Satyendra Jain | ಜೈಲಲ್ಲಿ ಮಸಾಜ್‌ ಬೆನ್ನಲ್ಲೇ ವಜಾಗೊಂಡ ಜೈಲಧಿಕಾರಿ ಜತೆ ಸತ್ಯೇಂದ್ರ ಜೈನ್‌ ಮಾತು, ಹೊಸ ವಿಡಿಯೊ ವೈರಲ್ - Vistara News

ದೇಶ

Satyendra Jain | ಜೈಲಲ್ಲಿ ಮಸಾಜ್‌ ಬೆನ್ನಲ್ಲೇ ವಜಾಗೊಂಡ ಜೈಲಧಿಕಾರಿ ಜತೆ ಸತ್ಯೇಂದ್ರ ಜೈನ್‌ ಮಾತು, ಹೊಸ ವಿಡಿಯೊ ವೈರಲ್

ದೆಹಲಿ ಸಚಿವ ಸತ್ಯೇಂದ್ರ ಜೈನ್‌ (Satyendra Jain) ಅವರಿಗೆ ತಿಹಾರ ಜೈಲಿನಲ್ಲಿ ವಿಐಪಿ ಟ್ರೀಟ್‌ಮೆಂಟ್‌ ಮುಂದುವರಿದಿದೆ. ಅಮಾನತುಗೊಂಡಿರುವ ಜೈಲಧಿಕಾರಿ ಜತೆ ಭೇಟಿ, ಅತಿಥಿಗಳೊಂದಿಗೆ ಮಾತುಕತೆ ಕುರಿತ ಮತ್ತೊಂದು ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Satyendra Jain In Jail
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಹವಾಲ ಹಗರಣದಲ್ಲಿ ಸಿಲುಕಿ ಜೈಲು ಪಾಲಾಗಿರುವ ದೆಹಲಿ ಸಚಿವ ಸತ್ಯೇಂದ್ರ ಜೈನ್‌ (Satyendra Jain) ಅವರಿಗೆ ಜೈಲಿನಲ್ಲಿ ವಿವಿಐಪಿ ಟ್ರೀಟ್‌ಮೆಂಟ್‌ ಜತೆಗೆ ಅತಿಥಿಗಳ ಭೇಟಿ, ಸತ್ಕಾರವೂ ಮುಂದುವರಿದಿದೆ. ಇತ್ತೀಚೆಗಷ್ಟೇ, ಸತ್ಯೇಂದ್ರ ಜೈನ್‌ ಅವರಿಗೆ ಮಸಾಜ್‌ ಮಾಡುತ್ತಿರುವ, ಭರ್ಜರಿ ಭೋಜನ ನೀಡಿರುವ ಸಿಸಿಟಿವಿ ದೃಶ್ಯಗಳು ಜಗಜ್ಜಾಹೀರಾದ ಬೆನ್ನಲ್ಲೇ ಮತ್ತೊಂದು ವಿವಿಐಪಿ ಟ್ರೀಟ್‌ಮೆಂಟ್‌ನ ವಿಡಿಯೊ ಬಹಿರಂಗವಾಗಿದೆ.

ತಿಹಾರ ಜೈಲಿನಲ್ಲಿರುವ ಸತ್ಯೇಂದ್ರ ಜೈನ್‌ ಅವರನ್ನು ಸೆಪ್ಟೆಂಬರ್‌ 12ರಂದು ರಾತ್ರಿ 8 ಗಂಟೆ ಸುಮಾರಿಗೆ ಮೂವರು ಭೇಟಿಯಾಗಿದ್ದಾರೆ. ಮಂಚದ ಮೇಲೆ ಕುಳಿತ ಜೈನ್‌ ಅವರು ಅತಿಥಿಗಳ ಜತೆ ಮಾತುಕತೆ ನಡೆಸಿದ ಬಳಿಕ ಅವರನ್ನು ಬೀಳ್ಕೊಟ್ಟಿದ್ದಾರೆ. ಇದಾದ ಕೆಲವೇ ಕ್ಷಣದಲ್ಲಿ ಅಮಾನತುಗೊಂಡಿರುವ ಜೈಲು ಸೂಪರಿಂಟೆಂಡೆಂಟ್‌ ಅಜಿತ್‌ ಕುಮಾರ್‌ ಅವರು ಸತ್ಯೇಂದ್ರ ಜೈನ್‌ ಅವರ ಕೋಣೆಗೆ ಆಗಮಿಸಿ ಮಾತುಕತೆ ನಡೆಸಿದ್ದಾರೆ. ಇಷ್ಟೆಲ್ಲ ದೃಶ್ಯಗಳಿರುವ 10 ನಿಮಿಷದ ವಿಡಿಯೊ ಈಗ ವೈರಲ್‌ ಆಗಿದೆ.

ಕೆಲ ದಿನಗಳ ಹಿಂದಷ್ಟೇ ಸತ್ಯೇಂದ್ರ ಜೈನ್‌ ಅವರ ತಲೆ ಹಾಗೂ ಕಾಲುಗಳಿಗೆ ಮಸಾಜ್‌ ಮಾಡುತ್ತಿರುವ ಆರು ನಿಮಿಷದ ವಿಡಿಯೊ ವೈರಲ್‌ ಆಗಿತ್ತು. ಅಲ್ಲದೆ, ಜೈಲಲ್ಲಿ ಸಚಿವರು ಭರ್ಜರಿ ಭೋಜನ ಮಾಡುತ್ತಿರುವ ದೃಶ್ಯಾವಳಿಗಳೂ ಲಭ್ಯವಾಗಿದ್ದವು. ಈಗ ಅತಿಥಿಗಳು ಹಾಗೂ ಅಮಾನತುಗೊಂಡಿರುವ ಅಧಿಕಾರಿಯ ಭೇಟಿಗೂ ಅವಕಾಶ ಕಲ್ಪಿಸಲಾಗಿದೆ. ಇದರ ಕುರಿತು ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ | Video | ಜೈಲಲ್ಲಿ ಸರಿಯಾಗಿ ಊಟ ಕೊಡದೆ 28 ಕೆಜಿ ತೂಕ ನಷ್ಟವಾಯಿತು ಎಂದಿದ್ದ ದೆಹಲಿ ಸಚಿವ ಸತ್ಯೇಂದ್ರ ಜೈನ್​; ಆದರೆ ವಾಸ್ತವ ಏನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಬಾರೆ ಸಖಿ ಎಂದು 20 ವರ್ಷದ ಯುವತಿಯನ್ನು ಕರೆದುಕೊಂಡು ಹೋದ, ಕೊಂದು ಪೊದೆಯಲ್ಲಿ ಬಿಸಾಡಿದ; ಕೃತ್ಯಕ್ಕೆ ಕಾರಣವೇನು?

