ನಾಡದೇವಿ ಚಿತ್ರ | ಹೊಸ ವರ್ಣಚಿತ್ರಕ್ಕೆ ಗದಗ ಕಲಾವಿದರ ವಿರೋಧ; ಸಂಕೇತಗಳು ಸ್ಪಷ್ಟವಿರಲಿಲ್ಲ ಎಂದ ಸರ್ಕಾರದ ಸಮಿತಿ - Vistara News

ಕಲೆ/ಸಾಹಿತ್ಯ

ನಾಡದೇವಿ ಚಿತ್ರ | ಹೊಸ ವರ್ಣಚಿತ್ರಕ್ಕೆ ಗದಗ ಕಲಾವಿದರ ವಿರೋಧ; ಸಂಕೇತಗಳು ಸ್ಪಷ್ಟವಿರಲಿಲ್ಲ ಎಂದ ಸರ್ಕಾರದ ಸಮಿತಿ

ಏಕೀಕರಣ ಸಂದರ್ಭದಲ್ಲಿ ಸಿ.ಎನ್‌. ಪಾಟೀಲರು ನಾಡದೇವಿ ಚಿತ್ರ ರಚನೆ ಮಾಡಿದ್ದರು, ನಂತರ ಬಿ.ಕೆ. ಎಸ್‌. ವರ್ಮಾ ಅವರು ರಚಿಸಿದ್ದ ಚಿತ್ರ ಹೆಚ್ಚು ಪ್ರಸಿದ್ಧಿ ಪಡೆದಿತ್ತು.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಾಡದೇವಿಯ ಹೊಸ ವರ್ಣಚಿತ್ರವನ್ನು ಅಧಿಕೃತಗೊಳಿಸಲು ಮುಂದಾಗಿರುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಗದಗದ ಕಲಾವಿದರು ವಿರೋಧ ವ್ಯಕ್ತಪಡಿಸಿದ್ದು, 1953ರಲ್ಲಿ ಸಿ.ಎನ್‌. ಪಾಟೀಲರು ರಚಿಸಿದ ಚಿತ್ರವನ್ನೇ ಆಯ್ಕೆ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ. ಈ ವಿರೋಧಕ್ಕೆ, ಹೊಸ ವರ್ಣಚಿತ್ರ ರಚನೆಯ ಸಮಿತಿ ಅಧ್ಯಕ್ಷರಾಗಿದ್ದ ಡಿ. ಮಹೇಂದ್ರ ಸ್ಪಷ್ಟನೆ ನೀಡಿದ್ದಾರೆ.

ಗದಗದ ಜಕ್ಕಲಿ ಗ್ರಾಮದ ಅಂದಾನಪ್ಪ ದೊಡ್ಡಮೇಟಿ ಅವರ ಕಲ್ಪನೆಯ ಆಧಾರದಲ್ಲಿ ಕಲಾವಿದ ಸಿ.ಎನ್‌. ಪಾಟೀಲರು ಚಿತ್ರ ರಚಿಸಿದ್ದರು. ಏಕೀಕರಣದ ಸಂದರ್ಭದಲ್ಲಿ ಈ ಚಿತ್ರವನ್ನು ರಚಿಸಲಾಗಿದ್ದು, ಕರ್ನಾಟಕದ ಅನೇಕ ಸಾಂಸ್ಕೃತಿಕ ವೈಭವವನ್ನೂ ಒಳಗೊಂಡಿದೆ. ಹಾಗಾಗಿ ಈ ಚಿತ್ರವನ್ನೇ ಅಧಿಕೃತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಸ್ಪಷ್ಟನೆ ನೀಡಿರುಬ ಡಿ. ಮಹೇಂದ್ರ, ನಾಡದೇವತೆ ಚಿತ್ರ ಕುರಿತಂತೆ ಗದಗ ಜಿಲ್ಲೆಯ ಸಾಹಿತಿ, ಕಲಾವಿದರು ಆಕ್ಷೇಪ ವ್ಯಕ್ತವಾಗಿರುವುದು ಆಶ್ಚರ್ಯ. ಹಿಂದೆ ನಾಡಗೀತೆ ಆಯ್ಕೆಯ ಸಂದರ್ಭದಲ್ಲೂ, ನಾಡಗೀತೆ ಹಾಡಿನ ಧಾಟಿ ಆಯ್ಕೆ ಸಂದರ್ಭದಲ್ಲೂ ಅಪಸ್ವರಗಳು ವ್ಯಕ್ತವಾಗಿದ್ದವು. ೧೯೫೩ರಲ್ಲಿ ಗದಗಿನ ಕಲಾವಿದ ಸಿ.ಎಸ್. ಪಾಟೀಲರು ಕಲಾಕೃತಿ ರಚಿಸಿದ್ದಾರೆ. ಈ ಚಿತ್ರದಲ್ಲಿ ಹಲವು ಅಂಶಗಳು ಕನ್ನಡ ನಾಡು, ಸಂಸ್ಕೃತಿಗೆ ತಾಳೆಯಾಗುತ್ತಿಲ್ಲ. ಕಾರಣ ಈ ಚಿತ್ರ ಸಾಹಿತ್ಯ ಹಿನ್ನೆಲೆಯವರ ಕಲ್ಪನೆಗಳಿಗೆ ರೂಪು ನೀಡಿದ್ದಾಗಿದ್ದು, ಕಲಾವಿದನ ಪ್ರತಿಭೆ, ಕ್ರಿಯಾಶೀಲತೆಗಳಿಗೆ ಅವಕಾಶ ಇಲ್ಲವಾಗಿರುವುದು ಕಂಡುಬರುತ್ತದೆ.

೧) ಮೊದಲಿಗೆ ಕಿರೀಟವೇ ಉತ್ತರ ಭಾರತದ ಶೈಲಿಯಲ್ಲಿದೆ, ಪಾರ್ಸಿ ಪೌರಾಣಿಕ ನಾಟಕಗಳ ಹೋಲುತ್ತದೆ. ಮುಕುಟವು ಕನ್ನಡ ಸಾಂಸ್ಕೃತಿಕ ಕಲಾ ವೈಭವವನ್ನು ಎತ್ತಿ ತೋರುತ್ತಿಲ್ಲ,
೨) ಬಿಳಿಯ ಬಣ್ಣದ ಸೀರೆ ಸಂಕೇತವೂ ಸ್ಟಷ್ಟತೆಯಿಲ್ಲ, ದಕ್ಷಿಣ ಕರ್ನಾಟಕ ಹಾಗೂ ಕೊಡಗು ಜಿಲ್ಲೆಗಳಲ್ಲಿ ಬಿಳಿಯ ಬಣ್ಣದ ರೇಷ್ಮೆಯಂಚಿನ ಸೀರೆಯನ್ನು ವಧುವನ್ನು ಧಾರೆಯೆರೆಯುವ ಸಂದರ್ಭದಲ್ಲಿ ಉಡಿಸುವುದು ಸಾಮಾನ್ಯ,
೩) ಅಲ್ಲದೆ ನಾಡದೇವಿಯ ಶಾರೀರ ಅಂಗಾಗಗಳು ಪ್ರಬುದ್ದತೆ ಇಲ್ಲ, ಅತ್ತ ಯೂರೋಪಿಯನ್ನಿನ ಶಾರೀರ ಶಾಸ್ರ್ರ (ಅನಾಟಮಿ) ಆಧಾರಿಸಿಯೂ ಇಲ್ಲ, ಇತ್ತ ನಮ್ಮದೆ ಶಿಲ್ಪಶಾಸ್ತ್ರ ಶಾರೀರ ಪ್ರಮಾಣ ಬದ್ಧಗಳನ್ನು ಅನುಸರಿಸಿಲ್ಲ, (ವಿಚಿತ್ರವೆಂದರೆ ಅಪಸ್ವರ ಎತ್ತುತ್ತಿರುವ ನಮ್ಮ ಕಲಾವಿದರಿಗೆ ಇವೆಲ್ಲವೂ ಏಕೆ ಕಂಡಿಲ್ಲ ಎಂಬುದೇ ಆಶ್ಚರ್ಯಕರ)
೩) ಕೈಗಳ ರಚನೆಯಲ್ಲಿ ಒಂದು ಕೆಳಗೆ ಇನ್ನೊಂದು ಕೈ ಮೇಲೆ ಇದೆ. ಸಾಂಪ್ರದಾಯಿಕ ಚಿತ್ರರಚನಾ ತಂತ್ರವಾಗಲಿ ಕೌಶಲ್ಯವಾಗಲಿ ಅನುಸರಿಸಿಲ್ಲ.
೪)ಇನ್ನು ಬಹುಮುಖ್ಯ ಸಂಗತಿಯೇ ನಾಡದೇವಿಯ ಕಾಲುಗಳು ಮರೆಯಾಗಿರುವುದು.
೫) ಹಾಗೆ ಕರ್ನಾಟಕ ನಕಾಶೆಯ ತಳಕ್ಕೆ (ಕೇರಳ ರಾಜ್ಯದ ಬಳಿ) ಸಮುದ್ರ ಅಲೆಗಳ ರಚನೆಯಿರುವುದು ವಾಸ್ತವಿಕತೆಗೆ ದೂರವಾಗಿದೆ. ಹಾಗೂ ಕೇರಳ ಭಾಗವನ್ನು ನಾಡದೇವಿ ಒಳಗೊಳ್ಳುವುದು ಆ ರಾಜ್ಯದ ಆಕ್ಷೇಪಣೆಗೆ ಕಾರಣವಾಗಬಹುದು.
೬) ಕರ್ನಾಟಕ ನಕಾಶೆಯೂ ಸರಿಪ್ರಮಾಣದಲ್ಲಿ ಚಿತ್ರಿತವಾಗಿಲ್ಲ,
೭) ಇನ್ನು ಪುಸ್ತಕ ಹಿಡಿದಿರುವುದು ತಾಳೆಯ ಗರಿಯಾಗಿದೆ, ಆಧುನಿಕ ಪುಸ್ತಕ ರಚನೆಕ್ರಮದಲ್ಲಿಯೂ ವ್ಯತ್ಯಾಸವಿದೆ.
೮) ಇನ್ನು ಬಹುಮುಖ್ಯ ಸಂಗತಿಯೆಂದರೆ ನಾವುಗಳು ಭಾವನಾತ್ಮಕವಾಗಿ ಒಪ್ಪಿರುವ ಕನ್ನಡದ ಧ್ವಜವೇ ಈ ಚಿತ್ರದಲ್ಲಿ ಇಲ್ಲ.
೯) ಹಾಗೆ ನಾಡದೇವಿಯ ಸುತ್ತಲಿನ ಚಿತ್ರಣಗಳು ಬಹಳ ಸಂಖ್ಯೆಯಲ್ಲಿದ್ದು ಶಾಲಾ ಮಕ್ಕಳು ಕಲಾಸಕ್ತರು ನಾಡದೇವಿ ಪ್ರತಿಮೆಯನ್ನು ಪ್ರತಿನಕಲಿಸಲು ಮತ್ತು ಇಂದಿನ ಡಿಜಿಟಲ್‌ ಯುಗಕ್ಕೆ ಮುದ್ರಣಕ್ಕೆ ಬಳಸುವಲ್ಲಿ ಕಷ್ಟಕರವಾಗಿದೆ.

