T20 World Cup | ಇಂಗ್ಲೆಂಡ್‌ ವಿರುದ್ಧವೂ ಪಂತ್‌ ಕಣಕ್ಕಿಳಿಯುವ ಸುಳಿವು ನೀಡಿದ ಡ್ರಾವಿಡ್‌ - Vistara News

Latest

T20 World Cup | ಇಂಗ್ಲೆಂಡ್‌ ವಿರುದ್ಧವೂ ಪಂತ್‌ ಕಣಕ್ಕಿಳಿಯುವ ಸುಳಿವು ನೀಡಿದ ಡ್ರಾವಿಡ್‌

ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಎಡವಿದ ರಿಷಭ್‌ ಪಂತ್‌ಗೆ ಕೋಚ್‌ ದ್ರಾವಿಡ್‌ ಬೆಂಬಲ ವ್ಯಕ್ತಪಡಿಸಿದ್ದಾರೆ.

VISTARANEWS.COM


on

pant
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಡಿಲೇಡ್‌: ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳುವಲ್ಲಿ ಎಡವಿದ ಟೀಮ್‌ ಇಂಡಿಯಾ ಯುವ ವಿಕೆಟ್‌ ಕೀಪರ್‌-ಎಡಗೈ ಬ್ಯಾಟರ್‌ ರಿಷಭ್‌ ಪಂತ್‌ ಇಂಗ್ಲೆಂಡ್‌ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿಯೂ ಕಣಕ್ಕಿಳಿಯುವ ಬಗ್ಗೆ ತಂಡದ ಕೋಚ್ ರಾಹುಲ್‌ ದ್ರಾವಿಡ್‌ ಸುಳಿವು ನೀಡಿದ್ದಾರೆ.

ಟಿ20 ವಿಶ್ವ ಕಪ್‌ನಲ್ಲಿ ಭಾರತ ಆಡಿದ ಮೊದಲ ನಾಲ್ಕು ಪಂದ್ಯಗಳಲ್ಲಿ ಅನುಭವಿ ಹಿರಿಯ ಆಟಗಾರ ದಿನೇಶ್‌ ಕಾರ್ತಿಕ್‌ ಆಡಿದ್ದರೂ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಎಡವಿದ್ದರು. ಈ ನಿಟ್ಟಿನಲ್ಲಿ ಕ್ರಿಕೆಟ್‌ ಪಂಡಿತರು ಪಂತ್‌ಗೆ ಅವಕಾಶ ನೀಡುವಂತೆ ಒತ್ತಾಸೆ ಮಾಡಿದ್ದರು. ಅದರಂತೆ ಜಿಂಬಾಬ್ವೆ ವಿರುದ್ಧದ 5ನೇ ಪಂದ್ಯದಲ್ಲಿ ಪಂತ್‌ಗೆ ಅವಕಾಶ ನೀಡಲಾಯಿತು. ಆದರೆ ಪಂತ್‌ ಈ ಪಂದ್ಯದಲ್ಲಿ 3 ರನ್‌ಗೆ ವಿಕೆಟ್‌ ಒಪ್ಪಿಸಿ ನಿರಾಶೆ ಮೂಡಿಸಿದರು. ಪಂತ್‌ ಅವರ ಈ ವೈಫಲ್ಯಕ್ಕೆ ಎಲ್ಲಡೆಯಿಂದ ವಿರೋಧ ವ್ಯಕ್ತವಾಗಿತ್ತು. ಪಂತ್‌ಗೆ ಇನ್ನೂ ಬುದ್ಧಿ ಬಂದಿಲ್ಲ ಎಂಬ ಟೀಕೆಗಳು ಟ್ವಿಟರ್‌ನಲ್ಲಿ ಕೇಳಿಬಂದಿತ್ತು.

ಇದೀಗ ಪಂತ್‌ ವಿಚಾರದಲ್ಲಿ ಮಾತನಾಡಿದ ತಂಡದ ಕೋಚ್‌ ರಾಹುಲ್‌ ದ್ರಾವಿಡ್‌, ಆಟಗಾರರ ಬಗ್ಗೆ ಒಂದು ಪಂದ್ಯದಿಂದ ನಿರ್ಧರಿಸಲಾಗದು. ಒಂದು ಪಂದ್ಯದ ವೈಫಲ್ಯವನ್ನು ಮುಂದಿಟ್ಟು ಬಳಿಕದ ಪಂದ್ಯದಲ್ಲಿ ಆಡಿಸಬೇಕೆ, ಬೇಡವೇ ಎಂಬ ನಿರ್ಧಾರವಾಗದು. ನಾವೆಂದು ಪಂತ್‌ ಮೇಲಿನ ವಿಶ್ವಾಸವನ್ನು ಕಳೆದುಕೊಂಡಿಲ್ಲ. ನಮ್ಮ ತಂಡದ 15 ಆಟಗಾರರ ಬಗ್ಗೆ ನಮಗೆ ವಿಶ್ವಾಸವಿದೆ. ಆದರೆ 11 ಆಟಗಾರರನ್ನು ಮಾತ್ರ ಆಡಿಸಲು ಸಾಧ್ಯ. ಕೆಲ ಪರಿಸ್ಥಿತಿಗೆ ತಕ್ಕಂತೆ ಆಟಗಾರರನ್ನು ಆಡಿಸುತ್ತೇವೆ ಎಂದು ಹೇಳುವ ಮೂಲಕ ಪಂತ್‌ಗೆ ಮುಂದಿನ ಪಂದ್ಯದಲ್ಲಿಯೂ ಅವಕಾಶ ನೀಡುವ ಮುನ್ಸೂಚನೆ ನೀಡಿದ್ದಾರೆ.

ಇದನ್ನೂ ಓದಿ | T20 World Cup | ಈ ತಂಡ ವಿಶ್ವ ಕಪ್‌ ಗೆಲ್ಲುವುದು ಖಚಿತ; ಎಬಿಡಿ ಆಯ್ಕೆಯ ತಂಡ ಯಾವುದು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Maruti Swift : ಹೊಸ ಮಾರುತಿ ಸ್ವಿಫ್ಟ್​ ಕಾರಿನಲ್ಲಿದೆ 50ಕ್ಕೂ ಹೆಚ್ಚು ಫೀಚರ್​ಗಳು

Maruti Swift: ಕಾರಿನಲ್ಲಿ ವೈ-ಫೈ ಮೊಬೈಲ್‌ ಚಾರ್ಜರ್‌, ಹಿಂಭಾಗದಲ್ಲಿ ಏಸಿ ವೆಂಟ್‌, ಟೆಲಿಮ್ಯಾಟಿಕ್ಸ್‌ ಮತ್ತಿತರ ಹೊಸ ಫೀಚರ್​ಗಳನ್ನು ನೀಡಲಾಗಿದೆ. ಈ ನಾಲ್ಕನೆ ತಲೆಮಾರಿನ ಸ್ವಿಫ್ಟ್‌, ʼಬಿʼ ವಿಭಾಗದ ವಾಹನಗಳಲ್ಲಿ ಸಾಮಾನ್ಯವಾಗಿರುವ ಎಲ್‌ಇಡಿ ಪ್ರೊಜೆಕ್ಟರ್​, ಹೆಡ್‌ಲೈಟ್ಸ್‌ ಮತ್ತು ಟೇಲ್‌ಲೈಟ್ಸ್‌ಗಳನ್ನು ಸಹ ಒಳಗೊಂಡಿದೆ ಎಂದು ಮಾರುತಿ ಸುಜುಕಿ ಕಂಪನಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

VISTARANEWS.COM


on

Maruti Swift
Koo

ಬೆಂಗಳೂರು: ಐಷಾರಾಮಿ, ಆರಾಮದಾಯಕ ಮತ್ತು ಇಂಧನ ದಕ್ಷತೆಯ ಕಾರುಗಳ ವಿಭಾಗದಲ್ಲಿ (ಪ್ರೀಮಿಯಂ ಹ್ಯಾಚ್‌ಬ್ಯಾಕ್​ ) ಮಾರುತಿ ಸುಜುಕಿ ಕಂಪನಿಯು ದೇಶಿ ಮಾರುಕಟ್ಟೆಗೆ ಹೊಸದಾಗಿ ಪರಿಚಯಿಸಲಿರುವ ʼಎಪಿಕ್‌ ನ್ಯೂ ಸ್ವಿಫ್ಟ್‌ʼ ಕಾರ್‌ (Maruti Swift) 50ಕ್ಕೂ ಹೆಚ್ಚು ವೈಶಿಷ್ಟತೆಗಳನ್ನು ಒಳಗೊಂಡಿದೆ. ಇದು ನಾಲ್ಕನೇ ಪೀಳಿಗೆಯ ಸ್ವಿಫ್ಟ್ ಕಾರಾಗಿದ್ದು ಇದು 26 ಕಿಲೋಮೀಟರ್​ ಮೈಲೇಜ್ ಕೊಡುವುದಾಗಿ ಕಂಪನಿ ಹೇಳಿಕೊಂಡಿದೆ.