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯಶಶ್ರೀ ಶಿಂಧೆ ಎಂಬ 20 ವರ್ಷದ ಯುವತಿಯ ಶವವು ನವಿ ಮುಂಬೈ ರೈಲು ನಿಲ್ದಾಣದ ಬಳಿಯ ಪೊದೆಯಲ್ಲಿ ಪತ್ತೆಯಾಗಿದೆ. ಆಕೆಯ ಬಾಯ್‌ಫ್ರೆಂಡ್‌ನೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಬಳಿಕ ಯುವಕನು ನಾಪತ್ತೆಯಾಗಿದ್ದು, ಆತನನ್ನು ಬಂಧಿಸಲು ಐದು ತಂಡಗಳನ್ನು ರಚಿಸಲಾಗಿದೆ.

VISTARANEWS.COM


on

Mumbai Girl
Koo

ಮುಂಬೈ: ಬದಲಾದ ಕಾಲಘಟ್ಟದಲ್ಲಿ ನಿಜವಾದ ಪ್ರೀತಿ-ಪ್ರೇಮ ಎಂಬುದರ ಅರ್ಥವೇ ಕ್ಷೀಣಿಸುತ್ತಿದೆ. ಕಾಲೇಜು ಓದುವಾಗಲೇ ಪ್ರೀತಿಸುವುದು, ಜಗಳ ಆಡಿ ಒಂದೆರಡು ವರ್ಷದಲ್ಲಿ ದೂರ ಆಗುವುದು, ಬ್ರೇಕಪ್‌ (Love Breakup) ಬಳಿಕ ಮತ್ತೊಂದು ಲವ್‌ ಹಿಂದೆ ಓಡುವುದು ಸಾಮಾನ್ಯ ಎಂಬಂತಾಗಿದೆ. ಇನ್ನೂ, ಒಂದು ಹೆಜ್ಜೆ ಮುಂದೆ ಹೋಗಿರುವ ಪ್ರೇಮಿಗಳು, ತಾವು ಇಷ್ಟಪಟ್ಟವರು ಬ್ರೇಕಪ್‌ ಎಂದರೆ ಅಥವಾ ಇನ್ನೊಂದು ಅಫೇರ್‌ನ ಅನುಮಾನ ಮೂಡಿ ಕೊಲೆಯಂತಹ ಪ್ರಕರಣಗಳು ನಡೆಯುತ್ತಿವೆ. ಇದಕ್ಕೆ ನಿದರ್ಶನ ಎಂಬಂತೆ, ಮುಂಬೈನಲ್ಲಿ (Mumbai) ಯುವಕನೊಬ್ಬ ತಾನು ಪ್ರೀತಿಸುತ್ತಿದ್ದ 20 ವರ್ಷದ ಯುವತಿಯನ್ನು ಭೀಕರವಾಗಿ ಕೊಲೆ ಮಾಡಿ, ಶವವನ್ನು ಪೊದೆಯಲ್ಲಿ ಎಸೆದಿರುವ ಪ್ರಕರಣ ಬಯಲಾಗಿದೆ.

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯಶಶ್ರೀ ಶಿಂಧೆ ಎಂಬ 20 ವರ್ಷದ ಯುವತಿಯ ಶವವು ನವಿ ಮುಂಬೈ ರೈಲು ನಿಲ್ದಾಣದ ಬಳಿಯ ಪೊದೆಯಲ್ಲಿ ಪತ್ತೆಯಾಗಿದೆ. ಆಕೆಯ ಬಾಯ್‌ಫ್ರೆಂಡ್‌ನೇ ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. “ತಡರಾತ್ರಿ 2 ಗಂಟೆ ಸುಮಾರಿಗೆ ಉರಾನ್‌ ರೈಲು ನಿಲ್ದಾಣದ ಬಳಿಯ ಪೊದೆಯಲ್ಲಿ ಯುವತಿಯ ಶವ ಬಿದ್ದಿದೆ ಎಂಬುದಾಗಿ ಕರೆ ಬಂದಿತು. ಕೂಡಲೇ ಪೊಲೀಸರು ಸ್ಥಳಕ್ಕೆ ತೆರಳಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಯುವತಿ ಮೈಮೇಲೆ ಭೀಕರ ಗಾಯಗಳಾಗಿವೆ. ಆಕೆಯನ್ನು ಇರಿದು ಕೊಲೆ ಮಾಡಲಾಗಿದೆ” ಎಂದು ನವಿ ಮುಂಬೈ ಡಿಸಿಪಿ ವಿವೇಕ್‌ ಪನ್ಸಾರೆ ತಿಳಿಸಿದ್ದಾರೆ.

“ಪ್ರಾಥಮಿಕ ತನಿಖೆಯ ಪ್ರಕಾರ, ಯುವಕ ಹಾಗೂ ಯುವತಿಯು ಪ್ರೀತಿಸುತ್ತಿದ್ದರು. ಇತ್ತೀಚೆಗೆ ಇಬ್ಬರ ಮಧ್ಯೆ ಮನಸ್ತಾಪ ಮೂಡಿತ್ತು. ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವತಿಯ ಶವ ಪತ್ತೆಯಾದ ಬಳಿಕ ಯುವಕನ ಮೇಲೆ ಶಂಕೆ ವ್ಯಕ್ತವಾಗಿದೆ. ಯುವಕನು ಈಗ ಪ್ರಾಥಮಿಕ ಆರೋಪಿಯಾಗಿದ್ದಾನೆ. ಕೊಲೆ ಬಳಿಕ ಯುವಕನು ಕೂಡ ನಾಪತ್ತೆಯಾಗಿದ್ದಾನೆ. ಆತನನ್ನು ಪತ್ತೆಹಚ್ಚಲು ಐದು ಪೊಲೀಸ್‌ ತಂಡಗಳನ್ನು ರಚಿಸಲಾಗಿದೆ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುತ್ತದೆ” ಎಂಬುದಾಗಿ ಡಿಸಿಪಿ ತಿಳಿಸಿದ್ದಾರೆ.

ಯುವತಿಯು ಉರಾನ್‌ ಪ್ರದೇಶದ ನಿವಾಸಿಯಾಗಿದ್ದು, ಅಲ್ಲಿಂದ ಸುಮಾರು 25 ಕಿಲೋಮೀಟರ್‌ ದೂರದಲ್ಲಿರುವ ಬೇಲಾಪುರದಲ್ಲಿ ಕೆಲಸಕ್ಕೆ ಹೋಗುತ್ತಿದ್ದಳು. ಇದೇ ವೇಳೆ ಇಬ್ಬರ ಮಧ್ಯೆ ಪ್ರೇಮಾಂಕುರವಾಗಿತ್ತು. ಆದರೆ, ಇತ್ತೀಚೆಗೆ ಇಬ್ಬರ ಮಧ್ಯೆ ಮನಸ್ತಾಪಗಳು, ಜಗಳಗಳು ಜಾಸ್ತಿಯಾಗಿದ್ದವು ಎಂದು ತಿಳಿದುಬಂದಿದೆ. ಆದಾಗ್ಯೂ, ಯುವತಿಯನ್ನು ಕೊಲೆ ಮಾಡಲು ನಿಖರ ಕಾರಣ ಏನು ಎಂಬುದು ಇದುವರೆಗೆ ಗೊತ್ತಾಗಿಲ್ಲ.

