Kannada New Film | ʻಊರಿಗೆ ಹೋಗಿ ಬರೋಕೂ ನಮ್ಮತ್ರ ಹಣವಿಲ್ಲʼ: ಕಂಬ್ಳಿಹುಳ ತಂಡಕ್ಕೆ ರಿಷಬ್‌ ಶೆಟ್ಟಿ ಹೇಳಿದ್ದೇನು? - Vistara News

ಸಿನಿಮಾ

Kannada New Film | ʻಊರಿಗೆ ಹೋಗಿ ಬರೋಕೂ ನಮ್ಮತ್ರ ಹಣವಿಲ್ಲʼ: ಕಂಬ್ಳಿಹುಳ ತಂಡಕ್ಕೆ ರಿಷಬ್‌ ಶೆಟ್ಟಿ ಹೇಳಿದ್ದೇನು?

ಕಂಬ್ಳಿಹುಳ ಸಿನಿಮಾ ರಾಜ್ಯದೆಲ್ಲೆಡೆ ಸದ್ದು (Kannada New Film) ಮಾಡುತ್ತಿದೆ. ಇದೀಗ ಚಿತ್ರದ ಬಗ್ಗೆ ರಿಷಬ್‌ ಶೆಟ್ಟಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

VISTARANEWS.COM


on

Kannada New Film
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಹೊಸಬರೇ ತಯಾರಿಸಿರುವ ‘ಕಂಬ್ಳಿಹುಳ’ ಸಿನಿಮಾ (Kannada New Film) ನವೆಂಬರ್‌ 4ರಂದು ಬಿಡುಗಡೆಗೊಂಡಿದೆ. ʻಚಿತ್ರ ಒಟಿಟಿ ಬರುವವರೆಗೂ ಕಾಯಬೇಡಿ, ಚಿತ್ರವನ್ನು ಚಿತ್ರಮಂದಿರದಲ್ಲಿಯೇ ನೋಡಿʼ ಎಂದು ನೋಡುಗರು ಸೋಷಿಯಲ್‌ ಮೀಡಿಯಾ ಮೂಲಕ ವಿಮರ್ಶೆ ನೀಡುತ್ತಿದ್ದಾರೆ. ಕಂಬ್ಳಿಹುಳ ಸಿನಿಮಾ ರಾಜ್ಯದೆಲ್ಲೆಡೆ ಸದ್ದು ಮಾಡುತ್ತಿದ್ದು ಯೋಗರಾಜ್ ಭಟ್, ಜಯತೀರ್ಥ, ಬಿಎಂ ಗಿರಿರಾಜ್, ಕಿರಣ್‌ ರಾಜ್, ಧನಂಜಯ್, ವಿನಯ್ ರಾಜ್‌ಕುಮಾರ್ ಸೇರಿದಂತೆ ಅನೇಕರು ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಪ್ರೋತ್ಸಾಹಿಸಿದ್ದಾರೆ. ಇದೀಗ ಚಿತ್ರದ ಬಗ್ಗೆ ರಿಷಬ್‌ ಶೆಟ್ಟಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ಸಿನಿಮಾ ಜನತೆಗೆ ತಲುಪಲಿ
ರಿಷಬ್‌ ಶೆಟ್ಟಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಶೇರ್‌ ಮಾಡಿಕೊಂಡಿದ್ದು ʻʻಕಂಬ್ಳಿ ಹುಳ’ ಚಿತ್ರಕ್ಕೆ ಎಲ್ಲೆಡೆಯಿಂದ ಸಾಕಷ್ಟು ಪ್ರಶಂಸೆ ಕೇಳಿಬರುತ್ತಿದೆ. ಆದಷ್ಟು ಬೇಗ ಸಿನಿಮಾ ನೋಡುತ್ತೇನೆ. ಒಂದು ಉತ್ತಮ ಚಿತ್ರವನ್ನು ಗೆಲ್ಲಿಸಲು ಇಡೀ ಚಿತ್ರರಂಗ ಒಟ್ಟಾಗಿ ನಿಂತಿರುವುದು ಹೆಮ್ಮೆಯ ವಿಷಯ. ಇದು ಜನತೆಗೂ ತಲುಪಿ ಚಿತ್ರಮಂದಿರಗಳು ಹೌಸ್ ಫುಲ್ ಆಗಲಿ. ನಿರ್ದೇಶಕ ನವನ್‌ ಶ್ರೀನಿವಾಸ್‌ ಹಾಗೂ ತಂಡಕ್ಕೆ ಅಭಿನಂದನೆಗಳುʼʼಎಂದು ಬರೆದುಕೊಂಡಿದ್ದಾರೆ.

ಅರ್ಧ ಟಿಕೆಟ್ ದರವನ್ನು ನಾನೇ ಹಿಂದಿರುಗಿಸುತ್ತೇನೆ!
ಕಂಬ್ಳಿಹುಳ ವೀಕ್ಷಿಸಿದ ಬಳಿಕ ಕನ್ನಡ ನಿರ್ದೇಶಕ ಸಿಂಪಲ್‌ ಸುನಿ ಅವರು ʻʻಚಿತ್ರಮಂದಿರಕ್ಕೆ ಬಂದು ಚಿತ್ರ ವೀಕ್ಷಿಸಿ. ಯಾರಿಗೆ ಚಿತ್ರ ಇಷ್ಟವಾಗುವುದಿಲ್ಲವೋ ಅವರಿಗೆ ಅರ್ಧ ಟಿಕೆಟ್ ದರವನ್ನು ನಾನೇ ಹಿಂದಿರುಗಿಸುತ್ತೇನೆʼʼ ಎಂದು ಚಿತ್ರದ ಕಂಟೆಂಟ್ ಬಗ್ಗೆ ಈ ಹಿಂದೆ ವಿಶ್ವಾಸ ವ್ಯಕ್ತಪಡಿಸಿದ್ದರು. ಇದೀಗ ಸಿನಿಮಾ ಚೆನ್ನಾಗಿದ್ದರೂ ಜನ ಚಿತ್ರಮಂದಿರಕ್ಕೆ ಬರುತ್ತಿಲ್ಲ ಎಂದು ಚಿತ್ರತಂಡ ಪ್ರಚಾರ ಕಾರ್ಯ ಮುಂದುವರಿಸಿದೆ. ನವೆಂಬರ್ 8 ಮಂಗಳವಾರ ಕಂಬ್ಳಿಹುಳ ಚಿತ್ರತಂಡ ಚಿತ್ರದ ವಿಶೇಷ ಪ್ರದರ್ಶನವನ್ನು ಏರ್ಪಡಿಸಿತ್ತು. ಈ ಸಂದರ್ಭದಲ್ಲಿ ಚಿತ್ರದ ನಟ ಅಂಜನ್‌ ನಾಗೇಂದ್ರ ಸಿನಿಮಾ ಬಗ್ಗೆ ಮನಬಿಚ್ಚಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.

ಇದನ್ನೂ ಓದಿ | Kannada Film | ಕಂಬ್ಳಿಹುಳ ಮೊದಲ ಹಾಡು ಔಟ್‌: ಮೋಡಿ ಮಾಡಿತು ಯಾಕೀ ನಗು ಹಾಡು!

