ಗುರುನಾನಕ್​ ಜಯಂತಿ ಆಚರಣೆಯಲ್ಲಿ ಕಾಂಗ್ರೆಸ್​ ನಾಯಕ ಕಮಲನಾಥ್​​ಗೆ ಸನ್ಮಾನ; ಸಿಡಿದೆದ್ದ ಸಿಖ್​ ಸ್ತೋತ್ರ ಗಾಯಕ! - Vistara News

ದೇಶ

ಗುರುನಾನಕ್​ ಜಯಂತಿ ಆಚರಣೆಯಲ್ಲಿ ಕಾಂಗ್ರೆಸ್​ ನಾಯಕ ಕಮಲನಾಥ್​​ಗೆ ಸನ್ಮಾನ; ಸಿಡಿದೆದ್ದ ಸಿಖ್​ ಸ್ತೋತ್ರ ಗಾಯಕ!

ಕಾನ್ಪುರಿ ಆರೋಪಕ್ಕೆ ಪ್ರತ್ಯುತ್ತರ ನೀಡಿದ ಆಯೋಜಕರು, ‘ನಾವು ಕಮಲನಾಥ್​ ಅವರಿಗೆ ಕೇಸರಿ ಸಿರೋಪಾ (ಸನ್ಮಾನಿಸುವಾಗ ಶಿರಕ್ಕೆ ಹಾಕುವ ಟೋಪಿ) ಹಾಕಲಿಲ್ಲ. ಕೇವಲ ಸ್ಮರಣಿಕೆಯನ್ನಷ್ಟೇ ಕೊಟ್ಟಿದ್ದೇವೆ’ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. ಆದರೆ ಕಾನ್ಪುರಿ ಅದನ್ನು ಒಪ್ಪಲೇ ಇಲ್ಲ. ಆಯೋಜಕರ ಯಾವ ಮಾತನ್ನೂ ಕೇಳಲಿಲ್ಲ.

VISTARANEWS.COM


on

Kamal Nath honoured atGuru Nanak Jayanti Sikh hymn singer Angered
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂಧೋರ್​: ನವೆಂಬರ್​ 8ರಂದು ಇಂಧೋರ್​​ನಲ್ಲಿ ಹಮ್ಮಿಕೊಂಡಿದ್ದ ಗುರುನಾನಕ್​ ಜಯಂತಿ ಕಾರ್ಯಕ್ರಮದಲ್ಲಿ ಅಲ್ಲಿನ ಕಾಂಗ್ರೆಸ್ ನಾಯಕ ಕಮಲನಾಥ್​ ಪಾಲ್ಗೊಂಡಿದ್ದರು. ಈ ಸಮಾರಂದಲ್ಲಿ ಅವರನ್ನು ಗೌರವಿಸಿ-ಸನ್ಮಾನಿಸಲಾಗಿತ್ತು. ಆದರೆ ಗುರುನಾನಕ್​ ಜಯಂತಿಗೆ ಕಮಲನಾಥ್​ ಅವರನ್ನು ಆಹ್ವಾನಿಸಿ, ಸನ್ಮಾನಿಸಿದ್ದು ಹಲವು ಪ್ರಮುಖ ಸಿಖ್​ ನಾಯಕರ ಕೋಪಕ್ಕೆ ಕಾರಣವಾಗಿದೆ. ಅದರಲ್ಲೂ ಸಿಖ್ ಮುಖ್ಯ ಸ್ತೋತ್ರ ಗಾಯಕ ಮನ್​ಪ್ರೀತ್​ ಸಿಂಗ್​ ಕಾನ್ಪುರಿ ಅವರು ಕಾರ್ಯಕ್ರಮ ಆಯೋಜಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 1984 ಸಿಖ್​ ವಿರೋಧಿ ಗಲಭೆ ಆರೋಪ ಹೊತ್ತವರಲ್ಲಿ ಕಮಲನಾಥ ಕೂಡ ಒಬ್ಬರು. ಅಂಥವರನ್ನು ಈಗ ಗುರುನಾನಕ್​ ಜಯಂತಿ ಆಚರಣೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಇಂಧೋರ್​ನ ಎಂಬಿ ಕಲ್ಸಾ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮನ್​ಪ್ರೀತ್​ ಸಿಂಗ್​ ಕಾನ್ಪುರಿ ಕೂಡ ಪಾಲ್ಗೊಂಡಿದ್ದರು. ಕಮಲನಾಥ್​ ಉಪಸ್ಥಿತಿ ನೋಡಿ ಅವರು ಕಿರಿಕಿರಿಗೆ ಒಳಗಾಗಿದ್ದಾರೆ. ಅದರಲ್ಲೂ 45 ನಿಮಿಷಗಳ ಕಾಲ ಅವರನ್ನು ಸನ್ಮಾನಿಸಿದ್ದು ಕಾನ್ಪುರಿಗೆ ತೀವ್ರ ಸಿಟ್ಟು ತರಿಸಿದೆ. ಅವರು ಅತ್ತ ಹೋಗುತ್ತಿದ್ದಂತೆ ಆಯೋಜಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪಂಜಾಬಿ ಭಾಷೆಯಲ್ಲಿ ಅವರು ಮಾತನಾಡಿರುವ ವಿಡಿಯೊ ವೈರಲ್ ಆಗಿದೆ. ‘ಕಾರ್ಯಕ್ರಮ ಆಯೋಜಿಸುವವರು ಸೂಕ್ಷ್ಮವಾಗಿ ಆಲೋಚಿಸಬೇಕು. ಅವರ ಆತ್ಮಸಾಕ್ಷಿ ಜೀವಂತವಾಗಿದ್ದಿದ್ದರೆ ಇಂದಿನ ಕಾರ್ಯಕ್ರಮಕ್ಕೆ ಕಮಲನಾಥ್ ಅವರನ್ನು ಆಮಂತ್ರಿಸುತ್ತಿರಲಿಲ್ಲ’ ಎಂದು ಕಾನ್ಪುರಿ ಹೇಳಿದ್ದಾರೆ. ‘ಇನ್ನು ಜನ್ಮದಲ್ಲಿ ಎಂದಿಗೂ ನಾನು ಇಂಧೋರ್​ಗೆ ಕಾಲಿಡುವುದಿಲ್ಲ’ ಎಂದೂ ಶಪಥ ಮಾಡಿದ್ದಾರೆ.