ಕಾರಿನಲ್ಲಿ ವೈ-ಫೈ ಮೊಬೈಲ್‌ ಚಾರ್ಜರ್‌, ಹಿಂಭಾಗದಲ್ಲಿ ಏಸಿ ವೆಂಟ್‌, ಟೆಲಿಮ್ಯಾಟಿಕ್ಸ್‌ ಮತ್ತಿತರ ಹೊಸ ಫೀಚರ್​ಗಳನ್ನು ನೀಡಲಾಗಿದೆ. ಈ ನಾಲ್ಕನೆ ತಲೆಮಾರಿನ ಸ್ವಿಫ್ಟ್‌, ʼಬಿʼ ವಿಭಾಗದ ವಾಹನಗಳಲ್ಲಿ ಸಾಮಾನ್ಯವಾಗಿರುವ ಎಲ್‌ಇಡಿ ಪ್ರೊಜೆಕ್ಟರ್​, ಹೆಡ್‌ಲೈಟ್ಸ್‌ ಮತ್ತು ಟೇಲ್‌ಲೈಟ್ಸ್‌ಗಳನ್ನು ಸಹ ಒಳಗೊಂಡಿದೆ ಎಂದು ಮಾರುತಿ ಸುಜುಕಿ ಕಂಪನಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ʼಎಪಿಕ್ ನ್ಯೂ ಸ್ವಿಫ್ಟ್ʼ ನ ಇತರ ವೈಶಿಷ್ಟತೆಗಳು

ʼಎಪಿಕ್ ನ್ಯೂ ಸ್ವಿಫ್ಟ್ʼ ಉತ್ತಮ ಇಂಧನ ದಕ್ಷತೆ ಹೊಂದಿದೆ. ಸ್ವಯಂಚಾಲಿತ ಮಾದರಿಯಲ್ಲಿ ಇಂಧನ ದಕ್ಷತೆಯು ಶೇ 14ರಷ್ಟು ಸುಧಾರಿಸಿದೆ. ಮ್ಯಾನ್ಯುವಲ್‌ನಲ್ಲಿ ಇಂಧನ ದಕ್ಷತೆಯು ಶೇ 10 ರಷ್ಟು ಸುಧಾರಿಸಿದೆ. ಮೈಲೇಜ್‌ಗೆ ಸಂಬಂಧಿಸಿದಂತೆ, ಸ್ವಯಂಚಾಲಿತ ಮಾದರಿಯಲ್ಲಿ ಮೈಲೇಜ್ 25.7 ಕಿಮೀ/ಲೀಟರ್‌ ಮತ್ತು ಮ್ಯಾನ್ಯುವಲ್‌ನಲ್ಲಿ ಇದು 24.85 ಕಿಮೀ/ಲೀಟರ್‌ ನೀಡುತ್ತದೆ.. ಇವೆರಡೂ ಈ ವಿಭಾಗದಲ್ಲಿ ಗರಿಷ್ಠ ಮೈಲೇಜ್ ಅಗಿದೆ.

ಇದನ್ನೂ ಓದಿ: Powerful Bikes : 2.5 ಲಕ್ಷ ರೂ.ಗಿಂತಲೂ ಕಡಿಮೆ ಬೆಲೆಗೆ ಸಿಗ್ತವೆ ಈ 5 ಪವರ್​ಫುಲ್ ಬೈಕ್​ಗಳು

ಸ್ವಿಫ್ಟ್‌ನಲ್ಲಿ ಬಳಸಲಾದ ಹೊಸ ಎಂಜಿನ್ ಕಾರ್ಬನ್‌ ಡೈಆಕ್ಸೈಡ್‌ (ಸಿಒ2) ಹೊರಸೂಸುವಿಕೆಯನ್ನು ಶೇ 12ವರೆಗೆ ಕಡಿಮೆ ಮಾಡುತ್ತದೆ. ಕಾರಿನ ಎಲ್ಲ ಮಾದರಿಗಳಲ್ಲಿ ಆರು ಏರ್‌ಬ್ಯಾಗ್‌ಗಳು ಇರಲಿವೆ. ಇದು ಸ್ಟ್ಯಾಂಡರ್ಡ್ ಫೀಚರ್ ಆಗಿದೆ.

ಪ್ರೀಮಿಯಂ ಹ್ಯಾಚ್ ವಿಭಾಗವು ಮುಂಬರುವ ದಿನಗಳಲ್ಲಿ ಗಮನಾರ್ಹವಾಗಿ ಬೆಳೆಯುವುದನ್ನು ನಾವು ಎದುರು ನೋಡುತ್ತಿದ್ದೇವೆ. ಸದ್ಯಕ್ಕೆ ವಾರ್ಷಿಕ 7 ಲಕ್ಷದಂತೆ ಮಾರಾಟವಾಗುತ್ತಿರುವ ಈ ವಿಭಾಗದ ಕಾರುಗಳ ಮಾರಾಟವು 2030ರ ವೇಳೆಗೆ, 10 ಲಕ್ಷಕ್ಕೆ ಏರಿಕೆಯಾಗಲಿದೆ ಎಂಬುದು ನಮ್ಮ ನಿರೀಕ್ಷೆಯಾಗಿದೆ. ಇದು ಗಮನಾರ್ಹವಾಗಿ ಬೆಳೆಯುತ್ತಿರುವ ವಿಭಾಗವಾಗಿದೆ. ಪ್ರೀಮಿಯಂ ಹ್ಯಾಚ್ ವಿಭಾಗಕ್ಕೆ ಸ್ವಿಫ್ಟ್ ಪುನಶ್ಚೇತನ ನೀಡಲಿದೆ ಎಂಬುದು ನಮ್ಮ ದೃಢ ನಂಬಿಕೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಬಣ್ಣಗಳ ಆಯ್ಕೆ

ಎರಡು ಆ್ಯಕ್ಸೆಸರಿ ಪ್ಯಾಕೇಜ್‌ಗಳಾದ ರೇಸಿಂಗ್ ರೋಡ್‌ಸ್ಟಾರ್ ಮತ್ತು ಥ್ರಿಲ್ ಚೇಸರ್ ನೀಡುತ್ತದೆ. ಎಪಿಕ್ ನ್ಯೂ ಸ್ವಿಫ್ಟ್ – ಎರಡು ಹೊಸ ಬಣ್ಣಗಳಾದ ಲಸ್ಟರ್ ಬ್ಲೂ ಮತ್ತು ನೋವೆಲ್ ಆರೆಂಜ್‌ನಲ್ಲಿ ಲಭ್ಯ ಇರಲಿದೆ. ಜೊತೆಗೆ ಸಿಜ್ಲಿಂಗ್ ರೆಡ್, ಪರ್ಲ್ ಆರ್ಕ್ಟಿಕ್ ವ್ಹೈಟ್, ಮ್ಯಾಗ್ಮಾ ಗ್ರೇ ಒಳಗೊಂಡಿರುವ ವ್ಯಾಪಕ ಶ್ರೇಣಿಯ ಬಣ್ಣಗಳಲ್ಲಿಯೂ ದೊರೆಯಲಿದೆ. ಮೂರು ಡ್ಯುಯಲ್-ಟೋನ್ ಬಣ್ಣದ ಆಯ್ಕೆಗಳಾದ – ಲಸ್ಟರ್ ಬ್ಲೂ ಜೊತೆಗೆ ಮಿಡ್‌ನೈಟ್‌ ಬ್ಲ್ಯಾಕ್ ರೂಫ್‌, ಸಿಜ್ಲಿಂಗ್ ರೆಡ್ ಜೊತೆಗೆ ಮಿಡ್‌ನೈಟ್‌ ಬ್ಲ್ಯಾಕ್ ರೂಫ್‌, ಪರ್ಲ್ ಆರ್ಕ್ಟಿಕ್ ವೈಟ್ ಜೊತೆಗೆ ಮಿಡ್‌ನೈಟ್‌ ಬ್ಲ್ಯಾಕ್ ರೂಫ್‌ ನಲ್ಲಿಯೂ ಸಹ ಲಭ್ಯ ಇವೆ

ಸ್ವಿಫ್ಟ್​ ಭಾರತದಲ್ಲಿ ಸುಮಾರು 3 ದಶಲಕ್ಷ ಗ್ರಾಹಕರನ್ನು ಹೊಂದಿದೆ

ಸ್ವಿಫ್ಟ್ ಕಾರನ್ನು ಭಾರತದಿಂದ 39 ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ಹಣಕಾಸು ವರ್ಷ 2023-24 ರಲ್ಲಿ, 33,000 ಕ್ಕೂ ಹೆಚ್ಚು ಸ್ವಿಫ್ಟ್‌ಗಳನ್ನು ರಫ್ತು ಮಾಡಲಾಗಿದೆ. ಮಾರುತಿ ಸುಜುಕಿಯ ಮುಂಚೂಣಿ 3 ರಫ್ತು ಮಾದರಿಗಳಲ್ಲಿ ಸ್ವಿಫ್ಟ್ ಕೂಡ ಸೇರಿದೆ.