ಊರಿಗೆ ಹೋಗಿ ಬರೋಕೂ ನಮ್ಮತ್ರ ಹಣವಿಲ್ಲ!
ʻʻಮೀಡಿಯಾಗಳು ಚಿತ್ರಗಳಿಗೆ ಬೆಂಬಲ ನೀಡುವುದಿಲ್ಲ ಎಂದು ಕೆಲವರು ಹೇಳುತ್ತಾರೆ. ಆದರೆ ನಮ್ಮ ಚಿತ್ರಕ್ಕೆ ಮೊದಲ ಬೆಂಬಲಕ್ಕೆ ನಿಂತದ್ದು ಮೀಡಿಯಾ. ಯುಟ್ಯೂಬ್ ಚಾನೆಲ್, ಪ್ರಿಂಟ್ ಮೀಡಿಯಾ, ಸುದ್ದಿ ವಾಹಿನಿಗಳು ಹೀಗೆ ಪ್ರತಿ ಒಬ್ಬರೂ ಸಹ ಬೆಂಬಲ ನೀಡಿದರು. ನಿರ್ದೇಶಕ ದಯನಾಂದ್‌ ಟಿ ಕೆ ಅವರು ನಮಗೆ ಧೈರ್ಯ ನೀಡದೇ ಇರುತ್ತಿದ್ದರೆ ಬೆಂಗಳೂರು ಬಿಡಬೇಕಿತ್ತು. ಇನ್ನು ತಮ್ಮ ಬಳಿ ಇದ್ದ ದುಡ್ಡನ್ನೆಲ್ಲಾ ಸೇರಿಸಿ ಇದೊಂದು ವಿಶೇಷ ಪ್ರದರ್ಶನವನ್ನು ಆಯೋಜಿಸಿದ್ದೇವೆ, ಹೇಳಬೇಕೆಂದರೆ ನಾಳೆ ಊರಿಗೆ ಹೋಗಿ ಬರುವುದಕ್ಕೂ ನಮ್ಮತ್ರ ಹಣವಿಲ್ಲ. ಎಲ್ಲರೂ ಸಿನಿಮಾ ನೋಡಿ ಎಂದು ಮನವಿ ಮಾಡಿದ್ದಾರೆʼʼನಟ ಅಂಜನ್‌ ನಾಗೇಂದ್ರ.

ಮಲೆನಾಡ ಭಾಗದಲ್ಲಿ ಆಗುವ ಪ್ರೇಮ ಕಥೆ!
ಈ ಚಿತ್ರಕ್ಕೆ ನವನ್ ಶ್ರೀನಿವಾಸ್ ನಿರ್ದೇಶನ ಮಾಡಿದ್ದಾರೆ. ಮಲೆನಾಡು ಭಾಗದಲ್ಲಿ ನಡೆಯುವ ಪ್ರೇಮಕಥೆ ಇದಾಗಿದೆ. ಕಿರುಚಿತ್ರಗಳನ್ನು ನಿರ್ದೇಶಿಸಿ ಅನುಭವವಿರುವ ನಿರ್ದೇಶಕ ನವನ್ ಶ್ರೀನಿವಾಸ್ ನಿರ್ದೇಶನದ ಮೊದಲ ಸಿನಿಮಾ ಇದು. ಶೃಂಗೇರಿ, ಸಕಲೇಶಪುರ, ತೀರ್ಥಹಳ್ಳಿ, ಸುತ್ತಮುತ್ತ ‘ಕಂಬ್ಳಿಹುಳ’ ಚಿತ್ರೀಕರಣ ನಡೆಸಲಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಎಮೋಷನಲ್ ಜರ್ನಿ ಸಿನಿಮಾ ಇದಾಗಿದ್ದು ರಂಗಭೂಮಿ ಕಲಾವಿದ ಅಂಜನ್ ನಾಗೇಂದ್ರ ಹಾಗೂ ಅಶ್ವಿತಾ ಆರ್ ಹೆಗ್ಡೆ ಚಿತ್ರದ ನಾಯಕ, ನಾಯಕಿಯಾಗಿ ನಟಿಸಿದ್ದಾರೆ.

ಗ್ರೇ ಸ್ಕ್ವೇರ್ ಸ್ಟುಡಿಯೋಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಈ ಚಿತ್ರ ನೈಜ ಘಟನೆಯಾಧಾರಿತ ಸಿನಿಮಾ. ಚಿತ್ರದಲ್ಲಿ ರೋಹಿತ್ ಕುಮಾರ್, ದೀಪಕ್ ರೈ ಪಣಜೆ, ಸಂಧ್ಯಾ ಅರಕೆರೆ, ಸಂಪತ್ ಶೆಟ್ಟಿ ಸೇರಿ ಹಲವು ಯುವ ಪ್ರತಿಭೆಗಳು ನಟಿಸಿದ್ದಾರೆ. ಸತೀಶ್ ರಾಜೇಂದ್ರನ್ ಛಾಯಾಗ್ರಹಣ, ಜಿತೇಂದ್ರ ನಾಯಕ ಮತ್ತು ರಾಘವೇಂದ್ರ ಟಿಕೆ ಸಂಕಲನ, ಶಿವ ಪ್ರಸಾದ್ ಸಂಗೀತ ನಿರ್ದೇಶನ ‘ಕಂಬ್ಳಿಹುಳ’ ಚಿತ್ರಕ್ಕಿದೆ.

ಇದನ್ನೂ ಓದಿ | Kannada New Film | ʻಕಂಬ್ಳಿಹುಳʼ ಟ್ರೈಲರ್‌ ರಿಲೀಸ್‌ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Pavithra Gowda: ಬಂಧನದ ಭಯವಿಲ್ಲದೇ ನಗುತ್ತಾ ಸಾಂತ್ವನ ಕೇಂದ್ರಕ್ಕೆ ಹೋದ ಪವಿತ್ರಾ ಗೌಡ!

Pavithra Gowda: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿ 13 ಆರೋಪಿಗಳಿಗೆ 6 ದಿನಗಳ ಕಾಲ ಪೊಲೀಸ್‌ ಕಸ್ಟಡಿ ವಿಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಪವಿತ್ರಾ ಗೌಡಳನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ರವಾನಿಸಲಾಗಿದೆ.

VISTARANEWS.COM


on

Pavithra Gowda
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರಾ ಗೌಡ (Pavithra Gowda) ಸೇರಿ 13 ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲು ನ್ಯಾಯಾಲಯ ಆದೇಶಿಸಿದೆ. ಹೀಗಾಗಿ ಎ1 ಪವಿತ್ರಾ ಗೌಡಳನ್ನು ಮಂಗಳವಾರ ರಾತ್ರಿ ಸಾಂತ್ವನ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಈ ವೇಳೆ ಜೀಪ್‌ನಿಂದ ಇಳಿಯುವಾಗ ಯಾವುದೇ ರೀತಿಯ ಭಯವಿಲ್ಲದೇ ಪವಿತ್ರಾ ಗೌಡ ನಗುನಗುತ್ತಾ ಸಾಂತ್ವನ ಕೇಂದ್ರದ ಒಳ ಹೋಗಿದ್ದು ಕಂಡುಬಂದಿದೆ.

