Viral News | ಗೋಡಂಬಿ ಉದ್ಯಾನದಲ್ಲಿ ಮದ್ಯ ಕುಡಿದ 24 ಆನೆಗಳು ಮಾಡಿದ್ದೇನು? ಸ್ಥಳೀಯರು ಡ್ರಮ್​ ಬಡಿಯಬೇಕಾಯ್ತು ! - Vistara News

ವೈರಲ್ ನ್ಯೂಸ್

Viral News | ಗೋಡಂಬಿ ಉದ್ಯಾನದಲ್ಲಿ ಮದ್ಯ ಕುಡಿದ 24 ಆನೆಗಳು ಮಾಡಿದ್ದೇನು? ಸ್ಥಳೀಯರು ಡ್ರಮ್​ ಬಡಿಯಬೇಕಾಯ್ತು !

ಒಡಿಶಾದ ಕಿಯೋನ್​ಜರ್​​ ಜಿಲ್ಲೆಯ ಹಳ್ಳಿಯೊಂದರ ಬುಡಕಟ್ಟು ಜನಾಂಗದ ಜನರು, ಸಮೀಪದ ಶಿಲಿಪಾದಾ ಗೋಡಂಬಿ ಉದ್ಯಾನದಲ್ಲಿ ಮದ್ಯ ತಯಾರು ಮಾಡಲು ಎಲ್ಲ ಸಿದ್ಧತೆ ಮಾಡಿಟ್ಟಿದ್ದರು. ಅಲ್ಲೇ ಕೊಳದ ಬಳಿ ದೊಡ್ಡ ಹಂಡೆಯಲ್ಲಿ ‘ಮಹುವಾ’ ಹೂವನ್ನು ನೆನೆಸಿಟ್ಟಿದ್ದರು.

VISTARANEWS.COM


on

Elephants Drunk Local Liquor In Odisha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿಶ್ವದಲ್ಲಿ ಮದ್ಯಪ್ರಿಯರ ಸಂಖ್ಯೆ ದೊಡ್ಡದಿದೆ. ಖುಷಿಗೆ ಕುಡಿಯುವವರು, ದುಃಖಕ್ಕೆ ಕುಡಿಯುವವರು, ರುಚಿಗಾಗಿ, ಅಮಲಿಗಾಗಿ..ಸ್ನೇಹಿತರು ಸಿಕ್ಕರೆಂದು, ಪ್ರೀತಿಸಿದವರು ದೂರವಾದವರೆಂದು..ಹೀಗೆ ನಾನಾ ಕಾರಣಗಳಿಗೆ ಮದ್ಯ ಸೇವಿಸುವವರು ಒಂದೆಡೆಯಾದರೆ, ಯಾವುದೇ ಕಾರಣ ಇಲ್ಲದೆ ಇದ್ದರೂ ಅದನ್ನು ಕುಡಿಯುವವರ ಸಂಖ್ಯೆಯೂ ಕಡಿಮೆಯಿಲ್ಲ. ಹೀಗೆ ಮನುಷ್ಯರ ಪಾಲಿಗೆ ‘ಅಗತ್ಯ’ಗಳಲ್ಲಿ ಒಂದಾಗುತ್ತಿರುವ ಮದ್ಯವನ್ನು ಪ್ರಾಣಿಗಳು, ಅದರಲ್ಲೂ ಆನೆಗಳು ಸೇವಿಸಿದರೆ ಏನಾಗುತ್ತದೆ?

ಹಲವು ವಿಧದ ಬ್ರ್ಯಾಂಡ್​ಗಳ ಅಲ್ಕೋಹಾಲ್​ಗಳು ಲಭ್ಯವಿದ್ದರೂ, ದೇಶದಲ್ಲಿ ಅನೇಕ ಕಡೆ ದೇಶೀಯವಾಗಿ ಮದ್ಯ ತಯಾರಿಸುವವರು ಇದ್ದಾರೆ. ಅವೆಲ್ಲ ಅನುಮೋದಿತವಲ್ಲದ ಮದ್ಯಗಳ ಸಾಲಿಗೆ ಸೇರುತ್ತವೆ. ಕಳ್ಳಬಟ್ಟಿ ಎಂದೇ ಕರೆಯಲಾಗುತ್ತಿದೆ. ಇಂಥ ಅಕ್ರಮ ಮದ್ಯದ ತಯಾರಕರು ಪೊಲೀಸರ ಕಣ್ಣಿಂದ ತಪ್ಪಿಸಿಕೊಳ್ಳುವ ಸಲುವಾಗಿ, ಅರಣ್ಯ ಪ್ರದೇಶಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ.

ಹಾಗೇ, ಒಡಿಶಾದ ಕಿಯೋನ್​ಜರ್​​ ಜಿಲ್ಲೆಯ ಹಳ್ಳಿಯೊಂದರ ಬುಡಕಟ್ಟು ಜನಾಂಗದ ಜನರು, ಸಮೀಪದ ಶಿಲಿಪಾದಾ ಗೋಡಂಬಿ ಉದ್ಯಾನದಲ್ಲಿ ಮದ್ಯ ತಯಾರು ಮಾಡಲು ಎಲ್ಲ ಸಿದ್ಧತೆ ಮಾಡಿಟ್ಟಿದ್ದರು. ಅಲ್ಲೇ ಕೊಳದ ಬಳಿ ದೊಡ್ಡ ಹಂಡೆಯಲ್ಲಿ ‘ಮಹುವಾ’ ಹೂವನ್ನು ನೆನೆಸಿಟ್ಟಿದ್ದರು. ಈ ಮಹುವಾ ಹೂವನ್ನು ನೀರಿನಲ್ಲಿ ಸರಿಯಾಗಿ ನೆನೆಹಾಕಿ, ಅದು ಹುದುಗು ಬಂದ ನೀರಿನಿಂದಲೇ ಇವರು ಲಿಕ್ಕರ್​ ತಯಾರು ಮಾಡುತ್ತಾರೆ. ಅದೇ ಪ್ರಕ್ರಿಯೆಗಾಗಿ ಅಲ್ಲಿ ಮಹುವಾ ಹೂವು ಮಿಶ್ರಿತ ನೀರು ಇಡಲಾಗಿತ್ತು. ಹಳ್ಳಿಯ ಜನರು ಆ ನೀರನ್ನು ಅಲ್ಲಿಟ್ಟು ಮನೆಗೆ ಬಂದಿದ್ದರೆ, ಅತ್ತ ಬಾಯಾರಿಕೆ ನೀಗಿಸಿಕೊಳ್ಳಲು ಕೊಳದ ಬಳಿ ಬಂದಿದ್ದ ಸುಮಾರು 24 ಆನೆಗಳು ಆ ಮಹುವಾ ಮಿಶ್ರಣದ ನೀರನ್ನು ಕುಡಿದಿದ್ದವು.