ಇನ್ನು ಕಾನ್ಪುರಿ ಆರೋಪಕ್ಕೆ ಪ್ರತ್ಯುತ್ತರ ನೀಡಿದ ಆಯೋಜಕರು, ‘ನಾವು ಕಮಲನಾಥ್​ ಅವರಿಗೆ ಕೇಸರಿ ಸಿರೋಪಾ (ಸನ್ಮಾನಿಸುವಾಗ ಶಿರಕ್ಕೆ ಹಾಕುವ ಟೋಪಿ) ಹಾಕಲಿಲ್ಲ. ಕೇವಲ ಸ್ಮರಣಿಕೆಯನ್ನಷ್ಟೇ ಕೊಟ್ಟಿದ್ದೇವೆ’ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. ಆದರೆ ಕಾನ್ಪುರಿ ಅದನ್ನು ಒಪ್ಪಲೇ ಇಲ್ಲ. ‘ಈಗ ನಿಮ್ಮ ಉತ್ತರ ನನಗೆ ಬೇಡ. ಮಾಡುವ ಮೊದಲೇ ಯೋಚಿಸಬೇಕಿತ್ತು. ನೀವೇನು ಮಾಡಿದಿರಿ ಎಂಬುದರ ಕಲ್ಪನೆಯೂ ನಿಮಗೆ ಇದ್ದಂತಿಲ್ಲ, ನಾನ್ಯಾವತ್ತೂ ಇಂಧೋರ್​ಗೆ ಬರಲಾರೆ. ಈ ವಿಚಾರದಲ್ಲಿ ನನ್ನದೇನಾದರೂ ತಪ್ಪಿದ್ದರೆ, ಆ ದೇವರು ನನಗೆ ಶಿಕ್ಷೆ ಕೊಡಲಿ. ಗುರು ನಾನಕರು ಎಲ್ಲವನ್ನೂ ನೋಡುತ್ತಾರೆ’ ಎಂದು ಹೇಳಿದ್ದಾರೆ ಅಷ್ಟೇ ಅಲ್ಲ, ಆಯೋಜಕರು ಎಷ್ಟೇ ಮನವಿ ಮಾಡಿದರೂ, ಅವರ ಸಾಂಪ್ರಾದಾಯಿಕ ಜೈಕಾರ ಹಾಕಲೇ ಇಲ್ಲ. ಗುರುನಾನಕ ಸ್ತೋತ್ರವನ್ನಷ್ಟೇ ಹಾಡಿ ವೇದಿಕೆಯಿಂದ ಇಳಿದು ಹೋಗಿದ್ದಾರೆ.

ಅಂದಿನ ಪ್ರಧಾನಮಂತ್ರಿ ಇಂದಿರಾ ಗಾಂಧಿ ಹತ್ಯೆ ಬಳಿಕ ನಡೆದ ಸಿಖ್​ ವಿರೋಧಿ ಗಲಭೆಯಲ್ಲಿ ಕಮಲನಾಥ್​ ಹೆಸರೂ ಕೇಳಿಬಂದಿತ್ತು. ಈ ಬಗ್ಗೆ ತನಿಖೆ ನಡೆದಿತ್ತು ಹೊರತು ಅವರನ್ನು ವಿಚಾರಣೆಗೆ ಒಳಪಡಿಸಿರಲಿಲ್ಲ. ಹಾಗಿದ್ದಾಗ್ಯೂ ಅವರನ್ನು ಗುರು ನಾನಕ್​ ಜಯಂತಿ ಆಚರಣೆಗೆ ಆಹ್ವಾನಿಸಿದ್ದು ಹಲವು ಸಿಖ್​ ನಾಯಕರಿಗೆ ಅಸಮಾಧಾನ ತರಿಸಿದೆ.

ಇದನ್ನೂ ಓದಿ: ಹಿಂದು-ಹಿಂದುತ್ವ ವಿಷಯದಲ್ಲಿ ಸಮಸ್ಯೆ ಇದ್ದವರು ಪಾಕಿಸ್ತಾನಕ್ಕೆ ಹೋಗಿ; ಸತೀಶ್​ ಜಾರಕಿಹೊಳಿಗೆ ಮಧ್ಯಪ್ರದೇಶ ಸಂಸದನ ತಿರುಗೇಟು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Allahabad High Court: ಮತಾಂತರ ತಡೆಯದಿದ್ದರೆ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಹೈಕೋರ್ಟ್ ಕಳವಳ

Allahabad High Court: ಮತಾಂತರರವನ್ನು ನಿಯಂತ್ರಿಸದಿದ್ದರೆ ಸ್ತುತ ದೇಶದಲ್ಲಿರುವ ಬಹುಸಂಖ್ಯಾತರು ಕ್ರಮೇಣ ಅಲ್ಪಸಂಖ್ಯಾತರಾಗಬಹುದು ಎಂದು ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಮತಾಂತರ ನಡೆಸಲು ಯತ್ನಿಸಿ 2021ರ ಮತಾಂತರ ನಿಷೇಧ ಕಾಯಿದೆಯಡಿ ಬಂಧಿತನಾಗಿರುವ ಉತ್ತರ ಪ್ರದೇಶ ಮೂಲದ ಕೈಲಾಶ್‌ ಎಂಬಾತನ ಪ್ರಕರಣದ ವಿಚಾರಣೆ ನಡೆಸುವ ವೇಳೆ ನ್ಯಾ. ರೋಹಿತ್‌ ರಂಜನ್‌ ಅಗರವಾಲ್‌ ನೇತೃತ್ವದ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ.

VISTARANEWS.COM


on

Allahabad High Court
Koo

ಲಕ್ನೋ: ಮತಾಂತರ (Religious conversion)ಗಳನ್ನು ನಡೆಸುವ ಧಾರ್ಮಿಕ ಸಭೆಗಳನ್ನು ನಿಯಂತ್ರಿಸದಿದ್ದರೆ ಪ್ರಸ್ತುತ ದೇಶದಲ್ಲಿರುವ ಬಹುಸಂಖ್ಯಾತರು ಕ್ರಮೇಣ ಅಲ್ಪಸಂಖ್ಯಾತರಾಗಬಹುದು ಎಂದು ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ (Allahabad High Court) ಕಳವಳ ವ್ಯಕ್ತಪಡಿಸಿದೆ.

ಮತಾಂತರ ನಡೆಸಲು ಯತ್ನಿಸಿ 2021ರ ಮತಾಂತರ ನಿಷೇಧ ಕಾಯಿದೆಯಡಿ ಬಂಧಿತನಾಗಿರುವ ಉತ್ತರ ಪ್ರದೇಶ ಮೂಲದ ಕೈಲಾಶ್‌ ಎಂಬಾತನ ಪ್ರಕರಣದ ವಿಚಾರಣೆ ನಡೆಸುವ ವೇಳೆ ನ್ಯಾ. ರೋಹಿತ್‌ ರಂಜನ್‌ ಅಗರವಾಲ್‌ ನೇತೃತ್ವದ ಪೀಠವು ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಭಾರತದ ಸಂವಿಧಾನದ 25ನೇ ವಿಧಿಯು ಧಾರ್ಮಿಕ ಮತಾಂತರಕ್ಕೆ ಅವಕಾಶ ನೀಡುವುದಿಲ್ಲ ಎಂದೂ ತಿಳಿಸಿದೆ.

ಏನಿದು ಪ್ರಕರಣ?

