IND VS ENG | ಸೆಮಿಫೈನಲ್‌ ಸೋಲಿನಲ್ಲೂ ಕೆಟ್ಟ ದಾಖಲೆ ಬರೆದ ಟೀಮ್​ ಇಂಡಿಯಾ; ಏನದು? - Vistara News

Latest

IND VS ENG | ಸೆಮಿಫೈನಲ್‌ ಸೋಲಿನಲ್ಲೂ ಕೆಟ್ಟ ದಾಖಲೆ ಬರೆದ ಟೀಮ್​ ಇಂಡಿಯಾ; ಏನದು?

ಭಾರತ(IND VS ENG) ತಂಡ ಟಿ20 ವಿಶ್ವ ಕಪ್​ನ ಸೆಮಿಫೈನಲ್​ ಪಂದ್ಯದಲ್ಲಿ 10 ವಿಕೆಟ್​ಗಳ ಸೋಲಿಗೆ ತುತ್ತಾದ ಮೊದಲ ತಂಡ ಎಂಬ ಕೆಟ್ಟ ದಾಖಲೆ ಬರೆದಿದೆ.

VISTARANEWS.COM


on

eng
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಡಿಲೇಡ್​: ಇಂಗ್ಲೆಂಡ್​ ವಿರುದ್ಧದ ಐಸಿಸಿ ಟಿ 20 ವಿಶ್ವ ಕಪ್​ನ ಸೆಮಿಫೈನಲ್​ ಪಂದ್ಯದಲ್ಲಿ ಸೋಲು ಕಾಣುವ ಮೂಲಕ ಭಾರತ(IND VS ENG) ತಂಡದ ಟಿ20 ವಿಶ್ವ ಕಪ್​ ಅಭಿಯಾನ ಅಂತ್ಯಕಂಡಿದೆ. ಸೋಲಿನಲ್ಲಿಯೂ ಟೀಮ್​ ಇಂಡಿಯಾ ಕೆಟ್ಟ ದಾಖಲೆಯೊಂದನ್ನು ಬರೆದಿದೆ.

ಅಡಿಲೇಡ್​ ಓವಲ್​ ಮೈದಾನದಲ್ಲಿ ಗುರುವಾರ ನಡೆದ ಈ ಮುಖಾಮುಖಿಯಲ್ಲಿ ಟಾಸ್ ಸೋತು ಮೊದಲು ಬ್ಯಾಟ್​ ಮಾಡಿದ ಭಾರತ ತಂಡ ವಿರಾಟ್​ ಕೊಹ್ಲಿ(50) ಮತ್ತು ಹಾರ್ದಿಕ್​ ಪಾಂಡ್ಯ(63) ಅವರ ಅರ್ಧಶತಕದ ಹೋರಾಟದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ಗೆ 168 ರನ್​ ಗಳಿಸಿತು. ಬಳಿಕ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ​ ಜೋಸ್​ ಬಟ್ಲರ್​(80*) ಮತ್ತು ಅಲೆಕ್ಸ್​ ಹೇಲ್ಸ್​(86*) ಅವರ ಬ್ಯಾಟಿಂಗ್​ ಆರ್ಭಟದಿಂದ 16 ಓವರ್​ಗಳಲ್ಲಿ ಯಾವುದೇ ವಿಕೆಟ್​ ನಷ್ಟವಿಲ್ಲದೆ 170 ರನ್​ ಗಳಿಸಿ ಗೆಲುವಿನ ನಗೆ ಬೀರಿತು.

ಭಾರತ ಈ ಸೋಲಿನೊಂದಿಗೆ ಟಿ20 ವಿಶ್ವ ಕಪ್​ನ ಇದುವರೆಗಿನ ಸೆಮಿಫೈನಲ್​ ಇತಿಹಾಸದಲ್ಲಿ 10 ವಿಕೆಟ್​ಗಳಿಂದ ಸೋತ ಮೊದಲ ತಂಡ ಎಂಬ ಕೆಟ್ಟ ದಾಖಲೆಗೆ ಗುರಿಯಾಯಿತು. ಈ ಮೊದಲು ಟಿ20 ವಿಶ್ವ ಕಪ್​ನ ಲೀಗ್​ ಹಂತದಲ್ಲಿ ಹಲವು ತಂಡಗಳು 10 ವಿಕೆಟ್​ ಅಂತರದಿಂದ ಹೀನಾಯವಾಗಿ ಸೋತ ಎಷ್ಟೋ ನಿದರ್ಶನಗಳಿಗೆ ಆದರೆ ಸೆಮಿಫೈನಲ್​ನಲ್ಲಿ ದಾಖಲಾದ ಮೊದಲ ಹೀನಾಯ ಸೋಲು ಇದಾಗಿದೆ.

ಇದನ್ನೂ ಓದಿ | Virat Kohli | ಇಂಗ್ಲೆಂಡ್ ವಿರುದ್ಧದ ಒಂದೇ ಪಂದ್ಯದಲ್ಲಿ ಹಲವು ದಾಖಲೆಗಳನ್ನು ಬರೆದ ಕಿಂಗ್‌ ಕೊಹ್ಲಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಹಿಳೆ

Indian Railway: ಮಹಿಳಾ ಪ್ರಯಾಣಿಕರಿಗೆ ರೈಲಿನಲ್ಲಿ ಎಷ್ಟೊಂದು ಸುರಕ್ಷತಾ ಕ್ರಮಗಳಿವೆ ನೋಡಿ!

ಭಾರತೀಯ ರೈಲ್ವೇಯ (Indian Railway) ಏಕ ವ್ಯಕ್ತಿ ಪ್ರಯಾಣಿಕ ಮಹಿಳೆಯರ ರಕ್ಷಣೆಗಾಗಿ ಹಲವು ಕ್ರಮ ಕೈಗೊಂಡಿದೆ. ಇದು 1989ರಲ್ಲಿ ಜಾರಿಗೆ ಬಂದಿದ್ದರೂ ಹೆಚ್ಚಿನವರಿಗೆ ಈ ಬಗ್ಗೆ ಗೊತ್ತಿಲ್ಲ. ಈ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Indian Railway
Koo

ಮನೆಯ ಮಗಳು ರೈಲಿನಲ್ಲಿ (Indian Railway) ಒಬ್ಬಳೇ ಪ್ರಯಾಣ (Solo trip) ಮಾಡಬೇಕಾದ ಅನಿವಾರ್ಯತೆ ಬಂದಾಗ ಪೋಷಕರಿಗೆ ಒಂದು ಕ್ಷಣ ಗಾಬರಿಯಾಗುವುದು ಸಹಜ. ಇನ್ನು ಮಹಿಳೆಯರಿಗೂ ಅಷ್ಟೇ.. ಏಕಾಂಗಿಯಾಗಿ ರೈಲು ಪ್ರಯಾಣ (solo women travellers) ಮಾಡಬೇಕಾದ ಸಂದರ್ಭ ಬಂದರೆ ಕೊಂಚ ಆತಂಕವಂತೂ ಮನದಲ್ಲಿ ಇದ್ದೇ ಇರುತ್ತದೆ. ಆದರೆ ಭಾರತೀಯ ರೈಲ್ವೆಯಲ್ಲಿ ಪ್ರಯಾಣಿಸಬೇಕಾದರೆ ಈ ಚಿಂತೆ ಬೇಕಾಗಿಲ್ಲ.