ಹೀಗೆ ಲಿಕ್ಕರ್​ ಕುಡಿದು ಅಮಲೇರಿಸಿಕೊಂಡ ಆ 24 ಆನೆಗಳು ಅದೇ ಸ್ಥಳದಲ್ಲಿಯೇ ಮಲಗಿ ನಿದ್ದೆಹೋಗಿವೆ. 10-12 ತಾಸು ಅವು ನಿದ್ದೆ ಮಾಡಿವೆ. ಮುಂಜಾನೆ 6ಗಂಟೆಗೆ ಹಳ್ಳಿಯ ಜನರು ಮತ್ತದೇ ಗೋಡಂಬಿ ಉದ್ಯಾನಕ್ಕೆ ಹೋಗುವಷ್ಟರಲ್ಲಿ ಅಲ್ಲೆಲ್ಲ ಧ್ವಂಸವಾಗಿತ್ತು. ಮಹುವಾ ಮಿಶ್ರಿತ ನೀರು ಸಂಪೂರ್ಣ ಖಾಲಿಯಾಗಿತ್ತು. ಅಷ್ಟೇ ಅಲ್ಲದೆ, ಸುತ್ತಮುತ್ತ ಎಲ್ಲ ಆನೆಗಳೇ ತುಂಬಿಹೋಗಿದ್ದವು. ಅವು ಗಾಢ ನಿದ್ದೆಯಲ್ಲಿ ಇದ್ದವು. ‘ಸ್ಥಳದಲ್ಲಿ 9 ಸಲಗಗಳು, ಆರು ಹೆಣ್ಣಾನೆಗಳು ಮತ್ತು 9 ಆನೆಮರಿಗಳು ಇದ್ದವು’ ಎಂದು ಗ್ರಾಮಸ್ಥ ನಾರಿಯಾ ಸಾಥಿ ತಿಳಿಸಿದ್ದಾರೆ.
ಕೂಡಲೇ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಕರೆಸಲಾಗಿದೆ. ಆನೆಗಳನ್ನು ಎಬ್ಬಿಸಲು ಡ್ರಮ್​ಗಳನ್ನು ಬಾರಿಸಲಾಗಿದೆ. ಆದರೂ ಆನೆಗಳು ಎದ್ದಿದ್ದು ಸುಮಾರು 10ಗಂಟೆ ಹೊತ್ತಿಗೆ. ನಂತರ ಅಲ್ಲಿಂದ ನಿಧಾನಕ್ಕೆ ಅವು ದಟ್ಟಾರಣ್ಯದೊಳಕ್ಕೆ ಸರಿದುಹೋಗಿವೆ ಎಂದು ಸಾಥಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Viral news | ಈ ರೆಸ್ಟೋರೆಂಟಿನಲ್ಲಿ ಮೀನೂ ಹಿಡಿಯಬಹುದು! ಅದೇ ಮೀನಿನ ಊಟವನ್ನೂ ಮಾಡಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

PM Modi: 400 ಸೀಟು, 400 ಸೀಟು ಎಂದು ಪ್ರತಿಪಕ್ಷಗಳನ್ನು ಮಂಗ್ಯಾ ಮಾಡಿದ ಮೋದಿ; ಅವರ ಮಾತಲ್ಲೇ ಕೇಳಿ!

PM Modi: ನಾವು 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದೆವು. ಆದರೆ, ಪ್ರತಿಪಕ್ಷಗಳು ಪದೇಪದೆ ಹೇಳಿದವು. ಎನ್‌ಡಿಎ 400 ಸೀಟು ಗೆಲ್ಲುವುದೇ ಇಲ್ಲ ಎಂದು ಹೇಳಿದವು. ಆದರೆ, ಕೊನೆಗೆ ಏನಾಯಿತು? ಪ್ರತಿಪಕ್ಷಗಳೇ 400 ಸೀಟು ಗೆಲ್ಲಲ್ಲ ಗೆಲ್ಲಲ್ಲ ಎಂದು ಅಭಿಯಾನ ಮಾಡಿದವು. ಇದರಿಂದ ಯಾರಿಗೆ ಅನುಕೂಲವಾಯಿತು ಎಂಬುದು ಅವರಿಗೆ ಮೂರು ಹಂತದ ಮತದಾನ ಮುಗಿದ ಬಳಿಕ ಬೇರೆಯವರು ಹೇಳಿದರು ಎಂಬುದಾಗಿ ನರೇಂದ್ರ ಮೋದಿ ವ್ಯಂಗ್ಯ ಮಾಡಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬಹುತೇಕ ಸಂದರ್ಭದಲ್ಲಿ ಗಂಭೀರವಾಗಿರುತ್ತಾರೆ. ಚುನಾವಣೆ ಭಾಷಣಗಳು, ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುವಾಗಂತಲೂ ತೀಕ್ಷ್ಣವಾಗಿ ಮಾತನಾಡುತ್ತಾರೆ. ಟೀಕೆ, ಆರೋಪ, ಆಕ್ರೋಶ ಹೊರಹಾಕುತ್ತಾರೆ. ಹಾಗೆಯೇ, ಪ್ರತಿಪಕ್ಷಗಳನ್ನು ಅವರು ವ್ಯಂಗ್ಯ ಮಾಡುತ್ತಾರೆ. ಹಾಸ್ಯ ಚಟಾಕಿ ಮೂಲಕವೂ ಟಾಂಗ್‌ ಕೊಡುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ಚುನಾವಣೆಯಲ್ಲಿ (Lok Sabha Election 2024) ಬಿಜೆಪಿ ನೇತೃತ್ವದ ಎನ್‌ಡಿಎ 400 ಸೀಟು ಗೆಲ್ಲುತ್ತದೆ ಎಂಬುದನ್ನು ಪದೇಪದೆ ಹೇಳಿ ಪ್ರತಿಪಕ್ಷಗಳು ಕೂಡ ತಮ್ಮ ಪರವಾಗಿ ಪ್ರಚಾರಕ್ಕೆ ಹೇಗೆ ಬಳಸಿಕೊಂಡರು ಎಂಬುದನ್ನು ಖುದ್ದು ನರೇಂದ್ರ ಮೋದಿ ಅವರೇ ಹೇಳಿದ್ದಾರೆ.

ಇಂಡಿಯಾ ಟಿವಿ ಚಾನೆಲ್‌ಗೆ ಸಂದರ್ಶನ ನೀಡುವ ವೇಳೆ ಚಾರ್‌ ಸೌ ಪಾರ್‌ ಅಭಿಯಾನದ ಕುರಿತು ತಮಾಷೆಯಾಗಿ ಮಾತನಾಡಿದ್ದಾರೆ. “ನಾವು 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದೆವು. ಆದರೆ, ಪ್ರತಿಪಕ್ಷಗಳು ಪದೇಪದೆ ಹೇಳಿದವು. ಎನ್‌ಡಿಎ 400 ಸೀಟು ಗೆಲ್ಲುವುದೇ ಇಲ್ಲ ಎಂದು ಹೇಳಿದವು. ಆದರೆ, ಕೊನೆಗೆ ಏನಾಯಿತು? ಪ್ರತಿಪಕ್ಷಗಳೇ 400 ಸೀಟು ಗೆಲ್ಲಲ್ಲ ಗೆಲ್ಲಲ್ಲ ಎಂದು ಅಭಿಯಾನ ಮಾಡಿದವು. ನಾನು ಅವರನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿದ್ದೇನೆ ಎಂಬುದು ಪ್ರತಿಪಕ್ಷಗಳ ನಾಯಕರಿಗೆ ಗೊತ್ತೇ ಆಗಲಿಲ್ಲ. 3 ಹಂತಗಳ ಮತದಾನ ಮುಗಿದ ಬಳಿಕ, ನೀವೇಕೆ 400 ಸೀಟು ಗೆಲ್ಲುತ್ತಾರೋ, ಇಲ್ಲವೋ ಎಂಬುದರ ಕುರಿತು ಚುನಾವಣೆ ಪ್ರಚಾರ ಮಾಡುತ್ತಿದ್ದೀರಿ ಎಂಬುದಾಗಿ ಬೇರೆ ಯಾರೋ ಪಕ್ಷಗಳಿಗೆ ಹೇಳಿದರು” ಎಂದು ನಗುತ್ತಲೇ ಪ್ರತಿಪಕ್ಷಗಳನ್ನು ಯಾಮಾರಿಸಿದ ರೀತಿಯನ್ನು ಮೋದಿ ವಿವರಿಸಿದರು.

