Kantara Movie | ರಜನಿಕಾಂತ್‌ ಭೇಟಿ ವೇಳೆ ರಿಷಬ್‌ ಶೆಟ್ಟಿ ಪಂಚೆ ಬದಲು ಜೀನ್ಸ್‌ ಧರಿಸಿದ್ಯಾಕೆ? ನಟ ಹೇಳಿದ್ದೇನು? - Vistara News

ಸಿನಿಮಾ

Kantara Movie | ರಜನಿಕಾಂತ್‌ ಭೇಟಿ ವೇಳೆ ರಿಷಬ್‌ ಶೆಟ್ಟಿ ಪಂಚೆ ಬದಲು ಜೀನ್ಸ್‌ ಧರಿಸಿದ್ಯಾಕೆ? ನಟ ಹೇಳಿದ್ದೇನು?

ಸೂಪರ್‌ ಸ್ಟಾರ್‌ ರಜನಿಕಾಂತ್‌ (Kantara Movie) ಅವರನ್ನು ಭೇಟಿಯಾದ ವೇಳೆ ರಿಷಬ್‌ ಶೆಟ್ಟಿ ಜೀನ್ಸ್‌ ಧರಿಸಿದ್ಯಾಕೆ? ಎಂಬ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಗಳು ಆಗುತ್ತಿವೆ. ಕೊನೆಗೂ ಸತ್ಯ ರಿವೀಲ್‌ ಮಾಡಿದ್ದಾರೆ ರಿಷಬ್‌ ಶೆಟ್ಟಿ.

VISTARANEWS.COM


on

Kantara Movie (Jeans And Not A Panche rishab)
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ರಿಷಬ್‌ ಶೆಟ್ಟಿ ನಟನೆ ಹಾಗೂ ನಿರ್ದೇಶನದ ಕಾಂತಾರ ಸಿನಿಮಾ (Kantara Movie) 50 ದಿನಗಳನ್ನು ಪೂರೈಸಿದೆ. ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದಕ್ಷಿಣ ಭಾರತದ ಪ್ರಮುಖ ತಾರೆಯರು ಸಿನಿಮಾ ಕುರಿತಾಗಿ ಹಾಡಿ ಹೊಗಳಿದ್ದಾರೆ. ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರು ಕೂಡ ಸಿನಿಮಾ ಕುರಿತಾಗಿ ಮೆಚ್ಚುಗೆ ವ್ಯಕ್ತಪಡಿಸಿ ರಿಷಬ್ ಅವರನ್ನು ಬೀಳ್ಕೊಡುವಾಗ ಚಿನ್ನದ ಸರ ಮತ್ತು ಬಾಬಾ ಇರುವಂತಹ ಲಾಕೆಟ್(ಪೆಂಡೆಂಟ್) ಕೊಟ್ಟಿದ್ದರು. ಅಂದಿನಿಂದ ಇದುವರೆಗೂ ನಟ ರಿಷಬ್‌ ಅವರು ರಜನಿಕಾಂತ್‌ ಅವರನ್ನು ಭೇಟಿ ಮಾಡಿರುವ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ. ಇದೀಗ ರಿಷಬ್‌ ಅವರು ರಜನಿಕಾಂತ್‌ ಅವರನ್ನು ಭೇಟಿ ಮಾಡಿದಾಗ ಜೀನ್ಸ್‌ ತೊಟ್ಟಿರುವ ವಿಚಾರಕ್ಕೆ ಸಾಕಷ್ಟು ಚರ್ಚೆಗಳು ಆಗುತ್ತಿವೆ.

ರಿಷಬ್‌ ಅವರು ಸಿನಿಮಾ ಪ್ರಚಾರದ ವೇಳೆ ಹೆಚ್ಚಾಗಿ ಪಂಚೆಯಲ್ಲಿ ಕಾಣಿಸಿಕೊಂಡಿದ್ದಾರೆ. ರಜನಿಕಾಂತ್ ಅವರನ್ನು ಭೇಟಿಯಾದಾಗ ರಿಷಬ್ ಅವರ ಉಡುಪಿನಲ್ಲಿ ಬದಲಾವಣೆಯನ್ನು ಗಮನಿಸಿರಬಹುದು. ವರದಿಗಳ ಪ್ರಕಾರ, ಅವರ ಪತ್ನಿ ಪ್ರಗತಿ, ಕಾಂತಾರ ಪ್ರಚಾರಕ್ಕಾಗಿ ವಿಶೇಷವಾಗಿ ಪಂಚೆ ಸೆಟ್ ಅನ್ನು ಸಿದ್ಧಪಡಿಸಿದ್ದರು ಮತ್ತು ನಟ ಪ್ರಚಾರದ ಉದ್ದಕ್ಕೂ ಅದೇ ಡ್ರೆಸ್ ಕೋಡ್ ಅನ್ನು ಅನುಸರಿಸಿದ್ದರು ಎನ್ನಲಾಗಿದೆ. ಆದರೆ ರಜನಿಕಾಂತ್‌ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ರಿಷಬ್‌ ಅವರು ಜೀನ್ಸ್‌ ಪ್ಯಾಂಟ್‌ ಅನ್ನು ಧರಿಸಿದ್ದರು. ಈ ಕುರಿತು ಸೋಷಿಯಲ್‌ ಮೀಡಿಯಾದಲ್ಲಿ ವ್ಯಾಪಕ ಚರ್ಚೆಗಳು ಆಗುತ್ತಿವೆ.

ಇದನ್ನೂ ಓದಿ | Kantara Movie | ಕನ್ನಡದ ʻಕಾಂತಾರʼ ಫ್ರಂಟ್‌ಲೈನ್‌ ಮ್ಯಾಗಜಿನ್‌ನ ಕವರ್‌ ಫೋಟೊ!

Kantara Movie (Jeans And Not A Panche rishab)

ಇದೀಗ ರಿಷಬ್ ಶೆಟ್ಟಿ ಅವರು ಪ್ಯಾಂಟ್‌ ಧರಿಸಿರುವ ಕಾರಣವನ್ನು ಬಹಿರಂಗಪಡಿಸಿದ್ದಾರೆ. ʻʻವಿಮಾನ ನಿಲ್ದಾಣದಿಂದ ನೇರವಾಗಿ ರಜನಿಕಾಂತ್ ಅವರನ್ನು ಭೇಟಿ ಮಾಡಲು ಬಂದಿದ್ದೆ. ಹಾಗೂ ಪ್ರಯಾಣದಲ್ಲಿ ಕಂಫರ್ಟೇಬಲ್ ಆಗಿರಲು ಜೀನ್ಸ್ ಆಯ್ಕೆ ಮಾಡಿಕೊಂಡೆ. ಅದೇ ಜೀನ್ಸ್ ಧರಿಸಿ ರಜನಿಕಾಂತ್ ಅವರನ್ನು ಭೇಟಿಯಾದೆ. ಅವರನ್ನು ಭೇಟಿ ಆದ ನಂತರ ನನಗೆ‌ ಪಂಚೆ ತೊಡಬೇಕಿತ್ತು ಎಂದು ಅನ್ನಿಸಿತುʼʼಎಂದು ಹೇಳಿಕೊಂಡಿದ್ದಾರೆ.

