ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಅಶೋಕ್ ಕಶ್ಯಪ್ ಪದಗ್ರಹಣ - Vistara News

ಬೆಂಗಳೂರು

ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಅಶೋಕ್ ಕಶ್ಯಪ್ ಪದಗ್ರಹಣ

ಕನ್ನಡ ಚಿತ್ರರಂಗದ ಹಿರಿಯ ಸಿನಿಮಾಟೋಗ್ರಾಫರ್ ಅಶೋಕ್ ಕಶ್ಯಪ್ ಅವರನ್ನು ರಾಜ್ಯ ಸರ್ಕಾರ ನ.5ರಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ನೇಮಿಸಿತ್ತು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಕನ್ನಡ ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್ ಅಶೋಕ್ ಕಶ್ಯಪ್ ಅವರು ನಂದಿನಿ ಬಡಾವಣೆಯಲ್ಲಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿ ಕಚೇರಿಯಲ್ಲಿ ಸೋಮವಾರ ಅಧಿಕಾರ ಸ್ವೀಕರಿಸಿದರು.

ಈ ಹಿಂದಿನ ಅಧ್ಯಕ್ಷರ ಸುನೀಲ್ ಪುರಾಣಿಕ್ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ರಾಜ್ಯ ಸರ್ಕಾರ ನ.5ರಂದು ಅಶೋಕ್ ಕಶ್ಯಪ್ ಅವರನ್ನು ನೇಮಿಸಿ ಆದೇಶಿಸಿತ್ತು. ಅಶೋಕ್ ಅಶ್ಯಪ್ ಕನ್ನಡ ಚಿತ್ರರಂಗದಲ್ಲಿ ಹಿರಿಯ ಸಿನಿಮಾಟೋಗ್ರಾಫರ್ ಆಗಿದ್ದು, ಅವರ ಶಾಪ ಚಿತ್ರದ ಛಾಯಾಗ್ರಾಹಣಕ್ಕೆ ರಾಜ್ಯ ಪ್ರಶಸ್ತಿ ದೊರೆತಿದೆ. ಭುವನಜ್ಯೋತಿ, ಶ್!!, ಕರುಣಿನಕೂಗು, ಸೂಪರ್, ಉಪ್ಪಿ-2, ಕಾಫಿತೋಟ ಸೇರಿದಂತೆ ವಿವಿಧ ಚಿತ್ರಗಳಿಗೆ ಸಿನಿಮಾಟೋಗ್ರಾಫರ್ ಆಗಿ ದುಡಿದಿದ್ದಾರೆ. ಅಲ್ಲದೆ, ಚಿತ್ರ ನಿರ್ದೇಶನ ಮತ್ತು ನಟನೆಯಲ್ಲಿ ಸಹ ಅವರು ಪ್ರತಿಭೆಯನ್ನು ತೋರಿದ್ದಾರೆ.

ಈ ಬಗ್ಗೆ ಅಶೋಕ್ ಕಶ್ಯಪ್ ಪ್ರತಿಕ್ರಿಯಿಸಿ, ಕನ್ನಡ ಚಿತ್ರರಂಗದ ತಾಂತ್ರಿಕ ವರ್ಗದಲ್ಲಿ ದುಡಿದ ತಮ್ಮನ್ನು ಸರ್ಕಾರ ಗುರುತಿಸಿ ಅಕಾಡೆಮಿ ಅಧ್ಯಕ್ಷರನ್ನಾಗಿ ನೇಮಿಸಿರುವುದು ಸಿನಿಮಾ ತಾಂತ್ರಿಕ ವರ್ಗಕ್ಕೆ ಖುಷಿ ತಂದಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಹಾಗೂ ಕನ್ನಡ ಚಿತ್ರರಂಗದಲ್ಲಿ ಈವರೆಗೆ ದುಡಿದು ಪಡೆದ ತಮ್ಮ ಅನುಭವವನ್ನು ಅಕಾಡೆಮಿ ಹಾಗೂ ಕನ್ನಡ ಚಿತ್ರರಂಗದ ಬೆಳವಣಿಗೆಗೆ ಪೂರಕವಾಗಿ ಶ್ರಮಿಸುವುದಾಗಿ ತಿಳಿಸಿದರು.

ಹಿರಿಯ ನಿರ್ದೇಶಕರು ಹಾಗೂ ಅಕಾಡೆಮಿಯ ಹಿಂದಿನ ಅಧ್ಯಕ್ಷ ಟಿ.ಎಸ್.ನಾಗಾಭರಣ, ನಾಗತಿಹಳ್ಳಿ ಚಂದ್ರಶೇಖರ್, ಹಿರಿಯ ಸಿನಿಮಾಟೋಗ್ರಾಫರ್ ಬಸವರಾಜ್ ಸೇರಿದಂತೆ ಹಲವು ಗಣ್ಯರು, ಚಿತ್ರ ನಿರ್ದೇಶಕರು, ಅಭಿಮಾನಿಗಳು ಶುಭ ಕೋರಿದರು.