ಈ ಎಲ್ಲ ಅಂಶಗಳನ್ನು ಸಮಿತಿ ಗಮನಿಸಿಯೇ ನಾಡದೇವಿಗೆ ಅಗತ್ಯವಿರುವ ಎಲ್ಲ ಕಲಾರಚನೆ ಸೂಕ್ಷಗಳನ್ನು ಗಮನದಲ್ಲಿರಿಸಿ ಅಧ್ಯಯನ ನಡೆಸಿ ರಚಿಸಲಾಗಿದೆ. ಮತ್ತು ನಾಡಿನ ಹಿರಿಯ ಕಲಾವಿದ ಬಿ.ಕೆ.ಎಸ್.‌ ವರ್ಮಾ ಅವರನ್ನೂ ಒಳಗೊಂಡು ಹಲವು ಕಲಾವಿದರ ಸಂಪರ್ಕಿಸಿ, ಚಿತ್ರ ರಚನೆಗೆ ಮುಂದಾಗಿದ್ದೇವೆ. ಈ ನಾಡದೇವಿಯ ವಸ್ತ್ರಾಭರಣವನ್ನೇಲ್ಲವೂ ಗದುಗಿನವರೆ ಆದ ಹಾಗೂ ಈ ವಿಷಯದಲ್ಲಿ ಸಾಕಷ್ಟು ಅಧ್ಯಯನ ಮಾಡಿ, ಹಲವಾರು ಸಂಶೋಧನಾ ಗ್ರಂಥಗಳ ಬರೆದಿರುವ ಡಾ, ಚೂಡಾಮಣಿ ನಂದಗೋಪಾಲ್‌ ಇವರೆ ಮುತುರ್ವಜಿಯಲ್ಲಿ ನಿರೂಪಿಸಿದೆ ಎಂದು ಮಹೇಂದ್ರ ಹೇಳಿದ್ದಾರೆ.

ಇದನ್ನೂ ಓದಿ | ಕರ್ನಾಟಕ ಮಾತೆಯ ಹೊಸ ಅಧಿಕೃತ ಚಿತ್ರ ಇದು: ಎಲ್ಲ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ಬಳಕೆ ಕಡ್ಡಾಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮೈಸೂರು

Mysore News: ಮೈಸೂರಿನಲ್ಲಿ ಗಾಯಕ ಎಚ್ ಎಸ್ ನಾಗರಾಜ್ ಗೆ ಶ್ರೀ ವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿ ಪ್ರದಾನ

Mysore News: ಕರ್ನಾಟಕ ಶಾಸ್ತ್ರೀಯ ಸಂಗೀತ ಒಕ್ಕೂಟ ಟ್ರಸ್ಟ್ ವತಿಯಿಂದ ಮೈಸೂರಿನ ಶ್ರೀವಾಸುದೇವಾಚಾರ್ಯ ಭವನದಲ್ಲಿ ಮೈಸೂರು ವಾಸುದೇವಾಚಾರ್ಯ ಸಂಸ್ಮರಣಾ ಸಂಗೀತ ಉತ್ಸವದ ವಿದ್ವತ್ ಸಭೆ ಜರುಗಿತು. ಈ ವೇಳೆ ವಿದ್ವಾನ್ ಶೃಂಗೇರಿ ನಾಗರಾಜ್ ರಿಗೆ ‘ಶ್ರೀವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿ’, ವಿದ್ವಾನ್ ಎಚ್.ಕೆ.ನರಸಿಂಹಮೂರ್ತಿ ರಿಗೆ ‘ಶ್ರೇಷ್ಠ ಜೀವಮಾನ ಸಾಧನೆ ಪ್ರಶಸ್ತಿ’, ವಿದುಷಿ ಪುಷ್ಪಾ ಶ್ರೀನಿವಾಸ್ ರಿಗೆ ‘ಕರ್ನಾಟಕ ಸಂಗೀತಾಚಾರ್ಯ ಪ್ರಶಸ್ತಿ’ ಯನ್ನು ನೀಡಿ, ಗೌರವಿಸಲಾಯಿತು.

VISTARANEWS.COM


on

Mysore Vasudevacharya Memorial Music utsav Vidwat Sabha and award ceremony
Koo

ಮೈಸೂರು: ಕರ್ನಾಟಕ ಶಾಸ್ತ್ರೀಯ ಸಂಗೀತಕ್ಕೆ ಮಹಾಮಹಿಮರಾದ ಮೈಸೂರು ವಾಸುದೇವಾಚಾರ್ಯರ ಕೊಡುಗೆ ಅನನ್ಯವಾಗಿದೆ ಎಂದು ಶಿವಮೊಗ್ಗದ ಖ್ಯಾತ ಗಾಯಕ ವಿದ್ವಾನ್ ಶೃಂಗೇರಿ ಎಚ್.ಎಸ್. ನಾಗರಾಜ್ (Mysore News) ಹೇಳಿದರು.

ಕರ್ನಾಟಕ ಶಾಸ್ತ್ರೀಯ ಸಂಗೀತ ಒಕ್ಕೂಟ ಟ್ರಸ್ಟ್ ವತಿಯಿಂದ ಮೈಸೂರಿನ ಶ್ರೀವಾಸುದೇವಾಚಾರ್ಯ ಭವನದಲ್ಲಿ ಹಮ್ಮಿಕೊಂಡಿದ್ದ ಮೈಸೂರು ವಾಸುದೇವಾಚಾರ್ಯ ಸಂಸ್ಮರಣಾ ಸಂಗೀತ ಉತ್ಸವದ ವಿದ್ವತ್ ಸಭೆಯಲ್ಲಿ ಅವರು ಪ್ರತಿಷ್ಠಿತ ‘ಶ್ರೀವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದರು.

ಇದನ್ನೂ ಓದಿ: Traffic Violation : ಪೆಟ್ರೋಲ್ ಖಾಲಿಯಾಗಿ ರಸ್ತೆಯಲ್ಲಿ ವಾಹನ ನಿಂತುಬಿಟ್ಟರೆ ಚಾಲಕನ ಮೇಲೆ ಕೇಸ್!

