IND VS NZ | ​ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಲಿದ್ದಾರಾ ಅರ್ಶ್​ದೀಪ್​​ ಸಿಂಗ್? - Vistara News

Latest

IND VS NZ | ​ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡಲಿದ್ದಾರಾ ಅರ್ಶ್​ದೀಪ್​​ ಸಿಂಗ್?

ಶುಕ್ರವಾರ ನಡೆಯಲಿರುವ ನ್ಯೂಜಿಲ್ಯಾಂಡ್​ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಅರ್ಶ್​ದೀಪ್​ ಸಿಂಗ್​ ಕಣಕ್ಕಿಳಿಯುವ ಮೂಲಕ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡುವ ನಿರೀಕ್ಷೆಯಲ್ಲಿದ್ದಾರೆ.

VISTARANEWS.COM


on

Arshdeep Singh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆಕ್ಲೆಂಡ್​: ಈಗಾಗಲೇ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಅಂತರದಿಂದ ಗೆದ್ದು ಬೀಗಿದ ಟೀಮ್​ ಇಂಡಿಯಾ(IND VS NZ) ಇದೀಗ ಏಕದಿನ ಸರಣಿಯತ್ತ ಗಮನ ಹರಿಸಲಿದೆ. ನ್ಯೂಜಿಲ್ಯಾಂಡ್​ ವಿರುದ್ಧ ಶುಕ್ರವಾರ (ನವೆಂಬರ್ 25) ಆಕ್ಲೆಂಡ್‌ನಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯದಲ್ಲಿ ಗೆಲುವಿನ ಶುಭಾರಂಭ ಪಡೆಯಲು ಎದುರು ನೋಡುತ್ತಿದೆ. ಅತ್ತ ಅರ್ಶ್​ದೀಪ್​ ಸಿಂಗ್​ ಈ ಪಂದ್ಯದಲ್ಲಿ ಆಡುವ ಮೂಲಕ ಏಕದಿನ ಕ್ರಿಕೆಟ್​ಗೆ ಪದಾರ್ಪಣೆ ಮಾಡುವ ನಿರೀಕ್ಷೆಯಲ್ಲಿದ್ದಾರೆ.

ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಹಲವು ಯುವ ಆಟಗಾರರು ಸಿಕ್ಕ ಅವಕಾಶದಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಭವಿಷ್ಯದಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳುವ ಹಂಬಲದಲ್ಲಿದ್ದಾರೆ. ಅದರಂತೆ ಟಿ20 ಕ್ರಿಕೆಟ್​ನಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ಎಡಗೈ ವೇಗಿ ಅರ್ಶ್​ದೀಪ್​ ಸಿಂಗ್​ ಕೂಡಾ ಇದೀಗ ಏಕದಿನ ಕ್ರಿಕೆಟ್​ನಲ್ಲಿಯೂ ತಮ್ಮ ಬೌಲಿಂಗ್​ ಕರಾಮತ್ತು ತೋರಿಸಲು ಎದುರು ನೋಡುತ್ತಿದ್ದಾರೆ .

ಸದ್ಯ 21 ಪಂದ್ಯಗಳಲ್ಲಿ 33 ವಿಕೆಟ್‌ ಕಿತ್ತಿರುವ ಅರ್ಶ್​ದೀಪ್​ ಸಿಂಗ್​ 2022ರ ಋತುವಿನಲ್ಲಿ ಟಿ20 ಪಂದ್ಯಗಳಲ್ಲಿ ಭಾರತದ ಪರ ಎರಡನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್​ ಎಂಬ ಖ್ಯಾತಿ ಪಡೆದಿದ್ದಾರೆ.

ಇದನ್ನೂ ಓದಿ | Samson VS Pant | ಅವಕಾಶ ನೀಡಿದ್ದು ಸಾಕು ಪಂತ್​ಗೆ ಗೇಟ್​ ಪಾಸ್​ ನೀಡಿ; ಸೋಧಿ ಆಗ್ರಹ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Agniveer: ಹುತಾತ್ಮ ʼಅಗ್ನಿವೀರʼನ ಕುಟುಂಬಕ್ಕೆ 1.08 ಕೋಟಿ ರೂ. ಪರಿಹಾರ; ರಾಹುಲ್‌ ಗಾಂಧಿ ಆರೋಪ ಠುಸ್‌!

ಅಗ್ನಿಪಥ್ ಮಿಲಿಟರಿ ನೇಮಕಾತಿ ಯೋಜನೆಯನ್ನು ಉಲ್ಲೇಖಿಸಿ ಸರ್ಕಾರವು ಅಗ್ನಿವೀರರನ್ನು “ಬಳಸಿ-ಎಸೆಯುವ ಕಾರ್ಮಿಕರು” ಎಂದು ಪರಿಗಣಿಸುತ್ತದೆ. ಅವರಿಗೆ “ಹುತಾತ್ಮ” ಸ್ಥಾನಮಾನವನ್ನೂ ನೀಡುವುದಿಲ್ಲ ಎಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಆರೋಪಿಸಿದ್ದರು. ಅನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಪಷ್ಟೀಕರಣ ನೀಡಿದ್ದರು. ಇದೀಗ ಅಗ್ನಿವೀರ್‌ ಕುಟುಂಬದ ಸದಸ್ಯರೇ ಪರಿಹಾರ ಪಡೆದಿರುವುದಾಗಿ ಹೇಳಿದ್ದಾರೆ.

VISTARANEWS.COM


on

By

Agniveer
Koo

ಕರ್ತವ್ಯದ ವೇಳೆ ಕಳೆದ ವರ್ಷ ಮೃತಪಟ್ಟಿದ್ದ ಮಹಾರಾಷ್ಟ್ರದ (maharastra) ಅಗ್ನಿವೀರ್ (agniveer) ಅಕ್ಷಯ್ ಗವಾಟೆ (Agniveer Akshay Gawate) ಅವರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ 1.08 ಕೋಟಿ ರೂಪಾಯಿ ನೆರವು ನೀಡಲಾಗಿದೆ ಎಂದು ಸೋಮವಾರ ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಇದರಿಂದಾಗಿ, ಅಗ್ನಿವೀರ್‌ ಯೋಜನೆಯಡಿ ಆಯ್ಕೆಯಾದವರು ಸತ್ತರೆ ಯಾವುದೇ ಪರಿಹಾರ ಸಿಗುವುದಿಲ್ಲ ಎಂದು ಸಂಸತ್‌ನಲ್ಲಿ ಆರೋಪ ಮಾಡಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮುಖಭಂಗ ಅನುಭವಿಸಿದಂತಾಗಿದೆ.

ಲೋಕಸಭೆಯಲ್ಲಿ (loksabha) ರಕ್ಷಣಾ ಸಚಿವ ರಾಜನಾಥ್ ಸಿಂಗ್ (rajnath singh) ಅವರು ಕರ್ತವ್ಯದ ವೇಳೆಯಲ್ಲಿ ಪ್ರಾಣ ತ್ಯಾಗ ಮಾಡುವ ಅಗ್ನಿವೀರನಿಗೆ 1 ಕೋಟಿ ರೂಪಾಯಿ ಪರಿಹಾರ ಸಿಗುತ್ತದೆ ಎಂದು ಹೇಳಿಕೆ ನೀಡಿದ ಬಳಿಕ ಈ ಹೇಳಿಕೆ ಹೊರಬಿದ್ದಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಅಗ್ನಿಪಥ್ ಮಿಲಿಟರಿ ನೇಮಕಾತಿ ಯೋಜನೆಯನ್ನು ಉಲ್ಲೇಖಿಸಿ ಸರ್ಕಾರವು ಅಗ್ನಿವೀರರನ್ನು “ಬಳಸಿ-ಎಸೆಯುವ ಕಾರ್ಮಿಕರು” ಎಂದು ಪರಿಗಣಿಸುತ್ತದೆ. ಅವರಿಗೆ “ಹುತಾತ್ಮ” ಸ್ಥಾನಮಾನವನ್ನೂ ನೀಡುವುದಿಲ್ಲ ಎಂದು ತೀವ್ರವಾಗಿ ಆರೋಪಿಸಿದ್ದರು. ಅನಂತರ ರಾಜನಾಥ್ ಸಿಂಗ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದರು.

ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯ ಪಿಂಪಲ್ಗಾಂವ್ ಸರೈ ಮೂಲದ ಅಗ್ನಿವೀರ್ ಅಕ್ಷಯ್ ಗವಾಟೆ ಅವರು 2023ರ ಅಕ್ಟೋಬರ್ 21ರಂದು ಸಿಯಾಚಿನ್‌ನಲ್ಲಿ ಕರ್ತವ್ಯದ ವೇಳೆ ಮೃತಪಟ್ಟಿದ್ದರು. ಸೋಮವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅಕ್ಷಯ್ ಅವರ ತಂದೆ ಲಕ್ಷ್ಮಣ ಗವಾಟೆ, ಅಕ್ಷಯ್ ನಿಧನದ ಅನಂತರ ವಿಮಾ ರಕ್ಷಣೆಯಾಗಿ 48 ಲಕ್ಷ ರೂ., 50 ಲಕ್ಷ ರೂ. ಕೇಂದ್ರ ಸರ್ಕಾರದಿಂದ ಮತ್ತು ರಾಜ್ಯ ಸರ್ಕಾರದಿಂದ 10 ಲಕ್ಷ ರೂ ದೊರೆತಿದೆ ಎಂದರು. ಅಕ್ಷಯ್ ಸಹೋದರಿಗೆ ಸರ್ಕಾರಿ ನೌಕರಿ ನೀಡುವಂತೆ ಅವರು ಮನವಿ ಮಾಡಿದರು.

ಇದನ್ನೂ ಓದಿ: Narendra Modi: ರಾಹುಲ್‌ ಗಾಂಧಿ ಥರ ಆಡ್ಬೇಡಿ; ಗಂಭೀರವಾಗಿರಿ: ಎನ್‌ಡಿಎ ಸಂಸದರಿಗೆ ಮೋದಿ ಕಿವಿಮಾತು

2022ರ ಜೂನ್ 14ರಂದು ಘೋಷಿಸಲಾದ ಅಗ್ನಿಪಥ್ ಯೋಜನೆಯು 17 ಮತ್ತು 21 ವರ್ಷ ವಯಸ್ಸಿನ ಯುವಕರನ್ನು ಕೇವಲ ನಾಲ್ಕು ವರ್ಷಗಳವರೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಅವರಲ್ಲಿ ಶೇಕಡಾ 25 ರಷ್ಟು ಜನರನ್ನು ಇನ್ನೂ 15 ವರ್ಷಗಳವರೆಗೆ ಉಳಿಸಿಕೊಳ್ಳುವ ಅವಕಾಶವಿದೆ. ಸರ್ಕಾರವು ಇದಕ್ಕಾಗಿ ಗರಿಷ್ಠ ವಯಸ್ಸಿನ ಮಿತಿಯನ್ನು 23 ವರ್ಷಗಳಿಗೆ ವಿಸ್ತರಿಸಿದೆ.

ರಾಹುಲ್ ಆರೋಪ ಸುಳ್ಳು ಎಂದಿದ್ದ ಭಾರತೀಯ ಸೇನೆ

ಸಿಯಾಚಿನ್‌ನಲ್ಲಿ ಮೃತಪಟ್ಟಿರುವ ಭಾರತೀಯ ಸೈನ್ಯದ ʼಅಗ್ನಿವೀರʼನಿಗೆ ಸಂದ ಹಾಗೂ ಸಲ್ಲಲಿರುವ ಆರ್ಥಿಕ ನೆರವಿನ ವಿವರಗಳನ್ನು ಸೈನ್ಯಾಧಿಕಾರಿಗಳು ತಿಳಿಸಿದ್ದು, ರಾಹುಲ್‌ ಗಾಂಧಿ ಮಾಡುತ್ತಿರುವ ಆರೋಪಗಳು ಸುಳ್ಳು ಎಂದು ಈ ಮೊದಲೇ ಹೇಳಿದ್ದರು.

ಸಿಯಾಚಿನ್‌ನಲ್ಲಿ ಕರ್ತವ್ಯದಲ್ಲಿದ್ದಾಗ ಮೃತಪಟ್ಟ ಅಗ್ನಿವೀರನ ಕುಟುಂಬಕ್ಕೆ ನೀಡಲಾಗುತ್ತಿರುವ ಹಣಕಾಸಿನ ನೆರವಿನ ಬಗ್ಗೆ ಭಾರತೀಯ ಸೈನ್ಯ ಸ್ಪಷ್ಟನೆ ನೀಡಿತ್ತು. ಮೃತರ ಕುಟುಂಬದವರಿಗೆ ಪರಿಹಾರವನ್ನು ಸೈನಿಕ ಸೇವೆಯ ಸಂಬಂಧಿತ ನಿಯಮಗಳ ಮೂಲಕವೇ ನೀಡಲಾಗುತ್ತಿದೆ ಎಂದು ಹೇಳಿತ್ತು. ಮೃತ ಅಗ್ನಿವೀರರ ಕುಟುಂಬದವರಿಗೆ 48 ಲಕ್ಷ ರೂ. ವಿಮಾ ಹಣದ ಮೊತ್ತ, 44 ಲಕ್ಷ ರೂ. ಪರಿಹಾರ, ಅಗ್ನಿವೀರ್‌ನಿಂದ ಸೇವಾ ನಿಧಿ ಕೊಡುಗೆ ಮತ್ತು ಸರ್ಕಾರದಿಂದ ಇಷ್ಟೇ ಪ್ರಮಾಣದ ಹೊಂದಾಣಿಕೆಯ ಕೊಡುಗೆ ಸಂಚಿತ ಬಡ್ಡಿಯೊಂದಿಗೆ ಕೊಡಲಾಗುತ್ತದೆ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿತ್ತು.

ಸೈನಿಕನ ಮರಣದ ದಿನಾಂಕದಿಂದ ನಾಲ್ಕು ವರ್ಷಗಳು ಪೂರ್ಣಗೊಳ್ಳುವವರೆಗಿನ ಉಳಿದ ಸೇವಾವಧಿಯ ವೇತನವನ್ನು ಸಹ ಇದು ಒಳಗೊಂಡಿದೆ. ಪ್ರಸ್ತುತ ಪ್ರಕರಣದಲ್ಲಿ ಈ ಮೊತ್ತ 13 ಲಕ್ಷ ರೂ. ಗಿಂತ ಹೆಚ್ಚು ಇದೆ. ಇನ್ನು ಸಶಸ್ತ್ರ ಪಡೆಗಳ ಯುದ್ಧ ಅಪಘಾತ ನಿಧಿಯಿಂದ 8 ಲಕ್ಷ ರೂ. ಹೆಚ್ಚುವರಿ ಕೊಡುಗೆಯನ್ನು ಸಂಬಂಧಿಕರಿಗೆ ನೀಡಲಾಗುತ್ತದೆ. ತಕ್ಷಣದ ಪರಿಹಾರವಾಗಿ ಒದಗಿಸಲು ಸೇನಾ ಯೋಧರ ಪತ್ನಿಯರ ಕಲ್ಯಾಣ ಸಂಘ (AWWA) 30 ಸಾವಿರ ರೂ. ಆರ್ಥಿಕ ನೆರವು ನೀಡುತ್ತಿದೆ. ಹೀಗಾಗಿ ಒಟ್ಟಾರೆ ಮೊತ್ತ ₹ 1.13 ಕೋಟಿ ದಾಟಲಿದೆ ಎಂದು ಸೇನೆ ತಿಳಿಸಿತ್ತು.