ಇದನ್ನೂ ಓದಿ | Kamal Haasan | 35 ವರ್ಷಗಳ ನಂತರ ಮತ್ತೆ ಒಂದಾದ ಮಣಿರತ್ನಂ-ಕಮಲ್‌ ಹಾಸನ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

KPCC President: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸುಳಿವು; ಲಿಂಗಾಯತರಿಗೆ ಅವಕಾಶ ನೀಡಲು ಒತ್ತಾಯ

KPCC President: ದೆಹಲಿ‌ ಮಟ್ಟದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ನಡೆದಿದೆ. ಡಿ.ಕೆ. ಶಿವಕುಮಾರ್ ಅವರನ್ನು ಬದಲಾವಣೆ ಮಾಡುವುದು ಸೂಕ್ತ ಎಂದು ರಾಜ್ಯ ನಾಯಕರಿಂದ ಒತ್ತಾಯ ಕೇಳಿಬಂದಿದೆ.

VISTARANEWS.COM


on

KPCC President
Koo

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರ (KPCC President) ಬದಲಾವಣೆ ಸುಳಿವು ಸಿಕ್ಕಿದ್ದು, ಅಧಿವೇಶನದ ಬಳಿಕ ಕೆಪಿಸಿಸಿ ನೂತನ ಸಾರಥಿ ಆಯ್ಕೆ ಸಾಧ್ಯತೆ ಇವೆ ಎನ್ನಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕೈ ಹೈಕಮಾಂಡ್ ಇಂಗಿತ ಹೊಂದಿದ್ದು, ಇದರ ಸುಳಿವು ಸಿಗುತ್ತಿದ್ದಂತೆ ಅಧ್ಯಕ್ಷಗಿರಿ ಪಟ್ಟಕ್ಕಾಗಿ ಲಾಬಿ ಜೋರಾಗಿದೆ. ದಲಿತರು, ಬ್ರಾಹ್ಮಣರು, ಒಕ್ಕಲಿಗರ ಕೋಟಾ ಮುಗಿದಿದೆ, ಈ ಬಾರಿ ಲಿಂಗಾಯತರಿಗೆ ಅವಕಾಶ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಜತೆಗೆ ನಮಗೂ ಅವಕಾಶ ಕೊಡಿ ಎಂದು ವಾಲ್ಮೀಕಿ ಸಮುದಾಯದ ನಾಯಕರೂ ಆಗ್ರಹಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಚಿವ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ‌, ಬಿ.ಕೆ. ಹರಿಪ್ರಸಾದ್ ಲಾಬಿ ನಡೆಸುತ್ತಿದ್ದಾರೆ. ಅಲ್ಲದೇ ಸತೀಶ್ ಜಾರಕಿಹೊಳಿ‌, ಕೆ.ಎನ್. ರಾಜಣ್ಣ ಹೆಸರುಗಳು ಮುನ್ನೆಲೆಗೆ ಬಂದಿವೆ. ಈಗಾಗಲೇ ನಾನು ಅಧ್ಯಕ್ಷನಾಗಲು ಸಿದ್ಧ ಎಂದು ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಮತ್ತೊಂದೆದೆ ಹಿಂದುಳಿದ ವರ್ಗಗಳ ಕೋಟಾದಡಿ ಬಿ.ಕೆ. ಹರಿಪ್ರಸಾದ್ ಹೆಸರು ಚರ್ಚೆಯಾಗುತ್ತಿದೆ. ಆದರೆ ಜಾತಿ ಮತ್ತು ಪ್ರಾದೇಶಿಕ ಆಧಾರಿತವಾಗಿ ಅಧ್ಯಕ್ಷರ ಆಯ್ಕೆ ಮಾಡಲು ಹೈ ಕಮಾಂಡ್‌ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.

ಈ ಬಾರಿ ಲಿಂಗಾಯತ ಹಾಗೂ ಕಲ್ಯಾಣ ಕರ್ನಾಟಕದ ನಾಯಕರಿಗೆ ಮಣೆ ಹಾಕುವ ಸಾಧ್ಯತೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಈಶ್ವರ್ ಖಂಡ್ರೆ ಅವರ ಹೆಸರು ಮುನ್ನೆಲೆಯಲ್ಲಿದೆ.

ದೆಹಲಿ‌ ಮಟ್ಟದಲ್ಲಿ ನಡೆದಿದೆ ಚರ್ಚೆ

ಸಿಎಂ ಸಿದ್ದರಾಮಯ್ಯ ಅವರು ರಾಹುಲ್‌ ಗಾಂಧಿ ಅವರನ್ನು ನವ ದೆಹಲಿಯಲ್ಲಿ ಭೇಟಿಯಾದ ಬೆನ್ನಲ್ಲೇ ಮತ್ತೊಂದೆಡೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ದೆಹಲಿ‌ ಮಟ್ಟದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ನಡೆದಿದ್ದು, ಡಿ.ಕೆ. ಶಿವಕುಮಾರ್ ಬಳಿಯೇ ಎರಡು ಪ್ರಬಲ ಖಾತೆಗಳಿವೆ, ಇದು ಪಕ್ಷ ಸಂಘಟನೆಗೆ ಅನುಕೂಲವಲ್ಲ. ಹೀಗಾಗಿ ಅಧ್ಯಕ್ಷರ ಬದಲಾವಣೆ ಮಾಡಿದರೆ ಸೂಕ್ತ ಎಂದು ರಾಜ್ಯ ನಾಯಕರಿಂದ ಒತ್ತಾಯ ಕೇಳಿಬಂದಿದೆ.

