Actress Trisha | 14 ವರ್ಷಗಳ ನಂತರ ದಳಪತಿ ವಿಜಯ್-ತ್ರಿಶಾ ಒಟ್ಟಿಗೆ ತೆರೆಗೆ? - Vistara News

ಕಾಲಿವುಡ್

Actress Trisha | 14 ವರ್ಷಗಳ ನಂತರ ದಳಪತಿ ವಿಜಯ್-ತ್ರಿಶಾ ಒಟ್ಟಿಗೆ ತೆರೆಗೆ?

14 ವರ್ಷಗಳ ನಂತರ ದಳಪತಿ ವಿಜಯ್‌ ಹಾಗೂ ತ್ರಿಶಾ (Actress Trisha) ಅವರು ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಸುದ್ದಿಯಾಗಿದೆ. ಈ ಸಿನಿಮಾಗೆ ನಟಿ ತ್ರಿಶಾ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Actress Trisha dalapathi vijay
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟಿ ತ್ರಿಶಾ (Actress Trisha) ಅವರು ಮಣಿರತ್ನಂ ನಿರ್ದೇಶನದ ʻಪೊನ್ನಿಯನ್‌ ಸೆಲ್ವನ್‌ʼ ಚಿತ್ರದ ಕುಂದವೈ ಪಾತ್ರದಲ್ಲಿ ಮಿಂಚಿದ್ದರು. ಸಿನಿಮಾ ಕೂಡ ಭರ್ಜರಿ ಪ್ರದರ್ಶನ ಕಂಡಿತು. ‌ಇದೀಗ ಕಾಲಿವುಡ್‌ ನಟ ದಳಪತಿ ವಿಜಯ್‌ ಜತೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ವರದಿ ಆಗಿದೆ. 14 ವರ್ಷಗಳ ನಂತರ ದಳಪತಿ ವಿಜಯ್‌ ಹಾಗೂ ತ್ರಿಶಾ ಅವರು ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.

ʻಗಿಲ್ಲಿʼ, ʻಕುರುವಿʼ ಹೀಗೆ ಸಾಕಷ್ಟು ಚಿತ್ರಗಳಲ್ಲಿ ಒಟ್ಟಾಗಿ ನಟಿಸಿದ್ದ ವಿಜಯ್ ಮತ್ತು ತ್ರಿಶಾ ಮತ್ತೆ ಒಂದಾಗುತ್ತಿದ್ದಾರೆ ಎಂಬ ಸುದ್ದಿ ಕೇಳಿ, ಇಬ್ಬರ ಅಭಿಮಾನಿಗಳಿಗೂ ಸಖತ್‌ ಥ್ರಿಲ್‌ ಆಗಿದ್ದಾರೆ. ಕಮಲ್‌ ಹಾಸನ್‌ ನಟನೆಯ ʻವಿಕ್ರಮ್’ ಚಿತ್ರದ ನಿರ್ದೇಶಕ ಲೋಕೇಶ್ ಕನಗರಾಜ್ ಅವರು ವಿಜಯ್ ಅವರ ಮುಂದಿನ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಮೂಲಗಳ ಪ್ರಕಾರ ಈ ಚಿತ್ರಕ್ಕೆ ನಟಿ ತ್ರಿಶಾ ಅವರನ್ನೇ ನಾಯಕಿಯಾಗಿ ನಟಿಸಲು ಕೇಳಲಾಗಿದೆಯಂತೆ. ಸಿನಿಮಾಗೆ ತ್ರಿಶಾ ಕೂಡ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ | Actress Trisha | ನಟಿ ತ್ರಿಶಾ ಕಾಲಿಗೆ ಏನಾಯ್ತು? ಫಾರಿನ್ ಟ್ರಿಪ್ ಕ್ಯಾನ್ಸಲ್!

Actress Trisha (movie with dalapathi vijay)

ಬ್ರೇಕ್‌ ತೆಗೆದುಕೊಂಡಿದ್ದ ತ್ರಿಶಾ!
ನಟಿ ತ್ರಿಶಾ ತಮ್ಮ ʻರಾಮ್ʼ ಸಿನಿಮಾ ಚಿತ್ರೀಕರಣಕ್ಕಾಗಿ ಬ್ರಿಟನ್‌ನಲ್ಲಿದ್ದರು. ನಟ ಮೋಹನ್​ಲಾಲ್ ಜತೆಗಿನ ಸಿನಿಮಾ ಶೂಟಿಂಗ್ ಮುಗಿಸಿ ನಟಿ ವೆಕೇಶನ್ ಎಂಜಾಯ್ ಮಾಡಿದ್ದರು. ಬಳಿಕ ಪ್ರವಾಸದಲ್ಲಿದ್ದ ತ್ರಿಶಾ ಅವರು ಏಕಾಏಕಿ ಕೆಳಗೆ ಬಿದ್ದು ಕಾಲು ಮುರಿದುಕೊಂಡಿದ್ದರು. ಫೋಟೊಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಫಾರಿನ್‌ ಟ್ರಿಪ್‌ ಕ್ಯಾನ್ಸಲ್‌ ಮಾಡಿದ ತ್ರಿಶಾ ಅವರು ಶೂಟಿಂಗ್‌ನಿಂದ ಬ್ರೇಕ್‌ ತೆಗೆದುಕೊಂಡಿದ್ದರು.

ಇದನ್ನೂ ಓದಿ | MS Dhoni | ದಳಪತಿ ವಿಜಯ್‌ ಜತೆ ಕೂಲ್‌ ಕ್ಯಾಪ್ಟನ್‌ ಇನ್ನೊಂದು ಇನಿಂಗ್ಸ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Rashmika Mandanna: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ರಶ್ಮಿಕಾ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌!

