Kashi Tamil Sangamam | ದಕ್ಷಿಣ ಹಾಗೂ ಉತ್ತರ ಭಾರತ ಬೆಸೆಯುವ ಕಾಶಿ ತಮಿಳು ಸಂಗಮಂಗೆ ಮೋದಿ ಚಾಲನೆ - Vistara News

ದೇಶ

Kashi Tamil Sangamam | ದಕ್ಷಿಣ ಹಾಗೂ ಉತ್ತರ ಭಾರತ ಬೆಸೆಯುವ ಕಾಶಿ ತಮಿಳು ಸಂಗಮಂಗೆ ಮೋದಿ ಚಾಲನೆ

ದಕ್ಷಿಣ ಭಾರತ ಹಾಗೂ ಉತ್ತರ ಭಾರತದ ಕಲೆ, ಸಂಸ್ಕೃತಿ, ಆಚಾರ ವಿಚಾರಗಳನ್ನು ಒರೆಗೆ ಹಚ್ಚುವ ವಿಶೇಷ ಕಾಶಿ ತಮಿಳು ಸಂಗಮಂಗೆ (Kashi Tamil Sangamam) ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

VISTARANEWS.COM


on

Kashi Tamil Sangamam Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿ ದಕ್ಷಿಣ ಭಾರತ ಹಾಗೂ ಉತ್ತರ ಭಾರತದ ನಡುವಿನ ವಿಶೇಷ ನಂಟು, ಕಲೆ, ಆಚಾರ, ವಿಚಾರ, ಸಂಸ್ಕೃತಿಯಲ್ಲಿರುವ ಸಮಾನ ಅಂಶಗಳು, ಪುರಾತನ ಬೆಸುಗೆ ಕುರಿತು ಅರಿಯುವ, ಅಧ್ಯಯನ ನಡೆಸುವ, ಇತಿಹಾಸಕ್ಕೆ ಎಡತಾಕುವ ವಿಶೇಷ “ಕಾಶಿ ತಮಿಳು ಸಂಗಮಂ”ಗೆ (Kashi Tamil Sangamam) ಪ್ರಧಾನಿ ನರೇಂದ್ರ ಮೋದಿ ಅವರು ಕಾಶಿಯಲ್ಲಿ ಚಾಲನೆ ನೀಡಿದ್ದಾರೆ.

ಕಾಶಿ ತಮಿಳು ಸಂಗಮಂಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಮೋದಿ, “ಇದೊಂದು ವಿಶೇಷ ಕಾರ್ಯಕ್ರಮವಾಗಿದೆ. ದಕ್ಷಿಣ ಭಾರತ ಹಾಗೂ ಉತ್ತರ ಭಾರತವು ವಿಭಿನ್ನ, ವಿಶೇಷ ನಂಟು, ಬೆಸುಗೆ ಹೊಂದಿವೆ. ಕಾಶಿ ಹಾಗೂ ತಮಿಳುನಾಡು ಶಿವಮಯವಾಗಿವೆ, ಶಕ್ತಿಮಯವಾಗಿವೆ. ಹಾಗೆ ನೋಡಿದರೆ, ಕಾಶಿ ಅಭಿವೃದ್ಧಿಗೆ ತಮಿಳುನಾಡಿನ ಕೊಡುಗೆ ಅಪಾರವಾಗಿದೆ. ಬನಾರಸ್‌ ಹಿಂದು ವಿವಿ ಕುಲಪತಿಯಾಗಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್‌ ಅವರು ಹಲವು ಬದಲಾವಣೆಗೆ ಸಾಕ್ಷಿಯಾಗಿದ್ದಾರೆ” ಎಂದು ಸ್ಮರಿಸಿದರು.

ಏನಿದು ಕಾಶಿ ತಮಿಳು ಸಂಗಮಂ?

ದಕ್ಷಿಣ ಹಾಗೂ ಉತ್ತರ ಭಾರತದ ಬೆಸುಗೆ ಕುರಿತು ಅಧ್ಯಯನ, ಚಿಂತನ ಮಂಥನ ನಡೆಸುವ ವಿಶೇಷ ಕಾರ್ಯಕ್ರಮವೇ ಕಾಶಿ ತಮಿಳು ಸಂಗಮಂ ಆಗಿದೆ. ನವೆಂಬರ್‌ 19ರಿಂದ 30 ದಿನಗಳವರೆಗೆ ಈ ಮಹಾ ಸಂಗಮ ಕಾರ್ಯಕ್ರಮ ನಡೆಯಲಿದ್ದು, ತಮಿಳುನಾಡಿನ 2,500ಕ್ಕೂ ಹೆಚ್ಚಿನ ಗಣ್ಯರು ಕಾಶಿಯಲ್ಲಿ ಬೀಡುಬಿಟ್ಟಿದ್ದಾರೆ.

ಸಾಹಿತಿಗಳು, ವ್ಯಾಪಾರಿಗಳು, ಬುದ್ಧಿಜೀವಿಗಳು, ಸ್ಕಾಲರ್‌ಗಳು, ವೃತ್ತಿಪರರು, ಕಲಾವಿದರು ಸೇರಿ ತಮಿಳುನಾಡಿನ ವಿಶೇಷ 12 ತಂಡಗಳು ಕಾಶಿಯಲ್ಲಿವೆ. ಇವರು ಉತ್ತರ ಭಾರತ ಹಾಗೂ ದಕ್ಷಿಣ ಭಾರತದ ನಾಗರಿಕತೆ, ಸಾಹಿತಿ, ಸಂಸ್ಕೃತಿ, ಜ್ಞಾನಸಂಪತ್ತು ಸೇರಿ ಹತ್ತಾರು ವಿಚಾರ ವಿನಿಮಯ ಮಾಡಿಕೊಳ್ಳಲಿದ್ದಾರೆ. ಒಂದು ತಿಂಗಳವರೆಗೆ ಕರಕುಶಲ ವಸ್ತುಗಳು, ಪುಸ್ತಕ, ಡಾಕ್ಯುಮೆಂಟರಿ, ಇತಿಹಾಸ, ಪ್ರವಾಸೋದ್ಯಮ ಮಾಹಿತಿ, ವಿಚಾರಗೋಷ್ಠಿ, ಉತ್ಸವ ಸೇರಿ ಹತ್ತಾರು ಕಾರ್ಯಕ್ರಮ, ಚಟುವಟಿಕೆ ನಡೆಯಲಿವೆ.