ಇನ್ನು ಹೈ ಕಮಾಂಡ್ ನಾಯಕರಿಂದಲೂ ಕೆಪಿಸಿಸಿಗೆ ನೂತನ ಸಾರಥಿ ನೀಡುವ ಬಗ್ಗೆ ಒಲವು ಹೆಚ್ಚಿದೆ ಎನ್ನಲಾಗಿದೆ. ನೂತನ ಅಧ್ಯಕ್ಷರ ಆಯ್ಕೆಯಾದರೇ ಕಾಂಗ್ರೆಸ್ ಒಳಗಿನ ಸಮಸ್ಯೆಗಳಿಗೆ ಇತಿಶ್ರೀ ಹಾಡಬಹುದು ಎಂದು ದೆಹಲಿ ಭೇಟಿ ವೇಳೆ ರಾಜ್ಯ ನಾಯಕರು ಹೇಳಿದ್ದಾರೆ. ಹೀಗಾಗಿ ರಾಜ್ಯ ನಾಯಕರ ಮಾತಿಗೆ ಬಹುತೇಕ ಮನ್ನಣೆ ಸಿಗುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ | CM Siddaramaiah: ಡಾ.ರಾಜ್‍ಕುಮಾರ್ ಕನಸಿನಂತೆ ಫಿಲ್ಮ್ ಸಿಟಿ ನಿರ್ಮಾಣ ಮಾಡ್ತೇವೆ ಎಂದ ಸಿದ್ದರಾಮಯ್ಯ

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ತನಕ ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಡಿ.ಕೆ.ಶಿವಕುಮಾರ್ ಮುಂದುವರಿಯುವ ಇರಾದೆ ಹೊಂದಿದ್ದಾರೆ. ಆದರೆ, ಮತ್ತೊಂದೆಡೆ ರಾಜ್ಯ ನಾಯಕರು ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಒತ್ತಡ ಹೇರುತ್ತಿದ್ದಾರೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಹೈ ಕಮಾಂಡ್‌ ಒಲವು ಹೊಂದಿದೆ ಎನ್ನಲಾಗಿದ್ದು, ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಗೆ ಇನ್ನೂ ಯಾವುದೇ ಸ್ಪಷ್ಟತೆ ಸಿಕ್ಕಿಲ್ಲ.

Continue Reading

ಬೆಂಗಳೂರು

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

Actor Darshan : ದರ್ಶನ್‌ ಫ್ಯಾನ್ಸ್‌ಗೆ (Actor Darshan Fans) ಕಾನೂನು ಕಂಟಕ ಎದುರಾಗಿದೆ. ಕೊಲೆ ಕೇಸ್‌ನಲ್ಲಿ ನೆಚ್ಚಿನ ನಟ ಜೈಲುಪಾಲಾಗಿದ್ದು, ದರ್ಶನ್‌ಗೆ ನೀಡಿರುವ ಖೈದಿ ನಂಬರ್‌ನನ್ನೇ ಸ್ಟಿಕ್ಟರ್‌ ಆಗಿ ಮಾಡಿಕೊಂಡು ಗಾಡಿಗಳಿಗೆ ಅಂಟಿಸಿಕೊಳ್ಳುತ್ತಿದ್ದಾರೆ. ಇದೀಗ ರೂಲ್ಸ್‌ ಬ್ರೇಕ್‌ ಮಾಡುವವರ ವಿರುದ್ಧ ಕೇಸ್‌ ದಾಖಲಿಸಲು ಚಿಂತನೆ ನಡೆದಿದೆ.

VISTARANEWS.COM


on

By

Actor Darshan
Koo

ಬೆಂಗಳೂರು: ಅಭಿಮಾನಿಗಳ ಗಾಡಿಗಳಲ್ಲಿ ದರ್ಶನ್ (Actor Darshan) ಖೈದಿ ನಂಬರ್ 6106 ಸ್ಟಿಕ್ಕರ್‌ಗಳಿಗೆ ಡಿಮ್ಯಾಂಡ್ ಹೆಚ್ಚಾಗಿದೆ. ಇದರ ಬೆನ್ನಲ್ಲೇ ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ ಎದುರಾಗಿದ್ದು, ರೂಲ್ಸ್‌ ಬ್ರೇಕ್‌ ಮಾಡಿದರೆ ಕೇಸ್‌ ಬೀಳುತ್ತೆ ಎಂಬ ಎಚ್ಚರಿಕೆಯನ್ನು ಬೆಂಗಳೂರು ಟ್ರಾಫಿಕ್‌ ಪೊಲೀಸರು (Traffic violation) ನೀಡಿದ್ದಾರೆ.

ಕೊಲೆ ಕೇಸ್​ನಲ್ಲಿ ನಟ ದರ್ಶನ್‌ ಜೈಲುಪಾಲಾಗಿದ್ದಾರೆ. ದರ್ಶನ್‌ಗೆ ಜೈಲಿನಲ್ಲಿ ಖೈದಿ ನಂಬರ್ 6106 ಅನ್ನು ನೀಡಲಾಗಿದೆ. ಈ ನಂಬರ್‌ ಅನ್ನೇ ಸ್ಟಿಕರ್‌ ಮಾಡಿಕೊಂಡಿರುವ ಫ್ಯಾನ್ಸ್ ತಮ್ಮ ವಾಹನಗಳಿಗೆ ಅಂಟಿಸಿಕೊಳ್ಳುತ್ತಿದ್ದಾರೆ. ಇದೀಗ ನಂಬರ್ ಪ್ಲೇಟ್ ಮರೆಮಾಚಿ ಸ್ಟಿಕ್ಕರ್ ಅಂಟಿಸಿದವರಿಗೆ ಸಂಕಷ್ಟ ಎದುರಾಗಿದೆ.

