ವಿಸ್ತಾರ ಸಂಪಾದಕೀಯ | ಗಡಿ ವಿವಾದ, ಮಹಾರಾಷ್ಟ್ರದ ಹತಾಶ ಯತ್ನ - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ | ಗಡಿ ವಿವಾದ, ಮಹಾರಾಷ್ಟ್ರದ ಹತಾಶ ಯತ್ನ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ (Karnataka-Maharashtra Border Dispute) ಅರ್ಜಿಯ ವಿಚಾರಣಾರ್ಹತೆಯ ಸಂಬಂಧ ನ.23ರಂದು ಸುಪ್ರೀಂ ಕೋರ್ಟ್ ಪ್ರಮುಖ ನಿರ್ಧಾರ ಪ್ರಕಟಿಸಲಿದೆ. ಹಾಗಾಗಿ, ಉಭಯ ರಾಜ್ಯಗಳು ತಮ್ಮ ಕಾನೂನು ತಂಡಗಳನ್ನು ಸನ್ನದ್ಧಗೊಳಿಸಿವೆ.

VISTARANEWS.COM


on

Supreme Court
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1956ರ ರಾಜ್ಯ ಪುನರ್ವಿಂಗಡನಾ ಕಾಯ್ದೆಯನ್ನೇ ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರವು 2004ರಲ್ಲಿ ಸಲ್ಲಿಸಿರುವ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ (ನ.23) ವಿಚಾರಣೆಗೆ ಬರಲಿದೆ. ಈ ಗಡಿ ವಿವಾದದ ಅರ್ಜಿ ವಿಚಾರಣೆ(Maintainability)ಯನ್ನು ಸುಪ್ರೀಂ ಕೋರ್ಟ್ ನಡೆಸಬೇಕೇ ಅಥವಾ ಬೇಡವೇ ಎಂಬುದರ ಕುರಿತು ನ್ಯಾಯಾಲಯವು ಬುಧವಾರ ಅಂತಿಮ ವಿಚಾರಣೆ ನಡೆಸಲಿದೆ. ಈ ಹಿನ್ನೆಲೆಯಲ್ಲಿ ಉಭಯ ರಾಜ್ಯಗಳಲ್ಲಿ ಬಿರುಸಿನ ಚಟುವಟಿಕೆಗಳು ನಡೆದಿದ್ದು, ಕಾನೂನು ತಂಡಗಳನ್ನು ಸಿದ್ಧಪಡಿಸಲಾಗಿದೆ. ಮೇಲ್ನೋಟಕ್ಕೆ ಸುಪ್ರೀಂ ಕೋರ್ಟ್‌ಲ್ಲಿ ಕರ್ನಾಟಕದ ವಾದಕ್ಕೆ ಮನ್ನಣೆ ದೊರೆಯುವ ಅವಕಾಶಗಳು ಹೆಚ್ಚು ಎಂಬುದು ಕಾನೂನು ತಜ್ಞರ ಅಭಿಪ್ರಾಯವಾಗಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರವು ತುಸು ಹೆಚ್ಚೇ ಮುತುವರ್ಜಿ ವಹಿಸಿ, ಗಡಿ ವಿವಾದ ಸಂಬಂಧ ಹಿಂಸಾಚಾರದಲ್ಲಿ ಮಡಿದವರಿಗೆ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಮಾತನಾಡುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಇದಕ್ಕೆ ಸಂಬಂಧಿಸಿ ಮಹಾರಾಷ್ಟ್ರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಮಹಾರಾಷ್ಟ್ರದ ಈ ತಂತ್ರವನ್ನು ಕರ್ನಾಟಕ ಸರ್ಕಾರವು ಏಕ ದನಿಯಲ್ಲಿ ಖಂಡಿಸಬೇಕು ಮತ್ತು ಯಾವುದೇ ಕಾರಣಕ್ಕೆ ಮನ್ನಣೆ ದೊರೆಯದಂತೆ ನೋಡಿಕೊಳ್ಳಬೇಕು.

ಬೆಳಗಾವಿಗೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ಮಹಾರಾಷ್ಟ್ರಗಳ ಮಧ್ಯೆ ಐದು ದಶಕಗಳಿಂದಲೂ ಗಡಿ ವಿವಾದವಿದೆ. ಇದೇನೂ ಬಗೆಹರಿಸಲಾರದಂಥ ವಿವಾದವಲ್ಲ. ಆದರೆ, ಮಹಾರಾಷ್ಟ್ರದಲ್ಲಿನ ವೋಟ್ ಬ್ಯಾಂಕ್ ರಾಜಕಾರಣ ಮತ್ತು ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ಈವರೆಗೂ ಜೀವಂತವಾಗಿದೆ. ಮತ್ತೆ, ಸದ್ಯಕ್ಕಂತೂ ಈ ವಿವಾದ ಬಗೆಹರಿಯುವ ಲಕ್ಷಣಗಳಿಲ್ಲ. ಯಾಕೆಂದರೆ, ಒಂದೊಮ್ಮೆ ಸುಪ್ರೀಂ ಕೋರ್ಟ್ ಏನಾದರೂ ಗಡಿ ವಿವಾದ ತನ್ನ ವ್ಯಾಪ್ತಿಗೆ ಸೇರಿದ್ದಲ್ಲ ಎಂದು ತೀರ್ಮಾನಿಸಿದರೆ, ಆಗ ಈ ವಿವಾದವು ಸಂಸತ್ತಿನ ಅಂಗಳಕ್ಕೆ ಬಂದು ಬೀಳುತ್ತದೆ. ರಾಜಕೀಯ ಲಾಭ-ನಷ್ಟವನ್ನು ನೋಡುವ ಆಳುವ ಸರ್ಕಾರಗಳು ಅಷ್ಟು ಸಲೀಸಾಗಿ ಈ ಸಮಸ್ಯೆಗೆ ಮುಕ್ತಿ ಹಾಡಲಾರವು! ಹಾಗೆಯೇ, ಸುಪ್ರೀಂ ಕೋರ್ಟ್ ಏನಾದರೂ ವಿಚಾರಣೆಗೆ ಒಪ್ಪಿಕೊಂಡರೆ, ಇನ್ನಷ್ಟು ವರ್ಷಗಳ ಕಾಲ ವಿಚಾರಣೆಯ ದೆಸೆಯಿಂದಾಗಿ ಈ ವಿವಾದ ಮುಂದುವರಿಯಲಿದೆ!