ಭಾರತೀಯ ರೈಲ್ವೇಯ ಏಕ ವ್ಯಕ್ತಿ ಪ್ರಯಾಣಿಕ ಮಹಿಳೆಯರ ರಕ್ಷಣೆಗಾಗಿ ಹಲವು ಕ್ರಮ ಕೈಗೊಂಡಿದೆ. ಇದು 1989ರಲ್ಲಿ ಜಾರಿಗೆ ಬಂದಿದ್ದರೂ ಹೆಚ್ಚಿನವರಿಗೆ ಈ ಬಗ್ಗೆ ಗೊತ್ತಿಲ್ಲ. ಈ ಕುರಿತು ಮಾಹಿತಿ ಇಲ್ಲಿದೆ.

1989ರಲ್ಲಿ ಜಾರಿಗೆ ಬಂದ ಈ ವಿಶೇಷ ಕಾನೂನು ಭಾರತೀಯ ರೈಲ್ವೇ ಕಾಯಿದೆ 1989 ರ ಸೆಕ್ಷನ್ 139 ರಲ್ಲಿ ವಿವರಿಸಲಾಗಿದೆ. ಒಂಟಿ ಮಹಿಳಾ ಪ್ರಯಾಣಿಕರಿಗೆ ವಿಶೇಷವಾಗಿ ಮಕ್ಕಳೊಂದಿಗೆ ಇರುವವರಿಗೆ ಇದು ರಕ್ಷಣೆ ನೀಡುತ್ತದೆ. ಉದಾಹರಣೆಗೆ ಈ ವಿಭಾಗದ ಪ್ರಕಾರ ಒಬ್ಬ ಮಹಿಳೆ ಪುರುಷ ಪ್ರಯಾಣಿಕರಿಲ್ಲದೆ ಒಂಟಿಯಾಗಿ ಪ್ರಯಾಣಿಸುತ್ತಿದ್ದರೆ ಮತ್ತು ಆಕೆ ತನ್ನ ಮಗುವಿನೊಂದಿಗೆ ಇದ್ದರೆ ಅವಳು ರೈಲು ಪಾಸ್ ಅಥವಾ ಟಿಕೆಟ್ ಇಲ್ಲದೆ ಕಂಡುಬಂದರೆ ರಾತ್ರಿಯಲ್ಲಿ ರೈಲಿನಿಂದ ಇಳಿಯಲು ಆದೇಶಿಸಲಾಗುವುದಿಲ್ಲ.

ಹದಿಹರೆಯದ ಹುಡುಗಿ ಅಥವಾ ಮಹಿಳೆ ಏಕಾಂಗಿಯಾಗಿ ಪ್ರಯಾಣಿಸುತ್ತಿದ್ದರೆ ಟಿಕೆಟ್ ಹೊಂದಿಲ್ಲದಿದ್ದರೆ ಟಿಟಿಇ ಅವರನ್ನು ರೈಲಿನಿಂದ ಹೊರಹಾಕಲು ಅನುಮತಿ ಇಲ್ಲ ಎಂದು ಭಾರತೀಯ ರೈಲ್ವೆ ಸ್ಪಷ್ಟವಾಗಿ ಹೇಳಿದೆ.

ಮಹಿಳೆಯ ಬಳಿ ಹಣವಿದ್ದರೆ ದಂಡ ಪಾವತಿಸಿ ಪ್ರಯಾಣ ಮುಂದುವರಿಸಬಹುದು. ಮಹಿಳೆಗೆ ಹಣದ ಕೊರತೆಯಿರುವ ಸಂದರ್ಭಗಳಲ್ಲಿ ಸಹ ಟಿಟಿಇ ಅವರನ್ನು ಕಂಪಾರ್ಟ್‌ಮೆಂಟ್‌ನಿಂದ ಹೊರಹಾಕಲು ಅನುಮತಿ ಇಲ್ಲ. ಆದರೆ ಹೆಚ್ಚಿನ ಮಹಿಳಾ ಪ್ರಯಾಣಿಕರಿಗೆ ಈ ಬಗ್ಗೆ ತಿಳಿದಿಲ್ಲ. ಒಂಟಿಯಾಗಿ ಪ್ರಯಾಣಿಸುವ ಪ್ರತಿಯೊಬ್ಬ ಮಹಿಳೆ ತಿಳಿದಿರಬೇಕಾದ ಪ್ರಮುಖ ಪ್ರಯಾಣಿಕರ ನಿಯಮಗಳಲ್ಲಿ ಇದು ಒಂದು. ಮಹಿಳಾ ಪ್ರಯಾಣಿಕರಿಗಾಗಿ ಅಧಿಕಾರಿಗಳು ಜಾರಿಗೆ ತಂದಿರುವ ಇನ್ನೂ ಕೆಲವು ನಿಯಮಗಳನ್ನು ಇಲ್ಲಿವೆ.


ಮಹಿಳಾ ಸುರಕ್ಷತೆಗಾಗಿ ಭಾರತೀಯ ರೈಲ್ವೇಯಲ್ಲಿ ಹಲವು ನಿಯಮಗಳು ಜಾರಿಯಲ್ಲಿವೆ
1. ಭಾರತೀಯ ರೈಲ್ವೆ ಕಾಯಿದೆ 1989 ರ ಸೆಕ್ಷನ್ 311 ರ ಅಡಿಯಲ್ಲಿ ಮಿಲಿಟರಿ ಸಿಬ್ಬಂದಿಗೆ ಮಹಿಳಾ ಕಂಪಾರ್ಟ್‌ಮೆಂಟ್‌ಗಳನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ.

2. ಅಧಿಕಾರಿಗಳೊಂದಿಗೆ ಮಹಿಳಾ ಕಾನ್‌ಸ್ಟೆಬಲ್ ಇದ್ದಾಗ ಮಾತ್ರ ಮಹಿಳೆಯನ್ನು ಹೊರಹೋಗುವಂತೆ ಹೇಳಬಹುದು.

3. ಸೆಕ್ಷನ್ 162 ರ ಪ್ರಕಾರ 12 ವರ್ಷದೊಳಗಿನ ಹುಡುಗರು ಮಹಿಳಾ ಕಂಪಾರ್ಟ್‌ಮೆಂಟ್‌ಗಳಲ್ಲಿ ಪ್ರಯಾಣಿಸಬಹುದು.

4. ಮಹಿಳಾ ಕೋಚ್‌ಗೆ ಪ್ರವೇಶಿಸುವ ಯಾವುದೇ ಪುರುಷ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ.

