Motivational story: ಕಿಟಕಿ ಆಚೆಗೆ ಇದ್ದದ್ದು ಕತ್ತಲೆ! ಆದರೆ, ಇವರಿಗೆ ಬೆಳಕು ತುಂಬಿತ್ತು! - Vistara News

ಪ್ರಮುಖ ಸುದ್ದಿ

Motivational story: ಕಿಟಕಿ ಆಚೆಗೆ ಇದ್ದದ್ದು ಕತ್ತಲೆ! ಆದರೆ, ಇವರಿಗೆ ಬೆಳಕು ತುಂಬಿತ್ತು!

Motivational story ಆಸ್ಪತ್ರೆಯ ಬೆಡ್‌ನಲ್ಲಿ ಒಂದಿಂಚೂ ಕದಲಲಾಗದೆ ಮಲಗಿದ್ದ ವ್ಯಕ್ತಿಗೆ ಗೋಡೆ ಬದಿ ಬೆಡ್ಡಿನಲ್ಲಿದ್ದ ವ್ಯಕ್ತಿ ಹೇಳಿದ ಬಣ್ಣ ಬಣ್ಣದ ಕತೆಗಳನ್ನು ಹೇಳಿದ್ದರು. ಆವತ್ತು ಕತೆ ಕೇಳಿಸಲಿಲ್ಲ. ಅವರನ್ನು ಹುಡುಕಿ ಬಂದವರಿಗೆ ನಿಜಕ್ಕೂ ಕಂಡಿದ್ದೇನು?

VISTARANEWS.COM


on

motivational story
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೃಷ್ಣ ಭಟ್‌ ಅಳದಂಗಡಿ- Motivational story
ಅವರು ಆಸ್ಪತ್ರೆಯ ಬೆಡ್‍ನಲ್ಲಿ ಜೀವಂತ ಶವದಂತೆ ಮಲಗಿದ್ದರು. ಕಾಲು, ಕೈಗಳೆಲ್ಲ ಸ್ವಾಧೀನ ಕಳೆದುಕೊಂಡಿದ್ದವು. ಯಾವ ಕಡೆಗೂ ಹೊರಳುವಂತಿಲ್ಲ, ಏಳುವಂತಿಲ್ಲ. ತನ್ನ ಬಳಿ ಬರುವ ನರ್ಸ್‌ಗೆ ಅವರು ಹೇಳುತ್ತಿದ್ದುದು ಒಂದೇ ಮಾತು: ಯಾವ ಸುಖಕ್ಕಾಗಿ ನಾನು ಬದುಕಬೇಕು? ಒಂದು ಇಂಜೆಕ್ಷನ್ ಕೊಟ್ಟು ಸಾಯಿಸಿಬಿಡು ನನ್ನನ್ನು!

ಅವರ ಪಕ್ಕದ ಬೆಡ್‍ನಲ್ಲಿ ಇನ್ನೊಬ್ಬ ರೋಗಿ ಇದ್ದರು. ಅವರು ಪ್ರತಿದಿನ ಬೆಳಗ್ಗೆ ಎದ್ದು ಕಿಟಕಿ ತೆರೆದು ಅದರಿಂದಾಚೆಗೆ ಏನು ನಡೆಯುತ್ತಿದೆ ಎಂದು ಚಂದ ಮಾಡಿ ವಿವರಿಸಿ  ಹೇಳುತ್ತಿದ್ದರು. ವ್ಹಾ ಅಲ್ಲೊಂದು ಸುಂದರವಾದ ಬೀಚು, ಅಲ್ಲಿ ಆಡುವ ಮಕ್ಕಳು, ಒಂದು ಮರ, ಹಕ್ಕಿಗಳ ಆಟ, ರಸ್ತೆಯಲ್ಲಿ ಓಡಾಡುವ ಜನ.. ಹೀಗೆ ಎಲ್ಲವನ್ನೂ ವಿವರಿಸುತ್ತಿದ್ದರು.

ಪ್ಯಾರಾಲಿಸಿಸ್‍ಗೆ ಒಳಗಾದ ವ್ಯಕ್ತಿಗೆ ಈ ಮಾತುಗಳು ಖುಷಿಕೊಡುತ್ತಿದ್ದವು. ಹಾಗಾಗಿ ಯಾವಾಗ ಬೆಳಗಾಗುತ್ತದೋ, ಆ ಪ್ರಕೃತಿಯ ಸೌಂದರ್ಯದ ವಿವರಣೆ ಯಾವಾಗ ಕೇಳುತ್ತೇನೋ ಎಂದು ಹಾತೊರೆಯುತ್ತಿದ್ದರು. ಅವರಲ್ಲೊಂದು ಜೀವ ಸಂಚಾರವಾಗಿತ್ತು.

ಅದೊಂದು ದಿನ ಬೆಳಗ್ಗೆ ಎದ್ದಾಗ  ಪಕ್ಕದ ಬೆಡ್ ಖಾಲಿಯಾಗಿತ್ತು. ನರ್ಸ್‌ ನ್ನು ಕರೆದು ಕೇಳಿದರು: ಅವರು ಎಲ್ಲಿ ಹೋದರು?
ನರ್ಸ್ ಹೇಳಿದಳು: ಅವರು ನಿನ್ನೆ ರಾತ್ರಿ ತೀರಿಕೊಂಡರು.
ಅಷ್ಟು ಹೊತ್ತಿಗೆ ಈ ವ್ಯಕ್ತಿಗೆ ಬಂದ ಜೀವವೂ ಹೋದಂತಾಯಿತು. ಹೊರ ಪ್ರಪಂಚಕ್ಕೆ ಕಿಂಡಿಯಾಗಿದ್ದ ನನ್ನ ಗೆಳೆಯನೇ ಹೋದ ಮೇಲೆ ನನಗೆ ಇನ್ನೇನು ಉಳೀತು ಅಂತ ದುಃಖಿತರಾದರು. ಆದರೂ ಸಾಯುವ ಮುನ್ನ ಆ ಕಿಟಕಿ ಮೂಲಕ ಗೆಳೆಯ ವರ್ಣಿಸುತ್ತಿದ್ದ ಸುಂದರ ಜಗತ್ತನ್ನೊಮ್ಮೆ ನೋಡೇ ಬಿಡಬೇಕು ಎಂದು ನಿರ್ಣಯಿಸಿದರು. ತನ್ನೆಲ್ಲಾ ಶಕ್ತಿಯನ್ನು ಒಗ್ಗೂಡಿಸಿ ಎದ್ದೇಳಲು ಯತ್ನಿಸಿದರು. ನೆಲಕ್ಕೆ ಬಿದ್ದರು. ಅಲ್ಲಿಂದ ತೆವಳುತ್ತಲೇ ಹೋಗಿ ಪಕ್ಕದ ಬೆಡ್ಡಿನಾಚೆ ಇದ್ದ ಕಿಟಕಿಯನ್ನು ಗಟ್ಟಿಯಾಗಿ ಹಿಡಿದು ನಿಂತರು.