Rashmika Mandanna: ರಶ್ಮಿಕಾ ಫಸ್ಟ್‌ ಲುಕ್‌ ಜತೆಗೆ ಕ್ಯಾರಕ್ಟರ್‌ ಗ್ಲಿಂಪ್ಸ್‌ ಕೂಡ ಚಿತ್ರತಂಡ ರಿವೀಲ್‌ ಮಾಡಿದೆ. ಒಂದು ನಿಮಿಷದಲ್ಲಿರುವ ಈ ವಿಡಿಯೊದಲ್ಲಿ ರಶ್ಮಿಕಾ ಪಾತ್ರದ ಝಲಕ್‌ ಇದೆ. ದೇವಿ ಶ್ರೀ ಪ್ರಸಾದ್ ಅವರ ಸಂಗೀತ ಇನ್ನಷ್ಟು ಕಿಕ್‌ ಕೊಡುವಂತಿದೆ. ಶೇಖರ್ ಕುಮ್ಮಲ ಅವರ ಕುಬೇರ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಚಲನಚಿತ್ರಗಳಲ್ಲಿ ಒಂದಾಗಿದೆ.

VISTARANEWS.COM


on

Rashmika Mandanna Kubera interesting first look
Koo

ಬೆಂಗಳೂರು: ಸೂಪರ್ ಸ್ಟಾರ್ ಧನುಷ್ ನಟನೆಯ ತೆಲುಗು ನಿರ್ದೇಶಕ ಶೇಖರ್ ಕಮ್ಮುಲ ಆಕ್ಷನ್ ಕಟ್ ಹೇಳುತ್ತಿರುವ ʻಕುಬೇರʼ ಸಿನಿಮಾ  ರಶ್ಮಿಕಾ ಮಂದಣ್ಣ ಅವರ ಫಸ್ಟ್‌ ಲುಕ್‌ ಪೋಸ್ಟರ್‌ ಹಂಚಿಕೊಂಡಿದೆ. ಸೂಪರ್‌ಸ್ಟಾರ್ ಧನುಷ್ ಮತ್ತು ನಾಗಾರ್ಜುನ ಅಭಿನಯದ ಬಹು ನಿರೀಕ್ಷಿತ ಪೌರಾಣಿಕ ಪ್ಯಾನ್-ಇಂಡಿಯನ್ ʻಕುಬೇರʼ ಸಿನಿಮಾ ಈ ಫಸ್ಟ್‌ ಲುಕ್‌ ಮೂಲಕ ಮತ್ತೆ ಪ್ರೇಕ್ಷರನ್ನು ಸೆಳೆಯಲು ಸಜ್ಜಾಗಿದೆ. ಸಿನಿಮಾದಲ್ಲಿ ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ಮಹತ್ವದ ಪಾತ್ರ ನಿರ್ವಹಿಸಿದ್ದಾರೆ.

ಇದೀಗ ಚಿತ್ರತಂಡ ರಶ್ಮಿಕಾ ಅವರ ಫಸ್ಟ್ ಲುಕ್ ಮತ್ತು ಪಾತ್ರದ ಪರಿಚಯವನ್ನು ವಿಡಿಯೊ ಮೂಲಕ ಮೂಲಕ ಶೇರ್‌ ಮಾಡಿಕೊಂಡಿದೆ. ರಶ್ಮಿಕಾ ವಿಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅವರ ಪಾತ್ರ ಪ್ರೇಕ್ಷಕರಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿದೆ. ನಟರಾದ ಧನುಷ್ ಮತ್ತು ನಾಗಾರ್ಜುನ ಜತೆಗೆ ಈ ಸಿನಿಮಾದಲ್ಲಿ ರಶ್ಮಿಕಾ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಫಸ್ಟ್ ಲುಕ್ ಥ್ರಿಲ್ಲಿಂಗ್ ಮತ್ತು ಇಂಟ್ರೆಸ್ಟಿಂಗ್ ಆಗಿದೆ.

ರಶ್ಮಿಕಾ ಫಸ್ಟ್‌ ಲುಕ್‌ ಜತೆಗೆ ಕ್ಯಾರಕ್ಟರ್‌ ಗ್ಲಿಂಪ್ಸ್‌ ಕೂಡ ಚಿತ್ರತಂಡ ರಿವೀಲ್‌ ಮಾಡಿದೆ. ಒಂದು ನಿಮಿಷದಲ್ಲಿರುವ ಈ ವಿಡಿಯೊದಲ್ಲಿ ರಶ್ಮಿಕಾ ಪಾತ್ರದ ಝಲಕ್‌ ಇದೆ. ದೇವಿ ಶ್ರೀ ಪ್ರಸಾದ್ ಅವರ ಸಂಗೀತ ಇನ್ನಷ್ಟು ಕಿಕ್‌ ಕೊಡುವಂತಿದೆ. ಶೇಖರ್ ಕುಮ್ಮಲ ಅವರ ಕುಬೇರ ಬಹು ನಿರೀಕ್ಷಿತ ಪ್ಯಾನ್-ಇಂಡಿಯನ್ ಚಲನಚಿತ್ರಗಳಲ್ಲಿ ಒಂದಾಗಿದೆ. ಸದ್ಯ ಈ ಹೈ-ಬಜೆಟ್ ಸಿನಿಮಾದ ಪೋಸ್ಟ್-ಪ್ರೊಡಕ್ಷನ್ ಕೆಲಸಗಳು ಆಗುತ್ತಿವೆ. ಇತ್ತೀಚೆಗಷ್ಟೇ ಧನುಷ್ ಅವರ ಫಸ್ಟ್ ಲುಕ್ ಪೋಸ್ಟರ್‌ ಅನಾವರಣಗೊಂಡಿತ್ತು. ಮಾತ್ರವಲ್ಲ ಪ್ರೇಕ್ಷರಿಂದ ಮೆಚ್ಚುಗೆ ವ್ಯಕ್ತವಾಗಿತ್ತು.

ಇದನ್ನೂ ಓದಿ: Rashmika Mandanna: ರಶ್ಮಿಕಾ ಇದೀಗ ಟಾಲಿವುಡ್‌ಗೆ ಬೈ ಬೈ; ಬಾಲಿವುಡ್‌ನಲ್ಲಿಯೇ ಬಿಡಾರ!