5. ಮಹಿಳೆಯರಿಗಾಗಿ ದೂರದ ಮೇಲ್/ ಎಕ್ಸ್‌ಪ್ರೆಸ್ ರೈಲುಗಳ ಸ್ಲೀಪರ್ ವರ್ಗದಲ್ಲಿ ಆರು ಬರ್ತ್‌ಗಳನ್ನು ಕಾಯ್ದಿರಿಸಲಾಗಿದೆ. ಅಲ್ಲದೆ, ಗರೀಬ್ ರಥ/ರಾಜಧಾನಿ/ ದುರೊಂಟೊ/ ಸಂಪೂರ್ಣ ಹವಾನಿಯಂತ್ರಿತ ಎಕ್ಸ್‌ಪ್ರೆಸ್ ರೈಲುಗಳ ಮೂರನೇ ಹಂತದ AC (3AC) ಕೋಚ್‌ಗಳಲ್ಲಿ ಆರು ಬರ್ತ್‌ಗಳನ್ನು ಮಹಿಳಾ ಪ್ರಯಾಣಿಕರಿಗೆ ಕಾಯ್ದಿರಿಸಲಾಗಿದೆ. ಅವರ ವಯಸ್ಸನ್ನು ಲೆಕ್ಕಿಸದೆ ಅಥವಾ ಅವರು ಏಕಾಂಗಿಯಾಗಿ ಅಥವಾ ಗುಂಪಿನಲ್ಲಿ ಪ್ರಯಾಣಿಸುತ್ತಿದ್ದರೆ ಇದನ್ನು ಮಾಡಲಾಗುತ್ತದೆ.

6. ಭಾರತೀಯ ರೈಲ್ವೇ ನಿಲ್ದಾಣಗಳಲ್ಲಿ ಸಿಸಿಟಿವಿಗಳು ಮತ್ತು ಮೇಲ್ವಿಚಾರಣಾ ಕೊಠಡಿಗಳನ್ನು ಸ್ಥಾಪಿಸುವ ಮೂಲಕ ಮಹಿಳೆಯರ ಸುರಕ್ಷತೆಯನ್ನು ಹೆಚ್ಚಿಸಿದೆ.

7. ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (RPF) 2020ರ ಅಕ್ಟೋಬರ್ 17ರಂದು ‘ಮೇರಿ ಸಹೇಲಿ’ ಎಂಬ ಪ್ಯಾನ್ ಇಂಡಿಯಾ ಉಪಕ್ರಮವನ್ನು ಪ್ರಾರಂಭಿಸಿದೆ.

ಇದನ್ನೂ ಓದಿ: Driving Tips: ವಾಹನ ಚಾಲನೆ ಮಾಡುತ್ತಿರುವಾಗ ಪ್ರಾಣಿಗಳಿಂದಾಗುವ ಅಪಘಾತ ತಪ್ಪಿಸಿಕೊಳ್ಳುವುದು ಹೇಗೆ?

8. ರೈಲಿನಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಿಗೆ ಬೋರ್ಡಿಂಗ್‌ನಿಂದ ಡಿ-ಬೋರ್ಡಿಂಗ್‌ವರೆಗಿನ ಸಂಪೂರ್ಣ ಪ್ರಯಾಣಕ್ಕಾಗಿ ವರ್ಧಿತ ಸುರಕ್ಷತೆ ಮತ್ತು ಭದ್ರತೆಯನ್ನು ಒದಗಿಸುವ ಉದ್ದೇಶವನ್ನು ಇದು ಹೊಂದಿದೆ.

9. ಮಹಿಳಾ ಪ್ರಯಾಣಿಕರಿಗೆ ವಿಶೇಷವಾಗಿ ಒಂಟಿಯಾಗಿ ಪ್ರಯಾಣಿಸುವವರಿಗೆ ಭದ್ರತೆಯನ್ನು ಒದಗಿಸುವುದು ಉಪಕ್ರಮದ ಕಡೆಗೆ ಹೆಚ್ಚಿನ ಗಮನ ನೀಡಲಾಗುತ್ತದೆ.

Continue Reading

ಆರೋಗ್ಯ

Tips For Healthy Skin: ಈ ಐದು ಸಲಹೆಗಳನ್ನು ಪಾಲಿಸಿ, ಮೊಡವೆಗಳಿಂದ ಪಾರಾಗಿ!

ಉಸಿರಾಟದ ವ್ಯಾಯಾಮ (breathing exercises), ಕೂಲಿಂಗ್ ತಂತ್ರಗಳ (cooling techniques) ಜೊತೆಗೆ ಮುಖದ ಯೋಗವನ್ನು (Tips For Healthy Skin) ಸರಿಯಾಗಿ ಮಾಡುವುದರಿಂದ ಮುಖದಲ್ಲಿ ರಕ್ತದ ಹರಿವನ್ನು ಹೆಚ್ಚಿಸುತ್ತದೆ. ಇದು ಚರ್ಮದ ತೈಲಗಳನ್ನು ಸಮತೋಲನಗೊಳಿಸುತ್ತದೆ. ಇದು ಮೊಡವೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮೊಡವೆಗಳನ್ನು ಕಡಿಮೆ ಮಾಡಲು ಎಲ್ಲರೂ ನೆನಪಿಟ್ಟುಕೊಳ್ಳಬಹುದಾದ ಫೇಸ್ ಯೋಗದ 5 ವಿಷಯಗಳ ಕುರಿತು ಮಾಹಿತಿ (Tips For Healthy Skin) ಇಲ್ಲಿದೆ.

VISTARANEWS.COM


on

By

Tips For Healthy Skin
Koo

ಪಿಸಿಓಎಸ್ (PCOS) ಅಥವಾ ಪಿಸಿಓಡಿ (PCOD), ದೇಹದ ಶಾಖ, ಚರ್ಮದ ರಂಧ್ರಗಳನ್ನು ಮುಚ್ಚಿಹಾಕುವ ಉತ್ಪನ್ನಗಳ ತಪ್ಪು ಬಳಕೆ, ಹಾರ್ಮೋನ್ ಗಳ ಅಸಮತೋಲನ (hormonal imbalances), ನಾವು ಸೇವಿಸುವ ಅಸುರಕ್ಷಿತ ಆಹಾರ.. ಹೀಗೆ ಅನೇಕ ಕಾರಣಗಳಿಂದ ಮುಖದಲ್ಲಿ ಮೊಡವೆ (acne) ಉಂಟಾಗುತ್ತದೆ. ಇದು ಬ್ಯಾಕ್ಟೀರಿಯಾದ ಸೋಂಕಿನಿಂದ (bacterial infection ) ಹೆಚ್ಚಾಗುತ್ತದೆ.

ಉಸಿರಾಟದ ವ್ಯಾಯಾಮ (breathing exercises), ಕೂಲಿಂಗ್ ತಂತ್ರಗಳ (cooling techniques) ಜೊತೆಗೆ ಮುಖದ ಯೋಗವನ್ನು (Tips For Healthy Skin) ಸರಿಯಾಗಿ ಮಾಡುವುದರಿಂದ ಮುಖದಲ್ಲಿ ರಕ್ತದ ಹರಿವನ್ನು ಹೆಚ್ಚಿಸುತ್ತದೆ. ಇದು ಚರ್ಮದ ತೈಲಗಳನ್ನು ಸಮತೋಲನಗೊಳಿಸುತ್ತದೆ. ಇದು ಮೊಡವೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮೊಡವೆಗಳನ್ನು ಕಡಿಮೆ ಮಾಡಲು ನೆನಪಿಟ್ಟುಕೊಳ್ಳಬಹುದಾದ ಫೇಸ್ ಯೋಗದ 5 ವಿಷಯಗಳ ಕುರಿತ ಮಾಹಿತಿ ಇಲ್ಲಿದೆ.