ಕಾಂತಾರ ಬಾಕ್ಸ್‌ ಆಫೀಸ್‌ನಲ್ಲಿ 400 ಕೋಟಿ ರೂ. ಕಲೆಕ್ಷನ್‌ ಮಾಡಿ ಮುನ್ನುಗ್ಗುತ್ತಿದೆ. ವರದಿ ಪ್ರಕಾರ ಕಾಂತಾರ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಗೆ ಸಿದ್ಧವಾಗಿದ್ದು, ಮುಂದಿನ ವಾರ ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ ಪ್ರೀಮಿಯರ್ ಆಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

Kantara Movie (Jeans And Not A Panche rishab)

ಇದನ್ನೂ ಓದಿ | Kantara Movie | 50 ದಿನ ಪೂರೈಸಿ ಮುನ್ನುಗ್ಗುತ್ತಿರುವ ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ ಚಿತ್ರ ʻಕಾಂತಾರʼ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Kangana Ranaut: ಲೋಕಸಭಾ ಚುನಾವಣೆ: ಕಂಗನಾ ʻಎಮರ್ಜೆನ್ಸಿʼ ಸಿನಿಮಾ ಮತ್ತೆ ಪೋಸ್ಟ್‌ಪೋನ್‌!

 Kangana Ranaut: ಈ ಸಿನಿಮಾದಲ್ಲಿ ಕಂಗನಾ ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ನಟಿಸಿದ್ದಾರೆ. ಕಂಗನಾ ಈ ಬಾರಿ ತಮ್ಮ ತವರು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಸಿನಿಮಾ ಮುಂದೂಡಲಾಗಿದೆ. ಎಮರ್ಜೆನ್ಸಿಯಲ್ಲಿ ಅನುಪಮ್ ಖೇರ್, ಮಹಿಮಾ ಚೌಧರಿ, ಮಿಲಿಂದ್ ಸೋಮನ್, ಶ್ರೇಯಸ್ ತಲ್ಪಾಡೆ, ವಿಶಾಕ್ ನಾಯರ್ ಮತ್ತು ದಿವಂಗತ ಸತೀಶ್ ಕೌಶಿಕ್ ಕೂಡ ಕಾಣಿಸಿಕೊಂಡಿದ್ದಾರೆ. ಎಮರ್ಜೆನ್ಸಿ ಸಿನಿಮಾದಲ್ಲಿ ಕಂಗನಾ ಅವರು ದಿವಂಗತ ಪ್ರಧಾನಿ ಇಂದಿರಾ ಗಾಂಧಿಯವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

VISTARANEWS.COM


on

Kangana Ranaut's Emergency gets postponed again
Koo

ಬೆಂಗಳೂರು: ಕಂಗನಾ ರಣಾವತ್ (Kangana Ranaut) ಅವರು ತಮ್ಮ ನಿರ್ದೇಶನದ ʻಎಮರ್ಜೆನ್ಸಿʼ ಸಿನಿಮಾವನ್ನು ಮುಂದೂಡುವುದಾಗಿ ಘೋಷಿಸಿದ್ದಾರೆ. ಈ ಹಿಂದೆ ಈ ವರ್ಷ ನವೆಂಬರ್ 24ರಂದು ಎಮರ್ಜೆನ್ಸಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಲಾಗಿತ್ತು. ಪ್ರೊಡಕ್ಷನ್ ಬ್ಯಾನರ್ ಮಣಿಕರ್ಣಿಕಾ ಫಿಲ್ಮ್ಸ್ ತಮ್ಮ ಸಾಮಾಜಿಕ ಮಾಧ್ಯಮದ ಮೂಲಕ ಈ ಬಗ್ಗೆ ಹೊಸ ಅಪ್‌ಡೇಟ್‌ ಹಂಚಿಕೊಂಡಿದೆ. ‘ದೇಶಕ್ಕೆ ನನ್ನ ಕರ್ತವ್ಯ ಮತ್ತು ದೇಶಕ್ಕೆ ಸೇವೆ ಸಲ್ಲಿಸುವ ನನ್ನ ಬದ್ಧತೆಗೆ ಆದ್ಯತೆ ನೀಡುತ್ತಿರುವುದರಿಂದ’ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ಘೋಷಿಸಿದ್ದಾರೆ ಕಂಗನಾ.  ಈ ಸಿನಿಮಾದಲ್ಲಿ ಕಂಗನಾ ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ನಟಿಸಿದ್ದಾರೆ. ಕಂಗನಾ ಈ ಬಾರಿ ತಮ್ಮ ತವರು ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಸಿನಿಮಾ ಮುಂದೂಡಲಾಗಿದೆ.

ಮಣಿಕರ್ಣಿಕಾ ಫಿಲ್ಮ್ಸ್ ಈ ಬಗ್ಗೆ ಪೋಸ್ಟ್‌ ಮಾಡಿ ʻʻನಮ್ಮ ರಾಣಿ ಕಂಗನಾ ರಣಾವತ್‌ ರಾಷ್ಟ್ರಕ್ಕೆ ತಮ್ಮ ಕರ್ತವ್ಯ ಮತ್ತು ದೇಶ ಸೇವೆ ಮಾಡುವ ಬದ್ಧತೆಗೆ ಆದ್ಯತೆ ನೀಡುತ್ತಿರುವುದರಿಂದ, ನಮ್ಮ ಬಹು ನಿರೀಕ್ಷಿತ ಚಿತ್ರ ‘ಎಮರ್ಜೆನ್ಸಿ’ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಹೊಸ ಬಿಡುಗಡೆ ದಿನಾಂಕವನ್ನು ಶೀಘ್ರದಲ್ಲೇ ಅನೌನ್ಸ್‌ ಮಾಡಲಿದ್ದೇವೆ. ನಿಮ್ಮ ನಿರಂತರ ಬೆಂಬಲಕ್ಕಾಗಿ ಧನ್ಯವಾದಗಳುʼʼಎಂದು ಬರೆದುಕೊಂಡಿದೆ.