ಆರೋಪಿಗಳಿಗೆ 6 ದಿನಗಳ ಕಾಲ ಕಸ್ಟಡಿ ವಿಧಿಸಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಮಹಿಳಾ ಸಾಂತ್ವನ ಕೇಂದ್ರಕ್ಕೆ ರವಾನಿಸಲಾಯಿತು. ಈ ವೇಳೆ ಕ್ಯಾಮೆರಾಗಳ ಕಣ್ಣಿಗೆ ಬೀಳದಂತೆ ಮುಖಕ್ಕೆ ಅಡ್ಡಲಾಗಿ ವಾಟರ್‌ ಬಾಟಲ್‌ ಹಿಡಿದು ಕಾರಿನಲ್ಲಿ ಪವಿತ್ರಾ ಗೌಡ ನಗುತ್ತಿದ್ದದ್ದು ಕಂಡುಬಂದಿದೆ. ನಂತರ ಯಾವುದೇ ಭಯವೇ ಇಲ್ಲದಂತೆ ನಗುತ್ತಾ ಸಾಂತ್ವನ ಕೇಂದ್ರದ ಒಳ ಹೋಗಿದ್ದಾಳೆ. ಸದ್ಯ ಈ ವಿಡಿಯೊ ವೈರಲ್‌ ಆಗಿದ್ದು, ಬಂಧನವಾದರೂ ಇವರಿಗೆ ಯಾವುದೇ ಆತಂಕ, ಭಯ ಇಲ್ಲ ಎಂದು ನೆಟ್ಟಿಗರು ಛೀಮಾರಿ ಹಾಕಿದ್ದಾರೆ.

ಇದನ್ನೂ ಓದಿ | Renuka Swamy Murder Case: ರೇಣುಕಾಸ್ವಾಮಿ ಕೊಲೆ ಕೇಸ್‌ ಖಂಡಿಸಿ ನಾಳೆ ಚಿತ್ರದುರ್ಗದಲ್ಲಿ ಬೃಹತ್‌ ಪ್ರತಿಭಟನೆ

ಪತಿ ಅರೆಸ್ಟ್​ ಆದರೂ ಪ್ರತಿಕ್ರಿಯೆ ನೀಡದ ದರ್ಶನ್​ ಪತ್ನಿ ವಿಜಯಲಕ್ಷ್ಮಿ!

Actor Darshan Arrested

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಅರೆಸ್ಟ್ (Actor Darshan Arrested) ಆಗಿದ್ದರೂ ಅವರ ಪತ್ನಿ ವಿಜಯಲಕ್ಷ್ಮಿ ಇದುವರೆಗೆ ಒಂದೇ ಒಂದು ಪ್ರತಿಕ್ರಿಯೆ ನೀಡಿಲ್ಲ. ಪವಿತ್ರಾ ಗೌಡ ವಿಚಾರದಲ್ಲಿ ಆಗಾಗ ಸೋಶಿಯಲ್ ಮೀಡಿಯಾಗಳ ಮೂಲಕ ಯುದ್ಧ ಸಾರುತ್ತಿದ್ದ ವಿಜಯಲಕ್ಷ್ಮಿ ಅವರು ಈ ಬಾರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಪ್ರಕರಣದಲ್ಲಿ ಬಗ್ಗೆ ಅವರ ಅಭಿಪ್ರಾಯ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮಂಗಳವಾರ ಬೆಳಗ್ಗಿನಿಂದ ಪ್ರಕರಣ ರಾಜ್ಯಾದ್ಯಂತ ಹವಾ ಎಬ್ಬಿಸಿದ್ದು ಒಬ್ಬೊಬ್ಬರು ಒಂದೊಂದು ಪ್ರತಿಕ್ರಿಯೆ ನೀಡುತ್ತಿದ್ದಾರೆ. ದರ್ಶನ್​ ಅಭಿಮಾನಿಗಳಂತೂ ಈ ವಿಚಾರದಲ್ಲಿ ಭಾವುಕರಾಗಿದ್ದಾರೆ. ಆದರೆ ಪತಿ ಜೈಲಿಗೆ ಹೋಗುವ ಸ್ಥಿತಿ ತಂದುಕೊಂಡಿದ್ದರೂ ವಿಜಯಲಕ್ಷ್ಮೀ ಈ ಕುರಿತು ಏನೂ ಹೇಳಿಕೆಗಳನ್ನು ನೀಡಿಲ್ಲ.

ಪವಿತ್ರಾ ಗೌಡ ವಿಚಾರದಲ್ಲಿ ವಿಜಯಲಕ್ಷ್ಮೀ ಈ ಹಿಂದೆ ಸಾಕಷ್ಟು ಬಾರಿ ಸೋಶಿಯಲ್​ ಮೀಡಿಯಾ ವಾರ್ ನಡೆಸಿದ್ದರು. ಪವಿತ್ರಾ ವಿರುದ್ಧ ನಾನಾ ರೀತಿಯ ಹೇಳಿಕೆಗಳನ್ನು ನೀಡಿದ್ದರು. ದರ್ಶನ್​ ಕೊಲೆ ಅರೋಪದಲ್ಲಿ ಸಿಕ್ಕಿ ಹಾಕಿಕೊಂಡಿರುವುದ ಪವಿತ್ರಾ ಅವರ ವಿಚಾರದಲ್ಲಿ. ಹೀಗಾಗಿ ಅವರಿಗೆ ಸಹಜವಾಗಿಯೇ ಅಸಮಾಧಾನ ಉಂಟಾಗಿರುತ್ತದೆ. ಆದಾಗ್ಯೂ ಅವರು ಇನ್ನೂ ಪ್ರತಿಕ್ರಿಯೆ ಕೊಟ್ಟಿಲ್ಲ.

