ಸಮಾಜಸೇವೆ ಮಾಡಲು ಹೋದ ಶಿಕ್ಷಕನಿಗೆ ಥಳಿಸಿದ ಪೆಟ್ರೋಲ್‌ ಬಂಕ್‌ ಮಾಲೀಕ - Vistara News

ಕ್ರೈಂ

ಸಮಾಜಸೇವೆ ಮಾಡಲು ಹೋದ ಶಿಕ್ಷಕನಿಗೆ ಥಳಿಸಿದ ಪೆಟ್ರೋಲ್‌ ಬಂಕ್‌ ಮಾಲೀಕ

ಮಾಲೀಕ ದೇವರಾಜ್ ಬಂದು ಶಿಕ್ಷಕನನ್ನು ಏಕಾಏಕಿ ಥಳಿಸಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾರಾಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

VISTARANEWS.COM


on

ಏಟು ತಿಂದ ಶಿಕ್ಷಕ
ಜೈನ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕನಾಗಿರುವ ಚಿಕ್ಕ ತಿಮ್ಮಯ್ಯ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮಕ್ಕಳು ಶಾಲೆಯಲ್ಲಿ ವಿದ್ಯೆ ಕಲಿತು ಉತ್ತಮ ನಾಗರಿಕರಾಗಬೇಕೆ ವಿನಃ ಬಾಲಕಾರ್ಮಿಕರಾಗಬಾರದು. ಈ ಪಾಠವನ್ನು ಶಾಲೆಯಲ್ಲಿ ಬೋಧನೆ ಮಾಡಿದ್ದಷ್ಟೆ ಅಲ್ಲದೆ ಸಮಾಜದಲ್ಲೂ ಅದರ ಪಾಲನೆಗೆ ಮುಂದಾದ ಶಿಕ್ಷಕನನ್ನು ಪೆಟ್ರೋಲ್‌ ಬಂಕ್‌ ಮಾಲೀಕ ಹಾಗೂ ಆತನ ಗುಂಪು ಥಳಿಸಿದ ಘಟನೆ ನಡೆದಿದೆ.

ಬಾಲ ಕಾರ್ಮಿಕನ ಬಗ್ಗೆ ತಿಳಿದುಕೊಳ್ಳಲು ಹೋಗಿ ಶಿಕ್ಷಕರೊಬ್ಬರು ಹಲ್ಲೆಗೊಳಗಾಗಿದ್ದಾರೆ. ಜೈನ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರಾಗಿರುವ ಚಿಕ್ಕ ತಿಮ್ಮಯ್ಯ ಅವರೇ ಪೆಟ್ರೋಲ್ ಬಂಕ್‌ನಲ್ಲಿ ಹಲ್ಲೆಗೊಳಗಾದವರು.

ಚಿಕ್ಕತಿಮ್ಮಯ್ಯ ಅವರು ಬ್ಯಾಟರಾಯನಪುರದ ರಚನಾ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಹಾಕಿಸಲು ಹೋಗಿದ್ದರು. ಈ ವೇಳೆ ಚಿಕ್ಕ ಹುಡುಗನೊಬ್ಬ ಪೆಟ್ರೋಲ್ ಹಾಕುತ್ತಿದ್ದನ್ನು ಗಮನಿಸಿದರು. ಬಾಲಕಾರ್ಮಿಕನಂತೆ ಕಂಡ ಹಿನ್ನೆಲೆಯಲ್ಲಿ ಆತನನ್ನು ಮಾತನಾಡಿಸಿ ವಿವರ ಪಡೆದುಕೊಳ್ಳಲು ಯತ್ನಿಸಿದ್ದರು. ಈ ವಿಚಾರವನ್ನು ಪೆಟ್ರೋಲ್ ಬಂಕ್ ಮ್ಯಾನೇಜರ್ ಮಾದೇಶ್ ಗಮನಿಸಿದ್ದಾನೆ. ಮಾದೇಶ್‌ ಬಳಿ ತೆರಳೀದ ಶಿಕ್ಷಕ, ಬಾಲಕನ ಕುರಿತು ಮಾಹಿತಿ ಪಡೆಯಲು ಮುಂದಾಗಿದ್ದಾರೆ.

ಇದನ್ನೂ ಓದಿ | ಆಸ್ತಿ ವಿಚಾರಕ್ಕೆ ಮಗನಿಗೇ ಬೆಂಕಿಯಿಟ್ಟ ಅಪ್ಪ: ವಾರ ನರಳಿ ಪ್ರಾಣ ಬಿಟ್ಟ ಪುತ್ರ

ಹುಡುಗನ ಮಾರ್ಕ್ಸ್ ಕಾರ್ಡ್ ಹಾಗೂ ವಯೋಮಿತಿಯ ಡಿಟೇಲ್ಸ್‌ ಕೊಡಿ ಎಂದು ತಿಳಿಸಿದ್ದಾರೆ. ಇದರಿಂದ ಕೆರಳಿದ ಮಾದೇಶ ಹಾಗೂ ಆತನ ಗುಂಪು, ಶಿಕ್ಷಕನ ಮೇಲೆ ಹಲ್ಲೆ ನಡೆಸಿದೆ. ಮಾಲೀಕ‌ ದೇವರಾಜ್ ಬರುವವರೆಗೂ ಚಿಕ್ಕತಿಮ್ಮಯ್ಯ ಅವರ ಬೈಕ್‌ ನೀಡುವುದಿಲ್ಲ ಎಂದು ಪಟ್ಟುಹಿಡಿದಿದ್ದಾರೆ. ಬೈಕ್‌ ಕೀ ಕಿತ್ತುಕೊಂಡು ಇರಿಸಿಕೊಂಡಿದ್ದಾರೆ.

