Namma Metro | ಮೆಟ್ರೊ ಪ್ರಯಾಣಿಕರಿಗೆ ಗುಡ್ ನ್ಯೂಸ್; ಕುಟುಂಬಸಮೇತ ಪ್ರಯಾಣಿಸುವಾಗ ಒಂದೇ ಟಿಕೆಟ್‌ ಸಾಕು! - Vistara News

ಬೆಂಗಳೂರು

Namma Metro | ಮೆಟ್ರೊ ಪ್ರಯಾಣಿಕರಿಗೆ ಗುಡ್ ನ್ಯೂಸ್; ಕುಟುಂಬಸಮೇತ ಪ್ರಯಾಣಿಸುವಾಗ ಒಂದೇ ಟಿಕೆಟ್‌ ಸಾಕು!

ಕುಟುಂಬ ಸಮೇತ ಆಗಮಿಸುವವರಿಗೆ ಅನುಕೂಲವಾಗಲು ನಮ್ಮ ಮೆಟ್ರೋ ಕ್ಯೂಆರ್‌ ಕೋಡ್‌ ಟಿಕೆಟ್‌ ವ್ಯವಸ್ಥೆ ಮಾಡಲು ನಿರ್ಧರಿಸಿದೆ. ಇದರಿಂದ ಪ್ರಯಾಣಿಕರಿಗೆ, ಟಿಕೆಟ್‌ಗಾಗಿ ನಿಮಿಷಗಟ್ಟಲೇ ಕಾಯುವ ಸಮಯ ಉಳಿಯಲಿದೆ.

VISTARANEWS.COM


on

Namma Metro
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು:‌ ಕುಟುಂಬ ಸಮೇತ ಮೆಟ್ರೋ ರೈಲಿನಲ್ಲಿ ಸಂಚಾರ ಮಾಡಬೇಕಾದರೆ ಟಿಕೆಟ್‌ಗಾಗಿ ನಿಮಿಷಗಟ್ಟಲೇ ಕ್ಯೂ ನಿಲ್ಲುತ್ತಿದ್ದೀರಾ? ಹಾಗಿದ್ದರೆ ಇನ್ನು ಮುಂದೆ ಆ ಟೆನ್ಶನ್ ಇರುವುದಿಲ್ಲ. ನಗರದ ಪ್ರಯಾಣಿಕರಿಗೆ ನಮ್ಮ ಮೆಟ್ರೋ(Namma Metro) ಗುಡ್‌ ನ್ಯೂಸ್ ನೀಡಿದೆ. ಬಿಎಂಆರ್‌ಸಿಎಲ್‌ ಕ್ಯೂಆರ್ ಕೋಡ್‌ ಆಧಾರಿತ ಟಿಕೆಟ್ ವ್ಯವಸ್ಥೆ ಮಾಡಿದ್ದು, ಇದರಿಂದ ಒಂದೇ ಟಿಕೆಟ್‌ನಲ್ಲಿ ಕುಟುಂಬ ಸದಸ್ಯರೆಲ್ಲರೂ ಪ್ರಯಾಣಿಸಬಹುದಾಗಿದೆ.

ಸದ್ಯ ಟೋಕನ್ ಖರೀದಿ ಮಾಡಿಯೇ ಎಲ್ಲರೂ ಪ್ರಯಾಣ ಮಾಡಬೇಕಿದೆ. ಇದಕ್ಕಾಗಿ ನಿಮಿಷಗಟ್ಟಲೇ ಕ್ಯೂನಲ್ಲಿ ಕಾಯಬೇಕಾಗುತ್ತದೆ. ಹೀಗಾಗಿ ಕುಟುಂಬ ಸಮೇತ ಆಗಮಿಸುವವರೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಒಂದೇ ಟಿಕೆಟ್‌ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ. ಒಂದು ಟಿಕೆಟ್‌ನಲ್ಲಿ ಗರಿಷ್ಠ 6 ಮಂದಿಗೆ ಮಾತ್ರ ಅವಕಾಶವಿರುತ್ತದೆ. 2023ರ ಜನವರಿಯಿಂದ ಈ ರೀತಿಯ ವಿಶೇಷ ಕ್ಯೂಆರ್‌ ಕೋಡ್‌ ಟಿಕೆಟ್‌ ವ್ಯವಸ್ಥೆ ಮಾಡಲು ಬಿಎಂಆರ್‌ಸಿಎಲ್‌ ನಿರ್ಧರಿಸಿದೆ.

ಇದನ್ನೂ ಓದಿ | Formal Jobs | ಸೆಪ್ಟೆಂಬರ್‌ನಲ್ಲಿ ಔಪಚಾರಿಕ ಉದ್ಯೋಗ ಸೃಷ್ಟಿ ಹೆಚ್ಚಳ

ಪ್ರಸ್ತುತ ಸಂದರ್ಭದಲ್ಲಿ ಕುಟುಂಬ ಸಹಿತ ಪ್ರಯಾಣ ಮಾಡಿದರೂ ಪ್ರತ್ಯೇಕ ಟಿಕೆಟ್‌ನೊಂದಿಗೆ ಪ್ರಯಾಣಿಸಬೇಕು. ಇದರಿಂದ ಟಿಕೆಟ್ ಕೌಂಟರ್‌ನಲ್ಲಿ ಹೆಚ್ಚು ಕಾಲ ನಿಲ್ಲುವ ಸ್ಥಿತಿಯಿದೆ‌. ಇದನ್ನು ತಪ್ಪಿಸುವ ಉದ್ದೇಶದಿಂದ ಬಿಎಂಆರ್‌ಸಿಎಲ್‌ ಒಂದೇ ಟಿಕೆಟ್‌ನಲ್ಲಿ 6 ಮಂದಿ ಪ್ರಯಾಣಿಸಲು ಅವಕಾಶ ಕಲ್ಪಿಸಲು ಮುಂದಾಗಿದೆ. ಇದರಿಂದ ಒಟ್ಟೊಟ್ಟಿಗೆ ಕುಟುಂಬಸ್ಥರು, ಸ್ನೇಹಿತರು, ಸಂಬಂಧಿಕರು ಪ್ರಯಾಣಿಸಲು ನೆರವಾಗಲಿದ್ದು, ಟಿಕೆಟ್‌ಗಾಗಿ ಕಾಯುವ ಸಮಯವೂ ಉಳಿಯಲಿದೆ.