ಮಹಾರಾಷ್ಟ್ರದಲ್ಲಿ ಈಗ ನಡೆಯುತ್ತಿರುವ ಬೆಳವಣಿಗೆಗಳನ್ನು ವಿಶ್ಲೇಷಿಸಿದರೆ ಖಂಡಿತವಾಗಿಯೂ ಅವರಿಗೆ ವಿವಾದವು ಬಗೆಹರಿಯಬೇಕಿಲ್ಲ. ಹಾಗೆಯೇ, ಬೆಳಗಾವಿಯಲ್ಲಿ ಇದೇ ವಿಷಯವನ್ನು ಇಟ್ಟುಕೊಂಡು ರಾಜಕಾರಣ ಮಾಡುವ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್)ಗೂ ಈ ವಿವಾದ ಜೀವಂತವಾಗಿರಬೇಕು. ಯಾಕೆಂದರೆ, ನವೆಂಬರ್ 23ರಂದು ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣಾರ್ಹತೆಯ ಕುರಿತು ಅಂತಿಮ ವಿಚಾರಣೆಯನ್ನು ಕೈಗೆತ್ತಿಕೊಳ್ಳುವೆ ಎಂದು ಹೇಳುತ್ತಿದ್ದಂತೆ, ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ(ಇವರೂ ಗಡಿ ವಿವಾದ ಹೋರಾಟದಿಂದಲೇ ಮುಂಚೂಣಿಗೆ ಬಂದವರು!) ಅವರು ಉನ್ನತ ಮಟ್ಟದ ಸಭೆಯನ್ನು ನಡೆಸಿ, ಗಡಿ ವಿವಾದದಲ್ಲಿ ಮೃತಪಟ್ಟ ಮರಾಠಿಗರಿಗೆ ಸ್ವಾತಂತ್ರ್ಯ ಹೋರಾಟಗಾರರ ಪಟ್ಟ ಕಟ್ಟಿ, ಅವರ ಕುಟುಂಬಸ್ಥರಿಗೆ ಪಿಂಚಣಿ ಸೌಲಭ್ಯ ನೀಡುವ ವಾಗ್ದಾನ ಮಾಡಿದ್ದಾರೆ. ಅಲ್ಲದೇ, ಪ್ರಧಾನಿ ಬಳಿಗೆ ನಿಯೋಗ ಕೊಂಡೊಯ್ಯುವ ಭರವಸೆ ನೀಡಿದ್ದಾರೆ. ಖಂಡಿತವಾಗಿಯೂ ಇದು ರಾಜಕೀಯ ಕಾರಣಕ್ಕಾಗಿ ಮತ್ತು ತಾವು ಎದುರಿಸುತ್ತಿರುವ ಸಮಸ್ಯೆಗಳ ಬಗೆಗಿನ ಜನರ ಗಮನವನ್ನು ಬೇರೇಡೆಯ ಸೆಳೆಯಲು ಮಾಡಿರುವ ತಂತ್ರ. ಜತೆಗೇ ಮಹಾರಾಷ್ಟ್ರ ಮುಖ್ಯಮಂತ್ರಿಯ ಹತಾಶತಕ್ಕೆ ಸಾಕ್ಷಿಯೂ ಹೌದು. ವಾಸ್ತವದಲ್ಲಿ ಮಹಾರಾಷ್ಟ್ರದಲ್ಲಿನ ರಾಜಕೀಯ ಪಕ್ಷಗಳು ಈ ತಂತ್ರವನ್ನು ಕಾಲಕಾಲಕ್ಕೆ ಅನುಸರಿಸುತ್ತಲೇ ಬಂದಿವೆ. ಅವರ ತಾಳಕ್ಕೆ ಬೆಳಗಾವಿಯಲ್ಲಿರುವ ಎಂಇಎಸ್ ಕುಣಿಯುತ್ತಾ ಬಂದಿದ್ದು, ಇದು ನಾಡದ್ರೋಹದ ಕೆಲಸ ಎಂದು ಹೇಳಬೇಕಾಗುತ್ತದೆ.

ಬೆಳಗಾವಿ, ಖಾನಾಪುರ, ನಿಪ್ಪಾಣಿ, ಬೀದರ್, ಬಾಲ್ಕಿ, ಕಾರವಾರ ಸೇರಿದಂತೆ ಕರ್ನಾಟಕ ಗಡಿಭಾಗದಲ್ಲಿರುವ 865 ಮರಾಠಿ ಭಾಷಿಕ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ಎಂಇಎಸ್ ಬೇಡಿಕೆಗೆ ಪ್ರಾಮುಖ್ಯತೆಯೇ ಉಳಿದಿಲ್ಲ. ಆದರೂ, ಅದು ತನ್ನ ರಾಜಕೀಯ ಲಾಭಕ್ಕಾಗಿ ಈ ವಿವಾದವನ್ನು ಜೀವಂತವಾಗಿಡುವ ಪ್ರಯತ್ನವನ್ನು ಮಾಡುತ್ತಲೇ ಇರುತ್ತದೆ. ಕರ್ನಾಟಕ ಸರ್ಕಾರ ಮಾತ್ರವಲ್ಲ ಬೆಳಗಾವಿಯ ಜನರೂ ಎಂಇಎಸ್‌ನ ಈ ವಾದಕ್ಕೆ ದಿವ್ಯ ನಿರ್ಲಕ್ಷ್ಯ ವಹಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ.

ಮೊದಲಿನಿಂದಲೂ ಕರ್ನಾಟಕದ ಭಾಗವೇ ಆಗಿರುವ ಬೆಳಗಾವಿಯಲ್ಲಿ ಮರಾಠಿಗರು ಮತ್ತು ಕನ್ನಡಿಗರು ಸಹೋದರತ್ವ ಭಾವನೆಯಿಂದಲೇ ಇದ್ದಾರೆ. ರಾಜಕಾರಣದಿಂದಾಗಿ ಮನಸ್ಸು ಕೊಂಚ ವಿಚಲಿತಗೊಂಡಿದ್ದರೂ, ಈಗ ಗಡಿ ವಿವಾದ ಎಂಬುದು ಅವರಿಗೆ ಮೂಲಭೂತ ವಿಷಯವೇ ಅಲ್ಲ! ಹಾಗಾಗಿ, ಮಹಾರಾಷ್ಟ್ರ ಮುಖ್ಯಮಂತ್ರಿಗಳು ತಮ್ಮ ರಾಜಕೀಯ ಲಾಭಕ್ಕಾಗಿ ಏನೆಲ್ಲ ಆಮಿಷಗಳನ್ನು ಒಡ್ಡಿದರೂ, ಕುತಂತ್ರಗಳನ್ನು ಮಾಡಿದರೂ ಇಲ್ಲಿನ ಜನರು ಸೊಪ್ಪು ಹಾಕಲಾರರು ಎಂಬುದು ಈಗಾಗಲೇ ಸಾಬೀತಾಗಿದೆ. ಹಾಗಾಗಿ ಅವರ ಯೋಜನೆಗಳು ಕೈಗೂಡುವುದಿಲ್ಲ.

ಇಷ್ಟಾಗಿಯೂ ಈ ವಿಷಯದಲ್ಲಿ ಕರ್ನಾಟಕ ಸರ್ಕಾರ ಸುಮ್ಮನೆ ಕೂಡುವಂತಿಲ್ಲ. ಕಾನೂನು ಹೋರಾಟವು ಅದರ ಪಾಡಿಗೆ ಅದು ನಡೆಯಲಿ. ಮತ್ತೊಂದೆಡೆ, ಗಡಿಯಲ್ಲಿನ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅಭಿವೃದ್ಧಿ ಕೆಲಸನ್ನು ಆದ್ಯತೆಯ ಮೇರೆಗೆ ಮಾಡಬೇಕಾದ ಹೊಣೆಗಾರಿಕೆ ಕರ್ನಾಟಕ ಸರ್ಕಾರದ ಮೇಲಿದೆ. ವಿವಾದ ಮುನ್ನೆಲೆಗೆ ಬಂದಾಗ ಮಾತ್ರ ಗಡಿ ಪ್ರದೇಶದ ಅಭಿವೃದ್ಧಿಯೂ ಮುಂಚೂಣಿಗೆ ಬರಬಾರದು! ಬೆಳಗಾವಿ ನಮ್ಮದು ಎಂಬ ಸಂಕೇತವನ್ನು ಪ್ರತಿಬಿಂಬಿಸುವ ಸುವರ್ಣ ವಿಧಾನಸೌಧವನ್ನು ಈ ಕಾರ್ಯಕ್ಕೆ ಸಮರ್ಥವಾಗಿ ಬಳಸಿಕೊಳ್ಳಬೇಕು. ಆ ಮೂಲಕ, ಕಾನೂನಾತ್ಮಕ ಮಾತ್ರವಲ್ಲದೇ, ಗಡಿಯಲ್ಲಿನ ಜನರ ಹೃದಯಗಳನ್ನು ಗೆಲ್ಲುವ ಕೆಲಸ ಮಾಡಿದರೆ, ಮಹಾರಾಷ್ಟ್ರದ ಎಲ್ಲ ತಂತ್ರಗಳು ಸಂಪೂರ್ಣವಾಗಿ ವಿಫಲಗೊಳ್ಳುವುದು ಖಚಿತ.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ | ಕರ್ನಾಟಕ ಪೊಲೀಸ್ ವ್ಯವಸ್ಥೆ ಬಿಗಿಯಾಗುವುದು ಯಾವಾಗ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Team India : ದ್ರಾವಿಡ್​ ಬಳಿಕ ಇವರೇ ಆಗ್ತಾರೆ ಭಾರತ ತಂಡದ ಕೋಚ್​​