ಆರೋಪಿ ಕೈಲಾಶ್‌ ದೆಹಲಿಯಲ್ಲಿ ಧಾರ್ಮಿಕ ಸಭೆ ಆಯೋಜಿಸಿ ಅದರಲ್ಲಿ ಭಾಗವಹಿಸುವಂತೆ ಆಗ್ರಹಿಸಿ ತನ್ನ ಹಳ್ಳಿಯಿಂದ ಅನೇಕರನ್ನು ಕರೆದೊಯ್ದಿದ್ದಾನೆ. ಈ ಪೈಕಿ ಹೆಚ್ಚಿನವರು ಮನೆಗೆ ಮರಳಲಿಲ್ಲ ಎಂದು ದೂರುದಾರರು ಆರೋಪಿಸಿದ್ದಾರೆ. ಅಲ್ಲಿ ಆತ ಮುಗ್ಧ ಜನರನ್ನು ಕ್ರಿಶ್ಚಿಯನ್‌ ಧರ್ಮಕ್ಕೆ ಮತಾಂತರ ಮಾಡಿದ್ದಾನೆ ಎಂದೂ ದೂರಿನಲ್ಲಿ ತಿಳಿಸಲಾಗಿದೆ.

ವಾದ ವಿವಾದ ಆಲಿಸಿದ ಕೋರ್ಟ್‌, “ಕೈಲಾಶ್ ನವದೆಹಲಿಯಲ್ಲಿ ನಡೆದ ಧಾರ್ಮಿಕ ಸಭೆಗಳಿಗೆ ಹಾಜರಾಗಲು ಜನರನ್ನು ಕರೆದೊಯ್ಯುತ್ತಿದ್ದ ಮತ್ತು ಅಲ್ಲಿ ಅವರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲಾಗುತ್ತಿತ್ತು ಎನ್ನುವುದು ಸ್ಪಷ್ಟವಾಗಿದೆ. ಇದೇ ರೀತಿ ಮುಂದುವರಿದರೆ ದೇಶದಲ್ಲಿರುವ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗುವ ದಿನ ದೂರವಿಲ್ಲ. ಕೂಡಲೇ ಮತಾಂತರವನ್ನು ನಿಲ್ಲಿಸಬೇಕುʼʼ ಎಂದು ಸೂಚಿಸಿದೆ.

“ಉತ್ತರ ಪ್ರದೇಶದಾದ್ಯಂತ ಎಸ್‌ಸಿ / ಎಸ್‌ಟಿ ಮತ್ತು ಇತರ ಜಾತಿಗಳ ಜನರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಕಾನೂನುಬಾಹಿರವಾಗಿ ಮತಾಂತರಿಸುವುದು ವ್ಯಾಪಕವಾಗಿದೆ ಎಂಬುದು ನ್ಯಾಯಾಲಯದ ಗಮನಕ್ಕೆ ಬಂದಿದೆ” ಎಂದ ನ್ಯಾ. ರೋಹಿತ್‌ ರಂಜನ್‌ ಅಗರವಾಲ್‌ ಅವರು ಆರೋಪಿಗೆ ಜಾಮೀನು ನಿರಾಕರಿಸಿದರು.

ವಾದದ ವೇಳೆ ಆರೋಪಿ ಪರ ವಕೀಲ ಸಾಕೇತ್ ಜೈಸ್ವಾಲ್, ಸಂತ್ರಸ್ತ ರಾಮ್‌ಪಾಲ್‌ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿಲ್ಲ ಅಥವಾ ಅವರು ಕ್ರಿಶ್ಚಿಯನ್ ಅಲ್ಲ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಲು ಮುಂದಾದರು. ಅವರು ಇತರರೊಂದಿಗೆ ಧಾರ್ಮಿಕ ಕಾರ್ಯಕ್ರಮಕ್ಕೆ ಹಾಜರಾಗಿದ್ದರಷ್ಟೆ. ಅಲ್ಲದೆ ಧಾರ್ಮಿಕ ಸಭೆಗಳನ್ನು ನಡೆಸುತ್ತಿದ್ದ ಸೋನು ಪಾಸ್ಟರ್‌ಗೆ ಈಗಾಗಲೇ ಜಾಮೀನು ನಿಡಲಾಗಿದೆ ಎಂದು ತಿಳಿಸಿದರು. ಆದರೂ ಕೈಲಾಶ್‌ಹೆ ಜಾಮೀನು ನಿರಾಕರಿಸಲಾಯಿತು.

ರಾಜ್ಯದಲ್ಲಿ ಅಕ್ರಮ ಮತಾಂತರ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕ್ರಿಶ್ಚಿಯನ್ ಮಿಷನರಿಗಳು ಮತ್ತು ಮುಸ್ಲಿಂ ಸಂಘಟನೆಗಳು ಬಹುಸಂಖ್ಯಾತ ಹಿಂದೂಗಳಿಗೆ ಆಮಿಷ ಒಡ್ಡಿ ಮತಾಂತರ ನಡೆಸುತ್ತಿರುವುದು ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ.

ಇದನ್ನೂ ಓದಿ: Religious Conversion: ಶಿವಮೊಗ್ಗದಲ್ಲಿ ಆಮಿಷವೊಡ್ಡಿ ಮತಾಂತರಕ್ಕೆ ಯತ್ನ; ಪಾದ್ರಿ ಸೇರಿ ಹಲವರು ಪೊಲೀಸ್‌ ವಶಕ್ಕೆ

ಪಾದ್ರಿ ಸೇರಿ 10 ಮಂದಿಯ ಬಂಧನ

ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಆಮಿಷದ ಮೂಲಕ ಹಿಂದೂಗಳ ದೊಡ್ಡ ಗುಂಪೊಂದನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲು ಪ್ರಯತ್ನಿಸಿದ ಆರೋಪದ ಮೇಲೆ ಚರ್ಚ್ ಪಾದ್ರಿ ಸೇರಿದಂತೆ ಹತ್ತು ಜನರನ್ನು ಬಂಧಿಸಲಾಗಿತ್ತು. ಬಳಿಕ ರಾಜ್ಯದ ಮತಾಂತರ ತಡೆ ಕಾನೂನು ಪ್ರಕಾರ (Anti-conversion law) ಇವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಚರ್ಚ್‌ನ ಪಾದ್ರಿ ಫಾದರ್‌ ಡೊಮೆನಿಕ್‌, ಸರ್ಜು ಪ್ರಸಾದ್‌ ಗೌತಮ್‌, ಪವನ್‌ ಕುಮಾರ್‌, ಸುನಿಲ್‌ ಪಾಸಿ, ಘನಶ್ಯಾಮ್‌ ಗೌತಮ್‌, ಸುರೇಂದ್ರ ಪಾಸ್ವಾನ್‌, ರಾಹುಲ್‌ ಪಾಸ್ವಾನ್‌, ರಾಮಚಂದ್ರನ್‌ ರಾವತ್‌, ಧರ್ಮೇಂದ್ರ ಕೋರಿ ಮತ್ತು ಸೂರಜ್‌ ಗೌತಮ್‌ ಬಂಧಿತರು.