ಕರ್ನಾಟಕದ ಮಾರುಕಟ್ಟೆ ಹೇಗಿದೆ?

ಕರ್ನಾಟಕ ಮಾರುಕಟ್ಟೆಯಲ್ಲಿ, ಮಾರುತಿ ಸುಜುಕಿ 1,15,000 ವಾಹನಗಳನ್ನು ಮಾರಾಟ ಮಾಡಿದ್ದು, ಇದು ಶೇ 19ರಷ್ಟು ಬೆಳವಣಿಗೆಯಾಗಿದೆ. ಬೆಂಗಳೂರಿನಲ್ಲಿ 70,000 ಕಾರ್‌ಗಳನ್ನು ಮಾರಾಟ ಮಾಡಲಾಗಿದ್ದು, ರಾಜ್ಯದಲ್ಲಿನ ಒಟ್ಟಾರೆ ಮಾರಾಟದ ಶೇ 60ರಷ್ಟು ಪಾಲು ಹೊಂದಿದೆ. ಬೆಂಗಳೂರಿನಲ್ಲಿನ ಮಾರಾಟವು ಶೇ 15ರಷ್ಟು ಏರಿಕೆಯಾಗಿದೆ. ಕರ್ನಾಟಕದಲ್ಲಿ ಮಾರುತಿ ಸುಜುಕಿಯು 186 ಮಾರಾಟ ಕೇಂದ್ರಗಳು ಮತ್ತು 244 ಸರ್ವೀಸ್‌ ಕೇಂದ್ರಗಳನ್ನು ಹೊಂದಿದೆ.

Continue Reading

ವಿಜ್ಞಾನ

Nuclear Test In Pokhran: ಭಾರತ ಮೊದಲ ಪರಮಾಣು ಪರೀಕ್ಷೆ ನಡೆಸಿ ಇಂದಿಗೆ 50 ವರ್ಷ; ಏನಿದು ಸ್ಮೈಲಿಂಗ್‌ ಬುದ್ಧ?

ಭಾರತ ಪರಮಾಣು ಶಕ್ತಿ ರಾಷ್ಟ್ರವಾಗಿ ಇಂದಿಗೆ 50 ವರ್ಷ. ಇಂದಿಗೆ ಸುಮಾರು 50 ವರ್ಷಗಳ ಹಿಂದೆ ಭಾರತ ರಾಜಸ್ಥಾನದ ಪೋಖ್ರಾನ್‌ನಲ್ಲಿ ತನ್ನ ಮೊದಲ ಪರಮಾಣು ಪರೀಕ್ಷೆಯನ್ನು (Nuclear Test In Pokhran) ನಡೆಸಿತ್ತು. ಈ ಕುರಿತ ಕುತೂಹಲಕರ ಹಿನ್ನೋಟ ಇಲ್ಲಿದೆ.

VISTARANEWS.COM


on

By

Nuclear test at Pokhran
Koo

ಇಂದಿಗೆ 50 ವರ್ಷಗಳ ಹಿಂದೆ ಭಾರತದ (India) ಇತಿಹಾಸದಲ್ಲಿ ಒಂದು ಅಭೂತಪೂರ್ವ ಕ್ಷಣ ದಾಖಲಾಗಿತ್ತು. ಅದುವೇ ಅಣು ಪರೀಕ್ಷೆ. ಪೋಖ್ರಾನ್‌ನಲ್ಲಿ ಪರಮಾಣು ಪರೀಕ್ಷೆ (Nuclear Test In Pokhran) ನಡೆಸಲು ಭಾರತಕ್ಕೆ ಸುಮಾರು ಎರಡು ವರ್ಷಗಳ ತಯಾರಿ ಬೇಕಾಯಿತು. ಆಗಿನ ಪ್ರಧಾನಿಯಾಗಿದ್ದ (Prime Minister) ಇಂದಿರಾ ಗಾಂಧಿಯವರು (Indira gandhi) 1972ರ ಸೆಪ್ಟೆಂಬರ್‌ನಲ್ಲಿ ಸ್ವದೇಶಿ ವಿನ್ಯಾಸದ ಪರಮಾಣು ಸಾಧನವನ್ನು ಸ್ಫೋಟಿಸಲು ಬಿಎಆರ್‌ಸಿ (BARC) ವಿಜ್ಞಾನಿಗಳಿಗೆ ಅನುಮತಿ ನೀಡಿದ್ದರು.

ಭಾರತ ಇಂದು ರಾಜಸ್ಥಾನದ ಪೋಖ್ರಾನ್‌ನಲ್ಲಿ ತನ್ನ ಮೊದಲ ಪರಮಾಣು ಪರೀಕ್ಷೆಯ 50ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಅಂದಿನ ಪರೀಕ್ಷೆ ಭಾರತವನ್ನು ಪರಮಾಣು ಶಕ್ತಿಯನ್ನಾಗಿ ರೂಪಿಸಿತು.

ಸ್ಮೈಲಿಂಗ್ ಬುದ್ಧ ಹೆಸರು ನೀಡಿದ್ದು ಯಾಕೆ?

ಈ ಪರೀಕ್ಷೆಗೆ ‘ಸ್ಮೈಲಿಂಗ್ ಬುದ್ಧ’ ಎಂಬ ಸಂಕೇತನಾಮವನ್ನು ನೀಡಲಾಯಿತು. 1974ರ ಮೇ 18ರಂದು ಆ ವರ್ಷದ ಬುದ್ಧ ಪೂರ್ಣಿಮೆಯಂದು ಪರೀಕ್ಷೆಯನ್ನು ನಡೆಸಲಾಗಿದ್ದರಿಂದ ಈ ಹೆಸರನ್ನು ಆಯ್ಕೆ ಮಾಡಲಾಯಿತು. “ಬುದ್ಧ ಅಂತಿಮವಾಗಿ ಮುಗುಳ್ನಕ್ಕ” ಎಂಬುದು ಭಾರತದ ಪ್ರಧಾನ ಪರಮಾಣು ಸಂಶೋಧನಾ ಸಂಸ್ಥೆ ಭಾಭಾ ಪರಮಾಣು ಸಂಶೋಧನಾ ಕೇಂದ್ರದ (BARC) ನಿರ್ದೇಶಕ ರಾಜಾ ರಾಮಣ್ಣ ಅವರು ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಸಂದೇಶವನ್ನು ರವಾನಿಸಿದ್ದರು!


ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (ಯುಎನ್‌ಎಸ್‌ಸಿ) ಕಾಯಂ ಸದಸ್ಯತ್ವ ಹೊಂದಿರದ ರಾಷ್ಟ್ರವೊಂದು ನಡೆಸಿದ ಮೊದಲ ಪರಮಾಣು ಪರೀಕ್ಷೆ ಇದಾಗಿದೆ.

ಪೋಖ್ರಾನ್‌ನಲ್ಲಿ ಸ್ಫೋಟಿಸಿದ ಸಾಧನದ ಬಗ್ಗೆ ಚರ್ಚೆಯಾಗಿದ್ದರೂ, ಇದು ಸುಮಾರು 8- 12 ಕಿಲೋ ಟನ್‌ಗಳಷ್ಟು ಟಿಎನ್‌ಟಿ (ಪರಮಾಣು ಪರೀಕ್ಷೆ ಮಾಪನ) ಎಂದು ನಂಬಲಾಗಿದೆ. ಪರೀಕ್ಷೆಯ ಪ್ರಮುಖ ಅಂಶವೆಂದರೆ ಭಾರತವು ಯುನೈಟೆಡ್ ಸ್ಟೇಟ್ಸ್ ಮತ್ತು ಇತರ ಗುಪ್ತಚರ ಸಂಸ್ಥೆಗಳ ಪತ್ತೆಯನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದು. ಇಂತಹ ಪರೀಕ್ಷೆಗಳು ಪರಮಾಣು ಪ್ರಸರಣಕ್ಕೆ ಕಾರಣವಾಗಬಹುದು ಎಂದು ಹೇಳಿದ ಅಮೆರಿಕದಂತಹ ರಾಷ್ಟ್ರದ ನಿರ್ಬಂಧಗಳ ಸರಣಿಯನ್ನು ದೇಶವು ಎದುರಿಸಿತು.


