Motivational story | ಅಪ್ಪ-ಅಮ್ಮ ಏನೂ ಮಾಡ್ಲಿಲ್ಲ ಅಂತಿದ್ದ ಅವನಿಗೆ ಪೆನ್ನು ಮಾರುವ ಹುಡುಗ ಕಲಿಸಿದ ಚಂದದ ಪಾಠ - Vistara News

ಪ್ರಮುಖ ಸುದ್ದಿ

Motivational story | ಅಪ್ಪ-ಅಮ್ಮ ಏನೂ ಮಾಡ್ಲಿಲ್ಲ ಅಂತಿದ್ದ ಅವನಿಗೆ ಪೆನ್ನು ಮಾರುವ ಹುಡುಗ ಕಲಿಸಿದ ಚಂದದ ಪಾಠ

Motivational story : ಅಪ್ಪ-ಅಮ್ಮ ನಮಗೆ ಏನೂ ಕೊಟ್ಟಿಲ್ಲ ಅಂತ ಹೇಳುವುದು ಸುಲಭ. ಆದರೆ, ನಾವೇನು ಕೊಡುತ್ತಿದ್ದೇವೆ ಎಂದು ಯೋಚಿಸಿದಾಗಲಷ್ಟೇ ನಮ್ಮ ನಿಜ ಬಣ್ಣ ತಿಳಿಯುವುದು. ಇಲ್ಲಿದೆ ಒಂದು ಪೆನ್ನು ಮಾರುವ ಹುಡುಗ ಮನೆಗೆ ಆಸರೆಯಾದ ಕಥೆ.

VISTARANEWS.COM


on

boy selling pen
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೃಷ್ಣ ಭಟ್‌ ಅಳದಂಗಡಿ- motivational stroy
ವಿಶ್ವನಾಥನ ತಂದೆ ಸಣ್ಣ ಊರಲ್ಲಿ ಒಂದು ವೆಲ್ಡಿಂಗ್ ಶಾಪ್ ಇಟ್ಟುಕೊಂಡಿದ್ದರು. 30 ವರ್ಷದ ಹಿಂದೆಲ್ಲ ವೆಲ್ಡಿಂಗ್ ಶಾಪ್‍ಗಳಿಗೆಲ್ಲ ಅಷ್ಟೊಂದು ಡಿಮ್ಯಾಂಡ್ ಇರಲಿಲ್ಲ. ದಿನಕ್ಕೆ ಹನ್ನೆರಡು ಗಂಟೆ ದುಡಿದರೂ ಸಂಸಾರ ಸಾಗಿಸುವಷ್ಟಕ್ಕೆ ಸಾಕಾಗುತ್ತಿತ್ತು.

ವಿಶ್ವನಾಥ್‍ಗೆ ತಾನು ಕಲಿತು ಡಾಕ್ಟರ್ ಆಗಬೇಕು ಎಂಬ ಆಸೆ ಇತ್ತು. ಆದರೆ, ಅವನಿಗೆ ಅಷ್ಟೇನೂ ದೊಡ್ಡ ಮಾರ್ಕ್ಸ್ ಬರುತ್ತಿರಲಿಲ್ಲ. ಹೀಗಾಗಿ ಡಾಕ್ಟರ್ ಕಲಿಯಲು ಸೀಟು ಸಿಗಲಿಲ್ಲ. ದೊಡ್ಡ ಮೊತ್ತದ ಡೊನೇಷನ್ ಕೊಟ್ಟು ಸೀಟು ಪಡೆಯುವಷ್ಟು ಅವನ ಅಪ್ಪನಲ್ಲಿ ಹಣವಿರಲಿಲ್ಲ. ಹೀಗಾಗಿ ಅವರು ಪದವಿಯನ್ನು ಸೇರಿಕೊಂಡ. ವಿದ್ಯಾಭ್ಯಾಸ ಮುಗಿದು ಒಂದು ಕಂಪನಿಯಲ್ಲಿ ಕೆಲಸ ಸಿಕ್ಕಿತು.

ಈ ಮಧ್ಯೆ ಹೆತ್ತವರು ಒಂದು ಹೆಣ್ಣು ಹುಡುಕಿ ವಿಶ್ವನಾಥನಿಗೆ ಮದುವೆ ಮಾಡಿದರು. ಇಬ್ಬರು ಪುಟ್ಟ ಗಂಡು ಮಕ್ಕಳಾದವು. ಅಪ್ಪ ಇನ್ನೂ ವೆಲ್ಡಿಂಗ್ ಶಾಪ್ ನಡೆಸುತ್ತಿರುವಾಗಲೇ ವಿಶ್ವನಾಥನ ಸಂಬಳವೂ ಹೆಚ್ಚಾಗಿ ಒಂದಿಷ್ಟು ಆರಾಮದಾಯಕ ಜೀವನಕ್ಕೆಕಾಲಿಟ್ಟ. ಆದರೆ ಯಾವಾಗ ಮಕ್ಕಳ ವಿದ್ಯಾಭ್ಯಾಸವೆಲ್ಲ ಆರಂಭವಾಯಿತೋ ಆಗ ಕೈಕಟ್ಟಲು ಆರಂಭವಾಯಿತು. ಸಂಬಳವನ್ನೆಲ್ಲ ನಿತ್ಯದ ಐಷಾರಾಮಿ ಜೀವನಕ್ಕೆ ಖರ್ಚು ಮಾಡಿದ್ದರಿಂದ ಉಳಿತಾಯವೇನೂ ಇರಲಿಲ್ಲ.

ಅಷ್ಟು ಹೊತ್ತಿಗೆ ಅಪ್ಪನಿಗೆ ವಯಸ್ಸಾಗಿತ್ತು. ವೆಲ್ಡಿಂಗ್ ಕೆಲಸ ಮಾಡುವ ಶಕ್ತಿ ಕಡಿಮೆಯಾಗಿತ್ತು. ಜತೆಗೆ ಅನಾರೋಗ್ಯ ಬೇರೆ. ಚಿಕಿತ್ಸೆಗಾಗಿ ಸ್ವಲ್ಪ ಹಣ ಕೊಡಬಹುದಾ ಮಗಾ ಎಂದು ವಿಶ್ವನಾಥನನ್ನು ಕೇಳಿದರು.

ಆದರೆ, ಈ ಮಾತು ಕೇಳಿ ಮೊದಲೇ ಹಣಕಾಸು ಮುಗ್ಗಟ್ಟಿನಲ್ಲಿದ್ದ ವಿಶ್ವನಾಥನಿಗೆ ಸಿಟ್ಟುಬಂತು. `ʻʻನೀವು ನನಗೆ ಸರಿಯಾದ ಶಿಕ್ಷಣ ಕೊಡಿಸಲಿಲ್ಲ. ದೊಡ್ಡ ಶಾಲೆಗೆ ಸೇರಿಸಲಿಲ್ಲ. ನನಗೆ ಸಾಧಾರಣ ಮಾರ್ಕ್ಸ್ ಬರುತ್ತಿದ್ದರೂ ಒಂದು ಟ್ಯೂಷನ್ ಕೊಡಿಸಲಿಲ್ಲ. ಹಾಗೆಲ್ಲ ಮಾಡಿದ್ದರೆ ನನಗೆ ಲಕ್ಷಾಂತರ ರೂ. ಸಂಬಳದ ಉದ್ಯೋಗ ಸಿಗುತ್ತಿತ್ತು. ಈಗ ನಾನೇ ಮುಗ್ಗಟ್ಟಿನಲ್ಲಿದ್ದೇನೆ, ನಿಮಗೆ ಎಲ್ಲಿಂದ ಕೊಡಲಿ. ಸ್ವಲ್ಪ ಜಾಗ ಮಾರಿ ನೀವೇ ನನಗೆ ಈಗ ಹಣ ಕೊಡಬೇಕು” ಎಂದು ಹೇಳಿದ.