ಜನವರಿಯಿಂದ ಈ ಸೇವೆ ಆರಂಭವಾಗಲಿದ್ದು, ಸದ್ಯ ಇದರ ಪ್ರಾಯೋಗಿಕ ಪರೀಕ್ಷೆ ನಡೆಯುತ್ತಿದೆ. ಈಗಾಗಲೇ ನವೆಂಬರ್ 1 ರಿಂದ ಆರಂಭವಾಗಿರುವ ಕ್ಯೂಆರ್ ಕೋಡ್‌ ಟಿಕೆಟ್ ವ್ಯವಸ್ಥೆಗೆ ಉತ್ತಮ ಸ್ಪಂದನೆ ಸಿಗುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಜನಸ್ನೇಹಿಯಾಗಲು ಬಿಎಂಆರ್‌ಸಿಎಲ್‌ ಈ ನಿರ್ಧಾರ ಕೈಗೊಂಡಿದೆ.

ಇದನ್ನೂ ಓದಿ | Border dispute | ರಾಜ್ಯದ ಬಸ್‌ ಅಡ್ಡಗಟ್ಟಿ ಪುಂಡಾಟ ಮೆರೆದ ಮಹಾ ಪುಂಡರು, ಬೊಮ್ಮಾಯಿ ವಿರುದ್ಧ ಪ್ರತಿಭಟನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಹಾಸನ

Shiradi Landslide: ಶಿರಾಡಿ ಘಾಟಿ ಸಂಚಾರ ಮುಕ್ತ, ನಿಮ್ಮದೇ ರಿಸ್ಕ್‌ನಲ್ಲಿ ಸಂಚರಿಸಿ!

Shiradi Landslide: ಸಕಲೇಶಪುರದ ದೊಡ್ಡತಪ್ಲೆ ಭಾಗದಲ್ಲಿ ನಿನ್ನೆ ರಾತ್ರಿ ಮೂರನೇ ಬಾರಿಗೆ ಗುಡ್ಡ ಕುಸಿದಿತ್ತು. ಹಲವಾರು ವಾಹನಗಳು ಸಿಲುಕಿಕೊಂಡಿದ್ದವು ಅದೃಷ್ಟವಶಾತ್‌ ಜೀವಹಾನಿ ಆಗಿರಲಿಲ್ಲ. ಇಲ್ಲಿ ತಾತ್ಕಾಲಿಕವಾಗಿ ಮಣ್ಣು ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

VISTARANEWS.COM


on

shiradi landslide
Koo

ಹಾಸನ: ಬೆಂಗಳೂರು- ಮಂಗಳೂರು (Bangalore- Mangalore) ಸಂಪರ್ಕಿಸುವ ಪ್ರಮುಖ ರಸ್ತೆ ಹಾದುಹೋಗುವ ಶಿರಾಡಿ ಘಾಟಿಯಲ್ಲಿ (Shiradi Ghat) ನಿನ್ನೆ ರಾತ್ರಿ ಮತ್ತೆ ಭೂಕುಸಿತದಿಂದ (Shiradi Landslide) ಮುಚ್ಚಿಹೋಗಿದ್ದ ಜಾಗವನ್ನು ವಾಹನಗಳು ಸಂಚರಿಸುವಷ್ಟು ತೆರವು ಮಾಡಲಾಗಿದೆ. ಆದರೆ ಭೂಕುಸಿತದ ಆತಂಕ ಇನ್ನೂ ಇದ್ದು, ವಾಹನ ಸವಾರರು ಜೀವಭಯದಿಂದಲೇ ಸಂಚರಿಸಬೇಕಿದೆ.

ಸಕಲೇಶಪುರದ ದೊಡ್ಡತಪ್ಲೆ ಭಾಗದಲ್ಲಿ ನಿನ್ನೆ ರಾತ್ರಿ ಮೂರನೇ ಬಾರಿಗೆ ಗುಡ್ಡ ಕುಸಿದಿತ್ತು. ಹಲವಾರು ವಾಹನಗಳು ಸಿಲುಕಿಕೊಂಡಿದ್ದವು ಅದೃಷ್ಟವಶಾತ್‌ ಜೀವಹಾನಿ ಆಗಿರಲಿಲ್ಲ. ಇಲ್ಲಿ ತಾತ್ಕಾಲಿಕವಾಗಿ ಮಣ್ಣು ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಎನ್‌ಹೆಚ್‌ಎಐನ ಅಧಿಕಾರಿಗಳು ಸ್ಥಳದಲ್ಲಿದ್ದು ರಸ್ತೆ ಮೇಲೆ ಕುಸಿತವಾಗಿರುವ ಮಣ್ಣನ್ನು ಮಾತ್ರ ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

ಒಂದು ವಾರದ ಹಿಂದೆ ದೊಡ್ಡತಪ್ಲು ಬಳಿ ರಸ್ತೆಗೆ ಗುಡ್ಡದಿಂದ ಮಣ್ಣು ಕುಸಿಯಲು ಆರಂಭಿಸಿದೆ. ಆಗಲೇ ಸ್ಥಳೀಯರು ಎಚ್ಚರಿಸಿದ್ದರು. ಎರಡು ದಿನ ಹಿಂದೆ ಇಲ್ಲಿ ರಸ್ತೆಗೆ ಗುಡ್ಡ ದೊಡ್ಡ ಪ್ರಮಾಣದಲ್ಲಿ ಕುಸಿದಿತ್ತು. ಎರಡು ಕಾರುಗಳು, ಲಾರಿ ಹಾಗೂ ಟ್ಯಾಂಕರ್‌ ಸಿಲುಕಿಕೊಂಡಿದ್ದವು. ಪ್ರಯಾಣಿಕರನ್ನು ಪಾರು ಮಾಡಿ ವಾಹನಗಳನ್ನು ಈಚೆಗೆ ತೆಗೆಯಲಾಗಿತ್ತು. ನಿನ್ನೆ ಬೆಳಗ್ಗೆಯುಷ್ಟೇ ರಸ್ತೆ ಸಂಚಾರ ಮುಕ್ತಗೊಂಡಿತ್ತು. ನಿನ್ನೆ ಮಧ್ಯಾಹ್ನ ಕಂದಾಯ ಸಚಿವ ಕೃಷ್ಣಭೈರೇಗೌಡರು ಇಲ್ಲಿಗೆ ಭೇಟಿ ನೀಡಿ ಅವಲೋಕಿಸಿದ್ದರು. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು.