Actor Darshan

ಯಾವುದೇ ಕಾರಣಕ್ಕೂ ವಾಹನಗಳ ನಂಬರ್ ಪ್ಲೇಟ್ ಮರೆಮಾಚುವಂತಿಲ್ಲ. ನಂಬರ್‌ ಪ್ಲೇಟ್ ಇರುವ ಕಡೆ ಸ್ಟಿಕ್ಕರ್‌ಗಳನ್ನು ಅಂಟಿಸುವಂತಿಲ್ಲ. ಈ ರೀತಿ ಮಾಡಿದರೆ ಸಂಚಾರಿ ನಿಯಮ ಉಲ್ಲಂಘನೆ ಮಾಡಿದಂತೆ ಆಗುತ್ತದೆ. ಖೈದಿ ನಂಬರ್ ಸ್ಟಿಕ್ಕರ್ ಅಂಟಿಸಿ ನಂಬರ್ ಪ್ಲೇಟ್ ಮರೆ ಮಾಚಿರುವವರ ವಿರುದ್ಧ ಕೇಸ್ ದಾಖಲಿಸಲು ಟ್ರಾಫಿಕ್‌ ಪೊಲೀಸರು ಮುಂದಾಗಿದ್ದಾರೆ. ಡಿಫೆಕ್ಟಿವ್ ನಂಬರ್ ಪ್ಲೇಟ್ ಅಡಿ ಕೇಸ್ ದಾಖಲಾಗುತ್ತದೆ.

ದರ್ಶನ್ ಭೇಟಿಯಾಗಲು ಅಭಿಮಾನಿಯ ರಂಪಾಟ

ದರ್ಶನ್ ಭೇಟಿ ಮಾಡಬೇಕೆಂದು ಅಭಿಮಾನಿಯೊಬ್ಬ ರಂಪಾಟವಾಡಿರುವುದು ಕಂಡುಬಂದಿದೆ. ಜೈಲ್ ಚೆಕ್ ಪೋಸ್ಟ್ ಬಳಿ ರಸ್ತೆಯಲ್ಲಿ ಕುಳಿತ ಅಭಿಮಾನಿ, ದರ್ಶನ್ ನೋಡಬೇಕೆಂದು ಕಣ್ಣೀರು ಹಾಕಿದ್ದಾನೆ. ಮದ್ಯಪಾನ ಮಾಡಿ ಬಂದಿದ್ದ ವ್ಯಕ್ತಿ, ದರ್ಶನ್ ನೋಡಲೇ ಬೇಕು ಎಂದು ಪಟ್ಟು ಹಿಡಿದಿದ್ದರಿಂದ ಆತನನ್ನು ಮನವೊಲಿಸಲು ಪೊಲೀಸರು ಹೈರಾಣಾದರು.

ಇದನ್ನೂ ಓದಿ: T20 World Cup 2024: ದರ್ಶನ್‌ ಜೈಲಿಗೆ ಹೋದಾಗೆಲ್ಲ ವಿಶ್ವಕಪ್‌ ಗೆದ್ದ ಭಾರತ; ಹೀಗ್ಯಾಕೆ ಅಂದ್ರು ನೆಟ್ಟಿಗರು?

ಜೈಲಲ್ಲಿ ದರ್ಶನ್‌ ಭೇಟಿಯಾದ ನಟಿ ರಕ್ಷಿತಾ, ಪ್ರೇಮ್ ದಂಪತಿ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರನ್ನು (Actor Darshan) ಕೆಲ ಆಪ್ತರು ಭೇಟಿ ಮಾಡುತ್ತಿದ್ದಾರೆ. ಈ ನಡುವೆ ನಟಿ ರಕ್ಷಿತಾ, ಪ್ರೇಮ್ ದಂಪತಿ ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಭೇಟಿ ಬಳಿಕ ಪ್ರಕರಣದ ಬಗ್ಗೆ ರಕ್ಷಿತಾ, ಪ್ರೇಮ್ ದಂಪತಿ ಬೇಸರ ಹೊರಹಾಕಿದ್ದು, ಇಂತಹ ಪ್ರಕರಣ ನಡೆಯಬಾರದಿತ್ತು ಎಂದು ಹೇಳಿದ್ದಾರೆ.

ನಟ ದರ್ಶನ್ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಪ್ರತಿಕ್ರಿಯಿಸಿದ ನಟಿ ರಕ್ಷಿತಾ, ಈ ಘಟನೆ ನಡೆದಿರುವುದು ದುರಾದೃಷ್ಟಕರ. ನಮಗೆ ಈ ಪ್ರಕರಣದ ಬಗ್ಗೆ ಬೇಜಾರು ಇದೆ ಎಂದು ಹೇಳಿದರು.

ನಿರ್ದೇಶಕ ಜೋಗಿ ಪ್ರೇಮ್ ಪ್ರತಿಕ್ರಿಯಿಸಿ, ಪ್ರಕರಣ ನ್ಯಾಯಾಲಯದಲ್ಲಿದೆ. ನಾವು ಈ ಸಂದರ್ಭದಲ್ಲಿ ಪ್ರಕರಣದ ಈ ಬಗ್ಗೆ ಮಾತನಾಡುವುದು ಸರಿಯಲ್ಲ. ರೇಣುಕಾಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ, ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ಎಂದು ಹೇಳಿ, ಜೈಲಿನಲ್ಲಿ ದರ್ಶನ್ ಜತೆ ನಡೆದ ಮಾತುಕತೆ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದರು.