ನಂತರ ಮಾಲೀಕ ದೇವರಾಜ್ ಬಂದಿದ್ದಾನೆ. ಬಂದವನೇ ಶಿಕ್ಷಕನ ಮೇಲೆ ಏಕಾಏಕಿ ದಾಳಿ ನಡೆಸಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾರಾಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಅಲ್ಲಿಂದ ತಪ್ಪಿಸಿಕೊಂಡು ಸಮೀಪದ ಅಪಾರ್ಟ್‌ಮೆಂಟ್‌ನಲ್ಲಿ ಅವಿತು ಪೊಲೀಸರಿಗೆ ಕರೆ ಮಾಡಿದ್ದೇನೆ ಎಂದು ಶಿಕ್ಷಕರ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಇದೀಗ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ | ದಿನವೂ ಸಾಯುವುದಕ್ಕಿಂತ ಒಮ್ಮೆಲೇ ಸಾಯೋದು ಒಳ್ಳೇದಲ್ವಾ? ಅಂತ ಸ್ಟೇಟಸ್‌ ಹಾಕಿದ್ದರು ಆ ಸಹೋದರಿಯರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Mysuru News : ಡೆತ್‌ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಆಟೋ ಡ್ರೈವರ್ ಶವವಾಗಿ ಪತ್ತೆ

Mysuru News : ಐದು ದಿನಗಳ ಹಿಂದೆ ಸಾಲಗಾರರ ಕಾಟಕ್ಕೆ ಹೆದರಿ ಡೆತ್‌ನೋಟ್‌ (Death Note) ಬರೆದಿಟ್ಟು ನಾಪತ್ತೆಯಾಗಿದ್ದ (Missing Case) ಆಟೋ ಡ್ರೈವರ್‌ (Auto Driver)ಶವವಾಗಿ (Dead Body Found) ಪತ್ತೆಯಾಗಿದ್ದಾರೆ.

VISTARANEWS.COM


on

By

Mysuru News
Koo

ಮೈಸೂರು: ಸಾಲಗಾರರ ಕಿರುಕುಳಕ್ಕೆ ಬೇಸತ್ತು ಡೆತ್‌ನೋಟ್ (Death note) ಬರೆದು ನಾಪತ್ತೆಯಾಗಿದ್ದ ಆಟೋ ಡ್ರೈವರ್ ಶವವಾಗಿ ಪತ್ತೆಯಾಗಿದ್ದಾರೆ. ಮೈಸೂರಿನ (Mysuru News) ಹುಣಸೂರು ತಾಲೂಕಿನ ಕುಟ್ಟುವಾಡಿ ಗ್ರಾಮದಲ್ಲಿ ಘಟನೆ ನಡೆದಿತ್ತು. ಆಟೋ ಡ್ರೈವರ್ ಪ್ರಸಾದ್ (40) ನಾಪತ್ತೆಯಾಗಿದ್ದವರು.

ಕಳೆದ ಜುಲೈ 20 ರಂದು ಕಟ್ಟುವಾಡಿಯಿಂದ ಪ್ರಸಾದ್‌ ಕಾಣೆಯಾಗಿದ್ದರು. ಎಚ್.ಡಿ.ಕೋಟೆಯ ಸರಗೂರಿನ ಕಪಿಲಾ ನದಿ ದಂಡೆ ಸೋಮೇಶ್ವರ ದೇವಸ್ಥಾನದ ಬಳಿ ನೀರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಪ್ರಸಾದ್ ಡೆತ್‌ನೋಟ್ ಆಟೋದಲ್ಲಿ ಇಟ್ಟು ನಾಪತ್ತೆಯಾಗಿದ್ದರು. ಪ್ರಸಾದ್ ನಾಪತ್ತೆಯಿಂದಾಗಿ ಕುಟುಂಬಸ್ಥರು ಕಂಗಾಲಾಗಿದ್ದರು. ಈ ಸಂಬಂಧ ಬಿಳಿಕೆರೆ ಪೊಲೀಸರು ಮಿಸ್ಸಿಂಗ್‌ ಕೇಸ್‌ ದಾಖಲಾಗಿದ್ದು, ಪ್ರಸಾದ್‌ಗಾಗಿ ಶೋಧ ನಡೆಸುತ್ತಿದ್ದರು. ಡೆತ್‌ನೋಟ್‌ನಲ್ಲಿ ನನ್ನ ಸಾವಿಗೆ ಫೈನಾನ್ಸ್ ಮಧು, ಟೆಂಪೋ ಕಿರಣ್ ಕಾರಣ ಎಂದು ಉಲ್ಲೇಖಿಸಿದ್ದರು.

ಫೈನಾನ್ಸ್ ಮಧು ಬಳಿ ಕಿರಣ್ ಜಾಮೀನು ನೀಡಿ ಹಣ ಸಾಲ ಕೊಡಿಸಿದ್ದ.ನಿಗದಿತ ಸಮಯಕ್ಕೆ ಹಣ ಹಿಂದಿರುಗಿಸಿಲ್ಲ. ಹೀಗಾಗಿ ಕಿರಣ್ ಆಗಾಗ್ಗೆ ಮನೆಗೆ ಬಂದು ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ಪ್ರಸಾದ್ ಡೆತ್ ನೋಟ್ ಬರೆದು ನಾಪತ್ತೆಯಾಗಿದ್ದ.

ಎಚ್.ಡಿ.ಕೋಟೆ ಸರಗೂರಿನಲ್ಲಿ ಪ್ರಸಾದ್ ಮೃತದೇಹ ದೊರೆತಿದೆ. ಸರಗೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: Dog Meat: ಅಬ್ದುಲ್‌ ರಜಾಕ್‌ ತರಿಸುವ ಮಾಂಸದ ಮೇಲೆ ಹೆಚ್ಚುತ್ತಿದೆ ಅನುಮಾನ! ಹಲವು ಹೋಟೆಲ್‌ ಮಾಲಿಕರಿಗೆ ನೋಟೀಸ್‌

ಕೈ ಕಟ್‌ ಮಾಡಿದ ರೌಡಿಗಳ ಕಾಲಿಗೆ ಪೊಲೀಸರ ಗುಂಡೇಟು

ರಾಮನಗರ: ಬೆಳ್ಳಂಬೆಳಿಗ್ಗೆ ರೌಡಿಶೀಟರ್‌ಗಳ (Rowdysheeters) ಮೇಲೆ ಕನಕಪುರ ನಗರ ಪೊಲೀಸರು (Kanakapura Police) ಗುಂಡು ಹಾರಿಸಿ (Police Firing) ಬಂಧಿಸಿದ್ದಾರೆ. ವ್ಯಕ್ತಿಯೊಬ್ಬನ ಕೈ ಕತ್ತರಿಸಿ (Assault Case) ಪರಾರಿಯಾಗಿದ್ದ ರೌಡಿಗಳನ್ನು ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

ಕನಕಪುರ ಟೌನ್ ಸಿಪಿಐ ಮಿಥುನ್ ಶಿಲ್ಪಿ ಹಾಗೂ ಪಿಎಸ್ಐ ಮನೋಹರ್ ಅವರಿಂದ ಫೈರಿಂಗ್ ನಡೆದಿದೆ. ಹರ್ಷ ಅಲಿಯಾಸ್ ಕೈಮ, ಕರುಣೇಶ್ ಅಲಿಯಾಸ್ ಕಣ್ಣ ಗಾಯಗೊಂಡ ರೌಡಿಶೀಟರ್‌ಗಳು. ಕಗ್ಗಲೀಪುರದ ವ್ಯಾಲಿ ಸ್ಕೂಲ್ ರೋಡ್ ಬಳಿ ಪೊಲೀಸರಿಂದ ಫೈರಿಂಗ್ ನಡೆದಿದೆ.