Team India: ನ್ಯೂಜಿಲೆಂಡ್​​ನ ಮಾಜಿ ನಾಯಕ ಸ್ಟೀಫನ್ ಫ್ಲೆಮಿಂಗ್ 2009 ರಿಂದ ಸಿಎಸ್​​ಕೆ ಕೋಚ್ ಹುದ್ದೆಯನ್ನು ಅಲಂಕರಿಸಿದ್ದಾರೆ ಮತ್ತು ಅವರ ಮಾರ್ಗದರ್ಶನದಲ್ಲಿ ಫ್ರಾಂಚೈಸಿ ಐದು ಐಪಿಎಲ್ ಟ್ರೋಫಿಗಳನ್ನು ಗೆದ್ದಿದೆ. ರಾಹುಲ್ ದ್ರಾವಿಡ್ ಅವರ ಒಪ್ಪಂದ ಮುಗಿದ ನಂತರ ಸ್ಟೀಫನ್ ಫ್ಲೆಮಿಂಗ್ ಸೂಕ್ತ ಅಭ್ಯರ್ಥಿ ಎಂದು ಕೆಲವು ಉನ್ನತ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

VISTARANEWS.COM


on

Team India
Koo

ಬೆಂಗಳೂರು: ಭಾರತ ಕ್ರಿಕೆಟ್ ತಂಡದ (Team India ) ಕೋಚ್ ಆಗಿ ರಾಹುಲ್ ದ್ರಾವಿಡ್ (Rahul Dravid) ಅವರ ಅಧಿಕಾರಾವಧಿ ಜೂನ್​​ನಲ್ಲಿ ಕೊನೆಗೊಳ್ಳಲಿದ್ದು, ಅವರ ಸ್ಥಾನವನ್ನು ತುಂಬಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಈಗಾಗಲೇ ಭರ್ಜರಿ ಹುಡುಕಾಟ ಆರಂಭಿಸಿದೆ. ರೋಹಿತ್ ಶರ್ಮಾ (Rohit Sharma) ನೇತೃತ್ವದ ಟೀಮ್ ಇಂಡಿಯಾ ಜೂನ್​ನಲ್ಲಿ ಟಿ 20 ವಿಶ್ವಕಪ್ 2024 ಆಡಲಿದ್ದು, ಪಂದ್ಯಾವಳಿಯ ನಂತರ ಹೊಸ ತರಬೇತುದಾರರನ್ನು ಹೊಂದುವ ಎಲ್ಲಾ ಸಂಭವಗಳಿವೆ. ಈ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೋಚ್ ಸ್ಟೀಫನ್ ಫ್ಲೆಮಿಂಗ್ (Stephen Fleming) ಅವರು ರಾಹುಲ್ ದ್ರಾವಿಡ್ ಅವರ ನಂತರ ಭಾರತೀಯ ಕ್ರಿಕೆಟ್ ತಂಡದ ಕೋಚ್ ಆಗಬಹುದು ಎಂದು ಇಂಡಿಯನ್ ಎಕ್ಸ್​ಪ್ರೆಸ್​​ ವರದಿ ಮಾಡಿದೆ.

ನ್ಯೂಜಿಲೆಂಡ್​​ನ ಮಾಜಿ ನಾಯಕ ಸ್ಟೀಫನ್ ಫ್ಲೆಮಿಂಗ್ 2009 ರಿಂದ ಸಿಎಸ್​​ಕೆ ಕೋಚ್ ಹುದ್ದೆಯನ್ನು ಅಲಂಕರಿಸಿದ್ದಾರೆ ಮತ್ತು ಅವರ ಮಾರ್ಗದರ್ಶನದಲ್ಲಿ ಫ್ರಾಂಚೈಸಿ ಐದು ಐಪಿಎಲ್ ಟ್ರೋಫಿಗಳನ್ನು ಗೆದ್ದಿದೆ. ರಾಹುಲ್ ದ್ರಾವಿಡ್ ಅವರ ಒಪ್ಪಂದ ಮುಗಿದ ನಂತರ ಸ್ಟೀಫನ್ ಫ್ಲೆಮಿಂಗ್ ಸೂಕ್ತ ಅಭ್ಯರ್ಥಿ ಎಂದು ಕೆಲವು ಉನ್ನತ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್​​ಪ್ರೆಸ್​​ ವರದಿ ಮಾಡಿದೆ.

ಸ್ಟೀಫನ್ ಫ್ಲೆಮಿಂಗ್​ ಆಯ್ಕೆಯಾಗಿರುತ್ತದೆ. ಭಾರತೀಯ ಕ್ರಿಕೆಟ್ ತಂಡಕ್ಕೆ ತರಬೇತಿ ನೀಡುವ ತರಬೇತುದಾರರು ತೀವ್ರವಾದ ಕೆಲಸದ ಹೊರೆಯನ್ನು ಅನುಭವಿಸಬೇಕಾಗುತ್ತದೆ. ರಾಷ್ಟ್ರೀಯ ತಂಡಗಳ ಪ್ರವಾಸದ ನಡುವೆ ಖಾಸಗಿ ಸಮಯ ಮೀಸಲಿಡುವ ಸವಾಲು ಎದುರಾಗುತ್ತವೆ. ಅವರು ಈ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಸಿದ್ಧರಿದ್ದಾರೆಯೇ ಎಂದು ನೋಡಬೇಕಾಗಿದೆ.

ಮೂರು ವರ್ಷಗಳ ಅವಧಿಗೆ ಕೋಚ್​

ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮಾತನಾಡಿ, ಬಿಸಿಸಿಐ ಕನಿಷ್ಠ ಮೂರು ವರ್ಷಗಳ ದೀರ್ಘಾವಧಿಯ ಒಪ್ಪಂದದೊಂದಿಗೆ ಹೊಸ ತರಬೇತುದಾರನನ್ನು ಹುಡುಕುತ್ತಿದೆ ಎಂದು ಹೇಳಿದ್ದಾರೆ. ವಿಭಜಿತ ಕೋಚಿಂಗ್ ಕಲ್ಪನೆಗೆ ಮಂಡಳಿಯು ಮುಕ್ತವಾಗಿದ್ದರೂ ಅವರು ವೈಯಕ್ತಿಕವಾಗಿ ಆಟದ ಎಲ್ಲಾ ಮೂರು ಸ್ವರೂಪಗಳಿಗೆ ಒಬ್ಬ ಮುಖ್ಯ ತರಬೇತುದಾರನನ್ನು ಬಯಸುತ್ತಾರೆ.