ಪಾಕ್‌ನಲ್ಲಿ ಉಗ್ರರ ಹತ್ಯೆ ಹಿಂದೆ ಇರೋದು ಯಾರು?

ಪಾಕಿಸ್ತಾನದಲ್ಲಿ ಅಪರಿಚಿತರ ಗುಂಡಿನ ದಾಳಿಗೆ ಉಗ್ರರು ಬಲಿಯಾಗುತ್ತಿರುವುದರ ಹಿಂದೆ ಭಾರತದ ಕೈವಾಡ ಇದೆ ಎಂಬುದಾಗಿ ಸಂದರ್ಶಕ ಕೇಳಿದ ಪ್ರಶ್ನೆಗೆ ನರೇಂದ್ರ ಮೋದಿ ಉತ್ತರಿಸಿದರು. “ಪಾಕಿಸ್ತಾನದವರು ಇದರ ಕುರಿತು ಚಿಂತೆ ಮಾಡುತ್ತಾರೆ. ಆದರೆ, ಪಾಕಿಸ್ತಾನದಲ್ಲಿ ಉಗ್ರರು ಹತ್ಯೆಗೀಡಾದರೆ, ಭಾರತದಲ್ಲಿರುವ ಕೆಲವರ ಕಣ್ಣಿನಲ್ಲಿ ನೀರು ಏಕೆ ಬರುತ್ತದೆ ಎಂಬುದೇ ನನಗೆ ಗೊತ್ತಾಗುತ್ತಿಲ್ಲ” ಎಂದಷ್ಟೇ ಹೇಳಿದರು. ಸಂದರ್ಶನದ ವೇಳೆ ರಾಹುಲ್‌ ಗಾಂಧಿ, ಪ್ರತಿಪಕ್ಷಗಳು, ಅಭಿವೃದ್ಧಿ, ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ ಸೇರಿ ಹಲವು ವಿಷಯಗಳ ಕುರಿತು ಮೋದಿ ಮಾತನಾಡಿದರು.

ಮಣಿಶಂಕರ್‌ ಅಯ್ಯರ್‌ ‘ಅಣುಬಾಂಬ್‌’ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿರು. “ನಾನೇ ಪಾಕಿಸ್ತಾನಕ್ಕೆ (Pakistan) ಹೋಗಿ, ಆ ದೇಶದ ಶಕ್ತಿ ಎಷ್ಟಿದೆ ಎಂಬುದನ್ನು ನೋಡಿಕೊಂಡು ಬಂದಿದ್ದೇನೆ” ಎಂದು ಹೇಳುವ ಮೂಲಕ ತಿರುಗೇಟು ನೀಡಿದರು. “ನಾನೇ ಲಾಹೋರ್‌ಗೆ ತೆರಳಿ ಆ ಪಾಕಿಸ್ತಾನದ ಶಕ್ತಿ ಎಷ್ಟಿದೆ ಎಂಬುದನ್ನು ನೋಡಿಕೊಂಡು ಬಂದಿದ್ದೇನೆ. ನನ್ನನ್ನು ನೋಡಿ, ಪಾಕಿಸ್ತಾನದ ಒಬ್ಬ ಪತ್ರಕರ್ತ ಆಶ್ಚರ್ಯದಿಂದ ಕೇಳಿದ. ‘ವೀಸಾ ಇಲ್ಲದೆ ನೀವೇಗೆ ಇಲ್ಲಿಗೆ ಬಂದಿದ್ದೀರಿ’ ಎಂದ. ಅದಕ್ಕೆ ನಾನು, ‘ಪಾಕಿಸ್ತಾನ ಒಂದು ಕಾಲಕ್ಕೆ ನಮ್ಮದೇ ದೇಶದ ಭಾಗವಾಗಿತ್ತು’ ಎಂಬುದಾಗಿ ಉತ್ತರಿಸಿದೆ” ಎಂಬುದಾಗಿ ನರೇಂದ್ರ ಮೋದಿ ಹೇಳಿದ್ದಾರೆ. ಆ ಮೂಲಕ ಮಣಿಶಂಕರ್‌ ಅಯ್ಯರ್‌ ಹೇಳಿಕೆಗೆ ವ್ಯಂಗ್ಯವಾಗಿಯೇ ಉತ್ತರ ಕೊಟ್ಟರು.

ಇದನ್ನೂ ಓದಿ: Narendra Modi: ಪಾಕ್‌ ʼಬಂಡವಾಳʼ ಏನೆಂದು ಅಲ್ಲಿಗೇ ಹೋಗಿ ನೋಡಿ ಬಂದಿರುವೆ; ಕಾಂಗ್ರೆಸ್‌ ‘ಬಾಂಬ್’‌ ಹೇಳಿಕೆಗೆ ಮೋದಿ ಟಾಂಗ್!

Continue Reading

ಕೊಪ್ಪಳ

SSLC Toper: ಓದೋಕೂ ಬರದವ ಎಸ್‌ಎಸ್‌ಎಲ್‌ಸಿ ಟಾಪರ್‌ ಆಗಿ ಜವಾನನಾದ! ಜಡ್ಜ್‌ ದೂರಿನಿಂದ ಹೊರ ಬಿತ್ತು ಅಸಲಿಯತ್ತು!

SSLC Toper : ಓದಲು-ಬರೆಯಲು ಬಾರದ ಮಾಲಿಯೊಬ್ಬ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 623 ಅಂಕಗಳನ್ನು ಗಳಿಸಿ ಟಾಪರ್‌ ಆಗಿದ್ದಾನೆ. ಇದು ಎಲ್ಲರ ಅಚ್ಚರಿಗೆ ಕಾರಣವಾಗಿದ್ದು, ನ್ಯಾಯಾಧೀಶರೊಬ್ಬರು ಇದರ ಅಸಲಿಯತ್ತು ಏನೆಂದು ತಿಳಿಯಲು ದೂರು ನೀಡಿದ್ದಾರೆ.

