹೊನ್ನಾವರ, ಪುತ್ತೂರು, ಮಂಗಳೂರು, ತುಮಕೂರು, ಭಾಗಮಂಡಲ, ವಿರಾಜಪೇಟೆ, ಕುಶಾಲನಗರದಲ್ಲಿ ತಲಾ 2 ಸೆಂ.ಮೀನಷ್ಟು ಮಳೆಯಾಗಿದೆ. ಮಂಕಿ, ಪಣಂಬೂರು , ಮೂಲ್ಕಿ, ಉಪ್ಪಿನಂಗಡಿ, ಕುಮಟಾ, ಮಧುಗಿರಿ, ಪರಶುರಾಂಪುರ, ತೊಂಡೇಭಾವಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಕರಾವಳಿ ಭಾಗಕ್ಕೆ ಮಳೆ ಅಲರ್ಟ್‌

ಜೂನ್‌ 19ರಂದು ಕರಾವಳಿ ಭಾಗಕ್ಕೆ ಮಳೆ ಎಚ್ಚರಿಕೆ ನೀಡಲಾಗಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಒಳನಾಡಿನಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಲ್ಲಿ ಕೆಲವೊಮ್ಮೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಗರಿಷ್ಠ 30 ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉಡುಪಿ

Udupi Gang War : ಉಡುಪಿಯಲ್ಲಿ ನಿಲ್ಲದ ಗ್ಯಾಂಗ್ ವಾರ್; ಇಬ್ಬರು ಪುಂಡರು ಅಂದರ್‌

Udupi Gang War: ಉಡುಪಿಯಲ್ಲಿ ಗ್ಯಾಂಗ್‌ ವಾರ್‌ ಮುಂದುವರಿದಿದೆ. ಯಾರ ಭಯವೂ ಇಲ್ಲದೆ ಪುಂಡರು ನಡುರಸ್ತೆಯಲ್ಲೇ ಯುವಕನನ್ನು ಅಟ್ಟಾಡಿಸಿ ದಾಳಿ ಮಾಡಿದ್ದಾರೆ. ಈ ಸಂಬಂಧ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

VISTARANEWS.COM


on

By

Udupi Gang War
ಬಂಧಿತ ಆರೋಪಿಗಳು
Koo

ಉಡುಪಿ: ಉಡುಪಿಯಲ್ಲಿ ಮತ್ತೊಂದು ಗ್ಯಾಂಗ್ ವಾರ್ (Udupi Gang War) ನಡೆದಿದ್ದು, ಯುವಕನೊಬ್ಬ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಉಡುಪಿಯ ಪುತ್ತೂರಿನಲ್ಲಿ ಜೂನ್ 15ರ ರಾತ್ರಿ ಘಟನೆ ನಡೆದಿದೆ.

ಚರಣ್‌ ಎಂಬಾತ ಸೆಲೂನ್‌ನಲ್ಲಿ ಕೆಲಸ ಮಾಡಿಕೊಂಡಿದ್ದ. ಈ ವೇಳೆ ಶಬರಿ ಎಂಬಾತನಿಗೆ ಚರಣ್‌ ಬೈದಿದ್ದ. ಈ ವಿಚಾರಕ್ಕೆ ಮಾತುಕತೆಗೆಂದು ಪ್ರವೀಣ್‌ ಎಂಬಾತ ಉಡುಪಿ ನಗರದ ಪುತ್ತೂರಿ‌ನ ಬಿರಿಯಾನಿ ಪಾಯಿಂಟ್‌ ಬಳಿ ಚರಣ್‌ನನ್ನು ಕರೆದಿದ್ದ. ಇತ್ತ ಚರಣ್‌ ತನ್ನ ಮೂವರು ಸ್ನೇಹಿತರ ಜತೆಗೂಡಿ ಆಗಮಿಸಿದ್ದ.