ಅಗ್ನಿವೀರ್‌ಗಳ ಸೇವಾ ನಿಯಮಗಳ ಪ್ರಕಾರ ಮರಣಹೊಂದಿದ, ಯುದ್ಧದಲ್ಲಿ ಗಾಯಗೊಂಡವರಿಗೆ ಅಧಿಕೃತವಾದ ಪರಿಹಾರಗಳು ಇವುಗಳನ್ನು ಒಳಗೊಂಡಿರುತ್ತವೆ. ಕೊಡುಗೆ ರಹಿತ ವಿಮಾ ಮೊತ್ತ 48 ಲಕ್ಷ ರೂ., ಅಗ್ನಿವೀರ್‌ ಸೇವಾ ನಿಧಿ ಶೇ. 30 ಮತ್ತು ಸರ್ಕಾರ ನೀಡುವ ಸಮಾನ ಹೊಂದಾಣಿಕೆಯ ಕೊಡುಗೆ ಮತ್ತು ಅದಕ್ಕೆ ಬಡ್ಡಿ. ಆರ್ಮಿ ವೈವ್ಸ್ ವೆಲ್ಫೇರ್ ಅಸೋಸಿಯೇಷನ್ ​​(AWWA) ನಿಂದ 30 ಸಾವಿರ ರೂ. ತಕ್ಷಣದ ಆರ್ಥಿಕ ನೆರವು ಎಂದು ಸೇನೆ ಈ ಹಿಂದೆಯೇ ತಿಳಿಸಿತ್ತು.

Continue Reading

ರಾಜಕೀಯ

K Annamalai: ಕೆ ಅಣ್ಣಾಮಲೈ ಯುಕೆ ಫೆಲೋಶಿಪ್‌ಗೆ ಆಯ್ಕೆ; ಬಿಜೆಪಿ ರಾಜ್ಯಾಧ್ಯಕ್ಷತೆಗೆ ರಾಜೀನಾಮೆ?

ಯುಕೆ ವಿದೇಶಾಂಗ ಕಚೇರಿಯ ಚೆವೆನಿಂಗ್ ಗುರುಕುಲ ಫೆಲೋಶಿಪ್ ಫಾರ್ ಲೀಡರ್‌ಶಿಪ್ ಮತ್ತು ಎಕ್ಸಲೆನ್ಸ್ ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವ ಕೆ. ಅಣ್ಣಾಮಲೈ ( K Annamalai) ಅವರು ಬ್ರಿಟನ್‌ನಲ್ಲಿ ಕೋರ್ಸ್ ಮುಗಿಯುವವರೆಗೆ ತಮ್ಮನ್ನು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ಬಿಡುಗಡೆ ಮಾಡುವಂತೆ ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

VISTARANEWS.COM


on

By

K Annamalai
Koo

ಲೋಕಸಭಾ ಚುನಾವಣೆಯಲ್ಲಿ (Lok sabha election) ಬಿಜೆಪಿಯಿಂದ (bjp) ತಮಿಳುನಾಡಿನಲ್ಲಿ (tamilnadu) ಸ್ಪರ್ಧಿಸಿ ಸೋತಿದ್ದ ಒಂದು ತಿಂಗಳ ಬಳಿಕ ಕೆ. ಅಣ್ಣಾಮಲೈ ( K Annamalai) ಅವರಿಗೆ ಯುಕೆ (UK) ಫೆಲೋಶಿಪ್‌ ದೊರೆತಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷರೂ ಆಗಿರುವ ಕೆ ಅಣ್ಣಾಮಲೈ ಅವರು ಸದ್ಯದಲ್ಲೇ ಲಂಡನ್‌ಗೆ ತೆರಳಲಿದ್ದಾರೆ. ಯುಕೆ ವಿದೇಶಾಂಗ ಕಚೇರಿಯ ಚೆವೆನಿಂಗ್ ಗುರುಕುಲ ಫೆಲೋಶಿಪ್ ಫಾರ್ ಲೀಡರ್‌ಶಿಪ್ ಮತ್ತು ಎಕ್ಸಲೆನ್ಸ್ ಕಾರ್ಯಕ್ರಮಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ. ಮೂರು ತಿಂಗಳ ಕಾಲ ಅವರು ಅಲ್ಲಿ ನೆಲೆಸಲಿದ್ದಾರೆ.

ಫೆಲೋಶಿಪ್ ಕಾರ್ಯಕ್ರಮವು ಸೆಪ್ಟೆಂಬರ್ ಮಧ್ಯದಲ್ಲಿ ಪ್ರಾರಂಭವಾಗಲಿದ್ದು, ನವೆಂಬರ್‌ನಲ್ಲಿ ಮುಕ್ತಾಯಗೊಳ್ಳಲಿದೆ. ಮೂಲಗಳ ಪ್ರಕಾರ ಅಣ್ಣಾಮಲೈ ಅವರು 2024ರ ಲೋಕಸಭೆ ಚುನಾವಣೆಗೆ ಮುನ್ನ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಿದ್ದರು ಮತ್ತು ಮೇ ತಿಂಗಳಲ್ಲಿ ದೆಹಲಿಯಲ್ಲಿ ಸಂದರ್ಶನಕ್ಕೆ ಹಾಜರಾಗಿದ್ದರು. ಬ್ರಿಟನ್‌ನಲ್ಲಿ ಕೋರ್ಸ್ ಮುಗಿಯುವವರೆಗೆ ತಮ್ಮನ್ನು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ಬಿಡುಗಡೆ ಮಾಡುವಂತೆ ಬಿಜೆಪಿ ಹೈಕಮಾಂಡ್‌ಗೆ ಅಣ್ಣಾಮಲೈ ಅವರು ಮನವಿ ಮಾಡಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಅಣ್ಣಾಮಲೈ ಅವರು ನಾಗರಿಕ ಸೇವೆಯನ್ನು ತೊರೆದ ಅನಂತರ ಅವರು ಪ್ರಾರಂಭಿಸಿದ ಎನ್‌ಜಿಒ ‘ವೀ ದಿ ಲೀಡರ್ಸ್’ ಪ್ರತಿಷ್ಠಾನದ ಸಂಸ್ಥಾಪಕರಾಗಿ ಚೆವೆನಿಂಗ್ ಗುರುಕುಲ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಿದ್ದರು. ಕಾರ್ಯಕ್ರಮವನ್ನು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯವು ರಾಜಕೀಯ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳ ವಿಭಾಗದಲ್ಲಿ ಆಯೋಜಿಸಿದೆ ಎಂದು ಚೆವೆನಿಂಗ್ ವೆಬ್‌ಸೈಟ್ ತಿಳಿಸಿದೆ.