Continue Reading

ವಾಣಿಜ್ಯ

Stock Market: ಷೇರು ಪೇಟೆಯಲ್ಲಿ ಗೂಳಿ ನೆಗೆತ; 80,000 ಅಂಕಗಳ ಗಡಿ ತಲುಪಿದ ಸೆನ್ಸೆಕ್ಸ್‌

Stock Market: ಬಾಂಬೆ ಷೇರು ಪೇಟೆಯಲ್ಲಿ ಗೂಳಿ ನೆಗೆತ ಮುಂದುವರಿದಿದೆ. ವಹಿವಾಟು ಆರಂಭವಾದ ಕೆಲ ಹೊತ್ತಿನಲ್ಲಿ ಸೆನ್ಸೆಕ್ಸ್‌ ದಾಖಲೆಯ 79,653.21 ಅಂಕ ತಲುಪಿದೆ. ನಿಫ್ಟಿ ಕೂಡ ಹೊಸ ದಾಖಲೆ ಬರೆದಿದ್ದು 24,186.5 ಪಾಯಿಂಟ್‌ ಗಡಿ ಮುಟ್ಟಿದೆ. ಮಂಗಳವಾರ ಬೆಳಿಗ್ಗೆ ಎನ್ಎಸ್ಇ ನಿಫ್ಟಿ ಶೇ. 0.21ರಷ್ಟು ಏರಿಕೆ ಕಂಡು 24,186.5 ಪಾಯಿಂಟ್‌ಗೆ ತಲುಪಿದ್ದರೆ, ಬಿಎಸ್ಇ ಸೆನ್ಸೆಕ್ಸ್ ಶೇಕಡಾ 0.22ರಷ್ಟು ಹೆಚ್ಚಳ ದಾಖಲಿಸಿ 79,653.21 ಪಾಯಿಂಟ್‌ ಗಳಿಸಿದೆ.

VISTARANEWS.COM


on

Stock Market
Koo

ಮುಂಬೈ: ಬಾಂಬೆ ಷೇರು ಪೇಟೆ (Stock Market)ಯಲ್ಲಿ ಗೂಳಿ ನೆಗೆತ ಮುಂದುವರಿದಿದೆ. ಕೆಲವು ದಿನಗಳ ಹಿಂದೆ ಐತಿಹಾಸಿಕ 79,000 ಅಂಕ ತಲುಪಿದ್ದ ಸೆನ್ಸೆಕ್ಸ್‌ (Sensex) ಇಂದು (ಜುಲೈ 2) ಕೂಡ ಮೇಲ್ಮುಖವಾಗಿ ಸಾಗಿದೆ. ವಹಿವಾಟು ಆರಂಭವಾದ ಕೆಲ ಹೊತ್ತಿನಲ್ಲಿ ಸೆನ್ಸೆಕ್ಸ್‌ ದಾಖಲೆಯ 79,653.21 ಅಂಕ ತಲುಪಿದೆ. ನಿಫ್ಟಿ (Nifty) ಕೂಡ ಹೊಸ ದಾಖಲೆ ಬರೆದಿದ್ದು 24,186.5 ಪಾಯಿಂಟ್‌ ಗಡಿ ಮುಟ್ಟಿದೆ.

ಮಂಗಳವಾರ ಬೆಳಿಗ್ಗೆ ಎನ್ಎಸ್ಇ ನಿಫ್ಟಿ ಶೇ. 0.21ರಷ್ಟು ಏರಿಕೆ ಕಂಡು 24,186.5 ಪಾಯಿಂಟ್‌ಗೆ ತಲುಪಿದ್ದರೆ, ಬಿಎಸ್ಇ ಸೆನ್ಸೆಕ್ಸ್ ಶೇಕಡಾ 0.22ರಷ್ಟು ಹೆಚ್ಚಳ ದಾಖಲಿಸಿ 79,653.21 ಪಾಯಿಂಟ್‌ ಗಳಿಸಿದೆ. ಐಟಿ ಕಂಪನಿಗಳ ಲಾಭ ಮತ್ತು ಯುಎಸ್ ಫೆಡರಲ್ ಸೆಪ್ಟೆಂಬರ್‌ನಲ್ಲಿ ರಿಸರ್ವ್ ಬಡ್ಡಿದರ ಕಡಿತದ ಭರವಸೆ ನೀಡಿದ ಹಿನ್ನೆಲೆಯಲ್ಲಿ ಭಾರತೀಯ ಷೇರುಗಳು ಇಂದು ಈ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿವೆ.

ಹಿಂದಿನ ಸೆಷನ್‌ನಲ್ಲಿ ಶೇ. 2ರಷ್ಟು ಏರಿಕೆ ಕಂಡಿದ್ದ ಐಟಿ ಷೇರುಗಳು ಇಂದು ಮತ್ತೆ ಶೇ. 0.7ರಷ್ಟು ಹೆಚ್ಚಳ ದಾಖಲಿಸಿವೆ. ಎಲ್ಲ 13 ಪ್ರಮುಖ ವಲಯಗಳು ಲಾಭವನ್ನು ಕಂಡವು. ಅದರಲ್ಲಿಯೂ ಸಣ್ಣ ಮತ್ತು ಮಧ್ಯಮ ಗಾತ್ರದ ಕಂಪನಿಗಳು ಕ್ರಮವಾಗಿ ಶೇ. 0.4 ಮತ್ತು ಶೇ. 0.2 ಹೆಚ್ಚಳ ಕಂಡವು.

ಈ ಮಧ್ಯೆ ಆರಂಭಿಕ ವಹಿವಾಟಿನಲ್ಲಿ ಯುಎಸ್ ಡಾಲರ್ ವಿರುದ್ಧ ರೂಪಾಯಿ 12 ಪೈಸೆ ದುರ್ಬಲಗೊಂಡು 83.56ಕ್ಕೆ ತಲುಪಿದೆ. ಜಾಗತಿಕ ಮಾರುಕಟ್ಟೆಗಳಲ್ಲಿ ಬಲವಾದ ಯುಎಸ್ ಡಾಲರ್ ಮತ್ತು ಹೆಚ್ಚಾದ ಕಚ್ಚಾ ತೈಲ ಬೆಲೆಗಳು ಇದಕ್ಕೆ ಕಾರಣ. ತೈಲ ಆಮದುದಾರರು ಮತ್ತು ವಿದೇಶಿ ಹೂಡಿಕೆದಾರರು ಯುಎಸ್ ಡಾಲರ್‌ ಹೆಚ್ಚಾಗಿ ಬಳಸುತ್ತಿದ್ದು, ಇದು ರೂಪಾಯಿ ಕುಸಿತಕ್ಕೆ ಕಾರಣವಾಗಿದೆ ಎಂದು ವಿದೇಶಿ ವಿನಿಮಯ ವ್ಯಾಪಾರಿಗಳು ವಿವರಿಸಿದ್ದಾರೆ.