ಎರಡು ವರ್ಷಗಳ ತಯಾರಿ

ಈ ಪರೀಕ್ಷೆಯನ್ನು ನಡೆಸಲು ಭಾರತಕ್ಕೆ ಸುಮಾರು ಎರಡು ವರ್ಷಗಳ ತಯಾರಿ ಬೇಕಾಯಿತು. ಇಂದಿರಾ ಗಾಂಧಿಯವರು 1972ರ ಸೆಪ್ಟೆಂಬರ್‌ನಲ್ಲಿ ಸ್ವದೇಶಿ ವಿನ್ಯಾಸದ ಪರಮಾಣು ಸಾಧನವನ್ನು ಸ್ಫೋಟಿಸಲು ಬಿಎಆರ್‌ಸಿ ವಿಜ್ಞಾನಿಗಳಿಗೆ ಅನುಮತಿ ನೀಡಿದ್ದರು.

ಇದನ್ನೂ ಓದಿ: Chinese Scientists: ಇನ್ನು ಮನುಷ್ಯರು 130 ವರ್ಷ ಬದುಕಬಹುದು! ಚೀನಾ ವಿಜ್ಞಾನಿಗಳ ಸಂಶೋಧನೆ

ಪೋಖ್ರಾನ್-II ಪರೀಕ್ಷೆ

1974ರ ಅನಂತರ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ 1998ರಲ್ಲಿ ಭಾರತವು ಅದೇ ಸ್ಥಳದಲ್ಲಿ ಪೋಖ್ರಾನ್- II ಹೆಸರಿನಲ್ಲಿ ಮತ್ತೊಂದು ಪರಮಾಣು ಪರೀಕ್ಷೆ ನಡೆಸಿತು. ಈ ಪರೀಕ್ಷೆ ಮೇ 1998ರಲ್ಲಿ ಪೋಖ್ರಾನ್‌ನಲ್ಲಿ ಐದು ಪರಮಾಣು ಸ್ಫೋಟಗಳ ಸರಣಿಯನ್ನು ಕಂಡವು. ಪೋಖ್ರಾನ್-II ಪರೀಕ್ಷೆಗಳ ವಾರ್ಷಿಕೋತ್ಸವದ ನೆನಪಿಗಾಗಿ ಪ್ರತಿ ವರ್ಷ ಮೇ 11ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ. 2020ರಿಂದ ಭಾರತವು 1974ರ ಪೋಖ್ರಾನ್ ಪರೀಕ್ಷೆಗಳ ವಾರ್ಷಿಕೋತ್ಸವವನ್ನು ಆಚರಿಸಲು ಪ್ರಾರಂಭಿಸಿತ್ತು.

Continue Reading

ಆಹಾರ/ಅಡುಗೆ

Famous Food of Bangalore: ಬೆಂಗಳೂರಿಗೆ ಬಂದಾಗ ಈ ಖಾದ್ಯಗಳ ರುಚಿ ನೋಡಲು ಮರೆಯಬೇಡಿ!

Famous Food of bangalore: ಬೆಂಗಳೂರಿಗೆ ಹೋಗುವ ಪ್ಲ್ಯಾನ್ ಇದ್ದರೆ ಇಲ್ಲಿನ ಕೆಲವು ರುಚಿಕರವಾದ ಖಾದ್ಯವನ್ನು ಸವಿಯಲು ಮರೆಯದಿರಿ. ಹಾಗೆಯೇ ಈ ಖಾದ್ಯಗಳನ್ನು ಮನೆಯಲ್ಲೂ ತಯಾರಿಸಬಹುದು. ಆಹಾರ ಪ್ರಿಯರಿಗೆ ಇಲ್ಲಿದೆ ಉಪಯುಕ್ತ ಮಾಹಿತಿ.

VISTARANEWS.COM


on

By

Famous Food of bangalore
Koo

ಇಡ್ಲಿ (Idli), ದೋಸೆ (dose), ವಿವಿಧ ಬಗೆಯ (Famous Food of Bangalore) ರೈಸ್, ಮೈಸೂರು ಪಾಕ್ (mysore pak) ಸೇರಿದಂತೆ ವಿವಿಧ ಸಿಹಿ ತಿನಿಸುಗಳು ಎಂಥವರ ಬಾಯಲ್ಲೂ ನೀರೂರುವಂತೆ ಮಾಡುತ್ತದೆ. ದಕ್ಷಿಣ ಭಾರತೀಯ (south india) ಪಾಕಪದ್ಧತಿಯು ಸುವಾಸನೆ ಮತ್ತು ವಿವಿಧ ರೆಸಿಪಿಗಳ ರುಚಿಕರ ಸವಿಯಿಂದ ತುಂಬಿರುತ್ತದೆ. ಕರಿಬೇವಿನ ಎಲೆಗಳು, ಹುಣಸೆಹಣ್ಣು, ಹಸಿರು ಮತ್ತು ಕೆಂಪು ಮೆಣಸಿನಕಾಯಿ, ತೆಂಗಿನ ಹಾಲು, ಕರಿಮೆಣಸು ಹೀಗೆ ಬಗೆಬಗೆಯ ಮಸಾಲೆಗಳು ಮತ್ತು ಗಿಡಮೂಲಿಕೆಗಳೊಂದಿಗೆ ಭಕ್ಷ್ಯಗಳನ್ನು ಸಿದ್ಧಪಡಿಸಲಾಗುತ್ತದೆ.

ಬೆಂಗಳೂರಿಗೆ (bengaluru) ಪ್ರಯಾಣ ಮಾಡುವ ಯೋಜನೆ ಇದ್ದರೆ ಇಲ್ಲಿನ ಕೆಲವೊಂದು ಖಾದ್ಯಗಳ (Best dish) ಸವಿಯನ್ನು ನೀವು ಪಡೆಯದೇ ಇದ್ದರೆ ಖಂಡಿತ ನಿಮ್ಮ ಪ್ರಯಾಣ ಪೂರ್ತಿ ಅಲ್ಲ. ಅಂತಹ ಖಾದ್ಯಗಳು ಯಾವುದು ಗೊತ್ತೇ? ಇಲ್ಲಿದೆ ಮಾಹಿತಿ.


ಮಂಗಳೂರು ಬಜ್ಜಿ

ಕರ್ನಾಟಕದ ಪ್ರಸಿದ್ಧ ಖಾದ್ಯಗಳು ಬೀದಿಯ ಮೂಲೆ ಮೂಲೆಯಲ್ಲಿ ಕಂಡುಬರುತ್ತದೆ. ಮಂಗಳೂರು ಬಜ್ಜಿಯನ್ನು ಅಧಿಕೃತ ಮಸಾಲೆಗಳು ಮತ್ತು ಗಿಡಮೂಲಿಕೆಗಳಿಂದ ತಯಾರಿಸಲಾಗುತ್ತದೆ. ಈ ಜನಪ್ರಿಯ ಆಹಾರವನ್ನು ನೀವು ಮನೆಯಲ್ಲಿ ಸುಲಭವಾಗಿ ತಯಾರಿಸಬಹುದು. ಬೆಂಗಳೂರಿನ ಮಂಗಳೂರು ಮೂಲದ ಹೋಟೆಲ್‌ಗಳಲ್ಲಿ ಈ ಬಜ್ಜಿ ಚೆನ್ನಾಗಿರುತ್ತದೆ.

ಹುಳಿ ಮೊಸರಿಗೆ ಅಕ್ಕಿ ಹಿಟ್ಟು ಮತ್ತು ಮೈದಾವನ್ನು ಬೆರೆಸುವ ಮೂಲಕ ಕರಿಬೇವು, ತೆಂಗಿನಕಾಯಿ, ಕೊತ್ತಂಬರಿ ಸೊಪ್ಪು ಮತ್ತು ಹಸಿರು ಮೆಣಸಿನಕಾಯಿಯನ್ನು ಸೇರಿಸಿ. ಹಿಟ್ಟನ್ನು ಚೆನ್ನಾಗಿ ಮಿಶ್ರಣ ಮಾಡಿ, ಸಕ್ಕರೆ, ನೀರು ಮತ್ತು ಬೇಕಿಂಗ್ ಪೌಡರ್ ಹಾಕಿ. 2 ಗಂಟೆಗಳ ಕಾಲ ಹಿಟ್ಟನ್ನು ಸಿದ್ಧಪಡಿಸಿ ಇಟ್ಟು ಬಳಿಕ ಗೋಲಿ ಬಜೆಯನ್ನು ಎಣ್ಣೆಯಲ್ಲಿ ಗರಿಗರಿಯಾಗಿ ಕೆಂಪು ಬಣ್ಣ ಬರುವವರೆಗೆ ಕರಿಯಿರಿ. ಸುವಾಸನೆಯ ರುಚಿಗಾಗಿ ತೆಂಗಿನಕಾಯಿ ಚಟ್ನಿಯೊಂದಿಗೆ ಬಡಿಸಿ.