ಪ್ರಕರಣದ ಬಗ್ಗೆ ಪವಿತ್ರಾ ಗೌಡಗೆ ಏನೂ ಗೊತ್ತಿಲ್ಲ: ವಕೀಲ

ಪವಿತ್ರಾ ಗೌಡ ಪರ ವಕೀಲ ನಾರಾಯಣಸ್ವಾಮಿ ಪ್ರತಿಕ್ರಿಯಿಸಿ, ನ್ಯಾಯಾಂಗ ಬಂಧನದಲ್ಲಿದ್ದಾಗ ಎಲ್ಲರೂ ಚೆನ್ನಾಗಿಯೇ ಇರುತ್ತಾರೆ. ಯಾರಿಗೂ ಹಿಂಸೆ ಕೋಡಲು ಇಲ್ಲಿಗೆ ಕರೆದುಕೊಂಡು ಬರೋದಿಲ್ಲ. ಅವರ ಮನಪರಿವರ್ತನೆಯಾಗಲಿ ಎಂದು ಜೈಲಿಗೆ ಕರೆದುಕೊಂಡು ಬರಲಾಗುತ್ತದೆ. ಎಲ್ಲರೂ ಹೇಗೆ ಇರುತ್ತಾರೋ ಹಾಗೆ ಪವಿತ್ರಾ ಕೂಡ ಇರುತ್ತಾರೆ. ಅವರಿಗೆ ಸ್ಪೇಷಲ್ ಏನು ಇಲ್ಲ ಎಂದು ತಿಳಿಸಿದ್ದಾರೆ.

ಜಾಮೀನು ಅರ್ಜಿ ಯಾವಾಗ ಹಾಕಿಕೊಳ್ಳಬೇಕು ಎನ್ನುವುದಕ್ಕೆ ಕಾಯುತ್ತಿದ್ದೇವೆ. ಅದರ ಬಗ್ಗೆಯೇ ಚರ್ಚೆ ನಡೆಸಲು ಭೇಟಿ ಮಾಡಿದ್ದೆ. ಅವರಿಗೆ ಪ್ರಕರಣದ ಬಗ್ಗೆಯೇ ಏನೂ ತಿಳಿದಿಲ್ಲ. ಅವರಿಗೆ ಶಾಕ್ ಆಗಿದೆ. ಯಾವಾಗಲೂ ತಪ್ಪು ಮಾಡಿರಲಿಲ್ಲ, ಈ ರೀತಿಯಾದಾಗ ನೋವಾಗುತ್ತೆ. ತಪ್ಪು ಮಾಡಿರುವವರಿಗಾದರೆ ಅದರ ಅರಿವಿರುತ್ತದೆ. ನಾನು ಏನೂ ಮಾಡಿಲ್ಲ, ನನಗೆ ಯಾಕೆ ಇಂತ ಪರಿಸ್ಥಿತಿ ಎಂದು ಶಾಕ್‌ನಲ್ಲಿದ್ದಾರೆ. ಜುಲೈ 4ರ ಬಳಿಕ ಜಾಮೀನು ಅರ್ಜಿ ಬಗ್ಗೆ ಚಿಂತಿಸಲಾಗುವುದು ಎಂದು ಹೇಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Road Accident : ಬೆಂಗಳೂರಲ್ಲಿ ಬೈಕ್‌ ಸವಾರರಿಬ್ಬರ ಪ್ರಾಣ ಕಸಿದ ಹೈ ಸ್ಪೀಡ್‌

Road Accident : ಅತಿ ವೇಗ ಚಾಲನೆಯು ಬೈಕ್‌ ಸವಾರರಿಬ್ಬರ ಪ್ರಾಣವನ್ನೇ ಕಸಿದಿದೆ. ನಿಂತಿದ್ದ ಕಾಂಕ್ರೀಟ್‌ ಮಿಕ್ಸಿಂಗ್‌ ಲಾರಿಗೆ ಬೈಕ್‌ ಡಿಕ್ಕಿಯಾಗಿ ಸವಾರ ಮೃತಪಟ್ಟರೆ, ಮತ್ತೊಂದು ಕಡೆ ಬೈಕ್‌ ಸ್ಕಿಡ್‌ ಆಗಿ ಮತ್ತೊಬ್ಬ ಸವಾರನ ಪ್ರಾಣಪಕ್ಷಿ ಹಾರಿಹೋಗಿದೆ.

VISTARANEWS.COM


on

By

Road Accident
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಬ್ಬರು ಬೈಕ್‌ ಸವಾರರು ರಸ್ತೆ ಅಪಘಾತದಲ್ಲಿ (Road Accident ) ಪ್ರಾಣವನ್ನು ಕಳೆದುಕೊಂಡಿದ್ದಾರೆ. ಕಾಂಕ್ರೀಟ್ ಮಿಕ್ಸಿಂಗ್ ಲಾರಿಗೆ ಬೈಕ್‌ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ಮೃತಪಟ್ಟಿದ್ದಾನೆ. ಬೆಂಗಳೂರಿನ ಹೆಬ್ಬಾಳ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಜರ್ನಾಧನ (25) ಮೃತ ದುರ್ದೈವಿ.