ಚರಣ್‌ ಬರುತ್ತಿದ್ದಂತೆ ಪ್ರವೀಣ್‌ ಗ್ಯಾಂಗ್‌ ಏಕಾಏಕಿ ತಲವಾರ್‌ ಬೀಸಿ ಕೊಲೆಗೆ ಯತ್ನಿಸಿದ್ದಾರೆ. ಈ ವೇಳೆ ದಾಳಿಯಿಂದ ತಪ್ಪಿಸಿಕೊಳ್ಳಲು ಚರಣ್ ಮತ್ತು ಸಂಗಡಿಗರು ಬೈಕ್ ಬಿಟ್ಟು ಓಡಿದ್ದಾರೆ. ಇತ್ತ ಚರಣ್ ಸಿಗದಿದ್ದಕ್ಕೆ ಆತನ ಬೈಕ್‌ ಅನ್ನು ಜಖಂಗೊಳಿಸಿದ್ದಾರೆ. ತಮ್ಮ ಕೃತ್ಯವನ್ನು ವಿಡಿಯೋ ಮಾಡಿಕೊಂಡು ಪುಂಡರು ಅಟ್ಟಹಾಸ ಮೆರೆದಿದ್ದಾರೆ.

ಉಡುಪಿಯಲ್ಲಿ ಹೆಚ್ಚುತ್ತಿರುವ ಗ್ಯಾಂಗ್ ವಾರ್ ಪ್ರಕರಣಕ್ಕೆ ಉಡುಪಿ ಜನತೆ ಭಯಭೀತರಾಗಿದ್ದಾರೆ. ಒಂದೇ ತಿಂಗಳ ಅಂತರದಲ್ಲಿ ಮೂರು ಗ್ಯಾಂಗ್ ವಾರ್ ಪ್ರಕರಣ ದಾಖಲಾಗಿದೆ.

ಕೃತ್ಯದ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಅರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಅಭಿ, ಪ್ರವೀಣ್ ಕಟಪಾಡಿ, ದೇಶರಾಜ್ ಬಂಧಿತ ಆರೋಪಿಗಳಾಗಿದ್ದಾರೆ. ಸದ್ಯ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Udupi Gang War: ಉಡುಪಿ ಗ್ಯಾಂಗ್ ವಾರ್ ಪ್ರಕರಣ; ಮತ್ತೆ ಮೂವರು ಆರೋಪಿಗಳ ಬಂಧನ

ಸ್ಮಶಾನಕ್ಕೆ ಕರೆದೊಯ್ದು ಸ್ನೇಹಿತನನ್ನೇ ಕೊಂದು ಹಾಕಿದ ಮಿತ್ರದ್ರೋಹಿ

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಯುವಕನೊಬ್ಬ ತನ್ನ ಸ್ನೇಹಿತನನ್ನೇ ಬರ್ಬರವಾಗಿ ಕೊಂದು (Murder Case) ಹಾಕಿದ್ದಾನೆ. ಶಿವಮೊಗ್ಗ ನಗರದ ಆಯನೂರು ಗೇಟ್ ಬಳಿ ಸೋಮವಾರ ತಡರಾತ್ರಿ ಘಟನೆ ನಡೆದಿದೆ. ಶಿವಮೊಗ್ಗದ ಜೆಪಿ ನಗರದ ನಿವಾಸಿ ರಾಜುನಾಯ್ಕ(30) ಕೊಲೆಯಾದವನು. ವಿಕ್ರಮ್ ಕೊಲೆ ಆರೋಪಿ ಆಗಿದ್ದಾನೆ.

ಕಳೆದ ಎರಡ್ಮೂರು ದಿನದಿಂದ ರಾಜುನಾಯ್ಕ ಹಾಗೂ ವಿಕ್ರಮ್‌ ನಡುವೆ ಕಲಹ ಇತ್ತು. ನಿನ್ನೆ ಸೋಮವಾರ ರಾತ್ರಿ ಎಣ್ಣೆ ಕುಡಿಯೋಣ ಬಾ ಎಂದು ವಿಕ್ರಮ್‌ ರಾಜುನಾಯ್ಕ್‌ನನ್ನು ಕರೆದುಕೊಂಡು ಹೋಗಿದ್ದ. ಎಣ್ಣೆ ಕುಡಿಸುವ ನೆಪದಲ್ಲಿ ಸ್ಮಶಾನಕ್ಕೆ ಕರೆದುಕೊಂಡು ಹೋಗಿ ತಲೆ ಮೇಲೆ ಕಲ್ಲು ಎತ್ತಿ ಕೊಲೆ ಮಾಡಲಾಗಿದೆ.