ಇದನ್ನೂ ಓದಿ: Motivational story: ಬಡತನ ತೋರಿಸಲು ಹೋದರೆ ಮಗನಿಗೆ ಕಂಡದ್ದು ಶ್ರೀಮಂತಿಕೆ!

ಹೊರಗೆ ನೋಡುತ್ತಲೇ ಒಮ್ಮೆಲೇ ನರ್ಸನ್ನು ಕೂಗಿ ಕರೆದರು. “ʻʻಏನಿದು? ನನ್ನ ಗೆಳೆಯ ಹೇಳುತ್ತಿದ್ದ.. ಇಲ್ಲಿ ಬೀಚು ಕಾಣುತ್ತದೆ, ಮರ ಕಾಣಿಸುತ್ತದೆ, ಮಕ್ಕಳು ಕಾಣಿಸುತ್ತಾರೆ ಅಂತ. ಇಲ್ಲಿ ನೋಡಿದರೆ ಬರೀ ಗೋಡೆ ಇದೆ. ಬರೀ ಸುಳ್ಳ ಅವನು,” ಅಂತ ಕಿರುಚಿದರು.

ನರ್ಸ್ ಶಾಂತವಾಗಿ ಹೇಳಿದಳು: ಅವರ್ಯಾಕೆ ಸುಳ್ಳು ಹೇಳಿದರೋ ಗೊತ್ತಿಲ್ಲ. ಆದರೆ, ಅವರ ಈ ಮಾತುಗಳಿಂದಾಗಿಯೇ ನೀವು ಇವತ್ತು ಅಸಾಧ್ಯವನ್ನು ಸಾಧಿಸಿದ್ದೀರಿ. ಯಾವ ಕಾರಣಕ್ಕೂ ನೀವು ನಿಮ್ಮ ಕಾಲ ಮೇಲೆ ನಿಲ್ಲುವುದು ಸಾಧ್ಯವಿರಲಿಲ್ಲ. ಆದರೆ, ಅವರ ಮಾತು ನಿಮ್ಮನ್ನು ಈ ಸ್ಥಿತಿಗೆ ತಂದಿದೆ. ಮಾತು ಯಾರನ್ನಾದರೂ ಕೆಡವಬಲ್ಲದು ಸರ್, ಯಾರನ್ನು ಬೇಕಾದರೂ ಎದ್ದು ನಿಲ್ಲಿಸಬಲ್ಲುದು.. ಅಷ್ಟೇ ಸರ್.

ಇದನ್ನೂ ಓದಿ: motivational story: ನಾವಾಡಿದ ಮಾತೇ ನಮಗೆ ತಿರುಗಿ ಕೇಳೋದು ಮಗಾ..!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಭವಿಷ್ಯ

Dina Bhavishya : ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪ; ಈ ರಾಶಿಯವರು ಮೌನವಾಗಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ನವಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಶನಿವಾರವೂ ತುಲಾ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಕನ್ಯಾ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಮಾನಸಿಕವಾಗಿ ನೆಮ್ಮದಿ ಇರಲಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ಖರ್ಚು ಮಾಡುವಿರಿ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪವಾಗಬಹುದು. ವೃಷಭ ರಾಶಿಯವರು ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಅಧಿಕ ರಕ್ತದ ಒತ್ತಡ ಇರುವವರು ಯಾವುದೇ ಕಾರಣಕ್ಕೂ ತಾತ್ಸಾರ ಮಾಡುವುದು ಬೇಡ. ವ್ಯಾಪಾರ ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (15-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ನವಮಿ 26:31 ವಾರ: ಶನಿವಾರ
ನಕ್ಷತ್ರ: ಉತ್ತರ ಪಾಲ್ಗುಣಿ 08:12 ಯೋಗ: ವ್ಯತಿಪಾತ 20:08
ಕರಣ: ಬಾಲವ 13:18 ಅಮೃತ ಕಾಲ: ಬೆಳಗಿನ ಜಾವ 04:28 ರಿಂದ 06:16ರವರೆಗೆ
ದಿನದ ವಿಶೇಷ: ಶ್ರೀರಂಗಪಟ್ಟಣ ರಥೋತ್ಸವ

ಸೂರ್ಯೋದಯ : 05:54   ಸೂರ್ಯಾಸ್ತ : 06:47

ರಾಹುಕಾಲ: ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ
05:54 ರಿಂದ 07:30
ಯಮಗಂಡಕಾಲ: ಮಧ್ಯಾಹ್ನ 01:57
ರಿಂದ 03:34