ದರ್ಶನ್​ಗೆ ಮರಣದಂಡನೆ ಶಿಕ್ಷೆಯಾಗಲಿ! ನಟಿ ರಮ್ಯಾ ಟ್ವೀಟ್‌

ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ನಟ ದರ್ಶನ್​ಗೆ (Actor Darshan) ಮರಣದಂಡನೆಯಾಗಲಿ ಎಂಬ ಆಶಯವನ್ನು ಸ್ಯಾಂಡಲ್​ವುಡ್​ ಕ್ವೀನ್​ ರಮ್ಯಾ ವ್ಯಕ್ತಪಡಿಸಿದ್ದಾರೆ! ಕೊಲೆ ಪ್ರಕರಣದ ಕುರಿತು ಎಕ್ಸ್​ನಲ್ಲಿ ಪೋಸ್ಟ್​​ ಮಾಡಿರುವ ರಮ್ಯಾ ಐಪಿಸಿ ಸೆಕ್ಷನ್​ 302ರನ್ನು ಉಲ್ಲೇಖಿಸಿ ಅದರ ಅನ್ವಯ ದರ್ಶನ್​ಗೆ ಕಠಿಣ ಶಿಕ್ಷೆಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಕೊಲೆಯಾಗಿರುವ ವ್ಯಕ್ತಿಯ ಪರವಾಗಿ ನಿಂತಿರುವ ರಮ್ಯಾ, ದರ್ಶನ್​ಗೆ ಇಂಡಿಯನ್ ಪಿನಲ್​ ಕೋಡ್​ 302ರ ಪ್ರಕಾರ ಯಾವ ಪ್ರಕಾರಣದ ಶಿಕ್ಷೆಯಾಗುತ್ತದೆ ಎಂಬ ಬಗ್ಗೆ ಟ್ವೀಟ್ ಮಾಡಿದ್ದಾರೆ. ಈ ಸೆಕ್ಷನ್​ 302ರಲ್ಲಿ ಕೊಲೆ ಆರೋಪ ಸಾಬೀತಾದರೆ ಅವರಿಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ ಎಂಬ ಮಾಹಿತಿ ಇರುವ ಪೋಸ್ಟ್‌ ಅನ್ನು ರಮ್ಯಾ ರೀಟ್ವೀಟ್‌ ಮಾಡಿದ್ದಾರೆ.

ಸೆಕ್ಷನ್ 302 ರ ಅಡಿಯಲ್ಲಿ ನಟ ದರ್ಶನ್​ಗೆ ಜೀವಾವಧಿ ಶಿಕ್ಷೆ ಅಥವಾ ಶಿಕ್ಷೆಯಾಗಬೇಕು. ಬೇರೆ ಯಾವುದೇ ಹಣದ ಪ್ರಭಾವ ಮತ್ತು ಭಾರತೀಯ ಕಾನೂನು ವ್ಯವಸ್ಥೆಯನ್ನು ಅಣಕಿಸುವಂತಾಗಬಾರದು. ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬ ಟ್ವೀಟ್‌ ಅನ್ನು ರಮ್ಯಾ ಮರು ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ರಮ್ಯಾ ಈ ಹಿಂದೆಯೂ ಸ್ಟಾರ್ ನಟರ ನಡವಳಿಕೆಯ ಬಗ್ಗೆ ಆಕ್ಷೇಪ ಎತ್ತಿದ್ದರು. ಹಿಂದೆ ದರ್ಶನ್​ಗೆ ಚಪ್ಪಲಿ ಎಸೆತ ಪ್ರಕರಣ ನಡೆದಾಗ ಸ್ಪಂದಿಸಿದ್ದ ಅವರು, ಅಭಿಮಾನಿಗಳು ಹಾಗೂ ನಟರಿಗೆ ಬುದ್ಧಿ ಹೇಳಬೇಕಾಗಿದೆ ಎಂದು ಹೇಳಿದ್ದರು.

Continue Reading

ಪ್ರಮುಖ ಸುದ್ದಿ

Aishwarya Arjun : ಚೆನ್ನೈನಲ್ಲಿ ವಿವಾಹವಾದ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಅರ್ಜುನ್​; ಇಲ್ಲಿವೆ ಚಿತ್ರಗಳು

Aishwarya Arjun : ಉಮಾಪತಿ ಅವರು ತಮಿಳಿನ ಖ್ಯಾತ ಹಾಸ್ಯನಟ ರಾಮಯ್ಯ ಅವರ ಪುತ್ರ ಹಾಗೂ ಇವರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇವರಿಬ್ಬರು ಹಲವಾರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಮದುವೆಯಾಗಲು ನಿರ್ಧರಿಸಿದ ಅವರು ಕಳೆದ ವರ್ಷ ಎಂಗೇಜ್​ಮೆಂಟ್ ಮಾಡಿಕೊಂಡು ಇದೀಗ ಮದುವೆಯಾಗಿದ್ದಾರೆ. ಮದುವೆ ಚಿತ್ರಗಳ ಮೇಲೆ ನ 10-06-2024 ಎಂದಷ್ಟೇ ಬರೆದುಕೊಂಡಿದ್ದಾರೆ.

VISTARANEWS.COM


on

Aishwarya Arjun
Koo

ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ಅವರ ಮಗಳು ಐಶ್ವರ್ಯಾ ಸರ್ಜಾ (Aishwarya Sarja) ಅವರ ವಿವಾಹ ನಟ ಉಮಾಪತಿ ರಾಮಯ್ಯ ಅವರೊಂದಿಗೆ ಚೆನ್ನೈನಲ್ಲಿ ಸೋಮವಾರ (ಜೂನ್​ 10ರಂದು) ನಡೆದಿದೆ. ಸರಳ ಕಾರ್ಯಕ್ರಮದಲ್ಲಿ ನಡೆದ ಮದುವೆ ಫೋಟೋಗಳನ್ನು ದಂಪತಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಅರ್ಜುನ್ ಸರ್ಜಾ ಅವರ ಕುಟುಂಬವೇ ಕಳೆದ ವರ್ಷ ಚೆನ್ನೈನಲ್ಲಿ ನಿರ್ಮಿಸಿದ್ದ ಆಂಜನೇಯ ದೇವಸ್ಥಾನದಲ್ಲಿ ಅವರಿಬ್ಬರ ಮದುವೆ ನಡೆದಿದೆ. 2023ರ ಅಕ್ಟೋಬರ್ 27 ರಂದು ಈ ಇವರಿಬ್ಬರ ಎಂಗೇಜ್​ಮೆಂಟ್​ ಇದೇ ದೇವಸ್ಥಾನದ ಆವರಣದಲ್ಲಿ ನಡೆದಿತ್ತು. ದಂಪತಿಯ ಫೊಟೋಗಳು ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗಿದ್ದು ಗಣ್ಯರು ಶುಭಾಶಯ ತಿಳಿಸಿದ್ದಾರೆ.

ಮದುವೆಯಲ್ಲಿ ಯಾರು ಹಾಜರಿದ್ದರು ಎಂಬ ಮಾಹಿತಿ ಇಲ್ಲ. ಉಮಾಪತಿ ಅವರು ತಮಿಳಿನ ಖ್ಯಾತ ಹಾಸ್ಯನಟ ರಾಮಯ್ಯ ಅವರ ಪುತ್ರ ಹಾಗೂ ಇವರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇವರಿಬ್ಬರು ಹಲವಾರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಮದುವೆಯಾಗಲು ನಿರ್ಧರಿಸಿದ ಅವರು ಕಳೆದ ವರ್ಷ ಎಂಗೇಜ್​ಮೆಂಟ್ ಮಾಡಿಕೊಂಡು ಇದೀಗ ಮದುವೆಯಾಗಿದ್ದಾರೆ. ಮದುವೆ ಚಿತ್ರಗಳ ಮೇಲೆ ನ 10-06-2024 ಎಂದಷ್ಟೇ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Pawan Kalyan: ಪವನ್‌ ಕಲ್ಯಾಣ್‌ ಮಾಜಿ ಪತ್ನಿ ಮರು ಮದುವೆಗೆ ರೆಡಿ!