1. ಬಹಳಷ್ಟು ನೀರು ಕುಡಿಯಿರಿ

ಫೇಸ್ ಯೋಗವು ಮುಖದಲ್ಲಿನ ಹೆಚ್ಚುವರಿ ತೈಲವನ್ನು ತೊಡೆದು ಹಾಕಲು ಸಹಾಯ ಮಾಡುತ್ತದೆ. ನೀರಿನಿಂದ ನಿರ್ಗಮಿಸುವ ದೇಹದ ವಿಷಕಾರಿ ದ್ರವವನ್ನು ತೆಗೆದುಹಾಕಿ ಚರ್ಮವನ್ನು ಸ್ವಚ್ಛಗೊಳಿಸುತ್ತದೆ. ನೀರು ಚರ್ಮದ ರಂಧ್ರಗಳನ್ನು ತೆರೆಯಲು ಸಹಾಯ ಮಾಡುತ್ತದೆ ಮತ್ತು ದೇಹದ ತೇವಾಂಶದ ಮಟ್ಟವನ್ನು ಕಾಪಾಡಲು ಸಹಾಯ ಮಾಡುತ್ತದೆ.

2. ಪ್ರಾಣಾಯಾಮ

ಮೊಡವೆ ಪೀಡಿತ ಚರ್ಮಕ್ಕಾಗಿ ಕೂಲಿಂಗ್ ಡೌನ್ ತಂತ್ರಗಳು ಅಥವಾ ಪ್ರಾಣಾಯಾಮವನ್ನು ದಿನಚರಿಯಲ್ಲಿ ಸೇರಿಸಿಕೊಳ್ಳಬೇಕು. ಇದು ಮುಖಕ್ಕೆ ರಕ್ತದ ಹರಿವಿನ ಪ್ರಮಾಣವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

3. ಸರಿಯಾದ ತೈಲವನ್ನು ಬಳಸಿ

ತೆಂಗಿನ ಎಣ್ಣೆಯಂತಹ ಹೆಚ್ಚು ಗಾಢವಾದ ಎಣ್ಣೆಯನ್ನು ಮುಖಕ್ಕೆ ಬಳಸಬೇಡಿ. ಮೊಡವೆಗಳನ್ನು ತೊಡೆದು ಹಾಕಲು ಮತ್ತು ಸುಲಭವಾಗಿ ಚರ್ಮಕ್ಕೆ ಹೀರಿಕೊಳ್ಳಲು ಸಹಾಯವಾಗುವ ಚಹಾ ಮರ ಅಥವಾ ಬೇವಿನ ಎಣ್ಣೆಯಂತಹ ಹಗುರವಾದ ತೈಲಗಳನ್ನು ಬಳಸಿ.

ಇದನ್ನೂ ಓದಿ: Health Tips in Kannada: ಕುತ್ತಿಗೆ ನೋವಿನಿಂದ ಬಳಲುತ್ತಿದ್ದೀರಾ? ಈ ಸಂಗತಿ ತಿಳಿದುಕೊಂಡಿರಿ

4. ಕನಿಷ್ಠ ಸ್ಪರ್ಶ

ಮುಖದ ಮೇಲೆ ಕನಿಷ್ಠ ಸ್ಪರ್ಶವನ್ನು ಬಳಸುವ ಮೇಕಪ್ ಸಾಮಗ್ರಿಗಳನ್ನು ಬಳಸಿ. ಇದರಿಂದ ಯಾವುದೇ ಮೊಡವೆಗಳು ಉಂಟಾಗುವುದಿಲ್ಲ ಅಥವಾ ಯಾವುದೇ ಬ್ಯಾಕ್ಟೀರಿಯಾ ಸೋಂಕು ಆಗುವುದಿಲ್ಲ. ಒಂದು ಸ್ಥಳದಿಂದ ಇನ್ನೊಂದಕ್ಕೆ ವರ್ಗಾಯಿಸುವುದಿಲ್ಲ.

5. ಮುಖವನ್ನು ತೊಳೆಯುತ್ತಿರಿ

ಸೌಂದರ್ಯ ವರ್ಧಕಗಳು ಚರ್ಮದ ಮೇಲೆ ಬಿಡಬಹುದಾದ ಎಣ್ಣೆಗಳಿಂದ ಮಾಡಲಾಗುತ್ತದೆ. ದೀರ್ಘಕಾಲದವರೆಗೆ ಇರಿಸಲಗುವ ಉತ್ಪನ್ನಗಳು ಹೆಚ್ಚು ಮೊಡವೆಗಳಿಗೆ ಕಾರಣವಾಗಬಹುದು. ಮೇಕಪ್ ನ ಅಗತ್ಯವಿಲ್ಲದೆ ಇದ್ದಾಗ ಚೆನ್ನಾಗಿ ಮುಖವನ್ನು ತೊಳೆಯುವುದರಿಂದ ಚರ್ಮದ ರಂಧ್ರಗಳು ಮುಚ್ಚಿಹೋಗುವುದಿಲ್ಲ ಅಥವಾ ತೈಲಗಳನ್ನು ಬಳಸಿದ ನಂತರ ಮೊಡವೆಗಳನ್ನು ಹುಟ್ಟುಹಾಕುವುದಿಲ್ಲ.

Continue Reading

ಕ್ರೈಂ

Driving Tips: ವಾಹನ ಚಾಲನೆ ಮಾಡುತ್ತಿರುವಾಗ ಪ್ರಾಣಿಗಳಿಂದಾಗುವ ಅಪಘಾತ ತಪ್ಪಿಸಿಕೊಳ್ಳುವುದು ಹೇಗೆ?

ಪ್ರಾಣಿಗಳಿಂದಾಗಿ ರಸ್ತೆ ಅಪಘಾತಗಳು ಭಾರತದಲ್ಲಿ ಸಾಕಷ್ಟು ಹೆಚ್ಚಾಗುತ್ತಿದೆ. ಪ್ರಾಣಿಗಳು ಓಡಾಡುವ ಸಾಧ್ಯತೆಗಳಿರುವ ರಸ್ತೆಗಳಲ್ಲಿ ನಾವು ಬಹಳ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕಿದೆ. ಇದಕ್ಕಾಗಿ ಕೆಲವು ಸಲಹೆಗಳು (Driving Tips) ಇಲ್ಲಿವೆ.