ಕಳೆದ ವಾರ ಕನಕಪುರದ ಮಾಳಗಾಳು ಬಡಾವಣೆಯಲ್ಲಿ ಗಲಾಟೆ ನಡೆದಿತ್ತು. ಗಲಾಟೆ ವೇಳೆ ಒಬ್ಬ ವ್ಯಕ್ತಿ ಮೇಲೆ ಹಲ್ಲೆ ಮಾಡಿ ಕೈ ಕಟ್ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದರು. ಆರೋಪಿಗಳನ್ನು ಬಂಧಿಸುವಂತೆ ದಲಿತ‌‌ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಇಂದು ಮುಂಜಾನೆ ಆರೋಪಿಗಳನ್ನು ಬಂಧಿಸಲು ಪೊಲೀಸರು ಹೋಗಿದ್ದಾಗ ಪೊಲೀಸರ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಲು ಈ ರೌಡಿಗಳು ಮುಂದಾಗಿದ್ದಾರೆ.

ಈ ಸಂದರ್ಭದಲ್ಲಿ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹೊಡೆದು ಅವರನ್ನು ಬಂಧಿಸಿದ್ದಾರೆ. ಹಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿ ರಾಜಶೇಖರ್, ಶಿವಕುಮಾರ್ ಎಂಬವರಿಗೂ ಗಾಯಗಳಾಗಿವೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್​ ಭೇಟಿ ಮಾಡಿ, ಯೋಗ, ಧ್ಯಾನ ಹೇಳಿಕೊಟ್ಟೆ ಎಂದ ಸಿದ್ಧಾರೂಢನಿಗೆ ಸಂಕಷ್ಟ! ನೋಟಿಸ್‌ ಕೊಟ್ಟ ಪೊಲೀಸರು!

Actor Darshan: ಪರಪ್ಪನ ಅಗ್ರಹಾರ ಜೈಲಿನ ಸಿಬ್ಬಂದಿ ಇದನ್ನು ಅಲ್ಲಗಳೆದಿದ್ದು, ದರ್ಶನ್ ಅನ್ನು ಸಿದ್ಧಾರೂಡ ಭೇಟಿ ಆಗಿಲ್ಲ ಎಂದಿದ್ದಾರೆ. ಇದೀಗ ಪೊಲೀಸ್ ಇಲಾಖೆಯು ಸಿದ್ಧಾರೂಢಗೆ ನೋಟಿಸ್‌ ಜಾರಿ ಮಾಡಿದೆ.ಜೈಲು ಅಧಿಕಾರಿಗಳು, ದರ್ಶನ್ ಭೇಟಿಗೆ ಯಾವುದೇ ಬೇರೆ ಕೈದಿಗಳಿಗೆ ವಿಶೇಷವಾಗಿ ಜೈಲು ಸೆಲ್​ನೊಳಗೆ ಹೋಗಲು ಅವಕಾಶ ಕೊಟ್ಟಿಲ್ಲವೆಂದು ಉತ್ತರಿಸಿದ್ದಾರೆ. ಹಾಗಾಗಿ ಮಾಧ್ಯಮಗಳ ಮುಂದೆ ಸುಳ್ಳು ಹೇಳಿರುವ ಸಿದ್ಧಾರೂಢನಿಗೆ ಪೊಲೀಸ್ ಇಲಾಖೆ ನೊಟೀಸ್ ನೀಡಿದ್ದು, ವಿಚಾರಣೆಗೆ ಕರೆದಿದೆ.

VISTARANEWS.COM


on

Actor Darshan case Police Serve Notice To Siddarudha Who Claimed To Met Darshan
Koo

ಬೆಂಗಳೂರು: ಕೊಲೆಯಾದ ರೇಣುಕಾಸ್ವಾಮಿ (Renuka Swamy Murder case) ಕೂಡಾ ನಟ ದರ್ಶನ್ (Actor Darshan) ಅಭಿಮಾನಿಯಾಗಿದ್ದವನು. ಆದರೆ ಅದೇ ಅಭಿಮಾನಿಯ ಕೊಲೆ ಆರೋಪದಲ್ಲಿ ದರ್ಶನ್ ಜೈಲು ಸೇರುವಂತಾಯಿತು. ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ನಟ ದರ್ಶನ್‌ನನ್ನು ಸಿದ್ಧಾರೂಢ ಎಂಬ ಮಾಜಿ ಕೈದಿ ಭೇಟಿಯಾಗಿದ್ದಾಗಿ ಹೇಳಿಕೊಂಡಿದ್ದ, ಈತನಿಗೆ ಈಗ ಪೊಲೀಸ್ ಇಲಾಖೆ ನೋಟಿಸ್‌ ನೀಡಿದೆ.