ಯುಕೆ ವಿದೇಶಾಂಗ ಕಚೇರಿಯು 20 ವರ್ಷಗಳಿಗೂ ಹೆಚ್ಚು ಕಾಲ ಫೆಲೋಶಿಪ್ ಕಾರ್ಯಕ್ರಮವನ್ನು ನಡೆಸುತ್ತಿದೆ. ಯುವ ಸಾಧಕರು ಮತ್ತು ಮಧ್ಯಮ ವೃತ್ತಿಪರರು ಹಾಗೂ ವಿವಿಧ ಹಿನ್ನೆಲೆಯ ವೃತ್ತಿಪರರು ಇಲ್ಲಿ ತಮ್ಮ ನಾಯಕತ್ವ ಸಾಮರ್ಥ್ಯವನ್ನು ಪ್ರದರ್ಶಿಸಬಹುದು ಎಂದು ವೆಬ್‌ಸೈಟ್ ಹೇಳಿದೆ. ಈ ಕುರಿತು ಜುಲೈ 26ರಂದು ಬ್ರಿಟಿಷ್ ಹೈ ಕಮಿಷನ್ ಘೋಷಣೆ ಮಾಡಲಿದ್ದು, ಅಣ್ಣಾಮಲೈ ಸೇರಿ ಸುಮಾರು ಹತ್ತು ವೃತ್ತಿಪರರು ಈ ಬಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಚೆವೆನಿಂಗ್ ಗುರುಕುಲ ಫೆಲೋಶಿಪ್ 12 ವಾರಗಳ ಕಾರ್ಯಕ್ರಮವಾಗಿದ್ದು, ಇದಕ್ಕಾಗಿ ಪ್ರತಿ ವರ್ಷ 12 ಅಭ್ಯರ್ಥಿಗಳನ್ನು ಭಾರತದಿಂದ ಗುರುಕುಲ ಫೆಲೋಗಳಾಗಿ ಆಯ್ಕೆ ಮಾಡಲಾಗುತ್ತದೆ. 12 ವಾರಗಳ ವಸತಿ ಕೋರ್ಸ್ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ರಾಜಕೀಯ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳ ವಿಭಾಗದಲ್ಲಿ ನಡೆಯಲಿದೆ.

ಫೆಲೋಶಿಪ್‌ಗೆ ಸಂಬಂಧಿಸಿದ ಒಂದೆರಡು ಪೂರ್ವ-ಉದ್ದೇಶಿತ ಕಾರ್ಯಕ್ರಮಗಳಿಗೆ ಅಣ್ಣಾಮಲೈ ಈಗಾಗಲೇ ಹಾಜರಾಗಿದ್ದಾರೆ ಮತ್ತು ಸೆಪ್ಟೆಂಬರ್‌ನಲ್ಲಿ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯಕ್ಕೆ ಹೋಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ, ಬಿಜೆಪಿ ಹೈಕಮಾಂಡ್ ರಾಜ್ಯಕ್ಕೆ ಹಂಗಾಮಿ ಅಧ್ಯಕ್ಷರನ್ನು ನೇಮಿಸುವ ನಿರೀಕ್ಷೆಯಿದೆ ಮತ್ತು ಸ್ಥಾನಕ್ಕೆ ಹೆಚ್ಚಿನ ಆಕಾಂಕ್ಷಿಗಳು ಇರುವುದರಿಂದ ತೀವ್ರ ಚರ್ಚೆಗಳು ನಡೆಯುತ್ತಿವೆ.

ಮಾಜಿ ಐಪಿಎಸ್ ಅಧಿಕಾರಿಯಾಗಿರುವ ಅಣ್ಣಾಮಲೈ 2020ರ ಆಗಸ್ಟ್ ನಲ್ಲಿ ಬಿಜೆಪಿ ಸೇರಿದ್ದರು. ‘ಪಕ್ಷದ ನಿಷ್ಠಾವಂತ ಸೈನಿಕ’ ಎಂದು ಗುರುತಿಸಿಕೊಂಡಿರುವ ಅವರು ಪಕ್ಷಕ್ಕೆ ಸೇರಿದಾಗಿನಿಂದ ರಾಜ್ಯದಲ್ಲಿ ಹಲವಾರು ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಇದರ ಜತೆಗೆ ವಿವಾದಗಳಿಗೂ ಕೇಂದ್ರವಾಗಿದ್ದಾರೆ.

ಇದನ್ನೂ ಓದಿ: Narendra Modi: ನೀಟ್‌ ಅಕ್ರಮ ಕುರಿತು ಸಂಸತ್‌ನಲ್ಲಿ ಮೋದಿ ಪ್ರಸ್ತಾಪ; ವಿದ್ಯಾರ್ಥಿಗಳಿಗೆ ಅವರು ಹೇಳಿದ್ದಿಷ್ಟು

2023ರಲ್ಲಿ ಅಣ್ಣಾಮಲೈ ಅವರು ನಾಲ್ಕು ಆಡಿಯೋ ಟೇಪ್‌ಗಳ ಸರಣಿಯನ್ನು ಬಿಡುಗಡೆ ಮಾಡಿದರು. ಅದರ ಮೂಲಕ ಅವರು ಡಿಎಂಕೆ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು. ‘ಡಿಎಂಕೆ ಫೈಲ್‌ಗಳು’ ಎಂಬ ಶೀರ್ಷಿಕೆಯಡಿ, ಆಡಿಯೋ ಟೇಪ್‌ಗಳ ಭಾಗ ಒಂದರಲ್ಲಿ ಪಟ್ಟಿ ಮಾಡಲಾದ ಆಸ್ತಿಗಳು 1.34 ಲಕ್ಷ ಕೋಟಿ ರೂಪಾಯಿ ಮೌಲ್ಯದ್ದಾಗಿದೆ. ಇದು ಸ್ಟಾಲಿನ್ ಅವರ ಕುಟುಂಬ ಸದಸ್ಯರು ಮತ್ತು ಇತರ ಹಿರಿಯ ನಾಯಕರು ಸೇರಿದಂತೆ 12 ವ್ಯಕ್ತಿಗಳ ಒಡೆತನದಲ್ಲಿದೆ ಎಂದು ಅವರು ಆರೋಪಿಸಿದ್ದರು. ಅಣ್ಣಾಮಲೈ ಈ ಬಾರಿ ಚುನಾವಣೆಯಲ್ಲಿ ಸೋತಿದ್ದಾರೆ. ಆದರೆ ಅವರ ನಾಯಕತ್ವದಲ್ಲ ಪಕ್ಷ ತಮಿಳುನಾಡಿನಲ್ಲಿ ಶೇಕಡಾವಾರು ಮತ ಗಳಿಕೆಯಲ್ಲಿ ಭಾರಿ ಸಾಧನೆ ಮಾಡಿದೆ.

Continue Reading

Latest

Eknath Shinde: ಗಾಯಗೊಂಡು ರಸ್ತೆಯಲ್ಲಿ ಪರದಾಡುತ್ತಿದ್ದ ಜೈನ ಸನ್ಯಾಸಿಗಳಿಗೆ ನೆರವಾದ ಮಹಾರಾಷ್ಟ್ರ ಸಿಎಂ

Eknath Shinde: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರ ವಿಧಾನಸಭೆಯ ಮುಂಗಾರು ಅಧಿವೇಶನಕ್ಕಾಗಿ ಥಾಣೆಯಿಂದ ವಿಧಾನಸಭಾ ಭವನಕ್ಕೆ ಹೋಗುತ್ತಿದ್ದಾಗ ಘಾಟ್ಕೋಪರ್‌ನ ರಮಾಬಾಯಿ ಅಂಬೇಡ್ಕರ್ ನಗರದ ಬಳಿ ಇಬ್ಬರು ಜೈನ ಸಾಧ್ವಿಗಳು ಸಂಕಷ್ಟದ ಸ್ಥಿತಿಯಲ್ಲಿರುವುದನ್ನು ಗಮನಿಸಿದ್ದಾರೆ. ತಕ್ಷಣವೇ ಅವರು ತಮ್ಮ ವಾಹನಗಳನ್ನು ನಿಲ್ಲಿಸಲು ಹೇಳಿ ವಾಹನದಿಂದ ಇಳಿದು ಇಬ್ಬರು ಜೈನ ಮಹಿಳಾ ಸನ್ಯಾಸಿಗಳಿಗೆ ಸಹಾಯ ಮಾಡಲು ಮುಂದಾಗಿದ್ದಾರೆ.ಈ ವಿಡಿಯೊ ಎಲ್ಲೆಡೆ ವೈರಲ್ ಆಗಿದೆ.