ಇದನ್ನೂ ಓದಿ: Murder in PG: ಪಿಜಿಯಲ್ಲಿ ಯುವತಿ ಕೊಲೆ ಮಾಡಿದ ಪಾತಕಿ ಮಧ್ಯಪ್ರದೇಶದಲ್ಲಿ ಸೆರೆ

Continue Reading

ದೇಶ

Infiltration: ಭಾರತಕ್ಕೆ ನುಗ್ಗುವುದು ಹೇಗೆ ಎಂದು ವಿಡಿಯೊ ಮಾಡಿದ ಬಾಂಗ್ಲಾ ವ್ಯಕ್ತಿ; ದೀದಿ ಆಹ್ವಾನದ ಬೆನ್ನಲ್ಲೇ ವಿಡಿಯೊ ವೈರಲ್‌

Infiltration: “ಬಾಂಗ್ಲಾದೇಶದ ನಿರಾಶ್ರಿತರು ಪಶ್ಚಿಮ ಬಂಗಾಳಕ್ಕೆ ಬಂದರೆ ಆಶ್ರಯ ನೀಡುತ್ತೇವೆ” ಎಂಬುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೇಳಿಕೆ ನೀಡಿದ ಬೆನ್ನಲ್ಲೇ, ಬಾಂಗ್ಲಾದ ವ್ಲಾಗರ್‌ ಒಬ್ಬ, ಹೇಗೆ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಬಹುದು ಎಂಬುದರ ವಿಡಿಯೊ ಪೋಸ್ಟ್‌ ಮಾಡಿದೆ. ಇದರಿಂದಾಗಿ, ಗಡಿಯಲ್ಲಿ ಈಗ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

VISTARANEWS.COM


on

Infiltration
Koo

ಢಾಕಾ: ಬಾಂಗ್ಲಾದೇಶದಲ್ಲಿ (Bangladesh) ಅರಾಜಕತೆ, ನಾಗರಿಕ ದಂಗೆ ಭುಗಿಲೆದ್ದಿದೆ. ವಿವಾದಿತ ಮೀಸಲಾತಿ ವಿರುದ್ಧ ಜನ ಹಿಂಸಾಚಾರದಲ್ಲಿ ತೊಡಗಿದ್ದು, 200ಕ್ಕೂ ಅಧಿಕ ಮಂದಿ ಮೃತಪಟ್ಟು, ಸಾವಿರಾರು ಜನ ಗಾಯಗೊಂಡಿದ್ದಾರೆ. ಇದರ ಬೆನ್ನಲ್ಲೇ, ಬಾಂಗ್ಲಾದೇಶದ ವ್ಲಾಗರ್‌ (Vlogger) ಒಬ್ಬ, ಭಾರತಕ್ಕೆ ಹೇಗೆ ಅಕ್ರಮವಾಗಿ ನುಗ್ಗಬಹುದು (Infiltration) ಎಂಬುದನ್ನು ತೋರಿಸುವ ವಿಡಯೊವನ್ನು ಹರಿಬಿಟ್ಟಿದ್ದಾನೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. ಅದರಲ್ಲೂ, “ಬಾಂಗ್ಲಾದೇಶದ ನಿರಾಶ್ರಿತರು ಪಶ್ಚಿಮ ಬಂಗಾಳಕ್ಕೆ ಬಂದರೆ ಆಶ್ರಯ ನೀಡುತ್ತೇವೆ” ಎಂಬುದಾಗಿ ಮಮತಾ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಅವರು ಹೇಳಿಕೆ ನೀಡಿದ ಬೆನ್ನಲ್ಲೇ ವಿಡಿಯೊ ಹರಿದಾಡುತ್ತಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ.

ಬಾಂಗ್ಲಾದೇಶದ ಗಡಿಗೆ ತೆರಳಿದ ವ್ಲಾಗರ್‌ ಒಬ್ಬನು, ಅಕ್ರಮವಾಗಿ ಹೇಗೆ ಭಾರತವನ್ನು ಪ್ರವೇಶಿಸಬಹುದು, ನುಸುಳಬಹುದು ಎಂಬುದನ್ನು ವಿಡಿಯೊ ಸಮೇತ ಪೋಸ್ಟ್‌ ಮಾಡಿದ್ದಾನೆ. ಕಾಲುವೆಯ ಪುಟ್ಟದಾದ ಪೈಪ್‌ಗಳ ಮೂಲಕ ಬಾಂಗ್ಲಾದೇಶದ ಗಡಿಯಿಂದ ಭಾರತದ ಗಡಿಯೊಳಗೆ ನುಗ್ಗಬಹುದು, ಆ ಮೂಲಕ ಸುಲಭವಾಗಿ ಭಾರತದಲ್ಲಿ ಅಕ್ರಮವಾಗಿ ನೆಲೆಸಬಹುದು ಎಂಬುದನ್ನು ಕೆಲ ಸ್ನೇಹಿತರೊಂದಿಗೆ ಆತ ಪ್ರಾತ್ಯಕ್ಷಿಕೆ ತೋರಿಸಿದ್ದಾನೆ. ಇದು ಈಗ ಗಡಿಯಲ್ಲಿ ಭಾರಿ ಆತಂಕ ಸೃಷ್ಟಿಸಿದೆ. ಆದಾಗ್ಯೂ, ಭಾರತ-ಬಾಂಗ್ಲಾ ಗಡಿಯಲ್ಲಿ ಸೈನಿಕರು ಕಟ್ಟೆಚ್ಚರ ವಹಿಸಿದ್ದಾರೆ ಎಂದು ತಿಳಿದುಬಂದಿದೆ.

ಬಾಂಗ್ಲಾದಲ್ಲಿ ನಿಲ್ಲದ ಗಲಭೆ

ಸರ್ಕಾರಿ ಉದ್ಯೋಗಗಳಲ್ಲಿನ ಮೀಸಲಾತಿ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಬಾಂಗ್ಲಾದೇಶ ದಲ್ಲಿ ಹಲವು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಹಿಂಸಾಸ್ವರೂಪ ಪಡೆದಿರುವ ಮಧ್ಯೆಯೇ ಅಲ್ಲಿನ ಸರ್ವೋಚ್ಚ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಕೋಲಾಹಲಕ್ಕೆ ಕಾರಣವಾದ ಬಾಂಗ್ಲಾ ವಿಮೋಚನೆ ಹೋರಾಟದಲ್ಲಿ ಭಾಗಿಯಾಗಿದ್ದವರ ಕುಟುಂಬದವರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 30ರಷ್ಟು ಮೀಸಲಾತಿ ನೀಡುವ ನಿಯಮವನ್ನು ಕೋರ್ಟ್‌ ಹಿಂತೆಗೆದುಕೊಂಡಿದೆ. ಆದರೆ ಸಂಪೂರ್ಣ ರದ್ದುಗೊಳಿಸಲಿಲ್ಲ. ಶೇ. 30ರಷ್ಟಿದ್ದ ಮೀಸಲಾತಿಯನ್ನು ಶೇ. 5ಕ್ಕೆ ಇಳಿಸಲಾಗಿದೆ. ಹಾಗಾಗಿ, ಬಾಂಗ್ಲಾದೇಶದಲ್ಲಿ ಗಲಭೆ ನಿಂತಿಲ್ಲ. ಇದರಿಂದಾಗಿ ಭಾರತದ ಗಡಿಯಲ್ಲೂ ಆತಂಕದ ವಾತಾವರಣ ನಿರ್ಮಾಣವಾದಂತಾಗಿದೆ.