ಇದನ್ನೂ ಓದಿ | Dev Deepavali | ದೇವ್‌ ದೀಪಾವಳಿ ಹಿನ್ನೆಲೆ ಕಾಶಿಯ ಅದ್ಭುತ ಚಿತ್ರಗಳ ಶೇರ್‌ ಮಾಡಿದ ಮೋದಿ, ಇಲ್ಲಿವೆ ನೋಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Sudha Murty: ಅಂಬಾನಿ ಮದುವೆಗೆ ಮಂಗಳ ಸೂತ್ರ ಮಾತ್ರವೇ ಧರಿಸಿ ಬಂದ ಸುಧಾ ಮೂರ್ತಿ; ಶೋ-ಆಫ್ ಇಲ್ಲ ಅಂದ್ರು ನೆಟ್ಟಿಗರು!

Sudha Murty: ಸುಧಾ ಮೂರ್ತಿ ಅವರು ವಿವಾಹ ಸಮಾರಂಭದಲ್ಲಿ ನೇರಳೆ ಬಣ್ಣದ ಸೀರೆಯನ್ನು ಧರಿಸಿ, ಕೇವಲ ಮಂಗಳಸೂತ್ರ ಮತ್ತು ಸ್ಮಾರ್ಟ್ ವಾಚ್‌ನೊಂದಿಗೆ ಸಿಂಪಲ್‌ ಆಗಿ ಬಂದಿದ್ದರು. ಅವರ ಸರಳತೆಗೆ ಹೆಚ್ಚು ಪ್ರಶಂಸೆಯನ್ನು ಗಳಿಸಿದರು. ನಮ್ರತಾ ಶಿರೋಡ್ಕರ್ ಅವರು ಸುಧಾ ಮೂರ್ತಿ ಅವರೊಂದಿಗಿನ ಚಿತ್ರವನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

Sudha Murty praised for simplicity at Ambani wedding
Koo

ಮುಂಬೈ: ಮುಂಬೈನಲ್ಲಿ ನಡೆದ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್‌ ಅವರ ಅದ್ದೂರಿ ವಿವಾಹದಲ್ಲಿ ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಮತ್ತು ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಪಾಲ್ಗೊಂಡಿದ್ದರು.   (Sudha Murty) ಅವರ ಜತೆ ಮಹೇಶ್‌ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಫೋಟೊ ಕ್ಲಿಕ್ಕಿಸಿಕೊಂಡಿದ್ದಾರೆ. ಸುಧಾ ಮೂರ್ತಿ ಜೊತೆಗಿನ ಫೋಟೊ ಶೇರ್ ಮಾಡಿ, ಈ ಕ್ಷಣವನ್ನು ಎಂದಿಗೂ ಮರೆಯುವುದಿಲ್ಲ ಎಂದು ನಮ್ರತಾ ಶಿರೋಡ್ಕರ್ ಬರೆದುಕೊಂಡಿದ್ದಾರೆ. ಜತೆಗೆ ಸುಧಾ ಮೂರ್ತಿ ಅವರ ಸರಳತೆಗೆ ನೆಟ್ಟಿಗರು ಹಾಡಿ ಹೊಗಳಿದ್ದಾರೆ. ಮಾತ್ರವಲ್ಲ ಕೊರಳಲ್ಲಿ ಮಂಗಳ ಸೂತ್ರ ಮಾತ್ರ ಧರಿಸಿ ಸಿಂಪಲ್‌ ಆಗಿ ಕಂಡಿದ್ದಾರೆ ಎಂದು ನೆಟ್ಟಿಗರು ಕಮೆಂಟ್‌ ಮಾಡಿದ್ದಾರೆ.

ಸುಧಾ ಮೂರ್ತಿ ಅವರು ವಿವಾಹ ಸಮಾರಂಭದಲ್ಲಿ ನೇರಳೆ ಬಣ್ಣದ ಸೀರೆಯನ್ನು ಧರಿಸಿ, ಕೇವಲ ಮಂಗಳಸೂತ್ರ ಮತ್ತು ಸ್ಮಾರ್ಟ್ ವಾಚ್‌ನೊಂದಿಗೆ ಸಿಂಪಲ್‌ ಆಗಿ ಬಂದಿದ್ದರು. ಅವರ ಸರಳತೆಗೆ ಹೆಚ್ಚು ಪ್ರಶಂಸೆಯನ್ನು ಗಳಿಸಿದರು. ನಮ್ರತಾ ಶಿರೋಡ್ಕರ್ ಅವರು ಸುಧಾ ಮೂರ್ತಿ ಅವರೊಂದಿಗಿನ ಚಿತ್ರವನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಈ ಬುದ್ಧಿವಂತ ಮಹಿಳೆಯ ಬಗ್ಗೆ ತುಂಬಾ ಕೇಳಿದ್ದೆ, ಅವರನ್ನು ಭೇಟಿಯಾದ ನಂತರ ನನ್ನ ನಂಬಿಕೆಯು ನಿಜವಾಯಿತು. ರೋಮಾಂಚಕ, ಜೀವನದಲ್ಲಿ ನೀಡಲು ತುಂಬಾ ಪ್ರೀತಿಯಿದೆ ಎನಿಸಿತು ಎಂದು ಮಹೇಶ್ ಬಾಬು ಪತ್ನಿ ನಮ್ರತಾ ಬಣ್ಣಿಸಿದ್ದಾರೆ.

ಇದನ್ನೂ ಓದಿ: Sudha Murty: ಸುಧಾ ಮೂರ್ತಿ 30 ವರ್ಷಗಳಿಂದ ಒಂದೇ ಒಂದು ಸೀರೆ ಖರೀದಿಸಿಲ್ಲ; ಇದಕ್ಕೆ ಕಾರಣ ಕಾಶಿಯಂತೆ!

ಇನ್ನು ಈ ಫೋಟೊ ವೈರಲ್‌ ಆಗುತ್ತಿದ್ದಂತೆ ಸುಧಾ ಮೂರ್ತಿ ಅವರನ್ನು ನೆಟ್ಟಿಗರು ಹೊಗಳಿದ್ದಾರೆ. ʻʻಬಿಲಿಯನೇರ್ ಮಹಿಳೆ ಕೇವಲ ಮಂಗಳಸೂತ್ರದೊಂದಿಗೆ ಹಾಜರಾಗುವುದನ್ನು ನೋಡಲು ಖುಷಿ ಆಗುತ್ತೆʼʼಎಂದು ಒಬ್ಬರು ಕಮೆಂಟ್‌ ಮಾಡಿದರೆ, ʻಸರಳ ಮತ್ತು ವಿನಮ್ರʼ ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. ʻಸ್ಫೂರ್ತಿದಾಯಕ ಮಹಿಳೆ. ಶೋ-ಆಫ್ ಇಲ್ಲʼʼಎಂದು ಇನ್ನೊಬ್ಬರು ಕಮೆಂಟ್‌ ಮಾಡಿದ್ದಾರೆ.