ಇಂಟರ್‌ ಬ್ಯಾಂಕ್‌ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ 83.51 ಮೌಲ್ಯದೊಂದಿಗೆ ದಿನವನ್ನು ಆರಂಭಿಸಿತು. ಆದರೆ ಬಳಿಕ ಡಾಲರ್ ವಿರುದ್ಧ 83.56ಕ್ಕೆ ಇಳಿಯಿತು. ಈ ಮೂಲಕ ಸೋಮವಾರಕ್ಕಿಂತ 12 ಪೈಸೆ ಕುಸಿತ ದಾಖಲಿಸಿದೆ.

ಗುರುವಾರ (ಜೂನ್‌ 27)ದ ಆರಂಭಿಕ ವಹಿವಾಟಿನಲ್ಲಿ ಕುಸಿದ ನಂತರ ಬೆಂಚ್ ಮಾರ್ಕ್ ಸೂಚ್ಯಂಕಗಳು ಜಿಗಿದುಕೊಂಡಿದ್ದವು. ಅಂದು ಸೆನ್ಸೆಕ್ಸ್ ಮೊದಲ ಬಾರಿಗೆ ಐತಿಹಾಸಿಕ 79,000 ಗಡಿಯನ್ನು ದಾಟಿತ್ತು ಮತ್ತು ನಿಫ್ಟಿ ಬ್ಲೂ-ಚಿಪ್ ಷೇರುಗಳ ಖರೀದಿಯ ಮಧ್ಯೆ ತನ್ನ ಹೊಸ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿತ್ತು. ರಿಲಯನ್ಸ್‌ ಇಂಡಸ್ಟ್ರೀಸ್‌ನ ಬ್ಲೂ-ಚಿಪ್ ಮತ್ತು ಐಸಿಐಸಿಐಯ ಷೇರು ಖರೀದಿಯೊಂದಿಗೆ 30 ಷೇರುಗಳ ಬಿಎಸ್ಇ ಸೆನ್ಸೆಕ್ಸ್ 339.51 ಪಾಯಿಂಟ್ಸ್ ಏರಿಕೆ ಕಂಡು 79,013.76ಕ್ಕೆ ತಲುಪಿದ್ದರೆ ಅದೇ ರೀತಿ ನಿಫ್ಟಿ ಕೂಡ 97.6 ಪಾಯಿಂಟ್ ಏರಿಕೆ ಕಂಡು ಸಾರ್ವಕಾಲಿಕ ಗರಿಷ್ಠ 23,966.40ಕ್ಕೆ ಮುಟ್ಟಿತ್ತು. “ಸದ್ಯದ ಪರಿಸ್ಥಿತಿಯನ್ನು ಅವಲೋಕಿಸಿದರೆ ಸೆನ್ಸೆಕ್ಸ್ ಅನ್ನು 80,000 ಮಟ್ಟಕ್ಕೆ ತಲುಪುವ ಸಾಧ್ಯತೆ ಇದೆ. ಬ್ಯಾಂಕಿಂಗ್ ಮತ್ತು ಟೆಲಿಕಾಂನಂತಹ ಕ್ಷೇತ್ರಗಳಲ್ಲಿ ಬಲವಾದ ಲಾರ್ಜ್ ಕ್ಯಾಪ್‌ಗಳು ಈಗ ಏರಿಕೆ ಪ್ರವೃತ್ತಿಯನ್ನು ಮುನ್ನಡೆಸುತ್ತಿವೆ” ಎಂದು ತಜ್ಞರು ಹೇಳಿದ್ದಾರೆ. 

ಇದನ್ನೂ ಓದಿ: Share Market: ಮೊದಲ ಬಾರಿಗೆ 79,000 ಅಂಕಗಳ ಗಡಿ ದಾಟಿದ ಸೆನ್ಸೆಕ್ಸ್; ಗರಿಷ್ಠ ಮಟ್ಟ ತಲುಪಿದ ನಿಫ್ಟಿ

Continue Reading

ದೇಶ

Yogi Adityanath: ಉತ್ತರಪ್ರದೇಶಕ್ಕೆ ಅಪಮಾನ ಮಾಡಲು ರಾಹುಲ್‌ ಗಾಂಧಿ ಸಂಚು; ಯೋಗಿ ಕಿಡಿ

Yogi Adityanath: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಜನರಿಂದ ಭೂಮಿ ಕಸಿದಿದ್ದು, ಅದಕ್ಕೆ ಪರಿಹಾರ ನೀಡಿಲ್ಲ ಎಂದು ಹೇಳಿಕೆ ನೀಡಿದ್ದ ರಾಹುಲ್‌ ಗಾಂಧಿ ವಿರುದ್ಧ ಕಿಡಿ ಕಾರಿರುವ ಯೋಗಿ, ಮಾಧ್ಯಮ ಪ್ರಕಟಣೆ ಮೂಲಕ ಟಾಂಗ್‌ ಕೊಟ್ಟಿದ್ದಾರೆ. ಸದನದಲ್ಲಿ ರಾಹುಲ್ ನೀಡಿರುವ ಹೇಳಿಕೆ ಅತ್ಯಂತ ಖಂಡನೀಯ ಮತ್ತು ನಾಚಿಕೆಗೇಡು. ಅಯೋಧ್ಯೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸಂದರ್ಭದಲ್ಲಿ ನಿರಾಶ್ರಿತರಾದ ಜನರಿಗೆ ಪರಿಹಾರವಾಗಿ 1,733 ಕೋಟಿ ರೂಪಾಯಿ ನೀಡಲಾಗಿದೆ ಎಂದು ಯೋಗಿ ಹೇಳಿದರು.

VISTARANEWS.COM


on

Yogi Adityanath
Koo

ಹೊಸದಿಲ್ಲಿ: ನಿನ್ನೆ ಸಂಸತ್‌ ಅಧಿವೇಶನ(Parliament Sessions)ದಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ(Rahul Gandhi) ಹಿಂದೂ ಹಿಂಸಾವಾದಿ, ಅಯೋಧ್ಯೆ ರಾಮ ಮಂದಿರದ ಬಗೆಗಿನ ಹೇಳಿಕೆ ಬಗ್ಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್‌(Yogi Adityanath) ತಿರುಗೇಟು ಕೊಟ್ಟಿದ್ದಾರೆ. ರಾಹುಲ್‌ ಗಾಂಧಿ ಸುಳ್ಳು ಮತ್ತು ತಪ್ಪಾದ ಮಾಹಿತಿ ಹರಡುವ ಮೂಲಕ ಉತ್ತರಪ್ರದೇಶಕ್ಕೆ ಅಪಮಾನ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಜನರಿಂದ ಭೂಮಿ ಕಸಿದಿದ್ದು, ಅದಕ್ಕೆ ಪರಿಹಾರ ನೀಡಿಲ್ಲ ಎಂದು ಹೇಳಿಕೆ ನೀಡಿದ್ದ ರಾಹುಲ್‌ ಗಾಂಧಿ ವಿರುದ್ಧ ಕಿಡಿ ಕಾರಿರುವ ಯೋಗಿ, ಮಾಧ್ಯಮ ಪ್ರಕಟಣೆ ಮೂಲಕ ಟಾಂಗ್‌ ಕೊಟ್ಟಿದ್ದಾರೆ. ಸದನದಲ್ಲಿ ರಾಹುಲ್ ನೀಡಿರುವ ಹೇಳಿಕೆ ಅತ್ಯಂತ ಖಂಡನೀಯ ಮತ್ತು ನಾಚಿಕೆಗೇಡು. ಅಯೋಧ್ಯೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸಂದರ್ಭದಲ್ಲಿ ನಿರಾಶ್ರಿತರಾದ ಜನರಿಗೆ ಪರಿಹಾರವಾಗಿ 1,733 ಕೋಟಿ ರೂಪಾಯಿ ನೀಡಲಾಗಿದೆ ಎಂದು ಯೋಗಿ ಹೇಳಿದರು.