ನಂತರ ನಿನ್ನೆ ರಾತ್ರಿ ಇದೇ ಸ್ಥಳದಲ್ಲಿ ಮತ್ತೆ ಗುಡ್ಡ ಕುಸಿದಿದೆ. ಮಣ್ಣಿನಡಿ ಹಲವು ವಾಹನಗಳು ಸಿಲುಕಿಕೊಂಡವು. ಗುಡ್ಡ ಕುಸಿತದ ರಭಸಕ್ಕೆ ಕಂಟೇನರ್ ಒಂದು ಪಲ್ಟಿಯಾಗಿದೆ. ನಂತರ ಇಲ್ಲಿ ಪೂರ್ತಿಯಾಗಿ ರಸ್ತೆ ಸಂಚಾರ ಬಂದ್‌ ಮಾಡಿ ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ಆದೇಶ ನೀಡಿದ್ದರು. ನಿರಂತರ ಗುಡ್ಡ ಕುಸಿಯುತ್ತಿರುವುದರಿಂದ ಜಿಲ್ಲಾಡಳಿತ ಈ ಆದೇಶ ನೀಡಿದ್ದು, ಬದಲಿ ಮಾರ್ಗದಲ್ಲಿ ಸಂಚಾರ ಮಾಡುವಂತೆ ಆದೇಶಿಸಿತ್ತು.

ಕಂದಾಯ ಸಚಿವರ ಕ್ಲಾಸ್‌

ನಿನ್ನೆ ಗುಡ್ಡ ಕುಸಿತ ಸ್ಥಳಕ್ಕೆ ಸಚಿವರ ಭೇಟಿ ನೀಡಿದ್ದ ಸಚಿವ ಕೃಷ್ಣೆಬೈರೇಗೌಡ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದರು. ʼಇಷ್ಟೆಲ್ಲಾ ಸಮಸ್ಯೆ ಆಗಿದೆ, ನಮ್ಮ ಇಡೀ ಅಧಿಕಾರಿ ವರ್ಗ ಇಲ್ಲಿ ಸಮಸ್ಯೆ ಆಗಬಾರದು ಎಂದು ಎಚ್ಚರಿಕೆ ವಹಿಸಿದೆ. ನೀವು ಜನರಿಗೆ ಸಮಸ್ಯೆ ಆಗದಂತೆ ಏನು ಎಚ್ಚರಿಕೆ ವಹಿಸಿದ್ದೀರಿ? ಬೇಕಾಬಿಟ್ಟಿಯಾಗಿ ರಸ್ತೆಯ ಬದಿಗಳನ್ನು ಕಡಿದು ತೆಗೆದಿದ್ದೀರಾʼ ಎಂದು ಕಿಡಿ ಕಾರಿದರು. ʼಇದು ರಾಜ್ಯದ ಪ್ರಮುಖ ರಸ್ತೆ. ಬಂದ್ ಮಾಡಲು ಆಗುವುದಿಲ್ಲ. ಮೊದಲೇ ಜಾಗೃತೆ ವಹಿಸಬೇಕಿತ್ತಲ್ಲವೇʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ʼನಮ್ಮ ಅದೃಷ್ಟ ಯಾರಿಗೆ ಏನೂ ತೊಂದರೆ ಆಗಿಲ್ಲ. ಗುಡ್ಡ ಕುಸಿದು ಮಣ್ಣಿನ ಅಡಿ ಸಿಲುಕಿದ್ದ ವಾಹನಗಳನ್ನ ನಮ್ಮ ಸಿಬ್ಬಂದಿ ಹೊರ ತೆಗೆದಿದ್ದಾರೆ. ಶಿರಾಡಿ ಘಾಟ್ ಸಮಸ್ಯೆ ಇಂದು ನೆನ್ನೆಯದಲ್ಲ. ಇದು ಹಲವು ವರ್ಷಗಳಿಂದ ಸಮಸ್ಯೆ ಇದೆ. ಗುಡ್ಡಗಳನ್ನು ನೆರವಾಗಿ ಕಡಿದಿದ್ದರಿಂದ ಸಮಸ್ಯೆ ಆಗಿದೆ. ಇಲ್ಲಿನ ಸಮಸ್ಯೆ ಬಗ್ಗೆ ನಾವು ಸಿಎಂ ಅವರಿಂದಲೂ ಕೂಡ ಪತ್ರ ಬರೆಸುತ್ತೇವೆ ಎಂದಿದ್ದರು ಸಚಿವರು.

ʼಸೂಕ್ತ ಬಂದೋಬಸ್ತ್ ಮಾಡದೆ ರಸ್ತೆ ಮಾಡಿ ಸಮಸ್ಯೆ ಆಗಿದೆ. ಇಲ್ಲಿನ ಸಮಸ್ಯೆ ಬಗ್ಗೆ ಜಿಯೊಲಜಿಕಲ್ ಸರ್ವೆ ಆಫ್ ಇಂಡಿಯಾದಿಂದ ವರದಿ ಪಡೆಯುತ್ತೇವೆ. ಈಗ ಏನಾಗಿದೆ, ಯಾವ ರೀತಿ ಆಗಬೇಕು ಎಂದು ವರದಿ ಪಡೆಯುತ್ತೇವೆ. ಸಿಎಂ ಮೂಲಕ ಎನ್ಎಚ್ಎಗೆ ಪತ್ರ ಬರೆದು ಸಮಸ್ಯೆ ಬಗೆಹರಿಸಲು ತಾಕೀತು ಮಾಡುತ್ತೇವೆ. ನಮ್ಮ ರಾಜ್ಯದ ಹಲವು ಕಡೆ ಗುಡ್ಡ ಕುಸಿತ ಆಗಿದೆ. ಒಟ್ಟು 300 ಕೋಟಿ ವೆಚ್ಚದಲ್ಲಿ ಭೂ ಕುಸಿತ ಆಗೋ ಸಾಧ್ಯತೆ ಕಡೆಗಳಲ್ಲಿ ಕಾಮಗಾರಿ ಮಾಡುತ್ತೇವೆ. ಈ ಬಗ್ಗೆ ಶೀಘ್ರವಾಗಿ ಡಿಸಿಗಳಿಂದ ಪ್ರಸ್ತಾವನೆ ಪಡೆದು ತಡೆ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಸಚಿವರು ನುಡಿದರು.