ಮೈಸೂರು ವಾಸುದೇವಾಚಾರ್ಯ ಮನೆ ಮೈಸೂರಿನಲ್ಲಿ ಸಂಗೀತಕ್ಕೆ ಮಹೋನ್ನತ ವೇದಿಕೆಯಾಗಿ ರೂಪುಗೊಂಡಿದೆ. ಅಲ್ಲಿ ಹಾಡಿದವರ ಧನ್ಯತೆಯೇ ವಿಶೇಷವಾಗಿದ್ದು ಎಂದು ಅವರು ಸ್ಮರಿಸಿದರು.

ಪ್ರಶಸ್ತಿ ಪ್ರದಾನ

ವಿದ್ವಾನ್ ಶೃಂಗೇರಿ ನಾಗರಾಜ್ ಅವರಿಗೆ ‘ಶ್ರೀವಾಸುದೇವಾಚಾರ್ಯ ಸಂಸ್ಮರಣಾ ಪ್ರಶಸ್ತಿ’, ವಿದ್ವಾನ್ ಎಚ್.ಕೆ. ನರಸಿಂಹಮೂರ್ತಿ ಅವರಿಗೆ ‘ಶ್ರೇಷ್ಠ ಜೀವಮಾನ ಸಾಧನೆ ಪ್ರಶಸ್ತಿ’, ವಿದುಷಿ ಪುಷ್ಪಾ ಶ್ರೀನಿವಾಸ್ ಅವರಿಗೆ ‘ಕರ್ನಾಟಕ ಸಂಗೀತಾಚಾರ್ಯ ಪ್ರಶಸ್ತಿ’ ಯನ್ನು ನೀಡಿ, ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಡಾ. ರಮಾ ಬೆಣ್ಣೂರು ಮಾತನಾಡಿ, ವಯೋಲಿನ್ ವಿದ್ವಾಂಸ ಎಚ್.ಕೆ. ನರಸಿಂಹ ಮೂರ್ತಿ ಅವರು ಕಲಾ ಲೋಕಕ್ಕೆ ಅಹರ್ನಿಷಿ ಸೇವೆ ಸಲ್ಲಿಸಿದ್ದಾರೆ. ಮೈಸೂರಿನಲ್ಲಿ ಯುವಕರು ವಯಲಿನ್ ಹಿಡಿದು ಸಾಗುತ್ತಿದ್ದರೆ ಅವರು ಎಚ್.ಕೆ. ಎನ್. ಸ್ಟೂಡೆಂಟ್ ಎಂದು ಧೈರ್ಯವಾಗಿ ಹೇಳಬಹುದು. ಜೀವಮಾನದಲ್ಲಿ ಅವರು ಬಹುತೇಕ ಸಮಯವನ್ನು ಈ ವಾದ್ಯದ ನುಡಿಸಾಣಿಕೆ ಮತ್ತು ಪಾಠಕ್ಕಾಗಿ ಮೀಸಲಿಟ್ಟಿದ್ದಾರೆ. ಅವರಿಗೆ ಜೀವಮಾನದ ಪ್ರಶಸ್ತಿ ನೀಡಿ ಗೌರವಿಸಿರುವುದು ಮಹತ್ತರ ಕಾರ್ಯ ಎಂದು ಶ್ಲಾಘಿಸಿದರು.

ಇದನ್ನೂ ಓದಿ: Success Story: ಎರಡೇ ತಿಂಗಳಲ್ಲಿ ಆನ್ ಲೈನ್ ಮೂಲಕ 1,800 ಕೆ.ಜಿ. ಮಾವು ಮಾರಿದ ರಾಯಚೂರಿನ ರೈತ!

ಖ್ಯಾತ ಸಂಗೀತ ವಿದ್ವಾಂಸ ಮತ್ತು ಟ್ರಸ್ಟಿ ಡಾ. ರಾ. ನಂದಕುಮಾರ್ ಮಾತನಾಡಿ, ಕನ್ನಡ ನಾಡಿನ ಖ್ಯಾತ, ವಿಖ್ಯಾತ ಸಂಗೀತ ವಿದ್ವಾಂಸರನ್ನು ಒಳಗೊಂಡ ಕರ್ನಾಟಕ ಶಾಸ್ತ್ರೀಯ ಸಂಗೀತ ಒಕ್ಕೂಟ ಟ್ರಸ್ಟ್ (ಕೆಸಿಎಂಸಿ) ಕಳೆದ ಮೂರು ವರ್ಷಗಳಿಂದ ಕಲಾಕ್ಷೇತ್ರದ ಅಭ್ಯುದಯಕ್ಕೆ ಸೇವೆ ಸಲ್ಲಿಸುತ್ತಿದೆ. ಮುಂದೆ ನೂರಾರು ಕಾರ್ಯಾಗಾರ, ಪ್ರಾತ್ಯಕ್ಷಿಕೆ ಹಮ್ಮಿಕೊಂಡು ಯುವ ಸಂಗೀತಗಾರರ ಏಳಿಗೆಗೆ ಶ್ರಮಿಸಲು ಸಂಕಲ್ಪ ಮಾಡಿದೆ. ಸಂಗೀತ ಲೋಕದ ದಿಗ್ಗಜರನ್ನು ಗುರುತಿಸಿ, ಗೌರವಿಸುವ ಸೇವೆಯನ್ನೂ ಟ್ರಸ್ಟ್ ಮಾಡುತ್ತಿದೆ. ಒಟ್ಟಾರೆ ಕರ್ನಾಟಕ ಶಾಸ್ತ್ರೀಯ ಸಂಗೀತದ ಮಹತ್ವ ಕಾಪಾಡಲು ನಮ್ಮ ಕೆಸಿಎಂಸಿ ಟ್ರಸ್ಟ್ ದಿಟ್ಟ ಹೆಜ್ಜೆ ಇಟ್ಟಿದೆ ಎಂದರು.

ಹಿರಿಯ ವೀಣಾ ವಿದ್ವಾಂಸ ವಿದ್ವಾನ್ ಡಾ. ರಾ. ವಿಶ್ವೇಶ್ವರನ್ ಮಾತನಾಡಿ, ಸಂಗೀತ ಕ್ಷೇತ್ರದಲ್ಲಿ ಸಿದ್ಧಿ ಪಡೆದ ಅನೇಕರು ಪ್ರಸಿದ್ಧಿಗೆ ಬರಲೇ ಇಲ್ಲ. ಅವರ ಸಾಲಿನಲ್ಲಿ ಮೈಸೂರು ವಾಸುದೇವಾಚಾರ್ಯರೂ ಒಬ್ಬರು. ಮೈಸೂರಿನಲ್ಲಿ ಅವರಿಗೆ ರಾಜಾಶ್ರಯ ಮಾತ್ರ ಇತ್ತು. ಆದರೆ ರಾಷ್ಟ್ರಮಟ್ಟದ ಪ್ರಶಸ್ತಿ, ಪುರಸ್ಕಾರಗಳು ಇನ್ನಷ್ಟು ಮಾನ್ಯವಾಗಬೇಕಿತ್ತು. ಇಂದಿನ ಪೀಳಿಗೆ ಇಂಥ ಮಹಾನ್ ಕಲಾವಿದರ ರಚನೆಗಳನ್ನು ಶ್ರದ್ಧೆಯಿಂದ ಕಲಿತು ಹಾಡಬೇಕು. ಕೆಸಿಎಂಸಿ ಟ್ರಸ್ಟ್ ಈ ನಿಟ್ಟಿನಲ್ಲಿ ಸಾವಿರಾರು ಕೆಲಸಗಳನ್ನು ಮಾಡಲಿ ಎಂದು ಹಾರೈಸುವೆ ಎಂದು ತಿಳಿಸಿದರು.

ರೇವತಿ ಕಾಮತ್ ಚಾರಿಟಬಲ್ ಟ್ರಸ್ಟ್ ಉದ್ಘಾಟನೆ

ಇದೇ ವೇಳೆ ಖ್ಯಾತ ವೀಣಾ ವಿದುಷಿ ರೇವತಿ ಕಾಮತ್ ಅವರ ‘ರೇವತಿ ಕಾಮತ್ ಚಾರಿಟಬಲ್ ಟ್ರಸ್ಟ್’ ಅನ್ನು ವಿದ್ವಾನ್ ಆರ್. ವಿಶ್ವೇಶ್ವರನ್ ಅವರು ಉದ್ಘಾಟಿಸಿದರು. ಪರಿಸರ ಸಂರಕ್ಷಣೆ, ಗ್ರಾಮೀಣ ಮಕ್ಕಳ ಶಿಕ್ಷಣ ಅಭಿವೃದ್ಧಿ, ಕರ್ನಾಟಕ ಶಾಸ್ತ್ರೀಯ ಸಂಗೀತ ಪೋಷಣೆ ಮತ್ತು ಸಂವರ್ಧನೆಗೆ ಟ್ರಸ್ಟ್ ಸಂಕಲ್ಪ ಮಾಡಿದೆ ಎಂದು ರೇವತಿ ಕಾಮತ್ ತಿಳಿಸಿದರು.