ಇದನ್ನೂ ಓದಿ: Kangana Ranaut: ಬಾಲಿವುಡ್‌ ʼಕ್ವೀನ್‌ʼ ಕಂಗನಾ ಹೆಸರಿನಲ್ಲಿದೆ 50 ಎಲ್ಐಸಿ ಪಾಲಿಸಿ; ಏಜೆಂಟ್‌ ಅತ್ಯಂತ ಲಕ್ಕಿ ಎಂದ ನೆಟ್ಟಿಗರು

ಈ ಚಿತ್ರವನ್ನು ಮೊದಲು ಜೂನ್ 14 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಜನವರಿಯಲ್ಲಿ ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಭಾಗವಹಿಸಿದ ಒಂದು ದಿನದ ನಂತರ ಕಂಗನಾ ʻಎಮರ್ಜೆನ್ಸಿʼ ಬಿಡುಗಡೆಯ ದಿನಾಂಕವನ್ನು ಘೋಷಿಸಿದ್ದರು. ಇದಾದ ಬಳಿಕ 2023ರ ನ.24ರಂದು ಥಿಯೇಟರ್‌ಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಮತ್ತೆ ಸಿನಿಮಾ ಬಿಡುಗಡೆಯಾಗುತ್ತಿಲ್ಲ ಎಂದು ಘೋಷಿಸಿದರು.

ಎಮರ್ಜೆನ್ಸಿಯಲ್ಲಿ ಅನುಪಮ್ ಖೇರ್, ಮಹಿಮಾ ಚೌಧರಿ, ಮಿಲಿಂದ್ ಸೋಮನ್, ಶ್ರೇಯಸ್ ತಲ್ಪಾಡೆ, ವಿಶಾಕ್ ನಾಯರ್ ಮತ್ತು ದಿವಂಗತ ಸತೀಶ್ ಕೌಶಿಕ್ ಕೂಡ ಕಾಣಿಸಿಕೊಂಡಿದ್ದಾರೆ. ಎಮರ್ಜೆನ್ಸಿ ಸಿನಿಮಾದಲ್ಲಿ ಕಂಗನಾ ಅವರು ದಿವಂಗತ ಪ್ರಧಾನಿ ಇಂದಿರಾ ಗಾಂಧಿಯವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಿತೇಶ್ ಶಾ ಕಥೆಯನ್ನು ಬರೆದಿದ್ದು, ಈ ಹಿಂದೆ ಅವರು ಕಂಗನಾ ಅವರ ಕೊನೆಯ ಚಿತ್ರ ಧಾಕಡ್ ಅನ್ನು ಸಹ ಬರೆದಿದ್ದಾರೆ. ಆದರೆ ಬಾಕ್ಸ್‌ ಆಫೀಸ್‌ನಲ್ಲಿ ಸಿನಿಮಾ ಗಳಿಕೆ ಕಂಡಿರಲಿಲ್ಲ. ಅನುಪಮ್ ಖೇರ್, ಮಿಲಿಂದ್ ಸೋಮನ್, ಮಹಿಮಾ ಚೌಧರಿ, ಸತೀಶ್ ಕೌಶಿಕ್ ಮತ್ತು ಶ್ರೇಯಸ್ ತಲ್ಪಡೆ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಪಾತ್ರವನ್ನು ಶ್ರೇಯಸ್ ತಲ್ಪಡೆ ನಿರ್ವಹಿಸಲಿದ್ದಾರೆ. 

ಕಂಗನಾ ಲೋಕಸಭೆ ಚುನಾವಣೆಗೆ ಮುನ್ನ ತಮ್ಮ ಪ್ರಚಾರ ಕಾರ್ಯಗಳಲ್ಲಿ ನಿರತರಾಗಿದ್ದಾರೆ. ಈಗಾಗಲೇ ಕಂಗನಾ ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಚುನಾವಣೆಗೆ ನಾಮಪತ್ರ ಸಲ್ಲಿಸಿದ ನಂತರ ಮಾತನಾಡಿದ ಕಂಗನಾ ಅವರು “ಇಂದು ನಾನು ಮಂಡಿ ಲೋಕಸಭಾ ಸ್ಥಾನದಿಂದ ನಾಮಪತ್ರ ಸಲ್ಲಿಸಿದ್ದೇನೆ. ಮಂಡಿಯಿಂದ ಸ್ಪರ್ಧಿಸುವ ಅವಕಾಶ ಸಿಕ್ಕಿರುವುದು ಹೆಮ್ಮೆಯ ಸಂಗತಿ. ಬಾಲಿವುಡ್ ನಲ್ಲಿ ಯಶಸ್ಸು ಕಂಡಿರುವ ನನಗೆ ರಾಜಕೀಯ ಕ್ಷೇತ್ರದಲ್ಲೂ ಯಶಸ್ಸು ಸಿಗುತ್ತದೆ ಎಂಬ ಭರವಸೆ ನನಗಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Continue Reading

ಸಿನಿಮಾ

777 Charlie: 6 ಮುದ್ದಾದ ಮರಿಗಳಿಗೆ ಜನ್ಮ ನೀಡಿದ ಚಾರ್ಲಿ: ರಕ್ಷಿತ್‌ ಶೆಟ್ಟಿ ಸರ್‌ಪ್ರೈಸ್‌ ಲೈವ್‌ !

777 Charlie: 2022ರ ಜೂನ್​ 10ರಂದು ‘777 ಚಾರ್ಲಿ’ ಸಿನಿಮಾ ಬಿಡುಗಡೆ ಆಗಿತ್ತು. ಸಿನಿಮಾದಲ್ಲಿ ಚಾರ್ಲಿ ಮುಖ್ಯ ಪಾತ್ರ ವಹಿಸಿತ್ತು. ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಮರಿಗಳಿಗೆ ಚಾರ್ಲಿ ಜನ್ಮ ನೀಡಿತ್ತು. ಆದರೆ ರಿಯಲ್​ ಲೈಫ್​ನಲ್ಲಿ ಇಷ್ಟು ವರ್ಷ ಕಳೆದರೂ ಚಾರ್ಲಿಗೆ ತಾಯಿ ಆಗುವ ಸಮಯ ಬಂದಿರಲಿಲ್ಲ. ಈಗ ಅದು ನೆರವೇರಿದೆ. ಈ ಚಿತ್ರದಲ್ಲಿ ಚಾರ್ಲಿಯ ಹೃದಯಸ್ಪರ್ಶಿ ಅಭಿನಯ ರಕ್ಷಿತ್ ಶೆಟ್ಟಿ ಅಭಿಮಾನಿಗಳು ಮಾತ್ರವಲ್ಲದೆ ಪ್ಯಾನ್-ಇಂಡಿಯಾ ಪ್ರೇಕ್ಷಕರನ್ನೂ ಗೆದ್ದಿತ್ತು. ಇದೀಗ ಚಾರ್ಲಿ ಚಾರ್ಲಿಯಾಗಿರುವ ಸುದ್ದಿಯನ್ನು ಅಭಿಮಾನಿಗಳೊಂದಿಗೆ ರಕ್ಷಿತ್ ಶೆಟ್ಟಿ ಲೈವ್ ನಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

777 Charlie Dog Gives Birth To 6 Puppies Rakshit Shetty on live
Koo

‘777 ಚಾರ್ಲಿ’ (777 Charlie) ಸಿನಿಮಾದಲ್ಲಿ ನಟಿಸಿದ ಚಾರ್ಲಿ ಈಗ ತಾಯಿ ಆಗಿದೆ. 6 ಮರಿಗಳಿಗೆ ಜನ್ಮ ನೀಡಿದೆ.

