ತಿಹಾರ ಜೈಲಿನ ಅತ್ಯಂತ ಹಿರಿಯ ಕೈದಿ ಎನ್ನಿಸಿಕೊಂಡ ಮಾಜಿ ಸಿಎಂ ಓಂ ಪ್ರಕಾಶ್‌ ಚೌಟಾಲಾ - Vistara News

ದೇಶ

ತಿಹಾರ ಜೈಲಿನ ಅತ್ಯಂತ ಹಿರಿಯ ಕೈದಿ ಎನ್ನಿಸಿಕೊಂಡ ಮಾಜಿ ಸಿಎಂ ಓಂ ಪ್ರಕಾಶ್‌ ಚೌಟಾಲಾ

ಇಳಿವಯಸ್ಸಿನಲ್ಲಿ ಜೈಲು ಸೇರಿರುವ ಚೌಟಾಲಾಗೆ ಅವರ ವಯಸ್ಸಿನ ಕಾರಣದಿಂದ ಹಲವು ರಿಯಾಯಿತಿಗಳನ್ನು ನೀಡಲಾಗಿದೆ. ಉಳಿದ ಕೈದಿಗಳಂತೆ ಕೆಲಸ ಮಾಡಬೇಕಿಲ್ಲ.

VISTARANEWS.COM


on

Om Prakash Chautala
ಓಂ ಪ್ರಕಾಶ್‌ ಚೌಟಾಲಾ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಿಹಾರ ಜೈಲು ಸೇರಿರುವ ಹರ್ಯಾಣ ಮುಖ್ಯಮಂತ್ರಿ ಓಂ ಪ್ರಕಾಶ್‌ ಚೌಟಾಲಾ, ಇಡೀ ತಿಹಾರ ಜೈಲಿನಲ್ಲಿರುವವರಲ್ಲೇ ಅತ್ಯಂತ ಹಿರಿಯ ಕೈದಿ ಎನ್ನಿಸಿದ್ದಾರೆ. ಚೌಟಾಲಾ ಅವರಿಗೆ 87 ವರ್ಷ. ತಿಹಾರ್‌ ಕಾರಾಗೃಹದ ವಿವಿಧ ಸೆಲ್‌ಗಳಲ್ಲಿರುವ ಒಟ್ಟು ಇರುವ 19,584 ಕೈದಿಗಳಲ್ಲಿ ಚೌಟಾಲಾ ಅವರೇ ಹಿರಿಯರಾಗಿದ್ದಾರೆ. ಅಂದಹಾಗೇ, ಓಂ ಪ್ರಕಾಶ್‌ ಚೌಟಾಲಾರಿಗೆ ದೆಹಲಿಯ ವಿಶೇಷ ಕೋರ್ಟ್‌ ಒಟ್ಟು 4 ವರ್ಷ ಜೈಲು ಶಿಕ್ಷೆ ವಿಧಿಸಿದ್ದು, 50 ಲಕ್ಷ ರೂಪಾಯಿ ದಂಡ ವಿಧಿಸಿದೆ.

ಚೌಟಾಲಾರನ್ನು ತಿಹಾರ ಜೈಲು ಸಂಖ್ಯೆ 2ರ ಸೆಲ್‌ನಲ್ಲಿ ಇರಿಸಲಾಗಿದೆ. ಅವರೊಂದಿಗೆ ಇನ್ನಿಬ್ಬರು ಕೈದಿಗಳು ಇದ್ದಾರೆ. ತಿಹಾರ್‌ ಜೈಲಿನಲ್ಲಿ 80 ವರ್ಷ ಮೇಲ್ಪಟ್ಟ ಒಟ್ಟು 7 ಮಂದಿ ಕೈದಿಗಳಿದ್ದಾರೆ. ಹಾಗೇ 70 ರಿಂದ 80 ವರ್ಷದವರೆಗಿನವರು 63 ಮಂದಿಯಿದ್ದಾರೆ. ಚೌಟಾಲಾ ಜೈಲಿಗೆ ಬರುವವರೆಗೂ 85 ವರ್ಷದ ವೃದ್ಧರೊಬ್ಬರು ತಿಹಾರ ಜೈಲಿನ ಅತ್ಯಂತ ಹಿರಿಯರು ಎನ್ನಿಸಿಕೊಂಡಿದ್ದರು.

ಇದನ್ನೂ ಓದಿ: ಕಪಿಲ್‌ ಸಿಬಲ್‌ ಕಾಂಗ್ರೆಸ್‌ ಬಿಟ್ರು, ಉಳಿದ ಜಿ-23 ನಾಯಕರು ಏನ್ಮಾಡ್ತಾರಂತೆ?

ಇಳಿವಯಸ್ಸಿನಲ್ಲಿ ಜೈಲು ಸೇರಿರುವ ಚೌಟಾಲಾಗೆ ಅವರ ವಯಸ್ಸಿನ ಕಾರಣದಿಂದ ಹಲವು ರಿಯಾಯಿತಿಗಳನ್ನು ನೀಡಲಾಗಿದೆ. ಉಳಿದ ಕೈದಿಗಳಂತೆ ಕೆಲಸ ಮಾಡಬೇಕಿಲ್ಲ. ಇನ್ನು 70 ವರ್ಷ ಮೇಲ್ಪಟ್ಟ ಎಲ್ಲ ಕೈದಿಗಳಿಗೂ ಬೆಡ್‌ ಕೊಡಲಾಗಿದ್ದು, ಅದರಂತೆ ಚೌಟಾಲಾಗೆ ಕೂಡ ಒಂದು ಬೆಡ್‌ ನೀಡಲಾಗಿದೆ. ಹಾಗೇ, ಇಳಿವಯಸ್ಸಿನ ಕೈದಿಗಳನ್ನು ನೋಡಿಕೊಳ್ಳಲು, ಅವರಿಗೆ ಅಗತ್ಯ ಸೇವೆ ಒದಗಿಸಲು ಕಿರಿಯ ಕೈದಿಗಳನ್ನು ನಿಯೋಜಿಸಲಾಗಿದೆ. ಈ ಕಿರಿಯರು ಯಾವುದೇ ಬೇಸರವಿಲ್ಲದೆ, ಹಿರಿಯರ ಕೆಲಸ ಮಾಡಿಕೊಡುತ್ತಿದ್ದಾರೆ. ಕೆಲವರು ತಾವೇ ಹಿರಿಯ ಕೈದಿಗಳನ್ನು ನೋಡಿಕೊಳ್ಳುವುದಾಗಿ ಸ್ವಯಂ ಪ್ರೇರಿತರಾಗಿ ಮುಂದೆ ಬರುತ್ತಿದ್ದಾರೆ ಎಂದೂ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಕಿರಿಯ ಕೈದಿಗಳು ತಮ್ಮ ಜತೆಗಿರುವ ವಯಸ್ಸಾದ ಕೈದಿಗಳ ಬಟ್ಟೆ ಒಗೆಯುವುದು, ಅವರ ಪಾತ್ರೆಗಳನ್ನು ತೊಳೆದುಕೊಡುವುದು ಸೇರಿ ಹಲವು ಕೆಲಸಗಳನ್ನು ಮಾಡಿಕೊಡುತ್ತಾರೆ. ಅದರೊಂದಿಗೆ ಅವರ ಆರೋಗ್ಯದ ಬಗ್ಗೆಯೂ ಗಮನಹರಿಸುತ್ತಾರೆ. ಇನ್ನು ವೈದ್ಯರ ಸಲಹೆಯ ಮೇರೆ 70 ವರ್ಷ ಮೇಲ್ಪಟ್ಟ ಕೈದಿಗಳಿಗೆ ಆಹಾರ ಕ್ರಮದಲ್ಲಿ ಕೂಡ ವಿಶೇಷ ವಿನಾಯಿತಿ ಇರುತ್ತದೆ. ಹಾಲನ್ನು ಜಾಸ್ತಿ ಕೊಡಲಾಗುತ್ತದೆ ಎಂದೂ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಅಂದಹಾಗೇ, ಚೌಟಾಲಾ ಅವರು 1993-2006 ರ ಅವಧಿಯಲ್ಲಿ ಅಕ್ರಮ ಆಸ್ತಿ ಗಳಿಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಸಿಬಿಐ ಕೂಡ ಪ್ರಕರಣ ದಾಖಲಿಸಿ, ತನಿಖೆ ನಡೆಸಿತ್ತು. ಅವರು ದೋಷಿಯೆಂದು ಸಾಬೀತಾದ ಹಿನ್ನೆಲೆಯಲ್ಲಿ 4 ವರ್ಷಗಳ ಶಿಕ್ಷೆ ಖಚಿತವಾಗಿದೆ.