ಶ್ರೀ ವೆಂಕಟೇಶ್ವರ ಸಿನಿಮಾಸ್ ಎಲ್‌ಎಲ್‌ಪಿ ಮತ್ತು ಅಮಿಗೋಸ್ ಕ್ರಿಯೇಷನ್ಸ್ ಪ್ರೈವೇಟ್ ಲಿಮಿಟೆಡ್ ಬ್ಯಾನರ್‌ನಡಿಯಲ್ಲಿ ಸುನೀಲ್ ನಾರಂಗ್ ಮತ್ತು ಪುಸ್ಕುರ್ ರಾಮ್ ಮೋಹನ್ ರಾವ್ ಈ ಚಿತ್ರವನ್ನು ಜಂಟಿಯಾಗಿ ನಿರ್ಮಿಸಿದ್ದಾರೆ. ‘ಶೇಖರ್ ಕಮ್ಮುಲ ಅವರ ಕುಬೇರ’ ಒಂದು ಪ್ಯಾನ್-ಇಂಡಿಯಾ ಬಹುಭಾಷಾ ಚಿತ್ರವಾಗಿದ್ದು, ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಲಾಗಿದೆ. ಸದ್ಯ ಚಿತ್ರದ ಚಿತ್ರೀಕರಣ ಹೈದರಾಬಾದ್‌ನಲ್ಲಿ ನಡೆಯುತ್ತಿದೆ.

ಕೆಲವು ದಿನಗಳ ಹಿಂದೆ ಧನುಷ್ (Actor Dhanush) ಅವರ ಎರಡನೇ ನಿರ್ದೇಶನದ ಸಿನಿಮಾ ‘ಡಿ 50’ಪೋಸ್ಟರ್‌ ಲುಕ್‌ ಅನಾವರಣಗೊಂಡಿತ್ತು. ಧನುಷ್ ಕಳೆದ ವರ್ಷ ಜುಲೈನಲ್ಲಿ ಈ ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದರು. ಈ ಸಿನಿಮಾಗಾಗಿ ನಟ ತಲೆಯನ್ನು ಬೋಳಿಸಿಕೊಂಡಿದ್ದಾರೆ. ಇನ್ನು ಸಿನಿಮಾದ ನಾಯಕಿ ಹಾಗೂ ಇನ್ನುಳಿದ ಪಾತ್ರವರ್ಗದ ಬಗ್ಗೆ ಮುಂದಿನ ದಿನಗಳಲ್ಲಿ ಅಪ್‌ಡೇಟ್‌ ನೀಡುವುದಾಗಿ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. 2017 ರಲ್ಲಿ ತೆರೆಕಂಡ ‘ಪಾ ಪಾಂಡಿ’ ಚಿತ್ರದ ಮೂಲಕ ಧನುಷ್ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ಈ ಚಿತ್ರಕ್ಕಾಗಿ ಫಿಲ್ಮ್‌ಫೇರ್‌ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು. ಇದೀಗ ʻರಾಯನ್‌ʼ ಅವರ ಎರಡನೇ ನಿರ್ದೇಶನದ ಸಿನಿಮಾ.

Continue Reading

ಸ್ಯಾಂಡಲ್ ವುಡ್

Varalaxmi Sarathkumar: ವರಲಕ್ಷ್ಮಿ ಶರತ್‌ಕುಮಾರ್ ರಿಸಪ್ಷನ್‌ನಲ್ಲಿ ಮಿಂಚಿದ ಕಿಚ್ಚ ಸುದೀಪ್ ಕುಟುಂಬ!

Varalaxmi Sarathkumar: ನಿನ್ನೆ (ಜುಲೈ 3) ಚೆನ್ನೈನಲ್ಲಿ ಆರತಕ್ಷತೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಆರತಕ್ಷತೆಗೆ ಕಿಚ್ಚು ಸುದೀಪ್ ಕೂಡ ಭಾಗವಹಿಸಿದ್ದರು. ಪತ್ನಿ ಪ್ರಿಯಾ ಹಾಗೂ ಪುತ್ರಿ ಸಾನ್ವಿ ಕೂಡ ಜತಗೆ ಇದ್ದರು. ಮೊದಲಿಂದ ಶರತ್‌ ಕುಮಾರ್‌ (Varalaxmi Sarathkumar) ಅವರು ಸುದೀಪ್ ಹಾಗೂ ಅವರ ಕುಟುಂಬಕ್ಕೆ ಆತ್ಮೀಯರು. ವರಲಕ್ಷ್ಮೀ ಶರತ್ ಕುಮಾರ್ ಅವರು ಸುದೀಪ್‌ ಅವರ ಜನುಮದಿನ ವಿಶ್‌ ಮಾಡದೇ ಇರಲ್ಲ.

VISTARANEWS.COM


on

Varalaxmi Sarathkumar Reception attend By sudeep Family
Koo

ಬಹುಭಾಷಾ ನಟ ಶರತ್‌ಕುಮಾರ್ (Varalaxmi Sarathkumar) ಅವರ ಪುತ್ರಿ ಮತ್ತು ಕನ್ನಡದ ʻಮಾಣಿಕ್ಯʼ ಸಿನಿಮಾದಲ್ಲಿ ಸುದೀಪ್‌ಗೆ ಜೋಡಿಯಾಗಿದ್ದ ನಟಿ ವರಲಕ್ಷ್ಮಿ ಶರತ್‌ಕುಮಾರ್ ಮುಂಬೈ ಮೂಲದ ಉದ್ಯಮಿ ಜತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಉದ್ಯಮಿ ನಿಕೊಲಾಯ್ ಸಚ್‌ದೇವ್ ಅವರೊಂದಿಗೆ ಸಪ್ತಪದಿ ತುಳಿದಿದ್ದರು. ಥಾಯ್ಲೆಂಡ್‌ನಲ್ಲಿ ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯರು ಮಾತ್ರ ಭಾಗವಹಿಸಿದ್ದರು. ಈ ಬೆನ್ನಲ್ಲೇ ನಿನ್ನೆ (ಜುಲೈ 3) ಚೆನ್ನೈನಲ್ಲಿ ಆರತಕ್ಷತೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಆರತಕ್ಷತೆಗೆ ಕಿಚ್ಚು ಸುದೀಪ್ ಕೂಡ ಭಾಗವಹಿಸಿದ್ದರು. ಪತ್ನಿ ಪ್ರಿಯಾ ಹಾಗೂ ಪುತ್ರಿ ಸಾನ್ವಿ ಕೂಡ ಜತಗೆ ಇದ್ದರು.