ನಟ ರಕ್ಷಿತ್ ಶೆಟ್ಟಿ (Rakshit Shetty) ಅವರು ಇನ್​ಸ್ಟಾಗ್ರಾಮ್​ನಲ್ಲಿ ಲೈವ್​ ಬಂದು ಅಭಿಮಾನಿಗಳಿಗೆ ಗುಡ್​ ನ್ಯೂಸ್​ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Cannes 2024: ʻಕಾನ್ ಫಿಲ್ಮ್ ಫೆಸ್ಟಿವಲ್‌ʼನಲ್ಲಿ ಪ್ರದರ್ಶನ ಕಾಣಲಿರುವ ಭಾರತೀಯ ಸಿನಿಮಾಗಳಿವು

2022ರ ಜೂನ್​ 10ರಂದು ‘777 ಚಾರ್ಲಿ’ ಸಿನಿಮಾ ಬಿಡುಗಡೆ ಆಗಿತ್ತು. ಸಿನಿಮಾದಲ್ಲಿ ಚಾರ್ಲಿ ಮುಖ್ಯ ಪಾತ್ರ ವಹಿಸಿತ್ತು. ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಮರಿಗಳಿಗೆ ಚಾರ್ಲಿ ಜನ್ಮ ನೀಡಿತ್ತು. ಆದರೆ ರಿಯಲ್​ ಲೈಫ್​ನಲ್ಲಿ ಇಷ್ಟು ವರ್ಷ ಕಳೆದರೂ ಚಾರ್ಲಿಗೆ ತಾಯಿ ಆಗುವ ಸಮಯ ಬಂದಿರಲಿಲ್ಲ. ಈಗ ಅದು ನೆರವೇರಿದೆ.

ರಕ್ಷಿತ್‌ ಶೆಟ್ಟಿ ಲೈವ್‌ಗೆ ಬಂದು ಮಾತನಾಡಿ ʻʻ777 ಚಾರ್ಲಿ ಸಿನಿಮಾ ಬಿಡುಗಡೆಯಾಗಿ 2 ವರ್ಷ ಆಗುತ್ತ ಬಂತು. ಒಂದು ವೇಳೆ ಚಾರ್ಲಿ ತಾಯಿಯಾದರೆ ಈ ಜರ್ನಿಗೆ ಒಂದು ಅರ್ಥ ಬರುತ್ತೆ ಎಂದು ನಾವು ಅದೆಷ್ಟೋ ಬಾರಿ ಯೋಚಿಸಿದ್ದೇವು. ಕಿರಣ್‌ ರಾಜ್‌ ನಾವೆಲ್ಲ ಚಾರ್ಲಿ ತಾಯಿಯಾಗಬೇಕು ಎಂದು ಕಾದಿದ್ದೆವುʼʼಎಂದರು.

ʻʻಪ್ರಮೋದ್‌ ಜತೆ ಚಾರ್ಲಿ ಇರುತ್ತದೆ. ಅವರು ಕಾಲ್‌ ಮಾಡಿದಾಗೆಲ್ಲ ಕೇಳುತ್ತಿದ್ದೆ. ಅದಕ್ಕೆ ವಯಸ್ಸು ಆಗಿದ್ದರಿಂದ ಏನಾಗತ್ತೋ ಗೊತ್ತಿಲ್ಲ ಅಂತ ಅವರು ಹೇಳುತ್ತಿದ್ದರು. ಮೇ 9ರಂದು ಚಾರ್ಲಿ 6 ಮರಿಗಳಿಗೆ ಜನ್ಮ ನೀಡಿದೆ. ಹಾಗಾಗಿ ಚಾರ್ಲಿ ಮತ್ತು ಅದರ ಮರಿಗಳನ್ನು ನೋಡಲು ನಾನು ಮೈಸೂರಿಗೆ ಬಂದೆ’ ಎಂದಿದ್ದಾರೆ ರಕ್ಷಿತ್​ ಶೆಟ್ಟಿ.

Continue Reading

Lok Sabha Election 2024

Kangana Ranaut: ಬಾಲಿವುಡ್‌ ʼಕ್ವೀನ್‌ʼ ಕಂಗನಾ ಹೆಸರಿನಲ್ಲಿದೆ 50 ಎಲ್ಐಸಿ ಪಾಲಿಸಿ; ಏಜೆಂಟ್‌ ಅತ್ಯಂತ ಲಕ್ಕಿ ಎಂದ ನೆಟ್ಟಿಗರು

Kangana Ranaut: ಬಾಲಿವುಡ್‌ ʼಕ್ವೀನ್‌ʼ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟಿ ಕಂಗನಾ ರಣಾವತ್​ ಈಗ ರಾಜಕೀಯದತ್ತ ಮುಖ ಮಾಡಿದ್ದಾರೆ. ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿಯಿಂದ ಸ್ಪರ್ಧಿಸುತ್ತಿದ್ದಾರೆ. ಮೇ 14ರಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಅವರು ತಮ್ಮ ಬಳಿ 91 ಕೋಟಿ ರೂ.ಗಳ ಆಸ್ತಿ ಇರುವುದಾಗಿ ಘೋಷಿಸಿದ್ದಾರೆ. ಅವರ ಹೆಸರಿನಲ್ಲಿ 50 ಜೀವ ವಿಮಾ ನಿಗಮ (ಎಲ್ಐಸಿ) ಪಾಲಿಸಿಗಳಿವೆ. ಸದ್ಯ ಇದು ನೆಟ್ಟಿಗರ ಗಮನ ಸೆಳೆದಿದೆ. ಈ ಬಗ್ಗೆ ನಾನಾ ರೀತಿಯ ಕಮೆಂಟ್‌ ಮಾಡುತ್ತಿದ್ದಾರೆ.