ಇದನ್ನೂ ಓದಿ: Shiradi Ghat: ಗುಡ್ಡ ಕುಸಿತ; ಶಿರಾಡಿ ಘಾಟ್‌ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್‌, ಬದಲಿ ಮಾರ್ಗ ಸೂಚನೆ

Continue Reading

ಮಂಡ್ಯ

Soldier Death: ಮೆಟ್ಟಿಲಿನಿಂದ ಕಾಲು ಜಾರಿ ಬಿದ್ದು ಯೋಧ ಮೃತ್ಯು

Soldier Death: ಸಿ.ಕೆ. ಸಂದೀಪ್ ಕುಮಾರ್ (38) ಮೃತ ಯೋಧ. ಸಂದೀಪ್‌ ಹರಿಯಾಣದಲ್ಲಿ ಮಿಲಿಟರಿ ಸೇವೆಯಲ್ಲಿದ್ದರು. ರಜೆಯ ಮೇಲೆ ಗ್ರಾಮಕ್ಕೆ ಬಂದಿದ್ದ ಸಂದೀಪ್, ರಾತ್ರಿ ಮನೆ ಹತ್ತಿರ ಮೆಟ್ಟಿಲಿನಿಂದ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.

VISTARANEWS.COM


on

soldier death mandya
Koo

ಮಂಡ್ಯ: ರಜೆಯಲ್ಲಿ ಬಂದಿದ್ದ ಯೋಧರೊಬ್ಬರು ಸ್ವಗ್ರಾಮದಲ್ಲಿ ಮೆಟ್ಟಿಲಿನಿಂದ ಬಿದ್ದು (Soldier Death) ಸಾವಿಗೀಡಾಗಿದ್ದಾರೆ. ಮಂಡ್ಯ (Mandya news) ಜಿಲ್ಲೆಯ ಮದ್ದೂರು ತಾಲೂಕಿನ ಚಾಮನಹಳ್ಳಿಯಲ್ಲಿ ಘಟನೆ ನಡೆದಿದೆ.

ಸಿ.ಕೆ. ಸಂದೀಪ್ ಕುಮಾರ್ (38) ಮೃತ ಯೋಧ. ಸಂದೀಪ್‌ ಹರಿಯಾಣದಲ್ಲಿ ಮಿಲಿಟರಿ ಸೇವೆಯಲ್ಲಿದ್ದರು. ರಜೆಯ ಮೇಲೆ ಗ್ರಾಮಕ್ಕೆ ಬಂದಿದ್ದ ಸಂದೀಪ್, ರಾತ್ರಿ ಮನೆ ಹತ್ತಿರ ಮೆಟ್ಟಿಲಿನಿಂದ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.

ಕೊಲೆ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಆನೇಕಲ್: ಪುರಸಭೆ ಸದಸ್ಯನನ್ನು ಕೊಂದಿದ್ದ ಕುಖ್ಯಾತ ರೌಡಿ ಶೀಟರ್‌ನನ್ನು (Rowdy Sheeter) ಪೊಲೀಸರು ಬಂಧಿಸಿದ್ದಾರೆ. ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಲು (Assault) ಯತ್ನಿಸಿದ ಈತನ ಕಾಲಿಗೆ ಗುಂಡು ಹಾರಿಸಿ (Police Firing) ಬಂಧಿಸಲಾಗಿದೆ. ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಬಂಧಿತ ಕೊಲೆ ಆರೋಪಿ (Murder Culprit).

ಆನೇಕಲ್ ತಾಲ್ಲೂಕಿನ ಮೈಸೂರಮ್ಮನ ದೊಡ್ಡಿ ಬಳಿ ಫೈರಿಂಗ್ ನಡೆದಿದೆ. ಆನೇಕಲ್ ಭಾಗದ ಕುಖ್ಯಾತ ರೌಡಿ ಶೀಟರ್ ಆಗಿರುವ ಜೆಕೆ, ಮೈಸೂರಮ್ಮನ ದೊಡ್ಡಿಯಲ್ಲಿ ಅವಿತು ಕುಳಿತಿದ್ದ. ಪೊಲೀಸರು ಖಚಿತ ಮಾಹಿತಿ ಮೇರೆಗೆ ಆರೋಪಿ ಬಂಧನಕ್ಕೆ ತೆರಳಿದ್ದರು. ಸೆರೆಯಾಗುವಂತೆ ಆದೇಶಿಸಿ ಆನೇಕಲ್ ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆಗ ಜೆಕೆ ಪೊಲೀಸ್ ಸಿಬ್ಬಂದಿ ಸುರೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾನೆ. ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆಹಿಡಿದಿದ್ದಾರೆ.

ಈತ ಪುರಸಭಾ ಸದಸ್ಯ ಸ್ಕ್ರಾಪ್ ರವಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ. ಕಳೆದ 24ನೇ ತಾರೀಕು ಬುಧವಾರ ಕೊಲೆ ನಡೆದಿತ್ತು. ಸ್ಕ್ರಾಪ್ ರವಿ ಕಚೇರಿಯಲ್ಲಿದ್ದಾಗ ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಗ್ಯಾಂಗ್ ಕಚೇರಿಗೆ ನುಗ್ಗಿ ಕೊಲೆ ಮಾಡಿತ್ತು. ಕಾರ್ತಿಕ್ ಅಲಿಯಾಸ್ ಜೆಕೆ, ಹರೀಶ್ ಅಲಿಯಾಸ್ ಹಂದಿ ಹರೀಶ್, ವಿನಯ್ ಅಲಿಯಾಸ್ ವಿನಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳು.