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಮಾನಸಿಕವಾಗಿ ನೆಮ್ಮದಿ ಇರಲಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ಖರ್ಚು ಮಾಡುವಿರಿ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇದೆ. ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪವಾಗಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಅಧಿಕ ರಕ್ತದ ಒತ್ತಡ ಇರುವವರು ಯಾವುದೇ ಕಾರಣಕ್ಕೂ ತಾತ್ಸಾರ ಮಾಡುವುದು ಬೇಡ. ವ್ಯಾಪಾರ ವ್ಯವಹಾರಗಳಲ್ಲಿ ಲಾಭ ಸಿಗಲಿದೆ. ಆರ್ಥಿಕ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ.
ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಆಧ್ಯಾತ್ಮಿಕ ವಿಚಾರಗಳಿಂದ, ಹಿರಿಯರಿಂದ ಮಾರ್ಗದರ್ಶನ ಪಡೆಯುವಿರಿ. ಇದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಅನಿವಾರ್ಯ ಕಾರಣಗಳಿಂದ ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕಟಕ:ಯಾವುದೇ ಆಪ್ತ ಸಂಬಂಧಿಕರ ಬೆಂಬಲದಿಂದ ನೀವು ನಿಮ್ಮ ವ್ಯಾಪಾರದಲ್ಲಿ ಉತ್ತಮವಾಗಿ ಮಾಡಬಹುದು. ಇದು ನಿಮಗೆ ಆರ್ಥಿಕ ಲಾಭವನ್ನು ನೀಡುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ಸಿಂಹ:ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳಿವೆ. ಅನಾವಶ್ಯಕ ಕಾರಣಗಳಿಂದ ಖರ್ಚು ಇರಲಿದೆ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಉತ್ಸಾಹದ ದಿನವಿದು. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಗತ್ಯ ಖರ್ಚುಗಳ ಮೇಲೆ ನಿಯಂತ್ರಣ ಸಾಧಿಸುವಿರಿ. ಜೀವನದ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಿ, ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಉದ್ಯೋಗದ ಸ್ಥಳದಲ್ಲಿ ಹಿರಿಯ ಅಧಿಕಾರಿಗಳಿಂದ ಹೆಚ್ಚಿನ ಒತ್ತಡ, ಮನೆಯಲ್ಲಿನ ಭಿನ್ನಾಭಿಪ್ರಾಯಗಳು ನಿಮ್ಮ ಏಕಾಗ್ರತೆಗೆ ಧಕ್ಕೆ ತರುವ ಸಾಧ್ಯತೆ ಇದೆ. ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ದೈಹಿಕ ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ :ಆತುರದಲ್ಲಿ ಯಾವುದೇ ತೀರ್ಮಾನಗಳನ್ನು ಕೈಗೊಳ್ಳುವುದು ಬೇಡ, ದಿನದ ಮಟ್ಟಿಗೆ ಯಾವುದೇ ಹೂಡಿಕೆ ವ್ಯವಹಾರದಲ್ಲಿ ತೊಡಗುವುದರಿಂದ ನಷ್ಟವಾಗುವ ಸಾಧ್ಯತೆ ಇದೆ. ಕೆಲವು ರಹಸ್ಯ ಸುದ್ದಿಗಳಿಂದ ನಿಮಗೆ ಅಚ್ಚರಿಯಾಗಬಹುದು. ನಿಮ್ಮ ಅಚ್ಚು ಕಟ್ಟು ಕೆಲಸದಿಂದ ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಆರ್ಥಿಕ ಪ್ರಗತಿ ಸಾಧಾರಣವಾಗಿರುವುದರಿಂದ ಒತ್ತಡ ಇರಲಿದೆ. ಪ್ರಮುಖ ಕೆಲಸ ಕಾರ್ಯಗಳು ನಿಧಾನವಾಗಿ ಸಾಗಲಿದೆ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ ಇದೆ. ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಮಾತುಕತೆಯಲ್ಲಿ ತೊಡಗುವಿರಿ. ಉದ್ಯೋಗಿಗಳಿಗೆ ಶುಭ ಫಲ. ದೈಹಿಕ ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ಅನೇಕ ಕಾರಣಾಂತರಗಳಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿ ಕಂಡರು, ನಿಮ್ಮ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ವ್ಯಾಪಾರದ ಉದ್ದೇಶದಿಂದಾಗಿ ಕೈಕೊಂಡ ಪ್ರವಾಸದಲ್ಲಿ ಯಶಸ್ಸು ಸಿಗಲಿದೆ. ಆರೋಗ್ಯ ಕೊಂಚಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ಮನರಂಜನೆಗಾಗಿ ಸಮಯವನ್ನು ಕಳೆಯುವಿರಿ. ಸೃಜನಶೀಲ ಕಾರ್ಯಗಳಿಂದಾಗಿ ವ್ಯಕ್ತಿತ್ವ ಪ್ರಕಾಶಿಸುವ ಸಾಧ್ಯತೆ ಇದೆ. ನಿಮ್ಮ ಅನುಭವಗಳನ್ನು ಇತರರೊಂದಿಗೆ ಹಂಚಿಕೊಳ್ಳುವಿರಿ. ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಪಡೆಯುವ ಸಾಧ್ಯತೆ ಇದೆ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಮೀನ: ಆಹಾರದ ವ್ಯತ್ಯಾಸದ ಕ್ರಮದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಲಿದೆ ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ಕುರಿತಾಗಿ ಆಲೋಚನೆ ಮಾಡುವಿರಿ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ದೇಶ

India’s Aamras : ಮಾವಿನಹಣ್ಣಿನ ಖಾದ್ಯಗಳ ಟಾಪ್‌ ಟೆನ್‌ ಪಟ್ಟಿಯಲ್ಲಿ ಭಾರತದ ಆಮ್‌ರಸ್‌ ವಿಶ್ವದಲ್ಲೇ ನಂಬರ್‌ ಒನ್!

ಇದು ಮಾವಿನಹಣ್ಣಿನ ಕಾಲ ಎಂಬ ಪ್ರೀತಿಯು ಅದಕ್ಕಾಗಿ ಕಾಯುವಂತೆ ಮಾಡುತ್ತದೆ. ಸೆಖೆಗಾಲದಲ್ಲಿ ಮಾವಿನಹಣ್ಣಿಗಾಗಿ ಕಾಯುವುದು, ಮಾವಿನಹಣ್ಣಿನಲ್ಲಿ ಬಗೆಬಗೆಯ ಭಕ್ಷ್ಯಗಳನ್ನು ತಯಾರಿಸುವುದು, ಇನ್ನೂ ಕೆಲವು ತಿಂಗಳುಗಳಿಗಾಗಿ ಮಾವಿನ ಹಣ್ಣಿನಿಂದ ಕೆಲವೊಂದು ಖಾದ್ಯಗಳನ್ನು ತಯಾರಿಸಿ ಇಡುವುದು ಎಲ್ಲವೂ ಪ್ರತಿ ಮನೆಯಲ್ಲೂ ಸಂಭ್ರಮವೇ. ಇಂತಹ ಪಾಕಪ್ರವೀಣರಾದ ನಮ್ಮ ಹಿರಿಮೆಗೆ ಇನ್ನೊಂದು ಗರಿ (India’s aamras)  ದೊರೆತಿದೆ.