VISTARANEWS.COM


on

Kangana Ranaut
Koo

ಧರ್ಮಶಾಲಾ: ಒಂದಲ್ಲ ಒಂದು ವಿವಾದದ ಮೂಲಕವೇ ಸದಾ ಸುದ್ದಿಯಲ್ಲಿರುವ ಬಾಲಿವುಡ್‌ ನಟಿ ಕಂಗನಾ ರಣಾವತ್​ (Kangana Ranaut) ಈಗ ರಾಜಕೀಯದತ್ತ ಮುಖ ಮಾಡಿದ್ದಾರೆ. ಅವರು ಈ ಬಾರಿಯ ಲೋಕಸಭಾ ಚುನಾವಣೆ (Lok Sabha Election 2024)ಯಲ್ಲಿ ಸ್ಪರ್ಧಿಸುತ್ತಿದ್ದು, ಹಿಮಾಚಲ ಪ್ರದೇಶದ ಮಂಡಿಯಿಂದ ಮೇ 14ರಂದು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಅವರು ತಮ್ಮ ಬಳಿ 91 ಕೋಟಿ ರೂ.ಗಳ ಆಸ್ತಿ ಇರುವುದಾಗಿ ಘೋಷಿಸಿದ್ದಾರೆ. ಅವರ ಆಸ್ತಿಯಲ್ಲಿ 28.7 ಕೋಟಿ ರೂ.ಗಳ ಚರಾಸ್ತಿ ಮತ್ತು 62.9 ಕೋಟಿ ರೂ.ಗಳ ಸ್ಥಿರಾಸ್ತಿ ಸೇರಿವೆ. ಜತೆಗೆ ಅವರ ಹೆಸರಿನಲ್ಲಿ 50 ಜೀವ ವಿಮಾ ನಿಗಮ (ಎಲ್ಐಸಿ) ಪಾಲಿಸಿಗಳಿವೆ. ಸದ್ಯ ಇದು ನೆಟ್ಟಿಗರ ಗಮನ ಸೆಳೆದಿದೆ. ಈ ಬಗ್ಗೆ ನಾನಾ ರೀತಿಯ ಕಮೆಂಟ್‌ ಮಾಡುತ್ತಿದ್ದಾರೆ.

ನೆಟ್ಟಿಗರು ಏನಂದ್ರು?

ʼʼಕಂಗನಾ ರಾಣಾವತ್‌ 50 ಎಲ್‌ಐಸಿ ಪಾಲಿಸಿ ಹಿಂದಿದ್ದಾರೆ. ಏಜೆಂಟ್‌ ಉತ್ತಮ ಕೆಲಸ ಮಾಡಿದ್ದಾರೆʼʼ ಎಂದು ಒಬ್ಬರು ಹೇಳಿದ್ದಾರೆ. ʼʼಕಂಗನಾ ರಾಣಾವತ್‌ 50 ಎಲ್ಐಸಿ ಪಾಲಿಸಿಗಳನ್ನು ಹೊಂದಿದ್ದಾರೆ! ಇದು ಭಾರತದಲ್ಲಿ ಆರ್ಥಿಕ ಸಾಕ್ಷರತೆಯ ವ್ಯಾಪಕ ಕೊರತೆಯನ್ನು ಎತ್ತಿ ತೋರಿಸುತ್ತದೆ. ಅನೇಕ ಎಲ್ಐಸಿ ಪಾಲಿಸಿಗಳನ್ನು ಖರೀದಿಸುವ ಮನಸ್ಥಿತಿಯನ್ನು ಯಾರೂ ವಿರೋಧಿಸಲು ಸಾಧ್ಯವಿಲ್ಲ ಎನ್ನುವುದು ಈ ಮೂಲಕ ಸಾಬೀತಾಗಿದೆ. ನಿಮ್ಮ ಸುತ್ತಮುತ್ತ ಇದೇ ರೀತಿಯ ಅನೇಕ ಪಾಲಿಸಿ ಖರೀದಿಗಳ ಪ್ರಕರಣಗಳನ್ನು ಗಮನಿಸಿದ್ದೀರಾ?ʼʼ ಎಂದು ಇನ್ನೊಬ್ಬರು ಪ್ರಶ್ನಿಸಿದ್ದಾರೆ.

ʼʼಕಂಗನಾ ಅವರ ಎಲ್‌ಐಸಿ ಏಜೆಂಟ್‌ ಅದೃಷ್ಟವಂತ. ಅವರು ಫುಲ್‌ ಖುಷಿಯಾಗಿರಬಹುದು. ಬಹುಶಃ ಏಜೆಂಟ್‌ ಅವರ ಸಂಬಂಧಿಕರಿರಬಹುದುʼʼ ಎಂದು ಮತ್ತೊಬ್ಬರು ಕಾಲೆಳೆದಿದ್ದಾರೆ. ʼʼಕಂಗನಾ ರಾಣಾವತ್‌ 50 ಎಲ್‌ಐಸಿ ಪಾಲಿಸಿ ಮಾಡಿಸುವ ಮೂಲಕ ಆರ್ಥಿಕ ಸಾಕ್ಷರತೆಯ ಉತ್ತುಂಗದಲ್ಲಿದ್ದಾರೆʼʼ ಎಂದು ಇನ್ನೊಬ್ಬರು ಕಮೆಂಟ್‌ ಮಾಡಿದ್ದಾರೆ. ʼʼಕಂಗನಾ ಅವರ ಆಸ್ತಿ ಮೌಲ್ಯ 90 ಕೋಟಿ ರೂ. ಅವರು ಯಾವುದೇ ಸ್ಟಾಕ್‌ ಅಥವಾ ಮ್ಯೂಚುವಲ್‌ ಫಂಡ್‌ನಲ್ಲಿ ಹೂಡಿಕೆ ಮಾಡಿಲ್ಲ. ಆದರೆ 50 ಎಲ್‌ಐಸಿ ಪಾಲಿಸಿ ಹೊಂದಿದ್ದಾರೆʼʼ ಎಂದು ಮಗದೊಬ್ಬರು ತಿಳಿಸಿದ್ದಾರೆ. ಒಟ್ಟಿನಲ್ಲಿ ಈ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ವ್ಯಾಪಕ ಚರ್ಚೆಯನ್ನೇ ಹುಟ್ಟು ಹಾಕಿದೆ.

5 ಕೋಟಿ ರೂ. ಮೌಲ್ಯದ ಚಿನ್ನಾಭರಣ

ಬಾಲಿವುಡ್‌ನ ಟಾಪ್‌ ನಟಿಯಲ್ಲಿ ಒಬ್ಬರೆನಿಸಿಕೊಂಡಿರುವ ಕಂಗನಾ ಪ್ರತೀ ಚಿತ್ರಕ್ಕೆ ದುಬಾರಿ ಸಂಭಾವನೆ ಪಡೆಯುತ್ತಾರೆ. ಇತ್ತೀಚಿನ ಅವರ ಚಿತ್ರಗಳು ಹಿಟ್‌ ಆಗದಿದ್ದರೂ ಅವರ ಬೇಡಿಕೆ ಒಂದಿನಿತೂ ಕಡಿಮೆ ಆಗಲಿಲ್ಲ. ಜಾಹೀರಾತು ಮೂಲಕವೂ ಅವರು ಆದಾಯ ಗಳಿಸುತ್ತಿದ್ದಾರೆ. ಅವರ ಬಳಿ 5 ಕೋಟಿ ರೂ. ಮೌಲ್ಯದ 6.7 ಕೆಜಿ ಚಿನ್ನ, 50 ಲಕ್ಷ ರೂ. ಮೌಲ್ಯದ 60 ಕೆಜಿ ಬೆಳ್ಳಿ, 3 ಕೋಟಿ ರೂ. ಮೌಲ್ಯದ 14 ಕ್ಯಾರೆಟ್ ವಜ್ರದ ಆಭರಣಗಳಿವೆ. 2 ಲಕ್ಷ ರೂ. ನಗದು ಮತ್ತು ಸುಮಾರು 1.35 ಕೋಟಿ ರೂ.ಗಳ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರುವುದಾಗಿ ಕಂಗನಾ ತಿಳಿಸಿದ್ದಾರೆ.