ಮಮತಾ ಬ್ಯಾನರ್ಜಿ ಹೇಳಿದ್ದೇನು?

ಜುಲೈ 21ರಂದು ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ನಡೆಸಿದ ಮೆಗಾ ರ‍್ಯಾಲಿಯಲ್ಲಿ ಮಾತನಾಡಿದ್ದ ಮಮತಾ ಬ್ಯಾನರ್ಜಿ, “ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಜನರು ನಮ್ಮ ಬಾಗಿಲನ್ನು ತಟ್ಟಿದರೆ ಸರ್ಕಾರ ಅವರಿಗೆ ಆಶ್ರಯ ನೀಡುತ್ತದೆ” ಎಂದಿದ್ದರು. ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ಬಾಂಗ್ಲಾದೇಶದ ಅಕ್ರಮ ವಲಸೆಗಾರರಿಗೆ ಮಮತಾ ಬ್ಯಾನರ್ಜಿ ಆಶ್ರಯ ನೀಡಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿರುವ ಹೊತ್ತಿನಲ್ಲೇ ಅವರು ಬಾಂಗ್ಲಾ ವಲಸಿಗರಿಗೆ ಆಶ್ರಯ ನೀಡುತ್ತೇನೆ ಎಂಬುದಾಗಿ ನೀಡಿದ ಹೇಳಿಕೆ ವಿರುದ್ಧ ಭಾರಿ ಟೀಕೆಗಳು ವ್ಯಕ್ತವಾಗಿದ್ದವು.

ಇದನ್ನೂ ಓದಿ: Mamata Banerjee: ಮಾತನಾಡಲು 5 ನಿಮಿಷ ಮಾತ್ರ ಅವಕಾಶ ನೀಡಿದರು: ನೀತಿ ಆಯೋಗದ ಸಭೆಯಿಂದ ಹೊರ ಬಂದ ಮಮತಾ ಬ್ಯಾನರ್ಜಿ ಕಿಡಿ

Continue Reading

ದೇಶ

ಪಾಕ್‌ಗೆ ಮೋದಿ ಎಚ್ಚರಿಕೆ ಬೆನ್ನಲ್ಲೇ ಗಡಿಯಲ್ಲಿ 2 ಸಾವಿರ ಹೆಚ್ಚುವರಿ ಸೈನಿಕರ ನಿಯೋಜಿಸಿದ ಕೇಂದ್ರ; ಏನಿದರ ಮರ್ಮ?

ಜಮ್ಮು-ಕಾಶ್ಮೀರದ ಗಡಿಯಲ್ಲಿ ಹೆಚ್ಚುವರಿಯಾಗಿ 2 ಸಾವಿರ ಗಡಿ ಭದ್ರತಾ ಪಡೆಯ (BSF) ಸಿಬ್ಬಂದಿಯನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆಯ ಬೆನ್ನಲ್ಲೇ ಕೇಂದ್ರ ಸರ್ಕಾರ ಇಂತಹದ್ದೊಂದು ಕ್ರಮ ತೆಗೆದುಕೊಂಡಿದೆ.

VISTARANEWS.COM


on

Indian Army
Koo

ನವದೆಹಲಿ: ಭಯೋತ್ಪಾದನೆಯನ್ನು ನಿಗ್ರಹಿಸುವ ಬದಲು, ಉಗ್ರರಿಗೆ ಆಶ್ರಯ ನಡುತ್ತಿರುವ ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಾರ್ಗಿಲ್‌ ವಿಜಯ ದಿವಸದಂದೇ (Kargil Vijay Diwas 2024) (ಜುಲೈ 26) ಎಚ್ಚರಿಕೆ ನೀಡಿದ್ದಾರೆ. ಇನ್ನು, ಜಮ್ಮು-ಕಾಶ್ಮೀರ ಗಡಿಯಲ್ಲಿ ಇತ್ತೀಚೆಗೆ ಉಗ್ರರ ದಾಳಿ ಜಾಸ್ತಿಯಾಗಿದ್ದು, ಸೈನಿಕರು, ವಲಸಿಗರನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ, ಜಮ್ಮು-ಕಾಶ್ಮೀರ (Jammu Kashmir Border) ಗಡಿಯಲ್ಲಿ ಹೆಚ್ಚುವರಿಯಾಗಿ 2 ಸಾವಿರ ಸೈನಿಕರನ್ನು ನಿಯೋಜಿಸಲು ಕೇಂದ್ರ ಸರ್ಕಾರ (Central Government) ಆದೇಶ ನೀಡಿದೆ ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರದ ಗಡಿಯಲ್ಲಿ ಹೆಚ್ಚುವರಿಯಾಗಿ 2 ಸಾವಿರ ಗಡಿ ಭದ್ರತಾ ಪಡೆಯ (BSF) ಸಿಬ್ಬಂದಿಯನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇತ್ತೀಚೆಗೆ, ಗಡಿಯಲ್ಲಿ ಉಗ್ರರ ಉಪಟಳ, ಒಳನುಸುಳುವಿಕೆ, ದಾಳಿ, ಶಸ್ತ್ರಾಸ್ತ್ರ ಸಾಗಣೆ ಸೇರಿ ಹಲವು ಕೃತ್ಯಗಳು ಹೆಚ್ಚಾಗಿರುವ ಕಾರಣ ಹೆಚ್ಚಿನ ಭದ್ರತೆಗಾಗಿ ಬಿಎಸ್‌ಎಫ್‌ ಯೋಧರನ್ನು ನಿಯೋಜಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂಬುದಾಗಿ ಮೂಲಗಳು ತಿಳಿಸಿವೆ.