ತಮ್ಮ ಸರಳತೆಯಿಂದಲೇ ಸುದ್ದಿಯಲ್ಲಿರುವ ರಾಜ್ಯಸಭೆಯ ನೂತನ (Rajya Sabha) ಸದಸ್ಯೆ (MP), ಲೇಖಕಿ, ಇನ್ಫೋಸಿಸ್‌ನ ಸಂಸ್ಥಾಪಕ (Infosys chairman) ನಾರಾಯಣ ಮೂರ್ತಿ (Narayana Murthy) ಅವರ ಪತ್ನಿ ಸುಧಾ ಮೂರ್ತಿ (Sudha Murty) ಅವರು ಕಳೆದ 30 ವರ್ಷಗಳಿಂದ ಒಂದೇ ಒಂದು ಸೀರೆಯನ್ನೂ ಖರೀದಿ ಮಾಡಿಲ್ಲವಂತೆ! ಇತ್ತೀಚಿಗೆ ಅವರು ನೀಡಿರುವ ಸಂದರ್ಶನವೊಂದರಲ್ಲಿ ಈ ವಿಚಾರ ಬಹಿರಂಗಪಡಿಸಿದ್ದರು.

ಇದಕ್ಕೆ ಮುಖ್ಯ ಕಾರಣ ಕಾಶಿಗೆ ಪ್ರವಾಸ ಮಾಡಿರುವುದು ಎಂಬುದಾಗಿ ಅವರು ತಿಳಿಸಿದ್ದರು. ಅಪಾರ ಸಂಪತ್ತು ಇದ್ದರೂ ಇನ್ಫೋಸಿಸ್ ಅಧ್ಯಕ್ಷ ನಾರಾಯಣ ಮೂರ್ತಿ ಅವರ ಪತ್ನಿ ಸುಧಾ ಮೂರ್ತಿ ಅವರು ತಮ್ಮ ಸರಳವಾದ ಉಡುಗೆ ತೊಡುಗೆಗಳಿಂದ, ಸಾಮಾನ್ಯ ಜೀವನ ಶೈಲಿಯಿಂದ ಎಲ್ಲರಿಗೂ ಸ್ಫೂರ್ತಿಯಾಗಿದ್ದರು ದಿ ವಾಯ್ಸ್ ಆಫ್ ಫ್ಯಾಶನ್‌ಗೆ ನೀಡಿದ ಸಂದರ್ಶನದಲ್ಲಿ ಸುಧಾ ಮೂರ್ತಿ ಅವರು ಈ ವಿಚಾರವನ್ನು ಹೀಗೆ ಹಂಚಿಕೊಂಡಿದ್ದರು

Continue Reading

ದೇಶ

Terror Attacks in India: ಭಾರತದೊಳಕ್ಕೆ ನುಸುಳಲು ಉಗ್ರರಿಗೆ ಪಾಕಿಸ್ತಾನ ಧನಸಹಾಯ: ಬೆಚ್ಚಿ ಬೀಳಿಸುವ ಮಾಹಿತಿ ಬಹಿರಂಗ

Terror Attacks in India: ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚನ ದಿನಗಳಲ್ಲಿ ಭಯೋತ್ಪಾದಕ ದಾಳಿ ಹೆಚ್ಚಾಗುತ್ತಿದೆ. ಈ ಮಧ್ಯೆ ಉನ್ನತ ಮೂಲಗಳು ಭಯೋತ್ಪಾದಕರಿಗೆ ಪಾಕಿಸ್ತಾನ ಒದಗಿಸುವ ಧನಸಹಾಯದ ಬಗ್ಗೆ ಮಹತ್ವದ ಮಾಹಿತಿಯನ್ನು ಬಹಿರಂಗಪಡಿಸಿವೆ. ಇದರಲ್ಲಿ ಗಡಿಯುದ್ದಕ್ಕೂ ಪಾಕಿಸ್ತಾನ ನಿರ್ವಹಿಸುತ್ತಿರುವ ಭಯೋತ್ಪಾದಕ ಶಿಬಿರಗಳ ಪಟ್ಟಿಯೂ ಸೇರಿದೆ. ಮೂಲಗಳು ಬಹಿರಂಗಪಡಿಸಿರುವ ಮಾಹಿತಿಯಲ್ಲಿ ಬೆಚ್ಚಿಬೀಳಿಸುವ ಅಂಶಗಳು, ಪಾಕಿ ಪಾಕಿಸ್ತಾನದ ಕುತಂತ್ರಗಳು ಬಹಿರಂಗಗೊಂಡಿವೆ.

VISTARANEWS.COM


on

Terror Attacks in India
Koo

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu Kashmir) ಇತ್ತೀಚನ ದಿನಗಳಲ್ಲಿ ಭಯೋತ್ಪಾದಕ ದಾಳಿ ಹೆಚ್ಚಾಗುತ್ತಿದೆ. ದೋಡಾ ಜಿಲ್ಲೆಯಲ್ಲಿ ಜುಲೈ 16ರಂದು ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ (Doda Encounterr) ಓರ್ವ ಅಧಿಕಾರಿ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಈ ಮಧ್ಯೆ ಉನ್ನತ ಮೂಲಗಳು ಭಯೋತ್ಪಾದಕರಿಗೆ ಪಾಕಿಸ್ತಾನ ಒದಗಿಸುವ ಧನಸಹಾಯದ ಬಗ್ಗೆ ಮಹತ್ವದ ಮಾಹಿತಿಯನ್ನು ಬಹಿರಂಗಪಡಿಸಿವೆ. ಇದರಲ್ಲಿ ಗಡಿಯುದ್ದಕ್ಕೂ ಪಾಕಿಸ್ತಾನ ನಿರ್ವಹಿಸುತ್ತಿರುವ ಭಯೋತ್ಪಾದಕ ಶಿಬಿರಗಳ ಪಟ್ಟಿಯೂ ಸೇರಿದೆ (Terror Attacks in India).