ಬಿಸಿ ಬೇಳೆ ಬಾತ್

ಈ ಜನಪ್ರಿಯ ದಕ್ಷಿಣ-ಭಾರತೀಯ ಖಾದ್ಯವು ಇತರ ಭಕ್ಷ್ಯಗಳಂತೆ ಅಲ್ಲ. ಹಲವಾರು ದಕ್ಷಿಣ-ಭಾರತೀಯ ರೆಸ್ಟೋರೆಂಟ್ ಗಳಲ್ಲಿ ಮತ್ತು ರಾಜ್ಯದ ಹೊರಗೂ ಲಭ್ಯವಿದೆ. ಈ ಅಧಿಕೃತ ರೆಸಿಪಿ ನಿಜವಾಗಿಯೂ ಕರ್ನಾಟಕದ ವಿಶೇಷತೆಯಾಗಿದೆ. ಕರ್ನಾಟಕ ಶೈಲಿಯ ಬಿಸಿ ಬೇಳೆ ಬಾತ್ ಅನ್ನು ನೀವು ಮನೆಯಲ್ಲಿಯೂ ಪ್ರಯತ್ನಿಸಬಹುದು. ಬೆಂಗಳೂರಿನ ಬಹುತೇಕ ಹೋಟೆಲ್‌ಗಳಲ್ಲಿ ಇದು ಮುಖ್ಯ ಆಹಾರ.

ಅಕ್ಕಿ ಮತ್ತು ಕಡಲೆಕಾಯಿಯನ್ನು 25 ನಿಮಿಷಗಳ ಕಾಲ ನೆನೆಸಿ ಅನಂತರ ಉಪ್ಪು ಸೇರಿಸಿ. ಅಕ್ಕಿ ಮತ್ತು ಕಡಲೆಕಾಯಿಯನ್ನು ಬೇಯಿಸಿ ಮತ್ತು ಅವುಗಳನ್ನು ಪಕ್ಕಕ್ಕೆ ಇರಿಸಿ. ಮುಂದೆ, ಹುಣಸೆಹಣ್ಣನ್ನು ನೆನೆಸಿ ಮತ್ತು ಅದರ ತಿರುಳನ್ನು ಹೊರತೆಗೆಯಿರಿ. ಪ್ರೆಶರ್ ಕುಕ್ ನಲ್ಲಿ ತೊಗರಿ ಬೆಳೆ, ಅರಿಶಿನ ಪುಡಿ ಮತ್ತು ನೀರು, ಎಲ್ಲಾ ಕತ್ತರಿಸಿದ ತರಕಾರಿಗಳು ಮತ್ತು ಉಪ್ಪನ್ನು ಬೆರೆಸಿ. ಈಗ, ಕುಕ್ಕರ್‌ನಲ್ಲಿ ನೆನೆಸಿದ ಅಕ್ಕಿ, ಕಡಲೆಕಾಳು, ಹಿಸುಕಿದ ದಾಲ್ ಮತ್ತು ಹುಣಸೆ ತಿರುಳನ್ನು ಸೇರಿಸಿ ಮತ್ತು ಮಸಾಲೆಯನ್ನು ತಯಾರಿಸಿ. ಬಿಸಿಬೇಳೆ ಬಾತ್ ಮಸಾಲ ಮತ್ತು ನೀರನ್ನು ಬಾಣಲೆಯಲ್ಲಿ ಹಾಕಿ ಬೇಯಿಸಿ ಕುಕ್ಕರ್‌ಗೆ ಸೇರಿಸಿ. ಅದಕ್ಕೆ ತಕ್ಕಂತೆ ಒಣಗಿದ ತೆಂಗಿನಕಾಯಿ ಮತ್ತು ಉಪ್ಪನ್ನು ಸೇರಿಸಿ ಮತ್ತು ಎಲ್ಲವನ್ನೂ ಮಿಶ್ರಣ ಮಾಡಲು ಮರೆಯಬೇಡಿ. ರುಚಿಕರವಾದ ತಡ್ಕಾಕ್ಕೆ ಕರಿಬೇವು, ಮರಾಠಿ ಮೊಗ್ಗು, ಇಂಗು, ಒಣಗಿದ ಕೆಂಪು ಮೆಣಸಿನಕಾಯಿ ಮತ್ತು ಗೋಡಂಬಿ ಸೇರಿಸಿ. ಬಿಸಿಯಾಗಿ ಬಡಿಸಿ ಮತ್ತು ಹುರಿದ ಪಾಪಡ್‌ನೊಂದಿಗೆ ಸವಿಯಿರಿ.


ರಾಗಿ ಮುದ್ದೆ

ಇದು ಕರ್ನಾಟಕದ ‘ಪ್ರೋಟೀನ್ ಬೈಟ್ಸ್’ . ಇದು ಪ್ರಮುಖ ಆಹಾರವಾಗಿದೆ. ತಮಿಳುನಾಡಿನಲ್ಲಿಯೂ ಹೆಚ್ಚಾಗಿ ಕಂಡುಬರುತ್ತದೆ. ಈ ʼಪೌಷ್ಟಿಕ ಚೆಂಡುʼಗಳು ರೈತರನ್ನು ಹಗಲಿನಲ್ಲಿ ಚುರುಕಾಗಿ ಇರಿಸಲು ಸಹಾಯ ಮಾಡುತ್ತದೆ. ನೀವು ಈ ಗರಿಗರಿಯಾದ ಮುದ್ದೆಗಳನ್ನು ನಿಮ್ಮ ಊಟದಲ್ಲಿ ಸೇರಿಸಿಕೊಳ್ಳಬಹುದು. ಒಟ್ಟು 20 ನಿಮಿಷಗಳಲ್ಲಿ ತಯಾರಿಸಬಹುದು. ಬೆಂಗಳೂರಿನ ಮಿಲಿಟರಿ ಹೋಟೆಲ್‌ಗಳಲ್ಲಿ ರಾಗಿ ಮುದ್ದೆ ರುಚಿಕರವಾಗಿ ತಯಾರಿಸುತ್ತಾರೆ.

ಒಂದು ಬಟ್ಟಲಿನಲ್ಲಿ ರಾಗಿ ಹಿಟ್ಟು ಮತ್ತು ನೀರನ್ನು ಬೆರೆಸುವ ಮೂಲಕ ಪ್ರಾರಂಭಿಸಿ. ಮಿಶ್ರಣದಲ್ಲಿ ಯಾವುದೇ ಉಂಡೆಗಳಿಲ್ಲ ಎಂದು ಖಚಿತಪಡಿಸಿಕೊಳ್ಳಿ. ಬಾಣಲೆಯಲ್ಲಿ ನೀರು, ತುಪ್ಪ ಮತ್ತು ಉಪ್ಪು ಸೇರಿಸಿ, ನೀರನ್ನು ಕುದಿಸಿ ಮತ್ತು ರಾಗಿ ಹಿಟ್ಟಿನ ಮಿಶ್ರಣವನ್ನು ಕುದಿಯುವ ನೀರಿಗೆ ಸುರಿಯಿರಿ. ದಪ್ಪವಾಗುವವರೆಗೆ ಬೇಯಿಸಿ. ಹಿಟ್ಟು ಸೇರಿಸಿ. ಅದರಲ್ಲಿ ಯಾವುದೇ ಹಿಟ್ಟಿನ ಉಂಡೆಗಳಿಲ್ಲ ಎಂದು ಖಚಿತಪಡಿಸಿಕೊಳ್ಳಿ. ಇನ್ನೊಂದು 5 ನಿಮಿಷ ಬೇಯಿಸಿ. ಮಿಶ್ರಣವನ್ನು ಪ್ಲೇಟ್ ಗೆ ವರ್ಗಾಯಿಸಿ, ಬೆರಳುಗಳಲ್ಲಿ ರಾಗಿ ಹಿಟ್ಟಿನ ಚೆಂಡುಗಳನ್ನು ಮಾಡಿ. ಯಾವುದಾದರೂ ಸಾಂಬಾರಿನೊಂದಿಗೆ ಬಡಿಸಿ.


ನೀರ್ ದೋಸೆ

ಕರ್ನಾಟದ ಪ್ರಸಿದ್ಧ ನೀರ್ ದೋಸೆ ದೋಸೆಗಳಲ್ಲೇ ವಿಶಿಷ್ಟವಾಗಿದೆ. ತೆಳುವಾದ ಈ ದೋಸೆ ಕರ್ನಾಟಕದಾದ್ಯಂತ ಜನಪ್ರಿಯ ಉಪಾಹಾರವಾಗಿದೆ. ಮುಖ್ಯವಾಗಿ ಬೆಂಗಳೂರಿನ ಕರಾವಳಿ ರೆಸ್ಟೋರೆಂಟ್‌ಗಳಲ್ಲಿ ನೀರ್‌ ದೋಸೆ ಪ್ರಮುಖ ಆಕರ್ಷಣೆಯಾಗಿದೆ. ಹಿಟ್ಟಿಗೆ ಹುದುಗುವಿಕೆಯ ಅಗತ್ಯವಿಲ್ಲ. ಮನೆಯಲ್ಲೆ ಇದನ್ನು ಸುಲಭವಾಗಿ ಮಾಡಬಹುದು.