ಪಾಕ್‌ನಿಂದಲೂ ಹೆಚ್ಚುವರಿ ಸೈನಿಕರ ನಿಯೋಜನೆ

ಮೋದಿ ಎಚ್ಚರಿಕೆ ಬೆನ್ನಲ್ಲೇ ಪಾಕಿಸ್ತಾನವು ಗಡಿಯಲ್ಲಿ ಎರಡು ಹೆಚ್ಚುವರಿ ಬ್ರಿಗೇಡ್‌ಗಳು, 3 ಪಿಒಕೆ ಬ್ರಿಗೇಡ್‌ ಹಾಗೂ 2 ಹೆಚ್ಚುವರಿ ಪಿಒಕೆ ಬ್ರಿಗೇಡ್‌ಗಳನ್ನು ಹೆಚ್ಚುವರಿಯಾಗಿ ನಿಯೋಜಿಸಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಪಾಕಿಸ್ತಾನ ಸೈನಿಕರು ಭಾರತದೊಳಗೆ ಉಗ್ರರನ್ನು ನುಸುಳಿಸಲು ಮಾರ್ಗದರ್ಶನ, ನೆರವು ನೀಡುತ್ತಿದೆ ಎಂಬ ಚಿತ್ರಗಳು ಲಭ್ಯವಾದ ಬೆನ್ನಲ್ಲೇ ಮೋದಿ ಎಚ್ಚರಿಕೆ ನೀಡಿದ್ದರು. ಇದಾದ ಕೆಲ ಹೊತ್ತಿನಲ್ಲೇ ಪಾಕಿಸ್ತಾನ ಸೈನಿಕರು ಗಡಿಯಲ್ಲಿ ನಿಯೋಜನೆಗೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮೋದಿ ಎಚ್ಚರಿಕೆ ಏನಾಗಿತ್ತು?

ಕಾರ್ಗಿಲ್‌ ವಿಜಯ ದಿವಸ(Kargil Vijay Diwas 2024)ಕ್ಕೆ ಜುಲೈ 26ಕ್ಕೆ 25ವರ್ಷ ಸಂದಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಡ್ರಾಸ್‌ನಲ್ಲಿರುವ ಕಾರ್ಗಿಲ್‌ ಯುದ್ಧ ಸ್ಮಾರಕಕ್ಕೆ ಭೇಟಿ ಕೊಟ್ಟು ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅವರು, ಕಳೆದ ಯುದ್ಧಗಳಲ್ಲಿ ಸೋಲುಂಡಿದ್ದರೂ ಬುದ್ಧಿ ಕಲಿಯದ ಪಾಕಿಸ್ತಾನ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ. ಇದುವರೆಗೆ ಪಾಕಿಸ್ತಾನ ತನ್ನ ತಪ್ಪಿನ ಪಾಠ ಕಲಿತಿಲ್ಲ ಎಂದು ಗುಡುಗಿದ್ದರು.

ಭಯೋತ್ಪಾದನೆ ಮೂಲಕ ಭಾರತವನ್ನು ಗೆಲ್ಲುವ ಪಾಕಿಸ್ತಾನದ ಉದ್ದೇಶ ಎಂದಿಗೂ ಯಶಸ್ವಿ ಆಗುವುದಿಲ್ಲ ಎಂದು ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ. ಇನ್ನು ಇದೇ ವೇಳ ಅಗ್ನಿಪಥ್‌ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಸೇನೆಯ ಈ ಸುಧಾರಣೆಯಲ್ಲೂ ಕೆಲವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಭಾರತದ ವಿರುದ್ಧ ಪಾಕಿಸ್ತಾನವು ಇದುವರೆಗೆ ನಾಲ್ಕು ಯುದ್ಧಗಳಲ್ಲಿ ಹೀನಾಯವಾಗಿ ಸೋಲನುಭವಿಸಿದೆ. ಅದರಲ್ಲೂ, ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಉರಿ ದಾಳಿಗೆ ಪ್ರತಿಯಾಗಿ ಸರ್ಜಿಕಲ್‌ ಸ್ಟ್ರೈಕ್‌, ಪುಲ್ವಾಮಾ ಉಗ್ರರ ದಾಳಿಗೆ ಪ್ರತಿಯಾಗಿ ಬಾಲಾಕೋಟ್‌ ದಾಳಿ ನಡೆಸಿದೆ. ಹಾಗೆಯೇ, ಪಾಕಿಸ್ತಾನವು ಉಗ್ರ ಪೋಷಣೆಯ ರಾಷ್ಟ್ರವಾಗಿದೆ ಎಂಬುದಾಗಿ ಜಾಗತಿಕ ವೇದಿಕೆಯಲ್ಲಿ ಭಾರತವು ಪ್ರತಿಪಾದಿಸಿದೆ.

ಇದನ್ನೂ ಓದಿ: Kargil Vijay Diwas 2024: ಕಾರ್ಗಿಲ್‌ ಯುದ್ಧಭೂಮಿಗೆ ಅಂದೇ ಕಾಲಿಟ್ಟಿದ್ರು ಮೋದಿ- ಹಳೆಯ ಫೊಟೋ ವೈರಲ್‌

Continue Reading

ವಾಣಿಜ್ಯ

Mukesh Ambani: ಮುಕೇಶ್ ಅಂಬಾನಿಯ ಒಂದು ದಿನದ ಆದಾಯ 163 ಕೋಟಿ ರೂ! ಒಟ್ಟು ಸಂಪತ್ತೆಷ್ಟು?

ಭಾರತ ಮತ್ತು ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾಗಿರುವ ಮುಕೇಶ್ ಅಂಬಾನಿ (Mukesh Ambani) ಫೋರ್ಬ್ಸ್ ನಿಯತಕಾಲಿಕೆಯಿಂದ ವಿಶ್ವದ ಅಗ್ರ 10 ಶ್ರೀಮಂತ ವ್ಯಕ್ತಿಗಳಲ್ಲಿ ಸತತವಾಗಿ ಸ್ಥಾನ ಪಡೆಯುತ್ತಿದ್ದಾರೆ. ಅವರ ಸಂಪತ್ತಿನ ನಿವ್ವಳ ಮೌಲ್ಯ 80.7 ಬಿಲಿಯನ್ ಡಾಲರ್, ಅಂದರೆ 7.65 ಲಕ್ಷ ಕೋಟಿ ರೂಪಾಯಿಗಳಾಗಿದೆ. ಅವರ ವೃತ್ತಿ ಜೀವನ, ಸಂಪತ್ತಿನ ಬಗ್ಗೆ ಇನ್ನಷ್ಟು ಕೂತಹಲಕಾರಿ ಸಂಗತಿಗಳು ಇಲ್ಲಿವೆ.

VISTARANEWS.COM


on

By

Mukesh Ambani
Koo

ಇತ್ತೀಚೆಗೆ ಪುತ್ರ ಅನಂತ್ ಅಂಬಾನಿಯ ಮದುವೆಯನ್ನು (anant ambani wedding) ಅದ್ಧೂರಿಯಾಗಿ ನಡೆಸಿ ವಿಶ್ವದ ಗಮನ ಸೆಳೆದ ಭಾರತದ ಅತ್ಯಂತ ಶ್ರೀಮಂತ ಉದ್ಯಮಿ (India’s richest businessman) ಮುಕೇಶ್ ಅಂಬಾನಿ (Mukesh Ambani) ಅವರ ಬಗ್ಗೆ ಮತ್ತಷ್ಟು ತಿಳಿದುಕೊಳ್ಳಬೇಕು ಎನ್ನುವ ಕುತೂಹಲ ಎಲ್ಲರಲ್ಲೂ ಹೆಚ್ಚಾಗಿದೆ. ಅದರಲ್ಲೂ ಮುಖ್ಯವಾಗಿ ಅವರ ಆದಾಯ, ಸಂಪತ್ತು, ಯಾವ ರೀತಿಯ ಜೀವನ ನಡೆಸುತ್ತಿದ್ದಾರೆ ಎಂಬುದು ಎಲ್ಲರ ಗಮನ ಸೆಳೆಯುತ್ತಿದೆ.