ವಿಶ್ವನಾಥನ ಅಪ್ಪ-ಅಮ್ಮನಿಗೆ ಮಾತೇ ಬರಲಿಲ್ಲ. ಮಗ ಬೆಳೆದು ನಿಂತು ಆಸರೆಯಾಗುತ್ತಾನೆ ಎಂಬ ಆಸೆ ಕಮರಿ ಹೋಗಿತ್ತು.

ಇದಾಗಿ ಕೆಲವು ದಿನ ಕಳೆದಿತ್ತು. ವಿಶ್ವನಾಥ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ಸುಮಾರು ಹತ್ತು ವರ್ಷದ ಬಾಲಕನೊಬ್ಬ ಮಾರ್ಗದ ಬದಿಯಲ್ಲಿ ನಿಂತು ಪೆನ್ನುಗಳನ್ನು ಮಾರಾಟ ಮಾಡುತ್ತಿದ್ದ. ವಿಶ್ವನಾಥನ ಬಳಿಗೆ ಬಂದು ʻʻಪೆನ್ನು ತಗೊಳ್ಳಿ ಸರ್ʼʼ ಎಂದ. ಆಗ ವಿಶ್ವನಾಥ `ʻಶಾಲೆಗೆ ಹೋಗಲ್ವಾ ನೀನು? ಈ ವಯಸ್ಸಲ್ಲಿ ಕೆಲಸ ಮಾಡೋದು ತಪ್ಪು. ನಿನ್ನ ಅಪ್ಪ-ಅಮ್ಮ ಏನು ಮಾಡ್ತಾರೆ’ ಎಂದು ಕೇಳಿದ.

ಹುಡುಗ ಹೇಳಿದ: ನನ್ನ ತಂದೆಗೆ ಒಂದು ವರ್ಷದ ಹಿಂದೆ ಒಂದು ಅಪಘಾತ ಆಯಿತು. ಅದರಲ್ಲಿ ಅವರ ಒಂದು ಕೈಯೇ ಕತ್ತರಿಸಿಹೋಯ್ತು. ಅವರಿಗೆ ಕೆಲಸ ಮಾಡಲು ಆಗುವುದಿಲ್ಲ. ನನ್ನ ಅಮ್ಮ ಕೆಲವು ಮನೆಗಳಲ್ಲಿ ಕಸಮುಸುರೆ ಮಾಡ್ತಾರೆ. ನಾನು ಶಾಲೆ ಮುಗಿಸಿ ಸಂಜೆ ಐದರಿಂದ ಎಂಟು ಗಂಟೆವರೆಗೆ ಪೆನ್ನು, ಗೊಂಬೆಗಳನ್ನು ಮಾರಾಟ ಮಾಡ್ತೇನೆ. ರಾತ್ರಿ ಹೋಗಿ ಓದ್ತೇನೆ- ಅಂದ.

ವಿಶ್ವನಾಥನಿಗೆ ನಾಚಿಕೆ ಆಯಿತು. ತಾನು ಬೆಳೆದು ಇಷ್ಟು ದೊಡ್ಡವನಾದರೂ ಅಪ್ಪ-ಅಮ್ಮನಿಗೆ ಆಸರೆಯಾಗಿ ನಿಲ್ಲಲಿಲ್ಲ. ಇಷ್ಟು ಸಣ್ಣ ಹುಡುಗ ಕಲಿಕೆಯ ಜತೆಗೆ ಕೆಲಸ ಮಾಡ್ತಾ ಸಹಾಯ ಮಾಡ್ತಾ ಇದ್ದಾನೆ. ನಾನು ಇನ್ನು ಕೂಡಾ ನನಗೆ ಸರಿಯಾದ ವಿದ್ಯಾಭ್ಯಾಸ ಕೊಡಿಸಲಿಲ್ಲ ಎಂದು ದೂರುತ್ತಲೇ ಕಳೆದುಹೋಗುತ್ತಿದ್ದೇನೆ ಎಂದು ಭಾವಿಸಿ ನೊಂದುಕೊಂಡ. ಹುಡುಗನ ಕೈಯಿಂದ ಕೆಲವು ಪೆನ್ನು ಖರೀದಿಸಿ ಮಕ್ಕಳಿಗೆ ಕೊಟ್ಟ. ʻʻನಾಳೆನೇ ಊರಿಗೆ ಹೋಗೋಣ್ವಾ.. ಅಪ್ಪ-ಅಮ್ಮನನ್ನು ನೋಡಬೇಕು ಅನಿಸ್ತಾ ಇದೆʼʼ ಅಂತ ಹೆಂಡತಿಗೆ ಹೇಳಿದ.

ಇದನ್ನೂ ಓದಿ | Motivational story | ಸಂಭ್ರಮಿಸಲು ಸಾಧ್ಯವಾಗದ್ದು ಸಾಧನೆಯೇ ಅಂತ ಅನಿಸೋ ಹೊತ್ತಿಗೆ ಎಲ್ಲವೂ ಮುಗಿದಿತ್ತು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Gunfire On School: ಶಾಲೆಯೊಳಗೆ ಗನ್‌ ತಂದು 10 ವರ್ಷದ ಹುಡುಗನಿಗೆ ಗುಂಡು ಹಾರಿಸಿದ 5 ವರ್ಷದ ಬಾಲಕ!

Gunfire On School: ಶಾಲೆಗ ಹೋಗುವ ಮಕ್ಕಳ ಬ್ಯಾಗ್‌ನಲ್ಲಿ ಈಗ ಪುಸ್ತಕದ ಬದಲು ಗನ್ ಕುಳಿತು ಬಿಟ್ಟಿದೆ.ನರ್ಸರಿ ವಿದ್ಯಾರ್ಥಿಯಾಗಿರುವ ಆರೋಪಿ ಬಾಲಕ ತನ್ನ ಸ್ಕೂಲ್ ಬ್ಯಾಗ್‌ನಲ್ಲಿ ಬಂದೂಕನ್ನು ಅಡಗಿಸಿಕೊಂಡು ಶಾಲೆಗೆ ಹೋಗಿದ್ದ. ಶಾಲೆಗೆ ಬಂದ ಕೂಡಲೇ ಆತ ತನ್ನ ಬ್ಯಾಗ್‌ನಿದ ಬಂದೂಕು ತೆಗೆದು ಗುಂಡು ಹಾರಿಸಿದ್ದಾನೆ. ಗುಂಡು 3ನೇ ತರಗತಿಯ ವಿದ್ಯಾರ್ಥಿಗೆ ತಗುಲಿದೆ. ಇದರಿಂದ ಆತ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