ಅಕ್ಕಿಯನ್ನು ರಾತ್ರಿಯಿಡೀ ನೆನೆಸಿ ಅನಂತರ ನಯವಾದ ಪೇಸ್ಟ್ ಆಗಿ ರುಬ್ಬಿ. ಹಿಟ್ಟಿಗೆ ನೀರಿನ ಉಪ್ಪು ಸೇರಿಸಿ ಮತ್ತು ಬಾಣಲೆಯಲ್ಲಿ ಕೆಲವು ಹನಿ ಎಣ್ಣೆಯನ್ನು ಹಾಕಿ,. ತೆಳುವಾಗಿ ಸುರಿಯಿರಿ. ಅದನ್ನು 2 ನಿಮಿಷಗಳ ಕಾಲ ಮುಚ್ಚಳದಿಂದ ಮುಚ್ಚಿ ಮತ್ತು ದೋಸೆಯ ಬದಿಗಳು ಸುಲಭವಾಗಿ ಹೊರಬರುವವರೆಗೆ ಕಾಯಿಸಿ. ತ್ರಿಕೋನದಲ್ಲಿ ಮಡಚಿ, ಚಟ್ನಿ ಅಥವಾ ಸಾಂಬಾರಿನೊಂದಿಗೆ ಸವಿಯಲು ರುಚಿಯಾಗಿರುತ್ತದೆ.


ತಟ್ಟೆ ಇಡ್ಲಿ

ಈ ಪ್ರಸಿದ್ಧ ಖಾದ್ಯವು ಸಾಮಾನ್ಯ ಇಡ್ಲಿಗಳಿಗಿಂತ ದೊಡ್ಡದಾಗಿದೆ ಮತ್ತು ದಪ್ಪವಾಗಿರುತ್ತದೆ. ಬೆಂಗಳೂರು ಮತ್ತು ಮೈಸೂರು ರಾಜ್ಯ ಹೆದ್ದಾರಿಗಳ ಬಳಿ ಜನಪ್ರಿಯವಾಗಿ ಕಂಡುಬರುವ ಈ ಖಾದ್ಯವನ್ನು ನೀವು ತಟ್ಟೆ ಇಡ್ಲಿ ರೆಸ್ಟೋರೆಂಟ್‌ಗಳಲ್ಲಿ ಸವಿಯಬಹುದು. ದಕ್ಷಿಣ ಕರ್ನಾಟಕದ ಪ್ರಮುಖ ತಿಂಡಿ ಇದು.

ಇಡ್ಲಿ ಅಕ್ಕಿ ಮತ್ತು ಉದ್ದಿನ ಬೇಳೆಯನ್ನು ನೆನೆಸಿಟ್ಟು ಖಾದ್ಯವನ್ನು ತಯಾರಿಸಿ. ನಯವಾದ ಹಿಟ್ಟನ್ನು ಪಡೆಯುವವರೆಗೆ ರಾತ್ರಿ ರುಬ್ಬಿಕೊಂಡು ಇಡಿ. ಬ್ಯಾಟರ್ ಅನ್ನು ಸ್ಟೀಮರ್ ನಲ್ಲಿ ಸುರಿಯಿರಿ ಮತ್ತು 15-20 ನಿಮಿಷಗಳ ಕಾಲ ಉಗಿ ಮಾಡಿ. ನಿಮ್ಮ ಇಡ್ಲಿಯನ್ನು ಸಾಂಬಾರ್, ತೆಂಗಿನಕಾಯಿ ಚಟ್ನಿ ಅಥವಾ ಒಂದು ಕಪ್ ಕಾಫಿಯೊಂದಿಗೆ ಸವಿಯಲು ರುಚಿಯಾಗಿರುತ್ತದೆ.


ದೊನ್ನೆ ಬಿರಿಯಾನಿ

ಈ ಜನಪ್ರಿಯ ಖಾದ್ಯವನ್ನು ಬೆಂಗಳೂರು ನಗರದಲ್ಲಿ ವ್ಯಾಪಕವಾಗಿ ಸವಿಯಲಾಗುತ್ತದೆ. ಚಿಕನ್ ತುಂಡುಗಳನ್ನು ಸ್ವಚ್ಛಗೊಳಿಸಿ ದೊಡ್ಡ ಬಟ್ಟಲಿನಲ್ಲಿ ಅರಿಶಿನ, ಉಪ್ಪು, ನಿಂಬೆ ರಸ ಮತ್ತು ಮೊಸರು ಸೇರಿಸಿ 30 ನಿಮಿಷಗಳ ಕಾಲ ಮುಚ್ಚಿಡಿ. ಮಿಕ್ಸಿಂಗ್ ಜಾರ್‌ನಲ್ಲಿ ಕೊತ್ತಂಬರಿ ಸೊಪ್ಪು, ಹಸಿಮೆಣಸಿನಕಾಯಿ ಮತ್ತು ಪುದೀನಾ ಸೊಪ್ಪು ಹಾಕಿ ಚೆನ್ನಾಗಿ ಪೇಸ್ಟ್ ಮಾಡಿಕೊಳ್ಳಿ. ಬಾಣಲೆಯಲ್ಲಿ, ಎಣ್ಣೆಯನ್ನು ಬಿಸಿ ಮಾಡಿ, ಸಂಪೂರ್ಣ ಮಸಾಲೆಗಳು, ದಾಲ್ಚಿನ್ನಿ ಕಡ್ಡಿ, ಏಲಕ್ಕಿ ಹಾಕಿ ಕುದಿಯಲು ಬಿಡಿ. ಅನಂತರ ಶುಂಠಿ ಬೆಳ್ಳುಳ್ಳಿ ಪೇಸ್ಟ್ ಸೇರಿಸಿ ರೈಸ್ ಎಲ್ಲವನ್ನೂ ಚೆನ್ನಾಗಿ ಮಿಶ್ರಣ ಮಾಡಿ ಮತ್ತು ಮುಚ್ಚಳದಿಂದ ಮುಚ್ಚಿ. ಬಾಣಲೆಯಲ್ಲಿ ನೀರನ್ನು ಕುದಿಸಿ ಮತ್ತು ಕಡಾಯಿಯ ಮುಚ್ಚಳದ ಮೇಲೆ ಇರಿಸಿ, ಮೇಲಿನಿಂದ ಶಾಖವನ್ನು ಒದಗಿಸಲು ಪ್ರಕ್ರಿಯೆಯನ್ನು ಮಾಡಲಾಗುತ್ತದೆ. ನಿಮ್ಮ ದೊನ್ನೆ ಬಿರಿಯಾನಿ ಸಿದ್ಧವಾಗಿದೆ. ಹುರಿದ ಪಾಪಡ್ ಅಥವಾ ಧನಿಯಾ ರೈತಾದೊಂದಿಗೆ ಬಡಿಸಿ ಮತ್ತು ಆನಂದಿಸಿ.


ಮೈಸೂರು ಪಾಕ್

ದಕ್ಷಿಣ ಭಾರತೀಯ ಈ ಸಿಹಿತಿಂಡಿಯು ಅತ್ಯಂತ ಜನಪ್ರಿಯವಾಗಿದೆ. ಇದು ರುಚಿಕರವಾಗಿರುತ್ತದೆ. ಬೆಂಗಳೂರಿನ ಪ್ರಮುಖ ಬೇಕರಿಗಳಲ್ಲಿ ಉತ್ತಮ ದರ್ಜೆಯ ಮೈಸೂರ್‌ ಪಾಕ್‌ ಸಿಗುತ್ತದೆ. ನೀವು ಇದನ್ನು ಒಟ್ಟು 40 ನಿಮಿಷಗಳಲ್ಲಿ ಮಾಡಬಹುದು.

ಇದನ್ನೂ ಓದಿ: Dietary Guidelines: ಕಡಿಮೆ ದೈಹಿಕ ಚಟುವಟಿಕೆ ಇರುವವರಿಗೆ ಯಾವ ರೀತಿಯ ಆಹಾರ ಸೂಕ್ತ?