ಸದ್ಯ ಘಟನೆ ಸಂಬಂಧ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka weather : ಗಾಳಿಯೊಂದಿಗೆ ಗುಡುಗು ಸಹಿತ ಸಾಧಾರಣ ಮಳೆ ಸಾಧ್ಯತೆ

Karnataka Weather Forecast : ಕರಾವಳಿ ಹಾಗೂ ಉತ್ತರ ಒಳನಾಡಿನ ನೈರುತ್ಯ ಮುಂಗಾರು ಚುರುಕುಗೊಂಡಿದೆ. ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿರಲಿದೆ. ಈ ದಿನ ಹಲವೆಡೆ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ಕರಾವಳಿ, ಉತ್ತರ ಒಳನಾಡು ಮತ್ತು ಮಲೆನಾಡಿನ ಕೆಲವು ಭಾಗಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲೂ ಗಾಳಿ ಜತೆಗೆ ಹಗುರದಿಂದ ಕೂಡಿದ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಹಾಗೂ ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ.

ಇದನ್ನೂ ಓದಿ: Video Viral: ಮಹಿಳೆಯನ್ನು ತಿವಿದು ರಸ್ತೆಯುದ್ದಕ್ಕೂ ಎಳೆದೊಯ್ದ ಎಮ್ಮೆ! ವಿಡಿಯೊ ಇದೆ

ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ

ಬೆಂಗಳೂರು: ಬೇಸಿಗೆ ಕಾಲದ ನಂತರ ಬರುವ ಮಳೆಗಾಲ ನಿಮ್ಮನ್ನು ಶಾಖದಿಂದ ಮುಕ್ತಗೊಳಿಸಿ ತಂಪನ್ನು ನೀಡುತ್ತದೆ ನಿಜ. ಆದರೆ ಈ ಸಮಯದಲ್ಲಿ ಬ್ಯಾಕ್ಟೀರಿಯಾ, ವೈರಸ್‌ಗಳ ಹಾವಳಿ ಹೆಚ್ಚಾಗಿರುತ್ತದೆ. ಹಾಗಾಗಿ ಅನೇಕ ಕಾಯಿಲೆಗಳು ಕೂಡ ಹರಡುತ್ತದೆ. ಇದರಿಂದ ನೀವು ಬಹಳ ಬೇಗನೆ ಅನಾರೋಗ್ಯಕ್ಕೊಳಗಾಗುತ್ತೀರಿ. ಹಾಗಾಗಿ ಮಳೆಗಾಲದಲ್ಲಿ ನೀವು ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕಾಗುತ್ತದೆ. ಇದರಿಂದ ನೀವು ಫಿಟ್ ಆಗಿ ಆರೋಗ್ಯ (Health Tips) ವಾಗಿರಬಹುದು.

ಶುದ್ಧ ಮತ್ತು ಕುದಿಸಿದ ನೀರನ್ನು ಕುಡಿಯಿರಿ

ಮಳೆಗಾಲದಲ್ಲಿ ನೀರು ತುಂಬಾ ಕಲುಷಿತವಾಗಿರುತ್ತದೆ. ಹಾಗಾಗಿ ಅದರಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯುತ್ತವೆ. ಈ ನೀರನ್ನು ನೀವು ಹಾಗೇ ಕುಡಿಯುವುದರಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು, ಜ್ವರದಂತಹ ಸಾಮಾನ್ಯ ಆರೋಗ್ಯ ಸಮಸ್ಯೆಗಳು ಕಾಡುತ್ತವೆ. ಹಾಗಾಗಿ ಮಳೆಗಾಲದಲ್ಲಿ ಶುದ್ಧವಾದ ನೀರನ್ನು ಬಳಸಿ ಮತ್ತು ಕುದಿಸಿ ಆರಿಸಿದ ನೀರನ್ನೇ ಕುಡಿಯಿರಿ. ಹಾಗೇ ಹೊರಗಡೆ ಹೋದಾಗ ಅಲ್ಲಲ್ಲಿ ನೀರನ್ನು ಕುಡಿಯುವ ಬದಲು ಮನೆಯ ನೀರನ್ನು ತೆಗೆದುಕೊಂಡು ಹೋಗಿ ಬಳಸಿ.