VISTARANEWS.COM


on

By

Driving Tips
Koo

ತಮಿಳುನಾಡಿನಲ್ಲಿ (tamilnadu) ಇತ್ತೀಚೆಗೆ ನಡೆದ ಭೀಕರ ರಸ್ತೆ (Driving Tips) ಅಪಘಾತದಲ್ಲಿ (Road Accident) ಐದು ಮಂದಿ (five death) ಸಾವನ್ನಪ್ಪಿದ್ದರು. ರಸ್ತೆಯಲ್ಲಿದ್ದ ಜಾನುವಾರುಗಳಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಕಾರು (car) ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿತ್ತು. ಕಾರಿನಲ್ಲಿದ್ದ ಐವರು ಪುದುಚೇರಿಯಿಂದ ಹಿಂತಿರುಗುತ್ತಿದ್ದಾಗ ಕಲಾಪಕ್ಕಂನಲ್ಲಿ ಈ ಅಪಘಾತ ಸಂಭವಿಸಿತ್ತು. ಗೋವಾದಲ್ಲಿ (goa) ನಡೆದ ಮತ್ತೊಂದು ಘಟನೆಯಲ್ಲಿ ಮುಖ್ಯರಸ್ತೆಯಲ್ಲಿ ಹಸು ಹಠಾತ್ ಕಾಣಿಸಿಕೊಂಡಿದ್ದರಿಂದ ಕಾರಿಗೆ ಭಾರಿ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಪ್ರಾಣಿಗಳಿಂದಾಗಿ ರಸ್ತೆ ಅಪಘಾತಗಳು ಭಾರತದಲ್ಲಿ ಸಾಕಷ್ಟು ಹೆಚ್ಚಾಗುತ್ತಿದೆ. ಪ್ರಾಣಿಗಳು ಓಡಾಡುವ ಸಾಧ್ಯತೆಗಳಿರುವ ರಸ್ತೆಗಳಲ್ಲಿ ನಾವು ಬಹಳ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕಿದೆ. ನೀವು ಕಾರನ್ನು ಓಡಿಸುತ್ತಿದ್ದರೆ ಮತ್ತು ಇದ್ದಕ್ಕಿದ್ದಂತೆ ಪ್ರಾಣಿಯು ನಿಮ್ಮ ಮುಂದೆ ಬಂದರೆ ನೀವು ಈ ಕೆಳಗಿನ ಸಲಹೆಗಳನ್ನು ಅನುಸರಿಸಬಹುದು.


1. ವೇಗದ ಮಿತಿಯಲ್ಲಿ ಚಾಲನೆ

ಅತಿ ವೇಗವಾಗಿ ವಾಹನ ಓಡಿಸುವುದು ಸರಿಯಲ್ಲ. ಇದರಿಂದ ಅಪಘಾತ ಸಂಭವಿಸುವ ಅಪಾಯ ಹೆಚ್ಚಾಗಿರುತ್ತದೆ. ಹೀಗಾಗಿ ವೇಗದ ವಾಹನ ಚಾಲನೆಗೆ ನಿಯಂತ್ರಣ ಹೇರಿ. ವಿಶೇಷವಾಗಿ ರಸ್ತೆಗಳಲ್ಲಿ ಪ್ರಾಣಿಗಳ ಸಾಧ್ಯತೆಗಳಿರುವ ಪ್ರದೇಶಗಳಲ್ಲಿ ನಿಧಾನವಾಗಿ ವಾಹನ ಚಲಾಯಿಸಿ.

2. ಶಾಂತವಾಗಿರಿ

ಭಯಭೀತರಾಗಬೇಡಿ ಅಥವಾ ಹಠಾತ್ ಚಲನೆಯನ್ನು ಮಾಡಬೇಡಿ. ಅದು ಪ್ರಾಣಿಗಳನ್ನು ಗಾಬರಿಗೊಳಿಸಬಹುದು ಅಥವಾ ನಿಮ್ಮ ಕಾರಿನ ನಿಯಂತ್ರಣವನ್ನು ಕಳೆದುಕೊಳ್ಳುವಂತೆ ಮಾಡಬಹುದು.

3. ನಿಧಾನಗೊಳಿಸಿ

ಪ್ರಾಣಿಗಳು ಹಠಾತ್ ಎದುರು ಬಂದಾಗ ವೇಗವನ್ನು ತಕ್ಷಣವೇ ಆದರೆ ಕ್ರಮೇಣ ಕಡಿಮೆ ಮಾಡಿ. ಬ್ರೇಕ್‌ಗಳ ಮೇಲೆ ಸ್ಲ್ಯಾಮ್ ಮಾಡುವುದನ್ನು ತಪ್ಪಿಸಿ, ಇದು ನಿಮ್ಮ ಕಾರನ್ನು ಸ್ಕಿಡ್ ಮಾಡಲು ಕಾರಣವಾಗಬಹುದು.

4. ಹಾರ್ನ್ ಬಳಸಿ

ಪ್ರಾಣಿಗಳು ಮತ್ತು ನಿಮ್ಮ ವಾಹನ ಬರುತ್ತಿರುವುದನ್ನು ಇತರ ಚಾಲಕರು ಗಮನ ಹರಿಸುವಂತೆ ಎಚ್ಚರಿಸಲು ವಾಹನದಲ್ಲಿರುವ ಹಾರ್ನ್ ಅನ್ನು ಸದ್ದು ಮಾಡುತ್ತ ಚಲಾಯಿಸಿ.

5. ಏಕಾಏಕಿ ತಿರುಗಿಸಬೇಡಿ

ರಸ್ತೆಯಲ್ಲಿ ವಾಹನವನ್ನು ನೇರವಾಗಿ ಚಲಿಸಲು ಪ್ರಯತ್ನಿಸಿ ಮತ್ತು ಹಠಾತ್ ವಾಹನ ತಿರುಗಿಸಬೇಡಿ. ವಿಶೇಷವಾಗಿ ಹತ್ತಿರದಲ್ಲಿ ಇತರ ವಾಹನಗಳು ಇದ್ದಲ್ಲಿ ಸ್ಟೇರಿಂಗ್ ನಿಯಂತ್ರಣ ಕಷ್ಟವಾದಾಗ ಇತರ ವಸ್ತು ಅಥವಾ ವಾಹನಕ್ಕೆ ಡಿಕ್ಕಿಯಾಗಬಹುದು.

6. ವಾಹನದ ಲೈಟ್‌ಗಳನ್ನು ಫ್ಲ್ಯಾಶ್ ಮಾಡಿ

ಕತ್ತಲೆಯಾಗಿದ್ದರೆ ಅಥವಾ ಗೋಚರತೆ ಕಡಿಮೆಯಿದ್ದರೆ ಪ್ರಾಣಿಗಳು ಮತ್ತು ಇತರ ಚಾಲಕರಿಗೆ ನೀವು ಹೆಚ್ಚು ಗೋಚರಿಸುವಂತೆ ಮಾಡಲು ನಿಮ್ಮ ಕಾರಿನ ಹೆಡ್‌ಲೈಟ್‌ಗಳು ಮತ್ತು ಅಪಾಯದ ದೀಪಗಳನ್ನು ಬೆಳಗಿಸಿ.