ಮೂಲಗಳು ಬಹಿರಂಗಪಡಿಸಿರುವ ಮಾಹಿತಿಯಲ್ಲಿ ಬೆಚ್ಚಿಬೀಳಿಸುವ ಅಂಶಗಳು, ಪಾಕಿ ಪಾಕಿಸ್ತಾನದ ಕುತಂತ್ರಗಳು ಬಹಿರಂಗಗೊಂಡಿವೆ. ಪಾಕಿಸ್ತಾನವು ತರಬೇತಿ ಪಡೆದ ಭಯೋತ್ಪಾದಕರು, ಮಾಜಿ ವಿಶೇಷ ಸೇವಾ ಗುಂಪು (Special Service Group)ಗಳ ಸದಸ್ಯರು ಮತ್ತು ಕೂಲಿ ಸೈನಿಕರನ್ನು ಭಾರತಕ್ಕೆ ಕಳುಹಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರತಿ ಗುಂಪಿಗೆ ಕನಿಷ್ಠ 1 ಲಕ್ಷ ರೂ. ಒದಗಿಸಲಾಗುತ್ತದೆ. ಜತೆಗೆ ಪಾಕಿಸ್ತಾನವು ಈ ಭಯೋತ್ಪಾದಕರಿಗೆ ಎಂ 4 ರೈಫಲ್‌ಗಳು (M4 rifles) ಮತ್ತು ಚೀನಾದ ಅತ್ಯಾಧುನಿಕ ಗುಂಡು ನಿರೋಧಕ ಕವಚಗಳನ್ನೂ ಪೂರೈಸುತ್ತಿದೆ. ಒಳನುಸುಳುವಿಕೆಯ ಸಮಯದಲ್ಲಿ ಅವರಿಗೆ ಸಹಾಯ ಮಾಡುವ ಮಾರ್ಗದರ್ಶಿಗಳು 10,000 ರೂ.ಗಳಿಂದ 50,000 ರೂ.ವರೆಗೆ ಪಡೆಯುತ್ತಿದ್ದಾರೆ. ಹೆಚ್ಚುವರಿಯಾಗಿ ಭಯೋತ್ಪಾದಕರು ಐಕಾಮ್ ರೇಡಿಯೋ ಸೆಟ್‌ಗಳ ಮೂಲಕ ಸ್ಯಾಮ್‌ಸಂಗ್‌ ಫೋನ್‌ ಮತ್ತು ವೈ ಎಸ್ಎಂಎಸ್ ಅನ್ನು ಬಳಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಮತ್ತೆ ಸಕ್ರಿಯವಾದ ಭಯೋತ್ಪದಕರ ಕ್ಯಾಂಪ್‌

ಪಾಕಿಸ್ತಾನದ ಭಯೋತ್ಪಾದಕರು ಭಾರತಕ್ಕೆ ನುಸುಳಲು ಅಂತಾರಾಷ್ಟ್ರೀಯ ಗಡಿ ಅಥವಾ ಇತರ ಮಾರ್ಗಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಮೂಲದ ಪ್ರಕಾರ ಪಾಕಿಸ್ತಾನದಲ್ಲಿ ಭಯೋತ್ಪದಕರ ಕ್ಯಾಂಪ್‌ ಮತ್ತೆ ಸಕ್ರಿಯವಾಗಿದೆ. ಈ ಭಯೋತ್ಪಾದಕರಿಗೆ ಪಾಕಿಸ್ತಾನ ಸೇನೆಯ ಸಹಾಯದಿಂದ ಪಾಕಿಸ್ತಾನದಲ್ಲಿ ತರಬೇತಿ ನೀಡಲಾಗುತ್ತಿದೆ. ಹೆಚ್ಚುವರಿಯಾಗಿ ಭಯೋತ್ಪಾದಕರ ಕುಟುಂಬಗಳು ಆರ್ಥಿಕ ಬೆಂಬಲವನ್ನೂ ಒದಗಿಸಲಾಗುತ್ತಿದೆ. ಒಟ್ಟಿನಲ್ಲಿ ಯುವಕರನ್ನು ಭಯೋತ್ಪಾದಕರನ್ನಾಗಿ ಮಾಡಲು ಹಣದ ಆಮೀಷವನ್ನು ಒಡ್ಡಲಾಗುತ್ತಿದೆ ಎನ್ನುವ ಆತಂಕಕಾರಿ ಅಂಶ ಬೆಳಕಿಗೆ ಬಂದಿದೆ.

ಗಡಿಗಳಲ್ಲಿ ಕಟ್ಟೆಚ್ಚರ

ಪಂಜಾಬ್ ಗಡಿಯನ್ನೂ ಭಯೋತ್ಪಾದಕರು ಭಾರತಕ್ಕೆ ಪ್ರವೇಶಿಸಲು ಬಳಸುತ್ತಿದ್ದಾರೆ ಎಂದು ಶಂಕಿಸಲಾಗಿದೆ. ಸುಮಾರು 20 ಪಾಕಿಸ್ತಾನಿ ಭಯೋತ್ಪಾದಕರು ಪ್ರಸ್ತುತ ಜಮ್ಮು ಪ್ರದೇಶದಲ್ಲಿದ್ದಾರೆ ಮತ್ತು ಸುಮಾರು 20-24 ಜನರು ಕಾಶ್ಮೀರ ಕಣಿವೆಯಲ್ಲಿದ್ದಾರೆ. ಜಮ್ಮುವಿನಲ್ಲಿ ಭಯೋತ್ಪಾದನೆಯನ್ನು ಪುನರುಜ್ಜೀವನಗೊಳಿಸಲಾಗಿದೆ ಎಂಬ ಸಂದೇಶವನ್ನು ಕಳುಹಿಸಲು ಪಾಕಿಸ್ತಾನ ಬಯಸಿದೆ ಎಂದು ಮೂಲಗಳು ತಿಳಿಸಿವೆ. ಬಿಎಸ್ಎಫ್ (Border Security Force) ಎಲ್ಲ ಅಂತಾರಾಷ್ಟ್ರೀಯ ಗಡಿಗಳ ಬೇಲಿಗಳು ಮತ್ತು ಸುರಂಗಗಳನ್ನು ಪರಿಶೀಲಿಸುತ್ತಿದೆ. ಈ ಬಗ್ಗೆ ಕಠಿಣ ಕ್ರಮ ಕೈಗೊಂಡಿದೆ.

ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಉಗ್ರರ ಉಪಟಳ ಜಾಸ್ತಿಯಾಗಿರುವ ಕಾರಣ ಭಾರತೀಯ ಸೇನೆ ಹಾಗೂ ಜಮ್ಮು-ಕಾಶ್ಮೀರ ಪೊಲೀಸರು ಕಾರ್ಯಾಚರಣೆಗಳನ್ನು ಕೈಗೊಳ್ಳುತ್ತಲೇ ಇರುತ್ತಾರೆ. ಜುಲೈ 6 ಮತ್ತು 7 ರಂದು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಗುಂಡಿನ ಚಕಮಕಿಗಳಲ್ಲಿ ಭದ್ರತಾ ಪಡೆಗಳು ಆರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದವು. 

ಇದನ್ನೂ ಓದಿ: Doda Encounter: ಜಮ್ಮು- ಕಾಶ್ಮೀರದಲ್ಲಿ ಉಗ್ರರ ದಾಳಿ; ಬಿಜೆಪಿಯ ತಪ್ಪು ನೀತಿಯೇ ಕಾರಣ ಎಂದ ರಾಹುಲ್‌ ಗಾಂಧಿ

Continue Reading

ರಾಜಕೀಯ

Ajit Pawar: ಮಹಾರಾಷ್ಟ್ರದಲ್ಲಿ ಅಜಿತ್‌ ಪವಾರ್‌ಗೆ ಶಾಕ್‌; ಎನ್‌ಸಿಪಿಗೆ ರಾಜೀನಾಮೆ ನೀಡಿದ ಆಪ್ತ

Ajit Pawar: ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿನ ಕಳಪೆ ಪ್ರದರ್ಶನದ ನಂತರ ಮಹಾರಾಷ್ಟ್ರದಲ್ಲಿ ಅಜಿತ್‌ ಪವಾರ್‌ ನೇತೃತ್ವದ ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಾರ್ಟಿಗೆ ಮತ್ತೊಂದು ಆಘಾತ ಎದುರಾಗಿದೆ. ಪಿಂಪ್ರಿ ಚಿಂಚ್ವಾಡ್ದ ಉನ್ನತ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಅವರು ಶರದ್ ಪವಾರ್ ನೇತೃತ್ವದ ಎನ್‌ಸಿಪಿಗೆ ಸೇರುವ ಸಾಧ್ಯತೆ ಇದೆ.

VISTARANEWS.COM


on

Ajit Pawar
Koo

ಮುಂಬೈ: ಇತ್ತೀಚಿನ ಲೋಕಸಭಾ ಚುನಾವಣೆ (Lok Sabha Election)ಯಲ್ಲಿನ ಕಳಪೆ ಪ್ರದರ್ಶನದ ನಂತರ ಮಹಾರಾಷ್ಟ್ರ (Maharashtra)ದಲ್ಲಿ ಅಜಿತ್‌ ಪವಾರ್‌ (Ajit Pawar) ನೇತೃತ್ವದ ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಾರ್ಟಿ (Nationalist Congress Party)ಗೆ ಮತ್ತೊಂದು ಆಘಾತ ಎದುರಾಗಿದೆ. ಪಿಂಪ್ರಿ ಚಿಂಚ್ವಾಡ್ (Pimpri Chinchwad)ದ ನಾಲ್ವರು ಉನ್ನತ ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಅವರು ಶರದ್ ಪವಾರ್ ನೇತೃತ್ವದ ಎನ್‌ಸಿಪಿಗೆ ಸೇರುವ ಸಾಧ್ಯತೆ ಇದೆ.

ಅಜಿತ್ ಪವಾರ್ ಅವರಿಗೆ ರಾಜೀನಾಮೆ ಸಲ್ಲಿಸಿದವರಲ್ಲಿ ಎನ್‌ಸಿಪಿಯ ಪಿಂಪ್ರಿ-ಚಿಂಚ್ವಾಡ್ ಘಟಕದ ಮುಖ್ಯಸ್ಥ ಅಜಿತ್ ಗವ್ಹಾನೆ ಕೂಡ ಸೇರಿದ್ದಾರೆ. ಪಿಂಪ್ರಿ ಚಿಂಚ್ವಾಡ್ ವಿದ್ಯಾರ್ಥಿ ಘಟಕದ ಮುಖ್ಯಸ್ಥ ಯಶ್ ಸಾನೆ, ಮಾಜಿ ಕಾರ್ಪೊರೇಟರ್‌ಗಳಾದ ರಾಹುಲ್ ಭೋಸಲೆ ಮತ್ತು ಪಂಕಜ್ ಭಲೇಕರ್ ರಾಜೀನಾಮೆ ನೀಡಿದ ಇತರ ನಾಯಕರು. ಅಜಿತ್ ಪವಾರ್ ಬಣದ ಕೆಲವು ನಾಯಕರು ಶರದ್ ಪವಾರ್ ಬಣಕ್ಕೆ ಮರಳಲು ಸಿದ್ಧರಾಗಿದ್ದಾರೆ ಎನ್ನುವ ವದಂತಿಯ ಮಧ್ಯೆ ಈ ಬೆಳವಣಿಗೆ ನಡೆದಿದೆ.

ಕಳೆದ ತಿಂಗಳು ಶರದ್ ಪವಾರ್ ಈ ಬಗ್ಗೆ ಮಾತನಾಡಿ, ತಮ್ಮ ಪಕ್ಷವನ್ನು ದುರ್ಬಲಗೊಳಿಸಲು ಬಯಸುವವರನ್ನು ಸೇರಿಸಿಕೊಳ್ಳುವುದಿಲ್ಲ. ಆದರೆ ಪಕ್ಷದ ವರ್ಚಸ್ಸಿಗೆ ಧಕ್ಕೆ ತರದ ನಾಯಕರನ್ನು ಸ್ವಾಗತಿಸುವುದಾಗಿ ತಿಳಿಸಿದ್ದರು. “ಪಕ್ಷವನ್ನು ದುರ್ಬಲಗೊಳಿಸಲು ಬಯಸುವವರನ್ನು ನಾವು ಸ್ವಾಗತಿಸುವುದಿಲ್ಲ. ಆದರೆ ಸಂಘಟನೆಯನ್ನು ಬಲಪಡಿಸಲು ಸಹಾಯ ಮಾಡುವ ಮತ್ತು ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗದ ನಾಯಕರನ್ನು ಸೇರಿಸುತೇವೆ” ಎಂದು ಅವರು ಘೋಷಿಸಿದ್ದರು.