ಸನ್ನಡತೆ ಆಧಾರದಲ್ಲಿ ಇನ್ನೇನು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಬೇಕಿದ್ದ ಸಿದ್ಧಾರೂಢ ಅವರು ದರ್ಶನ್‌ನ ಭೇಟಿ ಮಾಡಲೇಬೇಕು ಎನ್ನುವ ಆಸೆ ಹೊಂದಿದ್ದರು. ಅದಕ್ಕಾಗಿ ಅವರು ಜೈಲಾಧಿಕಾರಿಗಳ ಬಳಿ ಮನವಿ ಮಾಡಿದ್ದರು ಎನ್ನಲಾಗಿತ್ತು. ಇದಕ್ಕೆ ಜೈಲು ಅಧಿಕಾರಿ ಕೂಡ ಒಪ್ಪಿಕೊಂಡಿದ್ದರು ಎನ್ನಲಾಗಿತ್ತು. ಆದರೆ ಸಿದ್ಧರೂಢರನ್ನು ಭೇಟಿಯಾಗೋದಿಕ್ಕೆ ದರ್ಶನ್‌ ಒಪ್ಪುತ್ತಾರಾ? ಅವರಿಗೆ ಮನಸಿದ್ಯಾ ಅಂತ ಅಧಿಕಾರಿಗಳು ದರ್ಶನ್‌ನ ಕೇಳಿದ್ದರು. ಆದರೆ ದರ್ಶನ್‌ ಹಿಂದೂ ಮುಂದೂ ನೋಡಲೇ ಇಲ್ಲ. ಒಂಚೂರು ಯೋಚನೆ ಮಾಡದೇ ತನ್ನನ್ನು ಭೇಟಿಯಾಗಲು ಬಯಸುತ್ತಿರುವ ಅಭಿಮಾನಿಯ ಭೇಟಿಗೆ ಒಪ್ಪಿಕೊಂಡಿದ್ದರು. ಸಿದ್ಧಾರೂಢ ಅವರನ್ನು ಒಳ ಕಳುಹಿಸುವಂತೆ ಮನವಿ ಮಾಡಿದ್ದರು. ಎನ್ನಲಾಗಿತ್ತು. ಸಿದ್ಧಾರೂಢ, ತಾವು ದರ್ಶನ್ ಅನ್ನು ಜೈಲಿನಲ್ಲಿ ಭೇಟಿಯಾಗಿದ್ದು, ದರ್ಶನ್​ಗೆ ಯೋಗ ಹೇಳಿಕೊಟ್ಟೆ, ಧ್ಯಾನ ಹೇಳಿಕೊಟ್ಟೆ, ದರ್ಶನ್ ಜೊತೆಗೆ ಹಲವು ಸಮಯ ಮಾತನಾಡಿದೆ ಎಂದೆಲ್ಲ ಹೇಳಿಕೊಂಡಿದ್ದರು. ಆದರೆ ಪರಪ್ಪನ ಅಗ್ರಹಾರ ಜೈಲಿನ ಸಿಬ್ಬಂದಿ ಇದನ್ನು ಅಲ್ಲಗಳೆದಿದ್ದು, ದರ್ಶನ್ ಅನ್ನು ಸಿದ್ಧಾರೂಡ ಭೇಟಿ ಆಗಿಲ್ಲ ಎಂದಿದ್ದಾರೆ. ಇದೀಗ ಪೊಲೀಸ್ ಇಲಾಖೆಯು ಸಿದ್ಧಾರೂಢಗೆ ನೋಟಿಸ್‌ ಜಾರಿ ಮಾಡಿದೆ.

ದರ್ಶನ್ ಸೆಲ್ ಒಳಕ್ಕೆ ಯಾರನ್ನೂ ಸಹ ಬಿಟ್ಟಿಲ್ಲ ಎಂದು ಜೈಲು ಅಧಿಕಾರಿಗಳು

ಜೈಲಲ್ಲಿ ನಟ ದರ್ಶನ್ ಭೇಟಿಯಾಗದೆ‌ ಸಿದ್ದರೂಢ ಸುಳ್ಳು ಕಥೆ ಕಟ್ಟಿದ್ದಾರೆ ಎನ್ನಲಾಗಿದೆ. ದರ್ಶನ್ ಭೇಟಿ ಮಾಡಿಸಲೇ ಇಲ್ಲವೆಂದು ಕಾರಾಗೃಹ ಇಲಾಖೆಗೆ ಜೈಲಾಧಿಕಾರಿಗಳು ರಿಪೋರ್ಟ್ ಕೊಟ್ಟಿದ್ದಾರೆ. ಸನ್ನಡತೆ ಮೇಲೆ ರಿಲೀಸ್ ಆಗಿರುವ ಸಿದ್ದರೂಢ ಮಾಧ್ಯಮ ಹೇಳಿಕೆ ಬಗ್ಗೆ ಜೈಲಾಧಿಕಾರಿಗಳು ಚರ್ಚೆ ಮಾಡಿದ್ದಾರೆ.  ಜೈಲು ಅಧಿಕಾರಿಗಳು, ದರ್ಶನ್ ಭೇಟಿಗೆ ಯಾವುದೇ ಬೇರೆ ಕೈದಿಗಳಿಗೆ ವಿಶೇಷವಾಗಿ ಜೈಲು ಸೆಲ್​ನೊಳಗೆ ಹೋಗಲು ಅವಕಾಶ ಕೊಟ್ಟಿಲ್ಲವೆಂದು ಉತ್ತರಿಸಿದ್ದಾರೆ. ಹಾಗಾಗಿ ಮಾಧ್ಯಮಗಳ ಮುಂದೆ ಸುಳ್ಳು ಹೇಳಿರುವ ಸಿದ್ಧಾರೂಢನಿಗೆ ಪೊಲೀಸ್ ಇಲಾಖೆ ನೊಟೀಸ್ ನೀಡಿದ್ದು, ವಿಚಾರಣೆಗೆ ಕರೆದಿದೆ.

ಇದನ್ನೂ ಓದಿ: Actor Darshan: ದರ್ಶನ್ ದೈವ ಭಕ್ತ, ಜೈಲಿಗೆ ಸೇರಿದ್ದಾಗಿನಿಂದ ವಿಜಯಲಕ್ಷ್ಮಿ ಅತ್ತಿಗೆ ಹೋರಾಟ ಜಾಸ್ತಿ ಆಗಿದೆ ಎಂದ ಲತಾ ಜೈಪ್ರಕಾಶ್!

ಇದೇ ತಿಂಗಳ ಎಂಟನೇ ತಾರೀಖು ಬಳ್ಳಾರಿ ಜೈಲಿನಿಂದ ಪರಪ್ಪನ ಅಗ್ರಹಾರ ಜೈಲಿಗೆ ಸಿದ್ಧಾರೂಢ ಬಂದಿದ್ದ. ಆತನನ್ನು ಒಂಬತ್ತನೇ ತಾರೀಖು ಬಿಡುಗಡೆ ಮಾಡಿದ್ದೆವು. ಆತ ಇಲ್ಲಿ ದರ್ಶನ್ ಅನ್ನು ಭೇಟಿ ಆಗಿಲ್ಲ. ದರ್ಶನ್ ಸೆಲ್ ಒಳಕ್ಕೆ ಯಾರನ್ನೂ ಸಹ ಬಿಟ್ಟಿಲ್ಲ ಎಂದು ಜೈಲಧಿಕಾರಿಗಳು ಹೇಳಿದ್ದಾರೆ.