ತಡರಾತ್ರಿ 2.30ರ ಸಮಯಕ್ಕೆ ಈ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿ ಬರುತ್ತಿದ್ದ ಜರ್ನಾಧನ ರಸ್ತೆ ಬದಿ ನಿಂತಿದ್ದ ಕಾಂಕ್ರೀಟ್ ಮಿಕ್ಸಿಂಟ್ ಲಾರಿಗೆ ಹಿಂಬದಿಯಿಂದ ಗುದ್ದಿದ್ದಾನೆ. ಗುದ್ದಿದ ರಭಸಕ್ಕೆ ಹಾರಿ ಕೆಳಗೆ ಬಿದ್ದ ಜರ್ನಾಧನನ ತಲೆಗೆ ಗಂಭೀರ ಪೆಟ್ಟಾಗಿದೆ.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಜನಾರ್ಧನನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ. ಬೆಂಗಳೂರಿನ ಮುತ್ಯಾಲ ನಗರ ನಿವಾಸಿಯಾಗಿರುವ ಜರ್ನಾಧನ ರಾತ್ರಿ ಕೆಲಸ ಮುಗಿಸಿ ಮನೆಗೆ ವಾಪಸ್‌ ಆಗುತ್ತಿದ್ದಾಗ ಈ ಘಟನೆ ನಡೆದಿದೆ. ಹೆಬ್ಬಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident: ಕೂಡ್ಲಿಗಿಯಲ್ಲಿ ಮತ್ತೊಂದು ರಸ್ತೆ ಅಪಘಾತ; ಇಬ್ಬರ ಸಾವು

ಬೈಕ್‌ನಿಂದ ಸ್ಕಿಡ್‌ ಆಗಿ ಕೆಳಗೆ ಬಿದ್ದ ಸವಾರ ಸಾವು

ಅತಿ ವೇಗ ಚಾಲನೆಯಿಂದ ಅಪಘಾತ ಸಂಭವಿಸಿದ್ದು, ಯುವಕನೊರ್ವ ಮೃತಪಟ್ಟಿದ್ದಾನೆ. ಬೈಕ್‌ನಿಂದ ಸ್ಕಿಡ್ ಆಗಿ ಕೆಳಗೆ ಬಿದ್ದ ಕುಮಾರ್ (30) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನಿನ್ನೆ ತಡರಾತ್ರಿ 1.30ಕ್ಕೆ ಬೆಂಗಳೂರಿನ ಬೊಮ್ಮನಹಳ್ಳಿ ಆಕ್ಸ್‌ಫರ್ಡ್ ಕಾಲೇಜು ಮುಂಭಾಗ ಘಟನೆ ನಡೆದಿದೆ.

ಕುಮಾರ್ ಮತ್ತು ನವೀನ್ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಬೈಕ್ ಸ್ಕಿಡ್ ಆಗಿ ಇಬ್ಬರು ಕೆಳಗೆ ಬಿದ್ದಿದ್ದಾರೆ. ಸ್ಥಳದಲ್ಲೇ ಕುಮಾರ್ ಮೃತಪಟ್ಟರೇ ನವೀನ್‌ ಗಂಭೀರ ಗಾಯಗೊಂಡಿದ್ದಾನೆ. ಸದ್ಯ ನವೀನ್ (20) ಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕುಮಾರ್‌ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಮಡಿವಾಳ ಸಂಚಾರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Shawarma: ನಾನ್‌ವೆಜ್ ಪ್ರಿಯರಿಗೆ ಬ್ಯಾಡ್‌ ನ್ಯೂಸ್‌; ಶೀಘ್ರದಲ್ಲೇ ರಾಜ್ಯದಲ್ಲಿ ಶವರ್ಮಾ ಬ್ಯಾನ್ ?

Shawarma: ಗೋಬಿ ಮಂಚೂರಿ ಹಾಗೂ ಕಬಾಬ್ ಬಳಿಕ ಇದೀಗ ರಾಜ್ಯದಲ್ಲಿ ಶವರ್ಮಾ ಬ್ಯಾನ್‌ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗುತ್ತಿದೆ. ಚಿಕನ್‌ ಶವರ್ಮಾಗಳಲ್ಲಿ ಬ್ಯಾಕ್ಟೀರಿಯಾ ಹಾಗೂ ಈಸ್ಟ್ ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಕೇರಳದಲ್ಲಿ ಈಗಾಗಲೇ ಶವರ್ಮಾ ತಿಂದು ಸಾಕಷ್ಟು ಜನ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ‌ ರಾಜ್ಯದಲ್ಲಿ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.

VISTARANEWS.COM


on

Shawarma
Koo

ಬೆಂಗಳೂರು: ಗೋಬಿ ಮಂಚೂರಿ ಹಾಗೂ ಕಬಾಬ್ ಬಳಿಕ ಇದೀಗ ರಾಜ್ಯದಲ್ಲಿ ಶವರ್ಮಾ (Shawarma) ಬ್ಯಾನ್‌ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎನ್ನಲಾಗುತ್ತಿದೆ. ಚಿಕನ್‌ ಶವರ್ಮಾಗಳಲ್ಲಿ ಬ್ಯಾಕ್ಟೀರಿಯಾ ಹಾಗೂ ಈಸ್ಟ್ ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಕೇರಳದಲ್ಲಿ ಈಗಾಗಲೇ ಶವರ್ಮಾ ತಿಂದು ಸಾಕಷ್ಟು ಜನ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ‌ ರಾಜ್ಯದಲ್ಲಿ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.