ಐಶ್ವರ್ಯಾ ಮತ್ತು ಉಮಾಪತಿ ಪ್ರೀತಿಗೆ ಎರಡು ಕುಟುಂಬದ ಸಮ್ಮತಿಯಿತ್ತು. ಬಳಿಕ ಅದ್ಧೂರಿಯಾಗಿ ಎಂಗೇಂಜ್‌ಮೆಂಟ್ ನಡೆದಿತ್ತು. ಐಶ್ವಯಾ ಅರ್ಜುನ್​ 2018ರಲ್ಲಿ ‘ಪ್ರೇಮ ಬರಹ’ ಚಿತ್ರದಲ್ಲಿ ನಟಿಸಿದ್ದರು. ಮಗಳ ಚಿತ್ರಕ್ಕೆ ಅರ್ಜುನ್ ಸರ್ಜಾ ನಿರ್ದೇಶನ ಮಾಡಿದ್ದರು. ಸಿನಿಮಾ ಚಿತ್ರ ಕನ್ನಡ ಮತ್ತು ತಮಿಳಿನಲ್ಲಿ ತೆರೆಕಂಡಿತ್ತು. ಅದೇ ರೀತಿ ‘ಪಟ್ಟತು ಯಾನೈ’, ‘ಪ್ರೇಮ ಬರಹ’, ‘ಸೊಲ್ಲಿವಿಡವ’ ಸಿನಿಮಾಗಳಲ್ಲಿ ನಟಿಸಿದ್ದಾರೆ. ಐಶ್ವರ್ಯಾ ನಾಯಕಿಯಾಗಿ ಕೆಲ ಚಿತ್ರಗಳಲ್ಲಿ ಮಾಡಿದ್ದರೂ ಅವರಿಗೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಸಿಗಲಿಲ್ಲ. ಅವರ ಅಭಿನಯದ ಚಿತ್ರಗಳು ಬಾಕ್ಸ್ ಆಫೀಸ್ ನಲ್ಲಿ ಯಶಸ್ಸು ಕಂಡಿಲ್ಲ

Continue Reading

ಪ್ರಮುಖ ಸುದ್ದಿ

Actor Darshan: ದರ್ಶನ್ ಸೇರಿ ಎಲ್ಲ ಆರೋಪಿಗಳಿಗೆ 6 ದಿನ ಪೊಲೀಸ್ ಕಸ್ಟಡಿ; ಕಟಕಟೆಯಲ್ಲಿ ಕಣ್ಣೀರಿಟ್ಟ ನಟ!

Actor Darshan: ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ನಟ ದರ್ಶನ್‌ ಸೇರಿ 13 ಆರೋಪಿಗಳನ್ನು ಕೋರಮಂಗಲದ 24ನೇ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ನಿವಾಸಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ಬಳಿಕ ಆರೋಪಿಗಳನ್ನು 6 ದಿನ ಪೊಲೀಸ್‌ ಕಸ್ಟಡಿಗೆ ನೀಡಲು ಸೂಚಿಸಲಾಗಿದೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy murder case) ಬಂಧನವಾಗಿರುವ ನಟ ದರ್ಶನ್‌ (Actor Darshan), ಪವಿತ್ರಾ ಗೌಡ ಸೇರಿ 13 ಆರೋಪಿಗಳನ್ನು 6 ದಿನ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ. ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಆರೋಪಿಗಳನ್ನು ಮಂಗಳವಾರ ಸಂಜೆ ಕೋರಮಂಗಲದ 24ನೇ ಎಸಿಎಂಎಂ ಕೋರ್ಟ್‌ನ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಬಳಿಕ ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲು ನ್ಯಾಯಾಧೀಶರು ಆದೇಶ ನೀಡಿದ್ದಾರೆ.

ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ಕಸ್ಟಡಿಗೆ ಕೇಳಲು ರಿಮ್ಯಾಂಡ್ ಅರ್ಜಿಯನ್ನು ಪೊಲೀಸರು ಸಲ್ಲಿಸಿದ್ದರು. ಪೊಲೀಸರ ಪರ ಸರ್ಕಾರಿ ಅಭಿಯೋಜಕ ವಾದ ಮಂಡಿಸಿ, ಸಾಕ್ಷ್ಯಗಳ ನಾಶ ಆಗಿರುವುದರಿಂದ ಎ2 ದರ್ಶನ್‌ ಅವರನ್ನು 14 ದಿನ ಕಸ್ಟಡಿಗೆ ನೀಡುವಂತೆ ಕೋರಿದರು. ಆದರೆ, ದರ್ಶನ್‌ ಪರ ವಕೀಲ 14 ದಿನ ಯಾಕೆ ಎಂದು ಪ್ರಶ್ನಿಸಿದರು. ಈಗಾಗಲೇ ದರ್ಶನ್‌ ಮೊಬೈಲ್‌ ಸೀಜ್‌ ಆಗಿದೆ, ದರ್ಶನ್‌ ಅವರ ತೇಜೋವಧೆ ಮಾಡಲು ಈ ರೀತಿ ಮಾಡಲಾಗುತ್ತಿದೆ ಹೇಳಿದರು.

ಆರೋಪಿಗಳನ್ನು ಕಸ್ಟಡಿಗೆ ನೀಡಲು ಸರ್ಕಾರಿ ಅಭಿಯೋಜಕ ಕೋರಿದರೆ, ದರ್ಶನ್‌ ಪರ ವಕೀಲ ಅವರಿಗೆ ಕಿರುಕುಳ ನೀಡಬಾರದು, ನ್ಯಾಯಾಂಗ ಬಂಧನಕ್ಕೆ ನೀಡಬೇಕು ಎಂದು ಮನವಿ ಮಾಡಿದರು. ವಾದ- ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಧೀಶರು ಪೊಲೀಸ್‌ ಕಸ್ಟಡಿಗೆ ನೀಡಲು ಸೂಚಿಸಿದರು. ನ್ಯಾಯಾಧೀಶರು ಪೊಲೀಸ್‌ ಕಸ್ಟಡಿಗೆ ಎಂದು ಹೇಳಿದ ಕೂಡಲೇ ನಟ ದರ್ಶನ್‌ ಕಣ್ಣೀರಿಟ್ಟಿದ್ದು ಕಂಡುಬಂತು.