ಇದನ್ನೂ ಓದಿ: ಪಂಜಾಬ್‌ನಲ್ಲಿ ದೆಹಲಿ ಮಾದರಿ: ರಾಜಧಾನಿಗೆ ಭೇಟಿ ನೀಡಿದ ಭಗವಂತ್‌ ಮನ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಂಪಾದಕೀಯ

ವಿಸ್ತಾರ ಸಂಪಾದಕೀಯ: 3ನೇ ಬಾರಿಯ ‘ವಿಸ್ತೃತ’ ಸರ್ಕಾರವು ‘ವಿಕಸಿತ ಭಾರತ’ಕ್ಕೆ ಶ್ರಮಿಸಲಿ

ಲೋಕಸಭೆ ಚುನಾವಣೆ ಫಲಿತಾಂಶವು ಹಲವು ಬದಲಾವಣೆಗಳಿಗೆ ಕಾರಣವಾಗಿದೆ. ಬಿಜೆಪಿಗೆ ಇದ್ದ ಬಹುಮತ ಈಗ ಇಲ್ಲದ ಕಾರಣ ಮೈತ್ರಿಪಕ್ಷಗಳ ಮರ್ಜಿಗೆ ಕಾಯಬೇಕಿದೆ. ಅತ್ತ, ಕಾಂಗ್ರೆಸ್‌ ಮುಂದಾಳತ್ವದ ಇಂಡಿಯಾ ಒಕ್ಕೂಟವೂ ಬಲಿಷ್ಠವಾಗಿದೆ. ಹಾಗಾಗಿ, 3ನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ನರೇಂದ್ರ ಮೋದಿ ಅವರು ಮೈತ್ರಿಪಕ್ಷಗಳ ಜತೆ ಸಮನ್ವಯ ಸಾಧಿಸುವ ಜತೆಗೆ ಪ್ರತಿಪಕ್ಷಗಳನ್ನೂ ಎದುರಿಸಬೇಕಿದೆ. ಇದರ ಮಧ್ಯೆ, ವಿಕಸಿತ ಭಾರತದ ಕನಸು ಸಾಕಾರಗೊಳ್ಳಲು ಕೂಡ ನೂತನ ಸರ್ಕಾರ ಹೆಚ್ಚು ಶ್ರಮ ವಹಿಸಬೇಕಿದೆ.

VISTARANEWS.COM


on

Modi Cabinet
Koo

ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು ಬಹುಮತ ಸಾಧಿಸಿದ್ದು, ನರೇಂದ್ರ ಮೋದಿ (Narendra Modi) ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರ ಜತೆಗೆ ಅನುಭವಿಗಳು, ಮೈತ್ರಿ ಪಕ್ಷಗಳ ಸಂಸದರು, ಯುವ ಸಂಸದರು ಸೇರಿ ಹಲವು ಮಾನದಂಡಗಳನ್ನು ಆಧರಿಸಿ ಆಯ್ಕೆ ಮಾಡಿದ 72 ಸಂಸದರು ಸಚಿವರಾಗಿ (Modi 3.0 Cabinet) ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ಸುಮಾರು 80 ದಿನಗಳಿಗೂ ಅಧಿಕ ಅವಧಿವರೆಗೆ 7 ಹಂತಗಳಲ್ಲಿ ಮತದಾನ ನಡೆದು, ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ, ಈಗ ನರೇಂದ್ರ ಮೋದಿ ಅವರ ನೇತೃತ್ವದಲ್ಲಿಯೇ ಸತತ ಮೂರನೇ ಬಾರಿಗೆ ಎನ್‌ಡಿಎ ಸರ್ಕಾರವೇ ಅಧಿಕಾರಕ್ಕೆ ಬಂದಿದೆ. ಹಾಗಾಗಿ, ಚುನಾವಣೆ ಸಮಯದ ರಾಜಕೀಯ ಮೇಲಾಟ, ಆರೋಪ, ಪ್ರತ್ಯಾರೋಪ, ಟೀಕೆ, ವ್ಯಂಗ್ಯ, ತಿರುಗೇಟುಗಳನ್ನು ಬಿಟ್ಟು, ಆಡಳಿತ ಪಕ್ಷದವರು ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ ನಿರ್ಮಾಣದ ಕನಸನ್ನು ನನಸಾಗಿಸಲು ಶ್ರಮಿಸಬೇಕಿದೆ. ಚುನಾವಣೆ ನೀತಿ ಸಂಹಿತೆ, ಫಲಿತಾಂಶದ ಹಿನ್ನೆಲೆಯಲ್ಲಿ ನಿಂತ ನೀರಾಗಿದ್ದ ಆಡಳಿತ ಯಂತ್ರಕ್ಕೆ ಈಗ ವೇಗ ನೀಡಬೇಕಿದೆ.

ಹಾಗೆ ನೋಡಿದರೆ, ವಿಕಸಿತ ಭಾರತದ ಕಲ್ಪನೆ ಸಾಕಾರಗೊಳಿಸಲು ದೇಶದಲ್ಲಿ ಸಕಾರಾತ್ಮಕ ವಾತಾವರಣವೇ ಇದೆ. ದೇಶದ ಜಿಡಿಪಿ ಬೆಳವಣಿಗೆಯ ಕುರಿತು ಅಂದಾಜಿಸಲಾಗಿದೆ. ಹಣದುಬ್ಬರವೂ ನಿಯಂತ್ರಣಕ್ಕೆ ಬರುತ್ತಿದೆ. ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರವು ಮೂಲ ಸೌಕರ್ಯ ಯೋಜನೆಗಳಿಗೆ ಒತ್ತು ನೀಡಿರುವುದು, ರೈಲು, ರೈಲು ನಿಲ್ದಾಣಗಳ ಆಧುನೀಕರಣ, ದಾಖಲೆ ವೇಗದಲ್ಲಿ ರಸ್ತೆ ನಿರ್ಮಾಣ, ಅತ್ಯಾಧುನಿಕ ವಿಮಾನ ನಿಲ್ದಾಣಗಳು ತಲೆ ಎತ್ತಿರುವುದು, ಇಸ್ರೋ ಬಾಹ್ಯಾಕಾಶ ಯೋಜನೆಗಳಿಗೆ ಉತ್ತೇಜನ ನೀಡಿರುವುದು ಸೇರಿ ಹಲವು ಕಾರ್ಯಕ್ರಮಗಳು ದೇಶದ ಅಭಿವೃದ್ದಿ ಮಾನದಂಡವನ್ನು ದುಪ್ಪಟ್ಟುಗೊಳಿಸಿವೆ. ಇದರಿಂದಾಗಿ ಸರ್ಕಾರದ ಸಚಿವರು, ಸಂಸದರು ವಿಕಸಿತ ಭಾರತದ ಕಲ್ಪನೆಯ ಸಾಕಾರಗೊಳಿಸಲು ಹೆಚ್ಚಿನ ಶ್ರಮ ವಹಿಸಬೇಕು. ಹೊಸ ಹೊಸ ಯೋಜನೆಗಳು, ಯೋಜನೆಗಳ ಸಮರ್ಪಕ ಜಾರಿ ಮೂಲಕ ದೇಶದ ಏಳಿಗೆಗೆ ಇನ್ನಷ್ಟು ಕೊಡುಗೆ ನೀಡಬೇಕು.