VISTARANEWS.COM


on

By

SSLC Toper
ಸಾಂದರ್ಭಿಕ ಚಿತ್ರ
Koo

ಕೊಪ್ಪಳ: ಜೆಎಂಎಫ್‌ಸಿ ಕೋರ್ಟ್‌ನಲ್ಲಿ ಮಾಲಿ (Scavenger) ಆಗಿ ಕಾರ್ಯ ನಿರ್ವಹಿಸುತ್ತಿದ್ದ ಆತನಿಗೆ ಓದೋಕು-ಬರೆಯೋಕೂ ಬರುತ್ತಿರಲಿಲ್ಲ. ಆದರೆ ಓದು ಬರಹ ಬರದ ಮಾಲಿಯೊಬ್ಬ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ಟಾಪರ್‌ (SSLC Toper) ಆಗಿದ್ದ. ಮಾತ್ರವಲ್ಲ ಎಸ್‌ಎಸ್‌ಎಲ್‌ಸಿ ಅಂಕಗಳ ಆಧಾರದ ಮೇಲೆ ಮಾಲಿ ಕೆಲಸದಿಂದ ಕೋರ್ಟ್‌ ಜವಾನನಾಗಿ ನೌಕರಿಯನ್ನು ಗಿಟ್ಟಿಸಿಕೊಂಡಿದ್ದ. ಎಲ್ಲರ ಅಚ್ಚರಿಗೆ ಕಾರಣವಾಗಿದ್ದ ಟಾಪರ್‌ನ ಅಸಲಿಯತ್ತು ನ್ಯಾಯಾಧೀಶರ ಕಂಪ್ಲೇಟ್‌ನಿಂದ ಹೊರಬಿದ್ದಿದೆ.

ಕೊಪ್ಪಳದ ಪ್ರಭು ಲೋಕರೆ ಎಂಬಾತ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ಮಾಲಿ ಆಗಿ ಕೆಲಸ ಮಾಡುತ್ತಿದ್ದ. ಪ್ರಭು ಬಾಗಲಕೋಟೆಯ ಕೇಂದ್ರದಲ್ಲಿ ಬಾಹ್ಯ ಅಭ್ಯರ್ಥಿಯಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ. ಇತ್ತೀಚೆಗೆ ಬಂದ ಫಲಿತಾಂಶದಲ್ಲಿ 625ಕ್ಕೆ 623 ಅಂಕ ಪಡೆದು ಟಾಪರ್‌ ಆಗಿದ್ದ. ವಾಸ್ತವದಲ್ಲಿ ಪ್ರಭುಗೆ ಕನ್ನಡ, ಇಂಗ್ಲಿಷ್, ಹಿಂದಿ ಓದಲು ಅಥವಾ ಬರೆಯಲು ಕೂಡ ಬರೋದಿಲ್ಲ. ಆದರೂ ಪರೀಕ್ಷೆಯಲ್ಲಿ ಪ್ರಭು 623 ಅಂಕ ಪಡೆದಿದ್ದು ಎಲ್ಲರ ಅಚ್ಚರಿಗೆ ಸಾಕ್ಷಿಯಾಗಿತ್ತು. ಇತ್ತ ಈ ಸುದ್ದಿ ತಿಳಿದ ನ್ಯಾಯಾಧೀಶರಿಗೂ 623 ಅಂಕ ಹೇಗೆ ಬಂದು ಎಂಬ ಸಂದೇಹ ಬಂದಿತ್ತು.

ಎಸ್‌ಎಸ್‌ಎಲ್‌ಸಿಯಲ್ಲಿ ಪಡೆದಿದ್ದ ಅಂಕಗಳ ಆಧಾರದ ಮೇಲೆ ಅದಾಗಲೇ ಪ್ರಭು ಮಾಲಿ ಕೆಲಸದಿಂದ ಮತ್ತೊಂದು ನೌಕರಿಯನ್ನು ಗಿಟ್ಟಿಸಿಕೊಂಡಿದ್ದ. ಯಾದಗಿರಿಯ ಕೋರ್ಟ್‌ನಲ್ಲಿ ಜವಾನ ಹುದ್ದೆಗೆ ಆಯ್ಕೆಯಾಗಿದ್ದ. ಪ್ರಭು ಜವಾನ ಹುದ್ದೆಗೆ ಆಯ್ಕೆಯಾಗಿದ್ದರಿಂದ ಕುತೂಹಲಗೊಂಡ ನ್ಯಾಯಾಧೀಶರು, ಇದರಿಂದ‌ ಅನುಮಾನಗೊಂಡು ನಗರ ಠಾಣೆಗೆ ದೂರು ನೀಡಿದ್ದಾರೆ.

ಓದು ಬರಹ ಬಾರದ ಪ್ರಭು ಹೆಚ್ಚು ಅಂಕ ತಗೆದುಕೊಂಡಿರುವುದು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ‌ಮೋಸ‌ ಮಾಡಿದಂತೆ. ಈತನೊಂದಿಗೆ ಲಾಭಕ್ಕಾಗಿ ಶಾಮೀಲಾದವರ ವಿರುದ್ಧ ತನಿಖೆ ನಡೆಸಬೇಕೇಂದು ನ್ಯಾಯಾಧೀಶರು ದೂರು ನೀಡಿದ್ದಾರೆ. ನ್ಯಾಯಾಧೀಶರ ಸೂಚನೆ ಮೇರೆಗೆ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಭು ಲೋಕರೆ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನು ಓದಿ: Viral Video: ರಣ ಭೀಕರ ಬಿರುಗಾಳಿ..! ಆಘಾತಕಾರಿ ವಿಡಿಯೋ ಎಲ್ಲೆಡೆ ವೈರಲ್‌

ದಬಾಂಗ್‌ ಸ್ಟೈಲ್‌ನಲ್ಲಿ ಆಸ್ಪತ್ರೆಯೊಳಗೆ ನುಗ್ಗಿದ ಪೊಲೀಸ್‌ ಜೀಪ್‌! ವಿಡಿಯೋ ವೈರಲ್‌

ಉತ್ತರಾಖಂಡ: ಸಿನಿಮಾಗಳಲ್ಲಿ ಹೀರೋ ಬಿಲ್ಡಿಂಗ್‌, ಕಾಪೌಂಡ್‌ ಅನ್ನು ಲೆಕ್ಕಿಸದೇ ವಾಹನ ನುಗ್ಗಿಸುವ ದೃಶ್ಯ ನೋಡಿರ್ತೀರಿ. ಅದರಲ್ಲೂ ಹೀರೋ ಒಂದುವೇಳೆ ಪೊಲೀಸ್‌ ಆಗಿದ್ದರೆ ತನ್ನ ಜೀಪ್‌ನಲ್ಲೇ ಅಪರಾಧಿಗಳನ್ನು ಚೇಸ್‌ ಮಾಡಿ ಹಿಡಿಯುವ ಹಲವಾರು ದೃಶ್ಯಗಳನ್ನು ನೋಡಿರ್ತೇವೆ. ಅಂತಹದ್ದೇ ಒಂದು ದೃಶ್ಯ ಋಷಿಕೇಶದಲ್ಲಿ ನಡೆದಿದೆ. ಪೊಲೀಸ್‌ ಅಧಿಕಾರಿಯೊಬ್ಬರು ಲೈಂಗಿಕ ಕಿರುಕುಳ(Sexual harassments) ಆರೋಪಿಯನ್ನು ಅರೆಸ್ಟ್‌ ಮಾಡಲೆಂದು ನೇರವಾಗಿ ಆಸ್ಪತ್ರೆ(Hospital)ಯ ಐಸಿಯು ಒಳಗೆ ತಮ್ಮ ಜೀಪನ್ನು ನುಗ್ಗಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದೆ.