ಹೀಗಾಗಿ ದರ್ಶನ್‌ ಅವರನ್ನು ಕಸ್ಟಡಿಗೆ ನೀಡಲಾಗಿದೆ. ಇದಕ್ಕೂ ಮುನ್ನಾ ಆರೋಪಿಗಳಿಗೆ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇಸಿಜಿ, ಬಿ.ಪಿ., ಶುಗರ್‌ ಇನ್ನಿತರ ಟೆಸ್ಟ್‌ ಮಾಡಲಾಗಿದ್ದು, ಯಾರಿಗೂ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ. ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ಬೌರಿಂಗ್‌ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಮತ್ತೊಂದೆಡೆ ರೇಣುಕಾಸ್ವಾಮಿ ಕೊಲೆ ನಡೆದ ಸ್ಥಳಕ್ಕೆ ಪೊಲೀಸರು, ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲಿಸಿದೆ. ಈ ವೇಳೆ ಕೆಲ ವಸ್ತುಗಳನ್ನು ಎಫ್ಎಸ್ಎಲ್ ತಂಡ ಸಂಗ್ರಹಿಸಿದೆ. ವಸ್ತುಗಳನ್ನು ಸೀಜ್ ಮಾಡಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಕೊಲೆ ಪ್ರಕರಣದಲ್ಲಿ ಬಂಧನವಾದ ಆರೋಪಿಗಳು

1.ನಟ ದರ್ಶನ್‌
2.ಪವಿತ್ರಾ ಗೌಡ
3.ಕೆ. ಪವನ್-ದರ್ಶನ್ ಮನೆಯಲ್ಲಿ ಇರುವ ದರ್ಶನ್ ಅಪ್ತ, ಕಿಡ್ನ್ಯಾಪ್ ಮಾಡಲು ಹೇಳಿದ್ದವನು, ಪವಿತ್ರಗೂ ಆಪ್ತ
4.ಪ್ರದೋಶ್- ಹೋಟೆಲ್ ಉದ್ಯಮಿ
5.ನಂದೀಶ್- ಹಲ್ಲೆ ಮಾಡಿದ ಮುಖ್ಯ ವ್ಯಕ್ತಿ, ಕಿಡ್ನ್ಯಾಪ್ ಮಾಡಿಕೊಂಡು ಕರೆತಂದವನು
6.ಕೇಶವಮೂರ್ತಿ, ಪ್ರದೂಶ್ ಗೆಳೆಯ ಹಾಗೂ ಉದ್ಯಮಿ
7.ರಾಘವೇಂದ್ರ- ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ
8.ಎಂ.ಲಕ್ಷ್ಮಣ್
9. ದೀಪಕ್ ಕುಮಾರ್
10.ಕಾರ್ತಿಕ್
11.ಆರ್.ನಾಗರಾಜ್, ದರ್ಶನ್ ಆಪ್ತ
12.ವಿ.ವಿನಯ್‌
13. ನಿಖಿಲ್‌ ನಾಯಕ್‌

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ. ಚಿತ್ರದುರ್ಗದಲ್ಲಿ ಅಂತ್ಯಕ್ರಿಯೆ ಮಾಡಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ.

ಇದನ್ನೂ ಓದಿ | Actor Darshan: ಕಳೆದ ವರ್ಷ ಮದುವೆಯಾಗಿದ್ದ ರೇಣುಕಾಸ್ವಾಮಿ ಪತ್ನಿ ಗರ್ಭಿಣಿ; ಸಾವಿನ ವಿಚಾರ ಆಕೆಗೆ ಗೊತ್ತೇ ಇಲ್ಲ!

ಏನಿದು ಪ್ರಕರಣ?

ನಟ ದರ್ಶನ್‌ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಮಾಡಿದ ಹಿನ್ನೆಲೆಯಲ್ಲಿ ದರ್ಶನ್‌ ಆಪ್ತರು ಜೂನ್‌ 8ರಂದು ರೇಣುಕಾಸ್ವಾಮಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ನಂತರ ಜೂನ್‌ 9ರಂದು ಸುಮನಹಳ್ಳಿಯ ರಾಜಕಾಲುವೆ ಬಳಿ ಅಪರಿಚಿತ ಶವ ಪತ್ತೆಯಾಗಿತ್ತು. ಬೀದಿ ನಾಯಿಗಳು ಕಸ ಎಳೆದಾಡುವಾಗ ಶವ ಪತ್ತೆಯಾಗಿತ್ತು. ಇದಾದ ಬಳಿಕ ಅದೇ ದಿನ ರಾಮ್‌ ದೋರ್‌ ಎಂಬ ಸೆಕ್ಯುರಿಟಿ ಗಾರ್ಡ್‌ ಪೊಲೀಸರಿಗೆ ದೂರು ನೀಡಿದ್ದರು. ಇದಾದ ನಂತರ ಪೊಲೀಸರು ತನಿಖೆ ನಡೆಸಿದ್ದರು.

ಅಪರಿಚಿತ ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ತನಿಖೆ ಆರಂಭಿಸಿದ್ದರು. ಇದರ ಮಧ್ಯೆಯೇ, ಗಿರಿನಗರದ ಮೂವರು ಆರೋಪಿಗಳು ತಾವೇ ಕೊಲೆ ಮಾಡಿದ್ದಾಗಿ ಪೊಲೀಸರಿಗೆ ಶರಣಾಗಿದ್ದರು. ಹಣಕಾಸು ವಿಚಾರವಾಗಿ ಕೊಲೆ ಮಾಡಿರುವುದಾಗಿ ಅವರು ಒಪ್ಪಿಕೊಂಡಿದ್ದರು. ಅನುಮಾನಗೊಂಡ ಪೊಲೀಸರು ಹೆಚ್ಚಿನ ತನಿಖೆ ನಡೆಸಿದಾಗ, ನಟ ದರ್ಶನ್‌ ಕೈವಾಡ ಇರುವುದು ಬಯಲಾಗಿದೆ. ಆರೋಪಿಗಳೇ ದರ್ಶನ್‌ ಹೆಸರು ಹೇಳಿದ ಕಾರಣ ನಟ ದರ್ಶನ್‌ ಸೇರಿ 13 ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಪವಿತ್ರಾ ಗೌಡ ಎ1, ದರ್ಶನ್‌ ಎ2 ಆಗಿದ್ದಾರೆ.

ಇದನ್ನೂ ಓದಿ | Actor Darshan: ಕೊಲೆ ಕೇಸ್‌ನಲ್ಲಿ ದರ್ಶನ್‌ ಬಂಧನ; ನಟಿ ಸಂಜನಾಗೆ ಶಾಕ್‌, ರಕ್ಷಿತಾ ಹಾರ್ಟ್‌ಬ್ರೇಕ್, ದೇವರಲ್ಲಿ ಪ್ರಾರ್ಥನೆ!

ರೇಣುಕಾಸ್ವಾಮಿ ಯಾರು?

ಚಿತ್ರದುರ್ಗ ಮೂಲದವನಾದ ರೇಣುಕಾಸ್ವಾಮಿ ಎಂಬ 33 ವರ್ಷದ ಯುವಕ ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಈತನು ಪವಿತ್ರಾ ಗೌಡ ಅವರಿಗೆ ಅಶ್ಲೀಲವಾಗಿ ಮೆಸೇಜ್‌ ಕಳುಹಿಸಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದರ್ಶನ್‌ ಹಾಗೂ ಅವರ ಆಪ್ತರು ಹಲ್ಲೆ ನಡೆಸಿದ್ದರು ಎಂದು ತಿಳಿದುಬಂದಿದೆ. ರೇಣುಕಾಸ್ವಾಮಿಗೆ ಕಳೆದ ವರ್ಷವೇ ಸಹನಾ ಎಂಬ ಯುವತಿ ಜತೆ ಮದುವೆಯಾಗಿದೆ ಎಂದು ಹೇಳಲಾಗುತ್ತಿದೆ.