ಕೇಂದ್ರದಲ್ಲಿ 10 ವರ್ಷಗಳಿಂದ ಇದ್ದ ಬಹುಮತದ ಸರ್ಕಾರ ಈಗಿಲ್ಲ. ಬಿಜೆಪಿಯು 240 ಸೀಟುಗಳಿಗೆ ಸೀಮಿತವಾಗಿದ್ದು, ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹಾಗಾಗಿ, ಮೋದಿ ಸರ್ಕಾರವು ಸುಸ್ಥಿರ ಆಡಳಿತ ನೀಡಬೇಕು ಎಂದರೆ ಮೈತ್ರಿಕೂಟದಲ್ಲಿ ಸ್ಥಿರತೆ ಕಾಪಾಡಬೇಕು, ಸಮನ್ವಯತೆ ಸಾಧಿಸಬೇಕು. ಪ್ರಾದೇಶಿಕ ಪಕ್ಷಗಳಿಗೆ, ಪ್ರಾದೇಶಿಕ ಪಕ್ಷಗಳ ರಾಜ್ಯಗಳಿಗೆ ಹೆಚ್ಚಿನ ಮನ್ನಣೆ ನೀಡಬೇಕು. ಧರ್ಮ, ಜಾತಿಯ ವಿಷಯಗಳಿಗೆ ಪ್ರಾಮುಖ್ಯತೆ ಕೊಡದೆ, ಎಲ್ಲ ಮೈತ್ರಿ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರವನ್ನು ಮುನ್ನಡೆಸಬೇಕು. ಮೋದಿ ಸರ್ಕಾರವು ಉದ್ಯಮಿಗಳ ಪರವಾದ ಸರ್ಕಾರ ಎಂಬ ಕುಖ್ಯಾತಿ ಇತ್ತೀಚಿನ ವರ್ಷಗಳಲ್ಲಿ ಜಾಸ್ತಿಯಾಗಿದೆ. ಅಡುಗೆ ಅನಿಲ, ಪೆಟ್ರೋಲ್-ಡೀಸೆಲ್‌ ಸೇರಿ ಅಗತ್ಯ ವಸ್ತುಗಳ ಬೆಲೆಯೇರಿಕೆಯು ಬಡ ಹಾಗೂ ಮಧ್ಯಮ ವರ್ಗದವರನ್ನು ಹೈರಾಣಾಗಿಸಿದೆ. ಇಂತಹ ವಿಷಯಗಳ ಕುರಿತು ಮೋದಿ ಹಾಗೂ ಟೀಮ್‌ ಗಮನ ಹರಿಸಬೇಕು. ಬಜೆಟ್‌ನಲ್ಲಿ ಬಡವರು ಹಾಗೂ ಮಧ್ಯಮ ವರ್ಗದವರಿಗೆ ನೇರವಾಗಿ ಅನುಕೂಲವಾಗುವ (ಕಿಸಾನ್‌ ಸಮ್ಮಾನ್‌, ಅಡುಗೆ ಅನಿಲ ಸಿಲಿಂಡರ್‌ಗಳಿಗೆ ಸಬ್ಸಿಡಿ ಹೆಚ್ಚಳ ಇತ್ಯಾದಿ) ಯೋಜನೆಗಳನ್ನು ಘೋಷಿಸಬೇಕು.

ಕಳೆದ 10 ವರ್ಷಗಳಲ್ಲಿ ಲೋಕಸಭೆಯಲ್ಲಿ ಬಲಿಷ್ಠ ಪ್ರತಿಪಕ್ಷವೇ ಇರಲಿಲ್ಲ. ಕಾಂಗ್ರೆಸ್‌ ಸೇರಿ ಯಾವೊಂದು ಪಕ್ಷವೂ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆಯುವಷ್ಟು ಸಮರ್ಥವಾಗಿರಲಿಲ್ಲ. ಇದು ಕೂಡ ಮೋದಿ ಸರ್ಕಾರಕ್ಕೆ ಅನುಕೂಲ ಮಾಡಿಕೊಟ್ಟಿತ್ತು. ಆದರೆ, ಫಲಿತಾಂಶದ ಬಳಿಕ ಚಿತ್ರಣ ಬದಲಾಗಿದೆ. ಕಾಂಗ್ರೆಸ್‌ 52 ಕ್ಷೇತ್ರಗಳಿಂದ 99 ಕ್ಷೇತ್ರಗಳಿಗೆ ತನ್ನ ಸದಸ್ಯ ಬಲವನ್ನು ಹೆಚ್ಚಿಸಿಕೊಂಡಿದೆ. ಇಂಡಿಯಾ ಒಕ್ಕೂಟವು ಒಗ್ಗಟ್ಟಾಗಿ 232 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಹಾಗಾಗಿ, ಸಮ್ಮಿಶ್ರ ಸರ್ಕಾರಕ್ಕೆ ಆಡಳಿತ ನಡೆಸುವುದು ಹಗ್ಗದ ಮೇಲಿನ ನಡಿಗೆಯೇ ಆಗಿದೆ. ಇನ್ನು, ಕಳೆದ 10 ವರ್ಷಗಳಿಂದ ಬಲಿಷ್ಠವಾಗಿ, ಸಮರ್ಥವಾಗಿ ಕಾರ್ಯನಿರ್ವಹಿಸದ ಪ್ರತಿಪಕ್ಷಗಳು ಇನ್ನಾದರೂ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು. ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡಬೇಕು. ಸರ್ಕಾರ ಲಯ ತಪ್ಪಿದಾಗ ಸರಿದಾರಿಗೆ ತರಬೇಕು. ಸರ್ಕಾರಕ್ಕೆ ಆಗಾಗ ಎಚ್ಚರಿಕೆ ನೀಡುವ ಜತೆಗೆ ಚಾಟಿ ಬೀಸಬೇಕು. ಒಟ್ಟಿನಲ್ಲಿ, ಸಬಲ ಸಮ್ಮಿಶ್ರ ಸರ್ಕಾರ ಹಾಗೂ ಪ್ರಬಲ ಪ್ರತಿಪಕ್ಷಗಳು ಕೂಡಿ ದೇಶದ ಏಳಿಗೆಗೆ, ವಿಕಸಿತ ಭಾರತ ಕಲ್ಪನೆಯ ಸಾಕಾರಕ್ಕೆ ಶ್ರಮಿಸಬೇಕು ಎಂಬುದೇ ಎಲ್ಲರ ಆಶಯವಾಗಿದೆ.

ಇದನ್ನೂ ಓದಿ: Modi 3.0 Cabinet: ನಡ್ಡಾ To ಎಚ್‌ಡಿಕೆ ;‌ ಮೋದಿ ಸಂಪುಟದಲ್ಲಿ ಸ್ಥಾನ ಪಡೆದ ಹೊಸ ಮುಖಗಳಿವು

Continue Reading

ದೇಶ

Modi 3.0 Cabinet: ಮೋದಿ ನೂತನ ಸಂಪುಟದಿಂದ ಸ್ಮೃತಿ ಇರಾನಿ ಸೇರಿ ಯಾರಿಗೆಲ್ಲ ಕೊಕ್?‌ ಇಲ್ಲಿದೆ ಮಾಹಿತಿ

Modi 3.0 Cabinet:‌ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕೇಂದ್ರದಲ್ಲಿ 10 ವರ್ಷಗಳ ಬಳಿಕ ಸಮ್ಮಿಶ್ರ ಸರ್ಕಾರ ರಚನೆಯಾಗಿದೆ. ಇದರ ಬೆನ್ನಲ್ಲೇ, ನರೇಂದ್ರ ಮೋದಿ ಅವರ ಸಂಪುಟಕ್ಕೆ ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದೆ. ಹಾಗೆಯೇ, ಮೂವರು ಹಾಲಿ ಸಂಪುಟ ದರ್ಜೆ ಸಚಿವರನ್ನು ನರೇಂದ್ರ ಮೋದಿ ಅವರು ಕೈಬಿಟ್ಟಿದ್ದಾರೆ. ಹಾಗಾದರೆ, ಯಾರಿಗೆಲ್ಲ ಕೊಕ್‌ ಕೊಡಲಾಗಿದೆ? ಮಾಹಿತಿ ಹೀಗಿದೆ…

VISTARANEWS.COM


on

Modi 3.0 Cabinet
Koo

ನವದೆಹಲಿ: ನರೇಂದ್ರ ಮೋದಿ (Narendra Modi) ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಜತೆಗೆ 72 ಸಂಸದರು ಕೂಡ ಸಚಿವರಾಗಿ (Modi 3.0 Cabinet) ಪ್ರಮಾಣವಚನ ಸ್ವೀಕರಿಸಿದ್ದಾರೆ. ಯುವ ಸಂಸದರು, ಮೈತ್ರಿ ಪಕ್ಷಗಳ ಸದಸ್ಯರು, ಅನುಭವಿಗಳು ಸೇರಿ ಹಲವು ಮಾನದಂಡಗಳನ್ನು ಅನುಸರಿಸಿ ಸಚಿವ ಸ್ಥಾನ ನೀಡಲಾಗಿದೆ. ಇನ್ನು, ಮೂವರು ಹಾಲಿ ಸಂಪುಟ ದರ್ಜೆ ಸಚಿವರಿಗೆ ನರೇಂದ್ರ ಮೋದಿ ಅವರು ಕೊಕ್‌ ನೀಡಿದ್ದಾರೆ. ಮೂವರು ಸಚಿವರಲ್ಲಿ ಸ್ಮೃತಿ ಇರಾನಿ (Smriti Irani) ಕೂಡ ಇದ್ದಾರೆ.