ಭಾರತೀಯ ಉದ್ಯಮಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್‌ನ ಅಧ್ಯಕ್ಷ ಮತ್ತು ಅತಿದೊಡ್ಡ ಷೇರುದಾರರಾಗಿರುವ ಮುಖೇಶ್ ಅಂಬಾನಿ ಪೆಟ್ರೋಕೆಮಿಕಲ್ಸ್, ರಿಫೈನಿಂಗ್, ತೈಲ ಮತ್ತು ಅನಿಲ ಪರಿಶೋಧನೆಯಂತಹ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಿರುವ ಅವರ ನಿವ್ವಳ ಸಂಪತ್ತಿನ ಮೌಲ್ಯ 80.7 ಬಿಲಿಯನ್ ಡಾಲರ್ ಅಂದರೆ 7.65 ಲಕ್ಷ ಕೋಟಿ ರೂಪಾಯಿ.

ಭಾರತ ಮತ್ತು ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾಗಿರುವ ಅವರು ಫೋರ್ಬ್ಸ್ ನಿಯತಕಾಲಿಕೆಯಿಂದ ವಿಶ್ವದ ಅಗ್ರ 10 ಶ್ರೀಮಂತ ವ್ಯಕ್ತಿಗಳಲ್ಲಿ ಸತತವಾಗಿ ಸ್ಥಾನ ಪಡೆಯುತ್ತಿದ್ದಾರೆ. 1957ರ ಏಪ್ರಿಲ್ 19ರಂದು ಜನಿಸಿರುವ ಮುಖೇಶ್ ಅಂಬಾನಿ ಅವರ ವಯಸ್ಸು 65, ಅವರ ಸಂಬಳ 15 ಕೋಟಿ ರೂ. ಗಳಾಗಿದ್ದು, ದೈನಂದಿನ ಆದಾಯ 163 ಕೋಟಿ ರೂ. ಗಳಾಗಿದೆ.


ಆರಂಭಿಕ ವೃತ್ತಿಜೀವನ

ಮುಖೇಶ್ ಅಂಬಾನಿ ಪ್ರಸ್ತುತ ಭಾರತದ ಅತಿದೊಡ್ಡ ಮತ್ತು ವೈವಿಧ್ಯಮಯ ಸಂಘಟಿತ ಸಂಸ್ಥೆಗಳಲ್ಲಿ ಒಂದಾದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ನ ಅಧ್ಯಕ್ಷರು ಮತ್ತು ಅತಿದೊಡ್ಡ ಷೇರುದಾರರಾಗಿದ್ದಾರೆ. ಅಂಬಾನಿ 1981 ರಲ್ಲಿ ಆರ್‌ಐಎಲ್‌ಗೆ ಸೇರಿದರು. ಕಂಪೆನಿಯ ತ್ವರಿತ ಬೆಳವಣಿಗೆ ಮತ್ತು ವಿಸ್ತರಣೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ.

ಆರ್‌ಐಎಲ್ ಮುಕೇಶ್ ಅಂಬಾನಿ ನಾಯಕತ್ವದಲ್ಲಿ ಪೆಟ್ರೋಕೆಮಿಕಲ್ಸ್, ರಿಫೈನಿಂಗ್, ತೈಲ ಮತ್ತು ಅನಿಲ ಪರಿಶೋಧನೆ, ಜವಳಿ, ಚಿಲ್ಲರೆ ವ್ಯಾಪಾರ ಮತ್ತು ದೂರಸಂಪರ್ಕ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಪ್ರಗತಿಯನ್ನು ಸಾಧಿಸುತ್ತಿದೆ. ಅಂಬಾನಿ ತನ್ನ ಅಂಗಸಂಸ್ಥೆಯಾದ ರಿಲಯನ್ಸ್ ರಿಟೇಲ್ ಮೂಲಕ ಭಾರತದ ಚಿಲ್ಲರೆ ಮಾರುಕಟ್ಟೆಗೆ ಕಂಪೆನಿಯು ಯಶಸ್ವಿಯಾಗಿ ಪ್ರವೇಶಿಸುವಂತೆ ಮಾಡಿದ್ದಾರೆ. ಇದು ಭಾರತದಲ್ಲಿನ ಅತಿದೊಡ್ಡ ಚಿಲ್ಲರೆ ಸರಪಳಿಗಳಲ್ಲಿ ಒಂದಾಗಿದೆ.

2010ರಲ್ಲಿ ರಿಲಯನ್ಸ್ ಜಿಯೋವನ್ನು ಪ್ರಾರಂಭಿಸುವುದರೊಂದಿಗೆ ಅಂಬಾನಿ ಭಾರತೀಯ ದೂರಸಂಪರ್ಕ ವಲಯಕ್ಕೆ ಕಂಪೆನಿಯನ್ನು ಮುನ್ನಡೆಸಿದರು. ಇದು ಉದ್ಯಮವನ್ನು ಅಭಿವೃದ್ಧಿ ಪಡಿಸಿದ್ದು, ದೇಶವನ್ನು ಡೇಟಾ-ಚಾಲಿತ ಸಮಾಜವಾಗಿ ಪರಿವರ್ತಿಸಿತು. 400 ಮಿಲಿಯನ್ ಚಂದಾದಾರರನ್ನು ಹೊಂದಿರುವ ಜಿಯೋ ಭಾರತದಲ್ಲಿ ಅತಿದೊಡ್ಡ ಮೊಬೈಲ್ ನೆಟ್‌ವರ್ಕ್ ಆಪರೇಟರ್ ಆಗಿದೆ.

ಅಂಬಾನಿಯವರ ವ್ಯವಹಾರ ಕುಶಾಗ್ರಮತಿ ಮತ್ತು ನಾಯಕತ್ವದ ಕೌಶಲಗಳು ಅವರನ್ನು ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರನ್ನಾಗಿ ಮಾಡಿದೆ. ಜಾಗತಿಕ ವ್ಯಾಪಾರ ಸಮುದಾಯದಲ್ಲಿ ಪ್ರಮುಖ ವ್ಯಕ್ತಿಯಾಗುವಂತೆ ಮಾಡಿದೆ. ಅವರು ಭಾರತೀಯ ವ್ಯಾಪಾರ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳಿಗಾಗಿ ಹಲವಾರು ಪ್ರಶಸ್ತಿಗಳು ಮತ್ತು ಮನ್ನಣೆಯನ್ನು ಪಡೆದಿದ್ದಾರೆ.