ಆರೋಪಿಗಳ ಬಂಧನಕ್ಕೆ ಪೊಲೀಸರ ಎರಡು ತಂಡ ರಚಿಸಲಾಗಿತ್ತು. ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಕೊಲೆ ಆರೋಪಿಗಳ ಪೈಕಿ ಹರೀಶ್ ಮತ್ತು ವಿನಯ್ ಕೋರ್ಟಿಗೆ ಶರಣಾಗಿದ್ದಾರೆ. ಪ್ರಮುಖ ಆರೋಪಿ ರೌಡಿ ಶೀಟರ್ ಜೆಕೆ ಕಾರ್ತಿಕ್ ತಲೆಮರೆಸಿಕೊಂಡಿದ್ದ.

ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಅರ್ಚಕ ಬಂಧನ

ಮಹಿಳೆ ಮೇಲೆ ಅತ್ಯಾಚಾರ (Physical abuse) ಆರೋಪದಡಿ ಹಾಸನದ ಪ್ರಸಿದ್ಧ ದೇವಾಲಯದ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯ ಪುರದಮ್ಮ ದೇವಾಲಯದ ಪೂಜಾರಿ ದಯಾನಂದ್ (39) ಬಂಧಿತ ವ್ಯಕ್ತಿ.

ಬಾಗಲುಗುಂಟೆ ಠಾಣೆ ಪೊಲೀಸರಿಂದ ಆರೋಪಿ ಬಂಧನವಾಗಿದೆ. ಕೆಲ ದಿನಗಳ ಹಿಂದೆ ಮಹಿಳೆ ನೀಡಿದ ದೂರಿನನ್ವಯ ಬಾಗಲುಗುಂಟೆ ಠಾಣೆಯಲ್ಲಿ ಆತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಆರೋಪಿ ದಯಾನಂದ್‌ನ ಪೊಲೀಸರು ಬಂಧಿಸಿದ್ದಾರೆ. ದೋಷ ನಿವಾರಣೆಗಾಗಿ ಪೂಜೆ ಮಾಡುತ್ತೇನೆಂದು ಹಣ ಪಡೆದಿದ್ದ ಪೂಜಾರಿ, ಬಳಿಕ ಮಹಿಳೆಯನ್ನು ಕರೆಸಿಕೊಂಡು ಆತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ದಯಾನಂದ್ ಅರಸೀಕೆರೆ ಬಳಿಯ ಗೊಲ್ಲರಹಳ್ಳಿ ಕುರುಗುಂದ ಗ್ರಾಮ ಪಂಚಾಯಿತಿಯ ಸದಸ್ಯನಾಗಿದ್ದಾನೆ. ಮಹಿಳೆ ಪುರದಮ್ಮ ದೇವಸ್ಥಾನಕ್ಕೆ ಹೋಗಿದ್ದಾಗ ಪರಿಚಯ ಮಾಡಿಕೊಂಡಿದ್ದ. ಶಾಸ್ತ್ರ ಹೇಳುತ್ತಿದ್ದ ಪೂಜಾರಿ ದಯಾನಂದ್‌ಗೆ ಮದುವೆಯಾಗಿ ಎರಡು ಮಕ್ಕಳಿದ್ದಾರೆ. ಮಹಿಳೆಗೆ ಕಂಟಕವಿದೆ‌ ಹೇಳಿ ಆಗಾಗ ಹಣ ಪಡೆಯುತ್ತಿದ್ದ ಎನ್ನಲಾಗಿದೆ. ಒಂದು‌ ಲಕ್ಷಕ್ಕಿಂತ ಹೆಚ್ಚು ಹಣ ಮಹಿಳೆಯಿಂದ ಪಡೆದಿದ್ದ ಎನ್ನಲಾಗಿದೆ.

ಇದನ್ನೂ ಓದಿ | Brutal Murder: ಎದೆ, ಗುಪ್ತಾಂಗಕ್ಕೆ ಚಾಕು ಇರಿದು ಹತ್ಯೆ; ಬೀದಿಯಲ್ಲಿ ಬಿದ್ದಿದ್ದ ಯುವತಿಯ ಶವವನ್ನುಕಚ್ಚಿ ಎಳೆದಾಡಿದ ಶ್ವಾನಗಳು; ಕರ್ನಾಟಕ ಮೂಲದ ದಾವೂದ್‌ ಎಸ್ಕೇಪ್‌

Continue Reading

ಪ್ರಮುಖ ಸುದ್ದಿ

CM Siddaramaiah: ಮುಡಾ ಹಗರಣ ವಿಚಾರದಲ್ಲಿ ರಾಜ್ಯಪಾಲರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ‌ ನೋಟೀಸ್

CM Siddaramaiah: ಮೂರು ದಿನಗಳ ಹಿಂದೆ ದೂರುದಾರ ಟಿ.ಜೆ ಅಬ್ರಹಾಂ ಅವರನ್ನು ಕರೆದು ರಾಜ್ಯಪಾಲರು ಮಾಹಿತಿ ಪಡೆದಿದ್ದರು. ಬಿಜೆಪಿ ನಿಯೋಗ ಕೂಡ ರಾಜ್ಯಪಾಲರನ್ನು ಭೇಟಿಯಾಗಿ, ಸಿಎಂ ವಿರುದ್ಧ ತನಿಖೆ ಜರುಗಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು.

VISTARANEWS.COM


on

cm siddaramaiah MUDA scam
Koo

ಬೆಂಗಳೂರು: ಮುಡಾ ಹಗರಣದ (MUDA Scam) ವಿಚಾರದಲ್ಲಿ ಬಂದಿರುವ ದೂರಿನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಸರ್ಕಾರಕ್ಕೆ ರಾಜ್ಯಪಾಲರು (Governor) ನೋಟೀಸ್‌ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ (Prosecution) ಅನುಮತಿ ನೀಡಬೇಕು ಎಂದು ಬಂದಿರುವ ಮನವಿ ಹಿನ್ನೆಲೆಯಲ್ಲಿ ನೋಟೀಸ್‌ (Notice) ನೀಡಲಾಗಿದೆ.