VISTARANEWS.COM


on

Aamras
Koo

ಭಾರತೀಯರಿಗೆ ಮಾವಿನಹಣ್ಣಿನ ಕಾಲ ಎಂದರೆ ಪರ್ವಕಾಲ. ಎಷ್ಟೇ ಸೆಖೆ ಇರಲಿ, ಬೇಸಿಗೆಯ ಬಿಸಿಯಿಂದ ಮೈಯೆಲ್ಲ ಸುಡುತ್ತಿರಲಿ, ಇದು ಮಾವಿನಹಣ್ಣಿನ ಕಾಲ ಎಂಬ ಪ್ರೀತಿಯು ಅದಕ್ಕಾಗಿ ಕಾಯುವಂತೆ ಮಾಡುತ್ತದೆ. ಸೆಖೆಗಾಲದಲ್ಲಿ ಮಾವಿನಹಣ್ಣಿಗಾಗಿ ಕಾಯುವುದು, ಮಾವಿನಹಣ್ಣಿನಲ್ಲಿ ಬಗೆಬಗೆಯ ಭಕ್ಷ್ಯಗಳನ್ನು ತಯಾರಿಸುವುದು, ಇನ್ನೂ ಕೆಲವು ತಿಂಗಳುಗಳಿಗಾಗಿ ಮಾವಿನ ಹಣ್ಣಿನಿಂದ ಕೆಲವೊಂದು ಖಾದ್ಯಗಳನ್ನು ತಯಾರಿಸಿ ಇಡುವುದು ಎಲ್ಲವೂ ಪ್ರತಿ ಮನೆಯಲ್ಲೂ ಸಂಭ್ರಮವೇ. ಭಾರತದಲ್ಲಿ ಹಣ್ಣುಗಳ ರಾಜನಾಗಿ ಮೆರೆಯುವ ಈ ಮಾವಿನಹಣ್ಣು ತನ್ನ ವಿಶೇಷವಾದ ರುಚಿಯಿಂದ ತನ್ನತ್ತ ಪ್ರತಿಯೊಬ್ಬರನ್ನೂ ಸೆಳೆಯುತ್ತದೆ. ಅದರಲ್ಲೂ ನಾವು ಭಾರತೀಯರು ಮಾವಿನಹಣ್ಣಿನ ಬಗೆಬಗೆಯ ಭಕ್ಷ್ಯಗಳನ್ನು ಮಾಡಿ ತಿನ್ನುವುದರಲ್ಲಿ ಸಿದ್ಧಹಸ್ತರು. ಇಂತಹ ಪಾಕಪ್ರವೀಣರಾದ ನಮ್ಮ ಹಿರಿಮೆಗೆ ಇನ್ನೊಂದು ಗರಿ (India’s aamras) ದೊರೆತಿದೆ.

Aamras Or aam ras

ಇದಕ್ಕಿದೆ ಗತಕಾಲದ ಇತಿಹಾಸ

ಮಾವಿನ ಹಣ್ಣಿನ ಆಮ್‌ರಸ್‌ ಎಂಬುದಕ್ಕೆ ಗತಕಾಲದ ಇತಿಹಾಸವಿದೆ. ತಂಪಾದ ಆಮ್‌ರಸ್‌ ಹೆಸರು ಹೇಳಿದರೆ ಸಾಕು ಬಾಯಲ್ಲಿ ನೀರು ಜಿನುಗೀತು. ಇಂತಹ ಆಮ್‌ರಸ್‌ಗೀಗ ಪ್ರಪಂಚದಲ್ಲೇ ನಂಬರ್‌ ವನ್‌ ಸ್ಥಾನ ದೊರೆತಿದೆ.
ಹೌದು. 2024ರ ಜೂನ್‌ ತಿಂಗಳ ಟೇಸ್ಟ್‌ ಅಟ್ಲಾಸ್‌ ಸ್ಪರ್ಧೆಯಲ್ಲಿ ವಿಶ್ವದ ಟಾಪ್‌ 10 ಮಾವಿನ ಹಣ್ಣಿನ ಭಕ್ಷ್ಯಗಳ ಪೈಕಿ ಭಾರತದ ಆಮ್‌ರಸ್‌ಗೆ ಮೊದಲೇ ಸ್ಥಾನ ದೊರೆತಿದೆ.
ಮಹಾರಾಷ್ಟ್ರ ಹಾಗೂ ಗುಜರಾತ್‌ ರಾಜ್ಯಗಳಲ್ಲಿ ಅತ್ಯಂತ ಪ್ರಸಿದ್ಧವಾದ ಆಮ್‌ರಸ್‌ ಎಂಬ ಮಾವಿನಹಣ್ಣಿನ ತಿನಿಸು ಬಹಳ ಸರಳವಾದ ಆರದೆ, ಅಮೋಘ ರುಚಿಯ ಮಾವಿನಹಣ್ಣಿನ ಭಕ್ಷ್ಯ. ಮಾವಿನಹಣ್ಣಿನ ಕಾಲದಲ್ಲಿ ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ಇದನ್ನು ಮಾಡುವ ಜೊತೆಗೆ ಬೆಳಗಿನ ಪೂರಿಯ ಜೊತೆಗೂ ಸೈಡ್‌ ಡಿಶ್‌ ಆಗಿ ತಿನ್ನುತ್ತಾರೆ. ಮಾವಿನ ಹಣ್ಣಿನ ಪಲ್ಪ್‌ ತೆಗೆದು ಅದಕ್ಕೆ ಕೇಸರಿ, ಒಣಶುಠಿ ಪುಡಿ, ಏಲಕ್ಕಿ ಹಾಗೂ ಸಕ್ಕರೆ ಸೇರಿಸಿ ಮಾಡುವ ಸರಳವಾದ ಆಮ್‌ರಸ್‌ ಬಹಳ ರುಚಿಕರ. ಆಲ್ಫೋನ್ಸೋ, ಕೇಸರ್‌ ಮತ್ತಿತರ ಮಾವಿನಹಣ್ಣಿನಲ್ಲಿ ಈ ಆಮ್‌ರಸ್‌ ಮಾಡಿದರೆ ಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಎಂದರೆ ತಪ್ಪಾಗದು. ಅಷ್ಟು ರುಚಿಕರ. ಇಂತಹ ಆಮ್‌ರಸ್‌ ವಿಶ್ವದಲ್ಲೇ ಮೊದಲ ಸ್ಥಾನ ಗಳಿಸಿದ್ದರಲ್ಲಿ ಅಚ್ಚರಿಯೇನಿಲ್ಲ.