VISTARANEWS.COM


on

Gunfire On School
Koo


ಐದು ವರ್ಷದ ಬಾಲಕನೊಬ್ಬ ಹ್ಯಾಂಡ್‍ಗನ್‌ನೊಂದಿಗೆ ಶಾಲೆಗೆ ಬಂದು 3ನೇ ತರಗತಿಯಲ್ಲಿ ಓದುತ್ತಿದ್ದ 10 ವರ್ಷದ ಬಾಲಕನ ಮೇಲೆ ಗುಂಡು (Gunfire On School) ಹಾರಿಸಿದ ಆಘಾತಕಾರಿ ಘಟನೆ ಉತ್ತರ ಬಿಹಾರದ ಸುಪಾಲ್ ಜಿಲ್ಲೆಯ ತ್ರಿವೇಣಿಗಂಜ್‍ನ ಲಾಲ್ಪಟ್ಟಿಯಲ್ಲಿರುವ ಸೇಂಟ್ ಜಾನ್ಸ್ ಬೋರ್ಡಿಂಗ್ ಸ್ಕೂಲ್‍ನಲ್ಲಿ ಬುಧವಾರ ನಡೆದಿದೆ. ಇದರಿಂದ ಸಂತ್ರಸ್ತ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ನರ್ಸರಿ ವಿದ್ಯಾರ್ಥಿಯಾಗಿರುವ ಆರೋಪಿ ಬಾಲಕ ತನ್ನ ಸ್ಕೂಲ್ ಬ್ಯಾಗ್‍ನಲ್ಲಿ ಬಂದೂಕನ್ನು ಅಡಗಿಸಿಕೊಂಡು ಶಾಲೆಗೆ ಹೋಗಿದ್ದ. ಶಾಲೆಗೆ ಬಂದ ಕೂಡಲೇ ಆತ ತನ್ನ ಬ್ಯಾಗ್‍ನಿಂದ ಬಂದೂಕು ತೆಗೆದು ಗುಂಡು ಹಾರಿಸಿದ್ದಾನೆ. ಗುಂಡು 3 ನೇ ತರಗತಿಯ ವಿದ್ಯಾರ್ಥಿ ಆಸಿಫ್ ಎಂಬ ಬಾಲಕನಿಗೆ ತಗುಲಿದೆ. ಇದರಿಂದ ಆತ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವನನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯ ಬಳಿಕ ಇಬ್ಬರು ವಿದ್ಯಾರ್ಥಿಗಳ ಪೋಷಕರನ್ನು ಶಾಲೆಗೆ ಕರೆದು ವಿಚಾರಣೆ ನಡೆಸಲಾಗುತ್ತಿದೆ. ಆದರೆ ಗುಂಡು ಹಾರಿಸಿದ ಬಾಲಕ ಹಾಗೂ ಆತನ ಪೋಷಕರು ಶಾಲೆಯಿಂದ ಓಡಿ ಹೋಗಿದ್ದಾರೆ. ಇದರಿಂದ ಕೋಪಗೊಂಡ ಸಂತ್ರಸ್ತ ಬಾಲಕನ ಕುಟುಂಬದವರು ಶಾಲೆಯನ್ನು ಧ್ವಂಸಗೊಳಿಸಿದ್ದಾರೆ.

ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಹಾಗೂ ತಲೆಮರೆಸಿಕೊಂಡಿರುವ ಆರೋಪಿ ಬಾಲಕ ಹಾಗೂ ಆತನ ಕುಟುಂಬದವರನ್ನು ಪೊಲೀಸರು ಹುಡುಕಾಡುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಪೊಲೀಸ್ ಅಧಿಕಾರಿ “ಅದೇ ಶಾಲೆಯಲ್ಲಿ 3 ನೇ ತರಗತಿಯಲ್ಲಿ ಓದುತ್ತಿರುವ 10 ವರ್ಷದ ಹುಡುಗನ ಮೇಲೆ ವಿದ್ಯಾರ್ಥಿ ಗುಂಡು ಹಾರಿಸಿದ್ದಾನೆ. ಗುಂಡು ಅವನ ತೋಳಿಗೆ ತಗುಲಿತು. ಗಾಯಗೊಂಡ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಹಿಳೆಯ ಎದೆ, ಕುತ್ತಿಗೆಗೆ ಭೀಕರವಾಗಿ ತಿವಿದ ಬೀದಿ ಹಸು; ಮೈ ನಡುಗಿಸುವ ವಿಡಿಯೊ

ಬಾಲಕ ಬ್ಯಾಗ್‍ನಲ್ಲಿ ಬಂದೂಕನ್ನು ಇರಿಸಿಕೊಂಡು ಅದನ್ನು ಲಾಲ್ಪಟ್ಟಿ ಪ್ರದೇಶದಲ್ಲಿರುವ ಖಾಸಗಿ ಶಾಲೆಗೆ ಹೇಗೆ ಸಾಗಿಸುವಲ್ಲಿ ಯಶಸ್ವಿಯಾದನು ಎಂಬುದನ್ನು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ” ಎಂದು ಹೇಳಿದ್ದಾರೆ. ಅಲ್ಲದೇ “ವಿದ್ಯಾರ್ಥಿಗಳ ಚೀಲಗಳನ್ನು ನಿಯಮಿತವಾಗಿ ಕೂಲಂಕಷವಾಗಿ ಪರಿಶೀಲಿಸಬೇಕೆಂದು ಜಿಲ್ಲೆಯಾದ್ಯಂತ ಶಾಲೆಗಳಿಗೆ ಕೇಳುತ್ತಿದ್ದೇವೆ. ಈ ಘಟನೆಯು ಶಿಕ್ಷಕರು ಮತ್ತು ಪೋಷಕರಲ್ಲಿ ಹೆಚ್ಚಿನ ಆತಂಕವನ್ನುಂಟು ಮಾಡಿದೆ” ಎಂಬುದಾಗಿ ತಿಳಿಸಿದ್ದಾರೆ

Continue Reading

ವಿದೇಶ

Ismail Haniyeh: ಒಸಾಮಾ ರೀತಿಯೇ ಹಮಾಸ್‌ನ ಇಸ್ಮಾಯಿಲ್‌ ಹನಿಯೇಹ್‌ನನ್ನು ಕೊಂದ ಇಸ್ರೇಲ್;‌ ಆಪರೇಷನ್‌ನ ಡಿಟೇಲ್ಸ್‌ ಇಲ್ಲಿದೆ

Ismail Haniyeh: ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಇದಾದ ನಂತರ ಆತನು ತನ್ನ ನಿವಾಸದತ್ತ ತೆರಳಿದ. ಇಸ್ಮಾಯಿಲ್‌ ಹನಿಯೆಹ್‌ ಇರುವ ಕುರಿತು ನಿಖರ ಮಾಹಿತಿ ಪಡೆದ ಇಸ್ರೇಲ್‌ ವಾಯುಪಡೆಯ ಸಿಬ್ಬಂದಿಯು ವಾಯುದಾಳಿಯ ಮೂಲಕ ಇಸ್ಮಾಯಿಲ್‌ ಹನಿಯೆಹ್‌ನನ್ನು ಕೊಲೆ ಮಾಡಿದ್ದಾರೆ. ಇಡೀ ಕಾರ್ಯಾಚರಣೆಯ ಮಾಹಿತಿ ಇಲ್ಲಿದೆ.