ಇದನ್ನೂ ಓದಿ: Kangana Ranaut: ವಿಶೇಷ ಗೆಟಪ್ ನಲ್ಲಿ ಮತದಾರರ ಸೆಳೆಯುತ್ತಿರುವ ಕಂಗನಾ ರಣಾವತ್

17 ಕೋಟಿ ರೂ. ಸಾಲ

ಕಂಗನಾ ಚಂಡೀಗಢದಲ್ಲಿ ನಾಲ್ಕು ವಾಣಿಜ್ಯ ಸಂಕೀರ್ಣಗಳು, ಮುಂಬೈನಲ್ಲಿ ವಾಣಿಜ್ಯ ಆಸ್ತಿ ಮತ್ತು ಮನಾಲಿಯಲ್ಲಿ ವಾಣಿಜ್ಯ ಕಟ್ಟಡ ಸೇರಿದಂತೆ ದೇಶಾದ್ಯಂತ ವಿವಿಧ ಆಸ್ತಿಗಳನ್ನು ಹೊಂದಿದ್ದಾರೆ. ಅವರು ಮುಂಬೈನಲ್ಲಿ 16 ಕೋಟಿ ರೂ ಮೌಲ್ಯದ ಮೂರು ಫ್ಲ್ಯಾಟ್ ಗಳನ್ನು ಮತ್ತು ಮನಾಲಿಯಲ್ಲಿ 15 ಕೋಟಿ ರೂ ಮೌಲ್ಯದ ಬಂಗಲೆಯನ್ನು ಹೊಂದಿದ್ದಾರೆ. ಅಲ್ಲದೆ ಮೂರು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. 98 ಲಕ್ಷ ರೂ ಮೌಲ್ಯದ ಬಿಎಂಡಬ್ಲ್ಯು, 58 ಲಕ್ಷ ರೂ ಮೌಲ್ಯದ ಮರ್ಸಿಡಿಸ್ ಬೆಂಜ್ ಮತ್ತು 3.91 ಕೋಟಿ ರೂ ಮೌಲ್ಯದ ಮರ್ಸಿಡಿಸ್ ಮೇಬ್ಯಾಕ್ ಅವರಲ್ಲಿದೆ. ಜತೆಗೆ 17 ಕೋಟಿ ರೂ.ಗಳ ಸಾಲ ಇರುವುದಾಗಿಯೂ ಘೋಷಿಸಿಕೊಂಡಿದ್ದಾರೆ.

Continue Reading

ಸಿನಿಮಾ

Rajkummar Rao: ಮುಂಬಯಿಗೆ ಬಂದು ಶಾರುಕ್‌ ಮನೆ ಮುಂದೆ ದಿನವಿಡೀ ಕಾದಿದ್ದರಂತೆ ನಟ ರಾಜ್‌ಕುಮಾರ್ ರಾವ್‌!

ದೃಷ್ಟಿಹೀನ ಕೈಗಾರಿಕೋದ್ಯಮಿ ಶ್ರೀಕಾಂತ್ ಬೊಲ್ಲ ಅವರ ಜೀವನ ಚರಿತ್ರೆಯನ್ನು ಆಧರಿಸಿದ ಶ್ರೀಕಾಂತ್ ಚಿತ್ರ ಗಲ್ಲಾ ಪೆಟ್ಟಿಗೆಯಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದ್ದು, ಚಿತ್ರದ ಕುರಿತು ಅಗಾಧ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟ ರಾಜ್‌ಕುಮಾರ್ ರಾವ್ (Rajkummar Rao) ಅವರು ತಾವು ನಡೆದು ಬಂದ ಬದುಕಿನ ಹಾದಿಯನ್ನು ನೆನಪಿಸಿಕೊಂಡರು.

VISTARANEWS.COM


on

By

Rajkummar Rao
Koo

ತುಷಾರ್ ಹಿರಾನಂದಾನಿ (Tushar Hiranandani) ನಿರ್ದೇಶನದ ದೃಷ್ಟಿಹೀನ ಕೈಗಾರಿಕೋದ್ಯಮಿ ಶ್ರೀಕಾಂತ್ ಬೊಲ್ಲ (Srikanth Bolla) ಅವರ ಜೀವನ ಚರಿತ್ರೆಯನ್ನು ಆಧರಿಸಿದ ʼಶ್ರೀಕಾಂತ್ʼ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಬಾಲಿವುಡ್ ನಟ (Bollywood actor) ರಾಜ್ ಕುಮಾರ್ ರಾವ್ (Rajkummar Rao) ಅಭಿನಯಕ್ಕೆ ಭಾರಿ ಮೆಚ್ಚುಗೆ ಕೇಳಿ ಬರುತ್ತಿದೆ.

ಚಿತ್ರದ ಕುರಿತು ಅಗಾಧ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟ ರಾಜ್‌ಕುಮಾರ್ ರಾವ್ ಅವರು ತಾವು ನಡೆದು ಬಂದಿದ್ದ ಹಾದಿಯನ್ನು ನೆನಪಿಸಿಕೊಂಡರು. ರಾಜ್ ಕುಮಾರ್ ಅವರು ತಮ್ಮ ತವರು ಗುರುಗ್ರಾಮ್ ನಿಂದ ಮುಂಬಯಿಗೆ ಆಗಮಿಸಿದ ಬಳಿಕ ತಮ್ಮ ವೃತ್ತಿಜೀವನದ ಆರಂಭಿಕ ದಿನಗಳನ್ನು ನೆನಪಿಸಿಕೊಂಡರು. ನಾನು ಬೆಳೆಯುತ್ತಿರುವಾಗ ಗುರುಗ್ರಾಮ್ ಅಷ್ಟು ದೊಡ್ಡ ನಗರವಾಗಿರಲಿಲ್ಲ. ಅದಕ್ಕೆ ಹೋಲಿಸಿದರೆ ಆಗ ನನಗೆ ಮುಂಬಯಿ ತುಂಬಾ ದುಬಾರಿಯಾಗಿತ್ತು. ವಿಶೇಷವಾಗಿ ನಾನು ತುಂಬಾ ವಿನಮ್ರ ಹಿನ್ನೆಲೆಯಿಂದ ಬಂದವನಾಗಿದ್ದೆ. ಸಾಂಸ್ಕೃತಿಕ ಭಿನ್ನತೆಯೂ ಎದ್ದುಕಾಣುತ್ತಿತ್ತು. ಆದರೆ ನಾನು ಇಲ್ಲಿಯೇ ಉಳಿಯಬೇಕಾಗಿತ್ತು ಮತ್ತು ನಾನು ಯಾವಾಗಲೂ ಮುಂಬಯಿ ಬಗ್ಗೆ ಅಪಾರ ಪ್ರೀತಿಯನ್ನು ಹೊಂದಿದ್ದೆ ಎಂದು ಅವರು ವಿ.ಆರ್. ಯುವಾ ಜೊತೆಗಿನ ಚಾಟ್‌ನಲ್ಲಿ ಹೇಳಿಕೊಂಡರು.