ಚೆನ್ನೈನಲ್ಲಿ ನಡೆದ ಅದ್ಧೂರಿ ಆರತಕ್ಷತೆಯಲ್ಲಿ ತಮಿಳು, ತೆಲುಗು, ಕನ್ನಡ ಚಿತ್ರರಂಗದ ಗಣ್ಯರೇ ಹೆಚ್ಚಾಗಿ ಭಾಗಿವಹಿಸಿದ್ದರು. ನಿರ್ದೇಶಕ ಬಾಲಾ, ನಟ ಜೀವಾ, ನಟಿ ರೋಜಾ, ನಿರ್ದೇಶಕ ಆರ್.ಕೆ.ಸೆಲ್ವಮಣಿ, ನಿರ್ದೇಶಕ ಹರಿ, ನಟ ವಿಜಯಕುಮಾರ್, ನಟ ಬಾಲಕೃಷ್ಣ, ನಟಿ ಆಂಡ್ರಿಯಾ, ನಿರ್ದೇಶಕ ಕೆ.ಎಸ್.ರವಿಕುಮಾರ್, ನಟ ಶಿವಕುಮಾರ್, ಶೋಭಾ, ಸುಂದರ್ ಸಿ. ಖುಷ್ಬೂ, ನಿರ್ದೇಶಕ ಎ.ಎಲ್.ವಿಜಯ್, ಮಣಿರತ್ನಂ, ಸುಹಾಸಿನಿ, ಜಾಕಿ ಶ್ರಾಫ್ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಬಂದು ಶುಭ ಕೋರಿದ್ದಾರೆ. ಆರತಕ್ಷತೆಯಲ್ಲಿ ವರಲಕ್ಷ್ಮಿ ಶರತ್‌ಕುಮಾರ್ ಮೆರೂನ್ ಬಣ್ಣದ ಗೌನ್ ಧರಿಸಿದ್ದರೆ, ನಿಕೊಲಾಯ್ ಸಚ್‌ದೇವ್ ಅದೇ ಬಣ್ಣದ ಶೇರ್ವಾನಿಯಲ್ಲಿ ಮಿಂಚಿದ್ದರು.

ಇದನ್ನೂ ಓದಿ: Varalaxmi Sarathkumar: ಪ್ರಧಾನಿ ಮೋದಿಗೆ ಮದುವೆ ಆಮಂತ್ರಣ ನೀಡಿದ ನಟಿ ವರಲಕ್ಷ್ಮಿ

ನಟ ಶರತ್‌ಕುಮಾರ್ ಅವರ ಮೊದಲ ಪತ್ನಿ ಸಯಾ ಅವರಿಗೆ ಜನಿಸಿದವರೇ ವರಲಕ್ಷ್ಮಿ. ಮೊದಲ ಪತ್ನಿಗೆ ವಿಚ್ಛೇದನ ನೀಡಿದ ಬಳಿಕ ನಟಿ ರಾಧಿಕಾರನ್ನು ವಿವಾಹವಾಗಿದ್ದರು.

ಮೊದಲಿಂದ ಶರತ್‌ ಕುಮಾರ್‌ (Varalaxmi Sarathkumar) ಅವರು ಸುದೀಪ್ ಹಾಗೂ ಅವರ ಕುಟುಂಬಕ್ಕೆ ಆತ್ಮೀಯರು. ವರಲಕ್ಷ್ಮೀ ಶರತ್ ಕುಮಾರ್ ಅವರು ಸುದೀಪ್‌ ಅವರ ಜನುಮದಿನ ವಿಶ್‌ ಮಾಡದೇ ಇರಲ್ಲ. ಇಬ್ಬರೂ ತುಂಬ ಆತ್ಮಿಯರು.

ವರಲಕ್ಷ್ಮಿ ಮತ್ತು ನಿಕೋಲಾಯ್ ಅವರ ಪ್ರೇಮಕಥೆ!

ರಮೇಶ್ ಅವರು ಜೋಡಿಯ ಪ್ರೇಮಕಥೆಯನ್ನು ಬಹಿರಂಗಪಡಿಸಿದ್ದರು. “ನಟಿ ವರಲಕ್ಷ್ಮಿ ಶರತ್‌ಕುಮಾರ್ ಮತ್ತು ಗ್ಯಾಲರಿಸ್ಟ್ ನಿಕೋಲಾಯ್ ಸಚ್‌ದೇವ್ ಅವರು ಮಾರ್ಚ್ 1ರಂದು ಮುಂಬೈನಲ್ಲಿ ಕುಟುಂಬ ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಕಳೆದ 14 ವರ್ಷಗಳಿಂದ ಪರಸ್ಪರ ಪರಿಚಿತರಾದ ವರಲಕ್ಷ್ಮಿ ಮತ್ತು ನಿಕೋಲಾಯ್ ತಮ್ಮ ಪೋಷಕರ ಆಶೀರ್ವಾದದೊಂದಿಗೆ ಉಂಗುರಗಳನ್ನು ಬದಲಾಯಿಸಿಕೊಂಡರು.

Continue Reading

Latest

Actor Kamal Haasan: ರಜನಿಕಾಂತ್ ಮತ್ತು ಕಮಲ್ ಹಾಸನ್ ಒಟ್ಟಾಗಿ ನಟಿಸದಿರಲು ಇದೇ ಕಾರಣ!

Actor Kamal Haasan: ರಜನಿಕಾಂತ್ ಹಾಗೂ ಕಮಲ್ ಹಾಸನ್ ಇಬ್ಬರೂ ತಮಿಳು ಚಿತ್ರರಂಗದಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ ನಟರು. ಇವರು ಚಿತ್ರರಂಗಕ್ಕೆ ಕಾಲಿಟ್ಟಾಗಲಿನಿಂದ ಒಟ್ಟಾಗಿ ತೆರೆ ಹಂಚಿಕೊಳ್ಳುತ್ತಿದ್ದರು.ಸಾಕಷ್ಟು ಸಿನಿಮಾಗಳಲ್ಲಿ ಇಬ್ಬರೂ ಜತೆಯಾಗಿ ನಟಿಸಿದ್ದಾರೆ. ಆದರೆ ಅವರು ಸೂಪರ್‌ಸ್ಟಾರ್‌ಗಳಾದ ನಂತರ ಒಟ್ಟಿಗೆ ಚಿತ್ರ ಮಾಡಿಲ್ಲ. ಇದಕ್ಕೆ ಕಾರಣವೇನು ಎಂಬ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಮೂಡಿತ್ತು. ಆದರೆ ಈಗ ಅದಕ್ಕೆ ನಟ ಕಮಲ್ ಹಾಸನ್ ಪ್ರತಿಕ್ರಿಯೆ ನೀಡಿದ್ದಾರೆ.