Continue Reading

ಸಿನಿಮಾ

Pawan Kalyan: ಪವನ್‌ ಕಲ್ಯಾಣ್‌ ಮಾಜಿ ಪತ್ನಿ ಮರು ಮದುವೆಗೆ ರೆಡಿ!

Pawan Kalyan: ನಟ ಪವನ್ ಕಲ್ಯಾಣ್ ಅವರ ಮಾಜಿ ಪತ್ನಿ, ನಟಿ ರೇಣು ದೇಸಾಯಿ ಅವರು ಎರಡನೇ ಮದುವೆಯಾಗಲು ರೆಡಿಯಾಗಿದ್ದಾರಂತೆ. ಮುಂದಿನ ಎರಡು ಅಥವಾ ಮೂರು ವರ್ಷದೊಳಗೆ (Renu Desai Second Marriage) ಮರು ಮದುವೆಯಾಗಲು ಯೋಜಿಸುತ್ತಿರುವುದಾಗಿ ಬಹಿರಂಗಪಡಿಸಿದ್ದಾರೆ.

VISTARANEWS.COM


on

Renu Desai Second Marriage
Koo

ಬೆಂಗಳೂರು: ಟಾಲಿವುಡ್ ನ ಖ್ಯಾತ ನಟರಲ್ಲಿ ಪವನ್ ಕಲ್ಯಾಣ (Pawan Kalyan) ಕೂಡ ಒಬ್ಬರು. ಇವರು ಹಲವಾರು ಚಿತ್ರದಲ್ಲಿ ನಟಿಸಿ ಜನ ಮನ್ನಣೆಯನ್ನು ಪಡೆದು ಟಾಲಿವುಡ್ ನಲ್ಲಿ ಒಬ್ಬ ಖ್ಯಾತ ನಟ ಎನಿಸಿಕೊಂಡಿದ್ದಾರೆ. ಆದರೆ ಇಂತಹ ಮಹಾನ್ ನಟ ತಮ್ಮ ವೈವಾಹಿಕ ಜೀವನದಲ್ಲಿ ಸಮಸ್ಯೆಯನ್ನು ಎದುರಿಸಿದ್ದಾರೆ. ಪವನ್‌ ಕಲ್ಯಾಣ್‌ ತಮ್ಮ ಮೊದಲ ಪತ್ನಿ (Pawan Kalyan’s ex-wife) ರೇಣು ದೇಸಾಯಿ (Renu desai) ಅವರಿಂದ ವಿಚ್ಛೇದನ ಪಡೆದು ದೂರವಾಗಿರುವ ವಿಚಾರ ಎಲ್ಲರಿಗೂ ತಿಳಿದೆ ಇದೆ. ಇದೀಗ ಅವರ ಮಾಜಿ ಪತ್ನಿ, ನಟಿ ರೇಣು ದೇಸಾಯಿ (Renu Desai Second Marriage) ಅವರು ಎರಡನೇ ಮದುವೆಯಾಗಲು ರೆಡಿಯಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ನಟಿ ರೇಣು ದೇಸಾಯಿ ಅವರು ಇತ್ತೀಚೆಗೆ ಜನಪ್ರಿಯ ಯೂಟ್ಯೂಬ್ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ತಮ್ಮ ಎರಡನೇ ಮದುವೆಯ ಯೋಜನೆಯ ಬಗ್ಗೆ ಪ್ರಸ್ತಾಪಮಾಡಿದ್ದಾರೆ.

ಸಂದರ್ಶನದಲ್ಲಿ ನಟಿ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಹಂಚಿಕೊಳ್ಳುತ್ತಿರುವಾಗ ಈ ವಿಚಾರ ತಿಳಿಸಿದ್ದಾರೆ. ಹಾಗೇ ಮುಂದಿನ ಎರಡು ಅಥವಾ ಮೂರು ವರ್ಷದೊಳಗೆ ಮರು ಮದುವೆಯಾಗಲು ಯೋಜಿಸುತ್ತಿರುವುದಾಗಿ ಬಹಿರಂಗಪಡಿಸಿದ್ದಾರೆ. ಹಾಗಾಗಿ ಈಗಾಗಲೇ ತಂದೆಯ ಪ್ರೀತಿಯಿಂದ ವಂಚಿತರಾದ ಅವರ ಮಕ್ಕಳಿಗೆ ತಂದೆಯ ಪ್ರೀತಿ ಸಿಗಲಿದೆ ಎನ್ನಲಾಗಿದೆ.

Renu Desai Second Marriage

ನಟಿ ರೇಣು ದೇಸಾಯಿಯವರು 2012ರಲ್ಲಿ ಪವನ್ ಕಲ್ಯಾಣ್ ಅವರಿಗೆ ಡಿವೋರ್ಸ್ ನೀಡಿದ್ದರು. ಆದರೆ ಅವರು ಇಷ್ಟು ವರ್ಷಗಳ ಕಾಲ ಯಾಕೆ ಮರು ಮದುವೆಯಾಗಿಲ್ಲ ಎಂಬ ಗೊಂದಲ ಹಲವರಲ್ಲಿದೆ. ಇದಕ್ಕೆ ಉತ್ತರಿಸಿದ ನಟಿ ರೇಣು ದೇಸಾಯಿ ಅವರು, ಆ ಸಮಯದಲ್ಲಿ ಮಕ್ಕಳಿಗೆ ಆರೈಕೆಯ ಅಗತ್ಯವಿತ್ತು. ಅವರಿಗೆ ತನ್ನ ಸಹಾಯ ಬೇಕಿತ್ತು. ಆದರೆ ತಾನು ಮದುವೆಯಾದರೆ ಪತಿಯೊಂದಿಗೆ ಸಮಯ ಕಳೆಯಬೇಕಾಗುತ್ತದೆ ಆಗ ಮಕ್ಕಳಿಗೆ ಒಂಟಿತನ ಕಾಡುತ್ತದೆ. ಈಗಾಗಲೇ ತಂದೆ ಇಲ್ಲದೆ ನರಳುತ್ತಿದ್ದ ಮಕ್ಕಳಿಗೆ ತಾಯಿಯ ಪ್ರೀತಿ ಸಿಗದಿದ್ದರೆ ಅವರಿಗೆ ಅನೇಕ ಸಮಸ್ಯೆ ಉಂಟಾಗುತ್ತದೆ. ಹಾಗಾಗಿ ಇನ್ನೆರಡು ಮೂರು ವರ್ಷಗಳಲ್ಲಿ ಅವರು ದೊಡ್ಡವರಾಗುತ್ತಾರೆ. ಕಾಲೇಜಿಗೆ ಹೋಗುತ್ತಾರೆ. ಅಲ್ಲಿ ಅವರು ಸ್ನೇಹಿತರು ಮತ್ತು ಪ್ರೇಮಿಗಳ ಹೊಸ ಪ್ರಪಂಚಕ್ಕೆ ಕಾಲಿಡುತ್ತಾರೆ. ಅವರೊಂದಿಗೆ ಹೆಚ್ಚು ಸಮಯ ಕಳೆಯುತ್ತಾರೆ. ಆಗ ಅವರು ಪೋಷಕರ ಮೇಲೆ ಅವಲಂಬಿತರಾಗಿರುವುದಿಲ್ಲ. ಹಾಗಾಗಿ ಈ ನಿರ್ಧಾರ ಮಾಡಿರುವುದಾಗಿ ತಿಳಿಸಿದ್ದಾರೆ.