ಈ ಮಧ್ಯೆ ಎನ್‌ಸಿಪಿ ವಕ್ತಾರರು ಮಾತನಾಡಿ, “ಯಾವುದೇ ನಾಯಕರು ಪಕ್ಷವನ್ನು ತೊರೆಯುವುದು ಹಿನ್ನಡೆ ಎಂದೇ ಪರಿಗಣಿಸಲಾಗುತ್ತದೆ. ಆದರೆ ಅಜಿತ್ ಗವ್ಹಾನೆ ನಮ್ಮೊಂದಿಗೆ ಇರುತ್ತಾರೆ ಎಂಬ ವಿಶ್ವಾಸವಿದೆ. ಅವರು ಅಜಿತ್ ಪವಾರ್‌ನ ನಿಕಟವರ್ತಿ. ಆದ್ದರಿಂದ ಅವರು ಆತುರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂಬ ವಿಶ್ವಾಸವಿದೆ” ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅಹಿತ್‌ ಗವ್ಹಾನೆ , ʼʼಎನ್‌ಸಿಪಿಗೆ ರಾಜೀನಾಮೆ ನೀಡಿದ್ದೇನೆ. ಆದರೆ ಶರದ್‌ ಪವಾರ್‌ ಬಣಕ್ಕೆ ಸೇರುವ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಇಂದು (ಜುಲೈ 17) ಪತ್ರಿಕಾಗೋಷ್ಠಿ ಕರೆದು ನಿರ್ಧಾರ ಪ್ರಕಟಿಸುತ್ತೇನೆʼʼ ಎಂದು ತಿಳಿಸಿದ್ದಾರೆ.

2023ರಲ್ಲಿ ಅಜಿತ್ ಪವಾರ್ ತಮ್ಮ ಸಂಬಂಧಿ ಮತ್ತು ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ವಿರುದ್ಧ ದಂಗೆ ಎದ್ದ ನಂತರ ಪವಾರ್ ಕುಟುಂಬವು ಎರಡು ರಾಜಕೀಯ ಪಕ್ಷಗಳಾಗಿ ವಿಭಜನೆಯಾಯಿತು. ಶರದ್ ಪವಾರ್ ಪ್ರತಿಪಕ್ಷದ ಪಾಳಯದಲ್ಲಿ ಉಳಿದರೆ, ಅಜಿತ್ ಪವಾರ್ ಅವರು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರದ ಭಾಗವಾದರು. ಜತೆಗೆ ಅಜಿತ್ ಪವಾರ್ ಉಪಮುಖ್ಯಮಂತ್ರಿ ಹುದ್ದೆ ಅಲಂಕರಿಸಿದರು. ಅಜಿತ್ ಪವಾರ್ ಅವರ ಪಕ್ಷವು ಬಿಜೆಪಿ ನೇತೃತ್ವದ ಎನ್‌ಡಿಎಯ ಮಿತ್ರಪಕ್ಷವಾಗಿ ಲೋಕಸಭಾ ಚುನಾವಣೆ ಎದುರಿಸಿತು. ಆದರೆ ಒಂದು ಸ್ಥಾನವನ್ನು (ರಾಯಗಢ) ಮಾತ್ರ ಗೆದ್ದುಕೊಂಡಿದೆ. ಶರದ್ ಪವಾರ್ ಪಕ್ಷವು ಎಂಟು ಕ್ಷೇತ್ರಗಳಲ್ಲಿ ಗೆದ್ದಿದೆ.

ಇದನ್ನೂ ಓದಿ: Real NCP: ಅಜಿತ್‌ ಪವಾರ್‌ ಬಣದ್ದೇ ನಿಜವಾದ ಎನ್‌ಸಿಪಿ ಎಂದ ಆಯೋಗ; ಶರದ್‌ ಪವಾರ್‌ಗೆ ಹಿನ್ನಡೆ

Continue Reading

ಆರೋಗ್ಯ

Chandipura Virus: ಡೆಂಗ್ಯೂ ಹಾವಳಿ ನಡುವೆ ಕಾಡುತ್ತಿದೆ ಚಾಂದಿಪುರ ವೈರಸ್; ಇದುವರೆಗೆ 6 ಮಕ್ಕಳು ಬಲಿ: ಏನಿದರ ಲಕ್ಷಣ?

Chandipura Virus: ಗುಜರಾತ್‌ನಲ್ಲಿ ಚಾಂದಿಪುರ ವೈರಸ್ ಪತ್ತೆಯಾಗಿದೆ. ಈಗಾಗಲೇ ವೈರಸ್‌ಗೆ 6 ಮಕ್ಕಳು ಬಲಿಯಾಗಿದ್ದು, ಆತಂಕ ಮೂಡಿಸಿದೆ. ಜುಲೈ 10ರಿಂದ ಗುಜರಾತ್‌ನಲ್ಲಿ ಶಂಕಿತ ಚಂಡಿಪುರ ವೈರಲ್ ಸೋಂಕಿನಿಂದ ಆರು ಮಕ್ಕಳು ಮೃತಪಟ್ಟಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 12ಕ್ಕೆ ತಲುಪಿದೆ ಎಂದು ರಾಜ್ಯ ಆರೋಗ್ಯ ಸಚಿವ ರುಷಿಕೇಶ್ ಪಟೇಲ್ ಮಾಹಿತಿ ನೀಡಿದ್ದಾರೆ. ಚಾಂದಿಪುರ ವೈರಸ್ ಸೋಂಕು ಹೆಚ್ಚಾಗಿ ಮಕ್ಕಳಿಗೆ ಬಾಧಿಸುತ್ತದೆ. ಅದರಲ್ಲಿಯೂ 9 ತಿಂಗಳಿನಿಂದ 14 ವರ್ಷದ ಮಕ್ಕಳಿಗೆ ಬಾಧಿಸುವ ಸಾಧ್ಯತೆ ಅಧಿಕ. ಈ ವೈರಸ್ ಮಕ್ಕಳ ಮೇಲೆ ದಾಳಿ ಮಾಡಿದಾಗ ಮೊದಲಿಗೆ ಜ್ವರ, ಅತಿಸಾರ, ವಾಂತಿ, ಎನ್ಸೆಫಾಲಿಟಿಸ್ ಎಂದು ಕರೆಯಲ್ಪಡುವ ಮೆದುಳಿನ ಜ್ವರದಂತಹ ರೋಗಲಕ್ಷಣಗಳನ್ನು ತೋರಿಸುತ್ತದೆ.