VISTARANEWS.COM


on

Viral Video
Koo

ಮುಂಬೈ: ಯಾರಾದರೂ ಸಂಕಷ್ಟದಲ್ಲಿದ್ದಾಗ ಕೆಲವರು ಕಂಡೂ ಕಾಣದಂತೆ ಹೋಗುತ್ತಿರುತ್ತಾರೆ. ಅಂತಹ ಘಟನೆಗಳನ್ನು ನಾವು ಹಲವಾರು ಕಡೆಗಳಲ್ಲಿ ಕಂಡಿರುತ್ತೇವೆ. ಅಲ್ಲಿ ಸಹಾಯಕ್ಕೆ ಬರುವವರು ಒಬ್ಬರು-ಇಬ್ಬರು ಮಾತ್ರ. ಉಳಿದವರು ನಮಗೇಕೆ ಪರರ ಚಿಂತೆ ಎಂದು ತಮ್ಮ ಪಾಡಿಗೆ ತಾವು ಹೋಗುತ್ತಿರುತ್ತಾರೆ. ಸಾಮಾನ್ಯ ಜನರೇ ಈ ರೀತಿ ವರ್ತಿಸುವಾಗ ಇನ್ನೂ ದೊಡ್ಡ ಮನುಷ್ಯರೆನಿಸಿಕೊಂಡರು ಅಲ್ಲಿ ಏನಾಗಿದೆ ಎಂದು ಕಣ್ಣೆತ್ತಿ ಕೂಡ ನೋಡುವುದಿಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ರಸ್ತೆಯಲ್ಲಿ ಸಂಕಷ್ಟಕ್ಕೀಡಾದ ಇಬ್ಬರು ವ್ಯಕ್ತಿಗಳ ಸಹಾಯಕ್ಕೆ ಧಾವಿಸಿ ಬಂದಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ವೈರಲ್ (Viral Video) ಆಗಿದೆ.

ಹೌದು. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರ ವಿಧಾನಸಭೆಯ ಮುಂಗಾರು ಅಧಿವೇಶನಕ್ಕಾಗಿ ಥಾಣೆಯಿಂದ ವಿಧಾನಸಭಾ ಭವನಕ್ಕೆ ಹೋಗುತ್ತಿದ್ದಾಗ ಘಾಟ್ಕೋಪರ್‌ನ ರಮಾಬಾಯಿ ಅಂಬೇಡ್ಕರ್ ನಗರದ ಬಳಿ ಇಬ್ಬರು ಜೈನ ಸಾಧ್ವಿಗಳು (ಜೈನ ಮಹಿಳಾ ಸನ್ಯಾಸಿನಿಗಳು) ಸಂಕಷ್ಟದ ಸ್ಥಿತಿಯಲ್ಲಿರುವುದನ್ನು ಗಮನಿಸಿದ್ದಾರೆ. ತಕ್ಷಣವೇ ಅವರು ತಮ್ಮ ವಾಹನಗಳನ್ನು ನಿಲ್ಲಿಸಲು ಹೇಳಿ ವಾಹನದಿಂದ ಇಳಿದು ಇಬ್ಬರು ಜೈನ ಮಹಿಳಾ ಸನ್ಯಾಸಿಗಳಿಗೆ ಸಹಾಯ ಮಾಡಲು ಬಂದಿದ್ದಾರೆ.

ಇಬ್ಬರು ಜೈನ ಮಹಿಳಾ ಸನ್ಯಾಸಿಗಳಿಗೆ ಘಾಟ್ಕೋಪರ್‌ನ ರಮಾಬಾಯಿ ಅಂಬೇಡ್ಕರ್ ನಗರದ ಬಳಿ ಅಪಘಾತವಾಗಿದ್ದು, ಅವರನ್ನು ಕಂಡು ಅವರ ಪರಿಸ್ಥಿತಿ ತಿಳಿದ ಸಿಎಂ ತಕ್ಷಣ ಗಾಯಗೊಂಡ ಮಹಿಳಾ ಸನ್ಯಾಸಿಗಳನ್ನು ಆಸ್ಪತ್ರೆಗೆ ಸಾಗಿಸಲು ತಮ್ಮ ಸೆಕ್ಯೂರಿಟಿ ಗಾರ್ಡ್‌ಗಳಿಗೆ ಆ್ಯಂಬುಲೆನ್ಸ್‌ಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ. ಈ ವಿಡಿಯೊವನ್ನು ಸಿಎಂ ಏಕನಾಥ್ ಶಿಂಧೆ ಅವರ ಅಧಿಕೃತ ಹ್ಯಾಂಡಲ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ನಲ್ಲಿ ಹಂಚಿಕೊಳ್ಳಲಾಗಿದೆ. ಇದು ವೈರಲ್ ಆಗಿದೆ. ಸಿಎಂ ಮಹಾನ್ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮೆಟ್ಟಿಲುಗಳ ಮೇಲೆ ಬೈಕ್‌ ಸವಾರಿ; ರೋಚಕ ವಿಡಿಯೊ ವೈರಲ್‌

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸಂಕಷ್ಟದಲ್ಲಿರುವ ಪ್ರಯಾಣಿಕರಿಗೆ ಸಹಾಯ ಮಾಡಲು ಮುಂದಾಗಿರುವುದು ಇದೇ ಮೊದಲಲ್ಲ. ಈ ಹಿಂದೆ ಮುಂಬೈ ಮತ್ತು ಥಾಣೆಯಲ್ಲಿ ಲೋಕಸಭಾ ಚುನಾವಣೆಯ ಮಧ್ಯೆ, ಆಟೋ ರಿಕ್ಷಾ ಅಪಘಾತಕ್ಕೀಡಾದ ಮಹಿಳೆಗೆ ಸಿಎಂ ಶಿಂಧೆ ಸಹಾಯ ಮಾಡುತ್ತಿರುವ ವಿಡಿಯೊ ವೈರಲ್ ಆಗಿತ್ತು.

ಮಹಾರಾಷ್ಟ್ರ ಸಿಎಂ ತಮ್ಮ ಕಾರಿನಿಂದ ಇಳಿದು, ಮಹಿಳೆಗೆ ಮತ್ತೊಂದು ವಾಹನದಲ್ಲಿ ಆಸ್ಪತ್ರೆಗೆ ಹೋಗಲು ಸಹಾಯ ಮಾಡಿದ್ದರು ಮತ್ತು ಅವಳ ಗಾಯಗಳಿಗೆ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

Continue Reading

ಪ್ರವಾಸ

Rainy Season Tourism: ಮಳೆಗಾಲದ ಪ್ರವಾಸ ಮಾಡುವ ಮುನ್ನ ಈ 10 ಎಚ್ಚರಿಕೆಗಳನ್ನು ಪಾಲಿಸಿ

Rainy Season Tourism: ಪ್ರತಿ ಮಳೆಗಾಲದಲ್ಲೂ ಅನಾಹುತದ ಒಂದಿಲ್ಲೊಂದು ಪ್ರಕರಣಗಳು ಪದೇ ಪದೇ ನಡೆಯುತ್ತಲೇ ಇರುತ್ತವೆ. ಈ ಪ್ರಕೃತಿಯ ಹಸಿರು ಸೆರಗಿನಲ್ಲಿ ಕಳೆದುಹೋಗುವ ಮುನ್ನ ಮೈಮರೆಯಬಾರದು ಎಂಬ ಎಚ್ಚರಿಕೆ ಸದಾ ನಮಗೆ ಇರಬೇಕು. ಕಾರಣ, ಮಳೆ ಭೋರ್ಗರೆದು ಸುರಿದರೆ, ಪ್ರವಾಹ, ನೆರೆ, ಭೂಕುಸಿತ ಇತ್ಯಾದಿ ಅವಘಡಗಳು ಸರ್ವೇಸಾಮಾನ್ಯ. ಕೊಂಚ ಎಡವಿದರೂ ಪ್ರಾಣಕ್ಕೇ ಕುತ್ತು. ಮಳೆಗಾಲದಲ್ಲಿ ಪ್ರವಾಸ ಮಾಡುವ ಮುನ್ನ ಈ ಎಚ್ಚರಿಕೆಯನ್ನು ಸದಾ ವಹಿಸಿ.