ಈ ಸಂದರ್ಭದಲ್ಲಿ ಕಲಾಕ್ಷೇತ್ರದ ಹಿರಿಯ ಚೇತನ ವಿದ್ವಾನ್ ಡಾ.ರಾ. ವಿಶ್ವೇಶ್ವರನ್, ಲೇಖಕ ಮತ್ತು ಪತ್ರಕರ್ತ ಎ.ಆರ್. ರಘುರಾಮ, ಡಾ.ರಮಾ ಬೆಣ್ಣೂರು, ಭ್ರಮರಾ ಟ್ರಸ್ಟ್‌ನ ಸಂಸ್ಥಾಪಕಿ ಮಾಧುರಿ ತಾತಾಚಾರಿ, ವಿದ್ವಾನ್ ಡಾ.ರಾ.ಸ.ನಂದಕುಮಾರ್ ಮತ್ತು ವೀಣಾ ವಿದ್ವಾಂಸ ಪ್ರಶಾಂತ ಅಯ್ಯಂಗಾರ್, ವಿದ್ವಾನ್ ಆನೂರು ಅನಂತ ಕೃಷ್ಣ ಶರ್ಮ (ಶಿವು) ಮತ್ತು ಪುಸ್ತಕಂ ರಮಾ ಉಪಸ್ಥಿತರಿದ್ದರು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ; ಬಂಗಾರದ ಮಾರುಕಟ್ಟೆಯಲ್ಲಿ ಇಂದಿನ ಧಾರಣೆ ಹೀಗಿದೆ

ಇದಕ್ಕೂ ಮುನ್ನ ವಾಸುದೇವಾಚಾರ್ಯರ ಕೃತಿಗಳ ಗೋಷ್ಠಿ ಗಾಯನ, ವಿದುಷಿ ಮೈಸೂರು ರಾಜಲಕ್ಷ್ಮೀ ಅವರ ವೀಣಾವಾದನ ನೂರಾರು ಪ್ರೇಕ್ಷಕರನ್ನು ರಂಜಿಸಿತು.

Continue Reading

ಪ್ರಮುಖ ಸುದ್ದಿ

ಗುರು ಸಕಲಮಾ ಆತ್ಮಕಥನ ʻಹಿಮಾಲಯ ಋಷಿಗಳ ದಿವ್ಯ ಸಂದೇಶಗಳುʼ ಮುಖಪುಟ ಅನಾವರಣ

ಅಧ್ಯಾತ್ಮದ ಹಾದಿ ಕಷ್ಟದ್ದು, ನಮಗಲ್ಲ ಎಂದು ಸಾಮಾನ್ಯರಲ್ಲಿ ತಪ್ಪು ತಿಳುವಳಿಕೆ ಇದೆ. ಗೃಹಸ್ಥ ಆಶ್ರಮದಲ್ಲಿದ್ದುಕೊಂಡೇ ಅಧ್ಯಾತ್ಮದ ಹಾದಿಯಲ್ಲಿ ಪಯಣಿಸಬಹುದು. ತಂತ್ರಮಾರ್ಗದ ಬಗೆಗೆ ಇಂದು ಸಮಾಜದಲ್ಲಿ ಗೊಂದಲಗಳಿವೆ, ತಪ್ಪು ತಿಳುವಳಿಕೆಗಳೂ ಇವೆ ಎಂದು ಗುರು ಸಕಲಮಾ ನುಡಿದರು. ʻಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಸಕಾಲಿಕ ಮತ್ತು ಕಾಲಾತೀತʼ ಕೃತಿಯ ಮುಖಪುಟವನ್ನು ಸಾಹಿತಿ ಜೋಗಿ ಅನಾವರಣಗೊಳಿಸಿದರು.

VISTARANEWS.COM


on

ಹಿಮಾಲಯ book cover page launch 2
Koo

ಹಿಮಾಲಯದ ಗುರು ಪರಂಪರೆ ಅವಿನಾಶಿ: ಗುರು ಸಕಲಮಾ

ಬೆಂಗಳೂರು: ಅಧ್ಯಾತ್ಮದ (Spirituality) ಬಗ್ಗೆ ಸಮಾಜದಲ್ಲಿ ಇರುವ ತಪ್ಪು ತಿಳುವಳಿಕೆಗಳು, ಭಯಗಳಿಂದಾಗಿ ಮೊದಲಿನಷ್ಟು ಮೌಲ್ಯಯುತವಾಗಿ ಅದನ್ನು ನಮಗೆ ಉಳಿಸಿಕೊಳ್ಳಲಾಗಿಲ್ಲ. ಆದರೆ, ನಾವು ಅದನ್ನು ಕಳೆದುಕೊಂಡಿಲ್ಲ. ಯಾರು ಏನೇ ಪ್ರಯತ್ನ ಮಾಡಿದರೂ ಇದನ್ನು ನಾಶ ಮಾಡಲು ಸಾಧ್ಯವಿಲ್ಲ. ಈ ನಮ್ಮ ಸಂಸ್ಕೃತಿ ಅವಿನಾಶಿ ಎಂದು ಹಿಮಾಲಯ ಯೋಗಿ ಸ್ವಾಮಿ ರಾಮ (Swami Rama) ಹಾಗೂ ಬಹುಶ್ರುತ ವಿದ್ವಾಂಸ ಡಾ. ಆರ್‌ ಸತ್ಯನಾರಾಯಣ (Dr. R Satyanarayana) ಅವರ ನೇರ ಶಿಷ್ಯೆ, ಶ್ರೀವಿದ್ಯಾ ಗುರು ಸಕಲಮಾ (Guru Sakalamaa) ಅವರು ಹೇಳಿದ್ದಾರೆ.

ಅವರು ತಮ್ಮ, ʻಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಸಕಾಲಿಕ ಮತ್ತು ಕಾಲಾತೀತʼ ಪುಸ್ತಕದ ಇಂಗ್ಲೀಷ್‌ ಹಾಗೂ ಕನ್ನಡ ಆತ್ಮಚರಿತ್ರೆಯ ಮುಖಪುಟ ಅನಾವರಣ ಸಮಾರಂಭದಲ್ಲಿ ಮಾತನಾಡುತ್ತಿದ್ದರು.

ಅಧ್ಯಾತ್ಮದ ಹಾದಿ ಕಷ್ಟದ್ದು, ನಮಗಲ್ಲ ಎಂದು ಸಾಮಾನ್ಯರಲ್ಲಿ ತಪ್ಪು ತಿಳುವಳಿಕೆ ಇದೆ. ಆದರೆ ಇದಕ್ಕೆ ಇನ್ನೊಂದು ಮುಖವಿದೆ ಅದು ತಂತ್ರಶಾಸ್ತ್ರ. ತಂತ್ರ ನಿಮ್ಮನ್ನು ನೀವು ಹೇಗಿದ್ದೇವೋ ಹಾಗೆಯ ಸ್ವೀಕರಿಸುತ್ತದೆ. ಗೃಹಸ್ಥ ಆಶ್ರಮದಲ್ಲಿದ್ದುಕೊಂಡೇ ನೀವು ಅಧ್ಯಾತ್ಮ ದ ಹಾದಿಯಲ್ಲಿ ಪಯಣಿಸಬಹುದು. ಈ ತಂತ್ರದ ಬಗೆಗೆ ಇಂದು ಸಮಾಜದಲ್ಲಿ ಗೊಂದಲಗಳಿವೆ, ತಪ್ಪು ತಿಳುವಳಿಕೆಗಳೂ ಇವೆ. ಇದು ಇವತ್ತಿನ ಸಮಸ್ಯೆಯಲ್ಲ. ಶಂಕರಾಚಾರ್ಯರ ಕಾಲದಿಂದಲೂ ಇತ್ತು. ಅವರು ಇದಕ್ಕೆ ಅಂಟಿದ ಜಾಡ್ಯಗಳನ್ನು ಕಿತ್ತೆಸೆದು ಅದನ್ನು ಪ್ರವರ್ಧಮಾನಕ್ಕೆ ತರಲು ಶ್ರಮಿಸಿದರು ಎಂದರು.