VISTARANEWS.COM


on

Chandipura Virus
Koo

ಗಾಂಧಿನಗರ: ರಾಜ್ಯ ಸೇರಿದಂತೆ ದೇಶದ ಕೆಲವೆಡೆ ಡೆಂಗ್ಯೂ ಹಾವಳಿ ಹೆಚ್ಚಾಗುತ್ತಿದೆ. ಇತ್ತ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾದ ಹಾವಳಿ ಕಂಡು ಬಂದಿದೆ. ಈ ಮಧ್ಯೆ ಗುಜರಾತ್‌ನಲ್ಲಿ ಚಾಂದಿಪುರ ವೈರಸ್ (Chandipura Virus) ಪತ್ತೆಯಾಗಿದೆ. ಈಗಾಗಲೇ ವೈರಸ್‌ಗೆ 6 ಮಕ್ಕಳು ಬಲಿಯಾಗಿದ್ದು, ಆತಂಕ ಮೂಡಿಸಿದೆ.

ಜುಲೈ 10ರಿಂದ ಗುಜರಾತ್‌ನಲ್ಲಿ ಶಂಕಿತ ಚಂಡಿಪುರ ವೈರಲ್ ಸೋಂಕಿನಿಂದ ಆರು ಮಕ್ಕಳು ಮೃತಪಟ್ಟಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 12ಕ್ಕೆ ತಲುಪಿದೆ ಎಂದು ರಾಜ್ಯ ಆರೋಗ್ಯ ಸಚಿವ ರುಷಿಕೇಶ್ ಪಟೇಲ್ ಮಾಹಿತಿ ನೀಡಿದ್ದಾರೆ. ಎಲ್ಲ ಸೋಂಕಿತರ ರಕ್ತದ ಮಾದರಿಗಳನ್ನು ದೃಢೀಕರಣಕ್ಕಾಗಿ ಪುಣೆಯ ನ್ಯಾಷನಲ್ ಇನ್ಸ್‌ಸ್ಟಿಟ್ಯೂಟ್‌ ಆಫ್ ವೈರಾಲಜಿ (National Institute of Virology)ಗೆ ಕಳುಹಿಸಲಾಗಿದೆ.

ರೋಗ ಲಕ್ಷಣ

ಚಾಂದಿಪುರ ವೈರಸ್ ಸೋಂಕು ಬಾಧಿತರಲ್ಲಿ ಸಾಮಾನ್ಯ ಜ್ವರದ ಲಕ್ಷಣವೇ ಕಂಡು ಬರುತ್ತದೆ. ಬಾಧಿತರಲ್ಲಿ ದಿಢೀರ್ ಜ್ವರ, ತೀವ್ರ ತಲೆನೋವು, ವಾಂತಿ, ಸ್ನಾಯು ಸೆಳೆತ, ಪ್ರಜ್ಞಾಹೀನತೆ, ಅರೆನಿದ್ರಾವಸ್ಥೆ ಕಂಡು ಬರುತ್ತದೆ. ತಕ್ಷಣ ಸೂಕ್ತ ಚಿಕಿತ್ಸೆ ಪಡೆಯದಿದ್ದರೆ ಮಾರಣಾಂತಿಕವಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ರಾಬ್ಡೋವೆರಿಡೆ ವರ್ಗಕ್ಕೆ ಸೇರಿದ ವೈರಸ್ ಈ ರೋಗಕ್ಕೆ ಕಾರಣ.

ಯಾಕಾಗಿ ಈ ಹೆಸರು?

ಮಹಾರಾಷ್ಟ್ರದ ಚಾಂದಿಪುರದಲ್ಲಿ 1965ರಲ್ಲಿ ಇದು ಮೊದಲ ಬಾರಿ ಕಾಣಿಸಿಕೊಂಡಿತ್ತು. ಹೀಗಾಗಿ ಇದನ್ನು ಚಾಂದಿಪುರ ವೈರಸ್‌ ಎಂದು ಕರೆಯುತ್ತಾರೆ. ಚಾಂದಿಪುರ ವೈರಸ್ ಸೋಂಕು ಹೆಚ್ಚಾಗಿ ಮಕ್ಕಳಿಗೆ ಬಾಧಿಸುತ್ತದೆ. ಅದರಲ್ಲಿಯೂ 9 ತಿಂಗಳಿನಿಂದ 14 ವರ್ಷದ ಮಕ್ಕಳಿಗೆ ಬಾಧಿಸುವ ಸಾಧ್ಯತೆ ಅಧಿಕ. ಈ ವೈರಸ್ ಮಕ್ಕಳ ಮೇಲೆ ದಾಳಿ ಮಾಡಿದಾಗ ಮೊದಲಿಗೆ ಜ್ವರ, ಅತಿಸಾರ, ವಾಂತಿ, ಎನ್ಸೆಫಾಲಿಟಿಸ್ ಎಂದು ಕರೆಯಲ್ಪಡುವ ಮೆದುಳಿನ ಜ್ವರದಂತಹ ರೋಗಲಕ್ಷಣಗಳನ್ನು ತೋರಿಸುತ್ತದೆ. ಈ ವೈರಸ್ ವಿರುದ್ಧ ಯಾವುದೇ ಲಸಿಕೆ ಇಲ್ಲದ ಕಾರಣ ಇದನ್ನು ಇನ್ನಷ್ಟು ಅಪಾಯಕಾರಿ ಎಂದು ವೈದ್ಯರು ತಿಳಿಸಿದ್ದಾರೆ.

ಒಬ್ಬರಿಂದ ಒಬ್ಬರಿಗೆ ಹರಡುತ್ತಾ?

ಇದು ಸಾಂಕ್ರಾಮಿಕ ರೋಗ ಅಲ್ಲದಿದ್ದರೂ ಸೊಳ್ಳೆ, ನೊಣ, ಉಣ್ಣೆಗಳಿಂದ ಈ ಸೋಂಕು ಹರಡುತ್ತದೆ. ಶುಚಿತ್ವ ಕೊರತೆಯೇ ಮುಖ್ಯ ಕಾರಣ. ಸದ್ಯ ಈ ರೀತಿಯ ಅನೇಕ ಪ್ರಕರಣಗಳು ಗುಜರಾತ್‌ನಲ್ಲಿ ಕಂಡುಬಂದಿವೆ. ಗುಜರಾತ್‌ನ ಸಬರ್‌ಕಾಂಠಾ ರಾವಳಿ, ಮಹಿಸಾರ, ಖೇಡಾ ಜಿಲ್ಲೆಗಳಲ್ಲಿ ಈ ಸೋಂಕು ಕಾಣಿಸಿಕೊಂಡಿದೆ. ಜತೆಗೆ ರಾಜಸ್ಥಾನ, ಮಧ್ಯ ಪ್ರದೇಶದಲ್ಲಿಯೂ ಸೋಂಕು ಬಾಧಿಸಿರುವುದು ವರದಿಯಾಗಿದೆ. ಶಂಕಿತರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ರೋಗದಿಂದ ಪಾರಾಗುವುದು ಹೇಗೆ?