ಇದನ್ನೂ ಓದಿ: KL Rahul : ಗಲಾಟೆ ಚಾಪ್ಟರ್ ಕ್ಲೋಸ್​​; ಕೆ. ಎಲ್​ ರಾಹುಲ್​ ಹಿಡಿದ ಕ್ಯಾಚ್​ಗೆ ಮೆಚ್ಚಿ ಚಪ್ಪಾಳೆ ತಟ್ಟಿದ ಗೋಯೆಂಕಾ

ಭಾರತೀಯ ಕ್ರಿಕೆಟ್​​ನಲ್ಲಿ ವಿಭಿನ್ನ ಸ್ವರೂಪಗಳಿಗೆ ವಿಭಿನ್ನ ತರಬೇತುದಾರರ ಪೂರ್ವನಿದರ್ಶನವಿಲ್ಲ. ಇದಲ್ಲದೆ, ನಾವು ಎಲ್ಲಾ ಸ್ವರೂಪದ ಆಟಗಾರರನ್ನು ಹೊಂದಿರುವ ಹಲವಾರು ಆಟಗಾರರನ್ನು ಹೊಂದಿದ್ದೇವೆ. ಅಂತಿಮವಾಗಿ, ಇದು ಕ್ರಿಕೆಟ್ ಸಲಹಾ ಸಮಿತಿಯ (ಸಿಎಸಿ) ನಿರ್ಧಾರವಾಗಿದೆ. ಅವರು ಏನು ನಿರ್ಧರಿಸುತ್ತಾರೋ ಅದನ್ನು ನಾನು ಕಾರ್ಯಗತಗೊಳಿಸಬೇಕಾಗಿದೆ” ಎಂದು ಜಯ್ ಶಾ ಹೇಳಿದ್ದರು.

2014 ರಲ್ಲಿ ಡಂಕನ್ ಫ್ಲೆಚರ್ ನಿರ್ಗಮಿಸಿದ ನಂತರ ಭಾರತಕ್ಕೆ ವಿದೇಶಿ ಕೋಚ್ ನೇಮಿಸಿಲ್ಲ. ವರದಿಗಳ ಪ್ರಕಾರ, ಈ ಹುದ್ದೆಗೆ ವಿದೇಶಿ ಅಭ್ಯರ್ಥಿಯನ್ನು ಪರಿಗಣಿಸಲು ಬಿಸಿಸಿಐಗೆ ಯಾವುದೇ ಸಮಸ್ಯೆ ಇಲ್ಲ.

ಸ್ಟೀಫನ್ ಫ್ಲೆಮಿಂಗ್ ಏಕೆ?

ಸ್ಟೀಫನ್ ಫ್ಲೆಮಿಂಗ್ ಐಪಿಎಲ್​​ನಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ತರಬೇತುದಾರರಾಗಿದ್ದಾರೆ ಮತ್ತು ಆಟಗಾರರಿಂದ ಅತ್ಯುತ್ತಮವಾದುದನ್ನು ಹೊರತೆಗೆಯುವಲ್ಲಿ ಹೆಸರುವಾಸಿಯಾಗಿದ್ದಾರೆ. ಆಟದ ಬಗ್ಗೆ ಅವರ ತಿಳುವಳಿಕೆ ಮತ್ತು ಔಟ್-ಆಫ್-ಬಾಕ್ಸ್ ವಿಧಾನಗಳು ಆಟಗಾರರಿಗೆ ಆಟವನ್ನು ಹೊಸ ದೃಷ್ಟಿಕೋನದಿಂದ ಸಮೀಪಿಸಲು ಸಹಾಯ ಮಾಡುತ್ತದೆ. ಭಾರತದ ಆಂತರಿಕ ಕ್ರಿಕೆಟ್ ವಲಯವು ಸ್ಟೀಫನ್ ಫ್ಲೆಮಿಂಗ್ ಅವರನ್ನು ಮೆಚ್ಚುತ್ತದೆ. ಅವರು ಭಾರತದ ಭವಿಷ್ಯದ ನಾಯಕರನ್ನು ಬೆಳೆಸಿದ ನಾಯಕತ್ವ ಕಾರ್ಯಕ್ರಮಕ್ಕೆ ಹೆಸರುವಾಸಿಯಾಗಿದ್ದಾರೆ.

Continue Reading

ಕರ್ನಾಟಕ

Victoria Hospital: ವಿಕ್ಟೋರಿಯಾ ಆಸ್ಪತ್ರೆಯಿಂದ ವಜಾಗೊಂಡಿದ್ದ 55 ಸಿಬ್ಬಂದಿ ಮರು ನೇಮಕ

Victoria Hospital: ವಿಕ್ಟೋರಿಯಾ ಆಸ್ಪತ್ರೆಯಿಂದ ಸಿಬ್ಬಂದಿ ವಜಾ ಬಗ್ಗೆ ಈ ಬಗ್ಗೆ ಮೇ 11ರಂದು ವಿಸ್ತಾರ ನ್ಯೂಸ್ ವಿಶೇಷ ವರದಿ ಪ್ರಸಾರ ಮಾಡಿ ಮೇಲಧಿಕಾರಿಗಳ ಗಮನ ಸೆಳೆದಿತ್ತು. ಇದರ ಬೆನ್ನಲ್ಲೇ 55 ಸಿಬ್ಬಂದಿಯನ್ನು ಮರುನೇಮಕ ಮಾಡಲಾಗಿದೆ.

VISTARANEWS.COM


on

Victoria Hospital
Koo

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯಿಂದ (Victoria Hospital) ವಜಾ ಅಗಿದ್ದ 55 ಸಿಬ್ಬಂದಿಯನ್ನು ಮರುನೇಮಕ ಮಾಡಲಾಗಿದೆ. ಕೆಲಸ ಕೂಲಿ ಕೇಳಿದ್ದಕ್ಕೆ ವಜಾ ಮಾಡಿದ್ದಾರೆ ಎಂದು ಆಡಳಿತ ಮಂಡಳಿ ವಿರುದ್ಧ ಸಿಬ್ಬಂದಿ ಪ್ರತಿಭಟನೆ ನಡೆಸಿ ಅಕ್ರೋಶ ಹೊರಹಾಕಿದ್ದರು. ಇದೀಗ ಮಾನವೀಯತೆ ಆಧಾರದ ಮೇಲೆ ಎಲ್ಲಾ 55 ಹೊರಗುತ್ತಿಗೆ ಸಿಬ್ಬಂದಿಯನ್ನು ಮರುನೇಮಕ ಮಾಡಲಾಗಿದೆ.

ಸಿಬ್ಬಂದಿ ವಜಾ ಬಗ್ಗೆ ಈ ಬಗ್ಗೆ ಮೇ 11ರಂದು ವಿಸ್ತಾರ ನ್ಯೂಸ್ ವಿಶೇಷ ವರದಿ ಪ್ರಸಾರ ಮಾಡಿ ಮೇಲಧಿಕಾರಿಗಳ ಗಮನ ಸೆಳೆದಿತ್ತು. ಇದರಿಂದ ಎಚ್ಚೆತ್ತುಕೊಂಡ ವಿಕ್ಟೋರಿಯಾ ಆಸ್ಪತ್ರೆ ಆಡಳಿತ ಮಂಡಳಿ, ವಜಾಗೊಂಡಿದ್ದ ಸಿಬ್ಬಂದಿಯನ್ನು ಮರು ನೇಮಕ ಮಾಡಿದೆ.