VISTARANEWS.COM


on

Ismail Haniyeh
Koo

ಜೆರುಸಲೇಂ: ಅಲ್‌ಕೈದಾ ಉಗ್ರ ಸಂಘಟನೆಯ ಮುಖ್ಯಸ್ಥ, ವಿಶ್ವ ವ್ಯಾಪಾರ ಕೇಂದ್ರದ ಮೇಲೆ ನಡೆದ ದಾಳಿಯ ರೂವಾರಿ ಒಸಾಮಾ ಬಿನ್‌ಲಾಡೆನ್‌ನನ್ನು 2011ರಲ್ಲಿ ಅಮೆರಿಕ ಹತ್ಯೆ ಮಾಡಿದಂತೆಯೇ ಹಮಾಸ್‌ ಉಗ್ರ ಸಂಘಟನೆಯ (Hamas Leader) ರಾಜಕೀಯ ವಿಭಾಗದ ಮುಖ್ಯಸ್ಥ ಇಸ್ಮಾಯಿಲ್‌ ಹನಿಯೆಹ್‌ನನ್ನು ಇಸ್ರೇಲ್‌ ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ. ಅಮೆರಿಕದ ಸೈನಿಕರು ನುಗ್ಗಿ ಒಸಾಮಾ ಬಿನ್‌ಲಾಡೆನ್‌ನನ್ನು ಹತ್ಯೆಗೈದರೆ, ವಾಯು ದಾಳಿ ಮೂಲಕ ಇಸ್ಮಾಯಿಲ್‌ ಹನಿಯೆಹ್‌ನನ್ನು (Ismail Haniyeh) ಇಸ್ರೇಲ್‌ (Israel Air Strike) ಸೇನೆಯು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.

ಹೌದು, ದೇಶಕ್ಕೆ ಅಪಾಯಕಾರಿಯಾಗುವ ವೈರಿಗಳನ್ನು ಯಾವುದೇ ದೇಶದಲ್ಲಿದ್ದರೂ ಹುಡುಕಿ ಹುಡುಕಿ ಕೊಲ್ಲುವ ಇಸ್ರೇಲ್‌ ಸೇನೆಯೇ ಇಸ್ಮಾಯಿಲ್‌ ಹನಿಯೆಹ್‌ನನ್ನು ಕೊಂದಿದೆ. ಇರಾನ್‌ನ ಟೆಹ್ರಾನ್‌ನಲ್ಲಿರುವ ಇಸ್ಮಾಯಿಲ್‌ ಹನಿಯೆಹ್‌ ನಿವಾಸದ ಮೇಲೆಯೇ ವಾಯುದಾಳಿ ನಡೆಸಿದ ಇಸ್ರೇಲ್‌ ಸೈನಿಕರು, ಕ್ಷಿಪಣಿ ದಾಳಿ ಮೂಲಕ ಹಮಾಸ್‌ ಉಗ್ರ ಸಂಘಟನೆಯ ಮುಖಂಡನನ್ನು ಹತ್ಯೆ ಮಾಡಿದೆ. 2011ರಲ್ಲಿ ಅಮೆರಿಕವೂ ಒಸಾಮಾ ಬಿನ್‌ ಲಾಡೆನ್‌ ಪಾಕಿಸ್ತಾನದಲ್ಲಿ ಅಡಗಿರುವ ಕುರಿತು ಮಾಹಿತಿ ಸಂಗ್ರಹಿಸಿ, ಆತನಿದ್ದ ಜಾಗದ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿತ್ತು.

ಕಾರ್ಯಾಚರಣೆ ನಡೆದಿದ್ದು ಹೇಗೆ?

ಇರಾನ್‌ ಅಧ್ಯಕ್ಷರಾಗಿ ಆಯ್ಕೆಯಾದ ಮಸೌದ್‌ ಪೆಜೆಸ್ಕಿಯಾನ್‌ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಮಂಗಳವಾರ (ಜುಲೈ 30) ಇಸ್ಮಾಯಿಲ್‌ ಹನಿಯೆಹ್‌ ಕೂಡ ಭಾಗವಹಿಸಿದ್ದ. ಇದಾದ ನಂತರ ಆತನು ತನ್ನ ನಿವಾಸದತ್ತ ತೆರಳಿದ. ಇಸ್ಮಾಯಿಲ್‌ ಹನಿಯೆಹ್‌ ಇರುವ ಕುರಿತು ನಿಖರ ಮಾಹಿತಿ ಪಡೆದ ಇಸ್ರೇಲ್‌ ವಾಯುಪಡೆಯ ಸಿಬ್ಬಂದಿಯು ವಾಯುದಾಳಿಯ ಮೂಲಕ ಇಸ್ಮಾಯಿಲ್‌ ಹನಿಯೆಹ್‌ ಸೇರಿ ಆತನ ಅಂಗರಕ್ಷಕನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಗುಪ್ತಚರ ಇಲಾಖೆ ನಿಖರ ಮಾಹಿತಿ, ಅತ್ಯಾಧುನಿಕ ಕ್ಷಿಪಣಿ, ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಸಿ ಹತ್ಯೆಗೈಯಲಾಗಿದೆ ಎಂದು ತಿಳಿದು ಬಂದಿದೆ.

ಇಸ್ಮಾಯಿಲ್ ಹನಿಯೆಹ್ ಹಿನ್ನೆಲೆ ಏನು?

ಮಧ್ಯಪ್ರಾಚ್ಯ ರಾಜಕೀಯ ವಲಯದಲ್ಲಿ ಪ್ರಮುಖ ವ್ಯಕ್ತಿಯಾಗಿರುವ ಇಸ್ಮಾಯಿಲ್ ಹನಿಯೆಹ್ ಗಾಜಾದ ಶತಿ ನಿರಾಶ್ರಿತರ ಶಿಬಿರದಲ್ಲಿ 1963ರಲ್ಲಿ ಜನಿಸಿದ್ದ. ವಿಶ್ವಸಂಸ್ಥೆಯ ಶಾಲೆಗಳಲ್ಲಿ ವ್ಯಾಸಂಗ ಮಾಡಿರುವ ಈತ 1987ರಲ್ಲಿ ಅರೇಬಿಕ್ ಸಾಹಿತ್ಯದಲ್ಲಿ ಗಾಜಾದ ಇಸ್ಲಾಮಿಕ್ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದಿದ್ದ. ವಿಶ್ವವಿದ್ಯಾನಿಲಯದಲ್ಲಿದ್ದಾಗ ಹಮಾಸ್‌ ಉಗ್ರಗಾಮಿ ಸಂಘಟನೆ ಜತೆ ಸೇರಿಕೊಂಡಿದ್ದ.