VISTARANEWS.COM


on

Actor Kamal Haasan
Koo

ಚೆನ್ನೈ : ರಜನಿಕಾಂತ್ ಹಾಗೂ ನಟ ಕಮಲ್ ಹಾಸನ್ (Actor Kamal Haasan) ಅವರು ತಮಿಳು ಚಿತ್ರರಂಗದ ಖ್ಯಾತ ನಟರು. ಇವರು ಚಿತ್ರರಂಗಕ್ಕೆ ಕಾಲಿಟ್ಟ ಆರಂಭದಲ್ಲಿ ಒಟ್ಟಾಗಿ ತೆರೆ ಹಂಚಿಕೊಳ್ಳುತ್ತಿದ್ದರು. ಇಳಮೈ ಊಂಜಲ್ ಆಡುಕಿರಾತು, ತಿಲ್ಲು ಮುಲ್ಲು, ಅಪೂರ್ವ ರಾಗಂಗಲ್, ಅವಲ್ ಅಪ್ಪಾದಿಥನ್, 16 ವಯತಿನಿಲೆ, ಐ ಮತ್ತು ನೈನೈತಾಲೆ ಇನಿಕ್ಕುಮ್ ಸೇರಿದಂತೆ ಸುಮಾರು 16 ಚಿತ್ರಗಳಲ್ಲಿ ಒಟ್ಟಿಗೆ ನಟಿಸಿದ್ದರು.

Actor Kamala Hasan

ಈ ಇಬ್ಬರು ಚಿತ್ರರಂಗಕ್ಕೆ ಸೂಪರ್ ಹಿಟ್ ಚಿತ್ರಗಳನ್ನು ನೀಡಿ ಸೂಪರ್ ಸ್ಟಾರ್ ನಟರೆನಿಸಿಕೊಂಡಿದ್ದಾರೆ. ಹಿಂದಿ ಚಿತ್ರ ಗಿರಫ್ತಾರ್ (1985)ನಲ್ಲಿ ಇಬ್ಬರೂ ಜೊತೆಯಾಗಿ ನಟಿಸಿದ ಕೊನೆಯ ಚಿತ್ರವಾಗಿತ್ತು. ಇದರಲ್ಲಿ ಇಬ್ಬರೂ ಅಮಿತಾಭ್ ಬಚ್ಚನ್ ಜೊತೆ ಕಾಣಿಸಿಕೊಂಡರು. ಆದರೆ ಅವರು ಸೂಪರ್‌ಸ್ಟಾರ್‌ಗಳಾದ ನಂತರ ಒಟ್ಟಿಗೆ ಚಿತ್ರ ಮಾಡಿಲ್ಲ. ಇದಕ್ಕೆ ಕಾರಣವೇನು ಎಂಬ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಮೂಡಿತ್ತು. ಆದರೆ ಈಗ ಅದಕ್ಕೆ ನಟ ಕಮಲ್ ಹಾಸನ್ ಪ್ರತಿಕ್ರಿಯೆ ನೀಡಿದ್ದಾರೆ.

Actor Kamala Hasan

ನಟ ಕಮಲ್ ಹಾಸನ್ ಅವರ ನಟನೆಯ ‘ಇಂಡಿಯನ್ 2’ ಸಿನಿಮಾದ ಪ್ರಚಾರ ಕೆಲಸ ಪ್ರಾರಂಭವಾಗಿದೆ. ಇತ್ತೀಚೆಗೆ ಮುಂಬೈನಲ್ಲಿ ಚಿತ್ರದ ಟ್ರೈಲರ್ ರಿಲೀಸ್ ಆಗಿ ಬಹಳ ಸದ್ದು ಮಾಡಿತ್ತು. ಈ ಸಿನಿಮಾ ಬಗ್ಗೆ ಇತ್ತೀಚೆಗೆ, ಕಮಲ್ ಹಾಸನ್ ಸಂದರ್ಶನವೊಂದರಲ್ಲಿ ಮಾತನಾಡಿದ್ದರು. ಈ ವೇಳೆ ಅವರು ತಮ್ಮ ಹಾಗೂ ರಜನಿಕಾಂತ್ ಅವರ ನಡುವಿನ ಒಡನಾಟದ ಬಗ್ಗೆ ತಿಳಿಸಿದ್ದಾರೆ. ಹಾಗೂ ತಾವು ಒಟ್ಟಿಗೆ ಚಿತ್ರ ಮಾಡದಿರಲು ಕಾರಣವೇನು ಎಂಬುದಕ್ಕೆ ವಿವರಣೆ ನೀಡಿದ್ದಾರೆ. ಚಿತ್ರರಂಗದಲ್ಲಿ ಯಶಸ್ಸು ಕಂಡ ನಂತರ ಅವರು ಮತ್ತು ರಜನಿಕಾಂತ್ ಇಬ್ಬರೂ ಚಲನಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡದಿರಲು ನಿರ್ಧರಿಸಿದ್ದರು. ಆದರೆ ಅವರಿಬ್ಬರ ಮಾರ್ಗದರ್ಶಕರು ಪ್ರಸಿದ್ಧ ತಮಿಳು ಚಲನಚಿತ್ರ ನಿರ್ಮಾಪಕ ಕೆ. ಬಾಲಚಂದರ್ ಎಂಬುದು ಎಲ್ಲರಿಗೂ ತಿಳಿದಿದೆ ಎಂಬುದಾಗಿ ತಿಳಿಸಿದ್ದಾರೆ.