ಮುಡಾ ಪ್ರಕರಣದ ಮಾಹಿತಿ ದಾಖಲೆ ಸಹಿತ ನೀಡುವಂತೆ ಸರ್ಕಾರಕ್ಕೆ ರಾಜ್ಯಪಾಲರು ನೋಟೀಸ್ ಕಳಿಸಿದ್ದಾರೆ. ಟಿ.ಜೆ ಅಬ್ರಹಾಂ ಎಂಬ ಸಾಮಾಜಿಕ ಕಾರ್ಯಕರ್ತರು ಈ ಕುರಿತು ಖಾಸಗಿ ದೂರು ಸಲ್ಲಿಸಿದ್ದರು. ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿಯಲ್ಲಿ ಕೇಳಲಾಗಿತ್ತು. ಮೂರು ದಿನಗಳ ಹಿಂದೆ ದೂರುದಾರ ಟಿ.ಜೆ ಅಬ್ರಹಾಂ ಅವರನ್ನು ಕರೆದು ರಾಜ್ಯಪಾಲರು ಮಾಹಿತಿ ಪಡೆದಿದ್ದರು. ಬಿಜೆಪಿ ನಿಯೋಗ ಕೂಡ ರಾಜ್ಯಪಾಲರನ್ನು ಭೇಟಿಯಾಗಿ, ಸಿಎಂ ವಿರುದ್ಧ ತನಿಖೆ ಜರುಗಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು.

ಬಳಿಕ ಇದೀಗ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟೀಸ್ ಕಳುಹಿಸಲಾಗಿದೆ. ಅಬ್ರಹಾಂ ದೂರಿಗೆ ಸಂಬಂಧಿಸಿ ಪ್ರಕರಣದ ಬಗ್ಗೆ ಸಮಗ್ರ ಮಾಹಿತಿ ಕೊಡುವಂತೆ ನೋಟೀಸ್ ಜಾರಿ ಮಾಡಿದ್ದಾರೆ. ಈಗಾಗಲೇ ರಾಜ್ಯಪಾಲರು ನೋಟೀಸ್‌ ಕಳುಹಿಸಬಹುದು ಎಂಬ ವದಂತಿಯ ಆಧಾರದಲ್ಲಿ ಕಾಂಗ್ರೆಸ್‌ ಮುಖಂಡರು ಸಿಡಿದೆದ್ದಿದ್ದಾರೆ. ನಿನ್ನೆ ಕಂದಾಯ ಸಚಿವ ಕೃಷ್ಣಭೈರೇಗೌಡರು, ʼರಾಜ್ಯಪಾಲರ ಮೂಲಕ ಸರಕಾರ ಅಸ್ಥಿರಗೊಳಿಸುವ ದಾರಿ ಹಿಡಿದರೆ ನಾವು ಸುಪ್ರೀಂ ಕೋರ್ಟ್‌ ಮೊರೆ ಹೋಗಲಿದ್ದೇವೆʼ ಎಂದು ಎಚ್ಚರಿಸಿದ್ದರು.

ಇಡಿ ಜೊತೆಗೆ ರಾಜಭವನದ ದುರುಪಯೋಗ ಆಗುತ್ತಿದೆ ಎಂದು ಕಾಂಗ್ರೆಸ್‌ ಸಚಿವರು ಆರೋಪಿಸಿದ್ದರು. ಈ ನಡುವೆ ಮುಡಾ ವಿಚಾರದಲ್ಲಿ ಪ್ರಾಸಿಕ್ಯೂಶನ್‌ಗೆ ಅನುಮತಿ ಕೊಡುವುದರ ವಿರುದ್ಧ ಇಂದು ನಡೆಯುವ ಕ್ಯಾಬಿನೆಟ್‌ ಸಭೆಯಲ್ಲಿ ವಿರೋಧಿ ನಿರ್ಣಯ ತೆಗೆದುಕೊಳ್ಳುವ ಸಾಧ್ಯತೆ ಇದೆ. ವಾಲ್ಮೀಕಿ ನಿಗಮ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಇಡಿ, ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಈವರೆಗೂ ಅನುಮತಿ ಕೇಳಿಲ್ಲ.

ಇದರ ಮಧ್ಯೆಯೇ, ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ. ನೀರಾವರಿ ಮತ್ತು ಬೆಂಗಳೂರು ಅಭಿವೃದ್ಧಿ ಸಂಬಂಧ ಪ್ರಧಾನಿಗಳ ಜೊತೆ ಡಿಸಿಎಂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಕೇಂದ್ರ ಸರಕಾರವನ್ನು ಪ್ರಶ್ನಿಸಿ: ಸಿದ್ದರಾಮಯ್ಯ

ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಹಂಚಿಕೆ (ಎಸ್ ಸಿಎಸ್ ಪಿ/ಟಿಎಸ್ ಪಿ) ಯೋಜನೆಯನ್ನು ಜಾರಿಗೊಳಿಸದೆ, ದಲಿತರ ಅಭಿವೃದ್ದಿಗೆ ನ್ಯಾಯಬದ್ಧವಾಗಿ ಸಲ್ಲಬೇಕಾಗಿರುವ ಬಜೆಟ್ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿ ಅನ್ಯಾಯ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ನಮ್ಮ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕ ಅಧಿಕಾರ ಇದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ದಲಿತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎಸ್ ಸಿ/ಎಸ್ ಟಿ ಕಲ್ಯಾಣದ ಬಗ್ಗೆ ಕರ್ನಾಟಕ ಸರ್ಕಾರವನ್ನು ಪ್ರಶ್ನಿಸಬೇಕೆಂದು ಕರೆ ಕೊಟ್ಟಿದ್ದಾರೆ. ನಿರ್ಮಲಾ ಸೀತಾರಾಮನ್ ಅವರೇ, ನಿಮಗೆ ದಲಿತರ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯನ್ನು ಜಾರಿಗೆ ತಂದು ಕೇಂದ್ರ ಬಜೆಟ್ ನಲ್ಲಿ ದಲಿತರ ಜನಸಂಖ್ಯೆಗೆ ಅನುಗುಣವಾಗಿ ಶೇಕಡಾ 25ರಷ್ಟು ಅನುದಾನವನ್ನು ಮೀಸಲಿಡಿ, ಆ ಮೇಲೆ ನಮ್ಮನ್ನು ಪ್ರಶ್ನೆ ಮಾಡಲು ಬನ್ನಿ. ಅಲ್ಲಿಯ ವರೆಗೆ ಮೌನವಾಗಿರುವುದು ನಿಮಗೆ ಕ್ಷೇಮ ಎಂದಿದ್ದಾರೆ ಅವರು.