ಮೊದಲ ಬಾರಿಗೆ ಇಸ್ಮಾಯಿಲ್ ಹನಿಯೆಹ್ ಇಂತಿಫಾಡಾದಲ್ಲಿ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದ. ಇದಕ್ಕಾಗಿ ಇಸ್ರೇಲಿ ಮಿಲಿಟರಿ ನ್ಯಾಯಾಲಯದಿಂದ ಜೈಲು ಶಿಕ್ಷೆಯನ್ನೂ ವಿಧಿಸಲಾಗಿತ್ತು. ಜೈಲಿನಿಂದ ಹೊರಬಂದ ಬಳಿಕ ಆಕ್ರಮಿತ ಪ್ಯಾಲೇಸ್ಟಿನಿಯನ್ ಪ್ರಾಂತ್ಯಗಳ ಇಸ್ರೇಲ್ ಮಿಲಿಟರಿ ಅಧಿಕಾರಿಗಳು ಹನಿಯೆಹ್‌ನನ್ನು ಹಿರಿಯ ಹಮಾಸ್ ನಾಯಕರಾದ ಅಬ್ದೆಲ್-ಅಜೀಜ್ ಅಲ್-ರಾಂಟಿಸ್ಸಿ, ಮಹಮೂದ್ ಜಹರ್, ಅಜೀಜ್ ದುವೈಕ್ ಮತ್ತು ಇತರ 400 ಕಾರ್ಯಕರ್ತರೊಂದಿಗೆ ಲೆಬನಾನ್‌ಗೆ ಗಡಿಪಾರು ಮಾಡಿದರು.

1997ರಲ್ಲಿ ಇಸ್ರೇಲ್ ಹಮಾಸ್ ಸಂಸ್ಥಾಪಕ ಅಹ್ಮದ್ ಯಾಸಿನ್ ಅವರನ್ನು ಬಿಡುಗಡೆ ಮಾಡಿದ ಅನಂತರ ಈತನನ್ನು ಹಮಾಸ್ ಕಚೇರಿಯ ಮುಖ್ಯಸ್ಥನನ್ನಾಗಿ ನೇಮಿಸಲಾಯಿತು. 2005ರ ಡಿಸೆಂಬರ್‌ನಲ್ಲಿ ಹನಿಯೆಹ್ ಹಮಾಸ್ ಮುಖ್ಯಸ್ಥನಾಗಿ ಆಯ್ಕೆಯಾದ. 2006ರ ಶಾಸಕಾಂಗ ಚುನಾವಣೆಯಲ್ಲಿ ಹಮಾಸ್‌ನ ಗೆಲುವಿನ ಅನಂತರ ಹನಿಯೆಹ್ ಪ್ಯಾಲೇಸ್ಟಿನಿಯನ್ ಪ್ರಾಧಿಕಾರದ ಸರ್ಕಾರದ ಪ್ರಧಾನ ಮಂತ್ರಿಯಾದ.

ಫತಾಹ್- ಹಮಾಸ್ ಘರ್ಷಣೆಯ ನಡುವೆಯೇ 2006ರಲ್ಲಿ ಪ್ರಧಾನಿಯಾಗಿದ್ದ ಹನಿಯೆಹ್ ವಿದೇಶದಲ್ಲಿ ತನ್ನ ಮೊದಲ ಅಧಿಕೃತ ಪ್ರವಾಸದಿಂದ ಹಿಂದಿರುಗುತ್ತಿದ್ದಾಗ ರಫಾ ಬಾರ್ಡರ್ ಕ್ರಾಸಿಂಗ್‌ನಲ್ಲಿ ಈಜಿಪ್ಟ್‌ನಿಂದ ಗಾಜಾಕ್ಕೆ ಪ್ರವೇಶವನ್ನು ನಿರಾಕರಿಸಲ್ಪಟ್ಟ. ಅನಂತರ ಈತ ಗಡಿ ದಾಟಲು ಪ್ರಯತ್ನಿಸಿದಾಗ, ಗುಂಡಿನ ಚಕಮಕಿ ನಡೆದು ಒಬ್ಬ ಅಂಗರಕ್ಷಕ ಮೃತಪಟ್ಟು, ಹನಿಯೆಹ್ ಹಿರಿಯ ಮಗ ಗಾಯಗೊಂಡಿದ್ದ.

2007ರಲ್ಲಿ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅಧಿಕಾರಕ್ಕೆ ಬಂದಾಗ ಹನಿಯೆಹ್‌ನನ್ನು ಹುದ್ದೆಯಿಂದ ವಜಾಗೊಳಿಸಿದರು. ಇದು ಫತಾಹ್ ಮತ್ತು ಹಮಾಸ್ ಬಣಗಳ ನಡುವಿನ ರಾಜಕೀಯ ಸಂಘರ್ಷವನ್ನು ಹೆಚ್ಚಿಸಿತ್ತು. 2016ರ ಚುನಾವಣೆಯಲ್ಲಿ ಈತ ಹಮಾಸ್‌ನ ಮುಖ್ಯ ನಾಯಕ ಖಲೀದ್ ಮಶಾಲ್‌ನ ಉತ್ತರಾಧಿಕಾರಿಯಾಗಿದ್ದ. ಈತ ಇಸ್ರೇಲ್‌ ಭಾರೀ ತಲೆ ನೋವಾಗಿದ್ದ. ಹಾಗಾಗಿ ಇಸ್ರೇಲ್‌ ತಂತ್ರಜ್ಞಾನಗಳನ್ನೆಲ್ಲ ಬಳಸಿ ಪ್ಲ್ಯಾನ್‌ ಮಾಡಿ ಈತನ ಕತೆ ಮುಗಿಸಿದೆ.

ಇದನ್ನೂ ಓದಿ: Ismail Haniyeh: ಹತ್ಯೆಗೀಡಾದ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಹಿನ್ನೆಲೆ ಏನು? ಈತನನ್ನು ಇಸ್ರೇಲ್‌ ಮುಗಿಸಿದ್ದೇಕೆ?

Continue Reading

ಕ್ರೀಡೆ

Paris Olympics Boxing: ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ಬಾಕ್ಸರ್​ ಲವ್ಲಿನಾ ಬೊರ್ಗೊಹೇನ್‌

Paris Olympics Boxing: ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಲವ್ಲೀನಾ ಅವರು ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಚೀನಾದ ಲಿ ಕಿಯಾನ್ ಅವರನ್ನು ಎದುರಿಸಲಿದ್ದಾರೆ.

VISTARANEWS.COM


on

Paris Olympics Boxing
Koo

ಪ್ಯಾರಿಸ್​: ವಿಶ್ವ ಚಾಂಪಿಯನ್‌, ಟೋಕಿಯೋ ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತೆ ಬಾಕ್ಸರ್​ ಲವ್ಲಿನಾ ಬೊರ್ಗೊಹೇನ್‌(Lovlina Borgohain) ಅವರು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿಯೂ(Paris Olympics Boxing) ಪದಕ ಗೆಲ್ಲುವ ವಿಶ್ವಾಸದಲ್ಲಿದೆ. ಇಂದು(ಬುಧವಾರ) ನಡೆದ 75 ಕೆ.ಜಿ. ವಿಭಾಗದ 16ರ ಸುತ್ತಿನ ಬಾಕ್ಸಿಂಗ್​ ಹೋರಾಟದಲ್ಲಿ ನಾರ್ವೆಯ ಸನ್ನಿವಾ ಹೊಫ್‌ಸ್ತಾಡ್‌ ಅವರನ್ನು 5-0 ಅಂತರದಿಂದ ಮಣಿಸಿ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ್ದಾರೆ.