ನಾನು 10ನೇ ತರಗತಿಯನ್ನು ಪೂರ್ಣಗೊಳಿಸಿದ ತಕ್ಷಣ, ಬೂಗೀ ವೂಗೀ ನೃತ್ಯ ಸ್ಪರ್ಧೆಯ ಟಿವಿ ಸರಣಿ ಆಡಿಷನ್ ನೀಡಲು ಮುಂಬಯಿಗೆ ಬಂದೆ. ಆಗ ನಾನು ಮುಂಬಯಿ ನಗರ ಮತ್ತು ಶಾರುಖ್ ಖಾನ್ ಅವರ ಮನೆಯನ್ನು ನೋಡಲು ಬಯಸಿದ್ದೆ. ಆಗ ನನಗೆ 16 ವರ್ಷ. ನನ್ನ 12 ವರ್ಷದ ಸೋದರ ಸಂಬಂಧಿಯೊಂದಿಗೆ ರೈಲಿನಲ್ಲಿ ನಗರಕ್ಕೆ ಬಂದಿದ್ದೆ. ನಮ್ಮಿಬ್ಬರ ಬಳಿಯೂ ಹಣವಿಲ್ಲದ ಕಾರಣ ಚಿಕ್ಕಮ್ಮನಿಂದ 5 ಸಾವಿರ ರೂ. ಪಡೆದು ಬಂದಿದ್ದೆವು. ನನ್ನ ಕುಟುಂಬವು ತುಂಬಾ ಬೆಂಬಲ ನೀಡಿತು. ಇಬ್ಬರು ಮಕ್ಕಳು ಮೂರು ದಿನ ರೈಲು ಪ್ರಯಾಣ ಮಾಡಿ ಮುಂಬಯಿಗೆ ಬಂದಿದ್ದೆವು. ಇಲ್ಲಿಗೆ ಬಂದ ಬಳಿಕ ನಗರವನ್ನು ನೋಡಿ ಮೈಮರೆತಿದ್ದೆ ಎಂದು ಅವರು ನೆನಪಿಸಿಕೊಂಡರು. ಬೂಗಿ ವೂಗಿ ಆಡಿಷನ್‌ಗೆ ಹಾಜರಾಗಿದ್ದರೂ ಆಯ್ಕೆಯಾಗಲಿಲ್ಲ ಎಂದು ಪ್ರಸ್ತಾಪಿಸಿದ ರಾಜ್‌ಕುಮಾರ್, ಮುಂಬಯಿಗೆ ತನ್ನ ಮೊದಲ ಭೇಟಿಯ ನೆನಪುಗಳನ್ನು ಮೆಲುಕು ಹಾಕಿದರು.

ಶಾರುಖ್ ಖಾನ್ ಭೇಟಿಯಾಗುವ ಹಂಬಲ

ಇಡೀ ದಿನ ಶಾರುಖ್ ಖಾನ್ ಅವರ ಮನೆಯ ಮುಂದೆ ಕಾಯುತ್ತಿದ್ದೆವು. ರಾತ್ರಿ, ನಾವು ರೈಲ್ವೇ ನಿಲ್ದಾಣದಲ್ಲಿಯೇ ಉಳಿದುಕೊಂಡೆವು ಮತ್ತು ಆಗ ನಮಗೆ ಹಣವಿಲ್ಲದ ಕಾರಣ ಕೇವಲ ವಡಾ ಪಾವ್ ಅನ್ನು ಸೇವಿಸಿದ್ದೇವೆ. ಎರಡು ದಿನ ಇಲ್ಲಿದ್ದೆವು. ಬೆಳಗ್ಗೆ 10 ಗಂಟೆಗೆ ಮನ್ನತ್ ತಲುಪಿ ಸಂಜೆ 4-5 ಗಂಟೆಯವರೆಗೆ ಕಾಯುತ್ತಿದ್ದೆವು. ನಾವು ಅವರನ್ನು ನೋಡಲೇಬೇಕು ಎಂಬ ಕನಸಿತ್ತು.

ಕೊನೆಗೂ ಶಾರುಖ್ ಖಾನ್ ಅವರನ್ನು ಮುಖಾಮುಖಿಯಾಗಿ ಭೇಟಿಯಾದುದನ್ನು ನೆನಪಿಸಿಕೊಂಡ ರಾಜ್‌ಕುಮಾರ್, ನಾನು ನಟನಾಗಲು ಅವರು ಸ್ಫೂರ್ತಿ. ಅವರ ಬದುಕಿನ ಪ್ರಯಾಣದಿಂದ ನಾನು ತುಂಬಾ ಪ್ರಭಾವಿತನಾಗಿದ್ದೆ ಮತ್ತು ಸ್ಫೂರ್ತಿ ಪಡೆದಿದ್ದೇನೆ. ವಿಶೇಷವಾಗಿ ಅವರು ದೆಹಲಿಯವರು. ಹೊರಗಿನವರು ಮತ್ತು ರಂಗಭೂಮಿ ಹಿನ್ನೆಲೆಯನ್ನು ಹೊಂದಿದ್ದರು. ಆದರೆ ಅವರನ್ನು ಭೇಟಿಯಾಗುವುದು ತುಂಬಾ ಅಸಾಧ್ಯ ಎಂದೆನಿಸುತ್ತಿತ್ತು.