ವಿಡಿಯೋ ಫುಲ್‌ ವೈರಲ್‌

ರಿಶಿಕೇಶ್‌ ಏಮ್ಸ್‌ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಆಸ್ಪತ್ರೆಯ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯ ಬಂಧನಕ್ಕೆಂದು ಬಂದಿದ್ದ ಪೊಲೀಸರು ಜೀಪು ಸಮೇತ ಆಸ್ಪತ್ರೆಯೊಳಗೆ ನುಗ್ಗಿದ್ದಾರೆ. ನೇರವಾಗಿ ಆಸ್ಪತ್ರೆಯ ನಾಲ್ಕನೇ ಮಹಡಿಗೆ ಬಂದ ಪೊಲೀಸರು ಐಸಿಯು ಒಳಗೆ ಜೀಪು ಚಲಾಯಿಸಿದ್ದಾರೆ. ಈ ದೃಶ್ಯವನ್ನು ಆಸ್ಪತೆಯಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು, ಎಕ್ಸ್‌ನಲ್ಲಿ ಹರಿಬಿಟ್ಟಿದ್ದು, ವಿಡಿಯೋ ವೈರಲಾಗಿದೆ.

ನರ್ಸಿಂಗ್‌ ಅಧಿಕಾರಿಯಿಂದ ಲೈಂಗಿಕ ಕಿರುಕುಳ

ಏಮ್ಸ್‌ನ ನರ್ಸಿಂಗ್‌ ಅಧಿಕಾರಿ ಸತೀಶ್‌ ಕುಮಾರ್‌ ಎಂಬಾತ ವೈದ್ಯೆಯೊಬ್ಬರಿಗೆ ಎಂಎಂಎಸ್‌ ಕಳುಹಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದೂರು ದಾಖಲಾಗಿತ್ತು. ಆರೋಪಿ ಬಂಧನಕ್ಕೆಂದು ಏಮ್ಸ್‌ ಆಸ್ಪತ್ರೆಗೆ ಪೊಲೀಸರು ಬರುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಸತೀಶ್‌ ಕುಮಾರ್‌ ಎಸ್ಕೇಪ್‌ ಆಗಲು ಯತ್ನಿಸಿದ್ದ. ಇದು ತಿಳಿದ ಡೆಹ್ರಾಡೂನ್‌ ಪೊಲೀಸರು ಆಸ್ಪತ್ರೆಯ ಒಳಗೆ ಜೀಪ್‌ ಚಲಾಯಿಸಿದಾರೆ. ನೇರವಾಗಿ ನಾಲ್ಕನೇ ಮಹಡಿಗೆ ತಲುಪಿದ ಜೀಪ್‌ ಐಸಿಯು ಒಳಗೆ ಬಂದು ನಿಂತಿದೆ.

ಪೊಲೀಸ್‌ ವಾಹನ್‌ ಆಸ್ಪತ್ರೆ ಒಳಗೆ ಬರುತ್ತಿದ್ದಂತೆ ಅಲ್ಲಿದ್ದ ರೋಗಿಗಳು, ಜನರು ಒಂದು ಕ್ಷಣಕ್ಕೆ ಗಾಬರಿ ಆಗಿದ್ದಾರೆ. ರೋಗಿಗಳು ಮಲಗಿದ್ದ ಮಂಚ ಸರಿಸಿ ಪೊಲೀಸ್‌ ವಾಹನಕ್ಕೆ ಜಾಗ ಮಾಡಿಕೊಡುತ್ತಿರುವ ದೃಶ್ಯವನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಇದಾಗಿಯೂ ಪೊಲೀಸ್‌ ವಾಹನ ಮಾತ್ರ ನಿಲ್ಲುವುದೇ ಇಲ್ಲ. ತನ್ನ ಗುರಿ ತಲುಪಿದ ಮೇಲಷ್ಟೇ ವಾಹನಕ್ಕೆ ಬ್ರೇಕ್‌ ಬೀಳುತ್ತದೆ.

ಪೊಲೀಸ್‌ ಕ್ರಮಕ್ಕೆ ಖಂಡನೆ

ಇನ್ನು ಪೊಲೀಸರ ಈ ಕ್ರಮಕ್ಕೆ ಹಲವರಿಂದ ಖಂಡನೆ ವ್ಯಕ್ತವಾಗಿದೆ. ಆಸ್ಪತ್ರೆಯಂತಹ ಸೂಕ್ಷ್ಮ ಸ್ಥಳಗಳಲ್ಲಿ ಇಂತಹ ವಾತಾವರಣ ಸೃಷ್ಟಿಸುವುದು ಸರಿಯಲ್ಲ. ಮುಂದೆ ಇಂತಹ ಘಟನೆ ನಡೆಯದಂತೆ ಎಚ್ಚರ ವಹಿಸಬೇಕೆಂದು ಜನ ಆಗ್ರಹಿಸಿದ್ದಾರೆ. ಅಲ್ಲದೇ ಅಲ್ಲಿದ್ದ ರೋಗಿಗಳು ಹಾಗೂ ಅವರ ಕುಟುಂಬಸ್ಥರೂ ಪೊಲೀಸರ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಉತ್ತರಾಖಂಡ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಘಟನೆಯ ಬಗ್ಗೆ ಗಮನ ಹರಿಸಿದ್ದು,. ಕಿರುಕುಳಕ್ಕೊಳಗಾದ ಮಹಿಳಾ ವೈದ್ಯರನ್ನು ಭೇಟಿ ಮಾಡಲು ಮತ್ತು ಪರಿಸ್ಥಿತಿಯನ್ನು ನೇರವಾಗಿ ನಿರ್ಣಯಿಸಲು AIIMS ಗೆ ಭೇಟಿ ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವೈರಲ್ ನ್ಯೂಸ್

Viral Video: ರಣ ಭೀಕರ ಬಿರುಗಾಳಿ..! ಆಘಾತಕಾರಿ ವಿಡಿಯೋ ಎಲ್ಲೆಡೆ ವೈರಲ್‌

Viral Video: ಲೋವಾ ಸಾರ್ವಜನಿಕ ಸುರಕ್ಷತಾ ವಿಭಾಗದ ಅಧಿಕಾರಿಗಳು ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಬಿರುಗಾಳಿಗೆ ನಾಲ್ವರು ಗ್ರೀನ್‌ಫೀಲ್ಡ್‌ನಲ್ಲೇ ಮೃತಪಟ್ಟಿದ್ದಾರೆ. ಮತ್ತೊರ್ವ ಮಹಿಳೆ ಕಾರು ಸಮೇತ ಬಿರುಗಾಳಿ ರಭಸಕ್ಕೆ 25ಮೈಲು ದೂರ ಹಾರಿ ಹೋಗಿ ಬಿದಿದ್ದು, ಕಾರಿನೊಳಗೇ ಮೃತಪಟ್ಟಿದ್ದಾಳೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾದ ಪರಿಣಾಮ 46 ವರ್ಷದ ಮೊನಿಕಾ ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

VISTARANEWS.COM


on

Viral Video
Koo

ಅಮೆರಿಕ: ಭೀಕರ ಬಿರುಗಾಳಿ(Tornadoes)ಯ ರಭಸಕ್ಕೆ ಐವರು ಬಲಿಯಾಗಿದ್ದು, 35ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಮೆರಿಕ(America)ದ ಲೋವಾ ನಗರದದ ಗ್ರೀನ್‌ಫೀಲ್ಡ್‌(Greenfield)ನಲ್ಲಿ ನಡೆದಿದೆ. ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಈ ಭೀಕರ ಬಿರುಗಾಳಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದ್ದು, ಗಾಯಾಳುಗಳ ಸಂಖ್ಯೆ ಏರಿಕೆ ಆಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿದ್ದಾರೆ.