“ನಾವು ಆರಂಭದಲ್ಲಿ ಒಟ್ಟಿಗೆ ಅನೇಕ ಚಲನಚಿತ್ರಗಳನ್ನು ಮಾಡಿದ್ದೇವೆ. ನಂತರ ನಾವು ಒಟ್ಟಿಗೆ ಕೆಲಸ ಮಾಡದಿರಲು ನಿರ್ಧರಿಸಿದ್ದೇವೆ. ನಾವು ಇಬ್ಬರು ಕಾಂಪಿಟೇಟರ್‌ಗಳಲ್ಲ. ನಮಗೆ ಒಂದೇ ಮಾರ್ಗದರ್ಶಕರಿದ್ದರು. ನಮ್ಮ ನಡುವೆ ಯಾವುದೇ ಅಸೂಯೆ ಇಲ್ಲ ಮತ್ತು ನಮ್ಮ ದಾರಿ ಬೇರೆ ಬೇರೆ. ನಾವು ಎಂದಿಗೂ ಪರಸ್ಪರರ ಬಗ್ಗೆ ಕೀಳುಮಟ್ಟದ ಟೀಕೆಗಳನ್ನು ಮಾಡುವುದಿಲ್ಲ. ನಾವು ನಮ್ಮ 20ರ ಹರೆಯದಲ್ಲಿದ್ದಾಗಲೇ ಈ ಬಗ್ಗೆ ಪ್ರಾಮಿಸ್ ಮಾಡಿದ್ದೇವೆ. ಇಂಥದ್ದೇ ಎಂಬ ಕಾರಣವನ್ನು ಹೇಳಲು ಆಗುವುದಿಲ್ಲ. ಆದರೆ ನಾವು ಒಂದು ಹಂತಕ್ಕೆ ಬಂದ ಮೇಲೆ ನಮ್ಮ ನಮ್ಮ ಅಭಿರುಚಿಗಳು ಬೇರೆ ಬೇರೆಯಾದವು. ಹಾಗಾಗಿ ಒಟ್ಟಿಗೆ ಚಿತ್ರ ಮಾಡದಿರಲು ನಿರ್ಧರಿಸಿದೆವು” ಎಂಬುದಾಗಿ ಕಮಲ್‌ ಹಾಸನ್‌ ಅವರು ಹೇಳಿದ್ದಾರೆ.

ಅಲ್ಲದೇ ಕಮಲ್ ಹಾಸನ್ 1981ರಲ್ಲಿ ‘ಏಕ್ ದುಜೆ ಕೆ ಲಿಯೆ’ ಚಿತ್ರದ ಮೂಲಕ ಹಿಂದಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಇದು ಕೆ ಬಾಲಚಂದರ್ ನಿರ್ದೇಶನದ ಅವರ ತೆಲುಗು ಚಿತ್ರ ‘ಮರೋ ಚರಿತ್ರ’ದ ರಿಮೇಕ್ ಆಗಿದೆ. ಈ ವೇಳೆ ಕಮಲ್ ಹಾಸನ್ ತಮಗೆ ಹಿಂದಿ ಚಿತ್ರರಂಗದಲ್ಲಿ ಬೆಂಬಲ ನೀಡಿದ ಅಭಿಮಾನಿಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

ಇದನ್ನೂ ಓದಿ:ಸಾಲದ ಇಎಂಐ ಕಟ್ಟಲಾಗದೆ ಕಾರನ್ನು ಕಳೆದುಕೊಂಡಿದ್ದ ಶಾರುಖ್ ಖಾನ್!

ಪ್ರಸ್ತುತ, ಕಮಲ್ ಹಾಸನ್ ಅವರು ಕಲ್ಕಿ 2898ಎಡಿ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಇದರಲ್ಲಿ ಅವರು ಕೇವಲ ಕೆಲವು ನಿಮಿಷಗಳ ಕಾಲ ಮಾತ್ರ ಪರದೆಯ ಮೇಲೆ ಕಾಣಿಸಿಕೊಳ್ಳುವಂತಹ ಚಿಕ್ಕ ಪಾತ್ರವನ್ನು ಮಾಡಿದ್ದಾರೆ. ಈ ಚಿತ್ರದ ಮುಂದಿನ ಭಾಗದಲ್ಲಿ ಈ ಪಾತ್ರ ಮಹತ್ವದ್ದಾಗಿದೆ ಎನ್ನಲಾಗಿದೆ.

Continue Reading

Latest

Thalapathy Vijay: ದಳಪತಿ ವಿಜಯ್‌ಗೆ ಭುಜದ ಮೇಲಿನ ಕೈ ತೆಗೆಯಲು ಹೇಳಿದ ಹುಡುಗಿ; ವಿಡಿಯೊ ವೈರಲ್

Thalapathy Vijay ಸಿನಿಮಾ ತಾರೆಯರು ಎಂದರೆ ಎಲ್ಲರೂ ಇಷ್ಟಪಡುತ್ತಾರೆ. ಅವರ ಜೊತೆ ನಿಂತು ಸೆಲ್ಫಿ ತೆಗೆದುಕೊಲ್ಳುವುದು, ಅವರ ಜೊತೆ ಮಾತನಾಡುವುದು ಎಂದರೆ ಅಭಿಮಾನಿಗಳಿಗೆ ಹಬ್ಬ. ಆದರೆ ಇಲ್ಲೊಬ್ಬಳು ಹುಡುಗಿ ತಮಿಳು ನಟ ದಳಪತಿ ವಿಜಯ್ ಹೆಗಲ ಮೇಲೆ ಕೈಯನ್ನು ತೆಗೆಯುವಂತೆ ವಿಜಯ್‌ಗೆ ಕೇಳಿಕೊಂಡ ವಿಡಿಯೊವೊಂದು ಸಖತ್ ವೈರಲ್ ಆಗಿದೆ. ಸಮಾರಂಭದಲ್ಲಿ 10 ಮತ್ತು 12ನೇ ತರಗತಿಯಲ್ಲಿ ಉತ್ತಮ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗಿತ್ತು. ಆ ವೇಳೆ ಉತ್ತಮ ಅಂಕ ಪಡೆದು ಗೌರವಿಸಲ್ಪಟ್ಟ ಹುಡುಗಿಯೊಬ್ಬಳ ಭುಜದ ಮೇಲೆ ನಟ ವಿಜಯ್ ಕೈ ಹಾಕಿದ್ದು, ತಕ್ಷಣ ಆ ಹುಡುಗಿ ತನ್ನ ಭುಜದ ಸುತ್ತಲಿನ ಕೈಯನ್ನು ತೆಗೆಯುವಂತೆ ವಿಜಯ್‌ಗೆ ಹೇಳಿದ್ದಾಳಂತೆ.