VISTARANEWS.COM


on

Rainy Season Tourism
Koo

ಮಹಾರಾಷ್ಟ್ರದ ಲೋನವಾಲದ ಬುಶಿ ಅಣೆಕಟ್ಟಿನ ಬಳಿ ಮಳೆಗಾಲದ ಪ್ರವಾಹದಲ್ಲಿ (Rainy Season Tourism) ಕೊಚ್ಚಿಹೋದ ಕುಟುಂಬದ ಮನಮಿಡಿಯುವ ದೃಶ್ಯಗಳು ವೈರಲ್‌ ಆಗುವ ಮೂಲಕ, ಇದೀಗ ಮಳೆಗಾಲದಲ್ಲಿ ಪ್ರವಾಸದ ಸಂದರ್ಭ ನಾವು ವಹಿಸಬೇಕಾದ ಎಚ್ಚರಿಕೆಯ ಕರೆಗಂಟೆಯಾಗಿದೆ. ಪ್ರತಿ ಮಳೆಗಾಲದಲ್ಲೂ ಇಂತಹ ಒಂದಿಲ್ಲೊಂದು ಪ್ರಕರಣಗಳು, ಪದೇ ಪದೇ, ಪ್ರಕೃತಿಯ ಶಕ್ತಿಯ ಮುಂದೆ ನಾವು ಎಂದಿಗೂ ಹುಲು ಮಾನವರೇ ಎಂಬ ಸತ್ಯವನ್ನು ನಮಗೆ ನೆನಪಿಸುತ್ತಲೇ ಇರುತ್ತವೆ. ಮಳೆಗಾಲ ಎಂತಹ ಕಲ್ಲು ಹೃದಯಿಯನ್ನೂ ಕರಗಿಸುತ್ತದೆ. ಎಂತಹ ಅರಸಿಕನಲ್ಲೂ ರಸಿಕತೆಯನ್ನು ಚಿಗುರಿಸುತ್ತದೆ. ಮಳೆಯಲ್ಲಿ ಪ್ರಕೃತಿಯ ಸೊಬಗಿಗೆ ಮಾರು ಹೋಗದವರಾರಿಲ್ಲ ಹೇಳಿ! ಇನ್ನು ಪ್ರವಾಸ ಪ್ರಿಯರ ಮಾತೇಕೆ? ಪ್ರವಾಸವನ್ನು ಇಷ್ಟಪಡುವವರು ಮಳೆಗಾಲದಲ್ಲೊಮ್ಮೆ ಪ್ರಕೃತಿಯಲ್ಲಿ ಆಂದವಾಗಿ ಕಾಲ ಕಳೆಯಲು, ಮಳೆನೀರಲ್ಲಿ ಮನಸೋ ಇಚ್ಛೆ ಮೀಯಲು, ಮಳೆಯ ಸೊಬಗನ್ನು ಕಣ್ತುಂಬಿಕೊಳ್ಳಲು ಸದಾ ತುದಿಗಾಲಲ್ಲಿ ನಿಂತಿರುತ್ತಾರೆ. ಆದರೆ, ಈ ಪ್ರಕೃತಿಯ ಹಸಿರ ಸೆರಗಿನಲ್ಲಿ ಕಳೆದುಹೋಗುವ ಮುನ್ನ ಮೈಮರೆಯಬಾರದು ಎಂಬ ಎಚ್ಚರಿಕೆ ಸದಾ ನಮಗೆ ಇರಬೇಕು. ಕಾರಣ, ಮಳೆ ಭೋರ್ಗರೆದು ಸುರಿದರೆ, ಪ್ರವಾಹ, ನೆರೆ, ಭೂಕುಸಿತ ಇತ್ಯಾದಿ ಅವಘಡಗಳು ಸರ್ವೇಸಾಮಾನ್ಯ. ಕೊಂಚ ಎಡವಿದರೂ ಪ್ರಾಣಕ್ಕೇ ಕುತ್ತು. ಬನ್ನಿ, ಮಳೆಗಾಲದಲ್ಲಿ ಪ್ರವಾಸ ಮಾಡುವ ಮುನ್ನ ಈ ಎಚ್ಚರಿಕೆಯನ್ನು ಸದಾ ನೀವು ವಹಿಸಿ. ಮರೆಯದಿರಿ.

Island During Golden Hour And Upcoming Storm

ಹವಾಮಾನ ಚೆಕ್‌ ಮಾಡಿಕೊಳ್ಳಿ

ಮಳೆಗಾಲದ ಪ್ರವಾಸ ಖುಷಿ ಕೊಡುತ್ತದೆ ನಿಜ. ಆದರೆ, ನೀವು ಪ್ರವಾಸ ಮಾಡುವ ಮೊದಲು ನೀವು ಹೋಗುವ ಜಾಗದ ಸುತ್ತಮುತ್ತಲ ಹವಾಮಾನ ಹೇಗಿದೆ ಎಂದು ಚೆಕ್‌ ಮಾಡಿಕೊಳ್ಳಿ. ಈಗೆಲ್ಲ ಮುಂಚಿತವಾಗಿ ಹವಾಮಾನ ಚೆಕ್‌ ಮಾಡಿಕೊಳ್ಳುವುದು ಕಷ್ಟವೇನಲ್ಲ. ಬೆರಳ ತುದಿಗೇ ಎಲ್ಲ ಮಾಹಿತಿಗಳನ್ನೂ ನೀವು ನಿಮ್ಮ ಫೋನ್‌ ಮೂಲಕವೇ ಪಡೆಯಬಹುದು. ಹೋಗುವ ಜಾಗದ ಬಗೆಗಿನ ವರ್ತಮಾನದ ಮಾಹಿತಿ ತಿಳಿದಿರುವುದೂ ಕೂಡಾ ಅತ್ಯಂತ ಮುಖ್ಯ. ಅತಿಯಾದ ಮಳೆ ಸಂಭವ ಇದ್ದರೆ ಹೊರಡಲೇಬೇಡಿ. ಮನೆಯಲ್ಲೇ ಸೇಫ್‌ ಆಗಿರಿ.

When changing direction on wet ground change the direction of the leg first then turn the body Avoid Slips Trips And Falls In Rainy Seasons

ಸೂಕ್ತ ಬಟ್ಟೆ ಹಾಗೂ ಶೂ ಜೊತೆಗಿರಲಿ

ಮಳೆಗಾಲದ ಪ್ರವಾಸಕ್ಕೆ ಯಾವಾಗಲೂ ಸೂಕ್ತ ಬಟ್ಟೆ ಹಾಗೂ ಶೂ ನಿಮ್ಮ ಜೊತೆಗಿರಲಿ. ಸರಿಯಾದ ಶೂ ಇಲ್ಲದಿದ್ದರೆ ಜಾರುವ ಸಂಭವ ಹೆಚ್ಚು. ಬೇಗನೆ ಒಣಗಬಹುದಾದ ಬಟ್ಟೆ, ರೇನ್‌ಕೋಟ್‌ ಇತ್ಯಾದಿಗಳಿರಲಿ.