ಲೋವಾ ಸಾರ್ವಜನಿಕ ಸುರಕ್ಷತಾ ವಿಭಾಗದ ಅಧಿಕಾರಿಗಳು ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಬಿರುಗಾಳಿಗೆ ನಾಲ್ವರು ಗ್ರೀನ್‌ಫೀಲ್ಡ್‌ನಲ್ಲೇ ಮೃತಪಟ್ಟಿದ್ದಾರೆ. ಮತ್ತೊರ್ವ ಮಹಿಳೆ ಕಾರು ಸಮೇತ ಬಿರುಗಾಳಿ ರಭಸಕ್ಕೆ 25ಮೈಲು ದೂರ ಹಾರಿ ಹೋಗಿ ಬಿದಿದ್ದು, ಕಾರಿನೊಳಗೇ ಮೃತಪಟ್ಟಿದ್ದಾಳೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾದ ಪರಿಣಾಮ 46ವರ್ಷದ ಮೊನಿಕಾ ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಗ್ರೀನ್‌ ಫೀಲ್ಡ್‌ ನಗರದಲ್ಲಿ ಸುಮಾರು 55 ಮೈಲುಗಳವರೆಗೆ ಈ ಬಿರುಗಾಳಿ ಬೀಸಿದ್ದು, ಅನೇಕ ಮನೆ, ಕಟ್ಟಡಗಳು ಹಾನಿಗೊಳಗಾಗಿವೆ. ಸಾವಿರಾರು ಜನ ಬಿರುಗಾಳಿ ರಭಸಕ್ಕೆ ಆತಂಕ ವ್ಯಕ್ತಪಡಿಸಿದ್ದಾರೆ. ಈ ನಡುವೆ ಡಲ್ಲಾಸ್‌ ಸೇರಿದಂತೆ ಟೆಕ್ಸಾಸ್‌ನ ಕೆಲವು ಭಾಗಗಳಲ್ಲಿ ಭೀಕರ ಪ್ರವಾಹವಾಗುವ ಎಚ್ಚರಿಕೆಯನ್ನು ರಾಷ್ಟ್ರೀಯ ಹವಾಮಾನ ಇಲಾಖೆ ನೀಡಿದೆ.

ಹವಾಮಾನ ಬದಲಾವಣೆಯು ಪ್ರಪಂಚದಾದ್ಯಂತ ಚಂಡಮಾರುತಗಳ ತೀವ್ರತೆಯನ್ನು ಹೆಚ್ಚಿಸುತ್ತದೆ. ಅಮೆರಿಕದಲ್ಲಿ ಆಗಾಗ ಸುಂಟರಗಾಳಿ ಸಂಭವಿಸುತ್ತಿರುತ್ತದೆ. ಏಪ್ರಿಲ್‌ನಲ್ಲಿ ಅಮೆರಿಕದಲ್ಲಿ ಎರಡನೇ ಅತಿ ದೊಡ್ಡ ಸುಂಟರಗಾಳಿ ಇದಾಗಿದೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಕಳೆದ ವಾರ ಮುಂಬೈನಲ್ಲೂ ಭಾರೀ ಗಾಳಿ ಸಹಿತ ಮಳೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಮಧ್ಯಾಹ್ನ 3 ಗಂಟೆ ಹೊತ್ತಿಗೇ ವಾತಾವರಣದಲ್ಲಿ ಉಂಟಾದ ದಿಢೀರ್ ಬದಲಾವಣೆ ಉಂಟಾಗಿತ್ತು. ದ್ವಿಚಕ್ರ ವಾಹನಗಳಲ್ಲಿ ಕುಳಿತು ಸಾಗುತ್ತಿದ್ದ ಜನರು ಭಾರೀ ಗಾಳಿ, ಮಳೆಯಿಂದಾಗಿ ತಮ್ಮ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಿ ರಕ್ಷಣೆಗಾಗಿ ಅಂಗಡಿ ಮುಂಗಟ್ಟುಗಳತ್ತ ಓಡಿದರು. ಮುಂಬೈ ನಗರದ ಘಾಟ್‌ಕೋಪರ್, ಬಾಂದ್ರಾ, ಕುರ್ಲಾ, ಧಾರಾವಿ ಪ್ರದೇಶಗಳಲ್ಲಿ ಭಾರೀ ಮಳೆ ಆಗಿದೆ. ಕ್ಷಣಾರ್ಧದಲ್ಲಿ ಸಂಚಾರದಲ್ಲಿ ಭಾರೀ ಅವ್ಯವಸ್ಥೆ ಉಂಟಾಗಿತ್ತು.

ಇದನ್ನೂ ಓದಿ:bomb Hoax: ಶಾಲೆ, ದೇವಸ್ಥಾನದ ಬಳಿಕ ರಾಜಧಾನಿಯ ಪ್ರತಿಷ್ಠಿತ ಹೋಟೆಲ್‌ಗೂ ಬಾಂಬ್‌ ಬೆದರಿಕೆ

ಮುಂಬೈ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ ಲ್ಯಾಂಡಿಂಗ್ ಹಾಗೂ ಟೇಕಾಫ್‌ಗೆ ಭಾರೀ ಅಡ್ಡಿ ಉಂಟಾಗಿತ್ತು. ದೇಶದ ಅತ್ಯಂತ ಹೆಚ್ಚು ಚಟುವಟಿಕೆಯಿಂದ ಕೂಡಿರುವ ಈ ವಿಮಾನ ನಿಲ್ದಾಣದಲ್ಲಿ ವಿಮಾನಯಾನವನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಯ್ತು. ಮುಂಬೈ ಮಹಾ ನಗರಕ್ಕೆ ಆಗಮಿಸುವ ಹಾಗೂ ನಿರ್ಗಮಿಸುವ ವಿಮಾನಗಳ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿತ್ತು.