Health Tips

ಬೀದಿ ಬದಿಯ ಆಹಾರ ಮತ್ತು ಜಂಕ್ ಫುಡ್ ಸೇವನೆಯನ್ನು ತಪ್ಪಿಸಿ

ಹೆಚ್ಚಿನ ಜನರು ಬೀದಿಗಳಲ್ಲಿ ಮಾರಾಟ ಮಾಡುತ್ತಿರುವ ಆಹಾರವನ್ನು ಸೇವಿಸುತ್ತಾರೆ. ಆದರೆ ಬೀದಿಗಳಲ್ಲಿ ಆಹಾರಗಳನ್ನು ತೆರೆದಿಡುತ್ತಾರೆ. ಹಾಗಾಗಿ ಅದರಲ್ಲಿ ಬ್ಯಾಕ್ಟೀರಿಯಾಗಳು ಸೇರಿಕೊಳ್ಳುತ್ತದೆ. ಅದನ್ನು ಸೇವಿಸಿದರೆ ನಿಮ್ಮ ಆರೋಗ್ಯ ಕೆಡುತ್ತದೆ. ಹಾಗಾಗಿ ಅವುಗಳನ್ನು ತಿನ್ನುವುದನ್ನು ತಪ್ಪಿಸಿ.

ಮನೆಯ ಸುತ್ತಮುತ್ತ ನೀರು ನಿಲ್ಲುವುದನ್ನು ತಪ್ಪಿಸಿ

ಮಳೆಗಾಲದಲ್ಲಿ ಮನೆಯ ಸುತ್ತಮುತ್ತಲಿರುವ ಹೊಂಡಗಳು, ಮಡಿಕೆಗಳು, ಪ್ಲಾಸ್ಟಿಕ್ ಡಬ್ಬಗಳು, ಬಾಟಲಿಗಳು ಮುಂತಾದವುಗಳಲ್ಲಿ ನೀರು ಸಂಗ್ರಹವಾಗುತ್ತದೆ. ಹಾಗಾಗಿ ಇಂತಹ ನೀರಿನಲ್ಲಿ ಸೊಳ್ಳೆಗಳು ಮೊಟ್ಟಯಿಟ್ಟು ಮರಿ ಮಾಡುತ್ತವೆ. ಈ ಸೊಳ್ಳೆಗಳ ಕಡಿತದಿಂದ ಡೆಂಗ್ಯೂ, ಮಲೇರಿಯಾದಂತಹ ಹಲವಾರು ಕಾಯಿಲೆಗಳು ಹರಡುತ್ತವೆ. ಹಾಗಾಗಿ ಈ ನೀರು ಶೇಖರಣೆಯಾಗುವುದನ್ನು ತಪ್ಪಿಸಿ.

Health Tips

ಹಣ್ಣುಗಳು-ತರಕಾರಿಗಳನ್ನು ತೊಳೆದು ಬಳಸಿ

ಮಾರುಕಟ್ಟೆಯಿಂದ ತಂದ ಹಣ್ಣುಗಳು ಮತ್ತು ತರಕಾರಿಗಳ ಮೇಲ್ಮೈ ಮೇಲೆ ಬ್ಯಾಕ್ಟೀರಿಯಾಗಳು ಇರುತ್ತವೆ. ಇದನ್ನು ಹಾಗೇ ಸೇವಿಸಿದರೆ ಹೊಟ್ಟೆ ಕೆಡುತ್ತದೆ. ಹಾಗಾಗಿ ಅವುಗಳನ್ನು ಉಪ್ಪನ್ನು ಬೆರೆಸಿದ ನೀರಿನಲ್ಲಿ ಚೆನ್ನಾಗಿ ತೊಳೆದು ಉಪಯೋಗಿಸಿ. ಮತ್ತು ತರಕಾರಿಗಳನ್ನು ಚೆನ್ನಾಗಿ ಬೇಯಿಸಿ ತಿನ್ನಿ. ಹಸಿ ತರಕಾರಿ ತಿನ್ನುವುದನ್ನು ತಪ್ಪಿಸಿ.