2019ರಲ್ಲಿ ರಾಹುಲ್‌ ಗಾಂಧಿ ವಿರುದ್ಧ ಗೆಲುವು ಸಾಧಿಸಿದ್ದ ಅಮೇಥಿ ಲೋಕಸಭೆ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್‌ನ ಕಿಶೋರಿ ಲಾಲ್‌ ಶರ್ಮಾ ಅವರ ವಿರುದ್ಧ ಸ್ಮೃತಿ ಇರಾನಿ ಅವರು 1.6 ಲಕ್ಷ ಮತಗಳಿಂದ ಸೋಲನುಭವಿಸಿದ್ದಾರೆ. ಇವರು ಮೋದಿ ಸರ್ಕಾರದ ಎರಡನೇ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವರಾಗಿದ್ದರು. ಮತ್ತೊಂದೆಡೆ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವರಾಗಿದ್ದ ಅನುರಾಗ್‌ ಠಾಕೂರ್‌ ಅವರನ್ನು ಸಂಪುಟದಿಂದ ಕೈಬಿಡಲಾಗಿದೆ. ಹಿಮಾಚಲ ಪ್ರದೇಶ ಹಮೀರ್‌ಪುರ ಕ್ಷೇತ್ರದಲ್ಲಿ ಅನುರಾಗ್‌ ಠಾಕೂರ್‌ ಅವರು ಗೆಲುವು ಸಾಧಿಸಿದರೂ ಕೈಬಿಡಲಾಗಿದೆ. ಹಿಮಾಚಲ ಪ್ರದೇಶ ಕೋಟಾದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಸಂಪುಟ ದರ್ಜೆ ಖಾತೆ ನೀಡಲಾಗಿದೆ.

Anurag Thakur On Renaming India Name Row

ಮೋದಿ ಅವರ ಎರಡನೇ ಅವಧಿಯ ಸರ್ಕಾರದಲ್ಲಿ ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ಯಮಗಳ ಖಾತೆ ಸಚಿವರಾಗಿದ್ದ ನಾರಾಯಣ ರಾಣೆ ಅವರಿಗೆ ಕೊಕ್‌ ನೀಡಲಾಗಿದೆ. ಇವರು ಮಹಾರಾಷ್ಟ್ರದ ರತ್ನಗಿರಿ-ಸಿಂಧುದುರ್ಗ ಕ್ಷೇತ್ರದಲ್ಲಿ ಗೆಲುವು ಸಾಧಿಸಿದರೂ ಖಾತೆ ನೀಡಿಲ್ಲ. ಇನ್ನು, ಸಹಾಯಕ ಖಾತೆ ಸಚಿವರಾಗಿದ್ದ ರಾಜೀವ್‌ ಚಂದ್ರಶೇಖರ್‌ ಅವರ ಹೆಸರನ್ನೂ ಮೋದಿ ಕೈಬಿಟ್ಟಿದ್ದಾರೆ. ರಾಜೀವ್‌ ಚಂದ್ರಶೇಖರ್‌ ಅವರು ಕೇರಳದ ತಿರುವನಂತಪುರಂನಲ್ಲಿ ಕಾಂಗ್ರೆಸ್‌ನ ಶಶಿ ತರೂರ್‌ ಅವರಿಗೆ ತೀವ್ರ ಪೈಪೋಟಿ ನೀಡಿ ಸೋಲನುಭವಿಸಿದ್ದರು.

rajiv chandrashekhar

ಹಲವು ಹೊಸಬರಿಗೆ ಈ ಬಾರಿ ಮಣೆ ಹಾಕಲಾಗಿದೆ. ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್‌ ಅವರ ಪುತ್ರ ರಾಮನಾಥ್‌ ಠಾಕೂರ್‌ ಅವರಿಗೆ ರಾಜ್ಯ ಖಾತೆಯ ಉಸ್ತುವಾರಿ ನೀಡಲಾಗಿದೆ. ಜೆಡಿಯು ಸಂಸದ, ನಿತೀಶ್‌ ಕುಮಾರ್‌ ಅವರ ನಿಕಟವರ್ತಿಯಾಗಿರುವ ಇವರಿಗೆ ನರೇಂದ್ರ ಮೋದಿ ಅವರು ಮಣೆ ಹಾಕಿದ್ದಾರೆ. ಕರ್ಪೂರಿ ಠಾಕೂರ್‌ ಅವರಿಗೆ ಪ್ರಸಕ್ತ ವರ್ಷದಲ್ಲಿಯೇ ಕೇಂದ್ರ ಸರ್ಕಾರವು ಮರಣೋತ್ತರವಾಗಿ ಭಾರತರತ್ನ ಘೋಷಿಸಿತ್ತು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಕೇಂದ್ರ ಸಂಪುಟ ದರ್ಜೆ ಸ್ಥಾನ ನೀಡಲಾಗಿದ್ದು, ಇವರು ಶೀಘ್ರದಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ತೊರೆಯಲಿದ್ದಾರೆ ಎನ್ನಲಾಗುತ್ತದೆ. ಇನ್ನು, ಮಧ್ಯಪ್ರದೇಶ ಸಿಎಂ ಸ್ಥಾನ ತೊರೆದ ಶಿವರಾಜ್‌ ಸಿಂಗ್‌ ಚೌಹಾಣ್‌, ಹರಿಯಾಣ ಮಾಜಿ ಸಿಎಂ ಮನೋಹರ ಲಾಲ್‌ ಖಟ್ಟರ್‌, ಎಲ್‌ಜೆಪಿ ಮುಖ್ಯಸ್ಥ ಚಿರಾಗ್‌ ಪಾಸ್ವಾನ್‌ ಅವರಿಗೆ ಸಂಪುಟ ದರ್ಜೆ ಖಾತೆ ನೀಡಲಾಗಿದೆ. ಕೇರಳ ತ್ರಿಶ್ಶೂರ್‌ ಸಂಸದ ಸುರೇಶ್‌ ಗೋಪಿ, ಕರ್ನಾಟಕದ ವಿ.ಸೋಮಣ್ಣ, ತೆಲಂಗಾಣದ ಬಂಡಿ ಸಂಜಯ್‌ ಕುಮಾರ್‌ ಸೇರಿ ಹಲವು ಹೊಸ ಮುಖಗಳನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ.

ಇದನ್ನೂ ಓದಿ: Modi 3.0 Cabinet: ನಡ್ಡಾ To ಎಚ್‌ಡಿಕೆ ;‌ ಮೋದಿ ಸಂಪುಟದಲ್ಲಿ ಸ್ಥಾನ ಪಡೆದ ಹೊಸ ಮುಖಗಳಿವು

Continue Reading

ದೇಶ

Modi 3.0 Cabinet: ನಡ್ಡಾ To ಎಚ್‌ಡಿಕೆ ;‌ ಮೋದಿ ಸಂಪುಟದಲ್ಲಿ ಸ್ಥಾನ ಪಡೆದ ಹೊಸ ಮುಖಗಳಿವು

Modi 3.0 Cabinet:‌ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕೇಂದ್ರದಲ್ಲಿ 10 ವರ್ಷಗಳ ಬಳಿಕ ಸಮ್ಮಿಶ್ರ ಸರ್ಕಾರ ರಚನೆಯಾಗಿದೆ. ಇದರ ಬೆನ್ನಲ್ಲೇ, ನರೇಂದ್ರ ಮೋದಿ ಅವರ ಸಂಪುಟಕ್ಕೆ ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದೆ. ಯಾವ ಹೊಸ ಮುಖಗಳಿಗೆಲ್ಲ ಮೋದಿ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ? ಇಲ್ಲಿದೆ ಮಾಹಿತಿ.