VISTARANEWS.COM


on

Thalapathy Vijay
Koo

ಚೆನ್ನೈ : ಸಿನಿಮಾ ತಾರೆಯರು ಎಂದರೆ ಎಲ್ಲರಿಗೂ ತುಂಬಾ ಇಷ್ಟ. ಅವರು ಒಂದು ವೇಳೆ ಕಣ್ಣಮುಂದೆ ಬಂದರೆ ಉತ್ಸಾಹದಲ್ಲಿ ಅವರ ಜೊತೆ ಸೆಲ್ಫಿ ತೆಗೆಯುವುದು, ಅವರನ್ನು ಹಗ್, ಕಿಸ್ ಮಾಡುವುದು ಹೀಗೆ ವಿಚಿತ್ರವಾಗಿ ವರ್ತಿಸುತ್ತಾರೆ ಜನ. ಆದರೆ ಇಲ್ಲೊಂದು ಹುಡುಗಿ ತನ್ನ ಭುಜದ ಮೇಲೆ ಕೈ ಹಾಕಿದ ಸೂಪರ್ ಸ್ಟಾರ್‌ಗೆ ಕೈ ತೆಗೆಯುವಂತೆ ಹೇಳಿದ್ದಾಳೆ. ಈ ವಿಡಿಯೊ ಸೋಶಿಯಲ್ ಮಿಡಿಯಾದಲ್ಲಿ ವೈರಲ್ (Thalapathy Vijay) ಆಗಿದೆ.

ತಮಿಳು ನಟ ವಿಜಯ್ ಎಂದರೆ ಯಾರಿಗೆ ಗೊತ್ತಿಲ್ಲ ಹೇಳಿ. ಕಾಲಿವುಡ್ ಚಿತ್ರರಂಗದಲ್ಲಿ ಹೆಸರಾಂತ ನಟ ದಳಪತಿ ವಿಜಯ್. ಕಾಲಿವುಡ್ ಚಿತ್ರರಂಗದಲ್ಲಿ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಈ ನಟನಿಗೆ ಅಪಾರ ಅಭಿಮಾನಿ ಬಳಗವೂ ಇದೆ. ನಟ‌ ವಿಜಯ್‌ ಜೂನ್ 28ರಂದು, ಚೆನ್ನೈನಲ್ಲಿ ತಮಿಳಗ ವೆಟ್ರಿ ಕಳಗಂ ಆಯೋಜಿಸಿದ್ದ ಎರಡನೇ ವಾರ್ಷಿಕ ಶಿಕ್ಷಣ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಿದ್ದರು.

ಈ ಸಮಾರಂಭದಲ್ಲಿ 10 ಮತ್ತು 12ನೇ ತರಗತಿಯಲ್ಲಿ ಉತ್ತಮ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗಿತ್ತು. ಆ ವೇಳೆ ಉತ್ತಮ ಅಂಕ ಪಡೆದು ಗೌರವಿಸಲ್ಪಟ್ಟ ಹುಡುಗಿಯೊಬ್ಬಳ ಭುಜದ ಮೇಲೆ ನಟ ವಿಜಯ್ ಕೈ ಹಾಕಿದ್ದು, ತಕ್ಷಣ ಆ ಹುಡುಗಿ ತನ್ನ ಭುಜದ ಸುತ್ತಲಿನ ಕೈಯನ್ನು ತೆಗೆಯುವಂತೆ ವಿಜಯ್‌ಗೆ ಹೇಳಿದ್ದಾಳೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ ಹುಡುಗಿ ತನ್ನ ಭುಜದ ಸುತ್ತಲಿನ ಕೈಯನ್ನು ತೆಗೆಯುವಂತೆ ನಟ ವಿಜಯ್‌ನನ್ನು ಕೇಳುತ್ತಿರುವುದನ್ನು ತೋರಿಸುತ್ತದೆ. ಈ ವಿಡಿಯೊ ಶೀರ್ಷಿಕೆಯಲ್ಲಿ ನಟನನ್ನು ಟೀಕಿಸಲಾಗಿತ್ತು.

ಆದರೆ ಪೋಸ್ಟ್ ಮಾಡಿದ ಈ ವಿಡಿಯೊ ಕೇವಲ ಭಾಗಶಃ ಕ್ಲಿಪ್ ಆಗಿದೆ. ವಿಜಯ್ ಅವರ ಕೈಯನ್ನು ತೆಗೆಯುವಂತೆ ಕೇಳಿದ ನಂತರ, ಹುಡುಗಿ ಕ್ಯಾಮೆರಾಗಳಿಗೆ ಪೋಸ್ ನೀಡುವಾಗ ಅವರ ತೋಳನ್ನು ಹಿಡಿದಿದ್ದಾಳೆ ಎನ್ನಲಾಗಿದೆ. ಅರ್ಧ ವಿಡಿಯೊ ಹಂಚಿಕೊಳ್ಳುವ ಮೂಲಕ ನಟ ವಿಜಯ್ ಅವರ ಬಗ್ಗೆ ತಪ್ಪು ಮಾಹಿತಿಯನ್ನು ಹರಡಿದ್ದಕ್ಕಾಗಿ ನೆಟ್ಟಿಗರು ಕಿಡಿಕಾರಿದ್ದಾರೆ.