ಸಿದ್ಧಾರೂಢ ಮಾಧ್ಯಮದ ಮುಂದೆ ಹೇಳಿದ್ದೇನು?

ʻʻನಿನ್ನನ್ನ ಕಾನೂನು ಕ್ಷಮಿಸಿ ಒಂದು ಅವಕಾಶವನ್ನು ಕೊಟ್ಟಿದೆ. ಅಪ್ಪ-ಅಮ್ಮನನ್ನು ಚೆನ್ನಾಗಿ ನೋಡಿಕೋ, ಹೆಂಡತಿ ಮಕ್ಕಳ ಜತೆ ಪ್ರೀತಿಯಿಂದ ಬದುಕು ಅಂತ ಸಲಹೆಯನ್ನು ಕೊಟ್ಟಿದ್ದರಂತೆ. ದರ್ಶನ್ ಆಡಿರುವ ಈ ಮಾತುಗಳನ್ನು ಕೇಳಿದರೆ ನಿಜಕ್ಕೂ ಅವರಿಗೆ ಪಾಪಪ್ರಜ್ಞೆ ಕಾಡುತ್ತಿದೆ. ತಾನು ಮಾಡಿರುವ ತಪ್ಪಿನ ಅರಿವು ಆದಂತಿದೆʼʼ ಎಂದು ಸಿದ್ಧಾರೂಢ ತಿಳಿಸಿದ್ದರು.

ಜುಲೈ 8ರಂದು ಜೈಲಾಧಿಕಾರಿಗಳ ಅನುಮತಿ ಪಡೆದು ನಟ ದರ್ಶನ್‌ರನ್ನು ಭೇಟಿಯಾದ ಸಿದ್ಧರೂಢ, ಪಿರಮಿಡ್‌ ಧ್ಯಾನವನ್ನು ಹೇಳಿಕೊಟ್ಟಿದ್ದರಂತೆ. ನಾನು ನಿಮ್ಮ ಅಭಿಮಾನಿ ಎಂದಾಗ ಸಿದ್ಧರೂಢರನ್ನು ದರ್ಶನ್‌ ತಬ್ಬಿಕೊಂಡರಂತೆ. ಹತ್ತು ನಿಮಿಷ ಧ್ಯಾನ ಮಾಡಿದ ದರ್ಶನ್‌ ಇದು ಚೆನ್ನಾಗಿದೆ, ನಾನು ಇನ್ಮೆಲೆ ಇದನ್ನೂ ಮಾಡ್ತಿಲಿ ಎಂದು ಜೈಲಿನಿಂದ ಬಿಡುಗಡೆಗೊಂಡ ಕೈದಿ ಸಿದ್ಧಾರೂಢ ಹೇಳಿದ್ದಾರೆ. ದರ್ಶನ್‌ ಅವರನ್ನು ನೋಡಿದಾಗ ಬೇಸರ ಆಯಿತು. ಆದರೆ ಅವರು ನೀನು ನಾನ್‌ ಸೆಲೆಬ್ರಿಟಿ, ನಾನು ನಿನ್ನ ಸೆಲೆಬ್ರಿಟಿ ಎಂದು ಆಟೋಗ್ರಾಫ್‌ ಕೊಟ್ಟರು ಅಂತ ದರ್ಶನ್‌ ಕುರಿತು ಸಿದ್ಧರೂಢ ವಿವರಿಸಿದ್ದರು.

Continue Reading

ರಾಯಚೂರು

Road Accident : ಕುಡಿದು ಕಾರು ಓಡಿಸಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು ; ಕಾರ್ಕಳದಲ್ಲಿ ಸಿಲಿಂಡರ್ ಸ್ಫೋಟ

Road Accident : ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಲು ಹೋದ ಯುವಕರಿಬ್ಬರು ಜೀವವನ್ನೇ ಕಳೆದುಕೊಂಡಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್‌ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

By

road Accident
Koo

ರಾಯಚೂರು: ಕೆಎಸ್‌ಆರ್‌ಟಿಸಿ ಬಸ್ಸಿಗೆ (Ksrtc Bus) ಕಾರೊಂದು ಡಿಕ್ಕಿ (Road Accident) ಹೊಡೆದಿದೆ. ಪರಿಣಾಮ ಕಾರಿನೊಬ್ಬಗೆ ಇದ್ದ ಯುವಕರಿಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಕುಡಿದು ಕಾರು ಚಲಾಯಿಸಿದ್ದೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ರಾಯಚೂರಿನ (Raichur News) ಲಿಂಗಸಗರೂ ತಾಲೂಕಿನ ಅಡವಿಬಾವಿ ಕ್ರಾಸ್ ಬಳಿ ತಡರಾತ್ರಿ ಅಪಘಾತ ನಡೆದಿದೆ.

ವಿರೇಶ್ (25), ಚನ್ನಬಸವ (24) ಮೃತ ದುರ್ದೈವಿಗಳು. ಲಿಂಗಸಗೂರು ಹೊರವಲಯದ ಕರಡಕಲ್ ಗ್ರಾಮದ ನಿವಾಸಿಗಳಾದ ಇವರಿಬ್ಬರು, ನಾರಾಯಣಪುರ ಜಲಾಶಯದತ್ತ ಹೊರಟ್ಟಿದ್ದರು. ಇದೇ ವೇಳೆ ಮುದ್ದೇಬಿಹಾಳ ಕಡೆಯಿಂದ ಲಿಂಗಸಗೂರಿನತ್ತ ಬಸ್‌ ಬರುತ್ತಿತ್ತು.

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿದ್ದರಿಂದ ಈ ವೇಳೆ ನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ವಿರೇಶ್‌ ಹಾಗೂ ಚನ್ನಬಸವ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಿನೊಳಗೆ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದು ಲಿಂಗಸಗೂರು ಆಸ್ಪತ್ರೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.

ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇನ್ನೂ ಬಸ್ಸಿನಲ್ಲಿದ್ದವರಿಗೆ ಯಾವುದೇ ಹಾನಿಯಾಗಿಲ್ಲ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬಸ್‌ನ ಮುಂಭಾಗ ಜಖಂಗೊಂಡಿದೆ.