Mango Chutney

ಮಾವಿನಕಾಯಿಯ ಚಟ್ನಿಗೂ ಸ್ಥಾನ

ಮಾವಿನಕಾಯಿಯ ಚಟ್ನಿಯೂ ಟೇಸ್ಟ್‌ ಅಟ್ಲಾಸ್‌ನ ಈ ಸ್ಪರ್ಧೆಯಲ್ಲಿ ಐದನೇ ಸ್ಥಾನ ಪಡೆದಿದೆ. ವಿಶ್ವದ ಅತ್ಯಂತ ರುಚಿಕರ ಡಿಪ್‌ಗಳ ಪೈಕಿ ಮಾವಿನಹಣ್ಣಿನ ಚಟ್ನಿ ಐದನೇ ಸ್ಥಾನ ಪಡೆದಿದ್ದು ವಿಶೇಷ. ಮಾವಿನಹಣ್ಣು, ಬೆಳ್ಳುಳ್ಳಿ, ಕೆಂಪು ಮೆಣಸಿನಕಾಯಿ, ಜೀರಿಗೆ, ಕೊತ್ತಂಬರಿ, ಅರಿಶಿನ, ಲವಂಗ, ಚಕ್ಕೆ, ಏಲಕ್ಕಿ, ಸಕ್ಕರೆ ಹಾಗೂ ವಿನೆಗರ್‌ ಸೇರಿಸಿ ಈ ಚಟ್ನಿಯನ್ನು ಮಾಡಲಾಗುತ್ತದೆಯಂತೆ. ಈ ವಿಶೇಷ ಬಗೆಯ ಚಟ್ನಿಗೆ ವಿಶೇಷ ಸ್ಥಾನ ಲಭಿಸಿದೆ.
ಇನ್ನುಳಿದಂತೆ, ಟಾಪ್‌ ಟೆನ್‌ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಥಾಯ್ಲೆಂಡಿನ ಮ್ಯಾಂಗೋ ಸ್ಟಿಕಿ ರೈಸ್‌, ಮೂರನೇ ಸ್ಥಾನದಲ್ಲಿ ಸೋರ್ಬೆಟಿಸ್‌, ನಾಲ್ಕನೇ ಸ್ಥಾನದಲ್ಲಿ ಇಂಡೋನೇಷ್ಯಾದ ರುಜಕ್‌, ಐದನೇ ಸ್ಥಾನದಲ್ಲಿ ಮಾವಿನಹಣ್ಣಿನ ಚಟ್ನಿ ಇವೆ. ನಂತರದ ಸ್ಥಾನಗಳಲ್ಲಿ ಹಾಂಗ್‌ಕಾಂಗ್‌ನ ಮ್ಯಾಂಗೋ ಪೊಮೇಲೋ ಸಾಗೋ, ಚೈನಾದ ಮಂಗುವೋ ಬುಡಿಂಗ್‌, ಇಂಡೋನೇಷ್ಯಾದ ರುಜಕ್‌ ಸಿಂಗುರ್, ಚೈನಾದ ಬಾವೋಬಿಂಗ್‌, ಥಾಯ್ಲೆಂಡಿನ ಮಾಮುಂಗ್‌ ನಾಮ್‌ ಪ್ಲಾವಾನ್‌ ಟಾಪ್‌ ಟೆನ್‌ ಪಟ್ಟಿಯಲ್ಲಿ ಸ್ಥಾನ ಗಳಿಸಿವೆ. ಮಾವಿನಹಣ್ಣಿನ ವಿಶೇಷಚವಾದ ಚಟ್ನಿಯೂ ಕೂಡಾ ಈ ಪಟ್ಟುಯಲ್ಲಿ ಐದನೇ ಸ್ಥಾನ ಗಳಿಸಿರುವುದು ವಿಶೇಷ.

Continue Reading

ಕ್ರಿಕೆಟ್

T20 World Cup 2024: ಟಿ-20 ವಿಶ್ವಕಪ್‌ನಿಂದ ಪಾಕಿಸ್ತಾನ ಔಟ್;‌ ಸೂಪರ್‌ 8ಕ್ಕೆ ಲಗ್ಗೆ ಇಟ್ಟ ಅಮೆರಿಕ

T20 World Cup 2024: ಅಮೆರಿಕದ ಲೌಡರ್‌ಹಿಲ್‌ನಲ್ಲಿ ಶುಕ್ರವಾರ (ಜೂನ್‌ 14) ಯುಎಸ್‌ಎ ಹಾಗೂ ಐರ್ಲೆಂಡ್‌ ನಡುವೆ ಮಹತ್ವದ ಪಂದ್ಯ ನಡೆಯಬೇಕಿತ್ತು. ಆದರೆ, ಮಳೆಯಿಂದಾಗಿ ಅಮೆರಿಕ ಹಾಗೂ ಐರ್ಲೆಂಡ್‌ ನಡುವಿನ ಪಂದ್ಯವನ್ನು ರದ್ದುಗೊಳಿಸಲಾಯಿತು. ಹಾಗಾಗಿ, ಅಮೆರಿಕ ತಂಡವು 5 ಅಂಕಗಳೊಂದಿಗೆ ಸೂಪರ್‌ 8ಕ್ಕೆ ಪ್ರವೇಶ ಪಡೆಯಿತು. ಭಾನುವಾರ ಪಾಕಿಸ್ತಾನವು ಐರ್ಲೆಂಡ್‌ ವಿರುದ್ಧ ಆಡಲಿದ್ದು, ಗೆದ್ದರೂ 4 ಅಂಕಗಳೊಂದಿಗೆ ವಿಮಾನ ಹತ್ತಬೇಕಿದೆ.