ಈ ಸಮಾರಂಭದಲ್ಲಿ ನಟ ವಿಜಯ್ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುವ ಮೂಲಕ ಅವರನ್ನು ಶಿಕ್ಷಣದ ಕಡೆಗೆ ಪ್ರೇರೆಪಿಸಿದ್ದಾರೆ. ಕೆಟ್ಟ ಚಟಗಳಿಂದ ದೂರವಿರಲು ಒತ್ತಾಯಿಸಿದ್ದಾರೆ. ಮತ್ತು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಹಾಗೂ ಉತ್ತಮ ಅಂಕಗಳನ್ನು ಪಡೆಯಲು ಸಾಧ್ಯವಾಗದಿದ್ದರೆ ಅದೇ ಕೊನೆ ಅವಕಾಶವೆಂದು ಅಂದುಕೊಳ್ಳಬಾರದು. ಯಶಸ್ಸು ಎಂದಿಗೂ ಕೊನೆಗೊಳ್ಳುವುದಿಲ್ಲ ಮತ್ತು ವೈಫಲ್ಯವು ಎಂದಿಗೂ ಅಂತಿಮವಲ್ಲ ಎಂದು ಅವರು ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಒಟಿಟಿಯಲ್ಲಿ ಈ ವಾರ ಬಿಡುಗಡೆಯಾಗಲಿರುವ ಹೊಸ ಚಲನಚಿತ್ರಗಳು, ವೆಬ್ ಸರಣಿಗಳ ಪಟ್ಟಿ ಹೀಗಿವೆ

Viral Video

ವಿಜಯ್ ತಮ್ಮ ಮುಂದಿನ ಚಿತ್ರ “ಗ್ರೇಟೆಸ್ಟ್ ಆಫ್ ಆಲ್ ಟೈಮ್ (ಜಿಒಎಟಿ) ಗಾಗಿ ಸಜ್ಜಾಗುತ್ತಿದ್ದಾರೆ. ಪ್ರಶಾಂತ್, ಪ್ರಭುದೇವ, ಸ್ನೇಹಾ, ಅಜ್ಮಲ್ ಅಮೀರ್, ವೈಭವ್, ಲೈಲಾ, ಮೋಹನ್, ಅರವಿಂದ್ ಆಕಾಶ್, ಅಜಯ್ ರಾಜ್ ಸೇರಿದಂತೆ ಹಲವರು ಈ ಚಿತ್ರದಲ್ಲಿ ನಟಿಸಲಿದ್ದಾರೆ.

ಈ ಚಿತ್ರದಲ್ಲಿ ವಿಜಯ್ ನಾಯಕ ಮತ್ತು ಖಳನಾಯಕನಾಗಿ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರ ಸೆಪ್ಟೆಂಬರ್ 5, 2024ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

Continue Reading
Advertisement
Cheating Case
ಪ್ರಮುಖ ಸುದ್ದಿ14 mins ago

Cheating case : ಭಕ್ತರ 40 ಲಕ್ಷ ರೂ. ಗುಳುಂ ಮಾಡಲು ದರೋಡೆ ಕತೆ ಕಟ್ಟಿದ ಸ್ವಾಮೀಜಿ!

Snake
ವೈರಲ್ ನ್ಯೂಸ್20 mins ago

ತನಗೆ ಒಮ್ಮೆ ಕಚ್ಚಿದ ಹಾವಿಗೆ ಮೂರು ಬಾರಿ ಕಚ್ಚಿ ಸೇಡು ತೀರಿಸಿಕೊಂಡ ವ್ಯಕ್ತಿ; ಕೊನೆಗೆ ಬದುಕುಳಿದಿದ್ದು ಯಾರು?

Mohammed Siraj
ಪ್ರಮುಖ ಸುದ್ದಿ45 mins ago

Mohammed Siraj : ವೇಗದ ಬೌಲರ್​ ಮೊಹಮ್ಮದ್​ ಸಿರಾಜ್​ಗೆ ಹೈದರಾಬಾದ್​​ನಲ್ಲಿ ಭರ್ಜರಿ ಸ್ವಾಗತ, ಇಲ್ಲಿದೆ ವಿಡಿಯೊ

Akshata Murty
ವಿದೇಶ51 mins ago

Akshata Murty: ರಿಷಿ ಸುನಕ್‌ ವಿದಾಯದ ಭಾಷಣದ ವೇಳೆ ಅಕ್ಷತಾ ಮೂರ್ತಿ ಧರಿಸಿದ್ದ ಡ್ರೆಸ್ ಬೆಲೆ 42 ಸಾವಿರ ರೂ.!

Hardik Pandya
ಪ್ರಮುಖ ಸುದ್ದಿ1 hour ago

Hardik Pandya : ವಿಶ್ವ ಕಪ್​ ಗೆದ್ದ ಹಾರ್ದಿಕ್​ ಪಾಂಡ್ಯಗೆ ಮುತ್ತು ಕೊಟ್ಟು ಅಭಿನಂದಿಸಿದ ಇಶಾನ್ ಕಿಶನ್​

Weather News
ಉತ್ತರ ಕನ್ನಡ2 hours ago

Weather News: ಭಾರಿ ಮಳೆ; ಕರಾವಳಿಯಾದ್ಯಂತ ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Mahindra Marazzo
ಪ್ರಮುಖ ಸುದ್ದಿ2 hours ago

Mahindra Marazzo : ಈ 7 ಸೀಟರ್​ ಕಾರಿನ ಉತ್ಪಾದನೆ ನಿಲ್ಲಿಸಿದ ಮಹೀಂದ್ರಾ

BSP President
ದೇಶ3 hours ago

BSP President: ತಮಿಳುನಾಡಿನಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಹತ್ಯೆ; ರಾಜಕೀಯ ವೈಷಮ್ಯ ಕಾರಣ?

Dengue Fever
ಕರ್ನಾಟಕ3 hours ago

Dengue Fever: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಡೆಂಗ್ಯೂ ಕೇಸ್‌ಗಳು ಪತ್ತೆ!

Rohit Sharma
ಪ್ರಮುಖ ಸುದ್ದಿ3 hours ago

T20 World Cup : ಮಹಾರಾಷ್ಟ್ರದ ಆಟಗಾರರಿಗೆ 11 ಕೋಟಿ ರೂಪಾಯಿ ಬಹುಮಾನ ಘೋಷಿಸಿದ ಮಹಾ ಸಿಎಂ ಶಿಂಧೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ6 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ8 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ9 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ10 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ12 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು13 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು14 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ18 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ1 day ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಟ್ರೆಂಡಿಂಗ್‌