ಇದನ್ನೂ ಓದಿ:4 ಲಕ್ಷ ಬೈಕ್‌, ಸ್ಕೂಟರ್‌ ಹಿಂಪಡೆಯಲು ಮುಂದಾದ ಸುಜುಕಿ ಇಂಡಿಯಾ; ಈ ಪಟ್ಟಿಯಲ್ಲಿ ನಿಮ್ಮ ವಾಹನವೂ ಇದ್ಯಾ? ಹೀಗೆ ಚೆಕ್‌ ಮಾಡಿ

ಕಾರ್ಕಳದಲ್ಲಿ ಸಿಲಿಂಡರ್ ಸ್ಫೋಟಕ್ಕೆ ಇಬ್ಬರು ಗಂಭೀರ

ಉಡುಪಿಯ ಕಾರ್ಕಳದ ಆನೆಕೆರೆ ಸಮೀಪದ ಕೃಷ್ಣಾ ಅಪಾರ್ಟ್ಮೆಂಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸಿಲಿಂಡರ್ ಸ್ಫೋಟಕ್ಕೆ ಕಾರ್ಕಳದ ಜನತೆ ಬೆಚ್ಚಿ ಬಿದ್ದಿದ್ದಾರೆ. ಭಾರಿ ಶಬ್ದದೊಂದಿಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಅಪಾರ್ಟ್ಮೆಂಟ್‌ನ ನಾಲ್ಕು ಮನೆಗಳಿಗೆ ಹಾನಿಯಾಗಿದೆ. ಮನೆಯ ಗೋಡೆಗಳು ಛಿದ್ರಗೊಂಡು ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿದೆ. ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯರು ಗಾಯಾಳುಗಳನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Dog Meat: ಅಬ್ದುಲ್‌ ರಜಾಕ್‌ ತರಿಸುವ ಮಾಂಸದ ಮೇಲೆ ಹೆಚ್ಚುತ್ತಿದೆ ಅನುಮಾನ! ಹಲವು ಹೋಟೆಲ್‌ ಮಾಲಿಕರಿಗೆ ನೋಟೀಸ್‌

Dog Meat: ಬೆಂಗಳೂರಿನಲ್ಲಿ ಕೆ.ಜಿ ಕುರಿ ಮಾಂಸ 700-800 ರೂಪಾಯಿ ಇದೆ. ತಮಿಳುನಾಡು, ಮಹಾರಾಷ್ಟ್ರ, ಆಂಧ್ರಪ್ರದೇಶದ ಭಾಗದಲ್ಲೂ ಕುರಿ ಮಾಂಸದ ಬೆಲೆ 700 ರೂಪಾಯಿ ಇದೆ. ಹೀಗಿರುವಾಗ, ಅಬ್ದುಲ್ ರಜಾಕ್ ತಂಡ ಆಮದು ಮಾಡುವ ಮಾಂಸದ ಬೆಲೆ 500 ರೂ. ಯಾಕೆ ಎಂಬ ಅನುಮಾನ ಮೂಡಿದೆ.

VISTARANEWS.COM


on

dog meat abdul razak
Koo

ಬೆಂಗಳೂರು: ಬೆಂಗಳೂರಿನಲ್ಲಿ ಕಳಪೆ ಮಾಂಸ (Poor meat) ಉಣಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ನಗರದ ಹಲವು ಪ್ರತಿಷ್ಠಿತ ಹೋಟೆಲ್, ರೆಸ್ಟೋರೆಂಟ್ (Hotel Owners) ಮಾಲೀಕರಿಗೆ ನೊಟೀಸ್ (Notice) ನೀಡಲಾಗಿದೆ. ಅಬ್ದುಲ್‌ ರಜಾಕ್‌ (Abdul Razak) ಆಮದು ಮಾಡುತ್ತಿರುವುದು ನಾಯಿ ಮಾಂಸ (Dog Meat) ಎಂಬ ಆರೋಪ ಹಾಗೂ ಪ್ರತಿಭಟನೆ ಹಿನ್ನೆಲೆಯಲ್ಲಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದ್ದು, ಆರೋಗ್ಯ ಇಲಾಖೆಯ (Health Department) ಅಧಿಕಾರಿಗಳು ಚುರುಕಾಗಿ ಕಾರ್ಯಪ್ರವೃತ್ತರಾಗಿದ್ದಾರೆ.

ಮೊದಲ ಹಂತವಾಗಿ ಒಂಬತ್ತು ಜನ ರೆಸ್ಟೋರೆಂಟ್, ಹೋಟೆಲ್ ಮಾಲೀಕರಿಗೆ ನೊಟೀಸ್ ನೀಡಲಾಗಿದೆ. ಇವರು ಅಬ್ದುಲ್ ರಜಾಕ್ ಅವರಿಂದ ಮಾಂಸ ಪಡೆಯುತ್ತಿದ್ದ ಹೋಟೆಲ್‌, ರೆಸ್ಟೋರೆಂಟ್‌ಗಳು. ಈ ಸಂಬಂಧ ವ್ಯವಹಾರದ ದಾಖಲೆ ಸಮೇತ ವಿಚಾರಣೆಗೆ ಹಾಜರಾಗಲು ನೊಟೀಸ್ ನೀಡಲಾಗಿದೆ. ನಿನ್ನೆ‌ ಇಬ್ಬರನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ವಿಚಾರಣೆ ಮಾಡಿದ್ದಾರೆ. ಉಳಿದವರು ಸೋಮವಾರ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

ನಿನ್ನೆ‌ ಅಬ್ದುಲ್ ರಜಾಕ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಸೋಮವಾರವೂ ವಿಚಾರಣೆ ಮುಂದುವರಿಯಲಿದೆ. ಡೆಸಿಗ್ನೇಟ್ ಆಫೀಸರ್ ಡಾ. ಜನಾರ್ದನ್ ಅವರಿಂದ ವಿಚಾರಣೆ ನಡೆಯುತ್ತಿದೆ. ನಿನ್ನೆ ಐದಾರು ಗಂಟೆಗಳ ಕಾಲ ಅಬ್ದುಲ್ ರಜಾಕ್ ವಿಚಾರಣೆ ಎದುರಿಸಿದ್ದರು. ಸೋಮವಾರ ಕೂಡ ವಿಚಾರಣೆಗೆ ಬರುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಸೂಚಿಸಿದ್ದಾರೆ.