ಬೆಂಗಳೂರಿನಲ್ಲಿ ಶವರ್ಮಾ ಗುಣಮಟ್ಟ ಪರಿಶೀಲನೆ ನಡೆಸಿದ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ ಬೆಚ್ಚಿ ಬೀಳಿಸುವ ಅಂಶ ಕಂಡು ಬಂದು ಬಂದಿದೆ. ಶವರ್ಮಾಗಳಲ್ಲಿ ಅನಾರೋಗ್ಯಕ್ಕೆ ಕಾರಣವಾಗುವ ಬ್ಯಾಕ್ಟೀರಿಯಾ, ಈಸ್ಟ್ ಪತ್ತೆಯಾಗಿದೆ. ಬೆಂಗಳೂರು ಮಾತ್ರವಲ್ಲ ಹುಬ್ಬಳ್ಳಿ, ಮೈಸೂರು, ತುಮಕೂರು, ಮಂಗಳೂರು, ಬಳ್ಳಾರಿ ಸೇರಿದಂತೆ ಹಲವೆಡೆ ಪರೀಕ್ಷೆ ನಡೆಸಲಾಗಿದೆ.

ಶವರ್ಮಾ ತಯಾರಿಕೆಯಲ್ಲಿ ನೈಮರ್ಲ್ಯದ ಕೊರತೆ ಕಂಡು ಬರುತ್ತಿದೆ. ಅಲ್ಲದೆ ಧೀರ್ಘ ಕಾಲದವರೆಗೂ ಶೇಖರಣೆ ಮಾಡುವುದರಿಂದ ಇದರಲ್ಲಿ ಅಪಾಯಕಾರಿ ಬ್ಯಾಕ್ಟೀರಿಯಾ, ಈಸ್ಟ್ ಉತ್ಪತ್ತಿಯಾಗಿ ಅಪಾಯಕಾರಿಯಾಗಿ ಪರಿಣಮಿಸುತ್ತದೆ. ಶವರ್ಮಾ ತಿನ್ನುವುದರಿಂದ ಆರೋಗ್ಯದಲ್ಲಿ ಭಾರೀ ಪರಿಣಾಮ ಬೀರುತ್ತದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹೇಳಿದ್ದೇನು?

ಮಾಧ್ಯಮಗಳಲ್ಲಿ ಶವರ್ಮಾ ಸೇವಿಸಿ ಫುಡ್‌ ಪಾಯ್ಸನ್‌ ಆಗಿರುವ ಕುರಿತು ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಬಿಬಿಎಂಪಿ ವಲಯ, ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೈಸೂರು, ತುಮಕೂರು, ಧಾರವಾಡ, ಮಂಗಳೂರು, ಬಳ್ಳಾರಿ ಮತ್ತು ಬೆಳಗಾವಿ ಜಿಲ್ಲೆಗಳ ಕಾರ್ಪೋರೇಷನ್‌ ವ್ಯಾಪ್ತಿಗಳಲ್ಲಿ ಮಾರಾಟ ಮಾಡಲಾಗುತ್ತಿರುವ ಶವರ್ಮಾದ ಆಹಾರ ಮಾದರಿಗಳನ್ನ್ ವಿಶ್ಲೇಷಣೆಗೊಳಪಡಿಸಲಾಗಿದೆ. ಒಟ್ಟು 17 ಮಾದರಿಗಳಲ್ಲಿ 9 ಮಾದರಿಗಳು ಸುರಕ್ಷಿತವಾಗಿದ್ದರೆ 8 ಮಾದರಿಗಳಲ್ಲಿ ಬ್ಯಾಕ್ಟೀರಿಯಾ ಮತ್ತು ಈಸ್ಟ್‌ ಕಂಡು ಬಂದಿರುವುದರಿಂದ ಅಸುರಕ್ಷಿತ ಎಂದು ನಿರ್ಧರಿಸಲಾಗಿದೆ. ಅಸುರಕ್ಷಿತ ಎಂದು ವರದಿಯಾಗಿರುವ ಆಹಾರ ಮಾದರಿಗಳ ತಯಾರಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ.

ಎಲ್ಲ ಶವರ್ಮಾ ತಯಾರಕರು ಆಹಾರ ತಯಾರಿಕೆ, ಸಂಗ್ರಹಣೆ ಮತ್ತು ವಿತರಣೆಯ ಸಂದರ್ಭದಲ್ಲಿ ಸಂಪೂರ್ಣ ನೈರ್ಮಲ್ಯತೆ ಮತ್ತು ಗುಣಮಟ್ಟವನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ 2006ರ ಶೆಡ್ಯೂಲ್‌ 4ರ ಅನುಸಾರ ಕಾಪಾಡಲು ಸೂಚಿಸಲಾಗಿದೆ. ಜತೆಗೆ ಶವರ್ಮಾವನ್ನು ಪ್ರತಿ ದಿನ ಹೊಸದಾಗಿ ತಯಾರಿಸಿ ತಾಜಾ ಸ್ಥಿತಿಯಲ್ಲಿ ಮಾರಾಟ ಮಾಡಲು ಸೂಚಿಸಲಾಗಿದೆ. ಅಲ್ಲದೆ ಎಲ್ಲ ಶವರ್ಮಾ ಆಹಾರ ತಯಾರಕರು ತಮ್ಮ ಉದ್ದಿಮೆಗೆ ಎಫ್‌ಎಸ್‌ಎಸ್‌ಎಐ ನೋಂದಣಿ / ಪರವಾನಿಗೆಯನ್ನು ಪಡೆದುಕೊಳ್ಳುವುದಲ್ಲದೇ ಅದನ್ನು ತಮ್ಮ ವ್ಯಾಪಾರದ ಸ್ಥಳದಲ್ಲಿ ಪ್ರದರ್ಶಿಸಲು ಸೂಚಿಸಿದೆ.