Health Tips

ಸುಖಕರವಾಗಿ ನಿದ್ರೆ ಮಾಡಿ

ನಿದ್ರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ದೇಹಕ್ಕೆ ವಿಶ್ರಾಂತಿಯನ್ನು ನೀಡುತ್ತದೆ. ತಡವಾಗಿ ನಿದ್ರೆ ಮಾಡುವುದು , ಕಡಿಮೆ ನಿದ್ರೆ ನಿಮ್ಮ ದೇಹದ ರೋಗ ನಿರೋಧಕ ಶಕ್ತಿಯ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದರಿಂದ ನೀವು ಜ್ವರ, ಶೀತದಂತಹ ಸಾಮಾನ್ಯ ಕಾಯಿಲೆಯಿಂದ ಬಳಲುತ್ತೀರಿ. ಹಾಗಾಗಿ ದಿನದಲ್ಲಿ 8 ಗಂಟೆಗಳ ಕಾಲ ನಿದ್ರಿಸಿ.

Health Tips

ನಿಯಮಿತವಾದ ವ್ಯಾಯಾಮ

ಮಳೆಗಾಲದಲ್ಲಿ ಹೊರಗಡೆ ಮಳೆ ಸುರಿಯುವುದರಿಂದ ವಾಕಿಂಗ್, ಸೈಕ್ಲಿಂಗ್, ಯೋಗ ಮುಂತಾದ ವ್ಯಾಯಾಮಗಳನ್ನು ಮಾಡಲು ಅಡ್ಡಿಯಾಗುತ್ತದೆ. ಆದರೆ ನೀವು ಪ್ರತಿದಿನದ ವ್ಯಾಯಾಮವನ್ನು ತಪ್ಪಿಸಬೇಡಿ. ಮನೆಯೊಳಗೆ ನಿಮಗೆ ಸಾಧ್ಯವಾದಷ್ಟು ವ್ಯಾಯಾಮ ಮಾಡಿ. ಇದು ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಹಾಗೂ ರಕ್ತ ಪರಿಚಲನೆಯನ್ನು ಸುಧಾರಿಸುತ್ತದೆ.

ನಿಮ್ಮ ಕೈಗಳನ್ನು ಚೆನ್ನಾಗಿ ತೊಳೆಯಿರಿ

ನೀವು ಹೊರಗಡೆಯಿಂದ ಬಂದಾಗ ಕೈಕಾಲುಗಳನ್ನು ಸ್ವಚ್ಛ ಗೊಳಿಸುವುದನ್ನು ಮರೆಯಬೇಡಿ. ಹಾಗೇ ಯಾವುದೇ ಆಹಾರವನ್ನು ಸೇವಿಸುವ ಮುನ್ನ ಕೈಗಳನ್ನು ಚೆನ್ನಾಗಿ ತೊಳೆಯಿರಿ. ಇದು ನಿಮ್ಮನ್ನು ಹಾನಿಕಾರಕ ಬ್ಯಾಕ್ಟೀರಿಯಾಗಳಿಂದ ಕಾಪಾಡುತ್ತದೆ.

ಆಗಾಗ ಮಳೆಯಲ್ಲಿ ನೆನೆಯುವುದನ್ನು ತಪ್ಪಿಸಿ

ಮಳೆಗಾಲದಲ್ಲಿ ಹೊರಗಡೆ ಮಳೆ ಧಾರಕಾರವಾಗಿ ಸುರಿಯುತ್ತಿರುತ್ತದೆ. ಹಾಗಾಗಿ ನೀವು ಹೊರಗಡೆ ಹೋಗುವಾಗ ಛತ್ರಿ, ರೈನ್ ಕೋಟ್ ಧರಿಸುವುದನ್ನು ಮರೆಯಬೇಡಿ. ಇಲ್ಲವಾದರೆ ನೀವು ಮಳೆಯಲ್ಲಿ ನೆನೆಯಬೇಕಾಗುತ್ತದೆ. ಇದರಿಂದ ನೀವು ಅನಾರೋಗ್ಯಕ್ಕೊಳಗಾಗಬಹುದು. ಹಾಗಾಗಿ ಮಳೆಗಾಲದಲ್ಲಿ ನೀವು ಆರೋಗ್ಯವಾಗಿರಲು ಪ್ರಯತ್ನಿಸಿ. ಅದಕ್ಕಾಗಿ ಈ ಸಲಹೆಗಳನ್ನು ತಪ್ಪದೇ ಪಾಲಿಸಿ. ಇವು ನಿಮ್ಮನ್ನು ರೋಗಗಳಿಂದ ಕಾಪಾಡಲು ಸಹಾಯ ಮಾಡುತ್ತವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Protest by BJP in Yallapur against petrol and diesel price hike
ಉತ್ತರ ಕನ್ನಡ7 mins ago