ರಾಹುಲ್ ಗಾಂಧಿ ಮತ್ತು ಅವರ ಸಹಚರರು ಅಯೋಧ್ಯೆ ಜನರನ್ನು ಗಡಿಪಾರು ಮಾಡಿದ್ದು ಮಾತ್ರವಲ್ಲದೆ ಸರಯೂ ನದಿಯನ್ನು ರಕ್ತದಲ್ಲಿ ಮುಳುಗಿಸಿದ್ದರು. ಇಂದು, ಅಯೋಧ್ಯೆ ತನ್ನ ವೈಭವವನ್ನು ಮರುಸ್ಥಾಪಿಸುತ್ತಿರುವಾಗ ಮತ್ತು ಇಡೀ ಜಗತ್ತನ್ನು ಆಕರ್ಷಿಸುತ್ತಿರುವಾಗ, ಕಾಂಗ್ರೆಸ್ ಅದನ್ನು ಹೇಗೆ ಒಳ್ಳೆಯದು ಎಂದು ಪರಿಗಣಿಸುತ್ತದೆ? ಕಾಂಗ್ರೆಸ್ ಸುಳ್ಳಿನ ಕಂತೆ. ನಿಜ ಹೇಳಬೇಕೆಂದರೆ 1733 ಕೋಟಿ ರೂಪಾಯಿ ಅಯೋಧ್ಯೆಯ ಜನರಿಗೆ ಪರಿಹಾರವಾಗಿ ನೀಡಲಾಗಿದೆ ಎಂದಿದ್ದಾರೆ.

ರಾಮಪಥ, ಭಕ್ತಿಪಥ, ಜನ್ಮಭೂಮಿ ಪಥ ಅಥವಾ ವಿಮಾನ ನಿಲ್ದಾಣವೇ ಆಗಿರಲಿ, ಯಾರ ಜಮೀನು, ಅಂಗಡಿಗಳು ಮತ್ತು ಮನೆಗಳು ಭಾಗಿಯಾಗಿವೆಯೋ ಅವರಿಗೆ ಪರಿಹಾರ ನೀಡಲಾಗಿದೆ. ಹಿಂಬದಿಯಲ್ಲಿ ಅಂಗಡಿ ಕಟ್ಟಲು ಜಾಗ ಇದ್ದವರಿಗೆ ಅಂಗಡಿಗಳನ್ನು ನಿರ್ಮಿಸಿಕೊಟ್ಟಿದೇವೆ. ನಿವೇಶನ ಇಲ್ಲದವರಿಗೆ ಮಳಿಗೆ ನೀಡುವ ಕೆಲಸವನ್ನು ಬಹುಹಂತದ ಕಾಂಪ್ಲೆಕ್ಸ್ ನಿರ್ಮಿಸಿ ಕೊಡಲಾಗುತ್ತದೆ ಎಂದರು. ಇದು ಯುಪಿ ಮತ್ತು ಅಯೋಧ್ಯೆಯ ಮಾನಹಾನಿ ಮಾಡುವ ಸಂಚು. ಇದು ಭಾರತ ಮತ್ತು ಅಯೋಧ್ಯೆಯ ಪ್ರತಿಷ್ಠೆಯನ್ನು ಹಾಳುಮಾಡುವ ಮನಸ್ಥಿತಿಯ ಭಾಗವಾಗಿದೆ.

ಹಿಂದೂಗಳ ಬಗ್ಗೆ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೀಡಿರುವ ಆಕ್ಷೇಪಾರ್ಹ ಹೇಳಿಕೆಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರವಾಗಿ ಖಂಡಿಸಿದ್ದಾರೆ. ರಾಹುಲ್ ಗಾಂಧಿ ತಮ್ಮ ಖಂಡನೀಯ ಹೇಳಿಕೆಗೆ ಜಗತ್ತಿನಾದ್ಯಂತ ಹರಡಿರುವ ಕೋಟ್ಯಂತರ ಹಿಂದೂಗಳ ಕ್ಷಮೆಯಾಚಿಸಬೇಕು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ರಾಹುಲ್‌ ಹೇಳಿದ್ದೇನು?

ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆಯ ದಿನ ಅದಾನಿ ಅಂಬಾನಿಯವರನ್ನು ಆಮಂತ್ರಿಸಲಾಗಿತ್ತು. ಆದರೆ, ಅಲ್ಲಿನ ಸ್ಥಳೀಯ ಜನರನ್ನು ದೂರವಿಡಲಾಗಿತ್ತು. ಅದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ಅಲ್ಲಿನ ಮತದಾರರು ಬಿಜೆಪಿಗೆ ಸೂಕ್ತ ಪಾಠ ಕಲಿಸಿದ್ದಾರೆ” ಎಂದು ರಾಹುಲ್ ಗಾಂಧಿ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದರು. ಅಯೋಧ್ಯೆಯಲ್ಲಿನ ಅಭಿವೃದ್ಧಿ ನೀತಿಗಳನ್ನು ಉಲ್ಲೇಖಿಸಿದ ಗಾಂಧಿ, ಸೂಕ್ತ ಪರಿಹಾರವಿಲ್ಲದೆ ಸ್ಥಳೀಯರಿಂದ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಸಣ್ಣ ಅಂಗಡಿಗಳು ಮತ್ತು ಮನೆಗಳನ್ನು ನೆಲಸಮಗೊಳಿಸಲಾಯಿತು, ನಿವಾಸಿಗಳನ್ನು ಬೀದಿಗಿಳಿಸಲಾಯಿತು ಎಂದು ಆರೋಪಿಸಿದರು.