VISTARANEWS.COM


on

T20 World Cup 2024
Koo

ವಾಷಿಂಗ್ಟನ್‌: ಉತ್ತಮ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗವನ್ನು ಹೊಂದಿದ್ದರೂ ಸಂಘಟಿತ ಪ್ರದರ್ಶನ ನೀಡುವಲ್ಲಿ ವಿಫಲವಾಗುವ ಜತೆಗೆ ಅದೃಷ್ಟದಾಟದಲ್ಲೂ ಹಿನ್ನಡೆ ಅನುಭವಿಸಿದ ಪಾಕಿಸ್ತಾನ ಕ್ರಿಕೆಟ್‌ ತಂಡವು (Pakistan Cricket Team) ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್‌ ಟೂರ್ನಿಯಿಂದಲೇ (T20 World Cup 2024) ಹೊರಬಿದ್ದಿದೆ. ಸೂಪರ್‌ 8ರ ರೇಸ್‌ನಲ್ಲಿ ಹಿನ್ನಡೆ ಅನುಭವಿಸಿದ ಬಾಬರ್‌ ಅಜಂ (Babar Azam) ನೇತೃತ್ವದ ತಂಡವು ಟೂರ್ನಿಯಿಂದ ಹೊರಬಿದ್ದಿದ್ದು, ಪಾಕ್‌ ಕ್ರಿಕೆಟ್‌ ಅಭಿಮಾನಿಗಳು ತಂಡದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಅಮೆರಿಕದ ಲೌಡರ್‌ಹಿಲ್‌ನಲ್ಲಿ ಶುಕ್ರವಾರ (ಜೂನ್‌ 14) ಯುಎಸ್‌ಎ ಹಾಗೂ ಐರ್ಲೆಂಡ್‌ ನಡುವೆ ಮಹತ್ವದ ಪಂದ್ಯ ನಡೆಯಬೇಕಿತ್ತು. ಆದರೆ, ಮಳೆಯಿಂದಾಗಿ ಅಮೆರಿಕ ಹಾಗೂ ಐರ್ಲೆಂಡ್‌ ನಡುವಿನ ಪಂದ್ಯವನ್ನು ರದ್ದುಗೊಳಿಸಲಾಯಿತು. ಇದರಿಂದಾಗಿ ಎರಡೂ ತಂಡಗಳು ತಲಾ ಒಂದು ಪಾಯಿಂಟ್‌ ಸಂಪಾದಿಸಿದವು. ಇದರೊಂದಿಗೆ ಒಟ್ಟು 5 ಅಂಕ ಗಳಿಸಿದ ಅಮೆರಿಕ ತಂಡವು ಸೂಪರ್‌ 8ಕ್ಕೆ ಲಗ್ಗೆ ಇಟ್ಟಿತು. ಮೊದಲ ಬಾರಿಗೆ ಟಿ-20 ವಿಶ್ವಕಪ್‌ನಲ್ಲಿ ಆಡುತ್ತಿರುವ ಅಮೆರಿಕ ತಂಡವು ಮೊದಲ ಪ್ರಯತ್ನದಲ್ಲಿಯೇ ಸೂಪರ್‌ 8 ಪ್ರವೇಶಿಸಿದೆ.

ಮೂರು ಪಂದ್ಯಗಳನ್ನು ಆಡಿರುವ ಪಾಕಿಸ್ತಾನವು ಅಮೆರಿಕ ಹಾಗೂ ಭಾರತದ ವಿರುದ್ಧ ಹೀನಾಯವಾಗಿ ಸೋಲನುಭವಿಸಿದೆ. ಕೆನಡಾ ವಿರುದ್ಧ ಮಾತ್ರ ಗೆದ್ದಿರುವ ಕಾರಣ 2 ಪಾಯಿಂಟ್‌ಗಳನ್ನು ಪಡೆದಿದೆ. ಇನ್ನು, ನಾಲ್ಕು ಪಾಯಿಂಟ್ ಹೊಂದಿದ್ದ ಅಮೆರಿಕ ತಂಡವು ಐರ್ಲೆಂಡ್‌ ವಿರುದ್ಧ ಸೋತು, ಜೂನ್‌ 16ರಂದು ಐರ್ಲೆಂಡ್‌ ವಿರುದ್ಧ ನಡೆಯುವ ಪಂದ್ಯದಲ್ಲಿ ಬಾಬರ್‌ ಅಜಂ ಬಳಗ ಗೆದ್ದರೆ ಮಾತ್ರ ಸೂಪರ್‌ 8ಕ್ಕೆ ಅರ್ಹತೆ ಪಡೆಯುತ್ತಿತ್ತು. ಆದರೆ, ಅಮೆರಿಕ ಹಾಗೂ ಐರ್ಲೆಂಡ್‌ ನಡುವಿನ ಪಂದ್ಯವು ಮಳೆಯಿಂದ ರದ್ದಾದ ಕಾರಣ ಅಮೆರಿಕದ ಅಂಕಗಳು 5ಕ್ಕೆ ಏರಿಕೆಯಾದವು. ಇದರಿಂದಾಗಿ ಐರ್ಲೆಂಡ್‌ ವಿರುದ್ಧ ಪಾಕ್‌ ಗೆದ್ದರೂ ಯಾವುದೇ ಉಪಯೋಗವಿಲ್ಲದಂತಾಗಿದೆ.

2023ರ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಪಾಕಿಸ್ತಾನವು ಸೆಮಿಫೈನಲ್‌ ಕೂಡ ತಲುಪಿರಲಿಲ್ಲ. ಇನ್ನು, 2009ರ ಟಿ-20 ವಿಶ್ವಕಪ್‌ ಚಾಂಪಿಯನ್‌ ಆಗಿರುವ ಪಾಕಿಸ್ತಾನವು 2022ರ ಟಿ-20 ವಿಶ್ವಕಪ್‌ನಲ್ಲಿ ಫೈನಲ್‌ ತಲುಪಿ, ರನ್ನರ್‌ ಅಪ್‌ ಆಗಿತ್ತು. ಆದರೆ, ಪ್ರಸಕ್ತ ಟೂರ್ನಿಯಲ್ಲಿ ಗ್ರೂಪ್‌ ಹಂತದಲ್ಲಿಯೇ ಮನೆಯ ದಾರಿ ಹಿಡಿದಿದೆ. 2007ರಿಂದಲೂ ಟಿ-20 ವಿಶ್ವಕಪ್‌ ಟೂರ್ನಿಗಳಲ್ಲಿ ಪಾಕಿಸ್ತಾನವು ಒಮ್ಮೆಯೂ ಗ್ರೂಪ್‌ ಹಂತದಲ್ಲಿಯೇ ಹೊರಬಿದ್ದಿರಲಿಲ್ಲ. ಆದರೆ, ಪ್ರಸಕ್ತ ಟೂರ್ನಿಯಲ್ಲಿ ಹೊರಬೀಳುವ ಮೂಲಕ ಅಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗದೆ.