Continue Reading

ಕ್ರೀಡೆ

Viral Video: ಔಟಾದ ಸಿಟ್ಟಿನಲ್ಲಿ ಡಗೌಟ್​​ ಸ್ಟ್ಯಾಂಡ್​ಗೆ ಕೈ ಬಡಿದ ಯಶಸ್ವಿ ಜೈಸ್ವಾಲ್

Viral Video: ಚೇಸಿಂಗ್​ ವೇಳೆ ಜೈಸ್ವಾಲ್​ ಉತ್ತಮವಾಗಿ ಬ್ಯಾಟಿಂಗ್​ ನಡೆಸುತ್ತಿದ್ದರು. 45 ರನ್​ ಗಳಿಸಿದ್ದ ವೇಳೆ ರಿವರ್ಸ್​ ಸ್ವೀಪ್​ ಮಾಡುವ ಯತ್ನಕ್ಕೆ ಕೈ ಹಾಕಿ ಇದರಲ್ಲಿ ವಿಫಲವಾಗಿ ಕ್ಯಾಚ್​ಗೆ ಬಲಿಯಾದರು. ಒಂದೆಡೆ ಅರ್ಧಶತಕ ತಪ್ಪಿದ ಮತ್ತು ತಂಡಕ್ಕೆ ಹಿನ್ನಡೆಯಾದ ಸಿಟ್ಟಿನಲ್ಲಿ ಡ್ರೆಸ್ಸಿಂಗ್​ ರೂಮ್​ಗೆ ತೆರಳುವ ವೇಳೆ ಜೈಸ್ವಾಲ್ ಡಗೌಟ್​ನ ಸ್ಟ್ಯಾಂಡ್​​ನ ಬೇಲಿಗೆ ತಮ್ಮ ಕೈಯನ್ನು ಜೋರಾಗಿ ಬಡಿದಿದ್ದಾರೆ.

VISTARANEWS.COM


on

viral video
Koo

ಅಹಮದಾಬಾದ್​: ಆರ್​ಸಿಬಿ(RCB) ವಿರುದ್ಧ ನಿನ್ನೆ(ಬುಧವಾರ) ನಡೆದ ಐಪಿಎಲ್​ನ(IPL 2024) ಎಲಿಮಿನೇಟರ್(​RCB vs RR Eliminator) ಪಂದ್ಯದಲ್ಲಿ ರಾಜಸ್ಥಾನ್​ ರಾಯಲ್ಸ್(Rajasthan Royals)​ ತಂಡ ನಾಲ್ಕು ವಿಕೆಟ್​ಗಳ ಗೆಲುವು ಸಾಧಿಸಿ ಕ್ವಾಲಿಫೈಯರ್​ ಹಂತಕ್ಕೆ ತೇರ್ಗಡೆಗೊಂಡಿತು. ಆದರೆ, ಇದೇ ಪಂದ್ಯದಲ್ಲಿ ಔಟಾದ ಹತಾಶೆಯಲ್ಲಿ ಯುವ ಆಟಗಾರ ಯಶಸ್ವಿ ಜೈಸ್ವಾಲ್(Yashasvi Jaiswal)​ ತಾಳ್ಮೆ ಕಳೆದುಕೊಂಡ(Yashasvi Jaiswal Loses Cool) ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral Video)​ ಆಗಿದೆ.

ಚೇಸಿಂಗ್​ ವೇಳೆ ಜೈಸ್ವಾಲ್​ ಉತ್ತಮವಾಗಿ ಬ್ಯಾಟಿಂಗ್​ ನಡೆಸುತ್ತಿದ್ದರು. 45 ರನ್​ ಗಳಿಸಿದ್ದ ವೇಳೆ ರಿವರ್ಸ್​ ಸ್ವೀಪ್​ ಮಾಡುವ ಯತ್ನಕ್ಕೆ ಕೈ ಹಾಕಿ ಇದರಲ್ಲಿ ವಿಫಲವಾಗಿ ಕ್ಯಾಚ್​ಗೆ ಬಲಿಯಾದರು. ಒಂದೆಡೆ ಅರ್ಧಶತಕ ತಪ್ಪಿದ ಮತ್ತು ತಂಡಕ್ಕೆ ಹಿನ್ನಡೆಯಾದ ಸಿಟ್ಟಿನಲ್ಲಿ ಡ್ರೆಸ್ಸಿಂಗ್​ ರೂಮ್​ಗೆ ತೆರಳುವ ವೇಳೆ ಜೈಸ್ವಾಲ್ ಡಗೌಟ್​ನ ಸ್ಟ್ಯಾಂಡ್​​ನ ಬೇಲಿಗೆ ತಮ್ಮ ಕೈಯನ್ನು ಜೋರಾಗಿ ಬಡಿದಿದ್ದಾರೆ. ಅಲ್ಲದೆ ಜೋರಾಗಿ ಕಿರುಚಾಟ ಕೂಡ ನಡೆಸಿದ್ದಾರೆ. ಇದರ ವಿಡಿಯೊ ವೈರಲ್​ ಆಗಿದ್ದು ನೆಟ್ಟಿಗರು ಈ ರೀತಿಯ ವರ್ತನೆ ಸರಿಯಲ್ಲ ಎಂದು ಬುದ್ಧಿಮಾತು ಹೇಳಿದ್ದಾರೆ.

ಕಳೆದ ವರ್ಷದ ಐಪಿಎಲ್​ ಟೂರ್ನಿಯಲ್ಲಿ ಜೈಸ್ವಾಲ್​ 14 ಪಂದ್ಯ ಆಡಿ 625 ರನ್ ಗಳಿಸಿದ್ದರು. ಆದರೆ ಈ ಆವೃತ್ತಿಯಲ್ಲಿ ಅಷ್ಟಾಗಿ ಉತ್ತಮ ಪ್ರದರ್ಶನ ನೀಡಿಲ್ಲ. ಮುಂಬೈ ವಿರುದ್ಧದ ಪಂದ್ಯದಲ್ಲಿ ತಕವೊಂದನ್ನು ಬಾರಿಸಿದ್ದು ಬಿಟ್ಟರೆ ಇವರ ಬ್ಯಾಟ್​ನಿಂದ ದೊಡ್ಡ ಇನಿಂಗ್ಸ್​ ಕಂಡುಬಂದಿಲ್ಲ. ಮುಂದಿನ ತಿಂಗಳು ನಡೆಯುವ ಟಿ20 ವಿಶ್ವಕಪ್​ಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಜೈಸ್ವಾಲ್​ ಕೂಡ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ IPL 2024 : 17 ವರ್ಷ ಕಾದರೂ ಟ್ರೋಫಿ ಇಲ್ಲ: ಆರ್​ಸಿಬಿ ಅಭಿಮಾನಿಗಳ ಕಾಯುವಿಕೆ ನಿರಂತರ