ನನ್ನಮ್ಮ ನನಗೆ ಋಷಿಮುನಿಗಳ ಕತೆಗಳನ್ನೆಲ್ಲ ಹೇಳುವಾಗ ಈ ಕತೆಗಳ ಋಷಿಮುನಿಗಳಿಗೂ ನಮಗೂ ಸಂಬಂಧವಿಲ್ಲ, ಅವರು ಯಾವುದೋ ಲೋಕದಲ್ಲಿ ಕೂತಿರುವವರು. ನನಗೂ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದೇ ನಾನಂದುಕೊಂಡಿದ್ದೆ. ಆದರೆ, ಶ್ರದ್ಧೆಯಿಂದ ನೀವು ಈ ಲೋಕಕ್ಕೆ ಬಂದರೆ, ಇವು ಕತೆಗಳಲ್ಲ, ಅಧ್ಯಾತ್ಮಿಕ ಸತ್ಯಗಳು ಎಂಬುದು ನಿಮಗೆ ಗೋಚರವಾಗಬಹುದು. ನೀವು ಬಯಸಿದಲ್ಲಿ, ಈ ಪುಸ್ತಕದಲ್ಲಿ ಬಂದಿರುವ ಋಷಿಮುನಿಗಳನ್ನೆಲ್ಲ ನೀವು ಭೇಟಿ ಮಾಡಬಹುದು. ನಿಮ್ಮ ಕನಸಿನಲ್ಲೂ ಅವರು ಬಂದು ನಿಮ್ಮ ಜೊತೆ ಮಾತನಾಡಬಹುದು. ಪಕ್ಕದಲ್ಲೇ ಗೆಳೆಯನ ರೀತಿಯಲ್ಲಿ ಬಂದು ನಿಮಗೆ ಅರಿವು ಮೂಡಿಸಿ ಹೋಗಬಹುದು. ಅವರೆಲ್ಲ ಬೇರೊಂದು ಲೋಕದಲ್ಲಿ ಕುಳಿತು, ಈ ಲೋಕಕಲ್ಯಾಣಕ್ಕಾಗಿ ಕಂಕಣ ಬದ್ಧರಾಗಿ ನಿಂತಿದ್ದಾರೆ, ಸದಾ ನಮ್ಮನ್ನು ಪೊರೆಯುತ್ತಿದ್ದಾರೆ ಎಂದು ಅವರು ಹೇಳಿದರು.

ಬದುಕಿನ ಪಯಣದಲ್ಲಿ ಗುರುವಿನ ಸ್ಥಾನ ದೊಡ್ಡದು. ನಾನು, ನನ್ನದು ಎಂಬುದನ್ನು ಬಿಟ್ಟಾಗ ಗುರು ಸಿಕ್ಕುತ್ತಾನೆ. ಗುರುವಿನ ಅನ್ವೇಷಣೆಯಲ್ಲಿ ನಾವಿದ್ದೇವೆ ಎಂಬುದು ಅನೇಕ ಸಾರಿ ನಮಗೆ ಅರಿವೇ ಇರುವುದಿಲ್ಲ. ಅದಕ್ಕಾಗಿಯೇ, ಅರಿವೇ ಗುರುವು ಗುರುವೇ ಅರಿವು. ಗುರು ಸಿಕ್ಕ ಮೇಲೆ ಕೆಲವರಿಗೆ ಅರಿವು ಸಿಕ್ಕರೆ, ಇನ್ನು ಕೆಲವರಿಗೆ ಅರಿವಾಗಿ ಗುರು ಬೇಕು ಅನಿಸುತ್ತದೆ ಎಂದು ಹೇಳಿದರು.

ಹಿಮಾಲಯ book cover page launch 2

ಕನ್ನಡಪ್ರಭದ ಪುರವಣಿ ಸಂಪಾದಕ, ಸಾಹಿತಿ ಜೋಗಿ (Writer Jogi) ಮಾತನಾಡಿ, ಒಂದು ಪುಸ್ತಕವನ್ನು ಗೆಲ್ಲಿಸುವ ಅಂಶಗಳೆಂದರೆ ಮುಗ್ದತೆ ಹಾಗೂ ಪ್ರಾಮಾಣಿಕತೆ. ಇಂದು ಎಷ್ಟೋ ಪುಸ್ತಕಗಳು ಅಪ್ರಾಮಾಣಿಕವಾಗಿ ಇರುತ್ತದೆ, ಪುಸ್ತಕದ ಕೆಲವು ಪುಟಗಳನ್ನು ತೆರೆದು ನೋಡಿದ ತಕ್ಷಣ ಇದು ಪ್ರಾಮಾಣಿಕವೋ, ಅಪ್ರಾಮಾಣಿಕವೋ ಎಂಬುದು ಅರ್ಥವಾಗುತ್ತದೆ. ಈ ಪುಸ್ತಕ ಕೆಲವು ಪುಟಗಳನ್ನು ಮುಂಚಿತವಾಗಿ ಓದಿದ್ದರಿಂದ ನನಗೆ ಇದರಲ್ಲಿ ಮುಗ್ಧತೆ ಹಾಗೂ ಪ್ರಾಮಾಣಿಕತೆ ಎದ್ದು ಕಾಣುತ್ತಿವೆ. ಹಾಗಾಗಿ ಇದು ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದೆ ಎಂದರು.

ಇಂದು ಪಾರಲೌಕಿಕ ಅಂದ ತಕ್ಷಣ ನಮಗೊಂದು ತಪ್ಪು ಕಲ್ಪನೆಯಿದೆ. ನಮಗೆ ಆ ವೇಷವನ್ನು ತೊಟ್ಟುಕೊಳ್ಳುವ ಧೈರ್ಯ ಇದೆಯೇ? ನಾವು ಆ ಜಗತ್ತಿಗೆ ಹೋಗಬಲ್ಲೆವಾ? ಇತ್ಯಾದಿ ಪ್ರಶ್ನೆಗಳು ನಮ್ಮನ್ನು ಕಾಡಿ ನಾವು ಅದರ ಗೊಡವೆಗೇ ಹೋಗುವುದಿಲ್ಲ. ಪುರಂದರ ದಾಸರೇ ʻಇಷ್ಟು ದಿನ ಈ ವೈಕುಂಠ ಎಷ್ಟು ದೂರ ಎನ್ನುತಲಿದ್ದೆʼ ಎಂದು ಬರೆಯುವ ಮೂಲಕ ವೈಕುಂಠ ಇಲ್ಲೇ ಇದ್ದರೂ, ಅಲ್ಲಿದೆ ಎಂದು ತಿಳಿದಿದ್ದೆ ಎನ್ನುವ ಸತ್ಯವನ್ನು ಹೇಳಿದ್ದಾರೆ. ಈ ಪುಸ್ತಕ ಈ ರೀತಿಯಲ್ಲಿ ಅಂಜಿಕೆಗಳನ್ನು ದೂರ ಮಾಡಿ ಸಂಕೋಚದ ತೆರೆಯನ್ನು ಸರಿಸಲು ದಾರಿದೀಪವಾಗಬಹುದು ಎಂದರು.

ಜೀವನದಲ್ಲಿ ನಾವು ಕಳೆದುಕೊಳ್ಳುವುದು ಅಪನಂಬಿಕೆಯಿಂದ. ನಮ್ಮಲ್ಲಿ ಅಪನಂಬಿಕೆಯಿದೆ ಎಂದರೆ ಅದು ನಮ್ಮ ವ್ಯಕ್ತಿತ್ವದ ದೋಷವೇ ಹೊರತು ಗುರುವಿನ ದೋಷವಲ್ಲ. ಒಂದು ಕತೆಯ ಒಳಗೆ ನನಗೆ ಹೋಗಲಾಗದಿದ್ದರೆ, ಅದು ಆ ಕಥನದ ದೋಷವಲ್ಲ, ಆ ಕಥನವನ್ನು ಸ್ವೀಕರಿಸುವ ಅನುಭವದ ಕೊರತೆಯೇ ಕಾರಣ. ಮನುಷ್ಯ ಎಲ್ಲ ದುಃಖಗಳನ್ನೂ, ಸುಖವನ್ನು ಬದುಕಿನಲ್ಲಿ ಅನುಭವಿಸಿದ ಮೇಲೆ ಒಂದು ಹುಡುಕಾಟ ಹಾದಿಯತ್ತ ಹೊರಳುತ್ತಾನೆ. ಈ ಹಾದಿಯಲ್ಲಿ ಸಿಗುವ ಗುರು ಯಾವುದೇ ರೂಪದಲ್ಲಿರಬಹುದು. ಇಂಥ ಸಂದರ್ಭ ನಂಬಿಕೆ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು. ಪುಸ್ತಕ ಜಗತ್ತಿಗೆ ಇಂಥದ್ದೊಂದು ಸಮಾರಂಭ ಬೇಕಿದೆ. ಮುಖಪುಟ ಅನಾವರಣವನ್ನೂ ಸಂಭ್ರಮಿಸುವ ಈ ನಡೆ ಪುಸ್ತಕ ಜಗತ್ತಿನಲ್ಲಿ ಸ್ವಾಗತಾರ್ಹ ಎಂದೂ ಅವರು ಹೇಳಿದರು.