ಯಾಕೆ ಅನುಮಾನ?

ಅಬ್ದುಲ್ ರಜಾಕ್ ತಂಡ ಆಮದು ಮಾಡಿಸಿಕೊಳ್ಳುತ್ತಿರುವ ಮಾಂಸದ ಮೇಲೆ ಅನುಮಾನ ಹೆಚ್ಚಿದ್ದು, ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಯಿಂದ ತೀವ್ರ ತನಿಖೆಗೆ ಒಳಪಡಲಿದೆ. ಅಬ್ದುಲ್ ರಜಾಕ್ ತಂಡ ಸಪ್ಲೈ ಮಾಡುತ್ತಿದ್ದ ಹೋಟೆಲ್‌ಗಳ ಮಾಹಿತಿ ಸಂಗ್ರಹಿಸಲಾಗಿದೆ.

ಬೆಂಗಳೂರಿನಲ್ಲಿ ಕೆ.ಜಿ ಕುರಿ ಮಾಂಸ 700-800 ರೂಪಾಯಿ ಇದೆ. ರಾಜ್ಯದ ಯಾವ ಜಿಲ್ಲೆಗೆ ಹೋದರೂ 700-800 ರೂಪಾಯಿ ಕೆ.ಜಿ. ಇದೆ. ತಮಿಳುನಾಡು, ಮಹಾರಾಷ್ಟ್ರ, ಆಂಧ್ರಪ್ರದೇಶದ ಭಾಗದಲ್ಲೂ ಕುರಿ ಮಾಂಸದ ಬೆಲೆ 700 ರೂಪಾಯಿ ಇದೆ. ಹೀಗಿರುವಾಗ, ಅಬ್ದುಲ್ ರಜಾಕ್ ತಂಡ ಆಮದು ಮಾಡುವ ಮಾಂಸದ ಬೆಲೆ 500 ರೂ. ಯಾಕೆ? 400-500 ರೂಪಾಯಿ ಕೆ.ಜಿಗೆ ಕುರಿ ಮಾಂಸ ಮಾರಾಟ ಮಾಡಲು ಹೇಗೆ ಸಾಧ್ಯ? ಎಂಬ ಪ್ರಶ್ನೆ ಮೂಡಿದೆ.

ಬೆಂಗಳೂರಿನ 108 ಹೋಟೆಲ್‌ಗಳಿಗೆ ರಜಾಕ್‌ ಮಾಂಸ ನೀಡುತ್ತಿದ್ದರು. ಜೈಪುರದಿಂದ ಬೆಂಗಳೂರಿನ ರೈಲು ನಿಲ್ದಾಣಕ್ಕೆ ಮಾಂಸ ಪಾರ್ಸೆಲ್ ಮಾಡಲು ಕೆಜಿಗೆ 8-10 ರೂಪಾಯಿ ಚಾರ್ಜ್ ಆಗುತ್ತದೆ. ರಾಜಸ್ಥಾನದಲ್ಲಿ ಮಾಂಸ ವಧೆ ಮಾಡುವ ಜಾಗದಿಂದ ಜೈಪುರ್ ನಿಲ್ದಾಣಕ್ಕೆ ತರುವ ವಾಹನದ ಬಾಡಿಗೆ, ರೈಲಿಗೆ ಲೋಡ್ ಮಾಡುವ ಕೂಲಿ, ಬೆಂಗಳೂರಿನಲ್ಲಿ ಅನ್‌ಲೋಡ್ ಮಾಡುವ ಕೂಲಿ, ಬೆಂಗಳೂರಿನಲ್ಲಿ ಮಾಂಸ ಸರಬರಾಜು ಮಾಡುವ ಟ್ರಾನ್ಸ್‌ಪೋರ್ಟ್ ಚಾರ್ಜ್- ಎಲ್ಲಾ ವೆಚ್ಚ ಅಂದಾಜು ಸೇರಿ ಕೆ.ಜಿ ಮಾಂಸಕ್ಕೆ 100 ರೂಪಾಯಿ ಹೆಚ್ಚಿಸಬೇಕು. ಹೀಗಿರುವಾಗ ಕೆ.ಜಿ ಮಾಂಸ 400-500 ರೂ. ಹೇಗೆ ಮಾರಾಟ ಮಾಡಲು ಸಾಧ್ಯ?

ಅಂದರೆ ಅಲ್ಲಿಗೆ ಅಬ್ದುಲ್ ರಜಾಕ್ ತಂಡಕ್ಕೆ ಕುರಿ‌ ಮಾಂಸ ಕೆ.ಜಿಗೆ 200 ರೂಪಾಯಿಗೆ ಸಿಗುತ್ತಿದೆಯಾ? ಎಂಬ ಅನುಮಾನ ಮೂಡಿದೆ. ಆದರೆ ಎಲ್ಲೂ ಇಷ್ಟು ಕಡಿಮೆ ಬೆಲೆಗೆ ಮಾಂಸ ಸಿಗಲಾರದು. ಹೀಗಾಗಿ ಇದು ಕಳಪೆ ಮಾಂಸ ಅಥವಾ ನಾಯಿ ಮಾಂಸ ಇರಲೂಬಹುದು ಎಂದು ಕೆಲವರು ತರ್ಕಿಸಿದ್ದಾರೆ.

ತನಿಖೆ ಚುರುಕುಗೊಳಿಸಿದ ಕಾಟನ್ ಪೇಟೆ ಪೊಲೀಸರು

ಮಾಂಸ ಸಾಗಣೆಯ ಬಗ್ಗೆ ಕಾಟನ್‌ಪೇಟೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ರೈಲ್ವೆ ಅಧಿಕಾರಿಗಳಿಗೆ ಪತ್ರ ಬರೆದು ಮಾಹಿತಿ ಕೇಳಿದ್ದಾರೆ. ರೈಲಿನಲ್ಲಿ ಮಾಂಸ ಎಲ್ಲಿಂದ ಬರ್ತಾ ಇತ್ತು? ಎಷ್ಟು ದಿನಗಳಿಗೊಮ್ಮೆ ಬರ್ತಾ ಇತ್ತು? ಯಾವ ಟ್ರೈನ್‌ನಲ್ಲಿ ಯಾರು ತಗೊಂಡು ಬರ್ತಾ ಇದ್ರು? ಯಾವ ಪ್ಲಾಟ್‌ಫಾರಂಗೆ ರೈಲು ಬರ್ತಾ ಇತ್ತು, ಆ ಪ್ಲಾಟ್ ಫಾರಂನ ಸಿಸಿಟಿವಿ ದಾಖಲೆ, ಮಾಂಸ ಬರುವ ಸಮಯದಲ್ಲಿ ಯಾರು ಬಂದು ರಿಸೀವ್ ಮಾಡ್ತಾ ಇದ್ರು ಎಂಬ ಬಗ್ಗೆ ವಿವರ ಕೇಳಲಾಗಿದೆ.