ಹೊಸ ಏಜೆನ್ಸಿ ಬಂದ ಹಿನ್ನೆಲೆ ಸುಮಾರು 55 ಮಂದಿಯನ್ನು ಕೈಬಿಡಲಾಗಿತ್ತು. ಏಜೆನ್ಸಿ ಹಾಗೂ ಆಡಳಿತ ಮಂಡಳಿ ನಿರ್ಲಕ್ಷ್ಯದ ಹಿನ್ನೆಲೆ ಸಿಬ್ಬಂದಿ ಆತಂಕಕ್ಕೆ ಒಳಗಾಗಿದ್ದರು. ಹೀಗಾಗಿ ವೈದ್ಯಕೀಯ ಶಿಕ್ಷಣ ಸಚಿವರ ಸೂಚನೆ ಬೆನ್ನಲ್ಲೇ ಸಭೆ ನಡೆಸಿದ್ದ ಹಿರಿಯ ಅಧಿಕಾರಿಗಳು, ಮಾನವೀಯತೆ ಆಧಾರದ ಮೇಲೆ ಎಲ್ಲಾ 55 ಹೊರಗುತ್ತಿಗೆ ಸಿಬ್ಬಂದಿಯನ್ನು ಮರುನೇಮಕ ಮಾಡಿದ್ದಾರೆ.

ಇದನ್ನೂ ಓದಿ | Hebbal flyover: ಬಿಡಿಎ ಕಾಮಗಾರಿ; ಹೆಬ್ಬಾಳ ಮೇಲ್ಸೇತುವೆಗೆ ಕೆ.ಆರ್.ಪುರಂನಿಂದ ಬರುವ ವಾಹನಗಳಿಗೆ ನಿರ್ಬಂಧ

ವಜಾ ಮಾಡಿದ್ದ ಸಿಬ್ಬಂದಿಯನ್ನು ಮರು ನೇಮಕ ಮಾಡಿದ್ದು, ಕಳೆದ ಎರಡು ತಿಂಗಳ ಸಂಬಳ ಸಹ ಶೀಘ್ರ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಬೆಂಗಳೂರು ವೈದ್ಯಕೀಯ ಕಾಲೇಜು & ಸಂಶೋಧನಾ ಸಂಸ್ಥೆ ನಿರ್ದೇಶಕ ರಮೇಶ್ ಕೃಷ್ಣ ಮಾಹಿತಿ ನೀಡಿದ್ದಾರೆ.

ಕಳೆದ 20 ವರ್ಷಗಳಿಂದ ಸಿಬ್ಬಂದಿ ಡಿ ಗ್ರೂಪ್ ನೌಕರರಾಗಿ ಹೊರಗುತ್ತಿಗೆ ಆಧಾರದಲ್ಲಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಕಳೆದ ಎರಡು ತಿಂಗಳು ಹಿಂದೆ ಏಜೆನ್ಸಿ ಬದಲಾದ ಹಿನ್ನೆಲೆ ಈ ಎಲ್ಲರನ್ನೂ ಕೈ ಬಿಡುವ ಮಾತು ಕೇಳಿಬಂದಿತ್ತು. ಆದರೆ ಕೆಲಸದಿಂದ ಕೈ ಬಿಡಲ್ಲ ಅಂತ ಹೇಳಿದ್ದ ಹೊಸ ಏಜೆನ್ಸಿ ಇವರೆಲ್ಲರನ್ನೂ ಮುಂದುವರಿಸಿತ್ತು. ಆದರೆ ಕೆಲಸ ಮಾಡಿಸಿಕೊಂಡಿತೇ ಹೊರತು ಸಂಬಳ ಮಾತ್ರ ನೀಡಿರಲಿಲ್ಲ.

ಇದನ್ನೂ ಓದಿ | Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

ಯಾಕೆ ಸಂಬಳ ನೀಡಿಲ್ಲ ಅಂತ ಕಳೆದ 4 ದಿನಗಳ ಹಿಂದೆ ಕೇಳಿದಾಗ ನಿಮ್ಮನ್ನು ಕೆಲಸದಿಂದ ಕೈಬಿಡಲಾಗಿದೆ ಅಂತ ಏಜೆನ್ಸಿ ಹೇಳಿದೆ. ಈ ವಿಷಯ ಕೇಳಿ ದಿಗ್ಭ್ರಾಂತರಾದ ಸಿಬ್ಬಂದಿ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಸ್ಪಷ್ಟನೆ ಕೇಳಲು ಮುಂದಾಗಿದ್ದರು. ಬಳಿಕ ವಿವಿ ಪುರಂ ಪೊಲೀಸರು ಅಲ್ಲಿಂದ ಎಲ್ಲರನ್ನೂ ಬೇರೆಡೆಗೆ ಕರೆದೊಯ್ದು ಪರಿಸ್ಥಿತಿ ತಿಳಿಗೊಳಿಸಿದ್ದರು. ಮರು ನೇಮಕ ಮಾಡಿದ್ದರಿಂದ ಕೆಲಸ ಕಳೆದುಕೊಂಡು ಕಂಗಾಲಾಗಿದ್ದ ಸಿಬ್ಬಂದಿ ನಿರಾಳರಾಗಿದ್ದಾರೆ.

Continue Reading

ಕ್ರೀಡೆ

KL Rahul : ಗಲಾಟೆ ಚಾಪ್ಟರ್ ಕ್ಲೋಸ್​​; ಕೆ. ಎಲ್​ ರಾಹುಲ್​ ಹಿಡಿದ ಕ್ಯಾಚ್​ಗೆ ಮೆಚ್ಚಿ ಚಪ್ಪಾಳೆ ತಟ್ಟಿದ ಗೋಯೆಂಕಾ

KL Rahul: 9ನೇ ಓವರ್ ನ 2ನೇ ಎಸೆತದಲ್ಲಿ ರವಿ ಬಿಷ್ಣೋಯ್ ಅವರು ಚೆಂಡನ್ನು ಎಸೆದರು. ಶಾಯ್ ಹೋಪ್ ಅದಕ್ಕೆ ಭರ್ಜರಿಯಾಗಿ ಹೊಡೆದರು. ಕವರ್ ಪ್ರದೇಶದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಕೆಎಲ್ ರಾಹುಲ್ ಚೆಂಡನ್ನು ಹಿಡಿಯಲು ಯತ್ನಿಸಿದರು. ಅದರೆ, ಅದರು ಕೈಯಿಂದ ಜಾರಿತು. ಬಳಿಕ ಅವರು ನೆಗೆದು ಆ ಚೆಂಡನ್ನು ಹಿಡಿದರು. ಅದ್ಭುತ ಡೈವ್ ಮಾಡಿದ ನಾಯಕನ ಪ್ರಯತ್ನಗಳನ್ನು ಶ್ಲಾಘಿಸಿದ ಸಂಜೀವ್ ಗೋಯೆಂಕಾ ಚಪ್ಪಾಳೆ ತಟ್ಟಿದರು.

VISTARANEWS.COM


on

KL Rahul
Koo

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024ರಲ್ಲಿ (IPL 2024) ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (ಡಿಸಿ) ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ನಾಯಕ ಕೆಎಲ್ ರಾಹುಲ್ (KL Rahul) ಮೈದಾನದಲ್ಲಿ ಭರ್ಜರಿ ಫೀಲ್ಡಿಂಗ್ ಮಾಡಿದರು. ಈ ವೇಳೆ ಲಕ್ನೊ ಸೂಪರ್ ಜೈಂಟ್ಸ್ ಮಾಲೀಕರಾದ ಸಂಜೀವವ ಗೋಯೆಂಕಾ ಅವರು ಪ್ರೇಕ್ಷಕರ ಗ್ಯಾಲರಿಯಲ್ಲಿ ಕುಳಿತು ಚಪ್ಪಾಳೆ ತಟ್ಟಿದರು. ಈ ಮೂಲಕ ಅವರಿಬ್ಬರ ನಡುವಿನ ಜಗಳ ಅಂತ್ಯಗೊಂಡಿತು.