ಇದನ್ನೂ ಓದಿ: Muda Scam: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ; ಲೋಕಾಯುಕ್ತಕ್ಕೆ ಪ್ರಮುಖ ದಾಖಲೆ ಸಲ್ಲಿಕೆ

Continue Reading

ಪ್ರಮುಖ ಸುದ್ದಿ

SSLC Exam: ನಾಳೆಯಿಂದ SSLC ಪರೀಕ್ಷೆ-3 ಆರಂಭ; ಎಕ್ಸಾಮ್‌ ತೆಗೆದುಕೊಳ್ಳಲಿರುವ 97,933 ವಿದ್ಯಾರ್ಥಿಗಳು

SSLC Exam: ಒಟ್ಟು ನೋಂದಣಿಯಲ್ಲಿ 459 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ರಾಜ್ಯದ 410 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ.

VISTARANEWS.COM


on

Students writing SSLC Exam in Examination centre
Koo

ಬೆಂಗಳೂರು: ಎಸ್ಎಸ್ಎಲ್‌ಸಿ ಪರೀಕ್ಷೆ-3 (SSLC Exam- 3) ನಾಳೆ (ಆಗಸ್ಟ್ 2) ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ರಾಜ್ಯಾದ್ಯಂತ 97,933 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾಹಿತಿ ನೀಡಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆ-3ನ್ನು ದಿನಾಂಕ 02-08-2024ರಿಂದ ದಿನಾಂಕ:09-08-2024 ರವರೆಗೆ ನಡೆಸಲು ಉದ್ದೇಶಿಸಲಾಗಿದೆ ಎಂದಿದೆ. ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ 97,933 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 67,716 ಬಾಲಕರು ಮತ್ತು 30,217 ಬಾಲಕಿಯರು ಸೇರಿದ್ದಾರೆ.

ಒಟ್ಟು ನೋಂದಣಿಯಲ್ಲಿ 459 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ರಾಜ್ಯದ 410 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಪ್ರಶ್ನೆ ಪತ್ರಿಕೆ ಅಭಿರಕ್ಷಕರು, ಸ್ಥಾನಿಕ ಜಾಗೃತ ದಳದವರು ಹಾಗೂ ಕೊಠಡಿ ಮೇಲ್ವಿಚಾರಕರು ಕರ್ತವ್ಯ ನಿರ್ವಹಿಸುತ್ತಾರೆ ಎಂದು ಮಾಹಿತಿ ನೀಡಿದೆ.

ಜಿಲ್ಲಾ ಮತ್ತು ತಾಲ್ಲೂಕು ಹಂತಗಳ ವಿಚಕ್ಷಣ ದಳಗಳು ಪರೀಕ್ಷಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸುತ್ತವೆ. ಜಿಲ್ಲಾಧಿಕಾರಿಗಳಿಂದ ನಿಯೋಜಿತ ಇತರೆ ಇಲಾಖೆಗಳ ಜಾಗೃತ ದಳಗಳು ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲಿವೆ. ಪ್ರತಿ ಕೇಂದ್ರದಲ್ಲಿಯೂ ಸಿ.ಸಿ.ಟಿ.ವಿ. ಗಳ ಮೂಲಕ ಪರೀಕ್ಷಾ ಅವ್ಯವಹಾರಗಳ ಬಗ್ಗೆ ನಿಗಾ ಇಡಲಾಗುವುದು ಎಂದು ಹೇಳಿದೆ.

ಯಾರ್ಯಾರಿಗೆ ಪರೀಕ್ಷೆ?

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗದವರು, ಪ್ರಸಕ್ತ ಸಾಲಿನ ಮೊದಲ ಹಾಗೂ ಎರಡನೇ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸಿದವರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (KSEEB) ಮೂರನೇ ಅವಕಾಶ ನೀಡಿದ್ದು, ಅದರಂತೆ ಆಗಸ್ಟ್‌ 2ರಿಂದ 9ರವರೆಗೆ ಪರೀಕ್ಷೆ ನಡೆಯಲಿದೆ. ಇದೀಗ ಅಭ್ಯರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಶಾಲಾ ಮುಖ್ಯೋಪಾಧ್ಯಾಯರು ಪ್ರವೇಶ ಪತ್ರಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿತರಿಸಬೇಕು. ಒಂದು ವೇಳೆ ಏನಾದರೂ ಸಮಸ್ಯೆ ಕಂಡುಬಂದಲ್ಲಿ ಕೂಡಲೇ ಸಂಬಂಧಿಸಿದ ಪರಿಶೀಲನಾ ಶಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಮ್ಮ ಶಾಲೆಯ ಮುಖಾಂತರ ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಡೌನ್‌ಲೋಡ್ ಮಾಡಿಕೊಂಡ ಪ್ರವೇಶ ಪತ್ರಗಳ ಸಂಖ್ಯೆ ಸರಿ ಹೊಂದುತ್ತಿವೆಯೇ ಎಂದು ತಪ್ಪದೇ ಪರಿಶೀಲಿಸಬೇಕು. ಒಂದು ವೇಳೆ ಯಾವುದಾದರು ವಿದ್ಯಾರ್ಥಿಯ ಪ್ರವೇಶ ಪತ್ರ ಬಂದಿಲ್ಲದಿದ್ದರೆ ಆ ವಿವರವನ್ನು ದಾಖಲೆಗಳೊಂದಿಗೆ ಮಂಡಳಿಗೆ ಕೂಡಲೇ ಕಳುಹಿಸಬೇಕು ಎಂದು ಸೂಚಿಸಲಾಗಿದೆ.