ಮಾಧ್ಯಮಗಳಲ್ಲಿ ಅಬ್ದುಲ್ ರಜಾಕ್ ನಾನೇ ಮಾಂಸ ತರಿಸುತ್ತಿದ್ದುದಾಗಿ ಹೇಳಿಕೊಂಡಿದ್ದರು. ಹಾಗಾಗಿ ಅಬ್ದುಲ್ ರಜಾಕ್‌ಗೆ ನೋಟಿಸ್ ಕೊಟ್ಟು ವಿಚಾರಣೆಗೆ ಕರೆಯಲಾಗಿದೆ. ಅಬ್ದುಲ್ ರಜಾಕ್ ಜೊತೆಗೆ ಕೆಲ ಹೋಟೆಲ್ ಮಾಲೀಕರಿಗೂ ನೊಟೀಸ್ ನೀಡಲಾಗಿದೆ.

ಇದನ್ನೂ ಓದಿ: Dog Meat: 15 ವರ್ಷದಿಂದ ಅಬ್ದುಲ್ ರಜಾಕ್ ನಾಯಿ ಮಾಂಸ ತಿನ್ನಿಸುತ್ತಿದ್ದಾರೆ: ಪ್ರಮೋದ್‌ ಮುತಾಲಿಕ್‌ ಶಾಕಿಂಗ್‌ ಹೇಳಿಕೆ

Continue Reading
Advertisement
sunil bose savitha viral news
ವೈರಲ್ ನ್ಯೂಸ್4 mins ago

Viral News: ಮದುವೆಯೇ ಆಗಿಲ್ಲ ಎಂದ ಚಾಮರಾಜನಗರ ಸಂಸದ ನಿರ್ದೇಶಕಿ ಹಣೆಗೆ ಕುಂಕುಮ ಇಟ್ಟರು!

Geyser Blast
ತಂತ್ರಜ್ಞಾನ7 mins ago

Geyser Blast: ಬಾಂಬ್‌‌ನಂತೆ ಬ್ಲಾಸ್ಟ್ ಆಗಬಹುದು ಗೀಸರ್! ಮಳೆಗಾಲದಲ್ಲಿ ಈ ಮುನ್ನೆಚ್ಚರಿಕೆ ಇರಲಿ

Mysuru News
ಕ್ರೈಂ28 mins ago

Mysuru News : ಡೆತ್‌ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಆಟೋ ಡ್ರೈವರ್ ಶವವಾಗಿ ಪತ್ತೆ

Actor Darshan case Police Serve Notice To Siddarudha Who Claimed To Met Darshan
ಸ್ಯಾಂಡಲ್ ವುಡ್32 mins ago

Actor Darshan: ದರ್ಶನ್​ ಭೇಟಿ ಮಾಡಿ, ಯೋಗ, ಧ್ಯಾನ ಹೇಳಿಕೊಟ್ಟೆ ಎಂದ ಸಿದ್ಧಾರೂಢನಿಗೆ ಸಂಕಷ್ಟ! ನೋಟಿಸ್‌ ಕೊಟ್ಟ ಪೊಲೀಸರು!

hd kumaraswamy nanjanagudu
ಪ್ರಮುಖ ಸುದ್ದಿ35 mins ago

HD Kumaraswamy: ಎಚ್‌ಡಿ ಕುಮಾರಸ್ವಾಮಿ ಬಂದರೂ ತೆಗೆಯದ ಪ್ರವಾಸಿ ಮಂದಿರ ಬೀಗ, ಕೇಂದ್ರ ಸಚಿವರಿಗೆ ಅವಮಾನ

RRB Recruitment 2024
ಉದ್ಯೋಗ36 mins ago

RRB Recruitment 2024: ರೈಲ್ವೇ ಇಲಾಖೆಯಲ್ಲಿದೆ ಬರೋಬ್ಬರಿ 7,951 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Paris 2024 Olympics
ಕ್ರೀಡೆ38 mins ago

Paris 2024 Olympics: ಭಾರತೀಯ ಕ್ರೀಡಾಪಟುಗಳಿಗೆ ವಸ್ತ್ರ ವಿನ್ಯಾಸ ಮಾಡಿದ್ದ ತರುಣ್‌ ವಿರುದ್ಧ ಟೀಕೆಗಳ ಸುರಿಮಳೆ

road Accident
ರಾಯಚೂರು52 mins ago

Road Accident : ಕುಡಿದು ಕಾರು ಓಡಿಸಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು ; ಕಾರ್ಕಳದಲ್ಲಿ ಸಿಲಿಂಡರ್ ಸ್ಫೋಟ

Delhi Floods
ದೇಶ59 mins ago

Delhi Floods: ದೆಹಲಿಯಲ್ಲಿ ಕೋಚಿಂಗ್‌ ಸೆಂಟರ್‌ಗೆ ನುಗ್ಗಿದ ನೀರು; ಮೃತರ ಸಂಖ್ಯೆ 3ಕ್ಕೆ ಏರಿಕೆ: ವಿದ್ಯಾರ್ಥಿಗಳಿಂದ ಪ್ರತಿಭಟನೆ

dog meat abdul razak
ಕ್ರೈಂ1 hour ago

Dog Meat: ಅಬ್ದುಲ್‌ ರಜಾಕ್‌ ತರಿಸುವ ಮಾಂಸದ ಮೇಲೆ ಹೆಚ್ಚುತ್ತಿದೆ ಅನುಮಾನ! ಹಲವು ಹೋಟೆಲ್‌ ಮಾಲಿಕರಿಗೆ ನೋಟೀಸ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ17 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ22 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ23 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ2 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ2 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ2 days ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ2 days ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ3 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್3 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ3 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