ದೊಡ್ಡ ಬಟ್ಟಲಿಗೆ ಬೆಸನ್ ಸೇರಿಸುವ ಮೂಲಕ ಪ್ರಾರಂಭಿಸಿ. ಕಡಾಯಿಯಲ್ಲಿ ಎಣ್ಣೆ ಮತ್ತು ತುಪ್ಪವನ್ನು ಸುರಿಯಿರಿ, ಹಿಟ್ಟನ್ನು 3 ಭಾಗಗಳಾಗಿ ವಿಂಗಡಿಸಲು ಮರೆಯಬೇಡಿ. ನೀರಿಗೆ ಸಕ್ಕರೆಯನ್ನು ಸೇರಿಸುವ ಮೂಲಕ ಸಕ್ಕರೆ ಪಾಕವನ್ನು ತಯಾರಿಸಿ. ಸಕ್ಕರೆ ಪಾಕಕ್ಕೆ ಹಿಟ್ಟಿನ ಸ್ವಲ್ಪ ಭಾಗವನ್ನು ಸೇರಿಸಿ ಮತ್ತು ಚೆನ್ನಾಗಿ ಬೆರೆಸಿ. ಹಿಟ್ಟಿನ ಇನ್ನೊಂದು ಭಾಗವನ್ನು ಸೇರಿಸಿ ಮತ್ತು ಪ್ರಕ್ರಿಯೆಯನ್ನು ಪುನರಾವರ್ತಿಸಿ. ಯಾವುದೇ ಉಂಡೆಗಳಿಲ್ಲ ಎಂದು ಖಚಿತಪಡಿಸಿಕೊಳ್ಳಿ ಮತ್ತು ಬಿಸಿ ಮಾಡಿದ ಎಣ್ಣೆ ಮತ್ತು ತುಪ್ಪವನ್ನು ಬಾಣಲೆಗೆ ಸೇರಿಸಿ. ಮಿಶ್ರಣವು ತುಪ್ಪವನ್ನು ಹೀರಿಕೊಂಡ ಬಳಿಕ ಮಿಶ್ರಣವು ದಪ್ಪವಾಗಲು ಪ್ರಾರಂಭಿಸುತ್ತದೆ. ಈ ಮೈಸೂರು ಪಾಕ್ ನ ಮಿಶ್ರಣವನ್ನು ತುಪ್ಪ ಸವರಿದ ಬಾಣಲೆಗೆ ವರ್ಗಾಯಿಸಿ ಐದು ನಿಮಿಷಗಳ ಬಳಿಕ ತುಂಡುಗಳಾಗಿ ಕತ್ತರಿಸಿ ಸವಿಯಿರಿ.

Continue Reading

ರಾಜಕೀಯ

Prime Minister Of India: ಸುದೀರ್ಘ ಕಾಲ ಪ್ರಧಾನಿಯಾಗಿದ್ದ ನೆಹರೂ, ಇಂದಿರಾ ದಾಖಲೆಯನ್ನು ಮೋದಿ ಮುರಿಯಲು ಸಾಧ್ಯವೆ?

ಭಾರತ ಸ್ವಾತಂತ್ರ್ಯವಾದ ಬಳಿಕ 14 ಮಂದಿ ಪ್ರಧಾನ ಮಂತ್ರಿ (Prime Minister Of India) ಸ್ಥಾನವನ್ನು ಅಲಂಕರಿಸಿದ್ದಾರೆ. ಅವರಲ್ಲಿ ಕೆಲವರು ಮಾತ್ರ ಸುದೀರ್ಘಾವಧಿಗೆ ಪ್ರಧಾನಿಯಾಗಿದ್ದರು. ಯಾರು ಎಷ್ಟು ಅವಧಿಗೆ ಪ್ರಧಾನಮಂತ್ರಿಯಾಗಿದ್ದರು? ಈ ಕುರಿತ ದಾಖಲೆ ಇಲ್ಲಿದೆ.

VISTARANEWS.COM


on

By

Prime Minister of India
Koo

ಪ್ರತಿ ಬಾರಿಯೂ ಲೋಕಸಭಾ ಚುನಾವಣೆ (Lok sabha election) ಘೋಷಣೆಯಾದ ಬಳಿಕ ಮುಂದಿನ ಪ್ರಧಾನಿ (Prime Minister Of India) ಯಾರಾಗಬಹುದು ಎನ್ನುವ ಕುತೂಹಲವಂತೂ ಇದ್ದೇ ಇರುತ್ತದೆ.

ಭಾರತ ಸ್ವಾತಂತ್ರ್ಯವಾದ ಬಳಿಕ 14 ಮಂದಿ ಪ್ರಧಾನಮಂತ್ರಿ ಸ್ಥಾನವನ್ನು ಅಲಂಕರಿಸಿದ್ದಾರೆ. ಅವರೆಂದರೆ ಜವಾಹರ್ ಲಾಲ್ ನೆಹರೂ (Jawaharlal Nehru) , ಲಾಲ್ ಬಹಾದ್ದೂರ್ ಶಾಸ್ತ್ರೀ (Lal Bahadur Shastri), ಇಂದಿರಾ ಗಾಂಧಿ (Indira gandhi), ಮೊರಾರ್ಜಿ ದೇಸಾಯಿ (morarji desai), ಚರಣ್ ಸಿಂಗ್ (charan singh), ರಾಜೀವ್ ಗಾಂಧಿ (rajiv gandhi), ವಿಶ್ವನಾಥ್ ಪ್ರತಾಪ್ ಸಿಂಗ್ (vishwanath pratap singh), ಚಂದ್ರಶೇಖರ್ (chandra shekhar) , ಪಿ.ವಿ. ನರಸಿಂಹ ರಾವ್ (p.v. narasimha rao), ಅಟಲ್ ಬಿಹಾರಿ ವಾಜಪೇಯಿ (atal bihari vajpayee), ಎಚ್.ಡಿ. ದೇವೇಗೌಡ (h.d. deve gowda), ಇಂದರ್ ಕುಮಾರ್ ಗುಜ್ರಾಲ್ (inder kumar gujral), ಮನ್ ಮೋಹನ್ ಸಿಂಗ್ (manmohan singh), ನರೇಂದ್ರ ಮೋದಿ (narendra modi). ಇವರಲ್ಲಿ ಕೆಲವರು ಮಾತ್ರ ದೀರ್ಘಾವಧಿಗೆ ಪ್ರಧಾನಿ ಯಾಗಿದ್ದರು. ಅವರು ಯಾರು? ಇಲ್ಲಿದೆ ಮಾಹಿತಿ.


ಇಂದಿರಾ ಗಾಂಧಿ (1966ರಿಂದ1977, 1980ರಿಂದ1984)

ಜವಾಹರಲಾಲ್ ನೆಹರೂ ಅವರ ಪುತ್ರಿ ಇಂದಿರಾ ಗಾಂಧಿ ಒಟ್ಟು 15 ವರ್ಷ 350 ದಿನಗಳ ಕಾಲ ಪ್ರಧಾನಿಯಾಗಿದ್ದರು. 1975ರಲ್ಲಿ ತುರ್ತುಪರಿಸ್ಥಿತಿಯ ಜಾರಿ, ಆಪರೇಷನ್‌ ಬ್ಲೂ ಸ್ಟಾರ್‌ ಕಾರ್ಯಾಚರಣೆ ಸೇರಿದಂತೆ ಹಲವು ದಿಟ್ಟ ಮತ್ತು ವಿವಾದಾತ್ಮಕ ನಿರ್ಧಾರಗಳಿಗೆ ಹೆಸರುವಾಸಿಯಾಗಿದ್ದರು. ತುರ್ತು ಪರಿಸ್ಥಿತಿ ಹೇರಿಕೆ ವಿರುದ್ಧ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದು ಇಂದಿರಾ ಗಾಂಧಿ 1977ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಇಂದಿರಾ ಗಾಂಧಿ ಅವರು ಹೀನಾಯ ಹಿನ್ನಡೆ ಕಂಡು ಅಧಿಕಾರ ತ್ಯಜಿಸಬೇಕಾಯಿತು. ಆದರೆ 1980ರಲ್ಲಿ ಅವರು ಮತ್ತೆ ಭರ್ಜರಿ ಬಹುಮತದಿಂದ ಅಧಿಕಾರಕ್ಕೆ ಮರಳಿದರು. ಆದರೆ 1984ರಲ್ಲಿ ಸಿಖ್‌ ಭಯೋತ್ಪಾದನೆಗೆ ಬಲಿಯಾದರು.


ಅಟಲ್ ಬಿಹಾರಿ ವಾಜಪೇಯಿ (1996, 1998-2004)

ನುರಿತ ವಾಗ್ಮಿ ಮತ್ತು ದೂರದೃಷ್ಟಿಯ ನಾಯಕ, ಅಟಲ್ ಬಿಹಾರಿ ವಾಜಪೇಯಿ ಅವರು ಮೂರು ಬಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಒಮ್ಮೆ 13 ದಿನ, ಮತ್ತೊಮ್ಮೆ 13 ತಿಂಗಳಷ್ಟೇ ಅವರು ಪ್ರಧಾನಿಯಾಗಿದ್ದರು. ಆದರೆ 1998ರಿಂದ 2004ರ ಅವರು ಪೂರ್ಣಾವಧಿ ಪ್ರಧಾನಿಯಾಗಿದ್ದರು. ಒಂದೆಡೆ ಪರಮಾಣು ಪರೀಕ್ಷೆಯ ದಿಟ್ಟತನ ಮತ್ತು ಇನ್ನೊಂದೆಡೆ ಪಾಕಿಸ್ತಾನದೊಂದಿಗೆ ಶಾಂತಿಯನ್ನು ಬೆಳೆಸುವ, ಸಂದರ್ಭ ಬಂದಾಗ ಅದಕ್ಕೆ ಬುದ್ಧಿ ಕಲಿಸುವ ಅವರ ಉಪಕ್ರಮಗಳಿಗಾಗಿ ವಾಜಪೇಯಿ ಸದಾ ನೆನಪಿನಲ್ಲಿರುತ್ತಾರೆ. ಹೆದ್ದಾರಿ ನಿರ್ಮಾಣದ ಕ್ರಾಂತಿ ನಡೆದಿದ್ದು ಅವರ ಕಾಲದಲ್ಲಿ.