ಸೂಚನಾ ಫಲಕ ಗಮನಿಸಿ

ಪ್ರವಾಸಕ್ಕೆ ಹೋದ ಜಾಗದಲ್ಲಿ ಸೂಚನಾ ಫಲಕ, ಸೆಕ್ಯೂರಿಟಿಯವರು, ಪೊಲೀಸ್‌ ಹಾಗೂ ಸ್ಥಳೀಯರು ನೀಡುವ ಎಚ್ಚರಿಕೆಯನ್ನು ಪಾಲನೆ ಮಾಡಿ. ಅವರ ಎಚ್ಚರಿಕೆಯ ಮಾತುಗಳಿಗೆ ಗೌರವ ಕೊಡಿ.

 Landscape During Rainy Season

ಬಂಡೆ ಹತ್ತುವಾಗ ಎಚ್ಚರ

ಹರಿಯುತ್ತಿರುವ ಹೊಳೆ, ತೊರೆ, ನದಿ, ಜಲಪಾತ ಇತ್ಯಾದಿಗಳಲ್ಲಿ ಮಳೆಗಾಲದಲ್ಲಿ ಇಳಿಯುವುದು, ಫೋಟೋಗಾಗಿ ನೀರಲ್ಲೇ ನಿಂತು ಪೋಸ್‌ ಕೊಡುವುದು, ಜಾರುವ ಬಂಡೆಗಳ ಮೇಲೆ ಹತ್ತಿ ಫೋಟೋ ತೆಗೆಯುವುದು ಹಾಗೂ ತೆಗೆಸಿಕೊಳ್ಳುವುದು, ಈಜುವ ವಿಡಿಯೋ, ರೀಲ್‌ ಮಾಡುವುದು, ಡೈವ್‌ ಮಾಡುವುದು ಇತ್ಯಾದಿಗಳನ್ನು ಮಾಡಬೇಡಿ. ಮಳೆಗಾಲದಲ್ಲಿ ಇವೆಲ್ಲ ಖಂಡಿತವಾಗಿಯೂ ಸೇಫ್‌ ಅಲ್ಲ.

trekking

ಚಾರಣ ಮಾಡುವಾಗ ಎಚ್ಚರ ವಹಿಸಿ

ಮಳೆಗಾಲದಲ್ಲಿ ಚಾರಣ ಮಾಡುತ್ತಿದ್ದರೂ ಎಚ್ಚರ ವಹಿಸಿ. ಹವಾಮಾನ ಪರೀಕ್ಷೆ ಮಾಡಿಕೊಳ್ಳಿ. ಮಳೆಯಿದ್ದರೆ, ಸೂಕ್ತ ಸಾಧನ ಸಲಕರಣೆಗಳು ನಿಮ್ಮ ಬಳಿ ಇರಲಿ. ಗೈಡ್‌ ಹೇಳಿದ ನಿಯಮಗಳನ್ನು ಪಾಲಿಸಿ. ಭೂಕುಸಿತ, ನೆರೆ ಇತ್ಯಾದಿಗಳ ಮುನ್ಸೂಚನೆಯಿದ್ದರೆ ಅಂತಹ ಸಂದರ್ಭ ಸುರಕ್ಷಿತ ಜಾಗಕ್ಕೆ ತೆರಳಿ. ಪರ್ವತ ಪ್ರದೇಶದಲ್ಲಿ ಕೆಲವೊಮ್ಮೆ ಯಾವ ಸುಳಿವೂ ಇಲ್ಲದೆ ಥಟ್ಟನೆ ಏನು ಬೇಕಾದರೂ ಸಂಭವಿಸಬಹುದು. ಅನವಶ್ಯಕ ಪರಿಸ್ಥಿತಿಗಳನ್ನು ನೀವೇ ಸೃಷ್ಟಿಸಬೇಡಿ.

ಸುರಕ್ಷಿತ ಜಾಗಕ್ಕೆ ತೆರಳಿ

ಜಲಪಾತಗಳು, ನದಿ ತೊರೆಯ ಸಮೀಪ ಹೋಗಿದ್ದರೆ, ಮಳೆ ಬರಲು ಆರಂಭವಾದರೆ, ಬರುವ ಸೂಚನೆಯಿದ್ದರೆ, ಅಲ್ಲೇ ನಿಂತಿರಬೇಡಿ. ಸುರಕ್ಷಿತ ಜಾಗಕ್ಕೆ ತೆರಳಿ. ನೀವು ನಿಂತ ಜಾಗದಲ್ಲಿ ಆಗಷ್ಟೇ ಮಳೆ ಬರಲು ಆರಂಭವಾದರೂ ಕೂಡಾ, ನದಿಯ ಹರಿವಿರುವ ಬೇರೆ ಜಾಗದಲ್ಲಿ ಅಗಾಧ ಮಳೆಯಾಗಿರಬಹುದು. ಒಡನೆಯೇ ನೆರೆ ಉಕ್ಕಿ ಹರಿದು ಬರಬಹುದು. ಮಿಂಚಿನ ವೇಗದಲ್ಲಿ ಇವು ಸಂಭವಿಸಬಹುದು. ಹಾಗಾಗಿ ಜಾಗರೂಕರಾಗಿ ಇರುವುದು ಅತ್ಯಂತ ಮುಖ್ಯ. ಫ್ಲ್ಯಾಶ್‌ ಫ್ಲಡ್‌ ಯಾವಾಗಲೂ ಮಿಂಚಿನ ವೇಗದಲ್ಲಿ ಸಂಭವಿಸುತ್ತದೆ.

Swimming in the lake

ಈಜಲು ಹೋಗಬೇಡಿ

ಮಳೆಗಾಲದಲ್ಲಿ ತೆರೆದ ನದಿ, ತೊರೆ, ಕೆರೆ, ಹೊಳೆಗಳಲ್ಲಿ ಈಜುವ ಸಾಹಸಕ್ಕೆ ಕೈ ಹಾಕಲೇಬೇಡಿ. ನಿಮಗೆಷ್ಟೇ ಈಜು ಗೊತ್ತಿದೆ ಎಂಬ ಧೈರ್ಯವಿದ್ದರೂ, ಮಳೆಗಾಲದಲ್ಲಿ ಇಂತ ನೀರಿನಲ್ಲಿ, ಶಕ್ತಿಯುತವಾದ ಸೆಳೆತ ಇರುವ ಸಂಭವವಿದ್ದು, ನಿಮ್ಮ ಯಾವ ನೈಪುಣ್ಯವೂ ಅದರ ಜೊತೆ ಸೋಲಬಹುದು. ಪ್ರಕೃತಿಗೆ ಸವಾಲೆಸೆಯುವುದು, ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ. ಸಮುದ್ರ ತೀರದ ವಿಚಾರದಲ್ಲಿಯೂ ಇದೇ ಮಾತನ್ನು ನೆನಪಿಡಿ.

ಅನುಭವಿಗಳ ಸಲಹೆ ಅಗತ್ಯ

ಮಳೆಗಾಲದಲ್ಲಿ, ನಮಗೆ ಈ ಜಾಗ ಗೊತ್ತಿದೆ ಎಂಬ ಭಂಡಧೈರ್ಯದಿಂದ ಯಾರೂ ಅಷ್ಟಾಗಿ ಹೋಗದ, ಕಾಡಿನ ನಡುವಿನ ಜಲಪಾತಕ್ಕೆ ಚಾರಣ ಹೋಗುವುದು, ಬೆಟ್ಟ ಹತ್ತುವುದು ಮಾಡಬೇಡಿ. ಅನುಭವಿಗಳ ಸಲಹೆ ಅತ್ಯಂತ ಅಗತ್ಯ. ದಾರಿ ಗೊತ್ತಿದೆ ಎಂದು ನಿಮ್ಮಷ್ಟಕ್ಕೆ ಈ ಸಾಹಸಕ್ಕೆ ಇಳಿಯಬೇಡಿ. ಮಳೆಗಾಲದಲ್ಲಿ ಏನು ಬೇಕಾದರೂ ಸಂಭವಿಸಬಹುದು.