ಇದನ್ನೂ ಓದಿ: Road Accident: ಸ್ಕೂಟರ್‌ಗೆ ಟ್ರಕ್‌, ಲಾರಿಗೆ ಬಸ್‌, ಡಿವೈಡರ್‌ಗೆ ಕಾರು ಡಿಕ್ಕಿ; ಅಪಾಯದಿಂದ ಜಸ್ಟ್‌ ಮಿಸ್‌

7. ಪ್ರಾಣಿಗಳು ಹೋಗಲು ಜಾಗ ಬಿಡಿ

ಸಾಧ್ಯವಾದರೆ ಪ್ರಾಣಿಗೆ ರಸ್ತೆಯಿಂದ ದೂರ ಸರಿಯಲು ಸಾಕಷ್ಟು ಜಾಗವನ್ನು ನೀಡಿ. ಅದನ್ನು ಬಲವಂತವಾಗಿ ಅಥವಾ ಹತ್ತಿರ ಹೋಗಲು ಪ್ರಯತ್ನಿಸಬೇಡಿ.

8. ಸಿದ್ಧರಾಗಿರಿ

ಪ್ರಯಾಣ ಮಾಡುವಾಗ ಯಾವಾಗಲೂ ಸುತ್ತಮುತ್ತಲಿನ ಬಗ್ಗೆ ತಿಳಿದುಕೊಂಡಿರಿ. ವಿಶೇಷವಾಗಿ ಪ್ರಾಣಿಗಳು ಮುಕ್ತವಾಗಿ ತಿರುಗಾಡಲು ತಿಳಿದಿರುವ ಪ್ರದೇಶಗಳಲ್ಲಿ ಚಾಲನೆ ಮಾಡುವಾಗ ಜಾನುವಾರುಗಳ ಉಪಸ್ಥಿತಿಯನ್ನು ಸೂಚಿಸುವ ಎಚ್ಚರಿಕೆ ಚಿಹ್ನೆಗಳು ಅಥವಾ ಸಂಕೇತಗಳನ್ನು ಗಮನಿಸಿ.

Continue Reading

Latest

Online scams: ಹೆರಿಗೆ ರಜೆಯಲ್ಲಿದ್ದಾಗ ದುಡ್ಡು ಸಂಪಾದಿಸಲು ಹೋಗಿ 54 ಲಕ್ಷ ರೂ. ಕಳೆದುಕೊಂಡಳು!

ಭಾರತದಲ್ಲಿ ಇತ್ತೀಚಿಗೆ ಆನ್‌ಲೈನ್ ವಂಚನೆಗಳು ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಇದೀಗ ನವಿ ಮುಂಬಯಿನ ಐರೋಲಿಯ ಗರ್ಭಿಣಿಯೊಬ್ಬರು ಆನ್‌ಲೈನ್ ಹಗರಣದಲ್ಲಿ (Online scams) ಸಿಕ್ಕಿಬಿದ್ದಿದ್ದು, ಸುಮಾರು 54 ಲಕ್ಷ ರೂ. ಕಳೆದುಕೊಂಡಿದ್ದಾರೆ. ವಂಚನೆ ಆಗಿದ್ದು ಹೇಗೆ? ಇಲ್ಲಿದೆ ವರದಿ.

VISTARANEWS.COM


on

By

Online scams
Koo

ಇತ್ತೀಚೆಗೆ ಆನ್ ಲೈನ್ ವಂಚಕರು (Online scams) ಹೆಚ್ಚಾಗಿದ್ದಾರೆ. ಅದರಲ್ಲೂ ಮನೆಯಲ್ಲೇ ಇದ್ದು, ಏನಾದರೂ ಸಣ್ಣಪುಟ್ಟ ಕೆಲಸ ಮಾಡಿ ಆದಾಯ ಗಳಿಸಬೇಕು ಎಂಬ ಹಂಬಲದಲ್ಲಿರುವ ಅನೇಕರು ಇದರ ಜಾಲದಲ್ಲಿ ಬಿದ್ದು ಕೈಯಲ್ಲಿರುವ ಅಲ್ಪಸ್ವಲ್ಪ ಹಣವನ್ನೂ ಕಳೆದುಕೊಳ್ಳುತ್ತಿದ್ದಾರೆ. ಇದೀಗ ಇಂತಹ ಒಂದು ಪ್ರಕರಣ ನವಿ ಮುಂಬಯಿಯಲ್ಲಿ (Navi Mumbai) ವರದಿಯಾಗಿದೆ.

ಭಾರತದಲ್ಲಿ (India) ಇತ್ತೀಚಿಗೆ ಆನ್‌ಲೈನ್ ವಂಚನೆಗಳು ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಸೈಬರ್ ವಂಚಕರ ಲಾಭದಾಯಕ ಯೋಜನೆಗಳಿಗೆ ಅಸಂಖ್ಯಾತ ವ್ಯಕ್ತಿಗಳು ನಿತ್ಯವೂ ಬಲಿಯಾಗುತ್ತಿದ್ದಾರೆ. ಇದೀಗ ನವಿ ಮುಂಬಯಿನ ಐರೋಲಿಯ (Airoli) ಗರ್ಭಿಣಿಯೊಬ್ಬರು ಆನ್‌ಲೈನ್ ಹಗರಣದಲ್ಲಿ ಸಿಕ್ಕಿಬಿದ್ದಿದ್ದು, ಸುಮಾರು 54 ಲಕ್ಷ ರೂ. ಕಳೆದುಕೊಂಡಿದ್ದಾರೆ.

ಪೊಲೀಸ್ ಅಧಿಕಾರಿಯ ಪ್ರಕಾರ, ಹೆರಿಗೆ ರಜೆಯಲ್ಲಿದ್ದ 37 ವರ್ಷದ ಮಹಿಳೆ ಆನ್‌ಲೈನ್‌ನಲ್ಲಿ ಸ್ವಲ್ಪ ಹೆಚ್ಚುವರಿ ಆದಾಯವನ್ನು ಗಳಿಸುವ ಮಾರ್ಗಗಳನ್ನು ಹುಡುಕುತ್ತಿದ್ದಳು. ತನ್ನ ಹುಡುಕಾಟದ ಸಮಯದಲ್ಲಿ ರೇಟಿಂಗ್ ಕಂಪೆನಿ ಮತ್ತು ರೆಸ್ಟೋರೆಂಟ್‌ಗಳನ್ನು ಒಳಗೊಂಡಿರುವ ಸ್ವತಂತ್ರ ಕೆಲಸದ ಭರವಸೆಯನ್ನು ನೀಡಿದ ಕೆಲವು ವ್ಯಕ್ತಿಗಳೊಂದಿಗೆ ಆನ್‌ಲೈನ್‌ನಲ್ಲಿ ಸಂಪರ್ಕ ಸಾಧಿಸಿದ್ದಾಳೆ. ಕೇವಲ ಐದು ಆರಂಭಿಕ ಕಾರ್ಯಗಳನ್ನು ಪೂರ್ಣಗೊಳಿಸಿದ ಅನಂತರ ಅವರು ಉತ್ತಮ ಮೊತ್ತದ ಹಣವನ್ನು ಆಕೆಗೆ ನೀಡುವ ಭರವಸೆ ನೀಡಿದ್ದರು.