ಆ ಸಮಯದಲ್ಲಿ ಸಿಟಿಲೈಟ್ಸ್ (2014) ಅನ್ನು ಪ್ರಚಾರ ಮಾಡುತ್ತಿದ್ದೆವು. ಅವರು ಮೆಹಬೂಬ್ ಸ್ಟುಡಿಯೋದಲ್ಲಿ ಶೂಟಿಂಗ್ ಮಾಡುತ್ತಿದ್ದಾರೆ ಎಂದು ತಿಳಿಯಿತು. ನಾನು ಅವರನ್ನು ಭೇಟಿಯಾಗಬೇಕೆಂದು ಬಯಸಿದ್ದರೂ, ನನಗೆ ಆರಂಭದಲ್ಲಿ ಭಯವಾಯಿತು. ನಾನು ಅಲ್ಲಿದ್ದ ಶಕುನ್ (ಬಾತ್ರಾ) ಗೆ ಮೆಸೇಜ್ ಮಾಡಿದೆ. ಅನಂತರ ಅವರು ಹಿಂತಿರುಗಿದರು ಮತ್ತು ಅವರು ಎಸ್ ಆರ್ ಕೆ ನನಗೆ ಕರೆ ಮಾಡುತ್ತಿದ್ದಾರೆ ಎಂದು ಹೇಳಿದರು. ನಾನು ತಕ್ಷಣ ನನ್ನನ್ನು ಪರಿಚಯಿಸಲು ಮತ್ತು ನನ್ನ ಹೆಸರನ್ನು ರಾಜ್‌ಕುಮಾರ್ ರಾವ್ ಮತ್ತು ನಾನು ಎಫ್‌ಟಿಐಐನಲ್ಲಿ ಓದಿದ ನಟ ಎಂದು ಹೇಳಲು ತಯಾರಿ ನಡೆಸಲಾರಂಭಿಸಿದೆ. ಆದರೆ ಅವರಿಗೆ ನನ್ನ ಬಗ್ಗೆ ಎಲ್ಲವೂ ತಿಳಿದಿತ್ತು. “ಶಾಹಿದ್‌ʼಗಾಗಿ ನಾನು ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದೇನೆ, ʼಕೈ ಪೋ ಚೆʼ ಚಿತ್ರ ಚೆನ್ನಾಗಿದೆ ಮತ್ತು ʼಸಿಟಿಲೈಟ್ಸ್ʼ ಶೀಘ್ರದಲ್ಲೇ ಬರಲಿದೆ ಎಂದು ಅವರು ತಿಳಿದಿದ್ದರು. ಅದರ ಅನಂತರ ಶಾರುಖ್ ಖಾನ್ ಅವರನ್ನು ಹಲವು ಬಾರಿ ಭೇಟಿ ಮಾಡಿದರೂ, ಅವರು ಮತ್ತೆ ಬಾಲಿವುಡ್‌ನ ಬಾದ್‌ಶಾ ಅವರನ್ನು ಎದುರಿಸಿದಾಗಲೆಲ್ಲಾ ಅವರು ಸ್ಟಾರ್-ಸ್ಟ್ರಕ್ ಆಗುತ್ತಾರೆ ಎಂದು ರಾಜ್‌ಕುಮಾರ್ ಹೇಳಿದರು.

ಇದನ್ನೂ ಓದಿ: House of the Dragon: ‘ಹೌಸ್ ಆಫ್ ದಿ ಡ್ರ್ಯಾಗನ್’ ಸೀಸನ್ 2 ಟ್ರೈಲರ್‌ ಔಟ್‌!

ಈಗಲೂ ನನಗೆ ಹಿರಿಯ ನಾಯಕರ ಕರೆ ಬಂದರೆ ಅದರಲ್ಲೂ ಅಕ್ಷಯ್ ಕುಮಾರ್ ಅಥವಾ ಶಾರುಖ್ ಖಾನ್ ಕರೆ ಮಾಡಿದರೆ ನಾನು ತುಂಬಾ ಉತ್ಸುಕನಾಗುತ್ತೇನೆ. ನನ್ನೊಳಗಿನ ಅಭಿಮಾನಿ ಮತ್ತು ಗುರ್ಗಾಂವ್‌ನ ಮಗು ಇನ್ನೂ ಜೀವಂತವಾಗಿದೆ ಎಂಬಂತೆ ಭಾಸವಾಗುತ್ತದೆ ಎಂದು ಹೇಳಿದರು.

Continue Reading
Advertisement
GT vs SRH
ಕ್ರೀಡೆ7 mins ago

GT vs SRH: ಇಂದು ಲ್ಯಾವೆಂಡರ್ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ಗುಜರಾತ್​ ತಂಡ; ಇದರ ಉದ್ದೇಶವೇನು?

mlc election congress candidate gift boxes
ಬೆಂಗಳೂರು31 mins ago

MLC Election: ಮತದಾರರಿಗೆ ಬೆಂಗಳೂರು ಕಾಂಗ್ರೆಸ್‌ ಅಭ್ಯರ್ಥಿ ಆಮಿಷ? ಸಾವಿರಾರು ಗಿಫ್ಟ್‌ ಬಾಕ್ಸ್‌ಗಳು ಪತ್ತೆ

Pakistan
ವಿದೇಶ33 mins ago

Pakistan: “ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ, ಆದರೆ ನಾವು..” ಪಾಕ್‌ ಸಂಸದನ ಭಾಷಣ ವೈರಲ್‌

Kangana Ranaut's Emergency gets postponed again
ಬಾಲಿವುಡ್43 mins ago

Kangana Ranaut: ಲೋಕಸಭಾ ಚುನಾವಣೆ: ಕಂಗನಾ ʻಎಮರ್ಜೆನ್ಸಿʼ ಸಿನಿಮಾ ಮತ್ತೆ ಪೋಸ್ಟ್‌ಪೋನ್‌!

T20 World Cup 2024
ಕ್ರೀಡೆ50 mins ago

KMF Nandini Logo: ನಂದಿನಿ ಲೋಗೋ ಇರುವ ಜೆರ್ಸಿ ಅನಾವರಣಗೊಳಿಸಿದ ಸ್ಕಾಟ್ಲೆಂಡ್

Job Alert
ಉದ್ಯೋಗ52 mins ago

Job Alert: ಗುಡ್‌ನ್ಯೂಸ್‌: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಕೆಪಿಎಸ್‌ಸಿ; ಇಲ್ಲಿದೆ ಹೊಸ ವೇಳಾಪಟ್ಟಿ

IPL 2024 Points Table
ಕ್ರೀಡೆ1 hour ago

IPL 2024 Points Table: ಪಂಜಾಬ್​ಗೆ ಗೆಲುವು; ಅಂಕಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದ ಮುಂಬೈ

Indian Railway
ಮಹಿಳೆ1 hour ago

Indian Railway: ಮಹಿಳಾ ಪ್ರಯಾಣಿಕರಿಗೆ ರೈಲಿನಲ್ಲಿ ಎಷ್ಟೊಂದು ಸುರಕ್ಷತಾ ಕ್ರಮಗಳಿವೆ ನೋಡಿ!

pes students self harming
ಕ್ರೈಂ1 hour ago

Student Self harming: ಪಿಇಎಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ, ಪೋಷಕರ ಪ್ರತಿಭಟನೆ; ಟಾಪರ್‌ಗಳೇ ಸಾಯ್ತಿರೋದ್ಯಾಕೆ?

Sachin Tendulkar
ದೇಶ2 hours ago

Sachin Tendulkar: ಸಚಿನ್ ತೆಂಡೂಲ್ಕರ್ ಸೆಕ್ಯೂರಿಟಿ ಗಾರ್ಡ್‌ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ3 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ3 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