VISTARANEWS.COM


on

Modi 3.0 Cabinet
Koo

ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ (Narendra Modi) ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದಾದ ಬಳಿಕ ಮೈತ್ರಿಕೂಟದ ಪಕ್ಷಗಳ ಸಂಸದರು ಸಚಿವರಾಗಿ (Modi 3.0 Cabinet) ಪ್ರಮಾಣವಚನ ಸ್ವೀಕರಿಸಿದ್ದಾರೆ. ಸಮ್ಮಿಶ್ರ ಸರ್ಕಾರವಾದ ಕಾರಣ ಸಹಜವಾಗಿಯೇ ಈ ಬಾರಿ ಹೊಸ ಮುಖಗಳಿಗೆ ಸಂಪುಟಕ್ಕೆ ಸೇರಿಸಿಕೊಳ್ಳಲು ಆದ್ಯತೆ ನೀಡಿದೆ. ಅದರಲ್ಲೂ, ಕೇರಳದಲ್ಲಿ ಬಿಜೆಪಿಯ ಖಾತೆ ತೆರೆದ ಸುರೇಶ್‌ ಗೋಪಿ, ಬಿಹಾರದ ಧೀಮಂತ ನಾಯಕ, ಭಾರತರತ್ನ ಪುರಸ್ಕೃತ ಕರ್ಪೂರಿ ಠಾಕೂರ್‌ ಅವರ ಪುತ್ರ ರಾಮನಾಥ್‌ ಠಾಕೂರ್‌ ಸೇರಿ ಹಲವು ಹೊಸಬರಿಗೆ ಸಚಿವ ಸ್ಥಾನ ನೀಡಲಾಗಿದೆ.

ಕರ್ಪೂರಿ ಠಾಕೂರ್‌ ಪುತ್ರಗೆ ಮಣೆ

ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್‌ ಅವರ ಪುತ್ರ ರಾಮನಾಥ್‌ ಠಾಕೂರ್‌ ಅವರಿಗೆ ರಾಜ್ಯ ಖಾತೆಯ ಉಸ್ತುವಾರಿ ನೀಡಲಾಗಿದೆ. ಜೆಡಿಯು ಸಂಸದ, ನಿತೀಶ್‌ ಕುಮಾರ್‌ ಅವರ ನಿಕಟವರ್ತಿಯಾಗಿರುವ ಇವರಿಗೆ ನರೇಂದ್ರ ಮೋದಿ ಅವರು ಮಣೆ ಹಾಕಿದ್ದಾರೆ. ಕರ್ಪೂರಿ ಠಾಕೂರ್‌ ಅವರಿಗೆ ಪ್ರಸಕ್ತ ವರ್ಷದಲ್ಲಿಯೇ ಕೇಂದ್ರ ಸರ್ಕಾರವು ಮರಣೋತ್ತರವಾಗಿ ಭಾರತರತ್ನ ಘೋಷಿಸಿತ್ತು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ಕೇಂದ್ರ ಸಂಪುಟ ದರ್ಜೆ ಸ್ಥಾನ ನೀಡಲಾಗಿದ್ದು, ಇವರು ಶೀಘ್ರದಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ತೊರೆಯಲಿದ್ದಾರೆ ಎನ್ನಲಾಗುತ್ತದೆ. ಇನ್ನು, ಮಧ್ಯಪ್ರದೇಶ ಸಿಎಂ ಸ್ಥಾನ ತೊರೆದ ಶಿವರಾಜ್‌ ಸಿಂಗ್‌ ಚೌಹಾಣ್‌, ಹರಿಯಾಣ ಮಾಜಿ ಸಿಎಂ ಮನೋಹರ ಲಾಲ್‌ ಖಟ್ಟರ್‌, ಎಲ್‌ಜೆಪಿ ಮುಖ್ಯಸ್ಥ ಚಿರಾಗ್‌ ಪಾಸ್ವಾನ್‌ ಅವರಿಗೆ ಸಂಪುಟ ದರ್ಜೆ ಖಾತೆ ನೀಡಲಾಗಿದೆ. ಕೇರಳ ತ್ರಿಶ್ಶೂರ್‌ ಸಂಸದ ಸುರೇಶ್‌ ಗೋಪಿ, ಕರ್ನಾಟಕದ ವಿ.ಸೋಮಣ್ಣ, ತೆಲಂಗಾಣದ ಬಂಡಿ ಸಂಜಯ್‌ ಕುಮಾರ್‌ ಸೇರಿ ಹಲವು ಹೊಸ ಮುಖಗಳನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ.

ಮೋದಿ ಸಂಪುಟ ಸೇರಿದ ಹೊಸಮುಖಗಳು

ಕ್ಯಾಬಿನೆಟ್‌ ದರ್ಜೆಯ ಸಚಿವರು

  • ಜೆ.ಪಿ.ನಡ್ಡಾ (ಬಿಜೆಪಿ- ಹಿಮಾಚಲ ಪ್ರದೇಶ)
  • ಶಿವರಾಜ್ ಸಿಂಗ್ ಚೌಹಾಣ್ (ಬಿಜೆಪಿ- ಮಧ್ಯಪ್ರದೇಶ )
  • ಮನೋಹರ ಲಾಲ್‌ ಖಟ್ಟರ್‌ (ಬಿಜೆಪಿ- ಹರಿಯಾಣ)
  • ಎಚ್‌.ಡಿ.ಕುಮಾರಸ್ವಾಮಿ (ಜೆಡಿಎಸ್‌- ಕರ್ನಾಟಕ)
  • ಜಿತನ್ ರಾಮ್ ಮಾಂಝಿ (ಎಚ್‌ಎಎಂ- ಬಿಹಾರ)
  • ರಾಜೀವ್‌ ರಂಜನ್‌ ಸಿಂಗ್‌ (ಲಲನ್‌ ಸಿಂಗ್-ಜೆಡಿಯು-ಬಿಹಾರ)
  • ರಾಮ್‌ ಮೋಹನ್‌ ನಾಯ್ಡು (ಟಿಡಿಪಿ-ಆಂಧ್ರಪ್ರದೇಶ)
  • ಜುವೆಲ್‌ ಒರಾಮ್‌ (ಬಿಜೆಪಿ- ಒಡಿಶಾ) (ಇವರು ವಾಜಪೇಯಿ ಸರ್ಕಾರದಲ್ಲೂ ಕೇಂದ್ರ ಸಚಿವರಾಗಿದ್ದರು)
  • ಚಿರಾಗ್‌ ಪಾಸ್ವಾನ್‌ (ಎಲ್‌ಜೆಪಿ-ಬಿಹಾರ)
  • ಸಿ.ಆರ್‌.ಪಾಟೀಲ್‌ (ಬಿಜೆಪಿ-ಗುಜರಾತ್)

ರಾಜ್ಯ/ ಸ್ವತಂತ್ರ ಖಾತೆ

  • ಪ್ರತಾಪ್‌ ರಾವ್‌ ಗಣಪತ್‌ ರಾವ್‌ ಜಾಧವ್‌ (ಶಿವಸೇನೆ ಏಕನಾಥ್‌ ಶಿಂಧೆ ಬಣದ ಸಂಸದ-ಮಹಾರಾಷ್ಟ್ರ)
  • ಜಯಂತ್‌ ಚೌಧರಿ (ಆರ್‌ಎಲ್‌ಡಿ-ಉತ್ತರ ಪ್ರದೇಶ)‌