ಅವರ ಪ್ರಸ್ತಾಪ ಮಹಿಳೆಗೂ ಇಷ್ಟವಾಗಿ ಕೆಲಸವನ್ನು ಪ್ರಾರಂಭಿಸಿದ್ದಳು. ಆಕೆಯ ಆನ್‌ಲೈನ್ ಕೆಲಸದ ಸಮಯದಲ್ಲಿ ಸ್ಕ್ಯಾಮರ್‌ಗಳು ಅವಳಿಗೆ ಸೂಚನೆಗಳನ್ನು ನೀಡುತ್ತಿದ್ದರು. ಹೊಟೇಲ್ ಗಳನ್ನು ರೇಟ್ ಮಾಡಲು ಲಿಂಕ್‌ಗಳನ್ನು ಹಂಚಿಕೊಂಡರು ಮತ್ತು ಅಂತಿಮವಾಗಿ ಹೆಚ್ಚಿನ ಆದಾಯದ ಭರವಸೆಯಲ್ಲಿ ಆಕೆ ಹಣವನ್ನು ಹೂಡಿಕೆ ಮಾಡಿದಳು. ಹಗರಣದಲ್ಲಿ ಸಿಕ್ಕಿಹಾಕಿಕೊಂಡ ಮಹಿಳೆಯ ವಿವಿಧ ಖಾತೆಗಳಲ್ಲಿ ಒಟ್ಟು 54,30,000 ರೂ. ಕಳೆದುಕೊಂಡಿದ್ದಾಳೆ. ಮೇ 7 ಮತ್ತು 10 ನಡುವೆ ಇದು ನಡೆದಿದೆ.

ಆದರೂ ತನಗೆ ನಿಯೋಜಿಸಲಾದ ಕಾರ್ಯಗಳನ್ನು ಪೂರ್ಣಗೊಳಿಸಿದ ಅನಂತರ, ಮಹಿಳೆ ತನ್ನ ಭರವಸೆಯ ಸಂಭಾವನೆಯನ್ನು ಪಡೆಯಲು ಪ್ರಯತ್ನಿಸಿದಾಗ ವಂಚಕರು ಪ್ರತಿಕ್ರಿಯಿಸಲಿಲ್ಲ. ಆಕೆಯ ಕರೆಗಳಿಗೆ ಉತ್ತರಿಸಲು ನಿರಾಕರಿಸಿದ್ದರಿಂದ ಆಕೆ ತಾನು ಮೋಸ ಹೋಗಿರುವುದಾಗಿ ತಿಳಿದುಕೊಂಡಳು. ಬಳಿಕ ಸಂತ್ರಸ್ತೆ ನವಿ ಮುಂಬಯಿನ ಸೈಬರ್ ಪೊಲೀಸರನ್ನು ಸಂಪರ್ಕಿಸಿದಳು. ಅವರು ವಂಚನೆಯ ಆರೋಪದ ಮೇಲೆ ನಾಲ್ವರು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಹೆಚ್ಚುತ್ತಿದೆ ವಂಚನೆ ಪ್ರಕರಣ

ಇದೊಂದು ಮಾತ್ರವಲ್ಲ ಇಂತಹ ಹಲವಾರು ಪ್ರಕರಣಗಳು ನಡೆಯುತ್ತಲೇ ಇರುತ್ತದೆ. ವಂಚಕರು ಮನೆಯಿಂದ ಕೆಲಸ ಮಾಡಲು ಇಚ್ಛಿಸುವವರಿಗೆ ಆಮಿಷಗಳನ್ನು ಒಡ್ಡಿ ವಂಚಿಸುತ್ತಾರೆ.ಆರಂಭದಲ್ಲಿ ಸ್ಕ್ಯಾಮರ್‌ಗಳು ಟೆಲಿಗ್ರಾಮ್, ವಾಟ್ಸಾಪ್ ಅಥವಾ ಇನ್‌ಸ್ಟಾಗ್ರಾಮ್‌ನಂತಹ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳ ಮೂಲಕ ವ್ಯಕ್ತಿಗಳನ್ನು ತಲುಪುತ್ತಾರೆ. ಸರಳ ಕಾರ್ಯಗಳಿಗಾಗಿ ಹಣವನ್ನು ನೀಡುತ್ತಾರೆ. ಆದರೆ ವ್ಯಕ್ತಿಗಳು ಹಣವನ್ನು ಗಳಿಸಲು ಪ್ರಾರಂಭಿಸಿದ ಅನಂತರ ಸ್ಕ್ಯಾಮರ್‌ಗಳು ಅವರನ್ನು ಹೂಡಿಕೆ ಯೋಜನೆಗಳಿಗೆ ಆಕರ್ಷಿಸುತ್ತಾರೆ. ಅಲ್ಲಿ ಅವರು ಗಮನಾರ್ಹ ಮೊತ್ತದ ಹಣವನ್ನು ಹೂಡಿಕೆ ಮಾಡಲು ಮನವೊಲಿಸುತ್ತಾರೆ. ಅವರು ಹಣವನ್ನು ಸ್ವೀಕರಿಸಿದ ಅನಂತರ ಸ್ಕ್ಯಾಮರ್‌ಗಳು ವ್ಯಕ್ತಿಯಿಂದ ಸಂಪರ್ಕ ಕಡಿತಗೊಳಿಸುತ್ತಾರೆ.

ಸುರಕ್ಷಿತವಾಗಿರುವುದು ಹೇಗೆ?

ಮನೆಯಿಂದ ಕೆಲಸ ಮಾಡುವುದನ್ನು ಹೆಚ್ಚಿನವರು ಇಷ್ಟ ಪಡುತ್ತಾರೆ. ಆದರೆ ಇಂತಹ ಲಾಭದಾಯಕ ಆಫರ್‌ಗಳಿಗೆ ಮರುಳಾಗಬೇಡಿ ಎಂದು ಸರ್ಕಾರ ಎಚ್ಚರಿಸಿದೆ. ಇಂತಹ ವಂಚನೆಗಳನ್ನು ತಡೆಗಟ್ಟಲು ಅನುಸರಿಸಬೇಕಾದ ಕೆಲವು ತ್ವರಿತ ಸಲಹೆಗಳು ಇಲ್ಲಿವೆ.

ಅಪೇಕ್ಷಿಸದ ಕೊಡುಗೆಗಳ ಬಗ್ಗೆ ಜಾಗರೂಕರಾಗಿರಿ

ಮನೆಯಿಂದ ಕೆಲಸ ಮಾಡುವ ಅವಕಾಶವು ಹೆಚ್ಚಿನವರಿಗೆ ತುಂಬಾ ಒಳ್ಳೆಯದು ಎಂದು ತೋರುತ್ತದೆ. ಆದರೆ ಅಪೇಕ್ಷಿಸದ ಕರೆಗಳು, ಇ-ಮೇಲ್‌ಗಳು ಅಥವಾ ಕನಿಷ್ಠ ಪ್ರಯತ್ನಕ್ಕಾಗಿ ಹೆಚ್ಚಿನ ಆದಾಯ ಭರವಸೆ ನೀಡುವ ಸಂದೇಶಗಳ ಬಗ್ಗೆ ಜಾಗರೂಕರಾಗಿರಬೇಕು.