ಮನಮೋಹನ್ ಸಿಂಗ್ (2004-2014)

ಖ್ಯಾತ ಅರ್ಥಶಾಸ್ತ್ರಜ್ಞರಾಗಿದ್ದ ಮನಮೋಹನ್ ಸಿಂಗ್ ಅವರು ಒಟ್ಟು 10 ವರ್ಷಗಳ ಕಾಲ ಪ್ರಧಾನಿಯಾಗಿ ಸತತ ಎರಡು ಬಾರಿ ಸೇವೆ ಸಲ್ಲಿಸಿದರು. ಅವರ ಅಧಿಕಾರಾವಧಿಯು ಗಮನಾರ್ಹ ಆರ್ಥಿಕ ಸುಧಾರಣೆಗಳು ಮತ್ತು ಉದಾರೀಕರಣದ ಉಪಕ್ರಮಗಳಿಂದ ಗುರುತಿಸಲ್ಪಟ್ಟಿದೆ.


ನರೇಂದ್ರ ಮೋದಿ (2014ರಿಂದ ಈಗಿನವರೆಗೆ)

ಪ್ರಸ್ತುತ ಭಾರತದ ಪ್ರಧಾನಮಂತ್ರಿ ಆಗಿರುವ ನರೇಂದ್ರ ಮೋದಿ ಅವರು ಸತತ ಎರಡನೇ ಅವಧಿಯಲ್ಲಿದ್ದಾರೆ. ವರ್ಚಸ್ವಿ ನಾಯಕತ್ವಕ್ಕೆ ಹೆಸರುವಾಸಿಯಾದ ಅವರು ದೇಶದಲ್ಲಿ ಗಮನಾರ್ಹ ಸುಧಾರಣೆಗಳನ್ನು ತಂದಿದ್ದಾರೆ. ದೇಶ ಮತ್ತು ವಿದೇಶಗಳಲ್ಲಿ ಭಾರಿ ಜನಪ್ರಿಯತೆ ಗಳಿಸಿದ್ದಾರೆ. ಇದೇ ವೇಳೆ ಅವರನ್ನು ವಿರೋಧಿಸುವವರೂ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಸರ್ಜಿಕಲ್‌ ಸ್ಟ್ರೈಕ್‌ ಮೂಲಕ ಪಾಕಿಸ್ತಾನಕ್ಕೆ ನಡುವ ಹುಟ್ಟಿಸಿದ ಕೀರ್ತಿ ಖ್ಯಾತಿ ಇವರಿಗಿದೆ. ನೋಟ್‌ ಬ್ಯಾನ್‌, ಜಿಎಸ್‌ಟಿ ಜಾರಿಯಂಥ ಆರ್ಥಿಕ ಸುಧಾರಣೆ ಕ್ರಮಗಳನ್ನೂ ಕೈಗೊಂಡಿದ್ದಾರೆ. ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ವಿದೇಶಿ ನಾಯಕರೊಂದಿಗೆ ಮಾತುಕತೆ ನಡೆಸಿ ಶಾಂತಿ ನೆಲೆಸುವ ಕ್ರಮದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಎರಡನೇ ಅವಧಿಯು 2019ರಲ್ಲಿ ಪ್ರಾರಂಭವಾಯಿತು. ಮೂರನೇ ಅವಧಿಯಲ್ಲೂ ನರೇಂದ್ರ ಮೋದಿ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ ಎಂದು ಚುನಾವಣೆ ಪೂರ್ವ ಸಮೀಕ್ಷೆಗಳು ಹೇಳಿವೆ. ಆದರೆ ಮೋದಿ ಅವರು ಮೂರನೇ ಅವಧಿಯಲ್ಲಿ ಪ್ರಧಾನಿಯಾಗಿ ಪೂರ್ಣಾವಧಿ ಮುಗಿಸಿದರೂ ನೆಹರೂ ಮತ್ತು ಇಂದಿರಾ ಗಾಂಧಿ ಅವರ ಸುದೀರ್ಘ ಆಡಳಿತ ಅವಧಿಯ ದಾಖಲೆ ಹಾಗೆಯೇ ಮುಂದುವರಿಯುತ್ತದೆ. ಈ ದಾಖಲೆ ಮುರಿಯಬೇಕೆಂದರೆ ಮೋದಿ ನಾಲ್ಕನೇ ಬಾರಿಯೂ ಪ್ರಧಾನಿ ಆಗಬೇಕಾಗುತ್ತದೆ!

Continue Reading
Advertisement
Koppal tragedy
ಕೊಪ್ಪಳ32 mins ago

Koppal Tragedy : ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಸಾವು; ಈಜಲು ಹೋದ ಯುವಕ ನೀರುಪಾಲು

Prajwal Revanna case Devaraje Gowda should be given mental treatment says Congress
ರಾಜಕೀಯ39 mins ago

Prajwal Revanna Case: ದೇವರಾಜೇಗೌಡರಿಗೆ ಮೆಂಟಲ್‌ ಟ್ರೀಟ್ಮೆಂಟ್‌ ಕೊಡಿಸಬೇಕಿದೆ: ಕಾಂಗ್ರೆಸ್‌ ವ್ಯಂಗ್ಯ

Health Tips in Kannada tomato juice is good for health
ಆರೋಗ್ಯ44 mins ago

Health Tips in Kannada: ಟೊಮ್ಯಾಟೊ ಜ್ಯೂಸ್‌ ಆರೋಗ್ಯಕ್ಕೇಕೆ ಒಳ್ಳೆಯದು ಗೊತ್ತೆ?

T20 World Cup 2024
ಕ್ರೀಡೆ46 mins ago

T20 World Cup 2024: ಪಾಕ್​ ಉಗ್ರರ ಭೀತಿ; ಬಿಗಿ ಭದ್ರತೆ ಕೈಗೊಂಡ ವಿಂಡೀಸ್​ ಕ್ರಿಕೆಟ್​ ಮಂಡಳಿ

Cannes 2024 Indian influencer who stitched a 20 kg dress
ಬಾಲಿವುಡ್50 mins ago

Cannes 2024: 20 ಕೆಜಿ ತೂಕದ ಗೌನ್ ಧರಿಸಿ ಬೆರಗುಗೊಳಿಸಿದ ನ್ಯಾನ್ಸಿ ತ್ಯಾಗಿ!

ಕರ್ನಾಟಕ53 mins ago

Prajwal Revanna Case: ನಾನು ಹೊರಬಂದ್ರೆ ಸರ್ಕಾರ ಪತನ ಎಂದ ದೇವರಾಜೇಗೌಡ; ಹಾಗಾದ್ರೆ ಜೈಲಲ್ಲೇ ಇರ್ತಾರೆ ಎಂದ ಪರಮೇಶ್ವರ್‌

Woman
ದೇಶ53 mins ago

ಪತ್ನಿಯ ಶೀಲ ಶಂಕಿಸಿ, ಆಕೆಯ ಗುಪ್ತಾಂಗಕ್ಕೆ ಮೊಳೆ ಜಡಿದು, ಬೀಗ ಹಾಕಿದ ದುಷ್ಟ; ಏನು ಮಾಡಬೇಕು ಇಂಥವರಿಗೆ?

murder case
ಕ್ರೈಂ57 mins ago

Murder case : ಕುಡಿದ ನಶೆಯಲ್ಲಿ ಗೆಳೆಯನ ಕೊಂದ; ಸೇಡಿಗಾಗಿ ಗ್ರಾ.ಪಂ ಸದಸ್ಯನ ಮನೆ ಮೇಲೆ ಅಟ್ಯಾಕ್‌

Pavitra Jayaram Relationship With Chandu Shilpa Prema statement
ಕಿರುತೆರೆ1 hour ago

Pavithra Jayaram: ನನ್ನ ಗಂಡನಿಗೂ ಪವಿತ್ರಾಗೂ ‘ಸಂಬಂಧ’ ಇದ್ದದ್ದು ನಿಜ ಎಂದ ಚಂದ್ರಕಾಂತ್‌ ಪತ್ನಿ!

Money Guide
ಮನಿ-ಗೈಡ್1 hour ago

Ration Card: ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಬೇಕೆ? ಇಲ್ಲಿದೆ ಸಂಪೂರ್ಣ ವಿವರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ21 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