ಸಕಲಮಾ ಅವರ ಯುಟ್ಯೂಬ್ ಅನಾವರಣಗೊಳಿಸಿದ ಕಾಂತಾರ (Kantara Movie) ಖ್ಯಾತಿಯ ನಟಿ ಸಪ್ತಮಿ ಗೌಡ (Saptami Gowda) ಮಾತನಾಡಿ, ಮುಖಪುಟವನ್ನು ನೋಡಿ ಪುಸ್ತಕವನ್ನು ಅಳೆಯಬೇಡಿ ಎಂಬ ಇಂಗ್ಲೀಷ್‌ ನುಡಿಗಟ್ಟಿದೆ. ಆದರೆ, ಸಾಮಾನ್ಯವಾಗಿ ನಾವು ಮುಖಪುಟವನ್ನು, ಟ್ರೈಲರ್‌ಗಳನ್ನು ನೋಡಿ ಅಳೆಯುವ ಪರಿಸ್ಥಿತಿ ಈಗ ಎಲ್ಲೆಡೆ ಇದೆ. ಒಳ ಹೂರಣ ಇದ್ದರೆ ಸಿನಿಮಾವಿರಲಿ, ಪುಸ್ತಕವಿರಲಿ ಗೆದ್ದೇ ಗೆಲ್ಲುತ್ತದೆ ಎಂಬುದು ನಾನು ಕಾಂತಾರದಿಂದ ಕಲಿತ ಪಾಠ ಎಂದರು.

ಒಂದು ಸಿನಿಮಾ ಮಾಡುವಂತೆ, ಪುಸ್ತಕ ಬರೆಯುವುದೂ ಕೂಡಾ ಸಾಕಷ್ಟು ಶ್ರಮ ಬೇಡುವ ಕೆಲಸ. ಅದರ ಹಿಂದೆ ಅಪಾರ ಶ್ರದ್ಧೆಯಿದೆ. ಸಿನಿಮಾ ಮಂದಿ ತಮ್ಮ ಸಿನಿಮಾದ ಕುತೂಹಲ ಮೊದಲೇ ಹೆಚ್ಚಿಸಲು ಟ್ರೈಲರ್, ಟೀಸರ್‌ ಬಿಡುಗಡೆಯನ್ನು ಇಟ್ಟುಕೊಳ್ಳುತ್ತಾರೆ. ಹಾಗಾಗಿ, ಪುಸ್ತಕವನ್ನೂ ಹೆಚ್ಚು ಮಂದಿಗೆ ತಲುಪಿಸಲು, ಕುತೂಹಲ ಹುಟ್ಟು ಹಾಕಿಲು ಇಂಥ ಮುಖಪುಟ ಅನಾವರಣದಂತಹ ಕಾರ್ಯಕ್ರಮಗಳು ನಡೆಯಬೇಕು. ಜನರು ಸೇರಬೇಕು. ಓದುವ ಪರಂಪರೆ ಹೆಚ್ಚಬೇಕು ಎಂದರು.

ಗುರು ಯಾರೇ ಇರಲಿ, ಅವರ ಮೇಲೆ ನಮಗೆ ನಂಬಿಕೆ ಇರಬೇಕು. ಜೀವನದಲ್ಲಿ ಕಲಿಯುವ ಹಾದಿ ದೊಡ್ಡದಿದೆ. ಆ ಸಂದರ್ಭ ಗುರು ತಿದ್ದಿದ್ದನ್ನು ನಾವು ಕಲಿತುಕೊಳ್ಳುವ ಆಸಕ್ತಿ ಇರಬೇಕು. ಅದಕ್ಕಾಗಿ ಗುರು ತೋರಿದ ಹಾದಿಯಲ್ಲಿ ನಾವು ನಡೆಯಬೇಕು ಎಂದೂ ಹೇಳಿದರು.

ಜುಲೈ 21ರಂದು ಚಂಡೀಗಢದಲ್ಲಿ ಆಂಗ್ಲ ಭಾಷೆಯ `Messages from the Himalayan Sages- Timely and Timeless’ ಹಾಗೂ ಸೆಪ್ಟೆಂಬರ್22ರಂದು ಬೆಂಗಳೂರಿನ ಗಾಯನ ಸಮಾಜದಲ್ಲಿ ʻಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಸಕಾಲಿಕ ಮತ್ತು ಕಾಲಾತೀತʼ ಕನ್ನಡ ಪುಸ್ತಕ ಲೋಕಾರ್ಪಣೆಗೊಳ್ಳಲಿದೆ. ಗುರು ಸಕಲಮಾ ಅವರ ಯುಟ್ಯೂಬ್‌ ಲಿಂಕ್- https://youtube.com/@gurusakalamaa?feature=shared

ಇದನ್ನೂ ಓದಿ: ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಇವು ಗುರು ಸಕಲಮಾ ಬದುಕಿನ ಅಧ್ಯಾಯಗಳು!

Continue Reading

ವಿದೇಶ

Youngest Artist: ಅಂಬೆಗಾಲಿಡುವ ಬಾಲಕ ಈಗ ವಿಶ್ವದ ಅತಿ ಕಿರಿಯ ಚಿತ್ರ ಕಲಾವಿದ!

ಸುಮಾರು ಆರು ತಿಂಗಳ ಮಗುವಿದ್ದಾಗಲೇ ಚಿತ್ರ ರಚಿಸಲು ಪ್ರಾರಂಭಿಸಿದ ವಿಶ್ವದ ಕಿರಿಯ ಚಿತ್ರಕಲಾವಿದ (Youngest Artist) ಘಾನಾದ ಆಂಕ್ರಾ ಹಲವಾರು ವರ್ಣಚಿತ್ರಗಳನ್ನು ರಚಿಸಿರುವುದು ಮಾತ್ರವಲ್ಲ ಅವುಗಳಲ್ಲಿ ಒಂಬತ್ತು ಚಿತ್ರಗಳನ್ನು ಪ್ರದರ್ಶನದಲ್ಲಿ ಮಾರಾಟ ಮಾಡಿದ್ದಾನೆ! ಈ ಅತಿ ಕಿರಿಯ ಕಲಾವಿದನ ಕುರಿತು ವ್ಯಾಪಕ ಕುತೂಹಲ ಉಂಟಾಗಿದೆ.

VISTARANEWS.COM


on

By

Youngest Artist
Koo

ಅಂಬೆಗಾಲಿಡುವ (Toddler) ಮಗು ವರ್ಣಚಿತ್ರಗಳನ್ನು (Youngest Artist) ರಚಿಸಿ ಗಿನ್ನೆಸ್ ವಿಶ್ವ ದಾಖಲೆ (Guinness World Records) ಬರೆದಿದೆ. ವಿಶ್ವದ ಅತ್ಯಂತ ಕಿರಿಯ ಚಿತ್ರ ಕಲಾವಿದ ಎನ್ನುವ ಖ್ಯಾತಿಗೆ ಈ ಮಗು ಪಾತ್ರವಾಗಿದೆ. ಘಾನಾದ (Ghana) 1 ವರ್ಷ 152 ದಿನಗಳ ಏಸ್-ಲಿಯಾಮ್ ನಾನಾ ಸ್ಯಾಮ್ ಆಂಕ್ರಾ (Ace-Liam Nana Sam Ankrah) ತಾನೇ ರಚಿಸಿದ 9 ವರ್ಣಚಿತ್ರಗಳನ್ನು ಮಾರಾಟ ಮಾಡಿ ಈ ದಾಖಲೆ ನಿರ್ಮಿಸಿದೆ.

ಏಸ್- ಲಿಯಾಮ್ ನಾನಾ ಸ್ಯಾಮ್ ಆಂಕ್ರಾ ವಿಶ್ವದ ಅತ್ಯಂತ ಕಿರಿಯ ಪುರುಷ ಚಿತ್ರ ಕಲಾವಿದನಾಗಿ ಪ್ರತಿಷ್ಠಿತ ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ (GWR) ನಲ್ಲಿ ತನ್ನ ಹೆಸರನ್ನು ಬರೆದಿದ್ದಾನೆ.