ಆಡಿರುವ ಮೂರೂ ಪಂದ್ಯಗಳನ್ನು ಗೆದ್ದಿರುವ ಭಾರತ ತಂಡವು ಅಗ್ರಸ್ಥಾನಿಯಾಗಿ ಸೂಪರ್‌ 8ಕ್ಕೆ ಪ್ರವೇಶ ಪಡೆದಿದೆ. ಶನಿವಾರ ಕೆನಡಾ ವಿರುದ್ಧ ಔಪಚಾರಿಕ ಪಂದ್ಯವನ್ನಷ್ಟೇ ಆಡಲಿದೆ. ಜೂನ್‌ 19ರಿಂದ ಸೂಪರ್‌ 8 ಪಂದ್ಯಗಳು ಆರಂಭವಾಗಲಿವೆ. ಸೂಪರ್‌ 8 ಪಂದ್ಯಗಳು ವೆಸ್ಟ್‌ ಇಂಡೀಸ್‌ನಲ್ಲಿ ನಡೆಯಲಿವೆ.

ಇದನ್ನೂ ಓದಿ: T20 World Cup Viral Video: ಪಾಕ್​ ತಂಡದ ವೇಗಿಗೆ ತವರಿನ ಅಭಿಮಾನಿಗಳಿಂದಲೇ ಗೇಲಿ

Continue Reading

ದೇಶ

ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಗೈದು ಕೊಂದ ಟ್ರಕ್‌ ಡ್ರೈವರ್;‌ ಭೀಕರ ವಿಡಿಯೊ ಇಲ್ಲಿದೆ

ಬಾಲಕಿಯು ತಾಯಿ ಜತೆ ರೈಸ್‌ ಮಿಲ್‌ ಒಂದರ ಬಳಿ ಮಲಗಿದ್ದರು. ಬಾಲಕಿಯ ತಾಯಿಯು ರೈಸ್‌ಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದು, ಎಲ್ಲ ಕಾರ್ಮಿಕರು ಮಿಲ್‌ ಬಳಿಯೇ ಮಲಗಿದ್ದರು. ಇದೇ ವೇಳೆ, ಕಾಮುಕ ಟ್ರಕ್‌ ಚಾಲಕನು ಯಾರಿಗೂ ಎಚ್ಚರವಾಗದಂತೆ ಬಾಲಕಿಯನ್ನು ಹೊತ್ತುಕೊಂಡು ಹೋಗಿದ್ದಾನೆ. ನಿರ್ಜನ ಪ್ರದೇಶದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆತ, ಕೃತ್ಯ ಬಯಲಾಗುವ ಭಯದಲ್ಲಿ ಆಕೆಯನ್ನು ಕೊಂದಿದ್ದಾನೆ ಎಂದು ತಿಳಿದುಬಂದಿದೆ.

VISTARANEWS.COM


on

Truck Driver
ಮಲಗಿದ್ದ ಬಾಲಕಿಯನ್ನು ಹೊತ್ತೊಯ್ಯುತ್ತಿರುವ ಕಟುಕ ಡ್ರೈವರ್.
Koo

ಹೈದರಾಬಾದ್:‌ ತೆಲಂಗಾಣದಲ್ಲಿ ಟ್ರಕ್‌ ಚಾಲಕನೊಬ್ಬ 6 ವರ್ಷದ ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಅತ್ಯಾಚಾರ ಎಸಗಿ, ಭೀಕರವಾಗಿ ಕೊಲೆ ಮಾಡಿದ್ದಾನೆ. ತೆಲಂಗಾಣದ (Telangana) ಪೆದ್ದಪಲ್ಲಿ ಜಿಲ್ಲೆಯಲ್ಲಿ ಗುರುವಾರ (ಜೂನ್‌ 13) ರಾತ್ರಿ ಭೀಕರ ಕೃತ್ಯ ನಡೆದಿದೆ. ಕಂದಮ್ಮನನ್ನು ಅಪಹರಿಸಿ, ಅತ್ಯಾಚಾರ ಎಸಗಿದ್ದಲ್ಲದೆ, ಆಕೆಯನ್ನು ಕೊಂದು ನಿರ್ಜನ ಪ್ರದೇಶದಲ್ಲಿ ಎಸೆದ ದುರುಳನನ್ನು ಬಲರಾಮ್‌ ಎಂದು ಗುರುತಿಸಲಾಗಿದೆ. ಈತನು ಉತ್ತರ ಪ್ರದೇಶದವನಾಗಿದ್ದು, ಟ್ರಕ್‌ ಚಾಲಕನಾಗಿ (Truck Driver) ಕೆಲಸ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ.

ಬಾಲಕಿಯು ತಾಯಿ ಜತೆ ರೈಸ್‌ ಮಿಲ್‌ ಒಂದರ ಬಳಿ ಮಲಗಿದ್ದರು. ಬಾಲಕಿಯ ತಾಯಿಯು ರೈಸ್‌ಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದು, ಎಲ್ಲ ಕಾರ್ಮಿಕರು ಮಿಲ್‌ ಬಳಿಯೇ ಮಲಗಿದ್ದರು. ಇದೇ ವೇಳೆ, ಕಾಮುಕ ಟ್ರಕ್‌ ಚಾಲಕನು ಯಾರಿಗೂ ಎಚ್ಚರವಾಗದಂತೆ ಬಾಲಕಿಯನ್ನು ಹೊತ್ತುಕೊಂಡು ಹೋಗಿದ್ದಾನೆ. ಬಾಲಕಿ ಕೂಡ ನಿದ್ದೆಯಲ್ಲಿದ್ದ ಕಾರಣ ಆಕೆ ಕಿರುಚಾಡಿಲ್ಲ. ಮೆಲ್ಲಗೆ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಹೊತ್ತುಕೊಂಡು ಹೋದ ಆತ ಅತ್ಯಾಚಾರ ಎಸಗಿದ್ದಾನೆ. ಇದಾದ ಬಳಿಕ ಬಾಲಕಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ.