ಪಂದ್ಯದಲ್ಲಿ ಡೆಲ್ಲಿ ತಂಡ ಜೇಕ್ ಫ್ರೇಸರ್-ಮೆಗ್​ಕುರ್ಕ್​ ಅವರನ್ನು ಬೇಗನೆ ಕಳೆದುಕೊಂಡರೂ ನಂತರದಲ್ಲಿ ಅಭಿಷೇಕ್ ಪೊರೆಲ್ ಮತ್ತು ಶಾಯ್ ಹೋಪ್ ಜೋಡಿ ಲಕ್ನೋ ಸೂಪರ್ ಜೈಂಟ್ಸ್ ಬೌಲರ್​ಗಳ ಮೇಳೆ ಅಬ್ಬರಿಸಿದರು. ವಿಶೇಷವಾಗಿ ಶಾಯ್ ಹೋಪ್ ದೃಢವಾಗಿ ಕಾಣುತ್ತಿದ್ದರು. ಅವರು ದೊಡ್ಡ ಇನ್ನಿಂಗ್ಸ್ ಗೆ ಸಜ್ಜಾಗುತ್ತಿದ್ದರು. ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆ.ಎಲ್.ರಾಹುಲ್ ಅವರು ಅವರ ವಿಕೆಟ್ ಪಡೆಯಲು ವಿಶೇಷ ಯೋಜನೆ ರೂಪಿಸಿದರು. ಅಲ್ಲದೇ ತಾವೇ ಉತ್ತಮ ಕ್ಯಾಚ್​ ಹಿಡಿಯುವ ಮೂಲಕ ಅವರನ್ನು ಪೆವಿಲಿಯನ್​ಗೆ ಅಟ್ಟಿದರು.

9ನೇ ಓವರ್ ನ 2ನೇ ಎಸೆತದಲ್ಲಿ ರವಿ ಬಿಷ್ಣೋಯ್ ಅವರು ಚೆಂಡನ್ನು ಎಸೆದರು. ಶಾಯ್ ಹೋಪ್ ಅದಕ್ಕೆ ಭರ್ಜರಿಯಾಗಿ ಹೊಡೆದರು. ಕವರ್ ಪ್ರದೇಶದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಕೆಎಲ್ ರಾಹುಲ್ ಚೆಂಡನ್ನು ಹಿಡಿಯಲು ಯತ್ನಿಸಿದರು. ಅದರೆ, ಅದರು ಕೈಯಿಂದ ಜಾರಿತು. ಬಳಿಕ ಅವರು ನೆಗೆದು ಆ ಚೆಂಡನ್ನು ಹಿಡಿದರು. ಅದ್ಭುತ ಡೈವ್ ಮಾಡಿದ ನಾಯಕನ ಪ್ರಯತ್ನಗಳನ್ನು ಶ್ಲಾಘಿಸಿದ ಸಂಜೀವ್ ಗೋಯೆಂಕಾ ಚಪ್ಪಾಳೆ ತಟ್ಟಿದರು.

ರಾಹುಲ್ ಆರ್​ಸಿಬಿಗೆ ಬರಲ್ಲ

ಲಕ್ನೋ: ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​​ ವಿರುದ್ಧ ಲಕ್ನೋ ಸೂಪರ್​ ಜೈಂಟ್ಸ್(Lucknow Super Giants)​ 10 ವಿಕೆಟ್​ಗಳ ಹೀನಾಯ ಸೋಲು ಕಂಡ ಬೇಸರದಲ್ಲಿ ಸಿಟ್ಟಿಗೆದ್ದ ಫ್ರಾಂಚೈಸಿ ಮಾಲಿಕ ಸಂಜೀವ್ ಗೋಯೆಂಕಾ(Sanjiv Goenka) ಮೈದಾನದಲ್ಲೇ ನಾಯಕ ಕೆ.ಎಲ್​ ರಾಹುಲ್(KL Rahul)​ ಜತೆ ಜಗಳವಾಡಿದ್ದರು. ಈ ಘಟನೆ ಬಳಿಕ ಅನೇಕ ಮಾಜಿ ಆಟಗಾರರು ಗೋಯೆಂಕಾ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆಗೆ ಸಂಬಂಧಿಸಿ ರಾಹುಲ್​ ಲಕ್ನೋ ತಂಡ ತೊರೆಯಲಿದ್ದಾರೆ, ಆರ್​ಸಿಬಿ ಸೇರಲಿದ್ದಾರೆ, ತಂಡದ ಆಟಗಾರರೊಂದಿಗೆ ಪ್ರಯಾಣಿಸದೆ ಪ್ರತ್ಯೇಕವಾಗಿ ಪ್ರಯಾಣಿಸಿದ್ದಾರೆ ಹೀಗೆ ಹಲವು ವಿಚಾರಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು. ಇದೀಗ ಈ ಎಲ್ಲ ಊಹಾಪೋಹಕ್ಕೆ ತೆರೆ ಬಿದ್ದಂತೆ ಕಾಣುತ್ತಿದೆ.

ಸಂಜೀವ್ ಗೋಯೆಂಕಾ ಅವರು ರಾಹುಲ್​ ಅವರನ್ನು ಮನೆಗೆ ಡಿನ್ನರ್​ಗೆ ಕರೆದು ತಬ್ಬಿಕೊಂಡಿರುವ ಫೋಟೊ ಒಂದು ವೈರಲ್​ ಆಗಿದೆ. ಈ ಮೂಲಕ ನಮ್ಮ ಮಧ್ಯೆ ಯಾವುದೇ ಮುನಿಸು ಇಲ್ಲ ಎನ್ನುವ ಸಂದೇಶ ನೀಡಿದಂತಿದೆ. ಸದ್ಯ ವೈರಲ್​ ಆಗುತ್ತಿರುವ ಫೋಟೊದಲ್ಲಿ ರಾಹುಲ್​ ಅವರನ್ನು ಗೋಯೆಂಕಾ ತಬ್ಬಿಕೊಂಡಿರಿವಂತೆ ಕಾಣುತ್ತಿದೆ. ರಾಹುಲ್​ ಕೂಡ ನಗುಮುಗದಿಂದಲೇ ಕಾಣಿಸಿಕೊಂಡಿದ್ದಾರೆ. ಆದರೆ, ಗೋಯೆಂಕಾ ಅವರ ಮುಖ ಮಾತ್ರ ಸ್ಪಷ್ಟವಾಗಿ ಗೋಚರಿಸಿಲ್ಲ. ರಾಹುಲ್​ ಪತ್ನಿ ಅಥಿಯಾ ಶೆಟ್ಟಿ ಕೂಡ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಸ್ಟೋರಿ ಹಾಕಿದ್ದು “ಚಂಡಮಾರುತದ ನಂತರ ಶಾಂತ” ಎಂದು ಬರೆದುಕೊಂಡಿದ್ದಾರೆ. ಹೀಗಾಗಿ ರಾಹುಲ್​ ಮತ್ತು ಗೋಯೆಂಕಾ ನಡುವಿನ ಮುನಿಸು ಶಮನವಾದಂತೆ ಕಾಣುತ್ತಿದೆ.