ಇದನ್ನೂ ಓದಿ: Money Guide: ವಿದೇಶ ಪ್ರವಾಸಕ್ಕೆ ಮುಂದಾಗಿದ್ದೀರಾ? ಅತ್ಯುತ್ತಮ ಕೊಡುಗೆ ನೀಡುವ ಈ ಅಂತಾರಾಷ್ಟ್ರೀಯ ಡೆಬಿಟ್ ಕಾರ್ಡ್‌ ಬಗ್ಗೆ ತಿಳಿಯಿರಿ

Continue Reading

ದೇಶ

Good News For Farmers: ಬಿಸಿಲಿನ ಝಳಕ್ಕೆ ಬಸವಳಿದ ಕೃಷಿಕರಿಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ; ಈ ತಿಂಗಳು ಉತ್ತಮ ವರ್ಷಧಾರೆ

Good News For Farmers: ದೇಶದ ರೈತರಿಗೆ ಭಾರತೀಯ ಹವಾಮಾನ ಇಲಾಖೆ ಶುಭ ಸುದ್ದಿಯೊಂದನ್ನು ನೀಡಿದೆ. ಈ ತಿಂಗಳು ಇಡೀ ಭಾರತದಲ್ಲಿ ಮಾಸಿಕ ಮಳೆ ಶೇ. 106ಕ್ಕಿಂತ ಹೆಚ್ಚು ಸುರಿಯು ಸಾಧ್ಯತೆ ಇದೆ ಎಂದು ತಿಳಿಸಿದೆ. ಖಾರಿಫ್ ಬೆಳೆಗಳ ಬಿತ್ತನೆಗೆ ಸಜ್ಜಾಗುತ್ತಿರುವ ರೈತರಿಗೆ ಇದು ಶುಭ ಸುದ್ದಿ ಎನಿಸಿಕೊಂಡಿದೆ. ಐಎಂಡಿಯ ಮಾಸಿಕ ಮುನ್ಸೂಚನೆಯ ಪ್ರಕಾರ ಜುಲೈಯಲ್ಲಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ.

VISTARANEWS.COM


on

Good News For Farmers
Koo

ನವದೆಹಲಿ: ದಾಖಲೆಯ ಬಿಸಿಲಿನಿಂದ ಬಸವಳಿದ ದೇಶದ ರೈತರಿಗೆ ಭಾರತೀಯ ಹವಾಮಾನ ಇಲಾಖೆ (India Meteorological Department) ಶುಭ ಸುದ್ದಿಯೊಂದನ್ನು ನೀಡಿದೆ (Good News For Farmers). ಈ ತಿಂಗಳು ಇಡೀ ಭಾರತದಲ್ಲಿ ಮಾಸಿಕ ಮಳೆ ಶೇ. 106ಕ್ಕಿಂತ ಹೆಚ್ಚು ಸುರಿಯು ಸಾಧ್ಯತೆ ಇದೆ ಎಂದು ತಿಳಿಸಿದೆ. ಈ ವರ್ಷದ ಜೂನ್‌ನಲ್ಲಿ 123 ವರ್ಷಗಳ ಇತಿಹಾಸದಲ್ಲೇ ಅತ್ಯಂತ ಅಧಿಕ ತಾಪಮಾನ ದಾಖಲಾಗಿತ್ತು. ಇದೀಗ ಐಎಂಡಿಯ ವರದಿ ಕೃಷಿಕರಿಗೆ ತುಸು ಸಮಾಧಾನ ತಂದಿದೆ.

ಖಾರಿಫ್ ಬೆಳೆಗಳ ಬಿತ್ತನೆಗೆ (ವಿಶೇಷವಾಗಿ ಭತ್ತದಂತಹ ಹೆಚ್ಚಿನ ನೀರಿನ ಆವಶ್ಯಕತೆಯಿರುವ ಬೆಳೆ) ಸಜ್ಜಾಗುತ್ತಿರುವ ರೈತರಿಗೆ ಇದು ಶುಭ ಸುದ್ದಿ ಎನಿಸಿಕೊಂಡಿದೆ. ಮಳೆಯ ಕೊರತೆಯು ಜೂನ್‌ನಲ್ಲಿ ಸುಮಾರು ಶೇ. 32.6ಕ್ಕೆ ತಲುಪಿದ್ದರಿಂದ ವಾಯುವ್ಯ ಭಾರತದಲ್ಲಿ ಕಳೆದ ತಿಂಗಳು ಶುಷ್ಕ ವಾತಾವರಣ ಕಂಡು ಬಂದಿತ್ತು. ಹೀಗಾಗಿ ಈ ಪ್ರದೇಶವು ತೀವ್ರವಾದ ಶಾಖದ ಅಲೆಗಳಿಂದ ಸುಟ್ಟು ಹೋಗಿತ್ತು. ಅಲ್ಲದೆ 123 ವರ್ಷಗಳಲ್ಲಿ ಅತ್ಯಂತ ಬೆಚ್ಚಗಿನ ಜೂನ್ ಎನಿಸಿಕೊಂಡಿತ್ತು. ಸರಾಸರಿ ಮಾಸಿಕ ತಾಪಮಾನವು ಸಾಮಾನ್ಯಕ್ಕಿಂತ ಸುಮಾರು 1.65 ಡಿಗ್ರಿ ಹೆಚ್ಚು ದಾಖಲಾಗಿತ್ತು.

ಐಎಂಡಿಯ ಮಾಸಿಕ ಮುನ್ಸೂಚನೆಯ ಪ್ರಕಾರ ಜುಲೈಯಲ್ಲಿ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗಲಿದೆ. ಜತೆಗೆ ಈ ಪ್ರದೇಶದಲ್ಲಿ ಪ್ರವಾಹ ಉಂಟಾಗಬಹುದಾದಷ್ಟು ವಿಪರೀತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಹರಿಯಾಣ, ಉತ್ತರಾಖಂಡಕ್ಕೆ ಎಚ್ಚರಿಕೆ

ಐಎಂಡಿ ಡಿಜಿ ಡಾ.ಎಂ.ಮೊಹಾಪಾತ್ರ ಅವರ ಪ್ರಕಾರ ಜುಲೈನಲ್ಲಿ ಸುರಿಯುವ ಧಾರಾಕಾರ ಮಳೆಯು ಪಶ್ಚಿಮ ಹಿಮಾಲಯದ ರಾಜ್ಯಗಳಾದ ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ ಮತ್ತು ಬೆಟ್ಟದ ತಪ್ಪಲಿನ ರಾಜ್ಯಗಳಲ್ಲಿ ನದಿ ಪ್ರವಾಹಕ್ಕೆ ಕಾರಣವಾಗಬಹುದು.

“ಮುನ್ಸೂಚನೆಯ ಪ್ರಕಾರ ಭಾರೀ ಮಳೆಯಾಗಲಿದೆ. ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಮೇಘಸ್ಫೋಟ, ಭಾರಿ ಮಳೆಯಿಂದ ಭೂಕುಸಿತದಂತಹ ಅಪಾಯ ಎದುರಾಗುವ ಸಾಧ್ಯತೆ ಇದೆ. ಮಧ್ಯ ಭಾರತದ ಕೆಲವು ಭಾಗಗಳಲ್ಲಿ, ಗೋದಾವರಿ, ಮಹಾನದಿ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಭಾರೀ ಮಳೆಯಾಗುವ ನಿರೀಕ್ಷೆಯಿರುವುದರಿಂದ ಸ್ಥಳೀಯರು ಎಚ್ಚರಿಕೆ ವಹಿಸಬೇಕುʼʼ ಎಂದು ಅವರು ತಿಳಿಸಿದ್ದಾರೆ.