ರಾಜ್ಯ ಖಾತೆ ಸಚಿವರು

  • ಜಿತಿನ್‌ ಪ್ರಸಾದ್‌ (ಬಿಜೆಪಿ-ಉತ್ತರ ಪ್ರದೇಶ)
  • ರಾಮನಾಥ್‌ ಠಾಕೂರ್‌ (ಜೆಡಿಯು-ಬಿಹಾರ)
  • ವಿ. ಸೋಮಣ್ಣ (ಬಿಜೆಪಿ-ಕರ್ನಾಟಕ)
  • ಪೆಮ್ಮಸಾನಿ ಚಂದ್ರಶೇಖರ್‌ (ಟಿಡಿಪಿ-ಆಂಧ್ರಪ್ರದೇಶ)
  • ಎಸ್‌ಪಿ ಸಿಂಗ್‌ ಬಘೇಲ್‌ (ಬಿಜೆಪಿ-ಉತ್ತರ ಪ್ರದೇಶ)
  • ಕೀರ್ತಿ ವರ್ಧನ್‌ ಸಿಂಗ್‌ (ಬಿಜೆಪಿ-ಉತ್ತರ ಪ್ರದೇಶ)
  • ಬಂಡಿ ಸಂಜಯ್‌ ಕುಮಾರ್‌ (ಬಿಜೆಪಿ-ತೆಲಂಗಾಣ)
  • ಕಮಲೇಶ್‌ ಪಾಸ್ವಾನ್‌ (ಬಿಜೆಪಿ-ಉತ್ತರ ಪ್ರದೇಶ)
  • ಭಾಗೀರಥ್‌ ಚೌಧರಿ (ಬಿಜೆಪಿ-ರಾಜಸ್ಥಾನ)
  • ಸತೀಶ್‌ ಚಂದ್ರ ದುಬೆ (ಬಿಜೆಪಿ-ಬಿಹಾರ)‌
  • ಸಂಜಯ್‌ ಸೇಠ್‌ (ಬಿಜೆಪಿ-ಜಾರ್ಖಂಡ್)‌
  • ರವನೀತ್‌ ಸಿಂಗ್‌ ಬಿಟ್ಟು (ಬಿಜೆಪಿ-ಪಂಜಾಬ್)
  • ದುರ್ಗಾದಾಸ್‌ ಉಯಿಕೆ (ಬಿಜೆಪಿ- ಮಧ್ಯಪ್ರದೇಶ)
  • ರಕ್ಷಾ ನಿಖಿಲ್‌ ಖಡ್ಸೆ (ಬಿಜೆಪಿ-ಮಹಾರಾಷ್ಟ್ರ)
  • ಸುಕಾಂತ ಮಜುಂದಾರ್‌ (ಬಿಜೆಪಿ-ಪಶ್ಚಿಮ ಬಂಗಾಳ)
  • ತೋಖನ್‌ ಸಾಹು (ಬಿಜೆಪಿ-ಛತ್ತೀಸ್‌ಗಢ)
  • ಡಾ.ರಾಜ್‌ಭೂಷಣ್‌ ಚೌಧರಿ (ಬಿಜೆಪಿ-ಬಿಹಾರ)
  • ಹರ್ಷ ಮಲ್ಹೋತ್ರಾ (ಬಿಜೆಪಿ-ದೆಹಲಿ)
  • ಮುರಳೀಧರ್‌ ಮೊಹೊಲ್‌ (ಬಿಜೆಪಿ-ಮಹಾರಾಷ್ಟ್ರ)
  • ನಿಮುಬೆನ್‌ ಬಾಂಭಣಿಯಾ (ಬಿಜೆಪಿ-ಗುಜರಾತ್)
  • ಜಾರ್ಜ್‌ ಕುರಿಯನ್‌ (ಬಿಜೆಪಿ-ಕೇರಳ)

ಇದನ್ನೂ ಓದಿ: Narendra Modi: ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ; 3.0 ಯುಗಾರಂಭ!

Continue Reading

ದೇಶ

Modi 3.0 Cabinet: 30 ಕ್ಯಾಬಿನೆಟ್‌ ದರ್ಜೆ, 5 ಸ್ವತಂತ್ರ, 36 ಸಂಸದರಿಗೆ ರಾಜ್ಯ ಖಾತೆ; ಇಲ್ಲಿದೆ ಕಂಪ್ಲೀಟ್‌ ಲಿಸ್ಟ್

Modi 3.0 Cabinet: ನರೇಂದ್ರ ಮೋದಿ ಅವರ ಸಚಿವ ಸಂಪುಟ ಸೇರುವವರ ಪಟ್ಟಿ ಅಂತಿಮವಾಗಿದೆ. ಮೈತ್ರಿ ಸರ್ಕಾರದಲ್ಲಿ ಹಲವು ಅನುಭವಿಗಳಿಗೆ, ಹಲವು ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದೆ. ಯಾರೆಲ್ಲ ಸಚಿವರಾಗಿ ಆಯ್ಕೆಯಾಗಿದ್ದಾರೆ? ಮೈತ್ರಿಕೂಟದ ಬೇರೆ ಪಕ್ಷಗಳ ಯಾರಿಗೆ ಮಣೆ ಹಾಕಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Modi 3.0 Cabinet
Koo

ನವದೆಹಲಿ: ನರೇಂದ್ರ ಮೋದಿ (Narendra Modi) ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರೊಂದಿಗೆ ದೇಶದಲ್ಲಿ ನರೇಂದ್ರ ಮೋದಿ ಅವರ ಮೂರನೇ ಅವಧಿಯ ಆಡಳಿತ ಆರಂಭವಾಗಿದೆ. ಅಷ್ಟೇ ಅಲ್ಲ, ನರೇಂದ್ರ ಮೋದಿ ಅವರ ಜತೆ ಸಂಸದರು ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಎನ್‌ಡಿಎ ಮೈತ್ರಿಕೂಟದ 30 ಸಂಸದರಿಗೆ ಕ್ಯಾಬಿನೆಟ್‌ ದರ್ಜೆಯ ಸ್ಥಾನ ನೀಡಲಾಗಿದೆ. ಹಾಗೆಯೇ, ಐವರಿಗೆ ಸ್ವತಂತ್ರ ನಿರ್ವಹಣೆ ಮತ್ತು ‌36 ಸಂಸದರನ್ನು ರಾಜ್ಯ ಸಹಾಯಕ ಸಚಿವರನ್ನಾಗಿ ನೇಮಿಸಲಾಗಿದೆ.

ಕರ್ನಾಟಕದ ಪ್ರಲ್ಹಾದ್‌ ಜೋಶಿ, ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಸಂಪುಟ ದರ್ಜೆ ಸ್ಥಾನ ಸಿಕ್ಕರೆ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ ಅವರು ರಾಜ್ಯ ಖಾತೆ ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿ ಹಲವರು ಇದೇ ಮೊದಲ ಬಾರಿಗೆ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಯಾವ ಪಕ್ಷದವರಿಗೆ ಯಾವ ಸ್ಥಾನಮಾನ ನೀಡಲಿದೆ ಎಂಬುದು ಸೇರಿ ಇಡೀ ಸಂಪುಟ ಸಚಿವರ ಪಟ್ಟಿ ಇಲ್ಲಿದೆ.