ನಿವ್ವಳ ಮೌಲ್ಯ 2024

2022ರಲ್ಲಿ ಉದ್ಯಮಿ ಮತ್ತು ಬಿಲಿಯನೇರ್ ಗೌತಮ್ ಅದಾನಿ ಇವರನ್ನು ನಂಬರ್‌ 1 ಪಟ್ಟದಿಂದ ಕೆಳಗಿಳಿಸುವವರೆಗೂ ಮುಖೇಶ್ ಅಂಬಾನಿ ನಿರಂತರವಾಗಿ ಭಾರತದ ಶ್ರೀಮಂತ ವ್ಯಕ್ತಿಯಾಗಿದ್ದರು. ಆದರೆ ಹಿಂಡೆನ್‌ಬರ್ಗ್ ರಿಸರ್ಚ್‌ನಿಂದ ಅದಾನಿ ಗುಂಪಿನ ವಿರುದ್ಧ ಇತ್ತೀಚಿನ ಆರೋಪಗಳಿಂದಾಗಿ ಅಂಬಾನಿ ಮತ್ತೊಮ್ಮೆ ಶ್ರೀಮಂತ ಎಂಬ ಬಿರುದನ್ನು ಗಳಿಸಿದ್ದಾರೆ.

ಗಳಿಕೆಯ ಆಸ್ತಿ ಎಷ್ಟು?

ರಿಲಯನ್ಸ್ ಇಂಡಸ್ಟ್ರೀಸ್‌ನ ಅಧ್ಯಕ್ಷರಾಗಿ ಮತ್ತು ಅತಿದೊಡ್ಡ ಷೇರುದಾರರಾಗಿ ಮುಖೇಶ್ ಅಂಬಾನಿ ಪೆಟ್ರೋಕೆಮಿಕಲ್ಸ್, ರಿಫೈನಿಂಗ್, ತೈಲ ಮತ್ತು ಅನಿಲ ಪರಿಶೋಧನೆ, ಜವಳಿ, ಚಿಲ್ಲರೆ ವ್ಯಾಪಾರ ಮತ್ತು ದೂರಸಂಪರ್ಕ ಸೇರಿದಂತೆ ಹಲವಾರು ಉದ್ಯಮಗಳಲ್ಲಿ ಗಮನಾರ್ಹ ಅಸ್ತಿತ್ವವನ್ನು ಹೊಂದಿದ್ದಾರೆ. ಅವರು ರಿಯಲ್ ಎಸ್ಟೇಟ್ ಮತ್ತು ಇತರ ಹೂಡಿಕೆಗಳಲ್ಲಿ ಆಸ್ತಿಯನ್ನು ಹೊಂದಿದ್ದಾರೆ.

ಮನೆ ಮತ್ತು ರಿಯಲ್ ಎಸ್ಟೇಟ್ ಆಸ್ತಿಗಳು

ಮುಖೇಶ್ ಅಂಬಾನಿ ಭಾರತ ಮತ್ತು ಪ್ರಪಂಚದಾದ್ಯಂತ ಹಲವಾರು ಐಷಾರಾಮಿ ಮನೆಗಳು ಮತ್ತು ಆಸ್ತಿಗಳನ್ನು ಹೊಂದಿದ್ದಾರೆ. ಇದರಲ್ಲಿ ಪ್ರಮುಖವಾದವುಗಳೆಂದರೆ ಆಂಟಿಲಿಯಾ ಮುಂಬಯಿನಲ್ಲಿರುವ 27 ಅಂತಸ್ತಿನ ವಸತಿ ಗಗನಚುಂಬಿ ಕಟ್ಟಡವು ವಿಶ್ವದ ಅತ್ಯಂತ ದುಬಾರಿ ಖಾಸಗಿ ನಿವಾಸಗಳಲ್ಲಿ ಒಂದಾಗಿದೆ.

ಸ್ಟೋಕ್ ಪಾರ್ಕ್ ಎಸ್ಟೇಟ್ ಇಂಗ್ಲೆಂಡ್‌ನ ಲಂಡನ್‌ನಲ್ಲಿ 300 ಎಕರೆ ಎಸ್ಟೇಟ್ ಅನ್ನು 500 ಕೋಟಿ ರೂ. ಹೆಚ್ಚು ನೀಡಿ ಖರೀದಿ ಮಾಡಲಾಗಿದೆ.

ದುಬೈನ ಪಾಮ್ ಜುಮೇರಾದಲ್ಲಿ ನೆಲೆಗೊಂಡಿರುವ ಅರಮನೆಯ ವಿಲ್ಲಾವನ್ನು 80 ಮಿಲಿಯನ್‌ ಡಾಲರ್ ನೀಡಿ ಖರೀದಿಸಲಾಗಿದೆ. ಇದು ದುಬೈನಲ್ಲಿ ಇಲ್ಲಿಯವರೆಗಿನ ಅತ್ಯಂತ ದುಬಾರಿ ರಿಯಲ್ ಎಸ್ಟೇಟ್ ಖರೀದಿಯಾಗಿದೆ ಎಂದು ಹೇಳಲಾಗುತ್ತದೆ.

Mukesh Ambani
Mukesh Ambani


ಯಾವ ಕಾರುಗಳಿವೆ?

ಮುಕೇಶ್ ಅಂಬಾನಿ ಅವರು ಮರ್ಸಿಡಿಸ್-ಬೆನ್ಜ್, ಬಿಎಂಡಬ್ಲ್ಯೂ, ರೋಲ್ಸ್-ರಾಯ್ಸ್ ಮತ್ತು ಮೇಬ್ಯಾಕ್‌ನಂತಹ ಉನ್ನತ-ಮಟ್ಟದ ಬ್ರ್ಯಾಂಡ್‌ಗಳನ್ನು ಒಳಗೊಂಡಂತೆ ಹಲವಾರು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆ. ಅವುಗಳಲ್ಲಿ ಪ್ರಮುಖವಾದವುಗಳೆಂದರೆ ಫೆರಾರಿ ಎಸ್ ಎಫ್ 90 ಸ್ಟ್ರಾಡೇಲ್ ವ್ಯಾಪಾರ ಅಧಿಕಾರಿ, ವಿವಿಐಪಿಗಳು ಬಳಸುವ ಜನಪ್ರಿಯ ಐಷಾರಾಮಿ ಕಾರುಗಳಲ್ಲಿ ಒಂದಾಗಿದೆ.

ಬಿಎಂಡಬ್ಲ್ಯೂ 7 ಸರಣಿ ಸೌಕರ್ಯ, ಕಾರ್ಯಕ್ಷಮತೆ ಮತ್ತು ತಂತ್ರಜ್ಞಾನಕ್ಕೆ ಹೆಸರುವಾಸಿಯಾದ ಮತ್ತೊಂದು ಐಷಾರಾಮಿ ಸೆಡಾನ್.

ಪ್ರೀಮಿಯಂ ಐಷಾರಾಮಿ ಕಾರು ರೋಲ್ಸ್ ರಾಯ್ಸ್ ಫ್ಯಾಂಟಮ್ ಟೈಮ್‌ಲೆಸ್ ವಿನ್ಯಾಸ ಮತ್ತು ಕ್ಲಾಸಿಕ್ ಸ್ಟೈಲಿಂಗ್‌ಗೆ ಹೆಸರುವಾಸಿಯಾಗಿದೆ.