ಏಕಮುಖವಾಗಿ ಸಾಗಿದ ಈ ಹೋರಾಟದಲ್ಲಿ ಭಾರತೀಯ ಬಾಕ್ಸರ್​ ಮುಂದೆ ನಾರ್ವೆಯ ಪ್ರತಿಸ್ಪರ್ಧಿ ಸಂಪೂರ್ಣ ಶರಣಾದರು. ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಲವ್ಲೀನಾ ಅವರು ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಚೀನಾದ ಲಿ ಕಿಯಾನ್ ಅವರನ್ನು ಎದುರಿಸಲಿದ್ದಾರೆ. ಕಳೆದ ಏಷ್ಯನ್ ಗೇಮ್ಸ್ ಮಹಿಳೆಯರ 75 ಕೆಜಿ ವಿಭಾಗದ ಫೈನಲ್‌ನಲ್ಲಿ ಲಿ ವಿರುದ್ಧ ಲವ್ಲೀನಾ ಸೋಲು ಕಂಡಿದ್ದರು. ಕ್ವಾರ್ಟರ್​ ಫೈನಲ್​ ಪಂದ್ಯ ಆಗಸ್ಟ್ 4 ರಂದು ನಡೆಯಲಿದೆ. ಇಲ್ಲಿ ಗೆದ್ದರೆ ಪದಕವೊಂದು ಖಾತ್ರಿಯಾಗಲಿದೆ. ಟೋಕಿಯೋ ಒಲಿಂಪಿಕ್ಸ್​ನಲ್ಲಿ ಲವ್ಲಿನಾ 69 ಕೆ.ಜಿ. ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದರು.

ಇದನ್ನೂ ಓದಿ Paris Olympics: ಫೈನಲ್​ ಪ್ರವೇಶಿಸಿದ ಸ್ವಪ್ನಿಲ್‌ ಕುಸಾಲೆ; 16ರ ಸುತ್ತಿಗೇರಿದ ಸಿಂಧು

ಶೂಟಿಂಗ್​ನಲ್ಲಿ ಮತ್ತೊಂದು ಪದಕ ನಿರೀಕ್ಷೆ; ಸ್ವಪ್ನಿಲ್‌ ಕುಸಾಲೆ ಫೈನಲ್​ ಪ್ರವೇಶ

ಇಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್(Paris Olympics)​ ಕ್ರೀಡಾ ಕೂಟದಲ್ಲಿ ಈಗಾಗಲೇ ಶೂಟಿಂಗ್​ನಲ್ಲಿ 2 ಪದಕ ಗೆದ್ದಿರುವ ಭಾರತಕ್ಕೆ ಇದೇ ವಿಭಾಗದಲ್ಲಿ ಮತ್ತೊಂದು ಪದಕ ಒಲಿಯುವ ನಿರೀಕ್ಷೆಯಿದೆ. ಬುಧವಾರ ನಡೆದ ಪುರುಷರ 50 ಮೀ. ರೈಫ‌ಲ್‌ 3 ಪೊಸಿಶನ್‌ ಅರ್ಹತಾ ಸುತ್ತಿನಲ್ಲಿ ಭಾರತದ ಸ್ವಪ್ನಿಲ್‌ ಕುಸಾಲೆ(Swapnil Kusale) 590 ಅಂಕಗಳೊಂದಿಗೆ 7 ನೇ ಸ್ಥಾನ ಪಡೆಯುವ ಮೂಲಕ ಫೈನಲ್​ ಪ್ರವೇಶಿಸಿದ್ದಾರೆ. ಇನ್ನೊಂದೆಡೆ ಅವಳಿ ಒಲಿಂಪಿಕ್ಸ್​ ಪದಕ ವಿಜೇತೆ, ಬ್ಯಾಡ್ಮಿಂಟನ್​ ಆಟಗಾರ್ತಿ ಪಿ.ವಿ ಸಿಂಧು(PV Sindhu) ಕೂಡ ಗೆಲುವು ಸಾಧಿಸಿ 16ನೇ ಸುತ್ತಿಗೆ ಪ್ರವೇಶ ಪಡೆದಿದ್ದಾರೆ.

ಇಂದು(ಬುಧವಾರ) ನಡೆದ ಪುರುಷರ 50 ಮೀ. ರೈಫಲ್ 3 ಪೊಸಿಶನ್‌ ಸ್ಪರ್ಧೆಯಲ್ಲಿ ಕಣಕ್ಕಿಳಿದಿದ್ದ ಸ್ವಪ್ನಿಲ್‌ ಕುಸಾಲೆ ಫೈನಲ್​ ಸುತ್ತಿಗೆ ಪ್ರವೇಶ ಪಡೆದರೆ, ಮತೋರ್ವ ಭಾರತೀಯ ಶೂಟರ್​ ಐಶ್ವರಿ ಪ್ರತಾಪ್ ಅವರು 589 ಸ್ಕೋರ್‌ನೊಂದಿಗೆ 11 ನೇ ಸ್ಥಾನ ಪಡೆದು ಟೂರ್ನಿಯಿಂದ ಹೊರಬಿದ್ದರು. ಅಗ್ರ 8 ಸ್ಥಾನ ಗಳಿಸಿದ ಶೂಟರ್​ಗಳಿಗೆ ನೇರವಾಗಿ ಫೈನಲ್​ ಪ್ರವೇಶ ಲಭಿಸುತ್ತದೆ. ಆದರೆ ಈ ಸ್ಥಾನ ಪಡೆಯುವಲ್ಲಿ ವಿಫಲರಾದ ಕಾರಣ ಅವರ ಒಲಿಂಪಿಕ್ಸ್​ ಸ್ಪರ್ಧೆ ಕೊನೆಗೊಂಡಿತು.

ಪ್ರೀ-ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಶ್ರೀಜಾ ಅಕುಲಾ

ಭಾರತದ ಅಗ್ರ ಶ್ರೇಯಾಂಕದ ಟೇಬಲ್‌ ಟೆನಿಸ್‌ ಆಟಗಾರ್ತಿ ಶ್ರೀಜಾ ಅಕುಲಾ(Sreeja Akula) ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ(Paris Olympic) 16 ರ ರೌಂಡ್‌ಗೆ ಪ್ರವೇಶಿಸಿದ್ದಾರೆ. ಇಂದು(ಬುಧವಾರ) ನಡೆದ ಮಹಿಳೆಯರ ಸಿಂಗಲ್ಸ್‌ 32ರ ಸುತ್ತಿನ ಪಂದ್ಯದಲ್ಲಿ ಸಿಂಗಾಪುರದ ಝೆಂಗ್ ಜಿಯಾನ್ ಅವರನ್ನು 4-2 ಅಂತರದಿಂದ ಸೋಲಿಸಿದರು. ವಿಶೇಷ ಎಂದರೆ ಶ್ರೀಜಾ ಅಕುಲಾ ತಮ್ಮ 26ನೇ ಹುಟ್ಟು ಹಬ್ಬದ ದಿನವೇ ಈ ಗೆಲುವು ಸಾಧಿಸಿದರು. ಮುಂದಿನ ಸುತ್ತಿನಲ್ಲಿ ವಿಶ್ವ ನಂ. 1 ಮತ್ತು ಅಗ್ರ ಶ್ರೇಯಾಂಕದ ಚೀನಾದ ಪ್ಯಾಡ್ಲರ್ ಸನ್ ಯಿಂಗ್ಶಾ(Sun Yingsha) ಅವರ ಸವಾಲು ಎದುರಿಸಲಿದ್ದಾರೆ.