ಹೀಗಿದೆ ಸಂಪುಟ ದರ್ಜೆ ಸಚಿವರ ಪಟ್ಟಿ

  • ಅಮಿತ್ ಶಾ (ಬಿಜೆಪಿ- ಗುಜರಾತ್)
  • ರಾಜನಾಥ್ ಸಿಂಗ್ (ಬಿಜೆಪಿ- ಉತ್ತರ ಪ್ರದೇಶ)
  • ನಿತಿನ್ ಗಡ್ಕರಿ (ಬಿಜೆಪಿ- ಮಹಾರಾಷ್ಟ್ರ)
  • ಜೆ.ಪಿ.ನಡ್ಡಾ (ಬಿಜೆಪಿ- ಹಿಮಾಚಲ ಪ್ರದೇಶ)
  • ಶಿವರಾಜ್ ಸಿಂಗ್ ಚೌಹಾಣ್ (ಬಿಜೆಪಿ- ಮಧ್ಯಪ್ರದೇಶ )
  • ನಿರ್ಮಲಾ ಸೀತಾರಾಮನ್ (ರಾಜ್ಯಸಭೆ ಬಿಜೆಪಿ ಸದಸ್ಯೆ)
  • ಎಸ್.ಜೈ ಶಂಕರ್ (ರಾಜ್ಯಸಭೆ ಬಿಜೆಪಿ ಸದಸ್ಯ)
  • ಮನೋಹರ ಲಾಲ್‌ ಖಟ್ಟರ್‌ (ಬಿಜೆಪಿ- ಹರಿಯಾಣ)
  • ಎಚ್‌.ಡಿ.ಕುಮಾರಸ್ವಾಮಿ (ಜೆಡಿಎಸ್‌- ಕರ್ನಾಟಕ)
  • ಪಿಯೂಷ್‌ ಗೋಯಲ್‌ (ಬಿಜೆಪಿ- ಮಹಾರಾಷ್ಟ್ರ )
  • ಧರ್ಮೇಂದ್ರ ಪ್ರಧಾನ್ (ಬಿಜೆಪಿ- ಒಡಿಶಾ)
  • ಜಿತನ್ ರಾಮ್ ಮಾಂಝಿ (ಎಚ್‌ಎಎಂ- ಬಿಹಾರ)
  • ರಾಜೀವ್‌ ರಂಜನ್‌ ಸಿಂಗ್‌ (ಲಲನ್‌ ಸಿಂಗ್-ಜೆಡಿಯು-ಬಿಹಾರ)
  • ಸರ್ಬಾನಂದ ಸೋನೊವಾಲ್‌‌ (ಬಿಜೆಪಿ- ಅಸ್ಸಾಂ)
  • ರಾಮ್‌ ಮೋಹನ್‌ ನಾಯ್ಡು (ಟಿಡಿಪಿ-ಆಂಧ್ರಪ್ರದೇಶ)
  • ಪ್ರಲ್ಹಾದ್‌ ಜೋಶಿ (ಬಿಜೆಪಿ- ಕರ್ನಾಟಕ)
  • ಡಾ.ವೀರೇಂದ್ರ ಕುಮಾರ್ (ಬಿಜೆಪಿ-ಮಧ್ಯಪ್ರದೇಶ)
  • ಜುವೆಲ್‌ ಒರಾಮ್‌ (ಬಿಜೆಪಿ- ಒಡಿಶಾ)
  • ಗಿರಿರಾಜ್‌ ಸಿಂಗ್‌ (ಬಿಜೆಪಿ-ಬಿಹಾರ)
  • ಅಶ್ವಿನಿ ವೈಷ್ಣವ್‌ (ಬಿಜೆಪಿ-ರಾಜಸ್ಥಾನ-ರಾಜ್ಯಸಭೆ ಸದಸ್ಯ)
  • ಜ್ಯೋತಿರಾದಿತ್ಯ ಸಿಂಧಿಯಾ (ಬಿಜೆಪಿ-ಮಧ್ಯಪ್ರದೇಶ)
  • ಭೂಪೇಂದ್ರ ಯಾದವ್‌ (ಬಿಜೆಪಿ-ರಾಜಸ್ಥಾನ)
  • ಗಜೇಂದ್ರ ಸಿಂಗ್ ಶೇಖಾವತ್ (ಬಿಜೆಪಿ- ರಾಜಸ್ಥಾನ)
  • ಅನ್ನಪೂರ್ಣ ದೇವಿ (ಬಿಜೆಪಿ-ಜಾರ್ಖಂಡ್)
  • ಕಿರಣ್‌ ರಿಜಿಜು (ಬಿಜೆಪಿ- ಅರುಣಾಚಲ ಪ್ರದೇಶ)
  • ಹರ್ದೀಪ್ ಸಿಂಗ್ ಪುರಿ (ರಾಜ್ಯಸಭೆ ಬಿಜೆಪಿ ಸದಸ್ಯ-ಪಂಜಾಬ್)
  • ಡಾ.ಮನ್ಸುಖ್‌ ಮಂಡಾವೀಯ (ಬಿಜೆಪಿ-ಗುಜರಾತ್)‌
  • ಜಿ.ಕಿಶನ್‌ ರೆಡ್ಡಿ (ಬಿಜೆಪಿ-ತೆಲಂಗಾಣ)
  • ಚಿರಾಗ್‌ ಪಾಸ್ವಾನ್‌ (ಎಲ್‌ಜೆಪಿ-ಬಿಹಾರ)
  • ಸಿ.ಆರ್‌.ಪಾಟೀಲ್‌ (ಬಿಜೆಪಿ-ಗುಜರಾತ್)

ಸ್ವತಂತ್ರ ನಿರ್ವಹಣೆ

  • ಇಂದ್ರಜೀತ್‌ ಸಿಂಗ್‌ (ಬಿಜೆಪಿ-ಹರಿಯಾಣ)
  • ಡಾ.ಜಿತೇಂದ್ರ ಸಿಂಗ್‌ (ಬಿಜೆಪಿ-ಜಮ್ಮು)
  • ಅರ್ಜುನ್‌ ರಾಮ್‌ ಮೇಘ್ವಾಲ್‌ (ಬಿಜೆಪಿ-ರಾಜಸ್ಥಾನ)
  • ಪ್ರತಾಪ್‌ ರಾವ್‌ ಗಣಪತ್‌ ರಾವ್‌ ಜಾಧವ್‌ (ಶಿವಸೇನೆ ಏಕನಾಥ್‌ ಶಿಂಧೆ ಬಣದ ಸಂಸದ-ಮಹಾರಾಷ್ಟ್ರ)
  • ಜಯಂತ್‌ ಚೌಧರಿ (ಆರ್‌ಎಲ್‌ಡಿ-ಉತ್ತರ ಪ್ರದೇಶ)