ಎಲಿಮಿನೇಟರ್​ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಆರ್​ಸಿಬಿ 8 ವಿಕೆಟಿಗೆ 172 ರನ್‌ ಗಳಿಸಿತು. ರಾಜಸ್ಥಾನ್‌ 19 ಓವರ್‌ಗಳಲ್ಲಿ 6 ವಿಕೆಟಿಗೆ 174 ರನ್‌ ಬಾರಿಸಿ ಜಯಭೇರಿ ಮೊಳಗಿಸಿತು. ಚೇಸಿಂಗ್​ ವೇಳೆ ರಾಜಸ್ಥಾನ್‌ ಬಿರುಸಿನ ಆಡವಾಡಿತು. ಜೈಸ್ವಾಲ್‌ (45)-ಕ್ಯಾಡ್‌ಮೋರ್‌ (20) ಮೊದಲ ವಿಕೆಟ್​ಗೆ 46 ರನ್‌ ಜತೆಯಾಟ ನಿಭಾಯಿಸಿದರು. ಆ ಬಳಿಕ ಜೈಸ್ವಾಲ್‌-ಸ್ಯಾಮ್ಸನ್‌ ಜತೆಗೂಡಿ 35 ರನ್‌ ಕಲೆಹಾಕಿದರು. 112ಕ್ಕೆ 4 ವಿಕೆಟ್‌ ಬಿದ್ದಾಗ ಪಂದ್ಯ ಕುತೂಹಲ ಘಟ್ಟ ತಲುಪಿತು. ಆದರೆ ಪರಾಗ್‌-ಹೆಟ್‌ಮೈರ್‌ ಸಿಡಿದು ನಿಂತು 45 ರನ್‌ ಜತೆಯಾಟ ನಿಭಾಯಿಸಿ ಆರ್‌ಸಿಬಿಗೆ ಸೋಲುಣಿಸಿದರು. ಮೂರು ಓವರ್​ ತನಕ ಉತ್ತಮ ಲಯದಲ್ಲಿದ್ದ ಕ್ಯಾಮರೂನ್​ ಗ್ರೀನ್​ ನಾಲ್ಕನೇ ಓವರ್​ನಲ್ಲಿ ದುಬಾರಿಯಾದರು. ಹೆಟ್‌ಮೈರ್‌ ಈ ಓವರ್​ನಲ್ಲಿ ಸಿಕ್ಸರ್​ ಮತ್ತು ಬೌಂಡರಿಗಳ ಮೂಲಕ ಬಿಸಿ ಮುಟ್ಟಿಸಿದರು.

ಈ ಸೋಲಿನೊಂದಿಗೆ ಆರ್​ಸಿಬಿ ತಂಡದ 2024ರ ಐಪಿಎಲ್​ ಅಭಿಯಾನ ಮುಕ್ತಾಯಗೊಂಡಿತು. ಪ್ಲೇಆಫ್ ಹಂತಕ್ಕೆ ಪ್ರವೇಶ ಪಡೆದಿರುವುದೇ ರೆಡ್​ ಆರ್ಮಿಯ ದೊಡ್ಡ ಸಾಧನೆ ಎನಿಸಿಕೊಂಡಿತು. ಜತೆಗೆ ಆರ್​​ಸಿಬಿಯ ಅಪಾರ ಅಭಿಮಾನಿಗಳ ಹೃದಯ ಛಿದ್ರಗೊಂಡಿತು. ಈ ಬಾರಿಯಾದರೂ ಕಪ್​ ಗೆಲ್ಲಬೇಕೆಂಬ ಆಸೆ ಕಮರಿತು. ಕಷ್ಟದಲ್ಲಿ ಪ್ಲೇಆಫ್​ ಹಂತಕ್ಕೇರಿದ ಹೊರತಾಗಿಯೂ ಮುಂದಿನ ಹಂತಕ್ಕೆ ಹೋಗಲು ಸಾಧ್ಯವಾಗದ್ದಕ್ಕೆ ಬೇಸರ ವ್ಯಕ್ತಪಡಿಸಿದರು. ಚೆನ್ನೈ ವಿರುದ್ಧದ ಲೀಗ್ ಪಂದ್ಯದಲ್ಲಿ ಹೆಚ್ಚು ನಿಖರವಾಗಿ ಆಡಿದ್ದ ಆರ್​ಸಿಬಿ ಈ ಪಂದ್ಯದಲ್ಲಿ ನಿರ್ಲಕ್ಷ್ಯ ತೋರಿತು. ಬ್ಯಾಟಿಂಗ್​ನಲ್ಲಿ ಅನಗತ್ಯವಾಗಿ ವಿಕೆಟ್​ ಒಪ್ಪಿಸಿದರೆ ಬೌಲಿಂಗ್ ವೇಳೆಯೂ ಕ್ಯಾಚ್​ ಕೈಚೆಲ್ಲಿ, ಕಳಪೆ ಫೀಲ್ಡಿಂಗ್ ಮಾಡಿ, ರನ್​ಔಟ್​ ಚಾನ್ಸ್​ ಕಳೆದುಕೊಂಡಿತು. ಇದು ಸೋಲಿಗೆ ಕಾರಣವಾಯಿತು.

Continue Reading
Advertisement
karnataka weather Forecast
ಮಳೆ38 mins ago

Karnataka Weather : ಕರಾವಳಿಯಲ್ಲಿ ಬಿರುಗಾಳಿ ಮಳೆ; ಕಡಲಿಗಿಳಿಯದಂತೆ ಮೀನುಗಾರರಿಗೆ ಅಲರ್ಟ್!‌

COMEDK UGET 2024
ಪ್ರಮುಖ ಸುದ್ದಿ2 hours ago

COMEDK UGET 2024 : ಇಂದು ಮಧ್ಯಾಹ್ನ ಕಾಮೆಡ್‌ – ಕೆ ಫಲಿತಾಂಶ; ರಿಸಲ್ಟ್​ ನೋಡೋದು, ಡೌನ್‌ಲೋಡ್‌ ಮಾಡಿಕೊಳ್ಳೋದು ಹೇಗೆ?

Tips On Tea
ಆರೋಗ್ಯ2 hours ago

Tips On Tea: ಚಹಾ ಅತಿಯಾಗಿ ಕುದಿಸುವುದು ಒಳ್ಳೆಯದಲ್ಲ! ಏಕೆ ಗೊತ್ತಾ?

Dina Bhavishya
ಭವಿಷ್ಯ2 hours ago

Dina Bhavishya : ಆತುರದಲ್ಲಿ ಈ ರಾಶಿಯವರು ಯಾವುದೇ ತೀರ್ಮಾನ ತೆಗೆದುಕೊಳ್ಳಬೇಡಿ

Narendra Modi
ದೇಶ7 hours ago

PM Modi: 400 ಸೀಟು, 400 ಸೀಟು ಎಂದು ಪ್ರತಿಪಕ್ಷಗಳನ್ನು ಮಂಗ್ಯಾ ಮಾಡಿದ ಮೋದಿ; ಅವರ ಮಾತಲ್ಲೇ ಕೇಳಿ!

Rajakaluve
ಸಂಪಾದಕೀಯ8 hours ago

ವಿಸ್ತಾರ ಸಂಪಾದಕೀಯ: ಮುಂಗಾರಿಗೆ ಮುನ್ನವೇ ರಾಜಕಾಲುವೆ ಒತ್ತುವರಿ ತೆರವಾಗಲಿ

IPL 2024
ಪ್ರಮುಖ ಸುದ್ದಿ8 hours ago

IPL 2024 : ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ ಎಂದ ಮಾಜಿ ಕ್ರಿಕೆಟಿಗ

DCM D K Shivakumar instructed to test drinking water everywhere including Bengaluru
ಕರ್ನಾಟಕ8 hours ago

Bengaluru News: ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಿದ ಡಿ.ಕೆ.ಶಿವಕುಮಾರ್

Naxals
ದೇಶ8 hours ago

Naxals: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಎನ್‌ಕೌಂಟರ್

IPL 2024
ಪ್ರಮುಖ ಸುದ್ದಿ9 hours ago

IPL 2024 : ಐಪಿಎಲ್​ನಲ್ಲಿ ಕಳಪೆ ದಾಖಲೆಯೊಂದನ್ನು ಸೃಷ್ಟಿಸಿ ನಿರ್ಗಮಿಸಿದ ಆರ್​ಸಿಬಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ1 day ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