ಆದಾಗ್ಯೂ, ಈಶಾನ್ಯ ಭಾರತದಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಬಹುದು. ಇದರ ಹೊರತಾಗಿ ಉತ್ತರ ಪ್ರದೇಶದ ಕೆಲವು ಭಾಗಗಳಾದ ಗೋರಖ್ಪುರ, ಬಿಹಾರದ ಪಶ್ಚಿಮ ಜಿಲ್ಲೆಗಳು, ಜಾರ್ಖಂಡ್, ಮುಂತಾದ ಕೆಲವು ಭಾಗಗಳು ಮತ್ತು ಲಡಾಖ್‌ನಲ್ಲಿಯೂ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಊಹಿಸಿದೆ.

ಜೂನ್‌ನಲ್ಲಿ ಮಳೆ ಕೊರತೆ

ಭಾರತವು ಜೂನ್‌ನಲ್ಲಿ ಸುಮಾರು ಶೇ. 10.9ರಷ್ಟು ಮಳೆ ಕೊರತೆಯನ್ನು ದಾಖಲಿಸಿದೆ. ವಾಯುವ್ಯ ಭಾರತದಲ್ಲಿ ಇದರ ಪ್ರಮಾಣ ಹೆಚ್ಚು (ಶೇ. 32.6). ಮಧ್ಯ ಭಾರತ, ಪೂರ್ವ ಮತ್ತು ಈಶಾನ್ಯ ಭಾರತ (ಸುಮಾರು ಶೇ. 13)ದಲ್ಲಿಯೂ ಮಳೆ ಕೊರತೆ ಕಂಡು ಬಂದಿದೆ. ಸದ್ಯ ನೈಋತ್ಯ ಮಾನ್ಸೂನ್ ವೇಗ ಪಡೆದುಕೊಂಡಿದ್ದು, ಮತ್ತು ಮುಂದಿನ ಎರಡು-ಮೂರು ದಿನಗಳಲ್ಲಿ ಭಾರತವನ್ನು ಆವರಿಸಲಿದೆ ಎಂದು ಐಎಂಡಿ ತಿಳಿಸಿದೆ.

ಮಳೆಯ ಕೊರತೆಯು ಕಳೆದ ಕೆಲವು ದಿನಗಳಲ್ಲಿ ಉತ್ತರ ಭಾರತದ ಹಲವೆಡೆ ತಾಪಮಾನ ಹೆಚ್ಚಳಕ್ಕೆ ಮತ್ತು ತೀವ್ರವಾದ ಶಾಖದ ಅಲೆಗಳಿಗೆ ಕಾರಣವಾಗಿತ್ತು. ಹವಾಮಾನ ಇಲಾಖೆಯ ಪ್ರಕಾರ ಈ ಬೇಸಿಗೆಯಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಬಿಹಾರ, ಪಂಜಾಬ್, ಹರಿಯಾಣ ಮತ್ತು ದೆಹಲಿಯಲ್ಲಿ ಸುಮಾರು 20ರಿಂದ 38 ದಿನಗಳವರೆಗೆ ಉಷ್ಣಗಾಳಿ ಬೀಸಿದೆ.

ಇದನ್ನೂ ಓದಿ: Rain Effect : ಭಾರಿ ಮಳೆ ಎಫೆಕ್ಟ್‌; ಈ ಹೆದ್ದಾರಿ ಮಾರ್ಗದಲ್ಲಿ ನಾಳೆಯಿಂದ 1 ತಿಂಗಳು ವಾಹನ ಸಂಚಾರಕ್ಕೆ ನಿರ್ಬಂಧ!

Continue Reading
Advertisement
Rohit Sharma
ಕ್ರೀಡೆ12 mins ago

Rohit Sharma: ಪಿಚ್​ ಮಣ್ಣು ತಿಂದಿದ್ದೇಕೆ?; ಪ್ರತಿಕ್ರಿಯಿಸಿದ ರೋಹಿತ್​

Allahabad High Court
ದೇಶ18 mins ago

Allahabad High Court: ಮತಾಂತರ ತಡೆಯದಿದ್ದರೆ ಬಹುಸಂಖ್ಯಾತರು ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್ ಹೈಕೋರ್ಟ್ ಕಳವಳ

Physical Abuse
ಬೆಂಗಳೂರು22 mins ago

Physical Abuse : ಶಿಕ್ಷಕನಿಂದ ಇದೆಂಥ ಅನಾಚಾರ! ಬಾಲಕಿಗೆ ಲೈಂಗಿಕ ಕಿರುಕುಳ

Actor Darshan Devil gang gets life imprisonment What do legal experts say
ಕ್ರೈಂ36 mins ago

Actor Darshan: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ಹೆಸರು ಆಚೆ ಬಂದದ್ದು ಹೀಗೆ!

Road Rage Case
ಕರ್ನಾಟಕ37 mins ago

Road Rage Case: ಬೆಂಗಳೂರಲ್ಲಿ ಕಿಡಿಗೇಡಿಗಳಿಂದ ಕಾರು ಮಾಲೀಕನ ಕಾಪಾಡಿದ ಡ್ಯಾಶ್‌ ಕ್ಯಾಮೆರಾ; ವಿಡಿಯೊ ಇದೆ

Namma metro Yellow line
ಬೆಂಗಳೂರು48 mins ago

Namma Metro : ಗುಡ್‌ ನ್ಯೂಸ್‌- ಹಳದಿ ಮೆಟ್ರೋ ಮಾರ್ಗದಲ್ಲಿ ಟ್ರಯಲ್ ರನ್‌ ಮುಕ್ತಾಯ; ಸಿಗ್ನಲಿಂಗ್ ಟೆಸ್ಟ್ ಆರಂಭ

Shoaib Akhtar
ಕ್ರೀಡೆ1 hour ago

Shoaib Akhtar: ಭಗವದ್ಗೀತೆಯ ಸಂದೇಶ ಹಂಚಿಕೊಂಡ ಪಾಕ್​ ಆಟಗಾರ ಶೋಯೆಬ್ ಅಖ್ತರ್

Gold Rate Today
ಚಿನ್ನದ ದರ1 hour ago

Gold Rate Today: ಮತ್ತೆ ಮೇಲ್ಮುಖವಾಗಿ ಸಾಗಿದ ಚಿನ್ನದ ದರ; ಇಂದಿನ ಬೆಲೆ ಚೆಕ್‌ ಮಾಡಿ

Road Accident
ಕ್ರೈಂ2 hours ago

Road Accident : ಹೆದ್ದಾರಿಯಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್‌ಗೆ ‌ವೃದ್ಧ ಸಾವು; ಯುವಕನ ತಲೆ ಮೇಲೆ ಹರಿದ ಟ್ಯಾಂಕರ್‌

Virat Kohli
ಕ್ರೀಡೆ2 hours ago

Virat Kohli: ಬುರ್ಜ್‌ ಖಲೀಫಾದಲ್ಲಿ ಕಣ್ಮನ ಸೆಳೆದ ವಿರಾಟ್​ ಕೊಹ್ಲಿಯ ಫೋಟೊ; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ20 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