ಸುಮಾರು ಆರು ತಿಂಗಳ ಮಗುವಿದ್ದಾಗಲೇ ಚಿತ್ರ ರಚಿಸಲು ಪ್ರಾರಂಭಿಸಿದ ಆಂಕ್ರಾ ಹಲವಾರು ವರ್ಣಚಿತ್ರಗಳನ್ನು ರಚಿಸಿರುವುದು ಮಾತ್ರವಲ್ಲ ಅವುಗಳಲ್ಲಿ ಒಂಬತ್ತು ವರ್ಣಚಿತ್ರಗಳನ್ನು ಪ್ರದರ್ಶನದಲ್ಲಿ ಮಾರಾಟ ಮಾಡಿದ. ಆಂಕ್ರಾನ ಈ ಸಾಧನೆ ಹಲವಾರು ಮಂದಿಯ ಗಮನ ಸೆಳೆದಿದ್ದ್ದು, ಜಾಗತಿಕ ಮೆಚ್ಚುಗೆಯನ್ನು ಗಳಿಸಿತ್ತು. ಇದೀಗ ವಿಶ್ವ ದಾಖಲೆ ಪಟ್ಟಿಯಲ್ಲಿ ಆಂಕ್ರಾ ಹೆಸರು ಸೇರ್ಪಡೆಗೆ ಸಾಕಷ್ಟು ಮಂದಿ ಅಚ್ಚರಿಯನ್ನೂ ವ್ಯಕ್ತಪಡಿಸಿದ್ದಾರೆ.


ಯಾವಾಗ ಚಿತ್ರಕಲೆ ಪ್ರಾರಂಭಿಸಿದ್ದು?

ಈಗಷ್ಟೇ ಅಂಬೆಗಾಲಿಡುತ್ತಿರುವ ಆಂಕ್ರಾ ಕೇವಲ ಆರು ತಿಂಗಳಲ್ಲೇ ಚಿತ್ರಕಲೆಯನ್ನು ಪ್ರಾರಂಭಿಸಿದನು ಎನ್ನುತ್ತಾರೆ ಆತನ ತಾಯಿ. ಚಿತ್ರಕಲೆಯ ಮೇಲಿನ ಆತನ ಉತ್ಸಾಹವು ಚಿಕ್ಕ ವಯಸ್ಸಿನಿಂದಲೂ ಸ್ಪಷ್ಟವಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಆತ ಕಲಿಯಲು ಪ್ರಾರಂಭ ಮಾಡಿದಾಗಲೇ ಕ್ಯಾನ್ವಾಸ್‌ನ ತುಂಡನ್ನು ನೆಲದ ಮೇಲೆ ಹರಡಿ ಅದರ ಮೇಲೆ ಸ್ವಲ್ಪ ಬಣ್ಣವನ್ನು ಬೀಳಿಸಿದೆ. ಕ್ಯಾನ್ವಾಸ್‌ನಾದ್ಯಂತ ಆತ ಬಣ್ಣವನ್ನು ಹರಡಿ ಕೊನೆಗೊಳಿಸಿದ. ಇದು ಆತನ ಮೊದಲ ವರ್ಣಚಿತ್ರ ‘ದಿ ಕ್ರಾಲ್’ ಎಂದು ಅವರು ವಿವರಿಸಿದರು.


ಅಂಬೆಗಾಲಿಡುವ ಘಾನಾದ ಆಂಕ್ರಾ ಈಗ ಸೆಲೆಬ್ರಿಟಿಯಾಗಿದ್ದಾನೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಾಧ್ಯಮಗಳಿಂದ ಮಾತ್ರವಲ್ಲದೆ ಘಾನಾ ಗಣರಾಜ್ಯದ ಪ್ರಥಮ ಮಹಿಳೆಯ ಗಮನವನ್ನೂ ಆತ ಸೆಳೆದಿದ್ದಾನೆ.

ಮೊದಲ ಪ್ರದರ್ಶನ

ಏಸ್- ಲಿಯಾಮ್ ಆಂಕ್ರಾ ಇತ್ತೀಚೆಗೆ ತನ್ನ ಚಿತ್ರಗಳನ್ನು ಮೊದಲ ಬಾರಿಗೆ ಸಾರ್ವಜನಿಕ ಪ್ರದರ್ಶನ ನಡೆಸಿದ. ಇದರಲ್ಲಿ ಆತನ ಹತ್ತು ಕಲಾಕೃತಿಗಳನ್ನು ಪ್ರದರ್ಶಿಸಲಾಯಿತು. ಅವುಗಳಲ್ಲಿ ಒಂಬತ್ತು ಮಾರಾಟವಾಗಿವೆ. ಏಸ್- ಲಿಯಾಮ್‌ನ ಕಲೆಯು ನಿರ್ದಿಷ್ಟ ಸಂದೇಶಗಳನ್ನು ರವಾನಿಸುವುದಕ್ಕಿಂತ ಹೆಚ್ಚಾಗಿ ಅಭಿವ್ಯಕ್ತಿ ಮತ್ತು ಅನ್ವೇಷಣೆಯ ಬಗ್ಗೆ ಹೆಚ್ಚಾಗಿದೆ ಎಂದು ಆತನ ತಾಯಿ ಹೇಳಿದ್ದಾರೆ.

ಅವನ ಅಮೂರ್ತ ವರ್ಣಚಿತ್ರಗಳು ಸುತ್ತಲಿನ ಪ್ರಪಂಚದಿಂದ ಪ್ರೇರಿತವಾಗಿವೆ. ಬಣ್ಣ, ಆಕಾರ, ಟೆಕಶ್ಚರ್ ಮತ್ತು ಅವನ ಮನಸ್ಥಿತಿಯನ್ನು ಇದು ಅವಲಂಬಿಸಿದೆ. ಪ್ರತಿ ಚಿತ್ರಕಲೆಯು ಹೊಸ ವಿಷಯಗಳನ್ನು ಕಂಡುಹಿಡಿಯುವಲ್ಲಿ ಆತನ ಕುತೂಹಲ ಮತ್ತು ಸಂತೋಷದ ಅಭಿವ್ಯಕ್ತಿಯಾಗಿದೆ ಎಂದಿದ್ದಾರೆ ಅವರು.


ಭವಿಷ್ಯದ ಯೋಜನೆಗಳು

ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಪ್ರಕಾರ, ವಿಶ್ವದ ಅತ್ಯಂತ ಕಿರಿಯ ಕಲಾವಿದ ಲಿಯಾಮ್ ಅವರ ದಾಖಲೆಯನ್ನು ಅನುಮೋದಿಸಿದ ಬಳಿಕ ಆತನ ಕುಟುಂಬವು ಆತನ ಕಲಾತ್ಮಕ ಪ್ರತಿಭೆಗೆ ಗುಣಮಟ್ಟದ ಶಿಕ್ಷಣದ ಮೂಲಕ ಪೋಷಿಸಲು ಅವಕಾಶಗಳನ್ನು ಹುಡುಕುತ್ತಿದೆ. ಅಂತಾರಾಷ್ಟ್ರೀಯ ವಿದ್ಯಾರ್ಥಿ ವೇತನದ ಅವಕಾಶಗಳು ಅವರಿಗೆ ದೊರೆಯುತ್ತದೆ ಮತ್ತು ಆತನ ಕಲಾಕೃತಿಗಳನ್ನು ಮಾರಾಟ ಮಾಡಲು ಬಯಸುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: Guinness World Records: ಬರೋಬ್ಬರಿ 168 ಅಕ್ಷರಗಳನ್ನೊಳಗೊಂಡ ಈ ನಗರದ ಹೆಸರಿನಲ್ಲಿದೆ ವಿಶ್ವ ದಾಖಲೆ

ಏಸ್-ಲಿಯಾಮ್ ತಾಯಿಯ ಸಲಹೆ ಏನು?

ತಮ್ಮ ಆಸಕ್ತಿಗಳನ್ನು ಕಂಡುಕೊಳ್ಳಲು ಮಕ್ಕಳನ್ನು ಪ್ರೋತ್ಸಾಹಿಸಲು ಪೋಷಕರಿಗೆ ಸಲಹೆ ನೀಡಿದ ಅವರು, ಪ್ರತಿ ಮಗು ಅನನ್ಯವಾಗಿದೆ ಮತ್ತು ಅವರ ಭಾವೋದ್ರೇಕಗಳನ್ನು ಪೋಷಿಸುವುದು ಅದ್ಭುತ ಆವಿಷ್ಕಾರಗಳು ಮತ್ತು ಸಾಧನೆಗಳಿಗೆ ಕಾರಣವಾಗಬಹುದು. ಅದನ್ನು ಪ್ರಯತ್ನಿಸುವ ಮೊದಲು ಅದನ್ನು ಮತ್ತೆ ಮತ್ತೆ ಓದಿ ಮತ್ತು ನೆನಪಿಡಿ. ಪ್ರಯಾಣ ಮತ್ತು ಅದು ತರುವ ಸಂತೋಷವು ತುಂಬಾ ತೃಪ್ತಿಕರವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