ಚಾಂದಿಪುರ ವೈರಸ್‌ನಿಂದ ತಪ್ಪಿಸಿಕೊಳ್ಳಲು ನೈರ್ಮಲ್ಯ ಕಾಪಾಡುವುದು ಅಗತ್ಯ. ಸೊಳ್ಳೆ, ನೊಣ ಮತ್ತು ಕೀಟಗಳು ಕಡಿಯದಂತೆ ಎಚ್ಚರ ವಹಿಸಿ. ಮಕ್ಕಳಿಗೆ ರಾತ್ರಿ ಪೂರ್ಣ ತೋಳಿನ ಬಟ್ಟೆಗಳನ್ನು ತೊಡಿಸಿ. ಸೊಳ್ಳೆಗಳು ಮತ್ತು ಕೀಟಗಳಿಂದ ತಪ್ಪಿಸಿಕೊಳ್ಳಲು ಬಲೆಗಳನ್ನು ಬಳಸಿ. ಕಿಟಕಿಗಳು ಮತ್ತು ಬಾಗಿಲುಗಳನ್ನು ಮುಚ್ಚಿಡಿ. ಸೊಳ್ಳೆಗಳು ಮನೆಯೊಳಗೆ ಪ್ರವೇಶಿಸಲು ಬಿಡಬೇಡಿ. ಮನೆಯ ಸುತ್ತಮುತ್ತ ನೀಡು ಕಟ್ಟಿ ನಿಲ್ಲದಂತೆ ನೋಡಿಕೊಳ್ಳಿ. ಸಾಕು ಪ್ರಾಣಿಗಳ ಬಳಿಗೆ ತೆರಳುವಾಗ ಎಚ್ಚರವಹಿಸಿ.

ಇದನ್ನೂ ಓದಿ: Brain Eating Amoeba: ಏನಿದು ಮೆದುಳು ತಿನ್ನುವ ಅಮೀಬಾ? ಇದರಿಂದ ನಮಗೂ ಅಪಾಯ ಇದೆಯೆ?

Continue Reading
Advertisement
Sudha Murty praised for simplicity at Ambani wedding
ಟಾಲಿವುಡ್3 mins ago

Sudha Murty: ಅಂಬಾನಿ ಮದುವೆಗೆ ಮಂಗಳ ಸೂತ್ರ ಮಾತ್ರವೇ ಧರಿಸಿ ಬಂದ ಸುಧಾ ಮೂರ್ತಿ; ಶೋ-ಆಫ್ ಇಲ್ಲ ಅಂದ್ರು ನೆಟ್ಟಿಗರು!

Ravindra Jadeja
ಕ್ರೀಡೆ12 mins ago

Ravindra Jadeja: ವಿಶ್ವಕಪ್​ ಟ್ರೋಫಿಯೊಂದಿಗೆ ತಾಯಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಜಡೇಜಾ

Terror Attacks in India
ದೇಶ15 mins ago

Terror Attacks in India: ಭಾರತದೊಳಕ್ಕೆ ನುಸುಳಲು ಉಗ್ರರಿಗೆ ಪಾಕಿಸ್ತಾನ ಧನಸಹಾಯ: ಬೆಚ್ಚಿ ಬೀಳಿಸುವ ಮಾಹಿತಿ ಬಹಿರಂಗ

Director Arrest gajendra in murder case
ಸ್ಯಾಂಡಲ್ ವುಡ್29 mins ago

Director Arrest: ಕೊಲೆ ಕೇಸ್​​ನಲ್ಲಿ 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಸ್ಯಾಂಡಲ್​ವುಡ್ ನಿರ್ದೇಶಕ ಅರೆಸ್ಟ್​!

Vicky Kaushal Kissing Scenes of 27 Seconds deleated From Bad Newz
ಬಾಲಿವುಡ್57 mins ago

Vicky Kaushal: 27 ಸೆಕೆಂಡುಗಳ ಕಾಲ ಚುಂಬಸಿದ ವಿಕ್ಕಿ ಕೌಶಲ್ -ತೃಪ್ತಿ; ಸೆನ್ಸಾರ್‌ ಬೋರ್ಡ್‌ನಿಂದ ಬಿತ್ತು ಕತ್ತರಿ!

uttara kannada landslide shirur
ಉತ್ತರ ಕನ್ನಡ1 hour ago

Uttara Kannada Landslide: ಭೂಕುಸಿತದ ಜಾಗದ ಬಳಿಯೇ ʼಸುನಾಮಿʼ ಎಫೆಕ್ಟ್‌; ನೀರಿನ ರಭಸಕ್ಕೆ ಕೊಚ್ಚಿಹೋದ ಮಹಿಳೆ

Ajit Pawar
ರಾಜಕೀಯ1 hour ago

Ajit Pawar: ಮಹಾರಾಷ್ಟ್ರದಲ್ಲಿ ಅಜಿತ್‌ ಪವಾರ್‌ಗೆ ಶಾಕ್‌; ಎನ್‌ಸಿಪಿಗೆ ರಾಜೀನಾಮೆ ನೀಡಿದ ಆಪ್ತ

KL Rahul
ಕ್ರೀಡೆ1 hour ago

KL Rahul: ಮುಂದಿನ ವರ್ಷ ಆರ್​ಸಿಬಿ ಪರ ಆಡಲಿದ್ದಾರೆ ಕೆ.ಎಲ್​ ರಾಹುಲ್​; ಪೋಸ್ಟರ್ ವೈರಲ್

Samarjit Lankesh Monalisa Kannada Movie 20 Years Celebration Gowri Movie 2 Songs Released
ಸ್ಯಾಂಡಲ್ ವುಡ್2 hours ago

Samarjit Lankesh: ‘ಮೊನಾಲಿಸಾ’ ಚಿತ್ರಕ್ಕೆ 20 ವರ್ಷಗಳ ಸಂಭ್ರಮ: ರಿಲೀಸ್ ಆಯ್ತು ‘ಗೌರಿ’ ಚಿತ್ರದ ಹಾಡುಗಳು

gt world mall
ಪ್ರಮುಖ ಸುದ್ದಿ2 hours ago

GT World Mall: ಪಂಚೆ ಧರಿಸಿ ಬಂದ ರೈತರಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ ಜಿಟಿ ವರ್ಲ್ಡ್‌ ಮಾಲ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ22 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ23 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