ಜತೆಗೆ ಸಾರ್ವಜನಿಕರು ನೋಂದಣಿ / ಪರವಾನಿಗೆಯನ್ನು ಪಡೆದುಕೊಂಡ ಮಾರಾಟಗಾರರಿಂದಲೇ ಶವರ್ಮಾವನ್ನು ಖದೀದಿಸಲು ಸೂಚಿಸಲಾಗಿದೆ. ಮುಂದಿನ ಪರಿಶೀಲನೆ ವೇಳೆ ಆಹಾರ ತಯಾರಕರು ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ನಿಯಮಾನುಸಾರ ಕಾನೂನಾತ್ಮಕ ಕ್ರಮಗಳನ್ನು ಜರುಗಿಸಲಾಗುವುದು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Chemicals in Food: ಗೋಬಿ- ಕಬಾಬ್‌ ಆಯ್ತು‌, ಈಗ ಪಾನಿಪುರಿಯಲ್ಲೂ ಕ್ಯಾನ್ಸರ್‌ಕಾರಿ ವಿಷ ಪತ್ತೆ; ಸದ್ಯದಲ್ಲೇ ಬ್ಯಾನ್?

Continue Reading
Advertisement
Road Accident
ಮೈಸೂರು26 mins ago

Road Accident : ತಿರುವಿನಲ್ಲಿ ಕಂದಕಕ್ಕೆ ಉರುಳಿದ ಬಸ್‌; ಚಾಲಕ ಸೇರಿ ಮೂವರು ಗಂಭೀರ

KPCC President
ಪ್ರಮುಖ ಸುದ್ದಿ35 mins ago

KPCC President: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸುಳಿವು; ಲಿಂಗಾಯತರಿಗೆ ಅವಕಾಶ ನೀಡಲು ಒತ್ತಾಯ

Jayam Ravi married to superstar rajinikanth daughter
ಕಾಲಿವುಡ್38 mins ago

Jayam Ravi: ರಜನಿಕಾಂತ್‌ ಮಗಳ ಜತೆ ಜಯಂ ರವಿ ಮದುವೆ?

T20 World Cup 2024
ಕ್ರೀಡೆ47 mins ago

T20 World Cup 2024: ಸಂಭ್ರಮಾಚರಣೆ ವೇಳೆ ದುರಂತ: ಧ್ವಜ ಹಾರಿಸಲು ಹೋಗಿ ಬಿದ್ದ ಅಭಿಮಾನಿ; ವೈರಲ್‌ ವಿಡಿಯೊ ಇಲ್ಲಿದೆ

ಕ್ರೀಡೆ1 hour ago

Rohit Sharma: ವಿಶ್ವಕಪ್​ ಗೆದ್ದ ನಾಯಕ ರೋಹಿತ್​ಗೆ ಆಶೀರ್ವಾದ ಮಾಡಿದ ಕಾಂತಾರದ ‘ಪಂಜುರ್ಲಿ’ ದೈವ!

Actor Darshan
ಬೆಂಗಳೂರು1 hour ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

CM Siddaramaiah To Inaugurate Film Producers Association Building says build film city
ಸ್ಯಾಂಡಲ್ ವುಡ್1 hour ago

CM Siddaramaiah: ಡಾ.ರಾಜ್‍ಕುಮಾರ್ ಕನಸಿನಂತೆ ಫಿಲ್ಮ್ ಸಿಟಿ ನಿರ್ಮಾಣ ಮಾಡ್ತೇವೆ ಎಂದ ಸಿದ್ದರಾಮಯ್ಯ

Gold Rate Today
ಚಿನ್ನದ ದರ2 hours ago

Gold Rate Today: ಆಭರಣ ಖರೀದಿಗೆ ಇದು ಸೂಕ್ತ ಸಮಯ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

Mann Ki Baat
ದೇಶ2 hours ago

Mann Ki Baat: ʼಸಂವಿಧಾನದ ಬಗ್ಗೆ ಅಚಲ ನಂಬಿಕೆ ಇರಿಸಿದ್ದಕ್ಕೆ ಧನ್ಯವಾದʼ-ಮೋದಿ ಮನ್‌ ಕೀ ಬಾತ್‌ ಹೈಲೈಟ್ಸ್‌ ಹೀಗಿದೆ ನೋಡಿ

Road Accident
ಬೆಂಗಳೂರು2 hours ago

Road Accident : ಬೆಂಗಳೂರಲ್ಲಿ ಬೈಕ್‌ ಸವಾರರಿಬ್ಬರ ಪ್ರಾಣ ಕಸಿದ ಹೈ ಸ್ಪೀಡ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಬೆಂಗಳೂರು1 hour ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ21 hours ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ6 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

ಟ್ರೆಂಡಿಂಗ್‌