ಇದನ್ನೂ ಓದಿ: IPL 2024 : ನಾಯಕರಾಗಿ ನೀವೇನು ಮಾಡಿದ್ರಿ? ಪಾಂಡ್ಯನನ್ನು ಟೀಕಿಸಿದ್ದ ವಿಲಿಯರ್ಸ್​ಗೆ ತಿರುಗೇಟು ಕೊಟ್ಟ ಗಂಭೀರ್​

ಕಳೆದ ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್​ ಮಾತ್ರವಲ್ಲದೆ, ಬೌಲಿಂಗ್​ನಲ್ಲಿಯೂ ಲಕ್ನೋ ಅತ್ಯಂತ ಕಳಪೆ ಪ್ರದರ್ಶನ ತೋರಿತ್ತು. ಕನಿಷ್ಠ 1 ವಿಕೆಟ್​ ಕೂಡ ಕೀಳಲಾಗದ ಘೋರ ವೈಫಲ್ಯ ಕಂಡಿತ್ತು. ಈ ಹೀನಾಯ ಸೋಲಿನಿಂದ ಸಿಟ್ಟಿಗೆದ್ದ ಸಂಜೀವ್ ಗೋಯೆಂಕಾ ನಾಯಕ ರಾಹುಲ್ ಅವರೊಂದಿಗೆ ಕೋಪದಲ್ಲಿ ಮಾತನಾಡುತ್ತಿರುವಂತೆ ಕಂಡುಬಂದಿತ್ತು. ಇವರಿಬ್ಬರ ನಡುವಣ ಮಾತುಕತೆ ಏನು ಎಂಬುದು ಸ್ಪಷ್ಟವಾಗಿ ಕೇಳಿಸಿಲ್ಲವಾಗಿದ್ದರೂ, ಈ ದೃಶ್ಯ ನೋಡುವಾಗ ಇದು ಅಸಮಾಧಾನದ ನುಡಿ ಎಂದು ತಿಳಿದು ಬಂದಿತ್ತು.

ಗೋಯೆಂಕಾ ಮಾತಿಗೆ ರಾಹುಲ್ ಪ್ರತಿಕ್ರಿಯೆ ನೀಡಲು ಮುಂದಾದರೂ ಕೂಡ ಇದನ್ನು ಗೋಯೆಂಕಾ ಒಪ್ಪಿಕೊಳ್ಳದೆ ಏನೋ ಬೈಯುತ್ತಿರುವಂತೆ ದೃಶ್ಯದಲ್ಲಿ ಕಂಡುಬಂದಿತ್ತು. ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುಗಿತ್ತು. ಈ ಘಟನೆಯಿಂದ ರಾಹುಲ್​ ನೊಂದಿದ್ದಾರೆ ಎನ್ನಲಾಗಿತ್ತು. ಪಂದ್ಯದಲ್ಲಿ ಟಾಸ್​ ಗೆದ್ದು ಆಮೆ ಗತಿಯ ಬ್ಯಾಟಿಂಗ್​ ನಡೆಸಿದ ಲಕ್ನೋ ಸೂಪರ್​ ಜೈಂಟ್ಸ್​ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 165 ರನ್​ ಬಾರಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಹೈದರಾಬಾದ್​ ಯಾವುದೇ ವಿಕೆಟ್​ ನಷ್ಟವಿಲ್ಲದೆ ಕೇವಲ 9.4 ಓವರ್​ಗಳಲ್ಲಿ 167 ರನ್​ ಬಾರಿಸಿ ಭರ್ಜರಿ 10 ವಿಕೆಟ್​ ಅಂತರದ ಗೆಲುವು ಸಾಧಿಸಿತು. ಲಕ್ನೋ ಬೌಲರ್​ಗಳನ್ನು ನಿರ್ದಾಕ್ಷಿಣ್ಯವಾಗಿ ಮನಬಂದಂತೆ ದಂಡಿಸಿದ ಹೆಡ್ ಮತ್ತು ಅಭಿಷೇಕ್​​ ಸ್ಟೇಡಿಯಂನ ಮೂಲೆ ಮೂಲೆಗೂ ಚೆಂಡನ್ನು ಬಾರಿಸಿದ್ದರು.

Continue Reading

ಕರ್ನಾಟಕ

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

Prajwal Revanna Case: ವಿದೇಶದಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಮರಳುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ಖಚಿತ ಮಾಹಿತಿ ಲಭ್ಯವಾಗಿದೆ.‌ ಎಲ್ಲಿಂದ, ಯಾವಾಗ ಸಂಸದ ಆಗಮಿಸಲಿದ್ದಾರೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

Prajwal Revanna Case
Koo
VISTARA-EXCLUSIVE

ಬೆಂಗಳೂರು: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ (Prajwal Revanna Case) ಎಸ್‌ಐಟಿ ಮೋಸ್ಟ್ ವಾಂಟೆಡ್‌ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ, ಯಾವಾಗ ವಿದೇಶದಿಂದ ಭಾರತಕ್ಕೆ ಬರಲಿದ್ದಾರೆ ಎಂದು ತನಿಖಾಧಿಕಾರಿಗಳು ಕಾಯುತ್ತಿದ್ದಾರೆ. ಈ ನಡುವೆ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧನವಾಗಿದ್ದ ಎಚ್‌.ಡಿ.ರೇವಣ್ಣ ಅವರಿಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಪ್ರಜ್ವಲ್‌ ನ್ಯಾಯಾಲಯಕ್ಕೆ ಶರಣಾಗಲಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಯಾವಾಗ ವಾಪಸ್‌ ಬರಲಿದ್ದಾರೆ ಎಂಬ ಮಹತ್ವದ ಮಾಹಿತಿ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

ಹೌದು, ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಮರಳುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ಖಚಿತ ಮಾಹಿತಿ (Vistara Exclusive) ಲಭ್ಯವಾಗಿದೆ.‌ ಜರ್ಮನಿಯಲ್ಲಿರುವ ಪ್ರಜ್ವಲ್‌, ಲುಫ್ತಾನ್ಸಾ ಏರ್‌ಲೈನ್ಸ್‌ ಮೂಲಕ ಪ್ರಜ್ವಲ್‌ ಭಾರತಕ್ಕೆ ಹಿಂತಿರುಗಲಿದ್ದಾರೆ. ಜರ್ಮನಿಯಲ್ಲಿ ನಾಳೆ (ಮೇ 15) ಬೆಳಗ್ಗೆ 11.20 ರಿಂದ 11.50ರೊಳಗೆ ಬೋರ್ಡಿಂಗ್‌ ಆಗಲಿದ್ದು, ಅವರಿಗಾಗಿ ಸೀಟ್‌ ನಂಬರ್‌ 6ಜಿ ಬುಕ್‌ ಮಾಡಲಾಗಿದೆ. LH0764 ವಿಮಾನದಲ್ಲಿ ಸಂಸದ ಆಗಮಿಸಲಿದ್ದಾರೆ.

ಹರಿಯಾಣದ ಅಕಲ್‌ ಟ್ರಾವೆಲ್ಸ್‌ನಿಂದ ಪ್ರಜ್ವಲ್‌ಗೆ ಟಿಕೆಟ್‌ ಬುಕ್‌ ಮಾಡಲಾಗಿದೆ. ಜರ್ಮನಿಯ ಮ್ಯೂನಿಚ್‌ನಲ್ಲಿ ಬೆಳಗ್ಗೆ 12.05ಕ್ಕೆ ಫ್ಲೈಟ್‌ ಟೇಕಾಫ್‌ ಆಗಲಿದ್ದು, ರಾತ್ರಿ 12.30ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ.