Continue Reading

ಕರ್ನಾಟಕ

Muda Scam: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ; ಲೋಕಾಯುಕ್ತಕ್ಕೆ ಪ್ರಮುಖ ದಾಖಲೆ ಸಲ್ಲಿಕೆ

Muda Scam: ಮುಡಾ ಹಗರಣಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಅವರು ಇತ್ತೀಚೆಗೆ 400 ಪುಟ ದಾಖಲೆ ಸಹಿತ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದೀಗ ಅದೇ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ 25 ಪುಟಗಳ ಮತ್ತಷ್ಟು ಮಹತ್ವಪೂರ್ಣ ದಾಖಲೆಗಳನ್ನು ಸಲ್ಲಿಸಿದ್ದಾರೆ.

VISTARANEWS.COM


on

Muda Scam
Koo

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದೆ. ಬದಲಿ ನಿವೇಶನಗಳ ಹಂಚಿಕೆ ಹಗರಣಕ್ಕೆ (Muda Scam) ಸಂಬಂಧಿಸಿದಂತೆ ಮತ್ತಷ್ಟು ದಾಖಲೆಗಳನ್ನು ಸಹಿತ ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬಸ್ಥರು ಹಾಗೂ ಕೆಲ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಕಚೇರಿಗೆ ದೂರುದಾರರು ಒದಗಿಸಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿ ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಅವರು ಇತ್ತೀಚೆಗೆ 400 ಪುಟ ದಾಖಲೆ ಸಹಿತ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಇದೀಗ ಅದೇ ಪ್ರಕರಣಕ್ಕೆ ಸಂಬಂಧಿಸಿದ 25 ಪುಟಗಳ ಮತ್ತಷ್ಟು ಮಹತ್ವಪೂರ್ಣ ದಾಖಲೆಗಳನ್ನು ಸಲ್ಲಿಸಿದ್ದಾರೆ.

ಪತ್ರದಲ್ಲ ಏನಿದೆ?

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಾನೂನುಬಾಹಿರವಾಗಿ ಬದಲಿ ನಿವೇಶನಗಳನ್ನು ಹಂಚಿಕೆ ಮಾಡುವ ಮೂಲಕ ಸರ್ಕಾರಕ್ಕೆ 60 ಕೋಟಿ ರೂಪಾಯಿಗಳನ್ನು ವಂಚನೆ ಮಾಡಿರುವ ʼಬದಲಿ ನಿವೇಶನಗಳ ಹಂಚಿಕೆ” ಹಗರಣಕ್ಕೆ ಸಂಬಂಧಿಸಿದಂತೆ ಸುಮಾರು 400 ಪುಟಗಳ ಸಂಪೂರ್ಣ ದಾಖಲೆಗಳ ಸಹಿತ ಜುಲೈ 20ರಂದು ಸಿಎಂ ಸಿದ್ದರಾಮಯ್ಯ ಮತ್ತವರ ಕುಟುಂಬಸ್ಥರು ಹಾಗೂ ಕೆಲವು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಕಚೇರಿಯಲ್ಲಿ ದೂರು ನೀಡಲಾಗಿದೆ.

ಅದೇ ಪ್ರಕರಣಕ್ಕೆ ಸಂಬಂಧಿಸಿದ ಮತ್ತಷ್ಟು ಮಹತ್ವಪೂರ್ಣ ದಾಖಲೆಗಳು ಈಗ ನಮಗೆ ದೊರೆತಿದ್ದು, ಅವುಗಳನ್ನು ಈ ಪತ್ರದೊಂದಿಗೆ ಲಗತ್ತಿಸಲಾಗಿದೆ. 1997-98 ರ ಅವಧಿಯಲ್ಲಿ L&T ಸಂಸ್ಥೆಯ ಮೂಲಕ ಮುಡಾ ಸಂಪೂರ್ಣ ಅಭಿವೃದ್ಧಿ ಡಾಂಬರೀಕರಣಗೊಂಡ ರಸ್ತೆಗಳು, ಪಾದಚಾರಿ ಮಾರ್ಗಗಳು, ಚರಂಡಿಗಳು, ಕುಡಿಯುವ ನೀರಿನ ಪಡಿಸಿ ಕೊಳವೆಗಳು, ಒಳಚರಂಡಿ ಕೊಳವೆಗಳು ಮತ್ತು ಬೀದಿ ದೀಪಗಳನ್ನು ಒಳಗೊಂಡ ‘ದೇವನೂರು 3ನೇ ಹಂತದ ಬಡಾವಣೆಯಲ್ಲಿನ ನಿವೇಶನಗಳನ್ನು ಅರ್ಜಿದಾರರಿಗೆ ಹಂಚಿಕೆ ಮಾಡಲಾಗಿತ್ತು. ಮೂರ್ನಾಲ್ಕು ವರ್ಷಗಳಲ್ಲಿಯೇ ಆ ಬಡಾವಣೆಯಲ್ಲಿ ಹತ್ತಾರು ಕಟ್ಟಡಗಳು ತಲೆ ಎತ್ತಿದ್ದವು. ಆದರೆ, ಆದಾಗಲೇ ಅಭಿವೃದ್ಧಿಗೊಂಡಿದ್ದ ಬಡಾವಣೆಯಲ್ಲಿ 3.16 ಎಕರೆ ವಿಸ್ತೀರ್ಣದ ಪ್ರದೇಶವನ್ನು “ಭೂ ಪರಿವರ್ತನೆ” ಮಾಡಿ ಕೊಡುವಂತೆ 2004ರ ಡಿ.1ರಂದು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ, ಅಂದಿನ ಜಿಲ್ಲಾಧಿಕಾರಿಗಳು, ತಹಶೀಲ್ದಾರರ ವರದಿಯನ್ನಾಧರಿಸಿ 2005ರ ಜೂನ್‌ 17ರಂದು ಖುದ್ದು ಸ್ಥಳ ಪರಿಶೀಲನೆ ಮಾಡಿ “ಮೈಸೂರು ತಾಲೂಕು, ಕಸಬಾ ಹೋಬಳಿ, ಕೆಸರೆ ಗ್ರಾಮದ ಸರ್ವೆ ನಂ: 464 ರ 3.16 ಎಕರೆ ವಿಸ್ತೀರ್ಣದ ವ್ಯವಸಾಯದ ಜಮೀನನ್ನು ವಸತಿ ಉದ್ದೇಶಕ್ಕೆ ಬಳಸಲು ಭೂ ಪರಿವರ್ತನೆ ಮಾಡಲು ಅನುಮತಿ ನೀಡಲಾಗಿದೆ’ ಎಂದು “ಸ್ಥಳ ತನಿಖಾ ಟಿಪ್ಪಣಿ”ಯಲ್ಲಿ ಲಿಖಿತವಾಗಿ ತಿಳಿಸಿದ್ದರು.