ಮಧ್ಯರಾತ್ರಿ ಬಾಲಕಿಯ ತಾಯಿಗೆ ಎಚ್ಚರವಾಗಿದೆ. ಪಕ್ಕದಲ್ಲಿ ಮಲಗಿದ್ದ ಮಗಳು ಕಾಣಿಸದಿದ್ದಾಗ ಎಲ್ಲ ಕಾರ್ಮಿಕರನ್ನು ಎಬ್ಬಿಸಿದ್ದಾರೆ. ಕೂಡಲೇ ಎಲ್ಲ ಕಾರ್ಮಿಕರು ತಡ ರಾತ್ರಿಯೇ ಬಾಲಕಿಗಾಗಿ ಶೋಧ ನಡೆಸಿದ್ದಾರೆ. ಆಗ ನಿರ್ಜನ ಪ್ರದೇಶದಲ್ಲಿ ಬಾಲಕಿಯ ಶವ ಪತ್ತೆಯಾಗಿದೆ. ಇನ್ನಷ್ಟು ಕಾರ್ಮಿಕರು ಜತೆಗೂಡಿ ರಾತ್ರಿ ದುಷ್ಟನ ಶೋಧಕ್ಕಾಗಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ಆಗ ಟ್ರಕ್‌ ಚಾಲಕನು ಕಾರ್ಮಿಕರ ಕೈಗೆ ಸಿಕ್ಕಿದ್ದಾನೆ. ಆತನಿಗೆ ಧರ್ಮದೇಟು ಕೊಟ್ಟ ಕಾರ್ಮಿಕರು, ಮನಸೋಇಚ್ಛೆ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಬಲರಾಮ್‌ ಬಾಲಕಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಲರಾಮ್‌ನನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಕೆಲ ದಿನಗಳ ಹಿಂದಷ್ಟೇ ಮಧ್ಯಪ್ರದೇಶದಲ್ಲಿ 21ವರ್ಷದ ಯುವಕನೊಬ್ಬ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸೆದು, ಕೊಲೆ ಮಾಡಿದ್ದ. ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಗೌರವ್‌ ಅಲಿಯಾಸ್‌ ಕುಶಾಲ್‌ ಎಂಬ ಯುವಕ ಪುಟ್ಟ ಬಾಲಕಿಯ ಮೇಲೆ ಕ್ರೌರ್ಯ ಮೆರೆದಿದ್ದ. ಬಳಿಕ ಉಸಿರುಗಟ್ಟಿಸಿ ಕೊಂದಿದ್ದ. ಇದಕ್ಕೂ ಮುನ್ನ ಗೌರವ್‌ ತನ್ನ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ನೋಡಿದ್ದ. ಅದನ್ನು ನೋಡಿದ ನಂತರ ಆತನಿಗೆ ತನ್ನ ಮೇಲೆ ನಿಯಂತ್ರಣ ಇಲ್ಲದಂತಾಗಿತ್ತು. ಹೀಗಾಗಿ ಅವನು ಮನೆಯ ಹೊರಗೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ನಂತರ ತನ್ನ ಕೃತ್ಯ ಎಲ್ಲಿ ಬಯಲಾಗುತ್ತದೋ ಎಂಬ ಭಯದಲ್ಲಿ ಬಾಲಕಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದರು.

ಇದನ್ನೂ ಓದಿ: Rape Case: 14 ವರ್ಷದ ಬಾಲಕಿಯನ್ನು ಮನೆಗೆ ಕರೆದೊಯ್ದ ಪ್ರೇಮಿ; 6 ಸ್ನೇಹಿತರಿಂದ ಅತ್ಯಾಚಾರ

Continue Reading
Advertisement
Aamras
ದೇಶ3 mins ago

India’s Aamras : ಮಾವಿನಹಣ್ಣಿನ ಖಾದ್ಯಗಳ ಟಾಪ್‌ ಟೆನ್‌ ಪಟ್ಟಿಯಲ್ಲಿ ಭಾರತದ ಆಮ್‌ರಸ್‌ ವಿಶ್ವದಲ್ಲೇ ನಂಬರ್‌ ಒನ್!

International Yoga Day 2024
ಆರೋಗ್ಯ3 mins ago

International Yoga Day 2024: ಧ್ಯಾನ ಎಂದರೇನು? ಇದರಿಂದ ಏನೇನು ಪ್ರಯೋಜನ?

Dina Bhavishya
ಭವಿಷ್ಯ3 mins ago

Dina Bhavishya : ದಿನದ ಕೊನೆಯಲ್ಲಿ ಸಂಗಾತಿಯೊಂದಿಗೆ ಮನಸ್ತಾಪ; ಈ ರಾಶಿಯವರು ಮೌನವಾಗಿರಿ

T20 World Cup 2024
ಕ್ರಿಕೆಟ್5 hours ago

T20 World Cup 2024: ಟಿ-20 ವಿಶ್ವಕಪ್‌ನಿಂದ ಪಾಕಿಸ್ತಾನ ಔಟ್;‌ ಸೂಪರ್‌ 8ಕ್ಕೆ ಲಗ್ಗೆ ಇಟ್ಟ ಅಮೆರಿಕ

Toyota Technical Education Programme started at Bareilly Government Polytechnic by TKM
ದೇಶ6 hours ago

Toyota Kirloskar Motor: ಟೊಯೊಟಾ ತಾಂತ್ರಿಕ ಶಿಕ್ಷಣ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ

Truck Driver
ದೇಶ7 hours ago

ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಗೈದು ಕೊಂದ ಟ್ರಕ್‌ ಡ್ರೈವರ್;‌ ಭೀಕರ ವಿಡಿಯೊ ಇಲ್ಲಿದೆ

Do not split BBMP says Karave State President TA Narayana Gowda
ಕರ್ನಾಟಕ8 hours ago

BBMP: ಬಿಬಿಎಂಪಿ ವಿಭಜನೆ ಬೇಡ; ಇದು ಕನ್ನಡಿಗರಿಗೆ ಮಾರಕ: ನಾರಾಯಣ ಗೌಡ

ಕರ್ನಾಟಕ8 hours ago

Congress Guarantee: ಗ್ಯಾರಂಟಿ ಯೋಜನೆ ನಿಲ್ಲಲ್ಲ ನಿಲ್ಲಲ್ಲ ನಿಲ್ಲಲ್ಲ ಎಂದ ಸಿದ್ದರಾಮಯ್ಯ

Arundhati Roy
ದೇಶ8 hours ago

Arundhati Roy: ‘ಕಾಶ್ಮೀರ ಭಾರತದ್ದಲ್ಲ’ ಎಂದಿದ್ದ ಅರುಂಧತಿ ರಾಯ್‌ ವಿರುದ್ಧ ಉಗ್ರರ ನಿಗ್ರಹ ಕಾಯ್ದೆ ಅಡಿ ಕ್ರಮ!

Sunny Leone
ಸಿನಿಮಾ9 hours ago

Sunny Leone: ಸನ್ನಿ ಲಿಯೋನ್ ಬೇಕೇಬೇಕೆಂದು ವಿದ್ಯಾರ್ಥಿಗಳ ಪಟ್ಟು; ಕೇರಳ ವಿವಿಗೆ ಇಕ್ಕಟ್ಟು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ11 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು12 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು13 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ13 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