Continue Reading

ಕರ್ನಾಟಕ

Bengaluru News: ಬೆಂಗಳೂರಿನಲ್ಲಿ ಮೇ 26ರಂದು ʼಭಾರತದ ಧೀರ ಚೇತನಗಳುʼ ಕೃತಿ ಲೋಕಾರ್ಪಣೆ

Bengaluru News: ಡಾ. ವಿಕ್ರಮ್‌ ಸಂಪತ್‌ ಅವರ ʼಭಾರತದ ಧೀರ ಚೇತನಗಳುʼ (ಭಾರತೀಯ ಇತಿಹಾಸದ ವೀರರರ ಬಗೆಗೆ ನುಡಿಚಿತ್ರಗಳು) ಎಂಬ ಕೃತಿಯ ಲೋಕಾರ್ಪಣೆ ಕಾರ್ಯಕ್ರಮವು ಇದೇ ಮೇ 26 ರಂದು ಭಾನುವಾರ ಬೆಳಿಗ್ಗೆ 10.30 ಕ್ಕೆ ಬೆಂಗಳೂರಿನ ಬಸವನಗುಡಿಯ ಬಿ.ಪಿ. ವಾಡಿಯಾ ರಸ್ತೆಯಲ್ಲಿರುವ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ವರ್ಲ್ಡ್‌ ಕಲ್ಚರ್‌ ನಲ್ಲಿ ನಡೆಯಲಿದೆ. ಸಾಹಿತಿ ಎಸ್‌.ಎಲ್‌.ಭೈರಪ್ಪ ಕೃತಿ ಬಿಡುಗಡೆ ಮಾಡಲಿದ್ದಾರೆ.

VISTARANEWS.COM


on

Bharathada dheera chethanagalu kruthi lokarpane in Bengaluru on May 26
Koo

ಬೆಂಗಳೂರು: ಡಾ. ವಿಕ್ರಮ್‌ ಸಂಪತ್‌ ಅವರ ʼಭಾರತದ ಧೀರ ಚೇತನಗಳುʼ (ಭಾರತೀಯ ಇತಿಹಾಸದ ವೀರರರ ಬಗೆಗೆ ನುಡಿಚಿತ್ರಗಳು) ಎಂಬ ಕೃತಿಯ ಲೋಕಾರ್ಪಣೆ ಕಾರ್ಯಕ್ರಮವು ಇದೇ ಮೇ 26ರಂದು ಭಾನುವಾರ ಬೆಳಗ್ಗೆ 10.30ಕ್ಕೆ ನಗರದ (Bengaluru News) ಬಸವನಗುಡಿಯ ಬಿ.ಪಿ. ವಾಡಿಯಾ ರಸ್ತೆಯಲ್ಲಿರುವ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ವರ್ಲ್ಡ್‌ ಕಲ್ಚರ್‌ನಲ್ಲಿ ಜರುಗಲಿದೆ.

ಇದನ್ನೂ ಓದಿ: COMEDK UGET Result 2024: ಕಾಮೆಡ್‌ ಕೆ ಫಲಿತಾಂಶ ಪ್ರಕಟ; ಬೆಂಗಳೂರಿನ ಬಾಲಸತ್ಯ ಸರವಣನ್ ಫಸ್ಟ್‌ ರ‍್ಯಾಂಕ್‌

ಹುಬ್ಬಳ್ಳಿಯ ಸಾಹಿತ್ಯ ಪ್ರಕಾಶನದಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಎಸ್‌.ಎಲ್‌. ಭೈರಪ್ಪ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಇದೇ ವೇಳೆ ಎಸ್‌.ಎಲ್‌. ಭೈರಪ್ಪನವರ ಇಂಗ್ಲೀಷ್‌ ಅನುವಾದಿತ 3 ಕಾದಂಬರಿಗಳನ್ನು ಡಾ. ವಿಕ್ರಮ್‌ ಸಂಪತ್‌ ಅವರು ಲೋಕಾರ್ಪಣೆ ಮಾಡಲಿದ್ದಾರೆ.

ಇದನ್ನೂ ಓದಿ: Rotary June Run: ರೋಟರಿಯಿಂದ ಬೆಂಗಳೂರಿನಲ್ಲಿ ಜೂನ್​ 9ರಂದು ಮ್ಯಾರಥಾನ್​; ವಿಸ್ತಾರ ನ್ಯೂಸ್‌ ಸಹಯೋಗ

ಕಾರ್ಯಕ್ರಮದಲ್ಲಿ ಡಾ. ವಿಕ್ರಮ್‌ ಸಂಪತ್‌ ಅವರೊಂದಿಗೆ ಅರ್ಧಗಂಟೆಯ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅನುವಾದಕರಾದ ಎಲ್‌.ವಿ. ಶಾಂತಕುಮಾರಿ, ಪ್ರೊ. ಜಿ.ಎಲ್‌. ಶೇಖರ್‌ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಎಂ.ಎ. ಸುಬ್ರಮಣ್ಯ ಮತ್ತು ಎಂ.ಎಸ್‌. ಋತ್ವಿಕ್‌ ತಿಳಿಸಿದ್ದಾರೆ.

Continue Reading
Advertisement
Prajwal Revanna Case
ಪ್ರಮುಖ ಸುದ್ದಿ2 hours ago

Prajwal Revanna Case : ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ

chakravarthy sulibele
ಕರ್ನಾಟಕ3 hours ago

Chakravarthy Sulibele : ಮಂಡಿಯೂರಿ ಭೈರಪ್ಪ ಅವರಿಂದ ಸಾವರ್ಕರ್ ಪ್ರಶಸ್ತಿ ಸ್ವೀಕರಿಸಿದ ಚಕ್ರವರ್ತಿ ಸೂಲಿಬೆಲೆ

Cyber Crime
ಪ್ರಮುಖ ಸುದ್ದಿ3 hours ago

Cyber Crime : ಹೆಣ್ಣು ಮಕ್ಕಳ ಫೋಟೋ ಅಶ್ಲೀಲಗೊಳಿಸಿ ಪೋಸ್ಟ್​ ಮಾಡುತ್ತಿದ್ದವನ ಬಂಧನ

Bomb Threat
ಪ್ರಮುಖ ಸುದ್ದಿ4 hours ago

Bomb Threat : ತೆಲಂಗಾಣ ಡಿಸಿಎಂ ಮನೆಗೆ ಬಾಂಬ್​ ಬೆದರಿಕೆ; ಆತಂಕ

Acid attack
ಕರ್ನಾಟಕ4 hours ago

Acid attack: ಮನೆ ಬಾಗಿಲು ತೆರೆಯದ ಹಿನ್ನೆಲೆ ವಿವಾಹಿತ ಪ್ರಿಯತಮೆಗೆ ಆ್ಯಸಿಡ್ ಎರಚಿದ ಪ್ರಿಯಕರ!

Cab service
ಪ್ರಮುಖ ಸುದ್ದಿ4 hours ago

Cab Service : ಆ್ಯಪ್​ ಆಧಾರಿತ ಕ್ಯಾಬ್​ಗಳು ಶೇ. 5ಕ್ಕಿಂತ ಹೆಚ್ಚು ಸೇವಾ ಶುಲ್ಕ ವಿಧಿಸುವಂತಿಲ್ಲ; ಸರ್ಕಾರದ ಆದೇಶಕ್ಕೆ ಕೋರ್ಟ್​ ಮನ್ನಣೆ

Gauri Khan
ಸಿನಿಮಾ4 hours ago

Gauri Khan: ಇಸ್ಲಾಂಗೆ ಮತಾಂತರ ಆಗದೇ ಇರಲು ಕಾರಣ ತಿಳಿಸಿದ ಶಾರುಖ್ ಖಾನ್ ಪತ್ನಿ ಗೌರಿ!

Veer Savarkar flyover
ಕರ್ನಾಟಕ4 hours ago

Veer Savarkar flyover: ಸಾವರ್ಕರ್ ಸೇತುವೆಯ ನಾಮಫಲಕಕ್ಕೆ ಮಸಿ ಬಳಿದಿರೋದು ಅತ್ಯಂತ ಖಂಡನೀಯ: ವಿಜಯೇಂದ್ರ

Lok Sabha Election
ಪ್ರಮುಖ ಸುದ್ದಿ4 hours ago

Lok Sabha Election : ಷೇರು ಮಾರುಕಟ್ಟೆ ಸಂಸ್ಥೆಯ ಪ್ರಕಾರ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸೀಟು ಗೆಲ್ಲಲಿದೆ; ಲೆಕ್ಕಾಚಾರ ಹೀಗಿದೆ

Robbery Case Two accused arrested by yallapur police
ಕರ್ನಾಟಕ4 hours ago

Robbery Case: ಅರಬೈಲ್ ಘಟ್ಟದಲ್ಲಿ ಕಾರು ಅಡ್ಡಗಟ್ಟಿ ದರೋಡೆ; ಇಬ್ಬರು ಆರೋಪಿಗಳ ಬಂಧನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ6 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು15 hours ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 day ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ7 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