ಹುಚ್ಚು ಸಾಹಸ ಮಾಡಬೇಡಿ

ಯುವಕರು ದಯವಿಟ್ಟು ಬಿಸಿರಕ್ತದ ಉತ್ಸಾಹದಲ್ಲಿ ಹುಚ್ಚು ಸಾಹಸ ಮಾಡಬೇಡಿ. ಮನೆಯವರ ಮಾತಿಗೆ ಬೆಲೆಕೊಡಿ. ಇಂತಹ ಪ್ರವಾಸಗಳಿಗೆ ಮನೆಯವರಿಗೆ ತಿಳಿಸದೆ ಗೆಳೆಯರ ಜೊತೆಗೆ ಹೋಗುವುದು, ಹುಚ್ಚುಗಟ್ಟುವುದು ಇತ್ಯಾದಿಗಳನ್ನು ಮಾಡಬೇಡಿ. ನಿಮ್ಮನ್ನು ಬೆಟ್ಟದಷ್ಟು ಪ್ರೀತಿಸುವ ಹೆತ್ತವರಿದ್ದಾರೆ, ಅವರಿಗೆ ನಿಮ್ಮ ಭವಿಷ್ಯದ ಬಗ್ಗೆ ಕನಸು ಕಂಗಳಿವೆ, ಅದರ ಹಿಂದೆ ಅವರ ಅಪಾರ ಶ್ರಮವೂ ಇದೆ ಎಂಬುದನನ್ನು ಸದಾ ನೆನೆಪಿಡಿ.

ಇದನ್ನೂ ಓದಿ: Travel Tips: ಪ್ರವಾಸಪ್ರಿಯರೇ, ನಿಮ್ಮ ವಿಮಾನ ಪ್ರಯಾಣ ಆರಾಮದಾಯಕವಾಗಬೇಕಿದ್ದರೆ ಈ ಟಿಪ್ಸ್‌‌ ಪಾಲಿಸಿ!

ತುರ್ತು ಕರೆಯ ಫೋನ್‌ ನಂಬರ್‌ ಗೊತ್ತಿರಲಿ

ಸದಾ ಸ್ಥಳೀಯ ತುರ್ತು ಕರೆಯ ಫೋನ್‌ ನಂಬರ್‌ ನಿಮಗೆ ಗೊತ್ತಿರಲಿ. ಯಾವುದೇ ಸಮಸ್ಯೆ ಬಂದಾಗಲೂ ತುರ್ತುಕರೆಯ ಮೊರೆ ಹೋಗಿ. ನಿಮ್ಮಷ್ಟಕ್ಕೆ ಏನೇನೋ ಊಹನೆಯಲ್ಲಿ ಕಷ್ಟದಲ್ಲಿರುವಾಗ ತಪ್ಪು ಹಾದಿ ಹಿಡಿದು ನಿಮ್ಮ ಪ್ರಾಣವನ್ನು ಅಪಾಯಕ್ಕೆ ಒಡ್ಡಿಕೊಳ್ಳಬೇಡಿ.

Continue Reading
Advertisement
Hathras Stampede
ದೇಶ2 mins ago

Hathras Stampede: ಹತ್ರಾಸ್‌ನಲ್ಲಿ ಕಾಲ್ತುಳಿತ ಹೇಗಾಯ್ತು? ಸತ್ಸಂಗ ನಡೆಸಿದ ಭೋಲೆ ಬಾಬಾ ಯಾರು? ಇಲ್ಲಿದೆ ಮಾಹಿತಿ

Krishna River Tragedy
ಕರ್ನಾಟಕ19 mins ago

Krishna River Tragedy: ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ಆರು ಮಂದಿ ನೀರುಪಾಲು, ಒಬ್ಬರ ಮೃತದೇಹ ಪತ್ತೆ

Stampedes in India
ದೇಶ27 mins ago

Stampedes in India: ದೇಶದಲ್ಲಿ ಈ ಹಿಂದೆಯೂ ನಡೆದಿವೆ ಭಾರೀ ಕಾಲ್ತುಳಿತ ದುರಂತ; ಇಲ್ಲಿದೆ ಲಿಸ್ಟ್‌

Agniveer
ರಾಜಕೀಯ34 mins ago

Agniveer: ಹುತಾತ್ಮ ʼಅಗ್ನಿವೀರʼನ ಕುಟುಂಬಕ್ಕೆ 1.08 ಕೋಟಿ ರೂ. ಪರಿಹಾರ; ರಾಹುಲ್‌ ಗಾಂಧಿ ಆರೋಪ ಠುಸ್‌!

Hathras Stampede
ಪ್ರಮುಖ ಸುದ್ದಿ37 mins ago

Hathras Stampede : ಹತ್ರಾಸ್​ ಸತ್ಸಂಗದಲ್ಲಿ ಕಾಲ್ತುಳಿತಕ್ಕೆ ಮೃತಪಟ್ಟವರ ಸಂಖ್ಯೆ 107 ಕ್ಕೆ ಏರಿಕೆ

KMF Milk Production
ಕರ್ನಾಟಕ51 mins ago

KMF Milk Production: ದಿನಕ್ಕೆ 1 ಕೋಟಿ ಲೀಟರ್ ಹಾಲು ಉತ್ಪಾದನೆ; ಕೆಎಂಎಫ್ ಸಾಧನೆ ಬಗ್ಗೆ ಸಿಎಂ ಮೆಚ್ಚುಗೆ‌

Narendra Modi
ದೇಶ1 hour ago

Narendra Modi: ನನ್ನ ದನಿಯೂ ಗಟ್ಟಿಯಿದೆ, ಸಂಕಲ್ಪವೂ; ಈ ಮೋದಿ ಯಾರಿಗೂ ಹೆದರಲ್ಲ, ಬಗ್ಗಲ್ಲ: ಸಂಸತ್‌ನಲ್ಲಿ ಪ್ರಧಾನಿ ಅಬ್ಬರ

Printed Handbags Fashion
ಫ್ಯಾಷನ್1 hour ago

Printed Handbags Fashion: ಉದ್ಯೋಗಸ್ಥ ಮಹಿಳೆಯರನ್ನು ಸೆಳೆಯುತ್ತಿರುವ ಪ್ರಿಂಟೆಡ್‌ ಹ್ಯಾಂಡ್‌ ಬ್ಯಾಗ್ಸ್

Bomb Blast
ಕರ್ನಾಟಕ1 hour ago

Bomb Blast: ಜೋಯಿಡಾದಲ್ಲಿ ಪತ್ರಕರ್ತರು ಸಾಗುತ್ತಿದ್ದ ಕಾರಿನಡಿ ನಾಡ ಬಾಂಬ್ ಸ್ಫೋಟ

Pune Porsche Crash
ಪ್ರಮುಖ ಸುದ್ದಿ2 hours ago

Pune Porsche Crash : ಪೋರ್ಶೆ ಕಾರು ಗುದ್ದಿಸಿ ಇಬ್ಬರ ಸಾವಿಗೆ ಕಾರಣನಾದ ಬಾಲಕನ ಅಪ್ಪ, ಅಜ್ಜನಿಗೆ ಜಾಮೀನು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ1 day ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