ಹೂಡಿಕೆ ಮಾಡುವ ಮೊದಲು ಸಂಶೋಧನೆ

ಮನೆಯಿಂದ ಕೆಲಸದ ಸ್ಥಾನಗಳಿಗೆ ಹಣವನ್ನು ಮುಂಗಡವಾಗಿ ಕಳುಹಿಸಬೇಡಿ. ಕಾನೂನುಬದ್ಧ ಕಂಪೆನಿಗಳಿಗೆ ಅಂತಹ ಪಾವತಿಗಳ ಅಗತ್ಯವಿರುವುದಿಲ್ಲ. ಬದ್ಧತೆ ಮಾಡುವ ಮೊದಲು ಕಂಪೆನಿ ಮತ್ತು ಉದ್ಯೋಗ ವಿವರಣೆಯನ್ನು ಸಂಪೂರ್ಣವಾಗಿ ಸಂಶೋಧಿಸಿ.

ಇದನ್ನೂ ಓದಿ: Student Self Harming: ಪ್ರತಿಷ್ಠಿತ ಕಾಲೇಜು ಕಟ್ಟಡದಿಂದ ಜಿಗಿದು ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

ಪ್ಲಾಟ್‌ಫಾರ್ಮ್ ಅನ್ನು ಪರಿಶೀಲಿಸಿ

ಆನ್‌ಲೈನ್ ಪ್ಲಾಟ್‌ಫಾರ್ಮ್‌ನಲ್ಲಿ ಉದ್ಯೋಗವನ್ನು ಜಾಹೀರಾತು ಮಾಡಿದ್ದರೆ ಅದರ ಕಾನೂನುಬದ್ಧತೆಯನ್ನು ಖಚಿತಪಡಿಸಿಕೊಳ್ಳಿ. ಅಪರಿಚಿತ ವ್ಯಕ್ತಿಗಳು ಅಥವಾ ಕಂಪೆನಿಗಳೊಂದಿಗೆ ತೊಡಗಿಸಿಕೊಳ್ಳುವ ಮೊದಲು ಬಳಕೆದಾರರ ವಿಮರ್ಶೆಗಳು ಮತ್ತು ಪ್ಲಾಟ್‌ಫಾರ್ಮ್‌ನ ಆನ್‌ಲೈನ್ ಖ್ಯಾತಿಯನ್ನು ಪರಿಶೀಲಿಸಿ.

ಅನುಮಾನಾಸ್ಪದ ಚಟುವಟಿಕೆಯನ್ನು ವರದಿ ಮಾಡಿ

ನೀವು ಮನೆಯಿಂದ ಕೆಲಸ ಮಾಡುವ ಹಗರಣವನ್ನು ಎದುರಿಸಿದರೆ ತಕ್ಷಣವೇ ಅದನ್ನು ಅಧಿಕಾರಿಗಳಿಗೆ ವರದಿ ಮಾಡಿ. ಇತರರು ಬಲಿಪಶುವಾಗುವುದನ್ನು ತಡೆಯಲು ನೀವು ಆಫರ್ ಅನ್ನು ಎದುರಿಸಿದ ಪ್ಲಾಟ್‌ಫಾರ್ಮ್‌ಗೆ ಸಹ ನೀವು ಅದನ್ನು ವರದಿ ಮಾಡಬಹುದು.

Continue Reading
Advertisement
hd revanna case
ಕ್ರೈಂ2 mins ago

HD Revanna Case: ಎಚ್‌ಡಿ ರೇವಣ್ಣ ಮತ್ತೆ ಕೋರ್ಟ್‌ನಲ್ಲಿ; ಎಸ್‌ಐಟಿ ಅಧಿಕಾರಿಗಳು ರೇವಣ್ಣ ನಿವಾಸದಲ್ಲಿ!

Murder case
ದಾವಣಗೆರೆ13 mins ago

Murder Case : ಚಾಕುವಿನಿಂದ ಇರಿದು ಯುವಕನ ಕೊಲೆ; ಹಂತಕರಿಗಾಗಿ ಪೊಲೀಸರ ಹುಡುಕಾಟ

Amruthadhaare Serial bhoomika in birthday chaya singh
ಕಿರುತೆರೆ15 mins ago

Amruthadhaare Serial: ಇಂದು ಭೂಮಿಕಾಗೆ ಹುಟ್ಟು ಹಬ್ಬ: ರೀಲ್‌ ಗಂಡ ಎಸ್ಟೇಟ್​ ಬರೆದು ಕೊಟ್ರು! ರಿಯಲ್‌ ಗಂಡ ಕೊಟ್ಟ ಗಿಫ್ಟ್‌ ಏನು?

Theft in two houses in Kudligi taluk
ವಿಜಯನಗರ18 mins ago

Theft Case: ಕೂಡ್ಲಿಗಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು

Prajwal Revanna Case Lawyer DevarajeGowda sent to police custody for another day
ಕ್ರೈಂ26 mins ago

Prajwal Revanna Case: ವಕೀಲ ದೇವರಾಜೇಗೌಡ ಮತ್ತೊಂದು ದಿನ ಪೊಲೀಸ್‌ ಕಸ್ಟಡಿಗೆ!

Lok Sabha Election 2024
Lok Sabha Election 202436 mins ago

Lok Sabha Election 2024: ನಾಲ್ಕು ಹಂತಗಳ ಮತದಾನ ಅಂತ್ಯ; ಕಾಂಗ್ರೆಸ್ ಆಂತರಿಕ ವರದಿಯಲ್ಲೇನಿದೆ?

isis link ummer abdul rehman mariyam
ಕ್ರೈಂ39 mins ago

ISIS link: ಐಸಿಸ್‌ ಲಿಂಕ್ ಕೇಸ್‌ನಲ್ಲಿ ಮಾಜಿ ಶಾಸಕ ಇದಿನಬ್ಬ ಮೊಮ್ಮಗನಿಗೆ ದಿಲ್ಲಿ ಹೈಕೋರ್ಟ್‌ ಜಾಮೀನು; ಕೋರ್ಟ್‌ ಕೊಟ್ಟ ಕಾರಣ ನೋಡಿ!

Murder case in davangere
ದಾವಣಗೆರೆ40 mins ago

Murder case : ಕೊಳೆತ ಶವದಲ್ಲಿದ್ದ ಕಿವಿಯೋಲೆಯಿಂದಲೇ ಸಿಕ್ಕಿಬಿದ್ದರು ಹಂತಕರು

Terrorists Killed
ದೇಶ47 mins ago

Terrorists Killed: ಸೇನೆಯ ಭರ್ಜರಿ ಬೇಟೆ; ಎಲೆಕ್ಷನ್‌ ಹಾಳುಗೆಡವಲು ಗಡಿ ನುಸುಳುತ್ತಿದ್ದ ನಾಲ್ವರು ಉಗ್ರರ ಹತ್ಯೆ

Startup Investment
ವಾಣಿಜ್ಯ50 mins ago

Startup Investment : ಡ್ರಿಂಕ್​​ಪ್ರೈಮ್​ ವಿಸ್ತರಣಾ ಯೋಜನೆಯಲ್ಲಿ ಎಸ್​​ಐಡಿಬಿಐ ಹಣಕಾಸು ಸಂಸ್ಥೆಯ ಹೂಡಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