ಇವನ್ನು ಗಮನಿಸಿ

  • ಪ್ರವೇಶ ಪತ್ರದಲ್ಲಿ ಹಾಗೂ ಕೇಂದ್ರ ನಾಮಯಾದಿಪಟ್ಟಿಯಲ್ಲಿ ಭಾವಚಿತ್ರ ಇಲ್ಲದೇ ಇರುವ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅನುಮತಿ ನೀಡುವುದಿಲ್ಲ. ಇದಕ್ಕೆ ಮಂಡಳಿ ಜವಾಬ್ದಾರಿಯಲ್ಲ. ಹೀಗಾಗಿ ಪ್ರವೇಶ ಪತ್ರದಲ್ಲಿ ವಿದ್ಯಾರ್ತಿಯ ಫೋಟೊ ಇದೆ ಎನ್ನುವುದನ್ನು ಖಚಿತಪಡಿಸಿ. ಇಲ್ಲದಿದ್ದರೆ ಈಗಲೇ ಮಂಡಳಿಯ ಗಮನಕ್ಕೆ ತನ್ನಿ.
  • ಶಾಲಾ ಲಾಗಿನ್‌ನಿಂದ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿ ಕೂಡಲೇ ವಿತರಿಸಬೇಕು ಮತ್ತು ಹಾಗೂ ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಸೂಚನೆಗಳನ್ನು ತಪ್ಪದೇ ಪಾಲಿಸಲುತಿಳಿಸಬೇಕು.
  • ಪುನರಾವರ್ತಿತ ವಿದ್ಯಾರ್ಥಿಗಳಿಗೆ ಪಾಸಾದ ವಿಷಯಕ್ಕೆ ಪರೀಕ್ಷೆ ಬರೆಯುವಂತೆ ಮುದ್ರಣವಾಗಿದ್ದಲ್ಲಿ ಪಾಸಾದ ಬಗ್ಗೆ ಚುಕ್ಕೆ ಗುರುತಿಲ್ಲದ ಫಲಿತಾಂಶ ಪಟ್ಟಿಯನ್ನು ಮುಖ್ಯಶಿಕ್ಷಕರು ದೃಢೀಕರಿಸಿ ಪರೀಕ್ಷೆ ಪ್ರಾರಂಭವಾಗುವುದಕ್ಕೆ ಮುಂಚಿತವಾಗಿ ಪರಿಶೀಲನಾ ಶಾಖೆಯ ಅಧಿಕಾರಿಗಳಿಗೆ ಕಳುಹಿಸಬೇಕು.
  • ಪ್ರವೇಶ ಪತ್ರವನ್ನು ಪಡೆಯಲು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು.

ಇದನ್ನೂ ಓದಿ: SSLC Exam 3: SSLC ಫೇಲಾದವರಿಗೆ ಮತ್ತೊಂದು ಚಾನ್ಸ್;‌ 3ನೇ ಪರೀಕ್ಷೆಯ ನೋಂದಣಿ, ಪರೀಕ್ಷೆ ದಿನಾಂಕ ಘೋಷಣೆ

Continue Reading
Advertisement
Pakistani Army
ದೇಶ4 mins ago

ಪಾಕಿಸ್ತಾನದ ಮತ್ತೊಂದು ಕುತಂತ್ರ ಬಯಲು: ಪಿಒಕೆಯಲ್ಲಿ ಸಮವಸ್ತ್ರದ ಬದಲು ಪಠಾಣಿ ಸೂಟ್ ಧರಿಸಿ ಬೇಹುಗಾರಿಕೆಗೆ ಮುಂದಾದ ಪಾಕ್‌ ಸೇನೆ

shiradi landslide
ಹಾಸನ17 mins ago

Shiradi Landslide: ಶಿರಾಡಿ ಘಾಟಿ ಸಂಚಾರ ಮುಕ್ತ, ನಿಮ್ಮದೇ ರಿಸ್ಕ್‌ನಲ್ಲಿ ಸಂಚರಿಸಿ!

Actor Darshan siddharudha life journey book sent to Darshan
ಸ್ಯಾಂಡಲ್ ವುಡ್20 mins ago

Actor Darshan: ನಟ ದರ್ಶನ್‌ಗೆ ಹುಬ್ಬಳ್ಳಿ ಸಿದ್ಧಾರೂಢ ಮಠದಿಂದ ಪುಸ್ತಕ ರವಾನೆ

Paris Olympics Boxing
ಕ್ರೀಡೆ29 mins ago

Paris Olympics Boxing: ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ಬಾಕ್ಸರ್‌ ನಿಶಾಂತ್‌ ದೇವ್‌; ಟಿಟಿಯಲ್ಲಿ ಶ್ರೀಜಾ ಅಕುಲಾ ಪರಾಭವ

sri reddy me too fame telugu actress post goes viral
ಟಾಲಿವುಡ್40 mins ago

Sri Reddy: ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ; ಅರೆಬೆತ್ತಲೆ ಪ್ರತಿಭಟನೆ ಮೂಲಕ ಸದ್ದು ಮಾಡಿದ ನಟಿ ಶ್ರೀರೆಡ್ಡಿ ಪೋಸ್ಟ್‌ ವೈರಲ್‌!

soldier death mandya
ಮಂಡ್ಯ54 mins ago

Soldier Death: ಮೆಟ್ಟಿಲಿನಿಂದ ಕಾಲು ಜಾರಿ ಬಿದ್ದು ಯೋಧ ಮೃತ್ಯು

Khaled Meshaal
ವಿದೇಶ58 mins ago

Ismail Haniyeh Killing: ಹಮಾಸ್‌ನ ಹೊಸ ಮುಖ್ಯಸ್ಥನಾಗಿ ಖಲೀದ್‌ ಮೆಶಾಕ್‌? ಈತನ ಹಿನ್ನೆಲೆ ಏನು?

Anshuman Gaekwad
ಕ್ರೀಡೆ1 hour ago

Anshuman Gaekwad: ಮಾಜಿ ಕ್ರಿಕೆಟಿಗ ಅಂಶುಮಾನ್‌ ಗಾಯಕ್ವಾಡ್‌ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

Actor Jaggesh tears after seeing the current state of Kannada film industry
ಸಿನಿಮಾ1 hour ago

Actor Jaggesh: ಕನ್ನಡ ಚಿತ್ರರಂಗದ ಈಗಿನ ಸ್ಥಿತಿಗತಿ ಕಂಡು ಕಣ್ಣೀರಿಟ್ಟ ನವರಸ ನಾಯಕ ಜಗ್ಗೇಶ್‌!

LPG Price Hike
ವಾಣಿಜ್ಯ1 hour ago

LPG Price Hike: ತಿಂಗಳ ಆರಂಭದಲ್ಲೇ ಎಲ್‌ಪಿಜಿ ಗ್ರಾಹಕರಿಗೆ ಬೆಲೆ ಏರಿಕೆಯ ಶಾಕ್‌; ಬೆಂಗಳೂರಿನಲ್ಲಿ ಇಷ್ಟಾಗಿದೆ ದರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ4 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ4 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ4 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