2005ಕ್ಕೂ ಏಳೆಂಟು ವರ್ಷಗಳ ಹಿಂದೆಯೇ ಸಂಪೂರ್ಣ ಅಭಿವದ್ಧಿ ಪಡಿಸಲಾಗಿದ್ದ ದೇವನೂರು 3ನೇ ಹಂತದ ಬಡಾವಣೆಯಲ್ಲಿ ವ್ಯವಸಾಯದ ಜಮೀನು ಇರಲು ಹೇಗೆ ಸಾಧ್ಯ. 2004-2006 ರ ಅವಧಿಯಲ್ಲಿ ಧರ್ಮಸಿಂಗ್‌ ಅವರ ಸಚಿವ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಆಗಿದ್ದ ಸಿದ್ಧರಾಮಯ್ಯನವರ ರಾಜಕೀಯ ಪ್ರಭಾವಕ್ಕೆ ಮತ್ತು ಒತ್ತಡಗಳಿಗೆ ಒಳಗಾಗಿದ್ದ ಆಗಿನ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್‌ಗಳು ಈ ರೀತಿಯ ಹಾಸ್ಯಾಸ್ಪದ ಮತ್ತು ಕಾನೂನು ಬಾಹಿರವಾದ ಭೂ ಪರಿವರ್ತನೆ ಕಾರ್ಯಕ್ಕೆ ಅನುಮೋದನೆ ನೀಡಿರುವುದು ಅತ್ಯಂತ ಸ್ಪಷ್ಟವಾಗಿರುತ್ತದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Puja Khedkar: ನಕಲಿ ದಾಖಲೆ ಸೃಷ್ಟಿ; ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ನೇಮಕ ರದ್ದು, ಪರೀಕ್ಷೆಯಿಂದಲೇ ಯುಪಿಎಸ್‌ಸಿ ಬ್ಯಾನ್!

ಇದೇ ಜಮೀನಿಗೆ ಸಂಬಂಧಿಸಿ ದಂತೆ, ದೇವನೂರು 03ನೇ ಹಂತದ ಬಡಾವಣೆ ನಿರ್ಮಾಣಕ್ಕೆಂದು ಭೂಸ್ವಾಧೀನಪಡಿಸಿಕೊಂಡಿದ್ದ ಅಷ್ಟೂ ಜಮೀನುಗಳ ಮಾಲೀಕರುಗಳಿಗೆ ಮೂಡಾದ ಆಯುಕ್ತರು, ಭೂಸ್ವಾಧೀನ ಅಧಿಕಾರಿ ಮತ್ತು ಮುಖ್ಯ ಲೆಕ್ಕಾಧಿಕಾರಿಗಳು ಮೈಸೂರಿನ ಪ್ರಧಾನ ಸಿವಿಲ್‌ ನ್ಯಾಯಾಲಯ ದಲ್ಲಿ ಒಟ್ಟು 1,50,59,642.70 ಗಳಷ್ಟು ಸಂಪೂರ್ಣ ಪರಿಹಾರ ಧನವನ್ನು ಠೇವಣಿ ಇಟ್ಟಿರುತ್ತಾರೆ. ಪ್ರಸ್ತುತ ತನಿಖಾ ಹಂತದಲ್ಲಿರುವ ಮೂಡಾದ ಈ ಬದಲಿ ನಿವೇಶನಗಳ ಹಗರಣದ ತನಿಖೆಗೆ, ಈ ಪತ್ರದೊಂದಿಗೆ ಲಗತ್ತಿಸಿರುವ 25 ಪುಟಗಳ ಎರಡು ದಾಖಲೆಗಳು ಅತ್ಯಂತ ಪ್ರಮುಖ ದಾಖಲೆಗಳಾಗುತ್ತವೆ ಎಂಬುದನ್ನು ಮಾನ್ಯ ಲೋಕಾಯುಕ್ತರ ಗಮನಕ್ಕೆ ತರಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading
Advertisement
Gunfire On School
Latest6 mins ago

Gunfire On School: ಶಾಲೆಯೊಳಗೆ ಗನ್‌ ತಂದು 10 ವರ್ಷದ ಹುಡುಗನಿಗೆ ಗುಂಡು ಹಾರಿಸಿದ 5 ವರ್ಷದ ಬಾಲಕ!

Ibbani Thabbida Ileyali movie Helu Gelati song released
ಕರ್ನಾಟಕ25 mins ago

Kannada New Movie: ರೆಟ್ರೋ ಸ್ಟೈಲ್‌ನಲ್ಲಿ ಮೂಡಿಬಂದ ʼಹೇಳು ಗೆಳತಿʼ; ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾ

Ashwini Ponnappa
ಕ್ರೀಡೆ35 mins ago

Ashwini Ponnappa: ‘ಇದು ನನ್ನ ಕೊನೆಯ ಒಲಿಂಪಿಕ್ಸ್​’; ನಿವೃತ್ತಿ ಘೋಷಿಸಿದ ಶಟ್ಲರ್​ ಅಶ್ವಿನಿ ಪೊನ್ನಪ್ಪ

Ismail Haniyeh
ವಿದೇಶ57 mins ago

Ismail Haniyeh: ಒಸಾಮಾ ರೀತಿಯೇ ಹಮಾಸ್‌ನ ಇಸ್ಮಾಯಿಲ್‌ ಹನಿಯೇಹ್‌ನನ್ನು ಕೊಂದ ಇಸ್ರೇಲ್;‌ ಆಪರೇಷನ್‌ನ ಡಿಟೇಲ್ಸ್‌ ಇಲ್ಲಿದೆ

Mahesh Bhatt said his mother was worried after he gave daughters Muslim names
ಬಾಲಿವುಡ್1 hour ago

Alia Bhatt: ಪುತ್ರಿಯರಿಗೆ ಮುಸ್ಲಿಂ ಹೆಸರುಗಳನ್ನು ಇಟ್ಟಾಗ ನನ್ನ ತಾಯಿಗೆ ಚಿಂತೆಯಾಗಿತ್ತು ಎಂದ ಆಲಿಯಾ ಭಟ್‌ ತಂದೆ!

Jagdeep Dhankhar
ದೇಶ1 hour ago

Parliament Session: RSS ಬಗ್ಗೆ ದೋಷಾರೋಪಣೆ ಸಲ್ಲದು; ಜಗದೀಪ್ ಧನ್‌ಕರ್ ಹೇಳಿಕೆ- ಪ್ರತಿಪಕ್ಷಗಳು ವಾಕ್‌ಔಟ್‌!

Paris Olympics Boxing
ಕ್ರೀಡೆ1 hour ago

Paris Olympics Boxing: ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ಬಾಕ್ಸರ್​ ಲವ್ಲಿನಾ ಬೊರ್ಗೊಹೇನ್‌

Muda Scam
ಕರ್ನಾಟಕ2 hours ago

Muda Scam: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ; ಲೋಕಾಯುಕ್ತಕ್ಕೆ ಪ್ರಮುಖ ದಾಖಲೆ ಸಲ್ಲಿಕೆ

Paris Olympics
ಕ್ರೀಡೆ2 hours ago

Paris Olympic: ಹುಟ್ಟು ಹಬ್ಬದ ದಿನವೇ ಗೆಲುವು ಸಾಧಿಸಿ ಪ್ರೀ-ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಶ್ರೀಜಾ ಅಕುಲಾ

Indian Navy Recruitment
ಉದ್ಯೋಗ2 hours ago

Indian Navy Recruitment: ಭಾರತೀಯ ನೌಕಾ ಪಡೆಯಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡಲು ಆ. 2 ಕೊನೆಯ ದಿನ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 day ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