ರಾಜ್ಯ ಖಾತೆ ಸಚಿವರು

  • ಜಿತಿನ್‌ ಪ್ರಸಾದ್‌ (ಬಿಜೆಪಿ-ಉತ್ತರ ಪ್ರದೇಶ)
  • ಶ್ರೀಪಾದ್‌ ನಾಯ್ಕ್ (ಬಿಜೆಪಿ-ಗೋವಾ)
  • ಪಂಕಜ್‌ ಚೌಧರಿ (ಬಿಜೆಪಿ-ಉತ್ತರ ಪ್ರದೇಶ)
  • ಕ್ರಿಶನ್‌ ಪಾಲ್‌ (ಬಿಜೆಪಿ-ಹರಿಯಾಣ)
  • ರಾಮ್‌ದಾಸ್‌ ಅಠಾವಳೆ (ಆರ್‌ಪಿಐ-ಮಹಾರಾಷ್ಟ್ರ)
  • ರಾಮನಾಥ್‌ ಠಾಕೂರ್‌ (ಜೆಡಿಯು-ಬಿಹಾರ)
  • ನಿತ್ಯಾನಂದ್‌ ರಾಯ್‌ (ಬಿಜೆಪಿ-ಬಿಹಾರ)
  • ಅನುಪ್ರಿಯಾ ಪಟೇಲ್‌ (ಅಪ್ನಾದಳ್‌ (ಎಸ್‌)-ಉತ್ತರ ಪ್ರದೇಶ)
  • ವಿ. ಸೋಮಣ್ಣ (ಬಿಜೆಪಿ-ಕರ್ನಾಟಕ)
  • ಪೆಮ್ಮಸಾನಿ ಚಂದ್ರಶೇಖರ್‌ (ಟಿಡಿಪಿ-ಆಂಧ್ರಪ್ರದೇಶ)
  • ಎಸ್‌ಪಿ ಸಿಂಗ್‌ ಬಘೇಲ್‌ (ಬಿಜೆಪಿ-ಉತ್ತರ ಪ್ರದೇಶ)
  • ಶೋಭಾ ಕರಂದ್ಲಾಜೆ (ಬಿಜೆಪಿ-ಕರ್ನಾಟಕ)
  • ಕೀರ್ತಿ ವರ್ಧನ್‌ ಸಿಂಗ್‌ (ಬಿಜೆಪಿ-ಉತ್ತರ ಪ್ರದೇಶ)
  • ಬಿ.ಎಲ್‌.ವರ್ಮಾ (ಬಿಜೆಪಿ-ಉತ್ತರ ಪ್ರದೇಶ)
  • ಶಂತನು ಠಾಕೂರ್‌ (ಬಿಜೆಪಿ- ಪಶ್ಚಿಮ ಬಂಗಾಳ)
  • ಸುರೇಶ್‌ ಗೋಪಿ (ಬಿಜೆಪಿ-ಕೇರಳ)
  • ಡಾ.ಎಲ್‌.ಮುರುಗನ್‌ (ಬಿಜೆಪಿ-ತಮಿಳುನಾಡು)
  • ಅಜಯ್‌ ತಮ್ಟಾ (ಬಿಜೆಪಿ-ಉತ್ತರಾಖಂಡ)
  • ಬಂಡಿ ಸಂಜಯ್‌ ಕುಮಾರ್‌ (ಬಿಜೆಪಿ-ತೆಲಂಗಾಣ)
  • ಕಮಲೇಶ್‌ ಪಾಸ್ವಾನ್‌ (ಬಿಜೆಪಿ-ಉತ್ತರ ಪ್ರದೇಶ)
  • ಭಾಗೀರಥ್‌ ಚೌಧರಿ (ಬಿಜೆಪಿ-ರಾಜಸ್ಥಾನ)
  • ಸತೀಶ್‌ ಚಂದ್ರ ದುಬೆ (ಬಿಜೆಪಿ-ಬಿಹಾರ)
  • ಸಂಜಯ್‌ ಸೇಠ್‌ (ಬಿಜೆಪಿ-ಜಾರ್ಖಂಡ್)
  • ರವನೀತ್‌ ಸಿಂಗ್‌ ಬಿಟ್ಟು (ಬಿಜೆಪಿ-ಪಂಜಾಬ್)
  • ದುರ್ಗಾದಾಸ್‌ ಉಯಿಕೆ (ಬಿಜೆಪಿ- ಮಧ್ಯಪ್ರದೇಶ)
  • ರಕ್ಷಾ ನಿಖಿಲ್‌ ಖಡ್ಸೆ (ಬಿಜೆಪಿ-ಮಹಾರಾಷ್ಟ್ರ)
  • ಸುಕಾಂತ ಮಜುಂದಾರ್‌ (ಬಿಜೆಪಿ-ಪಶ್ಚಿಮ ಬಂಗಾಳ)
  • ಸಾವಿತ್ರಿ ಠಾಕೂರ್‌ (ಬಿಜೆಪಿ-ಮಧ್ಯಪ್ರದೇಶ)
  • ತೋಖನ್‌ ಸಾಹು (ಬಿಜೆಪಿ-ಛತ್ತೀಸ್‌ಗಢ)
  • ಡಾ.ರಾಜ್‌ಭೂಷಣ್‌ ಚೌಧರಿ (ಬಿಜೆಪಿ-ಬಿಹಾರ)
  • ಭೂಪತಿ ರಾಜು ಶ್ರೀನಿವಾಸ್‌ ವರ್ಮಾ (ಬಿಜೆಪಿ-ಆಂಧ್ರಪ್ರದೇಶ)
  • ಹರ್ಷ ಮಲ್ಹೋತ್ರಾ (ಬಿಜೆಪಿ-ದೆಹಲಿ)
  • ನಿಮುಬೆನ್‌ ಬಾಂಭಣಿಯಾ (ಬಿಜೆಪಿ-ಗುಜರಾತ್)
  • ಮುರಳೀಧರ್‌ ಮೊಹೊಲ್‌ (ಬಿಜೆಪಿ-ಮಹಾರಾಷ್ಟ್ರ)
  • ಜಾರ್ಜ್‌ ಕುರಿಯನ್‌ (ಬಿಜೆಪಿ-ಕೇರಳ)
  • ಪವಿತ್ರ ಮಾರ್ಗರಿಟಾ (ಬಿಜೆಪಿ-ಅಸ್ಸಾಂ)

ಇದನ್ನೂ ಓದಿ: Narendra Modi: 3ನೇ ಬಾರಿ ಪ್ರಧಾನಿಯಾಗಿ ಇಂದು ಸಂಜೆ ಮೋದಿ ಪ್ರಮಾಣ; ಇಲ್ಲಿದೆ ಬಾಲ್ಯದಿಂದ ವಿಶ್ವನಾಯಕತನಕದ ಜೀವನ ಚಿತ್ರಣ

Continue Reading
Advertisement
Karnataka Weather Forecast
ಮಳೆ6 mins ago

Karnataka Weather : ಮುಂದಿನ 48 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ; ರೆಡ್‌ ಅಲರ್ಟ್‌ ಘೋಷಣೆ

Modi Cabinet
ಸಂಪಾದಕೀಯ35 mins ago

ವಿಸ್ತಾರ ಸಂಪಾದಕೀಯ: 3ನೇ ಬಾರಿಯ ‘ವಿಸ್ತೃತ’ ಸರ್ಕಾರವು ‘ವಿಕಸಿತ ಭಾರತ’ಕ್ಕೆ ಶ್ರಮಿಸಲಿ

Health Tips Kannada
ಆರೋಗ್ಯ36 mins ago

Health Tips Kannada: ಉಪ್ಪು ತಿನ್ನುವುದು ರುಚಿಗೆ ಮಾತ್ರವಲ್ಲ, ಆರೋಗ್ಯಕ್ಕೂ ಮುಖ್ಯ!

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರು ವಿನಾ ಕಾರಣ ಎಲ್ಲದಕ್ಕೂ ಮೂಗು ತೂರಿಸುವುದು ಬೇಡ!

ind vs pak
ಪ್ರಮುಖ ಸುದ್ದಿ5 hours ago

IND vs PAK : ಭಾರತದ ಎದುರು ಪಾಕಿಸ್ತಾನಕ್ಕೆ ಮತ್ತೊಮ್ಮೆ ಮುಖಭಂಗ; ಕಡಿಮೆ ಸ್ಕೋರ್ ಇದ್ದಾಗಲೂ 6 ರನ್ ಸೋಲು

Stabbing in Mangalore:
ಪ್ರಮುಖ ಸುದ್ದಿ7 hours ago

Stabbing in Mangalore : ವಿಜಯೋತ್ಸವ ಮುಗಿಸಿ ಮನೆಗೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತರಿಬ್ಬರಿಗೆ ಚಾಕು ಇರಿತ

Modi 3.0 Cabinet
ದೇಶ7 hours ago

Modi 3.0 Cabinet: ಮೋದಿ ನೂತನ ಸಂಪುಟದಿಂದ ಸ್ಮೃತಿ ಇರಾನಿ ಸೇರಿ ಯಾರಿಗೆಲ್ಲ ಕೊಕ್?‌ ಇಲ್ಲಿದೆ ಮಾಹಿತಿ

IND vs PAK:
ಪ್ರಮುಖ ಸುದ್ದಿ7 hours ago

IND vs PAK : ವಿರಾಟ್​ ಕೊಹ್ಲಿಯಿಂದ ಆಟೋಗ್ರಾಫ್ ಪಡೆದುಕೊಂಡ ಕ್ರಿಸ್​ ಗೇಲ್​! ಇಲ್ಲಿದೆ ವಿಡಿಯೊ

Veeraloka
Latest8 hours ago

Veeraloka Books : ಹೊಸ ಲೇಖಕರಿಗೆ ವೀರಲೋಕ ಪ್ರಕಾಶನ ಹೆದ್ದಾರಿಯನ್ನೇ ಸೃಷ್ಟಿಸಿದೆ: ಜಯಂತ್‌ ಕಾಯ್ಕಿಣಿ ಶ್ಲಾಘನೆ

IND vs PAK
ಪ್ರಮುಖ ಸುದ್ದಿ8 hours ago

IND vs PAK : ಮರೆಗುಳಿ ರೋಹಿತ್​; ಜೇಬಿನಲ್ಲಿ​ ಕಾಯಿನ್​ ಇಟ್ಟು ಹುಡುಕಾಡಿದ ಭಾರತ ತಂಡದ ನಾಯಕ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