Renu Desai Second Marriage

ಅಲ್ಲದೇ ಮರು ಮದುವೆಗೆ ತಮ್ಮ ಮಕ್ಕಳ ಬೆಂಬಲ ಇರುವುದಾಗಿ ತಿಳಿಸಿದ್ದಾರೆ. ಹಾಗೇ ಮರುಮದುವೆಯಿಂದ ತಾವು ಮತ್ತೆ ಸಂತೋಷವನ್ನು ಕಂಡುಕೊಳ್ಳುವ ಬಯಕೆಯನ್ನು ನಟಿ ವ್ಯಕ್ತಪಡಿಸಿದ್ದಾರೆ. ಇದು ನಟಿ ರೇಣು ದೇಸಾಯಿ ಅವರಿಗೆ ತಮ್ಮ ಮಕ್ಕಳ ಬಗ್ಗೆ ಎಷ್ಟು ಕಾಳಜಿ, ಜವಾಬ್ದಾರಿ ಇದೆ ಎಂಬುದರ ಬಗ್ಗೆ ತಿಳಿಸುತ್ತದೆ.

ಇದನ್ನೂ ಓದಿ: Viral Video: ಬಿಜೆಪಿ ಶಾಲು ಧರಿಸಿ ಅಯೋಧ್ಯೆ ಹೆಸರಿನ ಪ್ರತಿಕೃತಿಗೆ ಬೆಂಕಿ! ಸೋಲೇ ಕಾರಣ!

ಇತ್ತ ನಟ ಪವನ್ ಕಲ್ಯಾಣ್ ಅವರು ಚಿತ್ರರಂಗದ ಜೊತೆಗೆ ರಾಜಕೀಯ ರಂಗಕ್ಕೂ ಪ್ರವೇಶ ಮಾಡಿದ್ದಾರೆ. ಅವರು ತಮ್ಮದೇ ಜನಸೇನಾ ಪಾರ್ಟಿ ಎಂಬ ರಾಜಕೀಯ ಪಕ್ಷವನ್ನು ಕಟ್ಟಿಕೊಂಡು 2019ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಹೀನಾಯವಾಗಿ ಸೋಲನುಭವಿಸಿದ್ದರು. ಆದರೆ 2024ರಲ್ಲಿ ಆಂಧ್ರಪ್ರದೇಶದ ವಿಧಾನ ಸಭಾ ಚುನಾವಣೆಯಲ್ಲಿ ಗೆದ್ದು ಶಾಸಕರಾಗಿದ್ದಾರೆ. ಹಾಗಾಗಿ ಅವರು ಇನ್ನು ಮುಂದೆ ಚಿತ್ರರಂಗದಲ್ಲಿ ಮುಂದುವರಿಯುತ್ತಾರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

Continue Reading
Advertisement
T20 World Cup
ಪ್ರಮುಖ ಸುದ್ದಿ3 hours ago

T20 World Cup : ಕೊನೆಗೂ ದುರ್ಬಲ ಕೆನಾಡ ತಂಡದ ವಿರುದ್ಧ ಜಯ ಗಳಿಸಿದ ಪಾಕಿಸ್ತಾನ

Lt. General Upendra Dwivedi
ಪ್ರಮುಖ ಸುದ್ದಿ4 hours ago

Lt. General Upendra Dwivedi : ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ನೇಮಕ

Terrorist Killed
ಪ್ರಮುಖ ಸುದ್ದಿ4 hours ago

Terrorist Killed : ಜಮ್ಮು ಕಾಶ್ಮೀರದಲ್ಲಿ ಉಗ್ರನೊಬ್ಬನ್ನು ಹೊಡೆದುರುಳಿಸಿದ ಭದ್ರತಾ ಪಡೆ

Joe Biden
ಪ್ರಮುಖ ಸುದ್ದಿ5 hours ago

Joe Biden : ಬಂದೂಕು ಪ್ರಕರಣದಲ್ಲಿ ಅಮೆರಿಕ ಅಧ್ಯಕ್ಷ ಜೊ ಬೈಡೆನ್ ಪುತ್ರ ತಪ್ಪಿತಸ್ಥ; ಕಾದಿದೆ 25 ವರ್ಷ ಜೈಲು ಶಿಕ್ಷೆ

Pavithra Gowda
ಕರ್ನಾಟಕ5 hours ago

Pavithra Gowda: ಬಂಧನದ ಭಯವಿಲ್ಲದೇ ನಗುತ್ತಾ ಸಾಂತ್ವನ ಕೇಂದ್ರಕ್ಕೆ ಹೋದ ಪವಿತ್ರಾ ಗೌಡ!

Priyanka Gandhi:
ಪ್ರಮುಖ ಸುದ್ದಿ6 hours ago

Priyanka Gandhi : ವಾರಾಣಸಿಯಲ್ಲಿ ಪ್ರಿಯಾಂಕ ಸ್ಪರ್ಧಿಸಿದ್ದರೆ ಮೋದಿ ಸೋಲುತ್ತಿದ್ದರು; ರಾಹುಲ್​ ಗಾಂಧಿ

CM Siddaramaiah
ಕರ್ನಾಟಕ6 hours ago

CM Siddaramaiah: ಗಣಿಗಳ ಹರಾಜು ಪ್ರಕ್ರಿಯೆ ಕೂಡಲೇ ಕೈಗೆತ್ತಿಕೊಳ್ಳಲು ಸಿಎಂ ಸೂಚನೆ

Modi Ka Parivar
ಪ್ರಮುಖ ಸುದ್ದಿ6 hours ago

Modi Ka Parivar : ಸೋಶಿಯಲ್​ ಮೀಡಿಯಾ ಹ್ಯಾಂಡಲ್​​ಗಳಿಂದ ‘ಮೋದಿ ಕಾ ಪರಿವಾರ್​’ ತೆಗೆಯಲು ಸೂಚನೆ

Rajeev Taranath
ಕರ್ನಾಟಕ6 hours ago

Rajeev Taranath: ಖ್ಯಾತ ಸರೋದ್‌ ವಾದಕ ರಾಜೀವ್ ತಾರಾನಾಥ್ ಇನ್ನಿಲ್ಲ

Aishwarya Arjun
ಪ್ರಮುಖ ಸುದ್ದಿ7 hours ago

Aishwarya Arjun : ಚೆನ್ನೈನಲ್ಲಿ ವಿವಾಹವಾದ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಅರ್ಜುನ್​; ಇಲ್ಲಿವೆ ಚಿತ್ರಗಳು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ10 hours ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ11 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ12 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ14 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ16 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