Uttara Kannada News: ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ವಿರೋಧಿಸಿ ಯಲ್ಲಾಪುರದಲ್ಲಿ ಬಿಜೆಪಿಯಿಂದ ಪ್ರತಿಭಟನೆ

Renuka swamy Murder case
ಬೆಂಗಳೂರು17 mins ago

Renuka Swamy Murder : ನಟ ದರ್ಶನ್ ಹಲ್ಲೆ ಮಾಡುವುದನ್ನು ವಿಡಿಯೊ ಮಾಡಿದ್ದ ಮೂವರು ಅರೆಸ್ಟ್‌; ಸಿಕ್ಕೇ ಬಿಡ್ತಾ ದೊಡ್ಡ ಸಾಕ್ಷಿ!

International Yoga Day 2024
ಫ್ಯಾಷನ್27 mins ago

International Yoga Day 2024: ಯೋಗಾಭ್ಯಾಸಕ್ಕೆ ಪುರುಷರ ಉಡುಗೆಗಳು ಹೀಗಿರಬೇಕು

Amithab Bacchan
Latest40 mins ago

Amithab Bacchan :14ನೇ ವರ್ಷಕ್ಕೆ ಕಾಲಿಟ್ಟ ʼರಾವಣ್ʼ ಚಿತ್ರ; ಮಗನನ್ನು ಹೊಗಳಿ ಸೊಸೆಯನ್ನು ನಿರ್ಲಕ್ಷಿಸಿದ ಅಮಿತಾಭ್!

BCCI
ಕ್ರೀಡೆ42 mins ago

BCCI: ಟೀಮ್​ ಇಂಡಿಯಾದ ತವರಿನ ಕ್ರಿಕೆಟ್​ ಸರಣಿಯ ವೇಳಾಪಟ್ಟಿ ಪ್ರಕಟ

Amitabh Bachchan touched Aswini Dutt feet
ಬಾಲಿವುಡ್45 mins ago

Amitabh Bachchan: ಅಶ್ವಿನಿ ದತ್ ಕಾಲಿಗೆ ನಮಸ್ಕರಿಸಿದ ಅಮಿತಾಭ್‌; ʻಬಿಗ್‌ ಬಿʼ ಕೊಂಡಾಡಿದ ರಾಮ್ ಗೋಪಾಲ್ ವರ್ಮಾ!

Citroen C3 Aircross
ಪ್ರಮುಖ ಸುದ್ದಿ50 mins ago

Citroen C3 Aircross : ಧೋನಿ ಹೆಸರಿನಲ್ಲಿ ಬಿಡುಗಡೆಯಾಗಿದೆ ಈ ಕಾರು, ಕೇವಲ 100 ಕಾರಷ್ಟೇ ಉತ್ಪಾದನೆ

Mysuru News
ಮೈಸೂರು52 mins ago

Mysuru News : ಪತ್ನಿ ಶೀಲ ಶಂಕಿಸಿ ಬೆಂಕಿ ಹಚ್ಚಿ ಸುಟ್ಟು ಹಾಕಿದವನಿಗೆ ಜೀವಾವಧಿ ಶಿಕ್ಷೆ

Yuva spoorthi samvaada programme on June 22 in Shivamogga
ಕರ್ನಾಟಕ57 mins ago

Shivamogga News: ಶಿವಮೊಗ್ಗದಲ್ಲಿ ಜೂ.22ರಂದು ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ

IIT Bombay
Latest1 hour ago

IIT Bombay: ಹಿಂದೂ ದೇವರ ಅವಹೇಳನಕಾರಿ ನಾಟಕ; ಐಐಟಿ ವಿದ್ಯಾರ್ಥಿಗಳಿಗೆ ದಂಡ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು3 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ4 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ4 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ5 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ6 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು6 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ6 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