ಮರ್ಸಿಡಿಸ್ ಮೇಬ್ಯಾಕ್ ಬೆನ್ಜ್ ಎಸ್ 660 ಗಾರ್ಡ್ ಐಷಾರಾಮಿ ಕಾರು ಅದರ ವಿಶಾಲವಾದ ಒಳಾಂಗಣ, ಉನ್ನತ-ಮಟ್ಟದ ಸೌಕರ್ಯಗಳು ಮತ್ತು ಅತ್ಯಾಧುನಿಕ ತಂತ್ರಜ್ಞಾನಕ್ಕೆ ಖ್ಯಾತಿ ಪಡೆದಿದೆ.


ದತ್ತಿ ಕಾರ್ಯಗಳು ಏನೇನು?

ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬವು ಅನೇಕ ದತ್ತಿ ಚಟುವಟಿಕೆಗಳಿಗೆ ಹೆಸರುವಾಸಿಯಾಗಿದೆ. ಇದರಲ್ಲಿ ರಿಲಯನ್ಸ್ ಫೌಂಡೇಶನ್ ಕೂಡ ಒಂದಾಗಿದೆ. ಮುಖೇಶ್ ಅಂಬಾನಿ ಅವರ ಪತ್ನಿ ನೀತಾ ಅಂಬಾನಿ ಸ್ಥಾಪಿಸಿದ ಈ ಸಂಸ್ಥೆ, ಶಿಕ್ಷಣ, ಆರೋಗ್ಯ ರಕ್ಷಣೆ, ಗ್ರಾಮೀಣ ಪರಿವರ್ತನೆ, ನಗರ ನವೀಕರಣ, ವಿಪತ್ತು ನಿರ್ವಹಣೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತದೆ.

ರಿಲಯನ್ಸ್ ಫೌಂಡೇಶನ್ ಭಾರತದಲ್ಲಿ ಶಿಕ್ಷಣವನ್ನು ಉತ್ತೇಜಿಸಲು ಮತ್ತು ಅವಕಾಶಗಳನ್ನು ಒದಗಿಸುವಲ್ಲಿ ಸಕ್ರಿಯವಾಗಿದೆ. ಗುಣಮಟ್ಟದ ಶಿಕ್ಷಣದ ಪ್ರವೇಶವನ್ನು ಸುಧಾರಿಸಲು ಪ್ರತಿಷ್ಠಾನವು ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತದೆ ಮತ್ತು ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಶಾಲೆಗಳನ್ನು ನಿರ್ಮಿಸಿದೆ.

ಇದನ್ನೂ ಓದಿ: Sameer Nigam: ಕನ್ನಡಿಗರ ಕ್ಷಮೆಯಾಚಿಸಿದ PhonePe ಸಿಇಒ ಸಮೀರ್‌ ನಿಗಮ್‌; ಬಾಯ್ಕಾಟ್‌ ಪೆಟ್ಟಿಗೆ ಥಂಡಾ

Continue Reading
Advertisement
Mumbai Girl
ದೇಶ28 mins ago

ಬಾರೆ ಸಖಿ ಎಂದು 20 ವರ್ಷದ ಯುವತಿಯನ್ನು ಕರೆದುಕೊಂಡು ಹೋದ, ಕೊಂದು ಪೊದೆಯಲ್ಲಿ ಬಿಸಾಡಿದ; ಕೃತ್ಯಕ್ಕೆ ಕಾರಣವೇನು?

ಪರಿಸರ36 mins ago

Arecanut Research Centre: ಹೊಸ ಅಡಿಕೆ ಸಂಶೋಧನಾ ಕೇಂದ್ರ ಮತ್ತೊಂದು ಮದುವೆ ಛತ್ರ ಆಗದಿರಲಿ!

ind vs sl
ಪ್ರಮುಖ ಸುದ್ದಿ56 mins ago

IND vs SL : ಅಪರೂಪದ ದೃಶ್ಯ; ಎರಡೂ ಕೈಯಲ್ಲಿ ಬೌಲಿಂಗ್ ಮಾಡಿದ ಲಂಕಾದ ಬೌಲರ್​ ಕಮಿಂಡು ಮೆಂಡಿಸ್​!

Opposition MLAs agree to Skydeck near Nice Road will discuss in Cabinet meeting says DCM DK Shivakumar
ಕರ್ನಾಟಕ1 hour ago

DK Shivakumar: ಬೆಂಗಳೂರಿನ ನೈಸ್‌ ರಸ್ತೆ ಬಳಿ ದೇಶದ ಅತಿ ಎತ್ತರದ ಸ್ಕೈಡೆಕ್!

Team India Coach
ಪ್ರಮುಖ ಸುದ್ದಿ1 hour ago

Team India Coach : ಕೋಚ್​​ ಗೌತಮ್ ಗಂಭೀರ್ ವೈಭವೀಕರಣ; ಮಾಜಿ ಆಟಗಾರನ ಆಕ್ಷೇಪ

Infiltration
ದೇಶ1 hour ago

Infiltration: ಭಾರತಕ್ಕೆ ನುಗ್ಗುವುದು ಹೇಗೆ ಎಂದು ವಿಡಿಯೊ ಮಾಡಿದ ಬಾಂಗ್ಲಾ ವ್ಯಕ್ತಿ; ದೀದಿ ಆಹ್ವಾನದ ಬೆನ್ನಲ್ಲೇ ವಿಡಿಯೊ ವೈರಲ್‌

ICW 2024
ಫ್ಯಾಷನ್2 hours ago

ICW 2024: ಮುಂಬರುವ ವೆಡ್ಡಿಂಗ್‌ ಸೀಸನ್‌ ಮೆನ್ಸ್ ವೇರ್‌ ಅನಾವರಣಗೊಳಿಸಿದ ಇಂಡಿಯಾ ಕೌಚರ್‌ ವೀಕ್‌ 2024

Indian Army
ದೇಶ2 hours ago

ಪಾಕ್‌ಗೆ ಮೋದಿ ಎಚ್ಚರಿಕೆ ಬೆನ್ನಲ್ಲೇ ಗಡಿಯಲ್ಲಿ 2 ಸಾವಿರ ಹೆಚ್ಚುವರಿ ಸೈನಿಕರ ನಿಯೋಜಿಸಿದ ಕೇಂದ್ರ; ಏನಿದರ ಮರ್ಮ?

Joe Root
ಕ್ರೀಡೆ3 hours ago

Joe Root : ಟೆಸ್ಟ್ ಇತಿಹಾಸದ ರನ್​ ಗಳಿಕೆಯ ದಾಖಲೆಯ ಪಟ್ಟಿಯಲ್ಲಿ ಲಾರಾ ಹಿಂದಿಕ್ಕಿದ ಜೋ ರೂಟ್

CT Ravi
ಕರ್ನಾಟಕ3 hours ago

CT Ravi: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಸಿ.ಟಿ.ರವಿ; ಇಲ್ಲಿದೆ ಪತ್ರದ ಸಾರಾಂಶ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ4 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ9 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ9 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