ಇದನ್ನೂ ಓದಿ | HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ಗೆ ಲುಕ್‌ ಔಟ್‌ ನೋಟಿಸ್‌ ಹಾಗೂ ಬ್ಲೂ ಕಾರ್ನರ್‌ ನೋಟಿಸ್‌ ಜಾರಿ ಮಾಡಲಾಗಿತ್ತು. ತಂದೆಗೆ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ವಿದೇಶದಲ್ಲಿರುವ ಪ್ರಜ್ವಲ್‌ ರೇವಣ್ಣ ನ್ಯಾಯಾಲಯದ ಮುಂದೆ ಶರಣಾಗುವ ಸಾಧ್ಯತೆ ಇದ್ದು, ಬಹುತೇಕ ಈ ವಾರದಲ್ಲೇ ವಿದೇಶದಿಂದ ಆಗಮಿಸಬಹುದು ಎನ್ನಲಾಗಿತ್ತು. ಇದೀಗ ಅವರು ನಾಳೆಯೇ ದೇಶಕ್ಕೆ ಆಗಮಿಸುವ ಮಾಹಿತಿ ಲಭ್ಯವಾಗಿದೆ.

ಎಸ್ಐಟಿ ಮುಂದೆ ಬುಧವಾರ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದ್ದು, ಪ್ರಜ್ವಲ್‌ ರೇವಣ್ಣ ಬುಧವಾರ ಸಂಜೆ ಬೆಂಗಳೂರಿಗೆ ಬಂದು ಗುರುವಾರ ನ್ಯಾಯಾಲಯದ ಮುಂದೆ ಹಾಜರಾಗುವ ಸಾಧ್ಯತೆ ಇದೆ. ರೇವಣ್ಣಗೆ ಜಾಮೀನು ಸಿಕ್ಕ ಬಳಿಕ ನ್ಯಾಯಲಯದ ಮುಂದೆ ಹಾಜರಾಗುವಂತೆ ರೇವಣ್ಣ ಕುಟುಂಬದ ವಕೀಲರು ಸಲಹೆ ನೀಡಿದ್ದರಿಂದ ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುತ್ತಿದ್ದಾರೆ ಎನ್ನಲಾಗಿದೆ.

ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

HD Revanna Released first reaction after release will be acquitted of all charges

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್.‌ ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪದಡಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ಮಾಜಿ ಸಚಿವ, ಹಾಲಿ ಶಾಸಕ ಎಚ್.ಡಿ. ರೇವಣ್ಣ (HD Revanna Released) ಮಾಧ್ಯಮಗಳಿಗೆ ಮೊದಲ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ರೇವಣ್ಣ, ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ಇದೆ. ದೇವರಲ್ಲಿ ಅದನ್ನೇ ಪ್ರಾರ್ಥನೆ ಮಾಡಿಕೊಂಡಿದ್ದೇನೆ. ನಾನು ಹೆಚ್ಚಿಗೆ ಏನು ಮಾತನಾಡಲ್ಲ. ಕಳೆದ 11 ದಿನಗಳಿಂದ ನ್ಯಾಯಾಲಯದ ಕಾನೂನನ್ನು ಪಾಲಿಸಿದೇನೆ. ಈ ಆಪಾದನೆಯಿಂದ ಹೊರಗೆ ಬರುತ್ತೇನೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಇದನ್ನೂ ಓದಿ | HD Revanna Released: ತಬ್ಬಿಕೊಂಡ ಎಚ್‌ಡಿಕೆ; ಕುಟುಂಬಸ್ಥರ ಕಂಡು ಕಣ್ಣೀರಿಟ್ಟ ರೇವಣ್ಣ, ಇಷ್ಟಾದರೂ ಬಾರದ ಭವಾನಿ!

Continue Reading
Advertisement
Team India
ಪ್ರಮುಖ ಸುದ್ದಿ37 mins ago

Team India : ದ್ರಾವಿಡ್​ ಬಳಿಕ ಇವರೇ ಆಗ್ತಾರೆ ಭಾರತ ತಂಡದ ಕೋಚ್​​

Victoria Hospital
ಕರ್ನಾಟಕ49 mins ago

Victoria Hospital: ವಿಕ್ಟೋರಿಯಾ ಆಸ್ಪತ್ರೆಯಿಂದ ವಜಾಗೊಂಡಿದ್ದ 55 ಸಿಬ್ಬಂದಿ ಮರು ನೇಮಕ

KL Rahul
ಕ್ರೀಡೆ1 hour ago

KL Rahul : ಗಲಾಟೆ ಚಾಪ್ಟರ್ ಕ್ಲೋಸ್​​; ಕೆ. ಎಲ್​ ರಾಹುಲ್​ ಹಿಡಿದ ಕ್ಯಾಚ್​ಗೆ ಮೆಚ್ಚಿ ಚಪ್ಪಾಳೆ ತಟ್ಟಿದ ಗೋಯೆಂಕಾ

Prajwal Revanna Case
ಕರ್ನಾಟಕ2 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

Bank Loan Fraud
ಪ್ರಮುಖ ಸುದ್ದಿ2 hours ago

Bank Loan Fraud : 34,000 ಕೋಟಿ ರೂ. ಬ್ಯಾಂಕ್​​ ವಂಚನೆ, ಡಿಎಚ್​​ಎಫ್ಎಲ್​​​ ಮಾಜಿ ನಿರ್ದೇಶಕನ ಬಂಧನ

Shri Raghaveshwar Bharati Swamiji spoke in Bhava Ramayana Ramavataran Certificate Course and Short Term Courses Class
ಉತ್ತರ ಕನ್ನಡ2 hours ago

Uttara Kannada News: ಬದುಕಿನ ಪುರುಷಾರ್ಥಗಳ ಸಾಧನೆಗೆ ರಾಮಾಯಣ ಸಾಧನ; ಶ್ರೀರಾಘವೇಶ್ವರ ಭಾರತೀ ಸ್ವಾಮೀಜಿ

Swati Maliwal
ಪ್ರಮುಖ ಸುದ್ದಿ3 hours ago

Swati Maliwal : ಸ್ವಾತಿ ಮಾಲಿವಾಲ್​​ ಮೇಲೆ ಕೇಜ್ರಿವಾಲ್ ಸಹಾಯಕನಿಂದ ಹಲ್ಲೆ; ಆಪ್​​ನಿಂದ ತಪ್ಪೊಪ್ಪಿಗೆ

Karnataka weather Man from Siddapura killed in lightning Heavy rain warning for four more days
ಕರ್ನಾಟಕ3 hours ago

Karnataka weather: ಸಿಡಿಲಿಗೆ ಸಿದ್ದಾಪುರದ ವ್ಯಕ್ತಿ ಬಲಿ; ಇನ್ನೂ ನಾಲ್ಕು ದಿನ ಇದೆ ಭಾರಿ ಮಳೆ ಎಚ್ಚರಿಕೆ!

Manjappa Magodi
ಚಿತ್ರದುರ್ಗ4 hours ago

Manjappa Magodi: ಕೆಇಎಸ್‌ ಅಧಿಕಾರಿ ಮಂಜಪ್ಪ ಮಾಗೊದಿಗೆ ಕುವೆಂಪು ವಿವಿಯಿಂದ ಡಾಕ್ಟರೇಟ್

Viral News
ವಿದೇಶ4 hours ago

Viral News: ಗಾಜಾದಲ್ಲಿ ಆಹಾರ ಸಿಗದೆ ನಾಣ್ಯ, ಕಲ್ಲು, ಬ್ಯಾಟರಿ ತಿನ್ನುತ್ತಿರುವ ಮಕ್ಕಳು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ2 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

HD Revanna Released first reaction after release will be acquitted of all charges
ರಾಜಕೀಯ4 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20247 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202410 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ11 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು12 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ19 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ1 day ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ1 day ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

ಟ್ರೆಂಡಿಂಗ್‌